Vishnuvardhan Birthday | ರಾಜಧಾನಿ ಬೆಂಗಳೂರು ಸಾಹಸ ಸಿಂಹ ‘ವಿಷ್ಣು’ ಮಯ! - Vistara News

ಸಿನಿಮಾ

Vishnuvardhan Birthday | ರಾಜಧಾನಿ ಬೆಂಗಳೂರು ಸಾಹಸ ಸಿಂಹ ‘ವಿಷ್ಣು’ ಮಯ!

ದಿವಂಗತ ಡಾ. ವಿಷ್ಣುವರ್ಧನ್ ಅವರ ಜನ್ಮದಿನಾಚರಣೆ​ ಹಿನ್ನೆಲೆ ಅಭಿಮಾನ್ ಸ್ಟುಡಿಯೋಗೆ ಭೇಟಿ ನೀಡಿದ ಅಸಂಖ್ಯಾತ ಅಭಿಮಾನಿಗಳು ವಿಷ್ಣುವರ್ಧನ್ ಅವರ ಸಮಾಧಿಗೆ ನಮಸ್ಕರಿಸಿದರು.

VISTARANEWS.COM


on

Vishnuvardhan Birthday
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ‘ಕೊರೊನಾ’ ಕಂಟಕದ ಬಳಿಕ ಚಿತ್ರರಂಗದಲ್ಲಿ ಹೊಸ ಯುಗ ಆರಂಭವಾಗಿದೆ. ತಮ್ಮ ನೆಚ್ಚಿನ ನಟ-ನಟಿಯರ ಹುಟ್ಟುಹಬ್ಬ ಆಚರಿಸಲು ಅಭಿಮಾನಿಗಳಿಗೆ ಎದುರಾಗುತ್ತಿದ್ದ ಅಡ್ಡಿ ಆತಂಕ ದೂರವಾಗಿದೆ. ಹೀಗಾಗಿಯೇ ಇಂದು ಸಾಹಸ ಸಿಂಹ ಡಾ. ವಿಷ್ಣುವರ್ಧನ್​ರ ಹುಟ್ಟಿದ ದಿನವನ್ನು ಅವರ ಅಭಿಮಾನಿಗಳು ಅದ್ದೂರಿಯಾಗಿ ಸೆಲೆಬ್ರೇಟ್ ಮಾಡಿದರು. ಇಡೀ ರಾಜ್ಯದಲ್ಲಿ ವಿಷ್ಣುವರ್ಧನ್ ಜನ್ಮ ದಿನಾಚರಣೆ (Vishnuvardhan Birthday) ಸಂಭ್ರಮ ಮೇಳೈಸಿದ್ದರೆ, ರಾಜ್ಯ ರಾಜಧಾನಿ ಬೆಂಗಳೂರು ಸಂಪೂರ್ಣ ಸಾಹಸ ಸಿಂಹ ‘ವಿಷ್ಣು’ ಮಯವಾಗಿ ಹೋಗಿತ್ತು.

ಸಾಹಸ ಸಿಂಹ ಡಾ. ವಿಷ್ಣುವರ್ಧನ್​ರ 72ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಹಲವು ದಿನಗಳ ಹಿಂದೆಯೇ ಕೋಟ್ಯಂತರ ಅಭಿಮಾನಿಗಳು ಭರ್ಜರಿ ಪ್ಲ್ಯಾನ್ ಮಾಡಿಕೊಂಡಿದ್ದರು. ಈ ಬಾರಿ ಡಾ. ವಿಷ್ಣುವರ್ಧನ್​ ಅವರ ಕಟೌಟ್ ಜಾತ್ರೆಗೆ ಸಿದ್ಧತೆಯೂ ನಡೆದಿತ್ತು. ಎಲ್ಲವೂ ಅಂದುಕೊಂಡಂತೆ ನಡೆದಿದ್ದು, ಇಂದು ಅದ್ದೂರಿಯಾಗಿ ವಿಷ್ಣುವರ್ಧನ್​ ಅವರ 72ನೇ ಹುಟ್ಟಿದ ಹಬ್ಬದ ಆಚರಣೆ ನೆರವೇರಿದೆ.

ಇದನ್ನೂ ಓದಿ: Ramesh Aravind Movies | ರಮೇಶ್ ಅರವಿಂದ್ ಅಭಿಮಾನಿಗಳಿಗೆ ಸಿಗಲಿದೆ ಸರ್ಪ್ರೈಸ್!

ಅಭಿಮಾನಿಗಳ ಸಾಗರ
ಇಂದು ಬೆಳಗ್ಗೆಯಿಂದಲೇ ಡಾ. ವಿಷ್ಣುವರ್ಧನ್​ ಸಮಾಧಿ ಇರುವ ಅಭಿಮಾನ್ ಸ್ಟೂಡಿಯೋಗೆ ಅಭಿಮಾನಿಗಳು ಹೆಜ್ಜೆ ಹಾಕಿದ್ದರು. ನೋಡ ನೋಡುತ್ತಿದ್ದಂತೆ ಅಭಿಮಾನಿಗಳ ಸಂಖ್ಯೆ ಲೆಕ್ಕಹಾಕಲು ಸಾಧ್ಯವಾಗದಷ್ಟು ಹೆಚ್ಚಾಗಿತ್ತು. ಹೀಗೆ ಹತ್ತಾರು ಸಾವಿರ ಅಭಿಮಾನಿಗಳು ಅಭಿಮಾನ್ ಸ್ಟೂಡಿಯೋಗೆ ಬಂದು, ಡಾ. ವಿಷ್ಣುವರ್ಧನ್ ಅವರ ಸಮಾಧಿಗೆ ನಮಸ್ಕರಿಸಿ ತೆರಳಿದರು.

ಸಾಮಾಜಿಕ ಕಾರ್ಯ
ಡಾ. ವಿಷ್ಣುವರ್ಧನ್​ರ ಹುಟ್ಟುಹಬ್ಬದ ಹಿನ್ನೆಲೆ ಸಾಮಾಜಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಾಮಾಜಿಕ ಕಾರ್ಯಗಳನ್ನು ವಿಷ್ಣು ದಾದಾ ಫ್ಯಾನ್ಸ್ ಮಾಡಿದರು. ರಕ್ತದಾನ, ನೇತ್ರದಾನವೂ ಸೇರಿದಂತೆ ವಿವಿಧ ಕಾರ್ಯಗಳನ್ನು ಸಾಹಸ ಸಿಂಹ ಅಭಿಮಾನಿಗಳು ಹಮ್ಮಿಕೊಂಡಿದ್ದರು. ಹಸಿದು ಬಂದಿದ್ದ ಅಭಿಮಾನಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ಹೀಗೆ ಅದ್ದೂರಿಯಾಗಿ ಡಾ. ವಿಷ್ಣುವರ್ಧನ್ ಬರ್ತ್ ಡೇ ಸೆಲೆಬ್ರೇಟ್ ಮಾಡಿದರು ವಿಷ್ಣು ದಾದ ಫ್ಯಾನ್ಸ್.

ಬೆಂಗಳೂರಿನ ಅಭಿಮಾನ್ ಸ್ಟೂಡಿಯೋ ಬಳಿ ಡಾ. ವಿಷ್ಣುವರ್ಧನ್​ರ ಕಟೌಟ್​ಗಳ ಅಬ್ಬರ.

ಕಟೌಟ್ ಅಬ್ಬರ
ಮೊದಲೇ ಹೇಳಿದಂತೆ ಈ ಬಾರಿ ಡಾ. ವಿಷ್ಣುವರ್ಧನ್ ಜನ್ಮದಿನಾಚರಣೆಗಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದರು ಅಭಿಮಾನಿಗಳು. 50ಕ್ಕೂ ಹೆಚ್ಚು ಕಟೌಟ್​ಗಳನ್ನ ಡಾ. ವಿಷ್ಣುವರ್ಧನ್ ಸಮಾಧಿ ಇರುವ ಅಭಿಮಾನ್ ಸ್ಟೂಡಿಯೋ ಬಳಿ ಅಭಿಮಾನಿಗಳು ಸ್ಥಾಪಿಸಿದ್ದರು. ಪ್ರತಿ ಕಟೌಟ್ ಕೂಡ ಸ್ಪೆಷಲ್ ಆಗಿತ್ತು. ಪ್ರತಿಯೊಂದು ಕಟೌಟ್​ನಲ್ಲೂ ಡಾ. ವಿಷ್ಣುವರ್ಧನ್ ಅಭಿನಯದ ಒಂದೊಂದು ಸಿನಿಮಾ ಕ್ಯಾರೆಕ್ಟರ್ ಸೆಲೆಕ್ಟ್ ಮಾಡಲಾಗಿತ್ತು.

ಡಾ. ವಿಷ್ಣುವರ್ಧನ್ ಅಭಿನಯದ, ಕನ್ನಡಿಗರು ಎಂದೆಂದಿಗೂ ಮರೆಯಲು ಸಾಧ್ಯವಾಗದ ಸಿನಿಮಾಗಳ ಕಟೌಟ್​ಗಳು ಮಿಂಚುತ್ತಿದ್ದವು. ಯಜಮಾನ, ಸಾಹಸ ಸಿಂಹ, ಕೃಷ್ಣ ನೀ ಬೇಗನೆ ಬಾರೋ, ಜಯಸಿಂಹ, ವೀರಪ್ಪ ನಾಯಕ, ಜನ ನಾಯಕ, ದಾದ, ಕೃಷ್ಣ ರುಕ್ಮಿಣಿ, ಹೃದಯ ಗೀತೆ, ದೇವ, ಮತ್ತೆ ಹಾಡಿತು ಕೋಗಿಲೆ, ಲಯನ್ ಜಗಪತಿ ರಾವ್, ರಾಜಾಧಿರಾಜ, ರಾಯರು ಬಂದರು ಮಾವನ ಮನೆಗೆ, ಮಹಾಕ್ಷತ್ರಿಯ, ಮುತ್ತಿನ ಹಾರ, ದಣಿ, ಜನನಿ, ಜನ್ಮಭೂಮಿ, ವೀರಪ್ಪ ನಾಯಕ, ಸೂರ್ಯ ವಂಶ, ಸೂರಪ್ಪ, ದಿಗ್ಗಜರು, ಕೋಟಿಗೊಬ್ಬ, ಸಿಂಹಾದ್ರಿಯ ಸಿಂಹ, ರಾಜ ನರಸಿಂಹ, ಆಪ್ತಮಿತ್ರ, ಸಾಹುಕಾರ, ವರ್ಷ, ಕರ್ನಾಟಕ ಸುಪುತ್ರ, ಹಲೋ ಡ್ಯಾಡಿ, ಅಪ್ಪಾಜಿ, ಸ್ಕೂಲ್ ಮಾಸ್ಟರ್, ಆಪ್ತರಕ್ಷಕ, ಚಿನ್ನದಂತ ಮಗ, ವಿಷ್ಣುಸೇನಾ, ನಾಗರಹಾವು ಸೇರಿದಂತೆ ಇನ್ನೂ ಹಲವು ಬ್ಲಾಕ್ ಬಸ್ಟರ್ ಸಿನಿಮಾಗಳ ಕಟೌಟ್​ಗಳು ರಾರಾಜಿಸಿದವು.

ಒಟ್ಟಾರೆ ಹೇಳುವುದಾದರೆ ಸಾಹಸ ಸಿಂಹ ವಿಷ್ಣುವರ್ಧನ್ ಹುಟ್ಟುಹಬ್ಬಕ್ಕಾಗಿ ಅಭಿಮಾನಿಗಳು ಸ್ಪೆಷಲ್ ಗಿಫ್ಟ್ ಕೊಟ್ಟಿದ್ದಾರೆ. ಅಭಿಮಾನ್ ಸ್ಟುಡಿಯೋಕ್ಕೆ ಭೇಟಿ ಕೊಟ್ಟಿದ್ದ ಅಭಿಮಾನಿಗಳ ಸಾಗರ ವಿಷ್ಣುವರ್ಧನ್ ಅವರ ಸಮಾಧಿಗೆ ನಮನ ಸಲ್ಲಿಸಿದರು. ಸಾಮಾಜಿಕ ಕಾರ್ಯಕ್ರಮಗಳ ಮೂಲಕವೂ ವಿಷ್ಣು ದಾದಾ ಫ್ಯಾನ್ಸ್ ಗಮನ ಸೆಳೆದಿದ್ದು ವಿಶೇಷ.

ಇದನ್ನೂ ಓದಿ: Sudeep Puneeth | ಸುದೀಪ್-ಪುನೀತ್‌ ಬಾಂಧವ್ಯಕ್ಕೆ ಸಾಕ್ಷಿಯಾಯ್ತು ಹುಟ್ಟುಹಬ್ಬ ಸಂಭ್ರಮ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Actor Suriya: ಹೊಸ ಸಿನಿಮಾ ಶೂಟಿಂಗ್‌ ಶುರು ಮಾಡಿದ ನಟ ಸೂರ್ಯ!

Actor Suriya: ಈ ಸಿನಿಮಾವನ್ನು ತಮಿಳಿನ ಕಾರ್ತಿಕ್ ಸುಬ್ಬರಾಜು ನಿರ್ದೇಶನ ಮಾಡಲಿದ್ದಾರೆ. ಸೂಪರ್ ಹಿಟ್ ಸಿನಿಮಾಗಳಾದ ‘ಜಿಗರ್​ಥಂಡಾ’, ರಜನೀಕಾಂತ್ ನಟನೆಯ ‘ಪೆಟ್ಟಾ’, ‘ಜಿಗರ್ ಥಂಡಾ ಡಬಲ್ ಎಕ್ಸ್’, ‘ಮಹಾನ್’ ಇನ್ನಿತರೆ ಸಿನಿಮಾಗಳನ್ನು ಇವರು ನಿರ್ದೇಶಿಸಿದ್ದಾರೆ.2022 ರಲ್ಲಿ ಬಿಡುಗಡೆ ಆದ ‘ಆಚಾರ್ಯ’ ಸಿನಿಮಾ ಬಳಿಕ ಪೂಜಾ ಹೆಗ್ಡೆ ಯಾವುದೇ ದಕ್ಷಿಣ ಭಾರತದ ಸಿನಿಮಾದಲ್ಲಿ ನಟಿಸಿರಲಿಲ್ಲ. ಇದೀಗ ‘ಸೂರ್ಯ 44’ ಸಿನಿಮಾ ಮೂಲಕ ಪೂಜಾ ಕಮ್ ಬ್ಯಾಕ್ ಮಾಡಿದ್ದಾರೆ.

VISTARANEWS.COM


on

Actor Suriya visits temple ahead of Suriya 44
Koo

ಬೆಂಗಳೂರು: ನಟ ಸೂರ್ಯ (Actor Suriya) ಅವರು ನಿರ್ದೇಶಕ ಕಾರ್ತಿಕ್ ಸುಬ್ಬರಾಜ್ ಅವರೊಂದಿಗೆ ಮುದಿನ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ. ಮುಂದಿನ ಸಿನಿಮಾಗೆ ತಾತ್ಕಾಲಿಕವಾಗಿ ‘ಸೂರ್ಯ 44’ ಎಂದು ಶಿರ್ಷಿಕೆ ಇಡಲಾಗಿದೆ. ನಟ ಶೀಘ್ರದಲ್ಲೇ ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸಲಿದ್ದಾರೆ. ಅಂಡಮಾನ್ ನಿಕೋಬಾರ್ ದ್ವೀಪಗಳಲ್ಲಿ ಚಿತ್ರದ ಚಿತ್ರೀಕರಣಕ್ಕೆ ಸೆಟ್‌ ಸಿದ್ಧಪಡಿಸಿದೆ ಎನ್ನಲಾಗಿದೆ. ಸೂರ್ಯ ಇತ್ತೀಚೆಗಷ್ಟೆ ‘ಕಂಗುವ’ ಸಿನಿಮಾದ ಚಿತ್ರೀಕರಣ ಮುಗಿಸಿದ್ದು, ಹೊಸ ಸಿನಿಮಾ ಪ್ರಾರಂಭ ಮಾಡಿದ್ದಾರೆ. ಸಿನಿಮಾದ ಚಿತ್ರೀಕರಣ ಆರಂಭಕ್ಕೂ ಮುನ್ನ ದೇವಸ್ಥಾನಕ್ಕೆ ತೆರಳಿ ಪೂಜೆಯನ್ನು ಸಹ ಸೂರ್ಯ ಸಲ್ಲಿಸಿದ್ದಾರೆ.

ಇದೀಗ ನಟ ಸೂರ್ಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿರುವ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಸೂರ್ಯ ಬಿಳಿ ಬಟ್ಟೆಯಲ್ಲಿ ಕಾಣಿಸಿಕೊಂಡಿದ್ದಾರೆ. ಧೋತಿ ಮತ್ತು ಬಿಳಿ ಅಂಗಿಯಲ್ಲಿ ಕಂಡಿದ್ದಾರೆ.
‘ಚಿತ್ರದಲ್ಲಿ ಉರಿಯಾಡಿ ವಿಜಯ್ ಕುಮಾರ್ ಪ್ರತಿಸ್ಪರ್ಧಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗಿದ್ದು, ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಲಿದ್ದಾರೆ ಎನ್ನಲಾಗಿದೆ. ನಟರಾದ ಜಯರಾಮ್ ಮತ್ತು ಜೋಜು ಜಾರ್ಜ್ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ. ಚಿತ್ರದ ತಾರಾಗಣದ ಬಗ್ಗೆ ಅಧಿಕೃತ ಮಾಹಿತಿ ಚಿತ್ರತಂಡ ಹಂಚಿಕೊಂಡಿಲ್ಲ.

ಈ ಸಿನಿಮಾವನ್ನು ತಮಿಳಿನ ಕಾರ್ತಿಕ್ ಸುಬ್ಬರಾಜು ನಿರ್ದೇಶನ ಮಾಡಲಿದ್ದಾರೆ. ಸೂಪರ್ ಹಿಟ್ ಸಿನಿಮಾಗಳಾದ ‘ಜಿಗರ್​ಥಂಡಾ’, ರಜನೀಕಾಂತ್ ನಟನೆಯ ‘ಪೆಟ್ಟಾ’, ‘ಜಿಗರ್ ಥಂಡಾ ಡಬಲ್ ಎಕ್ಸ್’, ‘ಮಹಾನ್’ ಇನ್ನಿತರೆ ಸಿನಿಮಾಗಳನ್ನು ಇವರು ನಿರ್ದೇಶಿಸಿದ್ದಾರೆ.2022 ರಲ್ಲಿ ಬಿಡುಗಡೆ ಆದ ‘ಆಚಾರ್ಯ’ ಸಿನಿಮಾ ಬಳಿಕ ಪೂಜಾ ಹೆಗ್ಡೆ ಯಾವುದೇ ದಕ್ಷಿಣ ಭಾರತದ ಸಿನಿಮಾದಲ್ಲಿ ನಟಿಸಿರಲಿಲ್ಲ. ಇದೀಗ ‘ಸೂರ್ಯ 44’ ಸಿನಿಮಾ ಮೂಲಕ ಪೂಜಾ ಕಮ್ ಬ್ಯಾಕ್ ಮಾಡಿದ್ದಾರೆ.

ಇದನ್ನೂ ಓದಿ: Actor Suriya: ಹೊಸ ಸಿನಿಮಾ ಅನೌನ್ಸ್‌ ಮಾಡಿದ ಕಾಲಿವುಡ್‌ ನಟ ಸೂರ್ಯ: ಅಚ್ಚರಿಯಾಗಿದೆ ಪೋಸ್ಟರ್‌!

ಸದ್ಯ ಸೂರ್ಯ ಅವರು ಶಿವ ನಿರ್ದೇಶನದ ‘ಕಂಗುವ’ ಚಿತ್ರದ ಬಿಡುಗಡೆಗಾಗಿ ಸೂರ್ಯ ಕಾಯುತ್ತಿದ್ದಾರೆ. ತಮಿಳು ಚಿತ್ರರಂಗದ (Tamil Cinema) ಖ್ಯಾತ ನಟ ಸೂರ್ಯ (Actor Surya) ಅವರ ಬಹು ನಿರೀಕ್ಷಿತ `ಕಂಗುವ’ (Kanguva Film) ಚಿತ್ರದ ಟೀಸರ್ ಔಟ್‌ ಆಗಿತ್ತು. ಬಾಲಿವುಡ್​ ನಟ ಬಾಬಿ ಡಿಯೋಲ್​ ಕೂಡ ಹೊಸ ಅವತಾರ ತಾಳಿದ್ದರು. ಬಾಬಿ ಡಿಯೋಲ್ ಒಳಗೊಂಡಿರುವ ಬೃಹತ್ ಯುದ್ಧದ ದೃಶ್ಯವನ್ನು ದೊಡ್ಡ ಪ್ರಮಾಣದಲ್ಲಿ ಚಿತ್ರೀಕರಿಸಲಾಗಿತ್ತು. ನಟ ಸೂರ್ಯ (Actor Suriya) ಅವರು ಸಿರುತೈ ಶಿವ ನಿರ್ದೇಶನದ ಬಹು ನಿರೀಕ್ಷಿತ ಪ್ರಾಜೆಕ್ಟ್ ʻಕಂಗುವʼ ಚಿತ್ರವನ್ನು 38 ಭಾಷೆಗಳಲ್ಲಿ ಬಿಡುಗಡೆ ಮಾಡುವುದಾಗಿ ಇತ್ತೀಚಿನ ಸಂದರ್ಶನವೊಂದರಲ್ಲಿ ಚಿತ್ರದ ನಿರ್ಮಾಪಕ ಕೆ.ಇ.ಜ್ಞಾನವೇಲ್ ರಾಜಾ ಅವರು ಹೇಳಿದ್ದರು. ‘ಕಂಗುವ’ ಸಿನಿಮಾವನ್ನು ಪ್ಯಾನ್ ಇಂಡಿಯಾ ಮಾತ್ರವಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಬಿಡುಗಡೆ ಮಾಡುವ ಆಲೋಚನೆಯನ್ನು ನಿರ್ಮಾಪಕರು ಹಾಕಿಕೊಂಡಿದ್ದರು.

ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರಲ್ಲಿ ಕೋವೈ ಸರಳಾ, ಯೋಗಿ ಬಾಬು, ಆನಂದ್ ರಾಜ್, ರೆಡಿನ್ ಕಿಂಗ್ಸ್ಲಿ, ರವಿ ರಾಘವೇಂದ್ರ ಮತ್ತು ಇತರರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading

ಬಾಲಿವುಡ್

Shah Rukh Khan: ಮಗಳ ಜತೆ ಶಾರುಖ್ ಅಭಿನಯಿಸಲಿರುವ ಸಿನಿಮಾ ದೃಶ್ಯ ಲೀಕ್‌!

Shah Rukh Khan : ಆರ್ಯನ್ ಮತ್ತು ಸುಹಾನಾ ವಿಮಾನ ನಿಲ್ದಾಣದಲ್ಲಿ ಒಂದೇ ಕಾರಿನಲ್ಲಿ ಬಂದಿರುವುದು ಕಂಡುಬಂದಿತ್ತು. ಅವರೊಂದಿಗೆ ಗೌರಿ ಖಾನ್, ಪೂಜಾ ಮತ್ತು ಅವರ ಇಡೀ ತಂಡವಿತ್ತು. ನಟ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ ಅವರ ವಿವಾಹಪೂರ್ವ ಕ್ರೂಸ್ ಪಾರ್ಟಿಗೆ ಹೋಗುತ್ತಿದ್ದಾರೆ ಎನ್ನಲಾಗಿತ್ತು. ಆದರೀಗ ಸಿನಿಮಾ ಶೂಟಿಂಗ್‌ಗೆ ಹೋಗಿದ್ದಾರೆ ಎಂದು ವರದಿಯಾಗಿದೆ.

VISTARANEWS.COM


on

Shah Rukh Khan shooting for King in Spain
Koo

ಬೆಂಗಳೂರು: ಸುಜೋಯ್‌ ಘೋಷ್‌ ಮತ್ತು ಸಿದ್ಧಾರ್ಥ್‌ ಆನಂದ್‌ ನಿರ್ದೇಶನದ ʼಕಿಂಗ್‌ʼ ಟೈಟಲ್‌ನ ಸಿನಿಮಾದಲ್ಲಿ ಶಾರುಖ್‌ (Shah Rukh Khan) ಹಾಗೂ ಮಗಳು ಸುಹಾನಾ ಖಾನ್ ಅಭಿನಯಿಸುತ್ತಿದ್ದಾರೆ. 2023ರಲ್ಲಿ ಬ್ಯಾಕ್‌ ಟು ಬ್ಯಾಕ್‌ ಹಿಟ್‌ ಸಿನಿಮಾಗಳನ್ನು ನೀಡಿದ ಬಳಿಕ ಶಾರುಖ್‌ ʻಕಿಂಗ್‌ʼ ಸಿನಿಮಾ ಮೇಲೆ ಗಮನ ಹರಿಸಿದ್ದಾರೆ. ಇದೀಗ ಶಾರುಖ್‌ ಸ್ಪೇನ್‌ನಲ್ಲಿ ಚಿತ್ರದ ಚಿತ್ರೀಕರಣದಲ್ಲಿದ್ದಾರೆ ಎಂದು ವರದಿಯಾಗಿದೆ. ಜತೆಗೆ ಶೂಟ್‌ ಮಾಡುತ್ತಿರುವ ದೃಶ್ಯವೊಂದು ಲೀಕ್‌ ಕೂಡ ಆಗಿದೆ. ಈ ಪೋಟೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಚಿತ್ರದಲ್ಲಿ, ಶಾರುಖ್ ಗುಂಪಿನಲ್ಲಿ ಸಂಭಾಷಣೆಯಲ್ಲಿ ಮುಳುಗಿರುವುದನ್ನು ಕಾಣಬಹುದು. ಲೀಕ್‌ ಆದ ಫೋಟೊದಲ್ಲಿ ನೀಲಿ ಸೂಟ್ ಧರಿಸಿ ಕಾಣಿಸಿಕೊಂಡಿದ್ದಾರೆ. ಆದರೆ ಚಿತ್ರತಂಡ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ. ಕಳೆದ ವಾರ ಸುಹಾನಾ ಜತೆ ಶಾರುಖ್ ಮುಂಬೈನಿಂದ ತೆರಳಿದ್ದು ಕುತೂಹಲ ಮೂಡಿಸಿತ್ತು. ಮೇ 30 ರಂದು, ಶಾರುಖ್ ಐಪಿಎಲ್ ಟ್ರೋಫಿಯನ್ನು ಗೆದ್ದ ನಂತರ ಮಗಳ ಜತೆ ಮುಂಬೈನ ಕಲಿನಾ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು.

ಆರ್ಯನ್ ಮತ್ತು ಸುಹಾನಾ ವಿಮಾನ ನಿಲ್ದಾಣದಲ್ಲಿ ಒಂದೇ ಕಾರಿನಲ್ಲಿ ಬಂದಿರುವುದು ಕಂಡುಬಂದಿತ್ತು. ಅವರೊಂದಿಗೆ ಗೌರಿ ಖಾನ್, ಪೂಜಾ ಮತ್ತು ಅವರ ಇಡೀ ತಂಡವಿತ್ತು. ನಟ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ ಅವರ ವಿವಾಹಪೂರ್ವ ಕ್ರೂಸ್ ಪಾರ್ಟಿಗೆ ಹೋಗುತ್ತಿದ್ದಾರೆ ಎನ್ನಲಾಗಿತ್ತು. ಆದರೀಗ ಸಿನಿಮಾ ಶೂಟಿಂಗ್‌ಗೆ ಹೋಗಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: Shah Rukh Khan : ಶಾರುಖ್​ ಖಾನ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಈ ಚಿತ್ರವನ್ನು ಶಾರುಖ್ ಅವರ ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಮತ್ತು ಅವರ ಪಠಾಣ್ ನಿರ್ದೇಶಕ ಸಿದ್ಧಾರ್ಥ್ ಆನಂದ್ ಅವರ ಮಾರ್ಫ್ಲಿಕ್ಸ್ ಪಿಕ್ಚರ್ಸ್ ಸಹ-ನಿರ್ಮಾಣ ಮಾಡಿದ್ದಾರೆ.

ಇನ್ನು ಶಾರುಖ್‌ ಮಗಳು ಕಳೆದ ವರ್ಷ ಬಿಡುಗಡೆಯಾದ ʻದಿ ಆರ್ಚೀಸ್ʼ (The Archies) ಸಿನಿಮಾ ಮೂಲಕ ಬಣ್ಣದ ಲೋಕ ಪ್ರವೇಶಿಸಿದರು. ಜೋಯಾ ಅಖ್ತರ್ ಮತ್ತು ರೀಮಾ ಕಾಗ್ತಿ ನಿರ್ದೇಶನದ ‘ದಿ ಆರ್ಚೀಸ್’ ಸಿನಿಮಾದಲ್ಲಿ ಸುಹಾನಾ ಜತೆಗೆ ಅಮಿತಾಭ್‌ ಬಚ್ಚನ್ ಮತ್ತು ಜಯಾ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದಾ ಕೂಡ ನಟಿಸಿದ್ದರು. ಈ ವೇಳೆ ಅವರಿಬ್ಬರು ಡೇಟಿಂಗ್ ನಡೆಸುತ್ತಿದ್ದರು ಎನ್ನುವ ಗುಸುಗುಸು ಹಬ್ಬಿತ್ತು. ಆದರೆ ಈ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಸುಹಾನಾ ಖಾನ್‌ ಅಭಿನಯದ ಮೊದಲ ಚಿತ್ರ ‘ದಿ ಆರ್ಚೀಸ್’ ಒಟಿಟಿಯಲ್ಲಿ ತೆರೆಕಂಡು ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತ್ತು.

Continue Reading

ಸ್ಯಾಂಡಲ್ ವುಡ್

Kiccha Sudeep: ಸಂದೇಶ್‌ ಪ್ರೊಡಕ್ಷನ್ಸ್‌ ಜತೆ ಕೈ ಜೋಡಿಸಿದ ಕಿಚ್ಚ ಸುದೀಪ್

Kiccha Sudeep: ಸಂದೇಶ್‌ ನಾಗರಾಜ್‌ ಅರ್ಪಿಸುವ ಸಂದೇಶ್‌ ಪ್ರೊಡಕ್ಷನ್‌ ಬ್ಯಾನರ್‌ನಲ್ಲಿ ಎನ್‌ ಸಂದೇಶ್‌ ನಿರ್ಮಾಣದಲ್ಲಿ ಕಿಚ್ಚ ಸುದೀಪ್‌ ಸಿನಿಮಾ ಮೂಡಿಬರುವುದು ಅಧಿಕೃತವಾಗಿದೆ. ಇತ್ತೀಚೆಗಷ್ಟೇ ಕಿಚ್ಚ ಸುದೀಪ್‌ ಅವರ ಜತೆಗೆ ಸಂದೇಶ್‌ ನಾಗರಾಜ್ ಮತ್ತು ಎನ್ ಸಂದೇಶ್‌ ಅವರು ಒಟ್ಟಿಗೆ ಇರುವ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿತ್ತು. ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಾಣದ ಚಿತ್ರದಲ್ಲಿ ಕಿಚ್ಚ ಸುದೀಪ್ ಅವರು ನಾಯಕರಾಗಿ ನಟಿಸುತ್ತಿರುವ ಚಿತ್ರ ಶುರುವಾಗಲಿದೆ ಎಂದೇ ಹೇಳಲಾಗಿತ್ತು.

VISTARANEWS.COM


on

Kichcha Sudeep joined hands with Sandesh
Koo

ಬೆಂಗಳೂರು: ಕನ್ನಡ ಚಿತ್ರೋದ್ಯಮಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವ ಸಂದೇಶ್‌ (kiccha sudeep) ಪ್ರೊಡಕ್ಷನ್ಸ್‌ ಸಂಸ್ಥೆ, ಈಗಾಗಲೇ ಸದಭಿರುಚಿಯ ಚಿತ್ರಗಳ ಜತೆಗೆ ಬಿಗ್‌ ಬಜೆಟ್‌ ಸಿನಿಮಾಗಳನ್ನು ಕನ್ನಡಕ್ಕೆ ನೀಡಿದೆ. ಕೆಲ ತಿಂಗಳ ಹಿಂದಷ್ಟೇ ಬಿಡುಗಡೆಯಾಗಿದ್ದ “ಘೋಸ್ಟ್‌” ಚಿತ್ರವೂ ಅದರಲ್ಲೊಂದು. ಇದೀಗ ಇದೇ ಸಂದೇಶ್‌ ಪ್ರೊಡಕ್ಷನ್ಸ್‌ ಸಂಸ್ಥೆ, ಮತ್ತೊಂದು ಬಿಗ್‌ ಸಿನಿಮಾವನ್ನು ಕೈಗೆತ್ತಿಕೊಂಡಿದೆ. ಈ ಸಲ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಜತೆಗೆ ಕೈ ಜೋಡಿಸಿದ್ದಾರೆ ನಿರ್ಮಾಪಕ ಎನ್‌. ಸಂದೇಶ್‌.

ಸಂದೇಶ್‌ ನಾಗರಾಜ್‌ ಅರ್ಪಿಸುವ ಸಂದೇಶ್‌ ಪ್ರೊಡಕ್ಷನ್‌ ಬ್ಯಾನರ್‌ನಲ್ಲಿ ಎನ್‌ ಸಂದೇಶ್‌ ನಿರ್ಮಾಣದಲ್ಲಿ ಕಿಚ್ಚ ಸುದೀಪ್‌ ಸಿನಿಮಾ ಮೂಡಿಬರುವುದು ಅಧಿಕೃತವಾಗಿದೆ. ಇತ್ತೀಚೆಗಷ್ಟೇ ಕಿಚ್ಚ ಸುದೀಪ್‌ ಅವರ ಜತೆಗೆ ಸಂದೇಶ್‌ ನಾಗರಾಜ್ ಮತ್ತು ಎನ್ ಸಂದೇಶ್‌ ಅವರು ಒಟ್ಟಿಗೆ ಇರುವ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿತ್ತು. ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಾಣದ ಚಿತ್ರದಲ್ಲಿ ಕಿಚ್ಚ ಸುದೀಪ್ ಅವರು ನಾಯಕರಾಗಿ ನಟಿಸುತ್ತಿರುವ ಚಿತ್ರ ಶುರುವಾಗಲಿದೆ ಎಂದೇ ಹೇಳಲಾಗಿತ್ತು. ಇದೀಗ ಆ ಊಹೆ ನಿಜವಾಗಿದೆ. ಸಂದೇಶ್‌ ಪ್ರೊಡಕ್ಷನ್ಸ್‌ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಕಿಚ್ಚ ಸುದೀಪ್‌ ಸಿನಿಮಾ ಸೆಟ್ಟೇರಲಿದೆ.

ಇದನ್ನೂ ಓದಿ: Kiccha Sudeep: ಚಾಮುಂಡಿ ಬೆಟ್ಟಕ್ಕೆ ಕಿಚ್ಚ ಸುದೀಪ್ ಭೇಟಿ; ಇವರನ್ನು ನೋಡಲು ಜನವೋ ಜನ!

ಹಾಗಾದರೆ ಯಾವಾಗ ಶುರು?

ಸದ್ಯಕ್ಕೆ ಕಿಚ್ಚ ಸುದೀಪ್‌ ಸಂದೇಶ್‌ ಪ್ರೊಡಕ್ಷನ್ಸ್‌ ಅಡಿಯಲ್ಲಿ ಸಿನಿಮಾ ಮಾಡಲು ಒಪ್ಪಿಕೊಂಡಿದ್ದಾರೆ. ಈ ಸಿನಿಮಾ ಯಾವಾಗ ಶುರು, ನಿರ್ದೇಶಕರು ಯಾರು ಎಂಬ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಮಾಪಕರು ಘೋಷಣೆ ಮಾಡಲಿದ್ದಾರೆ. ಈ ನಡುವೆ ಇದೇ ಸಂದೇಶ್‌ ಪ್ರೊಡಕ್ಷನ್ಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಪ್ರಭುದೇವ ನಟನೆಯ “ವುಲ್ಫ್” ಸಿನಿಮಾ ರೆಡಿಯಾಗಿದೆ. ಸೃಜನ್‌ ಲೋಕೇಶ್‌ ಜತೆಗಿನ ಜಿಎಸ್‌ಟಿ ಚಿತ್ರದ ಶೂಟಿಂಗ್‌ ಕೆಲಸಗಳೂ ಮುಕ್ತಾಯವಾಗಿದ್ದು, ಬಿಡುಗಡೆಯ ಹೊಸ್ತಿಲಲ್ಲಿದೆ. ಇದರ ಜತೆಗೆ “ಘೋಸ್ಟ್‌ 2” ಅಥವಾ ಶಿವಣ್ಣನ ಜತೆಗಿನ “ದಳವಾಯಿ ಮುದ್ದಣ್ಣ”, “ಬೀರಬಲ್ 2” ಸಿನಿಮಾಗಳೂ ಸೆಟ್ಟೇರಲಿವೆ.

Continue Reading

ಸಿನಿಮಾ

Rameshwaram Cafe: ಅನಂತ್ ಅಂಬಾನಿ ಎರಡನೇ ಪ್ರಿ ವೆಡ್ಡಿಂಗ್‌ನಲ್ಲಿ ಮೇನ್‌ ಮೆನು ರಾಮೇಶ್ವರಂ ಕೆಫೆಯ ಪುಡಿ ಇಡ್ಲಿ ಮತ್ತು ಪುಡಿ ದೋಸೆ!

Rameshwaram Cafe: ಎರಡನೇ ಪೂರ್ವ ವಿವಾಹ ಸಮಾರಂಭವು ಮೇ 28ರಿಂದ 30ರವರೆಗೆ ನಡೆದಿದೆ. ಅಂಬಾನಿ ಕುಟುಂಬವು ಸುಮಾರು 800 ಅತಿಥಿಗಳಿಗಾಗಿ ಐಷಾರಾಮಿ ಕ್ರೂಸ್‌ನಲ್ಲಿ (ಬೃಹತ್‌ ಹಡಗು) ಪಾರ್ಟಿ ಆಯೋಜಿಸಿತ್ತು. ಇದು ಮೂರು ದಿನಗಳಲ್ಲಿ ಇಟಲಿಯಿಂದ ದಕ್ಷಿಣ ಫ್ರಾನ್ಸ್‌ತನಕ ಸುಮಾರು 4380 ಕಿ. ಮೀ ಚಲಿಸಲಿದೆ ಎನ್ನಲಾಗಿತ್ತು. ಅತಿಥಿಗಳ ಪಟ್ಟಿಯಲ್ಲಿ ಸಲ್ಮಾನ್ ಖಾನ್, ಶಾರುಖ್ ಖಾನ್, ಆಮೀರ್ ಖಾನ್, ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಇದ್ದರು.

VISTARANEWS.COM


on

Rameshwaram Cafe food on Anant Ambani, Radhika Merchant
Koo

ಬೆಂಗಳೂರು: ಅನಂತ್ ಅಂಬಾನಿ (Rameshwaram Cafe) ಮತ್ತು ರಾಧಿಕಾ ಮರ್ಚಂಟ್‌ ಅವರು ಎರಡನೇ ವಿವಾಹ ಪೂರ್ವ ಸಮಾರಂಭ ಐಷಾರಾಮಿ ಹಡಗಿನಲ್ಲಿ ನಡೆದಿರುವುದು ಗೊತ್ತೆ ಇದೆ. ಈ ವಿವಾಹ ಪೂರ್ವ ಸಮಾರಂಭದಲ್ಲಿ ರಾಮೇಶ್ವರಂ ಕೆಫೆ ಕೂಡ ಭಾಗಿಯಾಗಿದೆ. ದಕ್ಷಿಣ ಭಾರತೀಯ ಆಹಾರವನ್ನು ಒದಗಿಸುವ ಏಕೈಕ ರೆಸ್ಟೋರೆಂಟ್ ಇದಾಗಿದೆ ಎಂದು ರಾಮೇಶ್ವರಂ ಕೆಫೆ ಇನ್‌ಸ್ಟಾ ಮೂಲಕ ಹೇಳಿಕೊಂಡಿದೆ. ಈವೆಂಟ್‌ಗೆ ಹಾಜರಾಗುವ ಬಾಲಿವುಡ್ ಸೆಲೆಬ್ರಿಟಿಗಳು ಮತ್ತು ಕ್ರಿಕೆಟ್‌ಗಳು ಕೆಫೆ ನೀಡುವ ಆಹಾರವನ್ನು ಆನಂದಿಸುತ್ತಿದ್ದಾರೆ ಎಂದು ರಾಮೇಶ್ವರಂ ಕೆಫೆ ಹೇಳಿಕೊಂಡಿದೆ.

ರಾಮೇಶ್ವರಂ ಕೆಫೆಯ ಅಧಿಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಪೋಸ್ಟ್ ವೈರಲ್ ಆಗಿದೆ. “ಇನ್ನೊಂದು ಮೈಲಿಗಲ್ಲು..! ಸ್ಪೇನ್‌ನಲ್ಲಿ ನಡೆಯುತ್ತಿರುವ ಪ್ರಪಂಚದ ಅತ್ಯುತ್ತಮ ವಿವಾಹ ಪೂರ್ವ ಆಚರಣೆಗಳ ಭಾಗಿಯಾಗಿದ್ದಕ್ಕೆ ನಾವು ಸಂತೋಷಪಡುತ್ತೇವೆ. ರಾಮೇಶ್ವರಂ ಕೆಫೆ ದಕ್ಷಿಣದ ಅತ್ಯುತ್ತಮ ದಕ್ಷಿಣ ಭಾರತೀಯ ಆಹಾರವನ್ನು ಒದಗಿಸುವ ಏಕೈಕ ರೆಸ್ಟೋರೆಂಟ್ ಆಗಿದೆ,” ಎಂದು ಶಿರ್ಷಿಕೆ ನೀಡಿದ್ದಾರೆ. ರಾಮೇಶ್ವರಂ ಕೆಫೆ ಸಹಸ್ಥಾಪಕ ರಾಘವೇಂದ್ರ ರಾವ್ ಮಾಧ್ಯಮವೊಂದಕ್ಕೆ ಈವೆಂಟ್‌ಗೆ ಹಾಜರಾಗುವ ಬಾಲಿವುಡ್ ಸೆಲೆಬ್ರಿಟಿಗಳು ಮತ್ತು ಕ್ರಿಕೆಟ್‌ಗಳು ಕೆಫೆ ನೀಡುವ ಆಹಾರವನ್ನು ಆನಂದಿಸುತ್ತಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ʻʻಪುಡಿ ಇಡ್ಲಿ ಮತ್ತು ಪುಡಿ ದೋಸೆಯನ್ನು ಆನಂದಿಸುತ್ತಿದ್ದಾರೆ” ಎಂದು ಅವರು ಹೇಳಿದರು.

ಇದನ್ನೂ ಓದಿ: Anant-Radhika Wedding: ಅನಂತ್‌ ಅಂಬಾನಿ-ರಾಧಿಕಾ ಮರ್ಚಂಟ್‌ ವಿವಾಹ ಸಮಾರಂಭಕ್ಕೆ ಸ್ಥಳ ನಿಗದಿ

ಎರಡನೇ ಪೂರ್ವ ವಿವಾಹ ಸಮಾರಂಭವು ಮೇ 28ರಿಂದ 30ರವರೆಗೆ ನಡೆದಿದೆ. ಅಂಬಾನಿ ಕುಟುಂಬವು ಸುಮಾರು 800 ಅತಿಥಿಗಳಿಗಾಗಿ ಐಷಾರಾಮಿ ಕ್ರೂಸ್‌ನಲ್ಲಿ (ಬೃಹತ್‌ ಹಡಗು) ಪಾರ್ಟಿ ಆಯೋಜಿಸಿತ್ತು. ಇದು ಮೂರು ದಿನಗಳಲ್ಲಿ ಇಟಲಿಯಿಂದ ದಕ್ಷಿಣ ಫ್ರಾನ್ಸ್‌ತನಕ ಸುಮಾರು 4380 ಕಿ. ಮೀ ಚಲಿಸಲಿದೆ ಎನ್ನಲಾಗಿತ್ತು. ಅತಿಥಿಗಳ ಪಟ್ಟಿಯಲ್ಲಿ ಸಲ್ಮಾನ್ ಖಾನ್, ಶಾರುಖ್ ಖಾನ್, ಆಮೀರ್ ಖಾನ್, ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಇದ್ದರು.

ಈ ಮುಂಚೆ ನಡೆದ ಪ್ರಿ ವೆಡ್ಡಿಂಗ್‌ ಕಾರ್ಯಕ್ರಮಕ್ಕೆ ಮುಕೇಶ್‌ ಅಂಬಾನಿ ಅವರು ಸುಮಾರು 1 ಸಾವಿರ ಕೋಟಿ ರೂ. ವ್ಯಯಿಸಿದ್ದಾರೆ ಎಂದು ತಿಳಿದುಬಂದಿದೆ. ಖ್ಯಾತ ಪಾಪ್‌ ಗಾಯಕಿ ರಿಹಾನಾ, ಸಚಿನ್‌ ತೆಂಡೂಲ್ಕರ್‌, ಮಹೇಂದ್ರ ಸಿಂಗ್‌ ಧೋನಿ ಕುಟುಂಬಸ್ಥರು, ಸಲ್ಮಾನ್‌ ಖಾನ್‌, ಶಾರುಖ್‌ ಖಾನ್‌, ಆಮೀರ್‌ ಖಾನ್‌, ರಣವೀರ್‌ ಸಿಂಗ್‌, ದೀಪಿಕಾ ಪಡುಕೋಣೆ, ಗೌತಮ್‌ ಅದಾನಿ, ಆಲಿಯಾ ಭಟ್‌, ರಣಬೀರ್‌ ಕಪೂರ್‌, ಬಿಲ್‌ ಗೇಟ್ಸ್‌ ಸೇರಿ ದೇಶ-ವಿದೇಶಗಳ ನೂರಾರು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಬೆಂಗಳೂರಿನ (Blast in Bengaluru) ವೈಟ್‌ ಫೀಲ್ಡ್‌ ಸಮೀಪದ ಬ್ರೂಕ್‌ ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ಸಂಭವಿಸಿದ ಸ್ಫೋಟಕ್ಕೂ ಗುಜರಾತ್‌ನ ಜಾಮ್‌ ನಗರದಲ್ಲಿ (Jam Nagar in Gujarat) ನಡೆಯುತ್ತಿರುವ ಖ್ಯಾತ ಉದ್ಯಮಿ ಮುಕೇಶ್‌ ಅಂಬಾನಿ (Mukesh Ambani) ಅವರ ಪುತ್ರ ಅನಂತ್‌ ಅಂಬಾನಿ ಅವರ ಮದುವೆಗೂ (Anant Amabani Marriage) ಸಂಬಂಧವಿದೆಯಾ ಎಂಬ ಪ್ರಶ್ನೆ ಈ ಹಿಂದೆ ಎದುರಾಗಿತ್ತು.

ರಾಮೇಶ್ವರಂ ಕೆಫೆ ಕಳೆದ ಎರಡೇ ವರ್ಷಗಳಲ್ಲಿ ಬೆಂಗಳೂರಿನಲ್ಲಿ ಭಾರಿ ಜನಪ್ರಿಯತೆಯನ್ನು ಪಡೆದಿರುವ ಹೋಟೆಲ್‌ ಚೈನ್‌. ಈಗ 4.5 ಕೋಟಿ ರೂ. ಬೆಲೆ ಬಾಳುವ ಈ ಉದ್ಯಮದ ಸ್ಥಾಪಕರು ದಿವ್ಯಾ ರಾಘವೇಂದ್ರ ರಾವ್‌ ಮತ್ತು ರಾಘವೇಂದ್ರ ರಾವ್‌. ದಿವ್ಯಾ ರಾಘವೇಂದ್ರ ರಾವ್‌ ಅವರು ಮೂಲತಃ ಒಬ್ಬ ಐಐಎಂ ಪದವೀಧರೆ. ಗುಜರಾತ್‌ನ ಅಹಮದಾಬಾದ್‌ನವರು. ಅವರು ಪ್ರೀತಿಸಿ ಮದುವೆಯಾಗಿದ್ದು ಬೆಂಗಳೂರಿನ ರಾಘವೇಂದ್ರ ರಾವ್‌ ಅವರನ್ನು. ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್‌ ಕಲಾಂ ಅವರ ಸ್ಪೂರ್ತಿಯಿಂದ ಅವರ ಹುಟ್ಟೂರಾದ ರಾಮೇಶ್ವರಂ ಕೆಫೆ ಎಂದು ಹೆಸರಿಟ್ಟಿದ್ದರು.

ಅಂಬಾನಿ ಮದುವೆಗೆ ಏನು ಕನೆಕ್ಷನ್‌?
ಗುಜರಾತ್‌ನ ಜಾಮ್‌ ನಗರದಲ್ಲಿ ಈಗ ಮುಕೇಶ್‌ ಅಂಬಾನಿ ಅವರ ಪುತ್ರ ಅನಂತ್‌ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್‌ ಅವರ ಮದುವೆಯ ವಿವಾಹಪೂರ್ವ ಸಂಭ್ರಮಾಚರಣೆ ನಡೆಯುತ್ತಿದೆ. ಅದರಲ್ಲಿ ದಕ್ಷಿಣ ಭಾರತದ ಖಾದ್ಯ ಗಳನ್ನು ತಯಾರಿಸುವ ಹೊಣೆಗಾರಿಕೆಯನ್ನು ರಾಮೇಶ್ವರಂ ಕೆಫೆ ಹೊತ್ತುಕೊಂಡಿದೆ. ಇದು ಹಲವರ ಕಣ್ಣು ಕುಕ್ಕಿದೆ ಎಂದು ಹೇಳಲಾಗಿತ್ತು.

ದಿವ್ಯಾ ಮತ್ತು ರಾಘವೇಂದ್ರ ರಾವ್‌ ಅವರು ತಮ್ಮ ಸಂಪರ್ಕ ಬಳಸಿ ಈ ಮಹತ್ವದ ಕಾರ್ಯಕ್ರಮದ ಕ್ಯಾಟರಿಂಗ್‌ ವ್ಯವಸ್ಥೆಯನ್ನು ಪಡೆದಿದ್ದರು. ಇದರ ಜವಾಬ್ದಾರಿಯನ್ನು ಹೊತ್ತುಕೊಂಡೇ ರಾಘವೇಂದ್ರ ರಾವ್‌ ಅವರು ಶುಕ್ರವಾರ ಜಾಮ್‌ನಗರದಲ್ಲಿದ್ದರು.

ಈ ಕಾರ್ಯಕ್ರಮದ ಕ್ಯಾಟರಿಂಗ್‌ ಪಡೆಯುವ ವಿಚಾರದಲ್ಲಿ ಇನ್ನೂ ಕೆಲವರು ಪೈಪೋಟಿಯಲ್ಲಿದ್ದರು ಎನ್ನಲಾಗಿದೆ. ಅವರು ಅವಕಾಶ ಸಿಗದೆ ಸಿಟ್ಟುಗೊಂಡಿದ್ದರು ಎನ್ನಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ರಾಮೇಶ್ವರಂ ಹೋಟೆಲ್‌ನಲ್ಲಿ ಕೆಲವೊಂದು ಕಿರಿಕಿರಿ ಮಾಡುವ ಕೆಲಸಗಳನ್ನು ನಡೆಸಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸರಿಗೂ ದೂರು ನೀಡಲಾಗಿತ್ತು ಎಂದು ತಿಳಿದುಬಂದಿತ್ತು.

Continue Reading
Advertisement
Rohit Sharma
ಕ್ರೀಡೆ7 mins ago

Rohit Sharma: ರೋಹಿತ್​ ಜೀವಕ್ಕೆ ಕುತ್ತು ತಂದ ಅಭಿಮಾನಿಯನ್ನು ಹೆಡೆಮುರಿ ಕಟ್ಟಿದ ನ್ಯೂಯಾರ್ಕ್ ಪೊಲೀಸ್; ವಿಡಿಯೊ ವೈರಲ್​

Prajwal Revanna Case
ಕರ್ನಾಟಕ22 mins ago

Hassan MP Prajwal Revanna case: ಮೊಂಡಾಟ ಬಿಡದ ಪ್ರಜ್ವಲ್‌; ಇಂದೇ ಸ್ಥಳ ಮಹಜರಿಗೆ SIT ಪ್ಲ್ಯಾನ್‌

Actor Suriya visits temple ahead of Suriya 44
ಕಾಲಿವುಡ್31 mins ago

Actor Suriya: ಹೊಸ ಸಿನಿಮಾ ಶೂಟಿಂಗ್‌ ಶುರು ಮಾಡಿದ ನಟ ಸೂರ್ಯ!

IND vs BAN
ಕ್ರೀಡೆ35 mins ago

IND vs BAN: ಪಾಂಡ್ಯ ಬಲಿಷ್ಠ ಹೊಡೆತಕ್ಕೆ ನೆತ್ತರು ಚೆಲ್ಲಿದ ಬಾಂಗ್ಲಾ ಬೌಲರ್; ವಿಡಿಯೊ ವೈರಲ್​

Assembly Election Results 2024:
ದೇಶ50 mins ago

Assembly Election Results 2024: ಇಂದು ಅರುಣಾಚಲ ಪ್ರದೇಶ & ಸಿಕ್ಕಿಂ ರಿಸಲ್ಟ್‌; 10 ಅಭ್ಯರ್ಥಿಗಳು ಅವಿರೋಧ ಆಯ್ಕೆ

Weather Updates
ಮಳೆ2 hours ago

Weather Updates:ಇಡೀ ರಾತ್ರಿ ಭಾರೀ ಮಳೆ; ಮುಂಗಾರು ಆರಂಭದಲ್ಲೇ ಬೆಂಗಳೂರು ಅಸ್ತವ್ಯಸ್ತ

cyber attack ನನ್ನ ದೇಶ ನನ್ನ ದನಿ
ಅಂಕಣ2 hours ago

ಸೈಬರ್‌ ಸೇಫ್ಟಿ ಅಂಕಣ: 2024ರ ಸೈಬರ್‌ ಸೆಕ್ಯುರಿಟಿ ಟ್ರೆಂಡ್‌ಗಳು

ನನ್ನ ದೇಶ ನನ್ನ ದನಿ baman das basu
ಅಂಕಣ2 hours ago

ನನ್ನ ದೇಶ ನನ್ನ ದನಿ ಅಂಕಣ: ಬ್ರಿಟಿಷರು ಬರುವ ಮೊದಲು ರಸ್ತೆಗಳೇ ಇರಲಿಲ್ಲವಾದರೆ, ಕೃಷ್ಣದೇವರಾಯನ ಭಾರಿ ಸೈನ್ಯ ಆಕಾಶದಲ್ಲಿ ಹಾರಾಡುತ್ತಿತ್ತೇ?

Karnataka weather Forecast
ಮಳೆ3 hours ago

Karnataka Weather : ಮೇಲ್ಮೈ ಸುಳಿಗಾಳಿ ಎಫೆಕ್ಟ್‌; ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

Heatwave Effect
ಆರೋಗ್ಯ3 hours ago

Heatwave Effect: ಬೇಸಿಗೆಗೂ ಕಣ್ಣಿನ ಸಮಸ್ಯೆಗೂ ಇದೆ ನಂಟು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು16 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು7 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌