Bigg Boss Kannada | ಕನ್ನಡಕ್ಕಾಗಿ ಹೋರಾಟ, ರೂಪೇಶ್‌-ಪ್ರಶಾಂತ್‌ ಕಾದಾಟ! - Vistara News

ಬಿಗ್ ಬಾಸ್

Bigg Boss Kannada | ಕನ್ನಡಕ್ಕಾಗಿ ಹೋರಾಟ, ರೂಪೇಶ್‌-ಪ್ರಶಾಂತ್‌ ಕಾದಾಟ!

ಬಿಗ್‌ ಬಾಸ್‌ ಸೀಸನ್‌ 9ರಲ್ಲಿ (Bigg Boss Kannada) ಇಬ್ಬರು ಹೋರಾಟಗಾರರ ನಡುವೆ ವಾಗ್ವಾದ ತಾರಕ್ಕಕೇರುತ್ತಿದೆ. ಉಳಿದ ಸ್ಪರ್ಧಿಗಳು ಮೂಕವಿಸ್ಮಿತರಾಗಿದ್ದಾರೆ.

VISTARANEWS.COM


on

Bigg Boss Kannada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಬಿಗ್‌ ಬಾಸ್‌ ಸೀಸನ್‌ 9ರಲ್ಲಿ (Bigg Boss Kannada) ಇಬ್ಬರು ಹೋರಾಟಗಾರರ ನಡುವೆ ವಾಗ್ವಾದ ತಾರಕ್ಕಕೇರುತ್ತಿದೆ. ಅದರಲ್ಲಿ ಪ್ರಶಾಂತ್‌ ಸಂಬರಗಿ ಮತ್ತು ರೂಪೇಶ್‌ ರಾಜಣ್ಣ ಮಧ್ಯೆ ಗಲಾಟೆಗಳು ನಡೆಯುತ್ತಲೇ ಇವೆ. ಎರಡನೇ ದಿನ ಮನೆಯಲ್ಲಿ ಪ್ರಶಾಂತ್‌ ಸಂಬರಗಿ ಮತ್ತು ರೂಪೇಶ್‌ ರಾಜಣ್ಣ ಮಧ್ಯೆ ಕನ್ನಡ ವಿಚಾರವಾಗಿ ದೊಡ್ಡ ಸಮರವೇ ನಡೆದಿದೆ.

ರೂಪೇಶ್‌ ರಾಜಣ್ಣ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಸಂಬರಗಿಗೆ ʻʻಸಮಾಜದಲ್ಲಿ ನೀವು ತುಂಬಾ ಡಿಸ್ಟರ್ಬ್‌ ಮಾಡ್ತಿದ್ದೀನಿ ಎಂದು ಅನ್ನಿಸ್ತಾ ಇಲ್ವಾ? ನೀವು ಕಾನೂನಾತ್ಮಕವಾಗಿ ಮತ್ತು ಭಾವನಾತ್ಮಕವಾಗಿ ಡಿಸ್ಟರ್ಬ್‌ ಮಾಡುತ್ತಿದ್ದೀರಾ. ನಿಮ್ಮ ಮನೋಭಾವಕ್ಕೆ ತಕ್ಕಂತೆ ಇದ್ದವರು ಮಾತ್ರ ನಿಮ್ಮನ್ನು ಒಪ್ಪಿಕೊಳ್ಳುತ್ತಿದ್ದಾರೆʼʼ ಎಂದಿದ್ದಾರೆ. ಪ್ರಶಾಂತ್‌ ಸಂಬರಗಿ ಪ್ರತಿಕ್ರಿಯೆ ನೀಡಿ ʻʻನನ್ನನ್ನು ಒಪ್ಪಿಕೊಳ್ಳುವವರು ಸೊಸೈಟಿಯಲ್ಲೇ ಇಲ್ಲವಾʼʼ ಎಂದು ಎದುರೇಟು ನೀಡಿದ್ದಾರೆ.

ಇದನ್ನೂ ಓದಿ | Bigg Boss Kannada | ಪ್ರಶಾಂತ್ ಸಂಬರಗಿ- ರೂಪೇಶ್ ರಾಜಣ್ಣ ವಾರ್‌: ಒಗ್ಗರಣೆ ಹಾಕಿದ ಅಅರುಣ್‌ ಸಾಗರ್‌!

Bigg Boss Kannada

ಇನ್ನೊಂದು ಕಡೆ ಅರುಣ್‌ ಸಾಗರ್‌ ಕನ್ನಡಪರ ಹೋರಾಟಗಾರ ರೂಪೇಶ್‌ ರಾಜಣ್ಣ ಜತೆ ಕನ್ನಡದ ಬಗ್ಗೆ ಚರ್ಚೆಗಳನ್ನು ಮಾಡಿದ್ದಾರೆ. ಅರುಣ್‌ ಸಾಗರ್‌ ಮಾತನಾಡಿ ʻʻಕನ್ನಡ ಉಳಿಸಲು ಹೋರಾಟಕ್ಕಿಂತ, ಕನ್ನಡ ಕಲಿಸುವುದು ಮುಖ್ಯʼʼ ಎಂದು ರೂಪೇಶ್‌ ಜತೆ ವಾದಕ್ಕೆ ಇಳಿದರು. ಆದರೆ ರೂಪೇಶ್‌ ಇದನ್ನು ಒಪ್ಪದೇ ʻʻಕನ್ನಡ ಕಲಿಕೆ ಬೇಕು. ಆದರೆ ಹೋರಾಟ ಕೂಡ ಮುಖ್ಯವಾಗುತ್ತದೆ. ಹೋರಾಟ ಇಲ್ಲದೇ ಎನೂ ಸಫಲವಾಗುವುದಿಲ್ಲʼʼ ಎಂದು ತಿರುಗೇಟು ನೀಡಿದರು. ಹಾಗೇ ʻʻಶಾಲೆಯಲ್ಲಿ ಮೇಷ್ಟ್ರು ಬೇಕು, ಗಡಿಯಲ್ಲಿ ಸೈನಿಕರು ಬೇಕುʼʼ ಎಂದು ಖಡಕ್‌ ಆಗಿ ಅರುಣ್‌ ಸಾಗರ್‌ಗೆ ಹೇಳಿದ್ದಾರೆ.

ಪ್ರಶಾಂತ್‌ ಸಂಬರಗಿ ಈ ವಿಚಾರಕ್ಕೆ ಮಾತನಾಡಲು ಬಂದಾಗ ರೂಪೇಶ್‌ ರಾಜಣ್ಣ ಕಿಡಿಕಾರಿದ್ದಾರೆ.ʻʻ ಪ್ರಶಾಂತ್‌ ಅವರಿಗೆ ಕನ್ನಡ ವಿಚಾರ ಬಂದರೆ ಯಾಕಿಷ್ಟು ಉರಿ? ನಿಮ್ಮ ಕನ್ನಡ ಪ್ರೀತಿ ನೋಡಿದ್ದೇನೆʼʼ ಎಂದು ವ್ಯಂಗ್ಯವಾಗಿ ನುಡಿದಿದ್ದಾರೆ. ಪ್ರಶಾಂತ್‌ ಪ್ರತಿಕ್ರಿಯೆ ನೀಡಿ ʻʻನಾನು ಏನೂ ಪ್ರಶ್ನೆಯೇ ಮಾಡಿಲ್ಲ. ಮನೆಯ ಸ್ಪರ್ಧಿ ಆಗಿದ್ದಕ್ಕೆ ಡಿಬೇಟ್‌ಗೆ ಬಂದೆ ಅದು ತಪ್ಪೇʼʼ ಎಂದು ಕೂಗಾಡಿದ್ದಾರೆ.

Bigg Boss Kannada

ಒಟ್ಟಾರೆ ಮನೆಯಲ್ಲಿ ಪ್ರಶಾಂತ್‌ ಸಂಬರಗಿ ಮತ್ತು ರೂಪೇಶ್‌ ರಾಜಣ್ಣ ಮಧ್ಯೆ ಸಮರಗಳು ಏರುತ್ತಲೇ ಇವೆ. ಉಳಿದ ಸ್ಪರ್ಧಿಗಳು ಮೂಕವಿಸ್ಮಿತರಾಗಿದ್ದಾರೆ.

ಇದನ್ನೂ ಓದಿ | Bigg Boss Kannada | ಮುಂದೆ ಮನೆಯಲ್ಲಿ ಬೇಜಾನ್‌ ಹಬ್ಬ ಇದೆ ಎಂದ ನವಾಜ್‌: ಮೊದಲ ದಿನದ ಟಾಸ್ಕ್‌ ವಿನ್ನರ್‌ ಈ ಜೋಡಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Bigg Boss Telugu 8: ಬಿಗ್‌ ಬಾಸ್‌ ಮನೆಗೆ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಎಂಟ್ರಿ?

Bigg Boss Telugu 8: ರಶ್ಮಿಕಾ, ಸಮಂತಾ, ನಯನತಾರಾ ಹೀಗೆ ಹಲವು ಟಾಪ್‌ ನಟಿಯರ ಭವಿಷ್ಯ ನುಡಿದು ಫೇಮಸ್‌ ಆದವರು ವೇಣುಸ್ವಾಮಿ. ಕೆಲವು ದಿನಗಳ ಹಿಂದೆ ನಟಿ ಶ್ರೀಲೀಲಾ ಬಗ್ಗೆ ಭವಿಷ್ಯ ನುಡಿದಿದ್ದರು. ಟಾಲಿವುಡ್ ಟಾಪ್ ನಟಿಯರಾಗಿ ಗುರುತಿಸಿಕೊಂಡಿರುವ ಸಮಂತಾ, ರಶ್ಮಿಕಾ ಮಂದಣ್ಣ, ಪೂಜಾ ಹೆಗ್ಡೆ ಅವರಂತೆ ಶ್ರೀಲೀಲಾ ಅವರಿಗೂ ಒಳ್ಳೆಯ ಹೆಸರು ಬರಲಿದೆ. ಆದರೆ ಸೌತ್ ಸಿನಿಮಾಗಳಲ್ಲಿ ಶ್ರೀಲೀಲಾ ನಂಬರ್ 1 ನಟಿಯಾಗುತ್ತಾರೆ ಎಂದು ವೇಣುಸ್ವಾಮಿ ಜ್ಯೋತಿಷ್ಯ ಹೇಳಿದ್ದರು. ವೇಣುಸ್ವಾಮಿ, ಟಾಲಿವುಡ್​ನ ಹಲವು ಸ್ಟಾರ್ ನಟ-ನಟಿಯರ ಭವಿಷ್ಯ ಹೇಳಿದ್ದರು. ಸಮಂತಾ-ನಾಗಚೈತನ್ಯ ಬೇರೆಯಾಗುತ್ತಾರೆ ಎಂದು ಸಹ ಭವಿಷ್ಯ ನುಡಿದಿದ್ದರು.

VISTARANEWS.COM


on

Bigg Boss Telugu 8 Astrologer Venu Swamy A Contestant
Koo

ಬೆಂಗಳೂರು: ಬಿಗ್​ಬಾಸ್ ತೆಲುಗು (Bigg Boss Telugu 8) ಮತ್ತೆ ಪ್ರಾರಂಭವಾಗುತ್ತಿದೆ.ಆಗಸ್ಟ್ 4 ರಂದು ಬಿಗ್​ಬಾಸ್ ತೆಲುಗು ಸೀಸನ್ 8 ಪ್ರಾರಂಭ ಆಗಲಿದೆ ಎಂದು ವರದಿಯಾಗಿದೆ. ಈ ಬಾರಿ ಬಿಗ್​ಬಾಸ್​ನಲ್ಲಿ ಭಾಗಿಯಾಗಲಿರುವ ಸ್ಪರ್ಧಿಗಳ ಬಗ್ಗೆ ವದಂತಿಗಳು ಹಬ್ಬಿವೆ. ತೆಲುಗಿನಲ್ಲಿ, ಬಿಗ್ ಬಾಸ್ ಶೋ (Bigg Boss Telugu Season 8 Starting Date) ದೊಡ್ಡ ಕ್ರೇಜ್‌ ಗಳಿಸಿದೆ. ಹಿಂದಿನ ಸೀಸನ್‌ಗಳಲ್ಲಿ ಭಾಗವಹಿಸಿದ ಅನೇಕ ಸ್ಪರ್ಧಿಗಳು ಆರ್ಥಿಕವಾಗಿ ಸಾಕಷ್ಟು ಯಶಸ್ವಿಯಾಗಿದ್ದಾರೆ. ಮತ್ತು ಮನರಂಜನಾ ಉದ್ಯಮದಲ್ಲಿ ಹೊಸ ಇಮೇಜ್ ಗಳಿಸಿದ್ದಾರೆ (bigg boss telugu contestants). ಈ ರಿಯಾಲಿಟಿ ಶೋನಲ್ಲಿ ಪಾಲ್ಗೊಳ್ಳುವ ಅವಕಾಶಕ್ಕಾಗಿ ಸಣ್ಣ-ಪರದೆಯ ಸೆಲೆಬ್ರಿಟಿಗಳು ಕಾಯುತ್ತಾರೆ ಎಂದರೆ ಅತಿಶಯೋಕ್ತಿಯಲ್ಲ. ಇದೀಗ ಬಿಗ್‌ ಬಾಸ್‌ ಮನೆಗೆ (Venu swamy) ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ವೇಣು ಸ್ವಾಮಿ ಜನಪ್ರಿಯ ಜ್ಯೋತಿಷಿಯಾಗಿದ್ದು, ಅವರು ಟಾಲಿವುಡ್ ಉದ್ಯಮದೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ. ಬಹುತೇಕ ಸರಿಯಾದ ಭವಿಷ್ಯವಾಣಿಯೊಂದಿಗೆ ಸಂಚಲನ ಮೂಡಿಸಿದ್ದಾರೆ. ಟಾಲಿವುಡ್ ಸೆಲೆಬ್ರಿಟಿಗಳ ಪ್ರೀತಿ, ಮದುವೆ ಮತ್ತು ವಿಚ್ಛೇದನದ ಬಗ್ಗೆ ಭವಿಷ್ಯ ನುಡಿದ ನಂತರ ಅವರು ವ್ಯಾಪಕವಾದ ಮೆಚ್ಚುಗೆಯನ್ನು ಗಳಿಸಿದರು. ಅನೇಕ ಬಾರಿ, ಅವರ ಭವಿಷ್ಯವಾಣಿಗಳು ನಿಜವಾಗಿದ್ದವು.

ಇದನ್ನೂ ಓದಿ: Bigg Boss Telugu 8: ಶುರುವಾಗ್ತಿದೆ ಬಿಗ್​ಬಾಸ್ ತೆಲುಗು ಸೀಸನ್ 8; ಸ್ಪರ್ಧಿಗಳು ಯಾರೆಲ್ಲ?

ರಶ್ಮಿಕಾ, ಸಮಂತಾ, ನಯನತಾರಾ ಹೀಗೆ ಹಲವು ಟಾಪ್‌ ನಟಿಯರ ಭವಿಷ್ಯ ನುಡಿದು ಫೇಮಸ್‌ ಆದವರು ವೇಣುಸ್ವಾಮಿ. ಕೆಲವು ದಿನಗಳ ಹಿಂದೆ ನಟಿ ಶ್ರೀಲೀಲಾ ಬಗ್ಗೆ ಭವಿಷ್ಯ ನುಡಿದಿದ್ದರು. ಟಾಲಿವುಡ್ ಟಾಪ್ ನಟಿಯರಾಗಿ ಗುರುತಿಸಿಕೊಂಡಿರುವ ಸಮಂತಾ, ರಶ್ಮಿಕಾ ಮಂದಣ್ಣ, ಪೂಜಾ ಹೆಗ್ಡೆ ಅವರಂತೆ ಶ್ರೀಲೀಲಾ ಅವರಿಗೂ ಒಳ್ಳೆಯ ಹೆಸರು ಬರಲಿದೆ. ಆದರೆ ಸೌತ್ ಸಿನಿಮಾಗಳಲ್ಲಿ ಶ್ರೀಲೀಲಾ ನಂಬರ್ 1 ನಟಿಯಾಗುತ್ತಾರೆ ಎಂದು ವೇಣುಸ್ವಾಮಿ ಜ್ಯೋತಿಷ್ಯ ಹೇಳಿದ್ದರು. ವೇಣುಸ್ವಾಮಿ, ಟಾಲಿವುಡ್​ನ ಹಲವು ಸ್ಟಾರ್ ನಟ-ನಟಿಯರ ಭವಿಷ್ಯ ಹೇಳಿದ್ದರು. ಸಮಂತಾ-ನಾಗಚೈತನ್ಯ ಬೇರೆಯಾಗುತ್ತಾರೆ ಎಂದು ಸಹ ಭವಿಷ್ಯ ನುಡಿದಿದ್ದರು.

ಜ್ಯೋತಿಷಿ ವೇಣುಸ್ವಾಮಿ (Venu Swamy) ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ ಮುನ್ನ, ಜಗನ್​ ಪಕ್ಷ ಮತ್ತೆ ಗೆಲ್ಲುತ್ತದೆ, ಮತ್ತೆ ಜಗನ್ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಅವರ ಭವಿಷ್ಯ ಸುಳ್ಳಾಗಿತ್ತು. ಆ ಬಳಿಕ ಜ್ಯೋತಿಷಿ ವೇಣುಸ್ವಾಮಿ ವಿಡಿಯೊ ಮೂಲಕ ಕ್ಷಮೆ ಕೇಳಿದ್ದರು. ರಾಜಕೀಯ ಮತ್ತು ಚಿತ್ರರಂಗದ ಗಣ್ಯರ ವೈಯಕ್ತಿಕ ಜೀವನದ ಬಗ್ಗೆ ಇನ್ನು ಮುಂದೆ ಭವಿಷ್ಯ ಹೇಳುವುದಿಲ್ಲ ಎಂದು ಜ್ಯೋತಿಷಿ ವೇಣು ಸ್ವಾಮಿ ವಿಡಿಯೊ ಮೂಲಕ ಹೇಳಿಕೊಂಡಿದ್ದರು.

ತೆಲುಗು ವರದಿಯ ಪ್ರಕಾರ ವೇಣು ಸ್ವಾಮಿ ಬಿಗ್‌ ಬಾಸ್‌ಗೆ ಎಂಟ್ರಿ ಕೊಡಲಿದ್ದಾರೆ ಎಂದು ವರದಿಯಾಗಿದೆ.ಈ ಸುದ್ದಿ ನಿಜವೇ ಆಗಿದ್ದರೆ ವೇಣು ಸ್ವಾಮಿ ಅವರ ಸಂಭಾವನೆ ಬಿಗ್ ಬಾಸ್ ತೆಲುಗು ಇತಿಹಾಸದಲ್ಲಿ ಇದುವರೆಗಿನ ಅತಿ ಹೆಚ್ಚು ಸಂಭಾವನೆಯಾಗಲಿದೆ.

ಸೀಸನ್‌ 7ರ ವರೆಗೆ ನಾಗಾರ್ಜುನ ಅವರೇ ನಿಭಾಯಿಸುತ್ತಿದ್ದಾರೆ. ನಾಗುರ್ಜನ ಅವರ ವಿಶಿಷ್ಟ ವರ್ಚಸ್ಸು ಮತ್ತು ಮಾತನಾಡುವ ಶೈಲಿಗೆ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಇದೀಗ ಮಾಹಿತಿ ಪ್ರಕಾರ ಈ ಸೀಸನ್‌ನಲ್ಲಿ ನಟರು, ಯೂಟ್ಯೂಬರ್‌ಗಳು ಮತ್ತು ಇತರ ಸಾರ್ವಜನಿಕ ವ್ಯಕ್ತಿಗಳ ಸಮ್ಮಿಶ್ರಣ ಇರಲಿದೆ ಎಂದು ವರದಿಯಾಗಿದೆ. . ಪ್ರತಿಬಾರಿಯಂತೆ ನಟ ನಾಗಾರ್ಜುನ ಅವರೇ ಈ ಬಾರಿಯೂ ಶೋ ನಡೆಸಿಕೊಡಲಿದ್ದಾರೆ.

ಸಂಭಾವ್ಯ ಪಟ್ಟಿ ಹೀಗಿದೆ!

ಬಾಂಚಿಕ್ ಬಬ್ಲು: ಜನಪ್ರಿಯ ಯೂಟ್ಯೂಬರ್. ರಾಜ್ ತರುಣ್: ಟಾಲಿವುಡ್‌ನ ಪ್ರಸಿದ್ಧ ನಟ. ಸೋನಿಯಾ ಸಿಂಗ್: ಸಾಮಾಜಿಕ ಮಾಧ್ಯಮದಲ್ಲಿ ಅಪಾರ ಬಳಗ ಹೊಂದಿರುವ ನಟಿ, ಡ್ರಗ್ಸ್ ಪ್ರಕರಣದ ಆರೋಪಿ ಹೇಮಾ ಸಹ ಈ ಬಾರಿ ಬಿಗ್​ಬಾಸ್​ಗೆ ಬರಲಿದ್ದಾರೆ ಎನ್ನಲಾಗುತ್ತಿದೆ. ಮರ್ಯಾದಾ ಹತ್ಯೆಯ ಸಂತ್ರಸ್ತೆ ಅಮೃತಾ ಪ್ರಣಯ್ಈ ಬಾರಿ ಬಿಗ್​ಬಾಸ್​ಗೆ ಹೋಗಲಿದ್ದಾರೆ. ಭಾರಿ ದುಬಾರಿ ಬೆಲೆಗೆ ಆಹಾರ ಮಾರಾಟ ಮಾಡುತ್ತಾ ಜನಪ್ರಿಯವಾಗಿರುವ ಕುಮಾರಿ ಆಂಟಿ ಈ ಬಾರಿ ಬಿಗ್​ಬಾಸ್ ಮನೆಗೆ ಹೋಗಲಿದ್ದಾರೆ ಎನ್ನಲಾಗುತ್ತಿದೆ. ಜನಪ್ರಿಯ ಯೂಟ್ಯೂಬ್ ಕಪಲ್ ಆಗಿರುವ ನೇತ್ರಾ ಮತ್ತು ವಂಶಿ ಸಹ ಈ ಬಾರಿ ಬಿಗ್​ಬಾಸ್​ಗೆ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ.

Continue Reading

ಬಿಗ್ ಬಾಸ್

Bigg Boss Telugu 8: ಶುರುವಾಗ್ತಿದೆ ಬಿಗ್​ಬಾಸ್ ತೆಲುಗು ಸೀಸನ್ 8; ಸ್ಪರ್ಧಿಗಳು ಯಾರೆಲ್ಲ?

Bigg Boss Telugu 8: ಸೀಸನ್‌ 7ರ ವರೆಗೆ ನಾಗಾರ್ಜುನ ಅವರೇ ನಿಭಾಯಿಸುತ್ತಿದ್ದಾರೆ. ನಾಗುರ್ಜನ ಅವರ ವಿಶಿಷ್ಟ ವರ್ಚಸ್ಸು ಮತ್ತು ಮಾತನಾಡುವ ಶೈಲಿಗೆ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಇದೀಗ ಮಾಹಿತಿ ಪ್ರಕಾರ ಈ ಸೀಸನ್‌ನಲ್ಲಿ ನಟರು, ಯೂಟ್ಯೂಬರ್‌ಗಳು ಮತ್ತು ಇತರ ಸಾರ್ವಜನಿಕ ವ್ಯಕ್ತಿಗಳ ಸಮ್ಮಿಶ್ರಣ ಇರಲಿದೆ ಎಂದು ವರದಿಯಾಗಿದೆ.

VISTARANEWS.COM


on

Bigg Boss Telugu 8 Contestants List Leaked
Koo

ಬೆಂಗಳೂರು:ಬಿಗ್ ಬಾಸ್ ತೆಲುಗು ಸೀಸನ್-7 ಮುಗಿದ ಬಳಿಕ ಸೀಸನ್‌ 8 (Bigg Boss Telugu 8) ಶುರು ಯಾವಾಗ ಎಂದು ಪ್ರೇಕ್ಷಕರು ಕಾಯುತ್ತಿದ್ದರು. TRP ರೇಟಿಂಗ್‌ಗಳಿಗೆ ಸಂಬಂಧಿಸಿದಂತೆ ಕಳೆದ ಸೀಸನ್ ಭರ್ಜರಿ ಹಿಟ್ ಆಗಿತ್ತು. ಮಾತ್ರವಲ್ಲ ಬಿಗ್ ಬಾಸ್ ತೆಲುಗು ಸೀಸನ್-7 (Bigg Boss Telugu 7) ವಿಜೇತ ಪಲ್ಲವಿ ಪ್ರಶಾಂತ್ ಅರೆಸ್ಟ್‌ ಆಗಿ ಸಖತ್‌ ಸುದ್ದಿಯಲ್ಲಿದ್ದರು. ಇದೀಗ ಬಿಗ್​ಬಾಸ್ ತೆಲುಗು ಮತ್ತೆ ಪ್ರಾರಂಭವಾಗುತ್ತಿದೆ.ಆಗಸ್ಟ್ 4 ರಂದು ಬಿಗ್​ಬಾಸ್ ತೆಲುಗು ಸೀಸನ್ 8 ಪ್ರಾರಂಭ ಆಗಲಿದೆ. ಈ ಬಾರಿ ಬಿಗ್​ಬಾಸ್​ನಲ್ಲಿ ಭಾಗಿಯಾಗಲಿರುವ ಸ್ಪರ್ಧಿಗಳು ಈಗಾಗಲೇ ಖಾತ್ರಿ ಆಗಿದ್ದಾರೆ ಎನ್ನಲಾಗುತ್ತಿದೆ.

ಜೂನಿಯರ್ ಎನ್‌ಟಿಆರ್ ಮೊದಲ ಆವೃತ್ತಿಯನ್ನು ಹೋಸ್ಟ್ ಮಾಡಿದ್ದರೆ, ನಾನಿ ಎರಡನೇ ಆವೃತ್ತಿಯನ್ನು ಹೋಸ್ಟ್ ಮಾಡಿದ್ದರು. ಆ ಬಳಿಕ ನಾಗಾರ್ಜುನ ಅವರು ಹೋಸ್ಟ್‌ ಮಾಡುತ್ತ ಬಂದಿದ್ದಾರೆ. ಸೀಸನ್‌ 7ರ ವರೆಗೆ ನಾಗಾರ್ಜುನ ಅವರೇ ನಿಭಾಯಿಸುತ್ತಿದ್ದಾರೆ. ನಾಗುರ್ಜನ ಅವರ ವಿಶಿಷ್ಟ ವರ್ಚಸ್ಸು ಮತ್ತು ಮಾತನಾಡುವ ಶೈಲಿಗೆ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಇದೀಗ ಮಾಹಿತಿ ಪ್ರಕಾರ ಈ ಸೀಸನ್‌ನಲ್ಲಿ ನಟರು, ಯೂಟ್ಯೂಬರ್‌ಗಳು ಮತ್ತು ಇತರ ಸಾರ್ವಜನಿಕ ವ್ಯಕ್ತಿಗಳ ಸಮ್ಮಿಶ್ರಣ ಇರಲಿದೆ ಎಂದು ವರದಿಯಾಗಿದೆ. . ಪ್ರತಿಬಾರಿಯಂತೆ ನಟ ನಾಗಾರ್ಜುನ ಅವರೇ ಈ ಬಾರಿಯೂ ಶೋ ನಡೆಸಿಕೊಡಲಿದ್ದಾರೆ.

ಇದನ್ನೂ ಓದಿ: Bigg Boss Telugu 7: ಬಿಗ್ ಬಾಸ್ ತೆಲುಗು ಸೀಸನ್-7 ವಿಜೇತ ಪಲ್ಲವಿ ಪ್ರಶಾಂತ್ ಅರೆಸ್ಟ್‌!

ಸಂಭಾವ್ಯ ಪಟ್ಟಿ ಹೀಗಿದೆ!

ಬಾಂಚಿಕ್ ಬಬ್ಲು: ಜನಪ್ರಿಯ ಯೂಟ್ಯೂಬರ್. ರಾಜ್ ತರುಣ್: ಟಾಲಿವುಡ್‌ನ ಪ್ರಸಿದ್ಧ ನಟ. ಸೋನಿಯಾ ಸಿಂಗ್: ಸಾಮಾಜಿಕ ಮಾಧ್ಯಮದಲ್ಲಿ ಅಪಾರ ಬಳಗ ಹೊಂದಿರುವ ನಟಿ, ಡ್ರಗ್ಸ್ ಪ್ರಕರಣದ ಆರೋಪಿ ಹೇಮಾ ಸಹ ಈ ಬಾರಿ ಬಿಗ್​ಬಾಸ್​ಗೆ ಬರಲಿದ್ದಾರೆ ಎನ್ನಲಾಗುತ್ತಿದೆ. ಮರ್ಯಾದಾ ಹತ್ಯೆಯ ಸಂತ್ರಸ್ತೆ ಅಮೃತಾ ಪ್ರಣಯ್ಈ ಬಾರಿ ಬಿಗ್​ಬಾಸ್​ಗೆ ಹೋಗಲಿದ್ದಾರೆ. ಭಾರಿ ದುಬಾರಿ ಬೆಲೆಗೆ ಆಹಾರ ಮಾರಾಟ ಮಾಡುತ್ತಾ ಜನಪ್ರಿಯವಾಗಿರುವ ಕುಮಾರಿ ಆಂಟಿ ಈ ಬಾರಿ ಬಿಗ್​ಬಾಸ್ ಮನೆಗೆ ಹೋಗಲಿದ್ದಾರೆ ಎನ್ನಲಾಗುತ್ತಿದೆ. ಜನಪ್ರಿಯ ಯೂಟ್ಯೂಬ್ ಕಪಲ್ ಆಗಿರುವ ನೇತ್ರಾ ಮತ್ತು ವಂಶಿ ಸಹ ಈ ಬಾರಿ ಬಿಗ್​ಬಾಸ್​ಗೆ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ.

ಸೆಪ್ಟೆಂಬರ್ 3 ರಂದು ತೆಲುಗು ಬಿಗ್​ಬಾಸ್ ಸೀಸನ್ 7 ಆರಂಭವಾಗಿತ್ತು. 19 ಮಂದಿ ಸ್ಪರ್ಧಿಗಳು ಶೋನಲ್ಲಿ ಭಾಗಿಯಾಗಿದ್ದರು. ಅವರಲ್ಲೇ ಇಬ್ಬರು ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮತ್ತೆ ಮನೆಗೆ ಬಂದಿದ್ದರು. ಅಲ್ಲಿಗೆ ಒಟ್ಟು 21 ಸ್ಪರ್ಧಿಗಳು ಈ ಬಾರಿಯ ಬಿಗ್​ಬಾಸ್ ತೆಲುಗು ಸೀಸನ್ 7ರಲ್ಲಿ ಆಡಿದರುಪಲ್ಲವಿ ಪ್ರಶಾಂತ್ ವಿನ್ನರ್ ಆಗಿದ್ದು, ಹಲವರಿಗೆ ಖುಷಿ ನೀಡಿತ್ತು. ಆದರೆ ಮೊದಲಿನಿಂದಲೂ ಶಿವಾಜಿ ವಿನ್ನರ್ ಎಂದುಕೊಂಡಿದ್ದ ಹಲವರಿಗೆ ಬೇಸರವಾಗಿತ್ತು.

Continue Reading

ಬಿಗ್ ಬಾಸ್

Actress Siri: ಬಿಗ್​ಬಾಸ್​ನಲ್ಲಿ ಚಿಗುರಿತಾ ಪ್ರೇಮ? ‘ರಂಗೋಲಿ’ ಖ್ಯಾತಿಯ ಸಿರಿಯ ವರನ್ಯಾರು?

Actress Siri: ಬಿಗ್ ಬಾಸ್ ಸಿರಿ ಮದುವೆಯಾಗಿರುವ ಹುಡುಗ ಮೂಲತಃ ಮಂಡ್ಯದವರು ಸದ್ಯ ಬೆಂಗಳೂರಿನಲ್ಲಿ ನಲೆಸಿದ್ದಾರೆ. ಅವರ ಹೆಸರು ಪ್ರಭಾಕರ್ ಬೋರೇಗೌಡ. ಪ್ರಭಾಕರ್‌ ಬೋರೇಗೌಡ ಮತ್ತು ಸಿರಿ ಒಟ್ಟಿಗೆ ನಟಿಸಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್‌ ಮನೆಯಿಂದ ಸಿರಿ ಎಲಿಮಿನೇಟ್‌ ಆದ ಬಳಿಕ ಸಿರಿ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ.

VISTARANEWS.COM


on

Actress Siri marriage to actor prabhakar
Koo

ಬೆಂಗಳೂರು: ‘ರಂಗೋಲಿ’, ‘ಮನೆಯೊಂದು ಮೂರು ಬಾಗಿಲು’, ‘ಬದುಕು’ ಮುಂತಾದ ಧಾರಾವಾಹಿಗಳನ್ನು ಪ್ರೇಕ್ಷಕರು ಮನಗೆದ್ದ ಸಿರಿ ಬಿಗ್ ಬಾಸ್ (BBK Season 10) ಈಗ ಮದುವೆಯಾಗಿದ್ದಾರೆ. ಇನ್ನೂ (Actress Siri) ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆಗಳನ ನಡುವೆ ಅವರು ಸದ್ದಿಲ್ಲದೇ, ಸಿಂಪಲ್‌ ಆಗಿ ಹಸೆ ಮಣೆ ಏರಿದ್ದಾರೆ. ಮೂಲಗಳ ಪ್ರಕಾರ ಸಿರಿ ಮದುವೆಯಾದ ಹುಡುಗನ ಹೆಸರು ಪ್ರಭಾಕರ್. ಮಂಡ್ಯ ಮೂಲದವರಾದ ಇವರು ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಇವರಿಬ್ಬರೂ ಚಿಕ್ಕಬಳ್ಳಾಪುರದ ನಂದಿ ಗ್ರಾಮದಲ್ಲಿ ಮದುವೆ ಮಾಡಿಕೊಂಡಿದ್ದಾರೆ.

ಬಿಗ್ ಬಾಸ್ ಸಿರಿ ಮದುವೆಯಾಗಿರುವ ಹುಡುಗ ಮೂಲತಃ ಮಂಡ್ಯದವರು ಸದ್ಯ ಬೆಂಗಳೂರಿನಲ್ಲಿ ನಲೆಸಿದ್ದಾರೆ. ಅವರ ಹೆಸರು ಪ್ರಭಾಕರ್ ಬೋರೇಗೌಡ. ಪ್ರಭಾಕರ್‌ ಬೋರೇಗೌಡ ಮತ್ತು ಸಿರಿ ಒಟ್ಟಿಗೆ ನಟಿಸಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್‌ ಮನೆಯಿಂದ ಸಿರಿ ಎಲಿಮಿನೇಟ್‌ ಆದ ಬಳಿಕ ಸಿರಿ ಈ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ. ‘ನಿಮ್ಮಲ್ಲರ ಸಪೋರ್ಟ್‌ಗೆ ವಂದನೆಗಳು’ ಎಂದು ಪ್ರಭಾಕರ್ ಬರೆದುಕೊಂಡಿದ್ದರು.

ಇವರಿಬ್ಬರ ಪರಿಚಯ ಆಗಿದ್ದು ಹೇಗೆ? ಲವ್ ಮ್ಯಾರೇಜ್ ಆಗಿರಬಹುದಾ? ಬಿಗ್ ಬಾಸ್‌ ನಂತರ ಅರಳಿದ ಪ್ರೀತಿನಾ ಎಂದು ಜನರು ಕಮೆಂಟ್‌ ಮೂಲಕ ಪ್ರಶ್ನೆ ಇಡುತ್ತಿದ್ದಾರೆ.

ಇದನ್ನೂ ಓದಿ: Actress Siri: ಸಿಂಪಲ್‌ ಆಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ `ಬಿಗ್‌ ಬಾಸ್‌ ಕನ್ನಡ 10′ ಸ್ಪರ್ಧಿ, ನಟಿ ಸಿರಿ!

ಸಿರಿ ಅವರಿಗೆ ಮೈತುಂಬ ಅರಿಷಿಣ ಹಚ್ಚಿರುವ ವಿಡಿಯೊ ವೈರಲ್ ಆಗಿದೆ. ಇದು ಸಿನಿಮಾ ಅಥವಾ ಧಾರಾವಾಹಿ ಶೂಟಿಂಗ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ ಸಿರಿ ಅವರು ರಿಯಲ್ ಲೈಫ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಹುಡುಗ ಯಾರು ಎಂಬುದು ಇನ್ನೂ ರಿವೀಲ್‌ ಆಗಿಲ್ಲ. ಹಾಗೇ ಸಿರಿ ಕೂಡ ಎಲ್ಲಿಯೂ ಪೋಸ್ಟ್‌ ಶೇರ್‌ ಮಾಡಿಕೊಂಡಿಲ್ಲ. ಸಿರಿ ಅವರಿಗೆ ಈಗ 40 ವರ್ಷ ವಯಸ್ಸು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಕಲರ್ಸ್‌ ಕನ್ನಡದ ʻರಾಮಾಚಾರಿʼ ಧಾರಾವಾಹಿಯಲ್ಲಿ ನಟಿ ಬಣ್ಣ ಹಚ್ಚಿದ್ದರು. ಈಗ ಪರಭಾಷೆಯ ಕಿರುತೆರೆಯಲ್ಲಿಯೂ ಮಿಂಚುತ್ತಿದ್ದಾರೆ. ಕೆಲ ಸಿನಿಮಾಗಳಲ್ಲಿ ಕೂಡ ಸಿರಿ ಅವರು ನಟಿಸಿದ್ದಾರೆ. 30 ವರ್ಷಗಳ ಕಾಲ ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ಸಿರಿ ಯಾಕೆ ಮದುವೆಯಾಗಲಿಲ್ಲ ಎಂದು ನೆಟ್ಟಿಗರು ನಟಿಗೆ ಹಲವು ಬಾರಿ ಪ್ರಶ್ನೆ ಮಾಡಿದ್ದೂ ಇದೆ.

ಬಿಗ್‌ ಬಾಸ್‌ ವೇದಿಕೆಯಲ್ಲಿ ಈ ಬಗ್ಗೆ ಸಿರಿ ಮಾತನಾಡಿದ್ದು ಇದೆ. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು.

ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

Continue Reading

ಬಿಗ್ ಬಾಸ್

Actress Siri: ಸಿಂಪಲ್‌ ಆಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ `ಬಿಗ್‌ ಬಾಸ್‌ ಕನ್ನಡ 10′ ಸ್ಪರ್ಧಿ, ನಟಿ ಸಿರಿ!

Actress Siri: ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

VISTARANEWS.COM


on

Actress Bbk 10 Siri Marriage Video Goes Viral
Koo

ಬೆಂಗಳೂರು: ‘ರಂಗೋಲಿ’, ‘ಮನೆಯೊಂದು ಮೂರು ಬಾಗಿಲು’, ‘ಬದುಕು’ ಮುಂತಾದ ಧಾರಾವಾಹಿಗಳನ್ನು ಪ್ರೇಕ್ಷಕರು ಮನಗೆದ್ದ ಸಿರಿ ಬಿಗ್ ಬಾಸ್ (BBK Season 10) ಈಗ ಮದುವೆಯಾಗಿದ್ದಾರೆ. ಇನ್ನೂ (Actress Siri) ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆ ಅವರ ಫ್ಯಾನ್ಸ್‌ನಲ್ಲಿ ಪದೇ ಪದೇ ಕಾಡುತ್ತಿತ್ತು. ಈಗ ಸದ್ದಿಲ್ಲದೇ ಸಿಂಪಲ್‌ ಆಗಿ ಮದುವೆಯಾಗಿದ್ದಾರೆ ಸಿರಿ.

ಸಿರಿ ಅವರಿಗೆ ಮೈತುಂಬ ಅರಿಷಿಣ ಹಚ್ಚಿರುವ ವಿಡಿಯೊ ವೈರಲ್ ಆಗಿದೆ. ಇದು ಸಿನಿಮಾ ಅಥವಾ ಧಾರಾವಾಹಿ ಶೂಟಿಂಗ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ ಸಿರಿ ಅವರು ರಿಯಲ್ ಲೈಫ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಹುಡುಗ ಯಾರು ಎಂಬುದು ಇನ್ನೂ ರಿವೀಲ್‌ ಆಗಿಲ್ಲ. ಹಾಗೇ ಸಿರಿ ಕೂಡ ಎಲ್ಲಿಯೂ ಪೋಸ್ಟ್‌ ಶೇರ್‌ ಮಾಡಿಕೊಂಡಿಲ್ಲ. ಸಿರಿ ಅವರಿಗೆ ಈಗ 40 ವರ್ಷ ವಯಸ್ಸು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಕಲರ್ಸ್‌ ಕನ್ನಡದ ʻರಾಮಾಚಾರಿʼ ಧಾರಾವಾಹಿಯಲ್ಲಿ ನಟಿ ಬಣ್ಣ ಹಚ್ಚಿದ್ದರು. ಈಗ ಪರಭಾಷೆಯ ಕಿರುತೆರೆಯಲ್ಲಿಯೂ ಮಿಂಚುತ್ತಿದ್ದಾರೆ. ಕೆಲ ಸಿನಿಮಾಗಳಲ್ಲಿ ಕೂಡ ಸಿರಿ ಅವರು ನಟಿಸಿದ್ದಾರೆ. 30 ವರ್ಷಗಳ ಕಾಲ ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ಸಿರಿ ಯಾಕೆ ಮದುವೆಯಾಗಲಿಲ್ಲ ಎಂದು ನೆಟ್ಟಿಗರು ನಟಿಗೆ ಹಲವು ಬಾರಿ ಪ್ರಶ್ನೆ ಮಾಡಿದ್ದೂ ಇದೆ.

ಇದನ್ನೂ ಓದಿ: Kotee Movie: ಡಾಲಿ ಧನಂಜಯ್ ಅಭಿನಯದ ‘ಕೋಟಿ’ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆ

ಬಿಗ್‌ ಬಾಸ್‌ ವೇದಿಕೆಯಲ್ಲಿ ಈ ಬಗ್ಗೆ ಸಿರಿ ಮಾತನಾಡಿದ್ದು ಇದೆ. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು.

ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

Continue Reading
Advertisement
electric bike taxi
ಪ್ರಮುಖ ಸುದ್ದಿ4 mins ago

Electric Bike Taxi: ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿ ಸಂಪೂರ್ಣ ನಿಷೇಧ

Puri Jagannath Yatra
ಧಾರ್ಮಿಕ7 mins ago

Puri Jagannath Yatra: ಜುಲೈ 7ರಂದು ಪುರಿ ಜಗನ್ನಾಥ ರಥಯಾತ್ರೆ; ಇದಕ್ಕಿದೆ ಪೌರಾಣಿಕ ಹಿನ್ನೆಲೆ

SCSP TSP Scheme
ಕರ್ನಾಟಕ14 mins ago

SCSP TSP Scheme: ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನ ಶೇ.100 ಖರ್ಚು ಮಾಡದಿದ್ರೆ ಕಠಿಣ ಕ್ರಮ; ಸಿಎಂ ವಾರ್ನಿಂಗ್‌

Viral Video
ವೈರಲ್ ನ್ಯೂಸ್28 mins ago

Viral Video: ವೇದಿಕೆಯಲ್ಲೇ ಎಲ್ಲರೆದುರು ಟಾಪ್‌ ಎತ್ತಿ ಸ್ತನ ಪ್ರದರ್ಶಿಸಿದ ಸಚಿವೆ- ವಿಡಿಯೋ ಭಾರೀ ವೈರಲ್‌

karnataka rain
ಮಳೆ30 mins ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Ayodhya Ram Mandir
ದೇಶ33 mins ago

Ayodhya Ram Mandir: ಅಯೋಧ್ಯೆ ರಾಮ ಮಂದಿರದ ಅರ್ಚಕರಿಗೆ ಹೊಸ ಸಮವಸ್ತ್ರ; ನಿಯಮದಲ್ಲಿ ಬದಲಾವಣೆ: ಕಾರಣವೇನು?

Latest38 mins ago

Self Harming: ಮೊದಲ ರಾತ್ರಿಯ ಟೆನ್ಶನ್‌ಗೆ ವರ ಆತ್ಮಹತ್ಯೆ? ಉತ್ತರ ಪ್ರದೇಶದಲ್ಲೊಂದು ವಿಲಕ್ಷಣ ಘಟನೆ

Valmiki Corporation Scam
ಪ್ರಮುಖ ಸುದ್ದಿ42 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣದಲ್ಲಿ ಮುಂದುವರಿದ ಮಾಜಿ ಸಚಿವರ ಪಿಎಸ್‌ ವಿಚಾರಣೆ; ನಾಗೇಂದ್ರಗೆ ಢವಢವ!

Team India's Victory Parade
ಕ್ರಿಕೆಟ್43 mins ago

Team India’s Victory Parade: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ನಲ್ಲಿ ಹಲವು ಅಭಿಮಾನಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು

Viral News
Latest47 mins ago

Viral News: ಕಾಮ ದಾಹ ತಣಿಸಿಕೊಳ್ಳಲು ವಿದ್ಯಾರ್ಥಿಗಳನ್ನೇ ಬಳಸಿಕೊಂಡ ಶಿಕ್ಷಕಿಗೆ ಶಿಕ್ಷೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka rain
ಮಳೆ30 mins ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ2 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು3 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು4 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ8 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ20 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ21 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ23 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ1 day ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

ಟ್ರೆಂಡಿಂಗ್‌