RSS Baithak | ಭಾರತವನ್ನು ಹಿಂದು ರಾಷ್ಟ್ರ ಎಂದು ಘೋಷಿಸಬೇಕಿಲ್ಲ, ಅದು ಈಗಲೂ ಹಿಂದು ರಾಷ್ಟ್ರವೇ: ಆರೆಸ್ಸೆಸ್‌ ಪ್ರತಿಪಾದನೆ - Vistara News

ದೇಶ

RSS Baithak | ಭಾರತವನ್ನು ಹಿಂದು ರಾಷ್ಟ್ರ ಎಂದು ಘೋಷಿಸಬೇಕಿಲ್ಲ, ಅದು ಈಗಲೂ ಹಿಂದು ರಾಷ್ಟ್ರವೇ: ಆರೆಸ್ಸೆಸ್‌ ಪ್ರತಿಪಾದನೆ

ಭಾರತವನ್ನು ಹಿಂದು ರಾಷ್ಟ್ರ ಎಂದು ವಿಶೇಷವಾಗಿ ಘೋಷಿಸುವ ಅಗತ್ಯವಿಲ್ಲ. ಅದು ಮೂಲದಲ್ಲೇ ಹಿಂದು ರಾಷ್ಟ್ರ ಎಂದು ಆರೆಸ್ಸೆಸ್‌ ಹೇಳಿದೆ.

VISTARANEWS.COM


on

RSS hindu rashtra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯಪುರ (ಛತ್ತೀಸ್‌ಗಢ): ʻʻಭಾರತವನ್ನು ಹಿಂದು ರಾಷ್ಟ್ರ ಎಂದು ಸರಕಾರ ಘೋಷಣೆ ಮಾಡುವ ಅಗತ್ಯವಿಲ್ಲ. ಇದು ಮೂಲದಲ್ಲೇ ಹಿಂದು ರಾಷ್ಟ್ರವೇ ಆಗಿದೆʼʼ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ಪ್ರತಿಪಾದಿಸಿದೆ.

ಛತ್ತೀಸ್‌ಗಢದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಮನ್ವಯ ಬೈಠಕ್‌ನಲ್ಲಿ ನಡೆಯುತ್ತಿರುವ ಚರ್ಚೆಗಳ ಬಗ್ಗೆ ಮಾಹಿತಿ ನೀಡಿದ ಆರೆಸ್ಸೆಸ್ ಸಹ ಸರಕಾರ್ಯವಾಹ ಡಾ. ಮನಮೋಹನ್ ವೈದ್ಯ ಅವರು ಈ ವಿಚಾರವನ್ನು ಪ್ರತಿಪಾದಿಸಿದರು.

ʻʻಹಿಂದು ರಾಷ್ಟ್ರ ಎಂದರೆ ಹಿಂದು ಸಮಾಜ. ರವೀಂದ್ರ ನಾಥ ಠಾಗೋರರು ಕೂಡಾ ಈ ಬಗ್ಗೆ ಹೇಳಿದ್ದಾರೆʼʼ ಎಂದ ಅವರು, ʻʻನಾವು ಯಾವುದೇ ಹೊಸ ಸಮೂಹಗಳಿಂದ ಭಯ ಪಡುವುದಿಲ್ಲ, ಅನ್ಯರನ್ನೂ ನಮ್ಮವರು ಎಂದು ಭಾವಿಸುತ್ತೇವೆʼʼ ಎಂದು ವೈದ್ಯ ಅವರು ಹೇಳಿದರು.

ಸಮಾಜದಲ್ಲಿ ಹಿಂದುತ್ವ ಪ್ರಕಟವಾಗಲಿ
ʻʻಸರ್ಕಾರ ಇದನ್ನು ಹಿಂದು ರಾಷ್ಟ್ರ ಎಂದು ಘೋಷಣೆ ಮಾಡುವ ಅಗತ್ಯವಿಲ್ಲ.‌ ಇದು ಹಿಂದು ರಾಷ್ಟ್ರವೇ. ಇಲ್ಲಿ ಸರ್ಕಾರಕ್ಕಿಂತಲೂ ಸಮಾಜದ ಕೆಲಸ ಹೆಚ್ಚಿದೆ. ಸಮಾಜದಲ್ಲಿ ಹಿಂದುತ್ವ ಪ್ರಕಟ ಮಾಡಲು ಪ್ರಯತ್ನ ಮಾಡಬೇಕು. ಸಮಾಜದ ಎಲ್ಲರೊಳಗೂ ಈಶ್ವರತ್ವ ಇದೆ ಎಂದಮೇಲೆ ಜಾತಿ ಭೇದ ಏಕಿದೆ? ಸ್ತ್ರೀಯರನ್ನು ಏಕೆ ಸಮಾನವಾಗಿ ಕಾಣಲಾಗುತ್ತಿಲ್ಲ? ಈ ಸಮಸ್ಯೆಗಳನ್ನು ಸರಿಪಡಿಸಿಕೊಂಡರೆ ಹಿಂದುತ್ವದ ಪ್ರಕಟೀಕರಣ ಆಗುತ್ತದೆ. ಈ ನಿಟ್ಟಿನಲ್ಲಿ ಧನಾತ್ಮಕ ಬೆಳವಣಿಗೆಗಳು ಕಾಣುತ್ತಿವೆʼʼ ಎಂದರು.

ʻʻಭಾರತೀಯ ವಿವಿಗಳಲ್ಲಿ ಹಿಂದುತ್ವದ ಕುರಿತು ಅಧ್ಯಯನ ಪೀಠ ಸ್ಥಾಪನೆಗೆ ಪ್ರಯತ್ನ ನಡೆಯುತ್ತಿದೆʼʼ ಎಂದು ವೈದ್ಯ ಅವರು ಹೇಳಿದರು.

ಭಾರತ್ ಜೋಡೊ ಯಾತ್ರೆಯಲ್ಲಿ ದ್ವೇಷ ಭಾವ
ಕಾಂಗ್ರೆಸ್‌ ನೇತೃತ್ವದಲ್ಲಿ ನಡೆಯುತ್ತಿರು ಭಾರತ್‌ ಜೋಡೊ ಕಾರ್ಯಕ್ರಮದಲ್ಲಿ ಜೋಡಿಸುವುದಕ್ಕಿಂತಲೂ ದ್ವೇಷ ಭಾವವೇ ವಿಜೃಂಭಿಸುತ್ತಿದೆ ಎಂದು ಡಾ. ಮನಮೋಹನ್‌ ವೈದ್ಯ ಅವರು ಹೇಳಿದರು.
ʻʻಭಾರತವನ್ನು ಯಾರು ಬೇಕಾದರೂ ಜೋಡಿಸಬಹುದು. ಆದರೆ ಆತ್ಮೀಯತೆಯಿಂದ ಜೋಡಿಸಬೇಕೇ ಹೊರತು ಇತರರ ವಿರೋಧದಿಂದ ಅಲ್ಲ. ಹಿಂದುತ್ವದ ಆಧಾರದಲ್ಲಿ ಜೋಡಿಸಿದರೆ ಒಳ್ಳೆಯದುʼʼ ಎಂದ ವೈದ್ಯ ಅವರು, ಈ ಯಾತ್ರೆ ಸ್ವಲ್ಪ ಪೊಲಿಟಿಕಲ್ ಗಿಮಿಕ್ ರೀತಿ ಕಾಣುತ್ತಿದೆ. ದ್ವೇಷವನ್ನು ಇವರು ಹಿಂದಿನಿಂದಲೂ ಪಾಲನೆ ಮಾಡಿಕೊಂಡು ಬಂದಿದ್ದಾರೆ. ಅವರ ಪೂರ್ವಜರೂ ಧ್ವೇಷ ಭಾವವನ್ನು ಅನುಸರಿಸಿದರು. ಸಂಘವನ್ನು ನಾಶ ಮಾಡುವ ಪ್ರಯತ್ನ ಮಾಡಿದರುʼʼ ಎಂದು ಹೇಳಿದರು.

ʻʻರಾಷ್ಟ್ರೀಯ ಸ್ವಯಂಸೇವಕ ಸಂಘ ಪೀಳಿಗೆಯಿಂದ ಪೀಳಿಗೆಗೆ ಸತ್ಯದ ಆಧಾರದಲ್ಲಿ ನಡೆಯುತ್ತಿದೆ. ಈ ಯಾತ್ರೆಯಲ್ಲೂ ಧ್ವೇಷ ಭಾವನೆ ಕಾಣುತ್ತಿದೆ. ಇವರ ನಡವಳಿಕೆ ಪ್ರತಿಕ್ರಿಯೆ ನೀಡಲೂ ಯೋಗ್ಯವಲ್ಲ. ಅವರಿಗೆ, ಆರೆಸ್ಸೆಸ್ ಗಣವೇಶ ಬದಲಾಗಿದೆ ಎಂಬ ಮಾಹಿತಿಯೂ ಇಲ್ಲʼʼ ಎಂದರು.

ನಮ್ಮದು ಉದ್ಯೋಗ ಪ್ರಧಾನ ದೇಶ
ʻʻಭಾರತ ಕೃಷಿ ಪ್ರಧಾನ ದೇಶವಲ್ಲ, ಉದ್ಯೋಗ ಪ್ರಧಾನ ದೇಶವಾಗಿತ್ತು. ಭಾರತದಿಂದ ಆಹಾರವನ್ನು ಹೊರಕ್ಕೆ ಮಾರುತ್ತಿರಲಿಲ್ಲ. ಭಾರತದಲ್ಲಿ ಕೃಷಿ ಚೆನ್ನಾಗಿತ್ತು, ಆದರೆ ಅದನ್ನು ರಫ್ತು ಮಾಡುತ್ತಿರಲಿಲ್ಲ. ಚರ್ಮದ ಉತ್ಪನ್ನಗಳು, ಲೋಹ, ಬೆಳ್ಳಿ, ಸಾಂಬಾರ ಪದಾರ್ಥಗಳನ್ನು ರಫ್ತು ಮಾಡುತ್ತಿದ್ದೆವು. ಹಾಗಾಗಿ ಭಾರತವನ್ನು ಕೃಷಿ ಪ್ರಧಾನ ದೇಶ ಎನ್ನುವುದಕ್ಕಿಂತ, ಉದ್ಯೋಗ ಪ್ರಧಾನ ದೇಶ ಎನ್ನಬಹುದುʼʼ ಎಂದರು ಡಾ. ವೈದ್ಯ.

ರಾಷ್ಟ್ರೀಯ ಜನಸಂಖ್ಯಾ ನೀತಿ ಬೇಕು
ದೇಶದಲ್ಲಿ ಜನಸಂಖ್ಯಾ ನಿಯಂತ್ರಣದ ಅಗತ್ಯತೆಯನ್ನು, ಅದರಲ್ಲೂ ಒಂದು ಕುಟುಂಬ ಎಷ್ಟು ಮಕ್ಕಳನ್ನು ಹೊಂದಿರಬೇಕು ಎಂಬ ಬಗ್ಗೆ ಸ್ಪಷ್ಟ ನಿಲುವಿನ ಅವಶ್ಯಕತೆಯನ್ನು ಆರೆಸ್ಸೆಸ್‌ ಪ್ರತಿಪಾದಿಸಿದೆ. ʻʻರಾಷ್ಟ್ರೀಯ ಜನಸಂಖ್ಯಾ ನೀತಿಯನ್ನು ಜಾರಿ ಮಾಡಬೇಕು ಎಂದು ಈ ಹಿಂದಿನಿಂದಲೂ ಹೇಳುತ್ತಿದ್ದೇವೆ. ಮುಂದಿನ ಐವತ್ತು ವರ್ಷಗಳ ಸಾಧನ, ಸಂಪನ್ಮೂಲಗಳ ಆಧಾರದಲ್ಲಿ ಸರ್ಕಾರ ನೀತಿ ರೂಪಿಸಬೇಕುʼʼ ಎಂದು ಡಾ. ವೈದ್ಯ ಹೇಳಿದರು.

ಏನಿದು ಸಮನ್ವಯ ಬೈಠಕ್‌?
ರಾಷ್ಟ್ರೀಯ ಸ್ವಯಂಸೇವಕ ಸಂಘದಡಿ ಕಾರ್ಯಾಚರಿಸುತ್ತಿರುವ ೩೬ ಸಂಘಟನೆಗಳ ನಡುವೆ ಸಮನ್ವಯಕ್ಕಾಗಿ ಸೆಪ್ಟೆಂಬರ್‌ ೧೦ರಂದು ಮೂರು ದಿನಗಳ ಈ ಬೈಠಕ್‌ ಆರಂಭಗೊಂಡಿದೆ. ವಿದ್ಯಾ ಭಾರತಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌, ಸಕ್ಷಮ್‌, ವನವಾಸಿ ಕಲ್ಯಾಣ್ ಆಶ್ರಮ್‌, ಸೇವಾ ಭಾರತಿ, ವಿಶ್ವ ಹಿಂದೂ ಪರಿಷತ್‌, ರಾಷ್ಟ್ರ ಸೇವಿಕಾ ಸಮಿತಿ, ಭಾರತೀಯ ಜನತಾ ಪಾರ್ಟಿ, ಅಖಿಲ ಭಾರತೀಯ ಮಜ್ದೂರ್ ಸಂಘ ಸೇರಿದಂತೆ ರಾಷ್ಟ್ರೀಯತೆ ಹಾಗೂ ಸಮಾಜದ ಒಳಿತಿಗಾಗಿ ಶ್ರಮಿಸುವ ೩೬ ಸಂಸ್ಥೆಗಳು ಈ ಸಭೆಯಲ್ಲಿ ಪಾಲ್ಗೊಂಡಿವೆ. ಸಂಘಟನೆಗಳು ತಾವು ಮಾಡುತ್ತಿರುವ ಕೆಲಸ ಮತ್ತು ಮುಂದೆ ಸಮಗ್ರವಾಗಿ ಆಗಬೇಕಾಗಿರುವ ಬದಲಾವಣೆಗಳಿಗೆ ಸಲಹೆ ನೀಡಿವೆ.

ಸರ ಸಂಘ ಚಾಲಕ ಡಾ. ಮೋಹನ್‌ ಭಾಗವತ್‌, ದತ್ತಾತ್ರೇಯ ಹೊಸಬಾಳೆ, ಕೃಷ್ಣ ಗೋಪಾಲ್‌, ಮನ್‌ಮೋಹನ್‌ ವೈದ್ಯ, ಅರುಣ್‌ ಕುಮಾರ್‌, ಮುಕುಂದ್, ರಾಮ್‌ದತ್‌ ಚಕ್ರಧರ್‌ ಸೇರಿದಂತೆ ಎಲ್ಲ ಸಹ ಸರಕಾರ್ಯವಾಹರು ಈ ಬೈಠಕ್‌ನಲ್ಲಿ ಪಾಲೊಂಡಿದ್ದು, ಸೋಮವಾರ ಸಂಜೆ ಸಮಾರೋಪಗೊಳ್ಳಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Other Backward Classes : 2011ರ ನಂತರ ನೀಡಿದ್ದ ಒಬಿಸಿ ಪ್ರಮಾಣ ಪತ್ರಗಳನ್ನು ರದ್ದು ಮಾಡಿದ ಕಲ್ಕತಾ ಹೈಕೋರ್ಟ್​​

Other Backward Classes : 2012 ರಲ್ಲಿ ಅಂಗೀಕರಿಸಿದ ರಾಜ್ಯ ಸರ್ಕಾರದ ಹೊಸ ಕಾನೂನಿನ ಅಡಿಯಲ್ಲಿ ಹಲವಾರು ಸಮುದಾಯಗಳಿಗೆ ಇತರ ಹಿಂದುಳಿದ ವರ್ಗಗಳ ಮೀಸಲಾತಿ ನೀಡಲಾಗಿತ್ತು. ಅದನ್ನು ನ್ಯಾಯಾಲಯ ರದ್ದುಗೊಳಿಸಿದೆ. ಆದಾಗ್ಯೂ, ನ್ಯಾಯಮೂರ್ತಿಗಳಾದ ತಪಬ್ರತಾ ಚಕ್ರವರ್ತಿ ಮತ್ತು ರಾಜಶೇಖರ್ ಮಂಥಾ ಅವರು, 2010 ಕ್ಕಿಂತ ಮೊದಲು ವರ್ಗೀಕರಿಸಿದ ಒಬಿಸಿಯ 66 ವರ್ಗಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ.

VISTARANEWS.COM


on

Calcutta High Court
Koo

ಕೋಲ್ಕತಾ: ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಆಡಳಿತದಲ್ಲಿ 2011 ರಿಂದ ಪಶ್ಚಿಮ ಬಂಗಾಳದಲ್ಲಿ ನೀಡಲಾಗುತ್ತಿರುವ ಇತರ ಹಿಂದುಳಿದ ವರ್ಗಗಳ (Other Backward Classes) ಎಲ್ಲಾ ಪ್ರಮಾಣಪತ್ರಗಳನ್ನು ಕಲ್ಕತ್ತಾ ಹೈಕೋರ್ಟ್ ರದ್ದುಗೊಳಿಸಿದೆ. ಅದು ಹೊಸದಾಗಿ ಪಟ್ಟಿಗೆ ಸೇರ್ಪಡೆ ಮಾಡಲಾಗಿರುವ ಜಾರಿಗಳಿಗೆ ಅನ್ವಯ. ಅಂತೆಯೇ ಇದು ಹಾಲಿ ಈ ಸಮುದಾಯದ ಜನರು ಹೊಂದಿರುವ ಉದ್ಯೋಗಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಆದರೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ಆದೇಶವನ್ನು ಸ್ವೀಕರಿಸಿವುದಿಲ್ಲ ಎಂದು ಹೇಳಿದ್ದಾರೆ. ತಪಶಿಲಿ ಸಮುದಾಯಕ್ಕೆ ನೀಡಲಾದ ಹಕ್ಕುಗಳನ್ನು ಕಸಿದುಕೊಳ್ಳುವ ಆದೇಶವನ್ನು ತಾನು ಒಪ್ಪುವುದಿಲ್ಲ ಎಂಬುದಾಗಿ ಹೇಳಿಕೊಂಡಿದ್ದಾರೆ.

2012 ರಲ್ಲಿ ಅಂಗೀಕರಿಸಿದ ರಾಜ್ಯ ಸರ್ಕಾರದ ಹೊಸ ಕಾನೂನಿನ ಅಡಿಯಲ್ಲಿ ಹಲವಾರು ಸಮುದಾಯಗಳಿಗೆ ಇತರ ಹಿಂದುಳಿದ ವರ್ಗಗಳ ಮೀಸಲಾತಿ ನೀಡಲಾಗಿತ್ತು. ಅದನ್ನು ನ್ಯಾಯಾಲಯ ರದ್ದುಗೊಳಿಸಿದೆ. ಆದಾಗ್ಯೂ, ನ್ಯಾಯಮೂರ್ತಿಗಳಾದ ತಪಬ್ರತಾ ಚಕ್ರವರ್ತಿ ಮತ್ತು ರಾಜಶೇಖರ್ ಮಂಥಾ ಅವರು, 2010 ಕ್ಕಿಂತ ಮೊದಲು ವರ್ಗೀಕರಿಸಿದ ಒಬಿಸಿಯ 66 ವರ್ಗಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ. ಈ ವರ್ಗಗಳ ಕುರಿತು ಕೋರ್ಟ್​ಗೆ ಸಲ್ಲಿಸಲಾಗಿದ್ದ ಅರ್ಜಿಗಳಲ್ಲಿ ಪ್ರಶ್ನಿಸಲಾಗಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅರ್ಜಿಯಲ್ಲಿ ಏನಿತ್ತು?

“2010 ರ ನಂತರ ನೀಡಲಾದ ಎಲ್ಲಾ ಒಬಿಸಿ ಪ್ರಮಾಣಪತ್ರಗಳು 1993 (ಪಶ್ಚಿಮ ಬಂಗಾಳ ಹಿಂದುಳಿದ ವರ್ಗಗಳ ಆಯೋಗ) ಕಾಯ್ದೆಯನ್ನು ಕಡೆಗಣಿಸಿವೆ ಎಂದು 2011 ರಲ್ಲಿ ಸಲ್ಲಿಸಲಾದ ಪಿಐಎಲ್​ನಲ್ಲಿ ಪ್ರಶ್ನಿಸಲಾಗಿತ್ತು . ವಾಸ್ತವವಾಗಿ ಹಿಂದುಳಿದ ವರ್ಗಕ್ಕೆ ಸೇರಿದವರಿಗೆ ಅವರ ಸರಿಯಾದ ಪ್ರಮಾಣಪತ್ರಗಳನ್ನು ನೀಡಲಾಗಿಲ್ಲ. 2010ರ ನಂತರ ನೀಡಲಾದ ಎಲ್ಲ ಒಬಿಸಿ ಪ್ರಮಾಣಪತ್ರಗಳನ್ನು ವಿಭಾಗೀಯ ಪೀಠ ರದ್ದುಪಡಿಸಿದೆ. 2010ಕ್ಕಿಂತ ಮೊದಲು ಒಬಿಸಿ ಪ್ರಮಾಣಪತ್ರ ಹೊಂದಿರುವವರು ಕಲ್ಕತ್ತಾ ಹೈಕೋರ್ಟ್ ವಿಚಾರಣೆಯ ಭಾರವನ್ನು ಹೊರುವುದಿಲ್ಲ” ಎಂದು ವಕೀಲ ಸುದೀಪ್ತಾ ದಾಸ್ ಗುಪ್ತಾ ವಾದಿಸಿದ್ದರು.

ಆದಾಗ್ಯೂ, ಈ ಆದೇಶವು ಈಗಾಗಲೇ ಸೇವೆಯಲ್ಲಿರುವ ಅಥವಾ ಮೀಸಲಾತಿಯಿಂದ ಪ್ರಯೋಜನ ಪಡೆದ ಅಥವಾ ರಾಜ್ಯದ ಯಾವುದೇ ಆಯ್ಕೆ ಪ್ರಕ್ರಿಯೆಯಲ್ಲಿ ಯಶಸ್ವಿಯಾದ ಹೊರಹಾಕಲ್ಪಟ್ಟ ವರ್ಗಗಳ ನಾಗರಿಕರ ಸೇವೆಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಮಮತಾ ವಿರೋಧ

ಪಶ್ಚಿಮ ಬಂಗಾಳ ಸರ್ಕಾರ ಪರಿಚಯಿಸಿದ ಒಬಿಸಿ ಮೀಸಲಾತಿ ಕೋಟಾ ಮುಂದುವರಿಯುತ್ತದೆ. ಮನೆ-ಮನೆ ಸಮೀಕ್ಷೆ ನಡೆಸಿದ ನಂತರ ನಾವು ಮಸೂದೆ ಸಿದ್ಧಪಡಿಸಿದ್ದೇವೆ. ಅದನ್ನು ಕ್ಯಾಬಿನೆಟ್ ಮತ್ತು ವಿಧಾನಸಭೆ ಅಂಗೀಕರಿಸಿದೆ ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: Bomb Threat : ಗೃಹ ಸಚಿವಾಲಯಕ್ಕೆ ಬಾಂಬ್ ಬೆದರಿಕೆ; ದೆಹಲಿಯಲ್ಲಿ ಆತಂಕ

ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಂಡು ಜನರಿಗೆ ನೀಡುವ ಸೌಲಭ್ಯಗಳನ್ನು ತಡೆಯಲು ಬಿಜೆಪಿ ಪಿತೂರಿ ನಡೆಸಿದೆ. ಅಂತಹ ಧೈರ್ಯವನ್ನು ಅವರು ಹೇಗೆ ತೋರಿಸುತ್ತಾರೆ ಎಂದು ಅವರು ಪ್ರಶ್ನಿಸಿದ್ದಾರೆ. ನ್ಯಾಯಾಲಯದ ತೀರ್ಪು ತಪಶಿಲಿ ಸಮುದಾಯಕ್ಕೆ ಮೀಸಲಾತಿಯನ್ನು ರದ್ದುಗೊಳಿಸುವ ಬಿಜೆಪಿಯ ಪ್ರಯತ್ನಗಳ ಭಾಗವಾಗಿದೆ ಎಂದು ಪಕ್ಷದ ಹಿರಿಯ ಮುಖಂಡ ಮತ್ತು ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಆರೋಪಿಸಿದ್ದಾರೆ.

ಒಬ್ಬ ನ್ಯಾಯಾಧೀಶರು ‘ನಾನು ಆರ್ಎಸ್ಎಸ್ ವ್ಯಕ್ತಿ’ ಎಂದು ಹೇಳುತ್ತಿದ್ದಾರೆ/ ಇನ್ನೊಬ್ಬರು ಬಿಜೆಪಿಗೆ ಸೇರುತ್ತಾರೆ… ತಪಶಿಲಿಗಳಿಗೆ ಮೀಸಲಾತಿಯನ್ನು ರದ್ದುಗೊಳಿಸಲು ಮೋದಿ ಬಯಸಿದ್ದಾರೆ. ನಾನು ಅದಕ್ಕೆ ಅವಕಾಶ ನೀಡುವುದಿಲ್ಲ. ಅವರು ಆದಿವಾಸಿಗಳ ಹಕ್ಕುಗಳನ್ನು ಕಸಿದುಕೊಳ್ಳಲು ಬಯಸುತ್ತಾರೆ ಎಂದು ಅವರು ಅಭಿಷೇಕ್ ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

Bomb Threat : ಗೃಹ ಸಚಿವಾಲಯಕ್ಕೆ ಬಾಂಬ್ ಬೆದರಿಕೆ; ದೆಹಲಿಯಲ್ಲಿ ಆತಂಕ

Bomb Threat: ಗೃಹ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಬೆದರಿಕೆ ಮೇಲ್ ಸ್ವೀಕರಿಸಿದ್ದಾರೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಪೊಲೀಸರಿಗೆ ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಸಂಪೂರ್ಣವಾಗಿ ತನಿಖೆ ನಡೆಸಿ ಹುಸಿ ಬಾಂಬ್​ ಕರೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಆದಾಗ್ಯೂ ಮುನ್ನೆಚ್ಚರಿಕೆ ಕ್ರಮವಾಗಿ ಶೋಧ ಮುಂದವರಿಸಿದ್ದಾರೆ.

VISTARANEWS.COM


on

Bomb Threat
Koo

ನವ ದೆಹಲಿ: ಲೋಕಸಭಾ ಚುನಾವಣೆ ನಡೆಯುತ್ತಿರುವ ಮಧ್ಯೆಯೇ ದೇಶದ ಅಲ್ಲಲ್ಲಿ ಹುಸಿ ಬಾಂಬ್​ ಕರೆಗಳನ್ನು ಸ್ವೀಕರಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇದಕ್ಕೊಂದು ಮಿತಿಯೇ ಇಲ್ಲದಂತಾಗಿದೆ. ಈ ಹಿಂದೆ ದೆಹಲಿ ಶಾಲೆಗಳು, ನಂತರ ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ ಬಂದಿದ್ದವು. ಇದೀಗ ಈಗ ಸಚಿವ ಅಮಿತ್ ಶಾ ಅವರ ನಿಯಂತ್ರಣದಲ್ಲಿರುವ ಗೃಹ ಸಚಿವಾಲಯವನ್ನು ಸ್ಫೋಟಿಸುವುದಾಗಿ ಮೇಲ್ ಬೆದರಿಕೆ (Bomb Threat ) ಬಂದಿದೆ. ಇದು ಕೆಲವು ಕ್ಷಣ ಆತಂಕಕ್ಕೆ ಕಾರಣವಾಯಿತಾದರೂ ಹುಸಿ ಎಂಬುದು ಪೊಲೀಸರು ಸ್ಪಷ್ಟಪಡಿಸಿದ ಬಳಿಕ ನಿರಾಳತೆ ಮೂಡಿತು.

ಬೆದರಿಕೆ ಹಿನ್ನೆಲೆಯಲ್ಲಿ ಗೃಹ ಸಚಿವಾಲಯ ಇರುವ ನಾರ್ತ್ ಬ್ಲಾಕ್​ನ ಕೆಂಪು ಕಲ್ಲಿನ ಕಟ್ಟಡದಲ್ಲಿ ಪೊಲೀಸರು ಸಮಗ್ರ ಶೋಧ ನಡೆಸಿದ್ದಾರೆ. ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ ಎಂದು ಹೆಸರು ಹೇಳಲು ಇಚ್ಛಿಸದ ತನಿಖಾ ತಂಡವೊಂದರ ಮೂಲಗಳು ತಿಳಿಸಿವೆ.

ಗೃಹ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಬೆದರಿಕೆ ಮೇಲ್ ಸ್ವೀಕರಿಸಿದ್ದಾರೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಪೊಲೀಸರಿಗೆ ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಸಂಪೂರ್ಣವಾಗಿ ತನಿಖೆ ನಡೆಸಿ ಹುಸಿ ಬಾಂಬ್​ ಕರೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಆದಾಗ್ಯೂ ಮುನ್ನೆಚ್ಚರಿಕೆ ಕ್ರಮವಾಗಿ ಶೋಧ ಮುಂದವರಿಸಿದ್ದಾರೆ.

ಇದನ್ನೂ ಓದಿ: WhatsApp Update: ವಾಟ್ಸ್ ಆಪ್ ಬಳಕೆದಾರರಿಗೆ ಸಂತಸದ ಸುದ್ದಿ; ಮೆಸೆಜ್‌ಗೆ ಸಂಬಂಧಿಸಿ ಮಹತ್ವದ ಅಪ್‌ಡೇಟ್‌!

ಈ ತಿಂಗಳ ಆರಂಭದಲ್ಲಿ ದೆಹಲಿ-ಎನ್​ಸಿಆರ್​ನ ಸುಮಾರು 150 ಶಾಲೆಗಳಿಗೆ ಬಂದ ಬಾಂಬ್ ಬೆದರಿಕೆ ಇಮೇಲ್​​ಗಳನ್ನು ಕಳುಹಿಸಲಾಗಿತ್ತು. ಹಂಗೇರಿಯ ರಾಜಧಾನಿ ಬುಡಾಪೆಸ್ಟ್​​ನಿಂದ ಕಳುಹಿಸಲಾಗಿದೆ ಎಂದು ಶಂಕಿಸಲಾಗಿತ್ತು. ಹೆಚ್ಚಿನ ತನಿಖೆಗಾಗಿ ದೆಹಲಿ ಪೊಲೀಸರು ಶೀಘ್ರದಲ್ಲೇ ಹಂಗೇರಿಯಲ್ಲಿರುವ ಅಲ್ಲಿನ ಅಧಿಕಾರಿಗಳನ್ನು ಸಂಪರ್ಕಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶಾಲಾ ಆವರಣದಲ್ಲಿ ಸ್ಫೋಟಕಗಳನ್ನು ಇರಿಸಲಾಗಿದೆ ಎಂದು ಹೇಳಲಾಗಿತ್ತು. ಭಯಭೀತರಾದ ಶಾಲಾ ಮಕ್ಕಳ ಪೋಷಕರು ಮೇ 1 ರಂದು ತಮ್ಮ ಮಕ್ಕಳನ್ನು ಕರೆದೊಯ್ಯಲು ಏಕಾಏಕಿ ಧಾವಿಸಿದ್ದರು. ಇದು ದೊಡ್ಡ ಗೊಂದಲಕ್ಕೆ ಕಾರಣವಾಗಿತ್ತು. ಶಾಲೆಗಳಲ್ಲಿ ಆಕ್ಷೇಪಾರ್ಹ ಏನೂ ಕಂಡುಬರದ ಕಾರಣ ಇದನ್ನು ನಂತರ ಹುಸಿ ಎಂದು ಘೋಷಿಸಲಾಗಿತ್ತು.

Continue Reading

ಶಿಕ್ಷಣ

UPSC: ಐಇಎಸ್‌ / ಐಎಸ್‌ಎಸ್‌ಇ 2024 ಪರೀಕ್ಷೆಯ ದಿನಾಂಕ ಪ್ರಕಟ: ಇಲ್ಲಿದೆ ವೇಳಾಪಟ್ಟಿ

UPSC: ಕೇಂದ್ರ ಲೋಕ ಸೇವಾ ಆಯೋಗವು 2024ನೇ ಸಾಲಿನ ಇಂಡಿಯನ್ ಎಕನಾಮಿಕ್ ಸರ್ವಿಸ್ ಮತ್ತು ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವಿಸ್ ಎಕ್ಸಾಮಿನೇಷನ್ನ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಯುಪಿಎಸ್‌ಸಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಟೈಮ್‌ ಟೇಬಲ್‌ ಪ್ರಕಟಿಸಿದ್ದು, ಈ ಬಗ್ಗೆ ವಿವರ ಇಲ್ಲಿದೆ.

VISTARANEWS.COM


on

UPSC
Koo

ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (UPSC)ವು 2024ನೇ ಸಾಲಿನ ಇಂಡಿಯನ್ ಎಕನಾಮಿಕ್ ಸರ್ವಿಸ್ (Indian Economic Service-IES) / ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವಿಸ್ ಎಕ್ಸಾಮಿನೇಷನ್ (Indian Statistical Service Examination-ISSE)ನ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಯುಪಿಎಸ್‌ಸಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಟೈಮ್‌ ಟೇಬಲ್‌ ಪ್ರಕಟಿಸಿದ್ದು, ಈ ಬಗ್ಗೆ ವಿವರ ಇಲ್ಲಿದೆ.

ಯಾವಾಗ, ಯಾವ ಪರೀಕ್ಷೆ?

ಯುಪಿಎಸ್‌ಸಿ ಐಇಎಸ್ / ಐಎಸ್ಎಸ್ಇ 2024 ಪರೀಕ್ಷೆಗಳು ಜೂನ್ 21ರಂದು ಆರಂಭವಾಗಲಿದ್ದು, 22, 23ರಂದು ನಡೆಯಲಿದೆ. ಈ ಪರೀಕ್ಷೆ ಸಾಮಾನ್ಯ ಇಂಗ್ಲಿಷ್, ಸಾಮಾನ್ಯ ಅಧ್ಯಯನ, ಸಾಮಾನ್ಯ ಅರ್ಥಶಾಸ್ತ್ರ, ಸಂಖ್ಯಾಶಾಸ್ತ್ರ ಮತ್ತು ಭಾರತೀಯ ಅರ್ಥಶಾಸ್ತ್ರ ಸೇರಿದಂತೆ ವಿವಿಧ ವಿಷಯಗಳಲ್ಲಿ ನಡೆಯಲಿದೆ. ಆರ್ಥಿಕ ಮತ್ತು ಸಂಖ್ಯಾಶಾಸ್ತ್ರೀಯ ಕ್ಷೇತ್ರಗಳಲ್ಲಿ ವೃತ್ತಿ ಜೀವನದ ನಡೆಸಲು ಬಯಸುವವರು ಈ ಪ್ರತಿಷ್ಠಿತ ಪರೀಕ್ಷೆಯ ವೇಳಾಪಟ್ಟಿಯನ್ನು ಎಚ್ಚರಿಕೆಯಿಂದ ಗಮನಿಸುವಂತೆ ಪ್ರಕಟಣೆ ತಿಳಿಸಿದೆ. ಪ್ರಶ್ನೆ ಪತ್ರಿಕೆ ವಸ್ತುನಿಷ್ಠ ಪ್ರಶ್ನೆಗಳು ಮತ್ತು ವಿವರಣಾತ್ಮಕ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ.

ಜೂನ್‌ 21ರಂದು ಬೆಳಿಗ್ಗೆ 9 ಗಂಟೆಗೆ ಸಾಮಾನ್ಯ ಇಂಗ್ಲಿಷ್‌ ಮತ್ತು ಅಪರಾಹ್ನ 2.30ಕ್ಕೆ ಸಾಮಾನ್ಯ ಅಧ್ಯಯನ ಪರೀಕ್ಷೆ ನಡೆಯಲಿದೆ. ಜೂನ್‌ 22ರಂದು ಬೆಳಿಗ್ಗೆ 9 ಗಂಟೆಗೆ ಸಾಮಾನ್ಯ ಅರ್ಥಶಾಸ್ತ್ರ-I, ಸ್ಟ್ಯಾಟಿಸ್ಟಿಕ್ಸ್‌-I ಮತ್ತು ಅಪರಾಹ್ನ 2.30ರಿಂದ ಸಾಮಾನ್ಯ ಅರ್ಥಶಾಸ್ತ್ರ-II ಹಾಗೂ ಸ್ಟ್ಯಾಟಿಸ್ಟಿಕ್ಸ್‌-II ಎಕ್ಸಾಂ ಆಯೋಜಿಸಲಾಗಿದೆ. ಇನ್ನು ಜೂನ್‌ 23ರಂದು ಬೆಳಿಗ್ಗೆ 9 ಗಂಟೆಯಿಂದ ಸಾಮಾನ್ಯ ಅರ್ಥಶಾಸ್ತ್ರ-III ಮತ್ತು ಸ್ಟ್ಯಾಟಿಸ್ಟಿಕ್ಸ್‌-III ಹಾಗೂ ಅಪರಾಹ್ನ 2.30ರಿಂದ ಭಾರತೀಯ ಅರ್ಥಶಾಸ್ತ್ರ ಹಾಗೂ ಸ್ಟ್ಯಾಟಿಸ್ಟಿಕ್ಸ್‌-IV ಪರೀಕ್ಷೆ ನಡೆಯಲಿದೆ.

ವೇಳಾಪಟ್ಟಿ ವೀಕ್ಷಿಸಲು ಹೀಗೆ ಮಾಡಿ

  • ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ https://upsc.gov.in/ಗೆ ಭೇಟಿ ನೀಡಿ.
  • ಬಲಭಾಗದಲ್ಲಿ ಕಾಣಿಸುವ What’s New ಆಯ್ಕೆಯ ಕೆಳಗೆ ಕಂಡು ಬರುವ Examination Time Table: Indian Economic Service – Indian Statistical Service Examination, 2024 ಆಯ್ಕೆಯನ್ನು ಕ್ಲಿಕ್‌ ಮಾಡಿ.
  • ಈಗ ತೆರೆದುಕೊಳ್ಳುವ ಪುಟದಲ್ಲಿನ Document ಆಪ್ಶನ್‌ ಆಯ್ಕೆ ಮಾಡಿದರೆ ವೇಳಾಪಟ್ಟಿ ತೆರೆದುಕೊಳ್ಳುತ್ತದೆ.

Indian Economic Service – Indian Statistical Service Examinationನ ಟೈಮ್‌ ಟೇಬಲ್‌ ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್‌ ಮಾಡಿ.

ಹಾಲ್‌ ಟಿಕೆಟ್‌ ಯಾವಾಗ?

ಈ ಪರೀಕ್ಷೆಗೆ 2024ರ ಏಪ್ರಿಲ್ 10ರಿಂದ 30ರವರೆಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಲಿಖಿತ ಪರೀಕ್ಷೆಯು ಗರಿಷ್ಠ 1,000 ಅಂಕಗಳನ್ನು ಹೊಂದಿದೆ. ಪ್ರವೇಶ ಪತ್ರ (Hall Ticket)ವನ್ನು ಪರೀಕ್ಷೆಯ ಏಳು ದಿನಗಳ ಮೊದಲು ಬಿಡುಗಡೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಬಹುದು. ಈ ಪರೀಕ್ಷೆಯ ಮೂಲಕ ಆಯ್ಕೆಯಾದ ಅಧಿಕಾರಿಗಳನ್ನು ಆರ್ಥಿಕ ನೀತಿಗಳನ್ನು ರೂಪಿಸುವಲ್ಲಿ ಹಾಗೂ ಕಾರ್ಯಗತಗೊಳಿಸುವಲ್ಲಿ ಮತ್ತು ಸರ್ಕಾರದ ನಿರ್ಧಾರ ತೆಗೆದುಕೊಳ್ಳಲು ಸಹಾಯ ಮಾಡಲು ನೇಮಿಸಲಾಗುತ್ತದೆ.

ಇದನ್ನೂ ಓದಿ: UPSC EXAM-2023: ಯುಪಿಎಸ್‌ಸಿ ಟಾಪರ್ ವಾಸಿಸುತ್ತಿದ್ದುದು ಮನೆಯಲ್ಲಲ್ಲ, ಈ ಜೋಪಡಿಯಲ್ಲಿ!

Continue Reading

ದೇಶ

PM Narendra Modi: “ನನ್ನನ್ನು ದೇವರೇ ಈ ಭೂಮಿಗೆ ಕಳಿಸಿದ್ದಾನೆ..”; ಭಾರೀ ಸದ್ದು ಮಾಡ್ತಿದೆ ಮೋದಿಯ ಈ ವಿಡಿಯೊ

PM Narendra Modi: ಇತ್ತೀಚೆಗೆ ಪತ್ರಕರ್ತೆ ರುಬಿಕಾ ಲಿಯಾಖತ್‌ ಅವರ ಸಂದರ್ಶನದಲ್ಲಿ ಭಾಗಿಯಾಗಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಹೀಗೆ ಮಾತನಾಡುತ್ತಾ ನಾನು ಸಾಮಾನ್ಯರಂತೆ ಹುಟ್ಟಿಲ್ಲ. ದೇವರೇ ನನ್ನನ್ನು ಭೂಮಿಗೆ ಜನರ ಸೇವೆಗಾಗಿ ಕಳುಹಿಸಿದ್ದಾನೆ ಎಂಬುದನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ. ಅಲ್ಲದೇ ಇದೇ ಕಾರಣದಿಂದಾಗಿ ನನ್ನಲ್ಲಿ ಇಷ್ಟೊಂದು ಶಕ್ತಿ ಸಾಮರ್ಥ್ಯ ಇದೆ ಎಂದು ಅನಿಸುತ್ತಿದೆ ಎಂದು ಹೇಳಿದ್ದಾರೆ.

VISTARANEWS.COM


on

PM Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024)ಯ ಗುಂಗಿನಲ್ಲಿರುವ ರಾಜಕೀಯ ಮುಖಂಡರು ಪರ – ವಿರೋಧ ಹೇಳಿಕೆ, ವಿವಾದಾತ್ಮಕ ಮಾತುಗಳ ಮೂಲಕ ಸುದ್ದಿಯಾಗುವುದು ಸಹಜ. ತಾವು ನೀಡಿರುವ ಹೇಳಿಕೆಗಳಿಂದಲೇ ಹಲವು ದಿನಗಳ ಕಾಲ ಟ್ರೋಲ್‌ ಆಗೋದೂ ಇದೆ. ಇದೀಗ ಪ್ರಧಾನಿ ನರೇಂದ್ರ ಮೋದಿ(PM Narendra Modi)ಯವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌(Viral Video) ಆಗುತ್ತಿದ್ದು, ಹಲವರು ಹಲವು ರೀತಿಯಲ್ಲಿ ಕಮೆಂಟ್‌ ಮಾಡುತ್ತಿದ್ದಾರೆ.

ಮೋದಿ ಹೇಳಿದ್ದೇನು?

ಇತ್ತೀಚೆಗೆ ಪತ್ರಕರ್ತೆ ರುಬಿಕಾ ಲಿಯಾಖತ್‌ ಅವರ ಸಂದರ್ಶನದಲ್ಲಿ ಭಾಗಿಯಾಗಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಹೀಗೆ ಮಾತನಾಡುತ್ತಾ “”ನಾನು ಸಾಮಾನ್ಯರಂತೆ ಹುಟ್ಟಿಲ್ಲ. ದೇವರೇ ನನ್ನನ್ನು ಈ ಭೂಮಿಗೆ ಜನರ ಸೇವೆಗಾಗಿ ಕಳುಹಿಸಿದ್ದಾನೆ ಎಂಬುದನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ. ಅಲ್ಲದೇ ಇದೇ ಕಾರಣದಿಂದಾಗಿ ನನ್ನಲ್ಲಿ ಇಷ್ಟೊಂದು ಶಕ್ತಿ ಸಾಮರ್ಥ್ಯ ಇದೆ ಎಂದು ಅನಿಸುತ್ತಿದೆʼʼ ಎಂದು ಹೇಳಿದ್ದಾರೆ.

ಸಂದರ್ಶನದ ನಡುವೆ ರುಬಿಕಾ ಅವರು ನಿಮಗೆ ಸುಸ್ತು ಅನ್ನೋದೇ ಆಗೋದಿಲ್ವಾ ಎಂದು ಪ್ರಶ್ನೆ ಕೇಳಿದ್ದಾರೆ. ಆಗ ಆ ಪ್ರಶ್ನೆಗೆ ಉತ್ತರಿಸುತ್ತಾ, “”ನಾನು ಎಲ್ಲರಂತೆ ಸಾಮಾನ್ಯವಾಗಿ ಹುಟ್ಟಿದ್ದೇನೆಂದು ಭಾವಿಸುವ ಬದಲಾಗಿ ದೇವರ ಕಾರ್ಯವನ್ನು ಪೂರೈಸಲು ಜನಿಸಿದ್ದೇನೆ ಎಂದು ಭಾವಿಸುತ್ತೇನೆ. ನನಗೆ ಗೊತ್ತಿಲ್ಲ, ನಾನು ಅಂದುಕೊಂಡಿದ್ದೂ ತಪ್ಪು ಕಲ್ಪನೆಯೂ ಆಗಿರಬಹುದು. ಅಥವಾ ನನ್ನ ಹೇಳಿಕೆಗೆ ಟೀಕೆಯೂ ವ್ಯಕ್ತವಾಗಬಹುದು. ಆದರೆ ನಾನು ಯಾವಾಗಲೂ ಹಾಗೆಯೇ ಭಾವಿಸುತ್ತೇನೆʼʼ ಎಂದು ಹೇಳಿದ್ದಾರೆ.

ಇತ್ತೀಚೆಗೆ ನಡೆದಿರುವ ಈ ಸಂದರ್ಶನದ ಕ್ಲಿಪಿಂಗ್ಸ್‌ ಅನ್ನು ಸ್ವತಃ ರುಬಿಕಾ ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, “ಪ್ರಧಾನಮಂತ್ರಿಗಳೇ ನಿಮಗೆ ಆಯಾಸ ಆಗುವುದಿಲ್ಲವೇ” ಎಂದ್ ಕ್ಯಾಪ್ಶನ್‌ ಕೊಟ್ಟಿದ್ದಾರೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ರುಬಿಕಾ ಬದಲಾಗಿ ಬೇರೆ ಪತ್ರಕರ್ತರು ಆ ಜಾಗದಲ್ಲಿ ಇರುತ್ತಿದ್ದರೆ ಆ ರೀತಿ ಪ್ರಶ್ನೆ ಕೇಳುತ್ತಿರಲಿಲ್ಲ ಎಂದು ಒಬ್ಬರು ಕಮೆಂಟ್‌ ಮಾಡಿದರೆ, ಪ್ರಧಾನಿಗೆ ಆಯಾಸ ಹೇಗೆ ಆಗಲು ಸಾಧ್ಯ? ಅವರ ಬಳಿ ಕಾರು, ಬಂಗಲೆ ಆಳು-ಕಾಳು ಜೊತೆಗಿರುವಾಗ ಎಂದು ಮತ್ತೊಬ್ಬರು ಪ್ರಶ್ನೆ ಮಾಡಿದ್ದಾರೆ. ಇನ್ನು ಕೆಲವರು ರುಬಿಕಾ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದಾರೆ. ಬಹಳಷ್ಟು ಮಂದಿ, “”ಹೌದು. ಮೋದಿಯನ್ನು ಭಗವಂತನೇ ಈ ಭೂಮಿಗೆ ಕಳುಹಿಸಿದ್ದಾನೆ. ಏನೀಗ? ಮೋದಿ ಅವರು ನಿಸ್ವಾರ್ಥವಾಗಿ ಜನ ಸೇವೆ ಮಾಡುತ್ತಿಲ್ಲವೇʼʼ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:AR Rahman: ಪ್ರಶಸ್ತಿಗಳೆಲ್ಲ ಚಿನ್ನವೆಂದು ಭಾವಿಸಿ ಎಆರ್ ರೆಹಮಾನ್ ತಾಯಿ ಮಾಡಿದ್ದೇನು?

ಮತ್ತೊಂದೆಡೆ ಒಡಿಶಾದಲ್ಲಿರುವ ಐತಿಹಾಸಿಕ ಪುರಿ ಜಗನ್ನಾಥನೇ ಪ್ರಧಾನಿ ನರೇಂದ್ರ ಮೋದಿ ಅವರ ಭಕ್ತ ಎಂಬುದಾಗಿ ಬಿಜೆಪಿ ನಾಯಕ, ಪುರಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಸಂಬಿತ್‌ ಪಾತ್ರಾ ನೀಡಿದ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿತ್ತು. ವಿವಾದ ಉಂಟಾದ ಬೆನ್ನಲ್ಲೇ, ಸಂಬಿತ್‌ ಪಾತ್ರಾ ಅವರು ತಮ್ಮ ಹೇಳಿಕೆ ಕುರಿತಂತೆ ಕ್ಷಮೆ ಕೇಳಿದ್ದಾರೆ. ಹಾಗೆಯೇ, ಅಂತಹ ಹೇಳಿಕೆ ನೀಡಿದ್ದಕ್ಕೆ ಪ್ರಾಯಶ್ಚಿತ್ತವಾಗಿ ಮೂರು ದಿನ ಉಪವಾಸ ಕೂಡ ಕೈಗೊಳ್ಳಲು ತೀರ್ಮಾನಿಸಿದ್ದಾರೆ.

Continue Reading
Advertisement
Calcutta High Court
ಪ್ರಮುಖ ಸುದ್ದಿ14 seconds ago

Other Backward Classes : 2011ರ ನಂತರ ನೀಡಿದ್ದ ಒಬಿಸಿ ಪ್ರಮಾಣ ಪತ್ರಗಳನ್ನು ರದ್ದು ಮಾಡಿದ ಕಲ್ಕತಾ ಹೈಕೋರ್ಟ್​​

Bomb Threat
ಪ್ರಮುಖ ಸುದ್ದಿ18 mins ago

Bomb Threat : ಗೃಹ ಸಚಿವಾಲಯಕ್ಕೆ ಬಾಂಬ್ ಬೆದರಿಕೆ; ದೆಹಲಿಯಲ್ಲಿ ಆತಂಕ

ಕರ್ನಾಟಕ25 mins ago

CM’s Bengaluru City Rounds: ರಾಜಕಾಲುವೆ ಒತ್ತುವರಿ ಯಾರೇ ಮಾಡಿದ್ರೂ ಮುಲಾಜಿಲ್ಲದೆ ತೆರವು: ಸಿಎಂ ಎಚ್ಚರಿಕೆ

IPL 2024
ಕ್ರಿಕೆಟ್40 mins ago

IPL 2024 : ಅಮ್ಮನನ್ನು ಆಸ್ಪತ್ರೆಯಲ್ಲಿ ಮಲಗಿಸಿ ಕೆಕೆಆರ್​ ಪರ ಕ್ವಾಲಿಫೈಯರ್ ಆಡಿದ ಆಫ್ಘನ್​ ಕ್ರಿಕೆಟಿಗ

Star Cricket Theam Fashion
ಫ್ಯಾಷನ್47 mins ago

Star Cricket Theme Fashion: ಕ್ರಿಕೆಟ್‌ ಥೀಮ್‌ನಲ್ಲಿ ಬೆರಗುಗೊಳಿಸಿದ ನಟಿ ಜಾಹ್ನವಿ ಕಪೂರ್ ಫ್ಯಾಷನ್‌!

Harish Poonja Govt responsible for disaster if MLA Harish Poonja is arrested says BY Vijayendra
ರಾಜಕೀಯ48 mins ago

Harish Poonja: ಶಾಸಕ ಹರೀಶ್‌ ಪೂಂಜಾರನ್ನು ಬಂಧಿಸಿದರೆ ಮುಂದಾಗುವ ಅನಾಹುತಕ್ಕೆ ಸರ್ಕಾರವೇ ಹೊಣೆ: ಗುಡುಗಿದ ವಿಜಯೇಂದ್ರ

Virat kohli
ಕ್ರೀಡೆ1 hour ago

IPL 2024 : ಕೊಹ್ಲಿಯನ್ನು ಹೊಗಳಿ ಆರ್​​ಸಿಬಿಗೆ ವಿದಾಯ ಹೇಳಿದ ವಿಜಯ್​ ಮಲ್ಯ

WhatsApp Update
ತಂತ್ರಜ್ಞಾನ1 hour ago

WhatsApp Update: ವಾಟ್ಸ್ ಆಪ್ ಬಳಕೆದಾರರಿಗೆ ಸಂತಸದ ಸುದ್ದಿ; ಮೆಸೆಜ್‌ಗೆ ಸಂಬಂಧಿಸಿ ಮಹತ್ವದ ಅಪ್‌ಡೇಟ್‌!

Jackfruit Seed: ಹಲಸಿನ ಹಣ್ಣು ತಿಂದು ಬೀಜ ಎಸೆಯದಿರಿ; ಬೀಜದಿಂದಾಗುವ ಆರೋಗ್ಯ ಲಾಭಗಳು ಹಲವು!
ಆರೋಗ್ಯ1 hour ago

Jackfruit Seed: ಹಲಸಿನ ಹಣ್ಣು ತಿಂದು ಬೀಜ ಎಸೆಯದಿರಿ; ಬೀಜದಿಂದಾಗುವ ಆರೋಗ್ಯ ಲಾಭಗಳು ಹಲವು!

Blink Movie in half centuru with good in OTT
ಸ್ಯಾಂಡಲ್ ವುಡ್1 hour ago

Blink Movie: ಹಾಫ್ ಸೆಂಚುರಿ ಬಾರಿಸಿದ ʻಬ್ಲಿಂಕ್ ʼ ಸಿನಿಮಾ; ಒಟಿಟಿಯಲ್ಲಿಯೂ ʻಬಹುಪರಾಕ್ʼ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ12 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 day ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 day ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌