shimogga terror | ಯುವಕರು ಕೆಲಸ ಸಿಗದೆ ಕ್ರೈಂ ದಾರಿ ಹಿಡಿಯುತ್ತಿದ್ದಾರೆ ಎಂದ ಕಾಂಗ್ರೆಸ್‌ ನಾಯಕ ಮೊಹಮ್ಮದ್‌ ನಲಪಾಡ್‌! - Vistara News

ಕರ್ನಾಟಕ

shimogga terror | ಯುವಕರು ಕೆಲಸ ಸಿಗದೆ ಕ್ರೈಂ ದಾರಿ ಹಿಡಿಯುತ್ತಿದ್ದಾರೆ ಎಂದ ಕಾಂಗ್ರೆಸ್‌ ನಾಯಕ ಮೊಹಮ್ಮದ್‌ ನಲಪಾಡ್‌!

Shimogga terror ಯುವಜನರು ದಾರಿ ತಪ್ಪಲು ಉದ್ಯೋಗ ಇಲ್ಲದೇ ಇರುವುದೇ ಕಾರಣ ಎನ್ನುವುದು ಮೊಹಮ್ಮದ್‌ ನಲಪಾಡ್‌ ಮಾತು. ಶಿವಮೊಗ್ಗದಲ್ಲಿ ಉಗ್ರ ಜಾಲ ಪತ್ತೆಗೆ ಸಂಬಂಧಿಸಿ ಅವರು ಈ ಮಾತು ಹೇಳಿದ್ದು ಚರ್ಚೆಗೆ ಕಾರಣವಾಗಿದೆ.

VISTARANEWS.COM


on

mohammad nalapad
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ʻʻಡಿಗ್ರಿ ಪಡೆದ ಯುವಕರಿಗೆ ಕೆಲಸ ಸಿಗುತ್ತಿಲ್ಲ. ಹೀಗಾಗಿ ಅವರು ಕ್ರೈಂ ದಾರಿ ಹಿಡಿಯುತ್ತಿದ್ದಾರೆʼ: ಇದು ಶಿವಮೊಗ್ಗದಲ್ಲಿ ಪತ್ತೆಯಾದ ಉಗ್ರ ಜಾಲದ ಬಗ್ಗೆ ಕೆಪಿಸಿಸಿ ಯೂತ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ಹ್ಯಾರೀಸ್ ನಲಪಾಡ್‌ ಅವರು ನೀಡಿರುವ ಪ್ರತಿಕ್ರಿಯೆ.

ಶಿವಮೊಗ್ಗದಲ್ಲಿ ಐಸಿಸ್ ಸಂಪರ್ಕದಲ್ಲಿದ್ದ ಮುಸ್ಲಿಂ ಯುವಕರ ಬಂಧನಕ್ಕೆ ಸಂಬಂಧಿಸಿ ಮೈಸೂರಿನಲ್ಲಿ ಮಾತನಾಡಿದ ಅವರು, ʻʻಡಿಗ್ರಿ ಪಡೆದ ಯುವಕರಿಗೇ ಕೆಲಸ ಸಿಗುತ್ತಿಲ್ಲ. ಹೀಗಾಗಿ ಅವರು ಅಪರಾಧದ ದಾರಿ ಹಿಡಿಯುತ್ತಿದ್ದಾರೆ. ತಪ್ಪಾದ ದಾರಿಗೆ ಹೋಗುತ್ತಿದ್ದಾರೆ. ಇದೇ ನಡೆಯುತ್ತಿರುವುದುʼʼ ಎಂದರು. ʻʻಐಸಿಸ್ ಸಂಪರ್ಕದಲ್ಲಿ ಇರೋರನ್ನು ಭಾರತದಲ್ಲಿ ಇಟ್ಟು ಕೊಳ್ಳಬೇಡಿ. ಅವರಿಗೆ ಗಲ್ಲು ಶಿಕ್ಷೆ ಕೊಡಿʼʼ ಎಂದೂ ಅವರು ಹೇಳಿದರು.

ʻʻಐಸಿಸ್ ಸಂಘಟನೆ ಸೇರುತ್ತಾರೆ ಅಂತ ನಾನು ಹೇಳುತ್ತಿಲ್ಲ. ಆದರೆ, ಯುವಕರು ತಪ್ಪಾದ ದಾರಿ ಹಿಡಿಯುತ್ತಿರುವುದು ಸತ್ಯ. ನಿರುದ್ಯೋಗದ ಕಾರಣಕ್ಕಾಗಿಯೇ ಯುವಕರು ತಪ್ಪು ದಾರಿ ಹಿಡಿಯುತ್ತಿರುವುದು. ಇದಕ್ಕೆ ಬಿಜೆಪಿಯೇ ಹೊಣೆ,ʼʼ ಎಂದು ಹೇಳಿದರು. ʻʻಕೆಲಸ ಇದ್ದರೆ ಯುವಕರಿಗೆ ತಪ್ಪು ದಾರಿಗೆ ತುಳಿಯುವ ಯೋಚನೆ ಬರಲ್ಲʼʼ ಎಂದು ನುಡಿದರು.

ʻʻ2023ರವರೆಗೆ ಯುವಕರು ತಾಳ್ಮೆಯಿಂದ ಇರಬೇಕು. ಆಗ ಸುವರ್ಣ ಕಾಲ ಬರುತ್ತೆ. ತಪ್ಪು ದಾರಿಗೆ ಹೋಗಬೇಡಿʼʼ ಎಂದು ಮನವಿ ಮಾಡಿದ ಅವರು, ೨೦೨೩ರ ವಿಧಾನಸಭಾ ಚುನಾವಣೆಯ ಬಳಿಕ ಕಾಂಗ್ರೆಸ್‌ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಸೂಚ್ಯವಾಗಿ ಹೇಳಿದರು.

ಒತ್ತುವರಿ ತೆರವಿಗೆ ಕಾಂಗ್ರೆಸ್‌ ವಿರೋಧವಿಲ್ಲ
ʻʻಬೆಂಗಳೂರಿನಲ್ಲಿ ಒತ್ತುವರಿ ತೆರವಿಗೆ ಕಾಂಗ್ರೆಸ್ ವಿರೋಧವಿದೆʼʼ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ʻʻಕಾಂಗ್ರೆಸ್ ಗೂ ಒತ್ತುವರಿ ತೆರವಿಗೂ ಸಂಬಂಧವಿಲ್ಲ. ಬಿಜೆಪಿ ಸರಕಾರ ಕಾನೂನು ಪ್ರಕಾರ ಕ್ರಮ ತೆಗೆದು ಕೊಳ್ಳಲಿʼʼ ಎಂದರು.
ʻʻಒತ್ತುವರಿ ತೆರವು ಮಾಡುವ ಮುನ್ನ ವೈಜ್ಞಾನಿಕವಾಗಿ ವರದಿ ತಯಾರಿಸಿ. ಪ್ರವಾಹ ಬಂತು ಅಂದ ಕೂಡಲೇ ಆ ಕಟ್ಟಡ ಒಡೆಯಿರಿ. ಈ ಕಟ್ಟಡ ಒಡೆಯಿರಿ ಎಂದರೆ ಹೇಗೆ? ವೈಜ್ಞಾನಿಕವಾಗಿ ವರದಿ ತಯಾರು ಮಾಡದೆ ಸಿಕ್ಕ ಸಿಕ್ಕವರ ಮನೆ ಹೊಡೆದರೆ ಹೇಗೆ ಹೇಳಿ?ʼʼ ಎಂದು ಪ್ರಶ್ನಿಸಿದರು.

ಮನೆ ಅಂದ ಮೇಲೆ ಒಂದು ಮಾತು ಬರುತ್ತೆ, ಹೋಗುತ್ತೆ
ಭಾರತ್ ಜೋಡೋ ಯಾತ್ರೆ ಸಂಘಟನೆ ವಿಚಾರದಲ್ಲಿ ಕಾಂಗ್ರೆಸ್ ನಾಯಕರಲ್ಲೇ ಅಸಮಾಧಾನ ಇದೆ ಎಂಬ ದೂರುಗಳಿಗೆ ಪ್ರತಿಕ್ರಿಯಿಸಿದ ಮೊಹಮ್ಮದ್‌ ನಲಪಾಡ್‌, ʻʻಪಕ್ಷ ಅಂದರೆ ಅದು ಮನೆ ಇದ್ದಂತೆ, ಒಂದು ಮಾತು ಬರುತ್ತದೆ, ಹೋಗುತ್ತದೆ. ನಾವೇ ಮನೆಯೊಳಗೆ ಕೂತು ಮಾತಾಡಿ ಕೊಂಡು ಸರಿ ಮಾಡಿ ಕೊಳ್ತೀವಿ. ಯಾತ್ರೆಯ ಸಂಘಟನೆ ವಿಚಾರದಲ್ಲಿ ಯಾರೂ ತಾರತಮ್ಯ ಮಾಡುವಂತಿಲ್ಲ. ಯಾರೂ ತುಟಿಕ್ ಪಿಟಿಕ್ ಅನ್ನುವ ಹಾಗಿಲ್ಲʼʼ ಅಂದರು.

ಇದನ್ನೂ ಓದಿ | Shivamogga terror|‌ 40 ದಿನದ ಹಿಂದೆ ಶಾರಿಕ್‌ ತಂದೆ ಸಾವು, 20 ದಿನದಿಂದ ಮನೆಗೆ ಬಂದಿಲ್ಲ ಎಂದ ತಾಯಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Recruitment: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ರಾಜ್ಯದಾದ್ಯಂತ ಖಾಲಿ ಇರುವ ಆಫೀಸ್ ಅಸಿಸ್ಟೆಂಟ್​, ಆಫೀಸರ್ ಒಟ್ಟು 586 ಹುದ್ದೆಗಳಿಗೆ (Job Recruitment) ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಜೂನ್ 27ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇದಕ್ಕೆ ಸಂಬಂಧಿಸಿದ ನಿಯಮ, ಅರ್ಹತೆ ವಿವರ ಇಂತಿದೆ.

VISTARANEWS.COM


on

By

Job Recruitment
Koo

ಬೆಂಗಳೂರು: ಕರ್ನಾಟಕ (karnataka) ಗ್ರಾಮೀಣ ಬ್ಯಾಂಕ್‌ನಲ್ಲಿ (Karnataka Gramina Bank) ಖಾಲಿ ಇರುವ ಒಟ್ಟು 586 ಆಫೀಸ್ ಅಸಿಸ್ಟೆಂಟ್ (office assistant)​, ಆಫೀಸರ್ (officer) ಹುದ್ದೆಗಳಿಗೆ ನೇಮಕಾತಿಯನ್ನು (Job Recruitment) ಘೋಷಿಸಿದೆ. ಆಸಕ್ತ ಅಭ್ಯರ್ಥಿಗಳು 2024ರ ಜೂನ್ 27ರೊಳಗಾಗಿ ವೆಬ್ ಸೈಟ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಆಸಕ್ತರಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು, ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.

ಹುದ್ದೆಯ ವಿವರ

ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 386, ಕರ್ನಾಟಕ ವಿಕಾಸ್ ಗ್ರಾಮೀಣ ಬ್ಯಾಂಕ್ 200 ಸೇರಿ ಒಟ್ಟು 586 ಹುದ್ದೆಗಳಲ್ಲಿ ಆಫೀಸ್ ಅಸಿಸ್ಟೆಂಟ್ 200, ಆಫೀಸರ್ ಸ್ಕೇಲ್-1(ಅಸಿಸ್ಟೆಂಟ್ ಮ್ಯಾನೇಜರ್) 386 ಸ್ಥಾನಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದಾದ್ಯಂತ ಹುದ್ದೆಗಳು ಖಾಲಿ ಇದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.

ಅರ್ಹತೆ ಏನು?

ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು. ಆಫೀಸ್ ಅಸಿಸ್ಟೆಂಟ್ ಹುದ್ದಗೆ 18ರಿಂದ 28 ವರ್ಷ ಮತ್ತು ಆಫೀಸರ್ ಸ್ಕೇಲ್-1 (ಅಸಿಸ್ಟೆಂಟ್ ಮ್ಯಾನೇಜರ್) ಹುದ್ದೆಗೆ 18ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಸ್ ಸಿ ಮತ್ತು ಎಸ್ ಟಿ ಅಭ್ಯರ್ಥಿ ಗಳಿಗೆ 5 ವರ್ಷ, ಒಬಿಸಿ (ಎನ್ ಸಿಎಲ್ ) ಅಭ್ಯರ್ಥಿ ಗಳಿಗೆ 3 ವರ್ಷ, ಪಿಡಬ್ಲ್ಯೂ ಬಿಡಿ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ಇದೆ.

ಅರ್ಜಿ ಶುಲ್ಕ

ಆಫೀಸರ್ (ಸ್ಕೇಲ್ I) ಹುದ್ದೆಗಳಿಗೆ ಎಸ್‌ಸಿ ಮತ್ತು ಎಸ್ ಟಿ, ಪಿಡಬ್ಲ್ಯೂ ಬಿಡಿ ಅಭ್ಯರ್ಥಿಗಳಿಗೆ 175 ರೂ., ಇತರ ಅಭ್ಯರ್ಥಿಗಳಿಗೆ 850 ರೂ. ಶುಲ್ಕ ವಿಧಿಸಲಾಗಿದೆ. ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್​) ಹುದ್ದೆಗಳಿಗೆ ಎಸ್ ಸಿ/ಎಸ್ ಟಿ/ಪಿಡಬ್ಲ್ಯೂ ಬಿಡಿ/ಇಎಸ್ ಎಂ/ಡಿಇಎಸ್ ಎಂ ಅಭ್ಯರ್ಥಿಗಳಿಗೆ 175 ರೂ., ಇತರ ಅಭ್ಯರ್ಥಿಗಳಿಗೆ 850 ರೂ. ಶುಲ್ಕ ವಿಧಿಸಲಾಗಿದ್ದು, ಆನ್‌ಲೈನ್ ಮೂಲಕ ಪಾವತಿ ಮಾಡಬೇಕಾಗುತ್ತದೆ.

ಇದನ್ನೂ ಓದಿ: Job Recruitment: ಬ್ಯಾಂಕ್ ಆಫ್ ಬರೋಡಾದಲ್ಲಿ 627 ಹುದ್ದೆಗಳಿಗೆ ಅರ್ಜಿ ಆಹ್ವಾನ; 55 ಲಕ್ಷದವರೆಗೆ ಸಂಬಳ!

ಅರ್ಜಿ ಪ್ರಕ್ರಿಯೆ

ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ನೇರವಾಗಿ ನೋಂದಣಿ ಮಾಡಿಕೊಳ್ಳಲು ವೆಬ್ ಸೈಟ್ https://ibpsonline.ibps.in/rrb13oamay24/ ಅನ್ನು ಕ್ಲಿಕ್ ಮಾಡಿ.

ಆಯ್ಕೆ ಪ್ರಕ್ರಿಯೆ

ಆಯ್ಕೆ ಪ್ರಕ್ರಿಯೆಯಲ್ಲಿ ಮೊದಲು ಅರ್ಹ ಅಭ್ಯರ್ಥಿಗಳಿಗೆ ಪೂರ್ವ ಭಾವಿ ಪರೀಕ್ಷೆ ನಡೆಸಲಾಗುತ್ತದೆ. ಬಳಿಕ ಮುಖ್ಯ ಪರೀಕ್ಷೆ ನಡೆಸಿ ಆಯ್ಕೆಯಾದವರಿಗೆ ಸಂದರ್ಶನ ನಡೆಸಲಾಗುತ್ತದೆ. ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Continue Reading

ಕರ್ನಾಟಕ

Rahul Gandhi: ರಾಹುಲ್ ಗಾಂಧಿ ಬಗ್ಗೆ ವಿವಾದಾದ್ಮಕ ವಿಡಿಯೊ; ಯುಟ್ಯೂಬರ್‌ ವಿರುದ್ಧ ಎಫ್‌ಐಆರ್‌

Rahul Gandhi: ರಾಮ ಮಂದಿರ ವಿಚಾರವಾಗಿ ರಾಹುಲ್‌ ಗಾಂಧಿ ವಿವಾದಾದ್ಮಕ ಹೇಳಿಕೆ ನೀಡಿದ್ದಾರೆಂದು ಅಪಪ್ರಚಾರ ಮಾಡಲಾಗುತ್ತಿದೆ ಎಂಬ ಆರೋಪದಲ್ಲಿ ಯುಟ್ಯೂಬರ್‌ ವಿರುದ್ಧ ಕೇಸ್‌ ದಾಖಲಾಗಿದೆ.

VISTARANEWS.COM


on

Rahul Gandhi
Koo

ಬೆಂಗಳೂರು: ರಾಹುಲ್ ಗಾಂಧಿ ವಿರುದ್ಧ ವಿವಾದಾದ್ಮಕ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಯುಟ್ಯೂಬರ್‌ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ. ರಾಮ ಮಂದಿರ ವಿಚಾರವಾಗಿ ರಾಹುಲ್‌ ಗಾಂಧಿ (Rahul Gandhi) ವಿವಾದಾದ್ಮಕ ಹೇಳಿಕೆ ನೀಡಿದ್ದಾರೆಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಕೆಪಿಸಿಸಿ ಕಾನೂನು ಘಟಕದ ಕಾರ್ಯದರ್ಶಿ, ವಕೀಲ ಬಿ.ಕೆ.ಬೋಪಣ್ಣ ನೀಡಿದ ದೂರಿನ ಮೇರೆಗೆ ಯುಟ್ಯೂಬರ್‌ ಅಜಿತ್ ಭಾರತಿ (YouTuber Ajeet Bharti) ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.

ರಾಮಮಂದಿರ ಜಾಗದಲ್ಲಿ ಬಾಬರಿ ಮಸೀದಿ ಮರು ನಿರ್ಮಾಣ ಮಾಡುವುದಾಗಿ ರಾಹುಲ್‌ ಗಾಂಧಿ ಹೇಳಿದ್ದಾರೆ ಎಂದು ಯುಟ್ಯೂಬರ್‌ ಹೇಳಿದ್ದಾರೆ. ಆದರೆ, ರಾಹುಲ್ ಗಾಂಧಿಯವರು ಆ ರೀತಿ ಯಾವುದೇ ಭಾಷಣದಲ್ಲಿ ಹೇಳಿಲ್ಲ. ಜನರಲ್ಲಿ ವಿಭಜನೆಯ ಭಾವ ಉಂಟು ಮಾಡಲು ಹಾಗೂ ಕೋಮು ದ್ವೇಷ ಹರಡಲು ಸ್ವಯಂ ಘೋಷಿತ ಪತ್ರಕರ್ತ, ಲೇಖಕ ಅಜಿತ್ ಭಾರತಿ ಪೋಸ್ಟ್ ಮಾಡಿದ್ದಾರೆ. ಹೀಗಾಗಿ ಯುಟ್ಯೂಬರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಜಿತ್ ಭಾರತಿ ಅವರ ಯೂಟ್ಯೂಬ್ ಚಾನೆಲ್‌ಗೆ 5.56 ಲಕ್ಷ ಚಂದಾದಾರರು ಇದ್ದಾರೆ. ಅವರ ಇತ್ತೀಚಿನ ಹೆಚ್ಚಿನ ವಿಡಿಯೊಗಳು ಎರಡು ಲಕ್ಷಕ್ಕೂ ಹೆಚ್ಚು ವೀವ್ಸ್‌ ಕಂಡಿವೆ. ಸೋಷಿಯಲ್ ಮೀಡಿಯಾ ಪ್ರೊಫೈಲ್‌ನಲ್ಲಿ ಅವರು ಪತ್ರಕರ್ತ ಮತ್ತು ಲೇಖಕ ಎಂದು ಬರೆದುಕೊಂಡಿದ್ದಾರೆ. ರಾಹುಲ್‌ ಗಾಂಧಿ ಅವರ ಬಗ್ಗೆ ಮಾಡಿರುವ ವಿಡಿಯೊ ಸಂಬಂಧ‌ ಇದೀಗ ಇವರ ವಿರುದ್ಧ ಕೇಸ್‌ ದಾಖಲಾಗಿದೆ.

ಇದನ್ನೂ ಓದಿ | Petrol Diesel Price Hike: ಬಿಜೆಪಿಯವರು ಪ್ರತಿಭಟನೆ ಮಾಡಬೇಕಿರೋದು ಕೇಂದ್ರದ ವಿರುದ್ಧ: ಸಿಎಂ ತಿರುಗೇಟು

ʼಮಸುಕಾʼಗಿದ್ದ ಅನುಮಾನ ಈಗ ತೀಕ್ಷ್ಣವಾಗಿದೆ!; ಇವಿಎಂ ಬಗ್ಗೆ ಡಿಕೆಶಿ ಪ್ರತಿಕ್ರಿಯೆ

DK Shivakumar

ಬೆಂಗಳೂರು: ಕೃತಕ ಬುದ್ಧಿಮತ್ತೆ (AI) ಬಳಸಿ ಇವಿಎಂಗಳನ್ನು (EVMs) ಹ್ಯಾಕ್‌ ಮಾಡಬಹುದು ಎಂದು ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಹೇಳಿಕೆ ನೀಡಿದ ಬಳಿಕ ಕಾಂಗ್ರೆಸ್‌ ನಾಯಕ ರಾಹುಲ್‌ ಕೂಡ ಇವಿಎಂಗಳ (Electronic Voting Machine) ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಇದೀಗ ಎಲಾನ್‌ ಮಸ್ಕ್‌ ಅವರು ಹೇಳಿರೋದನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಅವರು ಕೂಡ ಸಮರ್ಥಿಸಿಕೊಂಡಿರುವುದು ಕಂಡುಬಂದಿದೆ.

ಇವಿಎಂಗಳ ಮೇಲೆ ಎಲಾನ್ ಮಸ್ಕ್ ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ʼಮಸುಕಾʼಗಿದ್ದ ಅನುಮಾನ ಈಗ ತೀಕ್ಷ್ಣವಾಗಿದೆ! ತಂತ್ರಜ್ಞಾನ ನಿಪುಣ ಎಂದು ಇಡೀ ಪ್ರಪಂಚವೇ ಒಪ್ಪಿಕೊಂಡಿರುವ ಎಲಾನ್‌ ಮಸ್ಕ್‌ ಅವರೇ ಇವಿಎಂಗಳ ಮೇಲೆ ವ್ಯಕ್ತಪಡಿಸಿರುವ ಅನುಮಾನವು ಭಾರತದಲ್ಲಿ ನಡೆದ ಮತದಾನ ಪ್ರಕ್ರಿಯೆಗಳ ಬಗ್ಗೆ ಆತಂಕ ಮೂಡಿಸಿದೆ.

ಚುನಾವಣೆಯ ನಂತರ ದೇಶದ ಕೆಲವೆಡೆ ನಡೆಯುತ್ತಿರುವ ಘಟನೆಗಳಿಗೂ ಮಸ್ಕ್‌ ಅವರ ಹೇಳಿಕೆಗೂ ತಾಳೆಯಾಗುತ್ತಿದೆ. ಚುನಾವಣೆ ವ್ಯವಸ್ಥೆಯೇ ಪಾರದರ್ಶಕವಾಗಿರದಿದ್ದರೆ ಜನಾದೇಶ ಯಾರ ಕಡೆ ಇದೆ ಎಂದು ತಿಳಿಯುವುದಾದರೂ ಹೇಗೆ? ಇವಿಎಂಗಳ ಸತ್ಯಾಸತ್ಯತೆ ಬಗ್ಗೆ ಈಗ ಪ್ರಪಂಚಕ್ಕೇ ಅರ್ಥವಾಗಿದೆ. ಭಾರತಕ್ಕೂ ಆ ಕಾಲ ಸನ್ನಿಹಿತವಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ | Petrol Diesel Price Hike: ಬಡವರ ಮೇಲೆ ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಸುವುದು ದ್ರೋಹ: ಬೊಮ್ಮಾಯಿ ಆಕ್ರೋಶ

ಎಲಾನ್‌ ಮಸ್ಕ್‌ ಏನು ಹೇಳಿದ್ದರು?

ಅಮೆರಿಕದ ಚುನಾವಣೆಯಲ್ಲಿ ಬಳಸುವ ಇವಿಎಂಗಳ ಬಗ್ಗೆ ಎಲಾನ್‌ ಮಸ್ಕ್‌ ಅವರು ಅನುಮಾನ ವ್ಯಕ್ತಪಡಿಸಿದ್ದರು. “ಅಮೆರಿಕದಲ್ಲಿ ನಾವು ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷೀನ್‌ಗಳ ಬಳಕೆಯನ್ನು ನಿಲ್ಲಿಸಬೇಕು. ಹ್ಯಾಕರ್‌ಗಳು ಅಥವಾ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಕೆ ಮಾಡುವ ಮೂಲಕ ಇವಿಎಂಗಳನ್ನು ಹ್ಯಾಕ್‌ ಮಾಡುವ ಸಾಧ್ಯತೆ ಇದೆ. ಇದು ಸಣ್ಣ ಸಂಗತಿಯಾದರೂ, ದೊಡ್ಡ ಸಮಸ್ಯೆಯಾಗಿದೆ” ಎಂದು ಎಲಾನ್‌ ಮಸ್ಕ್‌ ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದರು. ಇದು ಅಮೆರಿಕದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ | Rahul Gandhi: ಕಾಂಗ್ರೆಸ್‌ ಹೆಚ್ಚು ಕ್ಷೇತ್ರ ಗೆದ್ದರೂ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ !

“ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಬಳಸಿ ಇವಿಎಂಗಳನ್ನು ಹ್ಯಾಕ್‌ ಮಾಡಬಹುದು” ಎಂದು ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಹೇಳಿದ ಬೆನ್ನಲ್ಲೇ ರಾಹುಲ್‌ ಗಾಂಧಿ ಅವರು ಕೂಡ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. “ಭಾರತದಲ್ಲಿ ಇವಿಎಂಗಳು ಎಂದರೆ ಬ್ಲ್ಯಾಕ್‌ ಬಾಕ್ಸ್‌ (ಯಾರಿಗೂ ಗೊತ್ತಾಗದ, ಒಬ್ಬರಿಗೆ ಮಾತ್ರ ಆಕ್ಸೆಸ್‌ ಇರುವ ಎಲೆಕ್ಟ್ರಾನಿಕ್‌ ಡಿವೈಸ್)‌ ಇದ್ದಂತೆ. ಅವುಗಳನ್ನು ಯಾರೂ ಪರಿಶೀಲನೆ ಮಾಡಲು, ತಪಾಸಣೆ ಮಾಡಲು ಸಾಧ್ಯವಿಲ್ಲ. ಭಾರತದ ಚುನಾವಣೆ ಪಾರದರ್ಶಕತೆ ಕುರಿತು ಗಂಭೀರವಾದ ಆತಂಕಗಳು ವ್ಯಕ್ತವಾಗುತ್ತಿವೆ. ಸಂಸ್ಥೆಗಳು ವಿಶ್ವಾಸ ಕಳೆದುಕೊಂಡರೆ ಪ್ರಜಾಪ್ರಭುತ್ವ ವ್ಯವಸ್ಥೆಯೇ ಒಂದು ನಾಟಕೀಯ ಸ್ವರೂಪ ಪಡೆಯುತ್ತದೆ” ಎಂದು ಹೇಳಿದ್ದರು. ಇದೀಗ ಡಿಸಿಎಂ ಡಿಕೆಶಿ ಅವರು ಕೂಡ ವಿದ್ಯುನ್ಮಾನ ಮತಯಂತ್ರಗಳ ಕಾರ್ಯದಕ್ಷತೆ ಬಗ್ಗೆ ಅನುಮಾನ ಹೊರಹಾಕಿದ್ದಾರೆ.

Continue Reading

ಕರ್ನಾಟಕ

Actor Chikkanna: ‌ದರ್ಶನ್‌ ಜತೆ ಪಾರ್ಟಿ ಮಾಡಿದ್ದು ನಿಜ; ಪೊಲೀಸರಿಗೆ ಸ್ಫೋಟಕ ಮಾಹಿತಿ ನೀಡಿದ ಚಿಕ್ಕಣ್ಣ!

Actor Chikkanna: ರೇಣುಕಾಸ್ವಾಮಿ ಕೊಲೆಯಾದ ದಿನವೇ ಅಂದರೆ, ಜೂನ್‌ 8ರಂದು ನಟ ದರ್ಶನ್‌ ಜತೆ ಪಾರ್ಟಿ ಮಾಡಿರುವುದು ನಿಜ ಎಂಬುದಾಗಿ ನಟ ಚಿಕ್ಕಣ್ಣ ಒಪ್ಪಿಕೊಂಡಿದ್ದಾರೆ. ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ನಲ್ಲಿ ಪೊಲೀಸರು ಮಹಜರು ಮಾಡುವ ವೇಳೆ ಪಬ್‌ಗೆ ತೆರಳಿದ ಚಿಕ್ಕಣ್ಣ, ಪಾರ್ಟಿಯ ಕುರಿತು ಮಾಹಿತಿ ನೀಡಿದ್ದಾರೆ. ಇದಾದ ಬಳಿಕ ಚಿಕ್ಕಣ್ಣ ಅವರು ಪೊಲೀಸ್‌ ಠಾಣೆಗೂ ತೆರಳಿ ಹೇಳಿಕೆ ನೀಡಿದ್ದಾರೆ.

VISTARANEWS.COM


on

Actor Chikkanna
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ದಿನಕ್ಕೊಂದು ಸ್ಫೋಟಕ ಮಾಹಿತಿ ಲಭ್ಯವಾಗುತ್ತಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್‌ ಹಾಸ್ಯನಟ ಚಿಕ್ಕಣ್ಣ ಅವರು ಪೊಲೀಸ್‌ ಠಾಣೆಗೆ ಹಾಜರಾಗಿದ್ದು, ನಟ ದರ್ಶನ್‌ ಜತೆ (Actor Darshan) ಜೂನ್‌ 8ರಂದು (ಇದೇ ರಾತ್ರಿ ರೇಣುಕಾಸ್ವಾಮಿ ಹತ್ಯೆಯಾಗಿದ್ದು) ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ನಲ್ಲಿ ಪಾರ್ಟಿ ಮಾಡಿದ್ದು ನಿಜ ಎಂಬುದಾಗಿ ನಟ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ರೇಣುಕಾಸ್ವಾಮಿ ಕೊಲೆಗೀಡಾದ ದಿನವೇ ಸ್ಟೋನಿ ಬ್ರೂಕ್‌ನಲ್ಲಿ ದರ್ಶನ್‌ ಸೇರಿ ಹಲವರು ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳನ್ನು ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಣ್ಣ ಅವರೂ ಸ್ಥಳ ಮಹಜರಿನ ವೇಳೆ ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಭೇಟಿ ನೀಡಿದ್ದಾರೆ. ಅಲ್ಲಿಯೇ, ದರ್ಶನ್‌ ಜತೆ ಪಾರ್ಟಿ ಮಾಡಿರುವುದನ್ನು ಚಿಕ್ಕಣ್ಣ ಪೊಲೀಸರ ಎದುರು ಒಪ್ಪಿಕೊಂಡಿದ್ದಾರೆ.

ಪೊಲೀಸ್‌ ಠಾಣೆಯಲ್ಲಿ ಚಿಕ್ಕಣ್ಣ

“ಜೂನ್‌ 8ರಂದು ಆರ್‌ ಆರ್‌ ನಗರದ ಸ್ಟೋನಿ ಬ್ರೂಕ್‌ ಪಬ್‌ಗೆ ಹೋಗಿದ್ದೆ. ಮಧ್ಯಾಹ್ನ 1.30ರ ಸುಮಾರಿಗೆ ಪಬ್‌ಗೆ ಹೋಗಿದ್ದೆ. ದರ್ಶನ್‌ ಹಾಗೂ ನಾನು ಒಂದೇ ಟೇಬಲ್‌ನಲ್ಲಿ ಪಾರ್ಟಿ ಮಾಡಿದ್ವಿ. ಸಂಜೆ 4.30ರ ಸುಮಾರಿಗೆ ದರ್ಶನ್‌ ಅವರು ಪಬ್‌ನಿಂದ ಹೊರಟರು. ಅವರ ಜತೆ ನಾನೂ ಅಲ್ಲಿಂದ ಹೊರಟೆ. ನಾನು ನಮ್ಮ ಮನೆಗೆ ಹೋದೆ, ದರ್ಶನ್‌ ಅವರು ಎಲ್ಲಿಗೆ ಹೋದರೋ ಗೊತ್ತಿಲ್ಲ. ನಾವು ಸಿನಿಮಾ ವಿಚಾರಕ್ಕಾಗಿ ಭೇಟಿ ಮಾಡಿದ್ವಿ. ಅದಷ್ಟೇ ಮಾತನಾಡಿ ನಾವು ಹೊರಟು ಹೋದೆವು” ಎಂಬುದಾಗಿ ಪೊಲೀಸರಿಗೆ ಚಿಕ್ಕಣ್ಣ ಮಾಹಿತಿ ನೀಡಿದ್ದಾರೆ.

ನಟ ದರ್ಶನ್‌ ಸೇರಿ ಹಲವು ಆರೋಪಿಗಳನ್ನು ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಕರೆದುಕೊಂಡ ಹೋದ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ. ಇದಾದ ನಂತರ ಚಿಕ್ಕಣ್ಣ ಅವರು ಕೂಡ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಗೆ ತೆರಳಿ ಹೇಳಿಕೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಚಿಕ್ಕಣ್ಣ ಅವರು ಪೊಲೀಸ್‌ ಠಾಣೆಗೆ ಹೋದ ವಿಡಿಯೊ ಕೂಡ ಲಭ್ಯವಾಗಿದೆ. ಪಾರ್ಟಿ ಹಿನ್ನೆಲೆಯಲ್ಲಿ ನಟ ಚಿಕ್ಕಣ್ಣ ಅವರಿಗೆ ಇದಕ್ಕೂ ಮೊದಲು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ನೋಟಿಸ್‌ ನೀಡಿದ್ದರು. ಇದು ಚಿಕ್ಕಣ್ಣ ಅವರಿಗೂ ಆತಂಕ ತಂದಿತ್ತು ಎನ್ನಲಾಗಿದೆ.

ಇದನ್ನೂ ಓದಿ: Actor Darshan: ಅಂದು `ತಗಡು’ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಕೌಂಟರ್!

Continue Reading

ಮಳೆ

Karnataka Weather : ಬೆಂಗಳೂರು, ಚಿಕ್ಕಮಗಳೂರಲ್ಲಿ ಸುರಿದ ಧಾರಾಕಾರ ಮಳೆ

Karnataka Weather Forecast : ರಾಜಧಾನಿ ಬೆಂಗಳೂರು, ಚಿಕ್ಕಮಗಳೂರಲ್ಲಿ (Rain News) ಮಳೆಯಾಗಿದ್ದು, ನಾಳೆ ಒಳನಾಡಿನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka weather Forecast
Koo

ಚಿಕ್ಕಮಗಳೂರು/ಬೆಂಗಳೂರು:ಕಳೆದೊಂದು ವಾರದಿಂದ ಮಲೆನಾಡು ಭಾಗದಲ್ಲಿ ಬಿಡುವು ಕೊಟ್ಟಿದ್ದ ವರುಣ ಸೋಮವಾರ (Karnataka weather Forecast) ಅಬ್ಬರಿಸಿದ್ದ. ಕಾಫಿನಾಡು ಚಿಕ್ಕಮಗಳೂರಲ್ಲಿ ಒಂದು ಗಂಟೆಗೂ ಹೆಚ್ಚು ಸಮಯ ಧಾರಾಕಾರ ಮಳೆ (Rain News) ಸುರಿದಿದೆ. ಗಾಳಿ ಸಹಿತ ಮಳೆಗೆ ಸವಾರರು ಹೆಡ್ ಲೈಟ್ ಹಾಕಿಕೊಂಡೇ ವಾಹನ ಚಾಲನೆ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬಾಳೂರು, ಬಣಕಲ್, ಚಾರ್ಮಾಡಿ ಘಾಟ್ ಸುತ್ತಮುತ್ತ ಭಾರೀ ಮಳೆಯಾಗಿದೆ. ನಿರಂತರ ಮಳೆಯಿಂದಾಗಿ ವಾಹನ ಸವಾರರು ಪರದಾಡಬೇಕಾಯಿತು. ಅದರಲ್ಲೂ ಚಾರ್ಮಾಡಿ ಘಾಟಿಯಲ್ಲಿ ವಾಹನಗಳು ಮಂದಗತಿಯಲ್ಲಿ ಸಾಗಿದ್ದವು. ಭಾರಿ ಮಳೆಗೆ ರಸ್ತೆ ಕಾಣದೆ ಹಲವರು ರಸ್ತೆ ಬದಿ ವಾಹನ ನಿಲ್ಲಿಸಿಕೊಂಡಿದ್ದರು.

ಬೆಂಗಳೂರಲ್ಲಿ ಸಣ್ಣ ಮಳೆ

ರಾಜಧಾನಿ ಬೆಂಗಳೂರಿನಲ್ಲೂ ಕಳೆದ ನಾಲ್ಕೈದು ದಿನಗಳಿಂದ ಮಳೆಯು ಮಾಯವಾಗಿತ್ತು. ನಗರದ ಹಲವು ಭಾಗಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಶುರುವಾಗಿತ್ತು. ಮುಖ್ಯವಾಗಿ ಕಾರ್ಪೋರೇಶನ್, ಕೆಆರ್‌ ಮಾರ್ಕೆಟ್, ಮೆಜೆಸ್ಟಿಕ್, ಶೇಷಾದ್ರಿಪುರಂ ಸುತ್ತಮುತ್ತ ಹಗುರದಿಂದ ಕೂಡಿದ ಮಳೆಯಾಗಿದೆ. ದಿಢೀರ್‌ ಮಳೆಯಿಂದಾಗಿ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ತೊಂದರೆಯುನ್ನುಂಟಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕುಮಟಾದಲ್ಲಿ ಅತಿ ಹೆಚ್ಚು ಮಳೆ ದಾಖಲು

ನೈರುತ್ಯ ಮುಂಗಾರು ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣವಾಗಿತ್ತು. ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಹಾಗೂ ಒಳನಾಡಿನ ಕೆಲವೆಡೆ ಮಳೆಯಾಗಿರುವ ವರದಿ ಆಗಿದೆ. ಉತ್ತರ ಕನ್ನಡದ ಕುಮಟಾದಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, 9 ಸೆಂ.ಮೀ ದಾಖಲಾಗಿದೆ.

ಉಳಿದಂತೆ ಗೇರ್ಸೊಪ್ಪ, ಗೋಕರ್ಣ, ಅಂಕೋಲಾ, ಗದಗದಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಮಂಕಿ, ಹಳಿಯಾಳ, ಶಿರಾಲಿ ಪಿಟಿಒ, ಸಂಕೇಶ್ವರ , ಕುಶಾಲನಗರದಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ. ಇನ್ನೂ ಕಾರವಾರ, ಹೊನ್ನಾವರ, ನಿಪ್ಪಾಣಿಯಲ್ಲಿ 3 ಸೆಂ.ಮೀ ಹಾಗೂ ಯಲ್ಲಾಪುರ, ಮುಂಡಗೋಡು , ಚಿಕ್ಕೋಡಿ , ಹಿಡಕಲ್ ಅಣೆಕಟ್ಟು, ಬೆಳಗಾವಿ ವಿಮಾನ ನಿಲ್ದಾಣ, ಭಾಗಮಂಡಲದಲ್ಲಿ 2 ಸೆಂ.ಮೀ ಮಳೆಯಾಗಿದೆ. ಬೆಳ್ತಂಗಡಿ, ಸಿದ್ದಾಪುರ, ಜಗಲಬೆಟ್, ಕೋಟ, ಕಿರವ, ಕದ್ರಾ, ಲೋಂಡಾ, ಹಾವೇರಿ ಪಿಟಿಒ, ಔರಾದ್ , ಧಾರವಾಡ ಹಾಗೂ ಕುಂದಗೋಳ, ಚಿಂತಾಮಣಿ, ರಾಯಲ್ಪಾಡು, ಸೋಮವಾರಪೇಟೆ, ಕೊಡಗು, ಹಾರಂಗಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ.

ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಜೂನ್‌ 18ರಂದು ಕರಾವಳಿಯ ಬಹುತೇಕ ಸ್ಥಳಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಬಿರುಗಾಳಿಯು ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಜತೆಗೆ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Job Recruitment
ಉದ್ಯೋಗ2 mins ago

Job Recruitment: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆಗಳಿಗೆ ಅರ್ಜಿ ಆಹ್ವಾನ

Rahul Gandhi
ದೇಶ15 mins ago

Rahul Gandhi: ರಾಯ್‌ಬರೇಲಿಯನ್ನೇ ಆಯ್ಕೆ ಮಾಡಿಕೊಂಡ ರಾಹುಲ್‌ ಗಾಂಧಿ; ವಯನಾಡಿನಲ್ಲಿ ಪ್ರಿಯಾಂಕಾ ಸ್ಪರ್ಧೆ!

Rahul Gandhi
ಕರ್ನಾಟಕ56 mins ago

Rahul Gandhi: ರಾಹುಲ್ ಗಾಂಧಿ ಬಗ್ಗೆ ವಿವಾದಾದ್ಮಕ ವಿಡಿಯೊ; ಯುಟ್ಯೂಬರ್‌ ವಿರುದ್ಧ ಎಫ್‌ಐಆರ್‌

Actor Chikkanna
ಕರ್ನಾಟಕ58 mins ago

Actor Chikkanna: ‌ದರ್ಶನ್‌ ಜತೆ ಪಾರ್ಟಿ ಮಾಡಿದ್ದು ನಿಜ; ಪೊಲೀಸರಿಗೆ ಸ್ಫೋಟಕ ಮಾಹಿತಿ ನೀಡಿದ ಚಿಕ್ಕಣ್ಣ!

Karnataka weather Forecast
ಮಳೆ1 hour ago

Karnataka Weather : ಬೆಂಗಳೂರು, ಚಿಕ್ಕಮಗಳೂರಲ್ಲಿ ಸುರಿದ ಧಾರಾಕಾರ ಮಳೆ

Viral Video
Latest1 hour ago

Video Viral: ಮಹಿಳೆಯನ್ನು ತಿವಿದು ರಸ್ತೆಯುದ್ದಕ್ಕೂ ಎಳೆದೊಯ್ದ ಎಮ್ಮೆ! ವಿಡಿಯೊ ಇದೆ

Viral Video
Latest1 hour ago

Viral Video: ಗಂಭೀರ ಸ್ಥಿತಿಯಲ್ಲಿರುವ ಅಪ್ಪನ ಆಸೆ ಈಡೇರಿಕೆ; ಆಸ್ಪತ್ರೆಯ ಐಸಿಯುನಲ್ಲೇ ಮಗಳ ಮದುವೆ!

Sex Worker
ಪ್ರಮುಖ ಸುದ್ದಿ2 hours ago

ಸೆಕ್ಸ್‌ ವರ್ಕರ್‌ಗೆ ಮಾಡಿದ ಮೆಸೇಜ್‌ ಗೊತ್ತಾಗಿ ಪತ್ನಿ ವಿಚ್ಛೇದನ; ಆ್ಯಪಲ್‌ ಕಂಪನಿ ವಿರುದ್ಧ ಕೇಸ್‌ ಜಡಿದ ಪತಿ!

NEETPG 2024
ಶಿಕ್ಷಣ2 hours ago

NEETPG 2024 : ಜೂ.23ಕ್ಕೆ ನೀಟ್‌ ಪಿಜಿ ಪರೀಕ್ಷೆ; ನಾಳೆಯಿಂದಲೇ ಪ್ರವೇಶ ಪತ್ರ ಬಿಡುಗಡೆ

DK Shivakumar
ಪ್ರಮುಖ ಸುದ್ದಿ3 hours ago

DK Shivakumar: ಇವಿಎಂ ಸತ್ಯಾಸತ್ಯತೆ ಪ್ರಪಂಚಕ್ಕೇ ಅರ್ಥವಾಗಿದೆ; ಮಸ್ಕ್ ಅನುಮಾನ ಸಮರ್ಥಿಸಿಕೊಂಡ ಡಿಕೆಶಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು7 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು8 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 day ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 day ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌