ಕರೊನಾದಿಂದ ಆರ್ಥಿಕತೆಗೆ ಪಾಸಿಟಿವ್‌: 1 ಲಕ್ಷ ಕೋಟಿ ಡಾಲರ್‌ ದಾಟಿದ ಯುಪಿಐ ವಹಿವಾಟು - Vistara News

ವಾಣಿಜ್ಯ

ಕರೊನಾದಿಂದ ಆರ್ಥಿಕತೆಗೆ ಪಾಸಿಟಿವ್‌: 1 ಲಕ್ಷ ಕೋಟಿ ಡಾಲರ್‌ ದಾಟಿದ ಯುಪಿಐ ವಹಿವಾಟು

2022ರ ಆರ್ಥಿಕ ವರ್ಷದಲ್ಲಿ ಭಾರತದಲ್ಲಿ 1.09 ಲಕ್ಷ ಕೋಟಿ ಡಾಲರ್‌ ಮೊತ್ತದ ಯುಪಿಐ ವಹಿವಾಟು ದಾಖಲಾಗಿದೆ. ಅಂದರೆ 83.45 ಲಕ್ಷ ಕೋಟಿ ರೂ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಶ್ವದ ಎಲ್ಲ ರಾಷ್ಟ್ರಗಳ ಮೇಲೆ ಕರೊನಾ ತಂದ ಸಂಕಷ್ಟ ಅಷ್ಟಿಷ್ಟಲ್ಲ. ಆಗರ್ಭ ಶ್ರೀಮಂತನಿಂದ ಕಡುಬಡವನವರೆಗೆ ಎಲ್ಲರನ್ನೂ ಕಾಡಿದ ಕರೊನಾ ಸಮಯದಲ್ಲೆ ಭಾರತದ ಆರ್ಥಿಕತೆ ಹೊಸ ದಾಖಲೆಯನ್ನು ಬರೆದಿದೆ. ಅತ್ಯಂತ ಸುಲಭವಾಗಿ ಹಣಕಾಸು ವಹಿವಾಟು ನಡೆಸಬಹುದಾದ ಯುಪಿಐ (ಯೂನಿಫೈಡ್‌ ಪೇಮೆಂಟ್ಸ್‌ ಇಂಟರ್‌ಫೇಸ್‌) ವೇದಿಕೆಯಲ್ಲಿ 2022ರ ಆರ್ಥಿಕ ವರ್ಷದಲ್ಲಿ 1 ಲಕ್ಷ ಕೋಟಿ ಡಾಲರ್‌ಗೂ ಹೆಚ್ಚು ಮೊತ್ತದ ವಹಿವಾಟು ನಡೆದಿದೆ.

ಇಂಟರ್ನೆಟ್‌ ಬ್ಯಾಂಕಿಂಗ್‌ನಲ್ಲಿನ ಸಂಕಷ್ಟ

ಅತ್ಯಂತ ಸಾಮಾನ್ಯ ಭಾಷೆಯಲ್ಲಿ ಹೇಳಬೇಕೆಂದರೆ ಫೋನ್‌ಪೆ, ಜಿ ಪೇ ಮೂಲಕ ಇಂದು ಎಳನೀರು ಖರೀದಿಯಿಂದ ಹೋಟೆಲ್‌ ಬಿಲ್‌ ಪಾವತಿವರೆಗೆ ಬಳಸುತ್ತಿರುವ ವಿಧಾನವೇ ಯುಪಿಐ. ಈ ಹಿಂದೆ ಒಂದು ಬ್ಯಾಂಕ್‌ ಖಾತೆಯಿಂದ ಮತ್ತೊಂದು ಬ್ಯಾಂಕ್‌ ಖಾತೆಗೆ ಆನ್‌ಲೈನ್‌ ಮೂಲಕ ಹಣ ವರ್ಗಾವಣೆ ಮಾಡಬೇಕೆಂದರೆ ಮೊದಲಿಗೆ ಆ ಖಾತೆಯಲ್ಲಿ ಇಂಟರ್ನೆಟ್‌ ಬ್ಯಾಂಕಿಂಗ್‌ ಚಾಲನೆಯಲ್ಲಿರಬೇಕಿತ್ತು. ಯಾವ ಖಾತೆಗೆ ಹಣ ವರ್ಗಾವಣೆ ಮಾಡಬೇಕೊ ಆ ಖಾತೆಯ ಸಂಖ್ಯೆ, ಖಾತೆದಾರರ ಹೆಸರು, ಬ್ಯಾಂಕ್‌ ಹೆಸರು, ಶಾಖೆ, ಐಎಫ್‌ಎಸ್‌ಸಿ ಕೋಡ್‌, ಸಿಐಎಫ್‌ ನಂಬರ್‌ನಂತಹ ವಿವರಗಳು ಬೇಕಿತ್ತು. ಈ ವಿವರಗಳೆಲ್ಲವನ್ನೂ, ಹಣ ಕಳಿಸುವವರು ತಮ್ಮ ಖಾತೆಯಲ್ಲಿ ನೋಂದಣಿ ಮಾಡಿದ ನಾಲ್ಕು ಗಂಟೆಯ ನಂತರ ಹಣ ವರ್ಗಾವಣೆ ಮಾಡಲು ಅವಕಾಶವಾಗುತ್ತಿತ್ತು. ಅದರಲ್ಲೂ ಐಎಂಪಿಎಸ್‌ ವ್ಯವಸ್ಥೆ ಮೂಲಕವಾದರೆ ತಕ್ಷಣವೇ ಹಣ ವರ್ಗಾವಣೆ ಆಗುತ್ತಿತ್ತು. ಆರ್‌ಟಿಜಿಎಸ್‌ ಮೂಲಕ ಸಾಕಷ್ಟು ಸಮಯ ತಗಲುತ್ತಿತ್ತು. ಇಷ್ಟೆಲ್ಲ ತಲೆಬಿಸಿಯ ಕಾರಣಕ್ಕೆ ಸಾಕಷ್ಟು ಜನರು ಸಣ್ಣಪುಟ್ಟ ವ್ಯವಹಾರಗಳಿಗೆ ಆನ್‌ಲೈನ್‌ ವಹಿವಾಟಿನತ್ತ ಚಿತ್ತ ಹರಿಸುತ್ತಿರಲಿಲ್ಲ. ದೊಡ್ಡ ಮಟ್ಟದ ಖರೀದಿ, ಉದ್ಯಮ, ವ್ಯಾಪಾರಗಳಲ್ಲಿ ಮಾತ್ರ ಬಳಕೆಯಲ್ಲಿತ್ತು. ಈ ವ್ಯವಸ್ಥೆ ಈಗಲೂ ಇದೆಯಾದರೂ ಪರ್ಯಾಯವಾಗಿ ಯುಪಿಐ ವೇದಿಕೆ ಕಾರ್ಯನಿರ್ವಹಿಸುತ್ತಿದೆ.

ಯುಪಿಐ ಆಧರಿತ ಪೇಮೆಂಟ್‌

ಹಣಕಾಸು ವಹಿವಾಟು ನಡೆಸುವುದು ಕಷ್ಟವಾದ್ಧರಿಂದ ಸಾಮಾನ್ಯರು ಇಂಟರ್ನೆಟ್‌ ಬ್ಯಾಂಕಿಂಗ್‌ನಿಂದ ದೂರವೇ ಉಳಿದಿದ್ದರು. ಪ್ರಧಾನಿ ನರೇಂದ್ರ ಮೋದಿಯವರು ಡಿಜಿಟಲ್‌ ಇಂಡಿಯಾ ಕನಸನ್ನು ಹೊತ್ತಿದ್ದರಾದರೂ ಇಂಟರ್ನೆಟ್‌ ಬ್ಯಾಂಕಿಂಗ್‌ನ ಸಂಕೀರ್ಣತೆಯಿಂದಾಗಿ ಎಲ್ಲರನ್ನೂ ಡಿಜಿಟಲ್‌ ಆರ್ಥಿಕತೆಯೊಳಗೆ ತರಲು ಕಷ್ಟವಾಗುತ್ತಿತ್ತು. ಇದೇ ಕಾರಣಕ್ಕೆ ಭಾರತೀಯ ರಿಸರ್ವ್‌ ಬ್ಯಾಂಕ್‌ 2016ರ ಏಪ್ರಿಲ್‌ 11ರಂದು ಪ್ರಾಯೋಗಿಕವಾಗಿ ಯುಪಿಐ ಪೇಮೆಂಟ್‌ ವ್ಯವಸ್ಥೆಯನ್ನು ಜಾರಿಗೊಳಿಸಿತು. ಸಾಮಾನ್ಯ ಹಣದ ವಹಿವಾಟುಗಳೆಲ್ಲವನ್ನೂ ನಿಗಾ ವಹಿಸಲು ಆರ್‌ಬಿಐ ವತಿಯಿಂದ ನ್ಯಾಷನಲ್‌ ಪೇಮೆಂಟ್ಸ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾ(ಎನ್‌ಸಿಪಿಐ) ಸ್ಥಾಪಿಸಲಾಯಿತು. ಅದರ ಅಡಿಯಲ್ಲೆ ಆರಂಭಿಸಲಾದ ಯುಪಿಐ ವ್ಯವಸ್ಥೆಗೆ 21 ಬ್ಯಾಂಕುಗಳನ್ನು ಸೇರಿಸಿ 2016ರ ಆಗಸ್ಟ್‌ 25ರಂದು ಅಂದಿನ ಆರ್‌ಬಿಐ ಗವರ್ನರ್‌ ರಘುರಾಮ ರಾಜನ್‌ ಚಾಲನೆ ನೀಡಿದರು.

ಹೆಚ್ಚಿನ ಓದು: ಸರಿಯಲಿಲ್ಲ ಕ್ರಿಪ್ಟೊ ಕರೆನ್ಸಿ ಮೇಲಿನ ತೂಗುಗತ್ತಿ!: ಕ್ರಿಪ್ಟೊ ಬಗ್ಗೆ ನಿಮಗೆಷ್ಟು ಗೊತ್ತು?

ಯುಪಿಐ ಎನ್ನುವುದು ಒಂದು ಬ್ಯಾಂಕ್‌ ಖಾತೆಯಿಂದ ಮತ್ತೊಂದು ಬ್ಯಾಂಕ್‌ ಖಾತೆಗೆ ನೇರವಾಗಿ ಹಾಗೂ ತಕ್ಷಣವೇ ಹಣ ವರ್ಗಾವಣೆ ಮಾಡುವ ವ್ಯವಸ್ಥೆ. ಈ ವಹವಾಟು ನಡೆಸಲು ಬ್ಯಾಂಕ್‌ ಖಾತೆ ವಿವರ, ಖಾತೆದಾರರ ಹೆಸರಿನಂತಹ ಅನೇಕ ಮಾಹಿತಿ ಬೇಕಿಲ್ಲ. ಖಾತೆದಾರರ ಯುಪಿಐ ವಿಳಾಸ (ಹೆಚ್ಚಿನ ಸಂದರ್ಭದಲ್ಲಿ ಫೋನ್‌ ನಂಬರ್‌ ಆಗಿರುತ್ತದೆ) ಇದ್ದರೆ ಸಾಕು. ಈ ವಿಳಾಸವನ್ನು ಬಳಸಿ ನೇರವಾಗಿ ಹಣ ವರ್ಗಾವಣೆ ಮಾಡಬಹುದು. ಇಂತಹ ವ್ಯವಸ್ಥೆಯು ಸಾಕಷ್ಟು ಜನರನ್ನು ಆಕರ್ಷಿಸಿತು.

ಕರೊನಾ ಸಮಯದಲ್ಲಿ ಸವಾಲು

ಭಾರತದಲ್ಲಿ ಮೊದಲಿಗೆ ಡಿಜಿಟಲ್‌ ಆರ್ಥಿಕತೆಗೆ ಒತ್ತು ಸಿಕ್ಕಿದ್ದು 2016ರಲ್ಲಿ ಘೋಷಣೆಯಾದ ನೋಟು ಅಮಾನ್ಯೀಕರಣ ನಿರ್ಧಾರದ ನಂತರ. ನೋಟು ಅಮಾನ್ಯೀಕರಣದಿಂದ ಸಾಕಷ್ಟು ಜನರು ಸಂಕಷ್ಟ ಅನುಭವಿಸಿದರು. ಆದರೆ ಪರಸ್ಪರ ನೀಡಲು ನೋಟುಗಳು ಲಭ್ಯವಿಲ್ಲದಿದ್ದ ಕಾರಣಕ್ಕೆ ಹೆಚ್ಚಿನ ಜನರು ಆನ್‌ಲೈನ್‌ ಪೇಮೆಂಟ್‌ಗಳತ್ತ ಗಮನಹರಿಸಿದರು. ಅಷ್ಟರವೇಳೆಗೆ ಚಾಲನೆಯಲ್ಲಿದ್ದ ಯುಪಿಐ ವಹಿವಾಟು ದಾಖಲೆ ಮಟ್ಟದಲ್ಲಿ ಹೆಚ್ಚಳವಾಗಿತ್ತು. ಮೂರ್ನಾಲ್ಕು ತಿಂಗಳಲ್ಲೆ ಶೇಕಡಾ ಐವತ್ತಕ್ಕೂ ಹೆಚ್ಚು ಬಳವಣಿಗೆ ದಾಖಲಿಸಿತು. ನಂತರವೂ ಇದೇ ವೇಗದಲ್ಲಿ ಮಂದುವರಿಯುತ್ತಿದ್ದ ಯುಪಿಐ ಪೇಮೆಂಟ್ಸ್‌ ವ್ಯವಸ್ಥೆಗೆ ಕೇಂದ್ರ ಸರ್ಕಾರ ಪುಷ್ಠಿ ನೀಡಲು ವಿಶಿಷ್ಠ ಆಪ್‌ ರೂಪಿಸಿ ಅದಕ್ಕೆ ಭೀಮ್‌ ಎಂದು ಹೆಸರಿಟ್ಟಿತು.

ಅದಾಗಲೇ ಏರಿಕೆ ಹಂತದಲ್ಲಿದ್ದ ಡಿಜಿಟಲ್‌ ಪೇಮೆಂಟ್‌ ಕ್ಷೇತ್ರಕ್ಕೆ ಪೇಟಿಎಂ, ಫೋನ್‌ಪೆ, ಗೂಗಲ್‌ ಪೇ(ಜಿ ಪೇ) ಸೇರಿ ಅನೇಕ ಕಂಪನಿಗಳು ಪಾದಾರ್ಪಣೆ ಮಾಡಿದವು. ಪ್ರಾರಂಭದಲ್ಲಿ ಪ್ರತಿ ಆಪ್‌ಗೂ ಪ್ರತ್ಯೇಕ ಕ್ಯುಆರ್‌ ಕೋಡ್‌ ಸ್ಕ್ಯಾನ್‌ ಮಾಡಿ ಪೇಮೆಂಟ್‌ ಮಾಡಬೇಕಿತ್ತು. ನಂತರದಲ್ಲಿ ತಂತ್ರಜ್ಞಾನ ಸುಧಾರಣೆಯಿಂದಾಗಿ ಎಲ್ಲ ಯುಪಿಐ ಆಪ್‌ಗಳಿಗೂ ಒಂದೇ ಕ್ಯೂಆರ್‌ ಕೋಡ್‌ ಸಾಕಾಯಿತು. ಇದೇ ವೇಳೆಗೆ ಆವರಿಸಿದ ಕರೊನಾ ಸಂಕಷ್ಟವು ಯುಪಿಐ ಪೇಮೆಂಟ್‌ ವ್ಯವಸ್ಥೆಯನ್ನು ಮನೆಮನೆಗೂ, ಬೀದಿ ಗಾಡಿಗಳವರೆಗೂ ತಂದು ನಿಲ್ಲಿಸಿತು. ಇಂದು ರಸ್ತೆಯಲ್ಲಿ ಎಳನೀರು ಮಾರುವವರು. ಸೊಪ್ಪು ಮಾರುವವರೂ ಯುಪಿಐ ಪೇಮೆಂಟ್‌ ಸ್ವೀಕರಿಸುತ್ತಾರೆ. ಅತ್ಯಂತ ಸಾಮಾನ್ಯ ಜನರನ್ನು ಆರ್ಥಿಕತೆಯೊಳಕ್ಕೆ ಸೇರಿಸಿಕೊಳ್ಳುವಲ್ಲಿ ಸಾಕಷ್ಟು ಯಶಸ್ಸು ಸಿಕ್ಕಂತಾಗಿದೆ.

1 ಲಕ್ಷ ಕೋಟಿ ಡಾಲರ್‌ ಮೊತ್ತ

2022ರ ಆರ್ಥಿಕ ವರ್ಷದಲ್ಲಿ ಭಾರತದಲ್ಲಿ 1.09 ಲಕ್ಷ ಕೋಟಿ ಡಾಲರ್‌ ಮೊತ್ತದ ಯುಪಿಐ ವಹಿವಾಟು ದಾಖಲಾಗಿದೆ. ಇದೇ ಮೊತ್ತವನ್ನು ಭಾರತದ ರೂಪಾಯಿಯಲ್ಲಿ ಹೇಳುವುದಾದರೆ 83.45 ಲಕ್ಷ ಕೋಟಿ ರೂ.ನಷ್ಟು ವಹಿವಾಟು. ಇದರ ಗಾತ್ರ ಎಷ್ಟು ಎಂದು ತಿಳಿಯಬೇಕೆಂದರೆ, ಕರ್ನಾಟಕ 2020-21ರಲ್ಲಿ 20.49 ಲಕ್ಷ ಕೋಟಿ ರೂ. ಒಟ್ಟು ದೇಶೀಯ ನಿವ್ವಳ ಉತ್ಪನ್ನ(ಜಿಎಸ್‌ಡಿಪಿ) ಹೊಂದುವ ನಿರೀಕ್ಷೆಯಿದೆ. ಇದೀಗ ಒಂದು ವರ್ಷದಲ್ಲಿ ದಾಖಲಾಗಿರುವ ಯುಪಿಐ ವಹಿವಾಟು ಕರ್ನಾಟಕದ ಜಿಎಸ್‌ಡಿಪಿಯ ನಾಲ್ಕು ಪಟ್ಟು ದೊಡ್ಡದಾಗಿದೆ ಎಂದರೆ ಇದರ ವಹಿವಾಟಿನ ಗಾತ್ರವನ್ನು ಅಂದಾಜಿಸಬಹುದು.

2022ರ ಆರ್ಥಿಕ ವರ್ಷದಲ್ಲಿ ಭಾರತದಲ್ಲಿ ಯುಪಿಐ ವಹಿವಾಟು

ಯುಪಿಐ ವಹಿವಾಟಿನ ಅಂಕಿಅಂಶಗಳ ಪ್ರಕಾರ ಅರ್ಧದಷ್ಟು ವಹಿವಾಟು ತಲಾ 200 ರೂ.ಗಿಂತ ಕಡಿಮೆ ಮೊತ್ತ ಹೊಂದಿವೆ. ಕಡಿಮೆ ಮೊತ್ತದ ಹಾಗೂ ಹೆಚ್ಚಿನ ಸಂಖ್ಯೆಯ ಈ ವಹಿವಾಟುಗಳ ಕಾರಣದಿಂದಾಗಿ, ಸದ್ಯ ಇರುವ ಡಿಜಿಟಲ್‌ ಮೂಲಸೌಕರ್ಯ ಒತ್ತಡಕ್ಕೊಳಗಾಗಿ ಕೆಲವೊಮ್ಮೆ ಸ್ಥಗಿತವಾದ ಉದಾಹರಣೆಗಳೂ ಇವೆ. ಇವುಗಳನ್ನು ಸರಿಪಡಿಸಿಕೊಂಡೇ, ಈ ಆರ್ಥಿಕ ವರ್ಷದಲ್ಲಿ ಒಟ್ಟು ನಾಲ್ಕುಸ ಆವಿರ ಕೋಟಿ ವಹಿವಾಟನ್ನು ಯುಪಿಐ ವೇದಿಕೆ ಮುಟ್ಟಿದೆ. ಈ ಕುರಿತು ಇತ್ತೀಚೆಗೆ ಟ್ವೀಟ್‌ ಮಾಡಿದ್ದ ಹಣಕಾಸು ಸಚಿವೆ ನರ್ಮಲಾ ಸೀತಾರಾಮನ್‌, ಸಂತೋಷ ವ್ಯಕ್ತಪಡಿಸಿದ್ದರು. ಆದರೆ ಅತ್ಯಂತ ಸಾಮಾನ್ಯ ಜನರು, ಸಣ್ಣ ಪುಟ್ಟ ವ್ಯವಹಾರಗಳಿಗೂ ಯುಪಿಐ ಬಳಸುತ್ತಿದ್ದಾರೆ ಎನ್ನುವುದು ಸಂತಸ ವಿಚಾರ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

Costly wedding gift: ಮಗನಿಗೆ ಬಂಗಲೆ, ಸೊಸೆಗೆ ನೆಕ್ಲೇಸ್ ಗಿಫ್ಟ್‌ ಕೊಟ್ಟ ಅಂಬಾನಿ; ಬೆಲೆ ಕೇಳಿದರೆ ಅಚ್ಚರಿ!

Costly wedding gift: ಮಕ್ಕಳ ಮದುವೆಯನ್ನು ಅದ್ದೂರಿಯಾಗಿ ಮಾಡಿ ವಿಶ್ವದ ಗಮನ ಸೆಳೆದಿರುವ ಉದ್ಯಮಿ ಮುಕೇಶ್, ನೀತಾ ಅಂಬಾನಿ ಇದೀಗ ದುಬಾರಿ ಉಡುಗೊರೆಗಳನ್ನು ನೀಡಿ ಮತ್ತೊಮ್ಮೆ ವಿಶ್ವದ ಗಮನ ಸೆಳೆದಿದ್ದಾರೆ.

VISTARANEWS.COM


on

By

Costly wedding gift
Koo

ಭಾರತದ (India) ಅತ್ಯಂತ ಶ್ರೀಮಂತ ಹಾಗೂ ವಿಶ್ವದ (world) 11ನೇ ಶ್ರೀಮಂತ ವ್ಯಕ್ತಿಯಾಗಿರುವ ಉದ್ಯಮಿ ಮುಕೇಶ್ ಅಂಬಾನಿ (Mukesh Ambani) ಮತ್ತು ನೀತಾ ಅಂಬಾನಿ ( Nita Ambani ) ಅವರ ಕೊನೆಯ ಪುತ್ರ ಅನಂತ್ ಅಂಬಾನಿ (Anant Ambani) ಅವರ ವಿವಾಹ ಪೂರ್ವ ಕಾರ್ಯಕ್ರಮಗಳು ವಿಶ್ವದ ಗಮನ ಸೆಳೆದಿತ್ತು. ಸುಮಾರು 1,259 ಕೋಟಿ ರೂ .ಖರ್ಚು ಮಾಡಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿರುವ ಮುಕೇಶ್, ನೀತಾ ದಂಪತಿ ತಮ್ಮ ಮಕ್ಕಳಿಗೆ ಮದುವೆಯ ಉಡುಗೊರೆಯಾಗಿ (Costly wedding gift) ಏನು ಕೊಟ್ಟಿರಬಹುದು ಎನ್ನುವ ಕುತೂಹಲ ಎಲ್ಲರಲ್ಲೂ ಇದೆ.

ಮುಕೇಶ್ ಮತ್ತು ನೀತಾ ತಮ್ಮ ಮಕ್ಕಳಿಗಾಗಿ ಖರ್ಚು ಮಾಡುವಾಗ ಯಾವುದೇ ರೀತಿಯಲ್ಲಿ ಉಳಿತಾಯದ ಕಡೆ ಗಮನ ಹರಿಸುವುದಿಲ್ಲ. ಅವರು ಧಾರಾಳವಾಗಿ ಖರ್ಚುಗಳನ್ನು ಮಾಡುತ್ತಾರೆ ಎಂಬುದನ್ನು ಅನಂತ್ ಅಂಬಾನಿಯ ಮದುವೆ ಪೂರ್ವ ಕಾರ್ಯಕ್ರಮಗಳಲ್ಲಿ ಮತ್ತೊಮ್ಮೆ ಸಾಬೀತು ಮಾಡಿದ್ದಾರೆ.

ಮುಕೇಶ್, ನೀತಾ ಮಕ್ಕಳಾದ ಆಕಾಶ್ ಅಂಬಾನಿ, ಇಶಾ ಅಂಬಾನಿ ಅವರ ಮದುವೆಯನ್ನು ಅದ್ಧೂರಿಯಾಗಿ ಮಾಡಿ ಗಮನ ಸೆಳೆದಿದ್ದರು. ಇದೀಗ ಅವರ ಕಿರಿಯ ಸಹೋದರ ಅನಂತ್ ಅಂಬಾನಿ ಇತ್ತೀಚೆಗೆ ರಾಧಿಕಾ ಮರ್ಚೆಂಟ್ ಅವರೊಂದಿಗೆ ದಾಂಪತ್ಯ ಜೀವನ ಪ್ರವೇಶ ಮಾಡುವುದನ್ನು ಘೋಷಿಸಿದ್ದರು. ಕಳೆದ ಜುಲೈ ನಲ್ಲಿ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದ ಅನಂತ್, ರಾಧಿಕಾ ಅವರ ವಿವಾಹ ಪೂರ್ವ ಕಾರ್ಯಕ್ರಮಗಳು ಮಾರ್ಚ್ ನಲ್ಲಿ ನಡೆಯಿತು. ಇದಕ್ಕಾಗಿ ಸುಮಾರು 1259 ಕೋಟಿ ರೂ. ಖರ್ಚು ಮಾಡಲಾಗಿತ್ತು.

ಇದನ್ನೂ ಓದಿ: Mukesh Ambani: ಪತ್ನಿ ನೀತಾ ಹಣೆಗೆ ಮುತ್ತಿಟ್ಟ ಮುಕೇಶ್ ಅಂಬಾನಿ: ರೊಮ್ಯಾಂಟಿಕ್‌ ಫೋಟೊಗಳು ವೈರಲ್‌!

ಕಾರ್ಯಕ್ರಮದಲ್ಲಿ ಪ್ರದರ್ಶನಕ್ಕಾಗಿ ಜಾಗತಿಕ ಐಕಾನ್ ರಿಹಾನ್ನಾ ಅವರನ್ನು ಕರೆದುಕೊಂಡು ಬರಲಾಗಿತ್ತು. ಈ ಒಂದು ಕಾರ್ಯಕ್ರಮಕ್ಕಾಗಿ ಅವರು 66- 74 ಕೋಟಿ ರೂ. ಪಡೆದಿದ್ದರು. ಇನ್ನು ಮುಂದಿನ ಜುಲೈನಲ್ಲಿ ನಡೆಯುವ ವಿವಾಹ ಸಮಾರಂಭಕ್ಕಾಗಿ ಅಂಬಾನಿ ಕುಟುಂಬ ಮದುವೆ ವೆಚ್ಚವನ್ನು ದ್ವಿಗುಣಗೊಳಿಸಲು ಸಿದ್ಧರಾಗಿದ್ದಾರೆ.

ಅಂಬಾನಿ ಕುಟುಂಬದ ಇಶಾ ಅಂಬಾನಿಯ ಪತಿ ಆನಂದ್ ಪಿರಮಾಲ್ ಅವರು ಪಿರಮಲ್ ಗ್ರೂಪ್‌ನ ಕಾರ್ಯನಿರ್ವಾಹಕ ನಿರ್ದೇಶಕರು, ಹಾಗೆಯೇ ಆಕಾಶ್ ಅಂಬಾನಿಯ ಪತ್ನಿ ಶ್ಲೋಕಾ ಮೆಹ್ತಾ ಅವರು ವಜ್ರದ ಸಂಪತ್ತಿನ ವಾರಸುದಾರರು. ಅನಂತ್ ಅಂಬಾನಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವ ರಾಧಿಕಾ ಮರ್ಚೆಂಟ್ ಎನ್ಕೋರ್ ಹೆಲ್ತ್‌ಕೇರ್‌ನ ನಿರ್ದೇಶಕರಾಗಿದ್ದಾರೆ.

ಭವ್ಯವಾದ ಸಂಪ್ರದಾಯದಲ್ಲಿ ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ತಮ್ಮ ಮಕ್ಕಳಿಗೆ ಹಲವು ವಿಶೇಷ ಮತ್ತು ದುಬಾರಿ ಉಡುಗೊರೆಗಳನ್ನು ಮದುವೆಯ ಉಡುಗೊರೆಯಾಗಿ ನೀಡಿದ್ದಾರೆ.


ಅನಂತ್ ಅಂಬಾನಿಗಾಗಿ ಬೀಚ್-ವಿಲ್ಲಾ

ಅನಂತ್ ಅಂಬಾನಿಗಾಗಿ ದುಬೈನಲ್ಲಿ 640 ಕೋಟಿ ರೂ. ಮೌಲ್ಯದ ಬೀಚ್-ವಿಲ್ಲಾವನ್ನು ಖರೀದಿ ಮಾಡಿದ್ದಾರೆ ಮುಕೇಶ್. 2022ರ ಏಪ್ರಿಲ್ ನಲ್ಲಿ ಮುಕೇಶ್ ಅಂಬಾನಿ ತನ್ನ ಕಿರಿಯ ಮಗ ಅನಂತ್‌ಗಾಗಿ ದುಬೈನ ದುಬಾರಿ ಜಿಲ್ಲೆಯಾದ ಪಾಮ್ ಜುಮೇರಾದಲ್ಲಿ ವಿಸ್ತಾರವಾದ ಬೀಚ್‌ಫ್ರಂಟ್ ವಿಲ್ಲಾವನ್ನು ಖರೀದಿ ಮಾಡಿದ್ದರು. ಇದು 10 ಬೆಡ್‌ರೂಮ್‌ಗಳನ್ನು ಹೊಂದಿದೆ. 70 ಮೀಟರ್‌ಗಳಷ್ಟು ವ್ಯಾಪಿಸಿರುವ ಖಾಸಗಿ ಬೀಚ್‌ ಅನ್ನು ಒಳಗೊಂಡಿರುವ ಇದರ ಮೌಲ್ಯ 640 ಕೋಟಿ ರೂ.


ಶ್ಲೋಕಾ ಮೆಹ್ತಾಗೆ 451 ಕೋಟಿ ರೂ. ಮೌಲ್ಯದ ವಜ್ರದ ನೆಕ್ಲೇಸ್

2019 ರಲ್ಲಿ ಶ್ಲೋಕಾ ಮೆಹ್ತಾ ಅವರೊಂದಿಗೆ ಆಕಾಶ್ ಅಂಬಾನಿ ಅವರ ವಿವಾಹದ ಸಂದರ್ಭದಲ್ಲಿ ನೀತಾ ಅಂಬಾನಿ ಅವರು ತಮ್ಮ ಸೊಸೆಗೆ ಮೌವಾದ್ ಎಲ್ ಅಪರೂಪದ ನೆಕ್ಲೇಸ್ ಅನ್ನು ಉಡುಗೊರೆಯಾಗಿ ನೀಡಿದ್ದರು. ಇದರ ಮೌಲ್ಯ 451 ಕೋಟಿ ರೂ. 407.48 ಕ್ಯಾರೆಟ್ ಹಳದಿ ವಜ್ರವನ್ನು 18 ಕಾರಟ್ ಗುಲಾಬಿ ಚಿನ್ನದ ಕವಲುಗಳೊಂದಿಗೆ ಹೆಣೆದುಕೊಂಡಿರುವ 229.52 ಕ್ಯಾರೆಟ್ ಬಿಳಿ ವಜ್ರದ ನೆಕ್ಲೇಸ್‌ನಿಂದ ಅಲಂಕರಿಸಲಾಗಿತ್ತು.


ಅನಂತ್- ರಾಧಿಕಾಗೆ ಬೆಂಟ್ಲಿ ಕಾಂಟಿನೆಂಟಲ್ ಜಿಟಿಸಿ ಸ್ಪೀಡ್

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್‌ಗೆ 4.5 ಕೋಟಿ ರೂ. ನ ಬೆಂಟ್ಲಿ ಕಾಂಟಿನೆಂಟಲ್ ಜಿಟಿಸಿ ಸ್ಪೀಡ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. 2023ರಲ್ಲಿ ಅವರ ನಿಶ್ಚಿತಾರ್ಥದ ಮೊದಲು ರಾಧಿಕಾ ಮರ್ಚೆಂಟ್ ಅವರಿಗೆ ಸುಮಾರು 4.5 ಕೋಟಿ ಮೌಲ್ಯದ ಬೆಂಟ್ಲಿ ಕಾಂಟಿನೆಂಟಲ್ ಜಿಟಿಸಿ ಸ್ಪೀಡ್ ಅನ್ನು ಉಡುಗೊರೆಯಾಗಿ ನೀಡಲಾಯಿತು. ಟ್ವಿನ್- ಟರ್ಬೋಚಾರ್ಜ್ಡ್ 6.0 ಲೀಟರ್ W12 ಎಂಜಿನ್ ಹೊಂದಿದ ಈ ಐಷಾರಾಮಿ ಕಾರು ಅತ್ಯಂತ ಸುಂದರವಾಗಿದ್ದು, ಹೆಚ್ಚಿನ ಕಾರ್ಯಕ್ಷಮತೆಯನ್ನು ಹೊಂದಿದೆ.


ರಾಧಿಕಾ ಮರ್ಚೆಂಟ್‌ಗೆ ಮುತ್ತು ಮತ್ತು ವಜ್ರದ ಚೋಕರ್

ಜುಲೈ 2022 ರಲ್ಲಿ ನಡೆದ ಸಾಮಾಜಿಕ ಕಾರ್ಯಕ್ರಮದ ಸಂದರ್ಭದಲ್ಲಿ ರಾಧಿಕಾ ಮರ್ಚೆಂಟ್ ಅದ್ಭುತವಾದ ಮುತ್ತು ಮತ್ತು ವಜ್ರದ ಚೋಕರ್ ಅನ್ನು ಧರಿಸಿದ್ದರು, ಇದು ನೀತಾ ಅಂಬಾನಿ ಅವರು ಧರಿಸಿದ್ದ ಸೊಗಸಾದ ಚೋಕರ್ ಅನ್ನು ನೆನಪಿಸುತ್ತದೆ. ಇದರ ನಿಖರವಾದ ಮೌಲ್ಯವನ್ನು ಬಹಿರಂಗಪಡಿಸಲಾಗಿಲ್ಲವಾದರೂ ಇದು ನಿಸ್ಸಂದೇಹವಾಗಿ ತನ್ನ ಭಾವಿ ಸೊಸೆಗೆ ನೀತಾ ಅಂಬಾನಿಯಿಂದ ಅಮೂಲ್ಯವಾದ ಉಡುಗೊರೆಯಾಗಿದೆ ಎನ್ನಲಾಗುತ್ತದೆ.


ಇಶಾ ಅಂಬಾನಿಗಾಗಿ ಮದುವೆಗೆ 100 ಮಿಲಿಯನ್ ಡಾಲರ್ ಖರ್ಚು

ಇಶಾ ಅಂಬಾನಿ ಮತ್ತು ಆನಂದ್ ಪಿರಾಮಲ್ ಅವರ ವಿವಾಹ 2018 ರಲ್ಲಿ ನಡೆದಿದೆ. ಇದವಿಶ್ವದ ಅತ್ಯಂತ ಅದ್ದೂರಿ ವಿವಾಹಗಳಲ್ಲಿ ಒಂದಾಗಿದೆ. ಇದಕ್ಕಾಗಿ ಅಂಬಾನಿ ಕುಟುಂಬ ಸುಮಾರು 100 ಮಿಲಿಯನ್ ಡಾಲರ್ ಅಂದಾಜು 830 ಕೋಟಿ ರೂ. ಖರ್ಚು ಮಾಡಿದ್ದಾರೆ ಎಂದು ವರದಿಯಾಗಿದೆ. ಪ್ರತಿಯೊಂದೂ ಆಮಂತ್ರಣ ಕಾರ್ಡ್ ನ ಬೆಲೆ 3 ಲಕ್ಷ ರೂ. ಎನ್ನಲಾಗಿದೆ. ಬಿಯಾನ್ಸ್ ಅವರ ಪ್ರದರ್ಶನ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗಾಗಿ 4 – 6 ಮಿಲಿಯನ್ ಸುಮಾರು ಅಂದಾಜು 33 – 50 ಕೋಟಿ ರೂ. ಖರ್ಚು ಮಾಡಲಾಗಿತ್ತು. ಈ ಕಾರ್ಯಕ್ರಮಗಳು ಪ್ರಪಂಚದಾದ್ಯಂತದ ಪ್ರಸಿದ್ಧ ವ್ಯಕ್ತಿಗಳು ಮತ್ತು ಗಣ್ಯರನ್ನು ಆಕರ್ಷಿಸಿತು.

Continue Reading

ದೇಶ

Stock Market: ಷೇರು ಪೇಟೆ ತಲ್ಲಣ; ಏಕಾಏಕಿ 700 ಅಂಕ ಕುಸಿದ ನಿಫ್ಟಿ, ಸಾವಿರಾರು ಕೋಟಿ ರೂ. ನಷ್ಟ

Stock Market: ಎನ್‌ಎಸ್‌ಇ ನಿಫ್ಟಿ 50 ದಿನದ ವಹಿವಾಟನ್ನು 22,456.65 ಪಾಯಿಂಟ್‌ಗಳಿಗೆ ಅಂತ್ಯಗೊಳಿಸಿತು. ಇನ್ನು ಬಿಎಸ್‌ಇ ಸೆನ್ಸೆಕ್ಸ್‌ 73,846 ಅಂಕಗಳೊಂದಿಗೆ ವಹಿವಾಟು ಅಂತ್ಯಗೊಳಿಸಿತು. ಇದರಿಂದ ಹೂಡಿಕೆದಾರರು ಸಾವಿರಾರು ಕೋಟಿ ರೂ. ನಷ್ಟ ಅನುಭವಿಸಿದರು ಎಂದು ತಿಳಿದುಬಂದಿದೆ. ಕಳೆದ ಕೆಲ ದಿನಗಳಿಂದ ಷೇರು ಮಾರುಕಟ್ಟೆ ವಹಿವಾಟು ಉತ್ತಮವಾಗಿತ್ತು. ಆದರೆ, ಶುಕ್ರವಾರ ದಿಢೀರನೆ ಕುಸಿತ ಕಂಡಿತು.

VISTARANEWS.COM


on

Stock Market
Koo

ಮುಂಬೈ: ಷೇರು ಮಾರುಕಟ್ಟೆಯಲ್ಲಿ (Stock Market) ಶುಕ್ರವಾರ (ಮೇ 3) ತಲ್ಲಣ ಸೃಷ್ಟಿಯಾಗಿದ್ದು, ಎನ್‌ಎಸ್‌ಇ ನಿಫ್ಟಿ (NSE Nifty) ಹಾಗೂ ಬಿಎಸ್‌ಇ ಸೆನ್ಸೆಕ್ಸ್‌ ಭಾರಿ ಕುಸಿತ ಕಂಡ ಕಾರಣ ಹೂಡಿಕೆದಾರರಿಗೆ ಸಾವಿರಾರು ಕೋಟಿ ರೂ. ನಷ್ಟವಾಗಿದೆ ಎಂದು ತಿಳಿದುಬಂದಿದೆ. ದಿನದ ವಹಿವಾಟಿನ ಅಂತ್ಯಕ್ಕೆ ಎನ್‌ಎಸ್‌ಇ ನಿಫ್ಟಿ 50 ಸುಮಾರು 172.35 ಪಾಯಿಂಟ್‌ಗಳ ಕುಸಿತ ಕಂಡರೆ, ಬಿಎಸ್‌ಇ ಸೆನ್ಸೆಕ್ಸ್‌ (BSE Sensex) 733 ಪಾಯಿಂಟ್‌ಗಳ ಕುಸಿತ ಕಂಡಿದೆ. ಆರಂಭದಲ್ಲಿ ಲಾಭ ಕಂಡ ಹೂಡಿಕೆದಾರರು ದಿನದ ಅಂತ್ಯಕ್ಕೆ ನಷ್ಟ ಅನುಭವಿಸಿದರು.

ಎನ್‌ಎಸ್‌ಇ ನಿಫ್ಟಿ 50 ದಿನದ ವಹಿವಾಟನ್ನು 22,456.65 ಪಾಯಿಂಟ್‌ಗಳಿಗೆ ಅಂತ್ಯಗೊಳಿಸಿತು. ಇನ್ನು ಬಿಎಸ್‌ಇ ಸೆನ್ಸೆಕ್ಸ್‌ 73,846 ಅಂಕಗಳೊಂದಿಗೆ ವಹಿವಾಟು ಅಂತ್ಯಗೊಳಿಸಿತು. ಷೇರು ಮಾರುಕಟ್ಟೆಯಲ್ಲಿ ತಲ್ಲಣ ಉಂಟಾದರೂ ಎಲ್‌&ಟಿ. ಮಾರುತಿ ಸುಜುಕಿ, ರಿಲಯನ್ಸ್‌ ಇಂಡಸ್ಟ್ರೀಸ್‌, ನೆಸ್ಲೆ ಇಂಡಿಯಾ, ಭಾರ್ತಿ ಏರ್‌ಟೆಲ್‌ ಸೇರಿ ಹಲವು ಕಂಪನಿಗಳು ಲಾಭ ಗಳಿಸಿವೆ. ಕೋಲ್‌ ಇಂಡಿಯಾ, ಗ್ರಾಸಿಂ ಇಂಡಸ್ಟ್ರೀಸ್‌, ಒಎನ್‌ಜಿಸಿ, ಡಾ.ರೆಡ್ಡೀಸ್‌ ಲ್ಯಾಬೊರೇಟರೀಸ್‌ ಹಾಗೂ ಹಿಂಡಾಲ್ಕೋ ಇಂಡಸ್ಟ್ರೀಸ್‌ ಸೇರಿ ಹಲವು ಕಂಪನಿಗಳು ನಷ್ಟ ಅನುಭವಿಸಿವೆ.

ಶುಕ್ರವಾರ ಬೆಳಗ್ಗೆ ಷೇರು ಮಾರುಕಟ್ಟೆ ವಹಿವಾಟು ಆರಂಭವಾಗುತ್ತಲೇ ಸುಮಾರು 50 ಪಾಯಿಂಟ್‌ಗಳ ಏರಿಕೆಯಾಯಿತು. ಇದರಿಂದ ಹೂಡಿಕೆದಾರರಿಗೆ ಖುಷಿಯಾಯಿತು. ಆದರೆ, ಇದಾದ ಕೆಲವೇ ಗಂಟೆಗಳಲ್ಲಿ ಪಾಯಿಂಟ್‌ಗಳ ಕುಸಿತ ಜಾಸ್ತಿಯಾಗುತ್ತಲೇ ಹೋಯಿತು. ಇದರಿಂದ ಹೂಡಿಕೆದಾರರು ಸಾವಿರಾರು ಕೋಟಿ ರೂ. ನಷ್ಟ ಅನುಭವಿಸಿದರು ಎಂದು ತಿಳಿದುಬಂದಿದೆ. ಕಳೆದ ಕೆಲ ದಿನಗಳಿಂದ ಷೇರು ಮಾರುಕಟ್ಟೆ ವಹಿವಾಟು ಉತ್ತಮವಾಗಿತ್ತು. ಆದರೆ, ಶುಕ್ರವಾರ ದಿಢೀರನೆ ಕುಸಿತ ಕಂಡಿತು.

ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ ಅವರು ಕೆಲ ದಿನಗಳ ಹಿಂದಷ್ಟೇ ತಮ್ಮ ನಾಲ್ಕು ತಿಂಗಳ ಮೊಮ್ಮಗ ಏಕಾಗ್ರಹ್‌ ರೋಹನ್ ಮೂರ್ತಿಗೆ 240 ಕೋಟಿ ರೂಪಾಯಿ ಮೌಲ್ಯದ ಷೇರುಗಳನ್ನು ಉಡುಗೊರೆಯಾಗಿ ನೀಡಿದ್ದರು. ಈ ಮೂಲಕ ಏಕಾಗ್ರಹ್‌ ಇನ್ಫೋಸಿಸ್‌ನ 15 ಲಕ್ಷ ಷೇರುಗಳನ್ನು ಅಂದರೆ ಕಂಪನಿಯಲ್ಲಿ ಶೇಕಡಾ 0.04ರಷ್ಟು ಪಾಲನ್ನು ಹೊಂದಿದಂತಾಗಿದೆ ಎಂದು ಎಕ್ಸ್‌ಚೇಂಜ್‌ ಫೈಲಿಂಗ್ ಬಹಿರಂಗಪಡಿಸಿದೆ. ಈ ವ್ಯವಹಾರವನ್ನು ʼಆಫ್-ಮಾರ್ಕೆಟ್ʼನಲ್ಲಿ ನಡೆಸಲಾಯಿತು ಎಂದು ಫೈಲಿಂಗ್ ತಿಳಿಸಿದೆ.

ನಾರಾಯಣಮೂರ್ತಿ ಅವರು ಈಗ ಇನ್ಫೋಸಿಸ್‌ನ ಆಡಳಿತ ನಿರ್ವಹಣೆಯಲ್ಲಿ ಯಾವುದೇ ಪಾತ್ರ ಹೊಂದಿಲ್ಲ. ಅದರ ಪ್ರಮುಖ ಷೇರುಪಾಲುದಾರರಲ್ಲಿ ಒಬ್ಬರು ಎನಿಸಿಕೊಂಡಿದ್ದಾರೆ. ಇನ್ಫೋಸಿಸ್​ನಲ್ಲಿ ಮೂರ್ತಿ ಅವರ ಬಳಿ 1.51 ಕೋಟಿ ಷೇರುಗಳಿದ್ದವು. ಈಗ ಮೊಮ್ಮಗನಿಗೆ 15 ಲಕ್ಷ ಷೇರುಗಳನ್ನು ಕೊಟ್ಟ ಬಳಿಕ ಅವರ ಬಳಿ ಉಳಿರುವ ಷೇರುಗಳ ಸಂಖ್ಯೆ 1.36 ಕೋಟಿ. ಈ ಮೂಲಕ ಇನ್ಫೋಸಿಸ್​ನಲ್ಲಿ ಅವರು ಹೊಂದಿದ್ದ ಶೇ. 0.40ರಷ್ಟು ಷೇರುಪಾಲು ಶೇ. 0.36ಕ್ಕೆ ಇಳಿದಿದೆ.

ಇದನ್ನೂ ಓದಿ: Kotak Bank: ಆರ್‌ಬಿಐ ನಿರ್ಬಂಧದ ಬೆನ್ನಲ್ಲೇ ಕೊಟಕ್‌ ಬ್ಯಾಂಕ್‌ ಷೇರು ಭಾರಿ ಕುಸಿತ; ಹೂಡಿಕೆದಾರರಿಗೆ ನಷ್ಟ!

Continue Reading

ದೇಶ

Gratuity: ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್;‌ ಗ್ರಾಚ್ಯುಟಿ, ಶಿಕ್ಷಣ ಭತ್ಯೆ ಶೀಘ್ರವೇ 25% ಹೆಚ್ಚಳ!

Gratuity: ಎರಡು ತಿಂಗಳ ಹಿಂದಷ್ಟೇ ನೌಕರರ ತುಟ್ಟಿ ಭತ್ಯೆಯನ್ನು ಶೇ.4ರಷ್ಟು ಏರಿಕೆ ಮಾಡಿದ್ದ ಕೇಂದ್ರ ಸರ್ಕಾರವೀಗ ನೌಕರರ ಗ್ರಾಚ್ಯುಟಿ, ಮಕ್ಕಳ ಶಿಕ್ಷಣ ಭತ್ಯೆಯನ್ನೂ ಶೇ.25ರಷ್ಟು ಏರಿಕೆ ಮಾಡಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಇದರಿಂದ ಲಕ್ಷಾಂತರ ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ ಎಂದು ತಿಳಿದುಬಂದಿದೆ.

VISTARANEWS.COM


on

Gratuity
Koo

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರವು (Central Government) ಮತ್ತೊಂದು ಗುಡ್‌ ನ್ಯೂಸ್‌ ನೀಡಲು ಸಜ್ಜಾಗಿದೆ. ಕಳೆದ ಜನವರಿಯಲ್ಲಿಯೇ ನೌಕರರ ತುಟ್ಟಿಭತ್ಯೆಯನ್ನು ಶೇ.4ರಷ್ಟು ಹೆಚ್ಚಿಸಿದ್ದ ಕೇಂದ್ರ ಸರ್ಕಾರವು ಶೀಘ್ರದಲ್ಲಿಯೇ ನೌಕರರ ಮಕ್ಕಳ ಶಿಕ್ಷಣ ಭತ್ಯೆ, ಹಾಸ್ಟೆಲ್‌ ಸಬ್ಸಿಸಿ, ನಿವೃತ್ತಿ ಗ್ರಾಚ್ಯುಟಿ (Gratuity) ಹಾಗೂ ಸಾವಿನ ಗ್ರಾಚ್ಯುಟಿಯನ್ನು ಶೇ.25ರಷ್ಟು ಏರಿಕೆ ಮಾಡಲಿದೆ ಎಂದು ತಿಳಿದುಬಂದಿದೆ. ಇದರಿಂದ ಲಕ್ಷಾಂತರ ನೌಕರರು (Government Employees) ಸೌಲಭ್ಯಗಳನ್ನು ಪಡೆಯಲಿದ್ದಾರೆ. ಏಳನೇ ವೇತನ ಆಯೋಗದ ಶಿಫಾರಸಿನ ಅನ್ವಯ ಏರಿಕೆ ಮಾಡಲಿದೆ ಎಂದು ತಿಳಿದುಬಂದಿದೆ.

ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳವಾಗುತ್ತಲೇ ಅವರ ಮಕ್ಕಳ ಶಿಕ್ಷಣ ಭತ್ಯೆ ಹಾಗೂ ಹಾಸ್ಟೆಲ್‌ ಸಬ್ಸಿಡಿ ಕೂಡ ಜಾಸ್ತಿಯಾಗುತ್ತದೆ. ಅದರಂತೆ, ಕೇಂದ್ರ ಸರ್ಕಾರವು ಶೀಘ್ರದಲ್ಲೇ ಈ ಕುರಿತು ಆದೇಶ ಹೊರಡಿಸಲಿದೆ ಎಂದು ತಿಳಿದುಬಂದಿದೆ. ಹೊಸ ಆದೇಶದ ಬಳಿಕ ರಿಟೈರ್‌ಮೆಂಟ್‌ ಗ್ರಾಚ್ಯುಟಿ ಮೊತ್ತವು ಶೇ.25ರಷ್ಟು ಅಂದರೆ, 20 ಲಕ್ಷ ರೂ.ನಿಂದ 25 ಲಕ್ಷ ರೂ.ಗೆ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ.

Cash

ಕೇಂದ್ರ ಸರ್ಕಾರಿ ನೌಕರರಿಗೆ ಕೆಲ ತಿಂಗಳ ಹಿಂದಷ್ಟೇ ಕೇಂದ್ರ ಸರ್ಕಾರವು ಬಂಪರ್‌ ಕೊಡುಗೆ ನೀಡಿತ್ತು. ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.4ರಷ್ಟು ಏರಿಕೆ ಮಾಡಿತ್ತು. ಇದರೊಂದಿಗೆ ನೌಕರರಿಗೆ ನೀಡುತ್ತಿರುವ ತುಟ್ಟಿಭತ್ಯೆಯು ಶೇ.50ರಷ್ಟು ಆಗಿದೆ. ತುಟ್ಟಿ ಭತ್ಯೆಯ ಜತೆಗೆ ಕೇಂದ್ರ ಸರ್ಕಾರವು ಮನೆ ಬಾಡಿಗೆ ಅಲೋವನ್ಸ್‌ (HRA) ಕೂಡ ಏರಿಕೆ ಮಾಡಿತ್ತು. ಇದರೊಂದಿಗೆ ಕೇಂದ್ರ ಸರ್ಕಾರಕ್ಕೆ ವಾರ್ಷಿಕ 12,868 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಖರ್ಚುವಾಗಲಿದೆ. 2024ರ ಜನವರಿ 1ರಿಂದಲೇ ತುಟ್ಟಿಭತ್ಯೆ ಹೆಚ್ಚಳವು ಅನ್ವಯವಾಗಿದೆ.

ಏರುತ್ತಿರುವ ಬೆಲೆಗಳನ್ನು ಸರಿದೂಗಿಸಲು ಸರ್ಕಾರವು ತನ್ನ ಉದ್ಯೋಗಿಗಳಿಗೆ ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ ನೀಡುತ್ತದೆ. ಇತ್ತೀಚಿನ ಗ್ರಾಹಕ ಬೆಲೆ ಸೂಚ್ಯಂಕವನ್ನು ಆಧರಿಸಿ ಇದನ್ನು ಲೆಕ್ಕಹಾಕಲಾಗುತ್ತದೆ. ಇದು ಸುಮಾರು 47.58 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 69.76 ಲಕ್ಷ ಪಿಂಚಣಿದಾರರಿಗೆ ಪ್ರಯೋಜನ ನೀಡುತ್ತದೆ. ಈ ಹೆಚ್ಚಳವು 7ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳನ್ನು ಆಧರಿಸಿದ ಅಂಗೀಕೃತ ಸೂತ್ರಕ್ಕೆ ಅನುಗುಣವಾಗಿದೆ ಎಂದು ತಿಳಿದುಬಂದಿತ್ತು.

2023ರ ಮಾರ್ಚ್‌ನಲ್ಲೂ ಕೇಂದ್ರ ಸರ್ಕಾರವು ನೌಕರರು ಹಾಗೂ ಪಿಂಚಣಿದಾರರಿಗೆ ನೀಡುವ ತುಟ್ಟಿಭತ್ಯೆಯನ್ನು ಶೇ.4ರಷ್ಟು ಹೆಚ್ಚಿಸಿತ್ತು. ಇದರಿಂದ ನೌಕರರಿಗೆ ಸಿಗುವ ತುಟ್ಟಿಭತ್ಯೆಯು ಶೇ.38ರಿಂದ ಶೇ.42ಕ್ಕೆ ಏರಿಕೆಯಾಗಿತ್ತು. ಅಲ್ಲದೆ, ಕಳೆದ ವರ್ಷದ ಜುಲೈನಲ್ಲಿ ನೌಕರರು ಹಾಗೂ ಪಿಂಚಣಿದಾರರಿಗೆ ನೀಡುವ ತುಟ್ಟಿಭತ್ಯೆಯನ್ನು ಶೇ.42ರಿಂದ ಶೇ.46ಕ್ಕೆ ಏರಿಕೆ ಮಾಡಲಾಗಿತ್ತು.

ಇದನ್ನೂ ಓದಿ: LPG Price Cut: ತಿಂಗಳ ಆರಂಭದಲ್ಲೇ ಗುಡ್‌ನ್ಯೂಸ್‌; ಎಲ್‌ಪಿಜಿ ಬೆಲೆ 19 ರೂ. ಇಳಿಕೆ

Continue Reading

ಪ್ರಮುಖ ಸುದ್ದಿ

Tax Returns: ಪಾಕ್‌ ಜನರಿಗೆ ಬೆಲೆಯೇರಿಕೆ ಬೆನ್ನಲ್ಲೇ ತೆರಿಗೆ ಹೊರೆ; ಸರ್ಕಾರ ಯಾವ ಮಟ್ಟಕ್ಕೆ ಇಳಿದಿದೆ ನೋಡಿ!

Tax Returns: ಹಣದುಬ್ಬರದಿಂದ ಪಾಕಿಸ್ತಾನವು ತತ್ತರಿಸಿ ಹೋಗಿದೆ. ಒಂದೆಡೆ, ಪಾಕಿಸ್ತಾನಕ್ಕೆ ಬೇರೆ ದೇಶಗಳಿಂದ, ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಗಳಿಂದ ಹಣಕಾಸು ನೆರವು ಸಿಗುತ್ತಿಲ್ಲ. ಇನ್ನೊಂದೆಡೆ, ಹಣದುಬ್ಬರ ನಿಯಂತ್ರಣ ಮಾಡಲು ಆಗುತ್ತಿಲ್ಲ. ಹಾಗಾಗಿ, ಪಾಕಿಸ್ತಾನದ ನಾಗರಿಕರು ಒಂದು ಕೆ.ಜಿ ಗೋಧಿ ಹಿಟ್ಟಿಗೆ 800 ರೂ. ಪಾವತಿಸುವ ಅನಿವಾರ್ಯತೆಗೆ ಸಿಲುಕಿದ್ದಾರೆ. ಹಣದುಬ್ಬರ ಏರಿಕೆಯು ಅವರ ಜೀವನದ ಮೇಲೆ ಭಾರಿ ಪರಿಣಾಮ ಬೀರುತ್ತಿದೆ. ಇದರ ಬೆನ್ನಲ್ಲೇ, ಸರ್ಕಾರವು ಜನರಿಗೆ ತೆರಿಗೆ ಎಂಬ ಗುರಾಣಿ ಬಳಸಲು ಮುಂದಾಗಿದೆ.

VISTARANEWS.COM


on

Tax Returns
Koo

ಇಸ್ಲಾಮಾಬಾದ್:‌ ಉಗ್ರರ ಪೋಷಣೆ, ಹಣಕಾಸು ನೆರವು, ಅಸಮರ್ಥ ನಾಯಕತ್ವ, ಕೊರೊನಾ ಬಿಕ್ಕಟ್ಟು ಸೇರಿ ಹಲವು ಕಾರಣಗಳಿಂದ ಪಾಕಿಸ್ತಾನ (Pakistan) ದಿವಾಳಿಯಾಗಿದೆ. ಇದೇ ಕಾರಣಕ್ಕಾಗಿ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ (IMF) ಎದುರು ಹಣಕ್ಕಾಗಿ ಭಿಕ್ಷಾ ಪಾತ್ರೆ ಹಿಡಿದು ನಿಂತಿದೆ. ಸಾಲ ಪಡೆಯಲು ಹೆಣಗಾಡುತ್ತಿದೆ. ಹಣದುಬ್ಬರದ ಏರಿಕೆಯಿಂದಾಗಿ ಜನರ ಜೀವನವೂ ಸಂಕಷ್ಟಕ್ಕೆ ಸಿಲುಕಿದೆ. ಇದರ ಬೆನ್ನಲ್ಲೇ, ದೇಶದ ನಾಗರಿಕರ ವಿರುದ್ಧ ಪಾಕಿಸ್ತಾನವು ತೆರಿಗೆಯ ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದು, ಆದಾಯ ತೆರಿಗೆ ರಿಟರ್ನ್ಸ್‌ (Tax Returns) ಸಲ್ಲಿಸದ 5 ಲಕ್ಷ ಜನರ ಸಿಮ್‌ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸಲು ತೀರ್ಮಾನಿಸಿದೆ.

ಪಾಕಿಸ್ತಾನದ ಖಜಾನೆಯಲ್ಲಿ ಹಣವಿಲ್ಲ. ಇದರಿಂದ ಸುಗಮವಾಗಿ ಆಡಳಿತ ನಡೆಸುವುದು ಬಿಡಿ ನೌಕರರಿಗೆ ಸಂಬಳ ಕೊಡಲೂ ಆಗುತ್ತಿಲ್ಲ. ಹಾಗಾಗಿ, ಜನರಿಂದ ತೆರಿಗೆ ಸಂಗ್ರಹಿಸಲು ಪಾಕಿಸ್ತಾನವು ಮುಂದಾಗಿದೆ. ಇದರ ಭಾಗವಾಗಿಯೇ, 2023ರಲ್ಲಿ ಐಟಿ ರಿಟರ್ನ್ಸ್‌ ಸಲ್ಲಿಸದ 5,06,671 ಜನರ ಸಿಮ್‌ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸಲು ಪಾಕಿಸ್ತಾನದ ಫೆಡರಲ್‌ ಬೋರ್ಡ್‌ ಆಫ್‌ ರೆವೆನ್ಯೂ (FBR) ನಿರ್ಧರಿಸಿದೆ. ಅವರು ಐಟಿ ರಿಟರ್ನ್ಸ್‌ ಸಲ್ಲಿಸಿದ ಬಳಿಕವೇ ಸಿಮ್‌ಕಾರ್ಡ್‌ಗಳನ್ನು ಸಕ್ರಿಯಗೊಳಿಸಲಾಗುವುದು ಎಂದು ಕೂಡ ತಿಳಿಸಿದೆ.

ಸಿಮ್‌ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸುವ ಕುರಿತು ಪಾಕಿಸ್ತಾನದ ಟೆಲಿಕಮ್ಯುನಿಕೇಷನ್‌ ಅಥಾರಿಟಿಗೆ (PTA) ನಿರ್ದೇಶನ ನೀಡಲಾಗಿದೆ. ಸಿಮ್‌ ಕಾರ್ಡ್‌ ಬಂದ್‌ ಮಾಡಿರುವ ಕುರಿತು ಮೇ 15ರೊಳಗೆ ವರದಿ ನೀಡುವಂತೆಯೂ ಸೂಚಿಸಲಾಗಿದೆ ಎಂದು ಹೇಳಲಾಗುತ್ತಿದೆ. ಪಾಕಿಸ್ತಾನದಲ್ಲಿ ತೆರಿಗೆ ಪಾವತಿಸದ ಸುಮಾರು 24 ಲಕ್ಷ ತೆರಿಗೆದಾರರನ್ನು ಗುರುತಿಸಲಾಗಿದೆ ಎಂದು ತಿಳಿದುಬಂದಿದೆ. ಆರಂಭಿಕ ಹಂತದಲ್ಲಿ 5 ಲಕ್ಷ ತೆರಿಗೆದಾರರ ಸಿಮ್‌ ಕಾರ್ಡ್‌ ನಿಷ್ಕ್ರಿಯಗೊಳಿಸಲು ತೀರ್ಮಾನಿಸಲಾಗಿದೆ.

ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ

ಪಾಕಿಸ್ತಾನದಲ್ಲಿ ಹಣದುಬ್ಬರದ ಏರಿಕೆಯಿಂದಾಗಿ ಅಗತ್ಯ ವಸ್ತುಗಳ ಬೆಲೆಯು ಗಗಣಕ್ಕೇರಿದೆ. ಒಂದು ಲೀಟರ್‌ ಹಾಲಿಗೆ 212 ರೂ., ಕೆ.ಜಿ ಅಕ್ಕಿಗೆ 330 ರೂ., ಒಂದು ಕೆ.ಜಿ ಸೇಬಿಗೆ 300 ರೂ., ಒಂದು ಕೆ.ಜಿ ಟೊಮ್ಯಾಟೊಗೆ 125 ರೂ., ಒಂದು ಕೆ.ಜಿ ಈರುಳ್ಳಿ 125 ರೂ., ಒಂದು ಲೀಟರ್‌ ಪೆಟ್ರೋಲ್‌ಗೆ 290 ರೂ. ಇದೆ. ದಿನೇದಿನೆ ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗುತ್ತಲೇ ಇರುವುದು ಪಾಕಿಸ್ತಾನದ ನಾಗರಿಕರನ್ನು ಸಂಕಷ್ಟಕ್ಕೆ ಸಿಲುಕಿದೆ. ಕೊರೊನಾ ನಂತರದ ದುಸ್ಥಿತಿ ಹೀಗೆಯೇ ಮುಂದುವರಿದಿರುವುದು ಅವರನ್ನು ಆತಂಕಕ್ಕೆ ದೂಡಿದೆ.

ಪಾಕಿಸ್ತಾನವು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯಿಂದ ಸಾಲ ಪಡೆಯಲು ಹೆಣಗಾಡುತ್ತಿದೆ. ಈಗಾಗಲೇ ಐಎಂಎಫ್‌ 1.10 ಶತಕೋಟಿ ಡಾಲರ್‌ ಸಾಲ ನೀಡಲು ಒಪ್ಪಿಗೆ ಸೂಚಿಸಿದೆ. ಆದರೆ, ಮುಂದಿನ ಮೂರು ವರ್ಷಗಳವರೆಗೆ 6 ಶತಕೋಟಿ ಡಾಲರ್‌ ಸಾಲ ನೀಡಿ ಎಂಬುದಾಗಿ ಪಾಕಿಸ್ತಾನ ಮನವಿ ಮಾಡುತ್ತಿದೆ. ಆದರೆ, ಪಾಕ್‌ನಲ್ಲಿ ದಿನೇದಿನೆ ಹಣದುಬ್ಬರದ ಏರಿಕೆಯಾಗುತ್ತಿರುವ ಕಾರಣ ಸಾಲ ನೀಡಲು ಐಎಂಎಫ್‌ ಹಿಂದೇಟು ಹಾಕುತ್ತಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Narendra Modi:”ಇಲ್ಲಿ ಕಾಂಗ್ರೆಸ್‌ ಸಾಯುತ್ತಿದೆ…ಅಲ್ಲಿ ಪಾಕಿಸ್ತಾನ ಅಳುತ್ತಾ ಪ್ರಾರ್ಥಿಸುತ್ತಿದೆ”-ಮೋದಿ ಅಟ್ಯಾಕ್‌

Continue Reading
Advertisement
Pakistan PM
ಸಂಪಾದಕೀಯ15 mins ago

ವಿಸ್ತಾರ ಸಂಪಾದಕೀಯ: ಪಾಕಿಸ್ತಾನ ಮೊದಲು ತನ್ನ ತಟ್ಟೆಯಲ್ಲಿ ಬಿದ್ದಿರುವ ನೊಣ ತೆಗೆಯಲಿ, ಪಾಠ ಕಲಿಯಲಿ

Tips For Healthy Skin
ಆರೋಗ್ಯ16 mins ago

Tips For Healthy Skin: ಕಡಲೆಹಿಟ್ಟೆಂಬ ಶತಮಾನಗಳ ಹಳೆಯ ಸೌಂದರ್ಯವರ್ಧಕ!

Dina Bhavishya
ಭವಿಷ್ಯ1 hour ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Rain News
ಕರ್ನಾಟಕ6 hours ago

Rain News: ಪ್ರತ್ಯೇಕ ಮಳೆ ಅವಘಡ; ಸಿಡಿಲು ಬಡಿದು ನವ ವಿವಾಹಿತ ಸಾವು, ಕಾರ್ಮಿಕನ ಸ್ಥಿತಿ ಗಂಭೀರ

ಪ್ರಮುಖ ಸುದ್ದಿ7 hours ago

IPL 2024 : ಮುಂಬೈ ವಿರುದ್ಧ ಕೆಕೆಆರ್​ಗೆ 24 ರನ್​ ಗೆಲುವು; ಪಾಂಡ್ಯಾ ಬಳಗಕ್ಕೆ ಮತ್ತೊಂದು ಆಘಾತ

Nijjar Killing
ವಿದೇಶ7 hours ago

Nijjar Killing: ಖಲಿಸ್ತಾನಿ ಉಗ್ರ ನಿಜ್ಜರ್‌ ಹತ್ಯೆಯ ಆರೋಪಿಗಳನ್ನು ಬಂಧಿಸಿದ ಕೆನಡಾ ಪೊಲೀಸರು; ಯಾರಿವರು?

Rohith Vemula
ದೇಶ7 hours ago

Rohith Vemula: ರೋಹಿತ್‌ ವೇಮುಲ ದಲಿತನಲ್ಲ ಎಂದ ಪೊಲೀಸರು; ಮರು ತನಿಖೆಗೆ ‘ಕೈ’ ಸರ್ಕಾರ ಆದೇಶ!

Rinku Singh
ಪ್ರಮುಖ ಸುದ್ದಿ7 hours ago

Rinku Singh : ಕೊಹ್ಲಿಯ ಬ್ಯಾಟ್​ನಲ್ಲಿ ರಿಂಕು ಚೆನ್ನಾಗಿ ಆಡುತ್ತಿಲ್ಲ; ನೆಟ್ಟಿಗರಿಂದ ಟ್ರೋಲ್​!

honour killing
ವಿಜಯಪುರ7 hours ago

Honor Killing: ಮರ್ಯಾದೆಗಾಗಿ ಗರ್ಭಿಣಿಯನ್ನು ಸುಟ್ಟು ಕೊಂದ ಇಬ್ಬರಿಗೆ ಗಲ್ಲು ಶಿಕ್ಷೆ, 6 ಮಂದಿಗೆ ಜೀವಾವಧಿ‌ ಶಿಕ್ಷೆ

Pakistan
ವಿದೇಶ7 hours ago

ಚೀನಾ ದಯೆಯಿಂದ ಮೊದಲ ಚಂದ್ರಯಾನ ಕೈಗೊಂಡ ಪಾಕಿಸ್ತಾನ; ಆದರೂ ಭಾರತಕ್ಕಿಂತ 16 ವರ್ಷ ಹಿಂದೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 hour ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ14 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 day ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌