PSI Scam | ಗದ್ದಲದಲ್ಲೇ ಸರ್ಕಾರದ ಉತ್ತರ, ತಾಳ್ಮೆ ಕಳೆದುಕೊಂಡ ಪ್ರಿಯಾಂಕ್‌ ಖರ್ಗೆ: ಚರ್ಚೆ ಮುಕ್ತಾಯ - Vistara News

ಕರ್ನಾಟಕ

PSI Scam | ಗದ್ದಲದಲ್ಲೇ ಸರ್ಕಾರದ ಉತ್ತರ, ತಾಳ್ಮೆ ಕಳೆದುಕೊಂಡ ಪ್ರಿಯಾಂಕ್‌ ಖರ್ಗೆ: ಚರ್ಚೆ ಮುಕ್ತಾಯ

ಪಿಎಸ್‌ಐ ಹಗರಣಗಳ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಗದ್ದಲದ ನಡುವೆ ಸರ್ಕಾರ ಉತ್ತರ ನೀಡಿತು.

VISTARANEWS.COM


on

priyank kharge in assembly
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಧಾನಸಭೆ: ರಾಜ್ಯ ಪೊಲೀಸ್‌ ಇಲಾಖೆಗೆ ಸಬ್‌ಇನ್ಸ್‌ಪೆಕ್ಟರ್‌ಗಳ ನೇಮಕಾತಿಯಲ್ಲಿ ನಡೆದಿರುವ ಹಗರಣದ ಕುರಿತು ವಿಧಾನಸಭೆಯಲ್ಲಿ ನಡೆದ ಚರ್ಚೆ ಗದ್ದಲವಾಗಿ ಮಾರ್ಪಟ್ಟು, ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರ ನಡುವೆ ವೈಯಕ್ತಿಕ ಆರೋಪಗಳಿಗೂ ಕಾರಣವಾಯಿತು.

ನಿಯಮ 69 ರ ಅಡಿಯಲ್ಲಿ ಈ ಚರ್ಚೆಯನ್ನು ಮುಕ್ತಾಯಗೊಳಿಸಲಾಗಿದೆ ಎಂದು ಘೊಷಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಸದನವನ್ನು ಬುಧವಾರಕ್ಕೆ ಮುಂದೂಡಿದರು.

ಪ್ರಾರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹಗರಣದ ಆರಂಭದಿಂದಲೂ ನಡೆದುಬಂದ ದಾರಿಯನ್ನು ವಿವರಿಸಿದರು. ಒಂದು ಹಂತದಲ್ಲಿ ಮಾತನಾಡುತ್ತ, ಅನೇಕ ಬಾರಿ ಸದನದಲ್ಲಿ ಪ್ರಶ್ನೆ ಕೇಳಿದಾಗಲೂ, ಹಗರಣ ನಡೆದಿಲ್ಲ ಎಂದು ಸರ್ಕಾರ ಉತ್ತರ ನೀಡಿತ್ತು. ಸರ್ಕಾರ ಈ ಹಗರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿತು ಎಂದರು.

ಇದಕ್ಕೆ ಎದ್ದುನಿಂತ ಸಿಎಂ ಬೊಮ್ಮಾಯಿ, ಆರ್‌ಡಿ ಪಾಟೀಲ್‌ ಸ್ಟೇಟ್‌ಮೆಂಟ್‌ ಕೊಡುವಾಗ, ನಾನು ಕಾಂಗ್ರೆಸ್‌ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಕಾಂಗ್ರೆಸ್‌ನಿಂದ ಗ್ರಾಪಂ ಸದಸ್ಯನಾಗಿ, ಅಧ್ಯಕ್ಷನಾಗಿ ಆಯ್ಕೆಗಾಇದ್ದೇನೆ. ಚಿತ್ತಾಪುರ ಶಾಸಕ ಪ್ರಿಯಾಂಕ್‌ ಖರ್ಗೆ, ಅಫಜಲಪುರ ಶಾಸಕ ಎಂ.ವೈ. ಪಾಟೀಲ್‌ ಪರಿಚಿತರು ಎಂದು ಹೇಳಿಕೆ ಕೊಟ್ಟಿದ್ದಾರೆ ಎಂದರು.

ಇದರಿಂದ ಸಿಟ್ಟಿಗೆದ್ದ ಸಿದ್ದರಾಮಯ್ಯ, ಆರೋಪಪಟ್ಟಿಯನ್ನು ಸದನದಲ್ಲಿ ಮಂಡಿಸಿ. ಅವರ ಸ್ಟೇಟ್‌ಮೆಂಟ್‌ ಎಂದು ಬರೆದುಕೊಂಡು ಬಂದು ಹೇಳಿದರೆ ಸಾಲುವುದಿಲ್ಲ ಎಂದರು.

ಹಾಗಾದರೆ ನೀವು ಹೇಳಿದರೆ ಸತ್ಯ, ನಾವು ಹೇಳಿದ್ದು ಅಸತ್ಯವೇ? ಎಂದು ಹೇಳಿದರು. ಈ ಸಮಯದಲ್ಲಿ ಪ್ರತಿಕ್ರಿಯಿಸಿದ ಪ್ರಿಯಾಂಕ್‌ ಖರ್ಗೆ, ಮಹಾಂತೇಶ್‌ ಪಾಟೀಲ್‌ ಕಾಂಗ್ರೆಸ್‌ ಬ್ಲಾಕ್‌ ಪ್ರೆಸಿಡೆಂಟ್‌ ಆಗಿದ್ದರು. ಆದರೆ ಆರ್‌ಡಿ ಪಾಟೀಲ್‌ ಕಾಂಗ್ರೆಸ್‌ ಪಕ್ಷದಲ್ಲಿರಲಿಲ್ಲ. ದಿವ್ಯಾ ಹಾಗರಿಯನ್ನು ದಿಶಾ ಸಮಿತಿ ಸೇರಿ ವಿವಿಧೆಡೆ ಶಿಫಾರಸು ಮಾಡಿದ್ದು ಬಿಜೆಪಿ ಎಂದು ಕೋಪಗೊಂಡರು.

ನಂತರ ಮಾತು ಮುಂದುವರಿಸಿದ ಸಿದ್ದರಾಮಯ್ಯ, ಶಾಸಕ ಬಸವರಾಜ ದಡೇಸೂಗೂರು ಆಡಿಯೊ ಕುರಿತು ಪ್ರಸ್ತಾಪಿಸಿದ ಸಿದ್ದರಾಮಯ್ಯ, ನಿವೃತ್ತ ಪೊಲೀಸ್ ಕಾನ್ಸ್‌ಟೇಬಲ್ ಪರಸಪ್ಪ ಆಡಿಯೊದಲ್ಲಿ ಹೇಳಿದ್ದಾರೆ. ಕೆಲಸ ಕೊಡಿಸಲು 15 ಲಕ್ಷ ರೂ. ಪಡೆದಿದ್ದಾರೆ ಎಂದು ಹೇಳಿದ್ದಾರೆ ಎಂದು ಹೇಳಿದರು. ಈ ವೇಳೆ ಮಧ್ಯಪ್ರವೇಶಿಸಿದ ಬಸವರಾಜ ದಡೇಸೂಗೂರು, ಪರಸಪ್ಪನ ಮಗ ಫಿಸಿಕಲ್ಲೇ ಪಾಸಾಗಿಲ್ಲ ಎಂದ ಮೇಲೆ ನಾನು ಹಣ ಹೇಗೆ ಪಡೆಯಲಿ? ಇದು ಬರೀ ಆರೋಪ ಎಂದು ಹೇಳಿದರು. ಈ ಸಮಯದಲ್ಲಿ ಸಿಟ್ಟಿಗೆದ್ದ ದಡೇಸೂಗೂರು, ಸ್ಕ್ಯಾಮ್‌ ರಾಮಯ್ಯ ಎಂದು ಭಿತ್ತಿಪತ್ರ ಪ್ರದರ್ಶನ ಮಾಡಿದರು. ಕೆಲಸಕ್ಕೆ ಬಾರದ ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ನಂತರ ಮಾತು ಮುಂದುವರಿಸಿದ ಸಿದ್ದರಾಮಯ್ಯ, ಪ್ರಿಯಾಂಕ್‌ ಖರ್ಗೆ ಸುದ್ದಿಗೋಷ್ಠಿ ಮಾಡಿದ್ದಕ್ಕೆ ಮೂರು ನೋಟಿಸ್‌ ನೀಡಿದರು ಎಂದು ಆರೋಪಿಸಿದರು. ಈ ಸಮಯದಲ್ಲಿ ಕೆಲಕಾಲ ಸಿಎಂ. ಪ್ರಿಯಾಂಕ್‌ ಖರ್ಗೆ ಸರ್ಕಾರದ ವಿರುದ್ಧ ಹರಿಹಾಯ್ದರು. ಹಗರಣ ನಡೆಸುವುದು ತಪ್ಪಲ್ಲ, ಹಗರಣ ನಡೆದಿದೆ ಎಂದು ಹೇಳುವುದು ತಪ್ಪೇ? ಎಂದು ಪ್ರಶ್ನಿಸಿದರು. ಸಿಎಂ ಬೊಮ್ಮಾಯಿ ಮಾತನಾಡಿ, ಇದು ದೊಡ್ಡ ಹಗರಣ ಎಂದಿದ್ದರು, ಸಾಕ್ಷಿ ಇದ್ದರೆ ಕೊಡಿ ಎಂದು ಸಮನ್ಸ್‌ ನೀಡಲಾಗಿದೆ ಅಷ್ಟೆ ಎಂದರು.

ಪ್ರಿಯಾಂಕ್‌ ಖರ್ಗೆ ಅವರಿಗೆ ನೋಟಿಸ್‌ ನೀಡಿದ ಸರ್ಕಾರ ದಡೇಸೂಗೂರು ಅವರಿಗೆ ನೋಟಿಸ್‌ ನೀಡಲಿಲ್ಲ. ಮಾಜಿ ಮುಖ್ಯಮಂತ್ರಿ ಮಗ ಶಾಮೀಲಾಗಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು. ಅವರಿಗೆ ನೋಟಿಸ್‌ ನೀಡಲಿಲ್ಲ ಎಂದು ಪ್ರತಿಪಕ್ಷಗಳು ಆರೋಪಿಸಿದವು. ಇಷ್ಟೆಲ್ಲದರ ನಂತರವೂ ಪರಸಪ್ಪ ಸೇರಿ ಎಲ್ಲ ವಿಚಾರಗಳನ್ನೂ ತನಿಖೆ ನಡೆಸಲಾಗುತ್ತದೆ ಎಂದರು.

ಅನೇಕ ಹೊತ್ತು ಮಾತನಾಡಿದ ಪ್ರಿಯಾಂಕ್‌ ಖರ್ಗೆ, ತಾವು ಪ್ರಕರಣದ ಕುರಿತು ಸಾಕ್ಷಿ ಇದೆ ಎಂದು ಹೇಳಿಲ್ಲ. ನಾನೇನಾದರೂ ಸುದ್ದಿಗೋಷ್ಠಿಯಲ್ಲಿ ಹಾಗೆ ಹೇಳಿದ್ದರೆ ನನ್ನ ವಿರುದ್ಧ ಕ್ರಮ ಕೈಗೊಳ್ಳಲಿ. ಇಲ್ಲದಿದ್ದರೆ ಸರ್ಕಾರ ಕ್ಷಮೆ ಕೇಳಲಿ. ಈ ಹಿಂದೆ ಸರ್ಕಾರ ಹಗರಣ ನಡೆದೇ ಇಲ್ಲ ಎಂದು ಸರ್ಕಾರ ಹೇಳಿತ್ತು ಎಂದು ಆರೋಪಿಸಿದರು. ನಾನೊಬ್ಬ ಜವಾಬ್ದಾರಿಯುತ ಶಾಸಕನಾಗಿ, ನನಗೆ ಲಭಿಸಿದ ಸಮನ್ಸ್‌ಗೆ ಸೂಕ್ತ ಪ್ರತಿಕ್ರಿಯೆಯನ್ನು ನೀಡಿದ್ದೇನೆ ಎಂದರು.

ಈ ಸಮಯದಲ್ಲಿ ಮಧ್ಯಪ್ರವೇಶಿಸಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ನಿಮ್ಮ ಬಳಿ ಆಡಿಯೋ ಇತ್ತು ಎಂದು ಅನೇಕ ಪತ್ರಿಕೆಗಳಲ್ಲಿ ವರದಿಯಾಗಿದೆ. ನಿಮ್ಮ ಬಳಿ ಸಾಕ್ಷ್ಯ ಇದ್ದಿದ್ದರಿಂದಲೇ ಕರೆದಿದ್ದಾರೆ. ಅದೆಲ್ಲವನ್ನೂ ನೀಡದೆ, ನಾನು ಹಾಗೆ ಹೇಳೇ ಇಲ್ಲ ಎಂದು ಸುಳ್ಳೂ ಹೇಳುತ್ತಿದ್ದಾರೆ. ನೀವು ಈ ಹಗರಣದಲ್ಲಿ ಶಾಮೀಲಾಗಿದ್ದಾರೆ ಹಾಗಾಗಿ ಹೀಗೆ ಹೇಳುತ್ತಿದ್ದೀರ ಎಂದು ಆರೋಪಿಸಿದರು.

ಈ ವೇಳೆ ತಾಳ್ಮೆ ಕಳೆದುಕೊಂಡ ಪ್ರಿಯಾಂಕ್‌ ಖರ್ಗೆ, ನಿಮ್ಮ ಗುಪ್ತಚರ ಇಲಾಖೆ ಕತ್ತೆ ಕಾಯುತ್ತಿದ್ದರೆ ನಾನೇನು ಮಾಡಲು ಆಗುತ್ತದೆ? ನನ್ನನ್ನು ಬಂಧನ ಮಾಡಿ ಹಾಗಾದರೆ ಎಂದು ಹೇಳಿದರು. ಮತ್ತೆ ಮತ್ತೆ ಅನೇಕ ಬಾರಿ ಮಾತನಾಡುತ್ತ ಸರ್ಕಾರಕ್ಕೆ ನಾಚಿಕೆ ಆಗಬೇಕು, ತಾಕತ್ತಿದ್ದರೆ ಬಂಧಿಸಿ ಎಂದು ತಾಳ್ಮೆ ಕಳೆದುಕೊಂಡು ಅರಚಾಡಿದರು. ಮರುಪರೀಕ್ಷೆ ಯಾವಾಗ ಆಗುತ್ತದೆ? ಕೆಪಿಎಸ್‌ಸಿಯಲ್ಲಿ ಇಪ್ಪತ್ತು ಲಕ್ಷ ಜನ ಪರೀಕ್ಷೆ ಬರೆದಿದ್ದಾರೆ ಅದರ ಭವಿಷ್ಯ ಏನು ಎಂದು ಗೊತ್ತಾಗಬೇಕು, ನ್ಯಾಯಾಂಗ ತನಿಖೆ ನಡೆಯಬೇಕು ಎಂದರು.

ಪಾಯಿಂಟ್‌ ಆಫ್‌ ಆರ್ಡರ್‌

ಈ ಸಮಯದಲ್ಲಿ ಪಾಯಿಂಟ್‌ ಆಫ್‌ ಆರ್ಡರ್‌ ಪ್ರಶ್ನೆ ಎತ್ತಿದ ಕುಡಚಿ ಶಾಸಕ ಪಿ. ರಾಜೀವ್‌, ಪೊಲೀಸರು ಎರಡು ಕಾನೂನಿನ ಅಡಿಯಲ್ಲಿ ಸಮನ್ಸ್‌ ನೀಡಿದ್ದಾರೆ. ಮೊದಲನೆಯದು, ಅವರ ಬಳಿಯಿರುವ ಭೌತಿಕ ಸಾಕ್ಷಿಗಳನ್ನು ನೀಡಬೇಕು. ಎರಡನೆಯದು, ತಮಗೆ ಗೊತ್ತಿರುವ ಎಲ್ಲ ಮಾಹಿತಿಯನ್ನೂ ತನಿಖಾಧಿಕಾರಿಯ ಮುಂದೆ ಹೇಳಬೇಕು ಎಂದರು.

ಈ ಸಮಯದಲ್ಲಿ ಅನೇಕ ಹೊತ್ತು ಗಲಾಟೆ, ಗದ್ದಲ ನಡೆಯಿತು. ಪದೇಪದೆ ಸರ್ಕಾರದ ಸದಸ್ಯರು ಅಡ್ಡಿಪಡಿಸುವುದು ಸರಿಯಲ್ಲ ಎಂದು ಆಕ್ಷೆಪಿಸಿದ ಸಿದ್ದರಾಮಯ್ಯ, ಸಭಾಧ್ಯಕ್ಷರ ಪೀಠದೆದುರು ಜಮಾಯಿಸಿ ಪ್ರತಿಭಟಿಸಿದರು.ಎಲ್ಲ ಸದಸ್ಯರೂ ಸಭಾಧ್ಯಕ್ಷರ ಪೀಠದ ಮುಂಭಾಗಕ್ಕೆ ಆಗಮಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು, ಪೋಸ್ಟರ್‌ಗಳನ್ನು ಪ್ರದರ್ಶಿಸಿದರು. ಈ ವೇಳೆ ಆಡಳಿತ ಪಕ್ಷದ ಸದಸ್ಯರೂ ಕಾಂಗ್ರೆಸ್‌ ವಿರುದ್ಧ ಘೋಷಣೆ ಕೂಗಿದರು.

ಗದ್ದಲದ ನಡುವೆಯೇ ಉತ್ತರ ನೀಡಿದ ಆರಗ ಜ್ಞಾನೇಂದ್ರ, ಸಂಪೂರ್ಣ ಪಾರದರ್ಶಕವಾಗಿ ತನಿಖೆ ನಡೆಸಲಾಗುತ್ತಿದೆ. ಯಾವ ಪ್ರತಿಪಕ್ಷಗಳನ್ನೂ ಗುರಿ ಮಾಡಲಾಗಿಲ್ಲ. ಅನೇಕರನ್ನು ಬಂಧಿಸಲಾಗಿದೆ. ಅನೇಕ ಸಾಕ್ಷಿಗಳನ್ನು ಸೀಜ್‌ ಮಾಡಲಾಗಿದೆ. ಆರೋಪಿಗಳ ಹೆಸರಿನಲ್ಲಿರುವ ಬ್ಯಾಂಕ್‌ ಲಾಕರ್‌ಗಳನ್ನೂ ಒಳಪಡಿಸಿಕೊಳ್ಳಲಾಗಿದೆ. ಪ್ರಿಯಾಂಕ್‌ ಖರ್ಗೆ ಅವರು ಸುಖಾ ಸುಮ್ಮನೆ ತಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಉತ್ತರಿಸಿದರು.

ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಮಾತನಾಡಿ ಸರ್ಕಾರವನ್ನು ಸಮರ್ಥನೆ ಮಾಡಿಕೊಂಡರು. ಗೃಹಸಚಿವರು ಸಮರ್ಥರಿದ್ದದ್ದರಿಂದಲೇ ಇಷ್ಟು ಉನ್ನತ ಅಧಿಕಾರಿಗಳನ್ನೂ ಬಂಧಿಸಲಾಗಿದೆ. ಕಾಂಗ್ರೆಸ್‌ ಅಧಿಕಾರದಲ್ಲಿ ಇದ್ದಿದ್ದರೆ ಈ ಹಗರಣವನ್ನು ಹೊರಕ್ಕೇ ಬರಲು ಬಿಡುತ್ತಿರಲಿಲ್ಲ ಎಂದರು. ನಂತರ ಗೋವಿಂದ ಕಾರಜೋಳ ಅವರೂ ತಮ್ಮ ಅಭಿಪ್ರಾಯ ಮಂಡಿಸಿದರು. ನಿಯಮ 69ರ ಅಡಿಯಲ್ಲಿ ಈ ವಿಚಾರದಲ್ಲಿ ಚರ್ಚೆಯನ್ನು ಮುಕ್ತಾಯಗೊಳಿಸಲಾಗಿದೆ ಎಂದ ಸ್ಪೀಕರ್‌ ಕಾಗೇರಿ, ಸದನವನ್ನು ಬುಧವಾರಕ್ಕೆ ಮುಂದೂಡಿದರು.

ಕೊನೆ ಚುನಾವಣೆ ಎಂದೇ ಅನೇಕರನ್ನು ಕಳಿಸಿದಿರಿ !

ಸಿದ್ದರಾಮಯ್ಯ ಮಾತಿಗೆ ಪ್ರತಿಕ್ರಿಯಿಸಲು ಸಿಎಂ ಬೊಮ್ಮಾಯಿ ಎದ್ದುನನಿಲ್ಲುತ್ತಿದ್ದದ್ದನ್ನು ಕಂಡ ಸಿದ್ದರಾಮಯ್ಯ, ನಾವೇನೋ ಕೊನೆಗೆ ಬಂದಿದ್ದೇವೆ, ನೀವು ಇನ್ನೂ ಸಾಕಷ್ಟು ವರ್ಷ ರಾಜಕಾರಣ ಮಾಡಬೇಕು ಎಂದರು. ಸಿಎಂ ಬೊಮ್ಮಾಯಿ ಎದ್ದುನಿಂತರು. ಸಿದ್ದರಾಮಯ್ಯ ಅವರ ಮೆಮೊರಿ ಪವರ್‌ ತುಂಬಾ ಚೆನ್ನಾಗಿದೆ. ಹೀಗೆಯೇ, ನನ್ನದು ಕೊನೆಯ ಚುನಾವಣೆ ಎನ್ನುತ್ತಲೇ ಬಹಳಷ್ಟು ಜನಗಳನ್ನು ಕಳಿಸಿದರು. ಇದಕ್ಕೆ ಮಾತನಾಡಿದ ಸಿದ್ದರಾಮಯ್ಯ, ಎಸ್‌.ಆರ್‌. ಬೊಮ್ಮಾಯಿ, ರಾಮಕೃಷ್ಣ ಹೆಗಡೆ ಅವರನ್ನು ಕಳಿಸಿದೆನಾ? ಎಂದರು. ರಾಜಕಾರಣದಲ್ಲಿ, ಇದು ನನ್ನ ಕೊನೆಯ ಚುನಾವಣೆ ಎಂದರು. ನಂತರ ಮತ್ತೆ ಸ್ಪರ್ಧಿಸಿ ಬಿಜೆಪಿಯನ್ನು ಸೋಲಿಸಲು ನಿಂತೆ ಎಂದರು. ಇವರಿಂದಾಗಿ ಅನೇಕ ಜನರು ಅಲ್ಲಲ್ಲೇ ಇದ್ದಾರೆ ಎಂದರು.

ಇದನ್ನೂ ಓದಿ | PSI Scam | ಕಾನೂನು ಸಚಿವರ Law ಪಾಯಿಂಟ್‌ಗೆ ತಲೆಯಾಡಿಸಿ ಸುಮ್ಮನಾದ ಲಾಯರ್‌ ಸಿದ್ದರಾಮಯ್ಯ !

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Bangalore Rain: ರಾಜಕಾಲುವೆ ಒತ್ತುವರಿ; ಮುಲಾಜಿಲ್ಲದೆ ತೆರವು ಮಾಡಲು ಡಿಕೆಶಿ ಸೂಚನೆ

Bangalore Rain: ಬೆಂಗಳೂರಿನಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿ ಹಾಗೂ ಅಗ್ನಿಶಾಮಕ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು. ಮಳೆ ಹಾನಿ ನಿರ್ವಹಣೆಗೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಸೂಚಿಸಿದ್ದಾರೆ.

VISTARANEWS.COM


on

Bangalore Rain
Koo

ಬೆಂಗಳೂರು: ರಾಜಧಾನಿಯಲ್ಲಿ ಮಳೆ ಅವಾಂತರ (Bangalore Rain) ಹಿನ್ನೆಲೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಡಿಸಿಎಂ, ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಅಧಿಕಾರಿಗಳ ಸಭೆ ನಡೆಸಿದರು. ಈ ವೇಳೆ ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿ ಹಾಗೂ ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಒಗ್ಗೂಡಿ ಮಳೆ ಹಾನಿ ನಿರ್ವಹಣೆ ಮಾಡಬೇಕು. ರಾಜಕಾಲುವೆ ಸರ್ಕಾರದ ಜಾಗ, ಒತ್ತುವರಿಯಾಗಿದ್ದರೆ ಮುಲಾಜಿಲ್ಲದೆ ತೆರವು ಮಾಡಿ ಎಂದು ಅಧಿಕಾರಿಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಸೂಚಿಸಿದ್ದಾರೆ.

ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು, ಬೆಂಗಳೂರಿನಲ್ಲಿ 133 ವರ್ಷದ ನಂತರ ಭಾರಿ ಮಳೆಯಾಗಿದೆ. 261 ವಿದ್ಯುತ್ ಕಂಬಗಳು ಉರುಳಿದ್ದು, ಮೂವರಿಗೆ ಗಾಯಗಳಾಗಿವೆ. ನೆಲಕ್ಕುರುಳಿದ 96 ಮರಗಳನ್ನು ತೆರವು ಮಾಡಿದ್ದು, ನಾನೇ ಖುದ್ದು ಪರಿಶೀಲನೆ ಮಾಡಿದ್ದೇನೆ. ಮಳೆ ಹಾನಿ ಬಗ್ಗೆ 695 ದೂರುಗಳು ಬಂದಿವೆ. ಬಿಬಿಎಂಪಿ, ಜಲಮಂಡಳಿ, ಬೆಸ್ಕಾಂ ಎಲ್ಲರೂ ಒಟ್ಟಾಗಿ ಮಳೆ ಹಾನಿ ನಿರ್ವಹಣೆ ಮಾಡಬೇಕು ಎಂದು ಸೂಚಿಸಲಾಗಿದೆ. ರಾಜಕಾಲುವೆ ಒತ್ತುವರಿಯಾಗಿದ್ದರೆ ಮುಲಾಜಿಲ್ಲದೆ ತೆರವು ಮಾಡಲು ಅಧಿಕಾರಿಗಳಿಗೆ ಹೇಳಿರುವುದಾಗಿ ತಿಳಿಸಿದ್ದಾರೆ.

ಹಳೆಯ ಕಟ್ಟಡಗಳು ಬೀಳದಂತೆ ನೋಡಿಕೊಳ್ಳಬೇಕು. ಶಿಥಿಲಾವಸ್ಥೆ ಇರುವ ಕಟ್ಟಡಗಳನ್ನು ತೆರವು ಮಾಡಬೇಕು. ಒಣಗಿರುವ ಮರಗಳನ್ನು ಸಹ ಗುರುತಿಸಿ ತೆಗೆದು ಹಾಕಬೇಕು. ಪ್ರತಿ ವಾರ್ಟ್‌ನಲ್ಲಿ ಮೋಟಾರ್ ಪಂಪ್‌ ಇಟ್ಟುಕೊಂಡು ನೀರು ತೆರವು ಮಾಡಬೇಕು. ಇದಕ್ಕೆ ದೊಡ್ಡ ಟೀಂ ಮಾಡಿ ಅಂತ ಹೇಳಿದ್ದೇನೆ. ವಿಶೇಷವಾಗಿ ಮಹದೇವಪುರ ವ್ಯಾಪ್ತಿಯಲ್ಲಿ ಸಮಸ್ಯೆ ಇದೆ. ಎನ್‌ಡಿಆರ್‌ಎಫ್‌ ಟೀಂ ಜತೆ ಟಚ್‌ನಲ್ಲಿ ಇರಬೇಕು. ಇನ್ನು ಮುಂದಿನ 24 ಗಂಟೆಗಳಲ್ಲಿ ದೊಡ್ಡ ಮಟ್ಟದ ಮಳೆ ಆಗುವ ಸಂಭವ ಇದೆ ಹೀಗಾಗಿ ಎಲ್ಲರೂ 24/7 ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಯಾವುದೇ ಕಾರಣಕ್ಕೂ ಆಸ್ತಿ ಪಾಸ್ತಿ ಹಾನಿ, ಪ್ರಾಣಾಪಾಯ ಆಗಬಾರದು. ಮೆಟ್ರೋ ಹಳಿ ಮೇಲೆ ಮರ ಬಿದ್ದು ಹೋಗಿತ್ತು, ಈಗ ಸರಿಯಾಗಿದೆ. ಹೀಗಾಗಿ 1533 ಸಂಖ್ಯೆಗೆ ಕರೆ ಮಾಡಿ ಜನರು ಸಮಸ್ಯೆ ಹೇಳಿಕೊಳ್ಳಬಹುದು ಎಂದು ತಿಳಿಸಿದರು.

ಇದನ್ನೂ ಓದಿ | Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

‌ಬಿಬಿಎಂಪಿ ಚುನಾವಣೆ ಬಗ್ಗೆ ಪ್ರತಿಕ್ರಿಯಿಸಿ, ಕಾರ್ಪೊರೇಟರ್ ಏನು ಕೆಲಸ ಮಾಡುತ್ತಾರೆ. ಜನ ಸೇವೆ ಅಂದಾಗ ಎಲ್ಲರೂ ಕೆಲಸ ಮಾಡುತ್ತಾರೆ. ಪ್ರಜಾಪ್ರಭುತ್ವದಲ್ಲಿ ಪಂಚಾಯತ್‌ನಿಂದ ಪಾರ್ಲಿಮೆಂಟ್‌ವರೆಗೂ ಜನಪ್ರತಿನಿಧಿ ಬೇಕು. ಪಾರ್ಲಿಮೆಂಟ್ ಚುನಾವಣೆ ಮುಗಿಯಲಿ, ಎಲ್ಲ ರೆಡಿ‌ ಮಾಡೋಣ, ಚುನಾವಣೆಗೆ ಶುಭ ಮುಹೂರ್ತ ಫಿಕ್ಸ್ ಮಾಡೋಣ ಎಂದು ಹೇಳಿದರು.

ಮಳೆ ಹಾನಿ ಬಗ್ಗೆ ಬೆಸ್ಕಾಂಗೆ ದೂರುಗಳ ಸುರಿಮಳೆ; 133 ವರ್ಷಗಳ ರೆಕಾರ್ಡ್ ಬ್ರೇಕ್ ಮಾಡಿದ ನೆನ್ನೆಯ ಮಳೆ!

Bangalore Rain

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ತಡರಾತ್ರಿ ಸುರಿದ ಧಾರಾಕಾರ ಮಳೆಯು (Bangalore Rain) ಸಾಕಷ್ಟು ಅವಾಂತರ ಸೃಷ್ಟಿಸಿದೆ. ಹೀಗಾಗಿ ಬೆಸ್ಕಾಂ ಹೆಲ್ಪ್ ಲೈನ್‌ 1912ಗೆ ದೂರುಗಳ ಸುರಿಮಳೆಯೇ ಬಂದಿದ್ದು, ವಿದ್ಯುತ್‌ ಕಂಬಗಳು ಉರುಳಿರುವುದು, ಮರಗಳು ಬಿದ್ದಿರುವುದು, ವಿದ್ಯುತ್‌ ಕಡಿತ ಸೇರಿ ಹಲವು ಸಮಸ್ಯೆಗಳ ಬಗ್ಗೆ ಬರೋಬ್ಬರಿ 8745 ದೂರುಗಳು ದಾಖಲಾಗಿವೆ. ಮತ್ತೊಂದೆಡೆ ಬೆಂಗಳೂರಿನಲ್ಲಿ ಭಾನುವಾರ (ಜೂ.2) ಸುರಿದ ಮಳೆಯು (Heavy Rain) 133 ವರ್ಷಗಳ ರೆಕಾರ್ಡ್ ಬ್ರೇಕ್ ಮಾಡಿರುವುದು ಕಂಡುಬಂದಿದೆ.

ಧಾರಕಾರ ಮಳೆ ಹಿನ್ನೆಲೆಯಲ್ಲಿ ಅತಿ ಹೆಚ್ಚಿನ ದೂರುಗಳು ಬಂದಿದ್ದು, ಬೆಸ್ಕಾಂ ವ್ಯಾಪ್ತಿಯಲ್ಲಿ 74 ವಿದ್ಯುತ್ ಕಂಬಗಳು ಧರೆಗುರುಳಿದ್ದು, 102 ವಿದ್ಯುತ್ ಕಂಬಗಳ ಮೇಲೆ ಮರಗಳು ಬಿದ್ದಿವೆ. ಇನ್ನು 9 ಟ್ರಾನ್ಸ್‌ಫಾರ್ಮರ್‌ಗಳಿಗೆ ಮಳೆಯಿಂದ ಹಾನಿಯಾಗಿದೆ. ಭಾರಿ ಮಳೆಗೆ ಬೆಸ್ಕಾಂ ತತ್ತರಿಸಿದ್ದು, ತಡರಾತ್ರಿ ಸುರಿದ ಮಳೆಯಿಂದ ಬೆಸ್ಕಾಂಗೆ ಕೋಟ್ಯಂತರ ರೂ. ನಷ್ಟವಾಗಿದೆ.

ಬೆಂಗಳೂರಿನಲ್ಲಿ ಭಾನುವಾರ 111.2 ಮಿ.ಮೀ ಮಳೆ

ಬೆಂಗಳೂರಿನಲ್ಲಿ ಭಾನುವಾರ ಸಂಜೆ ಸುರಿದ ಮಳೆಯು 133 ವರ್ಷಗಳ ದಾಖಲೆಯನ್ನು ಮುರಿದಿದೆ. ರಾಜಧಾನಿಯಲ್ಲಿ ಮೇ 2ರಂದು 111.2 ಮಿ.ಮೀ ಮಳೆ ಸುರಿದಿದ್ದು, ಜೂನ್ ತಿಂಗಳಲ್ಲಿ ಆದ ದಾಖಲೆಯ ಮಳೆ ಇದಾಗಿದೆ. 1891 ಜೂನ್ 16 ರಂದು 101.6 ಮಿ.ಮೀ ಮಳೆಯಾಗಿತ್ತು. ಆದರೆ, ನೆನ್ನೆ ಸುರಿದ ಜೂನ್ ತಿಂಗಳ ಮಳೆ 133 ವರ್ಷಗಳ ದಾಖಲೆ ಮುರಿದಿದೆ ಎಂದು ವಿಸ್ತಾರನ್ಯೂಸ್‌ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: Karnataka Weather : ಬೆಂಗಳೂರಿಗೆ ಆವರಿಸಿದ ಮುಂಗಾರು; ಹಲವೆಡೆ ಇಂದು ಗಾಳಿಯೊಂದಿಗೆ ಭಯಂಕರ ಮಳೆ

1891 ಜೂನ್ 16 ರಂದು 101.6 ಮಿ.ಮೀ ಮಳೆಯಾಗಿತ್ತು. 2013 ಜೂನ್ 1 ರಂದು 100 ಮಿ.ಮೀ ಮಳೆ ಹಾಗೂ 2009 ಜೂನ್ 11 ರಂದು 89.6 ಮಿ.ಮೀ ಮಳೆಯಾಗಿತ್ತು.

Continue Reading

ಧಾರವಾಡ

Dharwad Lok Sabha Constituency: ಜೋಶಿ vs ಅಸೂಟಿ; ಯಾವ ಅಭ್ಯರ್ಥಿಗೆ ಧಾರವಾಡ ಪೇಡಾ?

Dharwad Lok Sabha Constituency: ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಪ್ರಲ್ಹಾದ್‌ ಜೋಶಿ ಅವರು ಸತತ ನಾಲ್ಕು ಬಾರಿ ಗೆಲುವು ಸಾಧಿಸಿ, ಐದನೇ ಬಾರಿಗೆ ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ. ಇವರಿಗೆ ಹೊಸಮುಖವಾದ ಆನಂದ್‌ ಅಸೂಟಿ ಅವರು ಕಾಂಗ್ರೆಸ್‌ನಿಂದ ಸ್ಪರ್ಧೆಯೊಡ್ಡಿದ್ದಾರೆ. ತೀವ್ರ ಪೈಪೋಟಿ, ಪ್ರತಿಷ್ಠೆಯ ಕಣವಾದಲ್ಲಿ ಧಾರವಾಡದಲ್ಲಿ ಯಾರು ಗೆಲುವು ಸಾಧಿಸಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ.

VISTARANEWS.COM


on

Dharwad Lok Sabha Constituency
Koo

ಧಾರವಾಡ: ಪೇಡಾಗಳಿಗೆ ಹೆಸರುವಾಸಿಯಾಗಿರುವ ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ (Dharwad Lok Sabha Constituency) ಸತತ ನಾಲ್ಕು ಚುನಾವಣೆಗಳಲ್ಲಿ ಗೆಲುವು ಸಾಧಿಸಿ, ಐದನೇ ಬಾರಿಗೆ ಗೆದ್ದು ದಾಖಲೆ ಸೃಷ್ಟಿಸಲು ಹಂಬಲಿಸುತ್ತಿರುವ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಅವರಿಗೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಆನಂದ್‌ ಅಸೂಟಿ (Anand Asooti) ಅವರು ಸವಾಲೊಡ್ಡಿದ್ದಾರೆ. ಹಾಗಾಗಿ, ಈ ಬಾರಿ ಧಾರವಾಡ ಕ್ಷೇತ್ರದಲ್ಲಿ ಜಿದ್ದಾಜಿದ್ದಿನ ಕದನ ಏರ್ಪಟ್ಟಿದ್ದು, ವಿಜಯದ ಮಾಲೆ ಯಾರ ಕೊರಳಿಗೆ ಎಂಬ ಕುತೂಹಲ ಹೆಚ್ಚಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಲೆ, ಧಾರವಾಡ ಕ್ಷೇತ್ರದಲ್ಲಿ ಪ್ರಬಲ ಸಮುದಾಯಗಳ ಬೆಂಬಲ, ಕೇಂದ್ರ ಸಚಿವರಾಗಿ ಕ್ಷೇತ್ರಕ್ಕೆ ತಂದಿರುವ ಅಭಿವೃದ್ಧಿ ಯೋಜನೆಗಳು, ವಂದೇ ಭಾರತ್‌ ರೈಲು ಸೇರಿ ಹಲವು ಮೂಲ ಸೌಕರ್ಯಗಳು ಪ್ರಲ್ಹಾದ್‌ ಜೋಶಿ ಅವರಿಗೆ ವರದಾನವಾಗುವ ಲಕ್ಷಣಗಳಿವೆ. ಕಳೆದ ನಾಲ್ಕು ಬಾರಿ ಗೆದ್ದು, ಕ್ಷೇತ್ರದ ಜನರ ಬೆಂಬಲ, ವಿಶ್ವಾಸ ಗಳಿಸಿರುವ ಪ್ರಲ್ಹಾದ್‌ ಜೋಶಿ ಅವರು ಸತತ ಐದನೇ ಬಾರಿಗೆ ಜಯಿಸುವ ವಿಶ್ವಾಸದಲ್ಲಿದ್ದಾರೆ. ‌

Pralhad Joshi

ಗದಗ ಜಿಲ್ಲೆ ಶಿರಹಟ್ಟಿಯ ಭಾವೈಕ್ಯ ಪೀಠದ ದಿಂಗಾಲೇಶ್ವರ ಸ್ವಾಮೀಜಿ ಅವರ ವಿರೋಧದಿಂದಾಗಿ ಪ್ರಲ್ಹಾದ್‌ ಜೋಶಿ ಅವರಿಗೆ ತುಸು ಹಿನ್ನಡೆಯುಂಟಾಗಿತ್ತು. ಪಕ್ಷೇತರರಾಗಿ ದಿಂಗಾಲೇಶ್ವರ ಸ್ವಾಮೀಜಿ ಅವರು ಕಣಕ್ಕೂ ಇಳಿದಿದ್ದರು. ಆದರೆ, ಕೊನೆಯ ಕ್ಷಣದಲ್ಲಿ ಅವರು ಚುನಾವಣೆಯಿಂದ ಹಿಂದೆ ಸರಿದರೂ ಅವರ ಬೆಂಬಲವು ಕಾಂಗ್ರೆಸ್‌ ಅಭ್ಯರ್ಥಿಗಿದೆ. ಇದು ಜೋಶಿ ಅವರಿಗೆ ಹಿನ್ನಡೆ ತಂದರೂ ಅಚ್ಚರಿ ಇಲ್ಲ ಎನ್ನಲಾಗುತ್ತಿದೆ.

ಖಾತೆ ತೆರೆಯುವರೇ ಆನಂದ್?

2018ರಲ್ಲಿ ನವಲಗುಂದ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದ ಆನಂದ್‌ ಅಸೂಟಿಯವರು ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಈ ಬಾರಿ ಕಾಂಗ್ರೆಸ್‌ ಲಿಂಗಾಯತರ ಬದಲು ಕುರುಬ ಸಮುದಾಯದ ಆನಂದ್‌ ಅಸೂಟಿ ಅವರಿಗೆ ಟಿಕೆಟ್‌ ನೀಡಿದೆ. ಇದು ಕ್ಷೇತ್ರದಲ್ಲಿ ಹಿಂದುಳಿದವರ ಮತ ಸೆಳೆಯಲು ಕಾರಣವಾಗಲಿದೆ ಎಂಬುದು ಪಕ್ಷದ ರಣತಂತ್ರವಾಗಿದೆ. ಗ್ಯಾರಂಟಿ ಯೋಜನೆಗಳಂತೂ ಸಕಾರಾತ್ಮಕ ಪ್ರಭಾವವನ್ನೇ ಬೀರಿವೆ.

2019, 2014ರ ಫಲಿತಾಂಶ ಏನಾಗಿತ್ತು?

2019ರ ಲೋಕಸಭೆ ಚುನಾವಣೆಯಲ್ಲಿ ಪ್ರಲ್ಹಾದ್‌ ಜೋಶಿ ಅವರು ಕಾಂಗ್ರೆಸ್‌ನ ವಿನಯ್‌ ಕುಲಕರ್ಣಿ ಅವರ ವಿರುದ್ಧ 2.05 ಲಕ್ಷ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದರು. 2014ರ ಸಾರ್ವತ್ರಿಕ ಚುನಾವಣೆಯಲ್ಲೂ ಪ್ರಲ್ಹಾದ್‌ ಜೋಶಿ ಅವರೇ ಜಯಿಸಿದ್ದರು. ಇವರು ವಿನಯ್‌ ಕುಲಕರ್ಣಿ ಅವರ ವಿರುದ್ಧ 1 ಲಕ್ಷಕ್ಕೂ ಅಧಿಕ ಮತಗಳ ಅಂತರಗಿಂದ ಜಯಭೇರಿ ಬಾರಿಸುವ ಮೂಲಕ ಕ್ಷೇತ್ರದಲ್ಲಿ ಬಿಜೆಪಿ ಹಿಡಿತವನ್ನು ಮತ್ತಷ್ಟು ಬಿಗಿಗೊಳಿಸಿದ್ದರು. ನರೇಂದ್ರ ಮೋದಿ ಅವರ ಅಲೆಯೂ ಪ್ರಲ್ಹಾದ್‌ ಜೋಶಿ ಅವರಿಗೆ ವರದಾನವಾಗಿತ್ತು.

ಇದನ್ನೂ ಓದಿ: Haveri Lok Sabha Constituency: ಹಾವೇರಿಯಲ್ಲಿ ಅನುಭವಿ vs ಉತ್ಸಾಹಿ; ಯಾರಿಗೆ ಜಯದ ಮಾಲೆ?

Continue Reading

ವಿಜಯಪುರ

Vijaypur Lok Sabha Constituency: ವಿಜಯಪುರದಲ್ಲಿ ಅಧಿಕಾರದ ‘ಗೋಲ ಗುಮ್ಮಟ’ ಯಾರಿಗೆ?

Vijaypur Lok Sabha Constituency: ಪರಿಶಿಷ್ಟ ಜಾತಿಗೆ ಮೀಸಲಾಗಿರುವ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ನಾಲ್ಕನೇ ಬಾರಿಗೆ ವಿಜಯ ಪತಾಕೆ ಹಾರಿಸಲು ರಮೇಶ್‌ ಜಿಗಜಿಣಗಿ ಸಜ್ಜಾಗಿದ್ದಾರೆ. ಇವರಿಗೆ ಪ್ರಬಲ ಬಲಗೈ ಸಮಾಜದ ಮುಖಂಡ ಪ್ರೊ. ರಾಜು ಆಲಗೂರ ಅವರು ಸೆಡ್ಡು ಹೊಡೆದಿದ್ದು, ಗೆಲುವು ಯಾರಿಗೆ ಸಿಗಲಿದೆ ಎಂಬುದಕ್ಕೆ ಇನ್ನೂ ಕೆಲವು ಗಂಟೆ ಕಾಯಲಬೇಕಿದೆ. ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಮಧ್ಯೆ ನೇರ ಪೈಪೋಟಿ ಏರ್ಪಟ್ಟಿತ್ತು.

VISTARANEWS.COM


on

Vijaypur Lok Sabha Constituency
Koo

ವಿಜಯಪುರ: ಗುಮ್ಮಟಗಳಿಗೆ ಪ್ರಸಿದ್ಧವಾದ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಬಿಜೆಪಿ ಹಾಗೂ ಕಾಂಗ್ರೆಸ್‌ ಮಧ್ಯೆ ನೇರ ಪೈಪೋಟಿ ಎದುರಾಗಿದೆ. ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಕ್ಷೇತ್ರದಲ್ಲಿ (Vijaypur Lok Sabha Constituency) ಬಿಜೆಪಿಯಿಂದ ಸತತ ನಾಲ್ಕನೇ ಬಾರಿಗೆ ರಮೇಶ್‌ ಜಿಗಜಿಣಗಿ (Ramesh Jigajinagi) ಕಣಕ್ಕಿಳಿದಿದ್ದರೆ, ಪ್ರಯೋಗಕ್ಕೆ ಮುಂದಾಗಿರುವ ಕಾಂಗ್ರೆಸ್‌, ಬಲಗೈ ಸಮಾಜದ ಪ್ರೊ.ರಾಜು ಆಲಗೂರ (Raju Algur) ಅವರನ್ನು ಕಣಕ್ಕಿಳಿಸಿದೆ. ಹಾಗಾಗಿ, ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಯಾರು ಗೆಲುವಿನ ಮಾಲೆಗೆ ಕೊರಳೊಡ್ಡಲಿದ್ದಾರೆ ಎಂಬ ಕುತೂಹಲ ಜಾಸ್ತಿಯಾಗಿದೆ.

ಜಿಗಜಿಣಗಿಗೆ ತೀವ್ರ ಪೈಪೋಟಿ

ರಮೇಶ್‌ ಜಿಗಜಿಣಗಿ ಅವರು ಕಳೆದ ಮೂರು ಚುನಾವಣೆಗಳಲ್ಲಿ ಗೆಲುವು ಸಾಧಿಸಿ ವಿಜಯಪುರ ಕ್ಷೇತ್ರದ ಜನರ ನಾಡಿಮಿಡಿತವನ್ನು ಅರಿತಿದ್ದಾರೆ. ಸುಮಾರು 1 ಲಕ್ಷ ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಕ್ಷೇತ್ರಕ್ಕೆ ತಂದಿದ್ದೇನೆ ಎಂಬುದಾಗಿ ಹೇಳುತ್ತ ಪ್ರಚಾರ ಮಾಡಿರುವ ಅವರಿಗೆ ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯದವರ ಮತಗಳ ಬೆಂಬಲ ಇದೆ. ನರೇಂದ್ರ ಮೋದಿ ಅವರ ಅಲೆ, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರೊಂದಿಗಿನ ಮುನಿಸು ಶಮನವಾಗಿರುವುದು ರಮೇಶ್‌ ಜಿಗಜಿಣಗಿ ಅವರಿಗೆ ಪ್ಲಸ್‌ ಪಾಯಿಂಟ್‌ ಆಗಿದೆ.

Mp Ramesh Jigajinagi

ಆದರೆ, ಸತತ ಮೂರು ಬಾರಿ ಇವರೇ ಸಂಸದರಾಗಿದ್ದು, ಕ್ಷೇತ್ರದ ಪರವಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಿಲ್ಲ ಎಂಬ ಕೊರಗು ಜನರಲ್ಲಿದೆ. ಆಡಳಿತ ವಿರೋಧಿ ಅಲೆಯೂ ತುಸು ಹೆಚ್ಚೇ ಇದೆ. ಅವರು ಇದೇ ನನ್ನ ಕೊನೆಯ ಚುನಾವಣೆ ಎಂದು ಹೇಳಿ ಅನುಕಂಪ ಗಿಟ್ಟಿಸಿಕೊಳ್ಳಲು ಮುಂದಾಗಿದ್ದು ಕೂಡ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಕಳೆದ ಬಾರಿಗಿಂತ ಈ ಬಾರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಬಲಿಷ್ಠವಾಗಿರುವುದೂ ಜಿಗಜಿಣಗಿ ಅವರಿಗೆ ಹಿನ್ನಡೆ ತರಲಿದೆ ಎಂದೇ ಹೇಳಲಾಗುತ್ತಿದೆ.

ಫಲ ಕೊಡುವುದೇ ಕಾಂಗ್ರೆಸ್‌ ಪ್ರಯೋಗ?

ಕಳೆದ ಮೂರು ಚುನಾವಣೆಗಳಲ್ಲೂ ಬಂಜಾರ ಸಮುದಾಯದ ಅಭ್ಯರ್ಥಿಗೆ ಟಿಕೆಟ್‌ ನೀಡಿದ್ದ ಕಾಂಗ್ರೆಸ್‌ ಈ ಬಾರಿ ಬಲಗೈ ಸಮಾಜದ ಪ್ರೊ. ರಾಜು ಆಲಗೂರ ಅವರಿಗೆ ಟಿಕೆಟ್‌ ನೀಡುವ ಮೂಲಕ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಕ್ಷೇತ್ರದಲ್ಲಿರುವ ಆಡಳಿತ ವಿರೋಧಿ ಅಲೆಯನ್ನು ಸಮರ್ಥವಾಗಿ ಬಳಸಿಕೊಂಡಿರುವ ರಾಜು ಆಲಗೂರ ಅವರಿಗೆ ಸಚಿವ ಎಂ.ಬಿ.ಪಾಟೀಲ್‌ ಅವರ ಬೆಂಬಲ, ಸಹಕಾರ ಇದೆ. ಗ್ಯಾರಂಟಿ ಯೋಜನೆಗಳನ್ನೂ ಕ್ಷೇತ್ರದ ಜನ ಮೆಚ್ಚಿಕೊಂಡಿದ್ದಾರೆ. ಹಾಗಾಗಿ, ಚುನಾವಣೆ ಫಲಿತಾಂಶವು ಹೆಚ್ಚಿನ ಕುತೂಹಲ ಕೆರಳಿಸಿದೆ.

2019, 2014ರ ಫಲಿತಾಂಶ

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ರಮೇಶ್‌ ಜಿಗಜಿಣಗಿ ಅವರು ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ಇವರು ತಮ್ಮ ಪ್ರತಿಸ್ಪರ್ಧಿ ಸುನೀತಾ ದೇವಾನಂದ ಚೌಹಾಣ್‌ ಅವರ ವಿರುದ್ಧ 2.58 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. 2014ರ ಲೋಕಸಭೆ ಚುನಾವಣೆಯು ತೀವ್ರ ಜಿದ್ದಾಜಿದ್ದಿನಿಂದ ಕೂಡಿತ್ತು. ಆದರೂ, ರಮೇಶ್‌ ಜಿಗಜಿಣಗಿ ಅವರು ಕಾಂಗ್ರೆಸ್‌ನ ಪ್ರಕಾಶ್‌ ರಾಥೋಡ್‌ ಅವರ ವಿರುದ್ಧ 69 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಇದನ್ನೂ ಓದಿ: Lok Sabha Election 2024: ಮೈಸೂರು ಕ್ಷೇತ್ರದಲ್ಲಿ ಗೆಲುವು ಯಾರಿಗೆ? ಶ್ವಾನದಿಂದ ಅಚ್ಚರಿಯ ಭವಿಷ್ಯ!

Continue Reading

ಉಡುಪಿ

Electric shock : ಪ್ರತ್ಯೇಕ ಕಡೆ‌ ಕರೆಂಟ್‌ ಶಾಕ್‌ಗೆ ಲೈನ್‌ಮ್ಯಾನ್‌ ಸೇರಿ ಹಸು ಬಲಿ

Electric shock : ಉಡುಪಿಯಲ್ಲಿ ಟ್ರಾನ್ಸ್‌ಫಾರ್ಮರ್‌ ದುರಸ್ತಿ ವೇಳೆ ವಿದ್ಯುತ್‌ ಪ್ರವಹಿಸಿ ಲೈನ್‌ಮ್ಯಾನ್‌ ಸ್ಥಳದಲ್ಲೇ ಮೃತಪಟ್ಟರೆ, ಆನೇಕಲ್‌ನಲ್ಲಿ ರಸ್ತೆ ಬದಿ ಹೋಗುತ್ತಿದ್ದ ಹಸುವೊಂದು ಕರೆಂಟ್‌ ಶಾಕ್‌ಗೆ ಒದ್ದಾಡಿ ಪ್ರಾಣಬಿಟ್ಟಿದೆ.

VISTARANEWS.COM


on

By

Cow including lineman dies of electric shock
Koo

ಉಡುಪಿ/ ಆನೇಕಲ್‌: ವಿದ್ಯುತ್ ಟ್ರಾನ್ಸ್‌ಫಾರ್ಮರ್ ರಿಪೇರಿ ಮಾಡುವ ವೇಳೆ ವಿದ್ಯುತ್ ಪ್ರವಹಿಸಿ (Electric shock) ಲೈನ್‌ಮ್ಯಾನ್ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಉಡುಪಿಯ ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದ ಹೆಗ್ಗೇರಿಯಲ್ಲಿ ಅವಘಡ ನಡೆದಿದೆ.

ಲೈನ್ ಮ್ಯಾನ್ ಸಲೀಂ (38) ಮೃತ ದುರ್ದೈವಿ. ಟ್ರಾನ್ಸ್‌ಫಾರ್ಮರ್ ಬಳಿ ವಿದ್ಯುತ್ ಸಂಪರ್ಕ ರಿಪೇರಿ ಮಾಡುವಾಗ ಶಾಕ್‌ ಹೊಡೆದಿದೆ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉತ್ತರ ಕರ್ನಾಟಕದ ಮುಂಡಗೋಡು ನಿವಾಸಿಯಾಗಿರುವ ಸಲೀಂ, ಬೈಂದೂರು ಮೆಸ್ಕಾಂನಲ್ಲಿ ಕಳೆದ ಎಂಟು ವರ್ಷದಿಂದ ಸೇವೆ ಸಲ್ಲಿಸುತ್ತಿದ್ದಾರೆ. ಬೈಂದೂರಿನಲ್ಲಿ ಸಲೀಂ ಜನಸ್ನೇಹಿ ಲೈನ್‌ಮ್ಯಾನ್ ಆಗಿದ್ದರು.

ಇದನ್ನೂ ಓದಿ: Road Accident : ಎದುರಿಗೆ ಬಂದ ಬೈಕ್‌ ತಪ್ಪಿಸಲು ಹೋಗಿ ಮಹಿಳೆಗೆ ಗುದ್ದಿದ ಕಾರು; ಎಗರಿ ಬಿದ್ದವಳು ಸ್ಥಳದಲ್ಲೇ ಸಾವು

ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮೂಕಜೀವಿ ಬಲಿ

ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಮಂಚನಹಳ್ಳಿಯಲ್ಲಿ ವಿದ್ಯುತ್ ಶಾಕ್‌ನಿಂದ ಹಸುವೊಂದು ದಾರುಣವಾಗಿ ಮೃತಪಟ್ಟಿದೆ. ಕರೆಂಟ್ ಶಾಕ್‌ನಿಂದ ಹಸು ಮೃತಪಡುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕರಗಪ್ಪ ಎಂಬುವವರು ಹಸುಗಳನ್ನ ಮೇಯಿಸಿಕೊಂಡು ರಸ್ತೆಯಲ್ಲಿ ನಡೆದು ಬರುತ್ತಿದ್ದರು. ಈ ವೇಳೆ ವಿದ್ಯುತ್ ಕಂಬದ ಬಳಿ ಕರೆಂಟ್ ಗ್ರೌಂಡಿಂಗ್ ಆಗಿ ಹಸು ಮೃತಪಟ್ಟಿದೆ. ಇದೇ ರೀತಿ ನಾಲ್ಕೈದು ಹಸುಗಳಿಗೆ ಅದೇ ಜಾಗದಲ್ಲಿ ಗ್ರೌಂಡಿಂಗ್‌ನಿಂದ ಶಾಕ್ ಆಗಿದೆ.

ರೈತನ ಜೀವನಾಧಾರೆಯಾಗಿದ್ದ ಹಸು ಮೃತಪಟ್ಟಿದ್ದಕ್ಕೆ ಜಿಗಣಿ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಾರಣವೆಂದು ಆರೋಪಿಸಿದ್ದಾರೆ. ಒಂದು ಲಕ್ಷಕ್ಕೂ ಬೆಲೆಬಾಳುವ ಹಸುವನ್ನು ಕಳೆದುಕೊಂಡ ರೈತ ಕಂಗಾಲಾಗಿದ್ದಾರೆ. ಬೆಸ್ಕಾಂ ಇಲಾಖೆ ಸೂಕ್ತ ಪರಿಹಾರ ಕಲ್ಪಿಸಿಕೊಡಬೇಕೆಂದು ಕರಗಪ್ಪ ಒತ್ತಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Bangalore Rain
ಪ್ರಮುಖ ಸುದ್ದಿ2 mins ago

Bangalore Rain: ರಾಜಕಾಲುವೆ ಒತ್ತುವರಿ; ಮುಲಾಜಿಲ್ಲದೆ ತೆರವು ಮಾಡಲು ಡಿಕೆಶಿ ಸೂಚನೆ

Stock Market
ವಾಣಿಜ್ಯ13 mins ago

Stock Market: ಮತ್ತೊಮ್ಮೆ ಮೋದಿ ಸರ್ಕಾರದ ನಿರೀಕ್ಷೆ; ಸೆನ್ಸೆಕ್ಸ್ 2,600 ಪಾಯಿಂಟ್ಸ್‌ ಏರಿಕೆ

Dharwad Lok Sabha Constituency
ಧಾರವಾಡ21 mins ago

Dharwad Lok Sabha Constituency: ಜೋಶಿ vs ಅಸೂಟಿ; ಯಾವ ಅಭ್ಯರ್ಥಿಗೆ ಧಾರವಾಡ ಪೇಡಾ?

Anant Ambani Radhika Merchant Pre Wedding
ಫ್ಯಾಷನ್34 mins ago

Anant Ambani Radhika Merchant Pre Wedding: ಅಂಬಾನಿ ಫ್ಯಾಮಿಲಿಯ ಕ್ರ್ಯೂಸ್ ಟೂರ್‌ನಲ್ಲಿ ಸ್ಟಾರ್‌ಗಳ ಮಕ್ಕಳ ಲುಕ್‌ ಹೇಗಿದೆ ನೋಡಿ!

Vijaypur Lok Sabha Constituency
ವಿಜಯಪುರ40 mins ago

Vijaypur Lok Sabha Constituency: ವಿಜಯಪುರದಲ್ಲಿ ಅಧಿಕಾರದ ‘ಗೋಲ ಗುಮ್ಮಟ’ ಯಾರಿಗೆ?

IND vs PAK
ಕ್ರಿಕೆಟ್52 mins ago

IND vs PAK: ಸ್ನೈಪರ್ ಗನ್​ ಕಣ್ಗಾವಲಿನಲ್ಲಿ ಭಾರತ-ಪಾಕ್ ಟಿ20​ ವಿಶ್ವಕಪ್​ ಪಂದ್ಯ

Lok Sabha Election Result 2024
ದೇಶ1 hour ago

Lok Sabha Election Result 2024: ನಾಳೆ ಲೋಕಸಭೆ ಚುನಾವಣೆ ಫಲಿತಾಂಶ; ಯಾರಿಗೆ ಅಧಿಕಾರ? ನಿಮ್ಮ ಅಭಿಪ್ರಾಯ ತಿಳಿಸಿ

Maldives
ವಿದೇಶ1 hour ago

Maldives: ಇಸ್ರೇಲಿಗರ ಪ್ರವೇಶವನ್ನು ನಿಷೇಧಿಸಿದ ಮಾಲ್ಡೀವ್ಸ್‌; ಭಾರತದ ಬೀಚ್‌ಗೆ ತೆರಳಿ ಎಂದು ತಿರುಗೇಟು ನೀಡಿದ ಇಸ್ರೇಲ್‌

Cow including lineman dies of electric shock
ಉಡುಪಿ2 hours ago

Electric shock : ಪ್ರತ್ಯೇಕ ಕಡೆ‌ ಕರೆಂಟ್‌ ಶಾಕ್‌ಗೆ ಲೈನ್‌ಮ್ಯಾನ್‌ ಸೇರಿ ಹಸು ಬಲಿ

Rave Party
ಕರ್ನಾಟಕ2 hours ago

Rave Party: ರೇವ್ ಪಾರ್ಟಿ ಪ್ರಕರಣ; ವಿಚಾರಣೆಗೆ ಹಾಜರಾದ ತೆಲುಗು ನಟಿ ಹೇಮಾ ಅರೆಸ್ಟ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಟ್ರೆಂಡಿಂಗ್‌