Job market | ಡೆಲಾಯಿಟ್‌, ಪಿಡಬ್ಲ್ಯುಸಿ ಸೇರಿದಂತೆ 4 ಕನ್ಸಲ್ಟಿಂಗ್‌ ಕಂಪನಿಗಳಲ್ಲಿ 80,000 ನೇಮಕ ಶೀಘ್ರ - Vistara News

ಉದ್ಯೋಗ

Job market | ಡೆಲಾಯಿಟ್‌, ಪಿಡಬ್ಲ್ಯುಸಿ ಸೇರಿದಂತೆ 4 ಕನ್ಸಲ್ಟಿಂಗ್‌ ಕಂಪನಿಗಳಲ್ಲಿ 80,000 ನೇಮಕ ಶೀಘ್ರ

ಕಾರ್ಪೊರೇಟ್‌ ವಲಯದ ನಾಲ್ಕು ಪ್ರಮುಖ ಕನ್ಸಲ್ಟಿಂಗ್‌ ಕಂಪನಿಗಳಲ್ಲಿ ಮುಂಬರುವ ತಿಂಗಳುಗಳಲ್ಲಿ 80 ಸಾವಿರ ಮಂದಿಯನ್ನು ನೇಮಕ ಮಾಡಿಕೊಳ್ಳುವ (Job market) ನಿರೀಕ್ಷೆ ಇದೆ. ಉದ್ಯೋಗಾಕಾಂಕ್ಷಿಗಳಿಗೆ ಇದು ಸಿಹಿ ಸುದ್ದಿ.

VISTARANEWS.COM


on

Job market AI machine learning to increase job opportunities WEF report
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ದೇಶದಲ್ಲಿ ನಾಲ್ಕು ಪ್ರಮುಖ ಕನ್ಸಲ್ಟಿಂಗ್‌ ಕಂಪನಿಗಳಲ್ಲಿ ಮುಂಬರುವ ತಿಂಗಳುಗಳಲ್ಲಿ ಒಟ್ಟು 80,000 ಉದ್ಯೋಗಿಗಳ ನೇಮಕಾತಿ ( Job market) ಪ್ರಕ್ರಿಯೆ ನಡೆಯಲಿದೆ. ಕೋವಿಡ್-‌19 ಬಿಕ್ಕಟ್ಟು ನಿಯಂತ್ರಣದಲ್ಲಿರುವ ಹಿನ್ನೆಲೆಯಲ್ಲಿ ವಾಣಿಜ್ಯ ಚಟುವಟಿಕೆಗಳು ಗಣನೀಯ ವಿಸ್ತರಿಸುತ್ತಿರುವುದು ಇದಕ್ಕೆ ಕಾರಣ.

ಡೆಲಾಯಿಟ್‌, ಪಿಡಬ್ಲ್ಯುಸಿ, ಇವೈ ಮತ್ತು ಕೆಪಿಎಂಜಿ ( Deloitte, PWC, EY, KPMG) ಒಟ್ಟಾಗಿ 80 ಸಾವಿರ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಿವೆ. ಉದ್ಯಮ ವಲಯದಲ್ಲಿ ಉಂಟಾಗುತ್ತಿರುವ ಬೇಡಿಕೆ ಮತ್ತು ಉದ್ಯೋಗಿಗಳ ವಲಸೆ ಹೆಚ್ಚಿರುವುದರಿಂದ ನೇಮಕ ಪ್ರಕ್ರಿಯೆಯನ್ನು ಚುರುಕುಗೊಳಿಸಲು ಕಂಪನಿಗಳು ಮುಂದಾಗಿವೆ. ಪಿಡಬ್ಲ್ಯುಸಿ ಇಂಡಿಯಾ ಕಳೆದ ವರ್ಷ 3,000 ಹುದ್ದೆಗಳನ್ನು ಸೃಷ್ಟಿಸಿತ್ತು. ಮುಂದಿನ 5 ವರ್ಷಗಳಲ್ಲಿ 10,000 ಹೆಚ್ಚುವರಿ ನೇಮಕಾತಿಗೆ ಮುಂದಾಗಿದೆ. ಮೇಲ್ಕಂಡ ನಾಲ್ಕೂ ಕಂಪನಿಗಳು ಭಾರತದಲ್ಲಿ ಮುಂದಿನ 2-3 ವರ್ಷಗಳಲ್ಲಿ 210,000 ತಂತ್ರಜ್ಞಾನ ಮತ್ತು ತಂತ್ರಜ್ಞಾನೇತರ ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆ ಇದೆ. ಜೂನ್‌ ಅಂತ್ಯಕ್ಕೆ ಇವುಗಳ ಒಟ್ಟು ಆದಾಯ 21,500 ಕೋಟಿ ರೂ. ದಾಟುವ ಸಾಧ್ಯತೆಯೂ ಇದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.

ಯಾವ ಹುದ್ದೆಗಳಿಗೆ ಬೇಡಿಕೆ?

ತಂತ್ರಜ್ಞಾನಕ್ಕೆ ಸಂಬಂಧಿಸಿ ಡೆವಲಪರ್‌, ಸೈಬರ್‌ಸೆಕ್ಯುರಿಟಿ, ಕ್ಲೌಡ್‌ ಟೆಕ್‌, ಮೊಬಿಲಿಟಿ, ಡೇಟಾ ಸೈನ್ಸ್‌, ಅನಾಲಿಟಿಕ್ಸ್‌ ವಿಭಾಗದ ಹುದ್ದೆಗಳಿಗೆ ಬೇಡಿಕೆ ಇದೆ. ತಂತ್ರಜ್ಞಾನೇತರ ವಿಭಾಗದಲ್ಲಿ ಬಿಸಿನೆಸ್‌ ವಿಶ್ಲೇಷಣೆ, ಹಣಕಾಸು ತಜ್ಞರು, ಬಿಸಿನೆಸ್‌ ಆಪರೇಷನ್‌ ಕನ್ಸಲ್ಟಿಂಗ್‌ಗೆ ಬೇಡಿಕೆ ಉಂಟಾಗಿದೆ.

ಪ್ರತಿಭಾವಂತರ ಕೊರತೆ: ಹೀಗಿದ್ದರೂ, ಪ್ರತಿಭಾವಂತ ಉದ್ಯೋಗಿಗಳ ಕೊರತೆ ಉಂಟಾಗಿದೆ. 85% ಕಂಪನಿಗಳು ಪ್ರತಿಭಾವಂತ ಉದ್ಯೋಗಿಗಳ ಅಭಾವವನ್ನು ಎದುರಿಸುತ್ತಿವೆ. ಪ್ರತಿಭೆ-ಕೌಶಲದ ಕೊರತೆ ತೀವ್ರವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿಕ್ಷಣ

UPSC: ಐಇಎಸ್‌ / ಐಎಸ್‌ಎಸ್‌ಇ 2024 ಪರೀಕ್ಷೆಯ ದಿನಾಂಕ ಪ್ರಕಟ: ಇಲ್ಲಿದೆ ವೇಳಾಪಟ್ಟಿ

UPSC: ಕೇಂದ್ರ ಲೋಕ ಸೇವಾ ಆಯೋಗವು 2024ನೇ ಸಾಲಿನ ಇಂಡಿಯನ್ ಎಕನಾಮಿಕ್ ಸರ್ವಿಸ್ ಮತ್ತು ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವಿಸ್ ಎಕ್ಸಾಮಿನೇಷನ್ನ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಯುಪಿಎಸ್‌ಸಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಟೈಮ್‌ ಟೇಬಲ್‌ ಪ್ರಕಟಿಸಿದ್ದು, ಈ ಬಗ್ಗೆ ವಿವರ ಇಲ್ಲಿದೆ.

VISTARANEWS.COM


on

UPSC
Koo

ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (UPSC)ವು 2024ನೇ ಸಾಲಿನ ಇಂಡಿಯನ್ ಎಕನಾಮಿಕ್ ಸರ್ವಿಸ್ (Indian Economic Service-IES) / ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವಿಸ್ ಎಕ್ಸಾಮಿನೇಷನ್ (Indian Statistical Service Examination-ISSE)ನ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಯುಪಿಎಸ್‌ಸಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಟೈಮ್‌ ಟೇಬಲ್‌ ಪ್ರಕಟಿಸಿದ್ದು, ಈ ಬಗ್ಗೆ ವಿವರ ಇಲ್ಲಿದೆ.

ಯಾವಾಗ, ಯಾವ ಪರೀಕ್ಷೆ?

ಯುಪಿಎಸ್‌ಸಿ ಐಇಎಸ್ / ಐಎಸ್ಎಸ್ಇ 2024 ಪರೀಕ್ಷೆಗಳು ಜೂನ್ 21ರಂದು ಆರಂಭವಾಗಲಿದ್ದು, 22, 23ರಂದು ನಡೆಯಲಿದೆ. ಈ ಪರೀಕ್ಷೆ ಸಾಮಾನ್ಯ ಇಂಗ್ಲಿಷ್, ಸಾಮಾನ್ಯ ಅಧ್ಯಯನ, ಸಾಮಾನ್ಯ ಅರ್ಥಶಾಸ್ತ್ರ, ಸಂಖ್ಯಾಶಾಸ್ತ್ರ ಮತ್ತು ಭಾರತೀಯ ಅರ್ಥಶಾಸ್ತ್ರ ಸೇರಿದಂತೆ ವಿವಿಧ ವಿಷಯಗಳಲ್ಲಿ ನಡೆಯಲಿದೆ. ಆರ್ಥಿಕ ಮತ್ತು ಸಂಖ್ಯಾಶಾಸ್ತ್ರೀಯ ಕ್ಷೇತ್ರಗಳಲ್ಲಿ ವೃತ್ತಿ ಜೀವನದ ನಡೆಸಲು ಬಯಸುವವರು ಈ ಪ್ರತಿಷ್ಠಿತ ಪರೀಕ್ಷೆಯ ವೇಳಾಪಟ್ಟಿಯನ್ನು ಎಚ್ಚರಿಕೆಯಿಂದ ಗಮನಿಸುವಂತೆ ಪ್ರಕಟಣೆ ತಿಳಿಸಿದೆ. ಪ್ರಶ್ನೆ ಪತ್ರಿಕೆ ವಸ್ತುನಿಷ್ಠ ಪ್ರಶ್ನೆಗಳು ಮತ್ತು ವಿವರಣಾತ್ಮಕ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ.

ಜೂನ್‌ 21ರಂದು ಬೆಳಿಗ್ಗೆ 9 ಗಂಟೆಗೆ ಸಾಮಾನ್ಯ ಇಂಗ್ಲಿಷ್‌ ಮತ್ತು ಅಪರಾಹ್ನ 2.30ಕ್ಕೆ ಸಾಮಾನ್ಯ ಅಧ್ಯಯನ ಪರೀಕ್ಷೆ ನಡೆಯಲಿದೆ. ಜೂನ್‌ 22ರಂದು ಬೆಳಿಗ್ಗೆ 9 ಗಂಟೆಗೆ ಸಾಮಾನ್ಯ ಅರ್ಥಶಾಸ್ತ್ರ-I, ಸ್ಟ್ಯಾಟಿಸ್ಟಿಕ್ಸ್‌-I ಮತ್ತು ಅಪರಾಹ್ನ 2.30ರಿಂದ ಸಾಮಾನ್ಯ ಅರ್ಥಶಾಸ್ತ್ರ-II ಹಾಗೂ ಸ್ಟ್ಯಾಟಿಸ್ಟಿಕ್ಸ್‌-II ಎಕ್ಸಾಂ ಆಯೋಜಿಸಲಾಗಿದೆ. ಇನ್ನು ಜೂನ್‌ 23ರಂದು ಬೆಳಿಗ್ಗೆ 9 ಗಂಟೆಯಿಂದ ಸಾಮಾನ್ಯ ಅರ್ಥಶಾಸ್ತ್ರ-III ಮತ್ತು ಸ್ಟ್ಯಾಟಿಸ್ಟಿಕ್ಸ್‌-III ಹಾಗೂ ಅಪರಾಹ್ನ 2.30ರಿಂದ ಭಾರತೀಯ ಅರ್ಥಶಾಸ್ತ್ರ ಹಾಗೂ ಸ್ಟ್ಯಾಟಿಸ್ಟಿಕ್ಸ್‌-IV ಪರೀಕ್ಷೆ ನಡೆಯಲಿದೆ.

ವೇಳಾಪಟ್ಟಿ ವೀಕ್ಷಿಸಲು ಹೀಗೆ ಮಾಡಿ

  • ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ https://upsc.gov.in/ಗೆ ಭೇಟಿ ನೀಡಿ.
  • ಬಲಭಾಗದಲ್ಲಿ ಕಾಣಿಸುವ What’s New ಆಯ್ಕೆಯ ಕೆಳಗೆ ಕಂಡು ಬರುವ Examination Time Table: Indian Economic Service – Indian Statistical Service Examination, 2024 ಆಯ್ಕೆಯನ್ನು ಕ್ಲಿಕ್‌ ಮಾಡಿ.
  • ಈಗ ತೆರೆದುಕೊಳ್ಳುವ ಪುಟದಲ್ಲಿನ Document ಆಪ್ಶನ್‌ ಆಯ್ಕೆ ಮಾಡಿದರೆ ವೇಳಾಪಟ್ಟಿ ತೆರೆದುಕೊಳ್ಳುತ್ತದೆ.

Indian Economic Service – Indian Statistical Service Examinationನ ಟೈಮ್‌ ಟೇಬಲ್‌ ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್‌ ಮಾಡಿ.

ಹಾಲ್‌ ಟಿಕೆಟ್‌ ಯಾವಾಗ?

ಈ ಪರೀಕ್ಷೆಗೆ 2024ರ ಏಪ್ರಿಲ್ 10ರಿಂದ 30ರವರೆಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಲಿಖಿತ ಪರೀಕ್ಷೆಯು ಗರಿಷ್ಠ 1,000 ಅಂಕಗಳನ್ನು ಹೊಂದಿದೆ. ಪ್ರವೇಶ ಪತ್ರ (Hall Ticket)ವನ್ನು ಪರೀಕ್ಷೆಯ ಏಳು ದಿನಗಳ ಮೊದಲು ಬಿಡುಗಡೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಬಹುದು. ಈ ಪರೀಕ್ಷೆಯ ಮೂಲಕ ಆಯ್ಕೆಯಾದ ಅಧಿಕಾರಿಗಳನ್ನು ಆರ್ಥಿಕ ನೀತಿಗಳನ್ನು ರೂಪಿಸುವಲ್ಲಿ ಹಾಗೂ ಕಾರ್ಯಗತಗೊಳಿಸುವಲ್ಲಿ ಮತ್ತು ಸರ್ಕಾರದ ನಿರ್ಧಾರ ತೆಗೆದುಕೊಳ್ಳಲು ಸಹಾಯ ಮಾಡಲು ನೇಮಿಸಲಾಗುತ್ತದೆ.

ಇದನ್ನೂ ಓದಿ: UPSC EXAM-2023: ಯುಪಿಎಸ್‌ಸಿ ಟಾಪರ್ ವಾಸಿಸುತ್ತಿದ್ದುದು ಮನೆಯಲ್ಲಲ್ಲ, ಈ ಜೋಪಡಿಯಲ್ಲಿ!

Continue Reading

ಉದ್ಯೋಗ

Job Alert: ಟಿಸಿಎಸ್‌ನಲ್ಲಿದೆ ಭರ್ಜರಿ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿ

Job Alert: ದೇಶದ ಐಟಿ ವಲಯದ ಅತಿದೊಡ್ಡ ಕಂಪನಿಯಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ತನ್ನಲ್ಲಿ ಖಾಲಿ ಇರುವ ಸಾವಿರಾರು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಬೆಂಗಳೂರು, ಚೆನ್ನೈ, ಹೈದರಾಬಾದ್, ಎನ್‌ಸಿಆರ್‌, ಪುಣೆ, ಅಹಮದಾಬಾದ್, ಮುಂಬೈ, ಕೋಲ್ಕತ್ತಾ ಮುಂತಾದೆಡೆಗೆ ನೇಮಕಾತಿ ನಡೆಯಲಿದೆ. ವಿವಿಧ ಹುದ್ದೆಗಳಿಗೆ ಸಂಬಂಧಿಸಿ ಅರ್ಜಿ ಸಲ್ಲಿಸಲು ಜುಲೈವರೆಗೂ ಅವಕಾಶ ನೀಡಲಾಗಿದೆ.

VISTARANEWS.COM


on

Job Alert
Koo

ಬೆಂಗಳೂರು: ಒಂದೊಳ್ಳೆ ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಹಾಗಾದರೆ ನಿಮಗೊಂದು ಗುಡ್‌ನ್ಯೂಸ್‌. ದೇಶದ ಐಟಿ ವಲಯದ ಅತಿದೊಡ್ಡ ಕಂಪನಿಯಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ತನ್ನಲ್ಲಿ ಖಾಲಿ ಇರುವ ಸಾವಿರಾರು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. 1 ವರ್ಷದ ಕಾರ್ಯಾನುಭ ಇದ್ದವರೂ ಅರ್ಜಿ ಸಲ್ಲಿಸಬಹುದು (Tcs Recruitment 2024). ಬೆಂಗಳೂರು ಸೇರಿದಂತೆ ದೇಶಾದ್ಯಂತ ವಿವಿಧ ಹುದ್ದೆಗಳು ಖಾಲಿ ಇದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ವಿವಿಧ ಹುದ್ದೆಗಳಿಗೆ ಸಂಬಂಧಿಸಿ ಅರ್ಜಿ ಸಲ್ಲಿಸಲು ಜುಲೈವರೆಗೂ ಅವಕಾಶ ನೀಡಲಾಗಿದೆ (Job Alert).

ಹುದ್ದೆಗಳ ವಿವರ

ವೈರ್‌ಲೈನ್‌ – ವೈರ್‌ಲೆಸ್ ನೆಟ್‌ವರ್ಕ್‌ ಸೆಕ್ಯೂರಿಟಿ, ಆಪರೇಷನ್ ಎನೇಬಲ್ಮೆಂಟ್ -ಹ್ಯೂಮನ್ ರಿಸೋರ್ಸ್, ಇಪಿ ಡ್ರೈವ್
ಆಪರೇಷನ್‌ ಸ್ಪೆಷಲಿಸ್ಟ್‌, ಎಂಎಫ್‌ಜಿ ಇಯು ಡ್ರೈವ್, ಎನ್‌ಜಿಎಂ ಎಪಿಎಸಿ ಬಿಎಫ್‌ಎಸ್‌, ಕಸ್ಟಮರ್ ಸರ್ವೀಸ್, ಆ್ಯಕ್ಟಿವ್ ಡೈರೆಕ್ಟರಿ ಡೈರೆಕ್ಟರಿ, ಎಸ್‌ಸಿಸಿಎಂ, ವಿಂಡೋಸ್ ಅಡ್ಮಿನ್, ಜಾವ ಡೆವಲಪರ್, ಪಬ್ಲಿಕ್ ಕ್ಲೌಡ್ ಎಡಬ್ಲ್ಯೂಎಸ್ ಅಡ್ಮಿನ್, ಬ್ಯಾಕಪ್ ಅಡ್ಮಿನ್, ಸ್ಟೋರೇಜ್ ಅಡ್ಮಿನ್, DevOps Admin, ಮಿಡಲ್‌ವೇರ್ ಅಡ್ಮಿನ್, ಓಪೆನ್‌ಶಿಫ್ಟ್‌ ಅಡ್ಮಿನ್, ನೆಟ್‌ವರ್ಕ್ ಅಡ್ಮಿನ್, ಡಾಟಾಬೇಸ್ ಅಡ್ಮಿನ್, ಇಎಲ್‌ಕೆ ಅಡ್ಮಿನ್, ಸೆಕ್ಯೂರಿಟಿ ಎಸ್‌ಎಂಇ, ಟೀಮ್‌ ಸೆಂಟರ್, ಲಿನಕ್ಸ್‌ ಅಡ್ಮಿನ್,
ಮೆಕ್ಯಾನಿಕಲ್ ಡಿಸೈನ್, ಸರ್ವೀಸ್‌ನೌ ಡೆವಲಪರ್, ಓಪೆನ್‌ಸ್ಟಾಕ್‌ ಅಡ್ಮಿನ್, ನೆಟ್‌ವರ್ಕ್‌ ಟೆಸ್ಕಿಂಗ್ ಆ್ಯಂಡ್‌ ಆಟೋಮೇಷನ್, ಪ್ರೋಗ್ರೆಸ್ ಡಾಟಾಬೇಸ್ ಅಡ್ಮಿನಿಸ್ಟ್ರೇಟರ್, ಜಾವ ಫುಲ್‌ಸ್ಟಾಕ್ ಡೆವಲಪರ್ ಮುಂತಾಹ ಹುದ್ದೆಗಳು ಖಾಲಿ ಇವೆ.

ಗಮನಿಸಿ, ಒಂದೊಂದು ಹುದ್ದೆಗೂ ಅರ್ಜಿ ಸಲ್ಲಿಸಲು ಬೇರೆ ಬೇರೆ ದಿನಾಂಕ ಮತ್ತು ಕಾರ್ಯಾನುಭವ ನಿಗದಿ ಪಡಿಸಲಾಗಿದೆ. ಬೆಂಗಳೂರು, ಚೆನ್ನೈ, ಹೈದರಾಬಾದ್, ಎನ್‌ಸಿಆರ್‌, ಪುಣೆ, ಅಹಮದಾಬಾದ್, ಮುಂಬೈ, ಕೋಲ್ಕತ್ತಾ ಮುಂತಾದೆಡೆಗೆ ನೇಮಕಾತಿ ನಡೆಯಲಿದೆ.

ಹೆಚ್ಚಿನ ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನೀವು ಹುಡುಕುತ್ತಿರುವ ಆಸಕ್ತ ಹುದ್ದೆ ಸಿಕ್ಕಲ್ಲಿ ಅದರ ಮೇಲೆ ಕ್ಲಿಕ್ ಮಾಡಿ.
  • ನಂತರ ಈ ಹುದ್ದೆಯ ಕುರಿತು ಅರ್ಹತೆ, ರೋಲ್ ಕರ್ತವ್ಯ, ಅನುಭವ, ಇತರ ವಿವರಗಳು ಇರುತ್ತವೆ. ಓದಿಕೊಳ್ಳಿ.
  • ನಂತರ ‘Apply’ ಆಯ್ಕೆಯನ್ನು ಕ್ಲಿಕ್ ಮಾಡಿ.
  • ಇಮೇಲ್‌ ವಿಳಾಸ, ಪಾಸ್‌ವರ್ಡ್‌ ಮೂಲಕ ಸೈನ್‌ ಇನ್ ಆಗಿ, ಅರ್ಜಿ ಸಲ್ಲಿಸಿ.

ಇದನ್ನೂ ಓದಿ: Job alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅಪ್ಲೈ ಮಾಡಿ

Continue Reading

ಉದ್ಯೋಗ

Job Alert: ಗಮನಿಸಿ: 277 ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಮೇ 24 ಕೊನೆಯ ದಿನ

Job Alert: ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್ (KPSC) ಗ್ರೂಪ್‌ ಬಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸುಮಾರು 277 ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಮೇ 24 ಕೊನೆಯ ದಿನ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ, ಗರಿಷ್ಠ ವಯಸ್ಸು 35 ವರ್ಷ. ಅರ್ಜಿ ಶುಲ್ಕವಾಗಿ ಸಾಮಾನ್ಯ ಅಭ್ಯರ್ಥಿಗಳು 300 ರೂ., ಇತರ ಹಿಂದುಳಿದ ಅಭ್ಯರ್ಥಿಗಳು 150 ರೂ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು ಶುಲ್ಕ ಪಾವತಿಸಬೇಕಾಗಿಲ್ಲ.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಗುಡ್‌ನ್ಯೂಸ್‌. ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್ (KPSC) ಗ್ರೂಪ್‌ ಬಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ(KPSC Group B (RPC) Recruitment 2024). ಸುಮಾರು 277 ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಮೇ 24 ಕೊನೆಯ ದಿನ (Job Alert).

ಬಿ.ಟೆಕ್‌ ವಿದ್ಯಾರ್ಹತೆಯುಳ್ಳವರಿಗೂ ಅವಕಾಶ

ಈ ಹಿಂದಿನ ಅಧಿಸೂಚನೆಯಲ್ಲಿನ ಜಲ ಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್) (ವಿಭಾಗ 1) – 90 ಮತ್ತು ಸಹಾಯಕ ಇಂಜಿನಿಯರ್ (ಮೆಕ್ಯಾನಿಕಲ್) (ವಿಭಾಗ-1) – 10 ಹುದ್ದೆಗಳಿಗೆ ಇಲಾಖೆಯ ಪ್ರಸ್ತಾವನೆಯಂತೆ ನಿಗದಿಪಡಿಸಲಾಗಿದ್ದ ವಿದ್ಯಾರ್ಹತೆಯ ಕೋರ್ಸ್‌ಗಳಲ್ಲಿ ಕೇವಲ ಬಿಇ ಪದವಿಗಳನ್ನು ಮಾತ್ರ ಈ ಹಿಂದೆ ಪರಿಗಣಿಸಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಪ್ರಸ್ತುತ ಸರ್ಕಾರ ಈ ಹುದ್ದೆಗಳಿಗೆ ಬಿ.ಟೆಕ್ ಪದವಿಯನ್ನು ಸಹ ಪರಿಗಣಿಸಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ. ಉಳಿದಂತೆ ಹಿಂದಿನ ಅಧಿಸೂಚನೆಯ ಷರತ್ತು ಅನ್ವಯ.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸಹಾಯಕ ಎಂಜಿನಿಯರ್‌ (ಸಿವಿಲ್‌) (ವಿಭಾಗ 1)- 92 ಹುದ್ದೆ, ವಿದ್ಯಾರ್ಹತೆ: ಬಿ.ಇ / ಬಿ.ಟೆಕ್‌ (ಸಿವಿಲ್‌ ಎಂಜಿನಿಯರಿಂಗ್‌)
ಸಹಾಯಕ ಎಂಜಿನಿಯರ್‌ (ಸಿವಿಲ್‌) (ವಿಭಾಗ 1)-90 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್‌)
ಭೂ ದಾಖಲೆಗಳ ಸಹಾಯಕ ನಿರ್ದೇಶಕರು-24 ಹುದ್ದೆ, ವಿದ್ಯಾರ್ಹತೆ: ಪದವಿ (ಸಿವಿಲ್‌ ಎಂಜಿನಿಯರಿಂಗ್‌)
ಪತ್ರಾಂಕಿತ ವ್ಯವಸ್ಥಾಪಕರು / ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು-21 ಹುದ್ದೆ, ವಿದ್ಯಾರ್ಹತೆ: ಪದವಿ
ಸಹಾಯಕ ನಿರ್ದೇಶಕರು – 20 ಹುದ್ದೆ, ವಿದ್ಯಾರ್ಹತೆ: ಬಿ.ಇ / ಬಿ.ಟೆಕ್‌ (ಎಂಜಿನಿಯರಿಂಗ್‌) ಅಥವಾ ಎಂಬಿಎ
ಸಹಾಯಕ ಎಂಜಿನಿಯರ್‌ (ಮೆಕ್ಯಾನಿಕಲ್‌) (ವಿಭಾಗ-1) – 10 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್‌)
ಕಾರ್ಖಾನೆಗಳ ಸಹಾಯಕ ನಿರ್ದೇಶಕರು – 7 ಹುದ್ದೆ, ವಿದ್ಯಾರ್ಹತೆ: ಪದವಿ (ಸಂಬಂಧಿತ ವಿಷಯದಲ್ಲಿ ಎಂಜಿನಿಯರಿಂಗ್‌)
ಬಾಯ್ಲರುಗಳ ಸಹಾಯಕ ನಿರ್ದೇಶಕರು – 3 ಹುದ್ದೆ, ವಿದ್ಯಾರ್ಹತೆ: (ಸಂಬಂಧಿತ ವಿಷಯದಲ್ಲಿ ಎಂಜಿನಿಯರಿಂಗ್‌)
ಭೂ ವಿಜ್ಞಾನಿ – 10 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ (ಜಿಯೋಲಜಿ / ಅಪ್ಲೈಡ್‌ ಜಿಯಾಲಜಿ.

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ, ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ ಅಭ್ಯರ್ಥಿಗಳು 300 ರೂ., ಇತರ ಹಿಂದುಳಿದ ಅಭ್ಯರ್ಥಿಗಳು 150 ರೂ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು ಶುಲ್ಕ ಪಾವತಿಸಬೇಕಾಗಿಲ್ಲ.

ಪರಿಷ್ಕೃತ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Continue Reading

ಉದ್ಯೋಗ

Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಇಂದು ಕೊನೆ ದಿನ

Job Alert: ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿರುವ ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆ ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಇಂದು (ಮೇ 20). ಸಂಜೆ 5 ಗಂಟೆಯೊಳಗೆ ಅಪ್ಲೈ ಮಾಡಿ. ದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 70,000-1,00,000 ರೂ. ಮಾಸಿಕ ವೇತನ ದೊರೆಯಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿರುವ ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆ ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ ಲಿಮಿಟೆಡ್‌ (Neyveli Lignite Corporation Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (NLC Recruitment 2024). ಸುಮಾರು 36 ಎಕ್ಸಿಕ್ಯೂಟಿವ್‌ ಹುದ್ದೆಗಳಿದ್ದು, ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಇಂದು (ಮೇ 20) (Job Alert). ಗಮನಿಸಿ ಸಂಜೆ 5 ಗಂಟೆಯೊಳಗೆ ನಿಮ್ಮ ಅರ್ಜಿ ಸಲ್ಲಿಕೆಯಾಗಬೇಕು.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಕ್ಸಿಕ್ಯೂಟಿವ್‌-ಆಪರೇಷನ್‌: 24 ಮತ್ತು ಎಕ್ಸಿಕ್ಯೂಟಿವ್‌-ಮೈಂಟೆನೆನ್ಸ್‌: 12 ಹುದ್ದೆಗಳಿವೆ.
ಎಕ್ಸಿಕ್ಯೂಟಿವ್‌-ಆಪರೇಷನ್‌ ಹುದ್ದೆಗೆ ಕೆಮಿಕಲ್/ ಸಿ&ಐ/ ಇ&ಐ/ ಇಸಿಇ/ ಎಲೆಕ್ಟ್ರಿಕಲ್/ ಇಇಇ/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
ಎಕ್ಸಿಕ್ಯೂಟಿವ್‌-ಮೈಂಟೆನೆನ್ಸ್‌ ಹುದ್ದೆಗೆ ಸಿವಿಲ್/ ಕೆಮಿಕಲ್/ ಸಿ&ಐ/ ಇ&ಐ/ ಇಸಿಇ/ ಎಲೆಕ್ಟ್ರಿಕಲ್/ ಇಇಇ/ ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದವರು ಅರ್ಹರು.

ವಯೋಮಿತಿ ಮತ್ತು ಅರ್ಜಿ ಶುಲ್ಕ

Neyveli Lignite Corporation Limited recruitment ಅಧಿಸೂಚನೆ ಪ್ರಕಾರ ಗರಿಷ್ಠ ವಯೋಮಿತಿ 63 ವರ್ಷ. ಅರ್ಜಿ ಶುಲ್ಕವಾಗಿ ಮಾಜಿ ಯೋಧರು / ಎಸ್‌ಸಿ / ಎಸ್‌ಟಿ ವರ್ಗಕ್ಕೆ ಸೇರಿದವರು 354 ರೂ. ಮತ್ತು ಸಾಮಾನ್ಯ / ಇಡಬ್ಲ್ಯುಎಸ್‌ / ಒಬಿಸಿ ವಿಭಾಗದವರು 854 ರೂ. ಪಾವತಿಸಬೇಕು. ಇದಕ್ಕಾಗಿ ಆನ್‌ಲೈನ್‌ ಪಾವತಿ ಮಾರ್ಗ ಅನುಸರಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 70,000-1,00,000 ರೂ. ಮಾಸಿಕ ವೇತನ ದೊರೆಯಲಿದೆ. ಒಂದು ವರ್ಷದ ಅವಧಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಹೆಸರು ನೊಂದಾಯಿಸಿ.
  • NLC Executive Apply Online ಆಯ್ಕೆ ಕ್ಲಿಕ್‌ ಮಾಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌, ಫೋಟೊಗಳನ್ನು ಸೂಚಿಸಿದ ಗಾತ್ರದಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಎಲ್ಲ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ. ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಅಪ್‌ಲೋಡ್‌ ಮಾಡಬೇಕಾದ ದಾಖಲೆಗಳು

  • ಫೋಟೊ ಹೈ ಕ್ವಾಲಿಟಿಯಲ್ಲಿದ್ದು, 2023ರ ಅಕ್ಟೋಬರ್‌ 1ರ ಬಳಿಕ ತೆಗೆದಿರಬೇಕು.
  • ಅತ್ಯುತ್ತಮ ಕ್ಲಾಲಿಟಿಯ ಅಭ್ಯರ್ಥಿಯ ಸಹಿಯ ಫೋಟೊ.
  • ಹುಟ್ಟಿದ ದಿನಾಂಕವನ್ನು ಖಾತರಿಪಡಿಸುವ ದಾಖಲೆ.
  • ಎಸ್ಸೆಸ್ಸೆಲ್ಸಿ / ಶೈಕ್ಷಣಿಕ ಪ್ರಮಾಣ ಪತ್ರ.
  • ಆಧಾರ್‌ ಕಾರ್ಡ್‌ನ ಪ್ರತಿ.
  • ಜಾತಿ ಸರ್ಟಿಫಿಕೆಟ್‌.
  • ಮಾಜಿ ಯೋಧರಾಗಿದ್ದರೆ ಅದರ ದಾಖಲೆ.
  • ಫೋಟೊ ಮತ್ತು ಸಹಿಯ ಫೋಟೊ JPEG ಫಾರ್ಮಾಟ್‌ನಲ್ಲಿರಬೇಕು.
  • ದಾಖಲೆಗಳು, ಡಾಕ್ಯುಮೆಂಟ್‌ JPEG ಅಥವಾ PDF ಫಾರ್ಮಾಟ್‌ನಲ್ಲಿರುವುದು ಕಡ್ಡಾಯ.

ಇದನ್ನೂ ಓದಿ: Job Alert: ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Continue Reading
Advertisement
Calcutta High Court
ಪ್ರಮುಖ ಸುದ್ದಿ2 mins ago

Other Backward Classes : 2011ರ ನಂತರ ನೀಡಿದ್ದ ಒಬಿಸಿ ಪ್ರಮಾಣ ಪತ್ರಗಳನ್ನು ರದ್ದು ಮಾಡಿದ ಕಲ್ಕತಾ ಹೈಕೋರ್ಟ್​​

Bomb Threat
ಪ್ರಮುಖ ಸುದ್ದಿ21 mins ago

Bomb Threat : ಗೃಹ ಸಚಿವಾಲಯಕ್ಕೆ ಬಾಂಬ್ ಬೆದರಿಕೆ; ದೆಹಲಿಯಲ್ಲಿ ಆತಂಕ

ಕರ್ನಾಟಕ28 mins ago

CM’s Bengaluru City Rounds: ರಾಜಕಾಲುವೆ ಒತ್ತುವರಿ ಯಾರೇ ಮಾಡಿದ್ರೂ ಮುಲಾಜಿಲ್ಲದೆ ತೆರವು: ಸಿಎಂ ಎಚ್ಚರಿಕೆ

IPL 2024
ಕ್ರಿಕೆಟ್43 mins ago

IPL 2024 : ಅಮ್ಮನನ್ನು ಆಸ್ಪತ್ರೆಯಲ್ಲಿ ಮಲಗಿಸಿ ಕೆಕೆಆರ್​ ಪರ ಕ್ವಾಲಿಫೈಯರ್ ಆಡಿದ ಆಫ್ಘನ್​ ಕ್ರಿಕೆಟಿಗ

Star Cricket Theam Fashion
ಫ್ಯಾಷನ್50 mins ago

Star Cricket Theme Fashion: ಕ್ರಿಕೆಟ್‌ ಥೀಮ್‌ನಲ್ಲಿ ಬೆರಗುಗೊಳಿಸಿದ ನಟಿ ಜಾಹ್ನವಿ ಕಪೂರ್ ಫ್ಯಾಷನ್‌!

Harish Poonja Govt responsible for disaster if MLA Harish Poonja is arrested says BY Vijayendra
ರಾಜಕೀಯ50 mins ago

Harish Poonja: ಶಾಸಕ ಹರೀಶ್‌ ಪೂಂಜಾರನ್ನು ಬಂಧಿಸಿದರೆ ಮುಂದಾಗುವ ಅನಾಹುತಕ್ಕೆ ಸರ್ಕಾರವೇ ಹೊಣೆ: ಗುಡುಗಿದ ವಿಜಯೇಂದ್ರ

Virat kohli
ಕ್ರೀಡೆ1 hour ago

IPL 2024 : ಕೊಹ್ಲಿಯನ್ನು ಹೊಗಳಿ ಆರ್​​ಸಿಬಿಗೆ ವಿದಾಯ ಹೇಳಿದ ವಿಜಯ್​ ಮಲ್ಯ

WhatsApp Update
ತಂತ್ರಜ್ಞಾನ1 hour ago

WhatsApp Update: ವಾಟ್ಸ್ ಆಪ್ ಬಳಕೆದಾರರಿಗೆ ಸಂತಸದ ಸುದ್ದಿ; ಮೆಸೆಜ್‌ಗೆ ಸಂಬಂಧಿಸಿ ಮಹತ್ವದ ಅಪ್‌ಡೇಟ್‌!

Jackfruit Seed: ಹಲಸಿನ ಹಣ್ಣು ತಿಂದು ಬೀಜ ಎಸೆಯದಿರಿ; ಬೀಜದಿಂದಾಗುವ ಆರೋಗ್ಯ ಲಾಭಗಳು ಹಲವು!
ಆರೋಗ್ಯ1 hour ago

Jackfruit Seed: ಹಲಸಿನ ಹಣ್ಣು ತಿಂದು ಬೀಜ ಎಸೆಯದಿರಿ; ಬೀಜದಿಂದಾಗುವ ಆರೋಗ್ಯ ಲಾಭಗಳು ಹಲವು!

Blink Movie in half centuru with good in OTT
ಸ್ಯಾಂಡಲ್ ವುಡ್1 hour ago

Blink Movie: ಹಾಫ್ ಸೆಂಚುರಿ ಬಾರಿಸಿದ ʻಬ್ಲಿಂಕ್ ʼ ಸಿನಿಮಾ; ಒಟಿಟಿಯಲ್ಲಿಯೂ ʻಬಹುಪರಾಕ್ʼ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ12 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 day ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 day ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌