Film on Vajpayee | ಅಟಲ್ ಬಿಹಾರಿ ವಾಜಪೇಯಿ ಜೀವನ ಚರಿತ್ರೆ ತೆರೆಯ ಮೇಲೆ ಬರಲು ಸಜ್ಜು - Vistara News

ಪ್ರಮುಖ ಸುದ್ದಿ

Film on Vajpayee | ಅಟಲ್ ಬಿಹಾರಿ ವಾಜಪೇಯಿ ಜೀವನ ಚರಿತ್ರೆ ತೆರೆಯ ಮೇಲೆ ಬರಲು ಸಜ್ಜು

ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಜೀವನ ಚರಿತ್ರೆ ತೆರೆ ಮೇಲೆ ಬರುತ್ತಿದೆ. 2023ರಲ್ಲಿ ಚಿತ್ರವನ್ನು ರಿಲೀಸ್‌ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ.

VISTARANEWS.COM


on

Film on Vajpayee
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಭಾರತದ ಮಾಜಿ ಪ್ರಧಾನ ಮಂತ್ರಿ ದಿವಂಗತ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ (Film on Vajpayee) ಜೀವನ ಚರಿತ್ರೆ ತೆರೆ ಮೇಲೆ ಬರಲು ಸಜ್ಜಾಗುತ್ತಿದೆ. ಆಟಲ್‌ ಎಂಬ ಶೀರ್ಷಿಕೆಯ, ʼಮೈನ್ ರಹೂನ್ ಯಾ ನಾ ರಹೂನ್, ಯೇ ದೇಶ್ ರೆಹನಾ ಚಾಹಿಯೇʼ (Atal- Main RahoonYa Na Rahoon, Yeh Desh Rehna Chahiye) ಎಂಬ ಟ್ಯಾಗ್‌ಲೈನ್‌ ಹೊಂದಿರುವ ಚಿತ್ರವು 2023ರಲ್ಲಿ ತೆರೆಗೆ ಬರಲಿದೆ.

ಉಲ್ಲೇಖ್ ಎನ್ ಪಿ ಅವರ ಪುಸ್ತಕ ʻದಿ ಅನ್‌ಟೋಲ್ಡ್ ವಾಜಪೇಯಿ: ಪೊಲಿಟಿಷಿಯನ್ ಮತ್ತು ಪ್ಯಾರಡಾಕ್ಸ್ʼ (‘The Untold Vajpayee: Politician and Paradox’) ಅನ್ನು ಸಿನಿಮಾ ಮಾಡಲು ಚಿತ್ರತಂಡ ಸಜ್ಜಾಗಿದೆ.  

ಈ ಚಿತ್ರವನ್ನು ಭಾನುಶಾಲಿ ಸ್ಟುಡಿಯೋಸ್‌ ಹಾಗೂ ಲೆಜೆಂಡ್‌ ಸ್ಟುಡಿಯೋಸ್‌ ಪ್ರಸ್ತುತ ಪಡಿಸಲಿವೆ. ಜನ್ಹಿತ್ ಮೇ ಜಾರಿ ಖ್ಯಾತಿಯ ನಿರ್ಮಾಪಕರಾದ ವಿನೋದ್ ಭಾನುಶಾಲಿ ಮತ್ತು ಪಿಎಂ ನರೇಂದ್ರ ಮೋದಿ (2019) ಚಿತ್ರವನ್ನು ನಿರ್ಮಿಸಿದ ಸಂದೀಪ್ ಸಿಂಗ್ ಚಿತ್ರವನ್ನು ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಚಿತ್ರದ ನಿರ್ದೇಶಕರು ಹಾಗೂ ಪಾತ್ರಗಳನ್ನು ಚಿತ್ರತಂಡ ಎಲ್ಲಿಯೂ ರಿವೀಲ್‌ ಮಾಡಿಲ್ಲ. ಮುಂದಿನ ವರ್ಷ ಕ್ರಿಸ್‌ಮಸ್‌ ದಿನದಂದು ಚಿತ್ರವನ್ನು ರಿಲೀಸ್‌ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ.

ಇದನ್ನೂ ಓದಿ | Queen 2 Web Series : ಶೂಟಿಂಗ್‌ ಫೋಟೊ ಹಂಚಿಕೊಂಡ ರಮ್ಯಾ ಕೃಷ್ಣನ್ 

ವಿನೋದ್ ಭಾನುಶಾಲಿ ಮಾತನಾಡಿ, ʻʻನಾನು ಅಟಲ್‌ ಅವರ ದೊಡ್ಡ ಅಭಿಮಾನಿಯಾಗಿದ್ದು, ಅವರು ಅಪ್ರತಿಮ ನಾಯಕ ಹಾಗೂ ದೇಶಕ್ಕೆ ನೀಡಿದ ಕೊಡುಗೆ ಅಪಾರವಾದದ್ದು. ಬೆಳ್ಳಿತೆರೆಗೆ ಅವರ ಕುರಿತು ಚಿತ್ರ ತರುವುದು ನಮ್ಮ ಗೌರವವಾಗಿದೆʼʼ ಎಂದರು.

ಸಂದೀಪ್ ಸಿಂಗ್ ಮಾತನಾಡಿ, ʻʻಭಾರತೀಯ ಇತಿಹಾಸದ ಶ್ರೇಷ್ಠ ನಾಯಕರಲ್ಲಿ ಅಟಲ್‌ ಕೂಡ ಒಬ್ಬರು. ಅವರು ತಮ್ಮ ಮಾತುಗಳಿಂದಲೇ ಶತ್ರುಗಳ ಹೃದಯವನ್ನು ಗೆದ್ದರು. ಅವರ ಜೀವನ ಕಥೆಗಳನ್ನು, ರಾಜಕೀಯ ಸಿದ್ಧಾಂತಗಳನ್ನು ಮಾತ್ರವಲ್ಲದೆ ಅವರ ಮಾನವೀಯ ಮತ್ತು ಕಾವ್ಯಾತ್ಮಕ ಅಂಶಗಳನ್ನು ತೋರಿಸಲು ಚಲನಚಿತ್ರ ಅತ್ಯುತ್ತಮ ಸಂವಹನ ಮಾಧ್ಯಮ ಎಂದು ನಾನು ಭಾವಿಸುತ್ತೇನೆʼʼ ಎಂದರು.

ನೋದ್ ಭಾನುಶಾಲಿ, ಸಂದೀಪ್ ಸಿಂಗ್, ಸ್ಯಾಮ್ ಖಾನ್, ಕಮಲೇಶ್ ಭಾನುಶಾಲಿ ಮತ್ತು ವಿಶಾಲ್ ಗುರ್ನಾನಿ ಮತ್ತು ಜೂಹಿ ಪರೇಖ್ ಮೆಹ್ತಾ, ಜೀಶನ್ ಅಹ್ಮದ್ ಮತ್ತು ಶಿವ್ ಶರ್ಮಾ ಸಹ-ನಿರ್ಮಾಣ ಮಾಡಿದ್ದಾರೆ.

ಇದನ್ನೂ ಓದಿ | ಪಾರ್ಕ್ ಹೋಟೆಲ್‌ನಲ್ಲಿ ಡ್ರಗ್ಸ್‌ ಪಾರ್ಟಿ, ಬಾಲಿವುಡ್‌ ನಟ ಸಿದ್ಧಾಂತ್‌ ಕಪೂರ್‌ ವಶಕ್ಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಬಾಲಕಿಯ ಒಳ ವಸ್ತ್ರ ಕಳಚಿ ಬೆತ್ತಲೆಗೊಳಿಸುವುದು ಅತ್ಯಾಚಾರ ಯತ್ನವಲ್ಲ ಎಂದ ಹೈಕೋರ್ಟ್! ನಿಮ್ಮ ಅಭಿಪ್ರಾಯವೇನು?

ವ್ಯಕ್ತಿಯು ಬಾಲಕಿಯನ್ನು ವಿವಸ್ತ್ರಗೊಳಿಸಿದರೆ ಅದು ಅತ್ಯಾಚಾರಕ್ಕೆ ಯತ್ನ ಮಾಡಿದಂತೆ ಆಗುವುದಿಲ್ಲ. ಮೊದಲು ವ್ಯಕ್ತಿಯ ತಲೆಯಲ್ಲಿ ಅತ್ಯಾಚಾರದ ಯೋಚನೆ ಇರಬೇಕು. ಬಾಲಕಿಯ ಜತೆ ಲೈಂಗಿಕ ಸಂಪರ್ಕ ಸಾಧಿಸಲು ಮುಂದಾಗಿರಬೇಕು. ಇಲ್ಲದಿದ್ದರೆ ಅದು ಅತ್ಯಾಚಾರಕ್ಕೆ ಯತ್ನ ಮಾಡಿದಂತೆ ಆಗುವುದಿಲ್ಲ. ಬಾಲಕಿಯನ್ನು ವಿವಸ್ತ್ರಗೊಳಿಸಿದರೆ 376 ಹಾಗೂ 511 ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷೆ ವಿಧಿಸಲು ಆಗುವುದಿಲ್ಲ ಎಂದು ಕೋರ್ಟ್‌ ಹೇಳಿದೆ.

VISTARANEWS.COM


on

Court Order
Koo

ಜೈಪುರ: ಬಾಲಕಿಯ ಒಳಉಡುಪನ್ನು ತೆಗೆದು, ಆಕೆಯನ್ನು ಬೆತ್ತಲೆಗೊಳಿಸುವುದು ಅತ್ಯಾಚಾರಕ್ಕೆ ನಡೆಸಿದ ಯತ್ನವಲ್ಲ ಎಂಬುದಾಗಿ ರಾಜಸ್ಥಾನ ಹೈಕೋರ್ಟ್‌ (Rajasthan High Court) ತೀರ್ಪು ನೀಡಿದೆ. ಸುಮಾರು 33 ವರ್ಷಗಳ ಹಿಂದಿನ ಪ್ರಕರಣದ ಕುರಿತು ಆದೇಶ ಹೊರಡಿಸಿದ ನ್ಯಾಯಾಲಯವು, ಯಾವುದೇ ವ್ಯಕ್ತಿಯು ಅಪ್ರಾಪ್ತೆಯ ಒಳಉಡುಪು ಬಿಚ್ಚಿ, ಆಕೆಯನ್ನು ವಿವಸ್ತ್ರಗೊಳಿಸಿದರೆ, ಅದನ್ನು ಅತ್ಯಾಚಾರಕ್ಕೆ ಯತ್ನ (Attempt To Rape) ಮಾಡಿದ ಪ್ರಕರಣ ಆಗುವುದಿಲ್ಲ ಎಂದು ನ್ಯಾಯಮೂರ್ತಿ ಅನೂಪ್‌ ಕುಮಾರ್‌ ಧಾಂಡ್‌ ಅವರ ಏಕಸದಸ್ಯ ಪೀಠವು ತಿಳಿಸಿತು.

ಸುಮಾರು 33 ವರ್ಷಗಳ ಹಿಂದೆ ಅಂದರೆ, 1991ರ ಮಾರ್ಚ್‌ 9ರಂದು ವ್ಯಕ್ತಿಯೊಬ್ಬ 6 ವರ್ಷದ ಬಾಲಕಿಯನ್ನು ಕರೆದುಕೊಂಡು ಹೋಗಿ, ಆಕೆಯನ್ನು ವಿವಸ್ತ್ರಗೊಳಿಸಿದ್ದ. ಟೋಂಕ್‌ ಜಿಲ್ಲೆಯ ತೋಡಾರೈಸಿಂಗ್‌ ಪ್ರದೇಶದಲ್ಲಿ ರಾತ್ರಿ 8 ಗಂಟೆಗೆ ಬಾಲಕಿಯನ್ನು ಧರ್ಮಶಾಲೆಯೊಂದಕ್ಕೆ ಕರೆದುಕೊಂಡು ಹೋಗಿದ್ದ. ಅಲ್ಲಿ ಬಾಲಕಿಯ ಅಂಡರ್‌ವೇರ್‌ ಬಿಚ್ಚಿ, ಆಕೆಯನ್ನು ಬೆತ್ತಲೆಗೊಳಿಸಿದ್ದ. ಇದಾದ ಬಳಿಕ ಬಾಲಕಿಯು ಜೋರಾಗಿ ಕಿರುಚಿದ ಕಾರಣ ಗ್ರಾಮಸ್ಥರು ಬಂದು ಬಾಲಕಿಯನ್ನು ರಕ್ಷಿಸಿದ್ದರು.

Physical Abuse

ಪ್ರಕರಣದ ಬಳಿಕ ನನ್ನ ಮೊಮ್ಮಗಳ ಮೇಲೆ ಸುವಾಲಾಲ್‌ ಎಂಬಾತ (ಪ್ರಕರಣದ ವೇಳೆ ವ್ಯಕ್ತಿಗೆ 25 ವರ್ಷ ವಯಸ್ಸು) ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂಬುದಾಗಿ ಬಾಲಕಿಯ ಅಜ್ಜ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು. ಇದಾದ ಬಳಿಕ ಪ್ರಕರಣವು ಗಂಭೀರ ಸ್ವರೂಪ ಪಡೆದು, ಜಿಲ್ಲಾ ನ್ಯಾಯಾಲಯವು ಸುವಾಲಾಲ್‌ನನ್ನು ಅಪರಾಧಿ ಎಂದು ಘೋಷಿಸಿ, ಜೈಲು ಶಿಕ್ಷೆ ವಿಧಿಸಿತ್ತು. ವಿಚಾರಣೆ ವೇಳೆಯೇ ಸುವಾಲಾಲ್‌ ಎರಡೂವರೆ ತಿಂಗಳು ಜೈಲು ವಾಸ ಅನುಭವಿಸಿದ್ದರು.

ಹೈಕೋರ್ಟ್‌ ಆದೇಶವೇನು?

ಯಾವುದೇ ವ್ಯಕ್ತಿಯು ಬಾಲಕಿಯನ್ನು ವಿವಸ್ತ್ರಗೊಳಿಸಿದರೆ ಅದು ಅತ್ಯಾಚಾರಕ್ಕೆ ಯತ್ನ ಮಾಡಿದಂತೆ ಆಗುವುದಿಲ್ಲ. ಮೊದಲು ವ್ಯಕ್ತಿಯ ತಲೆಯಲ್ಲಿ ಅತ್ಯಾಚಾರದ ಯೋಚನೆ ಇರಬೇಕು. ಬಾಲಕಿಯ ಜತೆ ಲೈಂಗಿಕ ಸಂಪರ್ಕ ಸಾಧಿಸಲು ಮುಂದಾಗಿರಬೇಕು. ಇಲ್ಲದಿದ್ದರೆ ಅದು ಅತ್ಯಾಚಾರಕ್ಕೆ ಯತ್ನ ಮಾಡಿದಂತೆ ಆಗುವುದಿಲ್ಲ. ಬಾಲಕಿಯನ್ನು ವಿವಸ್ತ್ರಗೊಳಿಸಿದರೆ 376 ಹಾಗೂ 511 ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷೆ ವಿಧಿಸಲು ಆಗುವುದಿಲ್ಲ. ಆದರೆ, ಬಾಲಕಿಯನ್ನು ಬೆತ್ತಲೆಗೊಳಿಸಿದರೆ, ಅದು ಆಕೆಯ ಘನತೆಗೆ ಧಕ್ಕೆ ತಂದಂತೆ. ಸೆಕ್ಷನ್‌ 354ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದು ತಿಳಿಸಿತು. ಜಿಲ್ಲಾ ನ್ಯಾಯಾಲಯದ ಆದೇಶವನ್ನು ಬದಲಾಯಿಸಿ, ಸೆಕ್ಷನ್‌ 354ರ ಅಡಿಯಲ್ಲಿ ಮಾತ್ರ ಅಪರಾಧಿ ಎಂದು ಘೋಷಿಸಿತು.

ಇದನ್ನೂ ಓದಿ: Arvind Kejriwal: ದೆಹಲಿ ಹೈಕೋರ್ಟ್‌ನಿಂದ ಸಿಕ್ಕಿಲ್ಲ ರಿಲೀಫ್‌; ಸುಪ್ರೀಂ ಕೋರ್ಟ್‌ ಕದ ತಟ್ಟಿದ ಅರವಿಂದ್ ಕೇಜ್ರಿವಾಲ್

Continue Reading

ಪ್ರಮುಖ ಸುದ್ದಿ

300 ಕೋಟಿ ರೂ. ಆಸ್ತಿಗಾಗಿ 1 ಕೋಟಿ ರೂ. ಸುಪಾರಿ ಕೊಟ್ಟು ಮಾವನನ್ನೇ ಕೊಲ್ಲಿಸಿದ ದುಷ್ಟ ಸೊಸೆ!

ಹಣಕ್ಕಾಗಿ ಹೆಣವೂ ಬಾಯಿ ಬಿಡುತ್ತದೆ ಎಂಬ ಮಾತಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಹಣಕ್ಕಾಗಿ ಹೆಣಗಳು ಬೀಳುತ್ತಿವೆ. ಇದಕ್ಕೆ ನಿದರ್ಶನ ಎಂಬಂತೆ, ಮಹಾರಾಷ್ಟ್ರದಲ್ಲಿ ಮಾವನ 300 ಕೋಟಿ ರೂ. ಆಸ್ತಿಯನ್ನು ಕಬಳಿಸಲು ಸೊಸೆಯು ಒಂದು ಕೋಟಿ ರೂ. ಸುಪಾರಿ ಕೊಟ್ಟು, ಮಾವನನ್ನು ಕೊಲೆ ಮಾಡಿಸಿದ್ದಾಳೆ. ಮೊದಲು ಹಿಂಟ್‌ ಆ್ಯಂಡ್‌ ರನ್‌ ಪ್ರಕರಣ ಆಗಿದ್ದ ಇದು ಈಗ ಕೊಲೆ ಪ್ರಕರಣವಾಗಿ ತಿರುವು ಪಡೆದುಕೊಂಡಿದೆ.

VISTARANEWS.COM


on

Mumbai
Koo

ಮುಂಬೈ: ಒಂದು ವಾರದ ಹಿಂದೆ ಮಹಾರಾಷ್ಟ್ರದ (Maharashtra) ನಾಗ್ಪುರದಲ್ಲಿ (Nagpur) ನಡೆದ ಹಿಂಟ್‌ ಆ್ಯಂಡ್‌ ರನ್‌ ಕೇಸ್‌ಗೆ (Hit And Run Case) ಹೊಸದೊಂದು ಟ್ವಿಸ್ಟ್‌ ಸಿಕ್ಕಿದೆ. ಹಿಂಟ್‌ ಆ್ಯಂಡ್‌ ರನ್‌ಗೆ 82 ವರ್ಷದ ವ್ಯಕ್ತಿಯು ಕಳೆದ ವಾರ ಬಲಿಯಾಗಿದ್ದರು. ಆದರೆ, ಪೊಲೀಸ್‌ ತನಿಖೆಯ ಬಳಿಕ ಭೀಕರ ಮಾಹಿತಿಯೊಂದು ಬಯಲಾಗಿದೆ. ಮಾವನ 300 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಹೊಡೆಯಲು ಸೊಸೆಯೇ 1 ಕೋಟಿ ರೂ. ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾಳೆ ಎಂಬ ಸಂಗತಿಯು ಎಲ್ಲರನ್ನೂ ಬೆಚ್ಚಿಬೀಳಿಸಿದೆ.

ಹೌದು, ನಾಗ್ಪುರ ಪ್ಲಾನಿಂಗ್‌ ಡಿಪಾರ್ಟ್‌ನಲ್ಲಿ ಸಹಾಯಕ ನಿರ್ದೇಶಕಿಯಾಗಿರುವ ಅರ್ಚನಾ ಮನೀಶ್‌ ಪುಟ್ಟೇವಾರ್ ಎಂಬ ಮಹಿಳೆಯು ಸುಪಾರಿ ಕೊಟ್ಟು ತಮ್ಮ ಮಾವ, 82 ವರ್ಷದ ಪುರುಷೋತ್ತಮ್‌ ಪುಟ್ಟೇವಾರ್ ಅವರನ್ನು ಕೊಲೆ ಮಾಡಿಸಿದ್ದಾರೆ ಎಂಬ ಸಂಗತಿಯು ಪೊಲೀಸರ ತನಿಖೆಯಿಂದ ಬಯಲಾಗಿದೆ. “ಮಾವನ ಹತ್ಯೆಗಾಗಿ ಮಹಿಳೆಯು ಸುಪಾರಿ ಕೊಟ್ಟಿದ್ದಾರೆ. ಹಲವು ದುಷ್ಕರ್ಮಿಗಳಿಗೆ 1 ಕೋಟಿ ರೂ. ಕೊಟ್ಟ ಅವರು, ಹಳೆಯ ಕಾರು ಖರೀದಿಸಿ, ಮಾವನಿಗೆ ಡಿಕ್ಕಿ ಹೊಡೆಸಿ ಕೊಂದು ಬಿಡಿ. ಆದರೆ, ಅದು ಅಪಘಾತದ ರೀತಿ ಆಗಿರಬೇಕು ಎಂಬುದಾಗಿ ಸೂಚಿಸಿದ್ದರು” ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ ಎಂಬುದಾಗಿ ಪಿಟಿಐ ವರದಿ ಮಾಡಿದೆ.

ಅರ್ಚನಾ ಮನೀಶ್‌ ಪಟ್ಟೇವಾರ್‌ ಅವರು ಪತಿಯ ಕಾರಿನ ಚಾಲಕನಾಗಿರುವ ಬಾಗ್ಡೆ, ಇತರ ಆರೋಪಿಗಳಾದ ನೀರಜ್‌ ನಿಮ್ಜೆ ಹಾಗೂ ಸಚಿನ್‌ ಧಾರ್ಮಿಕ್‌ ಎಂಬುವರಿಗೆ ಹಣ ಕೊಟ್ಟು ಸಂಚು ರೂಪಿಸಿದ್ದಾರೆ. ಇವರ ಸಂಚು ಬಯಲಾದ ಬಳಿಕ ಮೂವರನ್ನು ಬಂಧಿಸಿದ ಪೊಲೀಸರು, ಭಾರತೀಯ ದಂಡ ಸಂಹಿತೆ (IPC), ಮೋಟಾರು ವಾಹನಗಳ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಇವರಿಂದ ಎರಡು ಕಾರು, ಮೊಬೈಲ್‌ಗಳು ಹಾಗೂ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಪುರುಷೋತ್ತಮ್‌ ಪುಟ್ಟೇವಾರ್‌ ಅವರ ಪತ್ನಿ ಶಕುಂತಲಾ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಆಸ್ಪತ್ರೆಯಲ್ಲಿದ್ದರು. ಇವರನ್ನು ಭೇಟಿಯಾದ ಪುರುಷೋತ್ತಮ್‌ ಪುಟ್ಟೇವಾರ್‌ ಅವರು ಮನೆಗೆ ವಾಪಸಾಗುವಾಗ ಕಾರು ಡಿಕ್ಕಿಯಾಗಿ ಮೃತಪಟ್ಟಿದ್ದರು. ಕಾರು ಹಿಂದಿನಿಂದ ಗುದ್ದಿತ್ತು. ಇದೊಂದು ಹಿಂಟ್‌ ಆ್ಯಂಡ್‌ ರನ್‌ ಕೇಸ್‌ ಎಂದೇ ಭಾವಿಸಲಾಗಿತ್ತು. ಆದರೆ, ಪೊಲೀಸರು ತನಿಖೆ ನಡೆಸಿದಾಗ ಸೊಸೆಯೇ ಕೊಲೆಗೆ ಸಂಚು ರೂಪಿಸಿದ್ದು ಬಯಲಾಗಿದೆ. ಅರ್ಚನಾ ಅವರ ಪತಿಯು ವೃತ್ತಿಯಲ್ಲಿ ವೈದ್ಯರಾಗಿದ್ದು, ಪತ್ನಿಯ ಸಂಚು ತಿಳಿದು ಅವರಿಗೆ ಶಾಕ್‌ ಆಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Murder case : ಹಿರಿಯ ಸ್ವಾಮೀಜಿ ಕೊಂದ‌ ಆರೋಪಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Continue Reading

ಪ್ರಮುಖ ಸುದ್ದಿ

Rain News: ವಿಜಯನಗರ, ಕೊಪ್ಪಳ ಜಿಲ್ಲೆಯಲ್ಲಿ ಮಳೆ ಆರ್ಭಟ; ಕೆರೆಯಂತಾದ ರಸ್ತೆಗಳು!

Rain News: ವಿಜಯನಗರ ಜಿಲ್ಲೆಯಲ್ಲಿ ಮಳೆರಾಯನ ಅಬ್ಬರ ಮುಂದುವರಿದಿದ್ದು, ಕೂಡ್ಲಿಗಿ ತಾಲೂಕಿನ ಕೆಲವು ಗ್ರಾಮಗಳ ರಸ್ತೆಗಳು ಕಡೆ ಹಳ್ಳದಂತಾಗಿ ಬದಲಾಗಿದ್ದವು. ಅದೇ ರೀತಿ ಕಳೆದ ಎರಡು ದಿನಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಬಿಟ್ಟುಬಿಡದೆ ಮಳೆ ಸುರಿಯುತ್ತಿರುವುದರಿಂದ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ.

VISTARANEWS.COM


on

Rain News
ಕೊಪ್ಪಳ ಜಿಲ್ಲೆಯ ಕಿನ್ನಾಳ ರಸ್ತೆ ಜಲಾವೃತವಾಗಿರುವುದು.
Koo

ವಿಜಯನಗರ/ಕೊಪ್ಪಳ: ರಾಜ್ಯದ ವಿಜಯನಗರ, ಕೊಪ್ಪಳ ಜಿಲ್ಲೆಯ ಹಲವೆಡೆ ಬುಧವಾರ ಮಳೆ (Rain News) ಆರ್ಭಟಿಸಿದ್ದು, ಭಾರಿ ಪ್ರಮಾಣದ ನೀರು ನಿಂತಿದ್ದರಿಂದ ರಸ್ತೆಗಳು ಕೆರೆಗಳಂತೆ ಬದಲಾಗಿದ್ದವು. ವಿಜಯನಗರದ ಜಿಲ್ಲಾ ಕೇಂದ್ರ ಹೊಸಪೇಟೆ ಸೇರಿ ಸುತ್ತಮುತ್ತಲಿನ ಹಂಪಿ, ಕಮಲಾಪುರ, ಚಿತ್ತವಾಡಗಿ, ಶಾನಭಾಗ ಸರ್ಕಲ್ ಸೇರಿ ಹಲವು ಕಡೆ ನಿರಂತರ ಮಳೆ ಸುರಿದಿದ್ದರಿಂದ ಬೈಕ್ ಸವಾರರು ಹೈರಾಣಾದರು. ಇನ್ನು ಕೊಪ್ಪಳ ಜಿಲ್ಲೆಯಲ್ಲಿ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದೆ. ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಕೂಡ್ಲಿಗಿ ತಾಲೂಕಿನಲ್ಲಿ ಹಳ್ಳದಂತಾದ ರಸ್ತೆಗಳು

ವಿಜಯನಗರ ಜಿಲ್ಲೆಯಲ್ಲಿ ಮಳೆರಾಯನ ಅಬ್ಬರ ಮುಂದುವರಿದಿದ್ದು, ಕೂಡ್ಲಿಗಿ ತಾಲೂಕಿನ ಕೆಲವು ಗ್ರಾಮಗಳ ರಸ್ತೆಗಳು ಕಡೆ ಹಳ್ಳದಂತಾಗಿ ಬದಲಾಗಿದ್ದವು. ಕೂಡ್ಲಿಗಿ ತಾಲೂಕಿನ ಮಹಾದೇವಪುರ ಗ್ರಾಮದಲ್ಲಿ ಹಳ್ಳದಂತೆ ಮಳೆ ನೀರು ಹರಿಯಿತು. ಇದರಿಂದ ದೊಡ್ಡ ಪ್ರಮಾಣದಲ್ಲಿ ಗ್ರಾಮದೊಳಕ್ಕೆ ನೀರು ನುಗಿದ್ದರಿಂದ ಜನ ಪರದಾಡುವಂತಾಗಿದೆ. ಇನ್ನು ಹೊಸಪೇಟೆಯ ರಾಣಿಪೇಟೆಯಲ್ಲಿ ಕೆಲವು ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.

ಹೊಸಪೇಟೆಯಲ್ಲಿ ಭಾರಿ ಮಳೆ: ಮಳೆಯಿಂದಾಗಿ ಹೊಸಪೇಟೆಯ ಕೆಲವು ರಸ್ತೆಗಳು ಕೆರೆಯಂತಾಗಿದ್ದವು. ಕಾಲೇಜು ರಸ್ತೆ, ನೂರು ಹಾಸಿಗೆ ಆಸ್ಪತ್ರೆ ರಸ್ತೆ ಸೇರಿದಂತೆ ಕೆಲವು ಕಡೆ ಹಳ್ಳದಂತೆ ಮಳೆ ನೀರು ಹರಿಯಿತು. ಮಳೆ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಬೈಕ್‌ಗಳು ಅರ್ಧಕ್ಕರ್ಧ ಮುಳುಗಿದವು. ಮಳೆ ನೀರು ರಸ್ತೆ ಮೇಲೆಯೇ ನಿಂತಿದ್ದರಿಂದ ವಾಹನ ಸವಾರರು ಹೈರಾಣಾದರು.

ಕೊಪ್ಪಳ ಜಿಲ್ಲೆಯಲ್ಲಿ ಮುಂದುವರಿದ ಮಳೆ

ಕಳೆದ ಎರಡು ದಿನಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಬಿಟ್ಟುಬಿಡದೆ ಮಳೆ ಸುರಿಯುತ್ತಿದ್ದು, ಭರ್ಜರಿ ಮಳೆಗೆ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಕೊಪ್ಪಳ ನಗರದಲ್ಲಿ ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ಥವಾಗಿದೆ. ಜಿಲ್ಲೆಯಾದ್ಯಂತ ನಿರಂತರ ಮಳೆಗೆ ರಸ್ತೆಗಳು ಹಳ್ಳಗಳಾಗಿ ಪರಿವರ್ತನೆಯಾಗಿವೆ. ತಗ್ಗು ಪ್ರದೇಶದ ಮನೆಗಳಿಗೆ ಮಳೆ ಹಾಗೂ ಚರಂಡಿ ನೀರು ನುಗ್ಗುತ್ತಿರುವುದರಿಂದ ಜನರಿಗೆ ತೊಂದರೆಯಾಗಿದೆ.

ಇದನ್ನೂ ಓದಿ | Karnataka Weather : ಕರಾವಳಿ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಮಳೆ ಜತೆಗೆ ರಭಸವಾಗಿ ಬೀಸಲಿದೆ ಗಾಳಿ

ಜಿಲ್ಲೆಯ ಕಿನ್ನಾಳದಲ್ಲಿ ರಾಜಕಾಲುವೆ ತುಂಬಿ ಹರಿದಿದ್ದರಿಂದ ರಸ್ತೆ ತುಂಬೆಲ್ಲಾ ನೀರು ಆವರಿಸಿತ್ತು. ಇದರಿಂದ ಮಂಗಳೂರು, ಕಿನ್ನಾಳ ಗ್ರಾಮಗಳಿಗೆ ತೆರಳಲು ಜನರ ಪರದಾಡಿದರು. ಪ್ರಗತಿ ನಗರ, ಕಲ್ಯಾಣ ನಗರಗಳಿಗೆ ತೆರಳಲೂ ಸಹ ಜನರ ಪರದಾಡುವಂತಾಯಿತು.

Continue Reading

ದೇಶ

Narendra Modi: ಆಂಧ್ರದಲ್ಲಿ ಮೆಗಾ ಸ್ಟಾರ್‌, ಪವರ್‌ ಸ್ಟಾರ್‌ ಜತೆ ‘ಪೊಲಿಟಿಕಲ್‌ ಸ್ಟಾರ್’‌ ಮೋದಿ; Video ನೋಡಿ

Narendra Modi: ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಹಾಗೂ ಉಪ ಮುಖ್ಯಮಂತ್ರಿಯಾಗಿ ಜನಸೇನಾ ಪಕ್ಷದ ಮುಖ್ಯಸ್ಥ ಪವನ್‌ ಕಲ್ಯಾಣ್‌ ಅವರು ಪ್ರಮಾಣವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಅವರಲ್ಲದೆ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಸೇರಿ ಹಲವು ಗಣ್ಯರು ಭಾಗವಹಿಸಿದ್ದರು. ಇದೇ ವೇಳೆ, ಮೋದಿ ಅವರು ಚಿರಂಜೀವಿ ಹಾಗೂ ಪವನ್‌ ಕಲ್ಯಾಣ್‌ ಜತೆಗೂಡಿ ಒಗ್ಗಟ್ಟು ಪ್ರದರ್ಶಿಸಿದರು.

VISTARANEWS.COM


on

Narendra Modi
Koo

ಅಮರಾವತಿ: ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ಟಿಡಿಪಿಯ ಎನ್‌.ಚಂದ್ರಬಾಬು ನಾಯ್ಡು (N Chandrababu Naidu), ಉಪ ಮುಖ್ಯಮಂತ್ರಿಯಾಗಿ ಜನಸೇನಾ ಪಕ್ಷದ ಮುಖ್ಯಸ್ಥ ಪವನ್‌ ಕಲ್ಯಾಣ್‌ (Pawan Kalyan) ಅವರು ಬುಧವಾರ (ಜೂನ್‌ 12) ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೂ ಭಾಗಿಯಾದರು. ಅಷ್ಟೇ ಅಲ್ಲ, ನರೇಂದ್ರ ಮೋದಿ ಅವರು ವೇದಿಕೆ ಮೇಲೆ ಮೆಗಾ ಸ್ಟಾರ್‌ ಚಿರಂಜೀವಿ, ಪವರ್‌ ಸ್ಟಾರ್‌ ಪವನ್‌ ಕಲ್ಯಾಣ್‌ ಅವರ ಕೈ ಹಿಡಿದು, ಅವರ ಕೈಗಳನ್ನು ಒಮ್ಮೆಲ್ಲೆ ಎತ್ತಿ ಹಿಡಿಯುವ ಮೂಲಕ ಗಮನ ಸೆಳೆದರು. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ವಿಜಯವಾಡದಲ್ಲಿರುವ ಮೇಧಾ ಐಟಿ ಪಾರ್ಕ್‌ ಬಳಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಎನ್‌.ಚಂದ್ರಬಾಬು ನಾಯ್ಡು ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದಾದ ಬಳಿಕ ಮೋದಿ ಅವರು ನಾಯ್ಡು ಅವರಿಗೆ ಶುಭ ಕೋರಿದರು. ನಂತರ ಪವನ್‌ ಕಲ್ಯಾಣ್‌ ಅವರು ತಮ್ಮ ಸಹೋದರ ಚಿರಂಜೀವಿ ಕೂಡ ಇಲ್ಲೇ ಇದ್ದಾರೆ ಎಂದು ಮೋದಿ ಅವರಿಗೆ ಹೇಳಿದರು. ಆಗ ಮೋದಿ ಅವರು ಚಿರಂಜೀವಿ ಬಳಿ ಹೋಗಿ, ಅವರ ಹಾಗೂ ಪವನ್‌ ಕಲ್ಯಾಣ್‌ ಕೈ ಹಿಡಿದು ವೇದಿಕೆಗೆ ಕರೆತಂದರು. ಬಳಿಕ ಮೂವರೂ ಕೈ ಎತ್ತಿದರು. ಆ ಮೂಲಕ ಒಗ್ಗಟ್ಟಿನ ಬಲ ಪ್ರದರ್ಶನ ಮಾಡಿದರು.

ಇದರ ಮಧ್ಯೆಯೇ ಚಂದ್ರಬಾಬು ನಾಯ್ಡು ಅವರು ನರೇಂದ್ರ ಮೋದಿ ಅವರ ಕಾಲು ಮುಟ್ಟಿ ನಮಸ್ಕರಿಸಲು ಮುಂದಾದರು. ಚಂದ್ರಬಾಬು ನಾಯ್ಡು ಅವರು ನರೇಂದ್ರ ಮೋದಿ ಅವರಿಗಿಂತ ಒಂದು ವರ್ಷ ದೊಡ್ಡವರು. ಹೀಗಿದ್ದರೂ ಮೋದಿ ಅವರ ಮೇಲಿನ ಗೌರವದಿಂದಾಗಿ ಅವರ ಕಾಲು ಮುಟ್ಟಿ ನಮಸ್ಕರಿಸಲು ಚಂದ್ರಬಾಬು ನಾಯ್ಡು ಮುಂದಾದರು. ಆದರೆ, ಇದಕ್ಕೆ ನರೇಂದ್ರ ಮೋದಿ ಅವರು ಅವಕಾಶ ಕೊಡದೆ, ಚಂದ್ರಬಾಬು ನಾಯ್ಡು ಅವರನ್ನು ತಬ್ಬಿಕೊಂಡು, ನೂತನ ಸರ್ಕಾರಕ್ಕೆ ಶುಭ ಹಾರೈಸಿದರು.

ಪ್ರಮಾಣವಚನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್‌ ಶಾ, ನಿತಿನ್‌ ಗಡ್ಕರಿ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ, ನಟರಾದ ಚಿರಂಜೀವಿ, ರಜನಿಕಾಂತ್‌, ಮಾಜಿ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು. ನಾಲ್ಕನೇ ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಚಂದ್ರಬಾಬು ನಾಯ್ಡು ಅವರು ದಾಖಲೆ ಬರೆದರು.

ಇದನ್ನೂ ಓದಿ: ಒಡಿಶಾಗೆ ಬಿಜೆಪಿಯ ಮೋಹನ್‌ ಚರಣ್‌ ಮಾಝಿ, ಅರುಣಾಚಲಕ್ಕೆ ಪೆಮಾ ಖಂಡು ಸಿಎಂ; ಖಂಡು ನಾಳೆ ಪದಗ್ರಹಣ

Continue Reading
Advertisement
Court Order
ದೇಶ2 mins ago

ಬಾಲಕಿಯ ಒಳ ವಸ್ತ್ರ ಕಳಚಿ ಬೆತ್ತಲೆಗೊಳಿಸುವುದು ಅತ್ಯಾಚಾರ ಯತ್ನವಲ್ಲ ಎಂದ ಹೈಕೋರ್ಟ್! ನಿಮ್ಮ ಅಭಿಪ್ರಾಯವೇನು?

Virat Kohli
ಕ್ರೀಡೆ30 mins ago

Virat Kohli: ಟಿ20 ವಿಶ್ವಕಪ್​ನಲ್ಲಿ ಮೊದಲ ಗೋಲ್ಡನ್​ ಡಕ್ ಸಂಕಟಕ್ಕೆ ಸಿಲುಕಿದ ವಿರಾಟ್​ ಕೊಹ್ಲಿ

Mumbai
ಪ್ರಮುಖ ಸುದ್ದಿ50 mins ago

300 ಕೋಟಿ ರೂ. ಆಸ್ತಿಗಾಗಿ 1 ಕೋಟಿ ರೂ. ಸುಪಾರಿ ಕೊಟ್ಟು ಮಾವನನ್ನೇ ಕೊಲ್ಲಿಸಿದ ದುಷ್ಟ ಸೊಸೆ!

ICC T20 Rankings
ಕ್ರೀಡೆ1 hour ago

ICC T20 Rankings: ಅಗ್ರಸ್ಥಾನದಲ್ಲೇ ಮುಂದುವರಿದ ಟೀಮ್​ ಇಂಡಿಯಾ; ಕುಸಿತ ಕಂಡ ಪಾಕ್

Rain News
ಪ್ರಮುಖ ಸುದ್ದಿ2 hours ago

Rain News: ವಿಜಯನಗರ, ಕೊಪ್ಪಳ ಜಿಲ್ಲೆಯಲ್ಲಿ ಮಳೆ ಆರ್ಭಟ; ಕೆರೆಯಂತಾದ ರಸ್ತೆಗಳು!

Chellagurki Shri Yerrithathanavara Maharathotsava in Ballari
ಧಾರ್ಮಿಕ2 hours ago

Ballari News: ಭಕ್ತಿ ಭಾವದಿಂದ ನಡೆದ ಚೇಳ್ಳಗುರ್ಕಿ ಶ್ರೀ ಎರ‍್ರಿತಾತ ಮಹಾರಥೋತ್ಸವ

Narendra Modi
ದೇಶ2 hours ago

Narendra Modi: ಆಂಧ್ರದಲ್ಲಿ ಮೆಗಾ ಸ್ಟಾರ್‌, ಪವರ್‌ ಸ್ಟಾರ್‌ ಜತೆ ‘ಪೊಲಿಟಿಕಲ್‌ ಸ್ಟಾರ್’‌ ಮೋದಿ; Video ನೋಡಿ

Terror attack
ದೇಶ2 hours ago

Terror attack : ಉಗ್ರರ ದಾಳಿ; ತನ್ನ ಪ್ರಾಣ ತ್ಯಾಗ ಮಾಡಿ ಪ್ರಯಾಣಿಕರ ಜೀವ ಉಳಿಸಿದ ಬಸ್‌ ಚಾಲಕ

Uttara Kannada MP Vishweshwara hegde kageri spoke in Thanksgiving ceremony for bjp party workers in banavasi
ಉತ್ತರ ಕನ್ನಡ2 hours ago

Uttara Kannada News: ಉ.ಕ ಜಿಲ್ಲೆ ಬಿಜೆಪಿ ಕಾರ್ಯಕರ್ತರ ಕ್ಷೇತ್ರ ಎಂಬುದು ಮತ್ತೊಮ್ಮೆ ಸಾಬೀತು: ಕಾಗೇರಿ

chandrababu naidu takes oath as andhra chief minister mlc TA Sharavana Congratulated
ಬೆಂಗಳೂರು2 hours ago

TA Sharavana: ಆಂಧ್ರಪ್ರದೇಶ ಸಿಎಂ ಆಗಿ ಚಂದ್ರಬಾಬು ನಾಯ್ಡು ಪದಗ್ರಹಣ; ಶರವಣ ಅಭಿನಂದನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ1 day ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ1 day ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ1 day ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ1 day ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌