South Cinema | ದಕ್ಷಿಣ ಭಾರತದ ಸಿನಿ ರಂಗಕ್ಕೆ ಬಾಲಿವುಡ್‌ ತಾರೆಯರ ಎಂಟ್ರಿ: ಸಿನಿಮಾಗಳು ಬಿಡುಗಡೆಗೆ ಸಜ್ಜು - Vistara News

ಬಾಲಿವುಡ್

South Cinema | ದಕ್ಷಿಣ ಭಾರತದ ಸಿನಿ ರಂಗಕ್ಕೆ ಬಾಲಿವುಡ್‌ ತಾರೆಯರ ಎಂಟ್ರಿ: ಸಿನಿಮಾಗಳು ಬಿಡುಗಡೆಗೆ ಸಜ್ಜು

ದಕ್ಷಿಣ ಭಾರತದ ಸಿನಿಮಾ (south Cinema) ಚಿತ್ರರಂಗಕ್ಕೆ ಬಾಲಿವುಡ್‌ ತಾರೆಯರು ಎಂಟ್ರಿ ಕೊಡುತ್ತಿದ್ದಾರೆ. ಸಾಲು ಸಾಲು ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿವೆ.

VISTARANEWS.COM


on

South Cinema
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದಕ್ಷಿಣ ಭಾರತದ ಸಿನಿಮಾ (south Cinema) ಚಿತ್ರರಂಗಕ್ಕೆ ಕೆಲವು ವರ್ಷಗಳಿಂದ ಮುಟ್ಟಿದ್ದೆಲ್ಲ ಚಿನ್ನವಾಗುತ್ತಿದೆ. ಸಾಲು ಸಾಲು ಹಿಟ್‌ ಸಿನಿಮಾಗಳನ್ನು ನೀಡಿ ಪ್ಯಾನ್‌ ಇಂಡಿಯಾದಲ್ಲೂ ಹವಾ ಸೃಷ್ಟಿ ಮಾಡಿದೆ. ಬಾಹುಬಲಿ, ಪುಷ್ಪಾ ದಿ ರೈಸ್‌, ಕೆಜಿಎಫ್‌-2 ಸಿನಿಮಾಗಳು ಬಾಕ್ಸ್‌ ಆಫೀಸ್‌ನಲ್ಲಿ ಯಶಸ್ಸು ಪಡೆದುಕೊಂಡಿದೆ. ಇದೀಗ ಹಿಂದಿ ಚಿತ್ರರಂಗದ ಕೆಲವು ಬಿಗ್‌ ಸ್ಟಾರ್ಸ್‌ಗಳು ದಕ್ಷಿಣ ಚಿತ್ರರಂಗಕ್ಕೆ ಮುಖ ಮಾಡಿದ್ದಾರೆ.

ಐಶ್ವರ್ಯಾ ರೈ
ಮಣಿರತ್ನಂ ನಿರ್ದೆಶನದ ಬಹು ನಿರೀಕ್ಷೆಯ ಐತಿಹಾಸಿಕ ಚಿತ್ರ ಪೊನ್ನಿಯನ್ ಸೆಲ್ವನ್ ಭಾಗ-1 (Ponniyin Selvan: I) ಸಿನಿಮಾದಲ್ಲಿ ಬಹಳ ಸಮಯದ ನಂತರ ಬೆಳ್ಳಿ ಪರದೆಯ ಮೇಲೆ ಐಶ್ವರ್ಯಾ ರೈ ಕಾಣಿಸಿಕೊಳ್ಳಲಿದ್ದಾರೆ. ಐತಿಹಾಸಿಕ ಕಥಾ ಹಂದರವುಳ್ಳ ಈ ಸಿನಿಮಾ ಪ್ರಾಚೀನ ತಮಿಳು ರಾಜಮನೆತನ ಚೋಳರಾಜರ ಕುರಿತಾಗಿನ ಕತೆಯನ್ನು ಹೊಂದಿದೆ. ಚಿತ್ರದಲ್ಲಿ ನಟಿ ಐಶ್ವರ್ಯ ರೈ ಪಳುವೂರಿನ ರಾಣಿ ನಂದಿನಿಯಾಗಿ ಕಣ್ಮನ ಸೆಳೆದಿದ್ದಾರೆ. ಇನ್ನು ಪೊನ್ನಿಯನ್ ಸೆಲ್ವನ್ ಸಿನಿಮಾ ಮಾಡಬೇಕೆಂಬುದು ತಮಿಳುನಾಡಿನಲ್ಲಿ ಎಂಜಿಆರ್ ಕಾಲದಿಂದಲೂ ಕನಸಾಗಿತ್ತು. ಮಣಿರತ್ನಂ ಈಗ ಇದನ್ನು ನನಸಾಗಿಸಿದ್ದಾರೆ. ಚಿತ್ರದ ಮೊದಲ ಭಾಗ ಸೆಪ್ಟೆಂಬರ್ 30ರಂದು ಪಂಚ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಐಶ್ವರ್ಯಾ ರೈ ಬಚ್ಚನ್​, ವಿಕ್ರಮ್​, ತ್ರಿಷಾ, ಜಯಂ ರವಿ, ಕಾರ್ತಿ, ಪ್ರಕಾಶ್​ ರಾಜ್​ ಸೇರಿದಂತೆ ಅನೇಕರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ | Kajol | ಚಿತ್ರರಂಗದಲ್ಲಿ 30 ವರ್ಷ ಪೂರೈಸಿದ ನಟಿ ಕಾಜೋಲ್‌: ಅಜಯ್‌ ದೇವಗನ್‌ ಹೇಳಿದ್ದೇನು?

South Cinema

ಕಿಯಾರಾ ಆಡ್ವಾಣಿ
ತೆಲುಗು ಸ್ಟಾರ್‌ ನಟ ರಾಮ್ ಚರಣ್ ಜತೆ ಕಿಯಾರಾ ಆಡ್ವಾಣಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಶಂಕರ್‌ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಸಂದರ್ಶನವೊಂದರಲ್ಲಿ, ರಾಮ್ ಚರಣ್ “ಸರ್ಕಾರೋಡುʼ ಸಿನಿಮಾ ಬಗ್ಗೆ ಹಂಚಿಕೊಂಡಿದ್ದಾರೆ. ಸರ್ಕಾರೋಡು (Sarkarodu) ಅನೇಕ ಪ್ರಾಮಾಣಿಕ ಅಧಿಕಾರಿಗಳ ಜೀವನದಿಂದ ಪ್ರೇರಿತವಾಗಿದೆ ಎಂದವರು ಬಹಿರಂಗಪಡಿಸಿದ್ದಾರೆ. ಈ ಸಿನಿಮಾ 2023ರಲ್ಲಿ ತೆರೆಗೆ ಬರುವ ನಿರೀಕ್ಷೆ ಇದೆ.

South Cinema

ದೀಪಿಕಾ ಪಡುಕೋಣೆ
ಪ್ರಾಜೆಕ್ಟ್ ಕೆ (K) ಎಂಬುದು ಪ್ರಭಾಸ್ ಅಭಿನಯದ ನಾಗ್ ಅಶ್ವಿನ್ ನಿರ್ದೇಶನದ ಇತ್ತೀಚಿನ ಬೃಹತ್ ವೈಜ್ಞಾನಿಕ ಕಾಲ್ಪನಿಕ ಸಿನಿಮಾ. ನಾಯಕಿಯಾಗಿ ದೀಪಿಕಾ ಪಡುಕೋಣೆ ನಟಿಸುತ್ತಿದ್ದಾರೆ. ಮತ್ತೊಂದು ಪ್ರಮುಖ ಪಾತ್ರದಲ್ಲಿ ಬಿಗ್ ಬಿ ಅಮಿತಾಭ್ ‌ಬಚ್ಚನ್‌ ನಟಿಸುತ್ತಿದ್ದಾರೆ. ಚಿತ್ರ ಈಗಾಗಲೇ ಶೇ. 55ರಷ್ಟು ಚಿತ್ರೀಕರಣವನ್ನು ಪೂರ್ಣಗೊಳಿಸಿದೆ. ಇತ್ತೀಚೆಗೆ ಮತ್ತೊಂದು ಶೆಡ್ಯೂಲ್ ಶುರುವಾಗಿದೆ. ಈ ಸಿನಿಮಾ ಭಾರತೀಯ ಮಹಾಕಾವ್ಯ ಮಹಾಭಾರತದಿಂದ ಪ್ರೇರಿತವಾಗಿದ್ದು, ಮೂರನೇ ಮಹಾಯುದ್ಧದ ಹಿನ್ನೆಲೆಯಲ್ಲಿ ಈ ಸಿನಿಮಾ ಮಾಡಲಾಗಿದೆ ಎನ್ನಲಾಗುತ್ತಿದೆ.

South Cinema

ಸಲ್ಮಾನ್‌ ಖಾನ್‌
ತೆಲುಗು ಚಿತ್ರ ಗಾಡ್‌ ಫಾದರ್‌ನಲ್ಲಿ (GodFather) ಬಾಲಿವುಡ್ ಸ್ಟಾರ್‌ ಸಲ್ಮಾನ್ ಖಾನ್ ಮತ್ತು ಮೆಗಾಸ್ಟಾರ್ ಚಿರಂಜೀವಿ ಮೊದಲ ಬಾರಿಗೆ ಒಟ್ಟಿಗೇ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಅಂದಹಾಗೆ ಗಾಡ್‌ಫಾದರ್ ಸಿನಿಮಾದಲ್ಲಿ ಇಬ್ಬರೂ ಒಂದೇ ಫ್ರೇಮ್‌ನಲ್ಲಿ ಡ್ಯಾನ್ಸ್ ಮಾಡುತ್ತಿರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಚಿರಂಜೀವಿ ಅವರು ಇಬ್ಬರ ಪೋಟೋವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿ ಸಲ್ಲು ಜತೆ ಹೆಜ್ಜೆ ಹಾಕಲು ರೆಡಿ ಎಂದು ಬರೆದುಕೊಂಡಿದ್ದರು. ಈ ಡ್ಯಾನ್ಸ್‌ ಅನ್ನು ಪ್ರಭುದೇವ ನಿರ್ದೇಶನ ಮಾಡುತ್ತಿದ್ದಾರೆ ಎಂದು ನಟ ಚಿರಂಜೀವಿ ಬಹಿರಂಗಪಡಿಸಿದ್ದರು. ಮೋಹನ್‌ ರಾಜ್‌ ನಿರ್ದೇಶನದ ಈ ಚಿತ್ರ ಮೋಹನ್‌ಲಾಲ್‌ ಅವರ ನಟನೆಯ ಮಲಯಾಳಂ “ಲೂಸಿಫರ್ʼ ಚಿತ್ರದ ತೆಲುಗು ರಿಮೇಕ್ ಆಗಿದೆ.

South Cinema

ಇದನ್ನೂ ಓದಿ | Sukesh Case | ‘ರಕ್ಕಮ್ಮ’ ಜಾಕ್ವೆಲಿನ್, ನೋರಾ ಬಳಿಕ ಇನ್ನೂ 4 ನಟಿಯರ ವಿಚಾರಣೆ ಸಾಧ್ಯತೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Alka Yagnik: ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ ಬಾಲಿವುಡ್‌ ಖ್ಯಾತ ಹಿನ್ನೆಲೆ ಗಾಯಕಿ

Alka Yagnik: ಏಕ್ ದೋ ತೀನ್, ಕಲ್ ಹೋ ನಾ ಹೋ ಇಂತಹ ಹಿಟ್ ಹಾಡುಗಳನ್ನು ಹಾಡಿ ಸಂಗೀತಪ್ರಿಯರ ಮನತಣಿಸಿದ ಬಾಲಿವುಡ್ ಗಾಯಕಿ ಅಲ್ಕಾ ಯಾಗ್ನಿಕ್ ಅವರು ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರಂತೆ. ಇತ್ತೀಚೆಗೆ ತಮ್ಮ ಇನ್ ಸ್ಟಾಗ್ರಾಂ ಪೇಜ್ ನಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿರುವ ಗಾಯಕಿ ತನಗೆ ಅಪರೂಪದ ಸಂವೇದನಾ ನರಗಳ ಶ್ರವಣ ನಷ್ಟ ರೋಗವಿರುವುದಾಗಿ ತಿಳಿಸಿದ್ದಾರೆ. ಈ ರೋಗದಿಂದ ಬಳಲುವವರು ಇದ್ದಕ್ಕಿದ್ದಂತೆ ಕೇಳಿಸಿಕೊಳ್ಳುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾರಂತೆ. ಅಲ್ಕಾ ಅವರು ಈ ಬಗ್ಗೆ ವೈದ್ಯರ ಬಳಿ ತಪಾಸಣೆ ನಡೆಸಿದಾಗ ರೋಗ ಪತ್ತೆಯಾಗಿದೆಯಂತೆ. ಹಾಗೇ ತನ್ನ ಸಹೋದ್ಯೋಗಿಗಳಿಗೂ ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಲು ಸಲಹೆ ನೀಡಿದ್ದಾರೆ.

VISTARANEWS.COM


on

Alka Yagnik
Koo

ಮುಂಬೈ : ಬಾಲಿವುಡ್‌ನ ಖ್ಯಾತ ಹಿನ್ನಲೆ ಗಾಯಕಿ ಅಲ್ಕಾ ಯಾಗ್ನಿಕ್ (Alka Yagnik) ಅವರು ತಮ್ಮ ಅಭಿಮಾನಿಗಳಿಗೆ ನೋವಿನ ಸುದ್ದಿಯನ್ನು ಕೊಟ್ಟಿದ್ದಾರೆ. ಅದೇನೆಂದರೆ ಅವರು ಅಪರೂಪದ ಕಾಯಿಲೆಯೊಂದರಿಂದ ಬಳಲುತ್ತಿರುವುದಾಗಿ ತಿಳಿಸಿದ್ದಾರೆ.

ಗಾಯಕಿ ಅಲ್ಕಾ ಯಾಗ್ನಿಕ್ ಅವರು ಇತ್ತೀಚೆಗೆ ತಮ್ಮ ಇನ್ ಸ್ಟಾಗ್ರಾಂ ಪೇಜ್ ನಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ತಮಗೆ ಅಪರೂಪದ ಸಂವೇದನಾ ನರಗಳ ಶ್ರವಣ ನಷ್ಟ ರೋಗವಿರುವುದಾಗಿ ತಿಳಿಸಿದ್ದಾರೆ. ಈ ರೋಗದಿಂದ ಬಳಲುವವರು ಇದ್ದಕ್ಕಿದ್ದಂತೆ ಕೇಳಿಸಿಕೊಳ್ಳುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾರಂತೆ. ಅಲ್ಕಾ ಅವರು ಈ ಬಗ್ಗೆ ವೈದ್ಯರ ಬಳಿ ತಪಾಸಣೆ ನಡೆಸಿದಾಗ ರೋಗ ಪತ್ತೆಯಾಗಿದೆಯಂತೆ. ಹಾಗೇ ತನ್ನ ಸಹೋದ್ಯೋಗಿಗಳಿಗೂ ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಲು ಸಲಹೆ ನೀಡಿದ್ದಾರೆ.

ಕೆಲವು ವಾರಗಳ ಹಿಂದೆ ಅವರಿಗೆ ವಿಮಾನ ಪ್ರಯಾಣದ ವೇಳೆ ಏನೂ ಕೇಳುತ್ತಿರಲಿಲ್ಲವಂತೆ. ಆಗ ಈ ಬಗ್ಗೆ ವೈದ್ಯರ ಬಳಿ ತಪಾಸಣೆಗೆ ಹೋದಾಗ ರೋಗದ ವಿಚಾರ ತಿಳಿದುಬಂದಿದೆ. ಹಾಗಾಗಿ ಅವರು ತಮ್ಮ ಗಾಯಕ ವೃತ್ತಿಯಿಂದ ಹಿಂದೆ ಉಳಿದಿದ್ದರಂತೆ. ಈ ಬಗ್ಗೆ ಅವರ ಸ್ನೇಹಿತರು ಹಾಗೂ ಹಿತೈಷಿಗಳು ವಿಚಾರಿಸಲು ಶುರು ಮಾಡಿದ್ದರು. ಅಂದು ಏನನ್ನೂ ಹೇಳಲು ಬಯಸದ ಅವರು ಈಗ ಸ್ವಲ್ಪ ಧೈರ್ಯ ಮಾಡಿ ತಮ್ಮನ್ನು ಕಾಡುತ್ತಿರುವ ಕಾಯಿಲೆಯ ಕುರಿತು ಇನ್ ಸ್ಟಾಗ್ರಾಂ ನಲ್ಲಿ ಬಹಿರಂಗಪಡಿಸಿದ್ದಾರೆ.

ಅಲ್ಕಾ ಅವರ ಸಂವೇದನಾ ನರಗಳಲ್ಲಿ ಸಮಸ್ಯೆಯಾಗಿ ಸರಿಯಾಗಿ ಕೇಳಿಸುವುದಿಲ್ಲವಂತೆ. ಹಾಗಾಗಿ ಅವರು ತಮ್ಮ ಅಭಿಮಾನಿಗಳು ಮತ್ತು ಯುವ ಸಹದ್ಯೋಗಿಗಳಿಗೆ ತುಂಬಾ ಜೋರಾಗಿ ಸಂಗೀತ ಮತ್ತು ಹೆಡ್ ಫೋನ್ ಗಳ ಬಳಕೆ ಮಾಡುವುದನ್ನು ಕಡಿಮೆ ಮಾಡಿ ಎಂದು ಹೇಳಿದ್ದಾರೆ. ಹಾಗೇ ಎಲ್ಲರ ಬೆಂಬಲದೊಂದಿಗೆ ತಾನು ಈ ಕಾಯಿಲೆಯ ವಿರುದ್ಧ ಹೋರಾಡಿ ಅದನ್ನು ಗುಣಪಡಿಸಿಕೊಂಡು ಮತ್ತೆ ತನ್ನ ಜೀವನವನ್ನು ಮೊದಲಿನ ಹಾದಿಯಲ್ಲಿ ತಂದು ನಿಲ್ಲಿಸುವ ಮೂಲಕ ಎಲ್ಲರನ್ನೂ ಸೇರುವ ಆಶಯ ವ್ಯಕ್ತಪಡಿಸಿದ್ದಾರೆ.

ಅವರ ಈ ಪೋಸ್ಟ್ ಗೆ ಹಲವು ಗಾಯಕರು ಬೆಂಬಲ ಸೂಚಿಸುವ ಮೂಲಕ ಕಾಮೆಂಟ್ ಮಾಡಿದ್ದಾರೆ. ಗಾಯಕ ಸೋನು ನಿಗಮ್ ಅವರು ಮತ್ತೆ ಅವರನ್ನು ಮೊದಲಿನಂತೆ ನೋಡುವ ಆಶಯ ವ್ಯಕ್ತಪಡಿಸಿ ಹಾರೈಸಿದ್ದಾರೆ. ಇಲಾ ಅರುಣ್ ಅವರು, ಗಾಯಕಿ ವೈದ್ಯರ ಆರೈಕೆಯಿಂದ ಬಹಳ ಬೇಗನೆ ಚೇತರಿಸಿಕೊಳ್ಳಲಿ ಮತ್ತೆ ಅವರ ಧ್ವನಿ ಕೇಳುವಂತಾಗಲಿ ಎಂದು ಹಾರೈಸಿದ್ದಾರೆ.

ಇದನ್ನೂ ಓದಿ: Job News: ಕೇಂದ್ರ ಸರ್ಕಾರದಿಂದ ‘ಎಲೆಕ್ಟ್ರಾನಿಕ್’ ಯೋಜನೆ;‌ 5 ವರ್ಷಗಳಲ್ಲಿ 50 ಲಕ್ಷ ಉದ್ಯೋಗ ಸೃಷ್ಟಿ!

ಅಲ್ಕಾ ಅವರು 1980ರಲ್ಲಿ ಬಾಲಿವುಡ್ ನಲ್ಲಿ ತಮ ಗಾಯನ ವೃತ್ತಿಯನ್ನು ಪ್ರಾರಂಭಿಸಿದರು. ಅವರು ಹಲವಾರು ಹಿಟ್ ಹಾಡುಗಳನ್ನು ಬಾಲಿವುಡ್ ಚಿತ್ರರಂಗಕ್ಕೆ ನೀಡಿದ್ದಾರೆ. ತೇಜಾಬ್ ದಲ್ಲಿ ಏಕ್ ದೋ ತೀನ್, ಲಾವಾರಿಸ್‌ನಲ್ಲಿ ಮೇರೆ ಅಂಗನೇ ಮೇ, ಕೂಲಿಯಿಂದ ಮುಜೆ ಪೀನೆ ಕಾ ಶಾಕ್ ನಹೀ, ಫೂಲ್ ಔರ್ ಕಾಂತೆಯಲ್ಲಿ ಧೀರೆ ಧೀರೆ ಪ್ಯಾರ್ ಕೋ ಬಡಾನಾ, ದಿಲ್ ವಾಲೆಯಲ್ಲಿ ಸಾತೋ ಜನಮ್ ಮೇ ತೇರೆ, ಕೋಯಿ ಮಿಲ್ ಗಯಾದಲ್ಲಿ ಹೈಲಾ ಹೈಲಾ, ಕಲ್ ಹೋ ನಾ ಹೋ ದಲ್ಲಿ ಕುಚ್ ತೋ ಹುವಾ ಹೈ ಹೀಗೆ ಅನೇಕ ಹಿಟ್ ಚಿತ್ರಗಳಲ್ಲಿ ಹಾಡುಗಳನ್ನು ಹಾಡಿದ್ದಾರೆ.

Continue Reading

ಸಿನಿಮಾ

Deepika Padukone: ಅಧಿಕ ಸಂಭಾವನೆ ಪಡೆಯುವ ನಾಯಕಿಯರಲ್ಲಿ ಕನ್ನಡತಿ ದೀಪಿಕಾ ನಂ. 1; ಪ್ರತಿ ಚಿತ್ರಕ್ಕೆ ಇವರು ಎಷ್ಟು ಹಣ ಪಡೆಯುತ್ತಾರೆ?

Deepika Padukone: ಕನ್ನಡತಿ, ಬೆಂಗಳೂರು ಮೂಲದ ದೀಪಿಕಾ ಪಡುಕೋಣೆ (Deepika Padukone) ಸದ್ಯ ಬಾಲಿವುಡ್‌ನ ಟಾಪ್‌ ನಟಿಯರಲ್ಲಿ ಒಬ್ಬರು. ಮದುವೆ ಆದ ಬಳಿಕವೂ ಅದೇ ಬೇಡಿಕೆ ಉಳಿಸಿಕೊಂಡಿರುವ ಅವರು ಅತ್ಯಧಿಕ ಸಂಭಾವನೆ ಪಡೆಯುವ ನಾಯಕಿಯರ ಪೈಕಿ ಮೊದಲ ಸ್ಥಾನದಲ್ಲಿದ್ದಾರೆ. ಐಎಂಡಿಬಿ ಸಹಾಯದಿಂದ ಫೋರ್ಬ್ಸ್ 2024ರಲ್ಲಿ ದೇಶದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರ ಪಟ್ಟಿ ತಯಾರಿಸಿದೆ. ಇದರಲ್ಲಿ ದೀಪಿಕಾ ಮೊದಲ ಸ್ಥಾನದಲ್ಲಿದ್ದಾರೆ.

VISTARANEWS.COM


on

Deepika Padukone
Koo

ಮುಂಬೈ: ಕನ್ನಡತಿ, ಬೆಂಗಳೂರು ಮೂಲದ ದೀಪಿಕಾ ಪಡುಕೋಣೆ (Deepika Padukone) ಸದ್ಯ ಬಾಲಿವುಡ್‌ನ ಟಾಪ್‌ ನಟಿಯರಲ್ಲಿ ಒಬ್ಬರು. ಮದುವೆ ಆದ ಬಳಿಕವೂ ಅದೇ ಬೇಡಿಕೆ ಉಳಿಸಿಕೊಂಡಿರುವ ಅವರು ಗ್ಲಾಮರ್‌ ಪಾತ್ರದಲ್ಲಿಯೂ, ಡಿಗ್ಲಾಮರ್‌ ಆಗಿ ಸಹಜಾಭಿನದಲ್ಲಿಯೂ ಗಮನ ಸೆಳೆಯುತ್ತಾರೆ. ಇದೇ ಕಾರಣಕ್ಕೆ ಇಂದಿಗೂ ಅವರು ಬೇಡಿಕೆ ಉಳಿಸಿಕೊಂಡಿದ್ದಾರೆ. ಸದ್ಯ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಅವರು ತಾತ್ಕಾಲಿಕವಾಗಿ ಸಿನಿಮಾ ಚಟುವಟಿಕೆಯಿಂದ ದೂರ ಸರಿಯಲಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ಅವರು ಅತ್ಯಧಿಕ ಸಂಭಾವನೆ ಪಡೆಯುವ ನಾಯಕಿಯರ (Highest-Paid Actress) ಪೈಕಿ ಮೊದಲ ಸ್ಥಾನದಲ್ಲಿದ್ದಾರೆ ಎಂದು ವರದಿಯೊಂದು ತಿಳಿಸಿದೆ.

ಐಎಂಡಿಬಿ ಸಹಾಯದಿಂದ ಫೋರ್ಬ್ಸ್ 2024ರಲ್ಲಿ ದೇಶದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರ ಪಟ್ಟಿ ತಯಾರಿಸಿದೆ. ಇದರಲ್ಲಿ ದೀಪಿಕಾ ಮೊದಲ ಸ್ಥಾನದಲ್ಲಿದ್ದಾರೆ. ಇವರು ಪ್ರತಿ ಚಿತ್ರಕ್ಕೆ 15-30 ಕೋಟಿ ರೂ. ಸಂಭಾವನೆ ಪಡೆಯುತ್ತಾರೆ ಎಂದು ವರದಿ ತಿಳಿಸಿದೆ.

ಟಾಪ್‌ ನಾಯಕಿಯರು

ಇನ್ನು ಎರಡನೇ ಸ್ಥಾನದಲ್ಲಿ ನಟಿ, ರಾಜಕಾರಣಿ ಕಂಗನಾ ರಾಣಾವತ್‌ ಇದ್ದಾರೆ. 4 ಬಾರಿಯ ರಾಷ್ಟ್ರ ಪ್ರಶಸ್ತಿ ವಿಜೇತೆ ಕಂಗನಾ ಪ್ರತಿ ಸಿನಿಮಾಕ್ಕೆ 15-27 ಕೋಟಿ ರೂ. ಚಾರ್ಜ್‌ ಮಾಡುತ್ತಾರೆ. ಮೂರನೇ ಸ್ಥಾನದಲ್ಲಿರುವ ಪ್ರಿಯಾಂಕಾ ಚೋಪ್ರಾ ಜೋನಸ್‌ 15-25 ಕೋಟಿ ರೂ. ಸಂಭಾವನೆ ಹೊಂದಿದ್ದಾರೆ ಎಂದು ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಉಳಿದಂತೆ ಕತ್ರಿನಾ ಕೈಫ್‌ (15-25 ಕೋಟಿ ರೂ.), ಆಲಿಯಾ ಭಟ್‌ (15-20 ಕೋಟಿ ರೂ.), ಕರೀನಾ ಕಪೂರ್‌ ಖಾನ್‌ (8-18 ಕೋಟಿ ರೂ.), ಶ್ರದ್ಧಾ ಕಪೂರ್‌ (7- 15 ಕೋಟಿ ರೂ.), ವಿದ್ಯಾ ಬಾಲನ್‌ (8-14 ಕೋಟಿ ರೂ.) ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಅನುಷ್ಕಾ ಶರ್ಮಾ ಮತ್ತು ಐಶ್ವರ್ಯಾ ರೈ ಬಚ್ಚನ್‌ ಹೆಸರೂ ಇದೆ. ಅನುಷ್ಕಾ ಶರ್ಮಾ ಪ್ರತಿ ಚಿತ್ರಕ್ಕೆ 8-12 ಕೋಟಿ ರೂ.ಗೆ ಬೇಡಿಕೆ ಇಟ್ಟರೆ, ಐಶ್ವರ್ಯಾ ರೈ ಬಚ್ಚನ್‌ ಸಂಭಾವನೆ 10 ಕೋಟಿ ರೂ. ಎನ್ನಲಾಗಿದೆ. ವಿಶೇಷ ಎಂದರೆ ಟಾಪ್‌ 10 ಪಟ್ಟಿಯಲ್ಲಿ ದಕ್ಷಿಣ ಭಾರತ ಚಿತ್ರರಂಗದ ಯಾವೊಬ್ಬ ನಟಿಯ ಹೆಸರೂ ಇಲ್ಲ.

‘ಕಲ್ಕಿ 2898 ಎಡಿʼ ಚಿತ್ರದ ಮೇಲೆ ನಿರೀಕ್ಷೆ

ಸದ್ಯ ಇಡೀ ಭಾರತೀಯ ಚಿತ್ರರಂಗ ದೀಪಿಕಾ ಅಭಿನಯದ ‘ಕಲ್ಕಿ 2898 ಎಡಿʼ ಸಿನಿಮಾದ ಮೇಲೆ ಕುತೂಹಲದ ಕಣ್ಣು ನೆಟ್ಟಿದೆ. ತೆಲುಗು ಮೂಲದ ಈ ಪ್ಯಾನ್‌ ಇಂಡಿಯಾ ಚಿತ್ರ ಈ ವರ್ಷದ ಅತ್ಯಂತ ದುಬಾರಿ ಸಿನಿಮಾ ಎನಿಸಿಕೊಂಡಿದೆ. ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಈ ಸಿನಿಮಾ ಜೂನ್‍ 27ರಂದು ಬಿಡುಗಡೆ ಆಗಲಿದೆ. ಪ್ರಭಾಸ್‌ ಮತ್ತು ದೀಪಿಕಾ ಪಡುಕೋಣೆ ಮೊದಲ ಬಾರಿಗೆ ತೆರೆ ಮೇಲೆ ಒಂದಾಗಿದ್ದು, ಇತ್ತೀಚೆಗೆ ರಿಲೀಸ್‌ ಆಗಿರುವ ಟ್ರೈಲರ್‌ ಕುತೂಹಲ ಹೆಚ್ಚಿಸಿದೆ. ನಾಗ್‍ ಅಶ್ವಿನ್‍ ನಿರ್ದೇಶನದ ಈ ಸೈನ್ಸ್‌ ಫಿಕ್ಷನ್‌ ಚಿತ್ರದಲ್ಲಿ ಅಮಿತಾಭ್‌ ಬಚ್ಚನ್‌, ಕಮಲ್‌ ಹಾಸನ್‌, ದಿಶಾ ಪಠಾಣಿ ಮತ್ತಿತರರು ನಟಿಸಿದ್ದಾರೆ.

ಇದನ್ನೂ ಓದಿ: Kalki 2898 AD: ʼಕಲ್ಕಿ 2898 ADʼ ಚಿತ್ರದ ಭೈರವ ಆಂಥಮ್‌ ರಿಲೀಸ್‌!

Continue Reading

ಬಾಲಿವುಡ್

Sonakshi Sinha: ಮುಸ್ಲಿಂ ಹುಡುಗನ ಜತೆ ಮಗಳು ಸೋನಾಕ್ಷಿ ಮದುವೆ; ಶತ್ರುಘ್ನ ಸಿನ್ಹಾ ಮುನಿಸು?

Sonakshi Sinha: ಶತ್ರುಘ್ನ ತಮ್ಮ ಮಗಳೊಂದಿಗೆ ಅಸಮಾಧಾನ ಹೊಂದಿದ್ದಾರೆ. ಆದರೆ ಈ ಮುನಿಸು ಹೆಚ್ಚು ಕಾಲ ಉಳಿಯುವುದಿಲ್ಲ. ಶತ್ರುಘ್ನ ಕೂಡ ಮದುವೆ (Sonakshi Sinha’s Wedding) ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸೋನಾಕ್ಷಿ ಅವರ ಮಾವ ಪಹ್ಲಾಜ್ ನಿಹಲಾನಿ ತಿಳಿಸಿದ್ದಾರೆ.

VISTARANEWS.COM


on

By

Sonakshi Sinha
Koo

ಮುಂಬಯಿ: ಬಾಲಿವುಡ್ ನಟಿ (bollywood actress) ಸೋನಾಕ್ಷಿ ಸಿನ್ಹಾ (Sonakshi Sinha) ಮುಸ್ಲಿಂ ಹುಡುಗನ ಜತೆ ಮದುವೆ ಆಗುತ್ತಿರುವ ಬಗ್ಗೆ (Sonakshi Sinha’s Wedding) ಮತ್ತು ತಮ್ಮ ಮದುವೆ ಬಗ್ಗೆ ಮೊದಲೇ ತಿಳಿಸದಿದ್ದಕ್ಕಾಗಿ ತಂದೆ ಶತ್ರುಘ್ನ ಸಿನ್ಹಾ (Shatrughan Sinha) ಅವರು ಅಸಮಾಧಾನಗೊಂಡಿದ್ದಾರೆ ಎಂದು ಸೋನಾಕ್ಷಿ ಅವರ ಮಾವ ಪಹ್ಲಾಜ್ ನಿಹಲಾನಿ (Pahlaj Nihalani) ಖಚಿತಪಡಿಸಿದ್ದಾರೆ.

ಕಳೆದ ವಾರವಷ್ಟೇ ಸೋನಾಕ್ಷಿ ಅವರು ತಮ್ಮ ಬಹುಕಾಲದ ಗೆಳೆಯ ಜಹೀರ್ ಇಕ್ಬಾಲ್ ಅವರನ್ನು ವರಿಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಿದ್ದು, ಬಳಿಕ ಇದನ್ನು ಮದುವೆಯ ಆಮಂತ್ರಣವು ದೃಢಪಡಿಸಿತು. ಸೋನಾಕ್ಷಿ ಏಳು ವರ್ಷಗಳಿಂದ ಜಹೀರ್ ಜೊತೆ ಡೇಟಿಂಗ್ ನಡೆಸುತ್ತಿದ್ದಾರೆ. ಮದುವೆಯ ವದಂತಿಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ ಶತ್ರುಘ್ನ ಅವರು ಮದುವೆಯ ಬಗ್ಗೆ ತಿಳಿದಿರಲಿಲ್ಲ ಎಂದು ಒಪ್ಪಿಕೊಂಡರು. ಮಾತ್ರವಲ್ಲದೇ ಅವರು ಇದರಿಂದ ಅಸಮಾಧಾನಗೊಂಡಿರುವುದು ಅವರ ಹೇಳಿಕೆಯಿಂದ ತಿಳಿದು ಬಂದಿತ್ತು.

ಈ ಬಗ್ಗೆ ಪಹ್ಲಾಜ್ ನಿಹಲಾನಿ ಅವರು ಪ್ರತಿಕ್ರಿಯೆ ನೀಡಿದ್ದು, ಶತ್ರುಘ್ನ ತಮ್ಮ ಮಗಳೊಂದಿಗೆ ಅಸಮಾಧಾನ ಹೊಂದಿದ್ದಾರೆ. ಆದರೆ ಅದು ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಅವರು ಖಚಿತಪಡಿಸಿದರು. ಶತ್ರುಘ್ನ ಕೂಡ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.


ಸೋನಾಕ್ಷಿ ಅವರ ಮುದ್ದಿನ ಮಗಳು. ಅವರು ಮದುವೆಗೆ ಬಾರದೇ ಇರಲು ಸಾಧ್ಯವೇ ಇಲ್ಲ. ಶತ್ರುಜಿ ಅವರು “”ಈಗಿನ ಮಕ್ಕಳು ಪೋಷಕರ ಅನುಮತಿ ಪಡೆಯದೇ ಮದುವೆಯಾಗುತ್ತಾರೆ. ಸೋನಾಕ್ಷಿ ತನ್ನ ಇಷ್ಟದ ಹುಡುಗನನ್ನು ಮದುವೆಯಾಗುವುದಾದರೆ ನಾನೇಕೆ ಅಸಮಾಧಾನಗೊಳ್ಳಬೇಕುʼʼ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.

ನಲವತ್ತು ವರ್ಷಗಳ ಹಿಂದೆ ತಮಗೆ ಇಷ್ಟವಾದ ಹುಡುಗಿಯನ್ನು ಮದುವೆಯಾಗಿದ್ದಾರೆ. ನಾನು ನನ್ನ ಹೆಂಡತಿಯನ್ನು ಮದುವೆಯಾದಾಗ ನಾನು ನನ್ನ ಜೀವನ ಸಂಗಾತಿಯನ್ನು ಆರಿಸಿಕೊಂಡೆ. ಒಬ್ಬನು ತನ್ನ ಮಕ್ಕಳಿಂದ ಅವಾಸ್ತವಿಕ ನಿರೀಕ್ಷೆಗಳನ್ನು ಹೊಂದಿರಬಾರದು ಎಂದು ಶತ್ರುಘ್ನ ಸಿನ್ಹಾ ಇತ್ತೀಚೆಗೆ ಹೇಳಿದ್ದರು.

ಶತ್ರುಘ್ನ ಅವರ ಆರಂಭಿಕ ಪ್ರತಿಕ್ರಿಯೆಯನ್ನು ಸಮರ್ಥಿಸಿಕೊಂಡ ಪಹ್ಲಾಜ್, ಚುನಾವಣೆಯಿಂದಾಗಿ ಅವರು ಸುಮಾರು ಮೂರು ತಿಂಗಳ ಕಾಲ ಮುಂಬಯಿನಿಂದ ಹೊರಗಿದ್ದರು. ಶತ್ರುಘ್ನ ಅವರ ಪತ್ನಿಗೆ ಈ ವಿಷಯ ಗೊತ್ತಿರಬೇಕು. ಶತ್ರುಘ್ನ ಅವರು ಹಿಂದಿರುಗಿದ ಅನಂತರ ಅವರಿಗೆ ಈ ಬಗ್ಗೆ ಹೇಳಲು ನಿರ್ಧರಿಸಿರಬೇಕು. ಈಗ ಅವರು ಮುಂಬಯಿಗೆ ಮರಳಿದ್ದಾರೆ ಮತ್ತು ಸೋನಾಕ್ಷಿ ಮತ್ತು ಅವರ ಕುಟುಂಬದ ನಡುವೆ ಎಲ್ಲವೂ ಚೆನ್ನಾಗಿದೆ ಎಂದು ತಿಳಿಸಿದರು.


ಶತ್ರುಘ್ನ ಹೇಳಿದ್ದೇನು?

ಸೋನಾಕ್ಷಿ ವಿವಾಹದ ಕುರಿತು ಮಾತನಾಡಿದ್ದ ಶತ್ರುಘ್ನ ಅವರು, ನನಗೆ ಸೋನಾಕ್ಷಿ ಮದುವೆ ಬಗ್ಗೆ ಯಾಕೆ ತಿಳಿದಿಲ್ಲ ಎಂದು ನನ್ನ ಹತ್ತಿರದ ಜನರು ನನ್ನನ್ನು ಕೇಳುತ್ತಿದ್ದಾರೆ. ನಾನು ಹೇಳುವುದು ಇಷ್ಟೇ, ಅವರು ಇವತ್ತಿನ ಮಕ್ಕಳು ತಂದೆ ತಾಯಿಯ ಅನುಮತಿ ಕೇಳುವುದಿಲ್ಲ. ಕೇವಲ ಮಾಹಿತಿ ನೀಡುತ್ತಾರೆ. ನಾವು ಆ ಮಾಹಿತಿಗಾಗಿ ಕಾಯುತ್ತಿದ್ದೇವೆ ಎಂದಿದ್ದರು.

ಅವರ ಈ ಹೇಳಿಕೆ ಬಳಿಕ ಮದುವೆಯ ವದಂತಿಗಳನ್ನು ಅವರು ದೃಢೀಕರಿಸದೇ ಇದ್ದರೂ, ಸೋನಾಕ್ಷಿಗೆ ತಮ್ಮ ಜೀವನದ ಮಹತ್ವದ ದಿನಕ್ಕಾಗಿ ಎಲ್ಲಾ ಆಶೀರ್ವಾದಗಳನ್ನು ನೀಡುತ್ತಿದ್ದೇನೆ ಎಂದು ಹೇಳಿದ್ದರು.

ನನ್ನ ಮಗಳು ಮದುವೆಯಾದರೆ ನಾನು ಅವಳಿಗೆ ನನ್ನ ಆಶೀರ್ವಾದವನ್ನು ನೀಡುತ್ತೇನೆ. ಅವಳ ನಿರ್ಧಾರ ಮತ್ತು ಆಯ್ಕೆಯನ್ನು ಬೆಂಬಲಿಸುತ್ತೇನೆ. ಸೋನಾಕ್ಷಿಗೆ ತನ್ನ ಒಡನಾಡಿಯನ್ನು ಆಯ್ಕೆ ಮಾಡುವ ಹಕ್ಕಿದೆ ಮತ್ತು ಅವಳ ಮದುವೆಯ ದಿನದಂದು ನಾನು ಅತ್ಯಂತ ಸಂತೋಷದ ತಂದೆಯಾಗುತ್ತೇನೆ. ನಾನು ಯಾವಾಗಲೂ ಅವಳಿಗೆ ಶುಭ ಹಾರೈಸುತ್ತೇನೆ ಎಂದು ಶತ್ರುಘ್ನ ಹೇಳಿದರು. ಮುಂಬಯಿನಲ್ಲಿ ಆತ್ಮೀಯರ ಸಮ್ಮುಖದಲ್ಲಿ ಜೂನ್ 23ರಂದು ಸೋನಾಕ್ಷಿ ಮತ್ತು ಜಹೀರ್ ವಿವಾಹವಾಗಲಿದ್ದಾರೆ.

Continue Reading

ಬಾಲಿವುಡ್

Shah Rukh Khan: ʻನಾಯಕ್‌ʼ ಸಿನಿಮಾಗೆ ಶಾರುಖ್‌ ಹೀರೊ ಆಗಬೇಕಿತ್ತು! 1 ರೂ. ಅಡ್ವಾನ್ಸ್ ಪಡೆದಿದ್ದರು!

Shah Rukh Khan: ಈ ಚಿತ್ರವು ನಿರ್ದೇಶಕ ಶಂಕರ್ ಅವರ 1999ರ ತಮಿಳು ಚಿತ್ರ ʻಮುಧಲ್ವನ್‌ʼನ (mudhalvan) ರಿಮೇಕ್ ಆಗಿತ್ತು. ಚಿತ್ರದಲ್ಲಿ ಅನಿಲ್ ಕಪೂರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರಮಂದಿರಗಳಲ್ಲಿ ಸಿನಿಮಾ ಅಷ್ಟಾಗಿ ಸಕ್ಸೆಸ್‌ ಆಗದಿದ್ದರೂ ದೂರದರ್ಶನದಲ್ಲಿ ವ್ಯಾಪಕವಾಗಿ ಜನಪ್ರಿಯತೆ ಗಳಿಸಿತ್ತು.

VISTARANEWS.COM


on

Shah Rukh Khan Took ₹1 As Signing Amount For 'Nayak'
Koo

ಬೆಂಗಳೂರು: ಶಂಕರ್ ನಿರ್ದೇಶನದ 2001ರಲ್ಲಿ ಬಿಡುಗಡೆಯಾದ ʻನಾಯಕ್‌ʼ ಸಿನಿಮಾದಲ್ಲಿ (Shah Rukh Khan) ಅನಿಲ್ ಕಪೂರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಆದರೆ ಈ ಸಿನಿಮಾಗೆ (Shah Rukh Khan) ಮೊದಲು ಸಹಿ ಹಾಕಿದ್ದು ಶಾರುಖ್‌. ಜತೆಗೆ ಶಾರುಖ್ ಖಾನ್ ಅವರು ʻನಾಯಕ್ʼ ಚಿತ್ರಕ್ಕೆ ಸಹಿ ಹಾಕುವಾಗ ಮುಂಗಡ ಪಡೆದಿದ್ದು ಕೇವಲ ಒಂದು ರೂ. ಅಂತೆ. ಈ ಘಟನೆ ಬಗ್ಗೆ ಸಂದರ್ಶನವೊಂದರಲ್ಲಿ ಶಾರುಖ್‌ ಹೇಳಿಕೊಂಡಿದ್ದಾರೆ. ಈ ಚಿತ್ರವು ನಿರ್ದೇಶಕ ಶಂಕರ್ ಅವರ 1999ರ ತಮಿಳು ಚಿತ್ರ ʻಮುಧಲ್ವನ್‌ʼನ (mudhalvan) ರಿಮೇಕ್ ಆಗಿತ್ತು. ಚಿತ್ರದಲ್ಲಿ ಅನಿಲ್ ಕಪೂರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರಮಂದಿರಗಳಲ್ಲಿ ಸಿನಿಮಾ ಅಷ್ಟಾಗಿ ಸಕ್ಸೆಸ್‌ ಆಗದಿದ್ದರೂ ದೂರದರ್ಶನದಲ್ಲಿ ವ್ಯಾಪಕವಾಗಿ ಜನಪ್ರಿಯತೆ ಗಳಿಸಿತ್ತು.

ಸಂದರ್ಶನದಲ್ಲಿ, ಶಾರುಖ್ ಖಾನ್ ಸಿನಿಮಾ ಬಗ್ಗೆ ಮಾತನಾಡಿ ʻʻಈ ಸಿನಿಮಾಗೆ ನಾನು ಒಪ್ಪಿಗೆ ನೀಡಿ ಸಹಿ ಹಾಕುವಾಗ ಮುಂಗಡ ಸಂಭಾವನೆ ಪಡೆದಿದ್ದು ಕೇವಲ ಒಂದು ರೂ. ಜತೆಗೆ ಡೇಟ್‌ ನೀಡಲು ಸದಾ ಸಿದ್ದ ಎಂದು ಭರವಸೆ ಕೊಟ್ಟೆ. ಆದರೆ ನನಗೆ ನಾಯಕ್‌ ಮೂಲ ಆವೃತ್ತಿ ಇಷ್ಟ ಆಗಿತ್ತು. ಹಿಂದಿ ರಿಮೇಕ್‌ ಮಾಡುವುದು ಸರಿಯೆನಿಸಲಿಲ್ಲʼʼ ಎಂದರು. ಶಾರುಖ್‌ ಮಾತು ಮುಂದುವರಿಸಿ ʻʻನಾನು ಸಹಿ ಮಾಡಿದ್ದು, ದಿನಾಂಕ ನೀಡಿರುವ ಸಾಕ್ಷಿ ಇನ್ನೂ ನನ್ನ ಬಳಿ ಇದೆ. ಶಂಕರ್‌ ಜತೆ ಇನ್ನೂ ಕೂಡ ನನಗೆ ಕೆಲಸ ಮಾಡುವ ಬಯಕೆ ಇದೆ. ಅವರು ಹಾಲಿವುಡ್ ನಿರ್ದೇಶಕ ಜೇಮ್ಸ್ ಕ್ಯಾಮರೂನ್ ನಂತೆ. ಅವರ ಜತೆ ಸಿನಿಮಾ ಮಾಡುವುದು ಅದೃಷ್ಟʼʼ ಎಂದರು.

ಇದನ್ನೂ ಓದಿ: Shah Rukh Khan: ಖ್ಯಾತ ಹಾಲಿವುಡ್‌ ನಟನಂತೆ ಕಂಡ ಶಾರುಖ್ ಖಾನ್; ವಿಡಿಯೊ ವೈರಲ್‌!

ಸಿನಿಮಾ ವಿಚಾರಕ್ಕೆ ಬಂದರೆ ಶಾರುಖ್ ಅವರ ಮಗಳು ಸುಹಾನಾ ಖಾನ್ ಅವರ ಜತೆ ʻದಿ ಕಿಂಗ್ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದನ್ನು ಸುಜೋಯ್ ಘೋಷ್ ನಿರ್ದೇಶಿಸಲಿದ್ದಾರೆ. ವರದಿಗಳ ಪ್ರಕಾರ ಚಿತ್ರದ ಬಜೆಟ್ 200 ಕೋಟಿ ರೂ. ಮತ್ತೊಂದೆಡೆ, ಅನಿಲ್ ಕಪೂರ್ ಬಿಗ್ ಬಾಸ್ OTT ಸೀಸನ್ 3 ಅನ್ನು ಹೋಸ್ಟ್‌ ಮಾಡುತ್ತಿದ್ದಾರೆ.

2023ರಲ್ಲಿ ಬ್ಯಾಕ್‌ ಟು ಬ್ಯಾಕ್‌ ಹಿಟ್‌ ಸಿನಿಮಾಗಳನ್ನು ನೀಡಿದ ಬಳಿಕ ಶಾರುಖ್‌ ʻಕಿಂಗ್‌ʼ ಸಿನಿಮಾ ಮೇಲೆ ಗಮನ ಹರಿಸಿದ್ದಾರೆ.ಈ ಚಿತ್ರವನ್ನು ಶಾರುಖ್ ಅವರ ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಮತ್ತು ಅವರ ಪಠಾಣ್ ನಿರ್ದೇಶಕ ಸಿದ್ಧಾರ್ಥ್ ಆನಂದ್ ಅವರ ಮಾರ್ಫ್ಲಿಕ್ಸ್ ಪಿಕ್ಚರ್ಸ್ ಸಹ-ನಿರ್ಮಾಣ ಮಾಡಿದ್ದಾರೆ.ಇನ್ನು ಶಾರುಖ್‌ ಮಗಳು ಕಳೆದ ವರ್ಷ ಬಿಡುಗಡೆಯಾದ ʻದಿ ಆರ್ಚೀಸ್ʼ (The Archies) ಸಿನಿಮಾ ಮೂಲಕ ಬಣ್ಣದ ಲೋಕ ಪ್ರವೇಶಿಸಿದರು. ಜೋಯಾ ಅಖ್ತರ್ ಮತ್ತು ರೀಮಾ ಕಾಗ್ತಿ ನಿರ್ದೇಶನದ ‘ದಿ ಆರ್ಚೀಸ್’ ಸಿನಿಮಾದಲ್ಲಿ ಸುಹಾನಾ ಜತೆಗೆ ಅಮಿತಾಭ್‌ ಬಚ್ಚನ್ ಮತ್ತು ಜಯಾ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದಾ ಕೂಡ ನಟಿಸಿದ್ದರು. ಈ ವೇಳೆ ಅವರಿಬ್ಬರು ಡೇಟಿಂಗ್ ನಡೆಸುತ್ತಿದ್ದರು ಎನ್ನುವ ಗುಸುಗುಸು ಹಬ್ಬಿತ್ತು. ಆದರೆ ಈ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಸುಹಾನಾ ಖಾನ್‌ ಅಭಿನಯದ ಮೊದಲ ಚಿತ್ರ ‘ದಿ ಆರ್ಚೀಸ್’ ಒಟಿಟಿಯಲ್ಲಿ ತೆರೆಕಂಡು ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತ್ತು.

Continue Reading
Advertisement
Kannur Bomb Blast
ದೇಶ18 mins ago

Kannur Bomb Blast: ಕೇರಳದಲ್ಲಿ ಬಾಂಬ್‌ ಸ್ಫೋಟಕ್ಕೆ ವೃದ್ಧ ಬಲಿ; ಕಣ್ಣೂರು ಆಗುತ್ತಿದೆಯೇ ಬಾಂಬ್‌ ಕಾರ್ಖಾನೆ?

Bengaluru Power Cut
ಬೆಂಗಳೂರು24 mins ago

Bengaluru Power Cut: ಜೂನ್‌ 20ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ಇರಲ್ಲ

Kids Hair Fashion
ಫ್ಯಾಷನ್36 mins ago

Kids Hair Fashion: ಹೆಣ್ಣುಮಕ್ಕಳ ಸಿಂಗಾರಕ್ಕೆ ಬಂತು ಕ್ಯೂಟ್‌ ಹೇರ್ ಆಕ್ಸೆಸರೀಸ್‌

Kisan Samman Nidhi
ದೇಶ1 hour ago

Kisan Samman Nidhi: 9 ಕೋಟಿ ರೈತರ ಖಾತೆಗಳಿಗೆ 20 ಸಾವಿರ ಕೋಟಿ ರೂ. ಜಮೆ ಮಾಡಿದ ಮೋದಿ; ಹೀಗೆ ಚೆಕ್‌ ಮಾಡಿ

Alka Yagnik
Latest1 hour ago

Alka Yagnik: ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ ಬಾಲಿವುಡ್‌ ಖ್ಯಾತ ಹಿನ್ನೆಲೆ ಗಾಯಕಿ

Eid Celebration
ದೇಶ1 hour ago

Eid Celebration: ಯೋಗಿ ವಾರ್ನಿಂಗ್‌ ಎಫೆಕ್ಟ್‌; ಉ.ಪ್ರದೇಶದ ಯಾವ ರಸ್ತೆಯಲ್ಲೂ ಬಕ್ರೀದ್‌ ನಮಾಜ್‌ ನಡೆಯಲಿಲ್ಲ!

Kuwait Fire
ಕರ್ನಾಟಕ1 hour ago

Kuwait Fire: ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟ ವಿಜಯಕುಮಾರ್ ಕುಟುಂಬಕ್ಕೆ 5 ಲಕ್ಷ ಪರಿಹಾರ ಕೊಟ್ಟ ಸಿಎಂ

Karnataka Weather Forecast
ಮಳೆ2 hours ago

Karnataka Weather : ಗುಡುಗು, ಸಿಡಿಲಿನ ಮಳೆಗೆ ಮನೆಯ ಗೋಡೆ ಕುಸಿತ; ನಾಳೆಗೂ ಇದೆ ಅಲರ್ಟ್‌

Narendra Modi
ದೇಶ2 hours ago

Narendra Modi: 3ನೇ ಸಲ ಗೆಲ್ಲಿಸಿದ ವಾರಾಣಸಿ ಜನತೆಗೆ ಧನ್ಯವಾದ ಎಂದ ಮೋದಿ; ಗೆದ್ದ ಬಳಿಕ ಮೊದಲ ಭೇಟಿ!

Electric Shock
ವಿಜಯಪುರ2 hours ago

Electric shock : ಮೀನು ಹಿಡಿಯಲು ಹೋದಾಗ ವಿದ್ಯುತ್‌ ಪ್ರವಹಿಸಿ ಬಾಲಕರಿಬ್ಬರು ಮೃತ್ಯು; ಕುಟುಂಬಸ್ಥರ ಆಕ್ರಂದನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು1 day ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 day ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌