ಕೆರೆ ಮುಚ್ಚಿ ನಿರ್ಮಿಸಿದ ಡಾಲರ್ಸ್‌ ಕಾಲೊನಿಯಲ್ಲಿ ಶ್ರೀಮಂತರಿಗೆ ಮನೆ ಕೊಟ್ರಿ: BDA ವಿರುದ್ಧ ಕುಮಾರಸ್ವಾಮಿ ಕಿಡಿ - Vistara News

ಬೆಂಗಳೂರು

ಕೆರೆ ಮುಚ್ಚಿ ನಿರ್ಮಿಸಿದ ಡಾಲರ್ಸ್‌ ಕಾಲೊನಿಯಲ್ಲಿ ಶ್ರೀಮಂತರಿಗೆ ಮನೆ ಕೊಟ್ರಿ: BDA ವಿರುದ್ಧ ಕುಮಾರಸ್ವಾಮಿ ಕಿಡಿ

ಬಿಡಿಎ ನಾಲ್ಕು ಸಾವಿರ ಎಕರೆ ಬಡಾವಣೆಗಾಗಿ ಭೂಮಿ ನೋಟಿಫೈ ಮಾಡುತ್ತದೆ. ಮತ್ತೆ ಯಾರಾದರೂ ಪ್ರಭಾವ ಬೀರಿದರೆ ಡಿನೋಟಿಫೈ ಮಾಡುತ್ತದೆ ಎಂದು ಕಾರ್ಯವೈಖರಿಯನ್ನು ಕುಮಾರಸ್ವಾಮಿ ಟೀಕಿಸಿದರು.

VISTARANEWS.COM


on

hd kumaraswamy session
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ನಗರದ ಇಂದಿನ ಎಲ್ಲ ಕರ್ಮಕಾಂಡಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವೇ (ಬಿಡಿಎ) ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ನಿಯಮ 69ರ ಅಡಿ ಅತಿವೃಷ್ಟಿ ಬಗ್ಗೆ ವಿಧಾನಸಭೆಯಲ್ಲಿ ಬುಧವಾರ ಸುದೀರ್ಘವಾಗಿ ಮಾತನಾಡಿದ ಕುಮಾರಸ್ವಾಮಿ, ಇದ್ದ ಎಲ್ಲ ಕೆರೆಗಳನ್ನು ಮುಚ್ಚಿ ಬಡಾವಣೆಗಳನ್ನು ಮಾಡಿ, ಕಾಲುವೆಗಳನ್ನು ಮುಚ್ಚಿ ಬೆಂಗಳೂರು ಸೌಂದರ್ಯವನ್ನು ಬಿಡಿಎ ನಾಶ ಮಾಡಿತು ಎಂದು ಕಿಡಿಕಾರಿದರು.

ನಾನಂತೂ ಅಧಿಕಾರದಲ್ಲಿ ಇದ್ದಾಗ ಬೆಂಗಳೂರು ‌ನಗರದ ವಿಷಯದಲ್ಲಿ ನಗರಕ್ಕೆ ಮಾರಕವಾಗುವ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಸಮಜಾಯಿಷಿ ನೀಡಿದ ಕುಮಾರಸ್ವಾಮಿ, ಮಳೆ ಅನಾಹುತ ಈಗಿನಿಂದ ಆಗಿದ್ದಲ್ಲ. 1999 ಈಚೆಗೆ ಐಟಿ ಕ್ಷೇತ್ರ ವೇಗವಾಗಿ ಬೆಳೆಯಲು ತೊಡಗಿತು. ಆಗ ಬೆಂಗಳೂರಿನ ಅಭಿವೃದ್ಧಿ ಬೇಕಾಬಿಟ್ಟಿ ದೊಡ್ಡ ಮಟ್ಟಿಗೆ ಆಯಿತು. ಮುಂದಾಗಬಹುದಾದ ಅನಾಹುತದ ಬಗ್ಗೆ ಯಾರೂ ಗಮನ ಕೊಡಲಿಲ್ಲ.

ಯಾವತ್ತು ಬಿಡಿಎ ಹುಟ್ಟಿಕೊಂಡಿತೋ ಆಗಲೇ ಬೆಂಗಳೂರಿಗೆ ಗಂಡಾಂತರ ಪ್ರಾರಂಭವಾಯಿತು. ಕೆರೆಗಳಿದ್ದಿದ್ದರೆ ಈ ರೀತಿ ನೆರೆ ಪರಿಸ್ಥಿತಿ ಎದುರಾಗುತ್ತಿರಲಿಲ್ಲ. ಕೆರೆ ಅಭಿವೃದ್ಧಿಪಡಿಸಿದ್ದರೆ ನೀರಿನ ಸಮಸ್ಯೆಯೇ ಆಗುತ್ತಿರಲಿಲ್ಲ. ಮೇಕೆದಾಟಿಗಾಗಿ ಪಾದಯಾತ್ರೆ ಮಾಡುವ ಅವಶ್ಯಕತೆಯೇ ಇರಲಿಲ್ಲ ಎಂದದರು.

ಕೆರೆ ಮುಚ್ಚಿ ನಿರ್ಮಿಸಲಾದ ಜೆಪಿ ನಗರ ಡಾಲರ್ಸ್ ಕಾಲೋನಿಯಲ್ಲಿ ಬಡವರಿಗೆ ನಿವೇಶನ ಕೊಟ್ಟಿದ್ದೀರಾ? ಅಲ್ಲಿ ಎಲ್ಲ ಐಎಎಸ್ ಅಧಿಕಾರಿಗಳು, ಶ್ರೀಮಂತರಿಗೆ ನಿವೇಶನ ಕೊಟ್ಡಿದ್ದೀರಿ. ಹಲವು ಕೆರೆಯನ್ನು ಮುಚ್ಚಿ ಹಾಕಿದ್ದಾರೆ. ಇದಕ್ಕೆಲ್ಲ ಕಾರಣ ಬಿಡಿಎ. ಬಿಡಿಎ ನಾಲ್ಕು ಸಾವಿರ ಎಕರೆ ಬಡಾವಣೆಗಾಗಿ ಭೂಮಿ ನೋಟಿಫೈ ಮಾಡುತ್ತದೆ. ಮತ್ತೆ ಯಾರಾದರೂ ಪ್ರಭಾವ ಬೀರಿದರೆ ಡಿನೋಟಿಫೈ ಮಾಡುತ್ತದೆ. ಆ ಪ್ರಾಧಿಕಾರಕ್ಕೆ ಒಂದು ಸ್ಪಷ್ಟತೆ ಇಲ್ಲ. ಒಂದು ನಿರ್ದಿಷ್ಟ ನೀಲನಕ್ಷೆ ಇಲ್ಲ ಎಂದು ಕಿಡಿಕಾರಿದರು.

ಒಂದು ಕಾಲದಲ್ಲಿ ಬೆಂಗಳೂರನ್ನು ಸಿಂಗಾಪುರ ಮಾಡಲು ಹೊರಟಿದ್ದರು. ಸಿಂಗಾಪುರ ಮಾಡಲು ಹೋಗಿಯೇ ಈ ರೀತಿ ಆಗಿದೆ ಎಂದು ಹಿಂದಿನ ಸರ್ಕಾರಗಳನ್ನು ಕುಮಾರಸ್ವಾಮಿ ಟೀಕಿಸಿದರು.

ತೆರವಿಗೆ ರಾತ್ರೋರಾತ್ರಿ ಜ್ಞಾನೋದಯ ಆಗಿದೆಯಾ?:

ನೆರೆ ವಿಷಯದಲ್ಲಿ ಬೆಂಗಳೂರಿಗೆ ಶಾಶ್ವತ ಪರಿಹಾರ ಬೇಕು. ಸಿಎಜಿ ವರದಿಯಲ್ಲಿ ಕಾಲುವೆ ಮುಚ್ಚಿರುವುದರಿಂದ ಈ ನೆರೆ ಸಮಸ್ಯೆ ಎದುರಾಗಿದೆ ಎಂದು ತಿಳಿಸಲಾಗಿದೆ. ಡ್ರೈನೇಜ್ ಕಟ್ಟಲು ಹಣ ಹೋಗುತ್ತಿದೆಯಾ? ಅಥವಾ ಡ್ರೈನೇಜ್ ನಲ್ಲೇ ಹಣ ಹರಿದು ಹೋಗುತ್ತಿದೆಯಾ? ಹಣದ ದುರ್ಬಳಕೆ ಮಾಡಬಾರದು. ಹಣ ಲೂಟಿ ಮಾಡಿದವರ ಮೇಲೆ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು.

ನಾವು ತಾಂತ್ರಿಕವಾಗಿ, ಆರ್ಥಿಕವಾಗಿ ಬೆಳೆದಿದ್ದೇವೆ. ಆದರೆ ಜನರ ಸಂಕಷ್ಟ ಪರಿಹರಿಸಲು ಏಕೆ ಸಾಧ್ಯವಾಗುತ್ತಿಲ್ಲ? ಅಧಿಕಾರಿಗಳಿಗೆ ರಾತ್ರೋರಾತ್ರಿ ಜ್ಞಾನೋದಯ ಆಗಿದೆ. ಸಿಎಂ ಆದೇಶ ಕೊಟ್ಟ ಮೇಲೆ ಏಕೆ ಜ್ಞಾನೋದಾಯ ಆಗಿದೆ? ಇಷ್ಟು ದಿನ ಅಧಿಕಾರಿಗಳು ಏಕೆ ಏನೂ ಮಾಡಿಲ್ಲ? ಈ ದೇಶದ ಕಾನೂನು ಬರೀ ಶ್ರೀಮಂತರಿಗಾ? ಬಡವರಿಗೆ ಇಲ್ಲವಾ? ಮೂರು‌ನಾಲ್ಕು ದಿನ ಕಟ್ಟಡವನ್ನು ಒಡೆದರೆ ಆಗುವುದಿಲ್ಲ. ಮುಖ್ಯಮಂತ್ರಿಗಳು ಕಠಿಣವಾಗಿ ವರ್ತಿಸಬೇಕು. ಒಂದು ವಿಸ್ತೃತವಾದ ವರದಿ ತರಿಸಿ ಕ್ರಮ ಕೈಗೊಳ್ಳಬೇಕು. ಆದರೆ, ಮಾನವೀಯತೆಯಿಂದ ಬಡ ಕುಟುಂಬಗಳ ಬಗ್ಗೆ ಯೋಚಿಸಬೇಕು. ಇದು ಅವರು ಮಾಡಿದ ತಪ್ಪಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ಅಶ್ವತ್ಥನಾರಾಯಣ ವಿರುದ್ಧ ವಾಗ್ದಾಳಿ

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇ ಯೋಜನೆಯಿಂದ ಕೆಲ ಸಮಸ್ಯೆ ಎದುರಾಗಿದೆ. ಅವೈಜ್ಞಾನಿಕ ಕಾಮಗಾರಿ ರಸ್ತೆಯಲ್ಲಿ ಪ್ರವಾಹಕ್ಕೆ ಕಾರಣವಾಗಿದೆ. ಅಲ್ಲದೆ ರಾಮನಗರ ನಗರ ಪ್ರದೇಶದಲ್ಲಿ ನೆರೆ ಉಂಟಾಗಲು ರಾಮನಗರ ಪಕ್ಕದ ಕೆರೆ ಕೋಡಿ ಒಡೆದಿರುವುದೇ ಕಾರಣ‌. ಘಟಾನುಘಟಿ ನಾಯಕರು ಇರುವ ಜಿಲ್ಲೆಯಲ್ಲಿ ಯಾರೂ ಏನೂ ಮಾಡಲು ಆಗಿಲ್ಲ. ಮೂರು ವರ್ಷದಲ್ಲಿ ನಾವು ಬಂದು ಎಲ್ಲವನ್ನೂ ಮಾಡಿದ್ದೆವು ಎಂದು ಉಸ್ತುವಾರಿ ಸಚಿವರು ವೀರಾವೇಶದಿಂದ ಮಾತನಾಡಿದ್ದರು. ಅವರು ಏನು ಮಾಡಿದ್ದಾರೆ ಎಂಬುದು ಸದನದ ಮುಂದೆ ಇಡುವುದು ಸೂಕ್ತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

10 ವರ್ಷದಿಂದ ರಾಮನಗರದ ಅಭಿವೃದ್ಧಿ ಏನಾಗಿದೆ? ಕಳೆದ ಮೂರು ವರ್ಷದಿಂದ ಏನು ಅಭಿವೃದ್ಧಿ ಮಾಡಿದ್ದಾರೆ ಎಂಬ ಬಗ್ಗೆ ಸದನದ ಮುಂದೆ ಇಡಲಿ. ನನ್ನಿಂದ ಏನಾದರೂ ಲೋಪ ಆಗಿದೆಯೇ ಎಂಬ ಬಗ್ಗೆಯೂ ನನಗೂ ತಿಳಿಯುತ್ತದೆ ಎಂದು ತಿರುಗೇಟು ನೀಡಿದರು ಅವರು.

ಇದನ್ನೂ ಓದಿ | ʼಆಸರೆ ಮನೆಗಳು ಪಾಳು ಬಿದ್ದಿವೆʼ: ವಿಧಾನಸಭೆಯಲ್ಲಿ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ವಿಸ್ತಾರ ಗ್ರಾಮ ದನಿ: ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು ಮತದಾನ, SSLC ಫಲಿತಾಂಶದಂತೆ!

Vistara Gramadani: ಹಾಗೆ ನೋಡಿದರೆ, ಹೆಚ್ಚು ಓದಿದದವರು ನಾಗರಿಕತೆಯಲ್ಲಿ ಮುಂದಿದ್ದೇವೆ ಅಂತ ಭ್ರಮಿಸುವ ನಗರವಾಸಿಗಳು ಮತದಾನದಂತಹ ಕರ್ತವ್ಯದಲ್ಲಿ ಗ್ರಾಮೀಣ ಪ್ರದೇಶದವರಿಗಿಂತ ಪರ್ಸಂಟೇಜಿನಲ್ಲಿ ಮುಂದಿರಬೇಕಿತ್ತು. ಆದರೆ, ವಾಸ್ತವವಾಗಿ ಮತದಾನ ಇರಲಿ, PUC ಪಲಿತಾಂಶ ಇರಲಿ, ಒಟ್ಟಾರೆ ಆರೋಗ್ಯ ನೆಮ್ಮದಿಗಳ ವಿಚಾರವೇ ಇರಲಿ… ಗ್ರಾಮೀಣ ಪ್ರದೇಶದಲ್ಲೇ ಪರ್ಸಂಟೇಜ್ ಜಾಸ್ತಿ.

VISTARANEWS.COM


on

ವಿಸ್ತಾರ ಗ್ರಾಮದನಿ Vistara Gramadaani
ವಿಜಯಪುರ ಲೋಕಸಭಾ ಕ್ಷೇತ್ರದ ನಿಡಗುಂದಿ ತಾಲೂಕಿನ ಹೆಬ್ಬಾಳ, ಯಲಗೂರ, ಬೀರಲದಿನ್ನಿ ಹಾಗೂ ಬಳಬಟ್ಟಿ ಗ್ರಾಮದಲ್ಲಿ ಮಂಗಳವಾರ ನರೇಗಾ ಯೋಜನೆಯಡಿ ನೋಂದಾಯಿತ 256 ಕೂಲಿಕಾರರು ತಮ್ಮ ಹಕ್ಕು ಚಲಾಯಿಸಿ, ನರೇಗಾ ಕೆಲಸಕ್ಕೆ ಹಾಜರಾಗಿ ಇತರರಿಗೆ ಮಾದರಿ ಆಗಿದ್ದಾರೆ.
Koo
Aravind Sigadal

| ಅರವಿಂದ ಸಿಗದಾಳ್, ಮೇಲುಕೊಪ್ಪ
ಪ್ರತೀ ವರ್ಷ ಬಹುತೇಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾದಾಗ ಮರುದಿನ ಪತ್ರಿಕೆಗಳಲ್ಲಿ ಕಾಣುವ ಸಾಮಾನ್ಯ ಹೆಡ್ಡಿಂಗ್‌: ‘ಗ್ರಾಮೀಣ ವಿದ್ಯಾರ್ಥಿಗಳ ಮೇಲುಗೈ’ ಅಥವಾ ‘ಕನ್ನಡ ಮಾಧ್ಯಮದ ವಿದ್ಯಾರ್ಥಿಗಳೇ ಮುಂದೆ’ ಅಥವಾ ‘ಹೆಣ್ಮಕ್ಳೇ ಸ್ಟ್ರಾಂಗು ಗುರು’ ಇತ್ಯಾದಿ. ಅದರಲ್ಲೂ ‘ಗ್ರಾಮೀಣ ವಿದ್ಯಾರ್ಥಿಗಳ ಮೇಲುಗೈ’ ಎಂಬುದು ಒಂದು ವಿಶೇಷವಾದ ವಿಚಾರ. ಹಾಗೆಯೇ ಮತದಾನ ಸಂದರ್ಭಗಳಲ್ಲೂ ಇದೇ ವಿಶೇಷ ಕಾಣುತ್ತೇವೆ. ಗ್ರಾಮೀಣ ಪ್ರದೇಶಗಳಲ್ಲಿ ಯಾವಾಗಲೂ ಅತಿ ಹೆಚ್ಚು ಮತದಾನ ನಡೆಯುತ್ತದೆ. ಸ್ವೀಪ್ (SVEEP Systematic Voters’ Education and Electoral Participation) ಜಾಗೃತಿ ಕಾರ್ಯಕ್ರಮಗಳು ಗ್ರಾಮೀಣ ಪ್ರದೇಶದವರನ್ನು (Vistara Gramadani) ತಲುಪದೇ ಇದ್ದರೂ ಮತದಾನ ಮಾತ್ರ ನಗರ ಪ್ರದೇಶಗಳಿಗಿಂತ ಹಳ್ಳಿಗಳಲ್ಲಿ ಹೆಚ್ಚು.

ನಗರಗಳಿಗಿಂತ ಹಳ್ಳಿ, ಪಟ್ಟಣಗಳಲ್ಲಿ ಶೇಕಡಾವಾರು ಓಟ್ ಜಾಸ್ತಿ ಕಾರಣವೇನು?

ಹೌದು, ಹಳ್ಳಿ ಪಟ್ಟಣಗಳಲ್ಲಿ ಮತದಾನ ಹೆಚ್ಚು. ಹಳ್ಳಿ ಪಟ್ಟಣಗಳ ಕೆಲವು ಬೂತ್‌ಗಳಲ್ಲಿ 100% ಮತದಾನ ಆಗಿದ್ದೂ ಇದೆ. ಸಾಮಾನ್ಯವಾಗಿ ಹಳ್ಳಿಗಳ ಬೂತ್‌ಗಳಲ್ಲಿ 80-90% ಮತದಾನ ‘ಗ್ಯಾರಂಟಿ’. ಗ್ರಾಮೀಣ ಪ್ರದೇಶಗಳಲ್ಲಿ ಮತದಾನ ಹೆಚ್ಚಾಗಲು ಹಲವರು ಕಾರಣಗಳಿವೆ.

  1. ಹಳ್ಳಿಗಳಲ್ಲಿ ಹೆಚ್ಚಿನ ಮತದಾರರು ಕೇವಲ ಮತದಾರರಾಗಿ ಇರುವುದಿಲ್ಲ. ಯಾವುದೋ ಪಕ್ಷಗಳ ವ್ಯಕ್ತಿಗಳ ಬೆಂಬಲಿತ ವ್ಯಕ್ತಿಗಳಾಗಿರುತ್ತಾರೆ.
  2. ಪಕ್ಷಗಳ ಬೂತ್ ಕಾರ್ಯಕರ್ತರೊಂದಿಗೆ ಎಲ್ಲಾ ಮತದಾರರ ಸಂಪರ್ಕ ಇರುತ್ತದೆ. ಮತ ಹಾಕಿಲ್ಲ ಅಂದರೆ, ಮತ ಹಾಕದಿರುವ ವಿಚಾರ ಇಡೀ ಹಳ್ಳಿಗೆ ಗೊತ್ತಾಗುತ್ತದೆ. ‘ಮತ ಹಾಕದೆ ಸುದ್ದಿ ಆಗುವುದು ಬೇಡ’ ಎಂಬ ಕಾರಣಕ್ಕೆ ಹಳ್ಳಿಗಳಲ್ಲಿ ಮತದಾನ ಮಾಡುವವರೂ ಇದ್ದಾರೆ.
  3. ಹಳ್ಳಿ ಪಟ್ಟಣಗಳಲ್ಲಿ ಮತದಾರರಿಗೆ ರಾಜಕೀಯದಾಟದಲ್ಲಿ ಆಸಕ್ತಿ ಜಾಸ್ತಿ. ದೊಡ್ಡ ನಗರಗಳಲ್ಲಿ ಹೆಚ್ಚಿನ ಜನರಿಗೆ, ಅದರಲ್ಲೂ ದೊಡ್ಡ ಸಂಬಳದ ದೊಡ್ಡ ಹುದ್ದೆಯಲ್ಲಿ ಇರುವವರಿಗೆ ರಾಜಕೀಯ ಆಸಕ್ತಿ ವಿಷಯ ಆಗಿರುವುದಿಲ್ಲ. ಒಂದು ರೀತಿಯಲ್ಲಿ ನಗರವಾಸಿಗಳಿಗೆ ರಾಜಕೀಯ ಒಂದು ಜಿಗುಪ್ಸೆ.
  4. ಗ್ರಾಮೀಣ ಪ್ರದೇಶಗಳಲ್ಲಿ ಬಹುತೇಕ ಜನರು ಸರ್ಕಾರಿ ಇಲಾಖೆಗಳಿಂದ ಫಲಾನುಭವಿ ಆಗಿರುತ್ತಾರೆ ಅಥವಾ ಯಾವುದಾದರೂ ಕೆಲಸಗಳು ಇಲಾಖೆಗಳಿಂದ ಬಾಕಿ ಉಳಿದಿರುತ್ತವೆ. ಆಗಿರುವ ಕೆಲಸ ಅಥವಾ ಆಗಬೇಕಿರುವ ಕೆಲಸದ ಹಿಂದೆ ಓಡಾಡುವವರು ಪಕ್ಷ ಪ್ರತಿನಿಧಿಗಳಾಗಿರುತ್ತಾರೆ ಮತ್ತು ಆ ಪ್ರತಿನಿಧಿಗಳು ಮತದಾನ ಸಂದರ್ಭದಲ್ಲಿ ಮತದಾರರನ್ನು ಮತದಾರ ಪ್ರಕ್ರಿಯೆಗೆ ತೊಡಗುವಂತೆ ಪ್ರಭಾವ ಬೀರಿರುತ್ತಾರೆ.
  5. ಜಾತ್ರೆ, ಊರಿನ ಹಬ್ಬಗಳಂತೆ ಎಲೆಕ್ಷನ್ ಕೂಡ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ ಒಂದು ಉತ್ಸವ ಇದ್ದಂತೆ, ಹೆಚ್ಚಿನವರು ಉತ್ಸಾಹದಿಂದಲೇ ಭಾಗವಹಿಸುತ್ತಾರೆ. ಹಳ್ಳಿಯ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳು ನಡೆಯುವಾಗ, ಭೇಟಿಯಾದ ಸಂದರ್ಭಗಳಲ್ಲಿ ರಾಜಕೀಯ ವಿಚಾರಗಳು ಚರ್ಚೆಯ ಒಂದು ಸಬ್ಜೆಕ್ಟ್ ಆಗಿರುತ್ತದೆ. ಇದರ ಪ್ರಭಾವ, ಮತದಾನ ಹೆಚ್ಚಲು ಪರೋಕ್ವ ಕಾರಣಗಳಲ್ಲಿ ಒಂದಾಗಿರುತ್ತದೆ.
  6. ದೊಡ್ಡ ನಗರಗಳಲ್ಲಿ ವೃತ್ತಿಯಲ್ಲಿ ಇರುವವರು, ಚುನಾವಣೆಯ ರಜೆಯಲ್ಲಿ ಊರಿಗೆ ಬಂದಿರುವುದರಿಂದ ಮತ್ತು ಕುಟುಂಬದವರು ಮತದಾನ ಮಾಡುವಾಗ ಸಹಜವಾಗಿ ಪ್ರೇರಿತಗೊಂಡು ಮತದಾನಕ್ಕೆ ಮುಂದಾಗುತ್ತಾರೆ. ನಗರದಲ್ಲೇ ಹುಟ್ಟಿ ಬೆಳೆದವರು ರಜೆ ಸಿಕ್ಕಿದರೆ ಗಿರಿಧಾಮದ ತುದಿಗೆ ಜಾಲಿ ಪಿಕ್‌ನಿಕ್ ಹೋಗುವವರೇ ಹೆಚ್ಚು!
  7. ದೊಡ್ಡ ನಗರದ ಜನರು ಹಣ, ವೃತ್ತಿ, ಐಷಾರಾಮಿ ಜೀವನಕ್ಕೆ ಕೊಟ್ಟ ಪ್ರಾಧಾನ್ಯತೆಯನ್ನು ಜೀವನದ ಅಗತ್ಯದ ಪ್ರಮುಖ ವಿಚಾರಗಳಲ್ಲಿ ಕೊಡುವುದಿಲ್ಲ. ಅದು ಅಡುಗೆ ಮನೆಯ ಕೆಲಸವಿರಬಹುದು, ಸಾಮಾಜಿಕ ಚಟುವಟಿಕೆಗಳಿರಬಹುದು, ರಾಜಕೀಯವಿರಬಹುದು. ಹಳ್ಳಿಗಳಲ್ಲಿ ಆ ರೀತಿ ವಾತಾವರಣ ಇರುವುದಿಲ್ಲ.
  8. ಹಳ್ಳಿಗಳ ಜನಗಳ ಮಧ್ಯೆ ಒಂದು ಸ್ನೇಹ ಸಂಬಂಧ ಅಥವಾ ಬಾಂಧವ್ಯದ ಸಂಬಂಧ ಗಟ್ಟಿ ಇರುತ್ತದೆ. ಅದರ ಪರಿಣಾಮ, ಎಲ್ಲಾ ವಿಚಾರಗಳಂತೆ ರಾಜಕೀಯ ಸಂವಹನವೂ ನಡೆಯುತ್ತಿರುತ್ತದೆ. ಮತದಾನಕ್ಕೆ ಆ ಸಂವಹನ ಪ್ರೇರಣೆಯೂ ಆಗಿರುತ್ತದೆ.
  9. ಹಳ್ಳಿಗಳ ಜನರಲ್ಲಿ ರಾಜಕೀಯದ ಆಗುಹೋಗುಗಳ ಅರಿವು, ತಿಳಿವಳಿಕೆ ಹೆಚ್ಚು. ರಾಜಕಾರಣಿಗಳು/ಪಕ್ಷಗಳು ಮಾಡಿದ ಸಾಧನೆಗಳು ಅಥವಾ ನಿಷ್ಕ್ರಿಯತೆ ಬಗ್ಗೆ ಹಳ್ಳಿಯ ಸಾಮಾನ್ಯ ಪ್ರಜೆಗೆ ಇರುವ ಜ್ಞಾನ, ಪರಿಚಯ ದೊಡ್ಡ ನಗರವಾಸಿಗಳಿಗೆ ಇರುವುದಿಲ್ಲ. ನಗರ ನಿವಾಸಿಗಳಲ್ಲಿ ಅನೇಕರಿಗೆ ತಮ್ಮ MLA ಯಾರು? ಕಾರ್ಪೋರೇಟರ್ ಯಾರು ಅಂತಾನೇ ಗೊತ್ತಿರುವುದಿಲ್ಲ. ಹಳ್ಳಿಯ ಸಾಮಾನ್ಯರಿಗೂ MLA ಯಾರು ಅಂತ ಕೇಳಿದರೆ, ಕಳೆದ ಮೂರು ಬಾರಿಯ MLA ಗಳ ಪೂರ್ಣ ವಿವರ ಕೊಡುವಷ್ಟು ಮಾಹಿತಿ ಅವರ ಬಳಿ ಇರುತ್ತದೆ. ಇಂತಹ ಅರಿವು ಹಳ್ಳಿಗಳಲ್ಲಿ ಜನರನ್ನು ಮತಗಟ್ಟೆಗೆ ಬರುವಂತೆ ಮಾಡುತ್ತವೆ.
  10. ಹಳ್ಳಿಯ ಮತದಾರರು ನಗರದ ನಿವಾಸಿಗಳಷ್ಟು ಸೋಮಾರಿಗಳಲ್ಲ! ನಿರಾಶಾವಾದಿಗಳಲ್ಲ! ಸಾಮಾನ್ಯವಾಗಿ, ನಗರದವರಿಗಿಂತ ಹಳ್ಳಿಗರು ಹೆಚ್ಚು ಶ್ರಮಿಕರಾಗಿರುವುದರಿಂದ, ಮಾನಸಿಕ ಮತ್ತು ದೈಹಿಕ ಆರೋಗ್ಯದ ವಿಚಾರದಲ್ಲಿ, ಗಟ್ಟಿತನದಲ್ಲಿ ಹಳ್ಳಿಗರು ಒಂದು ಹೆಜ್ಜೆ ಮುಂದೆ ಇರ್ತಾರೆ. ಸರದಿಯಲ್ಲಿ ಅರ್ಧ ಗಂಟೆ ಮತದಾನಕ್ಕೆ ನಿಲ್ಲಬೇಕಾದರೆ, ಅದನ್ನೂ ಕೂಡ ಸಂಭ್ರಮಿಸುತ್ತಾರೆ. ನಗರದವರಂತೆ ಅಸಹನೆ, ಚಡಪಡಿಕೆ ಹಳ್ಳಿಗರಲ್ಲಿ ಕಡಿಮೆ.

ಹಾಗೆ ನೋಡಿದರೆ, ಹೆಚ್ಚು ಓದಿದದವರು ನಾಗರಿಕತೆಯಲ್ಲಿ ಮುಂದಿದ್ದೇವೆ ಅಂತ ಭ್ರಮಿಸುವ ನಗರವಾಸಿಗಳು ಮತದಾನದಂತಹ ಕರ್ತವ್ಯದಲ್ಲಿ ಗ್ರಾಮೀಣ ಪ್ರದೇಶದವರಿಗಿಂತ ಪರ್ಸಂಟೇಜಿನಲ್ಲಿ ಮುಂದಿರಬೇಕಿತ್ತು. ಆದರೆ, ವಾಸ್ತವವಾಗಿ ಮತದಾನ ಇರಲಿ, ಪಿಯುಸಿ ಪರೀಕ್ಷೆ ಫಲಿತಾಂಶ ಇರಲಿ, ಒಟ್ಟಾರೆ ಆರೋಗ್ಯ ನೆಮ್ಮದಿಗಳ ವಿಚಾರವೇ ಇರಲಿ… ಗ್ರಾಮೀಣ ಪ್ರದೇಶದಲ್ಲೇ ಪರ್ಸಂಟೇಜ್ ಜಾಸ್ತಿ.

ಇದನ್ನೂ ಓದಿ | Lok Sabha Election 2024: 2ನೇ ಹಂತದಲ್ಲಿ ಶೇ.70.41 ಮತದಾನ; ಕಳೆದ ಬಾರಿಗಿಂತ ಹೆಚ್ಚು, ಚಿಕ್ಕೋಡಿಯಲ್ಲಿ ಗರಿಷ್ಠ

ನಗರದಲ್ಲಿ ಯಾವುದೇ ಕಾರಣವಿಲ್ಲದೆ ಮತದಾನದಿಂದ ತಪ್ಪಿಸಿಕೊಳ್ಳುವ, ವಿವೇಕ ರಹಿತರಾಗಿ ಮತದಾನ ಕರ್ತವ್ಯ ಮಾಡದ ನಾಗರಿಕರಿಗೆ ಧಿಕ್ಕಾರ ಹೇಳುವಾಗಲೇ, ಮತದಾನ ಪೂಜೆಯನ್ನು ಶ್ರದ್ಧೆಯಿಂದ ಮಾಡಿದ ಗ್ರಾಮೀಣವಾಸಿ ದೇಶ ಪ್ರೇಮಿಗಳಿಗೆ ಒಂದು ಜೈಕಾರ ಹೇಳೋಣ.

Continue Reading

ಕರ್ನಾಟಕ

Prajwal Revanna Case: ಎಸ್‌ಐಟಿ ಮೇಲೆ ಕೇಸ್‌ ಹಾಕ್ತೇನೆ, ಶೀಘ್ರವೇ ಪೆನ್‌ಡ್ರೈವ್‌ ಪ್ರೊಡ್ಯುಸರ್‌ ಹೆಸರು ಹೇಳ್ತೇನೆ ಎಂದ ದೇವರಾಜೇಗೌಡ

Prajwal Revanna Case: ರಾಜ್ಯಾದ್ಯಂತ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಬಹಳ ಚರ್ಚೆ ನಡೆಯುತ್ತಿದೆ. ಅಶ್ಲೀಲ ವಿಡಿಯೊ ಸೋರಿಕೆ ಮಾಡಿದವರ ರಕ್ಷಣೆಗೆ ನಾಲ್ವರು ಸಚಿವರು ಇದ್ದಾರೆ. ಇದರ ಹಿಂದೆ ಯಾರಿದ್ದಾರೆ ಎಂದು ಶೀಘ್ರದಲ್ಲೇ ಬಹಿರಂಗಪಡಿಸುವೆ ಎಂದು ವಕೀಲ ದೇವರಾಜೇಗೌಡ ಹೇಳಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ (Prajwal Revanna Case) ಎಚ್‌.ಡಿ.ರೇವಣ್ಣ ಅವರನ್ನು ಮಾತ್ರ ಬಂಧಿಸಿದ್ದಾರೆ. ಆದರೆ. ಪೆನ್‌ಡ್ರೈವ್‌ ಕೊಟ್ಟಿರುವ ಕಾರ್ತಿಕ್‌ ಗೌಡ ವಿರುದ್ಧ ಯಾವುದೇ ಕ್ರಮ ವಹಿಸಿಲ್ಲ. ಒಬ್ಬ ಆರೋಪಿ ತಮ್ಮ‌ ಮುಂದೆ ಇದ್ದಾಗಲೇ ಬಂಧಿಸದ ಎಸ್‌ಐಟಿ ವಿರುದ್ಧ ನಾಳೆ ಕೋರ್ಟ್‌ನಲ್ಲಿ ಕ್ರಿಮಿನಲ್ ಕೇಸ್ ದಾಖಲು ಮಾಡುತ್ತೇವೆ. ಎಸ್‌ಐಟಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಖಾಸಗಿ ದೂರು ನೀಡುತ್ತೇವೆ ಎಂದು ವಕೀಲ ದೇವರಾಜೇಗೌಡ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ರಾಜ್ಯಾದ್ಯಂತ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಬಹಳ ಚರ್ಚೆ ನಡೆಯುತ್ತಿದೆ. ಯಾವಾಗ ಹೆಸರುಗಳು ಹೊರಗೆ ಬಂತೋ ರಕ್ಷಣೆ ಮಾಡಿಕೊಳ್ಳುವ ಕೆಲಸ ಆಗುತ್ತಿದೆ. ನನ್ನ ವಿರುದ್ಧವೂ ದೂರು ನೀಡಲು ಆರಂಭಿಸದ್ದಾರೆ‌. ನಾನು ಸರ್ಕಾರಕ್ಕೆ ಸವಾಲು ಹಾಕುತ್ತೇನೆ, ನನ್ನ ಹಿಂದೆ ಸತ್ಯ, ನ್ಯಾಯ, ಧರ್ಮ ಇದೆ. ನಾನು ಯಾರಿಗೂ ಹೆದರಲ್ಲ ಎಂದು ತಿಳಿಸಿದರು.

ಪೆನ್‌ ಡ್ರೈವ್‌ ವಿಡಿಯೊ ಸೋರಿಕೆ ಮಾಡಿದವರ ರಕ್ಷಣೆಗೆ ನಾಲ್ವರು ಸಚಿವರು ಇದ್ದಾರೆ. ಪೆನ್ ಡ್ರೈವ್ ಪ್ರೊಡ್ಯುಸರ್ ಯಾರು? ಹಂಚಿಕೆದಾರರು ಯಾರು? ಎಂಬ ಮಾಹಿತಿ ಇದೆ. ಎಲ್ಲವನ್ನೂ ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ | Prajwal Revanna Case: ಎಚ್‌ಡಿಕೆ ಕಿಂಗ್‌ ಆಫ್‌ ಬ್ಲ್ಯಾಕ್‌ಮೇಲ್‌; ತಿರುಗಿಬಿದ್ದ ಡಿ.ಕೆ. ಶಿವಕುಮಾರ್!

ಮಹಿಳಾ ಆಯೋಗದ ಅಧ್ಯಕ್ಷರು ಸಿಎಂಗೆ ದೂರು ನೀಡಿದ್ದರು. 2,867 ವೀಡಿಯೊ ಇದ್ದು, ಇದು ಪ್ರಪಂಚದಲ್ಲಿ ಅತಿ ದೊಡ್ಡ ಲೈಂಗಿಕ ಹಗರಣ ಆಗಿದೆ. ವಿಡಿಯೊ ಮಾಡಿದವರನ್ನು ಬಂಧಿಸಿ ಎಂದು ಸರ್ಕಾರಕ್ಕೆ‌ ಮನವಿ ಮಾಡಿದ್ದಾರೆ. ವಿಡಿಯೊ ಮಾಡಿದವರು ಮತ್ತು ಹಂಚಿದವರ ವಿರುದ್ಧ ಕ್ರಮ‌ ಎಂದು ಎಸ್‌ಐಟಿ ಅಧಿಕಾರಿಗಳು ಹೇಳಿದರು. ಆದರೆ, ಪ್ರಕರಣದಲ್ಲಿ ಪೆನ್ ಡ್ರೈವ್ ಹರಿಬಿಟ್ಟವರ ವಿರುದ್ಧ ಕ್ರಮವಾಗಿಲ್ಲ. ನಾನು ಕೂಡ ಸಂತ್ರಸ್ತ, ನನಗೆ ವಿಡಿಯೊಕಾಲ್‌ ಮಾಡಿ ಹನಿ ಟ್ರ್ಯಾಪ್‌ ಮಾಡಲು ಯತ್ನಿಸಿ, ನನ್ನ ವಿರುದ್ಧ ಸುಳ್ಳು ದಾಖಲೆ ಸೃಷ್ಟಿ ಮಾಡಲು ಮುಂದಾದರು. ಈ ರೀತಿ ನನ್ನ ಕಟ್ಟಿಹಾಕಬಹುದು ಎಂದು ನೋಡಿದರೆ, ಎಲ್ಲ ರೀತಿಯ ಹೋರಾಟಕ್ಕೂ ಸಿದ್ಧ ಎಂದರು.

ನಾನು ವಕೀಲನಾಗಿ ಹೋರಾಟ‌ ಮಾಡುತ್ತಿದ್ದೇನೆ. ನವೀನ್ ಗೌಡ, ಕಾರ್ತಿಕ್ ವಿರುದ್ಧ ಎಫ್‌ಐಆರ್‌ ಆಗಿದೆ. ಪೆನ್ ಡ್ರೈವ್ ಹಂಚಿಕೆ‌ ವಿಚಾರವಾಗಿ ಎಸ್‌ಐಟಿ ರಚನೆ ಮಾಡಿದ್ದಾರೆ. ಆದರೆ, ಹೊಳೆನರಸೀಪುರ ಪ್ರಕರಣ ಮಾತ್ರ ಎಸ್‌ಐಟಿಗೆ ವರ್ಗಾವಣೆ ಮಾಡಿದ್ದಾರೆ. ಆದರೆ ಪೆನ್ ಡ್ರೈವ್ ಪ್ರಕರಣ ಮಾತ್ರ ವರ್ಗಾವಣೆ ಆಗಿಲ್ಲ. ಪೆನ್ ಡ್ರೈವ್ ವಿಚಾರವಾಗಿ ನನ್ನ ಸಾಕ್ಷಿಯಾಗಿ ಕರೆದಿದ್ದರು. ಆ ಕೇಸ್ ಪಡೆದಿಲ್ಲ ಅಂದ ಮೇಲೆ ನನ್ನನ್ನು ವಿಚಾರಣೆ ಮಾಡುವ ಅಗತ್ಯವಿರಲಿಲ್ಲ ಎಂದು ಹೇಳಿದರು.

ಈ ಹಿಂದೆ ದೇವರಾಜೇಗೌಡಗೆ ಪೆನ್ ಡ್ರೈವ್ ಕೊಟ್ಟಿದ್ದೆ, ಬೇರೆ ಇನ್ಯಾರಿಗೂ ಕೊಟ್ಟಿರಲಿಲ್ಲ. ಅವರೇ ಹಂಚಿದ್ದಾರೆ ಅಂತ ಕಾರ್ತಿಕ್‌ ಹೇಳಿದ್ದಾನೆ. ಮತ್ತೊಂದೆಡೆ ನಾನು ಕೊಟ್ಟಿರುವುದು ಪೆನ್ ಡ್ರೈವ್ ಅಲ್ಲ. ಮೆಮೊರಿ ಕಾರ್ಡ್ ಅಂತ ಹೇಳಿದ್ದಾನೆ. ಮತ್ತೊಂದೆಡೆ ನನ್ನ ವಿರುದ್ಧ ಬಾರ್ ಕೌನ್ಸಿಲ್ ಆಫ್ ಇಂಡಿಯಾದಲ್ಲಿ ದೂರು ನಿಡೀದ್ದಾರೆ. ಕಕ್ಷಿದಾರರು ಕೊಟ್ಟಿರುವ ಮಾಹಿತಿ ಗೌಪ್ಯವಾಗಿದೆ. ಅವರಿಂದಲೇ ಸಹಿ ಮಾಡಿಸಿ ಮುಚ್ಚಿಡಲಾಗಿದೆ. ಅದನ್ನು ನ್ಯಾಯಾಧೀಶರ ಮುಂದೆಯೇ ಓಪನ್ ಮಾಡಲಾಗುವುದು ಎಂದು ತಿಳಿಸಿದರು.

ಎಸ್‌ಐಟಿ ತನಿಖೆಗೆ ಹಾಜರಾಗಿದ್ದೆ ಅಂತ‌ ಕಾರ್ತಿಕ್ ಹೇಳಿಕೆ ನೀಡಿದ್ದಾನೆ. ಸರ್ಕಾರ ಒನ್ ಸೈಡ್ ತನಿಖೆ ಮಾಡುತ್ತಿದೆ. ನಾನೂ ಕಾಂಗ್ರೆಸ್‌ನಲ್ಲಿ ಇದ್ದವನು. ಅಲ್ಲಿ ಅವರ ಆಟ ನೋಡಿದ್ದೇನೆ. ಅಶ್ಲೀಲ ವಿಡಿಯೊ ಮಾಡಿದವರು ಮತ್ತು ವಿಡಿಯೊ ಹಂಚಿಕೆ ಮಾಡಿದವರ ವಿರುದ್ಧವೂ ಬಗ್ಗೆ ತನಿಖೆ ಮಾಡಬೇಕು. ಇಂದು ಕಾರ್ತಿಕ್ ಗೌಡನ ನಿರೀಕ್ಷಣಾ ಜಾಮೀನು ರಿಜೆಕ್ಟ್ ಆಗಿದೆ. ಈ ಪೆನ್ ಡ್ರೈವ್ ಹೊರಬರುತ್ತಿದ್ದಂತೆ ಸರ್ಕಾರ ತಲ್ಲಣ‌ ಆಗಿದೆ ಎಂದು ಹೇಳಿದರು.

ಅವನ ಬಳಿ ಹಣ ಇಲ್ಲ, ಅದಕ್ಕೆ ನಮ್ಮ‌ ಬಳಿ ಬಂದ ಅಂತ ಆ ಮಹಾನುಭಾವ ಕಾರ್ತಿಕ್ ಹೇಳಿಕೆ ನೀಡಿದ್ದಾನೆ. ನಾನು ಅವನಿಗೆ ಕರೆ ಮಾಡಿದ್ನಾ? ಅಥವಾ ಅವರು ಮಾಡಿದ್ರಾ ನೋಡಿ? ನನಗೆ ಶಿವರಾಮೇಗೌಡ ಯಾರು ಅಂತಲೇ ಗೊತ್ತಿರಲಿಲ್ಲ. ಅವರನ್ನ ಟಿವಿಯಲ್ಲಿ ನೋಡಿದ್ದೆ‌. ನನ್ನನ್ನ ಅವರೇ ಕರೆಸಿಕೊಂಡು ರೇವಣ್ಣ ಕುಟುಂಬದ ಬಗ್ಗೆ ಚರ್ಚೆ ಮಾಡಿದರು. ಒಂದು ಕುಟುಂಬ ಅವನತಿಗೆ ತರುವ ವಿಚಾರ ಗೊತ್ತಾದಾಗ ನಾನು ಕಾಲ್ ರೆಕಾರ್ಡ್ ಮಾಡಬೇಕಾಯಿತು ಎಂದು ತಿಳಿಸಿದರು.

ಇನ್ನೂ ಯಾವ ವಿಡಿಯೋ ಇದೆ ಗೊತ್ತಿಲ್ಲ. ಆದರೆ ಅವರ ಮರ್ಯಾದೆ ಹಾಳಾಗಬಾರದು. ವಕೀಲರ ಸಂಘ, ಬಿಜೆಪಿಯು ಸಂತ್ರಸ್ತ ಮಹಿಳೆಯರ ಪರ ಇರಲಿದೆ. ವಾದ ಮಂಡಿಸಲು ನಾವು ಇದ್ದೇವೆ. ಯಾರೂ ಪ್ರಾಣ ಕಳೆದುಕೊಳ್ಳುವುದು ಬೇಡ. ಪೆನ್ ಡ್ರೈವ್ ಹಂಚಿಕೆ ಮಾಡಿರುವುದು ಕಾರ್ತಿಕ್. ಪೆನ್ ಡ್ರೈವ್ ಸಿಕ್ಕವರು, ವಿಡಿಯೊ ನೋಡಿ, ಸಂತ್ರಸ್ತ ಮಹಿಳೆಯರಿಗೆ ಕರೆ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಅಂತಹವರ ವಿರುದ್ಧ ಕ್ರಮಕ್ಕೆ ಎಸ್ಪಿಗೆ ದೂರು ನೀಡಿದ್ದಾರೆ ಎಂದು ಹೇಳಿದರು.

ಕಾರ್ತಿಕ್ ಗೌಡ ಯಾವ ರೆಸಾರ್ಟ್‌ನಲ್ಲಿ ಇದ್ದಾನೆ ಎಂಬ ಮಾಹಿತಿ ಇದೆ. ಶೀಘ್ರದಲ್ಲೇ ಎಲ್ಲಾ ದಾಖಲೆ‌ ಬಿಡುಗಡೆ ಮಾಡುವೆ. ಇನ್ನು ಹಾಸನ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್ ಪಟೇಲ್, ನನಗೂ ಕಾರ್ತಿಕ್ ಗೌಡಗೂ ಸಂಬಂಧ ಇಲ್ಲ ಎನ್ನುತ್ತಾನೆ. ಆದರೆ ಒಂದು ಕಡೆ ಕಾರ್ತಿಕ್, ಮಧ್ಯದಲ್ಲಿ ಶ್ರೇಯಸ್ ಪಟೇಲ್, ಮತ್ತೊಂದು ಕಡೆ ಪುಟ್ಟರಾಜು ಇದ್ದಾರೆ ಎಂದು ಫೋಟೊ ತೋರಿಸಿದರು.

ಇದನ್ನೂ ಓದಿ | Prajwal Revanna Case: ಪೆನ್‌ಡ್ರೈವ್ ಹಂಚಿಕೆದಾರರ ಬಂಧಿಸಿ; ಸಿಎಂ, ಡಿಸಿಎಂ ವಿರುದ್ಧ ಮಹಿಳಾ ಜೆಡಿಎಸ್‌ ಗರಂ!

ರಾಜಕೀಯದಲ್ಲಿ ನಾನಿಲ್ಲ ಎಂದು ಕಾರ್ತಿಕ್‌ ಹೇಳುತ್ತಾನೆ. ಆದರೆ, ಕಾರ್ತಿಕ್ ಮತ್ತು ಶ್ರೇಯಸ್ ಪಟೇಲ್ ರಾಜಕೀಯ ಸಭೆಯಲ್ಲಿ ವೇದಿಕೆ ಮೇಲೆ ಕುಳಿತಿದ್ದಾರೆ. ಊಟಕ್ಕೆ ಕುಳಿತಿರುವ ಫೋಟೊ ಇದೆ. ನಿಮ್ಮ ತಾತ ನಮ್ಮ ಗುರುಗಳು, ಅವರ ಮುಖಕ್ಕೆ ಮಸಿ ಬಳಿಯುವ ಕೆಲಸ ಮಾಡಬೇಡ, ಒಳ್ಳೆಯ ದಾರಿಯಲ್ಲಿ ಹೋಗು ಎಂದು ಶ್ರೇಯಸ್ ಪಟೇಲ್‌ಗೆ ಹೇಳಿದರು.

Continue Reading

ಕ್ರೈಂ

Prajwal Revanna Case: ಪೆನ್‌ಡ್ರೈವ್ ಹಂಚಿಕೆದಾರರ ಬಂಧಿಸಿ; ಸಿಎಂ, ಡಿಸಿಎಂ ವಿರುದ್ಧ ಮಹಿಳಾ ಜೆಡಿಎಸ್‌ ಗರಂ!

Prajwal Revanna Case: ಅಶ್ಲೀಲಗಳನ್ನು ಒಳಗೊಂಡ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಅಸಂಖ್ಯಾತ ಪೆನ್‌ಡ್ರೈವ್‌ಗಳ ಮುಖೇನ ರಾಜ್ಯದಾದ್ಯಂತ ಹಂಚಿರುವ ಷಡ್ಯಂತ್ರದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಹೆಸರುಗಳನ್ನು ಹೊಳೆನರಸಿಪುರದ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡರು ಸುದ್ದಿಗೋಷ್ಠಿಯಲ್ಲಿ ಸಾಕ್ಷಿ ಸಮೇತ ಬಹಿರಂಗ ಮಾಡಿದ್ದರು. ಇದನ್ನು ಎಸ್‌ಐಟಿ ಗಣನೆಗೆ ತೆಗೆದುಕೊಂಡಿಲ್ಲವೇ ಎಂದು ರಶ್ಮಿ ರಾಮೇಗೌಡ ಪ್ರಶ್ನಿಸಿದ್ದಾರೆ.

VISTARANEWS.COM


on

Prajwal Revanna Case JDS delegation moves Womens Commission to arrest pen drive allottees
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊಗಳುಳ್ಳ ಪೆನ್‌ಡ್ರೈವ್‌ಗಳನ್ನು ಅಪಾರ ಪ್ರಮಾಣದಲ್ಲಿ ಹಂಚುವ ಮೂಲಕ ಮಹಿಳೆಯರ ಮಾನಹಾನಿಗೆ ಕಾರಣವಾಗಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು. ಈ ಕುರಿತು ಎಲ್ಲ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ ಒತ್ತಾಯಿಸಿದರು.

ಈ ಬಗ್ಗೆ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಶ್ಮಿ ರಾಮೇಗೌಡ, ಅಶ್ಲೀಲ ವಿಡಿಯೊಗಳನ್ನು ಸೋರಿಕೆ ಮಾಡುವ ಮೂಲಕ ಸ್ತ್ರೀ ಕುಲಕ್ಕೆ ಅಪಚಾರ ಎಸಗಿರುವ ಕಿರಾತಕರನ್ನು ತಕ್ಷಣವೇ ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದರು.

ಸಚಿವರೇ ಈ ವಿಡಿಯೊಗಳ ವಿತರಣೆಯ ರೂವಾರಿ

ಸಚಿವ ಸಂಪುಟದ ಪ್ರಭಾವಿ ಸಚಿವರೇ ಈ ವಿಡಿಯೊಗಳ ವಿತರಣೆಯ ರೂವಾರಿ. ಹೀಗಾಗಿ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ದೊರಕಿಸುವುದು ಅಸಾಧ್ಯ. ಹರಿಬಿಟ್ಟಿರುವ ವಿಡಿಯೊಗಳಿಂದ ಸಂತ್ರಸ್ತೆಯರು ಅಪಾರ ನೋವು, ಅವಮಾನ ಮತ್ತು ಯಾತನೆಯನ್ನು ಅನುಭವಿಸುತ್ತಿದ್ದಾರೆ. ಇವರೊಂದಿಗೆ ಸಂತ್ರಸ್ತೆ ಕುಟುಂಬದವರ ಮೇಲೆ ಉಂಟಾಗಿರುವ ಹಾನಿ ಮತ್ತು ಅಪಮಾನ ವಿವರಿಸಲು ಅಸಾಧ್ಯ. ವಿಡಿಯೊದಲ್ಲಿರುವ ಮಹಿಳೆಯರ ಗುರುತು ಬಹಿರಂಗ ಆಗುವಂತೆ ಮಾಡಿರುವುದು ಅಕ್ಷಮ್ಯ ಅಪರಾಧ ಎಂದು ರಶ್ಮಿ ರಾಮೇಗೌಡ ಆಕ್ರೋಶ ಹೊರಹಾಕಿದರು.

ಎಸ್‌ಐಟಿಯಿಂದ ನೊಂದವರಿಗೆ ನ್ಯಾಯ ಸಿಗಲ್ಲ

ಈ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಲು ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾದಳ ವಿಫಲವಾಗಿದೆ. ಈ ಹಿನ್ನಲೆಯಲ್ಲಿ ಸಂತ್ರಸ್ಥ ಮಹಿಳೆಯರಿಗೆ ಹಾಗೂ ಅವರ ಕುಟುಂಬದವರಿಗೆ ನ್ಯಾಯ ಒದಗಿಸುವಲ್ಲಿ ಎಸ್‌ಐಟಿ ವಿಫಲವಾಗಿದೆ. ಸಿಬಿಐ ತನಿಖೆಯಿಂದ ಮಾತ್ರ ಸತ್ಯಾಂಶ ಹೊರಬರಲಿದೆ ಎಂದು ರಶ್ಮಿ ರಾಮೇಗೌಡ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸಿಎಂ, ಡಿಸಿಎಂ ಹೆಸರು ಬಂದಿದೆ

ಅಶ್ಲೀಲಗಳನ್ನು ಒಳಗೊಂಡ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಅಸಂಖ್ಯಾತ ಪೆನ್‌ಡ್ರೈವ್‌ಗಳ ಮುಖೇನ ರಾಜ್ಯದಾದ್ಯಂತ ಹಂಚಿರುವ ಷಡ್ಯಂತ್ರದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಹೆಸರುಗಳನ್ನು ಹೊಳೆನರಸಿಪುರದ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡರು ಸುದ್ದಿಗೋಷ್ಠಿಯಲ್ಲಿ ಸಾಕ್ಷಿ ಸಮೇತ ಬಹಿರಂಗ ಮಾಡಿದ್ದರು. ಇದನ್ನು ಎಸ್‌ಐಟಿ ಗಣನೆಗೆ ತೆಗೆದುಕೊಂಡಿಲ್ಲವೇ ಎಂದು ರಶ್ಮಿ ರಾಮೇಗೌಡ ಪ್ರಶ್ನಿಸಿದರು.

ವಿಡಿಐೊ ಹಂಚಿಕೆ ಶಿಕ್ಷಾರ್ಹ ಅಪರಾಧ

ಮಾಹಿತಿ ತಂತ್ರಜ್ಞಾನ ಕಾಯಿದೆ-2020ರ ಸೆಕ್ಷನ್ 66-ಇ, 67 ಮತ್ತು 67-ಎ ಮತ್ತು ಕಾಯ್ದೆ 228 (ಎ) ಐಪಿಸಿ ಪ್ರಕಾರ ಯಾವುದೇ ವ್ಯಕ್ತಿ ಎಲೆಕ್ಟ್ರಾನಿಕ್ ಸಂದೇಶಗಳನ್ನಾಗಲಿ ಅಥವಾ ಚಿತ್ರಿಕರಣವನ್ನಾಗಲಿ ತಯಾರಿಸುವುದು, ಸಂಗ್ರಹಿಸಿ ಇಡುವುದು ಹಾಗೂ ಬಿತ್ತರಿಸುವುದು, ಚಿತ್ರಿಸುವುದು ಸಂತ್ರಸ್ತೆಯರ ಹೆಸರನ್ನು ಕೋರ್ಟ್ ಅನುಮತಿಯಿಲ್ಲದೆ, ಸಂತ್ರಸ್ತೆಯರ ಅನುಮತಿಯಿಲ್ಲದೆ ಬಹಿರಂಗ ಪಡಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಈ ಹಿನ್ನೆಲೆಯಲ್ಲಿ ವಿಡಿಯೊಗಳನ್ನು ಲೀಕ್ ಮಾಡಿರುವ ಕಿಡಿಗೇಡಿಗಳಿಗೆ ತಕ್ಕ ಶಾಸ್ತಿ ಮಾಡಬೇಕು ಎಂದು ರಶ್ಮಿ ರಾಮೇಗೌಡ ಆಗ್ರಹಿಸಿದರು.

ಇದನ್ನೂ ಓದಿ: Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇಬ್ಬರು ಹೆಚ್ಚುವರಿ ಎಸ್‌ಪಿಪಿ ನೇಮಕ; ರಾಜ್ಯ ಸರ್ಕಾರದ ಮಹತ್ವದ ಆದೇಶ

ಪೆನ್‌ಡ್ರೈವ್‌ಗಳನ್ನು ಹಾಸನದಲ್ಲಿ ವ್ಯಾಪಕವಾಗಿ ಹಂಚಿಕೆ ಮಾಡಲಾಗಿದೆ. ಈ ಬಗ್ಗೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದರೂ ಕ್ರಮ ಜರುಗಿಸಿರುವುದಿಲ್ಲ ಎಂದು ರಶ್ಮಿ ರಾಮೇಗೌಡ ಆರೋಪಿಸಿದರು.

ಇದೇ ವೇಳೆ ಅವರು ಮಹಿಳಾ ಆಯೋಗಕ್ಕೆ ಸಲ್ಲಿಸಿದ ದೂರಿನ ಪ್ರತಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದರು. ಬೆಂಗಳೂರು ಮಹಾನಗರ ಜನತಾದಳ ಮಹಿಳಾ ವಿಭಾಗದ ಅಧ್ಯಕ್ಷೆ ಶೈಲಾ ಎಸ್ ರಾವ್, ವಕ್ತಾರರಾದ ಪ್ರಶಾಂತಿ, ರಾಜಾಜಿನಗರ ಕ್ಷೇತ್ರದ ಮಹಿಳಾ ಅಧ್ಯಕ್ಷೆ ಕವಿತಾ, ರಾಜ್ಯ ಕಾರ್ಯದರ್ಶಿ ಮಂಗಳಮ್ಮ, ನಗರದ ಮಹಿಳಾ ವಿಭಾಗದ ಪದಾಧಿಕಾರಿಗಳು, ಮುಖಂಡರು ನಿಯೋಗದಲ್ಲಿ ಇದ್ದರು.

Continue Reading

ಪ್ರಮುಖ ಸುದ್ದಿ

Rain News: ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ; ಬೆಂಗಳೂರಿನಲ್ಲಿ ಹೊಳೆಯಂತಾದ ರಸ್ತೆಗಳು!

Rain News: ಮುಂದಿನ ಮೂರು ದಿನಗಳ ಕಾಲ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

VISTARANEWS.COM


on

Rain News
Koo

ಬೆಂಗಳೂರು: ರಾಜಧಾನಿ ಬೆಂಗಳೂರು, ಕೊಡಗು, ಚಿಕ್ಕಮಗಳೂರು ಸೇರಿ ರಾಜ್ಯದ ವಿವಿಧೆಡೆ ಬುಧವಾರ ಸಂಜೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯಿಲ್ಲದೆ ಕಂಗೆಟ್ಟಿದ್ದ ಜನರ ಮೊಗದಲ್ಲಿ ಮಂದಹಾಸ ಮೂಡಿದೆ. ಇನ್ನು ಬೆಂಗಳೂರಿನ ಹಲವೆಡೆ ದಿಢೀರನೆ ಸುರಿದ ಮಳೆಯಿಂದ (Rain News) ರಸ್ತೆಗಳು ಜಲಾವೃತವಾಗಿ ಹೊಳೆಯಂತಾಗಿದ್ದರಿಂದ ವಾಹನ ಸವಾರರು ತೊಂದರೆ ಅನುಭವಿಸಿದರು.

ಬೆಂಗಳೂರಲ್ಲಿ ಮಳೆ ಆರ್ಭಟ; ಸಿಟಿಯಲ್ಲಿ ಕೂಲ್ ವೆದರ್

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಭಾರಿ ಸುರಿಯುತ್ತಿದೆ. ಇನ್ನು ನಗರದಲ್ಲಿ ಬುಧವಾರ ಸಂಜೆಯಿಂದ ಹಲವೆಡೆ ಮಳೆ ಅರ್ಭಟ ಶುರು ಆಗಿದ್ದು, ಶಿವಾಜಿನಗರ, ವಸಂತನಗರ, ಶಾಂತಿನಗರ, ಜಯ ನಗರ, ವಿಜಯ ನಗರ, ಮಲ್ಲೇಶ್ವರಂ, ಶಿವಾನಂದ ಸರ್ಕಲ್, ಯಶವಂತಪುರ, ರಾಜಾಜಿ ನಗರ, ಶೇಷಾದ್ರಿಪುರಂ, ಎಂ.ಜಿ ರಸ್ತೆ, ಕಬ್ಬನ್ ಪಾರ್ಕ್ ಸೇರಿದಂತೆ ನಗರದ ಹಲವೆಡೆ ಭರ್ಜರಿ ಮಳೆಯ ಜೊತೆಗೆ ಗುಡುಗು-ಮಿಂಚು ಸಹ ಕಂಡು ಬಂದಿದೆ. ಬೇಸಿಗೆಯಲ್ಲಿ ಭಾರಿ ಮಳೆಯಿಂದ ರಾಜಧಾನಿಯ ವಾತಾವರಣ ತಂಪಾಗಿದ್ದರಿಂದ ಜನರು ಸಂತಸಪಡುತ್ತಿದ್ದಾರೆ.

ಮರ ಬಿದ್ದು 2 ಕಾರು ಜಖಂ

ಕೂಡ್ಲು ಗೇಟ್, ರೂಪೇನ ಅಗ್ರಹಾರದ ಬಳಿ ಮಳೆಯಿಂದ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದದ್ದು ಕಂಡುಬಂತು. ಇನ್ನು ಮಡಿವಾಳ ಸುತ್ತ ಮುತ್ತಲೂ ಭಾರಿ ಮಳೆಗಿದ್ದರಿಂದ ಸಂಚಾರ ದಟ್ಟಣೆ ಉಂಟಾಗಿತ್ತು. ಉಲ್ಲಾಳ ಹತ್ತಿರದ ಜ್ಞಾನಜ್ಯೋತಿ ನಗರದಲ್ಲಿ ಮರ ಬಿದ್ದಿದ್ದರಿಂದ ಮನೆ ಮುಂದೆ ನಿಲ್ಲಿಸಿದ್ದ 2 ಕಾರು ಜಖಂಗೊಂಡಿದೆ.

ಎಲೆಕ್ಟ್ರಾನಿಕ್ ಸಿಟಿ ಸಮೀಪ ಹೆದ್ದಾರಿ ಜಲಾವೃತ

ಎಲೆಕ್ಟ್ರಾನಿಕ್ ಸಿಟಿ ಸಮೀಪದ ವೀರಸಂದ್ರ ಸಿಗ್ನಲ್ ಬಳಿ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗಿದ್ದರಿಂದ ಸವಾರರು ಪರದಾಡಿದರು. ಪ್ರತಿ ಬಾರಿ ಮಳೆ ಬಂದಾಗ ರಾಷ್ಟ್ರೀಯ ಹೆದ್ದಾರಿ ಹೊಳೆಯಂತಾಗುತ್ತದೆ. ಮಳೆ ನೀರು ಹೊರಹೋಗಲು ಸೂಕ್ತ ವ್ಯವಸ್ಥೆ ಮಾಡದ ಅಧಿಕಾರಿಗಳು ನಿರ್ಲಕ್ಷ್ಯವಹಿಸಿರುವುದರಿಂದ ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಗಿದೆ ಎಂದು ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ | Karnataka Weather : ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಎಚ್ಚರಿಕೆ

ಕೊಡಗು, ಚಿಕ್ಕಮಗಳೂರಿನಲ್ಲಿ ಮುಂದುವರಿದ ಮಳೆ

ಕೊಡಗು ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ ಸುರಿದಿದ್ದು, ಜನರ ಮೊಗದಲ್ಲಿ ಮಂದಹಾಸ ಮೂಡಿದೆ. ಇನ್ನು ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಮೂಡಿಗೆರೆ ಪಟ್ಟಣದಲ್ಲಿ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಗುಡುಗು, ಸಿಡಿಲು, ಆಲಿಕಲ್ಲು ಸಹಿತ ಭಾರಿ ಮಳೆ ಸುರಿದಿದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮೂಡಿಗೆರೆ ಸುತ್ತಮುತ್ತ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿತ್ತು.

ಇನ್ನು ಚಿಕ್ಕಬಳ್ಳಾಪುರದಲ್ಲಿ ಬಿಸಿಲಿಗೆ ನೀರಿಲ್ಲದೆ ಒಣಗುತಿದ್ದ ಬೆಳೆಗಳಿಗೆ ವರುಣ ತಂಪೆರೆದಿದ್ದಾನೆ. ರಣಬಿಸಿಲಿಗೆ ಕೃಷಿ ಚಟುವಟಿಕೆಗಳಿಂದ ಕಂಗೆಟ್ಟಿದ್ದ ಅನ್ನದಾತ, ಕೊನೆಗೂ ಒಂದಷ್ಟು ಮಳೆ ಬಂತಲ್ಲಾ ಎಂದು ನಿಟ್ಟುಸಿರು ಬಿಟ್ಟಿದ್ದಾನೆ.

ಕೆಜಿಎಫ್‌ನಲ್ಲಿ ಮನೆಗಳಿಗೆ ನುಗ್ಗಿದ ನೀರು

ಕೋಲಾರ: ಜಿಲ್ಲೆಯ ವಿವಿಧೆಡೆ ಬೆಳ್ಳಂ ಬೆಳಗ್ಗೆ ಬಿರುಗಾಳಿ ಸಹಿತ ಭಾರಿ ಮಳೆ ಸುರಿದಿದ್ದರಿಂದ ಮಾವು ಹಾಗೂ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೆ. ಇನ್ನು ಕೆಜಿಎಫ್ ನಗರದ ಹಲವು ಬಡಾವಣೆಗಳ ತಗ್ಗು ಪ್ರದೇಶ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುತ್ತಿದ್ದಾರೆ. ಕೆಜಿಎಫ್‌ನ ರಾಬರ್ಟ್‌ಸನ್ ಪೇಟೆ, ಮಾರಿಕುಪ್ಪಮ್, ಫಿಶ್ ಲೈನ್ ಬಡಾವಣೆಗಳಲ್ಲಿ ಮನೆಗಳಿಗೆ ಮಳೆನೀರು ನುಗ್ಗಿದ್ದ ಮನೆಯಲ್ಲಿನ ವಸ್ತುಗಳು ನೀರುಪಾಲಾಗಿವೆ. ಇದರಿಂದ ಜನರು ಸಂಕಷ್ಟ ಅನುಭವಿಸುವಂತಾಗಿದೆ.

ಮರ ಬಿದ್ದು ವ್ಯಕ್ತಿ ಸಾವು

ರಾತ್ರಿ ಸುರಿದ ಭಾರಿ ಮಳೆಗೆ ಮರ ಉರುಳಿದ್ದರಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಡೆಂಕಣಿಕೋಟೆ ಸಮೀಪದ ಅಂತೇವನಪಲ್ಲಿಯಲ್ಲಿ ನಡೆದಿದೆ. ಬೆಳಗ್ಗೆ 8 ಗಂಟೆ ವೇಳೆಗೆ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರ ಮೇಲೆ ಮರದ ಬೇರು ಬಿದ್ದು ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ಚಿಕಿತ್ಸೆಗಾಗಿ ಡೆಂಕಣಿಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | Heavy Rain: ಕಳುವರಹಳ್ಳಿಯಲ್ಲಿ ಭಾರೀ ಗಾಳಿ ಮಳೆಗೆ ಶಾಲಾ ಚಾವಣಿ ಕುಸಿತ

ಇನ್ನು ಮುಂದಿನ ಮೂರು ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ, ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಮೇ 10ರಂದು ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಸಹ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದ್ದು, ನಗರದಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗುವ ಮುನ್ಸೂಚನೆ ಇದೆ.

Continue Reading
Advertisement
Pune
ದೇಶ4 hours ago

ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ತೆಗೆದ ನೂರಾರು ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಉತ್ತರ ಕನ್ನಡ4 hours ago

Bheemanna Naik: ಶಿರಸಿ ಶಾಸಕ ಭೀಮಣ್ಣ ನಾಯ್ಕ್‌ ಮೇಲೆ ಜೇನು ದಾಳಿ; ಆಸ್ಪತ್ರೆಗೆ ದಾಖಲು

Kulgam
ದೇಶ4 hours ago

Kulgam: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ಮತ್ತೊಬ್ಬ ಉಗ್ರನ ಎನ್‌ಕೌಂಟರ್‌, 2 ದಿನದಲ್ಲಿ 3ನೇ ಬಲಿ

ವಿಸ್ತಾರ ಗ್ರಾಮದನಿ Vistara Gramadaani
ಕರ್ನಾಟಕ5 hours ago

ವಿಸ್ತಾರ ಗ್ರಾಮ ದನಿ: ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು ಮತದಾನ, SSLC ಫಲಿತಾಂಶದಂತೆ!

LSG vs SRH
ಕ್ರೀಡೆ5 hours ago

LSG vs SRH: ಹೆಡ್, ಅಭಿಷೇಕ್ ಬ್ಯಾಟಿಂಗ್​ ಸುಂಟರಗಾಳಿಗೆ ತತ್ತರಿಸಿದ ಲಕ್ನೋ; 10 ವಿಕೆಟ್​ ಹೀನಾಯ ಸೋಲು

Hindu Girl
ದೇಶ6 hours ago

Hindu Girl: ಹಿಂದು ಬಾಲಕಿಯ ಅತ್ಯಾಚಾರಗೈದು, ಇಸ್ಲಾಂ ಪಾಲಿಸುವಂತೆ ಒತ್ತಾಯ; ಇಬ್ರಾಹಿಂ ವಿರುದ್ಧ ಕೇಸ್

Monty Panesar
ಕ್ರಿಕೆಟ್6 hours ago

Monty Panesar: ರಾಜಕೀಯಕ್ಕೆ ಎಂಟ್ರಿ ಕೊಟ್ಟು ಒಂದೇ ವಾರದಲ್ಲಿ ಗುಡ್​ ಬೈ ಹೇಳಿದ ಇಂಗ್ಲೆಂಡ್​ ಸ್ಪಿನ್ನರ್

Murder Case
ಕರ್ನಾಟಕ6 hours ago

Murder Case: ಶಿವಮೊಗ್ಗದಲ್ಲಿ ಗ್ಯಾಂಗ್ ವಾರ್; ಹಾಡಹಗಲೇ ಇಬ್ಬರು ರೌಡಿಶೀಟರ್‌ಗಳ ಭೀಕರ ಹತ್ಯೆ

Virat Kohli
ಕ್ರೀಡೆ6 hours ago

Virat Kohli: ಪಂಜಾಬಿ ಮಾತನಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Poonch Terrorists
ದೇಶ6 hours ago

Poonch Terrorists: ಪೂಂಚ್‌ನಲ್ಲಿ ಸೇನೆ ಮೇಲೆ ದಾಳಿ ಮಾಡಿದ 3 ಉಗ್ರರ ಫೋಟೊ ರಿಲೀಸ್; ಹತ್ಯೆಗೆ ಪ್ಲಾನ್!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ23 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ1 day ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ1 day ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ1 day ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌