ʼಗೋಡೌನ್‌ʼ ರೀತಿ ರಂಗಮಂದಿರ ನಿರ್ಮಾಣ | ಕಾರ್ಯಾಂಗದ ಮೇಲೆ ಸ್ಪೀಕರ್‌ ಬೇಸರ; ಹೊಸ ನೀತಿ ಘೋಷಿಸಿದ ಸುನಿಲ್‌ಕುಮಾರ್‌ - Vistara News

ದಾವಣಗೆರೆ

ʼಗೋಡೌನ್‌ʼ ರೀತಿ ರಂಗಮಂದಿರ ನಿರ್ಮಾಣ | ಕಾರ್ಯಾಂಗದ ಮೇಲೆ ಸ್ಪೀಕರ್‌ ಬೇಸರ; ಹೊಸ ನೀತಿ ಘೋಷಿಸಿದ ಸುನಿಲ್‌ಕುಮಾರ್‌

ಜಿಲ್ಲಾ ರಂಗಮಂದಿರಗಳ ನಿರ್ಮಾಣ ಕಾಮಗಾರಿಗಳು ಅನೇಕ ವರ್ಷಗಳಿಂದಲೂ ನಡೆಯುತ್ತಿದ್ದು, ಈಗಾಗಲೆ ಪ್ರಕರಣಗಳೂ ದಾಖಲಾಗಿ ತನಿಖೆ ನಡೆಯುತ್ತಿವೆ.

VISTARANEWS.COM


on

Kageri assembly
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಧಾನಸಭೆ: ರಾಜ್ಯದ ಎಲ್ಲ ಜಿಲ್ಲೆ, ತಾಲೂಕುಗಳಲ್ಲಿ ಸಾಂಸ್ಕೃತಿಕ ಹಾಗೂ ಸಾಹಿತ್ಯಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರಂಗಮಂದಿರ ನಿರ್ಮಾಣ ಮಾಡುವ ವಿಚಾರ ವಿಧಾನಸಭೆಯಲ್ಲಿ ಗುರುವಾರ ಒಂದಷ್ಟು ಹೊತ್ತು ಚರ್ಚೆಗೆ ಗ್ರಾಸವಾಯಿತು. ಸಂವಿಧಾನದ ಸಂಸ್ಥೆಗಳ ಕುರಿತು ಸ್ವತಃ ಸ್ಪೀಕರ್‌ ಕಾಗೇರಿ ಬೇಸರ ವ್ಯಕ್ತಪಡಿಸಿದ ಪ್ರಸಂಗವೂ ಜರುಗಿತು.

ದಾವಣಗೆರೆಯಲ್ಲಿ ರಂಗಮಂದಿರ ನಿರ್ಮಾಣ ನನೆಗುದಿಗೆ ಬಿದ್ದಿದೆ ಎಂದು ಬಿಜೆಪಿ ಶಾಸಕ ಎಸ್‌.ಎ. ರವೀಂದ್ರನಾಥ್‌ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌, ದಾವಣಗೆರೆ ರಂಗಮಂದಿರಕ್ಕೆ 2010ರಲ್ಲಿ ಮಂಜೂರು ನೀಡಿದಾಗ ಮೂರೂವರೆ ಕೋಟಿ ರೂ.ಗೆ ನಿರ್ಮಾಣ ಮಾಡಬೇಕಿತ್ತು. ನಂತರ ನಾಲ್ಕೂವರೆ ಕೋಟಿ ರೂ.ಗೆ ಹೆಚ್ಚಿಸಿ ಪ್ರಸ್ತಾವನೆ ಸಲ್ಲಿಸಿದರು. ಈ ಮೊತ್ತವನ್ನು ಇಲಾಖೆ ಹಂತಹಂತವಾಗಿ ನೀಡಿದೆ.

ಆದರೆ ಈಗ ಜಿಲ್ಲಾಧಿಕಾರಿಗಳು ಎಂಟೂವರೆ ಕೋಟಿ ರೂ. ಪ್ರಸ್ತಾವನೆ ಕಳಿಸಿದ್ದಾರೆ. ಸರ್ಕಾರದ ಪೂರ್ವಾನುಮತಿಯನ್ನು ಪಡೆದುಕೊಳ್ಳದೆ ಹೀಗೆ ಮಾಡಿದ್ದಾರೆ. ವೆಚ್ಚದ ಅಂದಾಜು ಡಬಲ್‌ ಆದಾಗ ಇಲಾಖೆಯಿಂದಲೇ ಕೊಡಬೇಕು ಎಂದರೆ ಕಷ್ಟ. ಹಣ ಸಹಾಯಕ್ಕಾಗಿ ಆರ್ಥಿಕ ಇಲಾಖೆಯನ್ನು ಸಂಪರ್ಕಿಸಿದ್ದೇವೆ ಎಂದರು.

ಇದನ್ನೂ ಓದಿ | ರಾಜ್ಯ ಸರ್ಕಾರದ ಮಹತ್ವದ ತೀರ್ಮಾನ: ವಿದ್ಯುತ್‌ ಸಂಪರ್ಕ ಪಡೆಯಲು ʼಒಸಿʼ ಬೇಡ

ಈ ಸಮಯದಲ್ಲಿ ಮಧ್ಯಪ್ರವೇಶಿಸಿದ ಸಿ.ಟಿ. ರವಿ, ದಾವಣಗೆರೆಯ ಆ ರಂಗಮಂದಿರ ಡಿಸೈನ್‌ ಮಾಡಿದ ಇಂಜಿನಿಯರ್‌ಗೆ ವಿಶ್ವೇಶ್ವರಯ್ಯ ಪ್ರಶಸ್ತಿ ನೀಡಬೇಕು ಎಂದು ಗೇಲಿ ಮಾಡಿದರು. ನಾನು ಸಚಿವನಾಗಿದ್ದಾಗ ಅಲ್ಲಿಗೆ ಭೇಟಿ ನೀಡಿದ್ದೆ. ಅದನ್ನು ರಂಗಮಂದಿರದಂತೆ ಡಿಸೈನ್‌ ಮಾಡಿಲ್ಲ, ಗೋಡೌನ್‌ ರೀತಿ ಮಾಡಲಾಗಿದೆ. ರಂಗಮಂದಿರಕ್ಕೆ ಯಾವುದೇ ರೀತಿಯಲ್ಲಿ ಅದು ಸೂಕ್ತವಾಗಿಲ್ಲ. ಅದಕ್ಕೇ ಮತ್ತಷ್ಟು ಹಣ ಹಾಕಿದರೆ, ಅದನ್ನು ನಿರ್ಧಾರಿತ ಉದ್ದೇಶಕ್ಕೆ ಬಳಸಲು ಆಗುವುದಿಲ್ಲ. ಇನ್ನೂ ನಾಲ್ಕು ಕೋಟಿ ರೂ. ಕೊಟ್ಟರೂ ಯಾವುದೇ ಉಪಯೋಗ ಆಗುವುದಿಲ್ಲ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ರವೀಂದ್ರನಾಥ್‌, ದಾವಣಗೆರೆಯಲ್ಲಿ ಗೋಡೌನ್‌ಗಳೇ ಹೆಚ್ಚಾಗಿವೆ. ಹಾಗಾಗಿ ಇದನ್ನೂ ಗೋಡೌನ್‌ ರೀತಿಯಲ್ಲೇ ಕಟ್ಟಿರಬಹುದು ಎಂದು ಹಾಸ್ಯಚಟಾಕಿ ಹಾರಿಸಿದರು. ಕಾಂಗ್ರೆಸ್‌ ಶಾಸಕ ಯು.ಟಿ. ಖಾದರ್‌ ಮಾತನಾಡಿ, ಅಬ್ಬಕ್ಕ ಭವನದ ವಿಚಾರದಲ್ಲೂ ಇದೇ ರೀತಿ ವಿಳಂಬ ಮಾಡಿ ವೆಚ್ಚ ಹೆಚ್ಚಾಗುತ್ತಿದೆ ಎಂದರು.

ಇದೆಲ್ಲವನ್ನೂ ಕೇಳುತ್ತಿದ್ದ ಸ್ಪೀಕರ್‌ ಕಾಗೇರಿ, ಅಧಿಕಾರಿಗಳ ವಿರುದ್ಧ ಗರಂ ಆದರು. ಸಮಾಜದ ಸ್ಥಿತಿ ಹೇಗಿದೆ ಎಂದರೆ, ಶಾಸಕಾಂಗದವರು ಮಾತ್ರ ಎಲ್ಲದಕ್ಕೂ ಹೊಣೆಗಾರ ಎನ್ನಲಾಗುತ್ತದೆ. ಕಾರ್ಯಾಂಗದವರು ಯಾವುದಕ್ಕೂ ಹೊಣೆಗಾರರಲ್ಲ ಎಂಬ ಸ್ಥಿತಿ ಇದೆ. ಮಾಧ್ಯಮಗಳು, ಸಾರ್ವಜನಿಕರ ನಡುವೆ ನಾವೇ ಅಪರಾಧಿಗಳಾಗಿದ್ದೇವೆ. ಅಧಿಕಾರಿಗಳು ಮಾತ್ರ ಅತ್ಯಂತ ಸೇಫ್‌ ಆಗಿ ಕೆಲಸ ಮಾಡಿ ನಿವೃತ್ತ ಆಗುತ್ತಾರೆ. ಅವರಿಗೆ ಯಾವುದೇ ಹಂತದಲ್ಲಿ ಉತ್ತರದಾಯಿತ್ವವೇ ಇಲ್ಲ. ಬ್ರಿಟಿಷರು ಬಿಟ್ಟು ಹೋಗಿದ್ದನ್ನು ಯಾರಾದರೂ ಮುಂದುವರಿಸಬೇಕಲ್ಲ ಹಾಗಾಗಿ ನಾವಿದ್ದೇವೆ ಎಂದು ಒಬ್ಬರು ಅಧಿಕಾರಿ ಹೇಳಿದ್ದರು. ಸಂವಿಧಾನಬದ್ಧವಾದ ಜವಾಬ್ದಾರಿಗಳನ್ನು ಮರೆತು ಸುಮ್ಮನಿದ್ದಾರೆ.

ಚುನಾವಣೆ ಸುಧಾರಣೆಗಳಲ್ಲಿ ಕಾರ್ಯಾಂಗದ ಜವಾಬ್ದಾರಿಯೂ ಇದೆ. ಆದರೆ ಈ ವಿಷವರ್ತುಲದಲ್ಲಿ ನಾವು ಮಾತ್ರ ಸಿಕ್ಕಿಕೊಂಡಿದ್ದೇವೆ. ಯಾರ ಹಣವನ್ನು ಯಾರು ವೆಚ್ಚ ಮಾಡಬೇಕು ಎಂಬುದೇ ಗೊತ್ತಾಗುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಕೊನೆಯದಾಗಿ ಮಾತನಾಡಿದ ಸುನಿಲ್‌ ಕುಮಾರ್‌, ಭವಿಷ್ಯದಲ್ಲಿ ರಂಗಮಂದಿರಗಳ ನಿರ್ಮಾಣ ವಿಳಂಬವಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಸದ್ಯ 15 ಜಿಲ್ಲೆಯಲ್ಲಿ ರಂಗಮಂದಿರ ನಿರ್ಮಾಣವಾಗಬೇಕಿದೆ. ಆರರಲ್ಲಿ ಪ್ರಗತಿಯಲ್ಲಿದ್ದು, ಉಳಿದ ಕಡೆ ಆರಂಭವಾಗಬೇಕಿದೆ.

ದಾವಣಗೆರೆಯಷ್ಟೆ ಅಲ್ಲದೆ, ಬೇರೆ ಬೇರೆ ರಂಗಮಂದಿರಗಳಲ್ಲೂ ಹೀಗೆಯೇ ಮೂರ್ನಾಲ್ಕು ಪಟ್ಟು ಹೆಚ್ಚಳ ಮಾಡಲಾಗಿದೆ. ಹಾಗಾಗಿ ಈಗ ಇಲಾಖೆಯಿಂದ ನಿರ್ಧಾರ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜಿಲ್ಲಾ ರಂಗಮಂದಿರಕ್ಕೆ ಮೂರು ಕೋಟಿ ರೂ., ತಾಲೂಕು ರಂಗಮಂದಿರಕ್ಕೆ ಒಂದು ಕೋಟಿ ರೂ. ನೀಡುತ್ತೇವೆ. ಉಳಿದ ಮೊತ್ತವನ್ನು ಸ್ಥಳೀಯವಾಗಿ ಹೊಂದಿಸಿಕೊಳ್ಳಬೇಕು ಎಂದು ತೀರ್ಮಾನಿಸಿದ್ದೇವೆ. ಆದರೆ ದಾವಣಗೆರೆ ರಂಗಮಂದಿರದ ಕುರಿತು ರವೀದ್ರನಾಥ್‌ ಅವರ ಜತೆ ಚರ್ಚಿಸುತ್ತೇನೆ, ಸಿ.ಟಿ. ರವಿ ಅವರು ಹೇಳಿದ ವಿಚಾರದಲ್ಲೂ ಚಿಂತನೆ ನಡೆಸಿ ತೀರ್ಮಾನಿಸುತ್ತೇವೆ ಎಂದರು.

ಇದನ್ನೂ ಓದಿ | ದಲಿತರು ಇಂಗ್ಲಿಷ್ ಕಲಿಯಬಾರದೆ?: ಸುನಿಲ್‌ ಕುಮಾರ್‌ಗೆ ಪ್ರಿಯಾಂಕ್‌ ಖರ್ಗೆ ಪ್ರಶ್ನೆ ಸುರಿಮಳೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮೇ 13ರ ತನಕ ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಯಂಕರ ಮಳೆ; ಬಿರುಗಾಳಿಯು ಸಾಥ್‌

Karnataka Weather : ರಾಜ್ಯಾದ್ಯಂತ ಇನ್ನೂ ಮೂರು ದಿನಗಳು ಗುಡುಗು ಸಹಿತ ಮಳೆಯು (Rain News) ಅಬ್ಬರಿಸಲಿದೆ. ಗಾಳಿ ವೇಗವು 50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ದಕ್ಷಿಣ ಒಳನಾಡು, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಕರಾವಳಿಯಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ (Karnataka Rain) ಸಾಧ್ಯತೆಯಿದೆ. ಇನ್ನೂ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮೇ 14ರವರೆಗೆ ಗುಡುಗು ಸಹಿತ ಮಿಂಚು ಮತ್ತು ಗಾಳಿಯೊಂದಿಗೆ (40-50 ಕಿ.ಮೀ) ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು (Karnataka Weather Forecast) ನೀಡಿದೆ.

ಕರಾವಳಿಯಲ್ಲಿ ಮೇ 13ರವರೆಗೆ ಹಾಗೂ ಉತ್ತರ ಒಳನಾಡಿನಲ್ಲಿ ಮೇ 12ರಿಂದ 13ರವರೆಗೆ, ದಕ್ಷಿಣ ಒಳನಾಡಿನಲ್ಲಿ ಮೇ 13ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Sleeping Tips: ನಿಮಗೆ ರಾತ್ರಿ ನಿದ್ದೆ ಬರುತ್ತಿಲ್ಲವೆ? ಮಲಗುವ ಮುನ್ನ ಈ ಪೇಯಗಳನ್ನು ಕುಡಿಯಿರಿ!

ಬೆಂಗಳೂರು ವ್ಯಾಪ್ತಿಯಲ್ಲಿ ಅಲ್ಲಿಲ್ಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮೇಣ 32 ಮತ್ತು 21 ಡಿ.ಸೆ ಇರಲಿದೆ. ಉತ್ತರ ಒಳನಾಡಿನ ಬಳ್ಳಾರಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉಳಿದಂತೆ ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain: ಶನಿವಾರ ಸಂಜೆ ಅಬ್ಬರಿಸಿದ ಗಾಳಿ ಮಳೆಗೆ ತೊಯ್ದು ತೊಪ್ಪೆಯಾದ ಮಂದಿ; ರಸ್ತೆಗೆ ಬಿದ್ದ ಮರಗಳು

Karnataka Rain: ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ಶನಿವಾರ ಸಂಜೆ ಗಾಳಿಯೊಂದಿಗೆ ಸುರಿದ ಭಾರಿ ಮಳೆಗೆ ಜನರು ತೊಯ್ದು ತೊಪ್ಪೆಯಾದರು. ವಿಜಯಪುರ, ಹುಬ್ಬಳ್ಳಿ, ರಾಯಚೂರು ಸೇರಿ ಚಿಕ್ಕಮಗಳೂರಲ್ಲೂ ಮಳೆಯು (Heavy Rain alert) ಅಬ್ಬರಿಸಿತ್ತು. ರಸ್ತೆ ಮೇಲೆ ನೀರು ಹರಿದುಮ ಕೆಲವೆಡೆ ಕೆರೆಯಂತಾಗಿತ್ತು. ಇನ್ನೂ ನಾಲ್ಕೈದು ದಿನಗಳು ಗುಡುಗು ಸಹಿತ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka rain
Koo

ವಿಜಯಪುರ/ಹುಬ್ಬಳ್ಳಿ: ಶನಿವಾರ ಹಲವೆಡೆ ದಿಢೀರ್‌ ಸುರಿದ ಮಳೆಗೆ (Rain News) ಜನರು ತತ್ತರಿಸಿ ಹೋಗಿದ್ದರು. ಉತ್ತರ ಒಳನಾಡಿನ ವಿಜಯಪುರ, ರಾಯಚೂರು, ಹುಬ್ಬಳ್ಳಿ, ಧಾರವಾಡ ಹಾಗೂ ಮಲೆನಾಡಿನ ಚಿಕ್ಕಮಗಳೂರಿನಲ್ಲೂ ವರುಣಾರ್ಭಟ (Karnataka Rain) ಜೋರಾಗಿತ್ತು. ಮೇ 15ರವರೆಗೆ ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

ವಿಜಯಪುರ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸುರಿದ ಮಳೆಯು ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ತಂಪು ತಂದಿತ್ತು. ಬಿರು ಬಿಸಿಲಿಗೆ ಕಂಗೆಟ್ಟು ಹೋಗಿದ್ದ ಜನರು, ಶನಿವಾರ ಸುರಿದ ಅರ್ಧ ಗಂಟೆಗೂ ಆಧಿಕ ಕಾಲ ಮಳೆಗೆ ಸಂತಸಗೊಂಡರು. ಇನ್ನೂ ರೈತರು ಮುಂಗಾರು ಹಂಗಾಮಿಗೆ ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದಾರೆ. ಈವರೆಗೂ ಮಳೆಯಿಂದ ಯಾವುದೇ ಹಾನಿಯಾದ ವರದಿಯಾಗಿಲ್ಲ.

Karnataka Rain

ಹುಬ್ಬಳ್ಳಿ, ಬೆಳಗಾವಿಯಲ್ಲಿ ಗುಡುಗು -ಸಿಡಿಲಿನ ಮಳೆ ಅಬ್ಬರ

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಯಾಗಿದೆ. ಕೆಲವೆಡೆ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆಯಾಗಿದೆ. ಎಡೆಬಿಡದೆ ಆರ್ಭಟಿಸುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿತ್ತು. ರಸ್ತೆಗಳಲ್ಲಿ ನೀರು ತುಂಬಿ ಹರಿದು ಸಂಚಾರಕ್ಕೆ ಅಡ್ಡಿಯಾಗಿತ್ತು. ಇತ್ತ ಬೆಳಗಾವಿಯಲ್ಲಿ ಗುಡುಗು ಸಿಡಿಲು ಮಿಶ್ರಿತ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲಿನ ಬೇಗೆಗೆ ಬೇಸೆತ್ತು ಹೋಗಿದ್ದ ಕುಂದಾನಗರಿ ಜನರಿಗೆ ವರುಣ ತಂಪೆರೆದಿದ್ದಾನೆ. ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ.

ಇದನ್ನೂ ಓದಿ: Heavy Rain: ಬೆಂಗಳೂರಿನಲ್ಲಿ ಮಳೆಯ ಅಬ್ಬರ; ಹಲವೆಡೆ ರಸ್ತೆಯಲ್ಲೇ ಹರಿದ ನೀರು, ಸಂಚಾರ ಅಸ್ತವ್ಯಸ್ತ

ಜೋರು‌ ಮಳೆಯಲ್ಲೇ ಶನಿವಾರದ ಸಂತೆ ಸಂಭ್ರಮ

ರಾಯಚೂರು ಜಿಲ್ಲೆ ದೇವದುರ್ಗ ಪಟ್ಟಣದಲ್ಲಿ ವರುಣಾರ್ಭಟದ ನಡುವೆಯೇ ಶನಿವಾರದ ಸಂತೆ ಜೋರಾಗಿತ್ತು. ಧಾರಾಕಾರ ಮಳೆ‌‌ಯಲ್ಲೇ ವ್ಯಾಪಾರಸ್ಥರು ಸಂತೆ ಮಾಡಿದರು. ಮಳೆಗೆ ಡೋಂಟ್ ಕೇರ್ ಎಂದ ಸಾವಿರಾರು ಜನರು ಖರೀದಿಯಲ್ಲಿ ಬ್ಯುಸಿಯಾಗಿದ್ದರು.

ಧಾರವಾಡದಲ್ಲಿ ಮಳೆ ಗಾಳಿಗೆ ಜಖಂ ಆದ ಬಸ್‌ಗಳು

ಧಾರವಾಡದಲ್ಲಿ ಗಾಳಿ ಸಹಿತ ಧಾರಾಕಾರವಾಗಿ ಮಳೆಗೆ ನಗರದ ಬಹುತೇಕ ಕಡೆ ಮರಗಳು ನೆಲಕ್ಕುರುಳಿದ್ದವು. ಮಳೆ ಗಾಳಿಗೆ ಬಸ್‌ಗಳು ಜಖಂ ಆಗಿದ್ದವು. ನಿರ್ಮಾಣ ಹಂತದಲ್ಲಿದ್ದ ಈಜುಕೊಳದ ಕಟ್ಟಿಗೆ ಸೆಂಟ್ರಿಂಗ್ ಬಿದ್ದು ಖಾಸಗಿ ಬಸ್ ಜಖಂಗೊಂಡಿತ್ತು. ನಗರದ ಡಿಸಿ ಕಂಪೌಂಡ್‌ಗೆ ಹೊಂದಿಕೊಂಡಿರುವ ನಿರ್ಮಾಣ ಹಂತದ ಕಟ್ಟಡದಲ್ಲಿ ಘಟನೆ ನಡೆದಿತ್ತು.

Karnataka Rain

ಚಿಕ್ಕಮಗಳೂರಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ

ಕಾಫಿನಾಡು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಗುಡುಗು-ಸಿಡಿಲಿನೊಂದಿಗೆ ಎಡಬಿಡದೆ ಮಳೆ ಸುರಿಯುತ್ತಿದೆ. ರಸ್ತೆಯಲ್ಲಿ ನೀರು ನದಿಯಂತೆ ಹರಿಯುತ್ತಿದೆ. ಚಿಕ್ಕಮಗಳೂರು ನಗರ, ಜಯಪುರ, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ ಭಾಗದಲ್ಲಿ ಮಳೆ ಜತೆ ಭಾರಿ ಗಾಳಿ ಬೀಸುತ್ತಿದೆ. ಇನ್ನೂ ಕಳೆದೊಂದು ಗಂಟೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ವಿದ್ಯುತ್ ತಂತಿ ಮೇಲೆ ಮರ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಭಾರೀ ಗಾಳಿ-ಮಳೆಯಿಂದ ವಿದ್ಯುತ್ ಸಂಪರ್ಕವಿಲ್ಲದೆ ಕುಗ್ರಾಮಗಳು ಕತ್ತಲಲ್ಲಿವೆ. ಮಳೆ ಕಂಡು ರೈತರು, ಅಡಿಕೆ-ಕಾಫಿ-ಮೆಣಸು ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ.

ಮಂಗಳೂರಿನ ಕುಕ್ಕೆ ಸುಬ್ರಹ್ಮಣ್ಯದಲ್ಲೂ ಗಾಳಿ,ಗುಡುಗು ಸಹಿತ ಮಳೆಯಾಗುತ್ತಿದೆ. ಸುಮಾರು ಅರ್ಧಗಂಟೆಗಳ ಕಾಲ ಮಳೆಯು ಸುರಿದಿದೆ. ಬಿಸಿಲ ಬೇಗೆಯಿಂದ ತತ್ತರಿಸಿದ ಸುಬ್ರಹ್ಮಣ್ಯದಲ್ಲಿ ಹಠಾತ್‌ ಮಳೆಯು ಕ್ಷೇತ್ರಕ್ಕೆ ಆಗಮಿಸಿದ ಭಕ್ತರಲ್ಲಿ ಸಂತಸ ಮೂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವಾರಾಂತ್ಯದಲ್ಲಿ ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ ಅಬ್ಬರ

Karnataka Weather Forecast : ವಾರಾಂತ್ಯದಲ್ಲಿ ಬೆಂಗಳೂರು ಸೇರಿದಂತೆ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain alert) ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಬಿರುಗಾಳಿ ವೇಗವು 50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದ್ದು, ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಸಹಿತ 40-50 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ (Karnataka weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಚಿತ್ರದುರ್ಗ, ಕೋಲಾರದಲ್ಲೂ ಮಳೆಯು ಅಬ್ಬರಿಸಲಿದೆ.

ಉತ್ತರ ಒಳನಾಡಿನ ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಚದುರಿದಂತೆ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Self Harming : ಕೊಡಗಿನಲ್ಲಿ ಬಾಲಕಿಯ ರುಂಡ ಕತ್ತರಿಸಿದ್ದ ಪ್ರೇಮಿ ನೇಣಿಗೆ ಶರಣು

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾದರೆ, ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾದರೆ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ.

ಬೆಂಗಳೂರಲ್ಲಿ ಸಾಧಾರಣ ಮಳೆ

ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮುಂಜಾನೆ ಮೋಡ ಕವಿದ ವಾತಾವರಣದೊಂದಿಗೆ ತಂಪು ಗಾಳಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು 32 ಮತ್ತು 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬಿರುಗಾಳಿ ಸಹಿತ ಭಾರಿ ಮಳೆ; ಸಿಡಿಲು ಬಡಿದು ಮಹಿಳೆ ಸೇರಿ ಶ್ವಾನ ಸಾವು‌, ಮತ್ತೊಬ್ಬ ಗಂಭೀರ

Karnataka Weather Forecast : ವಾರಾಂತ್ಯದಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಬೆಂಗಳೂರು ಸೇರಿ ಮುಕ್ಕಾಲು ಕರ್ನಾಟಕದಲ್ಲಿ ಮಳೆ ಬೀಳಲಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು/ಬೆಳಗಾವಿ: ಕಳೆದ ಮೂರು ದಿನಗಳಿಂದ ಹಲವೆಡೆ ಮಳೆಯು (Rain News) ಅಬ್ಬರಿಸುತ್ತಿದ್ದು, ಮೇ 15ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಶುಕ್ರವಾರದಂದು ಹಲವೆಡೆ ಸುರಿದ ಮಳೆಗೆ ಸಾವು-ನೋವು ಸಂಭವಿಸಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಹಾಗೂ ಅವರ ಶ್ವಾನಕ್ಕೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ಸಿಡಿಲು ಬಡಿದು ಮಹಿಳೆ ಸೇರಿ ಶ್ವಾನ ಸಾವು

ಸಿಡಿಲು ಬಡಿದು ಓರ್ವ ಮಹಿಳೆ ಹಾಗೂ ಶ್ವಾನವೊಂದು ಸ್ಥಳದಲ್ಲಿಯೇ ಮೃತಪಟ್ಟಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬೋನಸಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ವಪ್ನ (48) ಮೃತ ದುರ್ದೈವಿ. ಸ್ವಪ್ನ ಅವರ ಮಗ ಜ್ಞಾನೇಶ್ವರಗೆ (20) ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತಮ್ಮ ಹೊಲದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸಾಕು ನಾಯಿಯು ಸಿಡಿಲಿಗೆ ಬಲಿಯಾಗಿದೆ. ಕುಂಚಾವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕೋಡಿ ತಾಲೂಕಿನ‌ ವಿವಿಧೆಡೆ ತುಂತುರು ಮಳೆಯಾಗಿದೆ. ಬಿಸಿಲಿನ ಬೇಗೆಗೆ ತತ್ತರಿಸಿದ್ದ ಜನತೆಗೆ ಮಳೆಯಿಂದ ವಾತಾವರಣ ತಂಪಾಗಿತ್ತು. ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಬಿಸಿಲು ನಾಡು ಯಾದಗಿರಿಯಲ್ಲಿ ವರುಣನ ಸಿಂಚನವಾಗಿದೆ. ಕಳೆದ ಒಂದು ಗಂಟೆಯಿಂದ ಸುರಿಯುತ್ತಿರುವ ಮಳೆಗೆ ಶಹಾಪುರ ಪಟ್ಟಣ ಮಲೆನಾಡಿನಂತಾಗಿತ್ತು. ಬಿಸಿಲಿನ ತಾಪಮಾನದಿಂದ ಕಂಗೆಟ್ಟಿದ್ದ ಜನರು ಸಂತಸಗೊಂಡರು. ಶಹಾಪುರ ತಾಲೂಕಿನಾದ್ಯಂತ ಗಾಳಿ ಸಹಿತ ಮಳೆ ಸುರಿಯುತ್ತಿದೆ. ಯಾದಗಿರಿ ಜಿಲ್ಲೆಯಾದ್ಯಂತ ಮೋಡಕವಿದ ವಾತಾವರಣವಿದೆ.

ಕೊಪ್ಪಳದಲ್ಲಿ ಭಾರಿ ಬಿರುಗಾಳಿಗೆ ನೆಲಕ್ಕುರುಳಿದ ಬಾಳೆ

ಕೊಪ್ಪಳ ತಾಲೂಕಿನ ಡೊಂಬರಳ್ಳಿ ಗ್ರಾಮದಲ್ಲಿ ಭಾರಿ ಬಿರುಗಾಳಿ ಮಳೆಗೆ ಬಾಳೆ ಬೆಳೆಯು ಹಾಳಾಗಿದೆ. ಡೊಂಬರಹಳ್ಳಿ ಗ್ರಾಮದ ಬಸವರಡ್ಡಿ ಕರಡ್ಡಿ ಎಂಬುವವರಿಗೆ ಸೇರಿದ ಸುಮಾರು ಒಂದೂವರೆ ಎಕರೆಯಲ್ಲಿ ಬೆಳೆದಿದ್ದ ಬಾಳೆಯು ನೆಲಕ್ಕುರುಳಿದೆ. ಬಾಳೆ ಗೊನೆ ಬಿಟ್ಟು ಫಸಲು ನೀಡುವ ವೇಳೆ ಬಾಳೆ ಬೆಳೆ ನಾಶವಾಗಿದ್ದು, ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ತೋಟಗಾರಿಕೆ ಇಲಾಖೆಯವರು ಸಮಿಕ್ಷೆ ಮಾಡಿ ಪರಿಹಾರ ನೀಡುವಂತೆ ರೈತರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Road Accident : ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವು; ಕರೆಂಟ್‌ ವೈರ್‌ ತಾಗಿ ವ್ಯಕ್ತಿ ಮೃತ್ಯು

ಮೇ 15ರವರೆಗೆ ಮಳೆ ಎಚ್ಚರಿಕೆ

ಮಲೆನಾರಿನ ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯು ಅಬ್ಬರಿಸಲಿದೆ. ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಕಾರವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಒಳನಾಡಿನ ಜಿಲ್ಲೆಗಳಾದ ದಾವಣಗೆರೆ, ಮಂಡ್ಯ, ಮೈಸೂರು, ಚಾಮರಾಜನಗರ, ಹಾವೇರಿ, ಬೆಳಗಾವಿ, ಬಾಗಲಕೋಟೆ, ಗದಗ, ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಬಿರುಗಾಳಿ (40-50 kmph) ಬೀಸಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಚಿತ್ರದುರ್ಗದ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಜತೆಗೆ (40-50 kmph) ವ್ಯಾಪಕ ಮಳೆಯಾಗಲಿದೆ.

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಗುಡುಗು ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32°C ಮತ್ತು 21°C ಇರುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Queen's Premier League start
ಕ್ರಿಕೆಟ್12 mins ago

Queen’s Premier League: ಕಿರುತೆರೆ ,ಹಿರಿತೆರೆ ಹೆಣ್ಮಕ್ಕಳಿಗಾಗಿ ಶುರುವಾಯ್ತು ಕ್ವೀನ್ಸ್‌ ಪ್ರೀಮಿಯರ್ ಲೀಗ್!

Prajwal Revanna Case What was plan of advocate Devaraje Gowda Why did you leave for Delhi
ಕ್ರೈಂ12 mins ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌; ವಕೀಲ ದೇವರಾಜೇಗೌಡ ಪ್ಲ್ಯಾನ್‌ ಏನಿತ್ತು? ದೆಹಲಿಗೆ ಹೊರಟಿದ್ದು ಏಕೆ?

Mental Health Awareness Month
ಆರೋಗ್ಯ12 mins ago

Mental Health Awareness Month: ಮಾನಸಿಕ ಆರೋಗ್ಯ ಜಾಗೃತಿ ಮಾಸ; ಮತ್ತೆ ಮಗುವಿನಂತಾಗಲು ಪ್ರಯತ್ನಿಸಿ!

Narendra Modi
ದೇಶ15 mins ago

Narendra Modi: ತಾಯಂದಿರ ದಿನದಂದು ಮೋದಿಗೆ ವಿಶೇಷ ಉಡುಗೊರೆ ಕೊಟ್ಟ ಫ್ಯಾನ್ಸ್; ಏನದು ನೋಡಿ!

Murder case
ಕ್ರೈಂ15 mins ago

Murder Case : ಪತಿಯ ಡೆಡ್ಲಿ ಅಟ್ಯಾಕ್‌ಗೆ ಪತ್ನಿ ಸಾವು; ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ

Kannada New Movie Moorane Krishnappa trailer Out
ಸ್ಯಾಂಡಲ್ ವುಡ್25 mins ago

Kannada New Movie: ಮನರಂಜನೆಯ ರಸದೌತಣ ಬಡಿಸಲು ಬಂದ ʻಮೂರನೇ ಕೃಷ್ಣಪ್ಪʼ: ಟ್ರೈಲರ್‌ ಔಟ್‌!

Vimala Raman confirms her relationship with this villan actor
ಸ್ಯಾಂಡಲ್ ವುಡ್32 mins ago

Vimala Raman: ಖಳನಟನ ಜತೆ ಪ್ರೀತಿಲಿ ಬಿದ್ದ ʻಆಪ್ತರಕ್ಷಕʼ ನಟಿ

Money Guide
ಮನಿ-ಗೈಡ್40 mins ago

Money Guide: ಎಫ್‌ಡಿ V/S ಆರ್‌ಡಿ; ಯಾವುದು ಉತ್ತಮ? ಯಾವುದರಲ್ಲಿ ಹೂಡಿಕೆ ಮಾಡಬೇಕು?

Lok Sabha Election
ದೇಶ48 mins ago

Lok Sabha Election: 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ನಾಳೆ ಮತದಾನ; ಕಣದಲ್ಲಿರುವ ಪ್ರಮುಖರು ಯಾರು?

Neha Murder Case
ಕರ್ನಾಟಕ53 mins ago

Neha Murder Case: ನೇಹಾ ಕೊಲೆ ಪ್ರಕರಣ; ಚಾರ್ಜ್‌ಶೀಟ್ ಸಲ್ಲಿಸಲು ಸಿಐಡಿ ತಯಾರಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ3 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ5 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ12 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು1 day ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ3 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ3 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

ಟ್ರೆಂಡಿಂಗ್‌