IND vs ENG | ಆತಿಥೇಯ ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ 88 ರನ್ ಭರ್ಜರಿ ಜಯ, ಏಕ ದಿನ ಸರಣಿ ಕೈವಶ - Vistara News

ಕ್ರಿಕೆಟ್

IND vs ENG | ಆತಿಥೇಯ ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ 88 ರನ್ ಭರ್ಜರಿ ಜಯ, ಏಕ ದಿನ ಸರಣಿ ಕೈವಶ

ಆತಿಥೇಯ ಇಂಗ್ಲೆಂಡ್‌ ವಿರುದ್ಧದ ಎರಡನೇ ಏಕ ದಿನ ಪಂದ್ಯದಲ್ಲಿ 88 ರನ್‌ಗಳ ಭರ್ಜರಿ ಜಯ ದಾಖಲಿಸಿದ ಭಾರತ ಮಹಿಳೆಯರ ತಂಡ 3 ಪಂದ್ಯಗಳ ಸರಣಿಯನ್ನು ಇನ್ನೂ ಒಂದು ಪಂಧ್ಯ ಬಾಕಿ ಇರುವಂತೆಯೇ 2-1ರಿಂದ ವಶ ಪಡಿಸಿಕೊಂಡಿತು.

VISTARANEWS.COM


on

IND vs ENG
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕ್ಯಾಂಟೆರ್‌ಬರಿ : ಪ್ರವಾಸಿ ಭಾರತೀಯ ಮಹಿಳೆಯರ ತಂಡ ಅದ್ಧೂರಿ ಪ್ರದರ್ಶನದೊಂದಿಗೆ ಇಂಗ್ಲೆಂಡ್‌ ವಿರುದ್ಧದ ಏಕ ದಿನ ಸರಣಿಯ ಎರಡನೇ ಪಂದ್ಯವನ್ನು ಭರ್ಜರಿ ೮೮ ರನ್‌ಗಳಿಂದ ವಶಪಡಿಸಿಕೊಂಡಿತು. ಇದರೊಂದಿಗೆ ಮೂರು ಪಂದ್ಯಗಳ ಸರಣಿಯನ್ನು ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೆ ಕೈವಶ ಮಾಡಿಕೊಂಡಿತು.

ಇಲ್ಲಿನ ಸೇಂಟ್ ಲಾರೆನ್ಸ್ ಗ್ರೌಂಡ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಭಾರತ ತಂಡ ನಿಗದಿತ ೫೦ ಓವರ್‌ಗಳಲ್ಲಿ ೫ ವಿಕೆಟ್‌ ನಷ್ಟಕ್ಕೆ ೩೩೩ ರನ್‌ ಬಾರಿಸಿತು. ಗುರಿ ಆತಿಥೇಯ ಬಳಗ ೪೪.೨ ಓವರ್‌ಗಳಲ್ಲಿ ೨೪೫ ರನ್‌ ಬಾರಿಸಿ ಸರ್ವಪತನ ಕಾಣುವುದರೊಂದಿಗೆ ಸೋಲಿಗೆ ಸುಳಿಗೆ ಸಿಲುಕಿತು. ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಏಳು ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತ್ತು. ಹೀಗಾಗಿ ಸರಣಿ ಭಾರತದ ಕೈವಶಗೊಂಡಿತು.

ಮೊದಲು ಬ್ಯಾಟ್ ಮಾಡಿದ ಭಾರತ ತಂಡದ ಆರಂಭಿಕ ಕುಸಿತ ಕಂಡಿತು. ಶಫಾಲಿ ವರ್ಮ ೮ ರನ್‌ಗಳಿಗೆ ವಿಕೆಟ್ ಒಪ್ಪಿಸಿದರು. ಆದರೆ, ಕಳೆದ ಪಂದ್ಯದ ಹೀರೊ ಸ್ಮೃತಿ ಮಂಧಾನ ೪೦ ರನ್ ಬಾರಿಸಿ ತಂಡಕ್ಕೆ ಆಧಾರವಾದರು. ಇವೆಲ್ಲರ ನಡುವೆ, ಮಧ್ಯಮ ಕ್ರಮಾಂಕದಲ್ಲಿ ಜೀವನ ಶ್ರೇಷ್ಠ ಬ್ಯಾಟಿಂಗ್ ಮಾಡಿದ ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ೧೧೧ ಎಸೆತಗಳಿಗೆ ಅಜೇಯ ೧೪೩ ರನ್‌ ಬಾರಿಸಿ ಭಾರತ ತಂಡಕ್ಕೆ ಬೃಹತ್ ಮೊತ್ತ ಪೇರಿಸಲು ನೆರವಾದರು. ಇವರ ಇನಿಂಗ್ಸ್‌ನಲ್ಲಿ ೪ ಸಿಕ್ಸರ್‌ ಹಾಗೂ ೧೮ ಫೋರ್‌ಗಳೂ ಸೇರಿಕೊಂಡಿದ್ದವು. ಐದನೇ ಕ್ರಮಾಂಕದಲ್ಲಿ ಬ್ಯಾಟ್‌ ಮಾಡಲು ಇಳಿದ ಹರ್ಲಿನ್‌ ದೇವಲ್‌ ೫೮ ರನ್‌ ಬಾರಿಸಿದರು. ಈ ಬ್ಯಾಟರ್‌ಗಳ ಸಾಹಸದಿಂದ ಭಾರತ ತಂಡ ಎದುರಾಳಿ ತಂಡಕ್ಕೆ ದೊಡ್ಡ ಮೊತ್ತದ ಸವಾಲು ನೀಡಿತು.

ದೊಡ್ಡ ಗುರಿ ಬೆನ್ನಟ್ಟಲು ಆರಂಭಿಸಿದ ಇಂಗ್ಲೆಂಡ್‌ ತಂಡದ ಆರಂಭಿಕ ಬ್ಯಾಟರ್‌ಗಳನ್ನು ಭಾರತೀಯ ಬೌಲರ್‌ಗಳು ಬೇಗನೆ ಪೆವಿಲಿಯನ್‌ಗೆ ಅಟ್ಟಿದರು. ಆದರೆ ಡ್ಯಾನಿ ವೇಟ್ ೬೫ ರನ್‌ ಬಾರಿಸಿ ಆತಿಥೇಯ ತಂಡದ ಗರಿಷ್ಠ ಸ್ಕೋರರ್‌ ಎನಿಸಿಕೊಂಡರು.

ಸ್ಕೋರ್‌ ವಿವರ

ಭಾರತ ಮಹಿಳೆಯರು: ೫೦ ಓವರ್‌ಗಳಲ್ಲಿ ೫ ವಿಕೆಟ್‌ಗೆ ೩೩೩ (ಹರ್ಮನ್‌ಪ್ರೀತ್ ಕೌರ್‌ ೧೪೩, ಹರ್ಲಿನ್ ದೇವಲ್‌ ೫೮, ಸ್ಮೃತಿ ಮಂಧಾನಾ ೪೦., ಚಾರ್ಲಿ ಡೀನ್‌ ೩೧ಕ್ಕೆ೧)

ಇಂಗ್ಲೆಂಡ್‌ ಮಹಿಳೆಯರು : ೪೪.೨ ಓವರ್‌ಗಳಲ್ಲಿ ೨೪೫ಕ್ಕೆ ಆಲ್‌ಔಟ್‌ (ಡ್ಯಾನಿ ವೇಟ್‌ ೬೫, ಅಲೈಸ್‌ ಕ್ಯಾಪ್ಸಿ ೩೯, ಆಮಿ ಜೋನ್ಸ್‌ ೩೯, ರೇಣುಕಾ ಸಿಂಗ್‌ ೫೭ಕ್ಕೆ ೪).

ಇದನ್ನೂ ಓದಿ | Team India | ಇಂಗ್ಲೆಂಡ್‌ ತಂಡದ ವಿರುದ್ಧ ಭಾರತೀಯ ಮಹಿಳೆಯರಿಗೆ 7 ವಿಕೆಟ್‌ ಜಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup Winners: ಟಿ20 ವಿಶ್ವಕಪ್​ ಗೆದ್ದ ಭಾರತ ತಂಡಕ್ಕೆ ನಾಳೆ ಮುಂಬೈಯಲ್ಲಿ ಅದ್ಧೂರಿ ಸ್ವಾಗತ

T20 World Cup Winners: ತವರಿಗೆ ಬಂದಿಳಿದ ಆಟಗಾರರನ್ನು ಮುಂಬೈನಲ್ಲಿ ತೆರೆದ ಬಸ್​ನಲ್ಲಿ ಸಂಜೆ 4 ಗಂಟೆಗೆ ರೋಡ್​ ಶೋ ಮೂಲಕ ಭವ್ಯ ಸ್ವಾಗತ ಕೋರಲು(VICTORY PARADE IN MUMBA) ಸಿದ್ಧತೆ ನಡೆಸಲಾಗಿದೆ.​ ಜತೆಗೆ ಪ್ರಧಾನಿ ಮೋದಿ ಅವರು ಟೀಮ್​ ಇಂಡಿಯಾ ಆಟಗಾರರನ್ನು ಸನ್ಮಾನಿಸಲಿದ್ದಾರೆ ಎಂದು ವರದಿಯಾಗಿದೆ.

VISTARANEWS.COM


on

Team India
Koo

ನವದೆಹಲಿ: ಚಾರ್ಟರ್​ ಪ್ಲೈಟ್​ ಮೂಲಕ ಬುಧವಾರ ಬಾರ್ಬಡೋಸ್​ನಿಂದ ಹೊರಟಿರುವ ಟಿ20 ವಿಶ್ವಕಪ್​ ವಿಜೇತ(T20 World Cup Winners) ಟೀಮ್ ಇಂಡಿಯಾ(Team India) ನಾಳೆ(ಗುರುವಾರ) ನವದೆಹಲಿ ತಲುಪಲಿದೆ. ತವರಿಗೆ ಬಂದಿಳಿದ ಆಟಗಾರರನ್ನು ಮುಂಬೈನಲ್ಲಿ ತೆರೆದ ಬಸ್​ನಲ್ಲಿ ಸಂಜೆ 4 ಗಂಟೆಗೆ ರೋಡ್​ ಶೋ ಮೂಲಕ ಭವ್ಯ ಸ್ವಾಗತ ಕೋರಲು(VICTORY PARADE IN MUMBA) ಸಿದ್ಧತೆ ನಡೆಸಲಾಗಿದೆ.​ ಜತೆಗೆ ಪ್ರಧಾನಿ ಮೋದಿ ಅವರು ಟೀಮ್​ ಇಂಡಿಯಾ ಆಟಗಾರರನ್ನು ಸನ್ಮಾನಿಸಲಿದ್ದಾರೆ ಎಂದು ವರದಿಯಾಗಿದೆ.

ಬಿಸಿಸಿಐ ವ್ಯವಸ್ಥೆ ಮಾಡಿರುವ ವಿಶೇಷ ವಿಮಾನದಲ್ಲಿ ಆಟಗಾರರು ಮತ್ತವರ ಕುಟುಂಬಸ್ಥರು, ಬಿಸಿಸಿಐ ಅಧಿಕಾರಿಗಳು ಸೇರಿ ಇಡೀ ತಂಡ ಭಾರತಕ್ಕೆ ಮರಳಲಿದ್ದಾರೆ. ಟಿ 20 ವಿಶ್ವಕಪ್ ಫೈನಲ್​​ನಲ್ಲಿ ಭಾರತ ಗೆದ್ದ ಕೆಲವೇ ಗಂಟೆಗಳ ನಂತರ ಬೆರಿಲ್ ಚಂಡಮಾರುತವು ದ್ವೀಪ ರಾಷ್ಟ್ರಕ್ಕೆ ಅಪ್ಪಳಿಸಿತ್ತು. ಗಂಟೆಗೆ 130 ಕಿ.ಮೀ.ಗೂ ವೇಗವಾಗಿ ಗಾಳಿ ಬೀಸುತ್ತಿರುವುದರಿಂದ ಪ್ರವಾಸಿಗರಿಗೆ ಒಳಾಂಗಣದಲ್ಲೇ ಉಳಿದುಕೊಳ್ಳುವಂತೆ ಎಚ್ಚರಿಕೆ ನೀಡಲಾಗಿತ್ತು. ಅಲ್ಲದೇ ಬಾರ್ಬಡಾಸ್‌ನಲ್ಲಿ ನಿಷೇದಾಜ್ಞೆ ಜಾರಿ ಮಾಡಿ ಜನರಿಗೆ ಮನೆಗಳಿಂದ ಹೊರಬರದಂತೆ ಸೂಚಿಸಲಾಗಿತ್ತು. ಜತೆಗೆ ವಿಮಾನ ನಿಲ್ದಾಣಗಳು ಬಂದ್‌ ಆಗಿತ್ತು. ಹೀಗಾಗಿ ಭಾರತ ತಂಡ ಬಾರ್ಬಡೋಸ್​ನ ಹೊಟೇಲ್‌ನಲ್ಲಿ ತಂಗಿತ್ತು.

ಇದನ್ನೂ ಓದಿ T20 World Cup 2024: ಟಿ-20 ಸ್ವಯಂವರದ ಮಂಟಪದಲ್ಲಿ ವಿಶ್ವಸುಂದರಿಗೆ ಮಾಲೆ ತೊಡಿಸಿದ ರೋಹಿತ್ ಬಳಗ

ಶನಿವಾರ ನಡೆದಿದ್ದ ಫೈನಲ್​ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ(South Africa vs India) 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತ್ತು.

ಚಂಡಮಾರುತದ ಅಬ್ಬರದ ದೃಶ್ಯವನ್ನು ವಿರಾಟ್​ ಕೊಹ್ಲಿ(virat kohli) ಅವರು ತಮ್ಮ ಪತ್ನಿ ಅನುಷ್ಕಾ ಶರ್ಮಗೆ(Virat- Anushka) ವಿಡಿಯೊ ಕಾಲ್ ಮೂಲಕ ತೋರಿಸುತ್ತಿರುವ ವಿಡಿಯೊ ಇದೀಗ ವೈರಲ್​ ಆಗಿದೆ.​

ವಿರಾಟ್​ ಕೊಹ್ಲಿ ತಾವು ತಂಗಿರುವ ಹೊಟೇಲ್‌ ಕಿಟಕಿಯಿಂದ ಸಮುದ್ರದಲ್ಲಿ ಅಪ್ಪಳಿಸುತ್ತಿರುವ ಭಾರೀ ಗಾತ್ರದ ಅಲೆಗಳನ್ನು, ಮತ್ತು ಅಲ್ಲಿನ ಪರಿಸ್ಥಿತಿ ಹೇಗಿದೆ ಎನ್ನುವುದನ್ನು ಪತ್ನಿ ಅನುಷ್ಕಾಗೆ(anushka sharma) ವಿಡಿಯೊ ಕಾಲ್​ ಮೂಲಕ ತೋರಿಸಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ. ಕುಟುಂಬಕ್ಕೆ ಮೊದಲ ಪ್ರಾಧಾನ್ಯತೆ ನೀಡುವ ಕೊಹ್ಲಿ ಯಾವುದೇ ಪಂದ್ಯ ಇರಲಿ ಇದು ಮುಕ್ತಾಯಗೊಂಡ ತಕ್ಷಣ ಪತ್ನಿಗೆ ವಿಡಿಯೊ ಕಾಲ್​ ಮಾಡಿ ಮಾತನಾಡುತ್ತಾರೆ. ಕೆಲವೊಮ್ಮೆ ಕ್ರಿಕೆಟ್​ ಸರಣಿ ಇದ್ದರೂ ಕೂಡ ಇದರಿಂದ ಹಿಂದೆ ಸರಿದು ಕುಟುಂಬದ ಜತೆ ಕಾಲ ಕಳೆಯುತ್ತಾರೆ. ಟಿ20 ವಿಶ್ವಕಪ್​ ಗೆದ್ದ ಬಳಿಕವೂ ಕೂಡ ಕೊಹ್ಲಿ ಪತ್ನಿಗೆ ಕರೆ ಮಾಡಿ ಮಕ್ಕಳ ಬಗ್ಗೆ ವಿಚಾರಿಸಿದ್ದಾರೆ. ಜತೆಗೆ ಪುಟ್ಟ ಮಗುವಿಗೆ ಫ್ಲೈಯಿಂಗ್ ಕಿಸ್ ನೀಡಿದ ವಿಡಿಯೊ ಕೂಡ ವೈರಲ್​ ಆಗಿತ್ತು.

Continue Reading

ಕ್ರೀಡೆ

Hardik Pandya: ಆಲ್​ರೌಂಡರ್​ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದ ಹಾರ್ದಿಕ್​ ಪಾಂಡ್ಯ

Hardik Pandya: ಬ್ಯಾಟಿಂಗ್​ ಶ್ರೇಯಾಂಕದಲ್ಲಿ ಯಾವುದೇ ಮಹತ್ವದ ಬದಲಾವಣೆ ಸಂಭವಿಸಿಲ್ಲ. ಈ ಹಿಂದೆ ಇದ್ದಂತೆ ಆಸ್ಟ್ರೇಲಿಯಾದ ಟ್ರಾವಿಸ್​ ಹೆಡ್​ ಅಗ್ರಸ್ಥಾನ, ಸೂರ್ಯಕುಮಾರ್ ಯಾದವ್​ ದ್ವಿತೀಯ ಸ್ಥಾನದಲ್ಲೇ ಮುಂದುವರಿದಿದ್ದಾರೆ.

VISTARANEWS.COM


on

Hardik Pandya
Koo

ದುಬೈ: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅಮೋಘ ಬ್ಯಾಟಿಂಗ್​ ಮತ್ತು ಬೌಲಿಂಗ್​ ಪ್ರದರ್ಶನ ತೋರುವ ಮೂಲಕ ಭಾರತ ತಂಡ ವಿಶ್ವಕಪ್​ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಹಾರ್ದಿಕ್​ ಪಾಂಡ್ಯ(222 ರೇಟಿಂಗ್​ ಅಂಕ) ಅವರು ನೂತನ ಐಸಿಸಿ ಟಿ20 ಆಲ್​ರೌಂಡರ್​ ಶ್ರೇಯಾಂಕದಲ್ಲಿ(T20I all-rounder) ಅಗ್ರಸ್ಥಾನಕ್ಕೇರಿದ್ದಾರೆ.

ಈ ಬಾರಿಯ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಪಾಂಡ್ಯ(Hardik Pandya) ಒಟ್ಟು 144 ರನ್​ ಮತ್ತು 11 ವಿಕೆಟ್​ ಕಿತ್ತ ಸಾಧನೆ ಮಾಡಿದ್ದರು. ಅದರಲ್ಲೂ ಫೈನಲ್​ನಲ್ಲಿ ಸೋಲಿನ ಭೀತಿಯಲ್ಲಿದ್ದ ಭಾರತಕ್ಕೆ ಅಪಾಯಕಾರಿ ಕ್ಲಾಸೆನ್​ ಮತ್ತು ಮಿಲ್ಲರ್​ ವಿಕೆಟ್​ ಭೇಟೆಯಾಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಎಲ್ಲ ಪ್ರದರ್ಶನದ ಫಲವಾಗಿ ಅವರು ಆಲ್​ರೌಂಡರ್​ಗಳ ಪಟ್ಟಿಯಲ್ಲಿ ಜಂಟಿ ಅಗ್ರಸ್ಥಾನ ಪಡೆದರು. ಲಂಕಾದ ವನಿಂದು ಹಸರಂಗ ಕೂಡ 222 ರೇಟಿಂಗ್​ ಅಂಕದೊಂದಿಗೆ ಅಗ್ರಸ್ಥಾನ ಪಡೆದರು.

ಬ್ಯಾಟಿಂಗ್​ ಶ್ರೇಯಾಂಕದಲ್ಲಿ ಯಾವುದೇ ಮಹತ್ವದ ಬದಲಾವಣೆ ಸಂಭವಿಸಿಲ್ಲ. ಈ ಹಿಂದೆ ಇದ್ದಂತೆ ಆಸ್ಟ್ರೇಲಿಯಾದ ಟ್ರಾವಿಸ್​ ಹೆಡ್​ ಅಗ್ರಸ್ಥಾನ, ಸೂರ್ಯಕುಮಾರ್ ಯಾದವ್​ ದ್ವಿತೀಯ ಸ್ಥಾನದಲ್ಲೇ ಮುಂದುವರಿದಿದ್ದಾರೆ. ಆದರೆ ಬೌಲಿಂಗ್​ ಶ್ರೇಯಾಂಕದಲ್ಲಿ ದಕ್ಷಿಣ ಆಫ್ರಿಕಾದ ಅನ್ರಿಚ್​ ನೋರ್ಜೆ ಬರೋಬ್ಬರಿ 7 ಸ್ಥಾನಗಳ ಪ್ರಗತಿ ಸಾಧಿಸಿ 2ನೇ ಸ್ಥಾನಕ್ಕೇರಿದ್ದಾರೆ. ಇಂಗ್ಲೆಂಡ್​ ಸ್ಪಿನ್ನರ್​ ಆದೀಲ್​ ರಶೀದ್​ ಮೊದಲ ಸ್ಥಾನಿಯಾಗಿದ್ದಾರೆ. ಭಾರತೀಯ ಬೌಲರ್​ಗಳಾದ ಅಕ್ಷರ್​ ಪಟೇಲ್​ 7ನೇ, ಕುಲ್​ದೀಪ್​ ಯಾದವ್​ 8ನೇ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ Hardik Pandya : ಭಾರತಕ್ಕೆ ಆಡುವುದೇ ಕನಸು; ಹಾರ್ದಿಕ್ ಪಾಂಡ್ಯನ ಹಳೆ ವಿಡಿಯೊ ವೈರಲ್​

ಟಾಪ್​-5 ಆಲ್​ರೌಂಡರ್​ಗಳು


1. ಹಾರ್ದಿಕ್​ ಪಾಂಡ್ಯ- 222 ರೇಟಿಂಗ್​ ಅಂಕ

2. ವನಿಂದು ಹಸರಂಗ-222 ರೇಟಿಂಗ್​ ಅಂಕ

3. ಮಾರ್ಕಸ್​ ಸ್ಟೋಯಿನಿಸ್​-211 ರೇಟಿಂಗ್​ ಅಂಕ

4. ಸಿಕಂದರ್​ ರಾಜಾ-210 ರೇಟಿಂಗ್​ ಅಂಕ

5. ಶಕೀಬ್​ ಅಲ್​ ಹಸನ್​-206 ರೇಟಿಂಗ್​ ಅಂಕ


ಟಿ20 ವಿಶ್ವಕಪ್​ ಟೂರ್ನಿ ಆರಂಭಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ(Hardik Pandya) ಅವರು ಪತ್ನಿ, ಸರ್ಬಿಯಾದ ನಟಿ ನತಾಶಾ ಸ್ಟಾನ್‌ಕೋವಿಕ್‌(Natasa Stankovic) ಅವರಿಗೆ ವಿಚ್ಛೇದನ ನೀಡಲಿದ್ದಾರೆ, ಜತೆಗೆ ವಿಚ್ಛೇದನ(Hardik Pandya and Natasa Stankovic divorce) ಪ್ರಕ್ರಿಯೆಯ ಭಾಗವಾಗಿ, ತಮ್ಮ ಆಸ್ತಿಯಲ್ಲಿ ಶೇ. 70 ರಷ್ಟು ಭಾಗವನ್ನು ನತಾಶಾಗೆ ವರ್ಗಾಯಿಸಬೇಕಿದೆ ಎನ್ನಲಾಗಿತ್ತು. ಈ ಎಲ್ಲ ಮಾತುಗಳ ಮಧ್ಯೆಯೂ ಪಾಂಡ್ಯ ದೇಶದ ಕರ್ತವ್ಯಕ್ಕೆ ಹಾಜರಾಗಿ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

Continue Reading

ಕ್ರೀಡೆ

James Anderson: 41ನೇ ವಯಸ್ಸಿನಲ್ಲಿಯೂ 7 ವಿಕೆಟ್​ ಕಿತ್ತ ಜೇಮ್ಸ್ ಆಂಡರ್ಸನ್

James Anderson: 2003ರಲ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಆ್ಯಂಡರ್ಸನ್‌, ಈವರೆಗೂ 187 ಪಂದ್ಯಗಳಲ್ಲಿ 700 ವಿಕೆಟ್‌ ಗಳಿಸಿದ್ದಾರೆ. ಶ್ರೀಲಂಕಾದ ಮುತ್ತಯ್ಯ ಮುರಳೀಧರನ್‌ ಹಾಗೂ ಆಸ್ಟ್ರೇಲಿಯಾದ ಶೇನ್‌ ವಾರ್ನ್‌ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದವರ ಸ್ಥಾನದಲ್ಲಿ ಆ್ಯಂಡರ್‌ಸನ್‌ ಇದ್ದಾರೆ

VISTARANEWS.COM


on

James Anderson
Koo

ಲಂಡನ್​: ವಿದಾಯದ ಸನಿಹದಲ್ಲಿರುವ ಇಂಗ್ಲೆಂಡ್​ ತಂಡದ ಹಿರಿಯ ವೇಗಿ ಜೇಮ್ಸ್ ಆಂಡರ್ಸನ್(James Anderson) ಅವರು ಪ್ರಸಕ್ತ ಸಾಗುತ್ತಿರುವ ಕೌಂಟಿ ಕ್ರಿಕೆಟ್​ ಟೂರ್ನಿಯಲ್ಲಿ ತಮ್ಮ ಕರಾರುವಾಕ್​ ಬೌಲಿಂಗ್​ ದಾಳಿಯ ಮೂಲಕ 7 ವಿಕೆಟ್​ ಕಿತ್ತು ಮಿಂಚಿದ್ದಾರೆ. 41ನೇ ವಯಸ್ಸಿನಲ್ಲಿಯೂ ಅವರ ಈ ಸಾಧನೆ ಯುವ ಆಟಗಾರರನ್ನು ಕೂಡ ನಾಚಿಸುವಂತೆ ಮಾಡಿದೆ.

ಈಗಾಗಲೇ ಕ್ರಿಕೆಟ್​ಗೆ ವಿದಾಯ ಘೋಷಿಸಿರುವ ಜೇಮ್ಸ್ ಆಂಡರ್ಸನ್, ಇದೇ ಜುಲೈನಲ್ಲಿ ನಡೆಯುವ ವೆಸ್ಟ್​ ಇಂಡೀಸ್​ ವಿರುದ್ಧದ ಟೆಸ್ಟ್​ ಸರಣಿಯ ಮೊದಲನೇ ಪಂದ್ಯ ಆಡುವ ಮೂಲಕ 20 ವರ್ಷಗಳ ತಮ್ಮ ಸುದೀರ್ಘ ಕ್ರಿಕೆಟ್‌ ಬದುಕಿಗೆ ತೆರೆ ಎಳೆಯಲಿದ್ದಾರೆ. ಸಾರ್ವಕಾಲಿಕ ಶ್ರೇಷ್ಠ ಬೌಲರ್‌ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ 41 ವರ್ಷದ ಆಂಡರ್ಸನ್, ಇಂಗ್ಲೆಂಡ್‌ ಪರ ಅತಿ ಹೆಚ್ಚು ವಿಕೆಟ್‌ ಪಡೆದುಕೊಂಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ 700ಕ್ಕೂ ಅಧಿಕ ವಿಕೆಟ್‌ ಪಡೆದ ಮೂವರು ಬೌಲರ್‌ಗಳ ಪೈಕಿ ಆಂಡರ್ಸನ್ ಕೂಡ ಒಬ್ಬರು. ವೇಗಿಗಳ ಪೈಕಿ ಮೊದಲಿಗ.

3 ತಿಂಗಳ ಹಿಂದೆ ಆ್ಯಂಡರ್ಸನ್​ ಅವರು ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ತಮ್ಮ ನಿವೃತ್ತಿಯನ್ನು ಘೋಷಿಸಿದ್ದರು. “ಎಲ್ಲರಿಗೂ ನಮಸ್ಕಾರ, ಈ ಬೇಸಿಗೆಯಲ್ಲಿ ಲಾರ್ಡ್ಸ್‌ನಲ್ಲಿ ನಡೆಯುವ ವೆಸ್ಟ್‌ ಇಂಡೀಸ್‌ ವಿರುದ್ಧದ ಮೊದಲ ಟೆಸ್ಟ್ ಪಂದ್ಯ, ನನ್ನ ಕೊನೆಯ ಪಂದ್ಯವಾಗಿರಲಿದೆ. ಬಾಲ್ಯದಿಂದ ಇಷ್ಟಪಟ್ಟಿದ ಆಟವನ್ನು ಆಡಲು, ನನ್ನ ದೇಶವನ್ನು ಪ್ರತಿನಿಧಿಸಿದ 20 ಅದ್ಭುತ ವರ್ಷಗಳಿವು. ಇಂಗ್ಲೆಂಡ್ ತಂಡಕ್ಕಾಗಿ ಆಡುವುದನ್ನು ನಾನು ಮಿಸ್‌ ಮಾಡಿಕೊಳ್ಳುತ್ತೇನೆ’ ಎಂದು ಬರೆದುಕೊಂಡಿದ್ದರು. ಜುಲೈ 10ರಿಂದ ವೆಸ್ಟ್‌ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ.

ಇದನ್ನೂ ಓದಿ James Anderson : ಕೋಚ್ ಒತ್ತಡಕ್ಕೆ ಮಣಿದು ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​

2003ರಲ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಆ್ಯಂಡರ್ಸನ್‌, ಈವರೆಗೂ 187 ಪಂದ್ಯಗಳಲ್ಲಿ 700 ವಿಕೆಟ್‌ ಗಳಿಸಿದ್ದಾರೆ. ಶ್ರೀಲಂಕಾದ ಮುತ್ತಯ್ಯ ಮುರಳೀಧರನ್‌ ಹಾಗೂ ಆಸ್ಟ್ರೇಲಿಯಾದ ಶೇನ್‌ ವಾರ್ನ್‌ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದವರ ಸ್ಥಾನದಲ್ಲಿ ಆ್ಯಂಡರ್‌ಸನ್‌ ಇದ್ದಾರೆ. 194 ಏಕದಿನ ಪಂದ್ಯಗಳನ್ನು ಆಡಿರುವ ಅವರು, 269 ವಿಕೆಟ್‌ಗಳನ್ನು ಪಡೆದಿದ್ದಾರೆ.

 ಆಸ್ಟ್ರೇಲಿಯಾದ ದಿವಂಗತ ಕ್ರಿಕೆಟಿಗ ಶೇನ್​ ವಾರ್ನ್ ಅವರು 708 ಟೆಸ್ಟ್​ ವಿಕೆಟ್ ಕಿತ್ತು ದ್ವಿತೀಯ ಸ್ಥಾನಿಯಾಗಿದ್ದಾರೆ. ಆ್ಯಂಡರ್ಸನ್​ಗೆ ವಾರ್ನ್ ಅವರ ಟೆಸ್ಟ್​​ ವಿಕೆಟ್​ ದಾಖಲೆ ಮುರಿಯುವು ಕಷ್ಟವಾಗದು. ಏಕೆಂದರೆ ಅವರು ಇನ್ನೊಂದು ವರ್ಷ ಕ್ರಿಕೆಟ್​ ಆಡಿದರೂ ಈ ದಾಖಲೆ ಮುರಿಯಬಹುದು. ಈ ದಾಖಲೆಯನ್ನು ಮುರಿಯಲು ಅವರಿಗೆ ಬೇಕಿರುವುದು 8 ವಿಕೆಟ್. ವಿಂಡೀಸ್​ ವಿರುದ್ಧದ ಪಂದ್ಯದಲ್ಲಿ ಈ ಸಾಧನೆ ಮಾಡುವ ಅವಕಾಶ ಅವರಿಗಿದೆ.

Continue Reading

ಕ್ರೀಡೆ

IPL 2025: ಮುಂದಿನ ವರ್ಷ ಆರ್​ಸಿಬಿಗೆ ವಿರಾಟ್​ ಕೊಹ್ಲಿ ನಾಯಕ?

IPL 2025: ಟಿ20ಗೆ ನಿವೃತ್ತಿ ಹೇಳಿ ಎಲ್ಲ ಒತ್ತಡ ಕಡಿಮೆ ಮಾಡಿರುವ ಕೊಹ್ಲಿ ಮತ್ತೆ ನಾಯಕನಾದರೂ ಅಚ್ಚರಿಯಿಲ್ಲ. ಸದ್ಯದ ಮಾಹಿತಿ ಪ್ರಕಾರ ಕೊಹ್ಲಿ ನಾಯಕನಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬಂದರೂ ಕೂಡ ಕೊಹ್ಲಿ ಇದಕ್ಕೆ ಒಪ್ಪಲಿದ್ದಾರಾ ಎನ್ನುವುದು ಕುತೂಹಲ.

VISTARANEWS.COM


on

IPL 2025
Koo

ಬೆಂಗಳೂರು: ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿರುವ ವಿರಾಟ್​ ಕೊಹ್ಲಿ(Virat Kohli) ಅವರು ಮತ್ತೆ ಐಪಿಎಲ್​ನಲ್ಲಿ ಆರ್​ಸಿಬಿ ತಂಡದ ನಾಯಕನಾಗಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಇದು ಆರ್​ಸಿಬಿ ಮತ್ತು ಕೊಹ್ಲಿ ಅಭಿಮಾನಿಗಳಿಗೆ ಕುತೂಹಲ ಮೂಡಿಸುವಂತೆ ಮಾಡಿದೆ.

ಮುಂದಿನ ವರ್ಷ ಮೆಗಾ ಹರಾಜು ಕೂಡ ನಡೆಯಲಿದೆ. (IPL 2025)​ 18ನೇ ಆವೃತ್ತಿಯಲ್ಲಿ ಬೆಂಗಳೂರು ತಂಡದಲ್ಲಿ ಕೂಡ ದೊಡ್ಡ ಬದಲಾವಣೆಯೊಂದು ಸಂಭವಿಸುವ ಮುನ್ಸೂಚನೆಯೊಂದು ಲಭಿಸಿದೆ. ಈ ಹಿಂದೆ ತಂಡದ ನಾಯಕನಾಗಿದ್ದ ದಕ್ಷಿಣ ಆಫ್ರಿಕಾದ ಡುಪ್ಲೆಸಿಸ್​ ಅವರನ್ನು ಕೈ ಬಿಟ್ಟು ಮಾಜಿ ನಾಯಕ ವಿರಾಟ್​ ಕೊಹ್ಲಿ(Virat Kohli)ಗೆ ಮತ್ತೆ ನಾಯಕತ್ವ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ವಿರಾಟ್​ ಕೊಹ್ಲಿ ಅವರು ಭಾರತ ತಂಡದ ಮೂರು ಮಾದರಿಯ ನಾಯಕತ್ವ ವಹಿಸಿಕೊಂಡಿದ್ದ ವೇಳೆ ಐಪಿಎಲ್​ನಲ್ಲಿಯೂ ತಂಡವನ್ನು ಮುನ್ನಡೆಸುವುದು ಕಷ್ಟವಾಗುತ್ತದೆ, ಕೆಲಸದ ಒತ್ತಡದಿಂದಾಗಿ ಆಟದ ಕಡೆ ಸರಿಯಾಗಿ ಗಮನ ಕೊಡಲು ಸಾಧ್ಯವಾಗುತ್ತಿಲ್ಲ ಎಂದು ಐಪಿಎಲ್​ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಸೂಕ್ತ ನಾಯಕನ ಸ್ಥಾನಕ್ಕೆ ಚೆನ್ನೈ ತಂಡದಲ್ಲಿದ್ದ ಫಾಫ್​ ಡುಪ್ಲೆಸಿಸ್​ ಅವರನ್ನು ಖರೀದಿ ಮಾಡಿ ಅವರಿಗೆ ನಾಯಕತ್ವ ನೀಡಲಾಗಿತ್ತು.

ಕಳೆದ ಮೂರು ಸೀಸನ್​ನಲ್ಲಿ ಡುಪ್ಲೆಸಿಸ್ ಆರ್​ಸಿಬಿ ತಂಡವನ್ನು ಮುನ್ನಡೆಸಿದರೂ ತಂಡದ ಭವಿಷ್ಯ ಮಾತ್ರ ಬದಲಾಗಲಿಲ್ಲ. ಕಳೆದ ಬಾರಿಯಂತೂ ಲೀಗ್​ನಿಂದಲೇ ಹೊರಬಿದ್ದಿತ್ತು. ಇದೀಗ ಟಿ20ಗೆ ನಿವೃತ್ತಿ ಹೇಳಿ ಎಲ್ಲ ಒತ್ತಡ ಕಡಿಮೆ ಮಾಡಿರುವ ಕೊಹ್ಲಿ ಮತ್ತೆ ನಾಯಕನಾದರೂ ಅಚ್ಚರಿಯಿಲ್ಲ. ಸದ್ಯದ ಮಾಹಿತಿ ಪ್ರಕಾರ ಕೊಹ್ಲಿ ನಾಯಕನಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬಂದರೂ ಕೂಡ ಕೊಹ್ಲಿ ಇದಕ್ಕೆ ಒಪ್ಪಲಿದ್ದಾರಾ ಎನ್ನುವುದು ಕುತೂಹಲ. ಈ ಐಪಿಎಲ್​ನಲ್ಲಿ ಕೊಹ್ಲಿ ಪ್ರಚಂಡ ಬ್ಯಾಟಿಂಗ್​ ಮೂಲಕ 700ಕ್ಕೂ ಅಧಿಕ ರನ್​ ಕಲೆ ಹಾಕಿ ಟೂರ್ನಿಯ ಅತ್ಯಧಿಕ ಸ್ಕೋರ್​ ಎನಿಸಿಕೊಂಡಿದ್ದರು.

ಇದನ್ನೂ ಓದಿ Virat Kohli: ಬುರ್ಜ್‌ ಖಲೀಫಾದಲ್ಲಿ ಕಣ್ಮನ ಸೆಳೆದ ವಿರಾಟ್​ ಕೊಹ್ಲಿಯ ಫೋಟೊ; ವಿಡಿಯೊ ವೈರಲ್​

ಕನ್ನಡಿಗ ಕೆ.ಎಲ್​ ರಾಹುಲ್​ ಕೂಡ ಆರ್​ಸಿಬಿ ತಂಡಕ್ಕೆ ಬರಲಿದ್ದಾರೆ ಎನ್ನುವ ಮಾತುಗಳು ಕೂಡ ಕೆಲ ತಿಂಗಳಿನಿಂದ ಕೇಳಿರುತ್ತಿದೆ. ಒಂದೊಮ್ಮೆ ಕೊಹ್ಲಿ ನಾಯಕನ ಸ್ಥಾನ ತಿರಸ್ಕರಿಸಿದರೆ, ರಾಹುಲ್​ ಆರ್​ಸಿಬಿ ಸೇರಿದರೆ ನಾಯಕತ್ವ ಅವರ ಪಾಲಾಗುವು ಸಾಧ್ಯತೆ ಇದೆ.

ಕೊಹ್ಲಿಯ ನಾಕಯತ್ವ ಸಾಧನೆ ಹೇಗಿದೆ?

ವಿರಾಟ್​ ಕೊಹ್ಲಿ 2013ರಲ್ಲಿ ಆರ್​ಸಿಬಿಯ ಪೂರ್ಣ ಪ್ರಮಾಣದ ನಾಯಕನಾಗಿ ನೇಮಕಗೊಂಡಿದ್ದರು. 2021ರ ತನಕ ಅವರು ಆರ್​ಸಿಬಿಯನ್ನು ಮುನ್ನಡೆಸಿದ್ದರು. ಕೊಹ್ಲಿ ನಾಯಕತ್ವದಲ್ಲಿ ಒಟ್ಟು 140 ಪಂದ್ಯಗಳನ್ನು ಆಡಿದ್ದ ಆರ್​​ಸಿಬಿ 66 ಪಂದ್ಯಗಳನ್ನು ಜಯಿಸಿದೆ. 70 ಪಂದ್ಯಗಳಲ್ಲಿ ಸೋಲು ಕಂಡಿದೆ. ಐಪಿಎಲ್​ ಇತಿಹಾಸದಲ್ಲಿ ವಿನ್ನಿಂಗ್ಸ್​ ಸರಾಸರಿಯಲ್ಲಿ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಅವರ ನಾಯಕತ್ವದ ಸರಾಸರಿ ಗೆಲುವು ಶೇ. 46.15 ರಷ್ಟಿದೆ. ದಾಖಲೆ ಧೋನಿ ಹೆಸರಿನಲ್ಲಿದೆ. ಧೋನಿ ನಾಯಕತ್ವದ ಗೆಲುವಿನ ಸರಾಸರಿ 60.38 ರಷ್ಟಿದೆ.

Continue Reading
Advertisement
MUDA site scandal
ಕರ್ನಾಟಕ7 mins ago

MUDA site scandal: ಮುಡಾ ಸೈಟ್ ಅಕ್ರಮ; ನಾನು ಯಾಕಪ್ಪ ರಾಜೀನಾಮೆ ಕೊಡಲಿ, ನನ್ನ ಪಾತ್ರ ಏನಿದೆ ಎಂದ ಸಿಎಂ!

Kannada New Movie Odo Odo Odo Kailash Kher
ಸಿನಿಮಾ24 mins ago

Kannada New Movie: ‘ಫಾರೆಸ್ಟ್’ ಸಿನಿಮಾದ ಮೊದಲ ಹಾಡು ರಿಲೀಸ್!

Team India
ಕ್ರೀಡೆ28 mins ago

T20 World Cup Winners: ಟಿ20 ವಿಶ್ವಕಪ್​ ಗೆದ್ದ ಭಾರತ ತಂಡಕ್ಕೆ ನಾಳೆ ಮುಂಬೈಯಲ್ಲಿ ಅದ್ಧೂರಿ ಸ್ವಾಗತ

Money Guide
ಮನಿ-ಗೈಡ್32 mins ago

Money Guide: ಮಗುವಿನ ಬರ್ತ್‌ಡೇಗೆ ಒಂದೊಳ್ಳೆ ಉಡುಗೊರೆ ನೀಡಬೇಕೆ? ಬಾಲ ಜೀವನ್ ಬಿಮಾ ಯೋಜನೆಯಲ್ಲಿ ಹೂಡಿಕೆ ಮಾಡಿ

Kangana Ranaut
ದೇಶ40 mins ago

Kangana Ranaut: ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕಾನ್‌ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

Samrat Choudhary
ಪ್ರಮುಖ ಸುದ್ದಿ43 mins ago

Samrat Choudhary: ಅಯೋಧ್ಯೆಯಲ್ಲಿ ತಲೆ ಬೋಳಿಸಿಕೊಂಡು ರಾಮನಿಗೆ ಪೇಟ ಅರ್ಪಿಸಿದ ಬಿಹಾರ ಡಿಸಿಎಂ! ಇದಕ್ಕಿದೆ ವಿಶೇಷ ಕಾರಣ!

Viral Video
Latest52 mins ago

Viral Video: ರಜೆಯಲ್ಲೂ ಮಗುವಿನ ಹೋಮ್‌ ವರ್ಕ್ ನೋಡಿ ಸಿಟ್ಟಾದ ತಾಯಿ ಮಾಡಿದ್ದೇನು? ವಿಡಿಯೊ ನೋಡಿ!

Ram charan the Indian House on set
ಟಾಲಿವುಡ್58 mins ago

Ram Charan: ಹಂಪಿ ವಿರೂಪಾಕ್ಷ ಸನ್ನಿಧಿಯಲ್ಲಿ ಸೆಟ್ಟೇರಿತು ರಾಮ್ ಚರಣ್ ನಿರ್ಮಾಣದ ಸಿನಿಮಾ!

Family drama Kannada movie song
ಕರ್ನಾಟಕ1 hour ago

Kannada New Movie: ಸಿನಿಪ್ರಿಯರ ಗಮನ ಸೆಳೆಯುತ್ತಿದೆ ‘ಫ್ಯಾಮಿಲಿ ಡ್ರಾಮ’ ಸಿನಿಮಾದ ಸಾಂಗ್!

Suraj Revanna Case
ಕರ್ನಾಟಕ1 hour ago

Suraj Revanna Case: ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ22 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌