ವಿಸ್ತಾರ TOP 10 NEWS | ರಾಜಕಾಲುವೆ ಒತ್ತುವರಿ ತೆರವಿನಿಂದ SCO ಶೃಂಗಸಭೆವರೆಗಿನ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS | ರಾಜಕಾಲುವೆ ಒತ್ತುವರಿ ತೆರವಿನಿಂದ SCO ಶೃಂಗಸಭೆವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

TOP 10 NEWS 16092022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಳೆಯಿಂದ ವಿಪರೀತವಾಗಿ ಹಾನಿಯುಂಟಾದ ನಂತರ ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವು ಮುಂದುವರಿದಿದೆಯಾದರೂ, ಬಡವರ ಮನೆ ಮೇಲಷ್ಟೇ ಅಸ್ತ್ರ ಪ್ರಯೋಗವಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮತಾಂತರ ನಿಷೇಧ ಕಾಯಿದೆಯನ್ನು ಹಿಂಪಡೆಯುವುದಾಗಿ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ, ಮುರುಘಾ ಶ್ರೀಗಳಿಗೆ ಜಾಮೀನು ನಿರಾಕರಣೆಯಾಗಿದೆ, ದೆಹಲಿ ಅಬಕಾರಿ ಪ್ರಕರಣದಲ್ಲಿ ದೇಶಾದ್ಯಂತ ಇಡಿ ದಾಳಿ ನಡೆದಿದೆ, ಗೌತಮ್‌ ಅದಾನಿ ಅವರನ್ನು ದೇಶದ ಎರಡನೇ ಶ್ರೀಮಂತ ವ್ಯಕ್ತಿ ಎಂದು ಫೋರ್ಬ್ಸ್‌ ಪ್ರಕಟಿಸಿದೆ ಹಾಗೂ ಎಸ್‌ಸಿಒ ಶೃಂಗದಲ್ಲಿ ಮೋದಿ ಹೇಳಿಕೆವರೆಗಿನ ದಿನದ ಪ್ರಮುಖ ಸುದ್ದಿಗಳ ಗುಚ್ಛ ವಿಸ್ತಾರ TOP 10 NEWS.

1. Rajakaluve Encroachment | ಬಡವರ ಮನೆಗಳ ಮೇಲಷ್ಟೇ ಬಿಬಿಎಂಪಿ ಬುಲ್ಡೋಜರ್ ಬ್ರಹ್ಮಾಸ್ತ್ರ!
ರಾಜಧಾನಿಯಲ್ಲಿ ಬಿಬಿಎಂಪಿ ಆಪರೇಷನ್ ಒತ್ತುವರಿ (Rajakaluve Encroachment) ಕಾರ್ಯಾಚರಣೆ ಶುಕ್ರವಾರಕ್ಕೆ ಐದು ದಿನ ಪೂರೈಸಿದೆ. ಬೆಳಗ್ಗೆ 10 ಗಂಟೆಯಿಂದ ಒತ್ತುವರಿ ತೆರವು ಕಾರ್ಯ ನಡೆಯಿತು. ಆದರೆ ಬಡವರ ಆಸ್ತಿ ಒತ್ತುವರಿ ತೆರವು ಮಾಡುತ್ತಿರುವ ಬಿಬಿಎಂಪಿ, ಉಳ್ಳವರ ಆಸ್ತಪಾಸ್ತಿ ಒತ್ತುವರಿ ಮಾಡುವಲ್ಲಿ ಹಿಂದೇಟು ಹಾಕುವ ಮೂಲಕ ತಾರತಮ್ಯ ಧೋರಣೆ ಅನುಸರಿಸುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ದುಡ್ಡಿದ್ದವರ ಮನೆ ಮುಟ್ಟಲು, ಐಟಿ ಬಿಟಿ ಕಂಪನಿಗಳ ಒತ್ತುವರಿ ಜಾಗದತ್ತ ಬಿಬಿಎಂಪಿ ಅಧಿಕಾರಿಗಳು ಸುಳಿಯುತ್ತಿಲ್ಲ. ಬಾಗ್ಮನೆ, ವಿಪ್ರೋ, ಎಪ್ಸಿಲಾನ್‌ ಸೇರಿ ಹಲವು ಪ್ರತಿಷ್ಠಿತ ಕಂಪನಿಗಳು ಇರುವ ಪ್ರದೇಶಗಳಲ್ಲಿ ಒತ್ತುವರಿ ತೆರವು ಮಾಡಲು ಬಿಬಿಎಂಪಿ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: ರಾಜಕಾಲುವೆ ಹೆಸರನ್ನು ಬದಲಾಯಿಸಿ: ಸದನದಲ್ಲಿ ಹೊಸ ಹೆಸರು ಸೂಚಿಸಿದ ಎ.ಟಿ. ರಾಮಸ್ವಾಮಿ

2. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮತಾಂತರ ನಿಷೇಧ ಕಾಯ್ದೆ ವಾಪಸ್‌: ಇನ್ನೊಂದು ಕಾಯ್ದೆಯೂ ರದ್ದು ಎಂದ ಪ್ರಿಯಾಂಕ್‌ ಖರ್ಗೆ
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯಲಾಗುತ್ತದೆ ಎಂದು ಕಾಂಗ್ರೆಸ್‌ ಶಾಸಕ ಹಾಗೂ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಪ್ರಿಯಾಂಕ್‌ ಖರ್ಗೆ, ಬಿಜೆಪಿಯವರು ಸಾರ್ವಜನಿಕರ ಅಭಿಪ್ರಾಯಕ್ಕೆ ವಿರುದ್ಧವಾಗಿ ಜಾರಿಗೆ ತಂದಿರುವ ಎಲ್ಲ ಕಾಯ್ದೆಗಳನ್ನೂ ವಾಪಸ್ ಪಡೆಯುತ್ತೇವೆ. ಹಣಕಾಸು ಮಸೂದೆಯ ನಡುವೆಯೇ ಗೋಹತ್ಯೆ ಕಾಯ್ದೆ ಜಾರಿ‌ ಮಾಡಿದ್ದರು. ಗೋಹತ್ಯೆ ಕಾಯ್ದೆಯನ್ನೂ ವಾಪಸ್‌ ಪಡೆಯುತ್ತೇವೆ ಎಂದಿದ್ದಾರೆ. ಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

3. ಮುರುಘಾಶ್ರೀ ಪ್ರಕರಣ | ಮುರುಘಾ ಶರಣರಿಗೆ ಸಿಗದ ಜಾಮೀನು; ನಾಳೆಗೆ ಅರ್ಜಿ ಮುಂದೂಡಿಕೆ
ಶ್ರೀಮಠದ ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿನಿಯರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪವನ್ನು ಎದುರಿಸುತ್ತಿರುವ ಚಿತ್ರದುರ್ಗ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾಶರಣರ ಜಾಮೀನು ಅರ್ಜಿ ವಿಚಾರಣೆಯು ಶನಿವಾರಕ್ಕೆ (ಸೆ.೧೭) ಮುಂದೂಡಿಕೆಯಾಗಿದೆ.
ಚಿತ್ರದುರ್ಗ ಮುರುಘಾಶ್ರೀ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಚಿತ್ರದುರ್ಗ ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆಯು ಶುಕ್ರವಾರ ಇತ್ತು. ಈ ವೇಳೆ ಈ ಪ್ರಕರಣದ ವಿಚಾರಣೆಯನ್ನು ಸೆ.೧೭ರ ಶನಿವಾರಕ್ಕೆ ಮುಂದೂಡಿ ನ್ಯಾಯಾಲಯ ಆದೇಶಿಸಿದೆ. ಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: ಮುರುಘಾಶ್ರೀ ಪ್ರಕರಣ | ನಕ್ಸಲರ ಅಡ್ಡೆಯಾಗಿತ್ತು ಮಠ ಎಂದ ಯತ್ನಾಳ್‌: ಹೈಕೋರ್ಟ್‌ CJಗೆ ಪತ್ರ

4. Delhi Excise Policy Case | ಮಂಗಳೂರು, ಬೆಂಗಳೂರು ಸೇರಿ ದೇಶದ 40 ಕಡೆ ಇ.ಡಿ ದಾಳಿ
ದಿಲ್ಲಿ ಲಿಕ್ಕರ್ ಪಾಲಿಸಿ ಹಗರಣಕ್ಕೆ (Delhi Excise Policy Case) ಸಂಬಂಧಿಸಿದಂತೆ ಬೆಂಗಳೂರು, ಮಂಗಳೂರು ಮತ್ತು ಹೈದ್ರಾಬಾದ್ ಸೇರಿದಂತೆ ದೇಶಾದ್ಯಂತ 40 ಕಡೆ ಶುಕ್ರವಾರ ಜಾರಿ ನಿರ್ದೇಶನಾಲಯ(ಇ.ಡಿ)ವು ಶೋಧ ಕಾರ್ಯಾಚರಣೆಯನ್ನು ಕೈಗೊಂಡಿದೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 6ರಂದು ಇ.ಡಿ, ದಿಲ್ಲಿ ಸೇರಿದಂತೆ 53ಕ್ಕೂ ಹೆಚ್ಚು ಕಡೆ ದಾಳಿ ನಡೆಸಿತ್ತು. ಇದೀಗ ಎರಡನೇ ಬಾರಿಗೆ ಶೋಧ ಕಾರ್ಯಾಚರಣೆಯನ್ನು ಕೈಗೊಂಡಿದೆ. ದಿಲ್ಲಿಯಲ್ಲಿ ಆಪ್ ಸರ್ಕಾರ ಜಾರಿಗೆ ತಂದಿದ್ದ ಲಿಕ್ಕರ್ ನೀತಿ ರಚನೆಯಲ್ಲಿ ನೆರವಾಗಿದ್ದ ಮದ್ಯ ಉತ್ಪಾದಕರು ಸೇರಿದಂತೆ ಮಾರಾಟಗಾರ ಸ್ಥಗಳ ಮೇಲೆ ಜಾರಿ ನಿರ್ದೇಶನಾಲಯವು ದಾಳಿ ನಡೆಸಿ, ದಾಖಲೆಗಳನ್ನು ವಶಪಡಿಸಿಕೊಂಡಿತ್ತು. ಅದರ ಮುದುವರಿದ ಭಾಗವಾಗಿಯೇ, ಇ.ಡಿ ಮತ್ತೆ ದಾಳಿಯನ್ನು ಕೈಗೊಂಡಿದೆ. ಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

5. ಕೆಪಿಸಿಸಿಗೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಿದ್ದಾರೆ ಸೋನಿಯಾ ಗಾಂಧಿ: ನಿರ್ಣಯಕ್ಕೆ ಸರ್ವಾನುಮತದ ಒಪ್ಪಿಗೆ
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಅನೇಕ ವರ್ಷಗಳ ನಂತರ ಸಾಂಸ್ಥಿಕ ಚುನಾವಣಾ ಪ್ರಕ್ರಿಯೆಯನ್ನು ನಡೆಸಲಾಯಿತು. ಅಂಬೇಡ್ಕರ್‌ ಭವನದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ, ಕೆಪಿಸಿಸಿಗೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಂಪೂರ್ಣ ಅಧಿಕಾರವನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ನೀಡಲಾಯಿತು.
ಡಿ.ಕೆ. ಶಿವಕುಮಾರ್‌ ಅವರು ಎರಡೂವರೆ ವರ್ಷದಿಂದ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಕಾಂಗ್ರೆಸ್‌ನಲ್ಲಿ ಸಾಂಸ್ಥಿಕ ಚುನಾವಣೆಗಳು ನಡೆದು ಅನೇಕ ವರ್ಷಗಳೇ ಕಳೆದಿದ್ದವು. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರಕ್ರಿಯೆ ನಡೆಸಲಾಗುತ್ತಿದೆ. ಇದೀಗ ಸೋನಿಯಾ ಗಾಂಧಿಯವರು ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುತ್ತಾರೆ. ಆದರೆ ಚುನಾವಣೆಗೆ ಇನ್ನು ಒಂದು ವರ್ಷ ಮಾತ್ರ ಬಾಕಿಯಿರುವ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಹುತೇಕ ಅಸಾಧ್ಯ. ಡಿ.ಕೆ. ಶಿವಕುಮಾರ್‌ ಅವರ ಹೆಸರನ್ನೇ ಆಯ್ಕೆ ಮಾಡಿ ಸೋನಿಯಾ ಗಾಂಧಿಯವರು ಔಪಚಾರಿಕತೆಯನ್ನಷ್ಟೆ ಪೂರೈಸುತ್ತಾರೆ ಎನ್ನಲಾಗುತ್ತಿದೆ. ಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

6. ಸರ್ಕಾರಿ ನೌಕರರ ಸುದ್ದಿ | ಏಳನೇ ವೇತನ ಆಯೋಗ ರಚನೆಗೆ ಸರ್ಕಾರದ ಹಿಂದೇಟು?
ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಬರುವ ಅಕ್ಟೋಬರ್‌ನಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದ ಭರವಸೆ, ಭರವಸೆಯಾಗಿಯೇ ಉಳಿಯಲಿದೆಯೇ?
ಈ ಅನುಮಾನ ಈಗ ರಾಜ್ಯ ಸರ್ಕಾರಿ ನೌಕರರನ್ನು ಕಾಡುತ್ತಿದೆ. ವಿಧಾನಸಭೆಯಲ್ಲಿ ಶಾಸಕ ಐಹೋಳೆ ಡಿ. ಮಹಾಲಿಂಗಪ್ಪ ಕೇಳಿದ ಲಿಖಿತ ಪ್ರಶ್ನೆಗೆ ಉತ್ತರಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆಯ ವಿಷಯವು ಸರ್ಕಾರದ ನೀತಿ ನಿರ್ಣಯಕ್ಕೆ ಸಂಬಂಧಿಸಿದ ವಿಷಯವಾಗಿದ್ದು, ರಾಜ್ಯದ ಆರ್ಥಿಕ ಸ್ಥಿತಿಗತಿಗಳನ್ನು ಗಮನದಲ್ಲಿರಿಸಿ ಸಂದರ್ಭಾನುಸಾರ ಕ್ರಮ ತೆಗೆದುಕೊಳ್ಳಲಾಗುವುದುʼʼ ಎಂದಷ್ಟೇ ಹೇಳಿದ್ದಾರೆ. ಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

7. Vims Bellary | ರೋಗಿಗಳ ಸಾವು ಪ್ರಕರಣ; ವಿಮ್ಸ್‌ಗೆ ಡಾ. ಸ್ಮಿತಾ ನೇತೃತ್ವದ ತನಿಖಾ ತಂಡ ಆಗಮನ
ವಿಮ್ಸ್‌ನಲ್ಲಿ ಕೇಬಲ್ ಬ್ಲಾಸ್ಟ್ ಆಗಿರುವ ಹಿನ್ನೆಲೆಯಲ್ಲಿ (Vims Bellary) ಐಸಿಯುನಲ್ಲಿರುವ ರೋಗಿಗಳು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಡಾ. ಸ್ಮಿತಾ ನೇತೃತ್ವದಲ್ಲಿ ನೇಮಿಸಿರುವ ತನಿಖಾ ಸಮಿತಿಯು ವಿಮ್ಸ್‌ಗೆ ಆಗಮಿಸಿದ್ದು, ಪ್ರಕರಣದ ಸಂಪೂರ್ಣ ಮಾಹಿತಿಯನ್ನು ಕಲೆಹಾಕುತ್ತಿದೆ.
೧೧.೪೫ಕ್ಕೆ ವಿಮ್ಸ್‌ಗೆ ಆಗಮಿಸಿರುವ ತಂಡವು ನೇರವಾಗಿ ವಿಮ್ಸ್ ನಿರ್ದೇಶಕರ ಚೇಂಬರ್‌ಗೆ ತೆರಳಿದ್ದು, ದಾಖಲೆ ಸಮೇತ ಮಾಹಿತಿಯನ್ನು ಸಂಗ್ರಹಿಸುತ್ತಿದೆ. ವಿದ್ಯುತ್ ಸಮಸ್ಯೆಯಿಂದಾಗಿ ಐವರು ರೋಗಿಗಳು ಮೃತಪಟ್ಟಿದ್ದಾರೆಂಬ ಆರೋಪ ಇರುವುದರಿಂದ ರೋಗಿಗಳು ವೈದ್ಯಕೀಯ ಪರೀಕ್ಷೆ ವರದಿಯನ್ನು ಪರಿಶೀಲಿಸಲಾಗುತ್ತಿದೆ. ಸಾಧ್ಯವಾದರೆ ರೋಗಿಗಳ ಸಂಬಂಧಿಗಳನ್ನು ಭೇಟಿಯಾಗಿ ವರದಿ ಸಂಗ್ರಹಿಸುವ ಸಾಧ್ಯತೆ ಇದೆ ಎಂಬ ಮಾಹಿತಿಯು ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ. ಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

8. Gautam Adani | ಗೌತಮ್‌ ಅದಾನಿ ಈಗ ಜಗತ್ತಿನ ಎರಡನೇ ಶ್ರೀಮಂತ, ಫೋರ್ಬ್ಸ್‌ ಘೋಷಣೆ
ಭಾರತದ ಬಿಲಿಯನೇರ್‌ ಉದ್ಯಮಿ ಗೌತಮ್‌ ಅದಾನಿ (Gautam Adani) ಈಗ ವಿಶ್ವದ ಎರಡನೇ ಅತ್ಯಂತ ಶ್ರೀಮಂತ ಉದ್ಯಮಿಯಾಗಿ ಹೊರಹೊಮ್ಮಿದ್ದಾರೆ ಎಂದು ಫೋರ್ಬ್ಸ್‌ ನಿಯತಕಾಲಿಕೆ ಘೋಷಿಸಿದೆ. ಅಮೆಜಾನ್‌ ಮುಖ್ಯಸ್ಥ ಜೆಫ್‌ ಬಿಜೋಸ್‌ ಮತ್ತು ಫ್ರಾನ್ಸ್‌ನ ಉದ್ಯಮಿ ಬೆನಾರ್ಡ್‌ ಅರ್ನಲ್ಟ್‌ ಅವರನ್ನು ಹಿಂದಿಕ್ಕಿರುವ ಗೌತಮ್‌ ಅದಾನಿ ಅವರು, ಇದೀಗ ವಿಶ್ವದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿ ಎಂದು ಫೋರ್ಬ್ಸ್‌ ವರದಿ ಪ್ರಕಟಿಸಿದೆ. ಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

9. SCO Summit | ಶೇ.7.5 ದರದಲ್ಲಿ ಭಾರತದ ಅಭಿವೃದ್ಧಿ: ಎಸ್‌ಸಿಒ ಶೃಂಗದಲ್ಲಿ ಮೋದಿ ಹೇಳಿಕೆ
ಭಾರತದ ಆರ್ಥಿಕಾಭಿವೃದ್ಧಿಯು ಶೇ.7.5 ದರದಲ್ಲಿ ಬೆಳವಣಿಗೆಯಾಗಲಿದೆ. ಇದು ಜಗತ್ತಿನಲ್ಲೇ ಅತಿ ಹೆಚ್ಚು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಉಜ್ಬೇಕಿಸ್ತಾನದ ಸಮರಕಂಡದಲ್ಲಿ ಆಯೋಜಿಸಲಾಗಿರುವ ಶಾಂಘೈ ಸಹಕಾರ(CSO Summit) ಶೃಂಗದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ಎರಡು ದಿನಗಳ ಕಾಲ ನಡೆಯುತ್ತಿರುವ ಈ ಶೃಂಗದಲ್ಲಿ ಭಾರತ, ಚೀನಾ, ಪಾಕಿಸ್ತಾನ, ರಷ್ಯಾ ಸೇರಿದಂತೆ ಸೆಂಟ್ರಲ್ ಏಷ್ಯಾ ವ್ಯಾಪ್ತಿಯ ರಾಷ್ಟ್ರಗಳು ಪಾಲ್ಗೊಂಡಿವೆ.
ಭಾರತದಲ್ಲಿ ಈಗ 70 ಸಾವಿರಕ್ಕೂ ಅಧಿಕ ಸ್ಟಾರ್ಟ್‌ಅಪ್‌ಗಳಿವೆ, 100ಕ್ಕೂ ಅಧಿಕ ಯೂನಿಕಾರ್ನ್ ಕಂಪನಿಗಳಿವೆ. ನಾವು ಜನ ಕೇಂದ್ರೀತ ಅಭಿವೃದ್ಧಿ ಮಾದರಿಯನ್ನು ಅಭಿವೃದ್ಧಿಪಡಿಸುತ್ತಿದ್ದೇವೆ. ನಾವು ಎಲ್ಲ ಕ್ಷೇತ್ರಗಳಲ್ಲೂ ನಾವೀನ್ಯತೆಯನ್ನು ಪ್ರೋತ್ಸಾಹಿಸುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇದೇ ವೇಳೆ ತಿಳಿಸಿದರು. ಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: SCO Summit | ಪಾಕಿಸ್ತಾನ ಪ್ರಧಾನಿಗೆ ಹೆಡ್‌ಫೋನ್ ಪೇಚು, ವಿಡಿಯೋ ವೈರಲ್

10. ರಾಜಮಾರ್ಗ ಅಂಕಣ | ನೇತಾಜಿ ಪ್ರಾಣ ಉಳಿಸಲು ತನ್ನ ಗಂಡನನ್ನೇ ಕೊಂದು ಹಾಕಿದ ನೀರಾ ಆರ್ಯ!
ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಚಾರ ಪಡೆಯದ ಯಶೋಗಾಥೆ! ಸೆರೆಮನೆಯಲ್ಲಿ ಆಕೆಯ ಮೊಲೆಯನ್ನೇ ಕತ್ತರಿಸಿ ಹಾಕಿದ ಬ್ರಿಟಿಷ್ ಜೈಲರ್! ಈ ಕಥೆಯನ್ನು ಈ ದೇಶದ ಪ್ರತಿಯೊಬ್ಬರೂ ಕೇಳಬೇಕು. ದೇಶದ ಸ್ವಾತಂತ್ರ್ಯ ಸಮರ ಕಥನದಲ್ಲಿ ಹೆಚ್ಚಾಗಿ ಬೆಳಕು ಕಾಣದ ಈ ಕಥೆಯ ಪ್ರತಿ ಅಕ್ಷರವೂ ಕಣ್ಣೀರಿನಲ್ಲಿ ಅದ್ದಿ ತೆಗೆದಂತಿದೆ. ಪೂರ್ಣ ಲೇಖನ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case: ಎಚ್.ಡಿ. ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್, ಸೋಮವಾರ ಬೆಳಗ್ಗೆ 11.30ಕ್ಕೆ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸುವುದಾಗಿ ಮುಂದೂಡಿದೆ. ಕೋರ್ಟ್‌ಗೆ ಮಹತ್ವದ ಮಾಹಿತಿಯನ್ನು ನೀಡಬೇಕಾಗಿದೆ. ಸೋಮವಾರ ಸಮಯ ವ್ಯರ್ಥ ಮಾಡದೆ ಮಾಹಿತಿ ನೀಡುತ್ತೇವೆ. ಸೋಮವಾರದವರೆಗೆ ವಿಚಾರಣೆ ಮುಂದೂಡಬೇಕೆಂದು ವಿಶೇಷ ಸಾರ್ವಜನಿಕ ಅಭಿಯೋಜಕರು (ಎಸ್‌ಪಿಪಿ) ನ್ಯಾಯಾಧೀಶರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಸೋಮವಾರಕ್ಕೆ ಮುಂದೂಡಿಕೆ ಮಾಡಿ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಆದೇಶವನ್ನು ನೀಡಿದ್ದಾರೆ.

VISTARANEWS.COM


on

Prajwal Revanna case Revanna bail plea to be heard on Monday Advocate Nagesh argument was as follows
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರಿನ ಕೆ.ಆರ್.‌ ನಗರದ ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್‌ ಮಾಡಿದ ಆರೋಪದ ಮೇಲೆ ಬಂಧಿತರಾಗಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ (HD Revanna) ಅವರಿಗೂ ಇಂದೂ ಸಹ ಜಾಮೀನು ಸಿಕ್ಕಿಲ್ಲ. ಸಾಕಷ್ಟು ವಾದ – ಪ್ರತಿವಾದದ ಬಳಿಕ ಜನಪ್ರತಿನಿಧಿಗಳ ಕೋರ್ಟ್, ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿದಿದೆ.

ಎಚ್.ಡಿ. ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್, ಸೋಮವಾರ ಬೆಳಗ್ಗೆ 11.30ಕ್ಕೆ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸುವುದಾಗಿ ಮುಂದೂಡಿದೆ. ಕೋರ್ಟ್‌ಗೆ ಮಹತ್ವದ ಮಾಹಿತಿಯನ್ನು ನೀಡಬೇಕಾಗಿದೆ. ಸೋಮವಾರ ಸಮಯ ವ್ಯರ್ಥ ಮಾಡದೆ ಮಾಹಿತಿ ನೀಡುತ್ತೇವೆ. ಸೋಮವಾರದವರೆಗೆ ವಿಚಾರಣೆ ಮುಂದೂಡಬೇಕೆಂದು ವಿಶೇಷ ಸಾರ್ವಜನಿಕ ಅಭಿಯೋಜಕರು (ಎಸ್‌ಪಿಪಿ) ನ್ಯಾಯಾಧೀಶರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಸೋಮವಾರಕ್ಕೆ ಮುಂದೂಡಿಕೆ ಮಾಡಿ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಆದೇಶವನ್ನು ನೀಡಿದ್ದಾರೆ.

ಎಸ್ಐಟಿ ಪರ ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡನೆ ಮಾಡಿದ್ದು, ನಾವು ಆಕ್ಷೇಪಣೆ ಸಲ್ಲಿಸಿದ್ದೇವೆ, ವಿಳಂಬದ ಉದ್ದೇಶವಿಲ್ಲ. ನಾವು ವಾದ ಮಂಡಿಸಲು ಸ್ವಲ್ಪ ಸಮಯಾವಕಾಶ ಬೇಕಾಗಿದೆ ಎಂದು ಕೋರ್ಟ್‌ ಮುಂದೆ ಕೋರಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಧೀಶರು, ನೀವು ಹಿರಿಯ ವಕೀಲರು ಇದ್ದೀರಿ, ವಿಳಂಬ ಮಾಡಬೇಡಿ
ಎಸ್‌ಐಟಿ ಪರ ವಕೀಲರಿಗೆ ಸೂಚಿಸಿದರು. ಅದಕ್ಕೆ ಒಪ್ಪಿದ ಜಯ್ನಾ ಕೊಠಾರಿ, ಕೋರ್ಟ್‌ಗೆ ಮತ್ತಷ್ಟು ಮಹತ್ವದ ಮಾಹಿತಿಯನ್ನು ನೀಡಬೇಕಾಗಿದೆ. ಯಾವುದೇ ಕಾರಣಕ್ಕೂ ಸೋಮವಾರ ‌ಸಮಯ ವ್ಯರ್ಥ ಮಾಡಲ್ಲ ಎಂದು ಮನವಿ ಮಾಡಿದರು.

ಇದಕ್ಕೂ ಮೊದಲು ವಾದ ಮಂಡಿಸಿದ ರೇವಣ್ಣ ಪರ ಹಿರಿಯ ವಕೀಲ ಸಿ.ವಿ.ನಾಗೇಶ್, ನನ್ನ 56 ವರ್ಷಗಳ ವಕೀಲ ವೃತ್ತಿಯಲ್ಲಿ ತಪ್ಪು ಮಾಹಿತಿ ನೀಡಿಲ್ಲ. ಬೇಲ್ ಅರ್ಜಿ ಊರ್ಜಿತವಲ್ಲವೆಂದು ಎಸ್‌ಪಿಪಿ ವಾದ ಮಂಡಿಸಿದ್ದಾರೆ. ಇದು ಹೇಗೆ ಸಾಧ್ಯ? ಎಂದು ‘ಸುಪ್ರೀಂ’ ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದರು. 2023ರ ತೀಸ್ತಾ ಸೆಟಲ್ ವಾಡ್‌ ಪ್ರಕರಣದ ಬಗ್ಗೆ ಪ್ರಸ್ತಾಪ ಮಾಡಿದ ನಾಗೇಶ್‌, ಸೆಟಲ್ ವಾಡ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪು ಇದೆ. ನಿರಂಜನ್ ಸಿಂಗ್ ಕೇಸ್‌ನಲ್ಲಿಯೂ ಜಾಮೀನು ಉಲ್ಲೇಖವಿದೆ. 22 ತೀರ್ಪುಗಳಲ್ಲಿ ನಿರಂಜನ್ ಕೇಸ್‌ ಅನ್ನು ಅನುಸರಿಸಲಾಗಿದೆ. ಕಸ್ಟಡಿಯಲ್ಲಿದ್ದಾಗಲೂ ಜಾಮೀನು ನೀಡಿರುವ ಉಲ್ಲೇಖವಿದೆ. ಒಂದೊಂದು ದಿನ ಒಬ್ಬೊಬ್ಬರನ್ನು ಎಸ್‌ಪಿಪಿಯಾಗಿ ನೇಮಕ ಮಾಡಲಾಗುತ್ತಿದೆ. ಮೊದಲು ಜಗದೀಶ್ ಇದ್ದರು, ಈಗ ಜಯ್ನಾ ಕೊಠಾರಿ ಇದ್ದಾರೆ. ಎಸ್‌ಪಿಪಿ ನೇಮಕಕ್ಕೂ ಕಾನೂನಿನಲ್ಲಿ ಕೆಲ ಕ್ರಮಗಳಿವೆ ಎಂದು ವಾದಿಸಿದರು.

ಈ ವೇಳೆ ವಾದ ಮಂಡನೆಗೆ ಜಯ್ನಾ ಕೊಠಾರಿ ಕಾಲಾವಕಾಶ ಕೋರಿದರು. ಅದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಜಡ್ಜ್‌, ಈಗಾಗಲೇ ಆಕ್ಷೇಪಣೆಗೆ 3 ಬಾರಿ ಸಮಯ ನೀಡಲಾಗಿದೆ. ಇನ್ನೂ ಹೆಚ್ಚು ಸಮಯ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.

ಎಸ್‌ಐಟಿ ಕಾರ್ಯವೈಖರಿಗೆ ತೀವ್ರ ಆಕ್ಷೇಪ

ಈ ವೇಳೆ ವಾದ ಮುಂದುವರಿಸಿದ ನಾಗೇಶ್‌, ಪ್ರಕರಣದಲ್ಲಿ ಹಾಕಿದ ಸೆಕ್ಷನ್‌ಗಳ ಬಗ್ಗೆ ಉಲ್ಲೇಖಿದರು. ಸಂತ್ರಸ್ತೆ ಎಲ್ಲಿದ್ದಾರೆ, ಸಂತ್ರಸ್ತೆಗೆ ಏನಾದರೂ ಗಾಯವಾಗಿದೆಯಾ? ಸಂತ್ರಸ್ತೆಯ ಪರಿಸ್ಥಿತಿಯ ಬಗ್ಗೆ ಎಸ್‌ಐಟಿ ಮಾತನಾಡುತ್ತಿಲ್ಲ. ಸಂತ್ರಸ್ತೆ ಪತ್ತೆಯಾಗದ ಕಾರಣ ನಿರೀಕ್ಷಣಾ ಜಾಮೀನು ರಿಜೆಕ್ಟ್ ಆಗಿತ್ತು. ಮಹಿಳೆಯ ಸುರಕ್ಷತೆ ಸಂಬಂಧ ನಿರೀಕ್ಷಣಾ ಜಾಮೀನು ನಿರಾಕರಣೆ ಮಾಡಲಾಗಿತ್ತು. 364(a), 365 ಅಡಿ ಕೇಸ್ ದಾಖಲಿಸುವ ಅಗತ್ಯವೇ ಇರಲಿಲ್ಲ ಎಂದು ವಕೀಲರಾದ ನಾಗೇಶ್‌ ಅವರು ಎಸ್‌ಐಟಿ ಕಾರ್ಯವೈಖರಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ವಿಮಾನ ಹೈಜಾಕ್ ಪ್ರಕರಣದ ಉಲ್ಲೇಖ

ಈ ವೇಳೆ ವಿಮಾನ ಹೈಜಾಕ್ ಪ್ರಕರಣವನ್ನು ಉಲ್ಲೆಖಿಸಿದ ಹಿರಿಯ ವಕೀಲ ಸಿ.ವಿ. ನಾಗೇಶ್, ಈ ಹಿಂದೆ ವಿಮಾನ ಹೈಜಾಕ್ ಮಾಡಿ ಉಗ್ರನ ಬಿಡುಗಡೆಗೆ ಕೋರಿದ್ದರು. ವಿಮಾನ ಹೈಜಾಕ್ ಸಮಯದಲ್ಲಿ ಜಸ್ವಂತ್ ಸಿಂಗ್ ಮಂತ್ರಿ ಆಗಿದ್ದರು. ಆಗ ಉಗ್ರರನ್ನು ಬಿಟ್ಟು ವಿಮಾನದಲ್ಲಿದ್ದ ಪ್ರಯಾಣಿಕರನ್ನು ಬಿಡಿಸಿದ್ದರು. ಇದಾದ ಬಳಿಕವೇ ಸೆಕ್ಷನ್ 364(a) ಸೇರಿಸಲಾಯಿತು. ಇಲ್ಲಿ ಇಂತಹ ಘಟನೆ ನಡೆದಿಲ್ಲವಾದರೂ ಸೆಕ್ಷನ್ 364(a) ಸೇರಿಸಲಾಗಿದೆ. ನಮ್ಮ ಕಕ್ಷಿದಾರ ರೇವಣ್ಣ ವಿರುದ್ಧ 364(a) ದಾಖಲು ಮಾಡಿದ್ದಾರೆ. ಕಿಡ್ನ್ಯಾಪ್ ಪ್ರಕರಣದಲ್ಲಿ ಸಂತ್ರಸ್ತೆಯ 21 ವರ್ಷದ ಮಗ ದೂರು ನೀಡಿದ್ದಾನೆ ಎಂದು ವಾದ ಮಂಡಿಸಿದರು.

ಸಿಎಂ ಮೇಲೆ ಕಿಡ್ನ್ಯಾಪ್ ಕೇಸ್ ಹಾಕಲು ‌ಸಾಧ್ಯವೇ?

ಮಹಿಳೆಯನ್ನು ಅಪಹರಿಸಿ ವಿದೇಶಕ್ಕೆ ಕರೆದೊಯ್ದರೆ ಈ ಸೆಕ್ಷನ್‌ಗಳು ಅಪ್ಲೇ ಆಗುತ್ತವೆ. ಪ್ರಕರಣದಲ್ಲಿ ರೇವಣ್ಣ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ನ ಸಾರಾಂಶ ಉಲ್ಲೇಖಿಸಿದ ನಾಗೇಶ್‌, ದೂರುದಾರ ಮಗನಿಗೆ ಸುಳ್ಳು ಹೇಳಿ ಕರೆದುಕೊಂಡು ಹೋಗಿದ್ದಾರೆಂದು ಹೇಳಿದ್ದಾರೆ. ದೂರುದಾರನಿಗೆ ಸುಳ್ಳು ಹೇಳಿ ಕರೆದುಕೊಂಡು ಹೋಗಿದ್ದರೆ ಆಕ್ಷೇಪಣೆ ಸಲ್ಲಿಸಬಹುದು. ದೂರಿನಲ್ಲಿ ಇರುವ ಸತೀಶ್ ಬಾಬು ಹೇಳಿಕೆಯನ್ನು ಗಮನಿಸೋಣ. ಅದರಲ್ಲಿ “ನಿನ್ನ ತಾಯಿ ಮೇಲೆ ಪೊಲೀಸ್ ಕೇಸ್ ಆಗುತ್ತದೆ. ರೇವಣ್ಣ ಕರೆದಿದ್ದಾರೆಂದು ಹೇಳಿ ಕರೆದುಕೊಂಡು ಹೋದರು” ಎಂದು ಆರೋಪ ಮಾಡಲಾಗಿದೆ. ಹಾಗಾದರೆ, ಸಿಎಂ ಹೇಳಿದ್ದಾರೆ ಎಂದು ಕರೆದೊಯ್ದರೆ ಸಿಎಂ ಮೇಲೆ ಕಿಡ್ನ್ಯಾಪ್ ಕೇಸ್ ಹಾಕಲು ‌ಸಾಧ್ಯವೇ? ರೇವಣ್ಣ ಸಾಹೇಬರು ಹೇಳಿದ್ದಾರೆ ಎಂದು ಕರೆದೊಯ್ದರೆ ಅದು ಅಪಹರಣವೇ? ಇದರಲ್ಲಿ ಮೋಸವಿದೆಯೇ? ಬಲ ಪ್ರಯೋಗವಿದೆಯೇ? ಹೀಗಾಗಿ ಇಲ್ಲಿ ಅಪಹರಣದ ಯಾವುದೇ ಅಂಶಗಳು ಅನ್ವಯವಾಗುವುದಿಲ್ಲ ಎಂದು ವಾದ ಮಂಡಿಸಿದರು.

ಪೊಲೀಸರು ಹಲ್ಲಿಲ್ಲದ ಹಾವುಗಳು

ಈ ಪ್ರಕರಣದಲ್ಲಿ ಅಪಹರಣಕ್ಕೊಳಗಾದವರೇ ಆಕ್ಷೇಪಣೆ ಸಲ್ಲಿಸಬೇಕು. ಬೇರೆ ಯಾರೂ ಆಕ್ಷೇಪಣೆ ಸಲ್ಲಿಸಲಾಗುವುದಿಲ್ಲ. 365 ಅಕ್ರಮ ಬಂಧನ‌ ಸೆಕ್ಷನ್ ಕೂಡ ಅನ್ವಯ ಆಗುವುದಿಲ್ಲ. ಇಲ್ಲಿ ಏನು ಡಿಮ್ಯಾಂಡ್ ಇದೆ? ಅಪಹರಣವೂ ಇಲ್ಲ,‌ ಅಕ್ರಮ ಬಂಧನವೂ ಇಲ್ಲ. ನಾಳೆ‌ ಯಾರಿಂದಲಾದರೂ ಹೇಳಿಕೆ ಪಡೆದು ಸಾಕ್ಷ್ಯ ಸೃಷ್ಟಿಸಬಹುದು. ಏಕೆಂದರೆ ಪೊಲೀಸರು ಹಲ್ಲಿಲ್ಲದ ಹಾವುಗಳು. ಪೊಲೀಸರಿಗೆ ಸೆಕ್ಷನ್ 161 ಹೇಳಿಕೆ ಎಂಬ ಅಸ್ತ್ರ ಇದೆ. ಇನ್ನು ಎಚ್.ಡಿ.ರೇವಣ್ಣ ರಾಜಕೀಯ ಪಕ್ಷದಲ್ಲಿದ್ದಾರೆ ಎಂದು ನಾಗೇಶ್‌ ವಾದಿಸಿದರು.

ಇದನ್ನೂ ಓದಿ: Prajwal Revanna Case: ಎಚ್‌ಡಿಕೆ ಕಿಂಗ್‌ ಆಫ್‌ ಬ್ಲ್ಯಾಕ್‌ಮೇಲ್‌; ತಿರುಗಿಬಿದ್ದ ಡಿ.ಕೆ. ಶಿವಕುಮಾರ್!

ಪ್ರಚೋದನೆಯಿಂದ ಕೂಡಿದ ಕೇಸ್‌ ಇದು

ಏಪ್ರಿಲ್ 29ರಂದು ಕಿಡ್ನ್ಯಾಪ್ ಆಗುತ್ತೆ, 4 ದಿನ ಬಿಟ್ಟು ಎಫ್‌ಐಆರ್‌ ದಾಖಲು ಮಾಡಲಾಗುತ್ತದೆ. ಏ.29ಕ್ಕೆ ಘಟನೆ ನಡೆದಿದೆ ಎಂದು ಉಲ್ಲೇಖಿಸಿದ್ದು, ಮೇ 2ರಂದು ಕೇಸ್ ದಾಖಲು ಮಾಡಲಾಗಿದೆ. ಮೊದಲು ಹೊಳೆನರಸೀಪುರ ಠಾಣೆಯಲ್ಲಿ ‌ಕೇಸ್ ದಾಖಲಾಗಿತ್ತು. ಅಲ್ಲಿ ಎಲ್ಲವೂ ಜಾಮೀನು ನೀಡಬಹುದಾದ ಸೆಕ್ಷನ್‌ಗಳು ಇತ್ತು. ನಂತರ ಪೊಲೀಸರು 41A ಅಡಿ ನೋಟಿಸ್ ಜಾರಿ ಮಾಡಿದ್ದಾರೆ. ಮೇ 3ರಂದು ನೋಟಿಸ್ ನೀಡಿ ಮೇ 4ರಂದು ವಿಚಾರಣೆಗೆ ಬರಲು ಹೇಳಿದ್ದಾರೆ. ರೇವಣ್ಣ ವಿರುದ್ಧ ದಾಖಲಾದ ಕೇಸ್ ಪ್ರಚೋದನೆಯಿಂದ ಆಗಿದೆ. ಪ್ರಚೋದನೆಯಿಂದ ಕೇಸ್ ಹಾಕಿರುವುದು ಸ್ಪಷ್ಟವಾಗಿ ಕಂಡುಬರುತ್ತಿದೆ. ರೇವಣ್ಣಗೆ ಜಾಮೀನು ನೀಡಬೇಕೆಂದು ಸಿ.ವಿ.ನಾಗೇಶ್ ಬಲವಾಗಿ ವಾದ ಮಂಡಿಸಿದರು.

ಸುಪ್ರೀಂ ಕೋರ್ಟ್‌ ಏನು ಹೇಳಿದೆ?

ತನಿಖೆಗೆ ಸಹಕರಿಸುತ್ತಿಲ್ಲ ಅಂತಾರೆ, ಯಾವ ರೀತಿ ಸಹಕರಿಸಬೇಕು. ಎಚ್.ಡಿ. ರೇವಣ್ಣ ಅವರ ತನಿಖೆ ಬಹುತೇಕ ಮುಗಿದಿದೆ. ಸುಪ್ರೀಂ ಕೋರ್ಟ್ ಒಂದು ಪ್ರಕರಣದಲ್ಲಿ ಆದೇಶವನ್ನು ನೀಡಿದೆ. ಕಸ್ಟಡಿಯಲ್ಲಿದ್ದಾಗ ತನಿಖೆ ಮುಗಿದಿದ್ದರೆ ಬೇಲ್ ನೀಡಬಹುದೆಂದು ಹೇಳಿದೆ. ರೇವಣ್ಣರನ್ನು ಕಸ್ಟಡಿಗೆ ತೆಗೆದುಕೊಂಡು ಹೇಳಿಕೆ ಪಡೆದಿದ್ದಾರೆ. ಎಸ್‌ಐಟಿ ಏನೆಲ್ಲ ಸಾಕ್ಷಿ ಸಂಗ್ರಹಿಸಿದೆ ಎಂದು ಹೇಳಬೇಕು.

ಸಂತ್ರಸ್ತೆಯನ್ನು ಎಲ್ಲಿಂದ ಕರೆದುಕೊಂಡು ಬಂದರು? ಯಾವುದನ್ನು ನಂಬಬೇಕು?

ಕಿಡ್ನ್ಯಾಪ್ ಸಂತ್ರಸ್ತೆಗೆ ಏನಾದರೂ ಗಾಯಗಳಾಗಿವೆಯಾ? ಕಿಡ್ನ್ಯಾಪ್ ಸಂತ್ರಸ್ತೆಗೆ ಯಾವುದೇ ಚಿಕಿತ್ಸೆಯನ್ನು ಕೊಡಿಸಿಲ್ಲ. ಸಂತ್ರಸ್ತೆಯನ್ನು ನ್ಯಾಯಾಧೀಶರ ಮುಂದೆಯೂ ಹಾಜರುಪಡಿಸಿಲ್ಲ. 164 ಅಡಿಯಲ್ಲಿ ಹೇಳಿಕೆಯೂ ದಾಖಲಿಸಿಲ್ಲ. ಇಷ್ಟು ದಿನವಾದ್ರು ಯಾಕೆ 164 ಸ್ಟೇಟ್ಮೆಂಟ್ ಮಾಡಿಸಿಲ್ಲ. ಎಸ್‌ಐಟಿಯವರು ಕಳೆದ 6 ದಿನಗಳಿಂದ ಏನ್ ಮಾಡುತ್ತಿದ್ದಾರೆ? ಸಂತ್ರಸ್ತೆ ಪತ್ತೆಯಾದ ಸ್ಥಳದ ಕಂದಾಯ ದಾಖಲೆ ಪಡೆಯಬೇಕಂತಾರೆ. ಮುಂದಿನ ತನಿಖೆ ನಡೆಸಲಾಗುವುದು ಎಂದು ಹೇಳುತ್ತಾರೆ, ಇದರರ್ಥವೇನು? ಸಂತ್ರಸ್ತೆ ಕೂಡಿಹಾಕಿದ್ದ ಸ್ಥಳ ಪರಿಶೀಲಿಸಬೇಕು ಎಂದು ಹೇಳುತ್ತಾರೆ. ಹಾಗಾದರೆ ಇವರು ಸಂತ್ರಸ್ತೆಯನ್ನು ಎಲ್ಲಿಂದ ಕರೆದುಕೊಂಡು ಬಂದರು? ಸಂತ್ರಸ್ತೆಯನ್ನು ಕರೆದೊಯ್ದ ವಾಹನ ಪತ್ತೆ ಹಚ್ಚಬೇಕು ಎಂದು ಹೇಳುತ್ತಾರೆ. ವಾಹನ ಸೀಜ್ ಮಾಡಬೇಕಿದೆ ಎಂದು ಕೂಡ ಹೇಳಿದ್ದಾರೆ. ರಿಮ್ಯಾಂಡ್ ಅಪ್ಲಿಕೇಶನ್‌ನಲ್ಲಿ ಗಾಡಿ ಸೀಜ್ ಬಗ್ಗೆ ತಿಳಿಸಿದ್ದಾರೆ. ಇವರು ಎಷ್ಟು ವಾಹನಗಳನ್ನು ಸೀಜ್ ಮಾಡಬೇಕು? ಆರೋಪಿ ಕೃತ್ಯಕ್ಕೆ ಬಳಸಿದ ಬೈಕ್, ಮೊಬೈಲ್ ಸೀಜ್ ಆಗಿದೆ ಎಂದು ಎಸ್‌ಐಟಿಯವರು ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ಒಂದು ಕಡೆ ಸೀಜ್ ಮಾಡಬೇಕು ಎಂದು ಹೇಳಿಕೆ ಕೊಡುತ್ತಾರೆ. ಮತ್ತೊಂದು ಕಡೆ ವಾಹನ ಸೀಜ್ ಮಾಡಿರುವುದಾಗಿ ಅವರು ಹೇಳುತ್ತಾರೆ. ಯಾವುದನ್ನು ನಂಬಬೇಕು ಎಂದು ಹಿರಿಯ ವಕೀಲ ಸಿ.ವಿ. ನಾಗೇಶ್ ಪ್ರಶ್ನೆ ಮಾಡಿದರು.

ಈ ವಿಷಯದಲ್ಲಿ ರೇವಣ್ಣ ಅವರಿಗೆ ಅನ್ಯಾಯ ಮಾಡುತ್ತಿದ್ದಾರೆ. ಅನ್ಯಾಯಕ್ಕೂ ಒಂದು ಮಿತಿ ಇರಬೇಕು. ತನಿಖಾಧಿಕಾರಿಗಳು ನಾಲ್ಕು ದಿನಗಳಿಂದ ಏನು ಮಾಡುತ್ತಿದ್ದಾರೆ. ಎಸ್‌ಐಟಿಯವರು ಸ್ಥಳ ಮಹಜರು ಮಾಡಬೇಕು ಎಂದು ಹೇಳುತ್ತಾರೆ. ಆರೋಪಿ ಸತೀಶ್ ಬಾಬಣ್ಣ ಸಂತ್ರಸ್ತೆಯನ್ನು ಕರೆದೊಯ್ದ ಸ್ಥಳ, ಸಂತ್ರಸ್ತೆಯನ್ನ ಕೂಡಿಹಾಕಿದ ಸ್ಥಳ ಮಹಜರು ಮಾಡಬೇಕಂತಾರೆ. ಹಾಗಾದರೆ ಸ್ಥಳೀಯ ಪೊಲೀಸರು ಏನು ಮಾಡುತ್ತಾರೆ? ಸ್ಥಳೀಯ ಪೊಲೀಸರಿಂದ ಒಂದು ಸಲ ಸ್ಥಳ ಮಹಜರು, ಎಸ್‌ಐಟಿ ಒಂದು ಸಲ ಸ್ಥಳ ಮಹಜರು ಮಾಡಬೇಕಾ? ಎಸ್ಐಟಿ ಯಾವ ಕಾರಣಕ್ಕೆ ಪೊಲೀಸ್ ಕಸ್ಟಡಿಗೆ ಕೇಳಿತ್ತು ಎಂದು ರಿಮ್ಯಾಂಡ್ ಅರ್ಜಿಯನ್ನು ವಕೀಲ ಸಿ.ವಿ.ನಾಗೇಶ್ ಓದಿ ಹೇಳಿದರು. ಪೊಲೀಸರು ನೀಡಿದ್ದ ಕಾರಣಗಳನ್ನು ಇದೇ ವೇಳೆ ಪ್ರಶ್ನಿಸಿದರು.

ಸಂತ್ರಸ್ತೆಯಿಂದ‌ 164 ಹೇಳಿಕೆ‌ ದಾಖಲಿಸಬೇಕಿದೆ ಎಂದು ಎಸ್ಐಟಿ ಹೇಳಿದೆ. ಸಂತ್ರಸ್ತೆಯನ್ನು ರಕ್ಷಿಸಿದ ಎಸ್‌ಐಟಿ ಇಷ್ಟು ದಿನ ಏನು ಮಾಡುತ್ತಲಿದೆ? ಎಂದು ನಾಗೇಶ್‌ ಪ್ರಶ್ನೆ ಮಾಡಿದರು.

ಇಡೀ ಪ್ರಕರಣದ ಟೈಂ ಲೈನ್‌ ಹೇಳಿದ ಜಯ್ನಾ ಕೊಠಾರಿ

ಆಗ ಎಸ್ಐಟಿ ಪರ ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡಿಸಿ, ಎಚ್‌.ಡಿ. ರೇವಣ್ಣಗೆ ಜಾಮೀನು ನೀಡಲು ಎಸ್‌ಪಿಪಿಯಿಂದ ಆಕ್ಷೇಪವಿದೆ. ಸಂತ್ರಸ್ತೆ ಪುತ್ರನಿಗೆ ಮೊದಲು ಸಂತ್ರಸ್ತೆ ವಿಡಿಯೊ ಬಗ್ಗೆ ತಿಳಿಯುತ್ತದೆ. ಸಾಕಷ್ಟು ಮಹಿಳೆಯರೊಂದಿಗಿರುವ ಅಶ್ಲೀಲ ವಿಡಿಯೊಗಳೂ ಕಾಣುತ್ತದೆ. ಅದಾದ ಬಳಿಕ ‌ಮಹಿಳಾ ‌ಆಯೋಗಕ್ಕೆ ದೂರು ನೀಡುತ್ತಾರೆ. ಹೊಳೆನರಸೀಪುರ ಠಾಣೆಯಲ್ಲಿ ಒಂದು ‌ಪ್ರಕರಣ ದಾಖಲಾಗುತ್ತದೆ. ಬಳಿಕ ಸರ್ಕಾರದಿಂದ ಎಸ್‌ಐಟಿ ರಚನೆಯಾಗಿದೆ ಎಂದು ಇಡೀ ಪ್ರಕರಣದ ಟೈಂ ಲೈನ್‌ ಅನ್ನು ಹೇಳಿದರು.

ಸಂತ್ರಸ್ತೆಯ ಅಶ್ಲೀಲ ವಿಡಿಯೊ ಇದೆ

ಸಂತ್ರಸ್ತೆ ಆರೋಪಿ ಮನೆಯಲ್ಲಿ 6 ವರ್ಷದಿಂದ ಕೆಲಸ ಮಾಡುತ್ತಿದ್ದರು. ಏಪ್ರಿಲ್ 28ರ ರಾತ್ರಿ ಸಂತ್ರಸ್ತೆಯನ್ನು ಬಲವಂತವಾಗಿ ಕರೆದೊಯ್ದಿದ್ದಾರೆ. ಅದಾದ ಬಳಿಕ ಆಕೆ ಪತ್ತೆಯಾಗಿರಲಿಲ್ಲ. ಸಂತ್ರಸ್ತೆ ಪುತ್ರ ಹಲವರಿಗೆ ಕರೆ ಮಾಡಿ ತಾಯಿ ಬಗ್ಗೆ ಮಾಹಿತಿ ಕೇಳಿದ್ದಾರೆ. ಬಳಿಕ‌ ತನ್ನ ತಾಯಿ‌ ‌ತೊಂದರೆಯಲ್ಲಿದ್ದಾಳೆಂದು ದೂರು ನೀಡಿದ್ದಾರೆ. ಅಶ್ಲೀಲ‌ ವಿಡಿಯೋಗಳಲ್ಲಿ ಸಂತ್ರಸ್ತೆ ಗುರುತು ಸಿಗುವಂತೆ ರೆಕಾರ್ಡ್ ಆಗಿದೆ. ಬಳಿಕ ತನಿಖೆ ಕೈಗೊಂಡ ಬಳಿಕ ಎಸ್‌ಐಟಿ ಸಂತ್ರಸ್ತೆಯನ್ನು ರಕ್ಷಣೆ ಮಾಡಿದೆ. ಸಂತ್ರಸ್ತೆಯನ್ನು ಅಪಹರಿಸಿ 40 ಕಿ.ಮೀ. ದೂರದಲ್ಲಿ ಕೂಡಿ ಹಾಕಲಾಗಿತ್ತು. ಸಂತ್ರಸ್ತೆಯನ್ನು ಕೂಡಿಹಾಕಿದ್ದ ಸ್ಥಳ ಆರೋಪಿ ಸಂಬಂಧಿಗೆ ಸೇರಿದ್ದಾಗಿದೆ. ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣದಲ್ಲಿ ಸಂತ್ರಸ್ತೆಯ ಅಶ್ಲೀಲ ವಿಡಿಯೊ ಇದೆ ಎಂದು ಜಯ್ನಾ ಕೊಠಾರಿ ವಾದ ಮಂಡಿಸಿದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು

ಸಿಆರ್‌ಪಿಸಿ 161 ಅಡಿ ಹೇಳಿಕೆ ದಾಖಲಿಸಲಾಗಿದೆ. ಸಾಕ್ಷಿಗಳ ಹೇಳಿಕೆಯಲ್ಲೂ ರೇವಣ್ಣ ಹೆಸರು ಉಲ್ಲೇಖವಾಗಿದೆ. ಇದು ಸ್ಪಷ್ಟವಾಗಿ ಕಿಡ್ನ್ಯಾಪ್, ಒತ್ತೆಯಾಳಾಗಿಟ್ಟುಕೊಂಡ ಪ್ರಕರಣವಾಗಿದೆ. ಸಂತ್ರಸ್ತೆಯ ಪುತ್ರ ನೀಡಿರುವ ದೂರಿನಲ್ಲಿ ಹೇಳಿರೋದು ಸತ್ಯ. ಎಚ್.ಡಿ.ರೇವಣ್ಣ ವಿರುದ್ಧ ಸೆಕ್ಷನ್ 364(a) ಅನ್ವಯವಾಗುತ್ತದೆ. 364(a) ಅಡಿಯಲ್ಲಿ ದಾಖಲಾಗಿರೋ ಕೆಲ‌ ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ. ಹೀಗಾಗಿ ನಾವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಈ ಪ್ರಕರಣದ ತೀವ್ರತೆಯೂ ಜಾಸ್ತಿ ಇದೆ. ಆರೋಪಿಯ ತಪ್ಪು ಕಂಡುಬಂದಾಗ ಬಹುತೇಕ ಈ ಸೆಕ್ಷನ್‌ಗಳನ್ನೇ ಹಾಕಲಾಗುತ್ತದೆ ಎಂದು ಜಯಾ ಕೊಠಾರಿ ಹೇಳಿದರು.

ರೇವಣ್ಣ ನಾಪತ್ತೆಯಾದರೆ? ಸಂತ್ರಸ್ತೆಯರ ಕಿಡ್ನ್ಯಾಪ್‌ ಮಾಡಿಸಿದರೆ?

ಆರೋಪಿಯ ಪುತ್ರ ಪ್ರಜ್ವಲ್‌ ರೇವಣ್ಣ ನಾಪತ್ತೆಯಾಗಿದ್ದಾರೆ. ಆರೋಪಿ ಪುತ್ರನ ಪತ್ತೆಗೆ ಬ್ಲೂಕಾರ್ನರ್ ನೋಟಿಸ್ ನೀಡಲಾಗಿದೆ. ಆದರೂ ಇಲ್ಲಿಯವರೆಗೆ ಆರೋಪಿ ಪುತ್ರ ಎಲ್ಲಿದ್ದಾರೆಂದು ಪತ್ತೆಯಾಗಿಲ್ಲ. ಈವರೆಗೆ ವಾಪಸ್ ಕೂಡ ಬಂದಿಲ್ಲ. ಈ ಆರೋಪಿಯೂ ನಾಪತ್ತೆಯಾದರೆ ಏನು ಮಾಡುವುದು? ಅದಲ್ಲದೆ, ಆರೋಪಿ‌ ರೇವಣ್ಣ ತುಂಬಾನೇ ಪ್ರಭಾವಿಯಾಗಿದ್ದಾರೆ. ಈ ಹಂತದಲ್ಲಿ ಜಾಮೀನು ನೀಡಿದ್ರೆ ಸಾಕ್ಷ್ಯ ಹಾಳು‌ ಮಾಡುತ್ತಾರೆ. ಜಾಮೀನು‌ ನೀಡಿದರೆ ಸಂತ್ರಸ್ತೆ ಜೀವಕ್ಕೆ ಯಾರು ಗ್ಯಾರಂಟಿ ನೀಡ್ತಾರೆ? ಜಾಮೀನು ಪಡೆದು ಬೇರೆ ಮಹಿಳೆಯರನ್ನು ಕಿಡ್ನ್ಯಾಪ್‌ ಮಾಡಬಹುದು ಎಂದು ಜಯಾ ಕೊಠಾರಿ ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ: Prajwal Revanna Case: ಪೆನ್‌ಡ್ರೈವ್ ಹಂಚಿಕೆದಾರರ ಬಂಧಿಸಿ; ಸಿಎಂ, ಡಿಸಿಎಂ ವಿರುದ್ಧ ಮಹಿಳಾ ಜೆಡಿಎಸ್‌ ಗರಂ!

ತನ್ನ ತಾಯಿಯನ್ನು ಕಾಪಾಡುವಂತೆ ಸಂತ್ರಸ್ತೆ ಮಗ ದೂರು ನೀಡಿದ್ದಾರೆ. ಯಾವುದೇ ಕಾರಣಕ್ಕೂ ಆರೋಪಿಗೆ ಜಾಮೀನು ನೀಡಬಾರದು. ಎಚ್.ಡಿ.ರೇವಣ್ಣ ವಿರುದ್ದ ಎರುಡು ಎಫ್ಐಆರ್ ದಾಖಲಾಗಿವೆ. ರೇವಣ್ಣ ವಿರುದ್ಧ ಲೈಂಗಿಕ‌ ದೌರ್ಜನ್ಯವೆಸಗಿರುವ ಆರೋಪವೂ ಇದೆ. ಲೈಂಗಿಕ‌ ದೌರ್ಜನ್ಯವೆಸಗುವ ಆರೋಪಿಗಳಿಗೆ ಸಂದೇಶ ರವಾನೆಯಾಗಬೇಕು. ಹೀಗಾಗಿ ಆರೋಪಿಗೆ ಜಾಮೀನು ನೀಡಬಾರದು. ಕೋರ್ಟ್‌ಗೆ ಮತ್ತಷ್ಟು ಮಹತ್ವದ ಮಾಹಿತಿಯನ್ನು ನೀಡಬೇಕಾಗಿದೆ. ಹೀಗಾಗಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿ ಎಂದು ಜಯಾ ಕೊಠಾರಿ ಮನವಿ ಮಾಡಿದರು. ವಾದ – ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಸೋಮವಾರ ವರದಿ ಸಲ್ಲಿಸಲು ಸೂಚಿಸಿದ್ದಲ್ಲದೆ, ಮತ್ತೆ ಸಮಯ ವ್ಯರ್ಥ ಮಾಡದಂತೆ ಸೂಚಿಸಿ ಸೋಮವಾರಕ್ಕೆ ವಿಚಾರಣೆಯನ್ನು ಮುಂದೂಡಿದರು.

Continue Reading

ಉತ್ತರ ಕನ್ನಡ

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾರ್ವಭೌಮ ಗುರುಕುಲಕ್ಕೆ ಶೇ.100 ಫಲಿತಾಂಶ

SSLC Result 2024: ಗೋಕರ್ಣದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ ಗುರುಕುಲದ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸತತ ಮೂರನೇ ವರ್ಷ ಶೇಕಡಾ 100 ಫಲಿತಾಂಶ ಸಾಧಿಸಿದ್ದಾರೆ. ಸಾರ್ವಭೌಮ ಗುರುಕುಲ ಪಾರಂಪರಿಕ ಮತ್ತು ನವಯುಗದ ಸಮನ್ವಯ ಶಿಕ್ಷಣ ನೀಡುವ ದೇಶದ ಏಕೈಕ ಸಂಸ್ಥೆಯಾಗಿದ್ದು, ಪಾರಂಪರಿಕ ವಿಭಾಗದಲ್ಲಿ ಸಾಧನೆ ಮಾಡುವ ಜತೆಜತೆಗೆ ನವಯುಗ ಶಿಕ್ಷಣದಲ್ಲೂ ಯಾವುದೇ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗಿಂತ ನಾವು ಕಡಿಮೆ ಇಲ್ಲ ಎನ್ನುವುದನ್ನು ಈ ಸಾಧನೆ ತೋರಿಸಿಕೊಟ್ಟಿದೆ ಎಂದು ಮಾರ್ಗದರ್ಶಕರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿದ್ದಾರೆ.

VISTARANEWS.COM


on

Koo

ಗೋಕರ್ಣ: ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ ಗುರುಕುಲದ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ (SSLC Result 2024) ಸತತ ಮೂರನೇ ವರ್ಷ ಶೇಕಡಾ 100 ಫಲಿತಾಂಶ ಸಾಧಿಸಿದ್ದಾರೆ.

ಸಾರ್ವಭೌಮ ಗುರುಕುಲ ಪಾರಂಪರಿಕ ಮತ್ತು ನವಯುಗದ ಸಮನ್ವಯ ಶಿಕ್ಷಣ ನೀಡುವ ದೇಶದ ಏಕೈಕ ಸಂಸ್ಥೆಯಾಗಿದ್ದು, ಪಾರಂಪರಿಕ ವಿಭಾಗದಲ್ಲಿ ಸಾಧನೆ ಮಾಡುವ ಜತೆಜತೆಗೆ ನವಯುಗ ಶಿಕ್ಷಣದಲ್ಲೂ ಯಾವುದೇ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗಿಂತ ನಾವು ಕಡಿಮೆ ಇಲ್ಲ ಎನ್ನುವುದನ್ನು ಈ ಸಾಧನೆ ತೋರಿಸಿಕೊಟ್ಟಿದೆ ಎಂದು ಮಾರ್ಗದರ್ಶಕರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ವಿದ್ಯಾರ್ಥಿಗಳ ಸಾಧನೆಯನ್ನು ಕೊಂಡಾಡಿದ್ದಾರೆ.

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಗನ ಜತೆ ತಾಯಿಯೂ ಪಾಸ್!

ವಿವಿವಿ ಅಂಕಗಳಿಕೆ ಶಿಕ್ಷಣಕ್ಕೆ ಒತ್ತು ನೀಡದೇ ವಿದ್ಯಾರ್ಥಿಗಳ ಸಮಗ್ರ ವಿಕಾಸಕ್ಕೆ ಒತ್ತು ನೀಡುತ್ತದೆ. ಆದಾಗ್ಯೂ ಅಂಕ ಗಳಿಕೆಯಲ್ಲೂ ನಮ್ಮ ವಿದ್ಯಾರ್ಥಿಗಳು ಮುಂದಿರುವುದು ಸಂಸ್ಥೆಯ ಶ್ರೇಷ್ಠತೆಗೆ ಹಿಡಿದ ಕೈಗನ್ನಡಿ. ದೇಶದ ಭಾವಿ ಪ್ರಜೆಗಳ ಭದ್ರ ಭವಿಷ್ಯದ ಅಡಿಪಾಯ ಇದಾಗಿದ್ದು, ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿ ಎಂದು ಅವರು ಆಶೀರ್ವದಿಸಿದ್ದಾರೆ.

ಪರೀಕ್ಷೆ ತೆಗೆದುಕೊಂಡ 33 ವಿದ್ಯಾರ್ಥಿಗಳ ಪೈಕಿ 19 ಮಂದಿ ಅತ್ಯುನ್ನತ ದರ್ಜೆಯಲ್ಲಿ 13 ಮಂದಿ ಪ್ರಥಮ ಹಾಗೂ ಒಬ್ಬ ವಿದ್ಯಾರ್ಥಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಮುಖ್ಯ ಶಿಕ್ಷಕಿ ಸೌಭಾಗ್ಯ ಭಟ್ಟ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಪನ್ನಗ ಎಸ್. ಭಟ್ 613 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ ಪಡೆದಿದ್ದರೆ, 603 ಅಂಕ ಗಳಿಸಿದ ರಾಮಚಂದ್ರ ಉಪಾಧ್ಯ ಎರಡನೇ ಸ್ಥಾನ ಗಳಿಸಿದ್ದಾರೆ. ತಲಾ 600 ಅಂಕಗಳನ್ನು ಪಡೆದ ಎನ್. ತನ್ವಿ ಗೌರಿ ಮತ್ತು ಸುಮುಖ ಹೆಗಡೆ ಜಿ ಮೂರನೇ ಸ್ಥಾನ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Karnataka Weather : ಕೊಡಗು, ಕೊಪ್ಪಳ ಸೇರಿ ಹಲವೆಡೆ ಅಬ್ಬರಿಸುತ್ತಿರುವ ಗಾಳಿ- ಮಳೆ; ನಾಳೆಗೂ ವಾರ್ನಿಂಗ್‌

ಅತ್ಯುತ್ತಮ ಸಾಧನೆಗೆ ಕಾರಣವಾಗಿರುವ ವಿದ್ಯಾರ್ಥಿ ಹಾಗೂ ಶಿಕ್ಷಕರನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಅರುಣ್ ಹೆಗಡೆ, ವಿವಿವಿ ಗೌರವಾಧ್ಯಕ್ಷ ಡಿ.ಡಿ.ಶರ್ಮಾ, ಪಾರಂಪರಿಕ ವಿಭಾಗದ ವರಿಷ್ಠಾಚಾರ್ಯ ಸತ್ಯನಾರಾಯಣ ಶರ್ಮಾ ಮತ್ತಿತರರು ಅಭಿನಂದಿಸಿದ್ದಾರೆ.

Continue Reading

ಉತ್ತರ ಕನ್ನಡ

SSLC Result 2024: ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಮೂಹ ಪ್ರೌಢಶಾಲೆಗಳ ಉತ್ತಮ ಸಾಧನೆ

SSLC Result 2024: 2023-24 ನೇ ಸಾಲಿನ ರಾಜ್ಯ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಯಲ್ಲಾಪುರ ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಮೂಹದ ಮೂರು ಪ್ರೌಢಶಾಲೆಗಳು ಉತ್ತಮ ಸಾಧನೆ ತೋರಿದೆ. ವಿಶ್ವದರ್ಶನ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಶೇ.98.48 ಫಲಿತಾಂಶ ದಾಖಲಿಸಿದ್ದು, ಶಾಲೆಯ ವಿದ್ಯಾರ್ಥಿನಿ ಪ್ರಣತಿ ವಿ. ಮೆಣಸುಮನೆ 625ಕ್ಕೆ 620 ಅಂಕ ಗಳಿಸಿ ರಾಜ್ಯಕ್ಕೆ 6ನೇ ಸ್ಥಾನ ಹಾಗೂ ತಾಲೂಕಿಗೆ ದ್ವಿತೀಯ ಸ್ಥಾನ ಪಡೆದಿದ್ದು ವಿಶೇಷವಾಗಿದೆ. ಅದೇ ರೀತಿ ಇಡಗುಂದಿಯ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲ ವಿದ್ಯಾರ್ಥಿಗಳೂ ಉತ್ತೀರ್ಣಗೊಂಡು ನೂರಕ್ಕೆ ನೂರು ಫಲಿತಾಂಶ ದಾಖಲಿಸಿ ಗಮನ ಸೆಳೆದಿದ್ದಾರೆ. ಯಲ್ಲಾಪುರದ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯುೂ ಕೂಡಾ ಉತ್ತಮ ಸಾಧನೆ ಮಾಡಿದ್ದು ಶೇ.98.24 ಫಲಿತಾಂಶ ಪಡೆದಿದೆ.

VISTARANEWS.COM


on

Yallapur Vishwadarshana Group of institutions performed well in SSLC Result 2024
Koo

ಯಲ್ಲಾಪುರ: 2023-24ನೇ ಸಾಲಿನ ರಾಜ್ಯ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ (SSLC Result 2024) ಪ್ರಕಟಗೊಂಡಿದ್ದು, ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಮೂಹದ ಮೂರು ಪ್ರೌಢಶಾಲೆಗಳು ಉತ್ತಮ ಸಾಧನೆ ತೋರಿವೆ.

ವಿಶ್ವದರ್ಶನ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಶೇ.98.48 ಫಲಿತಾಂಶ ದಾಖಲಿಸಿದ್ದು, ಶಾಲೆಯ ವಿದ್ಯಾರ್ಥಿನಿ ಪ್ರಣತಿ ವಿ. ಮೆಣಸುಮನೆ 625ಕ್ಕೆ 620 ಅಂಕ ಗಳಿಸಿ ರಾಜ್ಯಕ್ಕೆ 6ನೇ ಸ್ಥಾನ ಹಾಗೂ ತಾಲೂಕಿಗೆ ದ್ವಿತೀಯ ಸ್ಥಾನ ಪಡೆದಿದ್ದಾಳೆ. ಅದೇ ರೀತಿ ಇಡಗುಂದಿಯ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲ ವಿದ್ಯಾರ್ಥಿಗಳೂ ಉತ್ತೀರ್ಣಗೊಂಡು ನೂರಕ್ಕೆ ನೂರು ಫಲಿತಾಂಶ ದಾಖಲಿಸಿ ಗಮನ ಸೆಳೆದಿದ್ದಾರೆ. ಪಟ್ಟಣದ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯುೂ ಕೂಡ ಉತ್ತಮ ಸಾಧನೆ ಮಾಡಿದ್ದು, ಶೇ.98.24 ಫಲಿತಾಂಶ ಪಡೆದಿದೆ.

ಇದನ್ನೂ ಓದಿ: Olive Oil Benefits: ಆಲಿವ್‌ ಎಣ್ಣೆ ಕೇವಲ ಅಡುಗೆಗಲ್ಲ, ಮುಖದ ಚರ್ಮ ಹಾಗೂ ಕೂದಲ ಸೌಂದರ್ಯಕ್ಕೂ ಬೇಕು!

ಈ ಕುರಿತು ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ್‌ ಕೋಣೆಮನೆ ಅವರು ಸಂತಸ ವ್ಯಕ್ತಪಡಿಸಿದ್ದು, ಎಲ್ಲ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ. ವಿಶ್ವದರ್ಶನ ಶಿಕ್ಷಣ ಸಮೂಹವು ನಿರಂತರವಾಗಿ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿ ಸಾಗುತ್ತಿದೆ. ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಉತ್ತಮವಾದ ಪದವಿಪೂರ್ವ ಕಾಲೇಜು ಇದ್ದು, ಇಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಗುಣಮಟ್ಟದ ಶಿಕ್ಷಣ ಪಡೆಯಬಹುದಾಗಿದೆ. ಹತ್ತನೇ ತರಗತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಸ್ವಂತ ಊರಿನಲ್ಲಿಯೇ ಮುಂದಿನ ಶಿಕ್ಷಣಕ್ಕಾಗಿ ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.

ವಿಶ್ವದರ್ಶನ ಆಂಗ್ಲ ಮಾಧ್ಯಮ ಪ್ರೌಢಶಾಲೆ: ಶೇ.98.48 ಫಲಿತಾಂಶ

ಪ್ರಣತಿ ವಿ. ಮೆಣಸುಮನೆ 625ಕ್ಕೆ 620 ಅಂಕ ಗಳಿಸಿ ಶೇ. 99.20 ಫಲಿತಾಂಶದೊಂದಿಗೆ ರಾಜ್ಯಕ್ಕೆ 6ನೇ ಸ್ಥಾನ, ಶಾಲೆಗೆ ಪ್ರಥಮ ಸ್ಥಾನ, ಸಿಂಚನಾ ಎಸ್. ಭಟ್ಟ 615 ಅಂಕ ಗಳಿಸಿ ಶೇ.98.40 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನ, ತೇಜಸ್ ಎಸ್. ಹೆಗಡೆ 609 ಅಂಕ ಗಳಿಸಿ ಶೇ.97.44 ಫಲಿತಾಂಶದೊಂದಿಗೆ ತೃತೀಯ ಸ್ಥಾನ ಗಳಿಸಿದ್ದಾರೆ. ಪರೀಕ್ಷೆಗೆ ಹಾಜರಾದ ಒಟ್ಟು 66 ವಿದ್ಯಾರ್ಥಿಗಳಲ್ಲಿ 33 ಡಿಸ್ಟಿಂಕ್ಷನ್‌ನಲ್ಲಿ, 28 ವಿದ್ಯಾರ್ಥಿಗಳು ಪ್ರಥಮ ದರ್ಜೆ, 4 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ವಿಶ್ವದರ್ಶನ ಪ್ರೌಢಶಾಲೆ ಇಡಗುಂದಿ: ಶೇ. 100% ಫಲಿತಾಂಶ ಸಾಧನೆ

ತಾಲೂಕಿನ ಇಡಗುಂದಿಯಲ್ಲಿರುವ ವಿಶ್ವದರ್ಶನ ಪ್ರೌಢಶಾಲೆಯು ಎಂಟನೇ ಬಾರಿಗೆ ನೂರಕ್ಕೆ ನೂರು ಸಾಧನೆ ಮಾಡಿದೆ. ಪರೀಕ್ಷೆಗೆ ಕುಳಿತ 35 ವಿದ್ಯಾರ್ಥಿಗಳಲ್ಲಿ 9 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 22 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 3 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಗಣೇಶ ಶಾಂತಾರಾಮ ದೇಸಾಯಿ 587 (93.92%) ಪ್ರಥಮ ಸ್ಥಾನ, ನಂದಿತಾ ಮಹೇಶ ತಾಮ್ಸೆ 583 (93.28%) ದ್ವಿತೀಯ ಸ್ಥಾನ ಹಾಗೂ ಸುಬ್ರಹ್ಮಣ್ಯ ನಾರಾಯಣ ಭಟ್ಟ 571 (91.36%) ತೃತೀಯ ಸ್ಥಾನವನ್ನು ಗಳಿಸಿದ್ದಾರೆ.

ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆ, ಯಲ್ಲಾಪುರ: ಶೇ. 98.24 ಫಲಿತಾಂಶ

ಅನನ್ಯ ನಾಗೇಶ ಹೆಗಡೆ 579 ಅಂಕ ಗಳಿಸಿ ಪ್ರಥಮ ಸ್ಥಾನ, ವೇದಶ್ರೀ ವೆಂಕಟರಮಣ ಭಟ್ಟ 570 ಅಂಕ ಗಳಿಸಿ ದ್ವಿತೀಯ ಸ್ಥಾನ, ಪವನ್ ಚಂದ್ರಕಾಂತ ಮರಾಠಿ 563 ಅಂಕ ಗಳಿಸಿ ತೃತೀಯ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: Sensex Crash : ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ, ಸೆನ್ಸೆಕ್ಸ್​ 1100 ಅಂಕಗಳಷ್ಟು ಪತನ

ಒಟ್ಟು 57 ವಿದ್ಯಾರ್ಥಿಗಳಲ್ಲಿ 10 ವಿಧ್ಯಾರ್ಥಿಗಳು ಡಿಸ್ಟಿಂಕ್ಷನ್ 33 ವಿಧ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 10 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ 3 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

Continue Reading

ಕರ್ನಾಟಕ

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಗನ ಜತೆ ತಾಯಿಯೂ ಪಾಸ್!

SSLC Result 2024: ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Result 2024) ಪ್ರಕಟಗೊಂಡಿದ್ದು, ಹಾಸನ ಜಿಲ್ಲೆಯಲ್ಲಿ ಅಪರೂಪದ ಪ್ರಸಂಗ ನಡೆದಿದೆ. ಎಸ್‌ಎಸ್‌‌ಎಲ್‌ಸಿ ಪರೀಕ್ಷೆಯಲ್ಲಿ ಮಗನ ಜತೆ ತಾಯಿಯೂ ಪಾಸ್ ಆಗಿದ್ದಾರೆ. ಸಕಲೇಶಪುರ ತಾಲೂಕಿನ ಚಿನ್ನಳ್ಳಿ ಗ್ರಾಮದಲ್ಲಿ ಎರಡನೇ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ 38 ವರ್ಷದ ಜ್ಯೋತಿ.ಪಿ.ಆರ್. ಉತ್ತೀರ್ಣರಾಗಿದ್ದಾರೆ.

VISTARANEWS.COM


on

Mother passed SSLC exam with her son in Hassan
Koo

ಹಾಸನ: ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Result 2024) ಪ್ರಕಟಗೊಂಡಿದ್ದು, ಹಾಸನ ಜಿಲ್ಲೆಯಲ್ಲಿ ಅಪರೂಪದ ಪ್ರಸಂಗ ನಡೆದಿದೆ. ಎಸ್‌ಎಸ್‌‌ಎಲ್‌ಸಿ ಪರೀಕ್ಷೆಯಲ್ಲಿ ಮಗನ ಜತೆ ತಾಯಿಯೂ ಪಾಸ್ ಆಗಿದ್ದಾರೆ. ಸಕಲೇಶಪುರ ತಾಲೂಕಿನ ಚಿನ್ನಳ್ಳಿ ಗ್ರಾಮದಲ್ಲಿ ಎರಡನೇ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ 38 ವರ್ಷದ ಜ್ಯೋತಿ ಪಿ.ಆರ್. ಉತ್ತೀರ್ಣರಾಗಿದ್ದಾರೆ.

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ‌ಉತ್ತರ ಪತ್ರಿಕೆ ಮರು ಮೌಲ್ಯಮಾಪನ, ಮರುಎಣಿಕೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ನಲ್ಲಷ್ಟೆ ಅವಕಾಶ

ತಾಯಿ-ಮಗ ಪಾಸ್‌

ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯ ಸಿದ್ದಣ್ಯಯ್ಯ ಹೈಸ್ಕೂಲ್‍ನಲ್ಲಿ ಮಗ ನಿತಿನ್ ಸಿ.ಬಿ. ಜತೆ ತಾಯಿ ಜ್ಯೋತಿ ಪಿ.ಆರ್. ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದಿದ್ದರು. 250 ಅಂಕ ಪಡೆದು ಜ್ಯೋತಿ ಪಿ.ಆರ್. ಉತ್ತಿರ್ಣರಾಗಿದ್ದಾರೆ. ನಿತಿನ್‌ ಸಿ.ಬಿ. 582 ಅಂಕ ಪಡೆದಿದ್ದಾರೆ. ಬಾಳ್ಳುಪೇಟೆಯಲ್ಲಿರುವ ವಿವೇಕ ಕಾನ್ವೆಂಟ್‍ನಲ್ಲಿ ನಿತಿನ್ ಸಿ.ಬಿ. ಓದುತ್ತಿದ್ದಾರೆ.

ಕುಟುಂಬದಲ್ಲಿ ಮನೆ ಮಾಡಿದ ಸಂಭ್ರಮ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಗನ ಜತೆ ತಾಯಿಯೂ ಉತ್ತೀರ್ಣರಾಗಿದ್ದಕ್ಕೆ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.

SSLC Result 2024: ಎಸ್‌ಎಸ್‌ಎಲ್‌ಸಿ ‌ಉತ್ತರ ಪತ್ರಿಕೆ ಮರು ಮೌಲ್ಯಮಾಪನ, ಮರುಎಣಿಕೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ನಲ್ಲಷ್ಟೆ ಅವಕಾಶ

ರಾಜ್ಯಾದ್ಯಂತ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ (SSLC Result 2024) ಫಲಿತಾಂಶವು ಮೇ 9ರಂದು ಪ್ರಕಟಿಸಲಾಗಿದೆ. ಇದೀಗ ಪರೀಕ್ಷೆಯ ಉತ್ತರ ಪತ್ರಿಕೆಗಳ ಪ್ರತಿಗಳನ್ನು ವಿದ್ಯಾರ್ಥಿಗಳು ಪಡೆಯಬಹುದಾಗಿದೆ. ಸ್ಕ್ಯಾನ್‌ ಪ್ರತಿ, ಮರು ಎಣಿಕೆ ಮತ್ತು ಮರುಮೌಲ್ಯಮಾಪನಕ್ಕೆ ಮಂಡಳಿಯ ವೆಬ್‌ಸೈಟ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: Karnataka Weather : ಕೊಡಗು, ಕೊಪ್ಪಳ ಸೇರಿ ಹಲವೆಡೆ ಅಬ್ಬರಿಸುತ್ತಿರುವ ಗಾಳಿ- ಮಳೆ; ನಾಳೆಗೂ ವಾರ್ನಿಂಗ್‌

ಮೇ 9ರಿಂದ 16ರವರೆಗೆ ಉತ್ತರ ಪತ್ರಿಕೆಗಳ ಸ್ಕ್ಯಾನ್‌ ಪ್ರತಿಯನ್ನು ಪಡೆಯಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪತ್ರಿಕೆಗಳ ಮರುಎಣಿಕೆಗೆ ಮತ್ತು ಮರು ಮೌಲ್ಯಮಾಪನಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಮೇ 13ರಿಂದ 22ವರೆಗೆ ಅರ್ಜಿ ಸಲ್ಲಿಸಬಹುದು ಜತೆಗೆ ಶುಲ್ಕವನ್ನು ಪಾವತಿಬಹುದಾಗಿದೆ.

ಇನ್ನೂ ನೇರವಾಗಿ ಮರು ಎಣಿಕೆಗಾಗಿ ಭೌತಿಕವಾಗಿ ಅರ್ಜಿ ಸಲ್ಲಿಸುವಂತಿಲ್ಲ. ಬದಲಿಗೆ ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕಿದೆ. ಮರು ಎಣಿಕೆ ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಂಬಂಧಪಟ್ಟ ವಿಷಯದ ಉತ್ತರ ಪತ್ರಿಕೆಯ ಸ್ಕ್ಯಾನ್‌ ಪ್ರತಿಯನ್ನು ಪಡೆಯಬೇಕು.

ಸ್ಕ್ಯಾನ್‌ ಪ್ರತಿಯನ್ನು ಪಡೆದ ನಂತರ ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಿದ್ದರೆ, ಅದನ್ನೂ ಖಚಿತಪಡಿಸಿಕೊಂಡ ನಂತರವಷ್ಟೇ ಮರುಎಣಿಕೆಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಮರುಎಣಿಕೆಗಾಗಿ ಭೌತಿಕವಾಗಿ ಅರ್ಜಿಗಳನ್ನು ಸ್ವೀಕರಿಸುವುದನ್ನು ರದ್ದುಗೊಳಿಸಲಾಗಿದೆ. ಮರುಎಣಿಕೆ ಬಯಸುವ ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕಾಗಿರುತ್ತದೆ.

ಇನ್ನೂ ಮರುಎಣಿಕೆಯು ಉಚಿತವಾಗಿದ್ದು ಪ್ರತ್ಯೇಕ ಶುಲ್ಕವಿರುವುದಿಲ್ಲ. ಮರು ಎಣಿಕೆ ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಿದ್ದಲ್ಲಿ ಪರಿಶೀಲಿಸಿ, ನಂತರ ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.

ಇದನ್ನೂ ಓದಿ: Sensex Crash : ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ, ಸೆನ್ಸೆಕ್ಸ್​ 1100 ಅಂಕಗಳಷ್ಟು ಪತನ

ಸಹಾಯವಾಣಿಗೆ ಕರೆ ಮಾಡಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ, ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್‌ ಪಡೆಯುವ ಮತ್ತು ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಯಾವುದೇ ಮಾಹಿತಿ ಪಡೆಯಬಹುದಾಗಿದೆ. ಹೀಗಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸಹಾಯವಾಣಿಯನ್ನು ಆರಂಭವಿಸಿದೆ. ವಿದ್ಯಾರ್ಥಿಗಳು ಸಹಾಯವಾಣಿ ಸಂಖ್ಯೆ 080 23310075, 23310076ಕ್ಕೆ ಕರೆ ಮಾಡಬಹುದು.

Continue Reading
Advertisement
Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ10 mins ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

T20 World Cup 2024
ಪ್ರಮುಖ ಸುದ್ದಿ14 mins ago

T20 World Cup : ವಿಶ್ವ ಕಪ್​ಗೆ ತಂಡ ಪ್ರಕಟಿಸಿದ ಶ್ರೀಲಂಕಾ, ಸಿಎಸ್​​ಕೆ ಆಟಗಾರನಿಗೂ ಚಾನ್ಸ್​​

ಉತ್ತರ ಕನ್ನಡ24 mins ago

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾರ್ವಭೌಮ ಗುರುಕುಲಕ್ಕೆ ಶೇ.100 ಫಲಿತಾಂಶ

Yallapur Vishwadarshana Group of institutions performed well in SSLC Result 2024
ಉತ್ತರ ಕನ್ನಡ44 mins ago

SSLC Result 2024: ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಮೂಹ ಪ್ರೌಢಶಾಲೆಗಳ ಉತ್ತಮ ಸಾಧನೆ

women's Cricket team
ಕ್ರೀಡೆ48 mins ago

Womens Cricket Team : ಬಾಂಗ್ಲಾ ವಿರುದ್ಧ 5-0 ಕ್ಲೀನ್​ ಸ್ವೀಪ್ ಸಾಧನೆ ಮಾಡಿದ ಭಾರತದ ವನಿತೆಯರು

Mother passed SSLC exam with her son in Hassan
ಕರ್ನಾಟಕ60 mins ago

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಗನ ಜತೆ ತಾಯಿಯೂ ಪಾಸ್!

Failed in SSLC Exam Student suicide in mandya
ಮಂಡ್ಯ1 hour ago

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್‌; ನೇಣಿಗೆ ಶರಣಾದ ವಿದ್ಯಾರ್ಥಿ

Ranveer Singh
Latest1 hour ago

Ranveer Singh: 2 ಕೋಟಿ ರೂ. ಮೌಲ್ಯದ ವಜ್ರದ ನೆಕ್ಲೇಸ್ ಧರಿಸಿ ಗಮನ ಸೆಳೆದ ರಣವೀರ್ ಸಿಂಗ್

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ1 hour ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Racial Comments
ಪ್ರಮುಖ ಸುದ್ದಿ1 hour ago

Racist Comment : ಭಾರತದಲ್ಲಿ ನೀಗ್ರೊಗಳಿದ್ದಾರೆ…; ಇದೀಗ ಬಂಗಾಳ ಕಾಂಗ್ರೆಸ್​​ ಅಧ್ಯಕ್ಷರ ಸರದಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ10 mins ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ1 hour ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ9 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ9 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ9 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು9 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ10 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು11 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

ಟ್ರೆಂಡಿಂಗ್‌