Adani | ಎಸಿಸಿ, ಅಂಬುಜಾ ಸಿಮೆಂಟ್‌ನ 96,800 ಕೋಟಿ ರೂ. ಷೇರುಗಳನ್ನು ಸಾಲಕ್ಕಾಗಿ ಅಡವಿಟ್ಟ ಅದಾನಿ - Vistara News

ಪ್ರಮುಖ ಸುದ್ದಿ

Adani | ಎಸಿಸಿ, ಅಂಬುಜಾ ಸಿಮೆಂಟ್‌ನ 96,800 ಕೋಟಿ ರೂ. ಷೇರುಗಳನ್ನು ಸಾಲಕ್ಕಾಗಿ ಅಡವಿಟ್ಟ ಅದಾನಿ

ಎಸಿಸಿ ಮತ್ತು ಅಂಬುಜಾ ಸಿಮೆಂಟ್‌ನ 1 ಲಕ್ಷ ಕೋಟಿ ರೂ.ಗೂ ಹೆಚ್ಚು ಮೌಲ್ಯದ ಷೇರುಗಳನ್ನುಗೌತಮ್‌ ಅದಾನಿಯವರ ಅದಾನಿ (Adani) ಸಮೂಹವು ಸಾಲಕ್ಕಾಗಿ ಅಡಮಾನ ಇಟ್ಟಿದೆ.

VISTARANEWS.COM


on

Hindenburg an unethical short-seller, profited from stock trading: Adani
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಬಿಲಿಯನೇರ್‌ ಉದ್ಯಮಿ ಗೌತಮ್‌ ಅದಾನಿಯವರ ಸಮೂಹವು, ಎಸಿಸಿ ಮತ್ತು ಅಂಬುಜಾ ಸಿಮೆಂಟ್‌ನ ಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ಕೆಲವೇ ದಿನಗಳಲ್ಲಿ, (Adani) ಈ ಎರಡೂ ಕಂಪನಿಗಳ 13 ಶತಕೋಟಿ ಡಾಲರ್‌ ( ೯೬,೮೦೦ ಕೋಟಿ ರೂ.) ಮೌಲ್ಯದ ಷೇರುಗಳನ್ನು ಸಾಲಕ್ಕಾಗಿ ಅಡಮಾನ ಇಟ್ಟಿದೆ.

ಗ್ರೀನ್‌ ಎನರ್ಜಿಯಿಂದ ಮಾಧ್ಯಮದ ತನಕ ನಾನಾ ವಲಯಗಳಲ್ಲಿ ಮಹತ್ತ್ವಾಕಾಂಕ್ಷೆಯ ಡೀಲ್‌ಗಳನ್ನು ಕುದುರಿಸುತ್ತಿರುವ ಅದಾನಿ ಸಮೂಹ, ಈ ನಿಟ್ಟಿನಲ್ಲಿ ಸಾಲದ ವ್ಯವಸ್ಥೆಯನ್ನು ಮಾಡಿಕೊಳ್ಳುತ್ತಿದೆ. ಇದೀಗ ಹೋಲ್ಸಿಮ್‌ನಿಂದ ಎಸಿಸಿ ಮತ್ತು ಅಂಬುಜಾವನ್ನು ಖರೀದಿಸಿದ ಕೆಲ ದಿನಗಳಲ್ಲಿಯೇ ಅನುಕ್ರಮವಾಗಿ 57% ಮತ್ತು 63% ಷೇರುಗಳನ್ನು ಅಡಮಾನ ಇಟ್ಟಿದೆ.

ಅಂಬುಜಾ ಮತ್ತು ಎಸಿಸಿ ಕಂಪನಿಯ ಸ್ವಾಧೀನದೊಂದಿಗೆ ಅದಾನಿ ಗ್ರೂಪ್‌, ಸಿಮೆಂಟ್‌ ಉತ್ಪಾದನೆ ವಲಯದಲ್ಲಿ ಪ್ರಾಬಲ್ಯ ಸಾಧಿಸಲು ನಿರ್ಧರಿಸಿದೆ. 2027ರ ವೇಳೆಗೆ ಸಿಮೆಂಟ್‌ ಉತ್ಪಾದನೆಯನ್ನು ಇಮ್ಮಡಿಗೊಳಿಸಲು ಅದಾನಿ ಗ್ರೂಪ್‌ ತೀರ್ಮಾನಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Elon Musk: ಕೃತಕ ಬುದ್ಧಿಮತ್ತೆ ಬಳಸಿ ಇವಿಎಂಗಳ ಹ್ಯಾಕಿಂಗ್‌ ಸಾಧ್ಯ ಎಲಾನ್‌ ಮಸ್ಕ್‌; ಬಿಜೆಪಿ ನಾಯಕ ಟಾಂಗ್!‌

Elon Musk: ಹ್ಯಾಕರ್‌ಗಳು ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ಅನ್ನು ಬಳಸಿಕೊಂಡು ಚುನಾವಣೆ ಮತಯಂತ್ರಗಳನ್ನು ಹ್ಯಾಕ್‌ ಮಾಡಬಹುದು. ಹಾಗಾಗಿ, ಇವಿಎಂಗಳನ್ನು ಚುನಾವಣೆಯಲ್ಲಿ ಬಳಸಬಾರದು ಎಂದು ಟೆಸ್ಲಾ ಕಂಪನಿ ಸಿಇಒ ಎಲಾನ್‌ ಮಸ್ಕ್‌ ಹೇಳಿದ್ದಾರೆ. ಇದು ಈಗ ಅಮೆರಿಕದಲ್ಲಿ ಭಾರಿ ಸಂಚಲನ ಮೂಡಿಸಿದೆ. ಎಲಾನ್‌ ಮಸ್ಕ್‌ ಹೇಳಿಕೆ ಕುರಿತು ಪರ ಹಾಗೂ ವಿರೋಧ ಚರ್ಚೆಗಳು ಶುರುವಾಗಿವೆ.

VISTARANEWS.COM


on

Elon Musk
Koo

ವಾಷಿಂಗ್ಟನ್‌/ನವದೆಹಲಿ: ಅದು ಲೋಕಸಭೆ ಚುನಾವಣೆ ಇರಲಿ, ಯಾವುದೇ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯೇ ನಡೆಯಲಿ, ಸೋತಾಗಲೆಲ್ಲ ಕಾಂಗ್ರೆಸ್‌ ನಾಯಕರು ಚುನಾವಣೆ ಮತಯಂತ್ರಗಳ (EVM) ದಕ್ಷತೆ ಬಗ್ಗೆ ಆರೋಪ ಮಾಡುವುದು ಸಾಮಾನ್ಯ ಎಂಬಂತಾಗಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಕಾಂಗ್ರೆಸ್‌ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿದ ಕಾರಣ ಯಾರೂ ಇವಿಎಂಗಳ ಬಗ್ಗೆ ತಕರಾರು ಎತ್ತಿಲ್ಲ. ಆದರೆ, ಜಾಗತಿಕ ಎಲೆಕ್ಟ್ರಿಕ್‌ ಕಾರು ಉತ್ಪಾದನಾ ದೈತ್ಯ ಟೆಸ್ಲಾ ಕಂಪನಿಯ ಸಿಇಒ ಎಲಾನ್‌ ಮಸ್ಕ್‌ (Elon Musk) ಅವರು ಇವಿಎಂಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಹಾಗಂತ, ಎಲಾನ್‌ ಮಸ್ಕ್‌ ಅವರು ಭಾರತದ ಇವಿಎಂಗಳ ಬಗ್ಗೆ ಚಕಾರ ಎತ್ತಿಲ್ಲ. ಬದಲಾಗಿ, ಅಮೆರಿಕದ ಚುನಾವಣೆಯಲ್ಲಿ ಬಳಸುವ ಇವಿಎಂಗಳ ಬಗ್ಗೆ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ. “ಅಮೆರಿಕದಲ್ಲಿ ನಾವು ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷೀನ್‌ಗಳ ಬಳಕೆಯನ್ನು ನಿಲ್ಲಿಸಬೇಕು. ಹ್ಯಾಕರ್‌ಗಳು ಅಥವಾ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಕೆ ಮಾಡುವ ಮೂಲಕ ಇವಿಎಂಗಳನ್ನು ಹ್ಯಾಕ್‌ ಮಾಡುವ ಸಾಧ್ಯತೆ ಇದೆ. ಇದು ಸಣ್ಣ ಸಂಗತಿಯಾದರೂ, ದೊಡ್ಡ ಸಮಸ್ಯೆಯಾಗಿದೆ” ಎಂದು ಎಲಾನ್‌ ಮಸ್ಕ್‌ ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದು ಅಮೆರಿಕದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಪ್ರತಿಕ್ರಿಯೆ ನೀಡಿದ ಬಿಜೆಪಿ ನಾಯಕ

ಎಲಾನ್‌ ಮಸ್ಕ್‌ ಮಾಡಿರುವ ಆರೋಪಕ್ಕೆ ಬಿಜೆಪಿ ನಾಯಕ, ಕೇಂದ್ರದ ಮಾಜಿ ಸಚಿವ ರಾಜೀವ್‌ ಚಂದ್ರಶೇಖರ್‌ ಅವರು ತಿರುಗೇಟು ನೀಡಿದ್ದಾರೆ. “ಸುರಕ್ಷಿತವಾಗಿರುವ ಡಿಜಿಟಲ್‌ ಹಾರ್ಡ್‌ವೇರ್‌ಅನ್ನು ಯಾರೂ ತಯಾರಿಸಲು ಆಗುವುದಿಲ್ಲ ರೀತಿಯಲ್ಲಿ ನೀವು ಇವಿಎಂ ಕುರಿತು ಸಾಮಾನ್ಯವಾದ ಹೇಳಿಕೆ ನೀಡಿದ್ದೀರಿ. ಇವಿಎಂಗೆ ಇಂಟರ್‌ನೆಟ್‌, ಬ್ಲ್ಯೂಟ್‌, ವೈಫೈ ಸಂಪರ್ಕ ಕೂಡ ಇಲ್ಲ. ಕಾರ್ಖಾನೆಯಲ್ಲಿ ತಯಾರಾದ ಇವಿಎಂಗಳನ್ನು, ಯಾವುದೇ ಕನೆಕ್ಟಿವಿಲ್ಲದ ಇವಿಎಂಗಳನ್ನು ಹ್ಯಾಕ್‌ ಮಾಡಲು ಆಗುವುದಿಲ್ಲ. ಭಾರತದಲ್ಲಿ ಇದು ಸಾಬೀತಾಗಿದೆ. ನಾವು ಈ ಕುರಿತು ಒಂದು ಟ್ಯುಟೋರಿಯಲ್‌ ತೆರೆಯೋಣ” ಎಂದು ಟಾಂಟ್‌ ನೀಡಿದ್ದಾರೆ.

ಲೋಕಸಭೆ ಚುನಾವಣೆ ಹೊತ್ತಿನಲ್ಲೂ ಭಾರತದಲ್ಲಿ ವಿದ್ಯುನ್ಮಾನ ಮತಯಂತ್ರಗಳ ದಕ್ಷತೆ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು. ಇವಿಎಂಗಳಲ್ಲಿ ದಾಖಲಾದ ಮತಗಳನ್ನು ಹಾಗೂ ವಿವಿಪ್ಯಾಟ್‌ನಲ್ಲಿ ದಾಖಲಾದ ಮತಗಳನ್ನು ಶೇ.100ರಷ್ಟು ತಾಳೆ ಹಾಕಬೇಕು ಎಂಬುದಾಗಿ ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸ್ಲಲಿಸಲಾಗಿತ್ತು. ಆದರೆ, ನ್ಯಾಯಾಲಯವು ಅರ್ಜಿಗಳನ್ನು ತಳ್ಳಿಹಾಕಿತ್ತು. ಇನ್ನು, ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಇದರ ಮಧ್ಯೆಯೇ, ಎಲಾನ್‌ ಮಸ್ಕ್‌ ಅವರು ಇವಿಎಂಗಳನ್ನು ಹ್ಯಾಕ್‌ ಮಾಡಬಹುದು ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ಕಾಯಂ ಸ್ಥಾನ ನೀಡಿ ಎಂಬ ಮಸ್ಕ್‌ ಆಗ್ರಹಕ್ಕೆ ಅಮೆರಿಕವೂ ಸಾಥ್, ಶೀಘ್ರವೇ ಗುಡ್‌ ನ್ಯೂಸ್?

Continue Reading

ಪ್ರಮುಖ ಸುದ್ದಿ

Shootout Case: ಭೀಮಾ ತೀರದಲ್ಲಿ ಗುಂಡಿನ ದಾಳಿ; ರೌಡಿಶೀಟರ್‌ ಸ್ಥಳದಲ್ಲೇ ಸಾವು

Shootout Case: ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ನೀವರಗಿ ರಸ್ತೆಯ ಮನೆ ಬಳಿ ಇದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರಿಂದ ರೌಡಿಶೀಟರ್‌ ಮೃತಪಟ್ಟಿದ್ದಾನೆ.

VISTARANEWS.COM


on

Shootout Case
Koo

ವಿಜಯಪುರ: ಭೀಮಾ ತೀರದಲ್ಲಿ ಗುಂಡಿನ ದಾಳಿ ನಡೆದು, ರೌಡಿಶೀಟರ್‌ ಮೃತಪಟ್ಟಿದ್ದಾನೆ. ಜಿಲ್ಲೆಯ ಚಡಚಣ ಪಟ್ಟಣದ ನೀವರಗಿ ರಸ್ತೆಯ ಮನೆ ಬಳಿ ಇದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ (Shootout Case) ನಡೆಸಿ ರೌಡಿಶೀಟರ್‌ನ ಕೊಲ್ಲಲಾಗಿದೆ.

ಅಶೋಕ ಮಲ್ಲಪ್ಪ ಗಂಟಗಲ್ಲಿ ಮೃತ. ಮನೆಯಿಂದ ಚಟಚಟಣ ಪಟ್ಟಣಕ್ಕೆ ಆಗಮಿಸುತ್ತಿದ್ದ ವೇಳೆ ಹಂತಕರು ದಾಳಿ ಮಾಡಿದ್ದಾರೆ. ಅಶೋಕ‌ ಬೆನ್ನಿಗೆ ಮೂರಕ್ಕೂ ಅಧಿಕ ಗುಂಡಿಗಳು ತಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇತ್ತೀಚೆಗೆ ಜೈಲಿನಿಂದ ಪೆರೋಲ್ ಮೇಲೆ ಅಶೋಕ ಹೊರಬಂದಿದ್ದ. ಕೊಲೆ ಹಾಗೂ ಇತರೆ ಕೇಸ್‌ಗಳಲ್ಲಿ ಅಪರಾಧಿಯಾಗಿದ್ದ ವ್ಯಕ್ತಿಯನ್ನು ಹಳೆ ದ್ವೇಷದಿಂದ ಕೊಲೆ ಮಾಡಿರೋ ಸಂಶಯ ಮೂಡಿದೆ.

ಕೊಲೆಗೀಡಾದ ಅಶೋಕ ಪತ್ನಿ ಚಡಚಣ ಪಟ್ಟಣದ ವಾರ್ಡ್ ನಂಬರ್ 2ರ ಬಿಜೆಪಿ ಸದಸ್ಯೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಚಡಚಣ ಪೊಲೀಸರ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Electric shock : ವಸತಿ ಶಾಲೆ ಆವರಣದಲ್ಲಿ ಕರೆಂಟ್‌ ಶಾಕ್‌ನಿಂದ ಬಾಲಕ ಸಾವು; 8 ಮಂದಿ ಅಮಾನತು

ತಾಯಿಗೆ ಚಿತ್ರಹಿಂಸೆ ನೀಡುತ್ತಿದ್ದ ಬಾಯ್‌ಫ್ರೆಂಡ್‌ನನ್ನು ಕೊಂದು ಮುಗಿಸಿದ ಮಗ

murder case in Bengaluru rural

ಬೆಂಗಳೂರು ಗ್ರಾಮಾಂತರ: ನಿರ್ಮಾಣ ಹಂತದ ಕಟ್ಟಡದಲ್ಲಿ ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಬರ್ಬರ ಹತ್ಯೆ (Murder Case) ನಡೆಸಲಾಗಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಕೂಡ್ಲು ಗ್ರಾಮದ ಸಾಯಿ ಮೆಡೋಸ್ ಲೇಔಟ್‌ನಲ್ಲಿ ಘಟನೆ ನಡೆದಿದೆ. ಕೃಷ್ಣೋಜಿ ರಾವ್ (37) ಕೊಲೆಯಾದವನು.

ಶಿವಕುಮಾರ್, ರಾಜೇಶ್ವರಿ ಕೊಲೆ ಮಾಡಿದ ಆರೋಪಿಗಳಾಗಿದ್ದಾರೆ. ಮದುವೆಯಾಗಿದ್ದ ರಾಜೇಶ್ವರಿ ಪತಿಯಿಂದ ದೂರಾಗಿದ್ದಳು. ಬಳಿಕ ಕೆಲ ವರ್ಷಗಳ ಹಿಂದೆ ಕೃಷ್ಣೋಜಿರಾವ್ ಜತೆ ರಾಜೇಶ್ವರಿ ಸಂಬಂಧ ಹೊಂದಿದ್ದಳು. ಇವರಿಬ್ಬರು ಗಂಡ-ಹೆಂಡತಿ ಎಂದು ಹೇಳಿಕೊಂಡು ಗಾರೆ ಕೆಲಸ ಮಾಡಿಕೊಂಡು ಒಟ್ಟಿಗೆ ವಾಸವಿದ್ದರು.

ಕೃಷ್ಣೋಜಿರಾವ್, ರಾಜೇಶ್ವರಿ ಮತ್ತು ಆಕೆಯ ಮಗ ಶಿವಕುಮಾರ್ ನಿರ್ಮಾಣ ಹಂತದ ಕಟ್ಟಡದಲ್ಲಿ ವಾಸವಿದ್ದರು. ಇತ್ತೀಚೆಗೆ ಕೃಷ್ಣೋಜಿರಾವ್ ದಿನನಿತ್ಯ ಕುಡಿದು ಬಂದು ರಾಜೇಶ್ವರಿಗೆ ಹಲ್ಲೆ ಮಾಡುತ್ತಿದ್ದ. ಇದರಿಂದಾಗಿ ರಾಜೇಶ್ವರಿ ಹಾಗೂ ಆಕೆಯ ಮಗ ಶಿವಕುಮಾರ್‌ ಬೇಸತ್ತು ಹೋಗಿದ್ದರು.

ನಿನ್ನೆ ಭಾನುವಾರ ಸಂಜೆ ಕಂಠ ಪೂರ್ತಿ ಕುಡಿದು ಬಂದಿದ್ದ ಕೃಷ್ಣೋಜಿರಾವ್, ರಾಜೇಶ್ವರಿ ಜತೆಗೆ ಗಲಾಟೆ ಮಾಡಿ ಹಲ್ಲೆ ಮಾಡುತ್ತಿದ್ದ. ಈ ವೇಳೆ ಅಲ್ಲಿಗೆ ಬಂದ ರಾಜೇಶ್ವರಿ ಮಗ ಶಿವಕುಮಾರ್‌ ದೊಣ್ಣೆಯಿಂದ ಕೃಷ್ಣೋಜಿರಾವ್ ತಲೆಗೆ ಹೊಡೆದಿದ್ದ.

ಆಗ ಶಿವಕುಮಾರನ ತಾಯಿ ರಾಜೇಶ್ವರಿ ಅವನನ್ನು ಬಿಡಬೇಡ ಮುಗಿಸಿಬಿಡು ಎಂದು ಹೇಳಿದ್ದಾಳೆ. ಆಗ ಮತ್ತೆ ದೊಣ್ಣೆಯಿಂದ ಮುಖ ಹಾಗೂ ತಲೆಗೆ ಹೊಡೆದು ಕೊಂದು ಹಾಕಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

Continue Reading

ಉದ್ಯೋಗ

Job Alert: ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್‌ನಲ್ಲಿದೆ 164 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Job Alert: ಭಾರತ ಸರ್ಕಾರದ ನಿಯಂತ್ರಣದಲ್ಲಿರುವ ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ವಿವಿಧ ವಿಷಯಗಳಲ್ಲಿನ ಮ್ಯಾನೇಜ್‌ಮೆಂಟ್‌ ಟ್ರೈನಿ ಹುದ್ದೆ ಇದಾಗಿದೆ. ಒಟ್ಟು 164 ಹುದ್ದೆ ಖಾಲಿ ಇದೆ. ಬಿಇ, ಬಿಎಸ್‌ಸಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜುಲೈ 2. ದೇಶದ ಎಲ್ಲಿಯಾದರೂ ಉದ್ಯೋಗ ನಿರ್ವಹಿಸಲು ತಯಾರಿರುವವರು ಅರ್ಜಿ ಸಲ್ಲಿಸಿ.

VISTARANEWS.COM


on

Job Alert
Koo

ಬೆಂಗಳೂರು: ಭಾರತ ಸರ್ಕಾರದ ನಿಯಂತ್ರಣದಲ್ಲಿರುವ ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (National Fertilizers Limited) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ವಿವಿಧ ವಿಷಯಗಳಲ್ಲಿನ ಮ್ಯಾನೇಜ್‌ಮೆಂಟ್‌ ಟ್ರೈನಿ ಹುದ್ದೆ ಇದಾಗಿದೆ. ಒಟ್ಟು 164 ಹುದ್ದೆ ಖಾಲಿ ಇದೆ (NFL Recruitment 2024). ಬಿಇ, ಬಿಎಸ್‌ಸಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜುಲೈ 2 (Job Alert).

ಹುದ್ದೆಗಳ ವಿವರ

ಮ್ಯಾನೇಜ್‌ಮೆಂಟ್‌ ಟ್ರೈನಿ (ಕೆಮಿಕಲ್)- 56
ಮ್ಯಾನೇಜ್‌ಮೆಂಟ್‌ ಟ್ರೈನಿ (ಮೆಕ್ಯಾನಿಕಲ್)- 18
ಮ್ಯಾನೇಜ್‌ಮೆಂಟ್‌ ಟ್ರೈನಿ (ಎಲೆಕ್ಟ್ರಿಕಲ್)- 21
ಮ್ಯಾನೇಜ್‌ಮೆಂಟ್‌ ಟ್ರೈನಿ (ಇನ್ಸ್ಟ್ರುಮೆಂಟೇಶನ್)- 17
ಮ್ಯಾನೇಜ್‌ಮೆಂಟ್‌ ಟ್ರೈನಿ (ಕೆಮಿಕಲ್ ಲ್ಯಾಬ್)- 12
ಮ್ಯಾನೇಜ್‌ಮೆಂಟ್‌ ಟ್ರೈನಿ (ಸಿವಿಲ್)- 3
ಮ್ಯಾನೇಜ್‌ಮೆಂಟ್‌ ಟ್ರೈನಿ (ಫೈರ್ & ಸೇಫ್ಟಿ)- 5
ಮ್ಯಾನೇಜ್‌ಮೆಂಟ್‌ ಟ್ರೈನಿ (ಮಾಹಿತಿ ತಂತ್ರಜ್ಞಾನ)- 5
ಮ್ಯಾನೇಜ್‌ಮೆಂಟ್‌ ಟ್ರೈನಿ (ಮೆಟೀರಿಯಲ್ಸ್) -11
ಮ್ಯಾನೇಜ್‌ಮೆಂಟ್‌ ಟ್ರೈನಿ (ಎಚ್ಆರ್)- 16

ವಿದ್ಯಾರ್ಹತೆ ಮತ್ತು ವಯೋಮಿತಿ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಬಿಇ / ಬಿ.ಟೆಕ್ / ಬಿಎಸ್‌ಸಿ / ಎಂಬಿಎ / ಎಂಎಸ್‌ಸಿ / ಪಿಜಿ ಡಿಪ್ಲೋಮಾ / ಪಿಜಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 27 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು / ಮಾಜಿ ಯೋಧರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಉಳಿದ ಎಲ್ಲ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 700 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು. ಲಿಖಿತ ಪರೀಕ್ಷೆ, ಸಂದರ್ಶನ, ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ನಡೆಯಲಿದೆ.

ಮಾಸಿಕ ವೇತನ

ಆಯ್ಕೆಯಾದವರಿಗೆ 1 ವರ್ಷ ತರಬೇತಿ ನೀಡಲಾಗುತ್ತದೆ. ಬಳಿಕ 3 ವರ್ಷಗಳ ಒಪ್ಪಂದದ ಮೇರೆಗೆ ನೇಮ ಮಾಡಿಕೊಳ್ಳಲಾಗುತ್ತದೆ. ದೇಶದ ಎಲ್ಲಿಯಾದರೂ ಉದ್ಯೋಗ ನಿರ್ವಹಿಸಲು ತಯಾರಿರುವವರು ಮಾತ್ರ ಅರ್ಜಿ ಸಲ್ಲಿಸಿ. ಆಯ್ಕೆಯಾದವರಿಗೆ 40,000 ರೂ.-1,40,000 ರೂ. ಮಾಸಿಕ ವೇತನ ಲಭಿಸಲಿದೆ.

NFL Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ (https://careers.nfl.co.in/).

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://careers.nfl.co.in/).
  • ಅಗತ್ಯ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಬಳಿಕ ಲಾಗಿನ್‌ ಆಗಿ ಸೂಕ್ತ ಮಾಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ +91-8660511568 ನಂಬರ್‌ಗೆ ಕರೆ ಮಾಡಿ.

ಇದನ್ನೂ ಓದಿ: Job Alert: ಕಾಟನ್‌ ಕಾರ್ಪೋರೇಷನ್‌ನಲ್ಲಿದೆ 214 ಹುದ್ದೆ; ಆನ್‌ಲೈನ್‌ ಮೂಲಕ ಇಂದೇ ಅಪ್ಲೈ ಮಾಡಿ

Continue Reading

ಕ್ರೀಡೆ

Team India Coach: ಭಾರತ ತಂಡದ ಕೋಚ್​ ಆಗಿ ಗಂಭೀರ್​ ಆಯ್ಕೆ; ಶೀಘ್ರದಲ್ಲೇ ಅಧಿಕೃತ ಘೋಷಣೆ

Team India Coach: ಕಳೆದ ತಿಂಗಳು ಬಿಸಿಸಿಐ ಕೋಚ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಆರಂಭದಲ್ಲಿ ಎನ್​ಸಿಎ ಮುಖ್ಯಸ್ಥರಾಗಿರುವ ವಿವಿಎಸ್ ಲಕ್ಷ್ಮಣ್ ಅವರ ಹೆಸರು ಕೇಳಿ ಬಂದಿತ್ತು. ಆದರೆ ಅವರು ಕೊಚ್​ ಹುದ್ದೆಯಲ್ಲಿ ಆಸಕ್ತಿ ಹೊಂದಿಲ್ಲ ಎಂದು ಹೇಳಿದ್ದರು. ಈ ವೇಳೆ ಗಂಭೀರ್​ ಕೋಚ್​ ಆಗಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು.

VISTARANEWS.COM


on

Team India Coach
Koo

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ನೂತನ ಕೋಚ್‌(Team India Coach) ಆಗಿ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌(Gautam Gambhir) ಅವರನ್ನೇ ನೇಮಕ ಮಾಡಲು ಬಿಸಿಸಿಐ(BCCI) ತೀರ್ಮಾನ ಕೈಗೊಂಡಿದ್ದು ಇದೇ ತಿಂಗಳ ಅಂತ್ಯದಲ್ಲಿ ಅಧಿಕೃತ ಘೋಷಣೆ ಮಾಡಲಿದೆ ಎಂದು ಕೆಲ ಆಂಗ್ಲ ಮಾಧ್ಯಮಗಳು ವರದಿ ಮಾಡಿದೆ. ರಾಹುಲ್​ ದ್ರಾವಿಡ್(Rahul Dravid)​ ಅವರು ಟಿ20 ವಿಶ್ವಕಪ್​ ಬಳಿಕ ಕೋಚ್(India Head Coach)​ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ.

ದ್ರಾವಿಡ್​ ಅವರು ಕೋಚ್​ ಹುದ್ದೆಯಿಂದ ಕೆಳಗಿಳಿಯುವುದಾಗಿ ಹೇಳಿದ ಬೆನ್ನಲ್ಲೇ ಗಂಭೀರ್​ ಮುಂದಿನ ಕೋಚ್ ಎನ್ನುವ ಮಾತುಗಳು ಕೇಳಿಬಂದಿತ್ತು. ಐಪಿಎಲ್​ ವೇಳೆ ಇದಕ್ಕಾಗಿ ಜಯ್​ ಶಾ ಮತ್ತು ಬಿಸಿಸಿಐ ಅಧಿಕಾರಿಗಳು ಕೂಡ ಗಂಭೀರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಮೂಲಗಳ ಪ್ರಕಾರ ಗಂಭೀರ್​ ಕೂಡ ಕೋಚ್​ ಆಗಲು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಾರಿಯ ಐಪಿಎಲ್​ನಲ್ಲಿ ಕೆಕೆಆರ್‌ ತಂಡಕ್ಕೆ ಯಶಸ್ವಿ ಮಾರ್ಗದರ್ಶನ ನೀಡಿ ತಂಡವನ್ನು ಚಾಂಪಿಯನ್​ ಮಾಡಿದ ಗಂಭೀರ್‌, ರಾಹುಲ್‌ ದ್ರಾವಿಡ್‌ ಅವರ ಸ್ಥಾನ ತುಂಬಲು ಅರ್ಹರು ಎಂದು ಬಿಸಿಸಿಐ ಭಾವಿಸಿದೆ ಎಂದು ಮೂಲಗಳು ತಿಳಿಸಿವೆ.  ಮೂಲಗಳ ಪ್ರಕಾರ ಗಂಭೀರ್​ ಕೋಚ್​ ಆಗುವ ದೃಷ್ಟಿಯಿಂದಲೇ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ ಎನ್ನಲಾಗಿದೆ.

ಕಳೆದ ತಿಂಗಳು ಬಿಸಿಸಿಐ ಕೋಚ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಆರಂಭದಲ್ಲಿ ಎನ್​ಸಿಎ ಮುಖ್ಯಸ್ಥರಾಗಿರುವ ವಿವಿಎಸ್ ಲಕ್ಷ್ಮಣ್ ಅವರ ಹೆಸರು ಕೇಳಿ ಬಂದಿತ್ತು. ಆದರೆ ಅವರು ಕೊಚ್​ ಹುದ್ದೆಯಲ್ಲಿ ಆಸಕ್ತಿ ಹೊಂದಿಲ್ಲ ಎಂದು ಹೇಳಿದ್ದರು. ಈ ವೇಳೆ ಗಂಭೀರ್​ ಕೋಚ್​ ಆಗಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಸದ್ಯ ಅವರೇ ಕೋಚ್​ ಆಗುವುದು ಖಚಿತ ಎನ್ನುತ್ತಿದೆ ಮೂಲಗಳು. ನೂತನ ಕೋಚ್​ ಆಗಿ ಆಯ್ಕೆಯಾದವರ ಕಾರ್ಯಾವಧಿ 2027ರ ಡಿಸೆಂಬರ್ 31ಕ್ಕೆ ಮುಕ್ತಾಯಗೊಳ್ಳುತ್ತದೆ. 2027ರಲ್ಲಿ ನಡೆಯುವ ಏಕದಿನ ವಿಶ್ವಕಪ್​ ಟೂರ್ನಿಯೂ ಈ ಕೋಚ್​ಗೆ ಸಿಗಲಿದೆ. ಆಯ್ಕೆಯಾದ ಹೊಸ ಕೋಚ್‌ ಟಿ20 ವಿಶ್ವಕಪ್‌ ಟೂರ್ನಿಯ ನಂತರ ತಕ್ಷಣವೇ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ India Coach: ಕೋಚ್​ ಆಗುವ ಮುನ್ನವೇ ಗಂಭೀರ್​ಗೆ ಕಿವಿಮಾತು ಹೇಳಿದ ಅನಿಲ್ ಕುಂಬ್ಳೆ

ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಭರ್ತಿ ಮಾಡುವ ಮುನ್ನ ಗಂಭೀರ್​ ಅವರು ​ಒಂದು ಷರತ್ತು ಹಾಕಿದ್ದರು. ‘ಆಯ್ಕೆಯ ಗ್ಯಾರಂಟಿ’ ನೀಡಿದರೆ ಮಾತ್ರ ಗಂಭೀರ್ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಸಿದ್ಧರಿರುವುದಾಗಿ ಹೇಳಿದ್ದರು. ಕೋಚ್​ ಹುದ್ದೆಗಾಗಿ ಎಷ್ಟು ಅರ್ಜಿಗಳು ಬಂದಿದೆ ಎಂಬುದರ ಬಗ್ಗೆ ಸದ್ಯ ಯಾವುದೇ ಮಾಹಿತಿ ಹೊರಬಿದ್ದಿಲ್ಲ ಆದರೆ ಗಂಭೀರ್​ ಕೋಚ್​ ಆಗುವುದು ಖಚಿತ ಎನ್ನಲಾಗಿದೆ.

ದ್ರಾವಿಡ್ ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಬಳಿಕವೇ ಕೋಚ್​ ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದರು. ಆದರೆ, ಬಿಸಿಸಿಐ ಟಿ20 ವಿಶ್ವಕಪ್​ ತನಕ ಅವರನ್ನು ಮುಂದುವರಿಯುವಂತೆ ಒತ್ತಾಯ ಮಾಡಿತ್ತು. ಹೀಗಾಗಿ ದ್ರಾವಿಡ್​ ಟಿ20 ವಿಶ್ವಕಪ್ ತನಕ ಈ ಹುದ್ದೆಯಲ್ಲಿ ಮುಂದುವರಿದರು.

Continue Reading
Advertisement
Elon Musk
ಪ್ರಮುಖ ಸುದ್ದಿ18 mins ago

Elon Musk: ಕೃತಕ ಬುದ್ಧಿಮತ್ತೆ ಬಳಸಿ ಇವಿಎಂಗಳ ಹ್ಯಾಕಿಂಗ್‌ ಸಾಧ್ಯ ಎಲಾನ್‌ ಮಸ್ಕ್‌; ಬಿಜೆಪಿ ನಾಯಕ ಟಾಂಗ್!‌

Shootout Case
ಪ್ರಮುಖ ಸುದ್ದಿ21 mins ago

Shootout Case: ಭೀಮಾ ತೀರದಲ್ಲಿ ಗುಂಡಿನ ದಾಳಿ; ರೌಡಿಶೀಟರ್‌ ಸ್ಥಳದಲ್ಲೇ ಸಾವು

kusina mane
ರಾಮನಗರ22 mins ago

Kusina Mane: ಗ್ರಾಮೀಣ ಮಹಿಳೆಯರ ಪಾಲಿಗೆ ವರದಾನವಾದ ಕೂಸಿನ ಮನೆ; ಮಕ್ಕಳ ದಾಖಲಾತಿ ಹೆಚ್ಚಳ

Job Alert
ಉದ್ಯೋಗ49 mins ago

Job Alert: ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್‌ನಲ್ಲಿದೆ 164 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

murder case in Bengaluru rural
ಬೆಂಗಳೂರು ಗ್ರಾಮಾಂತರ50 mins ago

Murder case : ತಾಯಿಗೆ ಚಿತ್ರಹಿಂಸೆ ನೀಡುತ್ತಿದ್ದ ಬಾಯ್‌ಫ್ರೆಂಡ್‌ನನ್ನು ಕೊಂದು ಮುಗಿಸಿದ ಮಗ

V Cinemas multiplex inauguration by dolly dhanjay Ramesh arvind
ಸ್ಯಾಂಡಲ್ ವುಡ್50 mins ago

V Cinemas: ರಮೇಶ್ ಅರವಿಂದ್ – ಡಾಲಿ ಧನಂಜಯರಿಂದ ‘ವಿ ಸಿನಿಮಾಸ್’ ಮಲ್ಟಿಪ್ಲೆಕ್ಸ್ ಉದ್ಘಾಟನೆ

Petrol Diesel Price
ರಾಜಕೀಯ1 hour ago

Petrol Diesel Price: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

Team India Coach
ಕ್ರೀಡೆ1 hour ago

Team India Coach: ಭಾರತ ತಂಡದ ಕೋಚ್​ ಆಗಿ ಗಂಭೀರ್​ ಆಯ್ಕೆ; ಶೀಘ್ರದಲ್ಲೇ ಅಧಿಕೃತ ಘೋಷಣೆ

murder Case
ಬೆಂಗಳೂರು ಗ್ರಾಮಾಂತರ1 hour ago

Murder Case : ಓವರ್‌ ಟೇಕ್‌ ವಿಷ್ಯಕ್ಕೆ ಯುವಕನ ಕೊಚ್ಚಿ ಕೊಂದ ದುಷ್ಕರ್ಮಿಗಳು; ಮಗನ ಶವ ಕಂಡು ತಂದೆ ಕಣ್ಣೀರು

R Ashok
ಕರ್ನಾಟಕ1 hour ago

R Ashok:‌ ದುಡ್ಡಿಗಾಗಿ ಕಾರ್ಪೊರೇಷನ್‌, ಯುಟಿಲಿಟಿ ಬಿಲ್ಡಿಂಗ್‌ ಅಡ ಇಡಲು ಸಿದ್ದರಾಮಯ್ಯ ಪ್ಲಾನ್; ಅಶೋಕ್‌ ಆರೋಪ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Vijayanagara News
ವಿಜಯನಗರ2 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 day ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

ಟ್ರೆಂಡಿಂಗ್‌