Recession in 2023 | ಮುಂದಿನ ವರ್ಷ ಜಗತ್ತಿಗೆ ಆರ್ಥಿಕ ಹಿಂಜರಿತ: ವಿಶ್ವಬ್ಯಾಂಕ್‌ ಎಚ್ಚರಿಕೆ - Vistara News

ಪ್ರಮುಖ ಸುದ್ದಿ

Recession in 2023 | ಮುಂದಿನ ವರ್ಷ ಜಗತ್ತಿಗೆ ಆರ್ಥಿಕ ಹಿಂಜರಿತ: ವಿಶ್ವಬ್ಯಾಂಕ್‌ ಎಚ್ಚರಿಕೆ

ಹಣದುಬ್ಬರ ನಿಯಂತ್ರಿಸಲು ಸೆಂಟ್ರಲ್‌ ಬ್ಯಾಂಕ್‌ಗಳು ಬಡ್ಡಿ ದರ ಏರಿಸುತ್ತವೆ. ಆದರೆ ಇದರ ಪರಿಣಾಮ ಆರ್ಥಿಕ ಬೆಳವಣಿಗೆ (Recession in 2023) ಕುಂಠಿತವಾಗಿ ಹಿಂಜರಿತ ಸಂಭವಿಸುವ ಸಾಧ್ಯತೆ ಇದೆ ಎಂದು ವಿಶ್ವಬ್ಯಾಂಕ್‌ ತಿಳಿಸಿದೆ.

VISTARANEWS.COM


on

world bank
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್:‌ ಜಗತ್ತಿನ ನಾನಾ ದೇಶಗಳಲ್ಲಿ ಹಣದುಬ್ಬರವನ್ನು ಹತ್ತಿಕ್ಕಲು ಸೆಂಟ್ರಲ್‌ ಬ್ಯಾಂಕ್‌ಗಳು ಬಡ್ಡಿ ದರವನ್ನು ಏರಿಸುತ್ತಿವೆ. ಇದರ ಪರಿಣಾಮವಾಗಿ 2023ರಲ್ಲಿ ಜಾಗತಿಕ ಆರ್ಥಿಕ ಹಿಂಜರಿತ (Recession in 2023) ಸಂಭವಿಸಬಹುದು ಎಂದು ವಿಶ್ವಬ್ಯಾಂಕ್ ವರದಿ ಎಚ್ಚರಿಸಿದೆ.

ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಇದರಿಂದ ಭಾರಿ ಸಮಸ್ಯೆಯಾಗಲಿದೆ ಎಂದು ವಿಶ್ವಬ್ಯಾಂಕ್‌ ಎಚ್ಚರಿಸಿದೆ. ವಿಶ್ವಾದ್ಯಂತ ಬಡ್ಡಿ ದರಗಳು ಏರಿಕೆಯಾಗುತ್ತಿವೆ. ಕಳೆದ ಐದು ದಶಕಗಳಲ್ಲಿ ಎಂದೂ ಇಂಥ ಪ್ರವೃತ್ತಿ ಕಂಡು ಬಂದಿಲ್ಲ. ಮುಂದಿನ ವರ್ಷ ಕೂಡ ಇದು ಮುಂದುವರಿಯಬಹುದು. ಆದರೆ ಹಣದುಬ್ಬರವನ್ನು ಕೋವಿಡ್‌ ಪೂರ್ವ ಮಟ್ಟಕ್ಕೆ ಇಳಿಸಲು ಈ ಕ್ರಮಗಳು ಬಹುಶಃ ಸಾಕಾಗಲಾರವು ಎಂದು ತಿಳಿಸಿದೆ. ಸೆಂಟ್ರಲ್‌ ಬ್ಯಾಂಕ್‌ಗಳು ಜಾಗತಿಕ ಹಣಕಾಸು ನೀತಿ ದರವನ್ನು ಸರಾಸರಿ 4%ಕ್ಕೆ ಏರಿಸುವ ನಿರೀಕ್ಷೆ ಇದೆ. ಅಂದರೆ 2021ರ 2% ಸರಾಸರಿಗೆ ಹೋಲಿಸಿದರೆ ಇಮ್ಮಡಿಯಾಗಲಿದೆ ಎಂದು ಹೂಡಿಕೆದಾರರು ಅಭಿಪ್ರಾಯಪಟ್ಟಿದ್ದಾರೆ. ರಷ್ಯಾ-ಉಕ್ರೇನ್‌ ಸಂಘರ್ಷ ಕೂಡ ಜಾಗತಿಕ ಆರ್ಥಿಕತೆಯ ಬೆಳವಣಿಗೆ ಮೇಲೆ ಪ್ರತಿಕೂಲ ಪ್ರಭಾವ ಬೀರಿದೆ. ಕಚ್ಚಾ ತೈಲ ದರ ಹೆಚ್ಚಳ, ಆಹಾರ ಹಣದುಬ್ಬರ ಸವಾಲಾಗಿ ಪರಿಣಮಿಸಿದೆ.

ಪೂರೈಕೆಯಲ್ಲಿ ಉಂಟಾಗಿರುವ ಕೊರತೆ ನೀಗದಿದ್ದರೆ ಹಾಗೂ ಕಾರ್ಮಿಕ ಮಾರುಕಟ್ಟೆಯ ಮೇಲಿನ ಒತ್ತಡ ಪರಿಹರಿಸದಿದ್ದರೆ, ಕೇವಲ ಬಡ್ಡಿ ದರ ಏರಿಕೆಯಿಂದ ಜಾಗತಿಕ ಹಣದುಬ್ಬರ ಮುಂದಿನ ವರ್ಷ ಸುಮಾರು ಸರಾಸರಿ 5%ರ ಮಟ್ಟದಲ್ಲಿ ಇರಬಹುದು. ಅಂದರೆ ಇದು ಕೋವಿಡ್‌ ಪೂರ್ವ ಮಟ್ಟಕ್ಕೆ ಹೋಲಿಸಿದರೆ ಎರಡು ಪಟ್ಟು ಹೆಚ್ಚು. ಹೀಗಾಗಿ ಸೆಂಟ್ರಲ್‌ ಬ್ಯಾಂಕ್‌ಗಳು ತಮ್ಮ ಟಾರ್ಗೆಟ್‌ ಪ್ರಕಾರ ಹಣದುಬ್ಬರ ಹತ್ತಿಕ್ಕಲು ಬಡ್ಡಿ ದರದಲ್ಲಿ ಹೆಚ್ಚುವರಿ 2% ಏರಿಕೆ ಮಾಡುವ ಸಾಧ್ಯತೆ ಇದೆ. ಆದರೆ ಇದರ ಪರಿಣಾಮ ಜಾಗತಿಕ ಆರ್ಥಿಕ ಹಿಂಜರಿತ ಸಂಭವಿಸಬಹುದು. ಅಮೆರಿಕ, ಚೀನಾ ಮತ್ತು ಯುರೋಪ್‌ನಲ್ಲಿ ಈಗಾಗಲೇ ಆರ್ಥಿಕತೆ ಮಂದಗತಿಯಲ್ಲಿದೆ ಎಂದು ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಮುಂಬೈ ದಾಳಿ ಉಗ್ರ ಅಜ್ಮಲ್‌ ಕಸಬ್‌ ನಿರಪರಾಧಿ ಎಂದ ಕಾಂಗ್ರೆಸ್‌ ನಾಯಕ; ಭುಗಿಲೆದ್ದ ವಿವಾದ!

2008ರ ನವೆಂಬರ್‌ನಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿ ವೇಳೆ ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳದ (ATS) ಮಾಜಿ ಮುಖ್ಯಸ್ಥ ಹೇಮಂತ್‌ ಕರ್ಕರೆ ಅವರು ಹುತಾತ್ಮರಾಗಿದ್ದು ಅಜ್ಮಲ್‌ ಕಸಬ್‌ ಗುಂಡಿನಿಂದ ಅಲ್ಲ. ಆರ್‌ಎಸ್‌ಎಸ್‌ ಜತೆ ನಿಕಟ ಸಂಬಂಧ ಹೊಂದಿದ್ದ ಪೊಲೀಸ್‌ ಅಧಿಕಾರಿಯ ಗುಂಡಿನಿಂದ ಹೇಮಂತ್‌ ಕರ್ಕರೆ ಹುತಾತ್ಮರಾದರು ಎಂದು ಕಾಂಗ್ರೆಸ್‌ ನಾಯಕ ವಿಜಯ್‌ ನಾಮದೇವರಾವ್ ವಡೆತ್ತಿವಾರ್‌‌ ಹೇಳಿದ್ದಾರೆ. ಇದು ಈಗ ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

Vijay Namdevrao Wadettiwar
Koo

ಮುಂಬೈ: ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ರಾಜಕೀಯ ನಾಯಕರ ಹೇಳಿಕೆಗಳು ವಿವಾದಗಳ ಸ್ವರೂಪ ಪಡೆದಿವೆ. ಪ್ರತಿಸ್ಪರ್ಧಿಗಳ ವಿರುದ್ಧ ಮಾತನಾಡುವ ಭರದಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ ಮಹಾರಾಷ್ಟ್ರ ಪ್ರತಿಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್‌ ನಾಯಕ ವಿಜಯ್‌ ನಾಮದೇವರಾವ್ ವಡೆತ್ತಿವಾರ್‌ (Vijay Namdevrao Wadettiwar) ಅವರು ಉಗ್ರ ಅಜ್ಮಲ್‌ ಕಸಬ್‌ (Ajmal Kasab) ಪರವಾಗಿ ಮಾತನಾಡಿದ್ದಾರೆ. ಇದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.

“2008ರ ನವೆಂಬರ್‌ನಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿ ವೇಳೆ ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳದ (ATS) ಮಾಜಿ ಮುಖ್ಯಸ್ಥ ಹೇಮಂತ್‌ ಕರ್ಕರೆ ಅವರು ಹುತಾತ್ಮರಾಗಿದ್ದು ಅಜ್ಮಲ್‌ ಕಸಬ್‌ ಗುಂಡಿನಿಂದ ಅಲ್ಲ. ಆರ್‌ಎಸ್‌ಎಸ್‌ ಜತೆ ಲಿಂಕ್‌ ಇರುವ ಪೊಲೀಸ್‌ ಅಧಿಕಾರಿಯೊಬ್ಬರು ಹೇಮಂತ್‌ ಕರ್ಕರೆ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ” ಎಂಬುದಾಗಿ ಹೇಳಿದ್ದಾರೆ.

ಮಹಾರಾಷ್ಟ್ರ ಉತ್ತರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ (ಇವರು ಮುಂಬೈ ದಾಳಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಾದ ಮಂಡಿಸಿದವರು. ಅಜ್ಮಲ್‌ ಕಸಬ್‌ ಗಲ್ಲಿಗೇರಿಸುವಲ್ಲಿ ಇವರ ಪಾತ್ರವೂ ಇದೆ) ಉಜ್ವಲ್‌ ನಿಕಮ್‌ ಅವರ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಕಾಂಗ್ರೆಸ್‌ ನಾಯಕ ಅಜ್ಮಲ್‌ ಕಸಬ್‌ ಪರವಾಗಿ ಮಾತನಾಡಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ಸರಿಯಾಗಿ ತಿರುಗೇಟು ನೀಡಿದ್ದಾರೆ.

“ಅಜ್ಮಲ್‌ ಕಸಬ್‌ಗೆ ಬಿರಿಯಾನಿ ನೀಡಲಾಗುತ್ತಿದೆ ಎಂಬುದಾಗಿ ಹೇಳುವ ಮೂಲಕ ಉಜ್ವಲ್‌ ನಿಕಮ್‌ ಅವರು ಕಾಂಗ್ರೆಸ್‌ಗೆ ಮಾನಹಾನಿ ಮಾಡಿದ್ದಾರೆ. ಯಾರಾದರೂ ಕಸಬ್‌ಗೆ ಬಿರಿಯಾನಿ ಕೊಡುತ್ತಾರಾ? ಇದಾದ ಬಳಿಕ ಕುತಂತ್ರವನ್ನು ಉಜ್ವಲ್‌ ನಿಕಮ್‌ ಒಪ್ಪಿಕೊಂಡರು. ಇವರನ್ನು ಯಾರದರೂ ವಕೀಲ ಎನ್ನುತ್ತಾರಾ? ಇವರು ಎಂತಹ ವಿಶ್ವಾಸಘಾತುಕ ಇರಬಹುದು? ಹೇಮಂತ್‌ ಕರ್ಕರೆ ಅವರಿಗೆ ತಗುಲಿದ ಗುಂಡು ಆರ್‌ಎಸ್‌ಎಸ್‌ ಜತೆ ನಂಟು ಹೊಂದಿರುವ ಪೊಲೀಸ್‌ ಅಧಿಕಾರಿಯ ಗನ್‌ನಿಂದ. ಇಂತಹ ಪ್ರಕರಣದಲ್ಲಿ ಬಿಜೆಪಿಯು ದೇಶದ್ರೋಹಿ ಉಜ್ವಲ್‌ ನಿಕಮ್‌ ಅವರಿಗೆ ಟಿಕೆಟ್‌ ನೀಡಿದೆ. ಆ ಮೂಲಕ ಬಿಜೆಪಿಯು ದೇಶದ್ರೋಹಿಗಳಿಗೆ ಬೆಂಬಲ ನೀಡುತ್ತದೆಯೇ” ಎಂಬುದಾಗಿ ವಿಜಯ್‌ ನಾಮದೇವರಾವ್ ವಡೆತ್ತಿವಾರ್‌‌ ಹೇಳಿದ್ದಾರೆ.

ತಿರುಗೇಟು ಕೊಟ್ಟ ಬಿಜೆಪಿ

ವಿಜಯ್‌ ನಾಮದೇವರಾವ್ ವಡೆತ್ತಿವಾರ್‌‌ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್‌ ತಾವ್ಡೆ ಪ್ರತಿಕ್ರಿಯಿಸಿದ್ದಾರೆ. “ಕಾಂಗ್ರೆಸ್‌ ತನ್ನ ಮತಬ್ಯಾಂಕ್‌ ಅನ್ನು ಭದ್ರಪಡಿಸಲು ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತದೆ. ಕಾಂಗ್ರೆಸ್‌ ಹಿರಿಯ ನಾಯಕರೊಬ್ಬರು ಮುಂಬೈ ದಾಳಿಯ ಉಗ್ರನಿಗೆ ಕ್ಲೀನ್‌ ಚಿಟ್‌ ನೀಡುತ್ತಾರೆ ಎಂದರೆ ಇದಕ್ಕಿಂತಹ ಕೆಳ ಹಂತಕ್ಕೆ ಇಳಿಯಲು ಸಾಧ್ಯವಿಲ್ಲ. ಅವರ ಪ್ರಕಾರ, ಹೇಮಂತ್‌ ಕರ್ಕರೆ ಹುತಾತ್ಮರಾಗಿದ್ದು ಅಜ್ಮಲ್‌ ಕಸಬ್‌ನಿಂದ ಅಲ್ಲ ಎಂಬುದು ಅವರ ಹೇಳಿಕೆಯಾಗಿದೆ. ಹಾಗಾದರೆ, ಕಾಂಗ್ರೆಸ್‌ ಉಗ್ರರನ್ನು ಬೆಂಬಲಿಸುತ್ತದೆ ಎಂದಾಯಿತಲ್ಲವೇ” ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: Lok Sabha Election 2024: ರಾಹುಲ್‌ ಗಾಂಧಿಯ ಡಿಎನ್‌ಎ ಪರೀಕ್ಷಿಸಬೇಕು; ವಿವಾದ ಹುಟ್ಟುಹಾಕಿದ ಶಾಸಕ ಅನ್ವರ್ ಹೇಳಿಕೆ

Continue Reading

ಕರ್ನಾಟಕ

Beer Shortage: ಬೇಸಿಗೆಯಲ್ಲಿ ಮದ್ಯ ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!

Beer Shortage: ಬೇಸಿಗೆಯಲ್ಲಿ ಮದ್ಯ ಪ್ರಿಯರಿಗೆ ಬಿಯರ್‌ ಕುಡಿಯುತ್ತಾ ಚಿಲ್‌ ಆಗುವ ಚಾನ್ಸ್ ಸಿಗುವುದು ಕಷ್ಟವಾಗಲಿದೆ. ಯಾಕೆಂದರೆ, ಬೇಡಿಕೆಗೆ ತಕ್ಕಂತೆ ಸರಬರಾಜು ಇಲ್ಲದ ಕಾರಣ ಇನ್ನೆರಡು ತಿಂಗಳು ರಾಜ್ಯದಲ್ಲಿ ಬಿಯರ್‌ ಅಭಾವ ಉಂಟಾಗುವ ಸಾಧ್ಯತೆ ಇದೆ.

VISTARANEWS.COM


on

Beer Shortage
Koo

ಬೆಂಗಳೂರು: ಬೇಸಿಗೆಯಲ್ಲಿ ಐಸ್‌ ಕ್ರೀಂ, ಕೂಲ್‌ ಡ್ರಿಂಕ್ಸ್‌ಗೆ ಹೆಚ್ಚು ಬೇಡಿಕೆ ಇರುತ್ತದೆ. ಮತ್ತೊಂದೆಡೆ ಅದಕ್ಕಿಂತ ದುಪ್ಪಟ್ಟು ಬೇಡಿಕೆ ಬಿಯರ್‌ಗಳಿಗೆ ಇರೋದನ್ನು ಕಾಣಬಹುದು. ಆದರೆ, ಇದೀಗ ಮದ್ಯ ಪ್ರಿಯರಿಗೆ ಬ್ಯಾಡ್‌ ನ್ಯೂಸ್ ಸಿಕ್ಕಿದ್ದು, ಇನ್ನೆರಡು ತಿಂಗಳ ಕಾಲ ಬಿಯರ್‌ ಸಿಗುವುದು ಕಷ್ಟವಾಗಲಿದೆ. ಯಾಕೆಂದರೆ, ಬೇಡಿಕೆಗೆ ತಕ್ಕಂತೆ ಸರಬರಾಜು ಇಲ್ಲದ ಕಾರಣ ರಾಜ್ಯದಲ್ಲಿ ಬಿಯರ್ ಅಭಾವ (Beer Shortage) ಉಂಟಾಗಿರುವುದು ಕಂಡುಬಂದಿದೆ.

ಬೇಸಿಗೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚುತ್ತಿದ್ದಂತೆ ರಾಜ್ಯದಲ್ಲಿ ಬಿಯರ್ ಮಾರಾಟ ಕೂಡ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಆದರೆ, ಬೇಡಿಕೆಗೆ ತಕ್ಕಂತೆ ಬಿಯರ್ ಸರಬರಾಜು ಆಗುತ್ತಿಲ್ಲ. ಹೀಗಾಗಿ ಇನ್ನೂ ಎರಡು ತಿಂಗಳ ಕಾಲ ಬಿಯರ್‌ ಅಭಾವ ಮುಂದುವರಿಯುವ ಸಾಧ್ಯತೆ ಇದೆ.

ಇದನ್ನೂ ಓದಿ | Tax Returns: ಪಾಕ್‌ ಜನರಿಗೆ ಬೆಲೆಯೇರಿಕೆ ಬೆನ್ನಲ್ಲೇ ತೆರಿಗೆ ಹೊರೆ; ಸರ್ಕಾರ ಯಾವ ಮಟ್ಟಕ್ಕೆ ಇಳಿದಿದೆ ನೋಡಿ!

ರಾಜ್ಯದಲ್ಲಿ ಪ್ರಸ್ತುತ ನಿತ್ಯ 11.50 ಲಕ್ಷ ಲೀಟರ್ ಬಿಯರ್ ಮಾರಾಟವಾಗುತ್ತಿದೆ. ಬೇಸಿಗೆ‌ ಮುನ್ನ ನಿತ್ಯ 8 ಲಕ್ಷ ಲೀಟರ್ ಬಿಯರ್ ಮಾರಾಟವಾಗುತ್ತಿತ್ತು. ಈಗ ಬೇಸಿಗೆ ಹಿನ್ನೆಲೆ ನಿತ್ಯ 2 ಲಕ್ಷ ಲೀಟರ್ ಬಿಯರ್ ಬೇಡಿಕೆ ಹೆಚ್ಚಾಗಿದೆ. ಆದರೆ, ಬೇಡಿಕೆಗೆ ತಕ್ಕಂತೆ ಬಿಯರ್ ಸರಬರಾಜು ಸಿಗುತ್ತಿಲ್ಲ. ಇದಕ್ಕೆ ಕಾರಣ ಬಿಯರ್ ತಯಾರಿಕೆಯಲ್ಲಿ ಭಾರಿ ಕುಂಠಿತವಾಗಿರುವುದು. ಬಿಯರ್ ಅಭಾವ ಇರುವ ಬಗ್ಗೆ ಅಬಕಾರಿ‌ ಇಲಾಖೆ ಮಾಹಿತಿ ನೀಡಿದೆ. ಇದರಿಂದ ಮುಂದಿನ ಎರಡು ತಿಂಗಳ ಕಾಲ ಬಿಯರ್‌ ಅಭಾವ ಉಂಟಾಗಲಿದೆ ಎನ್ನಲಾಗಿದೆ.

ಈ ವರ್ಷದ ಆರಂಭದ ತಿಂಗಳಲ್ಲಿ ಬಿಯರ್ ಮಾರಾಟ ಕುಸಿತ ಕಂಡಿತ್ತು. ಕಳೆದ ವರ್ಷದ ಬೇಸಿಗೆಗೆ ಹೋಲಿಸಿದರೆ ಈ ವರ್ಷದಲ್ಲಿ ಶೇ.30 ಮಾರಾಟ ಹೆಚ್ಚಳವಾಗಿದೆ. ಅಗತ್ಯ ಇರುವಷ್ಟು ಬಿಯರ್ ಸಂಗ್ರಹ ಇದೆ ಎಂದು ಅಬಕಾರಿ ಇಲಾಖೆ ಮೂಲಗಳಿಂದ ಕಳೆದ ತಿಂಗಳು ತಿಳಿದುಬಂದಿತ್ತು. ಆದರೆ, ಇದೀಗ ಬಿಯರ್‌ಗೆ ಭಾರಿ ಬೇಡಿಕೆ ಉಂಟಾಗಿದ್ದು, ಅದಕ್ಕೆ ತಕ್ಕಂತೆ ಪೂರೈಕೆಯಾಗದಿರುವುದು ಸಮಸ್ಯೆಗೆ ಕಾರಣವಾಗಿದೆ.

ಬೇಸಿಗೆಯಲ್ಲಿ ನೀರಿನ ಸಮಸ್ಯೆ ಕೂಡ ಬಿಯರ್‌ ಉತ್ಪಾದನೆ ಕುಸಿಯಲು ಕಾರಣವಾಗಿದೆ. ಇನ್ನು ಸಾರಿಗೆ ಸಮಸ್ಯೆ, ಚುನಾವಣೆ ಸಮಯದಲ್ಲಿ ಮಳಿಗೆಗಳಲ್ಲಿ ಹೆಚ್ಚುವರಿ ಮದ್ಯ, ಬಿಯರ್‌ ಸಂಗ್ರಹಣೆ ಮೇಲೆ ನಿರ್ಬಂಧ ಹೇರಿರುವುದು ಕೂಡ ಬಿಯರ್‌ ಪೂರೈಕೆ ಕುಸಿಯಲು ಕಾರಣವಾಗಿದೆ.

ಇದನ್ನೂ ಓದಿ | Cocoa Price: ಅಡಿಕೆ ಮರದೆತ್ತರಕ್ಕೆ ಕೋಕೋ ಬೆಳೆಯ ಧಾರಣೆ! 800% ಏರಿಕೆ!

ಬಿಸಿಲಿನ ಝಳದಿಂದ ಹೊರಬರಲು ಜನರು ಹಾಟ್ ಡ್ರಿಂಕ್ಸ್‌ಗಳಿಗಿಂತ ಬೇಸಿಗೆಯಲ್ಲಿ ಬಿಯರ್ ಹೆಚ್ಚು ಕುಡಿಯುತ್ತಾರೆ. ಜತೆಗೆ ಈ ವರ್ಷ ಮಾರಾಟ ಹೆಚ್ಚಳವಾಗಲು ಲೋಕಸಭಾ ಚುನಾವಣೆಯ ಕೊಡುಗೆಯೂ ಇದೆ. ಬಿಯರ್ ಕುಡಿದರೆ ಬಿಸಿಲ ಧಗೆಯಿಂದ ಹೊರಬರಬಹುದು ಎಂದು ನಂಬಲಾಗಿದ್ದು, ಇದು ಬಿಯರ್ ಬಳಕೆ ಹೆಚ್ಚಳವಾಗಲು ಕಾರಣವಾಗಿದೆ. ಇನ್ನು ಮದ್ಯ ಮಾರಾಟದಿಂದ ಈ ವರ್ಷ ರಾಜ್ಯ ಸರ್ಕಾರ 36 ಸಾವಿರ ಕೋಟಿ ರೂ. ಆದಾಯ ನಿರೀಕ್ಷಿಸಿದೆ. ಆರಂಭದಲ್ಲಿಯೇ ಉತ್ತಮ ಮಾರಾಟ ಕಂಡು ಬಂದಿರುವುದರಿಂದ ಆದಾಯ ಹೆಚ್ಚುವ ನಿರೀಕ್ಷೆ ಇದೆ.

Continue Reading

Latest

IPL 2024 : ಚೆನ್ನೈ ತಂಡದ ಮಾರಕ ಬೌಲರ್ ಮಹೀಶ್​ ಪತಿರಾನಾ​ ಐಪಿಎಲ್​ನಿಂದ ಹೊರಕ್ಕೆ

IPL 2024: ಬಲಗೈ ವೇಗಿ ಈವರೆಗೆ 6 ಇನಿಂಗ್ಸ್​​ಗಳಲ್ಲಿ 13 ವಿಕೆಟ್​​ಗಳನ್ನು ಪಡೆದಿದ್ದಾರೆ. ಅವರ ಡೆತ್ ಬೌಲಿಂಗ್ ಕೌಶಲ್ಯದಿಂದ ಸಿಎಸ್​​ಕೆಗೆ ನಿರ್ಣಾಯಕ ಆಸ್ತಿಯಾಗಿದ್ದರು. ಆದಾಗ್ಯೂ, ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಪದೇ ಪದೇ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಟಿ20 ವಿಶ್ವಕಪ್​​ನಲ್ಲಿ ಪ್ರಮುಖ ಪಂದ್ಯಾವಳಿಗೆ ಮುಂಚಿತವಾಗಿ ಶ್ರೀಲಂಕಾ ಕ್ರಿಕೆಟ್ ತಮ್ಮ ವೇಗಿಯನ್ನು ಅಪಾಯಕ್ಕೆ ತಳ್ಳಲು ಬಯಸುವುದಿಲ್ಲ.

VISTARANEWS.COM


on

IPL 2024
Koo

ಬೆಂಗಳೂರು: ಎಸ್ಆರ್​ಎಚ್​​ ವಿರುದ್ಧದ ಪಂದ್ಯದ ನಂತರ ಸ್ನಾಯುಸೆಳೆತಕ್ಕೆ ಒಳಗಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗದ ಬೌಲರ್​ ಮಹೀಶ್ ಪತಿರಾನಾ ಐಪಿಎಲ್​ನ (IPL 2024) ಉಳಿದ ಭಾಗದಿಂದ ಹೊರಗುಳಿಯುವಂತಾಗಿದೆ. ಅವರು ತಮ್ಮ ತಾಯ್ನಾಡಾದ ಶ್ರೀಲಂಕಾಕ್ಕೆ ಮರಳಿದ್ದಾರೆ. ಧರ್ಮಶಾಲಾದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ಅವರು ಫಿಟ್ ಆಗಿರುತ್ತಾರೆ ಎಂದು ವರದಿಯಾಗಿತ್ತು. ಆದರೆ ಸಿಎಸ್​​ಕೆ ಸ್ಟಾರ್​ ಇನ್ನೂ ಗುಣಮುಖರಾಗದ ಕಾರಣ ತಾಯ್ನಾಡಿಗೆ ಮರಳಿದ್ದಾರೆ ಎಂದು ಸಿಎಸ್​ಕೆ ಮೂಲಗಳೂ ಬಹಿರಂಗಪಡಿಸಿವೆ. ಇದರರ್ಥ ಅವರು ಟಿ20 ವಿಶ್ವಕಪ್​​ನಲ್ಲಿ ಲಂಕಾ ತಂಡದ ಭಾಗವಾಗಲಿದ್ದಾರೆ.

ಬಲಗೈ ವೇಗಿ ಈವರೆಗೆ 6 ಇನಿಂಗ್ಸ್​​ಗಳಲ್ಲಿ 13 ವಿಕೆಟ್​​ಗಳನ್ನು ಪಡೆದಿದ್ದಾರೆ. ಅವರ ಡೆತ್ ಬೌಲಿಂಗ್ ಕೌಶಲ್ಯದಿಂದ ಸಿಎಸ್​​ಕೆಗೆ ನಿರ್ಣಾಯಕ ಆಸ್ತಿಯಾಗಿದ್ದರು. ಆದಾಗ್ಯೂ, ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಪದೇ ಪದೇ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಟಿ20 ವಿಶ್ವಕಪ್​​ನಲ್ಲಿ ಪ್ರಮುಖ ಪಂದ್ಯಾವಳಿಗೆ ಮುಂಚಿತವಾಗಿ ಶ್ರೀಲಂಕಾ ಕ್ರಿಕೆಟ್ ತಮ್ಮ ವೇಗಿಯನ್ನು ಅಪಾಯಕ್ಕೆ ತಳ್ಳಲು ಬಯಸುವುದಿಲ್ಲ.

ಇದನ್ನೂ ಓದಿ : IPL 2024 : ಮ್ಯಾಕ್ಸಿ ಐಪಿಎಲ್​ನಲ್ಲಿ ಬರೀ ಬೂಸಿ; ಮ್ಯಾಕ್ಸ್​ವೆಲ್​ ಆಟಕ್ಕೆ ಅಭಿಮಾನಿಗಳ ಆಕ್ರೋಶ

ಸ್ನಾಯುಸೆಳೆತದ ಗಾಯಗಳು ಚೇತರಿಸಿಕೊಳ್ಳಲು ಸಾಮಾನ್ಯವಾಗಿ ಐದರಿಂದ ಆರು ವಾರಗಳನ್ನು ತೆಗೆದುಕೊಳ್ಳುತ್ತವೆ. ಆದ್ದರಿಂದ ಪಥಿರಾನಾ ಈ ಹೊಡೆತದಿಂದ ಹೇಗೆ ಚೇತರಿಸಿಕೊಳ್ಳುತ್ತಾರೆ ಎಂಬುದನ್ನು ನೋಡುವುದು ಕುತೂಹಲಕರವಾಗಿದೆ. ಅವರು ಶ್ರೀಲಂಕಾದ ವಿಶ್ವಕಪ್ 2023 ತಂಡದ ಭಾಗವಾಗಿದ್ದರು. ಆದರೆ ಮಧ್ಯದಲ್ಲಿ ಗಾಯಗೊಂಡಿದ್ದರು. ವಿಶ್ವ ದರ್ಜೆಯ ಕೌಶಲ್ಯಗಳನ್ನು ಹೊಂದಿರುವ ಪಥಿರಾನಾ ಆ ಪಂದ್ಯಾವಳಿಗೆ ಸಂಪೂರ್ಣ ಫಿಟ್ ಆಗುವುದು ಕಡ್ಡಾಯ ಎಂದು ಹೇಳಿದರು.

ಇದು ಖಂಡಿತವಾಗಿಯೂ ಸಿಎಸ್​ಕೆಗೆ ದೊಡ್ಡ ಹೊಡೆತವಾಗಿದೆ. ಪಥಿರಾನಾ ನಿಜವಾಗಿಯೂ ಇಡೀ ಐಪಿಎಲ್ 2024 ರಿಂದ ಹೊರಗುಳಿದರೆ ಋತುರಾಜ್ ಗಾಯಕ್ವಾಡ್ ಮತ್ತು ತಂಡವು ತಮ್ಮ ವ್ಯವಹಾರವನ್ನು ಹೇಗೆ ನಡೆಸುತ್ತದೆ ಎಂಬುದನ್ನು ನೋಡಬೇಕಾಗಿದೆ ಎಂದು ಕ್ರಿಕೆಟ್ ಪಂಡಿತರು ಹೇಳಿದ್ದಾರೆ.

Continue Reading

ಕ್ರೀಡೆ

MI vs SRH: ಸನ್ ಸ್ಟ್ರೋಕ್​ನಿಂದ ತಪ್ಪಿಸಿಕೊಂಡೀತೇ ಮುಂಬೈ ಇಂಡಿಯನ್ಸ್​​?

MI vs SRH: ಹೆಡ್​ ಮತ್ತು ಅಭಿಷೇಕ್​ ಶರ್ಮಾ ಪವರ್​ ಪ್ಲೇ ತನಕ ಆಡಿದರೆ ದೊಡ್ಡ ಮೊತ್ತ ಹರಿದು ಬರಲಿದೆ. ಮಧ್ಯಮ ಕ್ರಮಾಂಕದಲ್ಲಿಯೂ ಬ್ಯಾಟಿಂಗ್​ ಲೈನ್​ ಅಪ್​ ಬಲಿಷ್ಠವಾಗಿದೆ. ಮಾರ್ಕ್ರಮ್​, ಕ್ಲಾಸೆನ್​ ನಿತೇಶ್​ ರೆಡ್ಡಿ, ಅಬ್ದುಲ್​ ಸಮದ್​ ಸಿಡಿದು ನಿಂತು ಪಂದ್ಯದ ಗತಿಯನ್ನೇ ಬದಲಿಸುವ ಸಾಮರ್ಥ್ಯ ಹೊಂದಿದ್ದಾರೆ.

VISTARANEWS.COM


on

MI vs SRH
Koo

ಮುಂಬಯಿ: ಪ್ಲೇ ಆಫ್​​ನಿಂದ ಬಹುತೇಕ ಹೊರಬಿದ್ದಿರುವ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್​(MI vs SRH) ಸೋಮವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್​(sunrisers hyderabad) ವಿರುದ್ಧ ಆಡಲಿದೆ. ಮುಂಬೈಗೆ ತವರಿನ ಪಂದ್ಯವಾಗಿದ್ದರೂ ಕೂಡ ತಂಡದ ಪ್ರದರ್ಶನ ನೋಡುವಾಗ ಗೆಲುವು ಕಷ್ಟ ಎನ್ನಲಡ್ಡಿಯಿಲ್ಲ.

ರಾಜೀವ್​ ಗಾಂಧಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದಿದ್ದ ಇತ್ತಂಡಗಳ ನಡುವಣ ಮೊದಲ ಮುಖಾಮುಖಿಯಲ್ಲಿ ಉಭಯ ತಂಡಗಳು ಸೇರಿ 523 ರನ್ ಬಾರಿಸಿತ್ತು. ಹೈದರಾಬಾದ್​ 3 ವಿಕೆಟ್​ಗೆ 277 ರನ್ ಬಾರಿಸಿದ್ದರೆ, ಮುಂಬೈ  5 ವಿಕೆಟ್​ಗೆ 246 ರನ್ ಗಳಿಸಿ 31 ರನ್​ ಅಂತರದಿಂದ ಸೋಲು ಕಂಡಿತ್ತು. ಹೆಡ್​ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರೆ, ಇವರ ಜತೆಗಾರ ಅಭಿಷೇಕ್​ ಶರ್ಮ 16 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು. ಇದೀಗ ಈ ಸೋಲಿಗೆ ಮುಂಬೈ ತವರಿನಲ್ಲಿ ಸೇಡು ತೀರಿಸಿಕೊಂಡೀತೇ ಎಂದು ಕಾದು ನೋಡಬೇಕಿದೆ.

ಉತ್ಸಾಹ ಕಳೆದುಕೊಂಡ ಮುಂಬೈ


ಐದು ಬಾರಿಯ ಚಾಂಪಿಯನ್​ ಮುಂಬೈ ತಂಡ ಈ ಬಾರಿ ಅತ್ಯಂತ ಕಳಪೆ ಪ್ರದರ್ಶನ ತೋರಿದೆ. ಯಾರೂ ಕೂಡ ತಂಡಕ್ಕಾಗಿ ಹಾಗೂ ಉತ್ಸಾಹ ಭರಿತವಾಗಿ ಆಡುತ್ತಿಲ್ಲ. 11 ಪಂದ್ಯಗಳಿಂದ ಕೇವಲ 3 ಗೆಲುವು ಸಾಧಿಸಿ 6 ಅಂಕದೊಂದಿಗೆ ಕೊನೆಯ ಸ್ಥಾನಿಯಾಗಿದೆ. ಕಳೆದ 16 ಆವೃತ್ತಿಯ ಐಪಿಎಲ್​ ಟೂರ್ನಿಯನ್ನು ನೋಡುವುದಾದರೆ ಮುಂಬೈ ಈ ಸ್ಥಿತಿ ತಲುಪಿದ್ದು ಇದೇ ಮೊದಲು.

ಇದನ್ನೂ ಓದಿ IPL 2024 : ಮ್ಯಾಕ್ಸಿ ಐಪಿಎಲ್​ನಲ್ಲಿ ಬರೀ ಬೂಸಿ; ಮ್ಯಾಕ್ಸ್​ವೆಲ್​ ಆಟಕ್ಕೆ ಅಭಿಮಾನಿಗಳ ಆಕ್ರೋಶ

ನೂತನ ನಾಯಕ ಹಾರ್ದಿಕ್​ ಪಾಂಡ್ಯ, ಸೂರ್ಯಕುಮಾರ್​ ಯಾದವ್​, ಇಶಾನ್​ ಕಿಶನ್​, ಟಿಮ್​ ಡೇವಿಡ್​ ಹೀಗೆ ಸಾಗಿ ಎಲ್ಲ ಬ್ಯಾಟರ್​ಗಳು ಘೋರ ವೈಫಲ್ಯ. ಬೌಲಿಂಗ್​ನಲ್ಲಿ ಜಸ್​ಪ್ರೀತ್​ ಬುಮ್ರಾ ಹೊರತುಪಡಿಸಿದ ಉಳಿದೆಲ್ಲರು ಲೆಕ್ಕಭರ್ತಿಗೆ ಆಡಿದಂತೆ ಆಡುತ್ತಿದ್ದಾರೆ. ಸಂಘಟಿತ ಪ್ರದರ್ಶನ ತೋರದೇ ಹೋದಲ್ಲಿ ಈ ಪಂದ್ಯದಲ್ಲಿಯೂ ಸೋಲು ಕಟ್ಟಿಟ್ಟ ಬುತ್ತಿ ಎನ್ನಲಡ್ಡಿಯಿಲ್ಲ. ಬೆನ್ನು ನೋವಿನಿಂದ ಬಳಲುತ್ತಿರುವ ರೋಹಿತ್​ ಈ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಅಧಿಕ. ಕಳೆದ ಪಂದ್ಯದಲ್ಲಿ ರೋಹಿತ್​ ಇಂಪ್ಯಾಕ್ಟ್​ ಆಟಗಾರನಾಗಿ ಕಣಕ್ಕಿಳಿದಿದ್ದರು. ಮುಂದಿನ ತಿಂಗಳು ಟಿ20 ವಿಶ್ವಕಪ್​ ಕೂಡ ಆರಂಭಗೊಳ್ಳುವ ಕಾರಣ ಬಿಸಿಸಿಐ ಕೂಡ ವಿಶ್ರಾಂತಿ ಪಡೆಯಲು ಸೂಚನೆ ನೀಡಿರಬಹುದು.

ಹೈದರಾಬಾದ್​ಗೆ ಮಹತ್ವದ ಪಂದ್ಯ


ಪ್ಲೇ ಆಫ್​ ಪ್ರವೇಶಿಸಬೇಕಿದ್ದರೆ ಸನ್​ರೈಸರ್ಸ್​ ಹೈದರಾಬಾದ್​ಗೆ ಇದು ಮಹತ್ವದ ಪಂದ್ಯ. ಸದ್ಯ 12 ಅಂಕ ಗಳಿಸಿ ನಾಲ್ಕನೇ(ಚೆನ್ನೈ-ಪಂಜಾಬ್​ ಪಂದ್ಯಕ್ಕೂ ಮುನ್ನ) ಸ್ಥಾನದಲ್ಲಿದೆ. ಕಮಿನ್ಸ್​ ಪಡೆ ಕಳೆದ ರಾಜಸ್ಥಾನ್​ ವಿರುದ್ಧದ ಪಂದ್ಯದಲ್ಲಿ ಕೇವಲ 1 ರನ್​ ಅಂತರದಿಂದ ಗೆದ್ದು ಬೀಗಿತ್ತು. ಹೀಗಾಗಿ ತಂಡಕ್ಕೆ ಲಕ್​ ಕೂಡ ಇದೆ. ಹೆಡ್​ ಮತ್ತು ಅಭಿಷೇಕ್​ ಶರ್ಮಾ ಪವರ್​ ಪ್ಲೇ ತನಕ ಆಡಿದರೆ ದೊಡ್ಡ ಮೊತ್ತ ಹರಿದು ಬರಲಿದೆ. ಮಧ್ಯಮ ಕ್ರಮಾಂಕದಲ್ಲಿಯೂ ಬ್ಯಾಟಿಂಗ್​ ಲೈನ್​ ಅಪ್​ ಬಲಿಷ್ಠವಾಗಿದೆ. ಮಾರ್ಕ್ರಮ್​, ಕ್ಲಾಸೆನ್​ ನಿತೇಶ್​ ರೆಡ್ಡಿ, ಅಬ್ದುಲ್​ ಸಮದ್​ ಸಿಡಿದು ನಿಂತು ಪಂದ್ಯದ ಗತಿಯನ್ನೇ ಬದಲಿಸುವ ಸಾಮರ್ಥ್ಯ ಹೊಂದಿದ್ದಾರೆ.

Continue Reading
Advertisement
Vijay Namdevrao Wadettiwar
ದೇಶ6 mins ago

ಮುಂಬೈ ದಾಳಿ ಉಗ್ರ ಅಜ್ಮಲ್‌ ಕಸಬ್‌ ನಿರಪರಾಧಿ ಎಂದ ಕಾಂಗ್ರೆಸ್‌ ನಾಯಕ; ಭುಗಿಲೆದ್ದ ವಿವಾದ!

Beer Shortage
ಕರ್ನಾಟಕ21 mins ago

Beer Shortage: ಬೇಸಿಗೆಯಲ್ಲಿ ಮದ್ಯ ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!

Torn Jeans Styling Tips
ಫ್ಯಾಷನ್33 mins ago

Torn Jeans Styling Tips: ಟೊರ್ನ್‌ ಜೀನ್ಸ್‌ ಪ್ಯಾಂಟ್‌ ಪ್ರಿಯರು ನೆನಪಿನಲ್ಲಿಟ್ಟುಕೊಳ್ಳಬೇಕಾದ 5 ಪ್ರಮುಖ ಸಂಗತಿಗಳು

lok sabha Election 2024 Bus Fare Hike
Lok Sabha Election 202435 mins ago

Lok Sabha Election 2024 : ಮತದಾನದ ಹಬ್ಬದಲ್ಲೂ ಲೂಟಿಗೆ ಇಳಿದ ಖಾಸಗಿ ಬಸ್‌! ವೋಟ್‌ ಹಾಕಲು ಬಸ್‌ ಏರುವವರಿಗೆ ಟಿಕೆಟ್ ದುಬಾರಿ!‌

IPL 2024
Latest37 mins ago

IPL 2024 : ಚೆನ್ನೈ ತಂಡದ ಮಾರಕ ಬೌಲರ್ ಮಹೀಶ್​ ಪತಿರಾನಾ​ ಐಪಿಎಲ್​ನಿಂದ ಹೊರಕ್ಕೆ

MI vs SRH
ಕ್ರೀಡೆ1 hour ago

MI vs SRH: ಸನ್ ಸ್ಟ್ರೋಕ್​ನಿಂದ ತಪ್ಪಿಸಿಕೊಂಡೀತೇ ಮುಂಬೈ ಇಂಡಿಯನ್ಸ್​​?

Kavitha Gowda chandan expected First Child
ಕಿರುತೆರೆ1 hour ago

Kavitha Gowda: ಮೊದಲ ಮಗುವಿನ ನಿರೀಕ್ಷೆಯಲ್ಲಿʻಲಕ್ಷ್ಮೀಬಾರಮ್ಮʼ ಧಾರಾವಾಹಿ ಖ್ಯಾತಿಯ ಜೋಡಿ

Met Gala 2024 Alia Bhatt attend
ಬಾಲಿವುಡ್1 hour ago

Met Gala 2024: ಮೆಟ್‌ ಗಾಲಾದಲ್ಲಿ ಆಲಿಯಾ ಹಾಜರಿ: ಪ್ರಿಯಾಂಕಾ ಚೋಪ್ರಾ ಗೈರು!

IPL2024
ಕ್ರೀಡೆ1 hour ago

IPL 2024 : ಮ್ಯಾಕ್ಸಿ ಐಪಿಎಲ್​ನಲ್ಲಿ ಬರೀ ಬೂಸಿ; ಮ್ಯಾಕ್ಸ್​ವೆಲ್​ ಆಟಕ್ಕೆ ಅಭಿಮಾನಿಗಳ ಆಕ್ರೋಶ

Job Alert
ಉದ್ಯೋಗ1 hour ago

Job Alert: ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 7ರೊಳಗೆ ಅಪ್ಲೈ ಮಾಡಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ7 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌