ರೈತರನ್ನು ಆಕರ್ಷಿಸುತ್ತಿರುವ ಹೊಸ ಬೆಳೆ ಡ್ರ್ಯಾಗನ್‌ ಫ್ರೂಟ್‌ - Vistara News

ಕೃಷಿ

ರೈತರನ್ನು ಆಕರ್ಷಿಸುತ್ತಿರುವ ಹೊಸ ಬೆಳೆ ಡ್ರ್ಯಾಗನ್‌ ಫ್ರೂಟ್‌

ವಿದೇಶಿ ಮೂಲದ ಹಣ್ಣು ಡ್ರ್ಯಾಗನ್‌ ಫ್ರೂಟ್‌ ಈಗ ರೈತರಿಗೆ ಹೆಚ್ಚಿನ ಲಾಭ ತಂದುಕೊಡುವ ಮೂಲಕ ಬರಡು ನಾಡಿನ ರೈತರನ್ನು ಬಹಳವಾಗಿ ಆಕರ್ಷಿಸುತ್ತಿದೆ.

VISTARANEWS.COM


on

ಡ್ರ್ಯಾಗನ್‌ ಫ್ರೂಟ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೆಲವೊಮ್ಮೆ ದಿಕ್ಕು ತಪ್ಪಿಬೇರೆ ದಾರಿಯಲ್ಲಿ ಸಾಗಿದಾಗ ಜೀವನದ ದಿಕ್ಕೇ ಬದಲಾಗುವ ಸಾಧ್ಯತೆ ಇರುತ್ತದೆ! ಇದಕ್ಕೆ ಉದಾಹರಣೆ ಎಂದರೆ ಪಂಜಾಬ್‌ನ ಯುವ ರೈತ ಅಮನ್‌ದೀಪ್‌ ಸಿಂಗ್‌ ಸರಾವೊ.

23 ವರ್ಷದ  ಯುವ ರೈತ ಅಮನ್‌ದೀಪ್‌ ಸಿಂಗ್‌ ಗೆಳೆಯರೊಂದಿಗೆ ಗುಜರಾತ್‌ ಪ್ರವಾಸ ಕೈಗೊಂಡಿದ್ದರು. ಅವರಿದ್ದ ಕಾರು ಹೋಗಬೇಕಾದ ದಾರಿಬಿಟ್ಟು ಬೇರೆ ದಾರಿ ಹಿಡಿದಿತ್ತು. ಹೀಗೆ ದಿಕ್ಕು ತಪ್ಪಿ ಸಾಗುತ್ತಿದ್ದ ಅಮನ್‌ದೀಪ್‌ಗೆ  ರಸ್ತೆ ಬದಿಯಲ್ಲಿ ಬೆಳೆಯಲಾಗಿದ್ದ ಕಳ್ಳಿ ರೀತಿಯ ಗಿಡ ಕಣ್ಣಿಗೆ ಬಿತ್ತು. ಅದರಲ್ಲಿನ ಗುಲಾಬಿ ಬಣ್ಣದ ಹಣ್ಣುಗಳು ಆಕರ್ಷಿಸಿದವು.  ʼಏನಿರ ಬಹುದು ಇದು?ʼ ಎಂಬ ಕುತೂಹಲ. ಕಾರು ನಿಲ್ಲಿಸಿ ಕೆಳಗಿಳಿದು ನೋಡಿದರು, ಗೊತ್ತಾಗಲಿಲ್ಲ. ಪಂಜಾಬ್‌ನಲ್ಲಿ ಅವರು ಈ ರೀತಿಯ ಬೆಳೆ ನೋಡಿರಲಿಲ್ಲ. ಕೊನೆಗೆ ಅದನ್ನು ಬೆಳೆಯುತ್ತಿದ್ದ ರೈತರನ್ನೇ ಕೇಳಿದರು. ಆಗ ಅವರು ಹೇಳಿದ್ದು, ʼಇದು ಡ್ರ್ಯಾಗನ್‌ ಫ್ರೂಟ್‌ʼ!

ಕಡಿಮೆ ಮಳೆ ಬೀಳುವ ಪ್ರದೇಶದಲ್ಲಿ ಚೆನ್ನಾಗಿ ಬೆಳೆಯುವ ಅಮೆರಿಕ ಮೂಲದ ಈ ಹಣ್ಣು ಅಮನ್‌ ದೀಪ್‌ ಅವರ ಜೀವನದ ದಿಕ್ಕನೇ ಬದಲಾಯಿಸುತ್ತದೆ ಎಂದು ಅಂದು ಅವರೂ ಯೋಚಿಸಿರಲಿಲ್ಲ!

ಗುಜರಾತ್‌ ಪ್ರವಾಸದ ಸಂದರ್ಭದಲ್ಲಿ ಅವರು ಈ ಹಣ್ಣು ಬೆಳೆಯುವ ಇನ್ನಷ್ಟು ರೈತರನ್ನು ಭೇಟಿಯಾಗಿ ಮಾಹಿತಿ ಪಡೆದುಕೊಂಡರು.  ಯೂಟ್ಯೂಬ್‌, ಸಾಮಾಜಿಕ ಜಾಲತಾಣಗಳನ್ನು ಜಾಲಾಡಿ, ಈ ಹಣ್ಣಿನ ಬೆಳೆಯುವುದು ಹೇಗೆಂದು ತಿಳಿದುಕೊಂಡರು. ಭಾರತದಲ್ಲಿ ಹಾಗೂ ನಮ್ಮ ನೆರೆ-ಹೊರೆ ದೇಶಗಳಲ್ಲಿ ಆರೋಗ್ಯಕ್ಕೆ ಅತ್ಯುಪಯುಕ್ತವಾದ ಈ ಹಣ್ಣು ಬೆಳೆಯಲಾಗುತ್ತಿದೆ. ಇದು ಬರಡುನಾಡಿನಲ್ಲಿ ಬೆಳೆಯಬಹುದಾದ ʼಬಂಗಾರʼ ಎಂಬುದು ಅವರಿಗೆ ಮನದಟ್ಟಾಗಿತ್ತು. ಮಾರುಕಟ್ಟೆಯಲ್ಲಿ ವಿಚಾರಿಸಿದರು, ಒಂದು ಕೆಜಿ ಡ್ರ್ಯಾಗನ್‌ ಫ್ರೂಟ್‌ಗೆ 200 ರಿಂದ 300  ರೂ. ಬೆಲೆಯಿದೆ ಎಂದು ಗೊತ್ತಾಯಿತು.

ಡ್ರ್ಯಾಗನ್‌ ಫ್ರೂಟ್‌
ಡ್ರ್ಯಾಗನ್‌ ಫ್ರೂಟ್‌ ಗಿಡ

ಮಹಾರಾಷ್ಟ್ರ, ಹೈದರಾಬಾದ್‌ ನಲ್ಲಿಯೂ ಇದನ್ನು ಬೆಳೆಯಲಾಗುತ್ತಿದೆ ಎಂಬ ಮಾಹಿತಿ ಕಲೆ ಹಾಕಿದರು. ಕುತೂಹಲಕ್ಕೆ ಆರಂಭವಾದ ಹೊಸ ಬೆಳೆಯ ಕುರಿತ ಅವರ ಹುಡುಕಾಟ ಕೊನೆಗೆ “ ನಾವೇಕೆ ಈ ಬೆಳೆ ಬೆಳೆಯಬಾರದು” ಎಂಬ ಪ್ರಶ್ನೆ ಹುಟ್ಟಲು ಕಾರಣವಾಯಿತು. ಪಂಜಾಬ್‌ನಲ್ಲಿದ್ದ ತಮ್ಮ 2 ಎಕರೆ ಹೊಲದಲ್ಲಿ ಪ್ರಯೋಗ ಆರಂಭಿಸಿಯೇ ಬಿಟ್ಟರು. ಬೆಳೆ ಬಿತ್ತಿದ ಮಾತ್ರಕ್ಕೆ ಫಸಲು ಬರಲು ಅದೇನು ಸಾಂಪ್ರದಾಯಿಕ ಬೆಳೆಯಾಗಿರಲಿಲ್ಲ.

ನೀರೋ, ಗೊಬ್ಬರವೋ, ಹವಮಾನವೋ ಹೆಚ್ಚು ಕಡಿಮೆಯಾಗಿ ಡ್ರ್ಯಾಗನ್‌ ಫ್ರೂಟ್‌ ಗಿಡ ಮೇಲೇಳಲೇ ಇಲ್ಲ. ಆದರೆ ಅಮನ್‌ದೀಪ್‌ ಸಿಂಗ್‌ ನಿರಾಶರಾಗಿ ಕೈಕಟ್ಟಿ ಕೂರಲಿಲ್ಲ. ಕಾರಣ ಹುಡುಕಲು ಮತ್ತೆ ಈ ಬೆಳೆ ಬೆಳೆಯುತ್ತಿದ್ದವರನ್ನು ಸಂಪರ್ಕಿಸಿದರು, ನೀವೇಷ್ಟು ಗೊಬ್ಬರ ಹಾಕುತ್ತೀರಿ, ಎಷ್ಟು ನೀರು ಒದಗಿಸುತ್ತೀರಿ ಎಂದೆಲ್ಲಾ ಕೇಳಿ ತಿಳಿದುಕೊಂಡರು ಒಂದಲ್ಲ, ಎರಡಲ್ಲ, ಮೂರು ವರ್ಷಗಳಾದ ನಂತರ ಡ್ರ್ಯಾಗನ್‌ ಫ್ರೂಟ್‌ ಅವರ ಕೈ ಹಿಡಿಯಿತು. ʼʼನಮ್ಮಲ್ಲಿ ಜಾಸ್ತಿ ರಾಸಾಯನಿಕ ಗೊಬ್ಬರ ಬಳಸುತ್ತಿದ್ದೆವು. ಕೊನೆಗೆ ಈ ಬೆಳೆ ಬೆಳೆಯುತ್ತಿದ್ದ ರೈತರ ಸಲಹೆಯಂತೆ ಸಾವಯವ ಪದ್ಧತಿಯನ್ನುಅಳವಡಿಸಿಕೊಂಡು ಗೆದ್ದೆʼʼ ಎನ್ನುತ್ತಾರೆ ಅಮನ್‌ದೀಪ್‌ ಸಿಂಗ್‌.

ಈಗ ಅವರು 12 ರೀತಿಯ ಡ್ರ್ಯಾಗನ್‌ ಫ್ರೂಟ್‌ ಬೆಳೆಯುತ್ತಿದ್ದಾರೆ. ಎಕರೆಗೆ ಏನಿಲ್ಲವೆಂದರೂ ನಾಲ್ಕು ಲಕ್ಷ ರೂ. ಲಾಭ ಬರುತ್ತಿದೆ. ಮುಂದೆ ಡ್ರ್ಯಾಗನ್‌ ಫ್ರೂಟ್‌ ಗಿಡ ದೊಡ್ಡದಾದ ಮೇಲೆ ಲಾಭ ಇನ್ನಷ್ಟು ಹೆಚ್ಚಬಹುದು ಎನ್ನುತ್ತಾರೆ ಅವರು. ಸೋಲುಗಳು ಎದುರಾದರೂ ಈ ಹಣ್ಣನ್ನು ಬೆಳೆಯಲೇಬೇಕೆಂಬ ಚಲ ಅವರನ್ನು ಕೊನೆಗೂ ಗೆಲ್ಲಿಸಿದೆ.

ಏನಿದು ಡ್ರ್ಯಾಗನ್‌ ಫ್ರೂಟ್‌?

ಡ್ರ್ಯಾಗನ್‌ ಫ್ರೂಟ್‌

ಡ್ರ್ಯಾಗನ್‌ ಫ್ರೂಟ್‌ ಎಂದ ಕೂಡಲೇ ಎಲ್ಲರೂ ಇದು ಚೀನಾದ ಹಣ್ಣಿರಬೇಕೆಂದು ಕೊಳ್ಳುತ್ತಾರೆ. ಆದರೆ ಖಂಡಿತಾ ಇದಕ್ಕೂ ಚೀನಾಕ್ಕೂ ಸಂಬಂಧವಿಲ್ಲ. ಚೀನಿಯರ ಕಾಲ್ಪನಿಕ, ಬೆಂಕಿಯನ್ನುಗುಳುವ ಪ್ರಾಣಿ ಡ್ರ್ಯಾಗನ್‌ನಂತೆ ಇದು ಕೂಡ ಆಕರ್ಷಣೀಯವಾಗಿರುವುದರಿಂದ ಇದಕ್ಕೆ ಈ ಹೆಸರು ಬಂದಿದೆ ಎಂದು ಹೇಳಲಾಗುತ್ತದೆ. ಹೆಚ್ಚಾಗಿ ಮೆಕ್ಸಿಕೋ, ವಿಯೆಟ್ನಾಂ, ಥೈಲ್ಯಾಂಡ್ ದೇಶಗಳಲ್ಲಿ ಬೆಳೆದು ರಫ್ತು ಮಾಡಲಾಗುತ್ತದೆ. ಗುಲಾಬಿ ಬಣ್ಣದ ಈ ಹಣ್ಣು ಬಿಳಿ ಮತ್ತು ಕಪ್ಪು ಬೀಜಗಳನ್ನು ಹೊಂದಿರುತ್ತದೆ. ಹಸಿರು ಎಲೆಗಳ ನಡುವಿನ ಈ ಹಣ್ಣು ಎಲ್ಲರನ್ನೂ ಆಕರ್ಷಿಸುತ್ತದೆ. ಬೇಸಿಗೆಯಲ್ಲಿ ದೇಹವನ್ನು ತಂಪಾಗಿಸುವ  ಈ ಹಣ್ಣು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಒಂದು ಹಣ್ಣಿನಲ್ಲಿ 1.2 ಗ್ರಾಂ ಪ್ರೋಟಿನ್‌ ಇರುತ್ತದೆ. ಜತೆಗೆ 3 ಗ್ರಾಂ ಫೈಬರ್‌, ವಿಟಮಿನ್‌ ಸಿ, ಕಬ್ಬಿಣ, ಮ್ಯಾಗ್ನೀಷಿಯಂ ಅನ್ನು ಹೊಂದಿರುತ್ತದೆ.  ಸಕ್ಕರೆ ಕಾಯಿಲೆ, ಹೃದಯ ಸಂಬಂಧಿ ಕಾಯಿಲೆ, ಗ್ಯಾಸ್ಟ್ರಿಕ್‌, ಅಜೀರ್ಣತೆ  ಸೇರಿದಂತೆ ಹಲವು ಕಾಯಿಲೆಗಳಿಗೆ ಈ ಹಣ್ಣು ರಾಮ ಬಾಣವಾಗಿದೆ. ಅಲ್ಲದೆ ಇದರ ಸಿಪ್ಪೆ  ಚರ್ಮ ಕಾಯಿಲೆ ಗುಣಪಡಿಸುವ ಶಕ್ತಿ ಹೊಂದಿರುತ್ತದೆ. ಸಾಮಾನ್ಯವಾಗಿ ಎಲ್ಲ ಸೂಪರ್‌ ಮಾರುಕಟ್ಟೆಯಲ್ಲಿ ಸ್ವಲ್ಪ ಹುಳಿ ಮತ್ತು ಸಿಹಿಯನ್ನು ಹೊಂದಿರುವ ಈ ಹಣ್ಣು ದೊರೆಯುತ್ತದೆ.

ನಮ್ಮಲ್ಲಿಯೂ ಬೆಳೆಯುತ್ತಾರೆ!

ಡ್ರ್ಯಾಗನ್‌ ಫ್ರೂಟ್‌ ರಾಜ್ಯದ ಮಟ್ಟಿಗೆ ಹೊಚ್ಚ ಹೊಸ ಬೆಳೆಯೇನೂ ಅಲ್ಲ. ಈಗಾಗಲೇ ಅಮನ್‌ದೀಪ್‌ ಸಿಂಗ್‌ರಂತೆ ರಾಜ್ಯ ಅನೇಕ ರೈತರು ಇದನ್ನು ಬೆಳೆದು ಯಶಸ್ವಿಯಾಗಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಲು ತಾಲೂಕಿನ ಗುಮ್ಮಕಲ್‌ ಗ್ರಾಮದ ರೈತ ರಾಮರೆಡ್ಡಿ, ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಜಂಬುನಾಥನಹಳ್ಳಿಯ ರೈತ ರಾಜಶೇಖರ ದ್ರೋಣವಲ್ಲಿ ಸೇರಿದಂತೆ ಗದಗ, ದಾವಣಗೆರೆ, ತುಮಕೂರಿನಲ್ಲಿ ಅನೇಕ ರೈತರು ಈಗಾಗಲೇ ಗುಲಾಬಿ ಬಣ್ಣದ ಈ ಹಣ್ಣನ್ನು ಬೆಳೆಯುತ್ತಿದ್ದಾರೆ.

ಇದನ್ನೂ ಓದಿ | ಮಾವು ನೋಡಿದರೆ ಸಿಹಿ.. ಬೆಲೆ ಕೇಳಿದರೆ  ಕಹಿ..

ತುಮಕೂರಿನ ಹಿರೇಹಳ್ಳಿಯಲ್ಲಿರುವ ಭಾರತೀಯ ತೋಟಗಾರಿಕಾ ಸಂಸ್ಥೆ (ಸಿಎಚ್‌ಇಎಸ್‌) ಡ್ರ್ಯಾಗನ್‌ ಫ್ರುಟ್‌ ಬೆಳೆಯಲು ರೈತರನ್ನು ಆಕರ್ಷಿಸುತ್ತಿದೆ. ಈ ಕೇಂದ್ರದಲ್ಲಿ 1 ಎಕರೆಯಲ್ಲಿ ಡ್ರ್ಯಾಗನ್‌ ಹಣ್ಣಿನ ಬೇಸಾಯದ ಸಂಶೋಧನೆ ನಡೆಸಲಾಗುತ್ತಿದ್ದು, ಪ್ರತಿ ವರ್ಷ ಕ್ಷೇತ್ರೋತ್ಸವ ನಡೆಸಿ ಈ ಹಣ್ಣಿನ ಬೆಳೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. (ಸಂಶೋಧನಾ ಕೇಂದ್ರದ ಮಾಹಿತಿಗೆ ವೆಬ್‌: https://www.iihr.res.in/)

ಮರಳು ಮಿಶ್ರಿತ, ಕಡಿಮೆ ನೀರಿರುವ ಮಣ್ಣಿನಲ್ಲಿ ಈ ಬೆಳೆ ಚೆನ್ನಾಗಿ ಬೆಳೆಯುತ್ತದೆ. ಒಮ್ಮೆ ನಿಟ್ಟರೆ ಈ ಗಿಡ ಸುಮಾರು 20 ವರ್ಷ ಹಣ್ಣು ಬಿಡುತ್ತಿರುತ್ತದೆ.  ಉಷ್ಣವಲಯದ ಹವಾಮಾನಕ್ಕೆ 40-60 ಸೆಂ.ಮೀ ವಾರ್ಷಿಕ ಮಳೆಯೊಂದಿಗೆ ಬೆಳವಣಿಗೆಗೆ ಸೂಕ್ತವಾಗಿರುತ್ತದೆ. 20°C- 30°C ವರೆಗಿನ ತಾಪಮಾನವು ಬೆಳೆ ಬೆಳೆಯಲು ಉತ್ತಮವೆಂದು ಪರಿಗಣಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕೃಷಿ

Arecanut Price: ಅಡಿಕೆ ಧಾರಣೆ ನಿರೀಕ್ಷೆ ಮೀರಿ ಏರಲಿದೆ! ಇದು ರೈತರ ‘ನಂಬಿಕೆ’ ಮತ್ತು ‘ಅಭಿಪ್ರಾಯ’ಗಳ ಎಕ್ಸಿಟ್ ಪೋಲ್!

Arecanut Price: ಅಡಿಕೆ ಬೆಳೆಗಾರರ ನಿರೀಕ್ಷೆ, ಸಮೀಕ್ಷೆ, ಪರೀಕ್ಷೆಗಳ ಲೆಕ್ಕಾಚಾರಕ್ಕೆ ‘ಯಾಕೆ ಹೀಗೆ ಅನ್ನುವ’ ಪ್ರಶ್ನೆಗೆ ಅಡ್ಡ ಬಂದಿದ್ದು ಈ ಬಾರಿಯ ಲೋಕಸಭಾ ಚುನಾವಣೆ!!ಈಗ ಅದೂ ಮುಗಿದು, ಪಲಿತಾಂಶಕ್ಕೆ ಕಾಯುತ್ತಿರುವಾಗ, ಅಡಿಕೆ ದರ ಮೇಲ್ಮುಖವಾಗಿದೆ. ಪುನಃ ₹.55,000 ಗಡಿ ಸಮೀಪ ಬಂದಿದೆ.
ನೀತಿ ಸಂಹಿತೆಯ ಬ್ಯಾರಿಕೇಡ್‌ಗಳು ತೆರವುಗೊಂಡ ಮೇಲೆ ಅಡಿಕೆ ಧಾರಣೆ ಗಣನೀಯವಾಗಿ ಏರಬಹುದು ಎಂದು ಲೆಕ್ಕಾಚಾರದಲ್ಲಿ ರೈತರು ಕಾಯುತ್ತಿದ್ದಾರೆ.

VISTARANEWS.COM


on

Arecanut Price
Koo

-ಅರವಿಂದ ಸಿಗದಾಳ್, ಮೇಲುಕೊಪ್ಪ
ಬೆಂಗಳೂರು: ಜುಲೈ ಕೊನೆಯಲ್ಲಿ ಬಯಲು ಸೀಮೆಯ ಅಡಿಕೆ ಬರಲು ಪ್ರಾರಂಭವಾಗುವ ಕಾಲ. ಆಗಸ್ಟ್‌ನಿಂದ ಸಹಜವಾಗಿ ಅಡಿಕೆ ಪ್ರಮಾಣ ಮಾರುಕಟ್ಟೆಗೆ ಬರುವುದು ಹೆಚ್ಚುವುದರಿಂದ ಅಡಿಕೆ ಧಾರಣೆ ಇಳಿಯಲು ಪ್ರಾರಂಭವಾಗುತ್ತದೆ. ಕಳೆದ ವರ್ಷ ಜುಲೈ‌ನಲ್ಲಿ ₹ 55,000 ದಾಟಿದ ಅಡಿಕೆ ದರ, ಸೆಪ್ಟೆಂಬರ್‌ನಲ್ಲಿ ₹.50,000 ಕ್ಕಿಂತ ಕೆಳಕ್ಕೆ ಬರಲು ಪ್ರಾರಂಭವಾಯಿತು. ಇಳಿದ ಅಡಿಕೆ ಧಾರಣೆ ₹ 47,000 ದಲ್ಲಿ ಕೆಲಕಾಲ ಸ್ಥಿರತೆಯಲ್ಲಿ ಉಳಿದಿತ್ತು. ಈ ವರ್ಷ ಮೇ ತಿಂಗಳ ಪ್ರಾರಂಭದಲ್ಲಿ ₹ 55,000 ದ ಸಮೀಪಕ್ಕೆ ಏರಿ ಬಂದ ರಾಶಿ ಇಡಿ ಅಡಿಕೆ ಧಾರಣೆ ಮತ್ತೆ ಇಳಿಯುವುದಕ್ಕೆ ಶುರವಾಗಿತ್ತು (Arecanut Price).

ಅಡಿಕೆ ಬೆಳೆಗಾರರ ನಿರೀಕ್ಷೆ, ಸಮೀಕ್ಷೆ, ಪರೀಕ್ಷೆಗಳ ಲೆಕ್ಕಾಚಾರಕ್ಕೆ ‘ಯಾಕೆ ಹೀಗೆ ಅನ್ನುವ’ ಪ್ರಶ್ನೆಗೆ ಅಡ್ಡ ಬಂದಿದ್ದು ಈ ಬಾರಿಯ ಲೋಕಸಭಾ ಚುನಾವಣೆ! ಈಗ ಅದೂ ಮುಗಿದು, ಪಲಿತಾಂಶಕ್ಕೆ ಕಾಯುತ್ತಿರುವಾಗ, ಅಡಿಕೆ ದರ ಮೇಲ್ಮುಖವಾಗಿದೆ. ಪುನಃ ₹ 55,000 ಗಡಿ ಸಮೀಪ ಬಂದಿದೆ.

ನೀತಿ ಸಂಹಿತೆಯ ಬ್ಯಾರಿಕೇಡ್‌ಗಳು ತೆರವುಗೊಂಡ ಮೇಲೆ ಅಡಿಕೆ ಧಾರಣೆ ಗಣನೀಯವಾಗಿ ಏರಬಹುದು ಎಂದು ಲೆಕ್ಕಾಚಾರದಲ್ಲಿ ರೈತರು ಕಾಯುತ್ತಿದ್ದಾರೆ.

ಅಡಿಕೆ ಧಾರಣೆಯ ವಿಚಾರದಲ್ಲಿ ಇರುವ ‘ನಂಬಿಕೆ’ಗಳು

ಅಡಿಕೆ ಧಾರಣೆಯ ಏರಿಕೆಯ ವಿಚಾರದಲ್ಲಿ ಮಲೆನಾಡಿನಲ್ಲಿ ಕೆಲವು ನಂಬಿಕೆಗಳು ಇವೆ. ವೈಜ್ಞಾನಿಕ ವಿಶ್ಲೇಷಣೆಗೆ ಹೊರತಾಗಿದ್ದರೂ, ನಂಬಿಕೆಗಳನ್ನು ಇಟ್ಟುಕೊಂಡೇ ಅನೇಕ ಅಡಿಕೆ ಬೆಳೆಗಾರರು ಇಂದಿಗೂ ವ್ಯವಹಾರ ನೆಡೆಸುತ್ತಾರೆ.
‘ವರ್ಷದ ಯಾವುದೇ ತಿಂಗಳಲ್ಲಿ ಮಂಗಳವಾರ ಅಮವಾಸ್ಯೆ ಬಂದರೆ ಆ ವರ್ಷ ಅಡಿಕೆಗೆ ಅತ್ಯಧಿಕ ಬೆಲೆ’, ‘ಶ್ರಾವಣ ಮಾಸದಲ್ಲಿ ಅಡಿಕೆಗೆ ರೇಟಾಗುವುದು’, ‘ಮುತ್ತುಗದ ಮರದ ನೆತ್ತಿಯಲ್ಲಿ ಮಾತ್ರ ಹೂವಾದರೆ ಅಡಿಕೆ ದರ ಎತ್ತರಕ್ಕೇರುತ್ತದೆ’ ಕಾಡು ಕೋಳಿ ಕಾಡಂಚಿಗೆ ಬಂದು ಕೂಗಿದರೆ. ಅದು ಅಡಿಕ ದರ ಏರುವಿಕೆಯ ಸೂಚನೆಯಂತೆ! ಪಂಚಾಂಗದ ಪ್ರಕಾರ ‘ಕುಜ’ ರಾಜನಾದಾಗ ಅಡಿಕೆ ದರ ನಿರೀಕ್ಷೆ ಮಟ್ಟವನ್ನು ಮೀರಿ ಏರುತ್ತದೆ… ಇತ್ಯಾದಿ ಹತ್ತಾರು ನಂಬಿಕೆಗಳು ಮಲೆನಾಡಿನ ಅಡಿಕೆ ಬೆಳೆಗಾರರಲ್ಲಿವೆ. ಅಡಿಕೆ ಧಾರಣೆಯ ವಿಷಯ ಚರ್ಚೆಗೆ ಬಂದಾಗ ಇಂತಹ ನಂಬಿಕೆಗಳು ಗಾದೆ ಮಾತಿನಂತೆ ಹೊರಗೆ ಬರುತ್ತವೆ.

ಈ ನಂಬಿಕೆಗಳಿಗೆ ಪೂರಕವಾಗಿ ಎಂಬಂತೆ ಹತ್ತು ವರ್ಷಗಳ ಹಿಂದೆ ಅಡಿಕೆ ಧಾರಣೆ ಲಕ್ಷ ರೂ. ದಾಟಿದಾಗ ಪಂಚಾಂಗದ ಪ್ರಕಾರ ಕುಜ ರಾಜನಾಗಿದ್ದನಂತೆ! ಈ ವರ್ಷವೂ ಕುಜನೇ ಅಧಿಪತಿಯಂತೆ. ಅನಿರೀಕ್ಷಿತ ಅಡಿಕೆ ಧಾರಣೆ ಈ ವರ್ಷವೂ ಏರಲಿದೆ ಅನ್ನುವುದು ಜ್ಯೋತಿಷ್ಯ ನಂಬಿಕೆಯ ಅಭಿಪ್ರಾಯ. ಈ ನಂಬಿಕೆಗೆ ಬೇಷರತ್ ಬೆಂಬಲದಂತೆ ಈ ವರ್ಷ ಅನೇಕ ಕಡೆ ಮುತ್ತುಗದ ಮರದ ನೆತ್ತಿಯಲ್ಲಿ ಹೋವು ಅರಳಿತ್ತಂತೆ.

ಏರುಮುಖ ನಿರೀಕ್ಷೆ

ಎಲೆಕ್ಷನ್ ಮುಗಿದ ಮೇಲೆ ಅಡಿಕೆ ವ್ಯವಹಾರದಲ್ಲಿ ದರ ಏರುಮುಖ ಕಾಣಲಿದೆ ಎನ್ನುವುದಕ್ಕೆ ಪೂರಕವಾಗಿ, ಚುನಾವಣೆಯ ಪಲಿತಾಂಶದ ಹಿಂದಿನೆರಡು ದಿನಗಳಲ್ಲಿ ಅಡಿಕೆ ಏರಿಕೆಯ ಗ್ರಾಫ್‌ನ ಬಾಣ! ಕುಜ ಅಡಿಕೆಯ ದರ ಎತ್ತಲಿದ್ದಾನಾ? ಮುತ್ತುಗದ ಹೂವಿನ ಸೂಚನೆ ನಿಜವಾ? ನಂಬಿಕೆಗಳು ಕೆಲಸ ಮಾಡುತ್ತವಾ? ಚುನಾವಣೆಯ ನಂತರ ಅಡಿಕೆಗೆ ಬೇಡಿಕೆ ಹೆಚ್ಚಲಿದೆಯಾ? ಅಡಿಕೆ ಧಾರಣೆಯಲ್ಲಿ ರೈತರ ನಂಬಿಕೆಗಳ ಮತ್ತು ಅಭಿಪ್ರಾಯಗಳ ಎಕ್ಸಿಟ್ ಪೋಲ್ ನಿಜ ಆಗಲಿದೆಯಾ? ಕಾದು ನೋಡೋಣ.

ಇದನ್ನೂ ಓದಿ: Arecanut Price: ಮಲೆನಾಡಿನ ರಾಶಿ ಇಡಿ ಅಡಿಕೆ ಧಾರಣೆ ‘ಅಬ್‌ ಕಿ ಬಾರ್ ₹60,000 ಪಾರ್ ಆಗಲಿದೆಯಾ?

Continue Reading

ವಿಜಯನಗರ

Vijayanagara News: ಉತ್ತಮ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ವಿತರಿಸಿ: ತಹಸೀಲ್ದಾರ್‌ ಅಮರೇಶ್

Vijayanagara News: ರೈತರು ಬಿತ್ತನೆ ಕಾರ್ಯವನ್ನು ಪ್ರಾರಂಭಿಸಿದ್ದು, ಉತ್ತಮ ಗುಣಮಟ್ಟದ ಬೀಜ ಹಾಗೂ ರಸಗೊಬ್ಬರವನ್ನು ವ್ಯಾಪಾರಸ್ಥರು ಮಾರಾಟ ಮಾಡಬೇಕು. ಲಾಭದ ಆಸೆಗಾಗಿ ಕಳಪೆ ಗುಣಮಟ್ಟದ ಬೀಜ-ಗೊಬ್ಬರ ಮಾರಾಟ ಮಾಡಿದರೆ ಅಥವಾ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿಗೆ ಮಾರಾಟ ಮಾಡಿದರೆ ಅಂತಹವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ತಹಸೀಲ್ದಾರ್‌ ಅಮರೇಶ್ ಜಿ.ಕೆ. ತಿಳಿಸಿದ್ದಾರೆ.

VISTARANEWS.COM


on

Vijayanagara News Distribute good quality sowing seeds and fertilizers says Tehsildar Amaresh G K
Koo

ಕೊಟ್ಟೂರು: ಈ ಬಾರಿ ಪೂರ್ವ ಮುಂಗಾರು ಉತ್ತಮ ಮಳೆಯಾಗುತ್ತಿದ್ದು, ಕಳೆದ ಬಾರಿಯ ರೈತರ ನೋವನ್ನು ಮರೆಸಿ ಸ್ವಲ್ಪ ಸಂತಸವನ್ನು ತಂದಿದೆ. ರೈತರು ಬಿತ್ತನೆ ಕಾರ್ಯವನ್ನು ಪ್ರಾರಂಭಿಸಿದ್ದು, ಅವರಿಗೆ ಉತ್ತಮ ಗುಣಮಟ್ಟದ ಬೀಜ ಹಾಗೂ ರಸಗೊಬ್ಬರವನ್ನು ವ್ಯಾಪಾರಸ್ಥರು ಮಾರಾಟ ಮಾಡಬೇಕು ಎಂದು ತಹಸೀಲ್ದಾರ್‌ ಅಮರೇಶ್ ಜಿ.ಕೆ. (Vijayanagara News) ಸೂಚಿಸಿದರು.

ಪಟ್ಟಣದ ತಾಲೂಕ ಕಛೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಬುಧವಾರ ನಡೆದ ಬೀಜ/ಗೊಬ್ಬರ ಮಾರಾಟಗಾರರ ಮತ್ತು ರೈತರ ಸಭೆಯಲ್ಲಿ ಅವರು ಮಾತನಾಡಿದರು.

ರೈತರು ಬಿತ್ತನೆ ಕಾರ್ಯವನ್ನು ಪ್ರಾರಂಭಿಸಿದ್ದು, ಅವರಿಗೆ ಉತ್ತಮ ಗುಣಮಟ್ಟದ ಬೀಜ ಹಾಗೂ ರಸಗೊಬ್ಬರವನ್ನು ವ್ಯಾಪಾರಸ್ಥರು ಮಾರಾಟ ಮಾಡಬೇಕು. ಲಾಭದ ಆಸೆಗಾಗಿ ಕಳಪೆ ಗುಣಮಟ್ಟದ ಬೀಜ-ಗೊಬ್ಬರ ಮಾರಾಟ ಮಾಡಿದರೆ ಅಥವಾ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿಗೆ ಮಾರಾಟ ಮಾಡಿದರೆ ಅಂತಹವರ ವಿರುದ್ಧ ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: IAS Exam : ಯುಪಿಎಸ್ ಸಿ ಪರೀಕ್ಷಾ ಅಭ್ಯರ್ಥಿಗಳಿಗೆ ಉಚಿತ ತರಬೇತಿ

ವ್ಯಾಪಾರಸ್ಥರು ತಾವು ಸಂಗ್ರಹ ಮಾಡಿರುವ ಗೋದಾಮಿನ ಮುಂದೆ ತಮ್ಮ ಅಂಗಡಿಯ ಮಾಹಿತಿ ಫಲಕವನ್ನು ಹಾಕಬೇಕು. ಅಂಗಡಿಯಲ್ಲಿ ಪ್ರತಿದಿನ ಬೀಜ ಗೊಬ್ಬರದ ದಾಸ್ತಾನು ಹಾಗೂ ಧರಪಟ್ಟಿಯನ್ನು ಕಡ್ಡಾಯವಾಗಿ ಹಾಕಿರಬೇಕು. ಯಾರಾದರೂ ಗೊಬ್ಬರ ಬೀಜಗಳನ್ನು ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿ ಮಾಡಿ ಹೆಚ್ಚಿನ ದರಕ್ಕೆ ಮಾರಾಟ ಮಾಡುವ ಪ್ರಯತ್ನ ಮಾಡಿದರೆ ನಿರ್ದಾಕ್ಷಿಣ್ಯವಾಗಿ ಕ್ರಮವಹಿಸಲಾಗುವುದು. ನಿಗದಿತ ಬೆಲೆಯಲ್ಲಿ ಬೀಜ/ರಸಗೊಬ್ಬರಗಳನ್ನು ಪೂರೈಸಿ ತಾಲೂಕಿನಲ್ಲಿ ಯಾವುದೇ ರೀತಿಯ ದೂರುಗಳು ಬಾರದಂತೆ ವ್ಯಾಪಾರವನ್ನು ಮಾಡುವಂತೆ ಸಲಹೆ ನೀಡಿದರು.

ತಾಲೂಕು ಕೃಷಿ ಸಹಾಯಕ ನಿರ್ದೇಶಕ ಸುನಿಲ್ ಕುಮಾರ್ ಎಂ.ಟಿ. ಮಾತನಾಡಿ, ಡಿಎಪಿ ಮತ್ತು ಯೂರಿಯಾ ಸಹಿತ ಎಲ್ಲ ರಸಗೊಬ್ಬರಗಳು ಸಾಕಷ್ಟು ಪೂರೈಕೆ ಇದ್ದು, ಯಾವುದೇ ಒಂದು ಕಂಪನಿ/ವಿಧದ ಬೀಜ/ರಸಗೊಬ್ಬರಗಳ ಮೇಲೆ ಅವಲಂಬನೆಯಾಗದೇ ಪರ್ಯಾಯ ಬೀಜ/ರಸಗೊಬ್ಬರಗಳನ್ನು ಬಳಸುವಂತೆ ಸಲಹೆ ನೀಡಿದರು.

ಸಿಪಿಐ ವೆಂಕಟಸ್ವಾಮಿ ಮಾತನಾಡಿದರು.

ಇದನ್ನೂ ಒದಿ: IPL 2024 : ಜಿಯೋಸಿನಿಮಾದಲ್ಲಿ ದಾಖಲೆಯ 62 ಕೋಟಿಗೂ ಅಧಿಕ ವೀಕ್ಷಣೆ ಕಂಡ ಐಪಿಎಲ್​

ಸಭೆಯಲ್ಲಿ ತೋಟಗಾರಿಕೆ ಇಲಾಖೆಯ ಎಎಚ್ಒ ಅಶ್ವಿನಿ ಡಿ., ಕೃಷಿ ಅಧಿಕಾರಿ (ತಾಂತ್ರಿಕ) ನೀಲಾನಾಯ್ಕ, ಕುಮಾರಸ್ವಾಮಿ ಕೆ., ಬೀಜ ಗೊಬ್ಬರ ವ್ಯಾಪಾರಿಗಳ ಸಂಘದ ತಾಲೂಕು ಅಧ್ಯಕ್ಷ ಶ್ರೀಧರಶೆಟ್ಟಿ, ರೈತ ಮುಖಂಡರಾದ ರಾಮಪ್ಪ, ಶ್ರೀಧರ, ಜಯಪ್ರಕಾಶನಾಯ್ಕ, ಸುರೇಶನಾಯ್ಕ ಹಾಗೂ ಇತರರು ಉಪಸ್ಥಿತರಿದ್ದರು. ಸಿ.ಮ. ಗುರುಬಸವರಾಜ ನಿರ್ವಹಿಸಿದರು.

Continue Reading

ಪ್ರಮುಖ ಸುದ್ದಿ

Raitha Siri Yojana: ಸಿರಿ ಧಾನ್ಯ ಬೆಳೆಯುವವರಿಗೆ ಸಿಹಿ ಸುದ್ದಿ; ನಿಮ್ಮ ಖಾತೆಗೇ ಬರುತ್ತೆ 10 ಸಾವಿರ ರೂ.

ರೈತ ಸಿರಿ ಯೋಜನೆ (Raitha Siri Yojana) ಹಣ ನೇರವಾಗಿ ರೈತರ ಖಾತೆಗೆ ಜಮಾ ಆಗುತ್ತದೆ. ಸಿರಿಧಾನ್ಯ ಬೆಳೆ ಕುರಿತು ರೈತರಲ್ಲಿ ಅರಿವು ಮೂಡಿಸಲು ಹಂತ ಹಂತವಾಗಿ ಟ್ರೈನಿಂಗ್‌ ಕೂಡ ನೀಡಲು ಉದ್ದೇಶಿಲಾಗಿದೆ. ಈ ಯೋಜನೆಯ ಫಲಾನುಭವ ಪಡೆಯಲು ಬೇಕಾದ ಅರ್ಹತೆಗಳು ಹೀಗಿವೆ.

VISTARANEWS.COM


on

Raitha Siri Yojana
Koo

ಬೆಂಗಳೂರು: ಸಿರಿಧಾನ್ಯ (millet, Siridhanya) ಬೆಳೆಯುವ ಹಾಗೂ ಸಣ್ಣ ಪ್ರಮಾಣದ ಜಮೀನು (small land) ಹೊಂದಿರುವ ರೈತರಿಗೆ (farmers) ಸಿಹಿ ಸುದ್ದಿಯನ್ನು ಸರ್ಕಾರ ನೀಡಿದೆ. ಸಿರಿಧಾನ್ಯ ಬೆಳೆಯನ್ನು ಪ್ರೋತ್ಸಾಹಿಸುವ ಸಲುವಾಗಿ ರೈತ ಸಿರಿ ಯೋಜನೆ (Raitha Siri Yojana) ಜಾರಿಗೆ ತಂದಿದ್ದು, ಇದರಡಿಯಲ್ಲಿ ಧಾನ್ಯ ಬೆಳೆಯುವುದಕ್ಕೆ ಬೇಕಾಗಿರುವ ಬೀಜಗಳು (seeds) ಮತ್ತು ರಸಗೊಬ್ಬರ (manure) ಪೂರೈಕೆಗಾಗಿ ಸರ್ಕಾರ 10,000 ರೂ. ನೀಡಲಿದೆ.

ಈ ಹಣ ನೇರವಾಗಿ ರೈತರ ಖಾತೆಗೆ ಜಮಾ ಆಗುತ್ತದೆ. ಸಿರಿಧಾನ್ಯ ಬೆಳೆ ಕುರಿತು ರೈತರಲ್ಲಿ ಅರಿವು ಮೂಡಿಸಲು ಹಂತ ಹಂತವಾಗಿ ಟ್ರೈನಿಂಗ್‌ ಕೂಡ ನೀಡಲು ಉದ್ದೇಶಿಲಾಗಿದೆ. ಈ ಯೋಜನೆಯ ಫಲಾನುಭವ ಪಡೆಯಲು ಬೇಕಾದ ಅರ್ಹತೆಗಳು ಹೀಗಿವೆ:

  • ಅರ್ಜಿದಾರರು ಕರ್ನಾಟಕದ ಕಾಯಂ ನಾಗರಿಕರಾಗಿರಬೇಕು
  • ಅರ್ಜಿದಾರರು ವೃತ್ತಿಯಲ್ಲಿ ರೈತರಾಗಿರಬೇಕು
  • ರೈತ ಪ್ರಾಥಮಿಕವಾಗಿ ರಾಗಿ ಉತ್ಪಾದಕನಾಗಿರಬೇಕು
  • ಈ ಯೋಜನೆಗೆ ಅರ್ಹತೆ ಪಡೆಯಲು ಕನಿಷ್ಠ ಒಂದು ಹೆಕ್ಟೇರ್ ಕೃಷಿ ಆಸ್ತಿ ಅಗತ್ಯವಿದೆ

ಕರ್ನಾಟಕ ರೈತ ಸಿರಿ ಯೋಜನೆಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ದಾಖಲೆಗಳು ಅಗತ್ಯ:

  • ಆಧಾರ್ ಕಾರ್ಡ್ ಅಥವಾ ಗುರುತಿನ ಪುರಾವೆ
  • ಅರ್ಜಿದಾರರ ಭೂಮಿಗೆ ಸಂಬಂಧಿಸಿದ ದಾಖಲೆಗಳು
  • ಶಾಶ್ವತ ನಿವಾಸಿ ಪ್ರಮಾಣಪತ್ರ
  • ವಿಳಾಸ ಪುರಾವೆ
  • ಪಡಿತರ ಚೀಟಿ
  • ಬ್ಯಾಂಕ್ ಖಾತೆ ವಿವರಗಳು
  • ಮೊಬೈಲ್ ನಂಬರ್
  • ಭೂ ದಾಖಲೆ ವಿವರಗಳು
  • ಪಾಸ್‌ಪೋರ್ಟ್ ಗಾತ್ರದ ಫೋಟೋಗಳು

ರೈತ ಸಿರಿ ಯೋಜನೆಯ ಉದ್ದೇಶ:

  • ರಾಜ್ಯದಲ್ಲಿ ಸಾವಯವ ಕೃಷಿಯನ್ನು ಉತ್ತೇಜಿಸುವುದು
  • ಕೃಷಿ ಕ್ಷೇತ್ರವನ್ನು ಉತ್ತೇಜಿಸುವುದು
  • ರಾಜ್ಯದ ರೈತರಿಗೆ ಆರ್ಥಿಕ ನೆರವು ನೀಡುವುದು
  • ರಾಗಿ ಬೆಳೆಗಾರರಿಗೆ ಪ್ರತಿ ಹೆಕ್ಟೇರ್‌ಗೆ 10,000 ರೂ ನೆರವು
  • ರಾಜ್ಯದ ಒಣಭೂಮಿಯಲ್ಲಿ ನೀರನ್ನು ಪುನಃಸ್ಥಾಪಿಸಲು ಕೃಷಿ ಹೊಂಡಗಳನ್ನು ನಿರ್ಮಿಸುವುದು

ಹೆಚ್ಚಿನ ಮಾಹಿತಿಗಾಗಿ https://raitamitra.karnataka.gov.in/info-2/Raita+Siri/en ಭೇಟಿ ನೀಡಿ

ಇದನ್ನೂ ಓದಿ: Headless Chicken: ತಲೆ ಕತ್ತರಿಸಿದರೂ ಈ ಕೋಳಿ 18 ತಿಂಗಳು ಬದುಕಿತ್ತು! ಸಾಯುವ ಮೊದಲು ಮಾಲೀಕನನ್ನು ಶ್ರೀಮಂತಗೊಳಿಸಿತು!

Continue Reading

ಕೃಷಿ

PM Kisan Samman: ಪಿಎಂ ಕಿಸಾನ್ ಸಮ್ಮಾನ್ 17ನೇ ಕಂತಿನ ಹಣ ಬಿಡುಗಡೆ ಯಾವಾಗ? ಪರಿಶೀಲಿಸುವುದು ಹೇಗೆ?

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ (PM Kisan Samman) ನಿಧಿ ಯೋಜನೆಯ ೧೭ನೇ ಕಂತಿನ ಹಣ ಜೂನ್ 4 ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ಅನಂತರ ಬಿಡುಗಡೆಯಾಗುವ ಸಾಧ್ಯತೆಯಿದೆ. ಕಿಸಾನ್ ಸಮ್ಮಾನ್ ಗಾಗಿ ಅರ್ಜಿ ಸಲ್ಲಿಸಿದ್ದರೆ ಸ್ಥಿತಿಗತಿಯನ್ನು ಒಮ್ಮೆ ಪರಿಶೀಲಿಸಿ. ಜನಸಾಮಾನ್ಯರಿಗೆ ಈ ಕುರಿತ ಸರಳ ಮಾಹಿತಿ ಇಲ್ಲಿದೆ.

VISTARANEWS.COM


on

By

PM Kisan Samman
Koo

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan Samman) ಯೋಜನೆಯ 17ನೇ ಕಂತಿಗಾಗಿ (17th installment) ಫಲಾನುಭವಿ ರೈತರು (beneficiary farmers) ಕಾಯುತ್ತಿದ್ದು ಶೀಘ್ರದಲ್ಲೇ ಇದು ಬಿಡುಗಡೆಯಾಗಲಿದೆ. ಜೂನ್ 4ರಂದು (june) ನಡೆಯುವ ಲೋಕಸಭೆ ಚುನಾವಣೆಯ (loksabha election) ಫಲಿತಾಂಶ ಪ್ರಕಟವಾದ ಅನಂತರ ಇದು ಬಿಡುಗಡೆಯಾಗುವ ನಿರೀಕ್ಷೆ ಇದೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 16ನೇ ಕಂತನ್ನು 2024ರ ಫೆಬ್ರವರಿ 28ರಂದು ಮಹಾರಾಷ್ಟ್ರದ ಯವತ್ಮಾಲ್‌ಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು 9 ಕೋಟಿಗೂ ಹೆಚ್ಚು ರೈತರಿಗೆ 21,000 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದರು. 15 ನೇ ಕಂತಿನ ಹಣ ಕಳೆದ ನವೆಂಬರ್ ನಲ್ಲಿ ಬಿಡುಗಡೆಯಾಗಿತ್ತು.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಅರ್ಹ ರೈತರು ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ. ಗಳನ್ನು ಪಡೆಯುತ್ತಾರೆ, ಇದು ವಾರ್ಷಿಕವಾಗಿ 6,000 ರೂ. ಹಣವನ್ನು ಪ್ರತಿ ವರ್ಷ ಮೂರು ಕಂತುಗಳಲ್ಲಿ ಏಪ್ರಿಲ್- ಜುಲೈ, ಆಗಸ್ಟ್- ನವೆಂಬರ್ ಮತ್ತು ಡಿಸೆಂಬರ್- ಮಾರ್ಚ್ ನಲ್ಲಿ ನೀಡಲಾಗುತ್ತದೆ. ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.

ಈ ಯೋಜನೆಯನ್ನು 2019 ರ ಮಧ್ಯಂತರ ಬಜೆಟ್‌ನಲ್ಲಿ ಆಗಿನ ಹಣಕಾಸು ಸಚಿವ ಪಿಯೂಷ್ ಗೋಯಲ್ ಅವರು ಘೋಷಿಸಿದರು. ಕಂತುಗಳನ್ನು ಸ್ವೀಕರಿಸಲು ರೈತರು ತಮ್ಮ ಇ-ಕೆವೈಸಿಯನ್ನು ಪೂರ್ಣಗೊಳಿಸಬೇಕು. ಯೋಜನೆಯ ಅಧಿಕೃತ ವೆಬ್‌ಸೈಟ್ ಪ್ರಕಾರ,ಪಿಎಂ ಕಿಸಾನ್ ನೋಂದಾಯಿತ ರೈತರಿಗೆ ಇ-ಕೆವೈಸಿ ಕಡ್ಡಾಯವಾಗಿದೆ. ಒಟಿಪಿ -ಆಧಾರಿತಇ-ಕೆವೈಸಿ ಪಿಎಂ ಕಿಸಾನ್ ಪೋರ್ಟಲ್‌ನಲ್ಲಿ ಲಭ್ಯವಿದೆ ಅಥವಾ ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿ ಗಾಗಿ ಹತ್ತಿರದ ಸಿಎಸ್ಸಿ ಕೇಂದ್ರಗಳನ್ನು ಸಂಪರ್ಕಿಸಬಹುದು.


ಪರಿಶೀಲನೆ ಹೇಗೆ?

ನೋಂದಾಯಿಸಿರುವ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಲು ಅಧಿಕೃತ ವೆಬ್‌ಸೈಟ್‌ pmkisan.gov.in ಗೆ ಭೇಟಿ ನೀಡಿ. ಪುಟದ ಬಲಭಾಗದಲ್ಲಿರುವ ‘ನಿಮ್ಮ ಸ್ಥಿತಿಯನ್ನು ತಿಳಿಯಿರಿ’ ಎಂಬ ಟ್ಯಾಬ್ ಅನ್ನು ಕ್ಲಿಕ್ ಮಾಡಿ. ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಕ್ಯಾಪ್ಚಾ ಕೋಡ್ ಅನ್ನು ಭರ್ತಿ ಮಾಡಿ ಮತ್ತು ‘ಡೇಟಾ ಪಡೆಯಿರಿ’ ಎಂಬ ಆಯ್ಕೆಯನ್ನು ಆರಿಸಿ. ಬಳಿಕ ಫಲಾನುಭವಿಯ ಸ್ಥಿತಿಯು ಪರದೆಯ ಮೇಲೆ ಬರುತ್ತದೆ.

ಫಲಾನುಭವಿಗಳ ಪಟ್ಟಿಯಲ್ಲಿ ಹೆಸರು ಪರಿಶೀಲನೆ

ಪಿಎಂ ಕಿಸಾನ್ ಅಧಿಕೃತ ವೆಬ್‌ಸೈಟ್ www.pmkisan.gov.in ಗೆ ಭೇಟಿ ನೀಡಿ ‘ಫಲಾನುಭವಿಗಳ ಪಟ್ಟಿ’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ. ಬಳಿಕ ಡ್ರಾಪ್-ಡೌನ್‌ನಿಂದ ಆಯ್ದ ರಾಜ್ಯ, ಜಿಲ್ಲೆ, ಉಪ-ಜಿಲ್ಲೆ, ಬ್ಲಾಕ್ ಮತ್ತು ಹಳ್ಳಿಯಂತಹ ವಿವರಗಳನ್ನು ಆಯ್ಕೆ ಮಾಡಿ.ದ ಮೇಲೆ ‘ಗೆಟ್ ರಿಪೋರ್ಟ್’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ. ಇದರ ಅನಂತರ, ಫಲಾನುಭವಿಗಳ ಪಟ್ಟಿಯ ವಿವರವನ್ನು ಪ್ರದರ್ಶಿಸಲಾಗುತ್ತದೆ.

ಈ ಮಾಹಿತಿಗಳನ್ನು ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಿಯೂ ತಿಳಿದುಕೊಳ್ಳಬಹುದು. ಸಹಾಯವಾಣಿ ಸಂಖ್ಯೆ- 155261 ಮತ್ತು 011-24300606.

ಇದನ್ನೂ ಓದಿ: PSI Exam: ಪಿಎಸ್‌ಐ ಸೇರಿ 4 ಸಾವಿರ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ದಿನಾಂಕ ಅನೌನ್ಸ್‌; ಯಾವ ದಿನಕ್ಕೆ ಯಾವ ಪರೀಕ್ಷೆ?

ಅರ್ಜಿ ಸಲ್ಲಿಸುವುದು ಹೇಗೆ?

pmkisan.gov.in ವೆಬ್ ಸೈಟ್ ಗೆ ಭೇಟಿ ನೀಡಿ, ‘ಹೊಸ ರೈತ ನೋಂದಣಿ’ ಮೇಲೆ ಕ್ಲಿಕ್ ಮಾಡಿ ಮತ್ತು ಆಧಾರ್ ಸಂಖ್ಯೆಯನ್ನು ನಮೂದಿಸಿ ಮತ್ತು ಕ್ಯಾಪ್ಚಾವನ್ನು ಭರ್ತಿ ಮಾಡಿ. ಅಗತ್ಯವಿರುವ ವಿವರಗಳನ್ನು ನಮೂದಿಸಿ ಮತ್ತು ‘ಹೌದು’ ಎಂದು ಕ್ಲಿಕ್ ಮಾಡಿ. ಪಿಎಂ ಕಿಸಾನ್ ಅರ್ಜಿ ನಮೂನೆ 2024 ರಲ್ಲಿ ಕೇಳಲಾದ ಮಾಹಿತಿಯನ್ನು ಭರ್ತಿ ಮಾಡಿ. ಅದನ್ನು ಉಳಿಸಿ ಮತ್ತು ಭವಿಷ್ಯದ ಉಲ್ಲೇಖಕ್ಕಾಗಿ ಪ್ರಿಂಟ್‌ಔಟ್ ತೆಗೆದುಕೊಳ್ಳಿ.

Continue Reading
Advertisement
Election Results 2024
Lok Sabha Election 202430 seconds ago

Election Results 2024: ಧಾರವಾಡದ ಮತ ಎಣಿಕೆ ಕೇಂದ್ರಕ್ಕೆ ವಾಮಾಚಾರ! ಮರದಡಿ ಮೊಟ್ಟೆ ಇಟ್ಟ ಕಿಡಿಗೇಡಿಗಳು

Kalaburagi Election Result 2024
ಕಲಬುರಗಿ3 mins ago

Kalaburagi Election Result 2024: ಖರ್ಗೆ ಕೋಟೆಯಲ್ಲಿ ಅಳಿಯನ ದರ್ಬಾರ್;‌ ರಾಧಾಕೃಷ್ಣ ದೊಡ್ಡಮನಿಗೆ ಗೆಲುವು

Chamarajanagar Election Result 2024
ಪ್ರಮುಖ ಸುದ್ದಿ11 mins ago

Chamarajanagar Election Result 2024 : ಚಾಮರಾಜನಗರದಲ್ಲಿ ಸುನೀಲ್ ಬೋಸ್​ಗೆ ಗೆಲುವು

Election Results 2024
Lok Sabha Election 202427 mins ago

Election Results 2024: ಇಂದೋರ್‌ನಲ್ಲಿ NOTAಕ್ಕೆ ಲಭಿಸಿತು ಬರೋಬ್ಬರಿ 1 ಲಕ್ಷಕ್ಕೂ ಅಧಿಕ ಮತ; ಹಿಂದಿನ ದಾಖಲೆಗಳೆಲ್ಲ ಉಡೀಸ್‌

Karnataka election results 2024
ಕರ್ನಾಟಕ39 mins ago

Karnataka Election Results 2024: ಮೈಸೂರಿನಲ್ಲಿ ಮೈತ್ರಿ ಮುಂದೆ ಮಂಡಿಯೂರಿದ ಸಿದ್ದರಾಮಯ್ಯ ತಂತ್ರಗಾರಿಕೆ

Koppal Election Result 2024
ಕೊಪ್ಪಳ40 mins ago

Koppal Election Result 2024: ಕೊಪ್ಪಳದಲ್ಲಿ ಕಾಂಗ್ರೆಸ್‌ನ ರಾಜಶೇಖರ್‌ ಹಿಟ್ನಾಳ್‌ ಜಯಭೇರಿ

Chikkodi Election Result 2024
ಚಿಕ್ಕೋಡಿ52 mins ago

Chikkodi Election Result 2024: ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಜಾರಕಿ’ಹೋಳಿ’; ಜೊಲ್ಲೆಗೆ ಸೋಲು

Davangere Election Result 2024
ದಾವಣಗೆರೆ59 mins ago

Davangere Election Result 2024: ದಾವಣಗೆರೆಯಲ್ಲಿ ಕಾಂಗ್ರೆಸ್‌ನ ಪ್ರಭಾ ಮಲ್ಲಿಕಾರ್ಜುನ್‌ಗೆ ಗೆಲುವು

Chitrdurga Result 2024
ಪ್ರಮುಖ ಸುದ್ದಿ1 hour ago

Chitrdurga Result 2024 : ಚಿತ್ರದುರ್ಗ ಕ್ಷೇತ್ರದಲ್ಲಿ ಗೋವಿಂದ ಕಾರಜೋಳಗೆ ಗೆಲುವು

Election Results 2024
ದೇಶ1 hour ago

Election results 2024: ಜಮ್ಮು-ಕಾಶ್ಮೀರದಲ್ಲಿ ಮಾಜಿ ಸಿಎಂಗಳಿಗೆ ಹೀನಾಯ ಸೋಲು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ8 hours ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ23 hours ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ23 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು3 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ5 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ7 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌