Cheetah in India | ಭಾರತದ ಕೊನೆಯ ಚೀತಾವನ್ನು ಕೊಂದವರು ಯಾರು? - Vistara News

ದೇಶ

Cheetah in India | ಭಾರತದ ಕೊನೆಯ ಚೀತಾವನ್ನು ಕೊಂದವರು ಯಾರು?

ಭಾರತದಲ್ಲಿ ಚೀತಾಗಳು ಕೊಟ್ಟ ಕೊನೆಯದಾಗಿ ಕಾಣಿಸಿಕೊಂಡದ್ದು 1947ರಲ್ಲಿ. ಅದೂ ಜೀವಂತವಾಗಿ ಅಲ್ಲ, ಶವವಾಗಿ. ಅದೇ ಕೊನೆ.

VISTARANEWS.COM


on

cheetah in india
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾರತದಲ್ಲಿ 1947ರವರೆಗೂ ಚೀತಾಗಳು ಇದ್ದವು. 1952ರಲ್ಲಿ ನೆಹರೂ ಸರ್ಕಾರ, ಭಾರತದಲ್ಲಿ ಚೀತಾಗಳು ಅಳಿದಿವೆ ಎಂದು ಘೋಷಿಸಿತು. ಇಲ್ಲಿ ಚೀತಾಗಳ ಅಳಿವಿಗೆ ಹಲವು ಕಾರಣಗಳಿದ್ದವು. ಮುಖ್ಯ ಕಾರಣ ಬೇಟೆ.

ಭಾರತಕ್ಕೆ ಬ್ರಿಟಿಷರ ಮೂಲಕ ಬಂದೂಕುಗಳು ಬಂದ ಬಳಿಕ, ಚೀತಾಗಳ ಬೇಟೆ ಸುಲಭವಾಯಿತು. ಆದರೆ ಇವುಗಳ ಬೇಟೆಯಾಡುತ್ತಿದ್ದವರು ಜನಸಾಮಾನ್ಯರಲ್ಲ, ಇಲ್ಲಿನ ರಾಜ ಮಹಾರಾಜರುಗಳು ಬ್ರಿಟಿಷ್‌ ಅಧಿಕಾರಿಗಳು. ಬ್ರಿಟಿಷ್‌ ದೊರೆಗಳನ್ನು ಸಂತೃಪ್ತಿಪಡಿಸಲೆಂದು ನಮ್ಮ ಮಹಾರಾಜರುಗಳು ಇವರನ್ನು ನಮ್ಮ ಕಾಡುಗಳಿಗೆ ಕರೆದೊಯ್ದು, ಅಲ್ಲಿದ್ದ ಹುಲಿ- ಸಿಂಹ- ಚೀತಾಗಳನ್ನು ತೋರಿಸುತ್ತಿದ್ದರು. ಕೊಂದ ಮೃಗದ ಚರ್ಮ ಅವರ ದಿವಾನಖಾನೆಗಳನ್ನು ಅಲಂಕರಿಸುತ್ತಿತ್ತು. ಆನೆಗಳನ್ನು ದಂತಕ್ಕಾಗಿ, ಹುಲಿಗಳನ್ನು ಚರ್ಮ ಹಾಗೂ ಉಗುರಿಗಾಗಿ, ಚೀತಾಗಳನ್ನು ಚರ್ಮಕ್ಕಾಗಿ ಬೇಟೆಯಾಡಲಾಗುತ್ತಿತ್ತು.

ಬ್ರಿಟಿಷರ ಈ ದುಷ್ಟ ಹವ್ಯಾಸ ನಮ್ಮ ಮಹಾರಾಜರನ್ನೂ ವ್ಯಾಪಕವಾಗಿ ಆವರಿಸಿತು. ಸ್ವಾತಂತ್ರ್ಯಪೂರ್ವದಲ್ಲಿ ಎಗ್ಗಿಲ್ಲದೆ ನಡೆದ ಈ ವನ್ಯದರೋಡೆ ಸ್ವಾತಂತ್ರ್ಯಾನಂತರವೂ ಮುಂದುವರಿಯಿತು. 1972ರಲ್ಲಿ ಇದನ್ನು ತಡೆಯಲು ಭಾರತ ಸರ್ಕಾರ ಕಠಿಣವಾದ ಕಾನೂನು ರೂಪಿಸಿತು. ಅಷ್ಟರಲ್ಲಿ ತಡವಾಗಿತ್ತು.

ಅನೇಕ ಹಿಂದಿನ ಚಿತ್ರಪಟಗಳು ತೋರಿಸುವಂತೆ, ಚೀತಾಗಳನ್ನು ಸಾಕಿ ಪಳಗಿಸಿ ಬೇಟೆಗಾಗಿಯೂ ಬಳಸಿಕೊಳ್ಳಲಾಗುತ್ತಿತ್ತು. ಇವುಗಳನ್ನು ಜಿಂಕೆ ಬೇಟೆಗೆ ಬಳಸಿಕೊಳ್ಳುತ್ತಿದ್ದರು. ದಾಖಲೆಗಳ ಪ್ರಕಾರ, ಭಾರತದಲ್ಲಿ ಮಧ್ಯಪ್ರದೇಶ, ಉತ್ತರಪ್ರದೇಶ ಹಾಗೂ ಬಿಹಾರದ ಬಯಲುಸೀಮೆಗಳಲ್ಲಿ ಚೀತಾಗಳು ಹೇರಳವಾಗಿದ್ದವು.

cheetah

ಬ್ರಿಟಿಷರಿಗೂ ಹಿಂದಿನ ರಾಜಮಹಾರಾಜರು, ಮೊಗಲ್‌ ಸುಲ್ತಾನರು ಕೂಡ ಬೇಟೆಯಲ್ಲಿ ಹಿಂದಿ ಬಿದ್ದಿರಲಿಲ್ಲ. ಇತಿಹಾಸಜ್ಞರ ಪ್ರಕಾರ, 1556ರಿಂದ 1605 ಆಳಿದ ಮೊಗಲ್‌ ಸುಲ್ತಾನ ಅಕ್ಬರ್‌ನ ಬಳಿ 1000 ಚೀತಾಗಳಿದ್ದವಂತೆ! ಇದನ್ನು ಅವನು ಜಿಂಕೆ ಬೇಟೆಗಾಗಿ ಸಾಕಿದ್ದ.

ಇದನ್ನೂ ಓದಿ | Cheetah in India | ನಮೀಬಿಯಾದಿಂದ ಬಂದ ಚೀತಾಗಳ ಡೀಟೇಲ್ಸ್!

ಚೀತಾಗಳ ಒಂದು ಗುಣ ಎಂದರೆ ಇವುಗಳಿಗೆ ಬೇಟೆ ಪ್ರಾಣಿಗಳು ಸಾಕಷ್ಟಿದ್ದರೆ, ತಿರುಗಾಡಲು ಮೈಲುಗಟ್ಟಲೆ ಹುಲ್ಲುಗಾವಲು ಇದ್ದರೆ ಮಾತ್ರ ಇವು ಪ್ರಜನನ ಮಾಡುತ್ತವೆ. ನಿರ್ಬಂಧಿತ ಪ್ರದೇಶದಲ್ಲಿ ಇದ್ದರೆ ಇವು ಸಂತಾನೋತ್ಪಾದನೆ ಮಾಡುವುದೇ ಇಲ್ಲ. ಇವುಗಳ ಈ ಗುಣವೂ ಇವುಗಳ ಅಳಿವಿಗೆ ಇನ್ನೊಂದು ಕಾರಣವಾಯ್ತು.

ದಾಖಲೆಗಳು ತೋರಿಸುವಂತೆ, ಭಾರತದ ಕೊಟ್ಟ ಕೊನೆಯ ಚೀತಾಗಳು ಸಾವು ಕಂಡದ್ದು 1947ರಲ್ಲಿ. ಇವುಗಳನ್ನು ಬೇಟೆಯಾಡಿದವನು ಮಧ್ಯಪ್ರದೇಶದ ಕೊರಯಾ ಸಂಸ್ಥಾನದ ಮಹಾರಾಜಾ ರಾಮಾನುಜ ಪ್ರತಾಪ ಸಿಂಗ್‌ ದೇವ್.‌ ಅವನು ಒಂದೇ ರಾತ್ರಿಯಲ್ಲಿ ಮೂರು ಚೀತಾಗಳನ್ನು ಹೊಡೆದುರುಳಿಸಿದ್ದ. ಇದರ ಫೋಟೋ ಲಭ್ಯವಿದೆ. ಇದಾದ ಬಳಿಕ ಭಾರತದಲ್ಲಿ ಎಲ್ಲೂ ಚೀತಾಗಳು ಕಾಣಿಸಿಕೊಂಡಿಲ್ಲ.

ಇದನ್ನೂ ಓದಿ | Video | ಮಧ್ಯಪ್ರದೇಶದ ರಾಷ್ಟ್ರೀಯ ಉದ್ಯಾನವನದಲ್ಲಿ ಪಂಜರದಿಂದ ಹೊರಬಿದ್ದು ಮೈಮುರಿದ ಚೀತಾಗಳು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರವಾಸ

Dwarka Tour: ದ್ವಾರಕೆಗೆ ಹೋದಾಗ ಏನೇನು ನೋಡಬಹುದು?

ನಿರ್ದಿಷ್ಟ ಯೋಜನೆ ಮತ್ತು ಸ್ಥಳೀಯ ವಿಚಾರಗಳನ್ನು ತಿಳಿದುಕೊಳ್ಳುವ ಮೂಲಕ ಕಡಿಮೆ ಬಜೆಟ್‌ನಲ್ಲಿ ಸಂಪೂರ್ಣ ದ್ವಾರಕವನ್ನು ಸುತ್ತಾಡಲು (Dwarka Tour) ಸಾಧ್ಯವಿದೆ. ಪುರಾತನ ದೇವಾಲಯ, ಸುಂದರವಾದ ಕಡಲತೀರಗಳೊಂದಿಗೆ ಅತ್ಯಾಕರ್ಷಕ ತಾಣದಲ್ಲಿ ಸುಂದರವಾದ ಪ್ರವಾಸ ಅನುಭವವನ್ನು ನಮ್ಮದಾಗಿಸಬಹುದು.

VISTARANEWS.COM


on

By

Dwarka Tour
Koo

ದ್ವಾರಕಾ ಹೆಸರು ಕೇಳಿದಾಕ್ಷಣವೇ ಮನಸ್ಸು ಪ್ರಫುಲ್ಲವಾಗುತ್ತದೆ. ಹಿಂದೂಗಳಿಗೆ ಅಯೋಧ್ಯೆ (ayodhya) ರಾಮ ಮಂದಿರದಷ್ಟೇ (ram mandir) ಪವಿತ್ರವಾದ ಮತ್ತೊಂದು ಕ್ಷೇತ್ರ ದ್ವಾರಕಾ (Dwarka Tour). ಭಾರತದ ಪಶ್ಚಿಮ ಕರಾವಳಿಯ ಗುಜರಾತ್ (gujarat) ರಾಜ್ಯದಲ್ಲಿರುವ ದ್ವಾರಕಾ ಆಳವಾದ ಆಧ್ಯಾತ್ಮಿಕ, ಐತಿಹಾಸಿಕ ಮತ್ತು ನೈಸರ್ಗಿಕ ಸೌಂದರ್ಯಗಳನ್ನು ಹೊಂದಿರುವ ಪಟ್ಟಣವಾಗಿದೆ. ಬಜೆಟ್ ಸ್ನೇಹಿ (Budget Friendly) ಪ್ರವಾಸ ಮಾಡುವ ಯೋಚನೆ ಇದ್ದರೆ ದ್ವಾರಕವನ್ನು ಅನ್ವೇಷಿಸಬಹುದು.

ದ್ವಾರಕಾದ ಪ್ರಾಚೀನ ದೇವಾಲಯಗಳು, ಸುಂದರ ಕಡಲತೀರಗಳು ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುತ್ತದೆ. ಇದು ದೂರದೂರುಗಳಿಂದ ಪ್ರವಾಸಿಗರನ್ನು ಹಾಗೂ ಯಾತ್ರಿಕರನ್ನು ತನ್ನತ್ತ ಚುಂಬಕದಂತೆ ಸೆಳೆಯುತ್ತದೆ. ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ಕೃಷ್ಣನ ನಗರಿಯಲ್ಲಿ ಪ್ರವಾಸಿಗರು ಬಜೆಟ್ ಸ್ನೇಹಿಯಾಗಿ ಸುತ್ತಾಡ ಬಹುದಾದ ಹಲವಾರು ಪ್ರದೇಶಗಳಿವೆ.


ಪ್ರಾಚೀನ ದೇವಾಲಯಗಳು

ದ್ವಾರಕಾವು ಚಾರ್ ಧಾಮ್ ತೀರ್ಥಯಾತ್ರಾ ಸ್ಥಳಗಳಲ್ಲಿ ಮತ್ತು ಶ್ರೀಕೃಷ್ಣನ ಪ್ರಾಚೀನ ಸಾಮ್ರಾಜ್ಯದಲ್ಲಿ ಸ್ಥಾನ ಪಡೆದಿರುವುದರಿಂದ ಅದು ಆಧ್ಯಾತ್ಮಿಕ ನೆಲೆಯಾಗಿದೆ. ಬಜೆಟ್ ಸ್ನೇಹಿ ಪ್ರಯಾಣ ಮಾಡಲು ಶ್ರೀಕೃಷ್ಣ ಸಮರ್ಪಿತ ದ್ವಾರಕಾಧೀಶ ದೇವಾಲಯ ಅಥವಾ ನಾಗೇಶ್ವರ ಜ್ಯೋತಿರ್ಲಿಂಗ ದೇವಾಲಯದಂತಹ ಪ್ರಸಿದ್ಧ ದೇವಾಲಯಗಳಿಗೆ ಭೇಟಿ ನೀಡಬಹುದು. ಇದು ಹನ್ನೆರಡು ಪವಿತ್ರ ಜ್ಯೋತಿರ್ಲಿಂಗಗಳಲ್ಲಿ ಒಂದಾಗಿದ್ದು, ಭಕ್ತರು ಮತ್ತು ಸಂದರ್ಶಕರಿಗೆ ಉಚಿತ ಪ್ರವೇಶವನ್ನು ಕಲ್ಪಿಸುತ್ತದೆ. ಯಾವುದೇ ವೆಚ್ಚವಿಲ್ಲದೆ ಇಲ್ಲಿ ದೈವಿಕ ವಾತಾವರಣವನ್ನು ಅನುಭವಿಸಬಹುದು. ಇದಲ್ಲದೇ ಪವಿತ್ರ ಸ್ಥಳಗಳಾದ ರುಕ್ಮಿಣಿ ದೇವಿ ದೇವಸ್ಥಾನ, ಗೋಮತಿ ಘಾಟ್ ಮತ್ತು ಹಿಂದೂ ಪುರಾಣಗಳಲ್ಲಿ ಗಮನಾರ್ಹವಾದ ಬೆಟ್ ದ್ವಾರಕಾ ದ್ವೀಪಕ್ಕೆ ಭೇಟಿ ನೀಡಬಹುದು. ಇದು ಎಲ್ಲರಿಗೂ ಮುಕ್ತವಾಗಿದೆ.


ರಮಣೀಯ ಕಡಲತೀರಗಳು

ದ್ವಾರಕಾವು ಪ್ರಾಚೀನ ಕಡಲತೀರಗಳು ಮತ್ತು ಕರಾವಳಿ ಪ್ರದೇಶಗಳನ್ನು ಹೊಂದಿದೆ. ವಿವಿಧ ಮನರಂಜನಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು, ವಿಶ್ರಾಂತಿ ಪಡೆಯಲು ಜೊತೆಗೆ ಅರೇಬಿಯನ್ ಸಮುದ್ರದ ಸ್ಪಷ್ಟ ನೋಟವನ್ನು ಕಾಣಲು, ವಿಹಂಗಮ ಸೂರ್ಯಾಸ್ತ, ಒಂಟೆ ಸವಾರಿ, ಬೀಚ್ ಪಿಕ್ನಿಕ್‌ಗಳನ್ನು ಇಲ್ಲಿ ಆನಂದಿಸಬಹುದು. ಇದರೊಂದಿಗೆ ಬೀಟ್ ದ್ವಾರಕಾ ಬೀಚ್, ಗೋಪಿ ತಲವ್ ಮತ್ತು ಓಖಾ-ಮಧಿ ಬೀಚ್ ನಲ್ಲಿ ಶಾಂತಿಯುತ ಪರಿಸರದಲ್ಲಿ ಈಜು, ಸೂರ್ಯನ ಸ್ನಾನ ಮತ್ತು ಪಕ್ಷಿ ವೀಕ್ಷಣೆಯನ್ನು ನಡೆಸಬಹುದು.

ಸ್ಥಳೀಯ ಸಂಸ್ಕೃತಿ

ವರ್ಷದುದ್ದಕ್ಕೂ ದ್ವಾರಕಾದಲ್ಲಿ ವಿವಿಧ ಸಾಂಸ್ಕೃತಿಕ ಹಬ್ಬಗಳು ಮತ್ತು ಕಾರ್ಯಕ್ರಮಗಳು ನಡೆಯುತ್ತವೆ. ಇದು ಪ್ರಯಾಣಿಕರಿಗೆ ಸ್ಥಳೀಯ ಸಂಪ್ರದಾಯಗಳು ಮತ್ತು ಪದ್ಧತಿಗಳ ಒಳನೋಟವನ್ನು ತೋರಿಸುತ್ತದೆ. ಪಟ್ಟಣದಲ್ಲಿ ವರ್ಣರಂಜಿತ ಮೆರವಣಿಗೆ, ಸಾಂಸ್ಕೃತಿಕ ಪ್ರದರ್ಶನ ಮತ್ತು ಧಾರ್ಮಿಕ ಆಚರಣೆಗಳನ್ನು ಆನಂದಿಸಬಹುದು. ಜನ್ಮಾಷ್ಟಮಿ, ದೀಪಾವಳಿ ಮತ್ತು ಹೋಳಿ ಹಬ್ಬಗಳು ಇಲ್ಲಿ ಅತ್ಯಂತ ವೈಭವದಿಂದ ನಡೆಯುತ್ತದೆ. ಅಲ್ಲದೆ, ಗರ್ಬಾ ಮತ್ತು ದಾಂಡಿಯಾ ರಾಸ್ ನೃತ್ಯಗಳು, ಸಾಂಪ್ರದಾಯಿಕ ಸಂಗೀತ ಕಛೇರಿಗಳು ಮತ್ತು ಪಟ್ಟಣದ ವಿವಿಧ ಸ್ಥಳಗಳಲ್ಲಿ ನಡೆಯುವ ಜಾನಪದ ಕಲಾ ಪ್ರದರ್ಶನಗಳನ್ನು ವೀಕ್ಷಿಸಲು ತಪ್ಪಿಸಿಕೊಳ್ಳಬೇಡಿ. ಇದು ದ್ವಾರಕೆಯ ಸಂಸ್ಕೃತಿಯ ರೋಮಾಂಚಕ ಅನುಭವವನ್ನು ಕೊಡುತ್ತದೆ.


ಗುಜರಾತಿ ಖಾದ್ಯ

ದ್ವಾರಕಾ ಪ್ರವಾಸವು ಅಲ್ಲಿನ ಗುಜರಾತಿ ಖಾದ್ಯಗಳನ್ನು ಸವಿಯದೇ ಪೂರ್ಣಗೊಳ್ಳುವುದಿಲ್ಲ. ಸ್ಥಳೀಯ ತಿನಿಸುಗಳು ಅಥವಾ ಆಹಾರ ಮಳಿಗೆಗಳಿಗೆ ಭೇಟಿ ನೀಡಿ ಅಲ್ಲಿ ಧೋಕ್ಲಾ, ಖಾಂಡ್ವಿ ಅಥವಾ ಥೇಪ್ಲಾ ಮೊದಲಾದ ಭಕ್ಷ್ಯಗಳನ್ನು ಸವಿಯಬಹುದು. ಇದರೊಂದಿಗೆ ಪಟ್ಟಣದಲ್ಲಿ ಖಿಚು, ಫಫ್ಡಾ, ಜಲೇಬಿ-ಫಫ್ಡಾ ಸೇರಿದಂತೆ ಕೆಲವು ಪ್ರಸಿದ್ಧ ಭಕ್ಷ್ಯಗಳು ಕೈಗೆಟುಕುವ ದರದಲ್ಲಿ ಲಭ್ಯವಾಗುತ್ತದೆ.

ಇದನ್ನೂ ಓದಿ: Summer Tour: ಬೇಸಿಗೆಯಲ್ಲಿ ಈ 8 ತಂಪು ಹಳ್ಳಿಗಳಿಗೆ ಪ್ರವಾಸ ಹೋಗಿ ಕೂಲ್ ಆಗಿ!

ಕೈಗೆಟುಕುವ ದರದಲ್ಲಿ ವಸತಿ

ದ್ವಾರಕಾದಲ್ಲಿ ಬಜೆಟ್‌ಗೆ ಅನುಗುಣವಾದ ಅತಿಥಿ ಗೃಹಗಳು, ವಸತಿಗೃಹಗಳು ಮತ್ತು ಹೊಟೇಲ್ ಗಳು ಲಭ್ಯವಿದೆ. ಸಮಂಜಸವಾದ ದರದಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ಸ್ವಚ್ಛ ಕೊಠಡಿಗಳನ್ನು ಒದಗಿಸುವ ಬಜೆಟ್ ಸ್ನೇಹಿ ಹೊಟೇಲ್‌ಗಳಲ್ಲಿ ಉಳಿಯಬಹುದು.

ಇದರೊಂದಿಗೆ ದ್ವಾರಕಾದಲ್ಲಿನ ಹಲವಾರು ಅತಿಥಿಗೃಹಗಳು ಮತ್ತು ಬಜೆಟ್ ಸ್ನೇಹಿ ಹೊಟೇಲ್ ಗಳು ರಿಯಾಯಿತಿ ದರದಲ್ಲಿ ಹತ್ತಿರದ ಆಕರ್ಷಣೆಗಳಿಗೆ ವಸತಿ, ಊಟ ಮತ್ತು ಸಾರಿಗೆಯನ್ನು ಒಳಗೊಂಡಿರುವ ಪ್ಯಾಕೇಜ್ ಡೀಲ್‌ಗಳನ್ನು ಒದಗಿಸುತ್ತದೆ. ಹೆಚ್ಚು ಖರ್ಚು ಮಾಡದೇ ಇದರ ಪ್ರಯೋಜನವನ್ನು ಪಡೆಯಬಹುದು.

Continue Reading

ದೇಶ

Narendra Modi: 75 ವರ್ಷ ದಾಟಿದರೂ ಮೋದಿ ಪ್ರಧಾನಿ ಸ್ಥಾನದಲ್ಲಿರುತ್ತಾರಾ? ಅಮಿತ್‌ ಶಾ ಹೇಳಿದ್ದಿಷ್ಟು

Narendra Modi: ನರೇಂದ್ರ ಮೋದಿ ಅವರಿಗೆ 2025ರಲ್ಲಿ 75 ವರ್ಷ ತುಂಬುತ್ತದೆ. ಅದಾದ ಬಳಿಕ ಅವರು ಪ್ರಧಾನಿ ಸ್ಥಾನದಲ್ಲಿ ಇರಲ್ಲ ಎಂದು ಅರವಿಂದ್‌ ಕೇಜ್ರಿವಾಲ್‌ ಅವರು ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿರುವ ಅಮಿತ್‌ ಶಾ (Amit Shah), “ನರೇಂದ್ರ ಮೋದಿ ಅವರು ಮೂರನೇ ಅವಧಿಯನ್ನು ಪೂರ್ಣಗೊಳಿಸುತ್ತಾರೆ” ಎಂದಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಇದನ್ನೇ ಹೇಳಿದ್ದಾರೆ.

VISTARANEWS.COM


on

Narendra Modi
Koo

ಹೈದರಾಬಾದ್: ಅಬಕಾರಿ ನೀತಿ ಜಾರಿ ಹಗರಣದಲ್ಲಿ ಜೈಲುಪಾಲಾಗಿ, ಮಧ್ಯಂತರ ಜಾಮೀನು ಪಡೆದು ಬಿಡುಗಡೆಯಾಗಿ ಹೊರಬರುತ್ತಲೇ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi), ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ನರೇಂದ್ರ ಮೋದಿ ಅವರಿಗೆ 2025ರಲ್ಲಿ 75 ವರ್ಷ ತುಂಬುತ್ತದೆ. ಅದಾದ ಬಳಿಕ ಅವರು ಪ್ರಧಾನಿ ಸ್ಥಾನದಲ್ಲಿ ಇರಲ್ಲ” ಎಂದು ಹೇಳಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಅಮಿತ್‌ ಶಾ (Amit Shah), “ನರೇಂದ್ರ ಮೋದಿ ಅವರು ಮೂರನೇ ಅವಧಿಯನ್ನು ಪೂರ್ಣಗೊಳಿಸುತ್ತಾರೆ” ಎಂದಿದ್ದಾರೆ.

“ಅರವಿಂದ್‌ ಕೇಜ್ರಿವಾಲ್‌ ಅವರಿಗೆ ನಾನೊಂದು ವಿಷಯ ತಿಳಿಸುತ್ತೇನೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗುತ್ತಾರೆ ಹಾಗೂ ಮೂರನೇ ಅವಧಿಯನ್ನು ಅವರು ಪೂರ್ಣಗೊಳಿಸುತ್ತಾರೆ. ಇಂಡಿಯಾ ಒಕ್ಕೂಟವೂ ಅಷ್ಟೇ, ಮೋದಿ ಅವರಿಗೆ 75 ವರ್ಷ ತುಂಬುತ್ತದೆ ಎಂಬ ಖುಷಿ ಬೇಡ. 75 ವರ್ಷ ದಾಟಿದ ನಂತರ ಎಲ್ಲೂ ಪ್ರಧಾನಿಯಾಗಬಾರದು ಎಂಬ ನಿಯಮಗಳು ಬಿಜೆಪಿ ಸಂವಿಧಾನದಲ್ಲಿ ಪ್ರಸ್ತಾಪಿಸಿಲ್ಲ. ಹಾಗಾಗಿ, ಮೋದಿ ಅವರು ಮೂರನೇ ಅವಧಿಯನ್ನು ಪೂರ್ಣಗೊಳಿಸುವುದು ನಿಶ್ಚಿತ” ಎಂದು ಹೈದರಾಬಾದ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‌ನಡ್ಡಾ ಕೂಡ ಪ್ರತಿಕ್ರಿಯೆ

ಅರವಿಂದ್‌ ಕೇಜ್ರಿವಾಲ್‌ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. “ನರೇಂದ್ರ ಮೋದಿ ಅವರನ್ನು ಸೋಲಿಸಲಾಗದವರು ಈಗ ವಯಸ್ಸಿನ ವಿಚಾರ ಮುನ್ನೆಲೆಗೆ ತಂದಿದ್ದಾರೆ. ಆದರೆ, ಪ್ರಧಾನಿಯಾಗಿ ಮುಂದುವರಿಯಲು ವಯಸ್ಸಿನ ಮಿತಿ ಕುರಿತು ಬಿಜೆಪಿ ಸಂವಿಧಾನದಲ್ಲಿ ಉಲ್ಲೇಖವಾಗಿಲ್ಲ. ನರೇಂದ್ರ ಮೋದಿ ಅವರೇ ನಮ್ಮ ನಾಯಕ ಹಾಗೂ ಭವಿಷ್ಯದಲ್ಲೂ ಅವರೇ ನಾಯಕರಾಗಿ ಇರಲಿದ್ದಾರೆ” ಎಂದಿದ್ದಾರೆ.

ಕೇಜ್ರಿವಾಲ್‌ ನಡೆಸಿದ ವಾಗ್ದಾಳಿ ಹೀಗಿತ್ತು…

ಜೈಲಿನಿಂದ ಬಿಡುಗಡೆಯಾದ ಬಳಿಕ ಮೊದಲ ಸುದ್ದಿಗೋಷ್ಠಿ ನಡೆಸಿದ ಕೇಜ್ರಿವಾಲ್‌, ಹಲವು ವಿಚಾರಗಳನ್ನು ಪ್ರಸ್ತಾಪಿಸಿ ಬಿಜೆಪಿ ವಿರುದ್ಧ ಆರೋಪ ಮಾಡಿದರು. “ನರೇಂದ್ರ ಮೋದಿ ಅವರಿಗೆ ಬೇರೆಯವರು ಬೆಳೆಯುವುದು ಇಷ್ಟವಿಲ್ಲ. ದೇಶಕ್ಕೆ ಒಬ್ಬನೇ ನಾಯಕ ಬೇಕು, ಅದು ಅವರೇ ಆಗಿರಬೇಕು. ಈಗಾಗಲೇ ಎಲ್‌.ಕೆ.ಅಡ್ವಾಣಿ, ಮುರಳಿ ಮನೋಹರ ಜೋಶಿ, ಶಿವರಾಜ್‌ ಸಿಂಗ್‌ ಚೌಹಾಣ್‌, ವಸುಂಧರಾ ರಾಜೆ, ಮನೋಹರ ಲಾಲ್‌ ಖಟ್ಟರ್‌, ರಮಣ್‌ ಸಿಂಗ್‌ ಸೇರಿ ಹಲವು ನಾಯಕರ ರಾಜಕೀಯ ಜೀವನವನ್ನು ಮೋದಿ ಕೊನೆಗೊಳಿಸಿದ್ದಾರೆ. ಶೀಘ್ರದಲ್ಲೇ, ಯೋಗಿ ಆದಿತ್ಯನಾಥ್‌ ಅವರ ರಾಜಕೀಯ ಜೀವನವನ್ನೂ ಇವರು ಕೊನೆಗಾಣಿಸಲಿದ್ದಾರೆ” ಎಂದು ದೂರಿದರು.

“ನರೇಂದ್ರ ಮೋದಿ ಅವರೇನಾದರೂ ಮತ್ತೆ ಪ್ರಧಾನಿಯಾದರೆ, ಅಧಿಕಾರ ವಹಿಸಿಕೊಂಡ ಎರಡೇ ತಿಂಗಳಿಗೆ ಯೋಗಿ ಆದಿತ್ಯನಾಥ್‌ ಅವರ ಬದಲಿಗೆ ಬೇರೆಯವರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸಲಿದ್ದಾರೆ. ಆದರೆ, ನಮ್ಮ ದೇಶದ ಇತಿಹಾಸವೇ ಬೇರೆ ಇದೆ. ದೇಶದಲ್ಲಿ ಇದುವರೆಗೆ ಯಾರೆಲ್ಲ ಸರ್ವಾಧಿಕಾರ ಮಾಡಲು ಹೊರಟಿದ್ದರೋ, ಅವರನ್ನೆಲ್ಲ ಜನ ಮನೆಗೆ ಕಳುಹಿಸಿದ್ದಾರೆ. ಈಗ ಮತ್ತೆ ಸರ್ವಾಧಿಕಾರಿಗಳು ಪ್ರಜಾಪ್ರಭುತ್ವವನ್ನು ಕೊನೆಗಾಣಿಸಲು ಯತ್ನಿಸುತ್ತಿದ್ದಾರೆ. ಆದರೆ, ದೇಶದ 140 ಕೋಟಿ ಜನ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕು ಎಂಬುದೇ ನನ್ನ ಮನವಿಯಾಗಿದೆ” ಎಂದರು.

ಇದನ್ನೂ ಓದಿ: ಮೋದಿಯಿಂದ ಯೋಗಿ ಆದಿತ್ಯನಾಥ್‌ ರಾಜಕೀಯ ಜೀವನ ಶೀಘ್ರದಲ್ಲೇ ಖತಂ; ಕೇಜ್ರಿವಾಲ್‌ ಸ್ಫೋಟಕ ಭವಿಷ್ಯ

Continue Reading

ದೇಶ

Lok Sabha Election: 3ನೇ ಹಂತದಲ್ಲಿ 65% ಮತದಾನ; ಕರ್ನಾಟಕದಲ್ಲಿ ಶೇ.71.84ರಷ್ಟು ಹಕ್ಕು ಚಲಾವಣೆ

Lok Sabha Election: ಮೂರನೇ ಹಂತದಲ್ಲಿ ಅಸ್ಸಾಂನಲ್ಲಿ ಅತಿ ಹೆಚ್ಚು ಮತದಾನ ದಾಖಲಾಗಿದೆ. ಅಸ್ಸಾಂನಲ್ಲಿ ಶೇ.85.45, ಗೋವಾದಲ್ಲಿ ಶೇ.76.06, ಉತ್ತರ ಪ್ರದೇಶ ಶೇ.57.55 ಹಾಗೂ ಬಿಹಾರದಲ್ಲಿ ಶೇ.59.15ರಷ್ಟು ಮತದಾನ ದಾಖಲಾಗಿದೆ. ಕರ್ನಾಟಕದ 14 ಸೇರಿ ಒಟ್ಟು 93 ಲೋಕಸಭೆ ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು. ಕರ್ನಾಟಕದಲ್ಲಿ ಶೇ.71.84ರಷ್ಟು ಮತದಾನ ದಾಖಲಾಗಿದೆ.

VISTARANEWS.COM


on

Lok Sabha Election
Koo

ನವದೆಹಲಿ: ಕರ್ನಾಟಕ ಸೇರಿ ದೇಶದ 11 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ಲೋಕಸಭೆ ಚುನಾವಣೆಯ (Lok Sabha Election 2024) ಮೂರನೇ ಹಂತದ ಮತದಾನವು ಮೇ 7ರಂದು ನಡೆದಿದ್ದು, ಮತದಾನ ಪ್ರಮಾಣದ (Voter Turnout) ಕುರಿತು ಚುನಾವಣೆ ಆಯೋಗವು ನಿಖರ ಮಾಹಿತಿ ಒದಗಿಸಿದೆ. ಮೂರನೇ ಹಂತದಲ್ಲಿ ಒಟ್ಟು ಶೇ.65.68ರಷ್ಟು ಮತದಾನ ದಾಖಲಾಗಿದೆ. ಕರ್ನಾಟಕದಲ್ಲಿ ಶೇ.71.84ರಷ್ಟು ಮತದಾನ ದಾಖಲಾಗಿದೆ ಎಂಬುದಾಗಿ ಚುನಾವಣೆ ಆಯೋಗವು (Election Commission) ಮಾಹಿತಿ ನೀಡಿದೆ.

ಅಸ್ಸಾಂನಲ್ಲಿ ಅತಿ ಹೆಚ್ಚು ಮತದಾನ

ಮೂರನೇ ಹಂತದಲ್ಲಿ ಅಸ್ಸಾಂನಲ್ಲಿ ಅತಿ ಹೆಚ್ಚು ಮತದಾನ ದಾಖಲಾಗಿದೆ. ಅಸ್ಸಾಂನಲ್ಲಿ ಶೇ.85.45, ಗೋವಾದಲ್ಲಿ ಶೇ.76.06, ಉತ್ತರ ಪ್ರದೇಶ ಶೇ.57.55 ಹಾಗೂ ಬಿಹಾರದಲ್ಲಿ ಶೇ.59.15ರಷ್ಟು ಮತದಾನ ದಾಖಲಾಗಿದೆ. ಕರ್ನಾಟಕದ 14 ಸೇರಿ ಒಟ್ಟು 93 ಲೋಕಸಭೆ ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು. ಪಶ್ಚಿಮ ಬಂಗಾಳ ಹೊರತುಪಡಿಸಿ ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿಯೇ ಮತದಾನ ನಡೆದಿತ್ತು.

ರಾಜ್ಯವಾರು ಮತದಾನ ಪ್ರಮಾಣ

ದೇಶದ ಹಲವೆಡೆ ಮೊದಲ ಹಂತದಲ್ಲಿ ನಡೆದ ಮತದಾನ ಪ್ರಮಾಣವು ಶೇ.66.14ರಷ್ಟಿದ್ದರೆ, ಎರಡನೇ ಹಂತದಲ್ಲಿ ಶೇ.66.71ರಷ್ಟು ಮತದಾನ ದಾಖಲಾಗಿತ್ತು. ಇದು ಕೂಡ 2019ರ ಲೋಕಸಭೆ ಚುನಾವಣೆಗಿಂತ ಕಡಿಮೆ ಪ್ರಮಾಣದ ಮತದಾನವಾಗಿದೆ ಎಂದು ತಿಳಿದುಬಂದಿದೆ. ಏಪ್ರಿಲ್‌ 19ರಿಂದ ಲೋಕಸಭೆ ಚುನಾವಣೆ ಆರಂಭವಾಗಿದ್ದು, ಇದುವರೆಗೆ ಮೂರು ಹಂತಗಳ ಮತದಾನ ಮುಕ್ತಾಯವಾಗಿದೆ. ಜೂನ್‌ 1ರಂದು ಕೊನೆಯ ಹಂತದ ಮತದಾನ ನಡೆಯಲಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕದಲ್ಲಿ ಜಿಲ್ಲಾವಾರು ಮತದಾನ ಪ್ರಮಾಣ

ಮೇ 13ರಂದು 4ನೇ ಹಂತದ ಮತದಾನ

ಮೇ 13ರಂದು ನಾಲ್ಕನೇ ಹಂತದ ಮತದಾನ ನಡೆಯಲಿದ್ದು, ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. 10 ರಾಜ್ಯಗಳ 96 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ನಾಲ್ಕನೇ ಹಂತದಲ್ಲಿ ಆಂಧ್ರಪ್ರದೇಶದ 25, ಬಿಹಾರ 5, ಜಮ್ಮು-ಕಾಶ್ಮೀರ 1, ಜಾರ್ಖಂಡ್ 4, ಮಧ್ಯಪ್ರದೇಶ 8, ಮಹಾರಾಷ್ಟ್ರ 11, ಒಡಿಶಾ 4, ತೆಲಂಗಾಣ 17, ಉತ್ತರ ಪ್ರದೇಶ 13 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಮೇ 13 ರಂದು ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯೂ ನಡೆಯಲಿದೆ. ಆಂಧ್ರಪ್ರದೇಶದ 175 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಮೋದಿಯಿಂದ ಯೋಗಿ ಆದಿತ್ಯನಾಥ್‌ ರಾಜಕೀಯ ಜೀವನ ಶೀಘ್ರದಲ್ಲೇ ಖತಂ; ಕೇಜ್ರಿವಾಲ್‌ ಸ್ಫೋಟಕ ಭವಿಷ್ಯ

Continue Reading

ದೇಶ

ಮೋದಿಯಿಂದ ಯೋಗಿ ಆದಿತ್ಯನಾಥ್‌ ರಾಜಕೀಯ ಜೀವನ ಶೀಘ್ರದಲ್ಲೇ ಖತಂ; ಕೇಜ್ರಿವಾಲ್‌ ಸ್ಫೋಟಕ ಭವಿಷ್ಯ

ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್‌ ಕೇಜ್ರಿವಾಲ್‌ ಅವರು ಸುದ್ದಿಗೋಷ್ಠಿ ನಡೆಸಿದರು. ಇದೇ ವೇಳೆ ಅವರು ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ನರೇಂದ್ರ ಮೋದಿ ಅವರೇನಾದರೂ ಮತ್ತೆ ಪ್ರಧಾನಿಯಾದರೆ, ಅಧಿಕಾರ ವಹಿಸಿಕೊಂಡ ಎರಡೇ ತಿಂಗಳಿಗೆ ಯೋಗಿ ಆದಿತ್ಯನಾಥ್‌ ಅವರ ಬದಲಿಗೆ ಬೇರೆಯವರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸಲಿದ್ದಾರೆ ಎಂದು ಆರೋಪಿಸಿದರು.

VISTARANEWS.COM


on

Arvind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ (Delhi Excise Policy Case) ಜೈಲು ಪಾಲಾಗಿ, ಮಧ್ಯಂತರ ಜಾಮೀನು ಪಡೆದು ಹೊರಬಂದಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರು ನರೇಂದ್ರ ಮೋದಿ (Narendra Modi) ವಿರುದ್ಧ ವಾಗ್ದಾಳಿ ನಡೆಸಿದರು. “ಒಂದು ದೇಶ, ಒಬ್ಬ ನಾಯಕ ಎಂಬುದು ನರೇಂದ್ರ ಮೋದಿ ಅವರ ಮಿಷನ್‌ ಆಗಿದೆ. ಅವರೇನಾದರೂ ಮತ್ತೆ ಪ್ರಧಾನಿಯಾದರೆ, ಉತ್ತರ ಪ್ರದೇಶದ ಮುಖ್ಯಮಂತ್ರಿಯನ್ನು ಬದಲಿಸಲಿದ್ದಾರೆ” ಎಂದು ಜೈಲಿನಿಂದ ಬಿಡುಗಡೆಯಾದ ಬಳಿಕ ನಡೆಸಿದ ಮೊದಲ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

“ನರೇಂದ್ರ ಮೋದಿ ಅವರಿಗೆ ಬೇರೆಯವರು ಬೆಳೆಯುವುದು ಇಷ್ಟವಿಲ್ಲ. ದೇಶಕ್ಕೆ ಒಬ್ಬನೇ ನಾಯಕ ಬೇಕು, ಅದು ಅವರೇ ಆಗಿರಬೇಕು. ಈಗಾಗಲೇ ಎಲ್‌.ಕೆ.ಅಡ್ವಾಣಿ, ಮುರಳಿ ಮನೋಹರ ಜೋಶಿ, ಶಿವರಾಜ್‌ ಸಿಂಗ್‌ ಚೌಹಾಣ್‌, ವಸುಂಧರಾ ರಾಜೆ, ಮನೋಹರ ಲಾಲ್‌ ಖಟ್ಟರ್‌, ರಮಣ್‌ ಸಿಂಗ್‌ ಸೇರಿ ಹಲವು ನಾಯಕರ ರಾಜಕೀಯ ಜೀವನವನ್ನು ಮೋದಿ ಕೊನೆಗೊಳಿಸಿದ್ದಾರೆ. ಶೀಘ್ರದಲ್ಲೇ, ಯೋಗಿ ಆದಿತ್ಯನಾಥ್‌ ಅವರ ರಾಜಕೀಯ ಜೀವನವನ್ನೂ ಇವರು ಕೊನೆಗಾಣಿಸಲಿದ್ದಾರೆ” ಎಂದು ದೂರಿದರು.

“ನರೇಂದ್ರ ಮೋದಿ ಅವರೇನಾದರೂ ಮತ್ತೆ ಪ್ರಧಾನಿಯಾದರೆ, ಅಧಿಕಾರ ವಹಿಸಿಕೊಂಡ ಎರಡೇ ತಿಂಗಳಿಗೆ ಯೋಗಿ ಆದಿತ್ಯನಾಥ್‌ ಅವರ ಬದಲಿಗೆ ಬೇರೆಯವರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸಲಿದ್ದಾರೆ. ಆದರೆ, ನಮ್ಮ ದೇಶದ ಇತಿಹಾಸವೇ ಬೇರೆ ಇದೆ. ದೇಶದಲ್ಲಿ ಇದುವರೆಗೆ ಯಾರೆಲ್ಲ ಸರ್ವಾಧಿಕಾರ ಮಾಡಲು ಹೊರಟಿದ್ದರೋ, ಅವರನ್ನೆಲ್ಲ ಜನ ಮನೆಗೆ ಕಳುಹಿಸಿದ್ದಾರೆ. ಈಗ ಮತ್ತೆ ಸರ್ವಾಧಿಕಾರಿಗಳು ಪ್ರಜಾಪ್ರಭುತ್ವವನ್ನು ಕೊನೆಗಾಣಿಸಲು ಯತ್ನಿಸುತ್ತಿದ್ದಾರೆ. ಆದರೆ, ದೇಶದ 140 ಕೋಟಿ ಜನ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕು ಎಂಬುದೇ ನನ್ನ ಮನವಿಯಾಗಿದೆ” ಎಂದರು.

“ನಾನು ಮಾತ್ರವಲ್ಲ ಪ್ರತಿಪಕ್ಷಗಳ ಇನ್ನೂ ಹಲವು ನಾಯಕರನ್ನು ಅವರು ಜೈಲಿಗೆ ಕಳುಹಿಸಲಿದ್ದಾರೆ. ಆ ಮೂಲಕ ಅವರ ರಾಜಕೀಯ ಜೀವನವನ್ನು ಅಂತ್ಯಗೊಳಿಸಲಿದ್ದಾರೆ. ಈಗಾಗಲೇ ನಮ್ಮ ಪಕ್ಷದ ಸಚಿವರು, ಜಾರ್ಖಂಡ್‌ ಮುಖ್ಯಮಂತ್ರಿಯಾಗಿದ್ದ ಹೇಮಂತ್‌ ಸೊರೇನ್‌, ಟಿಎಂಸಿ ಸಚಿವರನ್ನು ಜೈಲಿಗೆ ಕಳುಹಿಸಲಾಗಿದೆ. ಹಾಗೇನಾದರೂ ಬಿಜೆಪಿಯೇ ಮತ್ತೆ ಗೆದ್ದರೆ, ಮಮತಾ ಬ್ಯಾನರ್ಜಿ, ಎಂ.ಕೆ.ಸ್ಟಾಲಿನ್‌, ಆರ್‌ಜೆಡಿಯ ತೇಜಸ್ವಿ ಯಾದವ್‌, ಕೇರಳ ಸಿಎಂ ಪಿಣರಾಯಿ ವಿಜಯನ್‌ ಸೇರಿ ಇನ್ನೂ ಹಲವರು ಜೈಲು ಸೇರಲಿದ್ದಾರೆ. ಕೆಲವರ ರಾಜಕೀಯ ಜೀವನ ಅಂತ್ಯಗೊಳಿಸಲು ತಮ್ಮದೇ ಪಕ್ಷದ ನಾಯಕರನ್ನು ಕೂಡ ಜೈಲಿಗೆ ಕಳುಹಿಸಲಿದ್ದಾರೆ” ಎಂದು ಗಂಭೀರ ಆರೋಪ ಮಾಡಿದರು.

ಇದನ್ನೂ ಓದಿ: Arvind Kejriwal: ಜೈಲಿನಿಂದ ಬಂದ ಕೇಜ್ರಿವಾಲ್‌ಗೆ ಆರತಿ ಬೆಳಗಿ, ಹೂ ಹಾರ ಹಾಕಿ ಸ್ವಾಗತಿಸಿದ ತಾಯಿ! ವಿಡಿಯೊ ನೋಡಿ

Continue Reading
Advertisement
Protein Supplements
ಆರೋಗ್ಯ29 mins ago

Protein Supplements: ಪ್ರೊಟಿನ್‌ ಸಪ್ಲಿಮೆಂಟ್‌ನ ಸೈಡ್‌ ಎಫೆಕ್ಟ್‌ ಏನೇನು? ರಾಷ್ಟ್ರೀಯ ಪೌಷ್ಟಿಕಾಂಶ ಸಂಸ್ಥೆಯ ಸೂಚನೆ ಇಲ್ಲಿದೆ

Shankara Jayanti 2024
ಧಾರ್ಮಿಕ44 mins ago

Shankara Jayanti 2024: ಇಂದು ಶಂಕರ ಜಯಂತಿ; ಶಂಕರಾಚಾರ್ಯರ ಕುರಿತ 9 ಕುತೂಹಲಕರ ಸಂಗತಿಗಳು

International Nurses’s Day
ಆರೋಗ್ಯ59 mins ago

International Nurses’s Day: ಇಂದು ನರ್ಸ್‌ಗಳ ದಿನ; ಈ ದಿನಾಚರಣೆ ಹಿನ್ನೆಲೆ ಏನು?

Dina Bhavishya
ಭವಿಷ್ಯ59 mins ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

IPL 2024
ಪ್ರಮುಖ ಸುದ್ದಿ5 hours ago

IPL 2024 : ಮುಂಬೈ ವಿರುದ್ಧ 18 ರನ್ ಜಯ, ಪ್ಲೇಆಫ್​ ಪ್ರವೇಶಿಸಿದ ಕೆಕೆಆರ್​ ತಂಡ

car catches fire
ಕ್ರೈಂ6 hours ago

Car Catches Fire: ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ

jay Shah
ಪ್ರಮುಖ ಸುದ್ದಿ7 hours ago

Jay Shah : ದೇಶಿಯ ಕ್ರಿಕೆಟ್​ನಲ್ಲಿ ಭಾರೀ ಬದಲಾವಣೆಗಳ ಸೂಚನೆ ನೀಡಿದ ಜಯ್​ ಶಾ

ಬೆಂಗಳೂರು7 hours ago

Child Actor Master OM: ಓದಿಗೂ ಸೈ, ಮಾಡೆಲಿಂಗ್‌ಗೂ ಸೈ ಈ ಸೂಪರ್‌ ಟೀನ್‌ ಮಾಡೆಲ್‌ ಮಾಸ್ಟರ್‌ ಓಂ!

ಬೆಂಗಳೂರು8 hours ago

LuLu Fashion Week 2024: ಲುಲು ಫ್ಯಾಷನ್ ವೀಕ್ 2024; ಕಲರ್ ಫುಲ್ ಬಟ್ಟೆ ತೊಟ್ಟು ಕಂಗೊಳಿಸಿದ ನಾರಿಮಣಿಗಳು

IPL 2024
ಕ್ರಿಕೆಟ್8 hours ago

IPL 2024 : ಗುಜರಾತ್​ ತಂಡ ಸೇರಿದ ಗುರ್ನೂರ್ ಬ್ರಾರ್; ಎಲ್ಲಿಯ ಆಟಗಾರ ಇವರು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ59 mins ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು15 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

ಟ್ರೆಂಡಿಂಗ್‌