Engineers day | ಅರಣ್ಯಗಳ ಸಿವಿಲ್​ ಎಂಜಿನಿಯರ್​​ಗಳು ಯಾರೆಂದು ಗೊತ್ತಾ? ಅವರಿಗೂ ಶುಭ ಕೋರಬಹುದಾ? - Vistara News

ವೈರಲ್ ನ್ಯೂಸ್

Engineers day | ಅರಣ್ಯಗಳ ಸಿವಿಲ್​ ಎಂಜಿನಿಯರ್​​ಗಳು ಯಾರೆಂದು ಗೊತ್ತಾ? ಅವರಿಗೂ ಶುಭ ಕೋರಬಹುದಾ?

ಬರೀ ನಾಡಲ್ಲಿ ಅಷ್ಟೇ ಅಲ್ಲ, ಕಾಡಿನಲ್ಲೂ ಇದ್ದಾರೆ ಸಿವಿಲ್ ಎಂಜಿನಿಯರ್​ಗಳು. ಪುರಾತನ ಕಾಲದಿಂದಲೂ ನಿಷ್ಠೆಯಿಂದ ತಮ್ಮ ಕೆಲಸ ಮಾಡಿಕೊಂಡಿದ್ದಾರೆ. ಅವರಿಗೂ ಇಂದು ಇಲ್ಲಿಂದಲೇ ಶುಭ ಹಾರೈಸೋಣ..!

VISTARANEWS.COM


on

Do you Know the Civil Engineers of Forest
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾರತದ ಮೊಟ್ಟಮೊದಲ ಎಂಜಿನಿಯರ್​ ಸರ್​. ಎಂ.ವಿಶ್ವೇಶ್ವರಯ್ಯನವರು ಹುಟ್ಟಿದ ದಿನ ಸೆಪ್ಟೆಂಬರ್ 15ನ್ನು ಪ್ರತಿವರ್ಷ ಭಾರತದಲ್ಲಿ ‘ರಾಷ್ಟ್ರೀಯ ಎಂಜಿನಿಯರ್​ಗಳ ದಿನ’ ಎಂದು ಆಚರಿಸಲಾಗುತ್ತದೆ. ಈ ದಿನ ಸರ್​. ಎಂ.ವಿಶ್ವೇಶ್ವರಯ್ಯನವರನ್ನು ಸ್ಮರಿಸುವ ಜತೆ ಎಲ್ಲ ಎಂಜಿನಿಯರ್​​ಗಳಿಗೂ ಶುಭಕೋರಿ ಗೌರವಿಸಲಾಗುತ್ತದೆ. ಈ ದಿನ ಸೋಷಿಯಲ್ ಮೀಡಿಯಾದಲ್ಲಿ ಎಂಜಿನಿಯರ್​ಗಳಿಗೆ ಗೌರವ ಸಲ್ಲಿಸುವ ಪೋಸ್ಟ್​ಗಳನ್ನು ಹಾಕುವ ಜತೆ, ಅವರ ಕಾಲೆಳೆಯುವ, ಅವರ ಬಗೆಗಿನ ತಮಾಷೆಯುಕ್ತ ಜೋಕ್​​ಗಳ ಪೋಸ್ಟ್​ನ್ನೂ ಹಾಕಲಾಗುತ್ತದೆ. ಹಾಗಂತ ಇದು ಟೀಕೆಯೆಂದೆಲ್ಲ..

ಇಷ್ಟೆಲ್ಲ ಮಾಡಿ ಎಂಜಿನಿಯರ್ಸ್ ಡೇ ಆಚರಿಸುವ ನಮಗೆ ಅರಣ್ಯದಲ್ಲಿರುವ ಸಿವಿಲ್​ ಎಂಜಿನಿಯರ್​​ಗಳು ಯಾರೆಂದು ಗೊತ್ತಾ? -ಏನು ಕಾಡಿನಲ್ಲಿ ಸಿವಿಲ್​ ಎಂಜಿನಿಯರ್​​ಗಳು ಇರುತ್ತಾರಾ? ಎಂಬ ಪ್ರಶ್ನೆ ನಿಮ್ಮಲ್ಲಿ ಉದ್ಭವ ಆಗಬಹುದು. ‘ಹೌದು..ಪುರಾತನ ಕಾಲದಿಂದಲೂ..ಈಗಿನವರೆಗೂ ಕಾಡಿನಲ್ಲೂ ಸಿವಿಲ್​ ಎಂಜಿನಿಯರ್​ಗಳು ಇದ್ದಾರೆ ಎನ್ನುತ್ತಾರೆ ಐಎಫ್​ಎಸ್​ (ಇಂಡಿಯನ್​ ಫಾರೆಸ್ಟ್ ಸರ್ವೀಸ್​​) ಅಧಿಕಾರಿ ಪರ್ವೀನ್​ ಕಾಸ್ವಾನ್​. ಅಂದಹಾಗೇ, ಪರ್ವೀನ್​ ಮಾತನಾಡುತ್ತಿರುವುದು ‘ಆನೆ’ಗಳ ಬಗ್ಗೆ. ಅವರು ಹೇಳುವ ಪ್ರಕಾರ ಆನೆಗಳೇ ಅರಣ್ಯದ ಸಿವಿಲ್​ ಎಂಜಿನಿಯರ್​ಗಳು.

ಇಂದು ಎಂಜಿನಿಯರ್ಸ್​ ಡೇ ನಿಮಿತ್ತ ಟ್ವೀಟ್ ಮಾಡಿರುವ ಐಎಫ್​ಎಸ್ ಅಧಿಕಾರಿ ಪರ್ವೀನ್​ ಕಾಸ್ವಾನ್​, ‘ಆನೆಗಳು ಅರಣ್ಯಗಳಲ್ಲಿ ಸಿವಿಲ್​ ಎಂಜಿನಿಯರ್​​ಗಳಂತೆ ಕೆಲಸ ಮಾಡುತ್ತವೆ ಎಂಬುದು ನಿಮಗೆಲ್ಲ ತಿಳಿದಿದೆಯೇ? ದಟ್ಟಾರಣ್ಯದಲ್ಲಿ ಅವು ಹೆಜ್ಜೆಯೂರಿ ನಡೆದ ಜಾಗ ದಾರಿಯಾಗಿ ಮಾರ್ಪಾಡಾಗುತ್ತದೆ. ಅದೆಷ್ಟೋ ಪ್ರದೇಶಗಳಲ್ಲಿ ನೀರು ಹುಡುಕಲು ತಮ್ಮ ಸೊಂಡಿಲುಗಳ ಮೂಲಕ ನೆಲವನ್ನು ಅಗೆದು, ಅಂತರ್ಜಲದ ನೀರು ಉಕ್ಕುವಂತೆ ಮಾಡಿ ಸರೋವರ, ಕೊಳವನ್ನು ನಿರ್ಮಿಸಿವೆ. ನದಿಗಳ ಮೂಲಕ ನಡೆದು ಹೋಗಿ ಅವುಗಳ ಹರಿವಿಗೆ ದಾರಿ ಮಾಡಿಕೊಟ್ಟಿವೆ. ಪ್ರಾಚೀನ ಭಾರತದ ದೇಗುಲಗಳ ನಿರ್ಮಾತೃಗಳು ಈ ಆನೆಗಳು, ಇಷ್ಟೆಲ್ಲ ಮಾಡುವ ಅವು ಎಂಜಿನಿಯರ್​ಗಳಲ್ಲದೆ ಇನ್ನೇನು?’ ಎಂದು ವಿವರಿಸಿದ್ದಾರೆ.

ಆನೆಗಳು ಪರಿಸರ ವ್ಯವಸ್ಥೆಯ ಎಂಜಿನಿಯರ್​​ಗಳು ಎಂಬುದನ್ನು ವರ್ಲ್ಡ್​ ವೈಲ್ಡ್​ಲೈಫ್​ ಫಂಡ್​ ಕೂಡ ಹೇಳಿದೆ. ದಟ್ಟಾರಣ್ಯಗಳಲ್ಲಿ ಆನೆಗಳು ಮೊದಲು ನಡೆದು ಉಳಿದ ಪ್ರಾಣಿಗಳಿಗೆ ಹಾದಿ ನಿರ್ಮಿಸಿಕೊಡುತ್ತವೆ. ದೊಡ್ಡದೊಡ್ಡ ಮರಗಳನ್ನು, ಪೊದೆಗಳನ್ನು ಉರುಳಿಸಿ ದಾರಿ ಮಾಡುವ ಶಕ್ತಿ ಆನೆಗಳಿಗೆ ಅಲ್ಲದೆ, ಇನ್ಯಾವ ಪ್ರಾಣಿಗಳಿಗೂ ಇಲ್ಲ ಎಂದು ಹೇಳಿದೆ. ಇಲ್ಲಿ ನಾಡಿನಲ್ಲಿ ಅಭಿಯಂತರರು ಮಾಡುವ ಕೆಲಸವನ್ನು ಅಲ್ಲಿ ಕಾಡಿನಲ್ಲಿ ಆನೆಗಳು ಮಾಡುತ್ತವೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.

ಇದನ್ನೂ ಓದಿ: Engineers Day | ನೀವು ನೆನಪಿನಲ್ಲಿಟ್ಟುಕೊಳ್ಳಲೇಬೇಕಾದ ವಿಶ್ವೇಶ್ವರಯ್ಯರ ಹತ್ತು ಹೇಳಿಕೆಗಳು ಇವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Madhavi Latha: ಮತಗಟ್ಟೆಯಲ್ಲಿ ಮುಸ್ಲಿಂ ಮಹಿಳೆಯರ ಬುರ್ಖಾ ತೆಗೆಸಿ ಐಡಿ ಕಾರ್ಡ್‌ ಚೆಕ್‌ ಮಾಡಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ!

Madhavi Latha:ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಕಣಕ್ಕಿಳಿದಿರುವ ಲತಾ, ಇಂದು ಅಜಂಪುರದಲ್ಲಿರುವ ಅಮೃತ ವಿದ್ಯಾಲಯ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ವಿವಿಧ ಮತಗಟ್ಟೆಗಳಿಗೆ ಭೇಟಿ ಕೊಟ್ಟಿದ್ದರು. ಈ ವೇಳೆ ಮತಗಟ್ಟೆಯಲ್ಲಿ ಮತದಾನಕ್ಕಾಗಿ ಕಾದು ಕುಳಿತಿದ್ದ ಮುಸ್ಲಿಂ ಮಹಿಳೆಯ ಬಳಿ ಬಂದ ಲತಾ, ಮುಖಕ್ಕೆ ಧರಿಸಿದ್ದ ಹಿಜಾಬ್‌ ತೆಗೆಯುವಂತೆ ಹೇಳಿ ಅವರ ಗುತುತಿನ ಚೀಟಿ ಪರಿಶೀಲನೆ ಮಾಡಿದರು. ಅದೂ ಅಲ್ಲದೇ ಸರಿಯಾದ ರೀತಿಯಲ್ಲಿ ಪರಿಶೀಲನೆ ನಡೆದ ಬಳಿಕಷ್ಟೇ ಮತದಾನಕ್ಕೆ ಅವಕಾಶ ಮಾಡಿಕೊಡುವಂತೆ ಅಲ್ಲಿನ ಅಧಿಕಾರಿಗಳಿಗೆ ಆಕೆ ಸೂಚಿಸಿದ್ದಾರೆ. ಇನ್ನು ಇದೇ ವೇಳೆ ಮತಪಟ್ಟಿಯಲ್ಲಿ ಮತದಾರರ ಹೆಸರು ಮಿಸ್‌ ಆಗಿವೆ ಎಂದು ಹೇಳಿದ್ದಾರೆ.

VISTARANEWS.COM


on

Madhavi Latha
Koo

ಹೈದರಾಬಾದ್‌: ಲೋಕಸಭಾ ಚುನಾವಣೆ(Lok Sabha Election 2024)ಯ ನಾಲ್ಕನೇ ಹಂತದ ಮತದಾನ ಪ್ರಕ್ರಿಯೆ ಇಂದು ನಡೆಯುತ್ತಿದೆ. ಈ ನಡುವೆ ಕೆಲವೊಂದು ಕಡೆ ಅಭ್ಯರ್ಥಿಗಳಿಂದ ಎಡವಟ್ಟುಗಳೂ ನಡೆದಿವೆ. ಹೈದರಾಬಾದ್‌ ಬಿಜೆಪಿ ಲೋಕಸಭಾ ಅಭ್ಯರ್ಥಿ ಮಾಧವಿ ಲತಾ(Madhavi Latha) ಮತಗಟ್ಟೆಯಲ್ಲಿ ಬುರ್ಖಾ ಧರಿಸಿದ್ದ ಮತದಾರರ ಗುರುತಿನ ಚೀಟಿ ಪರಿಶೀಲನೆ ಮಾಡಿ ವಿವಾದಕ್ಕೀಡಾಗಿದ್ದಾರೆ. ಈ ವಿಡಿಯೋ ವೈರಲ್‌(Viral Video) ಆಗಿದ್ದು, ಪ್ರತಿಸ್ಪರ್ಧಿ ಎಐಎಂಐಎಂ ಪಕ್ಷ(AIMIM) ಮುಖಂಡ ಅಸಾದುದ್ದೀನ್‌ ಓವೈಸಿ(Asaduddin Owaisi) ಚುನಾವಣಾ ಆಯೋಗಕ್ಕೆ (Election Commission of India) ದೂರು ನೀಡಿದ್ದಾರೆ.

ಘಟನೆ ವಿವರ:

ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಕಣಕ್ಕಿಳಿದಿರುವ ಲತಾ, ಇಂದು ಅಜಂಪುರದಲ್ಲಿರುವ ಅಮೃತ ವಿದ್ಯಾಲಯ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ವಿವಿಧ ಮತಗಟ್ಟೆಗಳಿಗೆ ಭೇಟಿ ಕೊಟ್ಟಿದ್ದರು. ಈ ವೇಳೆ ಮತಗಟ್ಟೆಯಲ್ಲಿ ಮತದಾನಕ್ಕಾಗಿ ಕಾದು ಕುಳಿತಿದ್ದ ಮುಸ್ಲಿಂ ಮಹಿಳೆಯ ಬಳಿ ಬಂದ ಲತಾ, ಮುಖಕ್ಕೆ ಧರಿಸಿದ್ದ ಹಿಜಾಬ್‌ ತೆಗೆಯುವಂತೆ ಹೇಳಿ ಅವರ ಗುತುತಿನ ಚೀಟಿ ಪರಿಶೀಲನೆ ಮಾಡಿದರು. ಅದೂ ಅಲ್ಲದೇ ಸರಿಯಾದ ರೀತಿಯಲ್ಲಿ ಪರಿಶೀಲನೆ ನಡೆದ ಬಳಿಕಷ್ಟೇ ಮತದಾನಕ್ಕೆ ಅವಕಾಶ ಮಾಡಿಕೊಡುವಂತೆ ಅಲ್ಲಿನ ಅಧಿಕಾರಿಗಳಿಗೆ ಆಕೆ ಸೂಚಿಸಿದ್ದಾರೆ. ಇನ್ನು ಇದೇ ವೇಳೆ ಮತಪಟ್ಟಿಯಲ್ಲಿ ಮತದಾರರ ಹೆಸರು ಮಿಸ್‌ ಆಗಿವೆ ಎಂದು ಹೇಳಿದ್ದಾರೆ.

ಮಾಧವಿ ಲತಾ ಅವರು ವಿವಾದಕ್ಕೀಡಾಗುತ್ತಿರುವುದು ಇದೇ ಮೊದಲೇನಲ್ಲ. ಕೆಲ ದಿನಗಳ ಹಿಂದೆ ಹೈದರಾಬಾದ್ ನಲ್ಲಿ ನಡೆದ ರಾಮನವಮಿಯ ಮೆರವಣಿಗೆ ಸಂದರ್ಭದಲ್ಲಿ ಹೈದರಾಬಾದ್‌ನ ಓಲ್ಡ್ ಸಿಟಿಯಲ್ಲಿರುವ ಸಿದ್ದಿಯಂಬರ್ ಬಜಾರ್ ಮಸೀದಿಯತ್ತ ಮಾಧವಿ ಲತಾ ಅವರು ಬಾಣ ಬಿಟ್ಟಂತೆ ಸನ್ನೆ ಮಾಡುವ ಮೂಲಕ ಸುದ್ದಿಯಾಗಿದ್ದರು.
ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಮಾಧವಿ ಲತಾ ಅವರು ಕೇಸರಿ ಶಾಲು ಧರಿಸಿ ವಾಹನವೊಂದರ ಮೇಲೆ ನಿಂತು ಮಸೀದಿಯತ್ತ ಬಾಣ ಬಿಟ್ಟಂತೆ ಸನ್ನೆ ಮಾಡಿರುವುದು ಮತ್ತು ಸುತ್ತಲು ಕೇಸರಿ ಧ್ವಜ ಹಿಡಿದು ನಿಂತಿದ್ದ ನೂರಾರು ಜನರು ಚಪ್ಪಾಳೆ ತಟ್ಟಿ ಹರ್ಷೋದ್ಘಾರ ಮೊಳಗಿಸಿದ್ದು ವೈರಲ್ ವಿಡಿಯೋದಲ್ಲಿತ್ತು.

ಇದನ್ನೂ ಓದಿ: Viral Video: ಸಾಲಿನಲ್ಲಿ ಬನ್ನಿ ಅಂದಿದ್ದೇ ತಪ್ಪಾಯ್ತಾ? ಮತದಾರನಿಗೆ MLA ಕಪಾಳಮೋಕ್ಷ

ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಲೇ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಸ್ಪಷ್ಟನೆ ನೀಡಿದ್ದು, ‘ತಪ್ಪು ಭಾವನೆ ಮೂಡಿಸಲು ನನ್ನ ವಿಡಿಯೋವೊಂದನ್ನು ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದು ಅಪೂರ್ಣ ವಿಡಿಯೋ ಎಂಬುವುದನ್ನು ನಾನು ಸ್ಪಷ್ಟಪಡಿಸಲು ಇಚ್ಚಿಸುತ್ತೇನೆ. ಈ ವಿಡಿಯೋದಿಂದ ಯಾರ ಭಾವನೆಗಾದರು ಧಕ್ಕೆಯಾಗಿದ್ದರೆ, ನಾನು ಎಲ್ಲರನ್ನು ಗೌರವಿಸುವವಳಾಗಿ ಕ್ಷಮೆ ಯಾಚಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದರು.

Continue Reading

ಬೆಂಗಳೂರು

Cubbon park: ಕಬ್ಬನ್‌ ಪಾರ್ಕ್‌ನಲ್ಲಿ ಯುವಕನನ್ನು ಅಟ್ಟಾಡಿಸಿ ಚಪ್ಪಲಿಯಿಂದ ಹೊಡೆದ ಮಹಿಳೆಯರು!

Cubbon park : ಪಾರ್ಕಿಂಗ್‌ ಜಾಗದಲ್ಲಿ ಕಾರು ತೆಗೆಯುವ ವಿಚಾರಕ್ಕೆ ಶುರುವಾದ ಗಲಾಟೆಯು ವಿಕೋಪಕ್ಕೆ ತಿರುಗಿದೆ. ಕಾರಲ್ಲಿದ್ದ ಮಹಿಳೆಯರಿಬ್ಬರು ಯುವಕನನ್ನು ಅಟ್ಟಾಡಿಸಿಕೊಂಡು ಚಪ್ಪಲಿಯಿಂದ ಹೊಡೆದು ಅವಮಾನಿಸಿದ್ದಾರೆ. ಇತ್ತ ಮಹಿಳೆಯರ ಗೂಂಡಾ ವರ್ತನೆಗೆ ಸಾರ್ವಜನಿಕರು ಆಕ್ರೋಶ (Assault case) ಹೊರಹಾಕಿದ್ದಾರೆ.

VISTARANEWS.COM


on

By

Assault case Cubbon park
Koo

ಬೆಂಗಳೂರು: ಸಣ್ಣದಾಗಿ ಶುರುವಾದ ಜಗಳವು ಹೊಡಿಬಡಿ ಹಂತಕ್ಕೆ ತಲುಪಿತ್ತು. ಮಹಿಳೆಯರಿಬ್ಬರು ನಡುರಸ್ತೆಯಲ್ಲೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿರುವ (Assault Case) ಘಟನೆ ಬೆಂಗಳೂರಲ್ಲಿ ನಡೆದಿದೆ. ಮಹಿಳೆಯರ ವಿರುದ್ಧ ಅಲ್ಲಿದ್ದ ಪುರುಷರು ತಿರುಗಿ ಬಿದ್ದಿದ್ದರು. ಮೂರು ದಿನಗಳ ಹಿಂದೆ ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ (cubbon park) ಈ ಘಟನೆ ನಡೆದಿದೆ.

ಕಬ್ಬನ್‌ ಪಾರ್ಕ್‌ನಲ್ಲಿ ಯುವಕನೊಬ್ಬ ಪಾರ್ಕಿಂಗ್‌ ಜಾಗದಿಂದ ಕಾರು ತೆಗೆಯುತ್ತಿದ್ದ. ಇದೇ ವೇಳೆ ಮಹಿಳೆಯರಿಬ್ಬರು ಇದ್ದ ಕಾರು ಮುಂದಿನಿಂದ ಬಂದಿದೆ. ಈ ವಿಚಾರಕ್ಕೆ ಯುವಕನೊಂದಿಗೆ ಮಹಿಳೆಯರು ವಾಗ್ವಾದಕ್ಕೆ ಇಳಿದಿದ್ದರು. ಮಾತು ವಿಕೋಪಕ್ಕೆ ತಿರುಗಿದ್ದು, ಯುವಕನ ತಪ್ಪಿಲ್ಲದಿದ್ದರು ಮಹಿಳೆಯರಿಬ್ಬರು ಅಟ್ಟಾಡಿಸಿಕೊಂಡು ಹೊಡೆದು ಹಲ್ಲೆ ಮಾಡಿದ್ದಾರೆ.

ಮಾತ್ರವಲ್ಲದೆ ಮಹಿಳೆಯರಿಬ್ಬರು ಯುವಕನಿಗೆ ಚಪ್ಪಲಿಯಿಂದ ಹೊಡೆದು ಅವಮಾನ ಮಾಡಿದ್ದಾರೆ. ಇತ್ತ ಮಹಿಳೆಯರ ವರ್ತನೆಗೆ ಅಲ್ಲಿದ್ದವರು ಆಕ್ರೋಶ ಹೊರಹಾಕಿದರು. ಮಹಿಳೆಯರ ಗೂಂಡಾ ವರ್ತನೆಗೆ ಸಿಟ್ಟಾಗಿ ನಂತರ ಯುವಕನ ಪರವಾಗಿ ನಿಂತಿದ್ದಾರೆ. ಮಹಿಳೆಯರ ಹಾರಾಟ ಹಾಗೂ ಚಿರಾಟಕ್ಕೆ ಸಾರ್ವಜನಿಕರು ವಾಪಾಸ್‌ ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: Narendra Modi: ಗುರುದ್ವಾರದಲ್ಲಿ ಅಡುಗೆ ಮಾಡಿ ಭಕ್ತರಿಗೆ ಬಡಿಸಿದ ಪ್ರಧಾನಿ; ವಿಡಿಯೋ ವೈರಲ್‌

ಸಾಲಿನಲ್ಲಿ ಬನ್ನಿ ಅಂದಿದ್ದೇ ತಪ್ಪಾಯ್ತಾ? ಮತದಾರನಿಗೆ MLA ಕಪಾಳಮೋಕ್ಷ

ಹೈದರಾಬಾದ್‌: ಕೆಲವೊಮ್ಮೆ ಜನಪ್ರತಿನಿಧಿ(Politicians)ಗಳು ತಾವು ಜನಸೇವಕರು ಎಂಬುದನ್ನೇ ಮರೆತು ದರ್ಪದಿಂದ ವರ್ತಿಸುವ ಘಟನೆ ಆಗಾಗ ಕಣ್ಣ ಮುಂದೆ ಬರುತ್ತಲೇ ಇರುತ್ತವೆ. ಇದೀಗ ಅಂತಹದ್ದೇ ಒಂದು ಘಟನೆ ಆಂಧ್ರ ಪ್ರದೇಶದಲ್ಲಿ(Andra Pradesh) ನಡೆದಿದ್ದು, ಮತದಾರನ ಮೇಲೆ ಶಾಸಕ(Andra Pradesh MLA)ನೋರ್ವ ದರ್ಪ ಮೆರೆದಿದ್ದು, ಕಪಾಳಮೋಕ್ಷ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ (Viral Video) ಆಗುತ್ತಿದ್ದು, ಹಲವರಿಂದ ಖಂಡನೆ ವ್ಯಕ್ತವಾಗಿದೆ.

ಏನಿದು ಘಟನೆ?

ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ತೆನಾಲಿ ಮತಗಟ್ಟೆಯೊಂದರಲ್ಲಿ ಈ ಘಟನೆ ನಡೆದಿದೆ. ಮತ ಚಾಲಾಯಿಸಲೆಂದು ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್‌ ಅಭ್ಯರ್ಥಿ, ತೆನಾಲಿ ಕ್ಷೇತ್ರದ ಶಾಸಕ ಅನ್ನಬತುನಿ ಶಿವಕುಮಾರ್ ಎಂಬುವವರು ಕಪಾಳಮೋಕ್ಷ ಮಾಡಿದ್ದಾನೆ. ಶಾಸಕ ಶಿವಕುಮಾರ್ ಇಂದು ಮತದಾನಕ್ಕೆಂದು ಮತಗಟ್ಟೆಗೆ ಆಗಮಿಸಿದ್ದರು. ಈ ವೇಳೆ ನೂರಾರು ಜನ ಸಾಲಿನಲ್ಲಿ ನಿಂತಿದ್ದರೂ ಅದನು ಲೆಕ್ಕಿಸದೇ ಸಾಲು ತಪ್ಪಿಸಿ ನೇರವಾಗಿ ಮತಗಟ್ಟೆಯೊಳಗೆ ಪ್ರವೇಶಿಸಲು ಯತ್ನಿಸಿದ್ದಾರೆ. ಈ ವೇಳೆ ಇದನ್ನು ಕಂಡ ಮತದಾರನೊಬ್ಬ ಶಾಸಕರ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಸಾಲಿನಲ್ಲೇ ನಿಂತು ಮತ ಚಲಾಯಿಸುವಂತೆ ಆತ ಒತ್ತಾಯಿಸಿದ್ದ. ಇದರಿಂದ ಆಕ್ರೋಶಗೊಂಡ ಶಾಸಕ ಶಿವಕುಮಾರ್ ನೋಡ ನೋಡುತ್ತಲೇ ಪ್ರಶ್ನಿಸಿದ ಮತದಾರನ ಕಪಾಳಕ್ಕೆ ಹೊಡೆದಿದ್ದಾರೆ.

ಮತದಾರರನಿಗೆ ಕಪಾಳಮೋಕ್ಷ ಮಾಡಿರುವ ಬೆನ್ನಲ್ಲೇ ಶಿವಕುಮಾರ್ ಜೊತೆಗಿದ್ದ ಆತನ ಬೆಂಬಲಿಗರು ಹಿಂದೆ ಮುಂದೆ ನೋಡದೆ ಮತದಾರನ ಮೇಲೆ ಮುಗಿಬಿದ್ದು ಸಾಮೂಹಿಕ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಮತದಾರನನ್ನು ಹೊರಗೆ ಎಳೆದೊಯ್ದಿದ್ದಾರೆ. ಈ ವೇಳೆ ಭದ್ರತೆಗೆ ನಿಯೋಜಿಸಿದ್ದ ಪೊಲೀಸರು ಮಧ್ಯ ಪ್ರವೇಶಿಸಿ ಗಲಾಟೆ ನಿಯಂತ್ರಿಸಿದ್ದಾರೆ. ಸ್ಥಳದಲ್ಲಿ ಕೆಲಹೊತ್ತು ಭಾರೀ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಇನ್ನ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಟಿಡಿಪಿ ಪ್ರತಿಕ್ರಿಯಿಸಿದ್ದು, ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷಕ್ಕೆ ಸೋಲು ಖಚಿತ ಎಂಬುದು ಸ್ಪಷ್ಟವಾಗಿದೆ. ಆ ಹತಾಶೆಯಲ್ಲಿ ಈ ರೀತಿ ಮಾಡುತ್ತಿದ್ದಾರೆ ಎಂದು ಟೀಕಿಸಿದೆ. ಇನ್ನು ಈ ಘಟನೆ ಬಗ್ಗೆ ಪ್ರತಿಕ್ರಿಯಿಸಲು ವೈಎಸ್‌ಆರ್‌ ಕಾಂಗ್ರೆಸ್‌ ನಿರಾಕರಿಸಿದೆ. ಘಟನೆಗೆ ಸಂಬಂಧಿಸಿದಂತೆ ಟಿಡಿಪಿ ಮತ್ತು ವೈಎಸ್‌ಆರ್‌ ಕಾಂಗ್ರೆಸ್‌ ನಡುವೆ ವಾಕ್ಸಮರ ಮುಂದುವರೆದಿದೆ.

ಇತ್ತೀಚೆಗೆ ಬಿಜೆಪಿ ಮುಖಂಡ, ನಟಿ ಅಮೂಲ್ಯ ಮಾವ ರಾಮಚಂದ್ರ ಅವರು ಕೂಡ ಸಾರ್ವಜನಿಕ ಸ್ಥಳದಲ್ಲಿ ತಮ್ಮ ಬೆಂಬಲಿಗರಿಗೆ ಕಪಾಳಮೋಕ್ಷ ಮಾಡಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Viral Video: ಸಾಲಿನಲ್ಲಿ ಬನ್ನಿ ಅಂದಿದ್ದೇ ತಪ್ಪಾಯ್ತಾ? ಮತದಾರನಿಗೆ MLA ಕಪಾಳಮೋಕ್ಷ

Viral Video: ಮತ ಚಾಲಾಯಿಸಲೆಂದು ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ವೈಸಿಪಿ ಪಕ್ಷದ ಅಭ್ಯರ್ಥಿ, ತೆನಾಲಿ ಕ್ಷೇತ್ರದ ಶಾಸಕ ಅನ್ನಬತುನಿ ಶಿವಕುಮಾರ್ ಎಂಬುವವರು ಕಪಾಳಮೋಕ್ಷ ಮಾಡಿದ್ದಾನೆ. ಶಾಸಕ ಶಿವಕುಮಾರ್ ಇಂದು ಮತದಾನಕ್ಕೆಂದು ಮತಗಟ್ಟೆಗೆ ಆಗಮಿಸಿದ್ದರು. ಈ ವೇಳೆ ನೂರಾರು ಜನ ಸಾಲಿನಲ್ಲಿ ನಿಂತಿದ್ದರೂ ಅದನು ಲೆಕ್ಕಿಸದೇ ಸಾಲು ತಪ್ಪಿಸಿ ನೇರವಾಗಿ ಮತಗಟ್ಟೆಯೊಳಗೆ ಪ್ರವೇಶಿಸಲು ಯತ್ನಿಸಿದ್ದಾರೆ. ಈ ವೇಳೆ ಇದನ್ನು ಕಂಡ ಮತದಾರನೊಬ್ಬ ಶಾಸಕರ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಸಾಲಿನಲ್ಲೇ ನಿಂತು ಮತ ಚಲಾಯಿಸುವಂತೆ ಆತ ಒತ್ತಾಯಿಸಿದ್ದ. ಇದರಿಂದ ಆಕ್ರೋಶಗೊಂಡ ಶಾಸಕ ಶಿವಕುಮಾರ್ ನೋಡ ನೋಡುತ್ತಲೇ ಪ್ರಶ್ನಿಸಿದ ಮತದಾರನ ಕಪಾಳಕ್ಕೆ ಹೊಡೆದಿದ್ದಾರೆ.

VISTARANEWS.COM


on

Viral Video
Koo

ಹೈದರಾಬಾದ್‌: ಕೆಲವೊಮ್ಮೆ ಜನಪ್ರತಿನಿಧಿ(Politicians)ಗಳು ತಾವು ಜನಸೇವಕರು ಎಂಬುದನ್ನೇ ಮರೆತು ದರ್ಪದಿಂದ ವರ್ತಿಸುವ ಘಟನೆ ಆಗಾಗ ಕಣ್ಣ ಮುಂದೆ ಬರುತ್ತಲೇ ಇರುತ್ತವೆ. ಇದೀಗ ಅಂತಹದ್ದೇ ಒಂದು ಘಟನೆ ಆಂಧ್ರ ಪ್ರದೇಶದಲ್ಲಿ(Andra Pradesh) ನಡೆದಿದ್ದು, ಮತದಾರನ ಮೇಲೆ ಶಾಸಕ(Andra Pradesh MLA)ನೋರ್ವ ದರ್ಪ ಮೆರೆದಿದ್ದು, ಕಪಾಳಮೋಕ್ಷ ಮಾಡಿದ್ದಾರೆ. ಕೋಪಗೊಂಡ ಮತದಾರ ತಿರುಗಿ ಶಾಸಕನಿಗೂ ಒಂದು ಕೊಟ್ಟಿದ್ದಾನೆ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ (Viral Video) ಆಗುತ್ತಿದ್ದು, ಹಲವರಿಂದ ಖಂಡನೆ ವ್ಯಕ್ತವಾಗಿದೆ.

ಏನಿದು ಘಟನೆ?

ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ತೆನಾಲಿ ಮತಗಟ್ಟೆಯೊಂದರಲ್ಲಿ ಈ ಘಟನೆ ನಡೆದಿದೆ. ಮತ ಚಾಲಾಯಿಸಲೆಂದು ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್‌ ಅಭ್ಯರ್ಥಿ, ತೆನಾಲಿ ಕ್ಷೇತ್ರದ ಶಾಸಕ ಅನ್ನಬತುನಿ ಶಿವಕುಮಾರ್ ಎಂಬುವವರು ಕಪಾಳಮೋಕ್ಷ ಮಾಡಿದ್ದಾನೆ. ಶಾಸಕ ಶಿವಕುಮಾರ್ ಇಂದು ಮತದಾನಕ್ಕೆಂದು ಮತಗಟ್ಟೆಗೆ ಆಗಮಿಸಿದ್ದರು. ಈ ವೇಳೆ ನೂರಾರು ಜನ ಸಾಲಿನಲ್ಲಿ ನಿಂತಿದ್ದರೂ ಅದನು ಲೆಕ್ಕಿಸದೇ ಸಾಲು ತಪ್ಪಿಸಿ ನೇರವಾಗಿ ಮತಗಟ್ಟೆಯೊಳಗೆ ಪ್ರವೇಶಿಸಲು ಯತ್ನಿಸಿದ್ದಾರೆ. ಈ ವೇಳೆ ಇದನ್ನು ಕಂಡ ಮತದಾರನೊಬ್ಬ ಶಾಸಕರ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಸಾಲಿನಲ್ಲೇ ನಿಂತು ಮತ ಚಲಾಯಿಸುವಂತೆ ಆತ ಒತ್ತಾಯಿಸಿದ್ದ. ಇದರಿಂದ ಆಕ್ರೋಶಗೊಂಡ ಶಾಸಕ ಶಿವಕುಮಾರ್ ನೋಡ ನೋಡುತ್ತಲೇ ಪ್ರಶ್ನಿಸಿದ ಮತದಾರನ ಕಪಾಳಕ್ಕೆ ಹೊಡೆದಿದ್ದಾರೆ.

ಏಟು ಬೀಳುತ್ತಿದ್ದಂತೆ ಮತದಾರನೂ ತಿರುಗಿ ಶಾಸಕನ ಕಪಾಳಕ್ಕೆ ಹೊಡೆದಿದ್ದಾರೆ. ಇದರ ಬೆನ್ನಲ್ಲೇ ಶಿವಕುಮಾರ್ ಜೊತೆಗಿದ್ದ ಆತನ ಬೆಂಬಲಿಗರು ಹಿಂದೆ ಮುಂದೆ ನೋಡದೆ ಮತದಾರನ ಮೇಲೆ ಮುಗಿಬಿದ್ದು ಸಾಮೂಹಿಕ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಮತದಾರನನ್ನು ಹೊರಗೆ ಎಳೆದೊಯ್ದಿದ್ದಾರೆ. ಈ ವೇಳೆ ಭದ್ರತೆಗೆ ನಿಯೋಜಿಸಿದ್ದ ಪೊಲೀಸರು ಮಧ್ಯ ಪ್ರವೇಶಿಸಿ ಗಲಾಟೆ ನಿಯಂತ್ರಿಸಿದ್ದಾರೆ. ಸ್ಥಳದಲ್ಲಿ ಕೆಲಹೊತ್ತು ಭಾರೀ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಇನ್ನ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಟಿಡಿಪಿ ಪ್ರತಿಕ್ರಿಯಿಸಿದ್ದು, ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷಕ್ಕೆ ಸೋಲು ಖಚಿತ ಎಂಬುದು ಸ್ಪಷ್ಟವಾಗಿದೆ. ಆ ಹತಾಶೆಯಲ್ಲಿ ಈ ರೀತಿ ಮಾಡುತ್ತಿದ್ದಾರೆ ಎಂದು ಟೀಕಿಸಿದೆ. ಇನ್ನು ಈ ಘಟನೆ ಬಗ್ಗೆ ಪ್ರತಿಕ್ರಿಯಿಸಲು ವೈಎಸ್‌ಆರ್‌ ಕಾಂಗ್ರೆಸ್‌ ನಿರಾಕರಿಸಿದೆ. ಘಟನೆಗೆ ಸಂಬಂಧಿಸಿದಂತೆ ಟಿಡಿಪಿ ಮತ್ತು ವೈಎಸ್‌ಆರ್‌ ಕಾಂಗ್ರೆಸ್‌ ನಡುವೆ ವಾಕ್ಸಮರ ಮುಂದುವರೆದಿದೆ.

ಇದನ್ನೂ ಓದಿ: Gold Heist Case: ಬಹುಕೋಟಿ ಚಿನ್ನ, ವಿದೇಶಿ ಕರೆನ್ಸಿ ದರೋಡೆ; ಭಾರತೀಯ ಮೂಲದ ವ್ಯಕ್ತಿ ಲಾಕ್‌!

ಇತ್ತೀಚೆಗೆ ಬಿಜೆಪಿ ಮುಖಂಡ, ನಟಿ ಅಮೂಲ್ಯ ಮಾವ ರಾಮಚಂದ್ರ ಅವರು ಕೂಡ ಸಾರ್ವಜನಿಕ ಸ್ಥಳದಲ್ಲಿ ತಮ್ಮ ಬೆಂಬಲಿಗರಿಗೆ ಕಪಾಳಮೋಕ್ಷ ಮಾಡಿದ್ದರು.

Continue Reading

ವೈರಲ್ ನ್ಯೂಸ್

Elephant Attack: ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ; ಬೆಚ್ಚಿಬಿದ್ದ ಡ್ರೈವರ್‌ನಿಂದ ಅಪಘಾತ!

Elephant Attack: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ ಓಡಾಟ ಮಿತಿಮೀರಿದೆ. ಪ್ರತಿ ರಾತ್ರಿ ಎಂಬಂತೆ ಇಲ್ಲಿ 8, 9, 10 ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗುತ್ತಿದೆ. ನಿನ್ನೆ ರಾತ್ರಿ 9ನೇ ತಿರುವಿನಲ್ಲಿ ಇದ್ದಕ್ಕಿದ್ದಂತೆ ರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷವಾಗಿದೆ. ಇದನ್ನು ಕಂಡು ಗಾಬರಿಯಾದ ಚಾಲಕ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದಾನೆ. ವಾಹನ ರಸ್ತೆಯ ಬದಿಗೆ ಸರಿದು ಚರಂಡಿಗೆ ಬಿದ್ದಿದೆ.

VISTARANEWS.COM


on

elephant attack charmadi ghat
Koo

ಚಿಕ್ಕಮಗಳೂರು: ಬೆಂಗಳೂರು ಹಾಗೂ ಕರಾವಳಿ ಕರ್ನಾಟಕದ ಪ್ರಮುಖ ಕೊಂಡಿಯಾದ ಘಾಟಿಗಳಲ್ಲಿ ಒಂದಾಗಿರುವ ಚಾರ್ಮಾಡಿ ಘಾಟಿಯ (Charmadi Ghat) ರಸ್ತೆಯಲ್ಲಿ ಕಾಡಾನೆ ((Elephant Attack) ಮತ್ತೆ ಮತ್ತೆ ಕಾಣಿಸಿಕೊಳ್ಳುತ್ತಿದೆ. ನಿನ್ನೆ ರಾತ್ರಿ ‌ರಸ್ತೆಯಲ್ಲಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಕಾಡಾನೆಯನ್ನು ಕಂಡು ಗಾಬರಿಯಾದ ಮಹಿಂದ್ರ ಜೀಪ್‌ ಚಾಲಕನೊಬ್ಬ ಗಾಡಿಯ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದಾನೆ. ವಾಹನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ ಓಡಾಟ ಮಿತಿಮೀರಿದೆ. ಪ್ರತಿ ರಾತ್ರಿ ಎಂಬಂತೆ ಇಲ್ಲಿ 8, 9, 10 ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗುತ್ತಿದೆ. ನಿನ್ನೆ ರಾತ್ರಿ 9ನೇ ತಿರುವಿನಲ್ಲಿ ಇದ್ದಕ್ಕಿದ್ದಂತೆ ರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷವಾಗಿದೆ. ಇದನ್ನು ಕಂಡು ಗಾಬರಿಯಾದ ಚಾಲಕ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದಾನೆ. ವಾಹನ ರಸ್ತೆಯ ಬದಿಗೆ ಸರಿದು ಚರಂಡಿಗೆ ಬಿದ್ದಿದೆ.

ಮಂಜು ಕವಿದ ವಾತಾವರಣದಲ್ಲಿ ರಸ್ತೆಯೇ ಸರಿಯಾಗಿ ಕಾಣುತ್ತಿಲ್ಲ. ವಾಹನ ಚಾಲಕರು ಪರದಾಡುತ್ತ ವಾಹನ ಚಲಾಯಿಸುತ್ತಾರೆ. ಇಂಥ ಹೊತ್ತಿನಲ್ಲಿ ಏಕಾಏಕಿ ಕಾಡಾನೆ ಪ್ರತ್ಯಕ್ಷವಾಗುತ್ತಿರುವುದರಿಂದ ವಾಹನ ಸವಾರರು ಭಯಭೀತರಾಗುತ್ತಿದ್ದಾರೆ. ಕಳೆದ ಒಂದು ವಾರದಿಂದ ಚಾರ್ಮಾಡಿ ಘಾಟಿಯಲ್ಲಿ ಆನೆ ಪ್ರತ್ಯಕ್ಷವಾಗುತ್ತಿದೆ. ಹಗಲು ಕೂಡ ಆನೆ ಕಾಣಿಸಿಕೊಳ್ಳುತ್ತಿರುವುದರಿಂದ ವಾಹನ ಸವಾರರು ಗಲಿಬಿಲಿ ಆಗುತ್ತಿದ್ದಾರೆ.

ಚಾರ್ಮಾಡಿ ಘಾಟಿಯಲ್ಲಿ ಘಾಟಿ ಕೆಳಗಿನ ಧರ್ಮಸ್ಥಳ ಮುಂತಾದ ತೀರ್ಥಕ್ಷೇತ್ರಗಳಿಗೆ ಬರುವವರ ವಾಹನಗಳ ಸಂಖ್ಯೆ ಹೆಚ್ಚು ಇದೆ. ಈಗ ಶಾಲೆಗಳಿಗೆ ರಜೆಯೂ ಇರುವುದರಿಂದ ವಾಹನಗಳು ಇನ್ನಷ್ಟು ಹೆಚ್ಚಿವೆ. ದೊಡ್ಡ ವಾಹನಗಳಲ್ಲಿ ಇರುವವರು ಆನೆಗೆ ಕ್ಯಾರೇ ಎನ್ನದೆ ಸ್ಲೋ ಮಾಡಿ ಆನೆ ನೋಡಲು ನಿಲ್ಲಿಸುತ್ತಿರುವುದರಿಂದ, ಸಣ್ಣ ವಾಹನಗಳಿಗೆ ಹಾಗೂ ದ್ವಿಚಕ್ರ ಸವಾರರಿಗೆ ತೊಂದರೆಯಾಗುತ್ತಿದೆ. ರಸ್ತೆಯಲ್ಲಿ ಆನೆ ಓಡಾಟದಿಂದ ಪದೇಪದೇ ಟ್ರಾಫಿಕ್ ಜಾಮ್ ಆಗುತ್ತಿದೆ. ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ತಲೆಕೆಡಿಸಿಕೊಳ್ಳುತ್ತಿಲ್ಲ. ಸಲಗ ವಾಹನಗಳ ಮೇಲೆ ಎರಗುವುದಕ್ಕೆ ಮೊದಲು ಎಚ್ಚೆತ್ತುಕೊಳ್ಳಬೇಕಿದೆ ಎಂದು ಸ್ಥಳೀಯರು ದೂರಿದ್ದಾರೆ.

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ಕಾಡು ಪ್ರಾಣಿಗಳ ಹಾವಳಿಗೆ ಜನರು ತತ್ತರಿಸಿ ಹೋಗಿದ್ದಾರೆ. ಮನೆಯಿಂದ ಹೊರಗೆ ಕಾಲಿಟ್ಟರೆ ವಾಪಸ್‌ ಬದುಕಿ ಬರುವ ಗ್ಯಾರಂಟಿ ಇಲ್ಲದಂತಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮನೆ ಸಮೀಪದ ಕಾಡಿಗೆ ತೆರಳುತ್ತಿದ್ದ ವ್ಯಕ್ತಿ ಮಸಣ ಸೇರಿದ್ದಾನೆ. ಕಾಡಾನೆ ದಾಳಿಗೆ ವ್ಯಕ್ತಿ (Elephant attack) ಬಲಿಯಾಗಿದ್ದಾರೆ.

ಶಿವಮೊಗ್ಗದ ಹೊಸನಗರ ತಾಲೂಕಿನ ಬಸವಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ತಿಮ್ಮಪ್ಪ (58) ಕಾಡಾನೆ ದಾಳಿಯಿಂದ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಜನರ ಮೇಲೆ ದಾಳಿ ಮಾಡುತ್ತಿರುವ ಕಾಡಾನೆಯನ್ನು ಸೆರೆಹಿಡಿಯುವಂತೆ ಒತ್ತಾಯ ಕೇಳಿ ಬಂದಿದೆ. ಕಾಡು ಪ್ರಾಣಿಗಳ ಹಾವಳಿಯಿಂದ ಮನೆಯಿಂದ ಹೊರ ಹೋಗಲು ಎದುರುವಂತಾಗಿದೆ ಎಂದು ಗ್ರಾಮಸ್ಥರು ಕಿಡಿಕಾರಿದರು.

ಇದನ್ನೂ ಓದಿ: Elephant attack : ನಿಲ್ಲದ ಕಾಡು ಪ್ರಾಣಿಗಳ ಹಾವಳಿ; ಶಿವಮೊಗ್ಗದಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿ

Continue Reading
Advertisement
Naxals
ದೇಶ28 seconds ago

Naxals: ಮತ್ತೆ ಮೂವರು ನಕ್ಸಲರ ಹತ್ಯೆ, ಎನ್‌ಕೌಂಟರ್‌ನಲ್ಲಿ ಈ ವರ್ಷ ಶತಕ ಬಾರಿಸಿದ ಭದ್ರತಾ ಸಿಬ್ಬಂದಿ!

sslc result
ಶಿಕ್ಷಣ4 mins ago

SSLC Result : ರಾಜ್ಯ ಶಿಕ್ಷಣ ಗುಣಮಟ್ಟ ಕುಸಿತ, ICSE-CBSE ಕಡೆ ವಲಸೆ; ಇಲಾಖೆ ವಿರುದ್ಧ ಕ್ಯಾಮ್ಸ್‌ ಕಟು ಟೀಕೆ

Pavithra Jayaram died in the accident may alive if the ambulance arrived
ಸಿನಿಮಾ8 mins ago

Pavithra Jayaram: ಪವಿತ್ರ ಜಯರಾಂಗೆ ಅಂತಿಮ ವಿದಾಯ; ಭಯದಲ್ಲೇ ಪ್ರಾಣ ಬಿಟ್ರಾ ನಟಿ?

Sequins partywear fashion
ಫ್ಯಾಷನ್9 mins ago

Sequins Partywear Fashion: ಪಾರ್ಟಿಪ್ರಿಯರಿಗೆ ಬಂತು ಮಿರಮಿರ ಮಿನುಗುವ ಸಿಕ್ವೀನ್ಸ್‌ ಔಟ್‌ಫಿಟ್ಸ್‌

Prajwal Revanna Case
ಕರ್ನಾಟಕ22 mins ago

Prajwal Revanna Case: ಪೆನ್‌ಡ್ರೈವ್, ವಿಡಿಯೊ ಇದ್ದವರನ್ನೆಲ್ಲ ಬಂಧಿಸ್ತಾರಾ?; ಆಪ್ತರ ಬಂಧನದ ಬಗ್ಗೆ ಪ್ರೀತಂ ಗೌಡ ಫಸ್ಟ್‌ ರಿಯಾಕ್ಷನ್

Pushpa 2 Allu Arjun fan recreates hook step on graduation day
ಟಾಲಿವುಡ್22 mins ago

Pushpa 2: ಪದವಿ ಪ್ರದಾನ ವೇಳೆ ‘ಪುಷ್ಪ 2’ ಹುಕ್ ಸ್ಟೆಪ್ ಹಾಕಿದ ವಿದ್ಯಾರ್ಥಿ: ವಿಡಿಯೊ ವೈರಲ್‌

IPL 2024
ಪ್ರಮುಖ ಸುದ್ದಿ27 mins ago

IPL 2024 : ಮೈದಾನದಿಂದಲೇ ಅನುಷ್ಕಾಗೆ ಕೈ ಸನ್ನೆ ಮಾಡಿದ ಕೊಹ್ಲಿ; ಇಲ್ಲಿದೆ ವಿಡಿಯೊ

Maldives
ದೇಶ38 mins ago

Maldives: ಭಾರತದ ಯುದ್ಧವಿಮಾನ ಹಾರಿಸುವ ತಾಕತ್ತು ನಮ್ಮ ಪೈಲಟ್‌ಗಳಿಗಿಲ್ಲ ಎಂದ ಮಾಲ್ಡೀವ್ಸ್, ಎಂಥಾ ದುಸ್ಥಿತಿ!

Rahul Gandhi
ದೇಶ49 mins ago

Rahul Gandhi: ಮದ್ವೆ ಬಗ್ಗೆ ಕಾರ್ಯಕರ್ತರ ಪ್ರಶ್ನೆ..ವೇದಿಕೆಯಲ್ಲೇ ಉತ್ತರ ಕೊಟ್ಟ ರಾಹುಲ್‌: ವಿಡಿಯೋ ವೈರಲ್‌

Health Tips Kannada
ಆರೋಗ್ಯ56 mins ago

Health Tips Kannada: ಕಣ್ಣಿನ ಕೆಳಗಿನ ಕಪ್ಪು ಕಲೆ ನಿವಾರಿಸುವುದು ಹೇಗೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ6 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ11 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ12 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ23 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ23 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ24 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ2 days ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು2 days ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

ಟ್ರೆಂಡಿಂಗ್‌