ವೋಟು ಹಾಕಿಲ್ಲವೆಂದು ತಳಕಲ್ ಕೆರೆಗೆ ನೀರು ಹರಿಸದ ಶಾಸಕ ಪಿಟಿಪಿ: ಇಟ್ಟಗಿ ಹೋಬಳಿ ಜನರ ಪ್ರತಿಭಟನೆ - Vistara News

ಕರ್ನಾಟಕ

ವೋಟು ಹಾಕಿಲ್ಲವೆಂದು ತಳಕಲ್ ಕೆರೆಗೆ ನೀರು ಹರಿಸದ ಶಾಸಕ ಪಿಟಿಪಿ: ಇಟ್ಟಗಿ ಹೋಬಳಿ ಜನರ ಪ್ರತಿಭಟನೆ

ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಇಟ್ಟಗಿ ಹೋಬಳಿ ವ್ಯಾಪ್ತಿಯಲ್ಲಿ ಸುಮಾರು 8-10 ಹಳ್ಳಿಗಳು ಬರುತ್ತವೆ. ಈ ಹಳ್ಳಿಗಳ ಅಭಿವೃದ್ಧಿಗೆ ಶಾಸಕ ಪಿ.ಟಿ ಪರಮೇಶ್ವರ್ ಶ್ರಮಿಸುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

VISTARANEWS.COM


on

ತಳಕಲ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಪಾಂಡುರಂಗ ಜಂತ್ಲಿ, ವಿಜಯನಗರ
ಅದು ಹತ್ತಾರು ಹಳ್ಳಿಗಳ ಜೀವನಾಡಿ ಆಗಿರುವ ಕೆರೆ. ಆ ಕೆರೆ ಭರ್ತಿಯಾದರೆ ವರ್ಷಗಟ್ಟಲೇ ಜನ ನೆಮ್ಮದಿಯ ನಿಟ್ಟುಸಿರು ಬಿಡುತ್ತಾರೆ. ಆದರೆ, ಆ ಕೆರೆ ತುಂಬಿಸಲು ಸ್ವತಃ ಶಾಸಕರೇ ಬಿಡುತ್ತಿಲ್ಲವಂತೆ. ಹೂವಿನ ಹಡಗಲಿ ತಾಲೂಕಿನ ಇಟ್ಟಗಿ ಹೋಬಳಿಯ ಎಂಟರಿಂದ ಹತ್ತು ಹಳ್ಳಿಗಳ ಅಭಿವೃದ್ಧಿಗೆ ಶಾಸಕ ಹೂವನಹಡಗಲಿ ಶಾಸಕ ಪಿ.ಟಿ ಪರಮೇಶ್ವರ್​ ಅಡ್ಡಗಾಲು ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.​

ಹೂವಿನ ಹಡಗಲಿ ತಾಲೂಕಿನ ಇಟ್ಟಗಿ ಹೋಬಳಿ ವ್ಯಾಪ್ತಿಯಲ್ಲಿ ಸುಮಾರು 8-10 ಹಳ್ಳಿಗಳು ಬರುತ್ತವೆ. ಈ ಹಳ್ಳಿಗಳ ಅಭಿವೃದ್ಧಿಗೆ ಶಾಸಕ ಪಿ.ಟಿ ಪರಮೇಶ್ವರ್ ಶ್ರಮಿಸುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಏಕೆಂದರೆ ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಈ ಹಳ್ಳಿಗಳಲ್ಲಿನ ಮತದಾರರು ಮತ ಹಾಕಿಲ್ಲ ಎಂಬ ಕಾರಣಕ್ಕೆ ತಳಕಲ್​ ಕೆರೆಗೆ ನೀರು ಬಿಡಲು ಸ್ವತಃ ಶಾಸಕ ಅಡ್ಡಗಾಲು ಹಾಕಿದ್ದಾರೆ ಎಂದು ಆಪಾದಿಸಿದ್ದಾರೆ.

ಕಮಿಷನ್​ ಕಟ್ಟಿದ್ದೇವೆ, ನಮ್ಮ ಪಾಲಿನ ಕೆಲಸ ಮಾಡಿದ್ದೇವೆ ಎಂದ ಕಾಂಟ್ರಾಕ್ಟರ್ಸ್
ತಳಕಲ್ ನಿಂದ ಸುಮಾರು ಎಂಟರಿಂದ ಹತ್ತು ಕಿ.ಮೀ ದೂರದಲ್ಲಿ​​​ ಮಾಲವಿ ಜಲಾಶಯ ಭರ್ತಿ ಆಗಿದೆ. ಮಾಲವಿ ಜಲಾಶಯಕ್ಕೆ ತುಂಗಭದ್ರಾ ನದಿಯ ನೀರನ್ನು ಹರಿಸಲಾಗಿದ್ದು, ಜಲಾಶಯ ಭರ್ತಿಗೆ ಕೇವಲ 20 ಅಡಿಯಷ್ಟು ಮಾತ್ರ ಬಾಕಿಯಿದೆ. ಗದಗ ಮತ್ತು ಮುಂಡರಗಿ ತಾಲೂಕಿನ ಬಹುತೇಕ ಹಳ್ಳಿಗಳು ಸಿಂಗಟಾಲೂರು ಏತನೀರಾವರಿ ಯೋಜನೆಯ ನೀರನ್ನು ಬಳಸಿಕೊಂಡು ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿವೆ. ತಾಲೂಕಿಗೆ ಹತ್ತಿರದಲ್ಲೇ ಇರುವ ತಳಕಲ್ ಕೆರೆಗೆ ನೀರು ತುಂಬಿಸಲಾಗುತ್ತಿಲ್ಲ ಎಂದರೇ ಹೇಗೆ? ತಕ್ಷಣವೇ ಸಂಬಂಧ ಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ, ಕೆರೆಗೆ ನೀರು ಹರಿಸಲು ರೈತರು ಒತ್ತಾಯಿಸಿದ್ದಾರೆ. ಆದರೆ, ಇಟ್ಟಗಿ ಹೋಬಳಿಯ ತಳಕಲ್​​​ ಕೆರೆಗೆ ನೀರು ಹರಿಸುವ ವಿಚಾರಕ್ಕೆ ಗುತ್ತಿಗೆದಾರರನ್ನು ಕೇಳಿದರೆ, ಶಾಸಕ ಪರಮೇಶ್ವರ್​​​ ಹಾಗೂ ಮೇಲಾಧಿಕಾರಿಗಳಿಗೆ ಕಮಿಷನ್ ಕೊಟ್ಟಿದ್ದೇವೆ, ನಮ್ಮ ಪಾಲಿಗೆ ಬಂದ ಕೆಲಸ ಮಾಡಿದ್ದೇವೆ ಎಂದು ಸಬೂಬು ಹೇಳುತ್ತಿದ್ದಾರೆ.

ಕಾಟಾಚಾರಕ್ಕೆ ಅಧಿಕಾರಿಗಳಿಂದ ತಳಕಲ್​​​ ಕೆರೆ ವೀಕ್ಷಣೆ
ಕೆರೆಗೆ ನೀರು ತುಂಬಿಸುವ ವಿಚಾರಕ್ಕೆ ಹಲವು ದಿನಗಳಿಂದ ಹೋರಾಟ ನಡೆಯುತ್ತಲೇ ಇದೆ. ಆದರೆ ಆ ಹೋರಾಟ ತೀವ್ರತೆ ಪಡೆದುಕೊಳ್ಳುವ ಲಕ್ಷಣ ಕಾಣುತ್ತಿದ್ದಂತೆ ಇಟ್ಟಗಿ ಹೋಬಳಿಯ ಜಲಸಂಪನ್ಮೂಲ ಇಲಾಖೆಯ ನೀರಾವರಿ ಹಾಗೂ ಕೇಂದ್ರ ವಲಯದ ಮುಖ್ಯ ಅಭಿಯಂತರ ಕೆ. ದುರುಗಪ್ಪ, ತಳಕಲ್​​​​ ಕೆರೆಗೆ ಭೇಟಿ ಕೊಟ್ಟು ತಳಕಲ್​​ ಕೆರೆ ವೀಕ್ಷಣೆ ಮಾಡಿದ್ದಾರೆ. ಕೆರೆಗೆ ನೀರು ತುಂಬಿಸುವ ವಿಚಾರಕ್ಕೆ ಮಾತನಾಡಿ, ಕೆರೆಗೆ ನೀರು ಸರಬರಾಜು ಮಾಡುವ ಮೋಟಾರಿನಲ್ಲಿ ಯಾವುದೇ ಸಮಸ್ಯೆಗಳಿಲ್ಲ. ನೀರು ಹೊರಹಾಕುವ ಪಂಪ್‌ನಲ್ಲಿ ಸಮಸ್ಯೆ ಕಂಡುಬಂದಿದೆ. ಸ್ಥಳೀಯವಾಗಿ ರಿಪೇರಿ ಕೆಲಸಮಾಡಲು ಸಾಧ್ಯವಾಗದೆ ಪಂಪ್‌ ಅನ್ನು ಮಹಾರಾಷ್ಟ್ರದ ಸಾಂಗ್ಲಿಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

15 ದಿನಗಳೊಳಗೆ ಪಂಪ್ ಸರಿಹೋಗಲಿದ್ದು, ನಂತರ ದಿನಗಳಲ್ಲಿ ಕೆರೆಗೆ ನೀರು ಖಂಡಿತ ಹರಿಸುತ್ತೇವೆ ಎಂದಿದ್ದಾರೆ. ನಿರಂತರ ಜ್ಯೋತಿ ಇರುವ ಕಾರಣದಿಂದ ವಿದ್ಯುತ್‌ನ ಸಮಸ್ಯೆ ಇರುವುದಿಲ್ಲ ಅಂತ ಭಾವಿಸಿದ್ದೆವು. ಆದರೆ ಪದೇಪದೆ ವಿದ್ಯುತ್ ಸಮಸ್ಯೆ ಕಾಡುತ್ತಿದ್ದರಿಂದ ಸರ್ಕಾರ ಈ ಸಮಸ್ಯೆಯನ್ನು ನೀಗಿಸಲು ಈಗಾಗಲೆ 1.91 ಲಕ್ಷ ರೂಪಾಯಿ ಹಣಕಾಸಿನ ನೆರವು ನೀಡಿದೆ. ಮುಂದಿನ ದಿನಗಳಲ್ಲಿ ವಿದ್ಯುತ್‌ ಸಮಸ್ಯೆಯೂ ನೀಗಲಿದೆ ಎಂದಿದ್ದಾರೆ.

ಅಧಿಕಾರಿಗಳು ಶಾಸಕರ ಕೈಗೊಂಬೆಯಂತೆ ಕೆಲಸ: ಎಂ.ಪಿ ಸುಮಾ ಆರೋಪ
ತಳಕಲ್ ಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ಸುತ್ತಮುತ್ತಲಿನ ಗ್ರಾಮದ ಜನತೆಯು ಕಳೆದ ಚುನಾವಣೆಯಲ್ಲಿ ಮತ ಹಾಕಿಲ್ಲ ಎಂಬ ಕಾರಣಕ್ಕೆ ಶಾಸಕ ಪಿ. ಟಿ ಪರಮೇಶ್ವರ್​​​ ನಾಯಕ್​​ ಈ ಭಾಗದ ಅಭಿವೃದ್ಧಿ ಕಡೆಗೆ ಗಮನ ನೀಡುತ್ತಿಲ್ಲ. ಕಳೆದ ಒಂದೂವರೆ ವರ್ಷದಿಂದ ಕೆರೆಗೆ ನೀರು ತುಂಬಿಸುವಂತೆ ಸ್ಥಳೀಯ ರಾಜಕಾರಣಿಗಳಿಗೆ ಮತ್ತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಬೇಜವ್ದಾರಿ ಉತ್ತರಗಳನ್ನು ನೀಡುತ್ತಿದ್ದಾರೆ. ಇದರಿಂದ ರೈತರು ಬೇಸತ್ತು ಹೋಗಿದ್ದು, ಸ್ಥಳೀಯ ನೀರಾವರಿ ಅಧಿಕಾರಿಗಳು ಶಾಸಕ ಪಿ.ಟಿ.ಪರಮೇಶ್ವರ್​​​​ ಕೈಗೊಂಬೆಗಳಂತೆ ಕೆಲಸ ಮಾಡುತ್ತಿದ್ದಾರೆ ಎಂದು ದಿವಂಗತ ಎಂ.ಪಿ ಪ್ರಕಾಶ್​​ ಪುತ್ರಿ ಎಂ.ಪಿ ಸುಮಾ ಆರೋಪಿಸಿದ್ದಾರೆ.

ಕೆರೆಗೆ ನೀರು ಹರಿಸಲು ಯಾಕೆ ವಿಳಂಬ ಮಾಡುತ್ತಿದ್ದೀರಿ ಎಂದು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಕೇಳಿದರೆ ಕಳಪೆ ಕಾಮಗಾರಿಯಾಗಿದೆ. ಪಂಪ್‌ಸೆಟ್ ಕೆಟ್ಟಿದೆ, ದುರಸ್ತಿ ಕೆಲಸಕ್ಕೆ ದೂರದ ಊರಿಗೆ ಕಳುಹಿಸಲಾಗಿದೆ ಎಂಬ ಹಾರಿಕೆ ಉತ್ತರಗಳನ್ನು ನೀಡುತ್ತಿದ್ದಾರೆ. ಅಲ್ಲದೇ ತಳಕಲ್​​ ಕೆರೆಗೆ ಈಗಾಗಲೆ ಕೆರೆಗೆ ಎರಡು ಭಾರಿ ನೀರು ಹರಿಸಲಾಗಿದೆ ಎಂದು ಸರ್ಕಾರಕ್ಕೆ ವರದಿ ನೀಡಿದ್ದಾರೆ. ಆದರೇ ಈವರೆಗೂ ಒಂದು ಹನಿ ನೀರು ಕೂಡ ತಳಕಲ್​​​ ಕೆರೆಗೆ ಹರಿದುಬಂದಿಲ್ಲ. ಹಾಗಿದ್ದರೆ ಸರ್ಕಾರದಿಂದ ಬಂದ ಕೋಟ್ಯಂತರ ರೂಪಾಯಿ ಹಣವನ್ನು ಶಾಸಕ ಪರಮೇಶ್ವರ್​​​​ ನುಂಗಿದ್ದಾರೆ ಎಂದು ಜನ ಹೇಳುತ್ತಿದ್ದಾರೆ. ಈ ಸಮಸ್ಯೆಗೆ ಬೇಗ ಪರಿಹಾರ ನೀಡೋದನ್ನು ಬಿಟ್ಟು ಶಾಸಕ ಪಿ.ಟಿ ಪರಮೇಶ್ವರ್​​​ ದ್ವೇಷ ರಾಜಕಾರಣ ಮಾಡ್ತಿದ್ದಾರೆ ಎಂದು ದೂರಿದ್ದಾರೆ.

ರೈತರ ಹೋರಾಟಕ್ಕೆ ಹೂವಿನ ಹಡಗಲಿ ಶಾಂತವೀರ ಸ್ವಾಮೀಜಿ ಸಾಥ್​​​!
ತಳಕಲ್​​​ ಕೆರೆಗೆ ನೀರು ತುಂಬಿಸುವ ಹೋರಾಟಕ್ಕೆ ಹೂವಿನಹಡಗಲಿ ಶಾಖಾ ಗವಿಮಠದ ಡಾ. ಹಿರಿಯ ಶಾಂತವೀರ ಸ್ವಾಮೀಜಿ ಅವರು ತಳಕಲ್​​ ಕೆರೆ ತುಂಬಿಸುವ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಎಂ.ಪಿ ಸುಮಾ ಹಾಗೂ ರೈತರಿಗೆ ಸಾಥ್ ಕೊಟ್ಟಿದ್ದಾರೆ. ಕೆರೆಗೆ ನೀರು ತುಂಬಿಸುವ ವಿಚಾರಕ್ಕೆ ಸ್ವಾಮೀಜಿ ಮಾತನಾಡಿ, ಮನುಷ್ಯನ ಉಡುಗೆ, ತೊಡುಗೆ ಮತ್ತು ದಿನಬಳಕೆ ವಸ್ತುಗಳನ್ನು ಯಾಂತ್ರಿಕ ರೂಪದಲ್ಲಿ ಪಡೆಯಬಹುದು. ಆದರೆ ರೈತ ಬೆಳೆಯುವ ಜೋಳ, ಭತ್ತ, ಕಬ್ಬು ಇನ್ನಿತರ ಬೆಳೆಗಳನ್ನು ರೈತ ಬೆಳೆದರೆ ಮಾತ್ರ ನಮಗೆ ಸಿಗಲಿದೆ. ದೇಶಕ್ಕೆ ಬೆನ್ನೆಲುಬು ಎಂದು ಹೇಳುವ ರೈತನ ಬದುಕು ಅಭಿವೃದ್ಧಿ ಹೊಂದಬೇಕಾದರೆ ರೈತನ ಜೀವನಾಡಿ ತಳಕಲ್​​​ ಕೆರೆಗೆ ನೀರು ತುಂಬಿಸಬೇಕಾದ ಅನಿವಾರ್ಯತೆ ಇದೆ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಬೇಕು ಎಂದರು.

ಶಿವಮೊಗ್ಗ-ಹೊಸಪೇಟೆ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ
ರೈತಾಪಿ ವರ್ಗದ ಜೀವನಾಡಿ ಆಗಿರುವ ತಳಕಲ್ ಕೆರೆಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ನೂರಾರು ರೈತರು, ಹೊಸಪೇಟೆ- ಶಿವಮೊಗ್ಗ ರಾಜ್ಯ ಹೆದ್ದಾರಿ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸಿ, ಶಾಸಕ ಪಿಟಿ ಪರಮೇಶ್ವರ್​ ಹಾಗೂ ಸರ್ಕಾರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬಳಿಕ ಕೆರೆ ಹೋರಾಟ ಸಮಿತಿಯಿಂದ ಜಲಸಪನ್ಮೂಲ ಅಧಿಕಾರಿಗಳಿಗೆ ಮನವಿ ಪತ್ರ ನೀಡಲಾಗಿದೆ. ತಳಕಲ್ ಕೆರೆ ಅಚ್ಚುಕಟ್ಟು ಪ್ರದೇಶದ ಗ್ರಾಮಸ್ಥರು, ಹೋರಾಟ ಸಮಿತಿಯ ಪದಾಧಿಕಾರಿಗಳು ಸರ್ವಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ | Rain News | ವಿಜಯಪುರದಲ್ಲಿ ಮಳೆ ಅವಾಂತರ : ಡೋಣಿ ನದಿಯಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ, ಸಂಪರ್ಕ ಕಡಿತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

VISTARANEWS.COM


on

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಏಪ್ರಿಲ್‌ 27 ರಂದು ದರ್ಶನ್ ಪರ ವಕೀಲ ರಂಜಿತ್ ರೋಹಟಗಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 4ಕ್ಕೆ ನಿಗದಿಪಡಿಸಿದೆ.

Continue Reading

ಕರ್ನಾಟಕ

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

VISTARANEWS.COM


on

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು: ಶಾಲೆಗಳಲ್ಲಿ ಇನ್ನು ಮುಂದೆ ಅಶ್ಲೀಲ ಹಾಡು ಮತ್ತು ಅಸಭ್ಯ ನೃತ್ಯಗಳಿಗೆ ಅವಕಾಶ ನೀಡದಂತೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಹೆಸರಿನಲ್ಲಿ ದ್ವಂದ್ವಾರ್ಥದ ಸಿನಿಮಾ ಹಾಡು ಹಾಗೂ ನೃತ್ಯಗಳನ್ನು ಪ್ರದರ್ಶಿಸುವುದರಿಂದ ಮಕ್ಕಳ ಮನಸ್ಸಿನ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅಧಿಕೃತ ಆದೇಶ ಹೊರಡಿಸಲಾಗಿದೆ.
ಶಿಕ್ಷಣ ಇಲಾಖೆ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯ ಪ್ರಕಾರ, ಶಾಲಾ ಕಾರ್ಯಕ್ರಮಗಳಲ್ಲಿ ಕೇವಲ ಜಾನಪದ, ದೇಶಭಕ್ತಿ ಗೀತೆಗಳು, ಪರಿಸರ ಕಾಳಜಿಯ ಹಾಡುಗಳು ಮತ್ತು ಸಮಾಜಮುಖಿ ಚಿಂತನೆಯುಳ್ಳ ಸಂಗೀತಕ್ಕೆ ಮಾತ್ರ ಆದ್ಯತೆ ನೀಡಬೇಕು. ನೃತ್ಯದ ಸಮಯದಲ್ಲಿ ವಿದ್ಯಾರ್ಥಿಗಳು ಧರಿಸುವ ಉಡುಪುಗಳು ಕೂಡ ಸಭ್ಯವಾಗಿರಬೇಕು ಹಾಗೂ ಅರೆಬರೆ ವಸ್ತ್ರಗಳನ್ನು ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮನರಂಜನೆಯ ಹೆಸರಿನಲ್ಲಿ ಸಮಾಜಕ್ಕೆ ತಪ್ಪು ಸಂದೇಶ ನೀಡುವ ಅಥವಾ ಮಕ್ಕಳ ನೈತಿಕ ಹಾಗೂ ಮಾನಸಿಕ ಆರೋಗ್ಯ ಕೆಡಿಸುವ ಯಾವುದೇ ಹಾಡುಗಳನ್ನು ಬಳಸದಂತೆ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ನಿಯಮಗಳನ್ನು ಜಾರಿಗೆ ತರುವ ಸಂಪೂರ್ಣ ಜವಾಬ್ದಾರಿಯನ್ನು ಶಾಲಾ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿಗೆ ವಹಿಸಲಾಗಿದೆ.

Continue Reading

bigbreaking

20 ಸಾವಿರ ಕೋಟಿ ಹಗರಣದ ಮೂಲ ದಾಖಲೆಗಳೇ ನಾಪತ್ತೆ. ಎನ್‌.ಆರ್‌.ರಮೇಶ್‌ ಗಂಭೀರ ಆರೋಪ.

VISTARANEWS.COM


on

ಬೆಂಗಳೂರು: ರಾಜ್ಯ ರಾಜಕೀಯ ಹಾಗೂ ಆಡಳಿತ ವಲಯವನ್ನು ಬೆಚ್ಚಿಬೀಳಿಸುವಂತಹ ಗಂಭೀರ ಆರೋಪವೊಂದು ಹೊರಬಂದಿದೆ. 2007-08ರಿಂದ ಇದುವರೆಗೆ ನಡೆದಿರುವ 20 ಸಾವಿರ ಕೋಟಿಗೂ ಹೆಚ್ಚು ಮೊತ್ತದ TDR ಹಗರಣಗಳಿಗೆ ಸಂಬಂಧಿಸಿದ ಮೂಲ ದಾಖಲೆಗಳು ಈಗಿನ ಜಿಬಿಎ ಯ ಭೂಸ್ವಾಧೀನ ಮತ್ತು ಟಿಡಿಆರ್‌ ವಿಭಾಗದ ಕಚೇರಿಯಿಂದ ನಾಪತ್ತೆಯಾಗಿವೆ ಎನ್ನುವ ಆಘಾತಕಾರಿ ವಿಷಯವನ್ನು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್ ಬಹಿರಂಗಪಡಿಸಿದ್ದಾರೆ.
ಇಂದು ಜಿಬಿಎ ಕೇಂದ್ರ ಕಚೇರಿ ಮುಂಭಾಗ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹಿರಿಯ ನಾಯಕ ಹಾಗೂ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್‌ ಟಿಡಿಆರ್‌ ಹಗರಣದ ದಾಖಲೆಗಳ ನಾಪತ್ತೆ ಬಗ್ಗೆ ಮಹತ್ವದ ಮಾಹಿತಿಗಳನ್ನು ತಿಳಿಸಿದರು. ರಸ್ತೆ ಅಭಿವೃದ್ಧಿ ಮತ್ತು ವಿವಿಧ ಅಭಿವೃದ್ಧಿ ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಭೂ ಮಾಲೀಕರಿಂದ ನಿಯಮಾನುಸಾರ ಸ್ವಾಧೀನಪಡಿಸಿಕೊಂಡು, ಅದಕ್ಕೆ ಬದಲಾಗಿ ನಿಗದಿತ ಮೊತ್ತದ ಪರಿಹಾರ ಧನ ಅಥವಾ TDR /DRC ನೀಡುವ ಕಾರ್ಯ 2007-08 ರಲ್ಲಿ ಚಾಲನೆಗೆ ಬಂದಿತ್ತು. ಇದಾದ ನಂತರ TDR ನಿಯಮಗಳಲ್ಲಿನ ಸಣ್ಣಪುಟ್ಟ ಲೋಪದೋಷಗಳನ್ನು ದುರ್ಬಳಕೆ ಮಾಡಿಕೊಳ್ಳುವ ಕರಾಳ ದಂಧೆ ಬೃಹತ್ ಪ್ರಮಾಣದಲ್ಲಿ ಬೆಳೆದು, ಬಿಬಿಎಂಪಿ ಮತ್ತು ಬಿಡಿಎ ನ ಭ್ರಷ್ಟ ಅಧಿಕಾರಿಗಳ ಸಹಕಾರದಿಂದ ಸುಮಾರು 50 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಗರಣ ನಡೆದಿದೆ ಎಂದು ಎನ್‌.ಆರ್‌.ರಮೇಶ್‌ ಆರೋಪಿಸಿದ್ದಾರೆ.
ಟಿಡಿಆರ್‌ ಹಗರಣ ಪ್ರಕರಣದ ವಿಚಾರ ಈಗಾಗಲೇ ಜಾರಿ ನಿರ್ದೇಶನಾಲಯ (ED) ಮತ್ತು ಲೋಕಾಯುಕ್ತದಲ್ಲಿ ತನಿಖೆ ಹಾಗೂ ವಿಚಾರಣಾ ಹಂತದಲ್ಲಿದೆ. ಆದರೆ ಇದೀಗ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳು ಕಾಣೆಯಾಗಿರುವುದು ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದ್ದು, ಇದರಲ್ಲಿ ಜಿಬಿಎ ಅಧಿಕಾರಿಗಳು ಮತ್ತು ವಂಚಕರ ಪಾತ್ರ ಇದೆ ಎಂದು ಎನ್‌.ಆರ್‌.ರಮೇಶ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಎಲ್ಲಾ ಆರೋಪಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ದಾಖಲೆಗಳೊಂದಿಗೆ ಜಾರಿ ನಿರ್ದೇಶನಾಲಯ ಮತ್ತು ಲೋಕಾಯುಕ್ತದಲ್ಲಿ ದೂರುಗಳನ್ನು ದಾಖಲಿಸಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.

Continue Reading

ಕರ್ನಾಟಕ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿದ NIA ನ್ಯಾಯಾಲಯ

VISTARANEWS.COM


on

ಮಂಗಳೂರು ನಗರವನ್ನು ಬೆಚ್ಚಿಬೀಳಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ಗೆ ಬೆಂಗಳೂರಿನ ಎನ್‌ಐಎ (NIA) ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಈ ಸ್ಫೋಟ ಸಂಭವಿಸಿತ್ತು. ಆರೋಪಿ ಶಾರಿಕ್ ಸ್ಫೋಟಕ ತುಂಬಿದ್ದ ಕುಕ್ಕರ್ ಅನ್ನು ಸಾಗಿಸುತ್ತಿದ್ದಾಗಲೇ ಅದು ಆಕಸ್ಮಿಕವಾಗಿ ಸ್ಫೋಟಗೊಂಡಿದ್ದರಿಂದ, ನಗರದಲ್ಲಿ ಸಂಭವಿಸಬಹುದಾಗಿದ್ದ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿತ್ತು. ಈ ಘಟನೆಯಲ್ಲಿ ಶಾರಿಕ್ ಮತ್ತು ಆಟೋ ಚಾಲಕ ಇಬ್ಬರೂ ಗಾಯಗೊಂಡಿದ್ದರು.

ದೇಶದ ಭದ್ರತೆಗೆ ಧಕ್ಕೆ ತರುವ ಮತ್ತು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುವ ಉದ್ದೇಶದಿಂದ ಈ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಲಾಗಿತ್ತು. ಪ್ರಕರಣದ ಗಾಂಭೀರ್ಯವನ್ನು ಪರಿಗಣಿಸಿ ಕೇಂದ್ರ ಸರ್ಕಾರವು ಇದರ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಿತ್ತು. ತನಿಖೆಯ ವೇಳೆ ಶಾರಿಕ್ ನಿಷೇಧಿತ ಉಗ್ರಗಾಮಿ ಸಂಘಟನೆಗಳಿಂದ ಪ್ರೇರಿತನಾಗಿದ್ದದ್ದು ಮತ್ತು ಡಾರ್ಕ್ ವೆಬ್ ಮೂಲಕ ವಿದೇಶಿ ಹ್ಯಾಂಡ್ಲರ್‌ಗಳ ಸಂಪರ್ಕದಲ್ಲಿದ್ದು ಬಾಂಬ್ ತಯಾರಿಕಾ ತರಬೇತಿ ಪಡೆದಿದ್ದ ಎಂಬ ಆಘಾತಕಾರಿ ಸತ್ಯಗಳು ಹೊರಬಂದಿದ್ದವು.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು, ಎನ್‌ಐಎ ಸಲ್ಲಿಸಿದ್ದ ಸಾಕ್ಷ್ಯಧಾರಗಳನ್ನು ಪುರಸ್ಕರಿಸಿ ಶಾರಿಕ್ ದೋಷಿ ಎಂದು ತೀರ್ಪು ನೀಡಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಸೇರಿದಂತೆ ವಿವಿಧ ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷೆ ಪ್ರಕಟಿಸಿದೆ.

Continue Reading
Advertisement
Latest5 hours ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

Latest6 hours ago

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

Latest7 hours ago

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್’

bigbreaking7 hours ago

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಾ ಮೇ ಕ್ಲೈಮ್ಯಾಕ್ಸ್‌?

Latest8 hours ago

ಡಾಲಿ ಧನಂಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ದಂಪತಿ!

Latest10 hours ago

ಶಿಸ್ತು ಮರೆತರಾ ರಿಯಾನ್ ಪರಾಗ್? ಕಾನೂನು ಸಂಕಷ್ಟಕ್ಕೆ ಸಿಲುಕುತ್ತಾರಾ ರಾಜಸ್ಥಾನ ರಾಯಲ್ಸ್ ಆಟಗಾರ?

Latest11 hours ago

ಮತಯಂತ್ರದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌? ಚುನಾವಣಾ ಅಕ್ರಮ ಆರೋಪಿಸಿ ಕೇಸರಿ ಪಡೆ ಆಕ್ರೋಶ

Rakshit Shetty Richard Anthony Produce By Hombale
ಅವಿಭಾಗೀಕೃತ11 hours ago

ಗುಡುಗು ಸಹಿತ ಆಲಿಕಲ್ಲು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Latest12 hours ago

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

Latest13 hours ago

ಯಶ್ ಫ್ಯಾನ್ಸ್‌ಗೆ ಶಾಕ್: ಮತ್ತೆ ಮುಂದೂಡಲ್ಪಟ್ಟ ‘ಟಾಕ್ಸಿಕ್’ ರಿಲೀಸ್ ಡೇಟ್! ಹೊಸ ದಿನಾಂಕದ ಬಗ್ಗೆ ಅಪ್‌ಡೇಟ್ ನೀಡಿದ ಚಿತ್ರತಂಡ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌