ದೇವಸ್ಥಾನದಲ್ಲಿ ಮರ್ಡರ್‌ ಮಾಡಿ ಪರಾರಿಯಾಗುವಾಗ ಸೀಜರ್‌ಗಳ ಕೈಗೆ ಸಿಕ್ಕಿಬಿದ್ದರು! - Vistara News

ಕ್ರೈಂ

ದೇವಸ್ಥಾನದಲ್ಲಿ ಮರ್ಡರ್‌ ಮಾಡಿ ಪರಾರಿಯಾಗುವಾಗ ಸೀಜರ್‌ಗಳ ಕೈಗೆ ಸಿಕ್ಕಿಬಿದ್ದರು!

ಸೋಮವಾರ ಈಶ್ವರನ ದೇವಸ್ಥಾನದಲ್ಲಿ ಮಾರಕಾಸ್ತ್ರದಿಂದ ರೌಡಿಶೀಟರ್‌ನೊಬ್ಬನನ್ನು ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿತ್ತು. ಆರೋಪಿಗಳು ಪರಾರಿಯಾಗುವ ವೇಳೆ ಪೊಲೀಸರ ಬದಲು ಬೈಕ್‌ ಸೀಜರ್‌ಗಳಿಗೆ ಸಿಕ್ಕಿಬಿದ್ದರು!

VISTARANEWS.COM


on

k r pete
ದೇವಸ್ಥಾನದಲ್ಲಿ ಕೊಲೆಯಾಗಿರುವ ಅರುಣ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ಕೆ. ಆರ್‌. ಪೇಟೆಯಲ್ಲಿ ಸೋಮವಾರ (ಜೂನ್‌ 27) ಶಿವನ ದೇಗುಲದಲ್ಲಿ ಶಿವನಾಮ ಸ್ಮರಣೆ ಬದಲು ಮಹಿಳೆಯೊಬ್ಬರ ಕೂಗಾಟ ಚಿರಾಟವೇ ಕೇಳಿ ಬಂದಿತ್ತು. ಅಲ್ಲಿದ್ದವರು ಗಾಬರಿಯಾಗಿ ಬಂದು ನೋಡಿದಾಗ ಶಿವನ ದರ್ಶನ ಮಾಡಲು ಬಂದವನು ಕೊಲೆಯಾಗಿ ಹೋಗಿದ್ದ.

ಇದನ್ನೂ ಓದಿ | ಮುಂದಿನ ಸಿಎಂ ಸಿದ್ದರಾಮಯ್ಯ, ಡಿಸಿಎಂ ಚಲುವರಾಯಸ್ವಾಮಿ ; ಮಂಡ್ಯದಲ್ಲಿ ಅಭಿಮಾನಿಗಳ ಜೈಕಾರ

ಹಾಡಹಗಲೇ ಕುಖ್ಯಾತ ರೌಡಿ ಅರುಣ್ ಅಲಿಯಾಸ್‌ ಅಲ್ಲು (38) ಎಂಬಾತನ ಮೇಲೆ ಐವರು ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿ ಅಲ್ಲಿಂದ ಜಾಗ ಖಾಲಿ ಮಾಡಿದ್ದರು. ಹೀಗೆ ಕೊಲೆಗೈದು ಪರಾರಿಯಾಗುವ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದು ಬೈಕ್‌ ಸೀಜರ್‌ಗಳ ಕೈಗೆ.

ಕೆ.ಆರ್‌. ಪೇಟೆಯ ಹೊರವಲಯದಲ್ಲಿ ಬೈಕ್‌ ಸೀಜರ್‌ಗಳು ನಿಂತಿದ್ದರು. ಬೈಕ್‌ ಸಾಲ, ಕೈಸಾಲ, ಮೀಟರ್‌ ಬಡ್ಡಿ ಸೇರಿ ಬೇರೆ ಬೇರೆ ಕಾರಣಕ್ಕೆ ಸಾಲ ಪಡೆದವರು ತೀರಿಸದೆ ಹೋದಾಗ ಅವರ ಆಟೊ, ಬೈಕ್‌ ಮುಂತಾದವನ್ನು ಸೀಜ್‌ ಮಾಡಿಕೊಂಡು ಹೋಗುವುದು ಇವರ ಕೆಲಸ. ಈ ವೇಳೆ ಅದೇ ಮಾರ್ಗದಲ್ಲಿ, ಅವೆಂಜರ್‌ ಬೈಕಿನಲ್ಲಿ ಮೂವರು ಆರೋಪಿಗಳು ಆಗಮಿಸಿದ್ದರು. ಬೈಕ್‌ ಲೋನ್ ಕಟ್ಟದ ಹಿನ್ನೆಲೆಯಲ್ಲಿ ಅಡ್ಡಗಟ್ಟಿ ಬೈಕ್ ಸೀಜ್‌ ಮಾಡುವುದಾಗಿ ಇವರು ಹೇಳಿದರು. ಈ ವೇಳೆ ತಮ್ಮನ್ನು ಬಿಡುವಂತೆ ಆರೋಪಿಗಳು ಕೇಳಿದ್ದಾರೆ. ಸೀಜರ್‌ಗಳು ಒಪ್ಪಿಲ್ಲ. ಆರೋಪಿಗಳಲ್ಲಿ ಒಬ್ಬ ಫೋನ್‌ನಲ್ಲಿ “ಕೇಸ್ ಮಾಡಿ ಬರುತ್ತಿದ್ದೇವೆ, ಗಾಡಿ ಹಿಡಿದಿದ್ದಾರೆʼ ಎಂದಿದ್ದಾನೆ.

ಇದನ್ನು ಕೇಳಿ ಸೀಜರ್‌ ಗಾಬರಿಗೊಂಡು ʼಏನು ಕೇಸ್ ಅಣ್ಣ?ʼ ಎಂದು ಕೇಳಿದ್ದಾನೆ. ಅದಕ್ಕೆ ಉತ್ತರಿಸಿದ ಆರೋಪಿಗಳು ʼಮರ್ಡರ್‌ ಮಾಡಿ ಬಂದ್ದೀವಿ ಕಣಪ್ಪ, ಬೇಕಾದರೆ ನ್ಯೂಸ್‌ನಲ್ಲಿ ನೋಡು. ಈಗ ನಮಗೆ ಹೋಗಲು ಬಿಡಿ. ಪೊಲೀಸರು ಬಂದರೆ ನಮಗೂ ಹಿಂಸೆʼ ಎಂದಿದ್ದಾನೆ. ನಂತರ ಆರೋಪಿಗಳು ಬೈಕ್‌ನಲ್ಲಿ ಅಲ್ಲಿಂದ ತೆರಳಿದ್ದಾರೆ.

ಇಡೀ ಘಟನೆಯ ವಿಡಿಯೋವನ್ನು ತಮ್ಮ ಸುರಕ್ಷತೆಗಾಗಿ ಸೀಜರ್‌ ಹುಡುಗರು ಮಾಡಿಕೊಂಡಿದ್ದರು. ಕೊಲೆ ಕೃತ್ಯಕ್ಕಾಗಿ ಬಳಸಿದ್ದ ಮಾರಕಾಸ್ತ್ರಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಇಟ್ಟುಕೊಂಡಿರುವುದೂ ವಿಡಿಯೋದಲ್ಲಿ ದಾಖಲಾಗಿದೆ.‌ ಈ ವಿಡಿಯೊ ಆಧಾರದಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಗಡಿಪಾರಾಗಿದ್ದ ಅರುಣ್‌

ಕೊಲೆಯಾದ ಅರುಣ್ ಅಲಿಯಾಸ್‌ ಅಲ್ಲು ಮೇಲೆ ಕೊಲೆ, ಅಪಹರಣ, ಕೊಲೆ ಬೆದರಿಕೆ, ಹಫ್ತಾ ವಸೂಲಿ ಸೇರಿ ಹಲವು ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪವಿತ್ತು. ಜೈಲಿನಲ್ಲಿದ್ದಾಗಲೇ ಅಧಿಕಾರಿಯ ಸಹಾಯ ಪಡೆದು ಮಾರ್ವಾಡಿಯೊಬ್ಬರನ್ನು ಕಿಡ್ನಾಪ್ ಮಾಡಿದ್ದ. ಆ ಪ್ರಕರಣದಲ್ಲಿ ಭಾಗಿಯಾದ ಜೈಲು ಅಧಿಕಾರಿಗೂ ಶಿಕ್ಷೆಯಾಗಿತ್ತು. ನಂತರ ಕೆ.ಆರ್‌. ಪೇಟೆಯಿಂದ ಅರುಣ್‌ ಗಡಿಪಾರಾಗಿದ್ದ. ಆದರೂ ಕೆ.ಆರ್.ಪೇಟೆಗೆ ಬಂದಿದ್ದ. ದೇಗುಲದಲ್ಲಿದ್ದಾಗ ಹೊಂಚು ಹಾಕಿದ ಐವರಿಂದ ಭೀಕರವಾಗಿ ಕೊಲೆಯಾಗಿದ್ದ. ಹಲವು ವರ್ಷಗಳಿಂದಲೂ ಕಾದಿದ್ದ ಹಂತಕರು, ಹಳೆಯ ದ್ವೇಷದಿಂದ ಕೊಲೆಗೈದಿರುವುದಾಗಿ ತಿಳಿದು ಬಂದಿದೆ.

ಇದನ್ನೂ ಓದಿ | ಮಂಡ್ಯ ಪೊಲೀಸರನ್ನು ಪೂರ್ತಿ ಹೈರಾಣಾಗಿಸಿದ ಅರ್ಧ ದೇಹ: ಊರೂರು ಅಲೆಯುತ್ತಿರುವ ಖಾಕಿ ಪಡೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

Actor Darshan: ದರ್ಶನ್‌, ಪ್ರದೋಷ್‌ನಿಂದ ಮೂರು ಪಿಸ್ತೂಲ್‌ ವಶಕ್ಕೆ

Actor Darshan: ದರ್ಶನ್ ಬಳಿ ಎರಡು ಯುಎಸ್ ಮೇಡ್ ಪಿಸ್ತೂಲ್‌ಗಳು, ಪ್ರದೋಷ್ ಬಳಿ ಒಂದು ಲೈಸೆನ್ಸ್ ಪಿಸ್ತೂಲ್‌ ಇವೆ. ಕಳೆದ ಲೋಕಸಭಾ ಚುನಾವಣಾ ವೇಳೆ ಲೈಸೆನ್ಸ್ ಪಡೆದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಪೊಲೀಸರಿಗೆ ಒಪ್ಪಿಸಬೇಕಿತ್ತು. ಆದರೆ ಚುನಾವಾಣೆ ವೇಳೆ ಶಸ್ತ್ರಾಸ್ತ್ರ ಠೇವಣಿಯಿಂದ ದರ್ಶನ್ ಮತ್ತು ಪ್ರದೋಷ್ ವಿನಾಯಿತಿ ಪಡೆದಿದ್ದರು.

VISTARANEWS.COM


on

Actor Darshan Judicial Custody Jailer Gave UTP Number
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ (Actor Darshan) ಮತ್ತು ಆತನ ಸಹಚರ ಪ್ರದೋಷ್‌ ಬಗ್ಗೆ ಮತ್ತೊಂದು ಕುತೂಹಲಕಾರಿ ವಿಚಾರ ಬೆಳಕಿಗೆ ಬಂದಿದೆ. ಇಬ್ಬರ ಬಳಿಯೂ ಪರವಾನಗಿ ಹೊಂದಿದ ಪಿಸ್ತೂಲ್‌ಗಳಿದ್ದು Licenced Pistol), ಲೋಕಸಭೆ ಚುನಾವಣೆ (Lok Sabha Election 2024) ವೇಳೆ ಇಬ್ಬರೂ ಅವುಗಳನ್ನು ಪೊಲೀಸರ ಬಳಿ ಠೇವಣಿ (deposit) ಇರಿಸಿರಲಿಲ್ಲ ಎಂಬುದು ಗೊತ್ತಾಗಿದೆ. ಇದೀಗ ಅವುಗಳನ್ನು ವಶಕ್ಕೆ ಪಡೆಯಲಾಗುತ್ತಿದೆ.

ದರ್ಶನ್ ಬಳಿ ಎರಡು ಯುಎಸ್ ಮೇಡ್ ಪಿಸ್ತೂಲ್‌ಗಳು, ಪ್ರದೋಷ್ ಬಳಿ ಒಂದು ಲೈಸೆನ್ಸ್ ಪಿಸ್ತೂಲ್‌ ಇವೆ. ಕಳೆದ ಲೋಕಸಭಾ ಚುನಾವಣಾ ವೇಳೆ ಲೈಸೆನ್ಸ್ ಪಡೆದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಪೊಲೀಸರಿಗೆ ಒಪ್ಪಿಸಬೇಕಿತ್ತು. ಆದರೆ ಚುನಾವಾಣೆ ವೇಳೆ ಶಸ್ತ್ರಾಸ್ತ್ರ ಠೇವಣಿಯಿಂದ ದರ್ಶನ್ ಮತ್ತು ಪ್ರದೋಷ್ ವಿನಾಯಿತಿ ಪಡೆದಿದ್ದರು.

ಬೆಂಗಳೂರು ನಗರಾದ್ಯಂತ 7830 ಗನ್ ಲೈಸೆನ್ಸ್ ಪರವಾನಗಿದಾರರಿದ್ದಾರೆ. ಈ ಪೈಕಿ ದರ್ಶನ್ ಮತ್ತು ಪ್ರದೋಷ್ ಸೇರಿ 277 ಜನರಿಗೆ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ನೀಡಲಾಗಿತ್ತು. ಉಳಿದ 7553 ಪರವಾನಗಿ ಹೊಂದಿದ್ದ ಶಸ್ತ್ರಾಸ್ತ್ರಗಳನ್ನು ಪೊಲೀಸರು ಠೇವಣಿ ಇರಿಸಿಕೊಂಡಿದ್ದರು. ಆದರೆ ನಟ ದರ್ಶನ್ ಮತ್ತು ಪ್ರದೋಷ್ ಪಿಸ್ತೂಲ್ ವಾಪಸ್ ಮಾಡದೇ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಪಡೆದಿದ್ದಾರೆ.

ಬೆಂಗಳೂರಿನ 277 ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಪಡೆದವರಲ್ಲಿ ದರ್ಶನ್ ಮತ್ತು ಪ್ರದೋಷ್‌ಗೂ ವಿನಾಯಿತಿ ನೀಡಲಾಗಿದ್ದು, ಬೆಂಗಳೂರು ಪೊಲೀಸ್ ಕಮೀಷನರ್ ಅವರಿಂದಲೇ ವಿನಾಯಿತಿ ನೀಡಿ ಆದೇಶ ದೊರೆತಿದೆ. ಕಮೀಷನರ್ ಬಿ. ದಯಾನಂದ ಶಸ್ತ್ರಾಸ್ತ್ರ ಠೇವಣಿ ಸ್ಕ್ರೀನಿಂಗ್ ಕಮಿಟಿಯ ಅಧ್ಯಕ್ಷರಾಗಿದ್ದರು. ಅತಿ ಗಣ್ಯರಿಗೆ ನೀಡುವ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿಯಲ್ಲಿ ನಟ ದರ್ಶನ್ ಮತ್ತು ಪ್ರದೋಷ್ ಕೂಡ ಅವಕಾಶ ಪಡೆದಿದ್ದು, ಕಳೆದ ಮಾರ್ಚ್ 27ರಂದು ವಿನಾಯಿತಿ ನೀಡಿ ಕಮೀಷನರ್ ದಯಾನಂದ್ ಆದೇಶ ನೀಡಿದ್ದರು.

ನಿವೃತ್ತ ನ್ಯಾಯಾಧೀಶರು, ಐಎಎಸ್, ಐಪಿಎಸ್ ಅಧಿಕಾರಿಗಳು, ಬ್ಯಾಂಕ್ ಮ್ಯಾನೇಜರ್ ಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಇಲಾಖೆ ಅಧಿಕಾರಿಗಳು, ಶೂಟಿಂಗ್ ಕ್ರೀಡಾಪಟುಗಳು, ಶಾಸಕರು, ಪರಿಷತ್ ಸದಸ್ಯರು ಸೇರಿ ಹಿರಿಯ ರಾಜಕಾರಣಿಗಳಿಗೆ ಮಾತ್ರ ವಿನಾಯಿತಿ ನೀಡಬಹುದು. ಉಳಿದಂತೆ ಎಲ್ಲರ ಬಳಿಯಿರುವ ಶಸ್ತ್ರಾಸ್ತ್ರಗಳನ್ನು ಆಯಾ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ವಶಕ್ಕೆ ಪಡೆಯಬೇಕು.

ಸದ್ಯ ಪ್ರದೋಷ್‌ಗೆ ಸಂಬಂಧಪಟ್ಟಂತೆ ಗಿರಿನಗರ ಠಾಣೆ ಹಾಗೂ ದರ್ಶನ್‌ಗೆ ಸಂಬಂಧಪಟ್ಟಂತೆ ಆರ್.ಆರ್.ನಗರ ಠಾಣಾಧಿಕಾರಿಗಳಿಗೆ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಿಕ್ಕೆ ಸೂಚನೆ ನೀಡಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ತನಿಖಾಧಿಕಾರಿಗಳಿಂದ ಎರಡು ಠಾಣೆ ಪೊಲೀಸ್ ಇನ್ಸ್ಪೆಕ್ಟರ್‌ಗಳಿಗೆ ಈ ಕುರಿತು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Actor Darshan: ಪ್ರಥಮ್‌, ಉಮಾಪತಿಗೆ ಬೆದರಿಕೆ ಹಾಕಿದ ಡಿ ಬಾಸ್‌ ಫ್ಯಾನ್‌ ಬಂಧನ

Continue Reading

ಪ್ರಮುಖ ಸುದ್ದಿ

Pavithra Gowda : ಜೈಲಿನಲ್ಲಿರುವ ಪವಿತ್ರಾ ಗೌಡಗೆ ಬ್ಯಾಗ್​ ತುಂಬಾ ಸಾಮಗ್ರಿ ತಂದು ಕೊಟ್ಟ ಸಹೋದರ

Pavithra Gowda : ಮಂಗಳವಾರ ಪವಿತ್ರಾ ಅವರನ್ನು ಭೇಟಿಯಾಗಲು ಗುರುವಾರ ಮಗಳು ಖುಷಿ, ತಾಯಿ, ತಂದೆ ಹಾಗೂ ತಮ್ಮ ಬಂದಿದ್ದರು. ಅವರು ಪವಿತ್ರಾ ಅವರನ್ನು ಮಾತನಾಡಿಸಿ ಹೋಗಿದ್ದಾರೆ. ಅಂತೆಯೇ ಜೈಲಿನ ಪ್ರಮುಖ ಬೀದಿಯ ಮೂಲಕ ಎಲ್ಲರೂ ಹೋದ ಬಳಿಕ ವಾಪಸ್​ ಕಾರಿನ ಬಳಿಗೆ ಬಂದ ಪವಿತ್ರಾ ತಮ್ಮ, ಚೀಲವನ್ನು ಹಿಡಿದುಕೊಂಡು ಜೈಲಿನ ಆವರಣ ಪ್ರವೇಶಿಸಿದ್ದಾರೆ.

VISTARANEWS.COM


on

Pavitra Gowda
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ನಗರದ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ, ಮಾಡೆಲ್ ಹಾಗೂ ನಟ ದರ್ಶನ್ ಆಪ್ತೆ ಪವಿತ್ರಾ ಗೌಡ (Pavithra Gowda) ದಿನದಿಂದ ದಿನಕ್ಕೆ ಸೊರಗುತ್ತಿದ್ದಾರೆ ಎಂಬ ಮಾಹಿತಿಯನ ನಡುವೆಯೇ ಮಂಗಳವಾರ ಅವರ ಕುಟುಂಬ ಸದಸ್ಯರು ಬ್ಯಾಗ್ ತುಂಬಾ ಸಾಮಗ್ರಿಗಳನ್ನು ತಂದುಕೊಟ್ಟು ಹೋಗಿದ್ದಾರೆ. ಕಪ್ಪು ಬಣ್ಣದ ಬ್ಯಾಗ್​ನಲ್ಲಿ ಸಾಕಷ್ಟು ವಸ್ತುಗಳನ್ನು ಅವರಿಗೆ ತಲುಪಿಸಿರುವುದು ಮಾಧ್ಯಮಗಳ ಕ್ಯಾಮೆರಾ ಕಣ್ಣಿಗೆ ಬಿದ್ದಿದೆ. ಈ ವಿಡಿಯೊ ವೈರಲ್​ ಆಗುತ್ತಿದ್ದಂತೆ ಜೈಲು ಸೇರಿರುವ ವಸ್ತುಗಳು ಏನಿರಬಹುದು ಎಂಬು ಕುತೂಹಲ ಹೆಚ್ಚಾಗಿದೆ.

ಸುಖಕರವಾದ ಜೀವನ ಹಾಗೂ ಡಯೆಡ್ ಫುಡ್​ ಸೇರಿದಂತೆ ಬಗೆ ಬಗೆಯ ಭಕ್ಷ್ಯಗಳನ್ನು ತಿಂದು ಅಭ್ಯಾಸವಾಗಿದ್ದ ಪವಿತ್ರಾ ಗೌಡ ಅವರಿಗೆ ಜೈಲೂಟ ಹಿಡಿಸುತ್ತಿಲ್ಲ ಎಂಬುದು ಕೆಲವು ದಿನಗಳಿಂದ ನಡೆಯುತ್ತಿರುವ ಸುದ್ದಿ. ಮುದ್ದೆ ತಿನ್ನಲ್ಲ. ಚಪಾತಿ ಸರಿಯಲ್ಲ, ಸಾರು ಇಷ್ಟವಾಗಲ್ಲ ಎಂದು ಪವಿತ್ರಾ ಕಣ್ಣಿರು ಹಾಕುತ್ತಿರುವುದಾಗಿ ಮೂಲಗಳು ತಿಳಿಸಿದ್ದವು. ಈ ಎಲ್ಲ ಕಾರಣಕ್ಕೆ ಪವಿತ್ರಾ ಸೊರಗಿ ಹೋಗುತ್ತಾರೆ ಎಂಬ ಭಯ ಅವರ ಕುಟುಂಬಸ್ಥರಿಗೆ ಇತ್ತು. ಹೀಗಾಗಿ ಅವರಿಗೆ ಅಗತ್ಯ ವಸ್ತುಗಳನ್ನು ಕೊಟ್ಟು ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.

ಮಂಗಳವಾರ ಪವಿತ್ರಾ ಅವರನ್ನು ಭೇಟಿಯಾಗಲು ಗುರುವಾರ ಮಗಳು ಖುಷಿ, ತಾಯಿ, ತಂದೆ ಹಾಗೂ ತಮ್ಮ ಬಂದಿದ್ದರು. ಅವರು ಪವಿತ್ರಾ ಅವರನ್ನು ಮಾತನಾಡಿಸಿ ಹೋಗಿದ್ದಾರೆ. ಅಂತೆಯೇ ಜೈಲಿನ ಪ್ರಮುಖ ಬೀದಿಯ ಮೂಲಕ ಎಲ್ಲರೂ ಹೋದ ಬಳಿಕ ವಾಪಸ್​ ಕಾರಿನ ಬಳಿಗೆ ಬಂದ ಪವಿತ್ರಾ ತಮ್ಮ, ಚೀಲವನ್ನು ಹಿಡಿದುಕೊಂಡು ಜೈಲಿನ ಆವರಣ ಪ್ರವೇಶಿಸಿದ್ದಾರೆ. ಅದರಲ್ಲಿ ಬಟ್ಟೆ ಮತ್ತು ಮೆಕಪ್ ಸೆಟ್ ಇದ್ದಿರಬಹುದು ಎಂದು ಅಂದಾಜಿಸಲಾಗಿದೆ.

ಪುತ್ರಿಯನ್ನು ನೋಡಿ ಕಣ್ಣೀರು ಹಾಕಿದ ಪವಿತ್ರಾ

ಮಗಳು ಖುಷಿಯನ್ನ ನೋಡುತ್ತಿದ್ದಂತೆ ಜೈಲಿನಲ್ಲಿದ್ದ ಪವಿತ್ರಾ ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ. ಕಳೆದ ಕೆಲ ದಿನಗಳಿಂದ ಪವಿತ್ರಾಗೆ ಮಗಳ ಜೊತೆ ಮಾತನಾಡಲು ಸಾಧ್ಯವಾಗಿರಲಿಲ್ಲ. ಅಂತೆಯ ಮಂಗಳವಾರ ಅವರು ನೋಡಲು ಬಂದಾಗ ಪವಿತ್ರಾ ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ. ಪ್ರಕರಣದಲ್ಲಿ ಕಾನೂನು ಹೋರಾಟ ನಡೆಸೋ ಪೋಷಕರ ಜತೆ ಪವಿತ್ರಾ ಚರ್ಚೆ ನಡೆಸಿದ್ದಾರೆ.

ಇದನ್ನೂ ಓದಿ: Suraj Revanna Case : ಸೂರಜ್ ವಿರುದ್ಧವೇ ತಿರುಗಿ ಬಿದ್ದು ದೂರು ದಾಖಲಿಸಿದ ಆಪ್ತ ಶಿವಕುಮಾರ್​ !

ಎಲ್ಲದ್ದಕ್ಕೂ ಕ್ಯಾತೆ

ಪರಪ್ಪನ ಅಗ್ರಹಾರದಲ್ಲಿ ಪವಿತ್ರಾ ಅಲ್ಲಿನ ವ್ಯವಸ್ಥೆಗಳಿಗೆ ಕ್ಯಾತೆ ಎತ್ತುತ್ತಿದ್ದಾರೆ. ಜಿಮ್ ಮಾಡಲು ಆಗುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ನಿತ್ಯ ಜಿಮ್​ಗೆ ಹೋಗಿ ಫಿಟ್ನೆಸ್​ ಕಾಪಾಡಿಕೊಂಡಿದ್ದ ನಟಿಗೆ ಇದೀಗ ಜೈಲಿನಲ್ಲಿ ಸಮಸ್ಯೆಯಾಗಿದೆ. ಈ ಬಗ್ಗೆ ಅವರ ಅಧಿಕಾರಿಗಳ ಜತೆ ವಾಗ್ವಾದ ನಡೆಸಿದ್ದಾರೆ ಎನ್ನಲಾಗಿದೆ.

ಮಧ್ಯಾಹ್ನ ನೀಡಿದ್ದ ಅನ್ನ ಸಾಂಬಾರ್, ಚಪಾತಿ ಮತ್ತು ಮಜ್ಜಿಗೆಯನ್ನು ಜೈಲು ಸಿಬ್ಬಂದಿ ನೀಡಿದ್ದರು. ಆದರೆ ನನಗೆ ಜೈಲೂಟ ತಿನ್ನಲಾಗುತ್ತಿಲ್ಲ ಎಂದು ಪವಿತ್ರಾ ಹೇಳುತ್ತಿದ್ದಾರೆ. ರುಚಿ ಇಲ್ಲದೆ ಊಟ ಸೇವಿಸುವುದು ಹೇಗೆ ಎಂದು ಸಿಬ್ಬಂದಿ ಬಳಿ ಪ್ರಶ್ನೆ ಕೇಳುತ್ತಿದ್ದಾರೆ.

ದರ್ಶನ್ ಭೇಟಿಯಾಗಲು ಬಂದ ಪ್ರಶಾಂತ್ ಚಕ್ರವರ್ತಿ

ಕರ್ನಾಟಕ ಜನಸೇವಾ ಟ್ರಸ್ಟ್​​ನ ನಿರಾಶ್ರಿತರ ಆಶ್ರಮದ ಪ್ರಶಾಂತ್ ಚಕ್ರವರ್ತಿ ಅವರು ಮಂಗಳವಾರ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್​ ಅವರನ್ನು ಭೇಟಿಯಾಗಲು ಬಂದಿದ್ದರು. ಪ್ರಶಾಂತ್ ಚಕ್ರವರ್ತಿ ಸೇರಿ ಮತ್ತಿಬ್ಬರ ಆಗಮಿಸಿದ್ದರು. ದರ್ಶನ್ ಭೇಟಿಯಾಗಲು ಸಾಧ್ಯವಾಗದಿದ್ದರೆ ಆರೋಪಿ ನಾಗರಾಜ್ ಭೇಟಿಯಾಗುವುದಾಗಿ ಅವರು ಹೇಳಿದ್ದರು. ಆಶ್ರಮದ ವಿಚಾರವಾಗಿ ಸಮಸ್ಯೆಯಾದಾಗ ದರ್ಶನ್ ಅವರು ಬೆಂಬಲ ಕೊಟ್ಟಿದ್ದರು. ಅದರಿಂದಾಗಿ ಅವರನ್ನ ಭೇಟಿ ಮಾಡಿ ಹೋಗಲು ಬಂದಿದ್ದೇವೆಂದ ಪ್ರಶಾಂತ್ ಚಕ್ರವರ್ತಿ ಹೇಳಿದ್ದರು.

Continue Reading

ಪ್ರಮುಖ ಸುದ್ದಿ

Suraj Revanna Case : ಸೂರಜ್ ವಿರುದ್ಧವೇ ತಿರುಗಿ ಬಿದ್ದು ದೂರು ದಾಖಲಿಸಿದ ಆಪ್ತ ಶಿವಕುಮಾರ್​ !

Suraj Revanna Case: ಶಿವಕುಮಾರ್​ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ರೇವಣ್ಣ ವಿರುದ್ದ ದೂರು ನೀಡಲು ಹೊಳೆನರಸೀಪುರ ನಗರ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಶಿವಕುಮಾರ್​ ಶಿವಕುಮಾರ್ ಹೊಳೆನರಸೀಪುರ ತಾಲ್ಲೂಕಿನ ಹನುಮನಹಳ್ಳಿ ಗ್ರಾಮದವರಾಗಿದ್ದಾರೆ. ಹಿಂದೆ ಸೂರಜ್ ಪರವಾಗಿ ಸಂತ್ರಸ್ತನ ವಿರುದ್ಧ ದೂರು ನೀಡಿ ಗಮನ ಸೆಳೆದಿದ್ದರು.

VISTARANEWS.COM


on

Suraj Revanna Case
Koo

ಹಾಸನ: ಅಸಹಜ ಲೈಂಗಿಕ ಕ್ರಿಯೆ ಪ್ರಕರಣದಲ್ಲಿ ಸೂರಜ್​ ರೇವಣ್ಣ (Suraj Revanna Case) ​​ ಪರವಾಗಿ ನಿಂತು ಸಂತ್ರಸ್ತರ ವಿರೋಧ ಕಟ್ಟಿಕೊಂಡಿದ್ದ ಶಿವಕುಮಾರ್​ ದಿಢೀರ್​ ತಮ್ಮ ನಿಲುವು ಬದಲಾಯಿಸಿದ್ದಾರೆ. ಇದೀಗ ಅವರು ಹೊಳೆನರಸೀಪುರ ಪೊಲೀಸ್ ಠಾಣೆಗೆ ಬಂದು ಸೂರಜ್ ರೇವಣ್ಣ ವಿರುದ್ಧವೇ ಪ್ರಕರಣ ದಾಖಲಿಸಿದ್ದಾರೆ. ಶಿವಕುಮಾರ್​ ಈ ಹಿಂದೆ ಸಂತ್ರಸ್ತರ ವಿರುದ್ಧವಾಗಿದ್ದರು. ಹೀಗಾಗಿ ಸಂತ್ರಸ್ತರು ಶಿವಕುಮಾರ್ ವಿರುದ್ಧವೇ ದೂರು ದಾಖಲಿಸಿದ್ದರು. ಅಲ್ಲಿಂದ ಅವರು ನಾಪತ್ತೆಯಾಗಿದ್ದರು. ಇದೀಗ ದಿಢೀರ್​ ಪ್ರತ್ಯಕ್ಷಗೊಂಡ ಸೂರಜ್ ವಿರುದ್ಧ ದೂರು ದಾಖಲಿಸಿದ್ದಾರೆ.

ಶಿವಕುಮಾರ್​ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ರೇವಣ್ಣ ವಿರುದ್ದ ದೂರು ನೀಡಲು ಹೊಳೆನರಸೀಪುರ ನಗರ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಶಿವಕುಮಾರ್​ ಶಿವಕುಮಾರ್ ಹೊಳೆನರಸೀಪುರ ತಾಲ್ಲೂಕಿನ ಹನುಮನಹಳ್ಳಿ ಗ್ರಾಮದವರಾಗಿದ್ದಾರೆ. ಹಿಂದೆ ಸೂರಜ್ ಪರವಾಗಿ ಸಂತ್ರಸ್ತನ ವಿರುದ್ಧ ದೂರು ನೀಡಿ ಗಮನ ಸೆಳೆದಿದ್ದರು.

ಶಿವಕಮಾರ ವಿರುದ್ಧವೂ ದಾಖಲಾಗಿದೆ ದೂರು

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಡಾ.ಸೂರಜ್‌ ರೇವಣ್ಣ (Suraj Revanna Case) ಆಪ್ತ, ನಾಪತ್ತೆಯಾಗಿರುವ ಶಿವಕುಮಾರ್‌ ವಿರುದ್ಧವೂ ಸಂತ್ರಸ್ತ ದೂರು ದಾಖಲಿಲಾಗಿತ್ತು. ನನಗೆ ಆಗಿರುವ ಅನ್ಯಾಯದ ಬಗ್ಗೆ ಶಿವಕುಮಾರ್ ಬಳಿ ಹೇಳಿದ್ದೆ, ನನಗೆ ದೈಹಿಕ ಹಿಂಸೆ ಆಗಿದ್ದರೂ ಶಿವಕುಮಾರ್ ಆಸ್ಪತ್ರೆಗೆ ಹೋಗಲು ಬಿಟ್ಟಿರಲಿಲ್ಲ ಎಂದು ಸಂತ್ರಸ್ತ ಆರೋಪಿಸಿದ್ದರು.

ಹೀಗಾಗಿ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿ ಸೂರಜ್‌ ಆಪ್ತ ಶಿವಕುಮಾರ್ ಹೆಸರು ಸೇರ್ಪಡೆ ಮಾಡಲಾಗಿತ್ತು. ಸೂರಜ್‌ಗೆ 5 ಕೋಟಿ ರೂ. ನೀಡುವಂತೆ ಬ್ಲ್ಯಾಕ್‌ ಮೇಲ್‌ ಮಾಡಿದ್ದಾರೆ ಎಂದು ಸಂತ್ರಸ್ತನ ವಿರುದ್ಧ ಶಿವಕುಮಾರ್ ದೂರು ನೀಡಿದ್ದರು. ಆ ಬಳಿಕ ಶಿವಕುಮಾರ್‌ ಹಾಗೂ ಸಂತ್ರಸ್ತ ಇಬ್ಬರೂ ಸೇರಿ ಬ್ಲ್ಯಾಕ್‌ ಮೇಲ್‌ ಮಾಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು.

ಇದನ್ನೂ ಓದಿ: Suraj Revanna Case: ತಮ್ಮನಿಗೆ ಮೂರು ಸಲ; ಈಗ ಅಣ್ಣನಿಗೂ ಪುರುಷತ್ವ ಪರೀಕ್ಷೆ! ಇದೇ ಬೇರೆ ಥರ!

ಅಣ್ಣ ಸೂರಜ್‌ 8 ದಿನ ಸಿಐಡಿ ಕಸ್ಟಡಿಗೆ

ಸಲಿಂಗ ಕಾಮ ಪ್ರಕರಣದಲ್ಲಿ ಸಿಕ್ಕಿಬಿದ್ದು ನ್ಯಾಯಾಂಗ ಬಂಧನದಲ್ಲಿದ್ದ ಎಂಎಲ್‌ಸಿ ಸೂರಜ್‌ ರೇವಣ್ಣನನ್ನು (Suraj Revanna Case) 8 ದಿನ ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್​ ಬುಧವಾರ ಆದೇಶ ಹೊರಡಿತ್ತು. ಪ್ರಕರಣ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್‌ ನ್ಯಾಯಾಧೀಶರಾದ ಕೆ.ಎನ್‌.ಶಿವಕುಮಾರ್‌ ಅವರು ಸೂರಜ್‌ನನ್ನು ಜುಲೈ 1ರವರೆಗೆ ಸಿಐಡಿ ಕಸ್ಟಡಿಗೆ ನೀಡಿ ಆದೇಶ ನೀಡಿದ್ದಾರೆ.

ವಿಚಾರಣೆಗಾಗಿ ಹತ್ತು ದಿನ ಕಸ್ಟಡಿಗೆ ನೀಡುವಂತೆ ಸಿಐಡಿ ಅಧಿಕಾರಿಗಳು ಮನವಿ ಮಾಡಿದ್ದರು. ಆದರೆ, 10 ದಿನಕ್ಕೆ ಬದಲಾಗಿ 8 ದಿನ ಸಿಐಡಿ ಕಸ್ಟಡಿಗೆ ನೀಡಲು ಸೂಚಿಸಿದೆ. ಇದರಿಂದ ಜುಲೈ 1 ರವರೆಗೆ ಸೂರಜ್ ರೇವಣ್ಣ ಸಿಐಡಿ ಕಸ್ಟಡಿಯಲ್ಲಿ ಇರಲಿದ್ದಾರೆ.

ಜುಲೈ 8ರವರೆಗೆ ಪ್ರಜ್ವಲ್‌ಗೆ ನ್ಯಾಯಾಂಗ ಬಂಧನ

ಬುಧವಾರ ನ್ಯಾಯಾಲಯದಲ್ಲಿ ಅಣ್ಣ ಸೂರಜ್ ರೇವಣ್ಣ ಅಸಹಜ ಲೈಂಗಿಕ ಕಿರುಕುಳದ ಪ್ರಕರಣದ ಅರ್ಜಿ ವಿಚಾರಣೆ ಮುಗಿಯುತ್ತಿದ್ದಂತೆ ಪ್ರಜ್ವಲ್ ರೇವಣ್ಣನನ್ನು (Prajwal Revanna) ಕೋರ್ಟ್‌ಗೆ ಎಸ್ಐಟಿ ಟೀಂ ಹಾಜರುಪಡಿಸಿತ್ತು. ಅತ್ಯಾಚಾರ ಪ್ರಕರಣ ಸಂಬಂಧ ಪ್ರಜ್ವಲ್‌ನ ಕಸ್ಟಡಿಗೆ ಪಡೆಯಲಾಗಿತ್ತು. ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ 42 ಎಸಿಎಂಎಂ ಕೋರ್ಟ್‌ಗೆ ಎಸ್ಐಟಿ ಹಾಜರು ಪಡಿಸಿದೆ. ಹೀಗಾಗಿ ಜುಲೈ 8ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ‌ ಕೋರ್ಟ್‌ ಆದೇಶ ನೀಡಿತ್ತು.

ಸೋದರ ಸೂರಜ್ ರೇವಣ್ಣ ಕೇಸ್‌ನ ಆದೇಶ ಬರೆಸುತ್ತಿರುವುದನ್ನು ನೋಡಿದ ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣ ಸಿಐಡಿ‌ ಕಸ್ಟಡಿಗೆ ಹೋಗಲಿದ್ದಾರೆ ಎಂಬ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದರು. ಅಣ್ಣನನ್ನು ಎಷ್ಟು ದಿನ ಕಸ್ಟಡಿಗೆ ನೀಡಿದ್ದಾರೆ ಎಂದು ಎಸ್‌ಐಟಿ ಅಧಿಕಾರಿಗಳನ್ನು ಪ್ರಜ್ವಲ್ ಕೇಳಿದ್ದಾರೆ.

Continue Reading

ಕ್ರೈಂ

Actor Darshan: ಪ್ರಥಮ್‌, ಉಮಾಪತಿಗೆ ಬೆದರಿಕೆ ಹಾಕಿದ ಡಿ ಬಾಸ್‌ ಫ್ಯಾನ್‌ ಬಂಧನ

Actor Darshan: ಚೇತನ್‌ ಎಂಬಾತನೇ ಬಂದಿತ ಆರೋಪಿ. ಕೊಯಮತ್ತೂರಿನಲ್ಲಿ ಈತನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಬಸವೇಶ್ವರ ನಗರ ಪೊಲೀಸರಿಂದ ಆರೋಪಿಯ ಬಂಧನವಾಗಿದೆ. ಐಪಿಸಿ ಸೆಕ್ಷನ್ 504, 506 ಅಡಿ ಎಫ್ಐಆರ್ ದಾಖಲು ಮಾಡಲಾಗಿದೆ.

VISTARANEWS.COM


on

actor darshan fan arrest
Koo

ಬೆಂಗಳೂರು: ನಟ ಪ್ರಥಮ್ (Pratham), ನಿರ್ಮಾಪಕ ಉಮಾಪತಿಗೆ (Umapathy) ಬೆದರಿಕೆ ಹಾಕಿದ್ದ ನಟ ದರ್ಶನ್ (Actor Darshan) ಅಭಿಮಾನಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ಇವರಿಬ್ಬರ ಮೇಲೆ ಹಲ್ಲೆ ನಡೆಸುವಂತೆ ತನ್ನ ವಿಡಿಯೋಗಳ ಮೂಲಕ ದರ್ಶನ್ ಅಭಿಮಾನಿಗಳನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದ.

ಚೇತನ್‌ ಎಂಬಾತನೇ ಬಂದಿತ ಆರೋಪಿ. ಕೊಯಮತ್ತೂರಿನಲ್ಲಿ ಈತನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಬಸವೇಶ್ವರ ನಗರ ಪೊಲೀಸರಿಂದ ಆರೋಪಿಯ ಬಂಧನವಾಗಿದೆ. ಐಪಿಸಿ ಸೆಕ್ಷನ್ 504, 506 ಅಡಿ ಎಫ್ಐಆರ್ ದಾಖಲು ಮಾಡಲಾಗಿದೆ. ಈತ ನಿರ್ಮಾಪಕ ಉಮಾಪತಿ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ. ಬೆದರಿಕೆ ಹಾಕಿದ್ದ ಯುವಕನ ಬಗ್ಗೆ ನಿರ್ಮಾಪಕ ಉಮಾಪತಿ ಗೌಡ ದೂರು ನೀಡಿದ್ದರು. ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ನಟ ಪ್ರಥಮ್‌ಗೆ ಕೂಡ ಈತ ಬೆದರಿಕೆ ಹಾಕಿದ್ದಲ್ಲದೆ, ದರ್ಶನ್ ಅಭಿಮಾ‌ನಿಗಳಿಗೆ ಪ್ರಚೋದನೆ ನೀಡುವಂತೆ ಮಾತನಾಡಿದ್ದ. ಆರೆಸ್ಟ್ ಆಗ್ತಿದ್ದಂತೆ ಉಮಾಪತಿ ಗೌಡ ಹಾಗೂ ಪ್ರಥಮ್‌ಗೆ ಚೇತನ್ ಕ್ಷಮೆ ಕೇಳಿದ್ದಾನೆ. ಕಾನೂನು ಬದ್ಧವಾಗಿ ನಡೆದುಕೊಳ್ತೀನಿ ಕ್ಷಮಿಸಿ ಅಂತ ವೀಡಿಯೋದಲ್ಲಿ ಮನವಿ ಮಾಡಿದ್ದಾನೆ.

ಜೊತೆಗೆ ಮತ್ತೊಬ್ಬ ಅಭಿಮಾನಿ ನಾಗೇಶ್ ಎಂಬಾತನಿಗಾಗಿಯೂ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಬೆದರಿಕೆ ಹಾಕಿದ ಅಭಿಮಾನಿಗಳ ಮೇಲೆ ಪಿಸಿಆರ್ ದಾಖಲು ಮಾಡಲಾಗಿದೆ. ಬಸವೇಶ್ವರ ನಗರ ಠಾಣೆಯಲ್ಲಿ ಕೋರ್ಟ್ ಸೂಚನೆಯಂತೆ ಎಫ್‍ಐಆರ್ ದಾಖಲಾಗಿದೆ.

ಜೈಲಿನಲ್ಲಿ ನಟ ದರ್ಶನ್‌ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್‌

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್‌ ಅವರನ್ನು ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್ ಸೋಮವಾರ ಪರಪ್ಪನ ಅಗ್ರಹಾರ ಜೈಲಿನಲ್ಲಿ ಭೇಟಿಯಾದರು. ಇವರಷ್ಟೇ ಅಲ್ಲದೇ ದರ್ಶನ್‌ ಆಪ್ತ ವಿನೋದ್‌ ಪ್ರಭಾಕರ್‌ ಕೂಡ ಸ್ನೇಹಿತರ ಜತೆ ಆಗಮಿಸಿ ಭೇಟಿ ಮಾಡಿದರು.

ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್ ಕಪ್ಪು ಬಣ್ಣದ ಕಿಯಾ ಕಾರಿನಲ್ಲಿ ಆಗಮಿಸಿದ್ದರು. ಮೊದಲು ಜೈಲಿನ ಚೆಕ್ ಪೋಸ್ಟ್ ಸಮೀಪ ಕಾರು ನಿಲ್ಲಿಸಲಾಗಿತ್ತು. ಆಗ ಮಾಧ್ಯಮಗಳ ಕ್ಯಾಮೆರಾ ಕಂಡು ವಿಜಯಲಕ್ಷ್ಮಿ, ವಿನೀಶ್ ವಾಪಸ್ ತೆರಳಿದರು. ನಂತರ ಬೇರೊಂದು ಕಾರಿನಲ್ಲಿ ಜೈಲಿನ ಬಳಿ ಬಂದರು. ಆಗ ಮಾಧ್ಯಮಗಳ ಕಣ್ತಪ್ಪಿಸಿ ಜೈಲಿನ ಒಳಗೆ ದರ್ಶನ್‌ ಪತ್ನಿ, ಪುತ್ರನನ್ನು ಪೊಲೀಸರು ಕರೆದೊಯ್ದರು.

ಇನ್ನು ಜೈಲಿನಲ್ಲಿದ್ದರೂ ನಟ ದರ್ಶನ್‌ಗೆ ರಾಜಾತಿಥ್ಯ ನೀಡಲಾಗುತ್ತಿದೆ ಎನ್ನಲಾಗಿದೆ. ಸಾಮಾನ್ಯ ಕೈದಿಗಳನ್ನು ಭೇಟಿಯಾಗಲು ಬಂದರೆ ನೂರೊಂದು ಕಂಡಿಷನ್ಸ್‌ ವಿಧಿಸುವ ಪೊಲೀಸರು, ಸೆಲೆಬ್ರಿಟಿ, ರಾಜಕಾರಣಿಗಳು, ಬಲಾಢ್ಯರಿಗೆ ರಾಜಾತಿಥ್ಯ ನೀಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ದರ್ಶನ್ ಮೌನವಾಗಿದ್ರು, ಏನೂ ಮಾತನಾಡಲಿಲ್ಲ: ವಿನೋದ್ ಪ್ರಭಾಕರ್

ದರ್ಶನ್‌ ಪತ್ನಿ, ಪುತ್ರ ಭೇಟಿ ಮಾಡಿ ಹೊರಟ ಬಳಿಕ, ನಟ ವಿನೋದ್ ಪ್ರಭಾಕರ್ ಅವರು ಸ್ನೇಹಿತರ ಜತೆ ತೆರಳಿ ದರ್ಶನ್ ಅವರನ್ನು ಭೇಟಿ ಮಾಡಿ ನಿರ್ಗಮಿಸಿದರು. ನಂತರ ಮಾತನಾಡಿದ ವಿನೋದ್ ಪ್ರಭಾಕರ್ ಅವರು, ಮೃತ ರೇಣುಕಾ ಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ನೋವನ್ನು ಬರಿಸುವ ಶಕ್ತಿ ಭಗವಂತ ನೀಡಲಿ. ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದರು.

ದರ್ಶನ್ ಅವರನ್ನು ಭೇಟಿ ಮಾಡಿ ನಾಲ್ಕು ತಿಂಗಳು ಆಗಿತ್ತು. ಅವರ ಹುಟ್ಟುಹಬ್ಬದಂದು ಭೇಟಿ ಮಾಡಿದ್ದೆ. ಮಾಧ್ಯಮಗಳಲ್ಲಿ ಬರುವುದನ್ನು ನೋಡಿ ವಿಚಾರ ತಿಳಿದುಕೊಂಡೆ, ಪೊಲೀಸ್ ಸ್ಟೇಷನ್ ಹತ್ತಿರ ಹೋಗಿ ಭೇಟಿಯಾಗಲು ಪ್ರಯತ್ನಪಟ್ಟೆ, ಆದರೆ ಸಾಧ್ಯವಾಗಿರಲಿಲ್ಲ. ಇಂದು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಭೇಟಿ ಮಾಡಿದ್ದೇನೆ. ದರ್ಶನ್ ಅವರು ಮೌನವಾಗಿದ್ದರು, ಏನ್ ಟೈಗರ್ ಅಂತ ಹೇಳಿದರು ಅಷ್ಟೇ… ಅವರಿಗೆ ಶೆಕ್ ಹ್ಯಾಂಡ್ ಮಾಡಿ ಬಂದೆ ಎಂದು ತಿಳಿಸಿದರು.

ಇದನ್ನೂ ಓದಿ: Actor Darshan: ಪವಿತ್ರಾ ಬಗ್ಗೆ ಗೊತ್ತಿಲ್ಲ ಆದರೆ ʻದರ್ಶನ್‌ʼ ದಾಂಪತ್ಯದಲ್ಲಿ ಹುಳಿ ಹಿಂಡಿದ್ದೇ ನಿಖಿತಾ ಎಂದ ಓಂ ಪ್ರಕಾಶ್!

Continue Reading
Advertisement
Actor Darshan Judicial Custody Jailer Gave UTP Number
ಕ್ರೈಂ25 mins ago

Actor Darshan: ದರ್ಶನ್‌, ಪ್ರದೋಷ್‌ನಿಂದ ಮೂರು ಪಿಸ್ತೂಲ್‌ ವಶಕ್ಕೆ

Health Tips Kannada
ಆರೋಗ್ಯ34 mins ago

Health Tips Kannada: ಕುಂಬಳಕಾಯಿ ಬೀಜದಲ್ಲಿದೆ ನಮ್ಮ ಆರೋಗ್ಯದ ಗುಟ್ಟು!

NEET Paper Leak
ಶಿಕ್ಷಣ34 mins ago

NEET Paper Leak: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ರೂವಾರಿ ಸಂಜೀವ್ ಮುಖಿಯಾ; ಈತ ನಟೋರಿಯಸ್‌!

Karnataka Weather
ಕರ್ನಾಟಕ1 hour ago

Karnataka Weather: ಇಂದು ಹಾಸನ, ಕೊಡಗು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

David Warner
ಪ್ರಮುಖ ಸುದ್ದಿ2 hours ago

David Warner : ವಿಶ್ವ ಕಪ್​ನಿಂದ ಹೊರಬಿದ್ದ ಬೇಸರ; ಬಿಯರ್ ಕುಡಿತಾ ಕುಳಿತ ಆಸ್ಟ್ರೇಲಿಯಾದ ಆಟಗಾರರು

Fatty Lever Disease
ಆರೋಗ್ಯ2 hours ago

Fatty Lever Disease: ಎಚ್ಚರ ವಹಿಸಿ, ಮಕ್ಕಳನ್ನು ಸದ್ದಿಲ್ಲದೆ ಕಾಡುತ್ತಿದೆ ಫ್ಯಾಟಿ ಲಿವರ್‌ ಕಾಯಿಲೆ!

Karnataka Milk Federation
ಪ್ರಮುಖ ಸುದ್ದಿ3 hours ago

ವಿಸ್ತಾರ ಸಂಪಾದಕೀಯ: ಹಾಲು ದರ ಏರಿಕೆ ಬಳಕೆದಾರನಿಗೆ ಹೊರೆಯಾಗದಿರಲಿ

Dina Bhavishya
ಭವಿಷ್ಯ3 hours ago

Dina Bhavishya: ಈ ರಾಶಿಯವರಿಗೆ ದೀರ್ಘಕಾಲದ ಪ್ರಯತ್ನ ಇಂದು ಯಶಸ್ಸು ತಂದುಕೊಡಲಿದೆ

Women's Asia Cup
ಪ್ರಮುಖ ಸುದ್ದಿ8 hours ago

Women’s Asia Cup 2024 : ಮಹಿಳೆಯರ ಏಷ್ಯಾ ಕಪ್​ ಕ್ರಿಕೆಟ್​ನ ವೇಳಾಪಟ್ಟಿ ಬಿಡುಗಡೆ, ಜುಲೈ 19ಕ್ಕೆ ಭಾರತ- ಪಾಕ್ ಪಂದ್ಯ

minister mb patil visit japan and discuss about investment in Karnataka
ಕರ್ನಾಟಕ8 hours ago

Foreign Investment: 100 ಕೋಟಿ ರೂ. ವೆಚ್ಚದ ತ್ಯಾಜ್ಯ ನೀರು ನಿರ್ವಹಣಾ ಉಪಕರಣಗಳ ತಯಾರಿಕಾ ಘಟಕ ಸ್ಥಾಪನೆಗೆ ಒಪ್ಪಂದ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌