Viral Video | ಮದುಮಗಳ ಫೋಟೋಶೂಟ್​; ನೀರು ತುಂಬಿದ ರಸ್ತೆಗುಂಡಿಯೇ ಸುಂದರ ತಾಣ ಈ ವಧುವಿಗೆ - Vistara News

ವೈರಲ್ ನ್ಯೂಸ್

Viral Video | ಮದುಮಗಳ ಫೋಟೋಶೂಟ್​; ನೀರು ತುಂಬಿದ ರಸ್ತೆಗುಂಡಿಯೇ ಸುಂದರ ತಾಣ ಈ ವಧುವಿಗೆ

ಕೆಂಪು ಬಣ್ಣದ ಸೀರೆಯುಟ್ಟು, ಮೈತುಂಬ ಒಡವೆ ಧರಿಸಿ ಕೆಸರು ನೀರಿನ ಮಧ್ಯೆ ಹೆಜ್ಜೆ ಹಾಕುವ ವಧುವಿನ ಫೋಟೋಶೂಟ್​ ನೋಡಿದ ನೆಟ್ಟಿಗರು ಫನ್ನಿ ಕಮೆಂಟ್ ಮಾಡಿದ್ದಾರೆ.

VISTARANEWS.COM


on

Kerala Bride
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಈಗೇನಿದ್ದರೂ ಪ್ರಿವೆಡ್ಡಿಂಗ್‌ ಫೋಟೋಶೂಟ್‌ ಕಾಲ. ಮದುವೆಗೂ ಮೊದಲೇ ಫೋಟೋಗ್ರಾಫರ್‌ಗಳಿಗೆ ಕೆಲಸ ಶುರುವಾಗುತ್ತದೆ. ಇನ್ನು ಮದುವೆಯ ದಿನದ ಕತೆ ಬೇರೆಯೇ. ಎಷ್ಟು ಕ್ರಿಯೇಟಿವ್‌ ಆಗಿದ್ದರೂ ಸಾಲದು. ವೆಡ್ಡಿಂಗ್‌ ಫೋಟೋಗ್ರಫಿಗೆ ಈಗಿರುವ ಭಾರೀ ಬೇಡಿಕೆ ಹಾಗೂ ಆ ರಂಗದಲ್ಲಿರುವ ಸಿಕ್ಕಾಪಟ್ಟೆ ಸ್ಪರ್ಧೆಯಿಂದಾಗಿ ಛಾಯಾಗ್ರಾಹಕರು ಕ್ರಿಯಾಶೀಲರಾಗಿ ಯಾವ ಸಿನಿಮಾಕ್ಕೂ ಕಡಿಮೆ ಇಲ್ಲದಂತೆ ಫೋಟೋ, ವಿಡಿಯೋ ತೆಗೆಯುತ್ತಾರೆ. ಕೆಲವೊಂದು ಫೋಟೋಗಳು ವೈರಲ್‌ ಆಗುವ ಮೂಲಕ ಛಾಯಾಗ್ರಾಹಕರು ತೆರೆಯ ಹಿಂದಿನ ಹೀರೋಗಳಾಗಿ ಮಿಂಚಿ ತಮ್ಮ ಬೇಡಿಕೆ ಕುದುರಿಸಿಕೊಳ್ಳುತ್ತಾರೆ.

ಇದೂ ಅಂಥದ್ದೇ ಒಂದು ಕತೆ. ಇಲ್ಲಿ ಛಾಯಾಗ್ರಾಹಕ ಅದ್ಭುತ ಲೊಕೇಶನ್‌ ಹುಡುಕಿಕೊಂಡು ಹೋಗಿಲ್ಲ. ಇರುವ ಜಾಗದಲ್ಲೇ ಅದ್ಭುತವನ್ನು ತೋರಿಸಿದ್ದಾರೆ. ಚಂದದ ಫೋಟೋ ಜೊತೆಗೆ ಸಮಸ್ಯೆಯನ್ನೂ ಎತ್ತಿ ತೋರಿಸಿ ಕಣ್ತೆರೆಸುವ ಪ್ರಯತ್ನ ಮಾಡಿದ್ದಾರೆ.

ಇಲ್ಲಿ ಮದುಮಗಳು, ಯಾವ ಭಿಡೆಯೂ ಇಲ್ಲದೆ, ಹೊಂಡಗಳಿಂದ ಆವೃತವಾಗಿರುವ, ಮಳೆಯಿಂದಾಗಿ ಆ ಹೊಂಡಗಳೆಲ್ಲ ಕೆನ್ನೀರಿನಿಂದ ತುಳುಕಾಡುತ್ತಿರುವ, ಹೊಂಡ ಎಲ್ಲಿದೆ ರಸ್ತೆ ಎಲ್ಲಿದೆ ಎಂದು ಸಂದೇಹ ಬರುವಷ್ಟರಮಟ್ಟಿಗಿನ ಪರಿಸ್ಥಿತಿ ಇರುವ ಸಾಮಾನ್ಯ ರಸ್ತೆಯೊಂದರಲ್ಲಿ ನಡೆದು ಬರುತ್ತಾಳೆ. ಎಲ್ಲರೂ ಗಡಿಬಿಡಿಯಲ್ಲಿ ಅವರವರದೇ ಕೆಲಸಗಳಿಗಾಗಿ ಓಡಾಡಿಕೊಂಡಿರುವ, ಹೊಂಡಕ್ಕೆ ಬೀಳದಂತೆ ಬ್ಯಾಲೆನ್ಸ್‌ ಮಾಡಿಕೊಂಡು ಗಾಡಿ ಓಡಿಸುವ ಚಾಲಕರುಗಳೇ ಈ ಫೋಟೋಶೂಟ್‌ನ ಪ್ರಮುಖ ಹಿನ್ನೆಲೆಯಾಗಿದೆ. ಹಾಗಾಗಿಯೇ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ನದೀತೀರ, ಚಂದನೆಯ ಹೂದೋಟ, ಗದ್ದೆ ಬಯಲು, ನೀಲಾಕಾಶ ಇವುಗಳೇ ಹಿನ್ನೆಲೆಯಾಗಿ ಫೋಟೋ ತೆಗೆಯಬೇಕೆಂದು ನಿಯಮವೇನಾದರೂ ಇದೆಯಾ? ಚಂದದ ಹಿನ್ನೆಲೆಯೇ ಬೇಕೆಂದು ಹೇಳಿದ್ಯಾರು? ಇರೋದನ್ನು ಇರೋ ಹಾಗೆ ತೋರಿಸ್ತೀವಪ್ಪ ಎಂದು ಹಲವರು ಇಂಥ ಪ್ರಯತ್ನಗಳಿಗೆ ಕೈ ಹಾಕಿದ್ದುಂಟು. ಈ ಛಾಯಾಗ್ರಾಹಕ ಕೂಡಾ ಅಂಥದ್ದೇ ವಾದವನ್ನು ಮುಂದಿಟ್ಟಿದ್ದಾರೆ. ನಮ್ಮ ರಸ್ತೆಗಳೆಲ್ಲಾ ಅಂಕುಡೊಂಕು. ರಸ್ತೆ ಪೂರ್ತಿ ಹೊಂಡಗಳು. ಹೊಂಡಗಳ ತುಂಬ ಕೆಸರು ನೀರು. ರಸ್ತೆಯೆಲ್ಲಿದೆ ಹೊಂಡವೆಲ್ಲಿದೆ ಎಂದು ನೋಡಬೇಕಾದ ಪರಿಸ್ಥಿತಿ ಇದೆ. ಕೆಂಪಾದ ಸೀರೆಯುಟ್ಟ ನೀರೆ, ಇಂತಹ ಕೆಂಪಾದ ನೀರಿನ ರಸ್ತೆಯಲ್ಲಿ ನಡೆಯುತ್ತಾ ಬಂದರೆ ಎಷ್ಟು ಚೆನ್ನಾಗಿ ಕಾಣುತ್ತಾಳೆ ನೋಡಿ ಎಂದು ಛಾಯಾಗ್ರಾಹಕನೇ ಹೇಳಿದ ಹಾಗಿದೆ. ಆ ಮೂಲಕ ಮಲಗಿರುವ ಸರ್ಕಾರವೇ, ಇಲ್ಲೊಮ್ಮೆ ರಸ್ತೆ ನೋಡಿ ಎಂದೂ ಪರೋಕ್ಷವಾಗಿ ಹೇಳಿದ್ದಾರೆ.

ಇದನ್ನೂ ಓದಿ: Viral video| ಅಂಗಡಿಗೆ ನುಗ್ಗಿ ಎರಡು ಚಾಕೊಲೇಟ್‌ ಎಗರಿಸಿ ಓಡಿದ ಕರಡಿ!

ಹೊಂಡಗಳಾದ ರಸ್ತೆಗಳನ್ನು ಸರಿಪಡಿಸಲು ಎಷ್ಟೇ ಮನವಿ ಮಾಡಿದರೂ, ಅದೇ ರಸ್ತೆಯಲ್ಲಿ ಪ್ರಯಾಣಿಸುವ ರಾಜಕಾರಣಿಗಳು ಅಧಿಕಾರಿಗಳಿದ್ದರೂ ಅವರ್ಯಾರೂ ಕಣ್ಣು ತೆರೆಯದೆ ಇದ್ದಾಗ, ಕ್ರಿಯಾತ್ಮಕವಾಗಿ ಹೊಂಡಗಳನ್ನೇ ಬಳಸಿಕೊಂಡು ಚಿತ್ರ ಬಿಡಿಸಿ ಗಮನ ಸೆಳೆಯಲು ಪ್ರಯತ್ನಿಸಿದ ಉದಾಹರಣೆಗಳಿವೆ. ಇದೂ ಅಂಥದ್ದೇ ಒಂದು ಉದಾಹರಣೆಯೂ ಹೌದು. ಕಲೆಯನ್ನು ಕ್ರಿಯಾಶೀಲವಾಗಿ ಬಳಸಿಕೊಳ್ಳುವುದು ಹೇಗೆ ಎಂಬುದಕ್ಕೆ ಇಂತಹುಗಳೇ ನಿದರ್ಶನ.

ಆರೋ ವೆಡ್ಡಿಂಗ್‌ ಕಂಪನಿ ಹೆಸರಿನಲ್ಲಿ ಇದನ್ನು ಪೋಸ್ಟ್‌ ಮಾಡಲಾಗಿದ್ದು, ಈ ಫೋಟೋಶೂಟ್‌ ನೋಡಿ ಹಲವರು ಮೂಗಿನ ಮೇಲೆ ಬೆರಳಿಟ್ಟಿದ್ದಾರೆ. ಹಲವರು ರಸ್ತೆಯ ಸ್ಥಿತಿಯ ಬಗ್ಗೆ ಕಾಮೆಂಟ್‌ ಮಾಡಿದ್ದಾರೆ. ಇದು ರಸ್ತೆಯಲ್ಲ, ಕೆರೆ ಎಂದಿದ್ದಾರೆ. ಇನ್ನೂ ಕೆಲವರು ಇದು ರಸ್ತೆಯಾ? ಇಲ್ಲಿ ಒಂದಿಷ್ಟು ಮೀನುಗಳನ್ನು ಹಾಕಿ ಮೀನುಗಾರಿಕೆ ಮಾಡಬಹುದು ಎಂದು ಸಲಹೆಯನ್ನೂ ಕೊಟ್ಟಿದ್ದಾರೆ. ಕೇರಳದಲ್ಲಿ ಸದ್ಯ ರಸ್ತೆಗಳ ಸ್ಥಿತಿಗತಿಯ ಕುರಿತು ಭಾರೀ ಚರ್ಚೆಗಳಾಗುತ್ತಿರುವ ಕಾರಣ ಈ ವಿಡಿಯೋ ಕೂಡಾ ಸಾಕಷ್ಟು ಸದ್ದು ಮಾಡುತ್ತಿದೆ. ಇಂತದ್ದೊಂದು ಕ್ರಿಯೇಟಿವ್‌ ಐಡಿಯಾ ಮಾಡಿ ಫೋಟೋ ತೆಗೆದ ಛಾಯಾಗ್ರಾಹಕನಿಗೂ, ಯಾವ ತಲೆಬಿಸಿಯೂ ಇಲ್ಲದೆ, ಮದುವೆ ಸೀರೆ ಏನಾದೀತು ಎಂಬ ಚಿಂತೆಯೂ ಇಲ್ಲದೆ, ಹೊಂಡಗಳ ಕೆನ್ನೀರಿನ ಮಧ್ಯೆ ಕೆಂದಾವರೆಯ ಹಾಗೆ ಹೆಜ್ಜೆ ಹಾಕಿದ ಮದುಮಗಳಿಗೂ ಎಲ್ಲರೂ ಶಹಬ್ಬಾಸ್‌ಗಿರಿ ಕೊಡುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ರಣ ಭೀಕರ ಬಿರುಗಾಳಿ..! ಆಘಾತಕಾರಿ ವಿಡಿಯೋ ಎಲ್ಲೆಡೆ ವೈರಲ್‌

Viral Video: ಲೋವಾ ಸಾರ್ವಜನಿಕ ಸುರಕ್ಷತಾ ವಿಭಾಗದ ಅಧಿಕಾರಿಗಳು ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಬಿರುಗಾಳಿಗೆ ನಾಲ್ವರು ಗ್ರೀನ್‌ಫೀಲ್ಡ್‌ನಲ್ಲೇ ಮೃತಪಟ್ಟಿದ್ದಾರೆ. ಮತ್ತೊರ್ವ ಮಹಿಳೆ ಕಾರು ಸಮೇತ ಬಿರುಗಾಳಿ ರಭಸಕ್ಕೆ 25ಮೈಲು ದೂರ ಹಾರಿ ಹೋಗಿ ಬಿದಿದ್ದು, ಕಾರಿನೊಳಗೇ ಮೃತಪಟ್ಟಿದ್ದಾಳೆ. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾದ ಪರಿಣಾಮ 46 ವರ್ಷದ ಮೊನಿಕಾ ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

VISTARANEWS.COM


on

Viral Video
Koo

ಅಮೆರಿಕ: ಭೀಕರ ಬಿರುಗಾಳಿ(Tornadoes)ಯ ರಭಸಕ್ಕೆ ಐವರು ಬಲಿಯಾಗಿದ್ದು, 35ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಮೆರಿಕ(America)ದ ಲೋವಾ ನಗರದದ ಗ್ರೀನ್‌ಫೀಲ್ಡ್‌(Greenfield)ನಲ್ಲಿ ನಡೆದಿದೆ. ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಈ ಭೀಕರ ಬಿರುಗಾಳಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದ್ದು, ಗಾಯಾಳುಗಳ ಸಂಖ್ಯೆ ಏರಿಕೆ ಆಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿದ್ದಾರೆ.

ಲೋವಾ ಸಾರ್ವಜನಿಕ ಸುರಕ್ಷತಾ ವಿಭಾಗದ ಅಧಿಕಾರಿಗಳು ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಬಿರುಗಾಳಿಗೆ ನಾಲ್ವರು ಗ್ರೀನ್‌ಫೀಲ್ಡ್‌ನಲ್ಲೇ ಮೃತಪಟ್ಟಿದ್ದಾರೆ. ಮತ್ತೊರ್ವ ಮಹಿಳೆ ಕಾರು ಸಮೇತ ಬಿರುಗಾಳಿ ರಭಸಕ್ಕೆ 25ಮೈಲು ದೂರ ಹಾರಿ ಹೋಗಿ ಬಿದಿದ್ದು, ಕಾರಿನೊಳಗೇ ಮೃತಪಟ್ಟಿದ್ದಾಳೆ. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾದ ಪರಿಣಾಮ 46ವರ್ಷದ ಮೊನಿಕಾ ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಗ್ರೀನ್‌ ಫೀಲ್ಡ್‌ ನಗರದಲ್ಲಿ ಸುಮಾರು 55 ಮೈಲುಗಳವರೆಗೆ ಈ ಬಿರುಗಾಳಿ ಬೀಸಿದ್ದು, ಅನೇಕ ಮನೆ, ಕಟ್ಟಡಗಳು ಹಾನಿಗೊಳಗಾಗಿವೆ. ಸಾವಿರಾರು ಜನ ಬಿರುಗಾಳಿ ರಭಸಕ್ಕೆ ಆತಂಕ ವ್ಯಕ್ತಪಡಿಸಿದ್ದಾರೆ. ಈ ನಡುವೆ ಡಲ್ಲಾಸ್‌ ಸೇರಿದಂತೆ ಟೆಕ್ಸಾಸ್‌ನ ಕೆಲವು ಭಾಗಗಳಲ್ಲಿ ಭೀಕರ ಪ್ರವಾಹವಾಗುವ ಎಚ್ಚರಿಕೆಯನ್ನು ರಾಷ್ಟ್ರೀಯ ಹವಾಮಾನ ಇಲಾಖೆ ನೀಡಿದೆ.

ಹವಾಮಾನ ಬದಲಾವಣೆಯು ಪ್ರಪಂಚದಾದ್ಯಂತ ಚಂಡಮಾರುತಗಳ ತೀವ್ರತೆಯನ್ನು ಹೆಚ್ಚಿಸುತ್ತದೆ. ಅಮೆರಿಕದಲ್ಲಿ ಆಗಾಗ ಸುಂಟರಗಾಳಿ ಸಂಭವಿಸುತ್ತಿರುತ್ತದೆ. ಏಪ್ರಿಲ್‌ನಲ್ಲಿ ಅಮೆರಿಕದಲ್ಲಿ ಎರಡನೇ ಅತಿ ದೊಡ್ಡ ಸುಂಟರಗಾಳಿ ಇದಾಗಿದೆ. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಕಳೆದ ವಾರ ಮುಂಬೈನಲ್ಲೂ ಭಾರೀ ಗಾಳಿ ಸಹಿತ ಮಳೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಮಧ್ಯಾಹ್ನ 3 ಗಂಟೆ ಹೊತ್ತಿಗೇ ವಾತಾವರಣದಲ್ಲಿ ಉಂಟಾದ ದಿಢೀರ್ ಬದಲಾವಣೆ ಉಂಟಾಗಿತ್ತು. ದ್ವಿಚಕ್ರ ವಾಹನಗಳಲ್ಲಿ ಕುಳಿತು ಸಾಗುತ್ತಿದ್ದ ಜನರು ಭಾರೀ ಗಾಳಿ, ಮಳೆಯಿಂದಾಗಿ ತಮ್ಮ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಿ ರಕ್ಷಣೆಗಾಗಿ ಅಂಗಡಿ ಮುಂಗಟ್ಟುಗಳತ್ತ ಓಡಿದರು. ಮುಂಬೈ ನಗರದ ಘಾಟ್‌ಕೋಪರ್, ಬಾಂದ್ರಾ, ಕುರ್ಲಾ, ಧಾರಾವಿ ಪ್ರದೇಶಗಳಲ್ಲಿ ಭಾರೀ ಮಳೆ ಆಗಿದೆ. ಕ್ಷಣಾರ್ಧದಲ್ಲಿ ಸಂಚಾರದಲ್ಲಿ ಭಾರೀ ಅವ್ಯವಸ್ಥೆ ಉಂಟಾಗಿತ್ತು.

ಇದನ್ನೂ ಓದಿ:bomb Hoax: ಶಾಲೆ, ದೇವಸ್ಥಾನದ ಬಳಿಕ ರಾಜಧಾನಿಯ ಪ್ರತಿಷ್ಠಿತ ಹೋಟೆಲ್‌ಗೂ ಬಾಂಬ್‌ ಬೆದರಿಕೆ

ಮುಂಬೈ ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ ಲ್ಯಾಂಡಿಂಗ್ ಹಾಗೂ ಟೇಕಾಫ್‌ಗೆ ಭಾರೀ ಅಡ್ಡಿ ಉಂಟಾಗಿತ್ತು. ದೇಶದ ಅತ್ಯಂತ ಹೆಚ್ಚು ಚಟುವಟಿಕೆಯಿಂದ ಕೂಡಿರುವ ಈ ವಿಮಾನ ನಿಲ್ದಾಣದಲ್ಲಿ ವಿಮಾನಯಾನವನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಯ್ತು. ಮುಂಬೈ ಮಹಾ ನಗರಕ್ಕೆ ಆಗಮಿಸುವ ಹಾಗೂ ನಿರ್ಗಮಿಸುವ ವಿಮಾನಗಳ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿತ್ತು.

Continue Reading

ಕ್ರೀಡೆ

Viral Video: ಔಟಾದ ಸಿಟ್ಟಿನಲ್ಲಿ ಡಗೌಟ್​​ ಸ್ಟ್ಯಾಂಡ್​ಗೆ ಕೈ ಬಡಿದ ಯಶಸ್ವಿ ಜೈಸ್ವಾಲ್

Viral Video: ಚೇಸಿಂಗ್​ ವೇಳೆ ಜೈಸ್ವಾಲ್​ ಉತ್ತಮವಾಗಿ ಬ್ಯಾಟಿಂಗ್​ ನಡೆಸುತ್ತಿದ್ದರು. 45 ರನ್​ ಗಳಿಸಿದ್ದ ವೇಳೆ ರಿವರ್ಸ್​ ಸ್ವೀಪ್​ ಮಾಡುವ ಯತ್ನಕ್ಕೆ ಕೈ ಹಾಕಿ ಇದರಲ್ಲಿ ವಿಫಲವಾಗಿ ಕ್ಯಾಚ್​ಗೆ ಬಲಿಯಾದರು. ಒಂದೆಡೆ ಅರ್ಧಶತಕ ತಪ್ಪಿದ ಮತ್ತು ತಂಡಕ್ಕೆ ಹಿನ್ನಡೆಯಾದ ಸಿಟ್ಟಿನಲ್ಲಿ ಡ್ರೆಸ್ಸಿಂಗ್​ ರೂಮ್​ಗೆ ತೆರಳುವ ವೇಳೆ ಜೈಸ್ವಾಲ್ ಡಗೌಟ್​ನ ಸ್ಟ್ಯಾಂಡ್​​ನ ಬೇಲಿಗೆ ತಮ್ಮ ಕೈಯನ್ನು ಜೋರಾಗಿ ಬಡಿದಿದ್ದಾರೆ.

VISTARANEWS.COM


on

viral video
Koo

ಅಹಮದಾಬಾದ್​: ಆರ್​ಸಿಬಿ(RCB) ವಿರುದ್ಧ ನಿನ್ನೆ(ಬುಧವಾರ) ನಡೆದ ಐಪಿಎಲ್​ನ(IPL 2024) ಎಲಿಮಿನೇಟರ್(​RCB vs RR Eliminator) ಪಂದ್ಯದಲ್ಲಿ ರಾಜಸ್ಥಾನ್​ ರಾಯಲ್ಸ್(Rajasthan Royals)​ ತಂಡ ನಾಲ್ಕು ವಿಕೆಟ್​ಗಳ ಗೆಲುವು ಸಾಧಿಸಿ ಕ್ವಾಲಿಫೈಯರ್​ ಹಂತಕ್ಕೆ ತೇರ್ಗಡೆಗೊಂಡಿತು. ಆದರೆ, ಇದೇ ಪಂದ್ಯದಲ್ಲಿ ಔಟಾದ ಹತಾಶೆಯಲ್ಲಿ ಯುವ ಆಟಗಾರ ಯಶಸ್ವಿ ಜೈಸ್ವಾಲ್(Yashasvi Jaiswal)​ ತಾಳ್ಮೆ ಕಳೆದುಕೊಂಡ(Yashasvi Jaiswal Loses Cool) ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral Video)​ ಆಗಿದೆ.

ಚೇಸಿಂಗ್​ ವೇಳೆ ಜೈಸ್ವಾಲ್​ ಉತ್ತಮವಾಗಿ ಬ್ಯಾಟಿಂಗ್​ ನಡೆಸುತ್ತಿದ್ದರು. 45 ರನ್​ ಗಳಿಸಿದ್ದ ವೇಳೆ ರಿವರ್ಸ್​ ಸ್ವೀಪ್​ ಮಾಡುವ ಯತ್ನಕ್ಕೆ ಕೈ ಹಾಕಿ ಇದರಲ್ಲಿ ವಿಫಲವಾಗಿ ಕ್ಯಾಚ್​ಗೆ ಬಲಿಯಾದರು. ಒಂದೆಡೆ ಅರ್ಧಶತಕ ತಪ್ಪಿದ ಮತ್ತು ತಂಡಕ್ಕೆ ಹಿನ್ನಡೆಯಾದ ಸಿಟ್ಟಿನಲ್ಲಿ ಡ್ರೆಸ್ಸಿಂಗ್​ ರೂಮ್​ಗೆ ತೆರಳುವ ವೇಳೆ ಜೈಸ್ವಾಲ್ ಡಗೌಟ್​ನ ಸ್ಟ್ಯಾಂಡ್​​ನ ಬೇಲಿಗೆ ತಮ್ಮ ಕೈಯನ್ನು ಜೋರಾಗಿ ಬಡಿದಿದ್ದಾರೆ. ಅಲ್ಲದೆ ಜೋರಾಗಿ ಕಿರುಚಾಟ ಕೂಡ ನಡೆಸಿದ್ದಾರೆ. ಇದರ ವಿಡಿಯೊ ವೈರಲ್​ ಆಗಿದ್ದು ನೆಟ್ಟಿಗರು ಈ ರೀತಿಯ ವರ್ತನೆ ಸರಿಯಲ್ಲ ಎಂದು ಬುದ್ಧಿಮಾತು ಹೇಳಿದ್ದಾರೆ.

ಕಳೆದ ವರ್ಷದ ಐಪಿಎಲ್​ ಟೂರ್ನಿಯಲ್ಲಿ ಜೈಸ್ವಾಲ್​ 14 ಪಂದ್ಯ ಆಡಿ 625 ರನ್ ಗಳಿಸಿದ್ದರು. ಆದರೆ ಈ ಆವೃತ್ತಿಯಲ್ಲಿ ಅಷ್ಟಾಗಿ ಉತ್ತಮ ಪ್ರದರ್ಶನ ನೀಡಿಲ್ಲ. ಮುಂಬೈ ವಿರುದ್ಧದ ಪಂದ್ಯದಲ್ಲಿ ತಕವೊಂದನ್ನು ಬಾರಿಸಿದ್ದು ಬಿಟ್ಟರೆ ಇವರ ಬ್ಯಾಟ್​ನಿಂದ ದೊಡ್ಡ ಇನಿಂಗ್ಸ್​ ಕಂಡುಬಂದಿಲ್ಲ. ಮುಂದಿನ ತಿಂಗಳು ನಡೆಯುವ ಟಿ20 ವಿಶ್ವಕಪ್​ಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಜೈಸ್ವಾಲ್​ ಕೂಡ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ IPL 2024 : 17 ವರ್ಷ ಕಾದರೂ ಟ್ರೋಫಿ ಇಲ್ಲ: ಆರ್​ಸಿಬಿ ಅಭಿಮಾನಿಗಳ ಕಾಯುವಿಕೆ ನಿರಂತರ

ಎಲಿಮಿನೇಟರ್​ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಆರ್​ಸಿಬಿ 8 ವಿಕೆಟಿಗೆ 172 ರನ್‌ ಗಳಿಸಿತು. ರಾಜಸ್ಥಾನ್‌ 19 ಓವರ್‌ಗಳಲ್ಲಿ 6 ವಿಕೆಟಿಗೆ 174 ರನ್‌ ಬಾರಿಸಿ ಜಯಭೇರಿ ಮೊಳಗಿಸಿತು. ಚೇಸಿಂಗ್​ ವೇಳೆ ರಾಜಸ್ಥಾನ್‌ ಬಿರುಸಿನ ಆಡವಾಡಿತು. ಜೈಸ್ವಾಲ್‌ (45)-ಕ್ಯಾಡ್‌ಮೋರ್‌ (20) ಮೊದಲ ವಿಕೆಟ್​ಗೆ 46 ರನ್‌ ಜತೆಯಾಟ ನಿಭಾಯಿಸಿದರು. ಆ ಬಳಿಕ ಜೈಸ್ವಾಲ್‌-ಸ್ಯಾಮ್ಸನ್‌ ಜತೆಗೂಡಿ 35 ರನ್‌ ಕಲೆಹಾಕಿದರು. 112ಕ್ಕೆ 4 ವಿಕೆಟ್‌ ಬಿದ್ದಾಗ ಪಂದ್ಯ ಕುತೂಹಲ ಘಟ್ಟ ತಲುಪಿತು. ಆದರೆ ಪರಾಗ್‌-ಹೆಟ್‌ಮೈರ್‌ ಸಿಡಿದು ನಿಂತು 45 ರನ್‌ ಜತೆಯಾಟ ನಿಭಾಯಿಸಿ ಆರ್‌ಸಿಬಿಗೆ ಸೋಲುಣಿಸಿದರು. ಮೂರು ಓವರ್​ ತನಕ ಉತ್ತಮ ಲಯದಲ್ಲಿದ್ದ ಕ್ಯಾಮರೂನ್​ ಗ್ರೀನ್​ ನಾಲ್ಕನೇ ಓವರ್​ನಲ್ಲಿ ದುಬಾರಿಯಾದರು. ಹೆಟ್‌ಮೈರ್‌ ಈ ಓವರ್​ನಲ್ಲಿ ಸಿಕ್ಸರ್​ ಮತ್ತು ಬೌಂಡರಿಗಳ ಮೂಲಕ ಬಿಸಿ ಮುಟ್ಟಿಸಿದರು.

ಈ ಸೋಲಿನೊಂದಿಗೆ ಆರ್​ಸಿಬಿ ತಂಡದ 2024ರ ಐಪಿಎಲ್​ ಅಭಿಯಾನ ಮುಕ್ತಾಯಗೊಂಡಿತು. ಪ್ಲೇಆಫ್ ಹಂತಕ್ಕೆ ಪ್ರವೇಶ ಪಡೆದಿರುವುದೇ ರೆಡ್​ ಆರ್ಮಿಯ ದೊಡ್ಡ ಸಾಧನೆ ಎನಿಸಿಕೊಂಡಿತು. ಜತೆಗೆ ಆರ್​​ಸಿಬಿಯ ಅಪಾರ ಅಭಿಮಾನಿಗಳ ಹೃದಯ ಛಿದ್ರಗೊಂಡಿತು. ಈ ಬಾರಿಯಾದರೂ ಕಪ್​ ಗೆಲ್ಲಬೇಕೆಂಬ ಆಸೆ ಕಮರಿತು. ಕಷ್ಟದಲ್ಲಿ ಪ್ಲೇಆಫ್​ ಹಂತಕ್ಕೇರಿದ ಹೊರತಾಗಿಯೂ ಮುಂದಿನ ಹಂತಕ್ಕೆ ಹೋಗಲು ಸಾಧ್ಯವಾಗದ್ದಕ್ಕೆ ಬೇಸರ ವ್ಯಕ್ತಪಡಿಸಿದರು. ಚೆನ್ನೈ ವಿರುದ್ಧದ ಲೀಗ್ ಪಂದ್ಯದಲ್ಲಿ ಹೆಚ್ಚು ನಿಖರವಾಗಿ ಆಡಿದ್ದ ಆರ್​ಸಿಬಿ ಈ ಪಂದ್ಯದಲ್ಲಿ ನಿರ್ಲಕ್ಷ್ಯ ತೋರಿತು. ಬ್ಯಾಟಿಂಗ್​ನಲ್ಲಿ ಅನಗತ್ಯವಾಗಿ ವಿಕೆಟ್​ ಒಪ್ಪಿಸಿದರೆ ಬೌಲಿಂಗ್ ವೇಳೆಯೂ ಕ್ಯಾಚ್​ ಕೈಚೆಲ್ಲಿ, ಕಳಪೆ ಫೀಲ್ಡಿಂಗ್ ಮಾಡಿ, ರನ್​ಔಟ್​ ಚಾನ್ಸ್​ ಕಳೆದುಕೊಂಡಿತು. ಇದು ಸೋಲಿಗೆ ಕಾರಣವಾಯಿತು.

Continue Reading

ವೈರಲ್ ನ್ಯೂಸ್

Viral Video: ದಬಾಂಗ್‌ ಸ್ಟೈಲ್‌ನಲ್ಲಿ ಆಸ್ಪತ್ರೆಯೊಳಗೆ ನುಗ್ಗಿದ ಪೊಲೀಸ್‌ ಜೀಪ್‌! ವಿಡಿಯೋ ವೈರಲ್‌

Viral Video:ರಿಶಿಕೇಶ್‌ ಏಮ್ಸ್‌ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಆಸ್ಪತ್ರೆಯ ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯ ಬಂಧನಕ್ಕೆಂದು ಬಂದಿದ್ದ ಪೊಲೀಸರು ಜೀಪು ಸಮೇತ ಆಸ್ಪತ್ರೆಯೊಳಗೆ ನುಗ್ಗಿದ್ದಾರೆ. ನೇರವಾಗಿ ಆಸ್ಪತ್ರೆಯ ನಾಲ್ಕನೇ ಮಹಡಿಗೆ ಬಂದ ಪೊಲೀಸರು ಐಸಿಯು ಒಳಗೆ ಜೀಪು ಚಲಾಯಿಸಿದ್ದಾರೆ. ಈ ದೃಶ್ಯವನ್ನು ಆಸ್ಪತೆಯಲ್ಲಿದ್ದವರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ಎಕ್ಸ್‌ನಲ್ಲಿ ಹರಿಬಿಟ್ಟಿದ್ದು, ವಿಡಿಯೋ ವೈರಲಾಗಿದೆ

VISTARANEWS.COM


on

Viral Video
Koo

ಉತ್ತರಾಖಂಡ: ಸಿನಿಮಾಗಳಲ್ಲಿ ಹೀರೋ ಬಿಲ್ಡಿಂಗ್‌, ಕಾಪೌಂಡ್‌ ಅನ್ನು ಲೆಕ್ಕಿಸದೇ ವಾಹನ ನುಗ್ಗಿಸುವ ದೃಶ್ಯ ನೋಡಿರ್ತೀರಿ. ಅದರಲ್ಲೂ ಹೀರೋ ಒಂದುವೇಳೆ ಪೊಲೀಸ್‌ ಆಗಿದ್ದರೆ ತನ್ನ ಜೀಪ್‌ನಲ್ಲೇ ಅಪರಾಧಿಗಳನ್ನು ಚೇಸ್‌ ಮಾಡಿ ಹಿಡಿಯುವ ಹಲವಾರು ದೃಶ್ಯಗಳನ್ನು ನೋಡಿರ್ತೇವೆ. ಅಂತಹದ್ದೇ ಒಂದು ದೃಶ್ಯ ಋಷಿಕೇಶದಲ್ಲಿ ನಡೆದಿದೆ. ಪೊಲೀಸ್‌ ಅಧಿಕಾರಿಯೊಬ್ಬರು ಲೈಂಗಿಕ ಕಿರುಕುಳ(Sexual harassments) ಆರೋಪಿಯನ್ನು ಅರೆಸ್ಟ್‌ ಮಾಡಲೆಂದು ನೇರವಾಗಿ ಆಸ್ಪತ್ರೆ(Hospital)ಯ ಐಸಿಯು ಒಳಗೆ ತಮ್ಮ ಜೀಪನ್ನು ನುಗ್ಗಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದೆ.

ವಿಡಿಯೋ ಫುಲ್‌ ವೈರಲ್‌

ರಿಶಿಕೇಶ್‌ ಏಮ್ಸ್‌ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಆಸ್ಪತ್ರೆಯ ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯ ಬಂಧನಕ್ಕೆಂದು ಬಂದಿದ್ದ ಪೊಲೀಸರು ಜೀಪು ಸಮೇತ ಆಸ್ಪತ್ರೆಯೊಳಗೆ ನುಗ್ಗಿದ್ದಾರೆ. ನೇರವಾಗಿ ಆಸ್ಪತ್ರೆಯ ನಾಲ್ಕನೇ ಮಹಡಿಗೆ ಬಂದ ಪೊಲೀಸರು ಐಸಿಯು ಒಳಗೆ ಜೀಪು ಚಲಾಯಿಸಿದ್ದಾರೆ. ಈ ದೃಶ್ಯವನ್ನು ಆಸ್ಪತೆಯಲ್ಲಿದ್ದವರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ಎಕ್ಸ್‌ನಲ್ಲಿ ಹರಿಬಿಟ್ಟಿದ್ದು, ವಿಡಿಯೋ ವೈರಲಾಗಿದೆ.

ನರ್ಸಿಂಗ್‌ ಅಧಿಕಾರಿಯಿಂದ ಲೈಂಗಿಕ ಕಿರುಕುಳ

ಏಮ್ಸ್‌ನ ನರ್ಸಿಂಗ್‌ ಅಧಿಕಾರಿ ಸತೀಶ್‌ ಕುಮಾರ್‌ ಎಂಬಾತ ವೈದ್ಯೆಯೊಬ್ಬರಿಗೆ ಎಂಎಂಎಸ್‌ ಕಳುಹಿಸಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ದೂರು ದಾಖಲಾಗಿತ್ತು. ಆರೋಪಿ ಬಂಧನಕ್ಕೆಂದು ಏಮ್ಸ್‌ ಆಸ್ಪತ್ರೆಗೆ ಪೊಲೀಸರು ಬರುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಸತೀಶ್‌ ಕುಮಾರ್‌ ಎಸ್ಕೇಪ್‌ ಆಗಲು ಯತ್ನಿಸಿದ್ದ. ಇದು ತಿಳಿದ ಡೆಹ್ರಾಡೂನ್‌ ಪೊಲೀಸರು ಆಸ್ಪತ್ರೆಯ ಒಳಗೆ ಜೀಪ್‌ ಚಲಾಯಿಸಿದಾರೆ. ನೇರವಾಗಿ ನಾಲ್ಕನೇ ಮಹಡಿಗೆ ತಲುಪಿದ ಜೀಪ್‌ ಐಸಿಯು ಒಳಗೆ ಬಂದು ನಿಂತಿದೆ.

ಪೊಲೀಸ್‌ ವಾಹನ್‌ ಆಸ್ಪತ್ರೆ ಒಳಗೆ ಬರುತ್ತಿದ್ದಂತೆ ಅಲ್ಲಿದ್ದ ರೋಗಿಗಳು, ಜನರು ಒಂದು ಕ್ಷಣಕ್ಕೆ ಗಾಬರಿ ಆಗಿದ್ದಾರೆ. ರೋಗಿಗಳು ಮಲಗಿದ್ದ ಮಂಚ ಸರಿಸಿ ಪೊಲೀಸ್‌ ವಾಹನಕ್ಕೆ ಜಾಗ ಮಾಡಿಕೊಡುತ್ತಿರುವ ದೃಶ್ಯವನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಇದಾಗಿಯೂ ಪೊಲೀಸ್‌ ವಾಹನ ಮಾತ್ರ ನಿಲ್ಲುವುದೇ ಇಲ್ಲ. ತನ್ನ ಗುರಿ ತಲುಪಿದ ಮೇಲಷ್ಟೇ ವಾಹನಕ್ಕೆ ಬ್ರೇಕ್‌ ಬೀಳುತ್ತದೆ.

ಇದನ್ನೂ ಓದಿ:ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು- ಇವು ಗುರು ಸಕಲಮಾ ಬದುಕಿನ ಅಧ್ಯಾಯಗಳು!

ಪೊಲೀಸ್‌ ಕ್ರಮಕ್ಕೆ ಖಂಡನೆ

ಇನ್ನು ಪೊಲೀಸರ ಈ ಕ್ರಮಕ್ಕೆ ಹಲವರಿಂದ ಖಂಡನೆ ವ್ಯಕ್ತವಾಗಿದೆ. ಆಸ್ಪತ್ರೆಯಂತಹ ಸೂಕ್ಷ್ಮ ಸ್ಥಳಗಳಲ್ಲಿ ಇಂತಹ ವಾತಾವರಣ ಸೃಷ್ಟಿಸುವುದು ಸರಿಯಲ್ಲ. ಮುಂದೆ ಇಂತಹ ಘಟನೆ ನಡೆಯದಂತೆ ಎಚ್ಚರ ವಹಿಸಬೇಕೆಂದು ಜನ ಆಗ್ರಹಿಸಿದ್ದಾರೆ. ಅಲ್ಲದೇ ಅಲ್ಲಿದ್ದ ರೋಗಿಗಳು ಹಾಗೂ ಅವರ ಕುಟುಂಬಸ್ಥರೂ ಪೊಲೀಸರ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಉತ್ತರಾಖಂಡ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಘಟನೆಯ ಬಗ್ಗೆ ಗಮನ ಹರಿಸಿದ್ದು,. ಕಿರುಕುಳಕ್ಕೊಳಗಾದ ಮಹಿಳಾ ವೈದ್ಯರನ್ನು ಭೇಟಿ ಮಾಡಲು ಮತ್ತು ಪರಿಸ್ಥಿತಿಯನ್ನು ನೇರವಾಗಿ ನಿರ್ಣಯಿಸಲು AIIMS ಗೆ ಭೇಟಿ ನೀಡಿದರು.

Continue Reading

ವೈರಲ್ ನ್ಯೂಸ್

Aadhaar Card Fact Check: 10 ವರ್ಷಗಳ ಹಿಂದಿನ ಆಧಾರ್ ಕಾರ್ಡ್‌ ಜೂ. 14ರ ಬಳಿಕ ರದ್ದಾಗುತ್ತದೆಯೆ?

Aadhaar Card Fact Check: ಕಳೆದ 10 ವರ್ಷಗಳಿಂದ ಆಧಾರ್ ಕಾರ್ಡ್ ಅನ್ನು ನವೀಕರಿಸದಿರುವ ಭಾರತೀಯ ನಾಗರಿಕರು ತಮ್ಮ ಮಾಹಿತಿಯನ್ನು ನವೀಕರಿಸಬೇಕು ಎಂದು ಆಧಾರ್ ನೀಡುವ ಸಂಸ್ಥೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಹೇಳಿದೆ. ಈ ಬಗ್ಗೆ ಹರಡಿರುವ ವದಂತಿ ಏನು? ವಾಸ್ತವ ಏನು? ಇಲ್ಲಿದೆ ಮಾಹಿತಿ.

VISTARANEWS.COM


on

By

Aadhaar Card Fact Check
Koo

ಹತ್ತು ವರ್ಷಗಳ ಹಿಂದೆ ಮಾಡಿಸಿರುವ ಹಳೆಯ ಆಧಾರ್ ಕಾರ್ಡ್‌ಗಳು (Aadhaar Card Fact Check) ಜೂನ್ 14ರ ಬಳಿಕ ಅಮಾನ್ಯವಾಗಲಿದೆ. ಹೀಗಾಗಿ ಆಧಾರ್ ಕಾರ್ಡ್‌ಗಳ ನವೀಕರಣಕ್ಕೆ ಇದಕ್ಕಿಂತ ಮೊದಲು ನವೀಕರಣ ಮಾಡುವುದು ಅಗತ್ಯ. ಇಲ್ಲವಾದರೆ ಬಳಿಕ ಹಳೆಯ (old) ಆಧಾರ್ ಕಾರ್ಡ್ ಗಳು ರದ್ದಾಗಲಿದೆ ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ (social media) ವೈರಲ್ (viral news) ಆಗುತ್ತಿದೆ.

ಕಳೆದ 10 ವರ್ಷಗಳಿಂದ ಆಧಾರ್ ಕಾರ್ಡ್ ಅನ್ನು ನವೀಕರಿಸದಿರುವ ಭಾರತೀಯ ನಾಗರಿಕರು ತಮ್ಮ ಮಾಹಿತಿಯನ್ನು ನವೀಕರಿಸಬೇಕು ಎಂದು ಆಧಾರ್ ನೀಡುವ ಸಂಸ್ಥೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಹೇಳಿದೆ. ಈ ಕಾರಣಕ್ಕಾಗಿಯೇ ಜೂನ್ 14ರವರೆಗೆ ನಿಮ್ಮ ಹಳೆಯ ಆಧಾರ್ ಕಾರ್ಡ್ ಅನ್ನು ಆನ್‌ಲೈನ್‌ನಲ್ಲಿ ಉಚಿತವಾಗಿ ನವೀಕರಿಸುವ ಆಯ್ಕೆಯನ್ನು ಸಂಸ್ಥೆ ನೀಡಿದೆ.

ನವೀಕರಿಸದಿದ್ದರೆ ಏನಾಗುವುದು?

ಆಧಾರ್ ಕಾರ್ಡ್ ಅನ್ನು ಉಚಿತವಾಗಿ ನವೀಕರಿಸಲು ಜೂನ್ 14ರಂದು ಕೊನೆಯ ದಿನವಾಗಿದೆ. ಆದರೆ ಅದರ ಅನಂತರ ಹಳೆಯ ಆಧಾರ್ ಕಾರ್ಡ್ ಅಮಾನ್ಯವಾಗುವುದಿಲ್ಲ ಎಂದು ಯುಐಡಿಎಐ ಸ್ಪಷ್ಟಪಡಿಸಿದೆ. ಈ ದಿನಾಂಕದ ಬಳಿಕ ಆಧಾರ್ ಕಾರ್ಡ್ ಅನ್ನು ಉಚಿತವಾಗಿ ನವೀಕರಿಸಲಾಗುವುದಿಲ್ಲ. ಕಾರ್ಡ್ ಹೊಂದಿರುವವರು ಅದನ್ನು ಆನ್‌ಲೈನ್‌ನಲ್ಲಿ ಅಥವಾ ಹತ್ತಿರದ ಆಧಾರ್ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ನವೀಕರಿಸಬೇಕಾಗುತ್ತದೆ.

ನವೀಕರಿಸುವುದು ಹೇಗೆ?

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ನೀಡಿರುವ ಅಧಿಕೃತ ವೆಬ್ ಸೈಟ್ https://myaadhaar.uidai.gov.in/ಗೆ ಭೇಟಿ ನೀಡಿ ಆಧಾರ್ ಸಂಖ್ಯೆ ಮತ್ತು ನೋಂದಾಯಿತ ಮೊಬೈಲ್ ಸಂಖ್ಯೆಗೆ ಸ್ವೀಕರಿಸಿದ ಒಂದು ಬಾರಿಯ ಪಾಸ್‌ವರ್ಡ್ (OTP) ಬಳಸಿ ಲಾಗ್ ಇನ್ ಮಾಡಬೇಕು.

ನಿಮ್ಮ ಪ್ರೊಫೈಲ್‌ನಲ್ಲಿ ಪ್ರದರ್ಶಿಸಲಾದ ಗುರುತು ಮತ್ತು ವಿಳಾಸದ ವಿವರಗಳನ್ನು ಪರಿಶೀಲಿಸಿ. ಪ್ರೊಫೈಲ್‌ನಲ್ಲಿ ಪ್ರದರ್ಶಿಸಲಾದ ವಿವರಗಳು ತಪ್ಪಾಗಿದ್ದರೆ ದಯವಿಟ್ಟು ‘ಮೇಲಿನ ವಿವರಗಳು ಸರಿಯಾಗಿವೆಯೇ’ ಎಂದು ನಾನು ಪರಿಶೀಲಿಸುತ್ತೇನೆ ಎಂಬ ಟ್ಯಾಬ್ ಅನ್ನು ಕ್ಲಿಕ್ ಮಾಡಿ.

ಬಳಿಕ ನೀವು ಸಲ್ಲಿಸಲು ಬಯಸುವ ಡ್ರಾಪ್-ಡೌನ್ ಮೆನುವಿನಿಂದ ಗುರುತಿನ ದಾಖಲೆಯನ್ನು ಆಯ್ಕೆ ಮಾಡಿ. ನಿಮ್ಮ ಗುರುತಿನ ದಾಖಲೆಯನ್ನು ಅಪ್‌ಲೋಡ್ ಮಾಡಿ (ಗಾತ್ರ 2 MB ಗಿಂತ ಕಡಿಮೆ; ಫೈಲ್ ಫಾರ್ಮ್ಯಾಟ್ JPEG, PNG ಅಥವಾ PDF) ನೀವು ಸಲ್ಲಿಸಲು ಬಯಸುವ ಡ್ರಾಪ್- ಡೌನ್ ಮೆನುವಿನಿಂದ ವಿಳಾಸ ಡಾಕ್ಯುಮೆಂಟ್ ಅನ್ನು ಆಯ್ಕೆ ಮಾಡಿ. ನಿಮ್ಮ ವಿಳಾಸ ಡಾಕ್ಯುಮೆಂಟ್ ಅನ್ನು ಅಪ್‌ಲೋಡ್ ಮಾಡಿ (ಗಾತ್ರ 2 MB ಗಿಂತ ಕಡಿಮೆ; ಫೈಲ್ ಫಾರ್ಮ್ಯಾಟ್ JPEG, PNG ಅಥವಾ PDF). ಬಳಿಕ ನಿಮ್ಮ ಒಪ್ಪಿಗೆಯನ್ನು ಸಲ್ಲಿಸಿ.

ಇದನ್ನೂ ಓದಿ: Viral News: ನ್ಯಾಯ ಕೊಡಿಸಿ ಎಂದು ಠಾಣೆ ಎದುರೇ ಎಸ್‌ಐ ಪತ್ನಿ ಅಹೋರಾತ್ರಿ ಧರಣಿ; ಏನಿದು ಕೇಸ್‌?

ಸಲ್ಲಿಸಬೇಕಿರುವ ಅಗತ್ಯ ದಾಖಲೆಗಳು

ಆಧಾರ್ ಕಾರ್ಡ್ ಅನ್ನು ನವೀಕರಿಸಲು ಯಾವುದಾದರೂ ದಾಖಲೆಗಳು ಬೇಕಾಗುತ್ತವೆ.

ಗುರುತಿನ ಚೀಟಿಗಾಗಿ ಮತದಾರರ ಗುರುತಿನ ಚೀಟಿ, ಪಾಸ್‌ಪೋರ್ಟ್, ಚಾಲನಾ ಪರವಾನಗಿ ಇತ್ಯಾದಿ

ವಿಳಾಸ ಪುರಾವೆಗಾಗಿ ವಿದ್ಯುತ್ ಬಿಲ್, ರೇಷನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಇತ್ಯಾದಿ.

Continue Reading
Advertisement
Star Holiday Fashion
ಫ್ಯಾಷನ್3 mins ago

Star Holiday Fashion: ಪರ್ಫೆಕ್ಟ್ ಸಮ್ಮರ್‌ ಹಾಲಿ ಡೇ ಲುಕ್‌ನಲ್ಲಿ ನಟಿ ಅಮೂಲ್ಯ

Prajwal Revanna Case Surrender Now Devegowda warning to Prajwal
ರಾಜಕೀಯ8 mins ago

Prajwal Revanna Case: ತಾಳ್ಮೆ ಪರೀಕ್ಷಿಸಬೇಡ, ಈಗಲೇ ಬಂದು ಶರಣಾಗು; ಪ್ರಜ್ವಲ್‌ಗೆ ದೇವೇಗೌಡರ ವಾರ್ನಿಂಗ್‌

IPL 202
ಕ್ರೀಡೆ8 mins ago

IPL 2024: ಮುಂದಿನ ಆವೃತ್ತಿಯಲ್ಲಿ ಕೊಹ್ಲಿ ಈ ಫ್ರಾಂಚೈಸಿ ಪರ ಆಡಿದರೆ ಉತ್ತಮ ಎಂದ ಆರ್​ಸಿಬಿ ಮಾಜಿ ನಾಯಕ

2024 Maruti Swift
ಆಟೋಮೊಬೈಲ್14 mins ago

2024 Maruti Swift : ಹಲವಾರು ಆ್ಯಕ್ಸೆಸರಿ ಪ್ಯಾಕ್​ನೊಂದಿಗೆ ಬಂದಿದೆ ಮಾರುತಿ ಸ್ವಿಫ್ಟ್​​ ಎಪಿಕ್​

West Bengal Violence
ದೇಶ33 mins ago

West Bengal Violence: ಪಶ್ಚಿಮ ಬಂಗಾಳದಲ್ಲಿ ಭಾರೀ ಹಿಂಸಾಚಾರ; ಪೊಲೀಸರಿಂದ ಲಾಠಿಚಾರ್ಜ್‌

Narendra Modi
ದೇಶ47 mins ago

Narendra Modi: ಪಾಕ್‌ ʼಬಂಡವಾಳʼ ಏನೆಂದು ಅಲ್ಲಿಗೇ ಹೋಗಿ ನೋಡಿ ಬಂದಿರುವೆ; ಕಾಂಗ್ರೆಸ್‌ ‘ಬಾಂಬ್’‌ ಹೇಳಿಕೆಗೆ ಮೋದಿ ಟಾಂಗ್!

Money Guide
ಮನಿ-ಗೈಡ್49 mins ago

Money Guide: 1 ಕೋಟಿ ರೂ. ದುಡಿಯಬೇಕೆ? ಈ ಅಪಾಯ ರಹಿತ ಯೋಜನೆಯಲ್ಲಿ ಹೂಡಿಕೆ ಮಾಡಿ

T20 World Cup 2024
ಕ್ರೀಡೆ1 hour ago

T20 World Cup 2024: ಟಿ20 ವಿಶ್ವಕಪ್​ನಲ್ಲಿ ಸಂಜುಗಿಂತ ಪಂತ್​ ಬೆಸ್ಟ್​ ಎಂದ ಯುವರಾಜ್

ayodhya ram mandir 1
ಪ್ರಮುಖ ಸುದ್ದಿ1 hour ago

Ayodhya Ram Mandir: ಅಯೋಧ್ಯೆ ಶ್ರೀ ರಾಮನಿಗೆ ಬೆಳ್ಳಿಯ ಬಿಲ್ಲು- ಬಾಣ; ಪೂಜಿಸಿ ಕಳಿಸಿಕೊಟ್ಟ ಶೃಂಗೇರಿ ಶ್ರೀಗಳು

Highest Paid CEO
ವಾಣಿಜ್ಯ1 hour ago

Highest Paid CEO: ವಿಪ್ರೊ ಮಾಜಿ ಸಿಇಒ ವಾರ್ಷಿಕ ಸಂಬಳ 166 ಕೋಟಿ ರೂ! ಉಳಿದ ಸಿಇಒಗಳಿಗೆ ಎಷ್ಟು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ12 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌