ವಿಸ್ತಾರ Explainer | iOS 16 ಲಾಂಚ್, ಹೊಸ ಫೀಚರ್‌ಗಳೇನು? ಹೇಗೆ ಡೌನ್‌ಲೋಡ್ ಮಾಡಿಕೊಳ್ಳುವುದು? - Vistara News

EXPLAINER

ವಿಸ್ತಾರ Explainer | iOS 16 ಲಾಂಚ್, ಹೊಸ ಫೀಚರ್‌ಗಳೇನು? ಹೇಗೆ ಡೌನ್‌ಲೋಡ್ ಮಾಡಿಕೊಳ್ಳುವುದು?

ಐಫೋನ್ 14 ಸ್ಮಾರ್ಟ್‌ಫೋನ್ ಸಿರೀಸ್ ಲಾಂಚ್ ಮಾಡಿದ ಬೆನ್ನಲ್ಲೇ ಆ್ಯಪಲ್ ಕಂಪನಿಯ ಹೊಸ ಐಒಎಸ್ 16 (iOS 16) ಆಪರೇಟಿಂಗ್ ಸಿಸ್ಟಮ್ ಲಾಂಚ್ ಮಾಡಿದೆ. ಸಾಕಷ್ಟು ಹೊಸ ಫೀಚರ್‌ಗಳನ್ನು ಬಳಕೆದಾರರಿಗೆ ಸಿಗಲಿವೆ.

VISTARANEWS.COM


on

iOS 16
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಈ ಮೊದಲೇ ಘೋಷಿಸಿದಂತೆ ಆ್ಯಪಲ್ ಕಂಪನಿಯು ಸೆ.13ರಂದು ಹೊಸ ಆಪರೇಟಿಂಗ್ ಸಿಸ್ಟಮ್ ಐಒಎಸ್ 16(iOS 16) ಲಾಂಚ್ ಮಾಡಿದೆ. ಈ ಹೊಸ ಒಎಸ್ ಸಾಕಷ್ಟು ಹೊಸ ಫೀಚರ್ಸ್ ಒಳಗೊಂಡಿದೆ. ಈ ಪೈಕಿ ಹೊಸ ಲಾಕ್ ಸ್ಕ್ರೀನ್, ಅನ್‌ಸೆಂಡ್ ಮತ್ತ ಎಡಿಟ್ ಐಮೆಸೇಜ್, ಹೊಸ ರೀತಿಯ ಸ್ಪರ್ಶದ ಕೀ ಬೋರ್ಡ್ ಪ್ರಮುಖವಾಗಿವೆ. ಇವುಗಳ ಜತೆಗೆ ಬಹಳಷ್ಟು ಅತ್ಯಾಕರ್ಷಕ ಮತ್ತು ಊಹೆಗೂ ನಿಲುಕದ ಫೀಚರ್ಸ್ ಕಾಣಬಹುದಾಗಿದೆ. ಆ್ಯಪಲ್ ಕಂಪನಿಯು ಇತ್ತೀಚೆಗಷ್ಟೇ ಐಫೋನ್ 14 ಸಿರೀಸ್ ಫೋನ್‌ಗಳನ್ನು ಲಾಂಚ್ ಮಾಡಿದೆ.

ಐಫೋನ್ 8 ಮೇಲ್ಪಟ್ಟ ಎಲ್ಲ ಫೋನ್‌ಗಳಿಗೆ ಈ ಹೊಸ ಐಒಎಸ್ 16 ಅಪ್‌ಡೇಟ್ ಮಾಡಬಹುದಾಗಿದೆ. ಆದರೆ, ಈ ಅಪಡೇಟ್ ಐಪ್ಯಾಡ್ಸ್‌ಗೆ ಲಭ್ಯವಿಲ್ಲ. ಕಂಪನಿಯು ಈ ಐಪ್ಯಾಡ್‌ಗಳಿಗಾಗಿ ಹೊಸ ಐಪ್ಯಾಡ್‌ಒಎಸ್ 16.1 ಬಿಡುಗಡೆ ಮಾಡಲಿದೆ ಎಂದು ಹೇಳಲಾಗುತ್ತಿದೆ.

ಲಾಕ್ ಸ್ಕ್ರೀನ್
ಐಒಎಸ್ 16 ಆಪರೇಟಿಂಗ್ ಸಾಫ್ಟ್‌ವೇರ್ ಮುಖ್ಯ ಆಕರ್ಷಣೆ- ಲಾಕ್ ಸ್ಕ್ರೀನ್. ಬಳಕೆದಾರರು ಈಗ ಲಾಕ್‌ಸ್ಕ್ರೀನ್‌ಗೆ ತಮಗೆ ಬೇಕಾದ ವಿಜೆಟ್‌ಗಳನ್ನು ಸೇರಿಸಬಹುದಾಗಿದೆ. ಡಿವೈಸ್ ಆಫ್ ಇದ್ದಾಗಲೂ ಈ ವಿಜೆಟ್‌ಗಳು ಐಫೋನ್ 14ನಲ್ಲಿ ಕಾಣಿಸಿಕೊಳ್ಳಲಿವೆ.

ಐಮೆಸೇಜಸ್
ಆ್ಯಪಲ್, ಐಫೋನ್ ಬಳಕೆದಾರರಿಗೆ ಮತ್ತೊಂದು ಫೀಚರ್ಸ್ ಒದಗಿಸುತ್ತಿದೆ. ಐಒಎಸ್ 16ನಲ್ಲಿ ಬಳಕೆದಾರರು ಕಳುಹಿಸಲಾದ ಸಂದೇಶಗಳನ್ನು ಎಡಿಟ್ ಮಾಡಬಹುದು. ನೀವು ಮೆಸೇಜ್ ‌ಕಳುಹಿಸಿದ ನಿಮಿಷದೊಳಗೇ ಮೊದಲಿನ ಸ್ಥಿತಿಗೆ (Undo) ತರಬಹುದು. ಹಾಗೆಯೇ ಮೆಸೇಜ್ ಕಳುಹಿಸಿದ 15 ಮಿನಿಟ್ಸ್ ವರೆಗೆ ಕಳುಹಿಸಿದ ಸಂದೇಶವನ್ನು ಎಡಿಟ್ ಕೂಡ ಮಾಡಬಹುದು. ಮಾರ್ಕ್ ಆ್ಯಸ್ ಅನ್‌ರೀಡ್ ಫೀಚರ್ ಕೂಡ ನೀಡಲಾಗಿದೆ. ಆಡಿಯೋ ಸಂದೇಶವನ್ನು ಕೇಳಿಸಿಕೊಳ್ಳುವಾಗಲೇ, ಆ ಸಂದೇಶವನ್ನು ಹಿಂದಕ್ಕೆ ಅಥವಾ ಮುಂದಕ್ಕೆ ಓಡಿಸಬಹುದು.

ಕೀಬೋರ್ಡ್ ಹ್ಯಾಪ್ಟಿಕ್ಸ್
ಕೀ ಬೋರ್ಡ್ ಹ್ಯಾಪ್ಟಿಕ್ಸ್‌ನಲ್ಲಿ ಸಾಕಷ್ಟು ಸುಧಾರಣೆಗಳನ್ನು ಮಾಡಲಾಗಿದೆ. ಹಾಗೆ ನೋಡಿದರೆ, ಐಒಎಸ್ 16 ಆಪರೇಟಿಂಗ್ ಸಿಸ್ಟಮ್‌ನ ಹೈಲೈಟ್ ಕೂಡ ಇದೆ ಆಗಿದೆ. ಟೈಪ್ ಮಾಡುವಾಗ ಕಂಪನಗಳನ್ನು ಅನುಭವಿಸಲು ಈ ವೈಶಿಷ್ಟ್ಯವು ಸಹಾಯ ಮಾಡುತ್ತದೆ. ಈ ಹಿಂದೆ, ಇದು ಅಪ್ಲಿಕೇಶನ್‌ಗಳಲ್ಲಿ ಲಭ್ಯವಿತ್ತು ಅಥವಾ ಲಾಕ್ ಸ್ಕ್ರೀನ್‌ನಿಂದ ಫ್ಲ್ಯಾಷ್‌ಲೈಟ್‌ನಂತಹ ವೈಶಿಷ್ಟ್ಯಗಳನ್ನು ಸಕ್ರಿಯಗೊಳಿಸುತ್ತದೆ.

ಮತ್ತೇನು ವಿಶೇಷ?
ಸಫಾರಿಯಲ್ಲಿ ತಮ್ಮ ಸ್ನೇಹಿತರ ಜತೆಗೆ ಟ್ಯಾಬ್ ಗ್ರೂಪ್ಸ್ ಷೇರ್ ಮಾಡಲು ಐಒಎಸ್ 16 ಬಳಕೆದಾರರಿಗೆ ಅನುವು ಮಾಡಿಕೊಡಲಿದೆ. ಪ್ರತಿಯೊಬ್ಬರು ತಮ್ಮದೇ ಟ್ಯಾಬ್‌ಗಳನ್ನು ಆ್ಯಡ್ ಮಾಡಬಹುದಾಗಿದೆ. ಒಂದಾಗಿ ಕೆಲಸ ಮಾಡುತ್ತಿದ್ದಂತೆ ಟ್ಯಾಬ್ ಗ್ರೂಪ್‌ ಅಪ್‌ಡೇಟ್‌ನಲ್ಲಿ ನೋಡಬಹುದಾಗಿದೆ. ಹೋಮ್ ಆ್ಯಪ್ ಅನ್ನು ಮರುವಿನ್ಯಾಸ ಮಾಡಲಾಗಿದೆ. ವಿಡಿಯೋಗಳಿಂದ ಬಳಕೆದಾರರು ಟೆಕ್ಸ್ಟ್ ಕೂಡ ಕಾಪಿ ಮಾಡಿಕೊಳ್ಳಬಹುದಾಗಿದೆ. ಐಒಎಸ್ 16ಗೆ ಕಂಪನಿಯು ಲಾಕಿಂಗ್ ಮೋಡ್ ಕೂಡ ಪರಿಚಯಿಸುತ್ತಿದೆ.

ಯಾವ ಐಫೋನ್‌ಗೆ ಅಪ್‌ಡೇಟ್?
ಮೊನ್ನೆಯಷ್ಟೇ ಬಿಡುಗಡೆಯಾದ ಐಫೋನ್ 14 ಸಿರೀಸ್ ಫೋನ್‌ಗಳು ಈ ಹೊಸ ಐಒಎಸ್ 16 ಆಪರೇಟಿಂಗ್ ಸಿಸ್ಟಮ್‌ನೊಂದಿಗೆ ಬರಲಿವೆ. ಇದು ಖಚಿತ. ಇದರಲ್ಲೇನೂ ಅನುಮಾನವಿಲ್ಲ. ಹಾಗೆಯೇ, ಈ ಹೊಸ ಒಎಸ್ ಅನ್ನು ಬಳಕೆದಾರರು ತಮ್ಮ ಹಳೆಯ ಐಫೋನುಗಳಿಗೆ ಅಪ್‌ಡೇಟ್ ಮಾಡಿಕೊಳ್ಳಬಹುದಾಗಿದೆ.

ಐಫೋನ್ 8 ಸಿರೀಸ್, ಐಫೋನ್ ಎಕ್ಸ್, ಐಫೋನ್ ಎಕ್ಸ್ಆರ್, ಐಫೋನ್ ಎಕ್ಸ್ಎಸ್, ಐಫೋನ್ ಎಕ್ಸ್ಎಸ್ ಮ್ಯಾಕ್ಸ್, ಐಫೋನ್ 11, ಐಫೋನ್ 11 ಪ್ರೋ, ಐಫೋನ್ 11 ಪ್ರೋ ಮ್ಯಾಕ್ಸ್, ಐಫೋನ್ 12, ಐಫೋನ್ 12 ಮಿನಿ, ಐಫೋನ್ 12 ಪ್ರೋ, ಐಫೋನ್ 12 ಪ್ರೋ ಮ್ಯಾಕ್ಸ್ , ಐಫೋನ್ 13, ಐಫೋನ್ 13 ಮಿನಿ, ಐಫೋನ್ 13 ಪ್ರೋ, ಐಫೋನ್ 13 ಪ್ರೋ ಮ್ಯಾಕ್ಸ್, 2020ರ ಐಫೋನ್ ಎಸ್ಇ ಮತ್ತು 2022ರ ಐಫೋನ್ ಎಸ್‌ಇ ಸ್ಮಾರ್ಟ್‌ಗಳಿಗೆ ಈ ಹೊಸ ಐಒಎಸ್ 16 ಅಪ್‌ಡೇಟ್ ಮಾಡಬಹುದಾಗಿದೆ.

ಹೇಗೆ ಡೌನ್‌ಲೋಡ್ ಮಾಡಿಕೊಳ್ಳುವುದು?
ಆ್ಯಪಲ್ ಕಂಪನಿಯು ಬಿಡುಗಡೆ ಮಾಡಿರುವ ಈ ಐಒಎಸ್ 16 ಹೊಸ ಆಪರೇಟಿಂಗ್ ಸಿಸ್ಟಮ್ ಭಾರತೀಯ ಬಳಕೆದಾರರಿಗೂ ಲಭ್ಯವಿದೆ. ಈ ಅಪ್‌ಡೇಟ್ ಪರೀಕ್ಷಿಸಲು ನೀವು ನಿಮ್ಮ ಐಫೋನ್‌ನಲ್ಲಿರುವ ಸೆಟ್ಟಿಂಗ್ಸ್‌ಗೆ ಹೋಗಿ, ಜನರಲ್ ಮೇಲೆ ಟ್ಯಾಪ್ ಮಾಡಿ ಆಗ ಸಾಫ್ಟ್‌ವೇರ್ ಅಪ್‌ಡೇಟ್ ಕಾಣಿಸಿಕೊಳ್ಳುತ್ತದೆ. ಒಂದೊಮ್ಮೆ ನಿಮ್ಮ ಬಳಸುತ್ತಿರುವ ಐಫೋನ್ ಈ ಹೊಸ ಅಪ್‌ಡೇಟ್‌ಗೆ ಅರ್ಹವಾಗಿದ್ದರೆ, ಹೊಸ ಸಾಫ್ಟ್‌ವೇರ್ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಐಫೋನ್ 14 ಸಿರೀಸ್ ಲಾಂಚ್
ಬಹು ನಿರೀಕ್ಷೆಯ Apple iPhone 14 ಸರಣಿಯ ಮೊಬೈಲ್‌ಗಳನ್ನು ಸೆಪ್ಟೆಂಬರ್ 8ರಂದು ಲೋಕಾರ್ಪಣೆಗೊಳಿಸಲಾಗಿದೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಆ್ಯಪಲ್‌ ಕಂಪನಿ ಸಿಇಒ ಟಿಮ್‌ ಕುಕ್‌ ಅವರು ಆ್ಯಪಲ್‌ 14 ಸರಣಿಯ ಮೊಬೈಲ್‌ಗಳನ್ನು ಲೋಕಾರ್ಪಣೆ ಮಾಡಿದ್ದಾರೆ. ಭಾರತದ ಗ್ರಾಹಕರಿಗೆ ಐಫೋನ್‌ 14 (ಪ್ರೊ) ಬೆಲೆ 79,900 ರೂ. ಆಗಲಿದೆ. ಹಾಗೆಯೇ, ಐಫೋನ್‌ 14 ಪ್ಲಸ್‌ಗೆ (ಪ್ರೊ ಮ್ಯಾಕ್ಸ್‌) 89,900 ರೂ. ಆಗಲಿದೆ. ಐಫೋನ್‌ 14 ಸೆಪ್ಟೆಂಬರ್‌ 16ರಿಂದ ಭಾರತದ ಮಾರುಕಟ್ಟೆಯಲ್ಲಿ ಲಭ್ಯವಿದ್ದರೆ, ಐಫೋನ್‌ 14 ಪ್ಲಸ್‌ ಅಕ್ಟೋಬರ್‌ 7ರಿಂದ ಲಭ್ಯವಾಗಲಿದೆ.

ಕ್ಯಾಮೆರಾದಲ್ಲಿ ಆ್ಯಪಲ್‌ ಕಂಪನಿಯು ಈ ಬಾರಿ ಮಹತ್ವದ ಬದಲಾವಣೆ ಮಾಡಿದೆ. ಆ್ಯಪಲ್‌ 14 ಪ್ರೊ ಹಾಗೂ ಪ್ರೊ ಮ್ಯಾಕ್ಸ್‌ ಎರಡೂ 48 ಮೆಗಾ ಪಿಕ್ಸೆಲ್‌ ಪ್ರೈಮರಿ ಕ್ಯಾಮೆರಾ ಹೊಂದಿವೆ. ಹಾಗೆಯೇ, ಇವುಗಳ ಸೆನ್ಸರ್ ಆ್ಯಪಲ್‌ 13 ಪ್ರೊಗಿಂತ ಶೇ.65ರಷ್ಟು ದೊಡ್ಡದಾಗಿವೆ. ಸ್ಯಾಟಲೈಟ್‌ ಕನೆಕ್ಟಿವಿಟಿ (ಇಂಟರ್‌ನೆಟ್‌ ಇಲ್ಲದೆ ಮಾಹಿತಿ ರವಾನಿಸುವುದು ಹಾಗೂ ಸ್ವೀಕರಿಸುವುದು), ಐಫೋನ್‌ 14 ಪ್ರೊ 6.1 ಇಂಚು ಹಾಗೂ ಪ್ರೊ ಮ್ಯಾಕ್ಸ್‌ 6.7 ಇಂಚಿನ ಡಿಸ್‌ಪ್ಲೇ ಹೊಂದಿವೆ.

ಇದನ್ನೂ ಓದಿ | iPhone 13 | ಐಫೋನ್ 13 ಮತ್ತು 12 ಬೆಲೆ ಕಡಿತ, ಎಷ್ಟು ಅಗ್ಗವಾಗಿವೆ? ವಾರದಲ್ಲಿ ಮತ್ತಷ್ಟು ಆಫರ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Uttar Pradesh: ಉತ್ತರ ಪ್ರದೇಶದಲ್ಲಿ ಲೋಕಸಭೆ ಸಮರ; ನೀವು ತಿಳಿಯಲೇಬೇಕಾದ 5 ಕುತೂಹಲಕರ ಅಂಶಗಳು ಇಲ್ಲಿವೆ

Uttar Pradesh: 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಉತ್ತರ ಪ್ರದೇಶದಲ್ಲಿ 71 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. 2019ರಲ್ಲಿ 62 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಇದು ಕೇಂದ್ರದಲ್ಲಿ ಬಿಜೆಪಿಯು ಅಧಿಕಾರಕ್ಕೆ ಬರಲು ಕಾರಣವಾಗಿತ್ತು. ಆದರೆ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಜಕೀಯ ಸ್ಥಿತಿಗತಿ ಹೇಗಿದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Uttar Pradesh
Koo

ಲಖನೌ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಕ್ತಾಯಗೊಂಡಿದೆ. ಅದರಲ್ಲೂ, ದೇಶದ ಗಮನವೀಗ ಉತ್ತರ ಪ್ರದೇಶದ (Uttar Pradesh) ರಾಜಕೀಯ ಸ್ಥಿತಿಗತಿಗಳ ಮೇಲೆ ನಿಂತಿದೆ. ಮೊದಲಿನಿಂದಲೂ, ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುವ ಪಕ್ಷವು ಕೇಂದ್ರದಲ್ಲಿ ಅಧಿಕಾರ ಗಳಿಸುತ್ತದೆ ಎಂಬ ಮಾತಿದೆ. ಅದು ಬಹುತೇಕ ಚುನಾವಣೆಗಳಲ್ಲಿ ನಿಜವೂ ಆಗಿದೆ. ಉತ್ತರ ಪ್ರದೇಶದಲ್ಲಿ 80 ಲೋಕಸಭೆ ಕ್ಷೇತ್ರಗಳು ಇರುವುದೇ ಇದಕ್ಕೆ ಕಾರಣವಾಗಿದ್ದು, ಈ ಬಾರಿಯೂ ಕದನ ಕುತೂಹಲ ಮೂಡಿದೆ. ಹಾಗಾದರೆ, ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆ ಸಮರ ಹೇಗೆ ನಡೆಯುತ್ತಿದೆ? ಯಾವ ಪಕ್ಷಕ್ಕೆ ಗೆಲುವಾಗಬಹುದು? ಯಾವ ಪಕ್ಷಗಳ ರಾಜಕೀಯ ತಂತ್ರಗಾರಿಕೆ ಹೇಗಿದೆ ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ರಾಮಮಂದಿರ ವಿಷಯ ಪ್ರಧಾನ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಿರುವುದು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಪ್ರಮುಖ ಅಸ್ತ್ರವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್‌ ಅವರು ಅಬ್ಬರದ ಪ್ರಚಾರದ ವೇಳೆ ರಾಮಮಂದಿರ ನಿರ್ಮಾಣ, ಅದು ಹೇಗೆ ಉತ್ತರ ಪ್ರದೇಶದ ಅಸ್ಮಿತೆ ಎಂಬುದರ ಕುರಿತು ಹಲವು ಬಾರಿ ಪ್ರಸ್ತಾಪಿಸಿದ್ದಾರೆ. ಇದರಿಂದಾಗಿ, ಪ್ರತಿಪಕ್ಷಗಳೂ ರಾಮನ ಜಪ ಮಾಡುವಂತಾಗಿದೆ. ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಕೆಗೆ ಮೊದಲು ನರೇಂದ್ರ ಮೋದಿ ಅವರು ರಾಮಮಂದಿರಕ್ಕೆ ಭೇಟಿ ನೀಡಿರುವುದೂ ಪ್ರಮುಖ ಅಂಶವಾಗಿದೆ. ಅಷ್ಟರಮಟ್ಟಿಗೆ, ಉತ್ತರ ಪ್ರದೇಶದಲ್ಲಿ ರಾಮಮಂದಿರವು ಲೋಕಸಭೆ ಚುನಾವಣೆಯ ಪ್ರಬಲ ವಿಷಯವಾಗಿದೆ.

Ram Mandir

ಕಾಂಗ್ರೆಸ್‌-ಎಸ್‌ಪಿ ಮೈತ್ರಿಯ ರಣತಂತ್ರವೇನು?

ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳೂ ಆದ ಬಿಜೆಪಿ ಹಾಗೂ ಸಮಾಜವಾದಿ ಪಕ್ಷವು ಉತ್ತರ ಪ್ರದೇಶದಲ್ಲಿ ಮೈತ್ರಿ ಮಾಡಿಕೊಂಡಿದ್ದು, ಸೀಟುಗಳನ್ನು ಹಂಚಿಕೊಂಡು ಚುನಾವಣೆ ಕಣಕ್ಕಿಳಿದಿವೆ. 2019ರಲ್ಲಿ ಬಿಎಸ್‌ಪಿ ಜತೆ ಮೈತ್ರಿ ಮಾಡಿಕೊಂಡು, ಎಡವಿದ ಸಮಾಜವಾದಿ ಪಕ್ಷವು ಈ ಬಾರಿ ಹೊಸ ಹುರುಪಿನೊಂದಿಗೆ ಕಣಕ್ಕಿಳಿದಿದೆ. 2022ರ ವಿಧಾನಸಭೆ ಚುನಾವಣೆಯಲ್ಲಿ ಶೇ.3ರಷ್ಟು ಮತ ಪಡೆದರೂ ಕಾಂಗ್ರೆಸ್‌ ಉತ್ಸಾಹದಿಂದ ಪ್ರಚಾರ ಕೈಗೊಳ್ಳುತ್ತಿದೆ. ಉತ್ತರ ಪ್ರದೇಶದಲ್ಲಿ ಶೇ.20ರಷ್ಟು ಮುಸ್ಲಿಮರ ಮತಗಳಿದ್ದು, ಇವುಗಳನ್ನು ಪಡೆಯಲು ಸಮಾಜವಾದಿ ಪಕ್ಷವು ರಣತಂತ್ರ ರೂಪಿಸುತ್ತಿದೆ. ಕಾಂಗ್ರೆಸ್‌ ಹಾಗೂ ಎಸ್‌ಪಿ ಮೈತ್ರಿಕೂಟದ ಅಭ್ಯರ್ಥಿಗಳು, ನಾಯಕರು ಜತೆಗೂಡಿ ದಲಿತರು, ಮುಸ್ಲಿಮರು ಹಾಗೂ ಹಿಂದುಳಿದವರ ಮತಗಳನ್ನು ಸೆಳೆಯಲು ಕಸರತ್ತು ನಡೆಸುತ್ತಿದ್ದಾರೆ. ಇದು ಚುನಾವಣೆಯಲ್ಲಿ ಹೇಗೆ ಫಲ ನೀಡಲಿದೆ ಎಂಬುದು ಫಲಿತಾಂಶದ ಬಳಿಕವೇ ಗೊತ್ತಾಗಲಿದೆ.

ಮಾಯಾವತಿ ಮಾಡುವರೇ ಕಮಾಲ್?‌

ಬಹುಜನ ಸಮಾಜ ಪಕ್ಷದ ಮಾಯಾವತಿ ಅವರು ಒಂದು ಕಾಲದಲ್ಲಿ ಇಡೀ ರಾಜ್ಯಾದ್ಯಂತ ಪ್ರಾಬಲ್ಯ ಹೊಂದಿದ್ದರು. ಆದರೀಗ, ಅವರ ವರ್ಚಸ್ಸು, ಪಕ್ಷದ ಹಿಡಿತ ಸಡಿಲವಾಗಿದೆ. 2014ರ ಲೋಕಸಭೆ ಚುನಾವಣೆಯಲ್ಲಿ ಶೇ.19.70ರಷ್ಟು ಮತಗಳನ್ನು ಪಡೆದರೂ ಬಿಎಸ್‌ಪಿ ಒಂದೇ ಒಂದು ಸೀಟು ಗೆದ್ದಿರಲಿಲ್ಲ. ಇನ್ನು, 2019ರ ಲೋಕಸಭೆ ಚುನಾವಣೆಯಲ್ಲಿ ಎಸ್‌ಪಿ ಜತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದರೂ 10 ಸೀಟುಗಳು ಮಾತ್ರ ಲಭಿಸಿದ್ದವು. ಇನ್ನು 2022ರ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಮತ ಪ್ರಮಾಣವು ಶೇ.12.8ಕ್ಕೆ ಕುಸಿದಿದೆ. ಮುಸ್ಲಿಮರ ಮತಗಳು ಎಂದೋ ಬಿಎಸ್‌ಪಿಯಿಂದ ದೂರಾಗಿವೆ. ಈಗೇನಿದ್ದರೂ ದಲಿತರು, ಹಿಂದುಳಿದವರ ಮತಗಳೇ ಬಿಎಸ್‌ಪಿಯ ಆಧಾರವಾಗಿವೆ. ಇಷ್ಟಾದರೂ, ಟಕ್ಕರ್‌ ಕೊಡಲು ಮಾಯಾವತಿ ರೆಡಿಯಾಗಿದ್ದಾರೆ.

Mayavati

ಯೋಗಿ ಎಂಬ ಬಲಿಷ್ಠ ನಾಯಕ

ಫೈರ್‌ಬ್ರ್ಯಾಂಡ್‌ ನಾಯಕ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ದೇಶದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ನಂತರ ಬಿಜೆಪಿಯಲ್ಲಿ ಹೆಚ್ಚು ವರ್ಚಸ್ಸು ಇರುವ ನಾಯಕರಾಗಿದ್ದಾರೆ. ಹಾಗಾಗಿಯೇ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ 109 ರ‍್ಯಾಲಿ ಸೇರಿ ಬಿಹಾರ, ಮಧ್ಯಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳ, ಉತ್ತರಾಖಂಡ ಹಾಗೂ ಜಮ್ಮು-ಕಾಶ್ಮೀರದಲ್ಲಿ ಒಟ್ಟು 135 ಚುನಾವಣೆ ಸಮಾವೇಶಗಳನ್ನು ಕೈಗೊಂಡಿದ್ದಾರೆ. ಅದರಲ್ಲೂ, 2017ರಿಂದಲೂ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿರುವ ಯೋಗಿ ಆದಿತ್ಯನಾಥ್‌ ಅವರು ರಾಜ್ಯದಲ್ಲಿ ಅಪರಾಧವನ್ನು ನಿಯಂತ್ರಿಸುವ ಜತೆಗೆ ಅಭಿವೃದ್ಧಿಗೂ ಆದ್ಯತೆ ನೀಡಿ ವರ್ಚಸ್ವಿ ನಾಯಕ ಎನಿಸಿದ್ದಾರೆ. ರಾಜ್ಯದಲ್ಲಿ ಇವರ ನಾಯಕತ್ವವೂ ಬಿಜೆಪಿಗೆ ವರದಾನವಾಗಿದೆ.

Yogi Adityanath

ಜಾತಿ ರಾಜಕಾರಣದ ಸಮೀಕರಣ

ಉತ್ತರ ಪ್ರದೇಶದಲ್ಲಿ ದಶಕಗಳಿಂದಲೂ ಚುನಾವಣೆಗಳಲ್ಲಿ ಜಾತಿವಾರು ಮತಗಳ ಸಮೀಕರಣವೇ ನಿರ್ಣಾಯಕವಾಗಿದೆ. 1990ರಿಂದ 2012ರವರೆಗೆ ಉತ್ತರ ಪ್ರದೇಶದಲ್ಲಿ ದಲಿತರು ಹಾಗೂ ಒಬಿಸಿ ಮತಗಳು ಬಿಜೆಪಿಯಿಂದ ದೂರವೇ ಇದ್ದವು. ಆದರೆ, 2014ರಿಂದ ರಾಜ್ಯದಲ್ಲಿ ಜಾಟವರ ಹೊರತಾದ ದಲಿತರು, ಯಾದವರ ಹೊರತಾದ ಒಬಿಸಿಯವರು ಬಿಜೆಪಿಯ ಹಿಂದುತ್ವ ರಾಜಕಾರಣಕ್ಕೆ ಬಲ ತುಂಬುತ್ತಿದ್ದಾರೆ. ಮೇಲ್ವರ್ಗದವರ ಮತಗಳು ಬಿಜೆಪಿಗೆ ಸಲೀಸಾಗಿ ಲಭಿಸಲಿವೆ. ಆದರೆ, ಜಾತಿ ಗಣತಿ, ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಾಯಿಸುತ್ತದೆ, ಮೀಸಲಾತಿಯನ್ನು ಕಿತ್ತೊಗೆಯುತ್ತದೆ ಎಂದು ಪ್ರತಿಪಕ್ಷಗಳು ಅಬ್ಬರದ ಪ್ರಚಾರ ಮಾಡುತ್ತಿದ್ದು, ಈ ಅಂಶಗಳು ಯಾವ ರೀತಿಯ ಪರಿಣಾಮ ಬೀರಲಿವೆ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: Narendra Modi: ನೆಹರು-ಗಾಂಧಿ ಕುಟುಂಬಸ್ಥರಿಂದ ಸಂವಿಧಾನಕ್ಕೆ ಧಕ್ಕೆ; ಪ್ರಧಾನಿ ಮೋದಿ ವಾಗ್ದಾಳಿ

Continue Reading

ಆರೋಗ್ಯ

Most Costly Medicine: ಒಂದೇ ಒಂದು ಡೋಸ್ ಗೆ 17 ಕೋಟಿ ರೂ! ಈ ಔಷಧ ಏಕೆ ಇಷ್ಟೊಂದು ದುಬಾರಿ?

ಒಂದೂವರೆ ವರ್ಷದ ಬಾಲಕ ಸೊಂಟದ ಕೆಳಗಿನ ದೈಹಿಕ ಬಲವನ್ನು ಕಳೆದುಕೊಂಡಿದ್ದ. ಆತನ ಸಾಮಾನ್ಯ ಜೀವನ ನಡೆಸುವಂತೆ ಸಾಧ್ಯವಾಗಿಸಲು ಆತನಿಗೆ ಒಂದು ಚುಚ್ಚು ಮದ್ದು ನೀಡಲೇ ಬೇಕಿತ್ತು. ಇದರ ಮೌಲ್ಯ ಬರೋಬ್ಬರಿ 17.5 ಕೋಟಿ ರೂಪಾಯಿ. ತಂದೆ ತಾಯಿ ತಮ್ಮಿಂದ ಇದು ಸಾಧ್ಯವಾಗದು (Most costly medicine) ಎಂದು ಕೈಚೆಲ್ಲಿದ್ದರು. ಆದರೂ ಕೊನೆಯ ಪ್ರಯತ್ನವೆಂಬಂತೆ ಸಾರ್ವಜನಿಕರ ನೆರವು ಕೇಳಲು ಮುಂದಾಗಿ ಅದರಲ್ಲಿ ಯಶಸ್ವಿಯಾಗಿದ್ದಾರೆ.

VISTARANEWS.COM


on

By

Most costly medicine
Koo

ಜೈಪುರ: ಜನಪ್ರಿಯ ನಟ (actor), ಭಾರತ ತಂಡದ ಕ್ರಿಕೆಟಿಗ (cricketer), ವ್ಯಾಪಾರಿಗಳು (Vendor), ತರಕಾರಿ ಮಾರಾಟಗಾರರು ಮತ್ತು ಸಾಮಾನ್ಯ ಜನರು ಒಗ್ಗಟ್ಟಾಗಿ 22 ತಿಂಗಳ ಮಗುವೊಂದರ ಜೀವ ಉಳಿಸಲು ದುಬಾರಿ ಔಷಧ ಖರೀದಿಗಾಗಿ (Most costly medicine) ಹೊರಡಿರುವ ಹೃದಯಸ್ಪರ್ಶಿ ಕಥೆ ರಾಜಸ್ಥಾನದ (Rajasthan) ಜೈಪುರದಲ್ಲಿ (jaipur) ನಡೆದಿದೆ. ಈ ಔಷಧದ ಹಿನ್ನೆಲೆ ಕುತೂಹಲಕರವಾಗಿದೆ.

ಒಂದೂವರೆ ವರ್ಷದ ಬಾಲಕ ಸೊಂಟದ ಕೆಳಗಿನ ದೈಹಿಕ ಬಲವನ್ನು ಕಳೆದುಕೊಂಡಿದ್ದ. ಆತನ ಸಾಮಾನ್ಯ ಜೀವನ ನಡೆಸುವಂತೆ ಸಾಧ್ಯವಾಗಿಸಲು ಆತನಿಗೆ ಒಂದು ಚುಚ್ಚು ಮದ್ದು ನೀಡಲೇ ಬೇಕಿತ್ತು. ಇದರ ಮೌಲ್ಯ ಬರೋಬ್ಬರಿ 17.5 ಕೋಟಿ ರೂಪಾಯಿ. ತಂದೆ ತಾಯಿ ತಮ್ಮಿಂದ ಇದು ಸಾಧ್ಯವಾಗದು ಎಂದು ಕೈಚೆಲ್ಲಿದ್ದರು. ಆದರೂ ಕೊನೆಯ ಪ್ರಯತ್ನವೆಂಬಂತೆ ಸಾರ್ವಜನಿಕರ ನೆರವು ಕೇಳಲು ಮುಂದಾದರು.

ರಾಜಸ್ಥಾನ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನರೇಶ್ ಶರ್ಮಾ ಅವರ ಪುತ್ರ ಹೃದಯಾಂಶ್ ಶರ್ಮಾ ಬೆನ್ನುಮೂಳೆಯ ಸ್ನಾಯು ಕ್ಷೀಣತೆ ಎಂಬ ಅಪರೂಪದ ಆನುವಂಶಿಕ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇದನ್ನು ವಿಶ್ವದ ಅತ್ಯಂತ ದುಬಾರಿ ಔಷಧಿಗಳಲ್ಲಿ ಒಂದಾದ ಝೋಲ್ಗೆನ್ಸ್ಮಾ (Zolgensma) ಎಂಬ ಜೀನ್ ಥೆರಪಿ ಇಂಜೆಕ್ಷನ್‌ನೊಂದಿಗಿನ ಚಿಕಿತ್ಸೆಯಿಂದ ಮಾತ್ರ ಗುಣಪಡಿಸಬಹುದಾಗಿದೆ. ಇದರ ಬೆಲೆ 17.5 ಕೋಟಿ ರೂ.


ಚುಚ್ಚು ಮದ್ದು ನೀಡಲು ಗಡುವು

ಬಾಲಕ 20 ತಿಂಗಳ ಮಗುವಾಗಿದ್ದಾಗ ಫೆಬ್ರವರಿಯಲ್ಲಿ ರಾಜಸ್ಥಾನ ಪೊಲೀಸರು ಕಟ್ಟುನಿಟ್ಟಾದ ಗಡುವನ್ನು ಹೊಂದಿದ್ದ ಕ್ರೌಡ್‌ಫಂಡಿಂಗ್ ಅಭಿಯಾನವನ್ನು ಪ್ರಾರಂಭಿಸಿದರು. ಏಕೆಂದರೆ ಮಗುವಿಗೆ 2 ವರ್ಷ ವಯಸ್ಸಿನವರೆಗೆ ಮಾತ್ರ ಈ ಚುಚ್ಚುಮದ್ದನ್ನು ನೀಡಬಹುದು.

ನಟ, ಕ್ರಿಕೆಟಿಗನ ಬೆಂಬಲ

ಇವರ ಈ ಅಭಿಯಾನಕ್ಕೆ ಕ್ರಿಕೆಟಿಗ ದೀಪಕ್ ಚಾಹರ್ ಮತ್ತು ನಟ ಸೋನು ಸೂದ್ ಅವರೂ ಬೆಂಬಲ ನೀಡಿದರು. ಅವರು ಸಾಮಾಜಿಕ ಮಾಧ್ಯಮದಲ್ಲಿ ಮನವಿಗಳನ್ನು ಪೋಸ್ಟ್ ಮಾಡಿದರು ಮತ್ತು ಜೈಪುರದಾದ್ಯಂತ ಜನರಿಂದ ಹಣವನ್ನು ಸಂಗ್ರಹಿಸುವ ಚಾಲನೆ ನೀಡಲಾಯಿತು.

ಹಣ್ಣು, ತರಕಾರಿ ಮಾರಾಟಗಾರರು, ವ್ಯಾಪಾರಿಗಳು ಸೇರಿದಂತೆ ಎಲ್ಲಾ ವರ್ಗಗಳ ಜನರಿಂದ ಹಣದ ಸಹಾಯ ಪಡೆಯಲಾಯಿತು. ವಿವಿಧ ಎನ್‌ಜಿಒಗಳು ಮತ್ತು ಸಾಮಾಜಿಕ ಸಂಸ್ಥೆಗಳು ಪ್ರಚಾರಕ್ಕಾಗಿ ಹಣವನ್ನು ಸಂಗ್ರಹಿಸಲು ಸಹಾಯ ಮಾಡಿದವು.


ಮೂರು ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹ

ರಾಜಸ್ಥಾನದಲ್ಲಿ ಈ ಪ್ರಮಾಣದಲ್ಲಿ ಕ್ರೌಡ್‌ಫಂಡಿಂಗ್ ನಡೆಯುತ್ತಿರುವುದು ಇದೇ ಮೊದಲು. ಮೂರು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ 9 ಕೋಟಿ ರೂ. ಸಂಗ್ರಹವಾಗಿದ್ದು, ಜೈಪುರದ ಜೆಕೆ ಲೋನ್ ಆಸ್ಪತ್ರೆಯಲ್ಲಿ ಹೃದಯಾಂಶ್‌ಗೆ ಚುಚ್ಚುಮದ್ದನ್ನು ನೀಡಲಾಯಿತು. ಉಳಿದ ಮೊತ್ತವನ್ನು ಮೂರು ಕಂತುಗಳಲ್ಲಿ ಒಂದು ವರ್ಷದೊಳಗೆ ಆಸ್ಪತ್ರೆಗೆ ಜಮಾ ಮಾಡಬೇಕಿದೆ.

ಬೆನ್ನುಮೂಳೆಯ ಸ್ನಾಯು ಕ್ಷೀಣತೆ ಎಂದರೇನು?

ಬೆನ್ನುಮೂಳೆಯ ಸ್ನಾಯುವಿನ ಕ್ಷೀಣತೆ ಅಥವಾ ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ (SMA) ಎಂಬುದು ಒಂದು ಆನುವಂಶಿಕ ಅಸ್ವಸ್ಥತೆಯಾಗಿದೆ. ಇದರಲ್ಲಿ ಬೆನ್ನುಹುರಿ ಮತ್ತು ಮೆದುಳಿನ ಕಾಂಡದಲ್ಲಿನ ನರ ಕೋಶಗಳ ನಷ್ಟದಿಂದಾಗಿ ವ್ಯಕ್ತಿಯು ಸ್ನಾಯುಗಳ ಚಲನೆಯನ್ನು ನಿಯಂತ್ರಿಸಲು ಸಾಧ್ಯವಾಗುವುದಿಲ್ಲ. ಇದು ಸ್ನಾಯು ದೌರ್ಬಲ್ಯಕ್ಕೆ ಕಾರಣವಾಗುತ್ತದೆ ಮತ್ತು ಕೈಕಾಲುಗಳ ಚಲನೆ ಮತ್ತು ಉಸಿರಾಟದ ಮೇಲೆ ಪರಿಣಾಮ ಬೀರುತ್ತದೆ.

ಬೆನ್ನುಮೂಳೆಯ ಸ್ನಾಯುವಿನ ಕ್ಷೀಣತೆಯು ಸರ್ವೈವಲ್ ಮೋಟಾರ್ ನ್ಯೂರಾನ್‌ಗಳು 1 ಎಂಬ ಜೀನ್‌ನ ನಷ್ಟದಿಂದ ಉಂಟಾಗುತ್ತದೆ. ಇದು ಪ್ರೋಟೀನ್ ತಯಾರಿಸಲು ಅಗತ್ಯವಾದ ಮಾಹಿತಿಯನ್ನು ಹೊಂದಿರುತ್ತದೆ. ಇದು ದೇಹದ ಪ್ರತಿಯೊಂದು ಜೀವಕೋಶಕ್ಕೂ ಅಗತ್ಯವಾಗಿರುತ್ತದೆ. ಮಾನವ ಸಾಮಾನ್ಯವಾಗಿ ಹೆಚ್ಚುವರಿ ಜೀನ್ (SMN2) ಅನ್ನು ಹೊಂದಿರುತ್ತಾನೆ. ಆದರೆ ಅದು SMN1 ನಷ್ಟವನ್ನು ಭಾಗಶಃ ಸರಿದೂಗಿಸುತ್ತದೆ.

SMN1 ಗೆ ಹೋಲಿಸಿದರೆ SMN2 ಕೇವಲ ಒಂದು ಸಣ್ಣ ಪ್ರಮಾಣದ ಅಗತ್ಯ ಪ್ರೋಟೀನ್ ಅನ್ನು ಉತ್ಪಾದಿಸುತ್ತದೆ ಮತ್ತು ದೇಹದಲ್ಲಿನ ಅನೇಕ ಜೀವಕೋಶಗಳು ಮತ್ತು ಅಂಗಗಳು ಈ ಕಡಿಮೆ ಪೂರೈಕೆಯೊಂದಿಗೆ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ತೋರುತ್ತದೆಯಾದರೂ ಮೆದುಳಿನಿಂದ ಸ್ನಾಯುಗಳಿಗೆ ಸಂದೇಶಗಳನ್ನು ಕಳುಹಿಸುವ ಜವಾಬ್ದಾರಿಯುತ ಮೋಟಾರ್ ನ್ಯೂರಾನ್ ಗಳು ಕಡಿಮೆ ಮಟ್ಟದ SMNಗೆ ಸ್ಪಂದಿಸುವುದಿಲ್ಲ. ಹೀಗಾಗಿ ಇದು ಸ್ನಾಯು ನಿಯಂತ್ರಣವನ್ನು ಕಳೆದುಕೊಳ್ಳುವಂತೆ ಮಾಡುತ್ತದೆ.

17 ಕೋಟಿ ರೂ. ನ ದುಬಾರಿ ಔಷಧ

ಐಎಎನ್ ಎಸ್ ವರದಿ ಮಾಡಿದಂತೆ 17 ಕೋಟಿ ರೂ. ವೆಚ್ಚದ ವಿಶ್ವದ ಅತ್ಯಂತ ದುಬಾರಿ ಚುಚ್ಚುಮದ್ದನ್ನು ಬೆನ್ನುಮೂಳೆಯ ಸ್ನಾಯು ಕ್ಷೀಣತೆಯಿಂದ ಬಳಲುತ್ತಿರುವ ಎರಡು ವರ್ಷದೊಳಗಿನ ಮಕ್ಕಳಿಗೆ ನೀಡಬೇಕು. ಈ ಔಷಧವನ್ನು ಕ್ರೌಡ್‌ಫಂಡಿಂಗ್ ಸಹಾಯದಿಂದ ಝೋಲ್ಗೆನ್ಸ್ಮಾ ಎಂಬ ಈ ಇಂಜೆಕ್ಷನ್ ಅನ್ನು ಯುಎಸ್ ನಿಂದ ಜೈಪುರಕ್ಕೆ ತರಲಾಯಿತು. ಈ ಔಷಧ ಪಡೆಯಲು ಹಲವಾರು ಭಾರತೀಯ ಕುಟುಂಬಗಳು ಪರದಾಡುತ್ತಿವೆ.

ಭಾರತದಲ್ಲಿ ಬೆನ್ನುಮೂಳೆಯ ಸ್ನಾಯು ಕ್ಷೀಣತೆ

ಬೆನ್ನುಮೂಳೆಯ ಸ್ನಾಯು ಕ್ಷೀಣತೆ ಕಾಯಿಲೆ ಹೊಂದಿರುವ ಭಾರತೀಯರ ಸಂಖ್ಯೆಯ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯಿಲ್ಲದಿದ್ದರೂ, ಅಸ್ತಿತ್ವದಲ್ಲಿರುವ ಪ್ರಕಾರ 10,000 ಜೀವಂತವಾಗಿ ಜನಿಸಿದ ಶಿಶುಗಳಲ್ಲಿ 1ರಲ್ಲಿ ಬೆನ್ನುಮೂಳೆಯ ಸ್ನಾಯು ಕ್ಷೀಣತೆ ಕಾಣಿಸಿಕೊಳ್ಳುತ್ತಿದೆ. ಒಂದು ಅಧ್ಯಯನದ ಪ್ರಕಾರ 38 ಭಾರತೀಯರಲ್ಲಿ ಒಬ್ಬರು ಬೆನ್ನುಮೂಳೆಯ ಸ್ನಾಯು ಕ್ಷೀಣತೆಗೆ ಒಳಗಾಗುತ್ತಾರೆ.

ಅತ್ಯಂತ ದುಬಾರಿ ಔಷಧ ಇದು

ಅಪರೂಪದ ಆನುವಂಶಿಕ ಕಾಯಿಲೆಯಾದ ಬೆನ್ನುಮೂಳೆಯ ಸ್ನಾಯು ಕ್ಷೀಣತೆಯೊಂದಿಗೆ ಜನಿಸಿದ ಶಿಶುಗಳು ಚಿಕಿತ್ಸೆಯಿಲ್ಲದೆ ಎರಡು ವರ್ಷ ಕೂಡ ಪೂರ್ಣಗೊಳಿಸುವುದಿಲ್ಲ. 1990ರ ದಶಕದವರೆಗೂ ಇದಕ್ಕೆ ಯಾವುದೇ ಚಿಕಿತ್ಸೆಗಳು ಇರಲಿಲ್ಲ. ಇದನ್ನು ತಡೆಗಟ್ಟಲು ಇತ್ತೀಚೆಗೆ ಪರವಾನಗಿ ಪಡೆದ ಎರಡು ಔಷಧಿಗಳಿವೆ. ಇದರಲ್ಲಿ ಒಂದು Zolgensma, ಯುಕೆಯಲ್ಲಿ ಶಿಶುಗಳಿಗೆ ಚಿಕಿತ್ಸೆ ನೀಡಲು ಇದು ಇತ್ತೀಚೆಗೆ ಅಷ್ಟೇ ಲಭ್ಯವಾಗುತ್ತಿದೆ. ಇದನ್ನು “ವಿಶ್ವದ ಅತ್ಯಂತ ದುಬಾರಿ ಔಷಧ” ಎಂದು ಕರೆಯಲಾಗುತ್ತದೆ. ಯಾಕೆಂದರೆ ಇದರ ಒಂದು ಡೋಸ್ ಗೆ ಸುಮಾರು 1.79 ಮಿಲಿಯನ್ ಡಾಲರ್ ಅಂದರೆ ಭಾರತೀಯ ಕರೆನ್ಸ್ ಮೌಲ್ಯ 17 ಕೋಟಿ ರೂ. ಪಾವತಿಸಬೇಕು.

ಇದನ್ನೂ ಓದಿ: Covaxin: ಕೋವಾಕ್ಸಿನ್‌ ಲಸಿಕೆ ಪಡೆದವರಿಗೂ ಬಿಗ್‌ ಶಾಕ್‌! ಆಘಾತಕಾರಿ ವರದಿ ಔಟ್‌

ಈ ಕಾಯಿಲೆಗೆ ಲಭ್ಯವಿರುವ ಇನ್ನೊಂದು ಔಷಧ ಸ್ಪಿನ್ರಾಜಾ (ಜೆನೆರಿಕ್ ಹೆಸರು ನುಸಿನೆರ್ಸೆನ್) ಇದು SMN2 ಜೀನ್ ದೇಹಕ್ಕೆ ಅಗತ್ಯವಿರುವ ಪ್ರೋಟೀನ್ ಅನ್ನು ಒದಗಿಸಲು ಸಹಾಯ ಮಾಡುವ ಡಿಎನ್‌ಎಯ ಒಂದು ಸಣ್ಣ ಭಾಗವಾಗಿದೆ. ಇದನ್ನು ನೇರವಾಗಿ ಬೆನ್ನುಮೂಳೆಯ ನಿರ್ಧಿಷ್ಟ ಭಾಗಕ್ಕೆ ಚುಚ್ಚಬೇಕಾಗುತ್ತದೆ. ಇದನ್ನು ನಿಯಮಿತವಾಗಿ ವರ್ಷದಲ್ಲಿ ಆರು ಬಾರಿ ಮಾಡಬೇಕು. ಚಿಕಿತ್ಸೆಯ ಮೊದಲ ವರ್ಷದಲ್ಲಿ ಆರು ಚುಚ್ಚುಮದ್ದುಗಳು ಪ್ರತಿ ಇಂಜೆಕ್ಷನ್‌ಗೆ 75,000 ಡಾಲರ್ ಪಾವತಿಸಬೇಕಾಗುತ್ತದೆ.

2021 ರಿಂದ ಲಭ್ಯವಿರುವ Zolgensma ಮಾನವನ SMN1 ಜೀನ್ ನ ನಕಲು ಮಾಡಲು ಸಹಾಯ ಮಾಡುತ್ತದೆ. SMN1 ಜೀನ್ ಅನ್ನು ರಕ್ತಪ್ರವಾಹಕ್ಕೆ ಚುಚ್ಚಿದಾಗ ಇದು ವ್ಯಕ್ತಿಗೆ ಅಗತ್ಯವಿರುವ ಹೆಚ್ಚಿನ ಪ್ರೋಟೀನ್‌ಗಳನ್ನು ಉತ್ಪಾದಿಸುತ್ತದೆ. ನಿರ್ವಹಣೆಗೆ ಸುಲಭ ಮತ್ತು ಕಡಿಮೆ ಅಡ್ಡ ಪರಿಣಾಮ ಉಂಟು ಮಾಡುವ Zolgensmaನ ಕೇವಲ ಒಂದು ಡೋಸ್ ಸಾಕಾಗುತ್ತದೆ.

ಭಾರತಕ್ಕೆ ಈ ಔಷಧ ತರಿಸಲು ಯಾವುದೇ ತೆರಿಗೆ ಪಾವತಿಸಬೇಕಿಲ್ಲ. ಆದರೆ ತೆರಿಗೆ ಇಲ್ಲದೇ ಇಲ್ಲಿ ಈ ಔಷಧೀಯ ದರ ಸುಮಾರು 17 ಕೋಟಿ ರೂ. ಆಗುತ್ತದೆ!

ನೊವಾರ್ಟಿಸ್ ವೆಬ್‌ಸೈಟ್‌ನ ಪ್ರಕಾರ, ಈ ಔಷಧವನ್ನು 45 ದೇಶಗಳಲ್ಲಿ ಅನುಮೋದಿಸಲಾಗಿದೆ. 2 500 ಕ್ಕೂ ಹೆಚ್ಚು ರೋಗಿಗಳು ಜಾಗತಿಕವಾಗಿ ಇದರ ಚಿಕಿತ್ಸೆ ಪಡೆಯುತ್ತಾರೆ. ಕಂಪೆನಿಯು 36 ದೇಶಗಳಲ್ಲಿ ಸುಮಾರು 300 ಮಕ್ಕಳಿಗೆ ಇದರ ಥೆರಪಿಯನ್ನು ಉಚಿತವಾಗಿ ನೀಡಿದೆ.

Continue Reading

EXPLAINER

CAA: ಸಿಎಎ ಕಾಯ್ದೆಯಡಿ 14 ವಲಸಿಗರಿಗೆ ಭಾರತದ ಪೌರತ್ವ; ಏನಿದು ಕಾಯ್ದೆ? ಭಾರತದ ಮುಸ್ಲಿಮರಿಗೆ ತೊಂದರೆ ಇದೆಯೇ?

CAA: ದೆಹಲಿಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್‌ ಕುಮಾರ್‌ ಭಲ್ಲಾ ಅವರು ಭಾರತದ ಪೌರತ್ವ ಪ್ರಮಾಣಪತ್ರಗಳನ್ನು ನೀಡಿದ್ದಾರೆ. ಇದರೊಂದಿಗೆ ದೇಶದಲ್ಲಿ ಸಿಎಎ ಅನ್ವಯ ಪೌರತ್ವ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದಂತಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಸಾವಿರಾರು ಜನರಿಗೆ ಕೇಂದ್ರ ಸರ್ಕಾರವು ಭಾರತದ ಪೌರತ್ವ ನೀಡಲಿದೆ. ಅಷ್ಟಕ್ಕೂ ಸಿಎಎ ಎಂದರೇನು? ಕೇಂದ್ರದ ಪ್ರಮಾಣಪತ್ರಗಳಲ್ಲಿ ಏನಿರುತ್ತದೆ? ಇಲ್ಲಿದೆ ಮಾಹಿತಿ.

VISTARANEWS.COM


on

CAA
Koo

ನವದೆಹಲಿ: ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫಘಾನಿಸ್ತಾನದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡುವ ಪೌರತ್ವ (ತಿದ್ದುಪಡಿ) ಕಾಯ್ದೆ, 2019 (Citizenship Amendment Act) ಕಾಯ್ದೆ ಜಾರಿಯಾದ ಬೆನ್ನಲ್ಲೇ ಕೇಂದ್ರ ಸರ್ಕಾರವು 14 ಜನರಿಗೆ ಭಾರತದ ಪೌರತ್ವ (Indian Citizenship) ನೀಡಿದೆ. ದೆಹಲಿಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್‌ ಕುಮಾರ್‌ ಭಲ್ಲಾ ಅವರು ಭಾರತದ ಪೌರತ್ವ ಪ್ರಮಾಣಪತ್ರಗಳನ್ನು ನೀಡಿದ್ದಾರೆ. ಇದರೊಂದಿಗೆ ದೇಶದಲ್ಲಿ ಸಿಎಎ ಅನ್ವಯ ಪೌರತ್ವ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದಂತಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಸಾವಿರಾರು ಜನರಿಗೆ ಕೇಂದ್ರ ಸರ್ಕಾರವು ಭಾರತದ ಪೌರತ್ವ ನೀಡಲಿದೆ ಎಂದು ತಿಳಿದುಬಂದಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ಎಂದರೇನು?

2014 ರ ಡಿಸೆಂಬರ್ 31 ಕ್ಕಿಂತ ಮೊದಲು ನೆರೆಯ ಮುಸ್ಲಿಂ ಬಹುಸಂಖ್ಯಾತ ದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು ಮತ್ತು ಪಾರ್ಸಿಗಳಿಗೆ ಭಾರತೀಯ ಪೌರತ್ವಕ್ಕೆ ಮಾರ್ಗವನ್ನು ಒದಗಿಸಲು ಸಿಎಎ 1955 ರ ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಡಿಸೆಂಬರ್ 31, 2014 ರಂದು ಮತ್ತು ಅದಕ್ಕೂ ಮೊದಲು ಭಾರತಕ್ಕೆ ಆಗಮಿಸಿದ ಮುಸ್ಲಿಮರನ್ನು ಹೊರತುಪಡಿಸಿ ವಲಸಿಗರಿಗೆ ಈ ಕಾನೂನು ಅನ್ವಯಿಸುತ್ತದೆ.

ಸಿಎಎ ಅನುಷ್ಠಾನದ ಬಗ್ಗೆ ಆಡಳಿತಾರೂಢ ಭಾರತೀಯ ಜನತಾ ಪಕ್ಷವು ತನ್ನ ಹಿಂದಿನ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಆದರೆ ಅದರ ನಿಯಮಗಳನ್ನು ತಿಳಿಸಿರಲಿಲ್ಲ. ಕಾಯ್ದೆಯ 2019ರ ತಿದ್ದುಪಡಿಯ ಪ್ರಕಾರ ಡಿಸೆಂಬರ್ 31, 2014 ರವರೆಗೆ ಭಾರತಕ್ಕೆ ಪ್ರವೇಶಿಸಿದ ಮತ್ತು ತಮ್ಮ ಮೂಲ ದೇಶದಲ್ಲಿ “ಧಾರ್ಮಿಕ ಕಿರುಕುಳ ಅಥವಾ ಭಯ ಅಥವಾ ಧಾರ್ಮಿಕ ಕಿರುಕುಳ” ಅನುಭವಿಸಿದ ವಲಸಿಗರಿಗೆ ಭಾರತೀಯ ಪೌರತ್ವ ಲಭಿಸುತ್ತದೆ.

ಸಿಎಎಗೆ 2019ರ ತಿದ್ದುಪಡಿ ಮೂಲಕ ಮೇಲೆ ಹೇಳಿರುವ ದೇಶಗಳ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ನೀಡುವ ಕಾಯುವಿಕೆಯ ಹನ್ನೆರಡು ವರ್ಷಗಳನ್ನು ಕೇವಲ ಆರು ವರ್ಷಗಳಿಗೆ ಇಳಿಸಲಾಗಿದೆ. ಸಿಎಎ ಕುರಿತ ಗುಪ್ತಚರ ಬ್ಯೂರೋ ವರದಿಯ ಪ್ರಕಾರ, ಕಾಯ್ದೆಯ ನಿಯಮಗಳು ಪ್ರಕಟಗೊಂಡ ತಕ್ಷಣವೇ 30,000 ಕ್ಕೂ ಹೆಚ್ಚು ಫಲಾನುಭವಿಗಳು (ವಲಸಿಗರು) ಇದರ ಲಾಭವನ್ನು ಪಡೆಯುತ್ತಾರೆ.

ಯಾವ ದಾಖಲೆ ಕೊಡುವುದು ಕಡ್ಡಾಯ?

ಸಿಎಎ ಅಡಿಯಲ್ಲಿ ಭಾರತದ ಪೌರತ್ವ ಪಡೆಯಲು ವಲಸಿಗರು ಕೇಂದ್ರ ಸರ್ಕಾರಕ್ಕೆ ಹಲವು ದಾಖಲೆಗಳನ್ನು ನೀಡಬೇಕಾಗುತ್ತದೆ. ಜನನ ಪ್ರಮಾಣಪತ್ರ, ಬಾಡಿಗೆ ಮನೆಯಲ್ಲಿ ವಾಸವಿದ್ದರೆ ಅದರ ದಾಖಲೆ, ಗುರುತಿನ ಚೀಟಿ ಅಥವಾ ದಾಖಲೆ, ವಾಹನ ಚಾಲನಾ ಪರವಾನಗಿ ಸೇರಿ ಯಾವುದೇ ಪರವಾನಗಿ, ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡುವುದು ಕಡ್ಡಾಯವಾಗಿದೆ. ಇವುಗಳನ್ನು ಪರಿಶೀಲಿಸಿ ಕೇಂದ್ರ ಸರ್ಕಾರವು ಭಾರತದ ಪೌರತ್ವ ಪಡೆಯಲಿದ್ದಾರೆ.

ಭಾರತದ ಮುಸ್ಲಿಮರಿಗೆ ತೊಂದರೆ ಇಲ್ಲ

ಸಿಎಎ ಜಾರಿಯು ಭಾರತದ ಮುಸ್ಲಿಮರ ಪೌರತ್ವದ ಮೇಲೆ ಪರಿಣಾಮ ಬೀರಲು ಯಾವುದೇ ನಿಬಂಧನೆಗಳನ್ನು ಮಾಡಿಲ್ಲ. ಕಾನೂನಿಗೆ ಭಾರತದಲ್ಲಿರುವ 18 ಕೋಟಿ ಭಾರತೀಯ ಮುಸ್ಲಿಮರೊಂದಿಗೆ ಯಾವುದೇ ಸಂಬಂಧವಿಲ್ಲ. ಅವರು ತಮ್ಮ ಹಿಂದೂ ಸಹವರ್ತಿಗಳಂತೆ ಸಮಾನ ಹಕ್ಕುಗಳನ್ನು ಹೊಂದಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಇದಕ್ಕೂ ಮೊದಲು, ಸಿಎಎ ಎಂದರೆ, ಭಾರತದಲ್ಲಿರುವ ಮುಸ್ಲಿಮರ ಪೌರತ್ವವನ್ನು ರದ್ದುಗೊಳಿಸುವುದು ಎಂಬ ವದಂತಿ ಹಬ್ಬಿಸಲಾಗಿತ್ತು.

ಗೃಹ ಸಚಿವಾಲಯದ 2021-22ರ ವಾರ್ಷಿಕ ವರದಿಯ ಪ್ರಕಾರ ಏಪ್ರಿಲ್ 1, 2021ರಿಂದ ಡಿಸೆಂಬರ್ 31, 2021 ರವರೆಗೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಈ ಮುಸ್ಲಿಮೇತರ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಒಟ್ಟು 1,414 ವಿದೇಶಿಯರಿಗೆ ಪೌರತ್ವ ಕಾಯ್ದೆ, 1955 ರ ಅಡಿಯಲ್ಲಿ ಭಾರತೀಯ ಪೌರತ್ವವನ್ನು ನೀಡಲಾಗಿದೆ.

ಇದನ್ನೂ ಓದಿ: CAA: ಸಿಎಎ ಅಡಿಯಲ್ಲಿ 14 ಜನರಿಗೆ ಭಾರತದ ಪೌರತ್ವ ನೀಡಿದ ಮೋದಿ ಸರ್ಕಾರ; ಸರ್ಟಿಫಿಕೇಟ್‌ ಕೂಡ ಹಸ್ತಾಂತರ!

Continue Reading

ಕರ್ನಾಟಕ

Climate Plan: ರಾಜ್ಯ ಸರ್ಕಾರದ ಹವಾಮಾನ ಯೋಜನೆ ಜಾರಿಗೆ ಕೇಂದ್ರ ಸರ್ಕಾರದ ಒಪ್ಪಿಗೆ; ಏನಿದು ಯೋಜನೆ?

ಹವಾಮಾನ ಬದಲಾವಣೆ ಕುರಿತ ಕರ್ನಾಟಕ ರಾಜ್ಯ ಕ್ರಿಯಾ ಯೋಜನೆ – ಆವೃತ್ತಿ 2 (Climate Plan) ಅನ್ನು ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಕ್ಕೆ (MOEF & CC) ಏಪ್ರಿಲ್ 2021 ರಲ್ಲಿ ಕಳುಹಿಸಲಾಗಿತ್ತು. ಮೂರು ವರ್ಷಗಳ ಅನಂತರ ಅದನ್ನು ಕಾರ್ಯಗತಗೊಳಿಸಲು ರಾಜ್ಯಕ್ಕೆ ಅನುಮೋದನೆ ನೀಡಲಾಗಿದೆ.

VISTARANEWS.COM


on

By

Climate Plan
Koo

ಬೆಂಗಳೂರು: ಕರ್ನಾಟಕ (karnataka) ಸರ್ಕಾರ (government) 2021ರಲ್ಲಿ ಸಿದ್ಧಪಡಿಸಲಾದ ಹವಾಮಾನ ಕ್ರಿಯಾ ಯೋಜನೆ (Climate Plan) ಇತ್ತೀಚೆಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಪಡೆದಿದೆ. ಈ ಬಾರಿ ಕರ್ನಾಟಕದಲ್ಲಿ ಅತ್ಯಂತ ಭೀಕರ ಬರಗಾಲ (worst droughts) ಎದುರಾಗಿದೆ. ಆದರೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯ ನಿರೀಕ್ಷೆ ಇದೆ. ಈ ನಡುವೆ ಇದೀಗ ಹವಾಮಾನ ಕ್ರಿಯಾ ಯೋಜನೆ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಹವಾಮಾನ ಬದಲಾವಣೆ ಕುರಿತ ಕರ್ನಾಟಕ ರಾಜ್ಯ ಕ್ರಿಯಾ ಯೋಜನೆ – ಆವೃತ್ತಿ 2 ಅನ್ನು ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಕ್ಕೆ (MOEF & CC) ಏಪ್ರಿಲ್ 2021ರಲ್ಲಿ ಕಳುಹಿಸಲಾಗಿತ್ತು. ಮೂರು ವರ್ಷಗಳ ಅನಂತರ ಅದನ್ನು ಕಾರ್ಯಗತಗೊಳಿಸಲು ರಾಜ್ಯಕ್ಕೆ ಅನುಮೋದನೆ ನೀಡಲಾಗಿದೆ.

42 ವಿವಿಧ ಇಲಾಖೆಗಳೊಂದಿಗೆ ಹಲವು ಬಾರಿ ಸಭೆ ನಡೆಸಿದ ಅಭಿವೃದ್ಧಿ ಆಯುಕ್ತರು, ಜೂನ್‌ನಲ್ಲಿ ಮಾದರಿ ನೀತಿ ಸಂಹಿತೆ ಹಿಂಪಡೆದ ಅನಂತರ ಯೋಜನೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದರೊಂದಿಗೆ ಹವಾಮಾನ ಯೋಜನೆಯನ್ನು ಜಾರಿಗೆ ತಂದ ಮೊದಲ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಲಿದೆ ಎಂದು ತಿಳಿಸಿದ್ದರು. ಹವಾಮಾನ ಕ್ರಿಯಾ ಯೋಜನೆ ಕಾರ್ಯಕ್ರಮಕ್ಕೆ ನಿರ್ದಿಷ್ಟ ಯೋಜನೆಗಳು, ಕಾರ್ಯಕ್ಷಮತೆ ಸೂಚಕಗಳು ಮತ್ತು ಗುರಿಗಳನ್ನು ಸಿದ್ಧಪಡಿಸಲು ನಾವು ಎಲ್ಲಾ ಇಲಾಖೆಗಳಿಗೆ ತಿಳಿಸಿದ್ದೇವೆ. ಮಾದರಿ ನೀತಿ ಸಂಹಿತೆ ಹಿಂತೆಗೆದುಕೊಂಡ ತಕ್ಷಣ ನಾವು ಸಚಿವ ಸಂಪುಟದ ಮುಂದೆ ಸಲ್ಲಿಕೆ ಮಾಡಲು ಯೋಜಿಸಿದ್ದೇವೆ ಎಂದು ಅಭಿವೃದ್ಧಿ ಆಯುಕ್ತ ಡಾ. ಶಾಲಿನಿ ರಜನೀಶ್ ಹೇಳಿದ್ದಾರೆ.

ಶೀಘ್ರ ಜಾರಿಯಾಗಬೇಕು

ಹವಾಮಾನ ವೈಪರೀತ್ಯದ ಪರಿಣಾಮ ರಾಜ್ಯದ ಮೇಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾರಣ ಕ್ರಿಯಾ ಯೋಜನೆಯನ್ನು ಶೀಘ್ರವಾಗಿ ಜಾರಿಗೊಳಿಸಬೇಕು ಎನ್ನುತ್ತಾರೆ ತಜ್ಞರು. ಪರಿಸರ ಇಲಾಖೆಯ ಅಧಿಕಾರಿಯ ಪ್ರಕಾರ, ಕ್ರಿಯಾ ಯೋಜನೆಯಲ್ಲಿ ಸೂಚಿಸಲಾದ ಕ್ರಮಗಳನ್ನು ಸಂಯೋಜಿಸಲು ಮತ್ತು ತಮ್ಮ ಗುರಿಗಳನ್ನು ಸಲ್ಲಿಸಲು ಸಂಬಂಧಿಸಿದ ಎಲ್ಲಾ ಇಲಾಖೆಗಳು ಕೆಲಸ ಮಾಡಬೇಕಾಗುತ್ತದೆ. ಪ್ರಸ್ತುತ ಕಾರ್ಯನಿರ್ವಹಣೆಯೊಂದಿಗೆ ಬೇಸ್‌ಲೈನ್‌ನಂತೆ ಕಾರ್ಯನಿರ್ವಹಿಸುವ ಪಟ್ಟಿಯನ್ನು ಸಿದ್ಧಪಡಿಸಬೇಕು. ಉದಾಹರಣೆಗೆ, ಅರಣ್ಯ ಇಲಾಖೆಯು ತಾನು ಯೋಜಿಸಿರುವ ಅರಣ್ಯೀಕರಣದ ಪ್ರಮಾಣ ಮತ್ತು ಐದು ವರ್ಷಗಳಲ್ಲಿ ಗುರಿಯನ್ನು ಸಲ್ಲಿಸಬೇಕು ಎಂದವರು ಅಭಿಪ್ರಾಯಪಟ್ಟಿದ್ದಾರೆ.

ಏನೆಲ್ಲಾ ಒಳಗೊಂಡಿರುತ್ತದೆ?

ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (EMPRI) ಸಿದ್ಧಪಡಿಸಿದ ಕ್ರಿಯಾ ಯೋಜನೆಯು ಹವಾಮಾನ ಬದಲಾವಣೆಯ ಪರಿಣಾಮಗಳನ್ನು ತಗ್ಗಿಸಲು ಹಲವಾರು ಮಧ್ಯಸ್ಥಿಕೆಗಳು ಮತ್ತು ಮೌಲ್ಯಮಾಪನ ತಂತ್ರಗಳನ್ನು ಸೂಚಿಸುತ್ತದೆ. ಕೃಷಿ, ತೋಟಗಾರಿಕೆ, ಅರಣ್ಯ, ಗ್ರಾಮೀಣಾಭಿವೃದ್ಧಿ ಮತ್ತು 10 ಇತರ ಕ್ಷೇತ್ರಗಳಲ್ಲಿ ಕ್ರಮಗಳನ್ನು ಜಾರಿಗೆ ತರಲು 2025 ಮತ್ತು 2030 ರ ನಡುವೆ ರಾಜ್ಯಕ್ಕೆ 52,827 ಕೋಟಿ ರೂಪಾಯಿ ಅಗತ್ಯವಿದೆ ಎಂದು ಯೋಜನೆ ಸೂಚಿಸುತ್ತದೆ.

ಹಣಕಾಸು ಅಂದಾಜು ಹೆಚ್ಚಳ ಸಾಧ್ಯತೆ

ಅರಣ್ಯೀಕರಣದಿಂದ ನವೀಕರಿಸಬಹುದಾದ ಶಕ್ತಿಯ ಬಳಕೆಯವರೆಗೆ, ಯೋಜನೆಯು ಪ್ರತಿಯೊಂದು ಇಲಾಖೆಗೆ ಕ್ರಮಗಳನ್ನು ಸೂಚಿಸುತ್ತದೆ.

ಹಣಕಾಸಿನ ಅಂದಾಜುಗಳನ್ನು 2021ರಲ್ಲಿ ಸಿದ್ಧಪಡಿಸಲಾಗಿದೆ ಮತ್ತು ಈಗ ಹೆಚ್ಚಾಗಿರಬಹುದು. ಕ್ರಿಯಾ ಯೋಜನೆಯು ಹಣವನ್ನು ಸಂಗ್ರಹಿಸಲು ಹಲವಾರು ಹಣಕಾಸು ವಿಧಾನಗಳನ್ನು ರೂಪಿಸುತ್ತದೆ. ನಾವು ಇಲಾಖೆ-ನಿರ್ದಿಷ್ಟ ಯೋಜನೆಗಳನ್ನು ಹೊಂದಬಹುದು ಎಂದು ಕ್ರಿಯಾ ಯೋಜನೆ ತಯಾರಿಕೆಯ ಭಾಗವಾಗಿದ್ದ ಪ್ರೊ. ಕೃಷ್ಣ ರಾಜ್ ಹೇಳಿದ್ದಾರೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.


ಖಾಸಗಿ ಹೂಡಿಕೆಗಳನ್ನು ಆಕರ್ಷಿಸುವುದರಿಂದ ಹಿಡಿದು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಉತ್ತಮ ಬಳಕೆಗೆ, ಯೋಜನೆಯು ವಿವಿಧ ಹಣಕಾಸು ವಿಧಾನಗಳನ್ನು ವಿವರಿಸುತ್ತದೆ.ಬರ ಮತ್ತು ಪ್ರವಾಹಗಳ ಆವರ್ತನ ಹೆಚ್ಚಾಗಿದೆ. ತಾಪಮಾನ ಮತ್ತು ಮಳೆಯ ಮಾದರಿಗಳು ಅನಿರೀಕ್ಷಿತವಾಗಿವೆ. ಇವುಗಳು ಅನೇಕ ಕ್ಷೇತ್ರಗಳ ಮೇಲೆ, ವಿಶೇಷವಾಗಿ ಕೃಷಿಯ ಮೇಲೆ ನೇರ ಪರಿಣಾಮ ಬೀರುತ್ತವೆ. ಕೃಷಿಯ ಮೇಲೆ ಪರಿಣಾಮ ಬೀರಿದರೆ, ಅದು ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ, ಕ್ರಮವನ್ನು ಕಾರ್ಯಗತಗೊಳಿಸುವುದು ನಿರ್ಣಾಯಕವಾಗಿದೆ ಎಂದು ಅವರು ಹೇಳಿದ್ದಾರೆ. ಇತ್ತೀಚಿನ ಬರ ಪರಿಸ್ಥಿತಿ ಮತ್ತು ನೀರಿನ ಕೊರತೆಯಿಂದಾಗಿ ಅಧಿಕಾರಿಗಳು ಮತ್ತು ನಾಗರಿಕರಲ್ಲಿ ಜಾಗೃತಿ ಹೆಚ್ಚಾಗಿದೆ ಮತ್ತು ಆದ್ದರಿಂದ ಈ ಕ್ರಮಕ್ಕೆ ಇದು ಸರಿಯಾದ ಸಮಯ ಎಂದು ಪರಿಸರ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Karnataka Politics: ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನ? ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಮಹತ್ವದ ಸುಳಿವು!

ಏನು ಕ್ರಮ ?

ಕೃಷಿಗೆ ಶುಷ್ಕ- ಋತುವಿಗೆ ಸಂಬಂಧಿಸಿದ ವಿವಿಧ ಬೆಳೆ ಯೋಜನೆ, ನಿಖರವಾದ ನೀರಾವರಿ ತಂತ್ರಜ್ಞಾನ ಅಳವಡಿಕೆ. ಅರಣ್ಯಕ್ಕೆ ಹವಾಮಾನಕ್ಕೆ ಪೂರಕವಾದ ಅರಣ್ಯೀಕರಣ ಕಾರ್ಯಕ್ರಮಗಳು, ಜಾನುವಾರುಗಳ ಸಮಗ್ರ ರೋಗಗಾಲ ಮೇಲೆ ಕಣ್ಗಾವಲು ಮತ್ತು ತಕ್ಷಣ ಪ್ರತಿಕ್ರಿಯೆ ನೀಡಲು ಕ್ರಮ. ಅಂತರ್ಜಲ ಹೆಚ್ಚಳಕ್ಕೆ ಸೂಕ್ತ ಕ್ರಮ ಕೈಗೊಳ್ಳುವುದು. ಶಕ್ತಿ ಮೂಲಗಳಲ್ಲಿ ನವೀಕರಿಸಬಹುದಾದ ವಸ್ತುಗಳ ಮೇಲೆ ಹೆಚ್ಚಿನ ಗಮನ ಹರಿಸುವುದು ಮೊದಲಾದವುಗಳನ್ನು ಹವಾಮಾನ ಕ್ರಿಯಾ ಯೋಜನೆಯಲ್ಲಿ ಆದ್ಯತೆ ನೀಡಲಾಗಿದೆ.

Continue Reading
Advertisement
ipl 2024
ಪ್ರಮುಖ ಸುದ್ದಿ25 mins ago

IPL 2024 : ಲಕ್ನೊ ವಿರುದ್ಧವೂ ಸೋತ ಮುಂಬೈ; ಹತ್ತನೇ ಸ್ಥಾನ ಕಾಯಂ

Anjali Murder Case
ಕರ್ನಾಟಕ48 mins ago

Anjali Murder Case: ಅಂಜಲಿ ಕೊಂದವನ ಎನ್‌ಕೌಂಟರ್ ಮಾಡಿ: ಸಹೋದರಿ ಪೂಜಾ ಆಗ್ರಹ

Kanhaiya Kumar
ದೇಶ1 hour ago

Kanhaiya Kumar: ಪ್ರಚಾರದ ವೇಳೆ ಕಾಂಗ್ರೆಸ್‌ ಅಭ್ಯರ್ಥಿ ಕನ್ಹಯ್ಯ ಕುಮಾರ್‌ ಮೇಲೆ ಹಲ್ಲೆ; ವಿಡಿಯೊ ಇಲ್ಲಿದೆ

Murder Case
ಬೆಂಗಳೂರು1 hour ago

Murder Case: ಯಲಹಂಕದಲ್ಲಿ ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ

Siddaramaiah
ಸಂಪಾದಕೀಯ1 hour ago

ವಿಸ್ತಾರ ಸಂಪಾದಕೀಯ: ಗ್ರೇಸ್‌ ಮಾರ್ಕ್ಸ್‌ ಅಲ್ಲ, ಗುಣಮಟ್ಟದ ಶಿಕ್ಷಣವೇ ಫಲಿತಾಂಶಕ್ಕೆ ದಾರಿ

Pavithra Jayaram
ಸಿನಿಮಾ1 hour ago

ನಟಿ ಪವಿತ್ರ ಜಯರಾಮ್‌ ಸಾವಿನ ಬೆನ್ನಲ್ಲೇ ಪ್ರಿಯತಮ ಚಂದ್ರಕಾಂತ್ ಆತ್ಮಹತ್ಯೆ; ಖಿನ್ನತೆಗೆ ನಟ ಬಲಿ?

Rohit Sharma
ಕ್ರೀಡೆ2 hours ago

Rohit Sharma : ಆಡಿಯೊ ಬಂದ್ ಮಾಡಪ್ಪ; ಕ್ಯಾಮೆರಾಮನ್​ಗೆ ಕೈಮುಗಿದು ಬೇಡಿಕೊಂಡ ರೋಹಿತ್​ ಶರ್ಮಾ

Road Accident
ಪ್ರಮುಖ ಸುದ್ದಿ2 hours ago

Road Accident: ಕೊಪ್ಪಳ ಬಳಿ ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿಯಾಗಿ ಮೂವರ ದುರ್ಮರಣ; 20ಕ್ಕೂ ಹೆಚ್ಚು ಮಂದಿಗೆ ಗಾಯ

Virat Kohli
ಕ್ರೀಡೆ3 hours ago

Virat kohli : ಪಾಕಿಸ್ತಾನಕ್ಕೆ ಬರುವೆ ಎಂದು ಅಲ್ಲಿನ ಪರ್ವತಾರೋಹಿಗೆ ಭರವಸೆ ಕೊಟ್ಟಿದ್ದ ವಿರಾಟ್​ ಕೊಹ್ಲಿ! ಇಲ್ಲಿದೆ ವಿಡಿಯೊ

Narendra modi
ದೇಶ3 hours ago

Narendra Modi: ಕಾಂಗ್ರೆಸ್‌ ಗೆದ್ದರೆ ಬುಲ್ಡೋಜರ್‌ನಿಂದ ರಾಮಮಂದಿರ ನೆಲಸಮ ಎಂದ ಮೋದಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ5 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ19 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ20 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌