ಕೊಡಗಿನ ಗಡಿಭಾಗದಲ್ಲಿ ಟೊಮ್ಯಾಟೊ ಫ್ಲೂ : ಆರೋಗ್ಯ ಇಲಾಖೆ ಹದ್ದಿನ ಕಣ್ಣು - Vistara News

ಕೊಡಗು

ಕೊಡಗಿನ ಗಡಿಭಾಗದಲ್ಲಿ ಟೊಮ್ಯಾಟೊ ಫ್ಲೂ : ಆರೋಗ್ಯ ಇಲಾಖೆ ಹದ್ದಿನ ಕಣ್ಣು

ಟೊಮ್ಯಾಟೊ ಫ್ಲೂ 5 ವರ್ಷದ ಒಳಗಿನ ಮಕ್ಕಳಲ್ಲಿ ಕಂಡು ಬರುತ್ತಿದ್ದು,
ಕೇರಳದಿಂದ ಕೊಡಗಿಗೂ ವ್ಯಾಪಿಸುವ ಆತಂಕ ಕಂಡುಬಂದಿದೆ.

VISTARANEWS.COM


on

ಟೊಮ್ಯಾಟೊ ಫ್ಲೂ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಡಿಕೇರಿ : ಕೇರಳ‌ ರಾಜ್ಯದಲ್ಲಿ ಹೆಚ್ಚಾದ ಟೊಮ್ಯಾಟೊ ಫ್ಲೂ ರೋಗದಿಂದಾಗಿ ಮೂರು‌ ಗಡಿಭಾಗದಲ್ಲೂ ಆರೋಗ್ಯ ಇಲಾಖೆ ಹದ್ದಿನ ಕಣ್ಣು ಇಟ್ಟಿದೆ. ಟೊಮ್ಯಾಟೊ ಜ್ವರದ ಪ್ರಕರಣಗಳು ಕೇರಳ ರಾಜ್ಯದ ಅರ್ಯಂಕಾರು, ಅಂಚಲ್ ಹಾಗೂ ನೆಡುವತೂರ್ ನಲ್ಲಿ ಕಂಡುಬಂದಿದ್ದು, 5 ವರ್ಷ ವಯಸ್ಸಿನೊಳಗಿನ ಮಕ್ಕಳಲ್ಲಿ ಹೆಚ್ಚಾಗಿ ಈ ರೋಗ ಕಂಡು ಬರುತ್ತಿದೆ.

ಚರ್ಮದ ತುರಿಕೆ, ಕೆಂಪಾಗುವುದು, ನೀರಡಿಕೆ ಮೊದಲಾದ ಲಕ್ಷಣಗಳನ್ನು ಹೊಂದಿದ್ದು, ತೀವ್ರ ಜ್ವರ, ಮೈ ಕೈ ನೋವು, ಕೀಲು ನೋವು, ಆಯಾಸ ಟೊಮ್ಯಾಟೊ ಫ್ಲೋ ಜ್ವರದ ಸೂಚನೆಗಳಾಗಿವೆ. ಕೊಡಗಿನ ಜನತೆ ಹೆಚ್ಚಾಗಿ ಕೇರಳ ರಾಜ್ಯದೊಂದಿಗೆ ಹೆಚ್ಚಿನ ವ್ಯಾಪಾರ ವ್ಯವಹಾರದಲ್ಲಿ ತೊಡಗಿಸಿಕೊಂಡು ಅವಲಂಬಿಸಿದ್ದಾರೆ. ಅಲ್ಲದೆ ಕೊಡಗಿಗೂ ಕೂಡ ನೆರೆಯ ಕೇರಳದಿಂದಲೂ ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಕೊಡಗಿನ ಜನತೆಗೆ ಆತಂಕ‌ ಶುರುವಾಗಿದೆ.

ಇದನ್ನೂ ಓದಿ | Tomato Flu | ಕೇರಳ ಗಡಿಭಾಗದ ಜಿಲ್ಲೆಗಳಲ್ಲಿ ಕಟ್ಟೆಚ್ಚರ: ಮಕ್ಕಳಿಗೆ ಸೋಂಕು ಬಾರದಂತೆ ತಡೆಯಲು ಇಲ್ಲಿದೆ ಮಾಹಿತಿ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದಿಂದ ಕೊಡಗಿಗೆ ಬರುವ ವಾಹನಗಳನ್ನು ಗಡಿ ಭಾಗದಲ್ಲಿ ತಪಾಸಣೆಗೆ ಒಳಪಡಿಸಲಾಗುತ್ತಿದ್ದು, ವಿಶೇಷ ತಂಡಗಳನ್ನು ನಿಯೋಜನೆ ಮಾಡಲಾಗಿದೆ ಎಂದರು. ಟೊಮೆಟೋ ಜ್ವರ 5 ವರ್ಷದ ಒಳಗಿನ ಮಕ್ಕಳಲ್ಲಿ ಕಂಡು ಬರುತ್ತಿದ್ದು, ಕೋವಿಡ್‍ಗೂ ಟೊಮ್ಯಾಟೊ ಜ್ವರಕ್ಕೂ ಯಾವುದೇ ಸಂಬಂಧವಿಲ್ಲ. ಇದುವರೆಗೂ ಕೊಡಗಿನಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ಕೊಡಗಿಗೆ ಸಾಕಷ್ಟು ಪ್ರವಾಸಿಗರು ಬರುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜಿಲ್ಲೆಯ ಜನ ಎಚ್ಚರ ವಹಿಸಬೇಕು. ಈಗಾಗಲೇ ತಾಲೂಕು ವೈದ್ಯಾಧಿಕಾರಿಗಳಿಗೂ ಜವಾಬ್ದಾರಿಯನ್ನು ನೀಡಲಾಗಿದೆ. ಐದು ವರ್ಷದೊಳಗಿನ ಮಕ್ಕಳಲ್ಲಿ ಮೈ-ಕೈ ನೋವು, ಜ್ವರ, ಚರ್ಮದಲ್ಲಿ ಗುಳ್ಳೆಗಳು ಕಂಡು ಬಂದಲ್ಲಿ ಮಾಹಿತಿ ನೀಡುವಂತೆ ಡಾ.ಆರ್.ವೆಂಕಟೇಶ್ ತಿಳಿಸಿದರು.

ಕೊಡಗಿನಲ್ಲಿ ಈಗಾಗಲೇ ಮುನ್ನಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜನರು ಆತಂಕ ಪಡುವ ಅಗತ್ಯವಿಲ್ಲವೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ತಿಳಿಸಿದ್ದಾರೆ.

ವರದಿ : ಲೋಹಿತ್ ಎಂ.ಆರ್

ಇದನ್ನೂ ಓದಿ : Acid Attack | ಯುವತಿ ಆರೋಗ್ಯದಲ್ಲಿ ಚೇತರಿಕೆ: ಸರ್ಜರಿ ಜಾಗದಲ್ಲಿ ಇನ್‌ಫೆಕ್ಷನ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Karnataka Weather: ಇಂದು ಹಾಸನ, ಕೊಡಗು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

Karnataka Weather: ಕರ್ನಾಟಕ ಕರಾವಳಿಯ ಉದ್ದಕ್ಕೂ ಬುಧವಾರ ವೇಗವಾಗಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಹಾಗೂ ಮನರಂಜನೆಗಾಗಿ ಸಮುದ್ರಕ್ಕೆ ಇಳಿಯುವವರಿಗೆ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ಕರಾವಳಿ ಜಿಲ್ಲೆಗಳು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಜೂನ್‌ 26ರಂದು ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ (Karnataka Weather) ನೀಡಿದೆ

ಇನ್ನು ರಾಜ್ಯದ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ.

ಅದೇ ರೀತಿ ಜೂನ್‌ 27ರಂದು ಕೂಡ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಕೊಡಗು ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಸಿನ ಮಳೆ ಬೀಳಲಿದೆ.

ಮೀನುಗಾರರಿಗೆ ಎಚ್ಚರಿಕೆ

ಕರ್ನಾಟಕ ಕರಾವಳಿಯ ಉದ್ದಕ್ಕೂ ಬುಧವಾರ ಗಂಟೆಗೆ 35 ಕಿ.ಮೀನಿಂದ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಕನ್ನಡದಲ್ಲಿ ಮುಲ್ಕಿಯಿಂದ ಮಂಗಳೂರಿನವರೆಗೆ, ಅಲೆಗಳು ರಾತ್ರಿ 11.30ರವರೆಗೆ 3.3ರಿಂದ 3.6 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಉಂಟಾಗುವ ಮುನ್ಸೂಚನೆ ನೀಡಲಾಗಿದೆ. ಸಾಗರ ಕಾರ್ಯಾಚರಣೆ ಮತ್ತು ಹತ್ತಿರದ ದಡದ ಮನರಂಜನೆ ಮಾಡುವಾಗ ಜಾಗರೂಕರಾಗಿರಿ ಎಂದು ಸಲಹೆ ನೀಡಲಾಗಿದೆ.

ಉಡುಪಿಯಲ್ಲಿ ಹೈ ವೇವ್ ಎಚ್ಚರಿಕೆ: ಬೈಂದೂರಿನಿಂದ ಕಾಪುವರೆಗಿನ ಉಡುಪಿ, ಕರ್ನಾಟಕ ಕರಾವಳಿಯಲ್ಲಿ, ರಾತ್ರಿ 11.30ರ ವರೆಗೆ 3.4ರಿಂದ 3.8 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ಸಣ್ಣ ಹಡಗುಗಳು ಸಂಚರಿಸದಂತೆ, ಸಮೀಪ ದಡದ ಮನರಂಜನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಮತ್ತು ಸವೆತ/ಅಲೆಗಳ ಉಲ್ಬಣವು ಸಾಧ್ಯತೆ ಎಂದು ಸಲಹೆ ನೀಡಲಾಗಿದೆ.

ಉತ್ತರ ಕನ್ನಡ, ಕರ್ನಾಟಕ ಕರಾವಳಿಯಲ್ಲಿ ಮಾಜಾಳಿಯಿಂದ ಭಟ್ಕಳದವರೆಗೆ ರಾತ್ರಿ 11.30ರವರೆಗೆ 3.5 ರಿಂದ 4.0 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ಸಣ್ಣ ಹಡಗುಗಳು ಸಂಚರಿಸದಂತೆ, ಸಮೀಪ ದಡದ ಮನರಂಜನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಮತ್ತು ಸವೆತ/ಅಲೆಗಳ ಉಲ್ಬಣ ಸಾಧ್ಯತೆ ಎಂದು ಸಲಹೆ ನೀಡಲಾಗಿದೆ.

ಇದನ್ನೂ ಓದಿ | Monsoon Hair care: ಮಳೆಗಾಲದಲ್ಲಿ ಕೂದಲಿನ ಆರೈಕೆಗೆ ಈ ಸಲಹೆ ಪಾಲಿಸಿ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಲಘು ಮಳೆಯಾಗುವ ಸಾಧ್ಯತೆ ಹೆಚ್ಚು. ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗಿರುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ‘C ಮತ್ತು 21 ° C ಆಗಿರಬಹುದು.

Continue Reading

ಕೊಡಗು

Kodagu News: ಕಳೆದುಕೊಂಡಿದ್ದ ಚಿನ್ನದ ನಾಣ್ಯ ವಾರಸುದಾರನ ಕೈ ಸೇರುವಂತೆ ಮಾಡಿದ ಪೊಲೀಸರು!

Kodagu News: ಕಳೆದುಕೊಂಡಿದ್ದ 3 ಚಿನ್ನದ ನಾಣ್ಯಗಳನ್ನು ಮರಳಿ ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ಮಡಿಕೇರಿ ಸಂಚಾರಿ ಠಾಣೆಯ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.

VISTARANEWS.COM


on

Kodagu News
Koo

ಕೊಡಗು: ಕಳೆದುಕೊಂಡಿದ್ದ 3 ಚಿನ್ನದ ನಾಣ್ಯಗಳನ್ನು ಮರಳಿ ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ಮಡಿಕೇರಿ ಸಂಚಾರ ಠಾಣೆಯ ಪೊಲೀಸರು ಪ್ರಾಮಾಣಿಕತೆ (Kodagu News) ಮೆರೆದಿದ್ದು, ಪೊಲೀಸರ ಕಾರ್ಯ ವೈಖರಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ನಗರದ ಅಜ್ಜಮಾಡ ದೇವಯ್ಯ ವೃತ್ತದ ಸಮೀಪದ ರಸ್ತೆಯಲ್ಲಿ ವ್ಯಕ್ತಿಯೊಬ್ಬರು ಬೀಳಿಸಿಕೊಂಡು ಹೋಗಿದ್ದ ಮೂರು ಚಿನ್ನದ ನಾಣ್ಯಗಳು ಸಂಚಾರ ಠಾಣೆಯ ಪೇದೆ ನಾಗರಾಜ್ ಅವರಿಗೆ ಸಿಕ್ಕಿತ್ತು. ಕೂಡಲೇ ಅವರು ಅವುಗಳನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿ, ವಿಷಯವನ್ನು ಅಧಿಕಾರಿ ಹಾಗೂ ಸಿಬ್ಬಂದಿಗೆ ತಿಳಿಸಿದ್ದಾರೆ. ಬಳಿಕ ಚಿನ್ನದ ನಾಣ್ಯಗಳ ವಾರಸುದಾರರ ಹುಡುಕಾಟಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Transfer Guidelines: ಸರ್ಕಾರಿ ನೌಕರರ ವರ್ಗಾವಣೆಗೆ ಪರಿಷ್ಕೃತ ಮಾರ್ಗಸೂಚಿ ಪ್ರಕಟ; ಜು.9ರವರೆಗೆ ಅವಕಾಶ

ಇದನ್ನು ಗಮನಿಸಿದ ನಾಣ್ಯ ಕಳೆದುಕೊಂಡ ಮಡಿಕೇರಿಯ ಜ್ಯುವೆಲ್ಲರಿ ಅಂಗಡಿಯೊಂದರ ಮಾಲೀಕ ಬಿ.ಸಿ. ಮೋಹನ್ ಅವರು ಠಾಣೆಗೆ ತೆರಳಿ ವಿಚಾರಿಸಿದ್ದಾರೆ. ದೃಢೀಕರಿಸಿದ ನಂತರ ಮಾಲೀಕ ಮೋಹನ್‌ ಅವರು ಕಳೆದುಕೊಂಡಿದ್ದ ಅಂದಾಜು 45 ಸಾವಿರ ಮೌಲ್ಯದ ಚಿನ್ನದ ನಾಣ್ಯಗಳನ್ನು ಠಾಣಾಧಿಕಾರಿ ಶ್ರೀಧರ್ ಹಿಂದಿರುಗಿಸಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

Continue Reading

ಕೊಡಗು

Kodagu News: ಬಿಸ್ಲೆರಿಯಿಂದ ಕೊಡಗಿನಲ್ಲಿ ಸ್ವಚ್ಛತಾ ಅಭಿಯಾನ

Kodagu News: ಕೊಡಗು ಜಿಲ್ಲೆಯ ಮಲ್ದರೆಯಲ್ಲಿ ಅರಣ್ಯ ಇಲಾಖೆಯು ಬಿಸ್ಲೆರಿ ಇಂಟರ್‌ನ್ಯಾಷನಲ್ ಸಹಯೋಗದಲ್ಲಿ ಬೃಹತ್‌ ಅರಣ್ಯ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಜರುಗಿತು. ಅಭಿಯಾನದಲ್ಲಿ ಕೊಡಗು ಜಿಲ್ಲೆಯ ಮಲ್ದರೆಯಿಂದ ಮುತ್ತೂರು ಅಭಯಾರಣ್ಯದವರೆಗೆ ಸುಮಾರು 10 ಕಿ.ಮೀ. ವರೆಗೆ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಈ ವೇಳೆ ತಂಡವು ಒಟ್ಟು 810 ಕಿಲೋ ಪ್ಲಾಸ್ಟಿಕ್ ತ್ಯಾಜ್ಯ ಮತ್ತು ಜೈವಿಕವಾಗಿ ವಿಘಟನೆಯಾಗದ ತ್ಯಾಜ್ಯವನ್ನು ಸಂಗ್ರಹಿಸಿದೆ.

VISTARANEWS.COM


on

forest cleaning campaign in Maldare of Kodagu district
Koo

ಕೊಡಗು: ಜಿಲ್ಲೆಯ ಮಲ್ದರೆಯಲ್ಲಿ ಅರಣ್ಯ ಇಲಾಖೆಯು ಬಿಸ್ಲೆರಿ ಇಂಟರ್‌ನ್ಯಾಷನಲ್ ಸಹಯೋಗದಲ್ಲಿ ಬೃಹತ್‌ ಅರಣ್ಯ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು (Kodagu News) ಹಮ್ಮಿಕೊಳ್ಳಲಾಗಿತ್ತು. ಸ್ವಚ್ಛತಾ ಅಭಿಯಾನದಲ್ಲಿ ಕೊಡಗು ಜಿಲ್ಲೆಯ ಮಲ್ದರೆಯಿಂದ ಮುತ್ತೂರು ಅಭಯಾರಣ್ಯದವರೆಗೆ ಸುಮಾರು 10 ಕಿ.ಮೀ. ವರೆಗೆ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಈ ವೇಳೆ ತಂಡವು ಒಟ್ಟು 810 ಕಿಲೋ ಪ್ಲಾಸ್ಟಿಕ್ ತ್ಯಾಜ್ಯ ಮತ್ತು ಜೈವಿಕವಾಗಿ ವಿಘಟನೆಯಾಗದ ತ್ಯಾಜ್ಯವನ್ನು ಸಂಗ್ರಹಿಸಿದೆ.

ಅಷ್ಟೇ ಅಲ್ಲ, ಸೈನೇಜ್ ಬೋರ್ಡ್‌ಗಳನ್ನು ನೆಟ್ಟು, ಸರಿಯಾದ ತ್ಯಾಜ್ಯ ವಿಲೇವಾರಿ ವಿಧಾನಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡಿದೆ. ಜತೆಗೆ ಮರುಬಳಕೆಯನ್ನು ಉತ್ತೇಜಿಸಿ, ಕಸ ಎಸೆಯುವುದನ್ನು ತಪ್ಪಿಸಲು ಒಮ್ಮೆ ಬಳಸಿ ಎಸೆಯುವ ಪ್ಲಾಸ್ಟಿಕ್‌ನ ಪರಿಣಾಮ ಮತ್ತು ಬಳಸಿದ ಪ್ಲಾಸ್ಟಿಕ್ ಅನ್ನು ಸಂಗ್ರಹಿಸುವ ವಿಧಾನದ ಬಗ್ಗೆ ತಿಳಿವಳಿಕೆಯನ್ನೂ ಮೂಡಿಸಲು ಯತ್ನಿಸಿದೆ.

ಇದನ್ನೂ ಓದಿ: Share Market : ಷೇರು ಮಾರುಕಟ್ಟೆಯಲ್ಲಿ ನೂತನ ದಾಖಲೆ; ಮೊದಲ ಬಾರಿಗೆ 78,000 ಮಟ್ಟವನ್ನು ದಾಟಿದ ಸೆನ್ಸೆಕ್ಸ್

ಈ ಕುರಿತು ರಾಜ್ಯ ಅರಣ್ಯ ಇಲಾಖೆಯ ಟೈಗರ್ ರಿಸರ್ವ್‌ ಫಾರೆಸ್ಟ್‌ನ ಡಿಆರ್‌ಎಫ್‌ಒ ಚಿನ್ನವಿಶೇರಾ ಮಾತನಾಡಿ, “ಪರಿಸರ ಸುಸ್ಥಿರತೆಯನ್ನು ಖಾತ್ರಿ ಪಡಿಸುವ ನಿಟ್ಟಿನಲ್ಲಿ ಈ ಪಾಲುದಾರಿಕೆ ಅತ್ಯಂತ ಮಹತ್ವದ್ದಾಗಿದೆ. ಬಾಟಲ್ಸ್ ಫಾರ್ ಚೇಂಜ್‌ ಎಂಬ ಕಾರ್ಯಕ್ರಮದ ಅಡಿಯಲ್ಲಿ ಮರುಬಳಕೆ ಪ್ರಯತ್ನದಲ್ಲಿ ಬಿಸ್ಲೆರಿ ಇಂಟರ್‌ನ್ಯಾಷನಲ್‌ ಸಹಕಾರ ಮತ್ತು ಸಕ್ರಿಯ ತೊಡಗಿಸಿಕೊಳ್ಳುವಿಕೆಯನ್ನು ನಾವು ಮೆಚ್ಚುತ್ತೇವೆ. ಕರ್ನಾಟಕಕ್ಕೆ ಪರಿಸರ ಸ್ನೇಹಿ ಭವಿಷ್ಯವನ್ನು ರೂಪಿಸುವುದಕ್ಕೆ ನಾವು ನಿರಂತರವಾಗಿ ಶ್ರಮಿಸುತ್ತೇವೆ ಎಂದು ತಿಳಿಸಿದ್ದಾರೆ.

ಸಹಭಾಗಿತ್ವದ ಕುರಿತು ಬಿಸ್ಲೆರಿ ಇಂಟರ್‌ನ್ಯಾಷನಲ್ ಪ್ರೈ.ಲಿ.ನ ಸುಸ್ಥಿರತೆ ಮತ್ತು ಕಾರ್ಪೊರೇಟ್ ವ್ಯವಹಾರಗಳ ನಿರ್ದೇಶಕ ಕೆ.ಗಣೇಶ್ ಮಾತನಾಡಿ, ನಮ್ಮ ಬಾಟಲ್ಸ್ ಫಾರ್ ಚೇಂಜ್ ಕಾರ್ಯಕ್ರಮದ ಮೂಲಕ ಪರಿಸರ ಸಂರಕ್ಷಣೆಯನ್ನು ಉತ್ತೇಜಿಸಲು ಕರ್ನಾಟಕ ಅರಣ್ಯ ಇಲಾಖೆಯ ಜತೆಗೆ ಸಹಭಾಗಿತ್ವ ವಹಿಸಿರುವುದಾಗಿ ಘೋಷಿಸುವುದು ನಮಗೆ ಖುಷಿಯ ಸಂಗತಿಯಾಗಿದೆ. ಧನಾತ್ಮಕ ಬದಲಾವಣೆಯನ್ನು ಪ್ರೋತ್ಸಾಹಿಸಲು ಮತ್ತು ಸುಸ್ಥಿರ ಭವಿಷ್ಯವನ್ನು ಪೋಷಿಸಲು ನಮಗೆ ಈ ಪಾಲುದಾರಿಕೆಯು ಪೂರಕವಾಗಿರಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Transfer Guidelines: ಸರ್ಕಾರಿ ನೌಕರರ ವರ್ಗಾವಣೆಗೆ ಪರಿಷ್ಕೃತ ಮಾರ್ಗಸೂಚಿ ಪ್ರಕಟ; ಜು.9ರವರೆಗೆ ಅವಕಾಶ

ಸುಸ್ಥಿರ ಅಭಿವೃದ್ಧಿ ಉಪಕ್ರಮಗಳ ಮೂಲಕ ಸಮುದಾಯಗಳ ಮೇಲೆ ಧನಾತ್ಮಕ ಮತ್ತು ದೀರ್ಘಕಾಲೀನ ಪರಿಣಾಮವನ್ನು ಉಂಟು ಮಾಡುವ ಗುರಿ ಹೊಂದಿರುವ ಲಾಭೋದ್ದೇಶ ರಹಿತ ಸಂಸ್ಥೆ ಸಂಪ್ರಭಾವ್‌ ಫೌಂಡೇಶನ್‌ ಪರಿಣಾಮಕಾರಿಯಾಗಿ ತ್ಯಾಜ್ಯವನ್ನು ನಿರ್ವಹಿಸುವುದು ಮತ್ತು ಸಾಮಗ್ರಿಗಳನ್ನು ಮರುಬಳಕೆ ಮಾಡುವ ವಿಷಯದಲ್ಲಿ ಸಮುದಾಯಗಳಲ್ಲಿ ಜಾಗೃತಿ ಮೂಡಿಸುವ ಗುರಿ ಹೊಂದಿದೆ. ಈ ಸಂಸ್ಥೆಯು ಪಾಲುದಾರನಾಗಿದೆ. ಈ ಸಂಸ್ಥೆಯು ಕೊಡಗಿನ ಅಭ್ಯತ್‌ಮಂಗಲ ಮೂಲದ್ದಾಗಿದೆ.

Continue Reading

ಮಳೆ

Karnataka Weather : ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ ಸೇರಿ ವಿವಿಧೆಡೆ ಮಳೆ ಅಬ್ಬರ; ಆರೆಂಜ್‌ ಅಲರ್ಟ್‌ ಘೋಷಣೆ

Karnataka Weather Forecast : ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಜೂನ್‌ 27ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Heavy Rain Alert) ಸಾಧ್ಯತೆಯಿದೆ. ಪ್ರತ್ಯೇಕ ಕಡೆಗಳಲ್ಲಿ ವ್ಯಾಪಕ (Rain News) ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾದರೆ, ಉತ್ತರ ಒಳನಾಡಿನ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಭಾಗದಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ. ಊತ್ತರ ಒಳನಾಡಿನ ಕೆಲ ಪ್ರದೇಶದಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ಆದರೆ ಬೆಳಗಾವಿಯಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ.

ಮಲೆನಾಡಿನ ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ವ್ಯಾಪಕ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲಿಯಸ್‌ ಇರಲಿದೆ.

ಆರೆಂಜ್‌ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯೊಂದಿಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ.

ಜೂನ್‌ 27ರವರೆಗೆ ಮೀನುಗಾರರಿಗೆ ಎಚ್ಚರಿಕೆ

ಜೂನ್‌ 27 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ

ಇದನ್ನೂ ಓದಿ: Tumkur Shoot out : ತುಮಕೂರಿನಲ್ಲಿ ಸದ್ದು ಮಾಡಿದ ಪೊಲೀಸ್ ತುಪಾಕಿ; ಸರಗಳ್ಳನ ಹೆಡೆಮುರಿ ಕಟ್ಟಿದ ಖಾಕಿ

ಮಾನ್ಸೂನ್‌ಗೂ ಕಾಲಿಟ್ಟ ಟ್ರೆಂಚ್‌ ಕೋಟ್‌ ಫ್ಯಾಷನ್‌!

ಮಳೆಗಾಲಕ್ಕೂ ಟ್ರೆಂಚ್‌ ಕೋಟ್‌ (Monsoon trench coat fashion) ಫ್ಯಾಷನ್‌ ಎಂಟ್ರಿ ನೀಡಿದೆ. ಹೌದು, ಕೇವಲ ಚಳಿಗಾಲದಲ್ಲಿ ಟ್ರೆಂಡಿಯಾಗುತ್ತಿದ್ದ, ಟ್ರೆಂಚ್‌ ಕೋಟ್‌ಗಳು ಇದೀಗ ಮಾನ್ಸೂನ್‌ ಸೀಸನ್‌ಗೂ ಕಾಲಿಟ್ಟಿದ್ದು, ಸೆಲೆಬ್ರೆಟಿಗಳನ್ನು ಮಾತ್ರವಲ್ಲ, ಸಾಮಾನ್ಯ ಹುಡುಗಿಯರನ್ನು ಸವಾರಿ ಮಾಡತೊಡಗಿವೆ. ಇದಕ್ಕೆ ಪೂರಕ ಎಂಬಂತೆ, ಕಿಂಗ್‌ ಖಾನ್‌ ಮಗಳು ಹಾಗೂ ನಟಿ ಸುಹಾನಾ ಖಾನ್‌ ಟ್ರೆಂಚ್‌ ಕೋಟ್‌ ಧರಿಸಿದ್ದು, ಈ ಫ್ಯಾಷನ್‌ ಜೆನ್‌ ಜಿ ಹುಡುಗಿಯರನ್ನು ಸೆಳೆದಿದೆ. ಮಾನ್ಸೂನ್‌ನಲ್ಲೂ ಟ್ರೆಂಚ್‌ ಕೋಟ್‌ ಕ್ಲಾಸಿಯಾಗಿ ಕಾಣಿಸುತ್ತದೆ ಎಂಬುದನ್ನು ಪ್ರೂವ್‌ ಮಾಡಿದೆ.

Monsoon Trench Coat Fashion

ಟ್ರೆಂಚ್‌ಕೋಟ್‌ ವೆರೈಟಿ ವಿನ್ಯಾಸ

ಟ್ರೆಂಚ್‌ ಕೋಟ್‌ಗಳು ನೋಡಲು ಒಂದೇ ಬಗೆಯದ್ದಾಗಿ ಕಾಣುತ್ತವಾದರೂ ಸ್ಟಿಚ್ಚಿಂಗ್‌ ನಾನಾ ಶೈಲಿಯಲ್ಲಿರುತ್ತವೆ. ಸ್ಲೀಕ್‌ ಲುಕ್‌, ಫಾರ್ಮಲ್‌ ಬ್ಲೇಜರ್‌ ಸ್ಟೈಲ್‌ನಲ್ಲೂದೊರಕುತ್ತವೆ. ಮೊದಲೆಲ್ಲಾ ಹಿಲ್‌ ಸ್ಟೇಷನ್‌ಗಳಲ್ಲಿ ಮಾತ್ರ ಇವುಗಳ ಬಳಕೆ ಹೆಚ್ಚಾಗಿತ್ತು. ಬರಬರುತ್ತಾ ಸಿನಿಮಾ ತಾರೆಯರ ವಾರ್ಡ್‌ರೋಬ್‌ ಸೇರಿದ ನಂತರ ಸಾಮಾನ್ಯ ಹುಡುಗಿಯರ ಮನಸ್ಸನ್ನು ಗೆಲ್ಲತೊಡಗಿದವು. ಸ್ವೆಟರ್‌ ಹಾಗೂ ಜಾಕೆಟ್‌ ಧರಿಸುವಂತೆ, ಟ್ರೆಂಚ್‌ ಕೋಟ್‌ಗಳನ್ನು ಧರಿಸುವುದು ಹೆಚ್ಚಾಯಿತು ಎನ್ನುತ್ತಾರೆ ಜಿಯಾ.

ಕ್ಲಾಸಿಕ್‌ ಲುಕ್‌ ಗ್ಯಾರಂಟಿ

ಅಂದಹಾಗೆ, ವೆಸ್ಟರ್ನ್‌ ಲುಕ್‌ ನೀಡುವಲ್ಲಿಈ ಟ್ರೆಂಚ್‌ ಕೋಟ್‌ಗಳು ಪ್ರಮುಖ ಪಾತ್ರ ವಹಿಸುತ್ತವೆ. ಡಿಸೈನರ್‌ ಋತು ಹೇಳುವಂತೆ, ಇದೀಗ ಇಂಡೋ – ವೆಸ್ಟರ್ನ್ ಸ್ಟೈಲ್‌ನಲ್ಲೂ ಈ ಕೋಟ್‌ಗಳನ್ನು ಬಳಸುವುದು ಹೆಚ್ಚಾಗತೊಡಗಿದೆ. ಹಾಗಾಗಿ ಫಾರ್ಮಲ್‌ , ಎಥ್ನಿಕ್‌ ಡ್ರೆಸ್‌ ಧರಿಸುವ ಮಾನಿನಿಯರಿಗೂ ಪ್ರಿಯವಾಗತೊಡಗಿವೆ ಎನ್ನುತ್ತಾರೆ ಅವರು.

ಹೀಗಿರಲಿ ಟ್ರೆಂಚ್‌ ಕೋಟ್‌ ಸ್ಟೈಲಿಂಗ್‌

  • ಟ್ರೆಂಚ್‌ ಕೋಟ್‌ ಬೆಚ್ಚಗಿಡುವುದರಿಂದ ಧರಿಸುವವರು ಸಿಂಪಲ್‌ ಇನ್ನರ್‌ ಡ್ರೆಸ್‌ ಧರಿಸುವುದು ಬೆಸ್ಟ್.
  • ಉದ್ದಗಿರುವವರಿಗೆ ಯಾವುದೇ ಬಗೆಯ ಟ್ರೆಂಚ್‌ ಕೋಟ್‌ ಆದರೂ ಸೂಟ್‌ ಆಗುತ್ತವೆ.
  • ಪ್ಲಂಪಿಯಾಗಿರುವವರು ಆದಷ್ಟು ಡಿಸೈನರ್‌ ಕೋಟ್‌ ಧರಿಸುವುದು ಉತ್ತಮ.
  • ವಿಂಟೆಂಜ್‌ ಹಾಗೂ ರಾಯಲ್‌ ಕಲರ್‌ಗಳ ಟ್ರೆಂಚ್‌ ಕೋಟ್‌ಗಳು ರಾಯಲ್‌ ಲುಕ್‌ ನೀಡುತ್ತವೆ.
  • ಪ್ರಿಂಟೆಡ್‌ ಕೋಟ್‌ಗಳು ಟ್ರೆಂಡ್‌ನಲ್ಲಿಲ್ಲ.
  • ಫಿಟ್ಟಿಂಗ್‌ ಇದ್ದರೇ ಮಾತ್ರ ಚೆನ್ನಾಗಿ ಕಾಣಿಸುತ್ತವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Kenya Violence
ವಿದೇಶ7 mins ago

Kenya Violence: ಕೀನ್ಯಾದಲ್ಲಿ ಭುಗಿಲೆದ್ದ ಹಿಂಸಾಚಾರ; ಭಾರತೀಯರಿಗೆ ಎಚ್ಚರಿಕೆ ನೀಡಿದ ಹೈಕಮಿಷನ್

ಕಥೆಕೂಟ literature meet
ಕಲೆ/ಸಾಹಿತ್ಯ14 mins ago

ಕಥೆ ನಿಜ, ಕಥೆಗಾರ ಸುಳ್ಳು: ಕಥೆಕೂಟ ಸಮಾವೇಶದಲ್ಲಿ ಟಿಎನ್‌ ಸೀತಾರಾಮ್‌

CM Siddaramaiah
ಕರ್ನಾಟಕ17 mins ago

CM Siddaramaiah: ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿರೋದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದ ಸಿಎಂ

Jayam Ravi's wife Aarti Ravi removes all her Instagram photos
ಕಾಲಿವುಡ್20 mins ago

Jayam Ravi: ಜಯಂ ರವಿ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ ಹಾದಿಯಲ್ಲಿ ಮತ್ತೊಂದು ಸ್ಟಾರ್‌ ಜೋಡಿ!

Gold Rate Today
ಚಿನ್ನದ ದರ45 mins ago

Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ದರ ಇಳಿಕೆ

ಕ್ರೀಡೆ50 mins ago

IND vs ENG Semi Final: ಆಂಗ್ಲರನ್ನು ಸದೆಬಡಿದು ಫೈನಲ್​ ಪ್ರವೇಶಿಸಲಿ ಭಾರತ

Rashmika Mandanna Ayushmann Khurrana Team Up For Horror Comedy
ಟಾಲಿವುಡ್56 mins ago

Rashmika Mandanna: ರಶ್ಮಿಕಾ ಇದೀಗ ಟಾಲಿವುಡ್‌ಗೆ ಬೈ ಬೈ; ಬಾಲಿವುಡ್‌ನಲ್ಲಿಯೇ ಬಿಡಾರ!

Self Harming
ಕರ್ನಾಟಕ1 hour ago

Self Harming: ಕೆಲಸದಿಂದ ತೆಗೆದು ಕಿರುಕುಳ; ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

jewellery robbery case
ಕ್ರೈಂ1 hour ago

Robbery Case: 30 ಸೆಕೆಂಡ್‌ನಲ್ಲಿ ಇಡೀ ಜ್ಯುವೆಲ್ಲರಿ ದರೋಡೆ, ಸಿಸಿಟಿವಿಯಲ್ಲಿ ಕೃತ್ಯ ಸೆರೆ

Parineethi Chopra
Latest1 hour ago

Parineethi Chopra: ಏಳುಮಲ್ಲಿಗೆ ತೂಕದ ಚೆಲುವೆ ಪರಿಣಿತಿ ಚೋಪ್ರಾ ಸಿಕ್ಕಾಪಟ್ಟೆ ದಪ್ಪಗಾಗಿದ್ದು ಯಾಕೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌