Adani | ದುಬೈನಲ್ಲಿ ದಿನಕ್ಕೆ 102 ಕೋಟಿ ರೂ. ಗಳಿಸುತ್ತಿರುವ ಗೌತಮ್‌ ಅದಾನಿಯ ಅಣ್ಣ ವಿನೋದ್‌ ಶಾಂತಿಲಾಲ್‌ ಅದಾನಿ ! - Vistara News

ಪ್ರಮುಖ ಸುದ್ದಿ

Adani | ದುಬೈನಲ್ಲಿ ದಿನಕ್ಕೆ 102 ಕೋಟಿ ರೂ. ಗಳಿಸುತ್ತಿರುವ ಗೌತಮ್‌ ಅದಾನಿಯ ಅಣ್ಣ ವಿನೋದ್‌ ಶಾಂತಿಲಾಲ್‌ ಅದಾನಿ !

ಅದಾನಿ ಸಮೂಹದ ಸ್ಥಾಪಕ ಗೌತಮ್‌ ಅದಾನಿ ಈಗ ಭಾರತದಲ್ಲಿ ಮನೆಮಾತಾಗಿದ್ದಾರೆ. ಆದರೆ ಇದೀಗ ಅವರ ಅಣ್ಣ, ದುಬೈನಲ್ಲಿ ಉದ್ಯಮಿಯಾಗಿರುವ ವಿನೋದ್‌ ಶಾಂತಿಲಾಲ್‌, ಸಿರಿವಂತ ಅನಿವಾಸಿ ಭಾರತೀಯ ಎನ್ನಿಸಿದ್ದಾರೆ!

VISTARANEWS.COM


on

adani brother
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಅದಾನಿ ಸಮೂಹದ ಸ್ಥಾಪಕ ಗೌತಮ್‌ ಅದಾನಿ ಅಮೆಜಾನ್‌ನ ಜೆಫ್‌ ಬಿಜೋಸ್‌ ಅವರನ್ನು ಹಿಂದಿಕ್ಕಿ ವಿಶ್ವದ ಎರಡನೇ ಅತಿ ದೊಡ್ಡ ಶ್ರೀಮಂತ ಎನ್ನಿಸಿದ್ದರೆ, ಅವರ ಅಣ್ಣ ವಿನೋದ್‌ ಶಾಂತಿ ಲಾಲ್‌ ಈಗ ಸಿರಿವಂತ ಅನಿವಾಸಿ ಭಾರತೀಯ ಎಂಬ ಹೆಗ್ಗಳಿಕೆಗೆ (Adani) ಪಾತ್ರರಾಗಿದ್ದಾರೆ.

ಐಐಎಫ್‌ಎಲ್‌ ವೆಲ್ತ್‌ ಹುರಾನ್‌ ಇಂಡಿಯಾ-2022 ಸಿರಿವಂತರ ಪಟ್ಟಿಯ ಪ್ರಕಾರ, ಗೌತಮ್‌ ಅದಾನಿಯವರ ಅಣ್ಣ ವಿನೋದ್‌ ಶಾಂತಿಲಾಲ್‌ ಅದಾನಿ ಅವರು ದುಬೈನಲ್ಲಿ ಬಿಸಿನೆಸ್‌ ಮೂಲಕ 37,400 ಕೋಟಿ ರೂ. ಗಳಿಸಿದ್ದಾರೆ. ಅಂದರೆ ದಿನಕ್ಕೆ ಸರಾಸರಿ 102 ಕೋಟಿ ರೂ. ಗಳಿಸಿದ್ದಾರೆ. ಅವರು ಭಾರತದ ಟಾಪ್‌ 10 ಸಿರಿವಂತರ ಪೈಕಿ 6ನೇ ಸ್ಥಾನಕ್ಕೆ ಏರಿದ್ದಾರೆ. ಅವರ ನಿವ್ವಳ ಸಂಪತ್ತು 169,000 ಕೋಟಿ ರೂ.ಗಳಾಗಿದೆ.

ಹುರೇನ್‌ ಇಂಡಿಯಾ ಒಟ್ಟು 94 ಸಿರಿವಂತ ಎನ್ನಾರೈಗಳ ಪಟ್ಟಿ ಬಿಡುಗಡೆಗೊಳಿಸಿದೆ. ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಅದಾನಿ ಅಣ್ಣ ವಿನೋದ್‌ ಶಾಂತಿಲಾಲ್‌ ಗಳಿಸಿದ್ದರೆ, ಎರಡನೇ ಸ್ಥಾನವನ್ನು ಹಿಂದೂಜಾ ಸೋದರರು ಗಳಿಸಿದ್ದಾರೆ. (1.65 ಲಕ್ಷ ಕೋಟಿ ರೂ.) ಮೂರನೇ ಸ್ಥಾನವನ್ನು ಲಕ್ಷ್ಮೀ ಮಿತ್ತಲ್‌ ಗಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IND vs PAK : ಭಾರತದ ಎದುರು ಪಾಕಿಸ್ತಾನಕ್ಕೆ ಮತ್ತೊಮ್ಮೆ ಮುಖಭಂಗ; ಕಡಿಮೆ ಸ್ಕೋರ್ ಇದ್ದಾಗಲೂ 6 ರನ್ ಸೋಲು

IND vs PAK : ಮೊದಲು ಬ್ಯಾಟ್ ಮಾಡಿದ ಭಾರತ ತಂಡ 18.3 ಓವರ್​ಗಳಲ್ಲಿ 119 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಪಾಕಿಸ್ತಾನ ತಂಡ ಭಾರತದ ಭರ್ಜರಿ ಬೌಲಿಂಗ್​ಗೆ ಹೆದರಿ.. ತನ್ನ ಪಾಲಿನ 20 ಓವರ್​ಗಳಲ್ಲಿ 7 ವಿಕೆಟ್​ಗೆ 113 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

ind vs pak
Koo

ಬೆಂಗಳೂರು: ಸಾಂಪ್ರದಾಯಿಕ ಪ್ರತಿಸ್ಪರ್ಧಿ ಪಾಕಿಸ್ತಾನ ವಿರುದ್ಧದ ಟಿ20 ವಿಶ್ವ ಕಪ್​ ಲೀಗ್​ ಪಂದ್ಯದಲ್ಲಿ ಭಾರತ ತಂಡ (IND vs PAK) ಜಯ ಸಾಧಿಸಿದೆ. ಈ ಮೂಲಕ ಭಾರತ ತಂಡ ಹಾಲಿ ವಿಶ್ವ ಕಪ್​ನಲ್ಲಿ ಎರಡನೇ ವಿಜಯ ದಾಖಲಿದೆ. ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡ ಐರ್ಲೆಂಡ್​ ವಿರುದ್ಧ ಗೆಲುವು ದಾಖಲಿಸಿತ್ತು. ಇದೀಗ ಜಿದ್ದಾಜಿದ್ದಿನ ಸ್ಪರ್ಧೆಯಲ್ಲಿ ಪಾಕ್​ ತಂಡವನ್ನು ಮಣಿಸಿದೆ. ಪ್ರಶಸ್ತಿ ಕಡೆಗೆ ಮುನ್ನುಗ್ಗುವ ಯೋಚನೆಯಲ್ಲಿರುವ ಭಾರತ ತಂಡಕ್ಕೆ ಈ ವಿಜಯದಿಂದ ಭಾರೀ ವಿಶ್ವಾಸ ದೊರಕಿದೆ. ಇದು ಭಾರತ ತಂಡಕ್ಕೆ ಟಿ20 ವಿಶ್ವ ಕಪ್​ನಲ್ಲಿ ಪಾಕಿಸ್ತಾನ ವಿರುದ್ಧ ದೊರೆಯುತ್ತಿರುವ 8ನೇ ವಿಜಯ. ಒಂದೇ ಬಾರಿ ಪಾಕಿಸ್ತಾನ ಗೆಲುವು ದಾಖಲಿಸಿದೆ. ಅಲ್ಲದೆ 2023ರಲ್ಲಿ ಭಾರತದಲ್ಲಿ ನಡೆದಿದ್ದ ಏಕ ದಿನ ವಿಶ್ವ ಕಪ್​ನಲ್ಲಿಯೂ ಭಾರತ ತಂಡ ಪಾಕಿಸ್ತಾನ ತಂಡವನ್ನು ಸೋಲಿಸಿತ್ತು.

ಇಲ್ಲಿನ ನಸ್ಸೌ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 18.3 ಓವರ್​ಗಳಲ್ಲಿ 119 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಪಾಕಿಸ್ತಾನ ತಂಡ ಭಾರತದ ಭರ್ಜರಿ ಬೌಲಿಂಗ್​ಗೆ ಹೆದರಿ.. ತನ್ನ ಪಾಲಿನ 20 ಓವರ್​ಗಳಲ್ಲಿ 7 ವಿಕೆಟ್​ಗೆ 113 ರನ್​ ಬಾರಿಸಿ ಸೋಲೊಪ್ಪಿಕೊಂಡಿತು. ಬೌಲಿಂಗ್​ಗೆ ನೆರವಾಗುತ್ತಿದ್ದ ಪಿಚ್​ನಲ್ಲಿ ಭಾರತೀಯ ಬೌಲರ್​ಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದರು. ಬ್ಯಾಟರ್​ಗಳು ಪೇರಿಸಿದ್ದ 113 ರನ್​ಗಳ ಮೊತ್ತವನ್ನು ಕಾಪಾಡಿದರು.

2007ರ ಟಿ20 ವಿಶ್ವಕಪ್​ನ ನಂತರದಿಂದದ 8ನೇ ಬಾರಿಗೆ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ. ವಿಶ್ವಕಪ್ ಈ ಹಿಂದಿನ 7 ಪಂದ್ಯಗಳಲ್ಲಿ ಭಾರತ ಮೇಲುಗೈ ಸಾಧಿಸಿದ್ದರೆ ಪಾಕಿಸ್ತಾನ ಒಂದು ಬಾರಿ ಗೆದ್ದಿದೆ. 2007ರ ಉದ್ಘಾಟನಾ ಆವೃತ್ತಿಯಲ್ಲಿ 2ರಲ್ಲಿ ಬಾರಿ ಭಾರತ ಗೆದ್ದಿದೆ. 2021ರಲ್ಲಿ ಭಾರತದ ವಿರುದ್ಧ ಪಾಕ್ ವಿಜಯ ಕಂಡುಕೊಂಡಿತ್ತು
2007ರ ಟಿ20 ವಿಶ್ವಕಪ್​ನ ನಂತರದಿಮದ 8ನೇ ಬಾರಿಗೆ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ. ವಿಶ್ವಕಪ್ ಈ ಹಿಂದಿನ 7 ಪಂದ್ಯಗಳಲ್ಲಿ ಭಾರತ ಮೇಲುಗೈ ಸಾಧಿಸಿದ್ದರೆ ಪಾಕಿಸ್ತಾನ ಒಂದು ಬಾರಿ ಗೆದ್ದಿದೆ. 2007ರ ಉದ್ಘಾಟನಾ ಆವೃತ್ತಿಯಲ್ಲಿ 2ರಲ್ಲಿ ಬಾರಿ ಭಾರತ ಗೆದ್ದಿದೆ. 2021ರಲ್ಲಿ ಭಾರತದ ವಿರುದ್ಧ ಪಾಕ್ ವಿಜಯ ಕಂಡುಕೊಂಡಿತ್ತು.

ಹಿಂದಿನ ಬಾರಿ ಕೊಹ್ಲಿ ಗೆಲ್ಲಿಸಿದ್ದರು

ಕಳೆದ ವರ್ಷ ನಡೆದ ಟಿ20 ವಿಶ್ವಕಪ್​​ನಲ್ಲಿ ಟೀಮ್ ಇಂಡಿಯಾ, ಪಾಕ್ ವಿರುದ್ಧ ರೋಚಕ ಗೆಲುವು ಸಾಧಿಸಿತ್ತು. ಪವರ್​​​ಪ್ಲೇನಲ್ಲಿ 32ಕ್ಕೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ವಿರಾಟ್ ಕೊಹ್ಲಿ ಏಕಾಂಗಿ ಹೋರಾಟ ನಡೆಸಿ ರೋಚಕ ಗೆಲುವು ತಂದಿದ್ದರು. ಕೊಹ್ಲಿ 52 ಎಸೆತಗಳಲ್ಲಿ ಅಜೇಯ 82 ರನ್ ಚಚ್ಚಿ ಅವಿಸ್ಮರಣೀಯ ಇನಿಂಗ್ಸ್ ಆಡಿದ್ದರು.

ವಿಶ್ವ ಕಪ್​ನಲ್ಲಿ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದ ಐರ್ಲೆಂಡ್ ಎದುರಿನ ತನ್ನ ಮೊದಲ ಪಂದ್ಯದಲ್ಲಿ ಭಾರತ 8 ವಿಕೆಟ್​ಗಳ ಅಮೋಘ ಜಯ ಸಾಧಿಸಿದೆ. ಇದೀಗ ಪಾಕಿಸ್ತಾನ ವಿರುದ್ಧಗೂ ಗೆಲುವು ಸಾಧಿಸಿ ಎ ಗುಂಪಿನ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿದೆ.

ಇದನ್ನೂ ಓದಿ: IND vs PAK : ವಿರಾಟ್​ ಕೊಹ್ಲಿಯಿಂದ ಆಟೋಗ್ರಾಫ್ ಪಡೆದುಕೊಂಡ ಕ್ರಿಸ್​ ಗೇಲ್​! ಇಲ್ಲಿದೆ ವಿಡಿಯೊ

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಮಳೆಯಿಂದಾಗಿ ಅರ್ಧ ಗಂಟೆ ತಡವಾಗಿ ಆರಂಭವಾಗಿದೆ. ಸ್ಥಳೀಯ ಸಮಯ ಬೆಳಗ್ಗೆ 10 ಗಂಟೆಗೆ ಹಾಗೂ ಭಾರತದ ಸಮಯ ಸಂಜೆ 7.30ಕ್ಕೆ ನಡೆಯಬೇಕಾಗಿದ್ದ ಟಾಸ್​ ಮಳೆಯಿಂದಾಗಿ ತಡವಾಯಿತು. ಪಂದ್ಯ ಆರಂಭಗೊಂಡು ಒಂದು ಓವರ್​ ಆದ ಬಳಿಕ ಮತ್ತೆ ಮಳೆ ಸುರಿಯಿತು. ಕೊನೆಗೂ ಪಂದ್ಯ ನಡೆದು ಭಾರತಕ್ಕೆ ಜಯ ಸಿಕ್ಕಿತು.

Continue Reading

ಪ್ರಮುಖ ಸುದ್ದಿ

Stabbing in Mangalore : ವಿಜಯೋತ್ಸವ ಮುಗಿಸಿ ಮನೆಗೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಚಾಕು ಇರಿತ

Stabbing in Mangalore : ಬೋಳಿಯಾರು ನಿವಾಸಿಗಳಾದ ಸುರೇಶ್ ‌ಹಾಗೂ ನಂದ ಕುಮಾರ್ ಚೂರಿ ಇರಿತಕ್ಕೆ ಒಳಗಾದವರು. ಮೋದಿ ಅಧಿಕಾರ ಸ್ವೀಕರಿಸಿದ ಬೋಳಿಯಾರ್ ವಿಜಯೋತ್ಸವ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಮುಗಿಸಿ ಅವರು ಬೋಳಿಯಾರು ಪೇಟೆಯಲ್ಲಿ ನಿಂತಿದ್ದರು. ಈ ವೇಳೆ ಅಪರಿಚಿತ ದುಷ್ಕರ್ಮಿಗಳ ತಂಡದಿಂದ ಏಕಾಏಕಿ ಇರಿದು ಪರಾರಿಯಾಗಿದ್ದಾರೆ.

VISTARANEWS.COM


on

Stabbing in Mangalore:
Koo

ಮಂಗಳೂರು: ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ವಿಜಯೋತ್ಸವ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ದುರ್ಷರ್ಮಿಗಳು ಚಾಕುವಿನಿಂದ ಇರಿದ (Stabbing in Mangalore) ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರು ಎಂಬಲ್ಲಿ ಘಟನೆ ಸಂಭವಿಸಿದೆ.

ಬೋಳಿಯಾರು ನಿವಾಸಿಗಳಾದ ಸುರೇಶ್ ‌ಹಾಗೂ ನಂದ ಕುಮಾರ್ ಚೂರಿ ಇರಿತಕ್ಕೆ ಒಳಗಾದವರು. ಮೋದಿ ಅಧಿಕಾರ ಸ್ವೀಕರಿಸಿದ ಬೋಳಿಯಾರ್ ವಿಜಯೋತ್ಸವ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಮುಗಿಸಿ ಅವರು ಬೋಳಿಯಾರು ಪೇಟೆಯಲ್ಲಿ ನಿಂತಿದ್ದರು. ಈ ವೇಳೆ ಅಪರಿಚಿತ ದುಷ್ಕರ್ಮಿಗಳ ತಂಡದಿಂದ ಏಕಾಏಕಿ ಇರಿದು ಪರಾರಿಯಾಗಿದ್ದಾರೆ. ಗಾಯಗೊಂಡಿರುವ ಇಬ್ಬರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬ್ಯಾಂಕ್‌ ಅಧಿಕಾರಿಗಳಿಂದ ಮನೆ ಹರಾಜು ನೋಟಿಸ್‌; ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡ ರೈತ

ದಾವಣಗೆರೆ: ಸಾಲದ ಹೊರೆ ಮತ್ತು ಬ್ಯಾಂಕ್ ಅಧಿಕಾರಿಗಳಿಂದ ಮನೆ ಹರಾಜು ನೋಟಿಸ್ ಬಂದಿದ್ದಕ್ಕೆ ಮನನೊಂದು ರೈತರೊಬ್ಬರು ನೇಣಿಗೆ (Farmer Death) ಶರಣಾಗಿದ್ದಾರೆ. ಹನುಮಂತಪ್ಪ (43) ಮೃತ ದುರ್ದೈವಿ.

ಹನುಮಂತಪ್ಪ ತಮ್ಮ ಜಮೀನಿನಲ್ಲಿದ್ದ ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತನ ಸಾವಿನಿಂದ ಆಕ್ರೋಶಗೊಂಡ ಇತರೆ ರೈತರು ಪ್ರತಿಭಟನೆ ನಡೆಸಿದರು. ಬ್ಯಾಂಕ್ ಅಧಿಕಾರಿಗಳ ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ಕಿಡಿಕಾರಿದರು.

ದಾವಣಗೆರೆ ತಾಲೂಕಿನ ಗುಡಾಳ್ ಗೊಲ್ಲರಹಟ್ಟಿ ಗ್ರಾಮದ ನಿವಾಸಿ ಹನಮಂತಪ್ಪ, 4 ಲಕ್ಷ ರೂಪಾಯಿ ಮನೆ ಸಾಲ ಹಾಗೂ 2.60 ಲಕ್ಷ ರೂಪಾಯಿ ಕುರಿ ಸಾಕಾಣಿಕೆಗೆ ಸಾಲ ಮಾಡಿಕೊಂಡಿದ್ದರು. ಮನೆ ಸಾಲ ಪ್ರತಿ ತಿಂಗಳು ತುಂಬುತ್ತಿದ್ದರು, ಆದರೆ ಕುರಿಸಾಲ ಮಾತ್ರ ಬಾಕಿ ಉಳಿದಿತ್ತು.

ಕುರಿ ಸಾಲ‌ ತಿರಿಸಲು ಹೋದರೆ ಮನೆ ಹಾಗೂ ಕುರಿ ಸಾಲ ಎರಡು ಒಟ್ಟಿಗೆ ಕಟ್ಟುವಂತೆ ಬ್ಯಾಂಕ್ ಅಧಿಕಾರಿಗಳು ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. ಶನಿವಾರ ದಾವಣಗೆರೆ ನಗರದ ಚಾಮರಾಜಪೇಟೆ ಕೆನರಾ ಬ್ಯಾಂಕ್ ಅಧಿಕಾರಿಗಳು ಮನೆ ಬಾಗಿಲಿಗೆ ಹರಾಜು ನೋಟಿಸ್ ಅಂಟಿಸಿ, ಫೋಟೋ ತೆಗೆದುಕೊಂಡು ಹೋಗಿದ್ದಾರೆ.

ಈ ಘಟನೆ ನಡೆಯುತ್ತಿದ್ದಂತೆ ಭಾನುವಾರ ಬೆಳಗ್ಗೆ ನಾಲ್ಕು ಗಂಟೆಗೆ ಜಮೀನಿಗೆ ಹೋದ ಹನುಮಂತಪ್ಪ ನೇಣಿಗೆ ಶರಣಾಗಿದ್ದಾರೆ. ರೈತನ ಆತ್ಮಹತ್ಯೆಗೆ ಡಿಸಿ ಹಾಗೂ ಬ್ಯಾಂಕ್ ಅಧಿಕಾರಿಗಳೇ ಕಾರಣ. ಮನೆ ಸಾಲ ನಿರಂತರವಾಗಿ ಕಟ್ಟಿದ್ದರೂ ಹರಾಜಿಗೆ ಮುಂದಾಗಿದ್ದಾರೆ ಎಂದು ರೈತರು ಕಿಡಿಕಾರಿದರು. ನಮ್ಮ ಸಮಸ್ಯೆಗೆ ಪರಿಹಾರ ಸಿಗುವ ತನಕ ಶವ ಸಂಸ್ಕಾರ ಮಾಡಲ್ಲ ಎಂದು ಪಟ್ಟು ಹಿಡಿದರು. ಜಿಲ್ಲಾ ಆಸ್ಪತ್ರೆ ಶವಾಗಾರದ ಮುಂದೆ ಹೋರಾಟ ನಡೆಸಿದರು.

Continue Reading

ದೇಶ

Modi 3.0 Cabinet: ಮೋದಿ ನೂತನ ಸಂಪುಟದಿಂದ ಸ್ಮೃತಿ ಇರಾನಿ ಸೇರಿ ಯಾರಿಗೆಲ್ಲ ಕೊಕ್?‌ ಇಲ್ಲಿದೆ ಮಾಹಿತಿ

Modi 3.0 Cabinet:‌ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕೇಂದ್ರದಲ್ಲಿ 10 ವರ್ಷಗಳ ಬಳಿಕ ಸಮ್ಮಿಶ್ರ ಸರ್ಕಾರ ರಚನೆಯಾಗಿದೆ. ಇದರ ಬೆನ್ನಲ್ಲೇ, ನರೇಂದ್ರ ಮೋದಿ ಅವರ ಸಂಪುಟಕ್ಕೆ ಹೊಸ ಮುಖಗಳಿಗೆ ಆದ್ಯತೆ ನೀಡಲಾಗಿದೆ. ಹಾಗೆಯೇ, ಮೂವರು ಹಾಲಿ ಸಂಪುಟ ದರ್ಜೆ ಸಚಿವರನ್ನು ನರೇಂದ್ರ ಮೋದಿ ಅವರು ಕೈಬಿಟ್ಟಿದ್ದಾರೆ. ಹಾಗಾದರೆ, ಯಾರಿಗೆಲ್ಲ ಕೊಕ್‌ ಕೊಡಲಾಗಿದೆ? ಮಾಹಿತಿ ಹೀಗಿದೆ…

VISTARANEWS.COM


on

Modi 3.0 Cabinet
Koo

ನವದೆಹಲಿ: ನರೇಂದ್ರ ಮೋದಿ (Narendra Modi) ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಜತೆಗೆ 72 ಸಂಸದರು ಕೂಡ ಸಚಿವರಾಗಿ (Modi 3.0 Cabinet) ಪ್ರಮಾಣವಚನ ಸ್ವೀಕರಿಸಿದ್ದಾರೆ. ಯುವ ಸಂಸದರು, ಮೈತ್ರಿ ಪಕ್ಷಗಳ ಸದಸ್ಯರು, ಅನುಭವಿಗಳು ಸೇರಿ ಹಲವು ಮಾನದಂಡಗಳನ್ನು ಅನುಸರಿಸಿ ಸಚಿವ ಸ್ಥಾನ ನೀಡಲಾಗಿದೆ. ಇನ್ನು, ಮೂವರು ಹಾಲಿ ಸಂಪುಟ ದರ್ಜೆ ಸಚಿವರಿಗೆ ನರೇಂದ್ರ ಮೋದಿ ಅವರು ಕೊಕ್‌ ನೀಡಿದ್ದಾರೆ. ಮೂವರು ಸಚಿವರಲ್ಲಿ ಸ್ಮೃತಿ ಇರಾನಿ (Smriti Irani) ಕೂಡ ಇದ್ದಾರೆ.

2019ರಲ್ಲಿ ರಾಹುಲ್‌ ಗಾಂಧಿ ವಿರುದ್ಧ ಗೆಲುವು ಸಾಧಿಸಿದ್ದ ಅಮೇಥಿ ಲೋಕಸಭೆ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್‌ನ ಕಿಶೋರಿ ಲಾಲ್‌ ಶರ್ಮಾ ಅವರ ವಿರುದ್ಧ ಸ್ಮೃತಿ ಇರಾನಿ ಅವರು 1.6 ಲಕ್ಷ ಮತಗಳಿಂದ ಸೋಲನುಭವಿಸಿದ್ದಾರೆ. ಇವರು ಮೋದಿ ಸರ್ಕಾರದ ಎರಡನೇ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವರಾಗಿದ್ದರು. ಮತ್ತೊಂದೆಡೆ, ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವರಾಗಿದ್ದ ಅನುರಾಗ್‌ ಠಾಕೂರ್‌ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ. ಹಿಮಾಚಲ ಪ್ರದೇಶ ಹಮೀರ್‌ಪುರ ಕ್ಷೇತ್ರದಲ್ಲಿ ಅನುರಾಗ್‌ ಠಾಕೂರ್‌ ಅವರು ಗೆಲುವು ಸಾಧಿಸಿದರೂ ಕೈಬಿಡಲಾಗಿದೆ. ಹಿಮಾಚಲ ಪ್ರದೇಶ ಕೋಟಾದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಸಂಪುಟ ದರ್ಜೆ ಖಾತೆ ನೀಡಲಾಗಿದೆ.

Anurag Thakur On Renaming India Name Row

ಮೋದಿ ಅವರ ಎರಡನೇ ಅವಧಿಯ ಸರ್ಕಾರದಲ್ಲಿ ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ಯಮಗಳ ಖಾತೆ ಸಚಿವರಾಗಿದ್ದ ನಾರಾಯಣ ರಾಣೆ ಅವರಿಗೆ ಕೊಕ್‌ ನೀಡಲಾಗಿದೆ. ಇವರು ಮಹಾರಾಷ್ಟ್ರದ ರತ್ನಗಿರಿ-ಸಿಂಧುದುರ್ಗ ಕ್ಷೇತ್ರದಲ್ಲಿ ಗೆಲುವು ಸಾಧಿಸಿದರೂ ಖಾತೆ ನೀಡಿಲ್ಲ. ಇನ್ನು, ಸಹಾಯಕ ಖಾತೆ ಸಚಿವರಾಗಿದ್ದ ರಾಜೀವ್‌ ಚಂದ್ರಶೇಖರ್‌ ಅವರ ಹೆಸರನ್ನೂ ಮೋದಿ ಕೈಬಿಟ್ಟಿದ್ದಾರೆ. ರಾಜೀವ್‌ ಚಂದ್ರಶೇಖರ್‌ ಅವರು ಕೇರಳದ ತಿರುವನಂತಪುರಂನಲ್ಲಿ ಕಾಂಗ್ರೆಸ್‌ನ ಶಶಿ ತರೂರ್‌ ಅವರಿಗೆ ತೀವ್ರ ಪೈಪೋಟಿ ನೀಡಿ ಸೋಲನುಭವಿಸಿದ್ದರು.

rajiv chandrashekhar

ಹಲವು ಹೊಸಬರಿಗೆ ಈ ಬಾರಿ ಮಣೆ ಹಾಕಲಾಗಿದೆ. ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್‌ ಅವರ ಪುತ್ರ ರಾಮನಾಥ್‌ ಠಾಕೂರ್‌ ಅವರಿಗೆ ರಾಜ್ಯ ಖಾತೆಯ ಉಸ್ತುವಾರಿ ನೀಡಲಾಗಿದೆ. ಜೆಡಿಯು ಸಂಸದ, ನಿತೀಶ್‌ ಕುಮಾರ್‌ ಅವರ ನಿಕಟವರ್ತಿಯಾಗಿರುವ ಇವರಿಗೆ ನರೇಂದ್ರ ಮೋದಿ ಅವರು ಮಣೆ ಹಾಕಿದ್ದಾರೆ. ಕರ್ಪೂರಿ ಠಾಕೂರ್‌ ಅವರಿಗೆ ಪ್ರಸಕ್ತ ವರ್ಷದಲ್ಲಿಯೇ ಕೇಂದ್ರ ಸರ್ಕಾರವು ಮರಣೋತ್ತರವಾಗಿ ಭಾರತರತ್ನ ಘೋಷಿಸಿತ್ತು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಕೇಂದ್ರ ಸಂಪುಟ ದರ್ಜೆ ಸ್ಥಾನ ನೀಡಲಾಗಿದ್ದು, ಇವರು ಶೀಘ್ರದಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ತೊರೆಯಲಿದ್ದಾರೆ ಎನ್ನಲಾಗುತ್ತದೆ. ಇನ್ನು, ಮಧ್ಯಪ್ರದೇಶ ಸಿಎಂ ಸ್ಥಾನ ತೊರೆದ ಶಿವರಾಜ್‌ ಸಿಂಗ್‌ ಚೌಹಾಣ್‌, ಹರಿಯಾಣ ಮಾಜಿ ಸಿಎಂ ಮನೋಹರ ಲಾಲ್‌ ಖಟ್ಟರ್‌, ಎಲ್‌ಜೆಪಿ ಮುಖ್ಯಸ್ಥ ಚಿರಾಗ್‌ ಪಾಸ್ವಾನ್‌ ಅವರಿಗೆ ಸಂಪುಟ ದರ್ಜೆ ಖಾತೆ ನೀಡಲಾಗಿದೆ. ಕೇರಳ ತ್ರಿಶ್ಶೂರ್‌ ಸಂಸದ ಸುರೇಶ್‌ ಗೋಪಿ, ಕರ್ನಾಟಕದ ವಿ.ಸೋಮಣ್ಣ, ತೆಲಂಗಾಣದ ಬಂಡಿ ಸಂಜಯ್‌ ಕುಮಾರ್‌ ಸೇರಿ ಹಲವು ಹೊಸ ಮುಖಗಳನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ.

ಇದನ್ನೂ ಓದಿ: Modi 3.0 Cabinet: ನಡ್ಡಾ To ಎಚ್‌ಡಿಕೆ ;‌ ಮೋದಿ ಸಂಪುಟದಲ್ಲಿ ಸ್ಥಾನ ಪಡೆದ ಹೊಸ ಮುಖಗಳಿವು

Continue Reading

ಪ್ರಮುಖ ಸುದ್ದಿ

IND vs PAK : ವಿರಾಟ್​ ಕೊಹ್ಲಿಯಿಂದ ಆಟೋಗ್ರಾಫ್ ಪಡೆದುಕೊಂಡ ಕ್ರಿಸ್​ ಗೇಲ್​! ಇಲ್ಲಿದೆ ವಿಡಿಯೊ

IND vs PAK: ಮಳೆಯಿಂದಾಗಿ ಪಂದ್ಯದ ಟಾಸ್ ವಿಳಂಬವಾಯಿತು. ಮತ್ತು ಎರಡೂ ತಂಡಗಳ ಆಟಗಾರರು ಪಂದ್ಯಕ್ಕೆ ತಯಾರಿ ನಡೆಸಲು ಮೈದಾನದಲ್ಲಿ ಜಮಾಯಿಸಿದ್ದರು. ಈ ವೇಳೆ ವೆಸ್ಟ್ ಇಂಡೀಸ್​​​ನ ಮಾಜಿ ಕ್ರಿಸ್ ಗೇಲ್ ವಿಶೇಷ ಪೋಷಾಕಿನಲ್ಲಿ ಕಾಣಿಸಿಕೊಂಡರು. ಯೂನಿವರ್ಸ್ ಬಾಸ್ ದೊಡ್ಡ ಪಂದ್ಯಕ್ಕಾಗಿ ಕಸ್ಟಮೈಸ್ ಮಾಡಿದ ಸೂಟ್ ನೊಂದಿಗೆ ಎಲ್ಲರ ಗಮನ ಸೆಳೆದರು.

VISTARANEWS.COM


on

IND vs PAK:
Koo

ಬೆಂಗಳೂರು: ಐಸಿಸಿ ಟಿ 20 ವಿಶ್ವಕಪ್ 2024 ರ 19 ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ (IND vs PAK) ಪರಸ್ಪರ ಮುಖಾಮುಖಿಯಾಗಿವೆ. ನ್ಯೂಯಾರ್ಕ್​​ನ ನಸ್ಸಾವು ಕೌಂಟಿ ಇಂಟರ್​ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆದಿದೆ. ಟಾಸ್ ಗೆದ್ದ ಪಾಕಿಸ್ತಾನ ನಾಯಕ ಬಾಬರ್ ಅಜಮ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ನ್ಯೂಯಾರ್ಕ್​ನ ಪರಿಸ್ಥಿತಿಗಳು ಇಲ್ಲಿಯವರೆಗೆ ವೇಗಿಗಳಿಗೆ ಸೂಕ್ತವಾಗಿವೆ ಮತ್ತು ಪಾಕಿಸ್ತಾನವು ಅದನ್ನು ಹೆಚ್ಚು ಬಳಸಿಕೊಳ್ಳಲು ನೋಡಿದೆ. ಆಡಲಾದ ಎಲ್ಲಾ ಪಂದ್ಯಗಳು ಕಡಿಮೆ ಸ್ಕೋರಿಂಗ್ ಪಂದ್ಯಗಳಾಗಿವೆ.

ಮಳೆಯಿಂದಾಗಿ ಪಂದ್ಯದ ಟಾಸ್ ವಿಳಂಬವಾಯಿತು. ಮತ್ತು ಎರಡೂ ತಂಡಗಳ ಆಟಗಾರರು ಪಂದ್ಯಕ್ಕೆ ತಯಾರಿ ನಡೆಸಲು ಮೈದಾನದಲ್ಲಿ ಜಮಾಯಿಸಿದ್ದರು. ಈ ವೇಳೆ ವೆಸ್ಟ್ ಇಂಡೀಸ್​​​ನ ಮಾಜಿ ಕ್ರಿಸ್ ಗೇಲ್ ವಿಶೇಷ ಪೋಷಾಕಿನಲ್ಲಿ ಕಾಣಿಸಿಕೊಂಡರು. ಯೂನಿವರ್ಸ್ ಬಾಸ್ ದೊಡ್ಡ ಪಂದ್ಯಕ್ಕಾಗಿ ಕಸ್ಟಮೈಸ್ ಮಾಡಿದ ಸೂಟ್ ನೊಂದಿಗೆ ಎಲ್ಲರ ಗಮನ ಸೆಳೆದರು.

ಅವರ ಸೂಟಿನ ಒಂದು ಭಾಗವು ಭಾರತೀಯ ಧ್ವಜದ ಬಣ್ಣಗಳನ್ನು ಹೊಂದಿದ್ದರೆ, ಇನ್ನೊಂದು ಬದಿಯಲ್ಲಿ ಪಾಕಿಸ್ತಾನ ಧ್ವಜದ ಹಸಿರು ಬಣ್ಣವಿತ್ತು. ಅವರು ತಮ್ಮ ಸೂಟ್​​ನಲ್ಲಿ ಕೆಲವು ಸ್ಟಾರ್ ಆಟಗಾರರ ಹಸ್ತಾಕ್ಷರಗಳನ್ನು ತೆಗೆದುಕೊಳ್ಳುತ್ತಿರುವುದು ಕಂಡುಬಂತು. ವಿರಾಟ್ ಕೊಹ್ಲಿ, ಬಾಬರ್ ಅಜಮ್ ಮತ್ತು ರೋಹಿತ್ ಶರ್ಮಾ ಅವರಂತಹ ಆಟಗಾರರು ತಮ್ಮ ಸೂಟ್​ ಮೇಳೆ ಸಹಿ ಹಾಕಿದರು.

ನಿರ್ಣಾಯಕ ಗೆಲುವಿನ ಮೇಲೆ ಕಣ್ಣಿಟ್ಟ ಉಭಯ ತಂಡಗಳು

ಈ ಆಟವು ಎರಡೂ ತಂಡಗಳಿಗೆ ನಿರ್ಣಾಯಕ ಗೆಲುವು ಮತ್ತು ಪಂದ್ಯಾವಳಿಯಲ್ಲಿ ತಮ್ಮ ಪ್ರಗತಿಯನ್ನು ಚೆನ್ನಾಗಿ ನಿರ್ಧರಿಸಬಹುದು. ಪಾಕಿಸ್ತಾನವು ಯುಎಸ್ಎ ವಿರುದ್ಧದ ಸೋಲಿನೊಂದಿಗೆ ತನ್ನ ಅಭಿಯಾನ ಪ್ರಾರಂಭಿಸಿದೆ. ಹೆಚ್ಚಿನ ಹಿನ್ನಡೆ ಸಹಿಸಲು ಸಾಧ್ಯವಿಲ್ಲ. ಇಂದು ಭಾರತ ವಿರುದ್ಧದ ಸೋಲು ಟಿ 20 ವಿಶ್ವಕಪ್​ನಲ್ಲಿ ಗ್ರೂಪ್ ಹಂತದಲ್ಲಿ ತನ್ನ ಅಭಿಯಾನವನ್ನು ಕೊನೆಗೊಳಿಸುವ ಸಾಮರ್ಥ್ಯವೂ ಇದೆ.

ಇದನ್ನೂ ಓದಿ: IND vs PAK : ಮರೆಗುಳಿ ರೋಹಿತ್​; ಜೇಬಿನಲ್ಲಿ​ ಕಾಯಿನ್​ ಇಟ್ಟು ಹುಡುಕಾಡಿದ ಭಾರತ ತಂಡದ ನಾಯಕ

ಐರ್ಲೆಂಡ್ ವಿರುದ್ಧ ಭಾರತ 8 ವಿಕೆಟ್​ಗಳ ಭರ್ಜರಿ ಜಯದೊಂದಿಗೆ ತನ್ನ ಅಭಿಯಾನವನ್ನು ಪ್ರಾರಂಭಿಸಿದೆ. ಭಾರತವು ಅದೇ ಸ್ಥಳದಲ್ಲಿ ಪಂದ್ಯವನ್ನು ಗೆದ್ದಿದೆ ಮತ್ತು ಪರಿಸ್ಥಿತಿಗಳ ಲಾಭ ಮಾಡಿಕೊಳ್ಳಲು ಎದುರು ನೋಡುತ್ತಿದೆ. ಪಾಕಿಸ್ತಾನ ವಿರುದ್ಧದ ಗೆಲುವು ಭಾರತವನ್ನು ಸೂಪರ್ 8 ಹಂತದಲ್ಲಿ ಸ್ಥಾನ ಪಡೆಯಲು ಉತ್ತಮ ಸ್ಥಾನದಲ್ಲಿರಿಸುತ್ತದೆ. ಆದರೆ ಸೋಲು ಅವರಿಗೆ ವಿಷಯಗಳನ್ನು ತುಂಬಾ ಕಷ್ಟ ಎನಿಸಿಕೊಳ್ಳಲಿದೆ.

Continue Reading
Advertisement
ind vs pak
ಪ್ರಮುಖ ಸುದ್ದಿ3 hours ago

IND vs PAK : ಭಾರತದ ಎದುರು ಪಾಕಿಸ್ತಾನಕ್ಕೆ ಮತ್ತೊಮ್ಮೆ ಮುಖಭಂಗ; ಕಡಿಮೆ ಸ್ಕೋರ್ ಇದ್ದಾಗಲೂ 6 ರನ್ ಸೋಲು

Stabbing in Mangalore:
ಪ್ರಮುಖ ಸುದ್ದಿ4 hours ago

Stabbing in Mangalore : ವಿಜಯೋತ್ಸವ ಮುಗಿಸಿ ಮನೆಗೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಚಾಕು ಇರಿತ

Modi 3.0 Cabinet
ದೇಶ4 hours ago

Modi 3.0 Cabinet: ಮೋದಿ ನೂತನ ಸಂಪುಟದಿಂದ ಸ್ಮೃತಿ ಇರಾನಿ ಸೇರಿ ಯಾರಿಗೆಲ್ಲ ಕೊಕ್?‌ ಇಲ್ಲಿದೆ ಮಾಹಿತಿ

IND vs PAK:
ಪ್ರಮುಖ ಸುದ್ದಿ5 hours ago

IND vs PAK : ವಿರಾಟ್​ ಕೊಹ್ಲಿಯಿಂದ ಆಟೋಗ್ರಾಫ್ ಪಡೆದುಕೊಂಡ ಕ್ರಿಸ್​ ಗೇಲ್​! ಇಲ್ಲಿದೆ ವಿಡಿಯೊ

Veeraloka
Latest5 hours ago

Veeraloka Books : ಹೊಸ ಲೇಖಕರಿಗೆ ವೀರಲೋಕ ಪ್ರಕಾಶನ ಹೆದ್ದಾರಿಯನ್ನೇ ಸೃಷ್ಟಿಸಿದೆ: ಜಯಂತ್‌ ಕಾಯ್ಕಿಣಿ ಶ್ಲಾಘನೆ

IND vs PAK
ಪ್ರಮುಖ ಸುದ್ದಿ6 hours ago

IND vs PAK : ಮರೆಗುಳಿ ರೋಹಿತ್​; ಜೇಬಿನಲ್ಲಿ​ ಕಾಯಿನ್​ ಇಟ್ಟು ಹುಡುಕಾಡಿದ ಭಾರತ ತಂಡದ ನಾಯಕ

Modi 3.0 Cabinet
ದೇಶ6 hours ago

Modi 3.0 Cabinet: ನಡ್ಡಾ To ಎಚ್‌ಡಿಕೆ ;‌ ಮೋದಿ ಸಂಪುಟದಲ್ಲಿ ಸ್ಥಾನ ಪಡೆದ ಹೊಸ ಮುಖಗಳಿವು

Modi 3.0 Cabinet
ದೇಶ6 hours ago

Modi 3.0 Cabinet: 30 ಕ್ಯಾಬಿನೆಟ್‌ ದರ್ಜೆ, 5 ಸ್ವತಂತ್ರ, 36 ಸಂಸದರಿಗೆ ರಾಜ್ಯ ಖಾತೆ; ಇಲ್ಲಿದೆ ಕಂಪ್ಲೀಟ್‌ ಲಿಸ್ಟ್

V Somanna profile
ಪ್ರಮುಖ ಸುದ್ದಿ7 hours ago

V Somanna profile : ಅಂದು ಜನತಾ ಬಜಾರ್‌ನಲ್ಲಿ ಸೇಲ್ಸ್‌ಮ್ಯಾನ್‌; ಇಂದು ಕೇಂದ್ರ ಸಚಿವ! ವಿ ಸೋಮಣ್ಣ ರಾಜಕೀಯ ಹಾದಿ ಕುತೂಹಲಕರ

Terror Attack
ಕ್ರೈಂ7 hours ago

Terror Attack: ಕಾಶ್ಮೀರದಲ್ಲಿ ಹಿಂದೂ ಯಾತ್ರಿಗಳಿದ್ದ ಬಸ್‌ ಮೇಲೆ ಉಗ್ರರ ದಾಳಿ; 10 ಸಾವು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ7 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌