ದೇವೇಗೌಡರನ್ನು ಭೇಟಿಯಾಗಿ ಕ್ಷಮೆ ಯಾಚಿಸುವೆ, ಆದರೆ ಬೆದರಿಕೆಗೆ ಜಗ್ಗುವುದಿಲ್ಲ: ಕೆ.ಎನ್‌. ರಾಜಣ್ಣ - Vistara News

ಅವಿಭಾಗೀಕೃತ

ದೇವೇಗೌಡರನ್ನು ಭೇಟಿಯಾಗಿ ಕ್ಷಮೆ ಯಾಚಿಸುವೆ, ಆದರೆ ಬೆದರಿಕೆಗೆ ಜಗ್ಗುವುದಿಲ್ಲ: ಕೆ.ಎನ್‌. ರಾಜಣ್ಣ

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಕುರಿತು ಮಧುಗಿರಿ ಮಾಜಿ ಶಾಸಕ ಕೆ.ಎನ್‌. ರಾಜಣ್ಣ ಆಡಿದ ಮಾತಿಗೆ ಪಕ್ಷಾತೀತವಾಗಿ ಖಂಡನೆ ವ್ಯಕ್ತವಾಗಿದೆ. ಇದೀಗ ರಾಜಣ್ಣ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.

VISTARANEWS.COM


on

KN Rajanna pressmeet
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಕುರಿತು ಆಡಿದ ಮಾತು ವಿವಾದವಾಗುತ್ತಿರುವುದನ್ನು ಗಮನಿಸಿದ ಮಧುಗಿರಿ ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ ನಾಯಕ ಕೆ.ಎನ್‌. ರಾಜಣ್ಣ ತುರ್ತು ಸುದ್ದಿಗೋಷ್ಠಿ ನಡೆಸಿದ್ದಾರೆ. ತಮ್ಮ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ. ಆದರೂ ಈ ಬಗ್ಗೆ ನಾನು ವಾದ ಮಾಡಲು ಹೋಗುವುದಿಲ್ಲ. ಖುದ್ದಾಗಿ ಎಚ್‌.ಡಿ. ದೇವೇಗೌಡರನ್ನು ಭೇಟಿ ಮಾಡಿ ಕ್ಷಮೆ ಯಾಚಿಸುತ್ತೇನೆ ಎಂದಿದ್ದಾರೆ.

ಮಧುಗಿರಿ ತಾಲೂಕಿನ ಕಾವಣದಾಲ ಎಂಬಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶುಕ್ರವಾರ ಬೆಳಗ್ಗೆ ಮಾತನಾಡಿದ್ದ ರಾಜಣ್ಣ, ನನಗೆ ಆಗಲೇ 72 ವರ್ಷ. ಈ ಬಾರಿ ಚುನಾವಣೆ ಗೆದ್ದ ಅವಧಿ ಮುಗಿಯುವ ವೇಳೆಗೆ 77 ವರ್ಷ ಆಗಿ, ಕೈಕಾಲು ಅಲ್ಲಾಡುತ್ತಿರುತ್ತವೆ ಎಂದರು. ಈ ಸಮಯದಲ್ಲಿ ಹತ್ತಿರ ಇದ್ದ ಕಾರ್ಯಕರ್ತರು, ದೇವೇಗೌಡರು ಇನ್ನೂ ರಾಜಕಾರಣ ಮಾಡುತ್ತಿದ್ದಾರೆ ಎಂದು ತಿಳಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ರಾಜಣ್ಣ, ದೇವೇಗೌಡರು ಈಗಲೇ ಇಬ್ಬರ ಮೇಲೆ ಕೈ ಹಾಕಿಕೊಂಡು ಹೋಗುತ್ತಿದ್ದಾರೆ. ಸದ್ಯದಲ್ಲೆ ನಾಲ್ವರ ಮೇಲೆ ಹೋಗುತ್ತಾರೆ ಎಂದು ಮಾತನಾಡಿದ್ದರು. ದೇವೇಗೌಡರು ಯಾವ ರೀತಿ ಪಕ್ಕದಲ್ಲಿದ್ದವರ ಹೆಗಲ ಮೇಲೆ ಕೈ ಇಟ್ಟು ನಡೆಯುತ್ತಾರೆ ಎನ್ನುವುದನ್ನು ಕೈಸನ್ನೆ ಮಾಡಿ ತೋರಿಸಿದ್ದರು. ರಾಜಕೀಯ, ತತ್ವ ಸಿದ್ಧಾಂತ ಭಿನ್ನತೆ ಏನೇ ಇದ್ದರೂ ಪರಸ್ಪರರ ವಿರುದ್ಧ ಗೌರವಯುತವಾಗಿ ನಡೆದುಕೊಳ್ಳುವ ಬದಲು ಈ ರೀತಿ ಮಾತನಾಡುವುದು ಎಷ್ಟು ಸರಿ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದ್ದವು.

ಈ ಕುರಿತು ಜೆಡಿಎಸ್‌ ಜನಪ್ರತಿನಿಧಿಗಳು ಸೇರಿ ಅನೇಕರು ಪ್ರತಿಕ್ರಿಯಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿ, ದೇವೇಗೌಡರ ಬಗ್ಗೆ ವಿಕೃತವಾಗಿ ಮಾತನಾಡಿರುವ ರಾಜಣ್ಣ ತನ್ನ ಹೀನ ಸಂಸ್ಕೃತಿಯನ್ನು ಪ್ರದರ್ಶನ ಮಾಡಿದ್ದಾರೆ. ಈ ದುರಹಂಕಾರದ ಮಾತುಗಳಿಗೆ ಅವರು ತಕ್ಕ ಶಾಸ್ತಿ ಅನುಭವಿಸಲಿದ್ದಾರೆ. 2004ರಲ್ಲಿ ರಾಜಣ್ಣ ಅವರು ಬೆಳ್ಳಾವಿ ಜೆಡಿಎಸ್ ಅಭ್ಯರ್ಥಿಯಾಗಿದ್ದರು. ಚುನಾವಣೆಯ ಕೊನೆಯ ದಿನ ದೇವೇಗೌಡರು ಹೋಗಿ ಪ್ರಚಾರ ಮಾಡಿದ್ದರು. ಆಗ ಆ ವ್ಯಕ್ತಿ ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವಾಯಿತು. ಇಲ್ಲದಿದ್ದರೆ ಅವರನ್ನು ಯಾರು ಕೇಳುತ್ತಿದ್ದರು? ದೇವರ ಮೆರವಣಿಗೆಗೂ ಭುಜ ಕೊಡುತ್ತೇವೆ. ಭುಜ ಕೊಟ್ಟೇ ಮೆರವಣಿಗೆ ಮಾಡೋದಲ್ಲವೇ? ದೇವೇಗೌಡರು ಕೂಡ ಹಾಗೆಯೇ, ನಮ್ಮ ಪಾಲಿಗೆ ಅವರು ದೈವವೇ ಎಂದು ತಿಳಿಸಿದ್ದರು.

ಈ ಕುರಿತು ಹಾಸನದಲ್ಲಿ ಪ್ರತಿಕ್ರಿಯೆ ನೀಡಿದ್ದ ಎಚ್‌.ಡಿ. ದೇವೇಗೌಡರ ಮೊಮ್ಮಗ ಹಾಗೂ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ, ಇವರು ಜನಪ್ರತಿನಿಧಿಯಾಗಲು ಲಾಯಕ್ಕಿಲ್ಲ ಎಂದು ಮಧುಗಿರಿ ಜನರು ಮನೆಗೆ ಕಳಿಸಿದ್ದಾರೆ. ಲೆಕ್ಕಿಕ್ಕಿಲ್ಲದವರ ಬಗ್ಗೆ ನಾನು ಏಕೆ ಪ್ರತಿಕ್ರಿಯೆ ಕೊಡಬೇಕು? ದೊಡ್ಡ ದಂಧೆಕೋರ ಅವನು. ದೇವೇಗೌಡರ ಕಾಲಿನ ಧೂಳಿಗೂ ಸಮಾನ ಅಲ್ಲ ಅವನು. ನೀಚಬಾಯಲ್ಲಿ ನೀಚಪದ ಬಂದಿದೆ, ದೇವರು ಉತ್ತರ ಕೊಡುತ್ತಾರೆ. ಅವನು ಜನಪ್ರತಿನಿಧಿಯಲ್ಲ, ಸೋತು ಮನೆಗೆ ಕೂತುಕೊಂಡಿದ್ದಾನೆ. ಹೀಗೆಯೇ ಮಾತನಾಡುತ್ತಿದ್ದರೆ ಹುಚ್ಚು ಸಂತೆಯಲ್ಲಿ ನಾಯಿಗೆ ಹೊಡೆದ ರೀತಿ ಹೊಡೆಯುತ್ತಾರೆ ಎಂದು ಕಿಡಿಕಾರಿದ್ದರು.

ಜೆಡಿಎಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ ಪ್ರತಿಕ್ರಿಯಿಸಿ, ದೇಶದ ಸಾಕ್ಷಿ ಪ್ರಜ್ಞೆ, ಕನ್ನಡ ನಾಡಿನ ದಿಗ್ಗಜ ಚೇತನ ಮಾಜಿ ಪ್ರಧಾನಿ ದೇವೇಗೌಡರ ಆಯುಷ್ಯದ ಬಗ್ಗೆ ಕಾಂಗ್ರೆಸ್ ನಾಯಕ ರಾಜಣ್ಣ ಅವರು ಆಡಿರುವ ಹೀನಾಯ ಮಾತುಗಳು, ರಾಜಣ್ಣ ಅವರ ನೀಚ ವ್ಯಕ್ತಿತ್ವಕ್ಕೆ ಹಿಡಿದ ಕೈಗನ್ನಡಿ ಎಂದು ಹೇಳಿದ್ದರು.

ರಾಜ್ಯ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ರಾಜಣ್ಣ ಹೇಳಿಕೆ ಸರಿಯಲ್ಲ. ರಾಜಕಾರಣ ಬೇರೆ, ಆದರೆ ಆ ರೀತಿಯಲ್ಲಿ ಮಾತಾಡಬಾರದು. ರಾಜಣ್ಣ ನನ್ನ ಸ್ನೇಹಿತ. ಆದರೂ ಹಿರಿಯರ ಬಗ್ಗೆ ಈ ರೀತಿ ಮಾತಾಡುವುದು ಸರಿಯಲ್ಲ ಎಂದಿದ್ದರು.

ಕೆ.ಎನ್.ರಾಜಣ್ಣ ಅವರು ನೀಡಿರುವ ಹೇಳಿಕೆ ಖಂಡನೀಯ ಎಂದು ಸಂಸದ ಡಿ.ಕೆ. ಸುರೇಶ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ನವ ದೆಹಲಿಯಲ್ಲಿ ಖಂಡಿಸಿದ್ದರು.

ದೆಹಲಿಯಿಂದ ವಿಡಿಯೋ ಸಂದೇಶದ ಮೂಲಕ ಪ್ರತಿಕ್ರಿಯೆ ನೀಡಿದ್ದ ಶಿವಕುಮಾರ್‌, ನಮ್ಮ ಪಕ್ಷದ ನಾಯಕರಾದ ರಾಜಣ್ಣ ಅವರು ಹಿರಿಯ ನಾಯಕ ದೇವೇಗೌಡರ ಪರಿಸ್ಥಿತಿ ಬಗ್ಗೆ ಆಡಿರುವ ಮಾತನ್ನು ಇಡೀ ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ಪಕ್ಷದ ನಾಯಕನಾಗಿ, ವ್ಯಯಕ್ತಿಕವಾಗಿಯೂ ಇದನ್ನು ಖಂಡಿಸುತ್ತೇನೆ. ಯಾರೇ ನಾಯಕರು ಮಾನವೀಯತೆಯನ್ನು ಮೆರೆಯಬೇಕು. ಸಮಾಜ ಹಾಗೂ ದೇಶಕ್ಕೆ ಸೇವೆ ಮಾಡಿರುವ ಹಿರಿಯ ನಾಯಕರಾದ ದೇವೇಗೌಡರ ಬಗ್ಗೆ ಇಂತಹ ಹೇಳಿಕೆ ನೀಡಿದ್ದು ಸರಿಯಲ್ಲ. ದೇವೇಗೌಡರು ಪ್ರಧಾನಿಯಾಗಲು ಹಿಂದೆ ಕಾಂಗ್ರೆಸ್ ಪಕ್ಷವೇ ಬೆಂಬಲ ನೀಡಿತ್ತು ಎಂದು ಹೇಳಿದ್ದರು.

ಡಿ.ಕೆ. ಸುರೇಶ್‌ ಪ್ರತಿಕ್ರಿಯಿಸಿ, ದೇವೇಗೌಡರ ಹಿರಿತನಕ್ಕೆ ನಾವೆಲ್ಲರೂ ತಲೆಬಾಗಬೇಕು. ಸಮಾಜದ ಹಿರಿಯರ ಬಗ್ಗೆ ಇಂತಹ ಹಗುರ ಹೇಳಿಕೆ ನೀಡಿರುವುದು ರಾಜಣ್ಣ ಅವರ ಘನತೆಗೆ ಸೂಕ್ತವಲ್ಲ. ರಾಜಣ್ಣ ಅವರು ಕೂಡಲೇ ಕ್ಷಮೆ ಕೋರಬೇಕು. ಇದು ಅವರ ವೈಯಕ್ತಿಕ ಹೇಳಿಕೆಯಾದರೂ, ಅವರು ಕ್ಷಮೆ ಕೋರಬೇಕು. ಇಲ್ಲದಿದ್ದರೆ ಸಮಾಜ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಸಿದ್ದರು.

ಪತ್ರಿಕಾಗೋಷ್ಠಿ ನಡೆಸಿದ ರಾಜಣ್ಣ

ನಾನು ಉದ್ದೇಶಪೂರ್ವಕವಾಗಿ ದೇವೇಗೌಡರ ಕುರಿತು ಮಾತನಾಡಿಲ್ಲ ಎಂದು ರಾಜಣ್ಣ ಸುದ್ದಿಗೋಷ್ಠಿಯಲ್ಲಿ ಹೇಳಿದರು. ದೇವೇಗೌಡರಿಗೂ ವಯಸ್ಸಾಗಿದೆ, ಅವರೇ ರಾಜಕಾರಣ ಮಾಡುತ್ತಿಲ್ಲವೇ ಎಂದು ಕಾರ್ಯಕರ್ತ ಹೇಳಿದ್ದಕ್ಕೆ ಪ್ರತಿಕ್ರಿಯಿಸಿದ್ದೆ. ನನಗೂ ವಯಸ್ಸಾಗಿದೆ ಎಂದೂ ಹೇಳಿದ್ದೇನೆ. ನಾನು ಅವರ ಸಾವನ್ನು ಬಯಸಿದವನಲ್ಲ, ಬಯಸುವವನಲ್ಲ. ಅವರಿಂದ ದೇಶ, ರಾಜ್ಯಕ್ಕೆ ಆಗಿರುವ ಕೊಡುಗೆ ಮರೆತಿಲ್ಲ. ನನ್ನನ್ನು 2004ರಲ್ಲಿ ಶಾಸಕರಾಗಿಸಿದ್ದರು ಎಂಬ ಉಪಕಾರಸ್ಮರಣೆ ಇದೆ ಎಂದಿದ್ದರು.

ಟಾರ್ಗೆಟ್‌ ಮಾಡಿ ದೇವೇಗೌಡರ ವಿರುದ್ಧ ಮಾತನಾಡಿದ್ದಾರೆ ಎಂಬ ಜೆಡಿಎಸ್‌ ನಾಯಕರ ಪ್ರತಿಕ್ರಿಯೆಗೆ ಉತ್ತರಿಸಿದ ರಾಜಣ್ಣ, ಕುಮಾರಸ್ವಾಮಿ ಅವರು ದಿನಬೆಳಗಾದರೆ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್‌ ಮಾಡುತ್ತಾರೆ. ತುಮಕೂರಿನಲ್ಲೂ ಜೆಡಿಎಸ್‌ ಮುಖಂಡರು ನನ್ನನ್ನು ಟಾರ್ಗೆಟ್‌ ಮಾಡುತ್ತಾರೆ. ರಾಜಕೀಯವಾಗಿ ಚುನಾವಣೆ ಎದುರಿಸೋಣ, ಜನರ ತೀರ್ಮಾನವನ್ನು ಒಪ್ಪಿಕೊಳ್ಳೋಣ. ಯಾವುದೇ ಪಿತೂರಿಗೂ ಹೆದರುವುದಿಲ್ಲ. ಜನರ ಆಶೀರ್ವಾದ ಇರುವವರೆಗೆ ಪಿತೂರಿ ನಡೆಯುವುದಿಲ್ಲ. ಇದನ್ನೆಲ್ಲ ಚುನಾವಣೆ ಸಮಯದಲ್ಲಿ ಮತ್ತೆ ಹಾಕುತ್ತಾರೆ ಎಂದರು.

ಜೆಡಿಎಸ್‌ನವರು ನನ್ನ ವಿರುದ್ಧ ಪ್ರತಿಭಟನೆ ಮಾಡಿ ಐನೂರು ಜನ ಸೇರಿಸಿದರೆ ನಾನು ಐದು ಸಾವಿರ ಜನರನ್ನು ಸೇರಿಸುತ್ತೇನೆ. ಆದರೆ ಅಂತಹ ಸ್ಪರ್ಧೆ ಈಗ ಬೇಡ. ಖುದ್ದಾಗಿ ಭೇಟಿ ಮಾಡಿ ಕ್ಷಮೆ ಯಾಚಿಸುತ್ತೇನೆ ಎಂದರು. ಒಕ್ಕಲಿಗರು ಏನೆಂದು ತೋರಿಸುತ್ತೇವೆ ಎಂಬ ಜೆಡಿಎಸ್‌ ನಾಯಕರ ಸವಾಲಿಗೆ ಉತ್ತರಿಸಿದ ರಾಜಣ್ಣ, ಯಾರೂ ಒಂದೇ ಸಮುದಾಯದಿಂದ ಗೆಲ್ಲಲು ಆಗುವುದಿಲ್ಲ. ಎಲ್ಲ ಜಾತಿಯ ಮತದಾರರ ವಿಶ್ವಾಸ ಇಟ್ಟುಕೊಂಡವರು ಮಾತ್ರ ಗೆಲ್ಲಲು ಸಾಧ್ಯ. ನನಗೂ ಕೆಲವರು ಫೋನ್‌ ಮಾಡಿ ಬೆದರಿಕೆ ಹಾಕಿದರು. ಅಂಥದ್ದಕ್ಕೆಲ್ಲ ಹೆದರುವುದಿಲ್ಲ. ಪೊಲೀಸರಿಗೆ ದೂರನ್ನೂ ನೀಡುವುದಿಲ್ಲ ಎಂದರು.

ಇದನ್ನೂ ಓದಿ | ಕೆ.ಎನ್‌. ರಾಜಣ್ಣ ಮಾತಿಗೆ ತಿರುಗಿಬಿದ್ದ ಜೆಡಿಎಸ್‌ ನಾಯಕರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Assault Case: ಸಾಲ ವಾಪಸ್‌ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ಮಾಡಿದ ಬಿಜೆಪಿ ಕಾರ್ಯಕರ್ತ

Assault Case: ಹಲ್ಲೆಗೊಳಗಾದ ಮಹಿಳೆ ಧರ್ಮಸ್ಥಳದ ರೂಪಾ ಎಂಬವರು. ಇವರು ಉಜಿರೆಯಲ್ಲಿ ಬಟ್ಟೆ ಅಂಗಡಿ ಹೊಂದಿದ್ದಾರೆ. ಇವರು ನವೀನ್‌ಗೆ 7 ಲಕ್ಷ ರೂಪಾಯಿ ಸಾಲ ನೀಡಿದ್ದರು. ಅದನ್ನು ವಾಪಸ್ ಕೇಳಿದ್ದಕ್ಕೆ ನವೀನ್‌ ಹಲ್ಲೆ ನಡೆಸಿದ್ದಾನೆ. ಕಳೆದ ಎರಡು ದಿನದ ಹಿಂದೆ ಉಜಿರೆಯಲ್ಲಿರುವ ಮಹಿಳೆಯ ಬಟ್ಟೆ ಅಂಗಡಿಯಲ್ಲಿ ಘಟನೆ ನಡೆದಿದೆ.

VISTARANEWS.COM


on

assault case bjp worker
Koo

ಮಂಗಳೂರು: ಬಿಜೆಪಿ ಕಾರ್ಯಕರ್ತನೊಬ್ಬ (BJP Worker) ಬಟ್ಟೆ ಅಂಗಡಿಗೆ ನುಗ್ಗಿ ವಿವಾಹಿತ ಮಹಿಳೆ (Married Woman) ಮೇಲೆ ಮಾರಣಾಂತಿಕ ಹಲ್ಲೆ (Assault Case) ನಡೆಸಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಕೃತ್ಯ ನಡೆದಿದೆ. ಬಿಜೆಪಿ ಕಾರ್ಯಕರ್ತ, ಹೂವಿನ ವ್ಯಾಪಾರಿ ನವೀನ್ ಕನ್ಯಾಡಿ ಎಂಬಾತನಿಂದ ಈ ಕೃತ್ಯ ನಡೆದಿದೆ.

ಹಲ್ಲೆಗೊಳಗಾದ ಮಹಿಳೆ ಧರ್ಮಸ್ಥಳದ ರೂಪಾ ಎಂಬವರು. ಇವರು ಉಜಿರೆಯಲ್ಲಿ ಬಟ್ಟೆ ಅಂಗಡಿ ಹೊಂದಿದ್ದಾರೆ. ಇವರು ನವೀನ್‌ಗೆ 7 ಲಕ್ಷ ರೂಪಾಯಿ ಸಾಲ ನೀಡಿದ್ದರು. ಅದನ್ನು ವಾಪಸ್ ಕೇಳಿದ್ದಕ್ಕೆ ನವೀನ್‌ ಹಲ್ಲೆ ನಡೆಸಿದ್ದಾನೆ. ಕಳೆದ ಎರಡು ದಿನದ ಹಿಂದೆ ಉಜಿರೆಯಲ್ಲಿರುವ ಮಹಿಳೆಯ ಬಟ್ಟೆ ಅಂಗಡಿಯಲ್ಲಿ ಘಟನೆ ನಡೆದಿದೆ.

ಮಹಿಳೆಯ ಕಪಾಳಕ್ಕೆ ಹೊಡೆಯುವುದು ಸೇರಿ ಇತರೆಡೆ ಮಾರಣಾಂತಿಕ ಹಲ್ಲೆಯನ್ನು ನವೀನ್ ಕನ್ಯಾಡಿ ಮಾಡಿದ್ದಾನೆ. ಹಲ್ಲೆಗೊಳಗಾದ ಮಹಿಳೆ ಉಜಿರೆಯ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಮಾಡುವ ದೃಶ್ಯ ಅಂಗಡಿಯ ಸಿಸಿಕ್ಯಾಮರದಲ್ಲಿ ಸೆರೆಯಾಗಿದೆ. ಬೆಳ್ತಂಗಡಿ ಪೊಲೀಸರಿಂದ ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ.

ಮೊಬೈಲ್ ಕದ್ದ ಕಳ್ಳನಿಗೆ ದೇವರು ಕೊಟ್ಟ ಶಿಕ್ಷೆ ಮಾತ್ರ ಘೋರ!

ಬೆಂಗಳೂರು: ಇಂದು ಮಾಡಿದ ತಪ್ಪಿನ ಶಿಕ್ಷೆ ಮುಂದಿನ ಜನ್ಮದಲ್ಲಿ ಸಿಗುತ್ತದೆ ಎಂದು ನಮ್ಮ ಹಿರಿಯರು ಹೇಳುತ್ತಾರೆ. ಆದರೆ ಅದು ಸುಳ್ಳು, ಇಂದು ಮಾಡಿದ ತಪ್ಪಿಗೆ ಶಿಕ್ಷೆ ಇದೇ ಕಾಲದಲ್ಲಿ ಸಿಗುತ್ತದೆ. ಆದರೆ ಕೆಲವರಿಗೆ ತಡವಾಗಿ ಸಿಕ್ಕರೆ, ಕೆಲವರಿಗೆ ಅಂದೇ ಸಿಗುತ್ತದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಕಳ್ಳನೊಬ್ಬ ಮಹಿಳೆಯೊಬ್ಬರ ಮೊಬೈಲ್ ಕದ್ದು ಓಡುತ್ತಿದ್ದಾಗ ಕಾರಿಗೆ ಡಿಕ್ಕಿ ಹೊಡೆದು ಸಾವನಪ್ಪಿದ್ದಾನೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ (Viral Video )ಆಗಿದೆ.

ಈ ವಿಡಿಯೊವನ್ನು @Desam_officialz ತಮ್ಮ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದು ‘ಇದು ಭೂಮಿಯ ಮೇಲೆ ದೇವರ ತಕ್ಷಣದ ತೀರ್ಪು. ದೇವರು ಕರುಣೆ ತೋರಲಿ’ ಎಂದು ಬರೆದಿದ್ದಾರೆ. ಈ ವಿಡಿಯೊದಲ್ಲಿ ಕಳ್ಳ ಮಹಿಳೆಯಿಂದ ಕದ್ದ ಮೊಬೈಲ್ ಪೋನ್ ಅನ್ನು ತೆಗೆದುಕೊಂಡು ತಪ್ಪಿಸಿಕೊಳ್ಳಲು ಜೋರಾಗಿ ಓಡುತ್ತಾ ರಸ್ತೆ ದಾಟುತ್ತಿದ್ದಾಗ ಎದುರಿಗೆ ವೇಗವಾಗಿ ಬಂದ ಕಾರೊಂದು ಆತನಿಗೆ ಡಿಕ್ಕಿ ಹೊಡೆದಿದೆ.

ಇದರ ಪರಿಣಾಮ ಆತ ಹಾರಿ ಹೋಗಿ ತುಂಬಾ ದೂರ ರಸ್ತೆಯ ಮೇಲೆ ಬಿದ್ದಿದ್ದಾನೆ. ಆದರೆ ಕಾರು ತನ್ನ ವೇಗವನ್ನು ನಿಯಂತ್ರಿಸಲಾಗದೆ ಕೆಳಗೆ ಬಿದ್ದ ಆತನ ಮೆಲೆ ಹರಿದು ನಂತರ ನಿಂತಿದೆ. ಇದರಿಂದ ಆತ ಸ್ಥಳದಲ್ಲೇ ಸಾವನಪ್ಪಿದ್ದಾನೆ.
ಈ ಘಟನೆ ನಡೆದ ಸ್ಥಳ ಮತ್ತು ದಿನಾಂಕ ತಿಳಿದುಬಂದಿಲ್ಲ. ಆದರೆ ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅನೇಕರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರು ಇದು ದೇವರ ತೀರ್ಪು ಎಂದು ಹೇಳಿದರೆ. ಕೆಲವರು ‘ಬಡವರ ವಿಷಯದಲ್ಲಿ ದೇವರು ತಕ್ಷಣ ತೀರ್ಪುಗಳನ್ನು ನೀಡುತ್ತಾನೆ? ಆದರೆ ಶ್ರೀಮಂತರು ಮತ್ತು ಶಕ್ತಿವಂತರಿಗೆ ಏಕೆ ದೇವರು ತಕ್ಷಣದ ತೀರ್ಪುಗಳನ್ನು ನೀಡುತ್ತಿಲ್ಲ? ಪ್ರತಿದಿನ ಇಂತಹ ಲಕ್ಷಾಂತರ ದರೋಡೆಗಳು, ರಸ್ತೆಗಳಲ್ಲಿ ಕೊಲೆಗಳು ನಡೆಯುತ್ತಿವೆ, ಯಾವುದೇ ತಕ್ಷಣದ ತೀರ್ಪುಗಳನ್ನು ನೋಡಿಲ್ಲ, ಏಕೆ? ಎಂದು ಪ್ರಶ್ನಿಸಿದ್ದಾರೆ.

ಸೆಪ್ಟೆಂಬರ್ 2023 ರಲ್ಲಿ ಗುಜರಾತ್‌ ನಲ್ಲಿಯೂ ಇಂತಹದ್ದೇ ಒಂದು ಘಟನೆ ನಡೆದಿತ್ತು. ಗುಜರಾತ್‌ನ ಮೊದಸಾದಲ್ಲಿ ಶೋರೂಂನಿಂದ ಕದಿಯಲು ಪ್ರಯತ್ನಿಸುತ್ತಿದ್ದ ಕಳ್ಳನಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಈ ಘಟನೆಯು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಇದನ್ನೂ ಓದಿ: ನಡುರಸ್ತೆಯಲ್ಲಿ ಬಟ್ಟೆ ಕಳಚಿ ಬೆತ್ತಲೆಯಾಗಿ ನಡೆದ ಮಹಿಳೆ; ಪುರುಷರು ಕಕ್ಕಾಬಿಕ್ಕಿ!

Continue Reading

ಧಾರ್ಮಿಕ

Vastu Tips: ಮನೆಯ ಗೋಡೆಗಳ ಮೇಲೆ ಎಲ್ಲೆಂದರಲ್ಲಿ ಫೋಟೊ ಅಳವಡಿಸಿದರೆ ಏನಾಗುತ್ತದೆ?

ಗೋಡೆಗಳ ಮೇಲೆ ತೂಗು ಹಾಕುವ ಚಿತ್ರಗಳಿಗೂ ಪ್ರಮುಖ ನಿಯಮಗಳು ಮತ್ತು ಸಲಹೆಗಳನ್ನು ವಾಸ್ತು ಶಾಸ್ತ್ರದಲ್ಲಿ (Vastu Tips) ನೀಡಲಾಗಿದೆ. ಇವುಗಳನ್ನು ಅನುಸರಿಸುವ ಮೂಲಕ ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ತುಂಬಬಹುದು ಮತ್ತು ಕುಟುಂಬದಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತರಬಹುದು.

VISTARANEWS.COM


on

By

Vastu Tips
Koo

ಮನೆಯಲ್ಲಿ (home) ಪ್ರತಿಯೊಂದು ವಸ್ತುವನ್ನು ಇಡಲೂ ವಾಸ್ತು (Vastu Tips) ನಿಯಮವಿದೆ. ಯಾಕೆಂದರೆ ಮನೆಯೊಳಗಿರುವ ಪ್ರತಿಯೊಂದು ವಸ್ತುವಿನಲ್ಲೂ ಜೀವಕಳೆ ತುಂಬುತ್ತದೆ ಮತ್ತು ಶಕ್ತಿಯ ಕೇಂದ್ರವಾಗಿಸುತ್ತದೆ. ಗೋಡೆಯಲ್ಲಿ (wall) ತೂಗು ಹಾಕುವ ಚಿತ್ರಗಳನ್ನು (Picture) ಇಡುವಾಗಲೂ ವಾಸ್ತು ನಿಯಮವನ್ನು ಪಾಲಿಸಬೇಕು. ಯಾಕೆಂದರೆ ಗೋಡೆಗಳ ಮೇಲೆ ಇಡುವ ಚಿತ್ರಗಳು ಮತ್ತು ಅಲಂಕಾರಿಕ ವಸ್ತುಗಳು ಕೇವಲ ಮನೆಯ ಸೌಂದರ್ಯವನ್ನು ಮಾತ್ರ ಹೆಚ್ಚಿಸುವುದಿಲ್ಲ ಸಕಾರಾತ್ಮಕ ಶಕ್ತಿಯನ್ನು ಮನೆಯೊಳಗೆ ಪ್ರವಹಿಸುವಂತೆ ಮಾಡುತ್ತದೆ. ಎಲ್ಲೆಂದರಲ್ಲಿ ಅಳವಡಿಸಿದರೆ ನಕಾರಾತ್ಮಕತೆ ಹೆಚ್ಚುತ್ತದೆ.

ಮನೆಯ ಗೋಡೆಗಳ ಮೇಲೆ ತೂಗು ಹಾಕುವ ಚಿತ್ರ, ಸರಿಯಾದ ದಿಕ್ಕು ಮತ್ತು ನಿರ್ದಿಷ್ ಬಣ್ಣದದ್ದರೆ ಮಾತ್ರ ಮನೆಯಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿ ಉಳಿಯುತ್ತದೆ ಎನ್ನುತ್ತದೆ ವಾಸ್ತು.

ಉತ್ತರ ದಿಕ್ಕು

ಸಂಪತ್ತಿನ ದೇವರು ಕುಬೇರ ಈ ದಿಕ್ಕಿನಲ್ಲಿ ವಾಸಿಸುತ್ತಾನೆ. ಹಚ್ಚ ಹಸಿರಿನ ಮರಗಳು, ಸಸ್ಯವರ್ಗ ಮತ್ತು ನೀರಿನ ಮೂಲಗಳ ಚಿತ್ರಗಳನ್ನು ಈ ದಿಕ್ಕಿನಲ್ಲಿ ಇಡುವುದು ಶುಭವೆಂದು ಪರಿಗಣಿಸಲಾಗಿದೆ. ಈ ಚಿತ್ರಗಳು ಸಂಪತ್ತು ಮತ್ತು ಸಮೃದ್ಧಿಯನ್ನು ಆಕರ್ಷಿಸುತ್ತವೆ.

ಪೂರ್ವ ದಿಕ್ಕು

ಈ ದಿಕ್ಕನ್ನು ಉದಯಿಸುತ್ತಿರುವ ಸೂರ್ಯನ ದಿಕ್ಕು ಎಂದು ಪರಿಗಣಿಸಲಾಗಿದೆ. ಭಗವಾನ್ ಸೂರ್ಯ, ಸಂತರು ಅಥವಾ ಸೂರ್ಯೋದಯದ ಚಿತ್ರಗಳನ್ನು ಈ ದಿಕ್ಕಿನಲ್ಲಿ ಇಡುವುದು ಪ್ರಯೋಜನಕಾರಿ. ಈ ಚಿತ್ರಗಳು ಮನೆಯಲ್ಲಿ ಶಕ್ತಿ ಮತ್ತು ಸಕಾರಾತ್ಮಕತೆಯನ್ನು ತರುತ್ತವೆ.

ದಕ್ಷಿಣ ದಿಕ್ಕು

ಪೂರ್ವಜರು ಮತ್ತು ಧರ್ಮಗ್ರಂಥಗಳ ಚಿತ್ರಗಳನ್ನು ಈ ದಿಕ್ಕಿನಲ್ಲಿ ಇರಿಸಬಹುದು. ದೆವ್ವ, ಆತ್ಮ ಅಥವಾ ನಕಾರಾತ್ಮಕ ಶಕ್ತಿಯ ಚಿತ್ರಗಳನ್ನು ಈ ದಿಕ್ಕಿನಲ್ಲಿ ಇಡಬಾರದು. ಕೆಂಪು, ಚಿನ್ನದ ಅಥವಾ ಕಿತ್ತಳೆ ಬಣ್ಣದ ಚಿತ್ರಗಳನ್ನು ದಕ್ಷಿಣ ದಿಕ್ಕಿನಲ್ಲಿ ಇಡುವುದು ಶುಭವೆಂದು ಪರಿಗಣಿಸಲಾಗುತ್ತದೆ.

ಪಶ್ಚಿಮ ದಿಕ್ಕು

ಈ ದಿಕ್ಕು ನೀರಿನ ಅಂಶದಿಂದ ಪ್ರಭಾವಿತವಾಗಿರುತ್ತದೆ. ಈ ದಿಕ್ಕಿನಲ್ಲಿ ನೀರು, ಸಮುದ್ರ, ನದಿ ಅಥವಾ ಕಾರಂಜಿ ಚಿತ್ರಗಳನ್ನು ಹಾಕುವುದು ಮಾನಸಿಕ ಶಾಂತಿ ಮತ್ತು ಸಮತೋಲನವನ್ನು ಕಾಯ್ದುಕೊಳ್ಳುತ್ತದೆ.


ಫೋಟೋಗಳು ಹೇಗಿರಬೇಕು?

ದೇವರು, ದೇವತೆಗಳು ಮತ್ತು ಧಾರ್ಮಿಕ ಸ್ಥಳಗಳ ಚಿತ್ರಗಳನ್ನು ಮನೆಯಲ್ಲಿ ಹಾಕುವುದು ಶುಭವೆಂದು ಪರಿಗಣಿಸಲಾಗಿದೆ. ಈ ಚಿತ್ರಗಳು ಕುಟುಂಬದಲ್ಲಿ ಶಾಂತಿ ಮತ್ತು ಭಕ್ತಿಯನ್ನು ಉತ್ತೇಜಿಸುತ್ತವೆ.

ಹಚ್ಚ ಹಸಿರಿನ ಮರ, ಹೂವುಗಳು, ಪರ್ವತ, ನದಿಗಳು ಮುಂತಾದ ಸುಂದರವಾದ ನೈಸರ್ಗಿಕ ದೃಶ್ಯಗಳ ಚಿತ್ರಗಳನ್ನು ಹಾಕುವುದು ಮನಸ್ಸಿನಲ್ಲಿ ಶಾಂತಿ ಮತ್ತು ಸಕಾರಾತ್ಮಕತೆಯನ್ನು ತರುತ್ತದೆ.

ಕುಟುಂಬ ಸದಸ್ಯರ ಗುಂಪು ಫೋಟೋಗಳನ್ನು ಅಥವಾ ಸಂತೋಷದ ಕುಟುಂಬ ಕ್ಷಣಗಳ ಚಿತ್ರಗಳನ್ನು ಹಾಕುವುದು ಕುಟುಂಬದಲ್ಲಿ ಪ್ರೀತಿ ಮತ್ತು ಏಕತೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಏರುತ್ತಿರುವ ಸೂರ್ಯ, ಚಾಲನೆಯಲ್ಲಿರುವ ಕುದುರೆಗಳು, ಹಾರುವ ಪಕ್ಷಿಗಳು ಮುಂತಾದ ಶಕ್ತಿಯುತ ಮತ್ತು ಸ್ಪೂರ್ತಿದಾಯಕ ಚಿತ್ರಗಳನ್ನು ಇಡುವುದರಿಂದ ಮನೆಯವರಲ್ಲಿ ಶಕ್ತಿ ಮತ್ತು ಸ್ಫೂರ್ತಿ ನೀಡುತ್ತದೆ.

ಯಾವ ಎತ್ತರದಲ್ಲಿ ಇಡಬೇಕು?

ಚಿತ್ರಗಳನ್ನು ಸುಲಭವಾಗಿ ಗೋಚರಿಸುವಂತಹ ಎತ್ತರದಲ್ಲಿ ಗೋಡೆಯ ಮೇಲೆ ಇಡಬೇಕು ಮತ್ತು ಅವುಗಳನ್ನು ನೋಡುವಲ್ಲಿ ಯಾರೂ ಅನಾನುಕೂಲವಾಗಬಾರದು. ಚಿತ್ರಗಳನ್ನು ಮುಖ್ಯ ಬಾಗಿಲಿನ ಮುಂದೆ ಅಥವಾ ನೇರವಾಗಿ ಹಾಸಿಗೆಯ ಮುಂದೆ ಇಡುವುದನ್ನು ತಪ್ಪಿಸಬೇಕು. ಧಾರ್ಮಿಕ ಅಥವಾ ಕುಟುಂಬದ ಚಿತ್ರಗಳನ್ನು ಅಡುಗೆಮನೆ ಮತ್ತು ಸ್ನಾನಗೃಹದಲ್ಲಿ ಇಡಬಾರದು.

ಇದನ್ನೂ ಓದಿ: Vastu Tips: ವೈವಾಹಿಕ ಜೀವನ ಸುಖಮಯವಾಗಿರಲು ಈ ವಾಸ್ತು ನಿಯಮ ಅನುಸರಿಸಿ

ಫೋಟೋಗಳ ಬಣ್ಣ ಏನು?

ವರ್ಣಚಿತ್ರಗಳಲ್ಲಿ ಬಳಸುವ ಬಣ್ಣಗಳಿಗೆ ಗಮನ ಕೊಡುವುದು ಸಹ ಮುಖ್ಯವಾಗಿದೆ. ನೀಲಿ, ಹಸಿರು, ಹಳದಿ ಮುಂತಾದ ಬೆಳಕು ಮತ್ತು ಹಿತವಾದ ಬಣ್ಣಗಳು ಮಾನಸಿಕ ಶಾಂತಿ ಮತ್ತು ಸಕಾರಾತ್ಮಕತೆಯನ್ನು ಉತ್ತೇಜಿಸುತ್ತವೆ. ಕೆಂಪು, ಕಪ್ಪು ಮತ್ತು ಕಂದು ಬಣ್ಣಗಳಂತಹ ಗಾಢ ಮತ್ತು ಹೆಚ್ಚು ಉತ್ತೇಜಕ ಬಣ್ಣಗಳನ್ನು ಮಿತವಾಗಿ ಬಳಸಬೇಕು.

ಫೋಟೋಗಳನ್ನು ಹೇಗೆ ಇರಿಸಬೇಕು?

ಚಿತ್ರಗಳನ್ನು ಯಾವಾಗಲೂ ಸ್ವಚ್ಛವಾಗಿ ಮತ್ತು ಉತ್ತಮ ಸ್ಥಿತಿಯಲ್ಲಿಡಬೇಕು. ಧೂಳು, ಕೊಳಕು ಮತ್ತು ಹಾನಿಗೊಳಗಾದ ಚಿತ್ರಗಳು ನಕಾರಾತ್ಮಕ ಶಕ್ತಿಯನ್ನು ಉಂಟುಮಾಡಬಹುದು.

Continue Reading

ವೈರಲ್ ನ್ಯೂಸ್

Viral Video: ಮದುವೆಗೂ ಮೊದಲು ವಧುವನ್ನು ಕಿಡ್ನ್ಯಾಪ್‌ ಮಾಡಲೇಬೇಕು! ಇದು ಈ ಜನಾಂಗದ ಕಡ್ಡಾಯ ನಿಯಮ!

ಮದುವೆಗೂ ಮುನ್ನ ಹಿಂಬಾ ಬುಡಕಟ್ಟಿನ ಸಂಪ್ರದಾಯದಲ್ಲಿ ವಧುವನ್ನು ಅಪಹರಿಸಿ ನೂರು ದಿನಗಳ ಕಾಲ ಕೆಂಪು ಮಣ್ಣಿನ ಲೇಪನ ಮಾಡಲಾಗುತ್ತದೆ. ಈ ಕುರಿತು ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ.

VISTARANEWS.COM


on

By

Viral Video
Koo

ವಿವಾಹ ವಿಧಿವಿಧಾನಗಳು (Wedding Rituals) ವಿಶ್ವದ ಬೇರೆಬೇರೆ ಭಾಗಗಳಲ್ಲಿ ಬೇರೆಬೇರೆಯಾಗಿರುತ್ತದೆ. ಅದರಲ್ಲೂ ಕೆಲವೊಂದು ಚಿತ್ರವಿಚಿತ್ರ ಆಚರಣೆಗಳೂ ಇವೆ. ಅದರಲ್ಲಿ ನಮಿಬಿಯಾದ (Namibia) ಅರೆ ಅಲೆಮಾರಿ ಬುಡಕಟ್ಟು (tribe) ಜನಾಂಗವಾದ ಹಿಂಬಾದ (himba) ಈ ವಿವಾಹ ಆಚರಣೆಯು ಸೇರಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ (social media) ವಿಡಿಯೋಗಳು ವೈರಲ್ (Viral Video) ಆಗಿ ಚರ್ಚೆಗೆ ಕಾರಣವಾಗಿದೆ.

ಹಿಂಬಾವನ್ನು ನಮೀಬಿಯಾದ ಕೊನೆಯ ಅರೆ ಅಲೆಮಾರಿ ಬುಡಕಟ್ಟು ಜನಾಂಗ ಎಂದು ಪರಿಗಣಿಸಲಾಗಿದೆ. ಸುಮಾರು 50,000 ಜನಸಂಖ್ಯೆಯನ್ನು ಹೊಂದಿರುವ ಇವರು ಇಲ್ಲಿನ ಸ್ಥಳೀಯ ಜನರು. ಅವರಿಗೆ ಸ್ವಂತ ಮನೆಗಳಿದ್ದರೂ ಮಳೆ ಅಥವಾ ನೀರಿನ ಕೊರತೆಯಿಂದಾಗಿ ಅಲೆಮಾರಿಗಳಂತೆ ಜೀವನ ನಡೆಸುತ್ತಾರೆ. ಹೀಗಾಗಿ ಇವರನ್ನು ಅರೆ ಅಲೆಮಾರಿ ಎಂದು ಕರೆಯಲಾಗುತ್ತದೆ. ಈ ಬುಡಕಟ್ಟು ಜನ ತಮ್ಮ ವಿಚಿತ್ರ ವಿವಾಹ ಪದ್ಧತಿಗಳಿಂದಾಗಿ ಆಗಾಗ್ಗೆ ಎಲ್ಲರ ಗಮನ ಸೆಳೆಯುತ್ತಾರೆ.

ವಧುವಿನ ಅಪಹರಣ

ಹಿಂಬಾ ಬುಡಕಟ್ಟಿನಲ್ಲಿ ಮದುವೆಗೆ ಮೊದಲು ವಧುವನ್ನು ಅಪಹರಿಸಲಾಗುತ್ತದೆ. ಆಕೆಯನ್ನು 100 ದಿನಗಳ ಕಾಲ ಹೆಚ್ಚಿನ ಭದ್ರತೆಯ ಕೋಣೆಯಲ್ಲಿ ಇರಿಸಲಾಗುತ್ತದೆ. ಆ ಸಮಯದಲ್ಲಿ ಕೆಂಪು ಮಣ್ಣನ್ನು ಅವಳ ಸಂಪೂರ್ಣ ದೇಹಕ್ಕೆ ಲೇಪಿಸಲಾಗುತ್ತದೆ. ಇದೀಗ ಅಂತಹ ವಿಡಿಯೋ ವೈರಲ್ ಆಗಿದೆ. ಹಿಂಬಾ ಬುಡಕಟ್ಟಿನಲ್ಲಿ ಮದುವೆಯ ಸಂಪ್ರದಾಯದಲ್ಲಿ ವಧುವಿನ ಅಪಹರಣ ಮತ್ತು ಅವಳಿಗೆ ಕೆಂಪು ಮಣ್ಣನ್ನು ಹೊದಿಸುವುದನ್ನು ಒಳಗೊಂಡಿರುತ್ತದೆ.

ಹೀಗೆ ಅವಳನ್ನು ಅಪಹರಿಸುವಾಗ ವಧು ಹೊಸ ಬಟ್ಟೆ ಮತ್ತು ದುಬಾರಿ ಆಭರಣಗಳೊಂದಿಗೆ ಅಲಂಕರಿಸಲ್ಪಡುತ್ತಾಳೆ. ಈ ಸಮಯದಲ್ಲಿ ಅವಳು ಧರಿಸುವ ಕೆಲವು ವಿಶೇಷ ಉಡುಪುಗಳು ಒಕೋರಿ ಎಂದು ಕರೆಯಲ್ಪಡುವ ಚರ್ಮದ ಶಿರಸ್ತ್ರಾಣವಾಗಿದೆ. ಇದು ಸಾಮಾನ್ಯವಾಗಿ ವಧುವಿನ ತಾಯಿಯಿಂದ ಸಿಗುವ ಉಡುಗೊರೆಯಾಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಹಿಂಬಾ ಬುಡಕಟ್ಟಿನ ಹುಡುಗಿಯೊಬ್ಬಳು ತನ್ನ ದೇಹದಾದ್ಯಂತ ಕೆಂಪು ಮಣ್ಣನ್ನು ಲೇಪಿಸಿಕೊಂಡು ಕುಳಿತಿದ್ದಾಳೆ. ಕಾಲ್ಬೆರಳಿನಿಂದ ಕೂದಲಿನವರೆಗೆ, ಹುಡುಗಿ ಕೆಂಪು ಮಣ್ಣಿನಲ್ಲಿಮುಚ್ಚಲ್ಪಟ್ಟಿರುತ್ತಾಳೆ.
ಘಾನಾದ ಫ್ರಾಫಾ ಬುಡಕಟ್ಟು ಕೂಡ ಈ ಪದ್ಧತಿಯನ್ನು ಅನುಸರಿಸುತ್ತದೆ.

ಈ ಕುರಿತು ಕಾಮೆಂಟ್ ಮಾಡಿರುವ ಒಬ್ಬರು, ಹುಡುಗಿಯನ್ನು 100 ದಿನಗಳ ಕಾಲ ಕೆಂಪು ಮಣ್ಣಿನಲ್ಲಿ ಮುಚ್ಚಲು ಏನಾದರೂ ವೈಜ್ಞಾನಿಕ ಕಾರಣವಿದೆಯೇ ಎಂದು ಪ್ರಶ್ನಿಸಿದ್ದಾರೆ.


ಮದುವೆ ಮತ್ತು ಮಧುಚಂದ್ರದ ಮೊದಲು ಅವಳ ಚರ್ಮವನ್ನು ನಯಗೊಳಿಸುವುದಕ್ಕಾಗಿ ಮತ್ತು ಅವಳ ದೇಹವನ್ನು ಸ್ವಚ್ಛ ಗೊಳಿಸುವುದಕ್ಕಾಗಿ ಈ ರೀತಿ ಮಾಡುತ್ತಾರೆಯೇ ಎಂಬುದನ್ನು ಮತ್ತೊಬ್ಬರು ಪ್ರಶ್ನಿಸಿದ್ದಾರೆ.

ಹೆಚ್ಚಿನ ಸಂಪ್ರದಾಯ, ಪದ್ಧತಿ ಮತ್ತು ಆಚರಣೆಗಳು ವೈಜ್ಞಾನಿಕ ಮಹತ್ವವನ್ನು ಹೊಂದಿವೆ ಮತ್ತು ಜನರು ಅದನ್ನು ಅನುಸರಿಸುವಂತೆ ಮಾಡಲು ಧಾರ್ಮಿಕ ನಂಬಿಕೆಗಳಿಗೆ ಸೇರಿಸಲಾಗುತ್ತದೆ ಎಂದು ಮತ್ತೊಬ್ಬರು ಹೇಳಿದ್ದಾರೆ

Continue Reading

ರಾಜಕೀಯ

Gali Janardana Reddy : ಗಣಿ ಧಣಿ ಜನಾರ್ದನ ರೆಡ್ಡಿ ಮತ್ತೆ ಬಿಜೆಪಿ ಮಡಿಲಿಗೆ, ಕಲ್ಯಾಣದಲ್ಲಿ ಲಾಭ ನಿರೀಕ್ಷೆ

Gali Janardhana Reddy : ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ಬಿಜೆಪಿ ಸೇರಿದ್ದಾರೆ. ಇದರಿಂದ ಪಕ್ಷಕ್ಕೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಕ್ಷಕ್ಕೆ ಲಾಭವಾಗುವ ನಿರೀಕ್ಷೆ ಇದೆ.

VISTARANEWS.COM


on

Gali Janarhana Reddy
Koo

ಬೆಂಗಳೂರು: ಬಿಜೆಪಿ ಮೇಲೆ ಮುನಿಸಿಕೊಂಡು ಕಳೆದ ವಿಧಾನಸಭಾ ಚುನಾವಣೆಯ (Assembly Election 2023) ಸಂದರ್ಭದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (Kalyana Rajya pragati Party) ಸ್ಥಾಪನೆ ಮಾ‌ಡಿ ಸಡ್ಡು ಹೊಡೆದಿದ್ದ ಗಾಲಿ ಜನಾರ್ದನ ರೆಡ್ಡಿ (Gali Janardana Reddy) ಅವರು ಕಮಲ ಪಾಳಯಕ್ಕೆ ಮರಳಿದ್ದಾರೆ (Janardhana Reddy rejoins Congress). ಫೆಬ್ರವರಿ 27ರಂದು ನಡೆದು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ಹಾಕಿದ್ದ ಅವರು ಲೋಕಸಭಾ ಚುನಾವಣೆಗೆ (Lok Sabha Election 2024) ಮುನ್ನ ಬಿಜೆಪಿಗೆ ಬಲ ತುಂಬಿದ್ದಾರೆ. ಅವರ ಮರು ಸೇರ್ಪಡೆಯಿಂದ ಬಿಜೆಪಿಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಲಾಭವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಗಾಲಿ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಟಿ. ಜಾನ್‌ ಅವರ ಪುತ್ರ ಥಾಮಸ್‌ ಜಾನ್‌ ಅವರು ಪಕ್ಷ ಸೇರಿದರು. ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಹಿರಿಯ ನಾಯಕ ಸಿ.ಟಿ. ರವಿ, ಸಂಸದ ಪಿ.ಸಿ. ಮೋಹನ್‌, ಬಳ್ಳಾರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು, ಸಂಸದ ದೇವೇಂದ್ರಪ್ಪ ಅವರು ಭಾಗಿಯಾಗಿದ್ದಾರೆ. ರೆಡ್ಡಿ ಅವರ ಪತ್ನಿ ಅರುಣಾ ಲಕ್ಷ್ಮಿ ಹಾಗೂ ಅಪಾರ ಬೆಂಬಲಿಗರು ಪಕ್ಷ ಸೇರಿದರು. ಬಿ.ವೈ ವಿಜಯೇಂದ್ರ ಹಾಗೂ ಯಡಿಯೂರಪ್ಪ. ಅವರು ನಾಯಕರು ಮತ್ತು ಹಿಂಬಾಲಕರನ್ನು ಪಕ್ಷದ ಶಾಲು ಹಾಕಿ, ಧ್ವಜ ನೀಡಿ ಪಕ್ಷಕ್ಕೆ ಸ್ವಾಗತ ಮಾಡಿದರು.

ಮೋದಿ ಅವರ ನಾಯಕತ್ವ ಮೆಚ್ಚಿ ಬಂದಿದ್ದಾರೆ ಎಂದ ವಿಜಯೇಂದ್ರ

ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ಪಕ್ಷಕ್ಕೆ ಬಂದಿರುವುದು ಬಹಳ ಸಂತೋಷದ ಸಂಗತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.

ಗಾಲಿ ಜನಾರ್ದನ ರೆಡ್ಡಿ ಅವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡಿ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಗಾಲಿ ಜನಾರ್ದನ ರೆಡ್ಡಿ ಅವರು, ತಾವೇ ಕಟ್ಟಿದ ಪಕ್ಷವನ್ನು ವಿಸರ್ಜನೆ ಮಾಡಿ ಬಿಜೆಪಿಯೊಂದಿಗೆ ವಿಲೀನ ಮಾಡಿದ್ದಾರೆ. ಇದರಿಂದ ಬಿಜೆಪಿಗೆ ಶಕ್ತಿ ಬಂದಂತಾಗಿದೆ. ಮೋದಿ ಅವರ ನಾಯಕತ್ವ ಮೆಚ್ಚಿ ಮರು ಸೇರ್ಪಡೆ ಆಗಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

Gali Janarhana Reddy1
ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಂದಿಗೆ ಬಿ.ಎಸ್‌. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.

ʻʻಲೋಕಸಭೆಯಲ್ಲಿ 28 ಕ್ಷೇತ್ರ ಗೆಲ್ಲುವ ಗುರಿ ಇದೆ. ದಿನೇದಿನೆ ಮೋದಿ ಅವರ ಪರ ವಾತಾವರಣ ಹೆಚ್ಚುತ್ತಿದೆ. ಮುಂದಿನ ಲೋಕಸಭಾ ಚುನಾವಣೆ ದೇಶದ ಭವಿಷ್ಯ ರೂಪಿಸಲಿದೆ‌ʼʼ ಎಂದು ಹೇಳಿದ್ದಾರೆ.

ಬೆಳಗ್ಗೆ ಹೋಗಿ ಮಧ್ಯಾಹ್ನ ಮರಳಿ ಬಂದ ಹಾಗೆ ಅನಿಸ್ತಿದೆ ಎಂದ Gali Janardana Reddy

ಬಿಜೆಪಿ ಸೇರ್ಪಡೆ ಸಂದರ್ಭದಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ ಅವರು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಬಿಜೆಪಿ ಜೊತೆ ವಿಲೀನ ಮಾಡುತ್ತಿದ್ದೇನೆ. ನನ್ನ ಕಷ್ಟದ ಕಾಲದಲ್ಲಿ ನನ್ನ ಬೆನ್ನಿಗೆ ನಿಂತ ಎಲ್ಲಾ ಕಾರ್ಯಕರ್ತರಿಗೂ ವಂದನೆ ಸಲ್ಲಿಸ್ತೇನೆ. ನಾವೆಲ್ಲರೂ ಸೇರಿ ಬಿಜೆಪಿಗೆ ಸೇರ್ಪಡೆ ಆಗಿದ್ದೇವೆ ಎಂದು ಹೇಳಿದರು.

ʻʻದೇಶದ ಸರ್ವತೋಮುಖ ಅಭಿವೃದ್ಧಿಗೆ, ವಿಶ್ವಗುರುವಿನಂತೆ ಕೆಲಸ‌ ಮಾಡಿರುವ ಮೋದಿ ಅವರಿಗೆ ವಂದನೆಗಳು. ಅಮಿತ್ ಶಾ ಅವರು ನನ್ನನ್ನು ದೆಹಲಿಗೆ ಆಹ್ವಾನಿಸಿ, ಬಾಹ್ಯ ಬೆಂಬಲ ಬೇಡ. ಬಿಜೆಪಿಗೆ ಬಂದು ಕೆಲಸ ಮಾಡಿ ಅಂತ ಆಹ್ವಾನ ನೀಡಿದರು. ಅವರ ಆಹ್ವಾನ ಸ್ವೀಕರಿಸಿ ಬಂದಿದ್ದೇನೆ. ಇದು ನನ್ನ ಪೂರ್ವ ಜನ್ಮದ ಪುಣ್ಯʼʼ ಎಂದು ಜನಾರ್ದನ ರೆಡ್ಡಿ ಹೇಳಿದರು.

ಬಿ.ಎಸ್‌. ಯಡಿಯೂರಪ್ಪ ಅವರು ನನಗೆ ಅತ್ಯಂತ ಸಣ್ಣ ವಯಸ್ಸಿನಲ್ಲಿ ಬಿಜೆಪಿಯಲ್ಲಿ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟರು. ಯಡಿಯೂರಪ್ಪ ಅವರು ಸಿಎಂ‌ ಆಗಿದ್ದಾಗ ಅವರ ಕ್ಯಾಬಿನೆಟ್‌ನಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿತು. ಈಗ ಅವರ ಸುಪುತ್ರ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷ ಆಗಿದ್ದಾರೆ. ಅವರ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿರೋದು ನನ್ನ ಪುಣ್ಯ. ವಿಜಯೇಂದ್ರ ನೇತೃತ್ವದಲ್ಲಿ ಎಲ್ಲರೂ ಜೊತೆಗೂಡಿ ಕೆಲಸ ಮಾಡುತ್ತೇವೆ. ಯಾವುದೇ ಫಲಾಪೇಕ್ಷೆ ಇಲ್ಲದೆ, ಕೆಲಸ ಮಾಡುತ್ತೇವೆ ಎಂದು ಹೇಳಿದರು.

ʻʻಎಲ್ಲಾ ಏಳುಬೀಳುಗಳನ್ನು ನೋಡಿದ್ದೇನೆ. ಪಕ್ಷ ಯಾವುದೇ ಜವಾಬ್ದಾರಿ ನೀಡಿದರು. ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಸಾಮಾನ್ಯ ಕಾರ್ಯಕರ್ತನಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನಾನು ನನ್ನ ಮನೆಗೆ ವಾಪಸ್ ಬಂದಿರೋ ಖುಷಿ ಇದೆ. ಕೆಲವು ಕಾರಣದಿಂದ ಹೊರಗೆ ಹೋಗಿದ್ದೆ. 13 ವರ್ಷಗಳ ಬಳಿಕ ವಾಪಸ್ ಬಂದಿದ್ದೇನೆ ಅನಿಸುತ್ತಿಲ್ಲ. ಬೆಳಗ್ಗೆ ಹೋಗಿ, ಮಧ್ಯಾಹ್ನ ಬಂದಿದ್ದೇನೆ ಅನಿಸುತ್ತಿದೆʼʼ ಎಂದು ಜನಾರ್ದನ ರೆಡ್ಡಿ ಹೇಳಿದರು.

ಇದನ್ನೂ ಓದಿ : Rekha Patra: ಸಂದೇಶ್‌ಖಾಲಿ ಸಂತ್ರಸ್ತೆಗೆ ಟಿಕೆಟ್‌ ನೀಡಿದ ಬಿಜೆಪಿ; ಯಾರಿವರು ರೇಖಾ ಪಾತ್ರಾ?

Gali Janardana Reddy ಅಜ್ಞಾತವಾಸ ಮುಗಿಸಿ ಮರಳಿದ ಶ್ರೀರಾಮ ಎಂದ ಶ್ರೀರಾಮುಲು

ಜನಾರ್ದನ ರೆಡ್ಡಿ ಅವರ ಪಕ್ಷ ಮರು ಸೇರ್ಪಡೆಯಿಂದ ಅವರ ಗೆಳೆಯ ಹಾಗೂ ಬಳ್ಳಾರಿ‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರು, ಜನಾರ್ದನ ರೆಡ್ಡಿ ಅವರು ರಾಜಕೀಯ ಅಜ್ಞಾತವಾಸ ಮುಗಿಸಿ ಬಿಜೆಪಿಗೆ ವಾಪಸು ಬರ್ತಿದ್ದಾರೆ. ಅವರು ಬಿಜೆಪಿಗೆ ಬರುವುದರಿಂದ ರಾಜಕೀಯವಾಗಿ ನಮಗೆ ಲಾಭ ಆಗುತ್ತದೆ. ಕಲ್ಯಾಣ ಕರ್ನಾಟಕ ಭಾಗದ ಲೋಕಸಭಾ ಕ್ಷೇತ್ರಗಳಲ್ಲಿ ನಮಗೆ ಲಾಭ ಆಗಲಿದೆ. ನಮಗೆ ಈ ಬೆಳವಣಿಗೆ ಹೆಚ್ಚು ಶಕ್ತಿ ತಂದಿದೆ. ರಾಷ್ಟ್ರೀಯ ನಾಯಕರು ರೆಡ್ಡಿ ಬಿಜೆಪಿಗೆ ಬರಲು ಕಾರಣರಾಗಿದ್ದಾರೆ. ಮೋದಿ ಅವರನ್ನು ಮತ್ತೊಮ್ಮೆ ಪಿಎಂ ಮಾಡಲು ಈ ನಿರ್ಧಾರ ಎಂದು ಹೇಳಿದರು ಶ್ರೀರಾಮುಲು.

ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಈ ಬೆಳವಣಿಗೆ ಆಗಿದ್ದರೆ ಲಾಭ ಆಗುತ್ತಿತ್ತು. ಎಲ್ಲವೂ ರಾಷ್ಟ್ರೀಯ ನಾಯಕರ ಇಚ್ಛೆಯಂತೆ ಆಗುತ್ತಿದೆ ಎಂದು ಶ್ರೀರಾಮುಲು ಹೇಳಿದರು.

Gali Janardana Reddy ಸೇರ್ಪಡೆಯಿಂದ ಬಿಜೆಪಿಗೆ ಏನು ಲಾಭ?

ಗಾಲಿ ಜನಾರ್ದನ ರೆಡ್ಡಿ ಅವರು ಮತ್ತೆ ಬಿಜೆಪಿ ಸೇರುವುದರಿಂದ ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯನಗರ ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕದಲ್ಲಿ ಕಮಲ ಪಕ್ಷಕ್ಕೆ ಮತ್ತಷ್ಟು ಬಲ ಬರಲಿದೆ.

ಅದರಲ್ಲೂ ಮುಖ್ಯವಾಗಿ ರೆಡ್ಡಿ ಸಹೋದರರು ಮತ್ತು ಶ್ರೀರಾಮುಲು ಅವರಿಗೆ ಸಾಕಷ್ಟು ಲಾಭವಾಗಲಿದೆ. ಕಳೆದ ವಿಧಾನಸಭಾ ಚುನಾವಣೆಯಂತೆ ಬಿಜೆಪಿ ಮತಗಳು ವಿಭಜನೆ ಆಗೋದು ತಪ್ಪಲಿದೆ.

ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಗೆ ಪ್ರಭಾವಿ ನಾಯಕರ ಕೊರತೆಯನ್ನು ರೆಡ್ಡಿ ಸೇರ್ಪಡೆ ನೀಗಲಿದೆ. ಒಂದು ವೇಳೆ ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ಅನಿವಾರ್ಯವಾದರೆ ರೆಡ್ಡಿ ತಂತ್ರಗಳು ಬಿಜೆಪಿಗೆ ಅನುಕೂಲವಾಗಲಿದೆ. ಯಾಕೆಂದರೆ, ಇಂಥ ತಂತ್ರಗಳನ್ನು ರೂಪಿಸುವಲ್ಲಿ ರೆಡ್ಡಿ ಅವರು ನಿಪುಣರಾಗಿದ್ದಾರೆ.

Continue Reading
Advertisement
Actor Darshan grandmother came running distant town to see and not punish him
ಸ್ಯಾಂಡಲ್ ವುಡ್6 mins ago

Actor Darshan: ದರ್ಶನ್‌ ತಪ್ಪು ಮಾಡಿದ್ದಾನೆ ಆದರೆ ಶಿಕ್ಷೆ ಕೊಡಬೇಡಿ ಎಂದು ದೂರದ ಊರಿಂದ ಓಡೋಡಿ ಬಂದ ಅಜ್ಜಿ!

ಚಿಕ್ಕಬಳ್ಳಾಪುರ7 mins ago

Dead Body Found : ಮರದಲ್ಲಿ ನೇತಾಡುತ್ತಿತ್ತು ಅಪರಿಚಿತನ ಶವ; ಸತ್ತವನ ಕೈ ಮೇಲಿತ್ತು ಲಕ್ಷ್ಮಿ ಹೆಸರಿನ ಹಚ್ಚೆ

Hurricane Beryl
ಪ್ರಮುಖ ಸುದ್ದಿ11 mins ago

Hurricane Beryl : ವೆಸ್ಟ್​ ಇಂಡೀಸ್​ನಲ್ಲಿ ಚಂಡಮಾರುತ, ಸಂಕಷ್ಟದಲ್ಲಿ ಸಿಲುಕಿದ ಚಾಂಪಿಯನ್ ಭಾರತ ತಂಡ

NEET UG 2024 Re-Test Result
ದೇಶ21 mins ago

NEET UG 2024 Re-Test Result: ನೀಟ್‌ ಮರುಪರೀಕ್ಷೆಯ ಫಲಿತಾಂಶ ಪ್ರಕಟ; ಹೀಗೆ ಚೆಕ್‌ ಮಾಡಿ

National Doctor’s Day
ಆರೋಗ್ಯ25 mins ago

National Doctor’s Day: ಇಂದು ರಾಷ್ಟ್ರೀಯ ವೈದ್ಯರ ದಿನ; ಕಾಳಜಿಯ ಕೈಗಳಿಗೆ ಕೃತಜ್ಞತೆ ಹೇಳುವ ದಿನ

hassan murder case
ಕ್ರೈಂ34 mins ago

Murder Case: ಎಸ್‌ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

Golden Star Ganesh Birthday Not Celebrating His Birthday This Year
ಸ್ಯಾಂಡಲ್ ವುಡ್34 mins ago

Golden Star Ganesh Birthday:  ಈ ವರ್ಷವೂ ಬರ್ತ್​ಡೇ ಆಚರಿಸಿಕೊಳ್ಳದಿರಲು ನಿರ್ಧರಿಸಿದ ಗೋಲ್ಡನ್ ಸ್ಟಾರ್ ಗಣೇಶ್

ICC Team of the Tournament
ಪ್ರಮುಖ ಸುದ್ದಿ37 mins ago

ICC Team of the Tournament : ಐಸಿಸಿ ಟೀಮ್​ ಆಫ್​​ ದಿ ಟೂರ್ನಮೆಂಟ್​ನಲ್ಲಿ ಆರು ಭಾರತೀಯರು​; ಕೊಹ್ಲಿಗಿಲ್ಲ ಚಾನ್ಸ್​

Job Alert
ಉದ್ಯೋಗ57 mins ago

Job Alert: HCLನಲ್ಲಿ ಖಾಲಿ ಇರುವ 56 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ 1 ಲಕ್ಷ ರೂ.ವರೆಗೆ: ಇಂದೇ ಅಪ್ಲೈ ಮಾಡಿ

murder case
ಬೆಂಗಳೂರು1 hour ago

Murder Case : ರೌಡಿಯಾಗಲು ಹೊರಟವನನ್ನು ಕೊಂದು ಹಾಕಿದ್ರು ಪುಂಡರು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ19 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು24 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌