ಕಿಡ್ನಾಪ್‌ ಕೇಸ್‌ನಲ್ಲಿ ಅಂದರ್‌ ಆದ ಕುಖ್ಯಾತ ರೌಡಿಯ ಮೈ ಕೊಡವಿದಷ್ಟೂ ಹಳೇ ಹಿಸ್ಟರಿ! - Vistara News

ಕ್ರೈಂ

ಕಿಡ್ನಾಪ್‌ ಕೇಸ್‌ನಲ್ಲಿ ಅಂದರ್‌ ಆದ ಕುಖ್ಯಾತ ರೌಡಿಯ ಮೈ ಕೊಡವಿದಷ್ಟೂ ಹಳೇ ಹಿಸ್ಟರಿ!

ಕಿಡ್ನಾಪ್‌ ಯತ್ನದ ಪ್ರಕರಣದಲ್ಲಿ ವಿಚಾರಣೆಗೆ ಒಳಗಾಗುತ್ತಿರುವ ಕುಕ್ಯಾತ ರೌಡಿ ಬಾಂಬೆ ಸಲೀಮ್‌ನ ವಿಚಾರಣೆಯಲ್ಲಿ ಆತ ನಡೆಸಿದ ಕೊಲೆ ಕೃತ್ಯವೂ ಹೊರಬಿದ್ದಿದೆ.

VISTARANEWS.COM


on

bombay saleem
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆತ ಕುಖ್ಯಾತ ರೌಡಿ, ಧಾರವಾಡ ಜೈಲಿನಲ್ಲಿದ್ದೇ ರಾಜ್ಯದ ನಾನಾ ಕಡೆ ಕಿಡ್ನಾಪ್‌, ದರೋಡೆ, ವಸೂಲಿ ನಡೆಸುತ್ತಿದ್ದ. ಇದೀಗ ಕಲಾಸಿಪಾಳ್ಯದ ಉದ್ಯಮಿಯೊಬ್ಬರನ್ನು ಕಿಡ್ನಾಪ್‌ ಮಾಡಲು ಮುಂದಾಗಿ ಸಿಕ್ಕಿಬಿದ್ದು, ಪೊಲೀಸರು ವಿಚಾರಿಸಿದಷ್ಟೂ ಹಳೇ ಪ್ರಕರಣಗಳ ಬಗ್ಗೆ ಬಾಯಿ ಬಿಡುತ್ತಿದ್ದಾನೆ.

ವಿಶೇಷವೆಂದರೆ ಈತ ಯಾರನ್ನು ಕಿಡ್ನಾಪ್ ಮಾಡಿಸಿದರೂ, ಮರ್ಡರ್ ಮಾಡಿದರೂ ಈತ ಕೇಸಿನಲ್ಲಿ ಫಿಟ್‌ ಆಗುತ್ತಿರಲಿಲ್ಲ. ‌ಕ್ರೈಂ ಮಾಡಿದ ಸಹಚರರು ಮಾತ್ರ ಜೈಲಿಗೆ ಹೋಗುತ್ತಿದ್ದರು. ಈತ ಮಾತ್ರ ಆರಾಮಾಗಿ ಇರುತ್ತಿದ್ದ. ಇಂಥ ನಟೋರಿಯಸ್ ರೌಡಿ ಬಾಂಬೇ ಸಲೀಂ ಈಗ ಸಿಸಿಬಿ ಮುಂದೆ ಒಂದೊಂದೇ ಪ್ರಕರಣ ಬಾಯಿ ಬಿಡುತ್ತಿದ್ದಾನೆ.

ಕಳೆದೊಂದು ತಿಂಗಳ ಹಿಂದೆ ಕಲಾಸಿಪಾಳ್ಯದ ರಿಯಲ್ ಎಸ್ಟೇಟ್ ಉದ್ಯಮಿ ಮುಯಿಜ್ ಅಹಮ್ಮದ್ ಎಂಬವರನ್ನು ಕಿಡ್ನಾಪ್ ಮಾಡಲು ಈತ ಪ್ರಯತ್ನ ನಡೆಸಿದ್ದ. ಧಾರವಾಡದ ಜೈಲಿನಲ್ಲಿ ಕೂತೇ ಕಿಡ್ನಾಪ್ ಮಾಡಿಸಲು‌ ಮುಂದಾಗಿದ್ದ. ಆದರೆ ಕಿಡ್ನಾಪ್ ಮಾಡಲು ಬಂದವರು ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದರು. ಸಿಸಿಬಿ ವಿಚಾರಣೆ ನಡೆಸಿದಾಗ ಬಾಂಬೇ ಸಲೀಮನೇ ಕಿಡ್ನಾಪ್ ಯತ್ನ ಮಾಡಿಸಿರುವುದು ಖಚಿತವಾಗಿತ್ತು. ನಂತರ ಧಾರವಾಡ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಸಲೀಂನನ್ನು ಕರೆತಂದು ವಿಚಾರಣೆ ಮಾಡಲಾಗಿತ್ತು.

ಇದನ್ನೂ ಓದಿ | ಮಂತ್ರಿ ಮಾಲ್‌ ಬಳಿ ಹಾಡಹಗಲೇ ಮಚ್ಚಿನೇಟು, ರೌಡಿ ಶೀಟರ್‌ ಗಂಭೀರ

ಈ ವೇಳೆ ಸಲೀಂ, ತಾನು ಹತ್ತಾರು ಕೊಲೆ-ಸುಲಿಗೆ-ಕಿಡ್ನಾಪ್ ಮಾಡಿಸಿದ್ದೇನೆ ಎಂಬ ವಿಚಾರ ಬಾಯಿ ಬಿಟ್ಟಿದ್ದಾನೆ. ಸೋಲದೇವನಹಳ್ಳಿಯಲ್ಲಿ ಪ್ರಕಾಶ್ ಎಂಬಾತನನ್ನು ಕೊಂದು ಮುಗಿಸಿದ್ದೆ. ಆದರೆ ಈ ಕೇಸಲ್ಲಿ ಫಿಟ್‌ ಆದದ್ದು ಮಾತ್ರ ಲೋಕೇಶ್ ರೆಡ್ಡಿ ಹಾಗೂ ಆತನ ತಂಡ. ಲೋಕೇಶ ನನ್ನ ಸಹಚರನಾಗಿದ್ದು, ಆತನನ್ನು ಹೆದರಿಸಿ ಶರಣಾಗುವಂತೆ ಮಾಡಿದ್ದೆ. ಅದೇ ರೀತಿ ಬಾಗೇಪಲ್ಲಿ, ತಲಘಟ್ಟಪುರ ಸೇರಿದಂತೆ ನಾನಾ ಭಾಗದಲ್ಲಿ ಕೊಲೆ-ಕೊಲೆಯತ್ನದಂತಹ ಪ್ರಕರಣಗಳಲ್ಲಿ ಭಾಗಿಯಾಗಿದ್ದೆ ಎಂದಿದ್ದಾನೆ.

ಇದೀಗ ಕೊಲೆ ಪ್ರಕರಣ ಸಂಬಂಧ ಸಲೀಂನನ್ನು ಸೋಲದೇವನಹಳ್ಳಿ ಪೊಲೀಸರು ಬಾಡಿ ವಾರೆಂಟ್ ಮೂಲಕ ಕರೆತಂದಿದ್ದಾರೆ. ಈತನಿಂದ ಇನ್ನೆಷ್ಟು ಕೇಸ್‌ಗಳು ಹೊರಬೀಳುತ್ತವೋ ನೋಡಬೇಕಿದೆ.

ಇದನ್ನೂ ಓದಿ | ರೌಡಿಶೀಟರ್‌ನಿಂದ ವ್ಯಾಪಾರಿಗೆ ಹಫ್ತಾ ವಸೂಲಿ ಧಮಕಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

Actor Darshan : ದರ್ಶನ್‌ ಫ್ಯಾನ್ಸ್‌ಗೆ (Actor Darshan Fans) ಕಾನೂನು ಕಂಟಕ ಎದುರಾಗಿದೆ. ಕೊಲೆ ಕೇಸ್‌ನಲ್ಲಿ ನೆಚ್ಚಿನ ನಟ ಜೈಲುಪಾಲಾಗಿದ್ದು, ದರ್ಶನ್‌ಗೆ ನೀಡಿರುವ ಖೈದಿ ನಂಬರ್‌ನನ್ನೇ ಸ್ಟಿಕ್ಟರ್‌ ಆಗಿ ಮಾಡಿಕೊಂಡು ಗಾಡಿಗಳಿಗೆ ಅಂಟಿಸಿಕೊಳ್ಳುತ್ತಿದ್ದಾರೆ. ಇದೀಗ ರೂಲ್ಸ್‌ ಬ್ರೇಕ್‌ ಮಾಡುವವರ ವಿರುದ್ಧ ಕೇಸ್‌ ದಾಖಲಿಸಲು ಚಿಂತನೆ ನಡೆದಿದೆ.

VISTARANEWS.COM


on

By

Actor Darshan
Koo

ಬೆಂಗಳೂರು: ಅಭಿಮಾನಿಗಳ ಗಾಡಿಗಳಲ್ಲಿ ದರ್ಶನ್ (Actor Darshan) ಖೈದಿ ನಂಬರ್ 6106 ಸ್ಟಿಕ್ಕರ್‌ಗಳಿಗೆ ಡಿಮ್ಯಾಂಡ್ ಹೆಚ್ಚಾಗಿದೆ. ಇದರ ಬೆನ್ನಲ್ಲೇ ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ ಎದುರಾಗಿದ್ದು, ರೂಲ್ಸ್‌ ಬ್ರೇಕ್‌ ಮಾಡಿದರೆ ಕೇಸ್‌ ಬೀಳುತ್ತೆ ಎಂಬ ಎಚ್ಚರಿಕೆಯನ್ನು ಬೆಂಗಳೂರು ಟ್ರಾಫಿಕ್‌ ಪೊಲೀಸರು (Traffic violation) ನೀಡಿದ್ದಾರೆ.

ಕೊಲೆ ಕೇಸ್​ನಲ್ಲಿ ನಟ ದರ್ಶನ್‌ ಜೈಲುಪಾಲಾಗಿದ್ದಾರೆ. ದರ್ಶನ್‌ಗೆ ಜೈಲಿನಲ್ಲಿ ಖೈದಿ ನಂಬರ್ 6106 ಅನ್ನು ನೀಡಲಾಗಿದೆ. ಈ ನಂಬರ್‌ ಅನ್ನೇ ಸ್ಟಿಕರ್‌ ಮಾಡಿಕೊಂಡಿರುವ ಫ್ಯಾನ್ಸ್ ತಮ್ಮ ವಾಹನಗಳಿಗೆ ಅಂಟಿಸಿಕೊಳ್ಳುತ್ತಿದ್ದಾರೆ. ಇದೀಗ ನಂಬರ್ ಪ್ಲೇಟ್ ಮರೆಮಾಚಿ ಸ್ಟಿಕ್ಕರ್ ಅಂಟಿಸಿದವರಿಗೆ ಸಂಕಷ್ಟ ಎದುರಾಗಿದೆ.

Actor Darshan

ಯಾವುದೇ ಕಾರಣಕ್ಕೂ ವಾಹನಗಳ ನಂಬರ್ ಪ್ಲೇಟ್ ಮರೆಮಾಚುವಂತಿಲ್ಲ. ನಂಬರ್‌ ಪ್ಲೇಟ್ ಇರುವ ಕಡೆ ಸ್ಟಿಕ್ಕರ್‌ಗಳನ್ನು ಅಂಟಿಸುವಂತಿಲ್ಲ. ಈ ರೀತಿ ಮಾಡಿದರೆ ಸಂಚಾರಿ ನಿಯಮ ಉಲ್ಲಂಘನೆ ಮಾಡಿದಂತೆ ಆಗುತ್ತದೆ. ಖೈದಿ ನಂಬರ್ ಸ್ಟಿಕ್ಕರ್ ಅಂಟಿಸಿ ನಂಬರ್ ಪ್ಲೇಟ್ ಮರೆ ಮಾಚಿರುವವರ ವಿರುದ್ಧ ಕೇಸ್ ದಾಖಲಿಸಲು ಟ್ರಾಫಿಕ್‌ ಪೊಲೀಸರು ಮುಂದಾಗಿದ್ದಾರೆ. ಡಿಫೆಕ್ಟಿವ್ ನಂಬರ್ ಪ್ಲೇಟ್ ಅಡಿ ಕೇಸ್ ದಾಖಲಾಗುತ್ತದೆ.

ದರ್ಶನ್ ಭೇಟಿಯಾಗಲು ಅಭಿಮಾನಿಯ ರಂಪಾಟ

ದರ್ಶನ್ ಭೇಟಿ ಮಾಡಬೇಕೆಂದು ಅಭಿಮಾನಿಯೊಬ್ಬ ರಂಪಾಟವಾಡಿರುವುದು ಕಂಡುಬಂದಿದೆ. ಜೈಲ್ ಚೆಕ್ ಪೋಸ್ಟ್ ಬಳಿ ರಸ್ತೆಯಲ್ಲಿ ಕುಳಿತ ಅಭಿಮಾನಿ, ದರ್ಶನ್ ನೋಡಬೇಕೆಂದು ಕಣ್ಣೀರು ಹಾಕಿದ್ದಾನೆ. ಮದ್ಯಪಾನ ಮಾಡಿ ಬಂದಿದ್ದ ವ್ಯಕ್ತಿ, ದರ್ಶನ್ ನೋಡಲೇ ಬೇಕು ಎಂದು ಪಟ್ಟು ಹಿಡಿದಿದ್ದರಿಂದ ಆತನನ್ನು ಮನವೊಲಿಸಲು ಪೊಲೀಸರು ಹೈರಾಣಾದರು.

ಇದನ್ನೂ ಓದಿ: T20 World Cup 2024: ದರ್ಶನ್‌ ಜೈಲಿಗೆ ಹೋದಾಗೆಲ್ಲ ವಿಶ್ವಕಪ್‌ ಗೆದ್ದ ಭಾರತ; ಹೀಗ್ಯಾಕೆ ಅಂದ್ರು ನೆಟ್ಟಿಗರು?

ಜೈಲಲ್ಲಿ ದರ್ಶನ್‌ ಭೇಟಿಯಾದ ನಟಿ ರಕ್ಷಿತಾ, ಪ್ರೇಮ್ ದಂಪತಿ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ರನ್ನು (Actor Darshan) ಕೆಲ ಆಪ್ತರು ಭೇಟಿ ಮಾಡುತ್ತಿದ್ದಾರೆ. ಈ ನಡುವೆ ನಟಿ ರಕ್ಷಿತಾ, ಪ್ರೇಮ್ ದಂಪತಿ ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಭೇಟಿ ಬಳಿಕ ಪ್ರಕರಣದ ಬಗ್ಗೆ ರಕ್ಷಿತಾ, ಪ್ರೇಮ್ ದಂಪತಿ ಬೇಸರ ಹೊರಹಾಕಿದ್ದು, ಇಂತಹ ಪ್ರಕರಣ ನಡೆಯಬಾರದಿತ್ತು ಎಂದು ಹೇಳಿದ್ದಾರೆ.

ನಟ ದರ್ಶನ್ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ನಟಿ ರಕ್ಷಿತಾ, ಈ ಘಟನೆ ನಡೆದಿರುವುದು ದುರಾದೃಷ್ಟಕರ. ನಮಗೆ ಈ ಪ್ರಕರಣದ ಬಗ್ಗೆ ಬೇಜಾರು ಇದೆ ಎಂದು ಹೇಳಿದರು.

ನಿರ್ದೇಶಕ ಜೋಗಿ ಪ್ರೇಮ್ ಪ್ರತಿಕ್ರಿಯಿಸಿ, ಪ್ರಕರಣ ನ್ಯಾಯಾಲಯದಲ್ಲಿದೆ. ನಾವು ಈ ಸಂದರ್ಭದಲ್ಲಿ ಪ್ರಕರಣದ ಈ ಬಗ್ಗೆ ಮಾತನಾಡುವುದು ಸರಿಯಲ್ಲ. ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ, ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಎಂದು ಹೇಳಿ, ಜೈಲಿನಲ್ಲಿ ದರ್ಶನ್ ಜತೆ ನಡೆದ ಮಾತುಕತೆ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದರು.

ಪ್ರಕರಣದ ಬಗ್ಗೆ ಪವಿತ್ರಾ ಗೌಡಗೆ ಏನೂ ಗೊತ್ತಿಲ್ಲ: ವಕೀಲ

ಪವಿತ್ರಾ ಗೌಡ ಪರ ವಕೀಲ ನಾರಾಯಣಸ್ವಾಮಿ ಪ್ರತಿಕ್ರಿಯಿಸಿ, ನ್ಯಾಯಾಂಗ ಬಂಧನದಲ್ಲಿದ್ದಾಗ ಎಲ್ಲರೂ ಚೆನ್ನಾಗಿಯೇ ಇರುತ್ತಾರೆ. ಯಾರಿಗೂ ಹಿಂಸೆ ಕೋಡಲು ಇಲ್ಲಿಗೆ ಕರೆದುಕೊಂಡು ಬರೋದಿಲ್ಲ. ಅವರ ಮನಪರಿವರ್ತನೆಯಾಗಲಿ ಎಂದು ಜೈಲಿಗೆ ಕರೆದುಕೊಂಡು ಬರಲಾಗುತ್ತದೆ. ಎಲ್ಲರೂ ಹೇಗೆ ಇರುತ್ತಾರೋ ಹಾಗೆ ಪವಿತ್ರಾ ಕೂಡ ಇರುತ್ತಾರೆ. ಅವರಿಗೆ ಸ್ಪೇಷಲ್ ಏನು ಇಲ್ಲ ಎಂದು ತಿಳಿಸಿದ್ದಾರೆ.

ಜಾಮೀನು ಅರ್ಜಿ ಯಾವಾಗ ಹಾಕಿಕೊಳ್ಳಬೇಕು ಎನ್ನುವುದಕ್ಕೆ ಕಾಯುತ್ತಿದ್ದೇವೆ. ಅದರ ಬಗ್ಗೆಯೇ ಚರ್ಚೆ ನಡೆಸಲು ಭೇಟಿ ಮಾಡಿದ್ದೆ. ಅವರಿಗೆ ಪ್ರಕರಣದ ಬಗ್ಗೆಯೇ ಏನೂ ತಿಳಿದಿಲ್ಲ. ಅವರಿಗೆ ಶಾಕ್ ಆಗಿದೆ. ಯಾವಾಗಲೂ ತಪ್ಪು ಮಾಡಿರಲಿಲ್ಲ, ಈ ರೀತಿಯಾದಾಗ ನೋವಾಗುತ್ತೆ. ತಪ್ಪು ಮಾಡಿರುವವರಿಗಾದರೆ ಅದರ ಅರಿವಿರುತ್ತದೆ. ನಾನು ಏನೂ ಮಾಡಿಲ್ಲ, ನನಗೆ ಯಾಕೆ ಇಂತ ಪರಿಸ್ಥಿತಿ ಎಂದು ಶಾಕ್‌ನಲ್ಲಿದ್ದಾರೆ. ಜುಲೈ 4ರ ಬಳಿಕ ಜಾಮೀನು ಅರ್ಜಿ ಬಗ್ಗೆ ಚಿಂತಿಸಲಾಗುವುದು ಎಂದು ಹೇಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Road Accident : ಬೆಂಗಳೂರಲ್ಲಿ ಬೈಕ್‌ ಸವಾರರಿಬ್ಬರ ಪ್ರಾಣ ಕಸಿದ ಹೈ ಸ್ಪೀಡ್‌

Road Accident : ಅತಿ ವೇಗ ಚಾಲನೆಯು ಬೈಕ್‌ ಸವಾರರಿಬ್ಬರ ಪ್ರಾಣವನ್ನೇ ಕಸಿದಿದೆ. ನಿಂತಿದ್ದ ಕಾಂಕ್ರೀಟ್‌ ಮಿಕ್ಸಿಂಗ್‌ ಲಾರಿಗೆ ಬೈಕ್‌ ಡಿಕ್ಕಿಯಾಗಿ ಸವಾರ ಮೃತಪಟ್ಟರೆ, ಮತ್ತೊಂದು ಕಡೆ ಬೈಕ್‌ ಸ್ಕಿಡ್‌ ಆಗಿ ಮತ್ತೊಬ್ಬ ಸವಾರನ ಪ್ರಾಣಪಕ್ಷಿ ಹಾರಿಹೋಗಿದೆ.

VISTARANEWS.COM


on

By

Road Accident
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಬ್ಬರು ಬೈಕ್‌ ಸವಾರರು ರಸ್ತೆ ಅಪಘಾತದಲ್ಲಿ (Road Accident ) ಪ್ರಾಣವನ್ನು ಕಳೆದುಕೊಂಡಿದ್ದಾರೆ. ಕಾಂಕ್ರೀಟ್ ಮಿಕ್ಸಿಂಗ್ ಲಾರಿಗೆ ಬೈಕ್‌ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರ ಮೃತಪಟ್ಟಿದ್ದಾನೆ. ಬೆಂಗಳೂರಿನ ಹೆಬ್ಬಾಳ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಜರ್ನಾಧನ (25) ಮೃತ ದುರ್ದೈವಿ.

ತಡರಾತ್ರಿ 2.30ರ ಸಮಯಕ್ಕೆ ಈ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿ ಬರುತ್ತಿದ್ದ ಜರ್ನಾಧನ ರಸ್ತೆ ಬದಿ ನಿಂತಿದ್ದ ಕಾಂಕ್ರೀಟ್ ಮಿಕ್ಸಿಂಟ್ ಲಾರಿಗೆ ಹಿಂಬದಿಯಿಂದ ಗುದ್ದಿದ್ದಾನೆ. ಗುದ್ದಿದ ರಭಸಕ್ಕೆ ಹಾರಿ ಕೆಳಗೆ ಬಿದ್ದ ಜರ್ನಾಧನನ ತಲೆಗೆ ಗಂಭೀರ ಪೆಟ್ಟಾಗಿದೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಜನಾರ್ಧನನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ. ಬೆಂಗಳೂರಿನ ಮುತ್ಯಾಲ ನಗರ ನಿವಾಸಿಯಾಗಿರುವ ಜರ್ನಾಧನ ರಾತ್ರಿ ಕೆಲಸ ಮುಗಿಸಿ ಮನೆಗೆ ವಾಪಸ್‌ ಆಗುತ್ತಿದ್ದಾಗ ಈ ಘಟನೆ ನಡೆದಿದೆ. ಹೆಬ್ಬಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Accident: ಕೂಡ್ಲಿಗಿಯಲ್ಲಿ ಮತ್ತೊಂದು ರಸ್ತೆ ಅಪಘಾತ; ಇಬ್ಬರ ಸಾವು

ಬೈಕ್‌ನಿಂದ ಸ್ಕಿಡ್‌ ಆಗಿ ಕೆಳಗೆ ಬಿದ್ದ ಸವಾರ ಸಾವು

ಅತಿ ವೇಗ ಚಾಲನೆಯಿಂದ ಅಪಘಾತ ಸಂಭವಿಸಿದ್ದು, ಯುವಕನೊರ್ವ ಮೃತಪಟ್ಟಿದ್ದಾನೆ. ಬೈಕ್‌ನಿಂದ ಸ್ಕಿಡ್ ಆಗಿ ಕೆಳಗೆ ಬಿದ್ದ ಕುಮಾರ್ (30) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನಿನ್ನೆ ತಡರಾತ್ರಿ 1.30ಕ್ಕೆ ಬೆಂಗಳೂರಿನ ಬೊಮ್ಮನಹಳ್ಳಿ ಆಕ್ಸ್‌ಫರ್ಡ್ ಕಾಲೇಜು ಮುಂಭಾಗ ಘಟನೆ ನಡೆದಿದೆ.

ಕುಮಾರ್ ಮತ್ತು ನವೀನ್ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಬೈಕ್ ಸ್ಕಿಡ್ ಆಗಿ ಇಬ್ಬರು ಕೆಳಗೆ ಬಿದ್ದಿದ್ದಾರೆ. ಸ್ಥಳದಲ್ಲೇ ಕುಮಾರ್ ಮೃತಪಟ್ಟರೇ ನವೀನ್‌ ಗಂಭೀರ ಗಾಯಗೊಂಡಿದ್ದಾನೆ. ಸದ್ಯ ನವೀನ್ (20) ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕುಮಾರ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಡಿವಾಳ ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮೈಸೂರು

Self Harming : ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಯುವಕ

Self Harming : ಸಾಲದ ಸುಳಿಗೆ ಸಿಲುಕಿ ಯುವಕನೊರ್ವ ಡೆತ್‌ನೋಟ್‌ (Death note) ಬರೆದಿಟ್ಟು, ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ. ನನ್ನ ಸಾವಿಗೆ ಕಾರಣರಾದವರಿಗೆ ಶಿಕ್ಷೆ ನೀಡುವಂತೆ ಡೆತ್ ನೋಟ್‌ ಬರೆದಿದ್ದಾನೆ.

VISTARANEWS.COM


on

By

Self Harming
ಸಾಂದರ್ಭಿಕ ಚಿತ್ರ
Koo

ಮೈಸೂರು: ಸಾಲಬಾಧೆಗೆ ಹೆದರಿದ ಯುವಕನೊರ್ವ ಆತ್ಮಹತ್ಯೆಗೆ (Self Harming) ಶರಣಾಗಿದ್ದಾನೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದಲ್ಲಿ ಘಟನೆ ನಡೆದಿದೆ. ಯತೀಕ್ (25) ಮೃತ ದುರ್ದೈವಿ.

ಕೆಆರ್‌ ತಾಲೂಕಿನ ಹೆಬ್ಬಾಳು ಕೊಪ್ಪಲು ಗ್ರಾಮದ ನಿವಾಸಿಯಾದ ಯತೀಕ್‌ ಡೆತ್ ನೋಟ್ ಬರೆದಿಟ್ಟು ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ. ಮನೆಯಲ್ಲಿ ಹಣಕಾಸಿನ ಸಮಸ್ಯೆ ಎಂದು ಕ್ರೆಡಿಟ್ ಕಾರ್ಡ್ ಜತೆಗೆ ಸಾಲ ಪಡೆದಿದ್ದ.

ಸಾಲ ತೀರಿಸಲು ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದ ಯತೀಕ್‌, ಬೆಂಗಳೂರಿನಲ್ಲಿ ಫುಡ್‌ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಷೇರು ಮಾರ್ಕೆಟ್‌ನಲ್ಲೂ ಹಣ ಹೂಡಿಕೆ ಮಾಡಿದ್ದ. ಆದರೆ ಮಾಡಿದ್ದ ಸಾಲಕ್ಕೆ ಇಎಂಐ ಕಟ್ಟಲು ಸಾಧ್ಯವಾಗದೆ ಮನನೊಂದಿದ್ದ. ನನ್ನ ಸಾವಿಗೆ ಕಾರಣರಾದವರಿಗೆ ಶಿಕ್ಷೆ ನೀಡುವಂತೆ ಡೆತ್ ನೋಟ್‌ ಬರೆದಿದ್ದಾನೆ.

ಇತ್ತ ಮಗನ ಸಾವಿಗೆ ನ್ಯಾಯ ಕೊಡಿಸುವಂತೆ ತಂದೆ ಎಚ್ ಟಿ ರಮೇಶ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: Snake Bite : ಮರದಡಿ ಕುಳಿತಾಗ ಮಹಿಳೆಯ ಕಿವಿಗೆ ಕುಟುಕಿದ ಹಾವು; ವಿಷವೇರಿ ಸಾವು

ಸಾಲಗಾರರ ಕಾಟ; ಇಲಿ ಪಾಷಣ ಸೇವಿಸಿ ಜೀವ ಬಿಟ್ಟ ಮೆಕ್ಯಾನಿಕ್

ದೊಡ್ಡಬಳ್ಳಾಪುರ: ಸಾಲ ಮಾಡಿ ಬಡ್ಡಿ ಕಟ್ಟಲಾಗದೆ ಬೇಸತ್ತ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ಪರ್ವೀಜ್ ಪಾಷ (38) ಆತ್ಮಹತ್ಯೆಗೆ ಶರಣಾದವರು.

ದೊಡ್ಡಬಳ್ಳಾಪುರ ನಗರದ ರೋಜಿಪುರ ಬಡಾವಣೆಯ ನಿವಾಸಿಯಾದ ಪರ್ವೀಜ್ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೆಕ್ಯಾನಿಕ್ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಪರ್ವೀಜ್‌ ಈ ಹಿಂದೆ ಹಲವು ವ್ಯಕ್ತಿಗಳ ಬಳಿ ಬಡ್ಡಿಗೆ ಸಾಲ ಪಡೆದಿದ್ದ. ಸಾಲಗಾರರ ಕಾಟ ತಡೆಯಲಾರದೇ ಮನನೊಂದಿದ್ದ.

ಸಾಲ ತೀರಿಸಲು ದಿಕ್ಕು ದೋಚದೆ ಮೂರು ದಿನ ಊಟ ಬಿಟ್ಟಿದ್ದ. ನಂತರ ಅಂಗಡಿ ಮುಂದೆ ಸಾಲಗಾರರ ಕಾಟ ಹೆಚ್ಚಾದಾಗ ಕಳೆದ ಭಾನುವಾರ ಮನೆಗೆ ಬಂದವರೇ ಇಲಿ ಪಾಷಣ ಸೇವಿಸಿದ್ದರು. ತೀವ್ರ ಅಸ್ವಸ್ಥಗೊಂಡಿದ್ದ ಪರ್ವೀಜ್‌ ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಪರ್ವೀಜ್‌ ಸಾವನ್ನಪ್ಪಿದ್ದಾನೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Self harming

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ರೋಜಿಪುರದಲ್ಲಿ ಈ ಘಟನೆ ನಡೆದಿದೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿಕ್ಕಬಳ್ಳಾಪುರ

Physical Abuse : ಆಟವಾಡುತ್ತಿದ್ದ 6 ವರ್ಷದ ಬಾಲಕಿ ಮೇಲೆ 17 ವರ್ಷದ ಬಾಲಕನಿಂದ ಅತ್ಯಾಚಾರ

Physical Abuse : 6 ವರ್ಷದ ಪುಟ್ಟ ಬಾಲಕಿಯನ್ನು ಮನೆಗೆ ಕರೆದೊಯ್ದ 17 ವರ್ಷದ ಬಾಲಕ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ನರಳಾಟ ಕಂಡು ಪೋಷಕರು ಗಮನಿಸಿದಾಗ ತೀವ್ರ ರಕ್ತಸ್ರಾವವಾಗಿರುವುದು ಕಂಡಿದೆ. ಆಕೆಯನ್ನು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ.

VISTARANEWS.COM


on

By

Physical Abuse
ಸಾಂದರ್ಭಿಕ ಚಿತ್ರ
Koo

ಚಿಕ್ಕಬಳ್ಳಾಪುರ: ಮನೆ ಮುಂದೆ ಆಟವಾಡುತ್ತಿದ್ದ ಆರು ವರ್ಷದ ಬಾಲಕಿಯನ್ನು ಕರೆದೊಯ್ದ 17 ವರ್ಷದ ಬಾಲಕ ಲೈಂಗಿಕ ದೌರ್ಜನ್ಯ (Physical Abuse ) ಎಸಗಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಾಲಕಿ ಒಬ್ಬಳೇ ಆಟವಾಡುತ್ತಿದ್ದನ್ನು ಗಮನಿಸಿದ 17ರ ಪೋರ ತಿಂಡಿ ಕೊಡಿಸುವುದಾಗಿ ಪುಸಲಾಯಿಸಿದ್ದಾನೆ. ತಿಂಡಿ ಆಸೆಗೆ ಆತನೊಂದಿಗೆ ಬಾಲಕಿ ಹೋಗಿದ್ದಾಳೆ. ಆದರೆ ಅಂಗಡಿ ಕರೆದುಕೊಂಡು ಹೋಗದೇ ಬಾಲಕಿಯನ್ನು ತನ್ನ ಮನೆಯೊಳಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ. ಬಳಿಕ ಈ ವಿಚಾರವನ್ನು ಯಾರಿಗೂ ಹೇಳದಂತೆ ವಾಪಸ್‌ ಬಾಲಕಿಯನ್ನು ಕಳಿಸಿದ್ದಾನೆ.

ಆದರೆ ತೀವ್ರ ರಕ್ತಸ್ರಾವವಾಗಿ ಅಸ್ವಸ್ಥಗೊಂಡಿದ್ದ ಬಾಲಕಿಯನ್ನು ಗಮನಿಸಿದ ಪೋಷಕರು ವಿಚಾರಿಸಿದ್ದಾರೆ. ಆಗ ಈ ಕೃತ್ಯ ಬೆಳಕಿಗೆ ಬಂದಿದೆ. ಬಾಲಕಿಯನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ಸಂಬಂಧ ಬಾಲಕಿ ಪೋಷಕರು ದೂರು ನೀಡಿದ್ದು, ಅತ್ಯಾಚಾರವೆಸಗಿದ ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Shawarma: ನಾನ್‌ವೆಜ್ ಪ್ರಿಯರಿಗೆ ಬ್ಯಾಡ್‌ ನ್ಯೂಸ್‌; ಶೀಘ್ರದಲ್ಲೇ ರಾಜ್ಯದಲ್ಲಿ ಶವರ್ಮಾ ಬ್ಯಾನ್ ?

ಮೃತ್ಯುಕೂಪವಾದ ಎನ್‌ಎಚ್‌ 50 ರಸ್ತೆ

ವಿಜಯನಗರದ ಕೂಡ್ಲಿಗಿಯ ಎನ್‌ಎಚ್‌ 50 (NH 50) ರಸ್ತೆ ಮೃತ್ಯುಕೂಪವಾಗಿ (Road Accident) ಪರಿಣಮಿಸುತ್ತಿದೆ. ಈ ರಸ್ತೆ ಪದೇ ಪದೆ ಅಪಘಾತಗಳಿಂದ ಸದ್ದು ಮಾಡುತ್ತಿದೆ. ಇದೀಗ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, 5 ಮಂದಿ ಗಾಯಗೊಂಡಿದ್ದಾರೆ.

ಇತ್ತೀಚೆಗೆ ಕೂಡ್ಲಿಗಿಯ ಎನ್‌ಎಚ್‌ 50ರಲ್ಲಿ ಟಿಟಿ ಟ್ರಾವೆಲರ್‌ ಅಪಘಾತವಾಗಿ ಓರ್ವ ಮೃತಪಟ್ಟಿದ್ದರು. ಅದು ಮಾಸುವ ಮುನ್ನ ಈಗ ಮತ್ತೆ ಅದೇ ರೀತಿಯ ಅಪಫಾತ ನಡೆದು ಇಬ್ಬರನ್ನು ಬಲಿ ಪಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಅಪಘಾತ ನಡೆದಿದ್ದು, ಮೃತರನ್ನು ಕಾರು ಚಾಲಕ ವಿನಯ್ (27) ಮತ್ತು ಚನ್ನವಸವ (27) ಎಂದು ಗುರುತಿಸಲಾಗಿದೆ.

ರಾಯಚೂರಿನ ಲಿಂಗಸೂಗೂರಿನಿಂದ ಕೇರಳದ ವಯನಾಡಿಗೆ ಹೊರಟಿದ್ದ ಗೆಳೆಯರ ತಂಡವಿದ್ದ ಕಾರು ಪಲ್ಟಿ ಹೊಡೆದು ಅವಘಡ ನಡೆದಿದೆ. ಅತೀ ವೇಗದಿಂದ ಬಂದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿತ್ತು. ಗಾಯಗೊಂಡ 5 ಮಂದಿಯನ್ನು ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮೂವರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕತ್ತು ಕೊಯ್ದರೂ ಬದುಕುಳಿದ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರುಗಮಲ್ಲ ಗ್ರಾಮದ ಕೆನರಾ ಬ್ಯಾಂಕ್ ಬಳಿ ಕುಡಿದು ಗಲಾಟೆ ನಡೆದಿದ್ದು, ವ್ಯಕ್ತಿಯೊಬ್ಬನಿಗೆ ಗಾಯಗಳಾಗಿವೆ. ಕುಡಿದ ಅಮಲಿನಲ್ಲಿ ತೃತೀಯ ಲಿಂಗಿ ಹಾಗೂ ಇಬ್ಬರು ವ್ಯಕ್ತಿಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ತೃತೀಯ ಲಿಂಗಿ ಮತ್ತು ವ್ಯಕ್ತಿಯೊಬ್ಬ ಸೇರಿ ಕತ್ತು ಕೊಯ್ದರೂ ಅದೃಷ್ಟವಶಾತ್‌ ನೌಷದ್ ಎನ್ನುವ ವ್ಯಕ್ತಿ ಬದುಕುಳಿದಿದ್ದಾನೆ.

ಆರೋಪಿಗಳಾದ ಶಕೀಲ ಹಾಗೂ ಸಾದಿಕ್.

ಘಟನೆ ಹಿನ್ನಲೆ

ಮುರುಗಮಲ್ಲ ಗ್ರಾಮದ ಕೆನರಾ ಬ್ಯಾಂಕ್ ಬಳಿಯ ಬಾರ್‌ನಲ್ಲಿ ಕುಡಿದು ಗ್ಯಾಂಗ್ ಗಲಾಟೆ ಮಾಡಿಕೊಂಡಿತ್ತು. ಈ ವೇಳೆ ಮಂಗಳಮುಖಿ ಶಕೀಲ ಹಾಗೂ ಸಾದಿಕ್ ಸೇರಿ ನೌಷದ್ ಮೇಲೆ ದಾಳಿ ನಡೆಸಿ ಕೊಲೆಗೆ ಯತ್ನಿಸಿದರು. ಅವರು ಹರಿತವಾದ ಚಾಕುವಿನಿಂದ ನೌಷದ್ ಕತ್ತು ಕೊಯ್ದಿದ್ದಾರೆ. ತಕ್ಷಣ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಸದ್ಯ ನೌಷದ್ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಸ್ಥಳಕ್ಕೆ ಕೆಂಚಾರ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಕೊಲೆ ಯತ್ನ ನಡೆಸಿದ ಶಕೀಲ ಹಾಗು ಸಾದಿಕ್‌ನನ್ನು ವಶಕ್ಕೆ ಪಡೆದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
KPCC President
ಪ್ರಮುಖ ಸುದ್ದಿ6 mins ago

KPCC President: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸುಳಿವು; ಲಿಂಗಾಯತರಿಗೆ ಅವಕಾಶ ನೀಡಲು ಒತ್ತಾಯ

Jayam Ravi married to superstar rajinikanth daughter
ಕಾಲಿವುಡ್10 mins ago

Jayam Ravi: ರಜನಿಕಾಂತ್‌ ಮಗಳ ಜತೆ ಜಯಂ ರವಿ ಮದುವೆ?

T20 World Cup 2024
ಕ್ರೀಡೆ19 mins ago

T20 World Cup 2024: ಸಂಭ್ರಮಾಚರಣೆ ವೇಳೆ ದುರಂತ: ಧ್ವಜ ಹಾರಿಸಲು ಹೋಗಿ ಬಿದ್ದ ಅಭಿಮಾನಿ; ವೈರಲ್‌ ವಿಡಿಯೊ ಇಲ್ಲಿದೆ

ಕ್ರೀಡೆ39 mins ago

Rohit Sharma: ವಿಶ್ವಕಪ್​ ಗೆದ್ದ ನಾಯಕ ರೋಹಿತ್​ಗೆ ಆಶೀರ್ವಾದ ಮಾಡಿದ ಕಾಂತಾರದ ‘ಪಂಜುರ್ಲಿ’ ದೈವ!

Actor Darshan
ಬೆಂಗಳೂರು42 mins ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

CM Siddaramaiah To Inaugurate Film Producers Association Building says build film city
ಸ್ಯಾಂಡಲ್ ವುಡ್46 mins ago

CM Siddaramaiah: ಡಾ.ರಾಜ್‍ಕುಮಾರ್ ಕನಸಿನಂತೆ ಫಿಲ್ಮ್ ಸಿಟಿ ನಿರ್ಮಾಣ ಮಾಡ್ತೇವೆ ಎಂದ ಸಿದ್ದರಾಮಯ್ಯ

Gold Rate Today
ಚಿನ್ನದ ದರ1 hour ago

Gold Rate Today: ಆಭರಣ ಖರೀದಿಗೆ ಇದು ಸೂಕ್ತ ಸಮಯ; ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ

Mann Ki Baat
ದೇಶ1 hour ago

Mann Ki Baat: ʼಸಂವಿಧಾನದ ಬಗ್ಗೆ ಅಚಲ ನಂಬಿಕೆ ಇರಿಸಿದ್ದಕ್ಕೆ ಧನ್ಯವಾದʼ-ಮೋದಿ ಮನ್‌ ಕೀ ಬಾತ್‌ ಹೈಲೈಟ್ಸ್‌ ಹೀಗಿದೆ ನೋಡಿ

Road Accident
ಬೆಂಗಳೂರು1 hour ago

Road Accident : ಬೆಂಗಳೂರಲ್ಲಿ ಬೈಕ್‌ ಸವಾರರಿಬ್ಬರ ಪ್ರಾಣ ಕಸಿದ ಹೈ ಸ್ಪೀಡ್‌

Hardik Pandya
ಕ್ರೀಡೆ1 hour ago

Hardik Pandya: ವಿಶ್ವಕಪ್​ ಗೆಲುವಿನ ಬಳಿಕ ಹಾರ್ದಿಕ್​ ಪಾಂಡ್ಯ ಕರೆ ಮಾಡಿದ್ದು ಯಾರಿಗೆ?; ನೆಟ್ಟಿಗರ ಉತ್ತರವೇನು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಬೆಂಗಳೂರು42 mins ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ21 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ6 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

ಟ್ರೆಂಡಿಂಗ್‌