Navratri 2022 | ನವರಾತ್ರಿ ನವವರ್ಣ: ವಿಸ್ತಾರ ಡಿಜಿಟಲ್ ಸಂಭ್ರಮ - Vistara News

ದಸರಾ ಸಂಭ್ರಮ

Navratri 2022 | ನವರಾತ್ರಿ ನವವರ್ಣ: ವಿಸ್ತಾರ ಡಿಜಿಟಲ್ ಸಂಭ್ರಮ

Navratri 2022 | ಸೆ.26 ರಿಂದ ಅ.4ರವರೆಗೆ 9 ದಿನಗಳ ಕಾಲ ದಿನಕ್ಕೊಂದು ಬಣ್ಣದ ಉಡುಪು ಧರಿಸಿ ಗ್ರೂಪ್ ವಿಡಿಯೊ ಕಳುಹಿಸಿ, ವಿಸ್ತಾರ ಡಿಜಿಟಲ್ ಸಂಭ್ರಮದಲ್ಲಿ ಭಾಗಿಯಾಗಿ.

VISTARANEWS.COM


on

Navratri 2022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮತ್ತೆ ನವರಾತ್ರಿ (Navratri 2022) ಬಂದಿದೆ. ಕಾಶ್ಮೀರದಿಂದ ಹಿಡಿದು ಕನ್ಯಾಕುಮಾರಿಯವರೆಗೆ ಭಾರತದ ಪ್ರತಿಯೊಂದು ರಾಜ್ಯದಲ್ಲೂ ಸಂಭ್ರಮದಿಂದ ಆಚರಿಸುವ ಹಬ್ಬವಿದು. ಅತಿದೀರ್ಘಕಾಲ ನಡೆಯುವ ಧಾರ್ಮಿಕ ಹಬ್ಬ ಎಂಬ ಹೆಗ್ಗಳಿಕೆಯೂ ಈ ನವರಾತ್ರಿಯದು.

ದೇವಿಯ ಒಂಬತ್ತು ರೂಪಗಳಲ್ಲಿ ಪ್ರತಿದಿನ ಒಂದೊಂದು ರೂಪದಂತೆ ಆವಾಹಿಸಿ ಪೂಜಿಸುವ ಈ ಪದ್ಧತಿ ಸನಾತನವಾದುದು. ಪ್ರತಿಯೊಂದು ರೂಪಕ್ಕೂ ವಿಶೇಷವಾಗಿ ಪೂಜೆ ನಡೆಯುತ್ತದೆ. ಪ್ರತಿ ದೇವಿಗೆ ವಿಶೇಷವಾದ ಸ್ತ್ರೋತ್ರಗಳಿರುವಂತೆ ವಿಶೇಷವಾದ ವರ್ಣ, ಪುಷ್ಪ, ನೈವೇದ್ಯ, ರಾಗಗಳೂ ಇವೆ.

ಆಶ್ವಯುಜ ಮಾಸದ ಮೊದಲ ಒಂಬತ್ತು ದಿನಗಳ ಈ ಹಬ್ಬಕ್ಕೆ ಧಾರ್ಮಿಕತೆಯಂತೆಯೇ ಸಾಂಸ್ಕೃತಿಕ ಆಯಾಮಗಳೂ ಇವೆ. ಹಾಡು, ಕುಣಿತ, ಹೊಸ ದಿರಸು, ಪ್ರಯಾಣ ಹೀಗೆ ಒಂದೆರಡಲ್ಲ, ನಾನಾ ಬಗೆಯಲ್ಲಿ ಜೀವನುತ್ಸಾಹವನ್ನು ಚಿಮ್ಮಿಸುತ್ತದೆ.

ನವರಾತ್ರಿಯಲ್ಲಿ ಗೊಂಬೆಗಳನ್ನು ಕೂರಿಸಿ ಅಕ್ಕ-ಪಕ್ಕದ ಮನೆಯ ಮಕ್ಕಳನ್ನು ಕರೆಸಿ ಆರತಿ ಮಾಡುವುದು, ಹಾಡು ಹೇಳಿಸುವುದು, ಮನೆಯಲ್ಲಿ ಪೂಜೆ ಮಾಡುವುದು ವಾಡಿಕೆ. ಈ ವೇಳೆ ಮಕ್ಕಳು, ಮಹಿಳೆಯರು ಬಣ್ಣ ಬಣ್ಣದ ಬಟ್ಟೆಗಳನ್ನು ಉಟ್ಟು, ಅದಕ್ಕೊಪ್ಪುವ ಒಡವೆಗಳನ್ನು ಧರಿಸಿ ಸಂಭ್ರಮದಿಂದ ಪಾಲ್ಗೊಳ್ಳುತ್ತಾರೆ.

Navratri 2022

ಅದೇ ರೀತಿ ಇದೀಗ ಬೊಂಬೆ ಕೂರಿಸಲಿ, ಕೂರಿಸದಿರಲಿ, ದಸರಾ ಆಚರಿಸಲಿ, ಇಲ್ಲದಿರಲಿ, ಯಾವುದೇ ಜಾತಿ-ಧರ್ಮದವರಿರಲಿ… ಆದರೆ ಒಂಬತ್ತು ದಿನವೂ ಒಂದೊಂದು ಬಣ್ಣದ ಸೀರೆ, ಉಡುಗೆಗಳನ್ನು ತೊಟ್ಟು ನಿತ್ಯವೂ ನವರಾತ್ರಿ ಆಚರಿಸುತ್ತಿದ್ದಾರೆ.

ನವರಾತ್ರಿಯ ಸಂಭ್ರಮವನ್ನು ಈ ಬಾರಿ ಇನ್ನಷ್ಟು ಹೆಚ್ಚಿಸಲು ನಿಮ್ಮ ವಿಸ್ತಾರ ನ್ಯೂಸ್‌ ನವರಾತ್ರಿ ನವವರ್ಣ ಎಂಬ ಡಿಜಿಟಲ್‌ ವೇದಿಕೆ ಸೃಷ್ಟಿಸಿದೆ. ನೀವು ಒಂಬತ್ತು ದಿನಗಳ ಕಾಲ ಒಂಬತ್ತು ಬಣ್ಣಗಳ ದಿರಸು ಧರಿಸಿ, ಹಬ್ಬದ ರಂಗೇರಿಸಬಹುದು.

ನೀವು ಭಾಗವಹಿಸುವುದು ಹೇಗೆ?
ನಿಮ್ಮ ಕುಟುಂಬದ ಮಹಿಳಾ ಸದಸ್ಯರು, ಬಂಧುಗಳು, ಸ್ನೇಹಿತರು, ಅಕ್ಕ-ಪಕ್ಕದ ಮನೆಯವರು, ಕಾಲೇಜು ಸಹಪಾಠಿಗಳು, ಸಹೋದ್ಯೋಗಿಗಳು, ಸಂಘ ಸಂಸ್ಥೆಯ ಸದಸ್ಯರು ಹೀಗೆ ನಿಮ್ಮ ಆಪ್ತರೊಂದಿಗೆ ನೀವು ಆ ದಿನದ ಬಣ್ಣದ ಉಡುಗೆ ತೊಟ್ಟು (ನೆನಪಿರಲಿ ಎಲ್ಲರೂ ನಿಗದಿತ ಒಂದೇ ವರ್ಣದ ದಿರಸು ಧರಿಸಿರಬೇಕು) ವಿಶೇಷ ರೀತಿಯಲ್ಲಿ ನಿಂತು ನೀವೇ ನಿಮ್ಮ ಮೊಬೈಲ್‌ನಲ್ಲಿ ವಿಡಿಯೊ ಮಾಡಿಕೊಳ್ಳಿ. ಅದನ್ನು ನಮಗೆ ಕಳುಹಿಸಿ.
ನಿಮ್ಮ ವಿಡಿಯೊವನ್ನು ಇನ್ನಷ್ಟು ಆಕರ್ಷಣೀಯವಾಗಿಸಿ ವಿಸ್ತಾರ ಯೂಟ್ಯೂಬ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ. ನೀವು ನಿಮ್ಮವರೊಂದಿಗೆ ಯೂಟ್ಯೂಬ್‌ ಲಿಂಕ್‌ ಹಂಚಿಕೊಂಡು ಅವರೂ ಸಂಭ್ರಮ ಪಡುವಂತೆ ಮಾಡಬಹುದು.

ವಿಡಿಯೊ ಕಳುಹಿಸುವುದು ಹೇಗೆ?
ಸಿಂಪಲ್. ಈ ಕೆಳಗಿನ ವಾಟ್ಸ್‌ ಆ್ಯಪ್‌ ನಂಬರ್‌ಗೆ ವಿಡಿಯೊವನ್ನು ಕಳುಹಿಸಿ. ವಿಡಿಯೊ ಕಳುಹಿಸುವಾಗ ನಿಮ್ಮ ತಂಡದ ಒಬ್ಬರ ಹೆಸರು ಮತ್ತು ಊರನ್ನು ತಿಳಿಸಲು ಮರೆಯಬೇಡಿ.
ವಾಟ್ಸ್‌ ಆ್ಯಪ್‌ ನಂಬರ್‌: 96069 42037

ಈ ವಿಷಯ ನಿಮ್ಮ ಗಮನದಲ್ಲಿರಲಿ…

  • ಮಹಿಳೆಯರು, ಯುವತಿಯರು ಮತ್ತು ಬಾಲಕಿಯರಿಗೆ ಮಾತ್ರ ಅವಕಾಶ.
  • ಗುಣಮಟ್ಟದ ಕ್ಯಾಮೆರಾ ಇರುವ ಮೊಬೈಲ್‌ನಿಂದ ವಿಡಿಯೊ ಮಾಡಿ, ವಿಡಿಯೊ ಗುಣಮಟ್ಟ ಉತ್ತಮವಾಗಿರಲಿ, ಹಾಗೂ ನೀವು ಚಿತ್ರಿಸಿದ ವಿಡಿಯೊದ ಅವಧಿ ಒಂದು ನಿಮಿಷದೊಳಗಿರಲಿ.
  • ನವರಾತ್ರಿಯ ಪ್ರತಿದಿನ ಕೂಡ ನೀವು ವಿಡಿಯೊ ಮಾಡಿಕಳುಹಿಸಬಹುದು. ಆದರೆ ನಿಮ್ಮ ವಿಡಿಯೊ ಮಧ್ಯಾಹ್ನ 2 ಗಂಟೆಯ ಒಳಗೆ ನಮಗೆ ತಲುಪಿರಬೇಕು.
  • ನೀವು ಒಬ್ಬರೋ, ಇಬ್ಬರೋ ವಿಡಿಯೊ ಮಾಡಿ ಕಳುಹಿಸಿದರೆ ಸಾಲದು. ನಿಮ್ಮ ವಿಡಿಯೊದಲ್ಲಿ ಕನಿಷ್ಠ ಐದು ಮಂದಿಯಾದರೂ ಇರಬೇಕು.

ಯಾವ ದಿನ ಯಾವ ಬಣ್ಣ?

Navratri 2022

ಇದನ್ನೂ ಓದಿ | Navaratri Saree trend | ಸಾದಾ ನವವರ್ಣ ಸೀರೆಗಳಿಗೆ ಭಾರಿ ಡಿಮ್ಯಾಂಡ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Mysore Dasara: ಚೆಕ್‌ ಬೌನ್ಸ್‌; ದಸರಾ ಕಲಾವಿದರಿಗೆ ಅವಮಾನ ಎಂದು ಯತ್ನಾಳ್‌ ಕಿಡಿ

Mysore Dasara: ಮೈಸೂರು ಉಸ್ತುವಾರಿ ಸಚಿವರು ಹಾಗೂ ಮುಖ್ಯ ಮಂತ್ರಿಗಳು ಕಲಾವಿದರಿಗೆ ಬೇಷರತ್ ಕ್ಷಮೆ ಕೇಳಿ ಲಲಿತಕಲೆ ಹಾಗೂ ಕರಕುಶಲ ಉಪಸಮಿತಿಯ ಸಂಬಂಧಪಟ್ಟ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆಗ್ರಹಿಸಿದ್ದಾರೆ.

VISTARANEWS.COM


on

Basanagouda Patil Yatnal
Koo

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysore Dasara) ಮುಕ್ತಾಯವಾದರೂ ಕಲಾವಿದರ ಅಸಮಾಧಾನ ನಿಂತಿಲ್ಲ. ಅಧಿಕಾರಿಗಳ ಎಡವಟ್ಟಿನಿಂದ ಬಹುಮಾನದ ಚೆಕ್‌ ಬೌನ್ಸ್‌ ಆಗಿರುವುದರಿಂದ ಬಹುಮಾನ ವಿಜೇತರು ಅಲೆದಾಡುವಂತಾಗಿದೆ. ಚೆಕ್‌ ವಾಪಸ್‌ ಬಂದರೂ ಬ್ಯಾಂಕ್‌ ಖಾತೆಯಲ್ಲಿ ಹಣ ಕಡಿತವಾಗಿರುವುದಕ್ಕೆ ಕಲಾವಿದರೊಬ್ಬರು ಅಸಮಾಧಾನ ಹೊರಹಾಕಿದ್ದಾರೆ. ಮತ್ತೊಂದೆಡೆ ರಾಜ್ಯ ಸರ್ಕಾರದಿಂದ ಕಲಾವಿದರಿಗೆ ಅವಮಾನವಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿ ಕಾರಿದ್ದಾರೆ.

ಅ.26 ರಂದು ಮೈಸೂರಿನ ಹವ್ಯಾಸಿ ಛಾಯಾಚಿತ್ರಗಾರ ಎನ್.ಜಿ. ಸುಧೀರ್‌ಗೆ 7 ಸಾವಿರ ರೂ. ಬಹುಮಾನದ ಚೆಕ್ ನೀಡಲಾಗಿತ್ತು‌. ಅ.27 ರಂದು ಸುದೀರ್ ಬ್ಯಾಂಕ್‌ಗೆ ಸಲ್ಲಿಸಿದ್ದರು. ಆದರೆ ಅ.30ರಂದು ಚೆಕ್ ವಾಪಸ್ ಆಗಿದೆ. ಈ ವೇಳೆ ಅಕೌಂಟ್‌ನಿಂದ 118 ರೂ. ಕಟ್ ಮಾಡಲಾಗಿದೆ.

ಇದನ್ನೂ ಓದಿ | Karnataka Politics : ನಾನು ಮುಖ್ಯಮಂತ್ರಿ ಆಗಲು ಸಿದ್ಧ ಎಂದ ಪ್ರಿಯಾಂಕ್ ಖರ್ಗೆ

ಈ ಬಗ್ಗೆ ಪ್ರತಿಕ್ರಿಯಿಸಿರುವ ಎನ್.ಜಿ. ಸುಧೀರ್, ಸ್ಪರ್ಧೆಯಲ್ಲಿ ಭಾಗಿಯಾಗಿ ಬಹುಮಾನ ಪಡೆದ ನನಗೆ 118 ರೂ. ದಂಡ ಬಿದ್ದಿದೆ. ಇಂತಹ ಬೇಜಾವ್ದಾರಿತನ ಏಕೆ? ತಮ್ಮಂತೆ ಸಾಕಷ್ಟು ಕಲಾವಿದರಿಗೆ ಅನ್ಯಾಯ ಆಗಿದೆ ಎಂದು ಅಧಿಕಾರಿಗಳ ವಿರುದ್ಧ ಬೇಸರ ಹೊರಹಾಕಿದ್ದಾರೆ.

ದಸರಾ ಲಲಿತ ಕಲೆ ಮತ್ತು ಕರಕುಶಲ ಉಪಸಮಿತಿಯಿಂದ ಕಲಾವಿದರಿಗೆ ನೀಡಿದ್ದ ಬಹುಮಾನದ ಚೆಕ್‌ಗಳು ನಗದಾಗಿ ಪರಿವರ್ತನೆ ಆಗದೆ ವಾಪಸ್‌ ಆಗುತ್ತಿವೆ. ಅಧಿಕಾರಿಗಳ ಸಹಿಯಲ್ಲಿನ ವ್ಯತ್ಯಾಸ ಇದಕ್ಕೆ ಕಾರಣವಾಗಿದೆ. ಉಪಸಮಿತಿಯ ಈ ಹಿಂದಿನ ಕಾರ್ಯಾಧ್ಯಕ್ಷ, ಕಾರ್ಯದರ್ಶಿಗಳ ಸಹಿಗಳೇ ಚೆಕ್‌ ಮೇಲೆ ಇದ್ದಿದ್ದರಿಂದ ಚೆಕ್‌ ಬೌನ್ಸ್‌ ಆಗಿವೆ ಎನ್ನಲಾಗಿದೆ. ಚೆಕ್ ವಾಪಸ್‌ ಆಗಿರುವುದು ತಿಳಿದುಬರುತ್ತಿದ್ದಂತೆ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಂಡಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ | Karnataka Politics : ಪರಮೇಶ್ವರ್‌ ಮುಖ್ಯಮಂತ್ರಿ ಆಗಬೇಕು; ನಾನು ಎಐಸಿಸಿಗೂ ಹೆದರಲ್ಲವೆಂದ ಕೆ.ಎನ್.‌ ರಾಜಣ್ಣ

ರಾಜ್ಯ ಸರ್ಕಾರದ ವಿರುದ್ಧ ಯತ್ನಾಳ್‌ ಆಕ್ರೋಶ

ಕಲಾವಿದರಿಗೆ ನೀಡಿದ್ದ ಚೆಕ್‌ ಬೌನ್ಸ್‌ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ದಸರಾ ಹಬ್ಬದಲ್ಲಿ ಭಾಗವಹಿಸಿದ ಕಲಾವಿದರಿಗೆ ನೀಡಿದ ಚೆಕ್ ಬೌನ್ಸ್ ಆಗಿರುವುದು ಕಲಾವಿದರಿಗೆ ಮಾಡಿದ ಅವಮಾನ. ಗಾಯದ ಮೇಲೆ ಬರೆ ಇಟ್ಟಂತೆ ಬೌನ್ಸ್ ಆದ ಚೆಕ್ ಬ್ಯಾಂಕ್‌ಗೆ ನೀಡಿದ್ದಕ್ಕೆ ಕಲಾವಿದರಿಗೆ ಬ್ಯಾಂಕ್ ದಂಡ ಹಾಕಿದೆ. ದಸರಾ ಹಾಗೂ ಮೈಸೂರು ಉಸ್ತುವಾರಿ ಸಚಿವರು ಹಾಗೂ ಮುಖ್ಯ ಮಂತ್ರಿಗಳು ಕಲಾವಿದರಿಗೆ ಬೇಷರತ್ ಕ್ಷಮೆ ಕೇಳಿ ಲಲಿತಕಲೆ ಹಾಗೂ ಕರಕುಶಲ ಉಪಸಮಿತಿಯ ಸಂಬಂಧಪಟ್ಟ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು. ಉತ್ತರದಾಯಿತ್ವವಿಲ್ಲದೆ, ಬೇಜವಾಬ್ದಾರಿ ವರ್ತನೆಯಿಂದ ಕೆಲಸ ಮಾಡುವವರಿಗೆ ಸರ್ಕಾರ ಶಿಸ್ತು ಕ್ರಮ ಜರುಗಿಸಲಿ. ಉಸ್ತುವಾರಿ ಸಚಿವರ ದುರಾಡಳಿತದಿಂದ ದಸರಾ ಸಂಭ್ರಮದಲ್ಲಿ ವಿದ್ಯುತ್ ಬೇಲಿ ಹಾರಿ ಬಂದು ಭದ್ರತಾ ವೈಫಲ್ಯವೆಸಗಿದ್ದು, ಈಗ ಕಲಾವಿದರಿಗೆ ನೀಡಿದ ಚೆಕ್ ಬೌನ್ಸ್ ನೀಡಿ ಸರಣಿ ವೈಫಲ್ಯಗಳು ಆಗಿವೆ ಎಂದು ಅಕ್ರೋಶ ಹೊರಹಾಕಿದ್ದಾರೆ.

Continue Reading

ಕರ್ನಾಟಕ

Mysore Dasara: ಮೈಸೂರು ದಸರಾ ಸಂಭ್ರಮದ ಸ್ಮರಣೀಯ ಚಿತ್ರಗಳಿವು

Mysore Dasara: ವಿಶ್ವ ವಿಖ್ಯಾತ ಮೈಸೂರು ದಸರಾ ಮಂಗಳವಾರ ಜಂಬೂ ಸವಾರಿಯೊಂದಿಗೆ ಮುಕ್ತಾಯವಾಯಿತು. ದಸರಾ ಸಂಭ್ರಮದ ಸ್ಮರಣೀಯ ಚಿತ್ರಗಳನ್ನು ಇಲ್ಲಿ ನೀಡಲಾಗಿದೆ

VISTARANEWS.COM


on

Dasara sambhrama
Koo

ಮೈಸೂರು: ಅ.15ರಂದು ಆರಂಭವಾದ ವಿಶ್ವ ವಿಖ್ಯಾತ ಮೈಸೂರು ದಸರಾ (Mysore Dasara) ಮಹೋತ್ಸವ, ವಿಜಯದಶಮಿ ದಿನವಾದ ಮಂಗಳವಾರ ಜಂಬೂ ಸವಾರಿಯೊಂದಿಗೆ ಮುಕ್ತಾಯವಾಯಿತು. ಕೊನೆಯ ದಿನ ವಿವಿಧ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು, ಸ್ತಬ್ಧಚಿತ್ರಗಳ ಮೆರವಣಿಗೆ, ಜಂಬೂ ಸವಾರಿ, ಪಂಜಿನ ಕವಾಯತು ಅದ್ಧೂರಿಯಾಗಿ ನೆರವೇರಿದ್ದು, ಜಂಬೂ ಸವಾರಿ ವೀಕ್ಷಿಸಲು ಲಕ್ಷಾಂತರ ಜನರು ಆಗಮಿಸಿದ್ದರು. ದಸರಾ ಸಂಭ್ರಮದ ಸ್ಮರಣೀಯ ಚಿತ್ರಗಳನ್ನು ಇಲ್ಲಿ ನೀಡಲಾಗಿದೆ.

ಇದನ್ನೂ ಓದಿ | Mysore Dasara : ಕಣ್ಮನ ಸೆಳೆದ ಪಂಜಿನ ಕವಾಯತು; ಮೈಸೂರು ದಸರಾ ಅದ್ಧೂರಿಯಾಗಿ ಮುಗಿಯಿತು!

Continue Reading

ಕರ್ನಾಟಕ

Mysore Dasara : ಕಣ್ಮನ ಸೆಳೆದ ಪಂಜಿನ ಕವಾಯತು; ಮೈಸೂರು ದಸರಾ ಅದ್ಧೂರಿಯಾಗಿ ಮುಗಿಯಿತು!

Mysore Dasara : ಯೋಧರು ಮತ್ತು ಪೊಲೀಸರ ಬೈಕ್‌ ಸಾಹಸಗಳ ಪ್ರದರ್ಶನಗಳು ಸೇರಿದ್ದವರ ಮೈನವಿರೇಳುವಂತೆ ಮಾಡಿತು. ಕೆಲ ಕಾಲ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದ್ದು, ಗಮನ ಸೆಳೆದವು. ಅಂತಿಮವಾಗಿ ಸುಮಾರು 25 ನಿಮಿಷಗಳ ಕಾಲ ಪಂಜಿನ ಕವಾಯತು ನಡೆಯಿತು. ಈ ಕವಾಯತು ಪ್ರದರ್ಶನದ ಅಷ್ಟೂ ಸಮಯವು ನೋಡುಗರು ಉಸಿರು ಬಿಗಿಹಿಡಿದು ವೀಕ್ಷಣೆ ಮಾಡಿದ್ದು ಕಂಡು ಬಂತು.

VISTARANEWS.COM


on

Torch Light Parade 2023
Koo

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ (Mysore Dasara) ಅದ್ಧೂರಿಯಾಗಿ ಮುಕ್ತಾಯಗೊಂಡಿದೆ. ಇಡೀ ದಸರಾದ ಆಕರ್ಷಣೆಯಲ್ಲಿ ಜಂಬೂ ಸವಾರಿ (Jumboo Savari) ನಂತರ ಪ್ರಮುಖವಾಗಿ ಎದ್ದು ಕಾಣುವ ಪಂಜಿನ ಕವಾಯತಿಗೆ (Torch Light Parade 2023) ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Governor Thaawar Chand Gehlot) ಚಾಲನೆ ನೀಡಿದರು. ಪೊಲೀಸ್‌ ಪಡೆಯಿಂದ ಗೌರವ ವಂದನೆ ಸ್ವೀಕರಿಸುವ ಮೂಲಕ ಅವರು ವರ್ಣರಂಜಿತ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು.

ಮೊದಲು ರಾಷ್ಟ್ರಗೀತೆಯನ್ನು (National Anthem) ನುಡಿಸುವ ಮೂಲಕ ಕವಾಯತು ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ದೊರೆಯಿತು. ರಾಷ್ಟ್ರಗೀತೆ ಮುಕ್ತಾಯವಾಗುತ್ತಿದ್ದಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಬಳಿ ಬಂದ ಕಿಂಗ್‌ ಪವರ್‌ ಅಶ್ವರೂಢ ಖಡ್ಗಧಾರಿ ಪ್ರಧಾನ ದಳಪತಿ ಕವಾಯತು ವರದಿಯನ್ನು ಅತಿಥಿಗಳಿಗೆ ಸಮರ್ಪಿಸಿದರು. ತರುವಾಯ ನಿಶ್ಚಳ ದಳಗಳ ಪರಿವೀಕ್ಷಣೆಗಾಗಿ ರಾಜ್ಯಪಾಲರನ್ನು ಆಹ್ವಾನಿಸಿದರು.

ಆಹ್ವಾನವನ್ನು ಒಪ್ಪಿ ಅಲಂಕೃತ ತೆರೆದ ವಾಹನವನ್ನು ಹತ್ತಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ವಿವಿಧ ಸೇವಾದಳಗಳ ನಿಶ್ಚಳದಳಗಳ ಪರಿವೀಕ್ಷಣೆಯನ್ನು ನಡೆಸಿದರು. ಮೈಸೂರು ನಗರ ಪೊಲೀಸ್‌ ಆಯುಕ್ತ ರಮೇಶ್‌ ಬಿ. ಅವರು ರಾಜ್ಯಪಾಲರಿಗೆ ವ್ಯಕ್ತಿಪರಿವೀಕ್ಷಕರಾಗಿದ್ದರು.

ಇದಾದ ಬಳಿಕ 21 ಕುಶಾಲತೋಪುಗಳನ್ನು ಮೂರು ಹಂತಗಳಲ್ಲಿ ಸಿಡಿಸಲಾಯಿತು. ನಿಶ್ಚಳದ ದಳ ಅಶ್ವಪಡೆಗಳ ಒಂದೊಂದಾಗಿ ಮೂರು ಕುದುರೆಗಳು ಒಂದು ಸುತ್ತು ಸುತ್ತಿ ಬಂದ ಬಳಿಕ ಗಾಳಿಯಲ್ಲಿ ಗುಂಡುಹಾರಿಸುವ ಮೂಲಕ ಗೌರವ ನಮನ ಸಲ್ಲಿಸಲಾಯಿತು. ಈ ವೇಳೆ ಮತ್ತೊಮ್ಮೆ ರಾಷ್ಟ್ರಗೀತೆಯನ್ನು ಮೊಳಗಿಸಲಾಯಿತು.

18 ತುಕಡಿಗಳಿಂದ ಪ್ರದರ್ಶನ

ಒಟ್ಟು 18 ತುಕಡಿಗಳು ಪ್ರದರ್ಶನ ತೋರಿದವು. ಈ ತುಕಡಿಗಳು ಹಲವು ಹಿರಿಯ ಅಧಿಕಾರಿಗಳ ಮಾರ್ಗದರ್ಶನದ ಮೂಲಕ ಕೆಲವು ದಿನಗಳಿಂದ ತಾಲೀಮು ನಡೆಸಿವೆ. ಲಯಬದ್ಧ ಸಂಗೀತಕ್ಕೆ ಶಿಸ್ತುಬದ್ಧ ಹೆಜ್ಜೆಯನ್ನು ಹಾಕುತ್ತಾ ಸಾಗುತ್ತಿರುವುದನ್ನು ನೋಡುವುದೇ ಕಣ್ಣಿಗೆ ಒಂದು ಹಬ್ಬದಂತೆ ಇತ್ತು. ಎದೆ ಸೆಟೆದು ಕೈಬೀಸಿ ಕಾಲನ್ನು ಜೋರಾಗಿ ನೆಲಕ್ಕೆ ಗುದ್ದಿ ಧೂಳೆಬ್ಬಿಸುತ್ತಾ ಆರಕ್ಷಕ ದಳದವರು ವೀರ ನಡಿಗೆ ಸಾಗುತ್ತಿದ್ದರೆ ಸೇರಿದ್ದ ಜನಸ್ತೋಮ ಚಪ್ಪಾಳೆಯ ಸುರಿಮಳೆಯನ್ನೇ ಸುರಿಸಿತು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ, ಗೃಹ ಸಚಿವ ಡಾ. ಜಿ. ಪರಮೇಶ್ವರ್‌, ಸಚಿವರಾದ ವೆಂಕಟೇಶ್‌, ಶಿವರಾಜ್‌ ತಂಗಡಗಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಕಣ್ತುಂಬಿದ ಲೈಟಿಂಗ್‌

ಧ್ವನಿ ಬೆಳಕಿನ ಸಂಭ್ರಮ ಇದೇ ವೇಳೆ ಅನಾವರಣಗೊಳಿಸಲಾಯಿತು. ಧ್ವನಿ ಮೊದಲೋ ಬೆಳಕೋ ಎಂಬ ಪ್ರಶ್ನೆಗೆ ಉತ್ತರ ಸಿಗದಿದ್ದರೂ ಡಿಎನ್‌ಎ ಸಹಯೋಗದಲ್ಲಿ ಧ್ವನಿ – ಬೆಳಕಿನ ಪ್ರದರ್ಶನವು ನೋಡುಗರನ್ನು ರೋಮಾಂಚನಗೊಳಿಸಿತು.

ಮನ ಮುಟ್ಟಿದ ನೃತ್ಯ ರೂಪಕ

ಡಿಎನ್‌ಎ ಸಮೂಹದ ಮೂಲಕ ನೃತ್ಯ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಇದಕ್ಕೆ ಭಜರಂಗಿ ಮೋಹನ್‌ ಅವರು ನೃತ್ಯ ಸಂಯೋಜನೆಯನ್ನು ಮಾಡಿದ್ದಾರೆ. ಈ ವೇಳೆ ಐಗಿರಿ ನಂದಿನಿ ಹಾಡಿಗೆ ನೃತ್ಯ ಮಾಡಲಾಯಿತು. ಜತೆಗೆ ಶಂಕರ್‌ ನಾಗ್‌ ಅಭಿನಯದ ಗೀತಾ ಸಿನಿಮಾದ “ಸಂತೋಷಕ್ಕೆ ಹಾಡು ಸಂತೋಷಕ್ಕೆ”, ರವಿಚಂದ್ರನ್‌ ಅಭಿನಯದ ಮಲ್ಲ ಸಿನಿಮಾದ “ಕರುನಾಡೇ ಕೈ ಚಾಚಿದೆ ನೋಡೇ..” ಹಾಡುಗಳಿಗೆ ಹೆಜ್ಜೆ ಹಾಕಲಾಯಿತು. ಬಳಿಕ ಕಿಚ್ಚ ಸುದೀಪ್‌ ಅಭಿನಯದ ಪೈಲ್ವಾನ್‌ ಸಿನಿಮಾದ “ಪೈಲ್ವಾನ್‌” ಹಾಡಿನಗೆ ಮಲ್ಲಕಂಭ ಸಾಹಸ ಪ್ರದರ್ಶನವನ್ನು ಮಾಡುವ ಮೂಲಕ ಡ್ಯಾನ್ಸ್‌ ಮಾಡಲಾಯಿತು. ಇದಲ್ಲದೆ, ಶಿವರಾಜ್‌ಕುಮಾರ್‌ ಅಭಿನಯದ ಶ್ರೀ ಆಂಜನೇಯಂ, ಪ್ರಸನ್ನಾಂಜನೇಯಂ ಹಾಗೂ ಪುನೀತ್‌ ರಾಜಕುಮಾರ್‌ ಅಭಿನಯದ ಯುವರತ್ನ ಸಿನಿಮಾದ “ಡಾನ್ಸ್‌ ವಿಥ್‌ ಅಪ್ಪು” ಹಾಡಿಗೂ ಹೆಜ್ಜೆ ಹಾಕಲಾಯಿತು. ಕೊನೆಯಲ್ಲಿ ಡಾ. ರಾಜಕುಮಾರ್‌ ಅಭಿನಯದ “ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು” ಹಾಡು ನೋಡುಗರ ಮನ ಗೆಲ್ಲುವಲ್ಲಿ ಯಶ ಕಂಡಿತು.

ಗಮನ ಸೆಳೆದ ಸಾಹಸ ಪ್ರದರ್ಶನ

ಕೊನೆಯಲ್ಲಿ ಯೋಧರು ಮತ್ತು ಪೊಲೀಸರ ಬೈಕ್‌ ಸಾಹಸಗಳ ಪ್ರದರ್ಶನಗಳು ಸೇರಿದ್ದವರ ಮೈನವಿರೇಳುವಂತೆ ಮಾಡಿತು. ಕೆಲ ಕಾಲ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದ್ದು, ಗಮನ ಸೆಳೆದವು. ಅಂತಿಮವಾಗಿ ಸುಮಾರು 25 ನಿಮಿಷಗಳ ಕಾಲ ಪಂಜಿನ ಕವಾಯತು ನಡೆಯಿತು. ಈ ಕವಾಯತು ಪ್ರದರ್ಶನದ ಅಷ್ಟೂ ಸಮಯವು ನೋಡುಗರು ಉಸಿರು ಬಿಗಿಹಿಡಿದು ವೀಕ್ಷಣೆ ಮಾಡಿದ್ದು ಕಂಡು ಬಂತು. ಒಂದೊಂದು ರೀತಿಯ ವಿಶಿಷ್ಟ ಸಾಹಸ ಪ್ರದರ್ಶನಗಳಿಗೂ ಜೋರಾದ ಚಪ್ಪಾಳೆ, ಶಿಳ್ಳೆಗಳು ಕೇಳಿಬಂದವು.

ನೂರಾರು ಜನ ಪೊಲೀಸರಿಂದ ಸಾಹಸ ಪ್ರದರ್ಶನ ನಡೆಯಿತು. ಇದೇ ವೇಳೆ ವೆಲ್‌ ಕಮ್‌ ಟು ಮೈಸೂರು ದಸರಾ, ಫೇರ್‌ ವೆಲ್‌ ಟು ದಸರಾ, ಸಿ ಯು ದಸರಾ ಇನ್ 2024 ಎಂಬಿತ್ಯಾದಿ ಸಂದೇಶಗಳು ಕಂಡು ಬಂದವು.

ಇದನ್ನೂ ಓದಿ: Mysore Dasara : ವೈಭವದ ಜಂಬೂ ಸವಾರಿಗೆ ಸಿಎಂ ಚಾಲನೆ; ರಾಜ ಬೀದಿಯಲ್ಲಿ ಚಾಮುಂಡಿ ವಿಲಾಸ

ಜೋಶ್‌ ಹೆಚ್ಚಿಸಿದ ಪೊಲೀಸ್‌ ಬ್ಯಾಂಡ್‌

ಈ ಮಧ್ಯೆ ಪೊಲೀಸ್‌ ಬ್ಯಾಂಡ್‌ನವರು ಪೊಲೀಸ್‌ ಹಾಗೂ ಸೈನಿಕ ಗೀತೆಗಳನ್ನು ಪ್ರಸ್ತುತಿಪಡಿಸಿದರು. “ಸಾರೇ ಜಹಾಸೇ ಅಚ್ಚಾ” ಸೇರಿದಂತೆ ಇನ್ನೂ ಹಲವು ಗೀತೆಯನ್ನು ಪೊಲೀಸ್‌ ಬ್ಯಾಂಡ್‌ನವರು ನುಡಿಸಿ ಗಮನ ಸೆಳೆದರು. ಸೇರಿದ್ದವರಿಗೆಲ್ಲರಿಗೂ ಒಮ್ಮೆ ದೇಶಭಕ್ತಿ ಗೀತೆಯ ಬೀಟ್‌ಗಳು ಜೋಶ್‌ ಅನ್ನು ಹೆಚ್ಚಿಸುತ್ತಿದ್ದವು.

Continue Reading

ಕರ್ನಾಟಕ

Anekal Dasara : ಆನೇಕಲ್‌ನಲ್ಲಿ ಜಂಬೂ ಸವಾರಿಗೆ ಮೆರುಗು ನೀಡಿದ ಕೇರಳದ ಸಾಧು ಆನೆ

Anekal Dasara : ಬೆಂಗಳೂರು ಹೊರವಲಯದ ಆನೇಕಲ್ ಹಾಗೂ ಬನ್ನೇರುಘಟ್ಟದಲ್ಲಿ ವಿಜೃಂಭಣೆಯಿಂದ ಜಂಬೂ ಸವಾರಿ ಜರುಗಿತು. ಮಿನಿ ಮೈಸೂರು ಖ್ಯಾತಿಯ ಆನೇಕಲ್‌ನಲ್ಲಿ ಚೌಡೇಶ್ವರಿ ಜಂಬೂಸವಾರಿಗೆ ಕೇರಳದ ಸಾಧು ಆನೆ ಮೆರಗು ನೀಡಿತು.

VISTARANEWS.COM


on

By

Anekal Dasara 2023
Koo

ಆನೇಕಲ್‌: ನಾಡಹಬ್ಬ ಮೈಸೂರು ದಸರಾ ಮಾದರಿಯಲ್ಲೇ ಆನೇಕಲ್‌ನಲ್ಲೂ (Anekal Dasara) ವಿಜಯದಶಮಿ ದಸರಾ ಉತ್ಸವ ಮತ್ತು ಜಂಬೂ ಸವಾರಿ (Jambu savari) ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು. ಕೇರಳ ಮೂಲದ ಸಾಧು ಆನೆ ಚೌಡೇಶ್ವರಿ ದೇವಿ ಉತ್ಸವ ಮೂರ್ತಿ ಅಂಬಾರಿ ಹೊತ್ತು ಜಂಬೂಸವಾರಿ ಮೂಲಕ ಆನೇಕಲ್ ದಸರಾ ಉತ್ಸವಕ್ಕೆ ಮೆರಗು ನೀಡಿತು. ರಾಜಗಾಂಭೀರ್ಯದಲ್ಲಿ ಗಜರಾಜ ಹೆಜ್ಜೆ ಹಾಕಿದ್ದು ಭಕ್ತ ಸಾಗರ ಅದ್ಧೂರಿ ದಸರಾ ಜಂಬು ಸವಾರಿಯನ್ನು ಕಂಡು ಪುನೀತರಾಗಿದ್ದಾರೆ.

Anekal And bannerughatta  Dasara 2023

ಮೈಸೂರಿನಲ್ಲಿ ನಾಡದೇವತೆ ಚಾಮುಂಡೇಶ್ವರಿ ದೇವಿ ಜಂಬೂಸವಾರಿ ನಡೆಸಿದಂತೆ ಆನೇಕಲ್‌ನಲ್ಲೂ ನಾಡಹಬ್ಬ ದಸರಾ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಿದ್ದಾರೆ. ನಗರದ ಆದಿ ದೇವತೆ ಚೌಡೇಶ್ವರಿ ದೇವಿ ಅಂಬಾರಿಯನ್ನು ಹೊತ್ತ ಕೇರಳದ ಸಾಧು ಆನೆ ಸವಾರಿ ಪಟ್ಟಣದ ತಾಲೂಕು ಕಚೇರಿಯಿಂದ ತಿಲಕ್ ವೃತ್ತದ ಚೌಡೇಶ್ವರಿ ದೇವಾಲಯದ ಬಳಿ ಬರುತ್ತಿದ್ದಂತೆ ಜನಸಾಗರ ತುಂಬಿತ್ತು.

Anekal And bannerughatta  Dasara 2023

ದಿವ್ಯ ಜ್ಞಾನನಂದ ಸ್ವಾಮಿ ಹಾಗೂ ಶಾಸಕ ಬಿ.ಶಿವಣ್ಣ ಸೇರಿದಂತೆ ಗಣ್ಯರು ಜಂಬೂಸವಾರಿ ಹೊರಟಿದ್ದ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿದರು. ಬಳಿಕ ಆನೇಕಲ್ ‌ನಗರದ ಪ್ರಮುಖ ಬೀದಿಗಳಲ್ಲಿ ಜಂಬೂಸವಾರಿ ಗಜಗಾಂಭೀರ್ಯವಾಗಿ ಸಾಗಿತು. ಚೌಡೇಶ್ವರಿ ದೇವಿ ಅಂಬಾರಿ ಹೊತ್ತು ಸಾಗಿದ ಸಾಧು ಆನೆಯನ್ನು ಕಂಡು ಭಕ್ತರು ರೋಮಾಂಚನಗೊಂಡರು.

ಇದನ್ನೂ ಓದಿ: Karnataka Weather : ಮಳೆಯಾಟ ಬಂದ್‌; ಇನ್ನೆರಡು ದಿನ ಕರ್ನಾಟಕ ಸಿಕ್ಕಾಪಟ್ಟೆ Hot

Anekal And bannerughatta  Dasara 2023

ತಮಿಳುನಾಡು, ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಿಂದ ಅಪಾರ ಸಂಖ್ಯೆಯ ಭಕ್ತರು ತಿಲಕ್ ವೃತ್ತದ ಬಳಿ ಚೌಡೇಶ್ವರಿ ದೇವಿ ಅಂಬಾರಿ ದೃಶ್ಯವನ್ನು ಕಣ್ತುಂಬಿಕೊಂಡರು. ಎಂದಿನಂತೆ ತೋಗಟವೀರ ಜನಾಂಗದ ಸದಸ್ಯರು ವಿಜಯದಶಮಿ ಉತ್ಸವ ವಿಜೃಂಭಣೆಯಿಂದ ನೆರವೇರಿಸಿದ್ದರು. ತಾಯಿ ಚೌಡೇಶ್ವರಿ ಸರ್ವರಿಗೂ ಒಳಿತು ಮಾಡಲಿ ಎಂದು ಶಾಸಕ ಬಿ ಶಿವಣ್ಣ ಪ್ರಾರ್ಥಿಸಿದರು.

Anekal And bannerughatta  Dasara 2023

ವಿಶ್ವ ವಿಖ್ಯಾತ ಮೈಸೂರು ದಸರಾ ಮಾದರಿಯಲ್ಲಿಯೇ ಆನೇಕಲ್ ದಸರಾ ನಡೆಯುತ್ತಿದ್ದು, ಮಿನಿ ದಸರಾ ಎಂದೇ ಪ್ರಖ್ಯಾತಿಗಳಿಸುತ್ತಿದೆ. ಕಲಾತಂಡಗಳ ಜತೆಗೆ ಅಂಬಾರಿ ಸಾಗುವ ದೃಶ್ಯ ನೋಡುವುದೇ ಒಂದು ಹಬ್ಬವಾಗಿತ್ತು. ಕಲಾತಂಡಗಳು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ನೆರೆದಿದ್ದ ಜನರನ್ನು ರಂಜಿಸಿದ್ದರು.

Anekal And bannerughatta  Dasara 2023

ಚಂಪಕಧಾಮಸ್ವಾಮಿ ಜಂಬೂ ಸವಾರಿ

ಬನ್ನೇರುಘಟ್ಟದಲ್ಲೂ ಶ್ರೀ ಚಂಪಕಧಾಮಸ್ವಾಮಿ ಜಂಬೂ ಸವಾರಿ ನಡೆದಿದೆ. ದೇವರ ಉತ್ಸವ ಮೂರ್ತಿ ಹೊತ್ತಿದ ಅಂಬಾರಿಗೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿ ಜಂಬೂ ಸವಾರಿಗೆ ಚಾಲನೆ ನೀಡಿದರು. ಉತ್ಸವ ಮೂರ್ತಿಯನ್ನು ಹೊತ್ತ ಗಜರಾಜ ಬನ್ನೇರುಘಟ್ಟದ ರಾಜಬೀದಿಗಳಲ್ಲಿ ರಾಜಗಾಂಭೀರ್ಯದಿಂದ ಜಾನಪದ ಕಲಾತಂಡಗಳ ಜತೆ ಹೆಜ್ಜೆ ಹಾಕಿತು. ಬೆಂಗಳೂರು, ತಮಿಳುನಾಡು ಸೇರಿದಂತೆ ನಾನಾ ಕಡೆಗಳಿಂದ ಆಗಮಿಸಿರುವ ಭಕ್ತ ಸಾಗರ ಕಣ್ತುಂಬಿಕೊಂಡರು.

Anekal And bannerughatta  Dasara 2023

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
Prajwal Revanna Case
ಕರ್ನಾಟಕ3 hours ago

Prajwal Revanna Case: ಅಶ್ಲೀಲ ವಿಡಿಯೊ ಕೇಸ್; ಚೇತನ್, ಲಿಖಿತ್‌ಗೆ 14 ದಿನ ನ್ಯಾಯಾಂಗ ಬಂಧನ‌

IPL 2024
ಪ್ರಮುಖ ಸುದ್ದಿ3 hours ago

IPL 2024 : ಡೆಲ್ಲಿ ವಿರುದ್ಧ ಆರ್​​ಸಿಬಿ 47 ರನ್ ಗೆಲುವು, ಪ್ಲೇಆಫ್​ಗೆ ಇನ್ನೊಂದು ಗೆಲುವು ಬೇಕು

Chetan Chandra
ಕರ್ನಾಟಕ4 hours ago

Chetan Chandra: ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಮೇಲೆ ಹಲ್ಲೆ; ರಕ್ತ ಬರುವಂತೆ ಥಳಿತ

Virat kohli
Latest4 hours ago

Virat kohli: ಅಂಪೈರ್​ಗಳ ಜತೆ ಮತ್ತೆ ಜಗಳವಾಡಿದ ವಿರಾಟ್​ ಕೊಹ್ಲಿ; ಇಲ್ಲಿದೆ ವಿಡಿಯೊ

Sunil Narine
ಪ್ರಮುಖ ಸುದ್ದಿ4 hours ago

Sunil Narine : ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದು ಎಲೈಟ್​ ಪಟ್ಟಿ ಸೇರಿದ ಸುನೀಲ್ ನರೈನ್​

vijay Rao herur
ಸಿನಿಮಾ4 hours ago

Vijay Rao Herur: ‘ವಿಜಯದಾಸರು’ ಚಿತ್ರದ ಸಹ ನಟ ವಿಜಯ್‌ ರಾವ್ ಹೇರೂರು ವಿಧಿವಶ

Virat Kohli
ಪ್ರಮುಖ ಸುದ್ದಿ5 hours ago

Virat kohli: ಕೊಹ್ಲಿಯನ್ನುಔಟ್ ಮಾಡಿ ಕೆಣಕಿದ ಇಶಾಂತ್​ ಶರ್ಮಾ; ವಿಡಿಯೊ ನೋಡಿ

Ravindra Jadeja
ಕ್ರೀಡೆ5 hours ago

Ravindra Jadeja : ವಿಕೆಟ್​ಗೆ ಹೋಗುತ್ತಿದ್ದ ಚೆಂಡು ತಡೆದ ಜಡೇಜಾಗೆ ಔಟ್ ಕೊಟ್ಟ ಅಂಪೈರ್​; ಇಲ್ಲಿದೆ ವಿಡಿಯೊ

Rain News
ಕರ್ನಾಟಕ5 hours ago

Rain News: ಬಾಗಲಕೋಟೆಯಲ್ಲಿ ಸಿಡಿಲಿಗೆ ಬಾಲಕ ಬಲಿ; ಬೆಳಗಾವಿಯ ಮನೆಗಳಿಗೆ ನುಗ್ಗಿದ ಮಳೆ ನೀರು

IPL 2024
ಪ್ರಮುಖ ಸುದ್ದಿ5 hours ago

IPL 2024 : ಅತಿಯಾಗಿ ಸಂಭ್ರಮಿಸುತ್ತಿದ್ದ ಡೆಲ್ಲಿ ಬೌಲರ್​ ರಸಿಕ್ ಸಲಾಮ್​ನನ್ನು ತಳ್ಳಿದ ರಜತ್​ ಪಾಟೀದಾರ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case I was never kidnapped and son has made a false complaint Video of victim goes viral
ಕ್ರೈಂ8 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ9 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ9 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ13 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ14 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ22 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು1 day ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ3 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ3 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

ಟ್ರೆಂಡಿಂಗ್‌