Navaratri Colour Trend | ನವರಾತ್ರಿ 2ನೇ ದಿನಕ್ಕೆ ಟ್ರೆಂಡಿಯಾಗಿರಲಿ ಕೆಂಪು ವರ್ಣದ ಎಥ್ನಿಕ್‌ವೇರ್‌ - Vistara News

ದಸರಾ ಸಂಭ್ರಮ

Navaratri Colour Trend | ನವರಾತ್ರಿ 2ನೇ ದಿನಕ್ಕೆ ಟ್ರೆಂಡಿಯಾಗಿರಲಿ ಕೆಂಪು ವರ್ಣದ ಎಥ್ನಿಕ್‌ವೇರ್‌

ನವರಾತ್ರಿಯ 2ನೇ ದಿನ ಕೆಂಪು ವರ್ಣಕ್ಕೆ (Navaratri Colour Trend) ಆದ್ಯತೆ. ಈ ರೆಡ್‌ ಶೇಡ್‌ನಲ್ಲಿ ಮಹಿಳೆಯರು ಹೇಗೆಲ್ಲಾ ಸಿಂಗರಿಸಿಕೊಳ್ಳಬಹುದು ಎಂಬುದರ ಬಗ್ಗೆ ಫ್ಯಾಷನ್‌ ಪರಿಣತರು ಒಂದಿಷ್ಟು ಸಲಹೆ ನೀಡಿದ್ದಾರೆ.

VISTARANEWS.COM


on

Navaratri Colour Trend
ಸರ್ಗುಣ್‌ ಮೆಹ್ತಾ, ನಟಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

-ಶೀಲಾ ಸಿ. ಶೆಟ್ಟಿ, ಬೆಂಗಳೂರು
ನವರಾತ್ರಿಯ ೨ನೇ ದಿನ (Navaratri Colour Trend) ಕೆಂಪು ವರ್ಣದ ಉಡುಪು ಅಥವಾ ಸೀರೆ ಧರಿಸುವವರು ಹೇಗೆಲ್ಲ ಟ್ರೆಂಡಿಯಾಗಿ ಕಾಣಿಸಿಕೊಳ್ಳಬಹುದು ಎಂಬುದರ ಬಗ್ಗೆ ಸ್ಟೈಲಿಸ್ಟ್‌ಗಳು ಒಂದಿಷ್ಟು ಸಲಹೆಗಳನ್ನು ನೀಡಿದ್ದಾರೆ. ಟ್ರೈ ಮಾಡಿ ನೋಡಿ.

ಕೆಂಪು ಸೀರೆ ಧರಿಸುವವರಾದಲ್ಲಿ
ಕೆಂಪು ವರ್ಣದಲ್ಲಿನಾನಾ ಶೇಡ್‌ಗಳವು ದೊರೆಯುತ್ತವೆ. ಉದಾಹರಣೆಗೆ ರೆಡ್‌ಬ್ಲಡ್‌, ತಿಳಿಗೆಂಪು, ಡಾರ್ಕ್ ಕೆಂಪು, ಮರೂನ್‌, ವೈನ್‌ ರೆಡ್‌, ಬ್ರಿಕ್‌ ರೆಡ್‌ ಹೀಗೆ ಇತ್ತೀಚೆಗೆ ಸಾಕಷ್ಟು ವರ್ಣಗಳು ಟ್ರೆಂಡ್‌ನಲ್ಲಿವೆ.

ಫೆಸ್ಟೀವ್‌ ಸೀಸನ್‌ನಲ್ಲಿ ಈ ಶೇಡ್‌ನ ಸಿಲ್ಕ್‌, ಸೆಮಿ ಸಿಲ್ಕ್‌ ಹಾಗೂ ಬನಾರಸ್‌ ಸೀರೆಗಳು ಸಖತ್‌ ಟ್ರೆಂಡಿಯಾಗಿವೆ. ರೇಷ್ಮೆ ಸೀರೆಯಾದಲ್ಲಿ ಹೆಚ್ಚು ಪ್ರಿಂಟ್‌ನ ಆಯ್ಕೆ ಬೇಡ. ಆದಷ್ಟೂ ರೆಡ್‌ ಕಲರ್‌ ಎದ್ದು ಕಾಣುವಂತದ್ದನ್ನು ಸೆಲೆಕ್ಟ್‌ ಮಾಡಿ. ಬಾರ್ಡರ್‌ ಇದ್ದಲ್ಲಿ ಕೆಂಪು ವರ್ಣದ ಸೀರೆಗಳು ಹೆಚ್ಚು ಹೈಲೈಟ್‌ ಆಗುತ್ತವೆ. ಇನ್ನು ರೇಷ್ಮೆಯ ಸೀರೆಗಳಾದಲ್ಲಿ ಬಂಗಾರದ ಇಲ್ಲವೇ ಇಮಿಟೇಷನ್‌ ಜ್ಯುವೆಲರಿಗಳು ಮ್ಯಾಚ್‌ ಆಗುತ್ತವೆ.

ಇದನ್ನೂ ಓದಿ | Holiday Fashion | ಬಂತು ದಸರಾ ಹಾಲಿಡೇ ಫ್ಯಾಷನ್‌

Navaratri Colour Trend
ಭಾಗ್ಯ ಶ್ರೀ, ಬಾಲಿವುಡ್‌ ನಟಿ

ಇಂಡೋ-ವೆಸ್ಟರ್ನ್ ಸ್ಟೈಲ್‌ಗಾದಲ್ಲಿ
ಇಂಡೋ-ವೆಸ್ಟರ್ನ್ ಶೈಲಿಯ ಸೀರೆಗಳನ್ನು ಧರಿಸುವವರು ಇಂದು ವೃತ್ತಿಪರ ಕ್ಷೇತ್ರದ ಮಹಿಳೆಯರಲ್ಲಿ ಹೆಚ್ಚಾಗಿ ಕಂಡು ಬರುತ್ತಿದ್ದಾರೆ. ಎಲ್ಲದಕ್ಕಿಂತ ಹೆಚ್ಚಾಗಿ ಡಿಫರೆಂಟ್‌ ಲುಕ್‌ ನೀಡುವ ಕ್ರಾಪ್‌ ಟಾಪ್‌, ಬೆಲ್‌ ಸ್ಲೀವ್‌ ಹಾಗೂ ಬಲೂನ್‌ ಸ್ಲೀವ್‌ ಟಾಪ್‌ಗಳನ್ನು ಬಳಸಿ ಸೀರೆ ಉಡುವವರು ಹೆಚ್ಚಾಗಿದ್ದಾರೆ. ಅಂತಹವರು ಆದಷ್ಟೂ ಕಾಂಟ್ರಾಸ್ಟ್‌ ವರ್ಣದ ಬ್ಲೌಸ್‌ ಬಳಸುವ ಬದಲು ಈ ಹಬ್ಬಕ್ಕೆ ಮಾನೋಕ್ರೋಮ್‌ ಶೇಡ್‌ಗಳಿಗೆ ಆದ್ಯತೆ ನೀಡಿ, ಧರಿಸಿ. ಯಾಕೆಂದರೆ, ಇದು ನೋಡಲು ಇಂಡೋ-ವೆಸ್ಟರ್ನ್ ಸೀರೆಯಾದರೂ ಹಬ್ಬದ ವರ್ಣದ ಲುಕ್‌ ನೀಡುತ್ತದೆ ಎನ್ನುತ್ತಾರೆ ಫ್ಯಾಷನಿಸ್ಟಾಗಳು.

Navaratri Colour Trend
ಜಾಕ್ವೆಲೀನ್‌ ಫರ್ನಾಂಡೀಸ್‌ ನಟಿ

ಅನಾರ್ಕಲಿ -ಕಮೀಜ್ ಪ್ರಿಯರು ಹೀಗೆ ಮಾಡಿ
ಸೀರೆ ಬೇಡ, ಸೆಲ್ವಾರ್‌-ಕಮೀಜ್, ಅನಾರ್ಕಲಿ ಅಥವಾ ಇನ್ನೀತರೆ ಎಥ್ನಿಕ್‌ವೇರ್‌ ಪ್ರಿಯರಾದಲ್ಲಿ ಆದಷ್ಟೂ ಮಾನೋಕ್ರೋಮ್‌ ಶೇಡ್‌ನ ಉಡುಪುಗಳನ್ನು ಆಯ್ಕೆ ಮಾಡಿ. ಅನಾರ್ಕಲಿಯಲ್ಲೂ ಸಾಕಷ್ಟು ಬಗೆಯವು ಫೆಸ್ಟೀವ್‌ ಸೀಸನ್‌ಗೆ ಫ್ಯಾಷನ್‌ ಲೋಕಕ್ಕೆ ಕಾಲಿಟ್ಟಿವೆ. ಇನ್ನು ಇವಕ್ಕೆ ಮ್ಯಾಚಿಂಗ್‌ ಜ್ಯುವೆಲರಿಗಳನ್ನು ಧರಿಸಬಹುದು. ಆಗ ಕಂಪ್ಲೀಟ್‌ ಕೆಂಪು ವರ್ಣದ ಲುಕ್‌ ನಿಮ್ಮದಾಗುತ್ತದೆ.

ರೆಡ್‌ ವರ್ಣಕ್ಕೆ ಸೂಟ್‌ ಆಗುವ ಹೇರ್‌ಸ್ಟೈಲ್‌
ಇನ್ನು ಕೆಂಪು ಶೇಡ್‌ನ ವೇರ್‌ಗೆ ಆದಷ್ಟೂ ಹೇರ್‌ಸ್ಟೈಲ್‌ ಟ್ರೆಡಿಷನಲ್‌ ಲುಕ್‌ ನೀಡಬೇಕು. ಫಂಕಿ ಲುಕ್‌ ಬೇಡ.

Navaratri Colour Trend
ನಿಯಾ ಶರ್ಮಾ, ನಟಿ

ಮೇಕಪ್‌ ಹೀಗಿರಲಿ
ಮೇಕಪ್‌ ಲೈಟಾಗಿರಲಿ. ಕಾಜಲ್‌, ಐಲೈನರ್‌, ಮಸ್ಕಟಾ ಬಳಸಿ. ರೆಡ್‌ ಲಿಪ್‌ಸ್ಟಿಕ್‌ ತಿಳಿಯಾಗಿ ಲೇಪಿಸಿ. ಹಣೆಗೆ ಅಗಲವಾದ ರೆಡ್‌ ಬಂಗಾಲಿ ಬಿಂದಿ ಇರಿಸಿ. ಇದು ನೋಡಲು ಆಕರ್ಷಕವಾಗಿ ಕಾಣುತ್ತದೆ.

(ಲೇಖಕಿ ಫ್ಯಾಷನ್‌ ಪತ್ರಕರ್ತೆ)

ಇದನ್ನೂ ಓದಿ | Weekend Style | ಸೀಸನ್‌ಗೆ ತಕ್ಕಂತೆ ಬದಲಾಗುವ ನಿಶಾ ಫ್ಯಾಷನ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Mysore Dasara: ಚೆಕ್‌ ಬೌನ್ಸ್‌; ದಸರಾ ಕಲಾವಿದರಿಗೆ ಅವಮಾನ ಎಂದು ಯತ್ನಾಳ್‌ ಕಿಡಿ

Mysore Dasara: ಮೈಸೂರು ಉಸ್ತುವಾರಿ ಸಚಿವರು ಹಾಗೂ ಮುಖ್ಯ ಮಂತ್ರಿಗಳು ಕಲಾವಿದರಿಗೆ ಬೇಷರತ್ ಕ್ಷಮೆ ಕೇಳಿ ಲಲಿತಕಲೆ ಹಾಗೂ ಕರಕುಶಲ ಉಪಸಮಿತಿಯ ಸಂಬಂಧಪಟ್ಟ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆಗ್ರಹಿಸಿದ್ದಾರೆ.

VISTARANEWS.COM


on

Basanagouda Patil Yatnal
Koo

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysore Dasara) ಮುಕ್ತಾಯವಾದರೂ ಕಲಾವಿದರ ಅಸಮಾಧಾನ ನಿಂತಿಲ್ಲ. ಅಧಿಕಾರಿಗಳ ಎಡವಟ್ಟಿನಿಂದ ಬಹುಮಾನದ ಚೆಕ್‌ ಬೌನ್ಸ್‌ ಆಗಿರುವುದರಿಂದ ಬಹುಮಾನ ವಿಜೇತರು ಅಲೆದಾಡುವಂತಾಗಿದೆ. ಚೆಕ್‌ ವಾಪಸ್‌ ಬಂದರೂ ಬ್ಯಾಂಕ್‌ ಖಾತೆಯಲ್ಲಿ ಹಣ ಕಡಿತವಾಗಿರುವುದಕ್ಕೆ ಕಲಾವಿದರೊಬ್ಬರು ಅಸಮಾಧಾನ ಹೊರಹಾಕಿದ್ದಾರೆ. ಮತ್ತೊಂದೆಡೆ ರಾಜ್ಯ ಸರ್ಕಾರದಿಂದ ಕಲಾವಿದರಿಗೆ ಅವಮಾನವಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿ ಕಾರಿದ್ದಾರೆ.

ಅ.26 ರಂದು ಮೈಸೂರಿನ ಹವ್ಯಾಸಿ ಛಾಯಾಚಿತ್ರಗಾರ ಎನ್.ಜಿ. ಸುಧೀರ್‌ಗೆ 7 ಸಾವಿರ ರೂ. ಬಹುಮಾನದ ಚೆಕ್ ನೀಡಲಾಗಿತ್ತು‌. ಅ.27 ರಂದು ಸುದೀರ್ ಬ್ಯಾಂಕ್‌ಗೆ ಸಲ್ಲಿಸಿದ್ದರು. ಆದರೆ ಅ.30ರಂದು ಚೆಕ್ ವಾಪಸ್ ಆಗಿದೆ. ಈ ವೇಳೆ ಅಕೌಂಟ್‌ನಿಂದ 118 ರೂ. ಕಟ್ ಮಾಡಲಾಗಿದೆ.

ಇದನ್ನೂ ಓದಿ | Karnataka Politics : ನಾನು ಮುಖ್ಯಮಂತ್ರಿ ಆಗಲು ಸಿದ್ಧ ಎಂದ ಪ್ರಿಯಾಂಕ್ ಖರ್ಗೆ

ಈ ಬಗ್ಗೆ ಪ್ರತಿಕ್ರಿಯಿಸಿರುವ ಎನ್.ಜಿ. ಸುಧೀರ್, ಸ್ಪರ್ಧೆಯಲ್ಲಿ ಭಾಗಿಯಾಗಿ ಬಹುಮಾನ ಪಡೆದ ನನಗೆ 118 ರೂ. ದಂಡ ಬಿದ್ದಿದೆ. ಇಂತಹ ಬೇಜಾವ್ದಾರಿತನ ಏಕೆ? ತಮ್ಮಂತೆ ಸಾಕಷ್ಟು ಕಲಾವಿದರಿಗೆ ಅನ್ಯಾಯ ಆಗಿದೆ ಎಂದು ಅಧಿಕಾರಿಗಳ ವಿರುದ್ಧ ಬೇಸರ ಹೊರಹಾಕಿದ್ದಾರೆ.

ದಸರಾ ಲಲಿತ ಕಲೆ ಮತ್ತು ಕರಕುಶಲ ಉಪಸಮಿತಿಯಿಂದ ಕಲಾವಿದರಿಗೆ ನೀಡಿದ್ದ ಬಹುಮಾನದ ಚೆಕ್‌ಗಳು ನಗದಾಗಿ ಪರಿವರ್ತನೆ ಆಗದೆ ವಾಪಸ್‌ ಆಗುತ್ತಿವೆ. ಅಧಿಕಾರಿಗಳ ಸಹಿಯಲ್ಲಿನ ವ್ಯತ್ಯಾಸ ಇದಕ್ಕೆ ಕಾರಣವಾಗಿದೆ. ಉಪಸಮಿತಿಯ ಈ ಹಿಂದಿನ ಕಾರ್ಯಾಧ್ಯಕ್ಷ, ಕಾರ್ಯದರ್ಶಿಗಳ ಸಹಿಗಳೇ ಚೆಕ್‌ ಮೇಲೆ ಇದ್ದಿದ್ದರಿಂದ ಚೆಕ್‌ ಬೌನ್ಸ್‌ ಆಗಿವೆ ಎನ್ನಲಾಗಿದೆ. ಚೆಕ್ ವಾಪಸ್‌ ಆಗಿರುವುದು ತಿಳಿದುಬರುತ್ತಿದ್ದಂತೆ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಂಡಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ | Karnataka Politics : ಪರಮೇಶ್ವರ್‌ ಮುಖ್ಯಮಂತ್ರಿ ಆಗಬೇಕು; ನಾನು ಎಐಸಿಸಿಗೂ ಹೆದರಲ್ಲವೆಂದ ಕೆ.ಎನ್.‌ ರಾಜಣ್ಣ

ರಾಜ್ಯ ಸರ್ಕಾರದ ವಿರುದ್ಧ ಯತ್ನಾಳ್‌ ಆಕ್ರೋಶ

ಕಲಾವಿದರಿಗೆ ನೀಡಿದ್ದ ಚೆಕ್‌ ಬೌನ್ಸ್‌ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ದಸರಾ ಹಬ್ಬದಲ್ಲಿ ಭಾಗವಹಿಸಿದ ಕಲಾವಿದರಿಗೆ ನೀಡಿದ ಚೆಕ್ ಬೌನ್ಸ್ ಆಗಿರುವುದು ಕಲಾವಿದರಿಗೆ ಮಾಡಿದ ಅವಮಾನ. ಗಾಯದ ಮೇಲೆ ಬರೆ ಇಟ್ಟಂತೆ ಬೌನ್ಸ್ ಆದ ಚೆಕ್ ಬ್ಯಾಂಕ್‌ಗೆ ನೀಡಿದ್ದಕ್ಕೆ ಕಲಾವಿದರಿಗೆ ಬ್ಯಾಂಕ್ ದಂಡ ಹಾಕಿದೆ. ದಸರಾ ಹಾಗೂ ಮೈಸೂರು ಉಸ್ತುವಾರಿ ಸಚಿವರು ಹಾಗೂ ಮುಖ್ಯ ಮಂತ್ರಿಗಳು ಕಲಾವಿದರಿಗೆ ಬೇಷರತ್ ಕ್ಷಮೆ ಕೇಳಿ ಲಲಿತಕಲೆ ಹಾಗೂ ಕರಕುಶಲ ಉಪಸಮಿತಿಯ ಸಂಬಂಧಪಟ್ಟ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು. ಉತ್ತರದಾಯಿತ್ವವಿಲ್ಲದೆ, ಬೇಜವಾಬ್ದಾರಿ ವರ್ತನೆಯಿಂದ ಕೆಲಸ ಮಾಡುವವರಿಗೆ ಸರ್ಕಾರ ಶಿಸ್ತು ಕ್ರಮ ಜರುಗಿಸಲಿ. ಉಸ್ತುವಾರಿ ಸಚಿವರ ದುರಾಡಳಿತದಿಂದ ದಸರಾ ಸಂಭ್ರಮದಲ್ಲಿ ವಿದ್ಯುತ್ ಬೇಲಿ ಹಾರಿ ಬಂದು ಭದ್ರತಾ ವೈಫಲ್ಯವೆಸಗಿದ್ದು, ಈಗ ಕಲಾವಿದರಿಗೆ ನೀಡಿದ ಚೆಕ್ ಬೌನ್ಸ್ ನೀಡಿ ಸರಣಿ ವೈಫಲ್ಯಗಳು ಆಗಿವೆ ಎಂದು ಅಕ್ರೋಶ ಹೊರಹಾಕಿದ್ದಾರೆ.

Continue Reading

ಕರ್ನಾಟಕ

Mysore Dasara: ಮೈಸೂರು ದಸರಾ ಸಂಭ್ರಮದ ಸ್ಮರಣೀಯ ಚಿತ್ರಗಳಿವು

Mysore Dasara: ವಿಶ್ವ ವಿಖ್ಯಾತ ಮೈಸೂರು ದಸರಾ ಮಂಗಳವಾರ ಜಂಬೂ ಸವಾರಿಯೊಂದಿಗೆ ಮುಕ್ತಾಯವಾಯಿತು. ದಸರಾ ಸಂಭ್ರಮದ ಸ್ಮರಣೀಯ ಚಿತ್ರಗಳನ್ನು ಇಲ್ಲಿ ನೀಡಲಾಗಿದೆ

VISTARANEWS.COM


on

Dasara sambhrama
Koo

ಮೈಸೂರು: ಅ.15ರಂದು ಆರಂಭವಾದ ವಿಶ್ವ ವಿಖ್ಯಾತ ಮೈಸೂರು ದಸರಾ (Mysore Dasara) ಮಹೋತ್ಸವ, ವಿಜಯದಶಮಿ ದಿನವಾದ ಮಂಗಳವಾರ ಜಂಬೂ ಸವಾರಿಯೊಂದಿಗೆ ಮುಕ್ತಾಯವಾಯಿತು. ಕೊನೆಯ ದಿನ ವಿವಿಧ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು, ಸ್ತಬ್ಧಚಿತ್ರಗಳ ಮೆರವಣಿಗೆ, ಜಂಬೂ ಸವಾರಿ, ಪಂಜಿನ ಕವಾಯತು ಅದ್ಧೂರಿಯಾಗಿ ನೆರವೇರಿದ್ದು, ಜಂಬೂ ಸವಾರಿ ವೀಕ್ಷಿಸಲು ಲಕ್ಷಾಂತರ ಜನರು ಆಗಮಿಸಿದ್ದರು. ದಸರಾ ಸಂಭ್ರಮದ ಸ್ಮರಣೀಯ ಚಿತ್ರಗಳನ್ನು ಇಲ್ಲಿ ನೀಡಲಾಗಿದೆ.

ಇದನ್ನೂ ಓದಿ | Mysore Dasara : ಕಣ್ಮನ ಸೆಳೆದ ಪಂಜಿನ ಕವಾಯತು; ಮೈಸೂರು ದಸರಾ ಅದ್ಧೂರಿಯಾಗಿ ಮುಗಿಯಿತು!

Continue Reading

ಕರ್ನಾಟಕ

Mysore Dasara : ಕಣ್ಮನ ಸೆಳೆದ ಪಂಜಿನ ಕವಾಯತು; ಮೈಸೂರು ದಸರಾ ಅದ್ಧೂರಿಯಾಗಿ ಮುಗಿಯಿತು!

Mysore Dasara : ಯೋಧರು ಮತ್ತು ಪೊಲೀಸರ ಬೈಕ್‌ ಸಾಹಸಗಳ ಪ್ರದರ್ಶನಗಳು ಸೇರಿದ್ದವರ ಮೈನವಿರೇಳುವಂತೆ ಮಾಡಿತು. ಕೆಲ ಕಾಲ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದ್ದು, ಗಮನ ಸೆಳೆದವು. ಅಂತಿಮವಾಗಿ ಸುಮಾರು 25 ನಿಮಿಷಗಳ ಕಾಲ ಪಂಜಿನ ಕವಾಯತು ನಡೆಯಿತು. ಈ ಕವಾಯತು ಪ್ರದರ್ಶನದ ಅಷ್ಟೂ ಸಮಯವು ನೋಡುಗರು ಉಸಿರು ಬಿಗಿಹಿಡಿದು ವೀಕ್ಷಣೆ ಮಾಡಿದ್ದು ಕಂಡು ಬಂತು.

VISTARANEWS.COM


on

Torch Light Parade 2023
Koo

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ (Mysore Dasara) ಅದ್ಧೂರಿಯಾಗಿ ಮುಕ್ತಾಯಗೊಂಡಿದೆ. ಇಡೀ ದಸರಾದ ಆಕರ್ಷಣೆಯಲ್ಲಿ ಜಂಬೂ ಸವಾರಿ (Jumboo Savari) ನಂತರ ಪ್ರಮುಖವಾಗಿ ಎದ್ದು ಕಾಣುವ ಪಂಜಿನ ಕವಾಯತಿಗೆ (Torch Light Parade 2023) ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Governor Thaawar Chand Gehlot) ಚಾಲನೆ ನೀಡಿದರು. ಪೊಲೀಸ್‌ ಪಡೆಯಿಂದ ಗೌರವ ವಂದನೆ ಸ್ವೀಕರಿಸುವ ಮೂಲಕ ಅವರು ವರ್ಣರಂಜಿತ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು.

ಮೊದಲು ರಾಷ್ಟ್ರಗೀತೆಯನ್ನು (National Anthem) ನುಡಿಸುವ ಮೂಲಕ ಕವಾಯತು ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ದೊರೆಯಿತು. ರಾಷ್ಟ್ರಗೀತೆ ಮುಕ್ತಾಯವಾಗುತ್ತಿದ್ದಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಬಳಿ ಬಂದ ಕಿಂಗ್‌ ಪವರ್‌ ಅಶ್ವರೂಢ ಖಡ್ಗಧಾರಿ ಪ್ರಧಾನ ದಳಪತಿ ಕವಾಯತು ವರದಿಯನ್ನು ಅತಿಥಿಗಳಿಗೆ ಸಮರ್ಪಿಸಿದರು. ತರುವಾಯ ನಿಶ್ಚಳ ದಳಗಳ ಪರಿವೀಕ್ಷಣೆಗಾಗಿ ರಾಜ್ಯಪಾಲರನ್ನು ಆಹ್ವಾನಿಸಿದರು.

ಆಹ್ವಾನವನ್ನು ಒಪ್ಪಿ ಅಲಂಕೃತ ತೆರೆದ ವಾಹನವನ್ನು ಹತ್ತಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ವಿವಿಧ ಸೇವಾದಳಗಳ ನಿಶ್ಚಳದಳಗಳ ಪರಿವೀಕ್ಷಣೆಯನ್ನು ನಡೆಸಿದರು. ಮೈಸೂರು ನಗರ ಪೊಲೀಸ್‌ ಆಯುಕ್ತ ರಮೇಶ್‌ ಬಿ. ಅವರು ರಾಜ್ಯಪಾಲರಿಗೆ ವ್ಯಕ್ತಿಪರಿವೀಕ್ಷಕರಾಗಿದ್ದರು.

ಇದಾದ ಬಳಿಕ 21 ಕುಶಾಲತೋಪುಗಳನ್ನು ಮೂರು ಹಂತಗಳಲ್ಲಿ ಸಿಡಿಸಲಾಯಿತು. ನಿಶ್ಚಳದ ದಳ ಅಶ್ವಪಡೆಗಳ ಒಂದೊಂದಾಗಿ ಮೂರು ಕುದುರೆಗಳು ಒಂದು ಸುತ್ತು ಸುತ್ತಿ ಬಂದ ಬಳಿಕ ಗಾಳಿಯಲ್ಲಿ ಗುಂಡುಹಾರಿಸುವ ಮೂಲಕ ಗೌರವ ನಮನ ಸಲ್ಲಿಸಲಾಯಿತು. ಈ ವೇಳೆ ಮತ್ತೊಮ್ಮೆ ರಾಷ್ಟ್ರಗೀತೆಯನ್ನು ಮೊಳಗಿಸಲಾಯಿತು.

18 ತುಕಡಿಗಳಿಂದ ಪ್ರದರ್ಶನ

ಒಟ್ಟು 18 ತುಕಡಿಗಳು ಪ್ರದರ್ಶನ ತೋರಿದವು. ಈ ತುಕಡಿಗಳು ಹಲವು ಹಿರಿಯ ಅಧಿಕಾರಿಗಳ ಮಾರ್ಗದರ್ಶನದ ಮೂಲಕ ಕೆಲವು ದಿನಗಳಿಂದ ತಾಲೀಮು ನಡೆಸಿವೆ. ಲಯಬದ್ಧ ಸಂಗೀತಕ್ಕೆ ಶಿಸ್ತುಬದ್ಧ ಹೆಜ್ಜೆಯನ್ನು ಹಾಕುತ್ತಾ ಸಾಗುತ್ತಿರುವುದನ್ನು ನೋಡುವುದೇ ಕಣ್ಣಿಗೆ ಒಂದು ಹಬ್ಬದಂತೆ ಇತ್ತು. ಎದೆ ಸೆಟೆದು ಕೈಬೀಸಿ ಕಾಲನ್ನು ಜೋರಾಗಿ ನೆಲಕ್ಕೆ ಗುದ್ದಿ ಧೂಳೆಬ್ಬಿಸುತ್ತಾ ಆರಕ್ಷಕ ದಳದವರು ವೀರ ನಡಿಗೆ ಸಾಗುತ್ತಿದ್ದರೆ ಸೇರಿದ್ದ ಜನಸ್ತೋಮ ಚಪ್ಪಾಳೆಯ ಸುರಿಮಳೆಯನ್ನೇ ಸುರಿಸಿತು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ, ಗೃಹ ಸಚಿವ ಡಾ. ಜಿ. ಪರಮೇಶ್ವರ್‌, ಸಚಿವರಾದ ವೆಂಕಟೇಶ್‌, ಶಿವರಾಜ್‌ ತಂಗಡಗಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಕಣ್ತುಂಬಿದ ಲೈಟಿಂಗ್‌

ಧ್ವನಿ ಬೆಳಕಿನ ಸಂಭ್ರಮ ಇದೇ ವೇಳೆ ಅನಾವರಣಗೊಳಿಸಲಾಯಿತು. ಧ್ವನಿ ಮೊದಲೋ ಬೆಳಕೋ ಎಂಬ ಪ್ರಶ್ನೆಗೆ ಉತ್ತರ ಸಿಗದಿದ್ದರೂ ಡಿಎನ್‌ಎ ಸಹಯೋಗದಲ್ಲಿ ಧ್ವನಿ – ಬೆಳಕಿನ ಪ್ರದರ್ಶನವು ನೋಡುಗರನ್ನು ರೋಮಾಂಚನಗೊಳಿಸಿತು.

ಮನ ಮುಟ್ಟಿದ ನೃತ್ಯ ರೂಪಕ

ಡಿಎನ್‌ಎ ಸಮೂಹದ ಮೂಲಕ ನೃತ್ಯ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಇದಕ್ಕೆ ಭಜರಂಗಿ ಮೋಹನ್‌ ಅವರು ನೃತ್ಯ ಸಂಯೋಜನೆಯನ್ನು ಮಾಡಿದ್ದಾರೆ. ಈ ವೇಳೆ ಐಗಿರಿ ನಂದಿನಿ ಹಾಡಿಗೆ ನೃತ್ಯ ಮಾಡಲಾಯಿತು. ಜತೆಗೆ ಶಂಕರ್‌ ನಾಗ್‌ ಅಭಿನಯದ ಗೀತಾ ಸಿನಿಮಾದ “ಸಂತೋಷಕ್ಕೆ ಹಾಡು ಸಂತೋಷಕ್ಕೆ”, ರವಿಚಂದ್ರನ್‌ ಅಭಿನಯದ ಮಲ್ಲ ಸಿನಿಮಾದ “ಕರುನಾಡೇ ಕೈ ಚಾಚಿದೆ ನೋಡೇ..” ಹಾಡುಗಳಿಗೆ ಹೆಜ್ಜೆ ಹಾಕಲಾಯಿತು. ಬಳಿಕ ಕಿಚ್ಚ ಸುದೀಪ್‌ ಅಭಿನಯದ ಪೈಲ್ವಾನ್‌ ಸಿನಿಮಾದ “ಪೈಲ್ವಾನ್‌” ಹಾಡಿನಗೆ ಮಲ್ಲಕಂಭ ಸಾಹಸ ಪ್ರದರ್ಶನವನ್ನು ಮಾಡುವ ಮೂಲಕ ಡ್ಯಾನ್ಸ್‌ ಮಾಡಲಾಯಿತು. ಇದಲ್ಲದೆ, ಶಿವರಾಜ್‌ಕುಮಾರ್‌ ಅಭಿನಯದ ಶ್ರೀ ಆಂಜನೇಯಂ, ಪ್ರಸನ್ನಾಂಜನೇಯಂ ಹಾಗೂ ಪುನೀತ್‌ ರಾಜಕುಮಾರ್‌ ಅಭಿನಯದ ಯುವರತ್ನ ಸಿನಿಮಾದ “ಡಾನ್ಸ್‌ ವಿಥ್‌ ಅಪ್ಪು” ಹಾಡಿಗೂ ಹೆಜ್ಜೆ ಹಾಕಲಾಯಿತು. ಕೊನೆಯಲ್ಲಿ ಡಾ. ರಾಜಕುಮಾರ್‌ ಅಭಿನಯದ “ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು” ಹಾಡು ನೋಡುಗರ ಮನ ಗೆಲ್ಲುವಲ್ಲಿ ಯಶ ಕಂಡಿತು.

ಗಮನ ಸೆಳೆದ ಸಾಹಸ ಪ್ರದರ್ಶನ

ಕೊನೆಯಲ್ಲಿ ಯೋಧರು ಮತ್ತು ಪೊಲೀಸರ ಬೈಕ್‌ ಸಾಹಸಗಳ ಪ್ರದರ್ಶನಗಳು ಸೇರಿದ್ದವರ ಮೈನವಿರೇಳುವಂತೆ ಮಾಡಿತು. ಕೆಲ ಕಾಲ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದ್ದು, ಗಮನ ಸೆಳೆದವು. ಅಂತಿಮವಾಗಿ ಸುಮಾರು 25 ನಿಮಿಷಗಳ ಕಾಲ ಪಂಜಿನ ಕವಾಯತು ನಡೆಯಿತು. ಈ ಕವಾಯತು ಪ್ರದರ್ಶನದ ಅಷ್ಟೂ ಸಮಯವು ನೋಡುಗರು ಉಸಿರು ಬಿಗಿಹಿಡಿದು ವೀಕ್ಷಣೆ ಮಾಡಿದ್ದು ಕಂಡು ಬಂತು. ಒಂದೊಂದು ರೀತಿಯ ವಿಶಿಷ್ಟ ಸಾಹಸ ಪ್ರದರ್ಶನಗಳಿಗೂ ಜೋರಾದ ಚಪ್ಪಾಳೆ, ಶಿಳ್ಳೆಗಳು ಕೇಳಿಬಂದವು.

ನೂರಾರು ಜನ ಪೊಲೀಸರಿಂದ ಸಾಹಸ ಪ್ರದರ್ಶನ ನಡೆಯಿತು. ಇದೇ ವೇಳೆ ವೆಲ್‌ ಕಮ್‌ ಟು ಮೈಸೂರು ದಸರಾ, ಫೇರ್‌ ವೆಲ್‌ ಟು ದಸರಾ, ಸಿ ಯು ದಸರಾ ಇನ್ 2024 ಎಂಬಿತ್ಯಾದಿ ಸಂದೇಶಗಳು ಕಂಡು ಬಂದವು.

ಇದನ್ನೂ ಓದಿ: Mysore Dasara : ವೈಭವದ ಜಂಬೂ ಸವಾರಿಗೆ ಸಿಎಂ ಚಾಲನೆ; ರಾಜ ಬೀದಿಯಲ್ಲಿ ಚಾಮುಂಡಿ ವಿಲಾಸ

ಜೋಶ್‌ ಹೆಚ್ಚಿಸಿದ ಪೊಲೀಸ್‌ ಬ್ಯಾಂಡ್‌

ಈ ಮಧ್ಯೆ ಪೊಲೀಸ್‌ ಬ್ಯಾಂಡ್‌ನವರು ಪೊಲೀಸ್‌ ಹಾಗೂ ಸೈನಿಕ ಗೀತೆಗಳನ್ನು ಪ್ರಸ್ತುತಿಪಡಿಸಿದರು. “ಸಾರೇ ಜಹಾಸೇ ಅಚ್ಚಾ” ಸೇರಿದಂತೆ ಇನ್ನೂ ಹಲವು ಗೀತೆಯನ್ನು ಪೊಲೀಸ್‌ ಬ್ಯಾಂಡ್‌ನವರು ನುಡಿಸಿ ಗಮನ ಸೆಳೆದರು. ಸೇರಿದ್ದವರಿಗೆಲ್ಲರಿಗೂ ಒಮ್ಮೆ ದೇಶಭಕ್ತಿ ಗೀತೆಯ ಬೀಟ್‌ಗಳು ಜೋಶ್‌ ಅನ್ನು ಹೆಚ್ಚಿಸುತ್ತಿದ್ದವು.

Continue Reading

ಕರ್ನಾಟಕ

Anekal Dasara : ಆನೇಕಲ್‌ನಲ್ಲಿ ಜಂಬೂ ಸವಾರಿಗೆ ಮೆರುಗು ನೀಡಿದ ಕೇರಳದ ಸಾಧು ಆನೆ

Anekal Dasara : ಬೆಂಗಳೂರು ಹೊರವಲಯದ ಆನೇಕಲ್ ಹಾಗೂ ಬನ್ನೇರುಘಟ್ಟದಲ್ಲಿ ವಿಜೃಂಭಣೆಯಿಂದ ಜಂಬೂ ಸವಾರಿ ಜರುಗಿತು. ಮಿನಿ ಮೈಸೂರು ಖ್ಯಾತಿಯ ಆನೇಕಲ್‌ನಲ್ಲಿ ಚೌಡೇಶ್ವರಿ ಜಂಬೂಸವಾರಿಗೆ ಕೇರಳದ ಸಾಧು ಆನೆ ಮೆರಗು ನೀಡಿತು.

VISTARANEWS.COM


on

By

Anekal Dasara 2023
Koo

ಆನೇಕಲ್‌: ನಾಡಹಬ್ಬ ಮೈಸೂರು ದಸರಾ ಮಾದರಿಯಲ್ಲೇ ಆನೇಕಲ್‌ನಲ್ಲೂ (Anekal Dasara) ವಿಜಯದಶಮಿ ದಸರಾ ಉತ್ಸವ ಮತ್ತು ಜಂಬೂ ಸವಾರಿ (Jambu savari) ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು. ಕೇರಳ ಮೂಲದ ಸಾಧು ಆನೆ ಚೌಡೇಶ್ವರಿ ದೇವಿ ಉತ್ಸವ ಮೂರ್ತಿ ಅಂಬಾರಿ ಹೊತ್ತು ಜಂಬೂಸವಾರಿ ಮೂಲಕ ಆನೇಕಲ್ ದಸರಾ ಉತ್ಸವಕ್ಕೆ ಮೆರಗು ನೀಡಿತು. ರಾಜಗಾಂಭೀರ್ಯದಲ್ಲಿ ಗಜರಾಜ ಹೆಜ್ಜೆ ಹಾಕಿದ್ದು ಭಕ್ತ ಸಾಗರ ಅದ್ಧೂರಿ ದಸರಾ ಜಂಬು ಸವಾರಿಯನ್ನು ಕಂಡು ಪುನೀತರಾಗಿದ್ದಾರೆ.

Anekal And bannerughatta  Dasara 2023

ಮೈಸೂರಿನಲ್ಲಿ ನಾಡದೇವತೆ ಚಾಮುಂಡೇಶ್ವರಿ ದೇವಿ ಜಂಬೂಸವಾರಿ ನಡೆಸಿದಂತೆ ಆನೇಕಲ್‌ನಲ್ಲೂ ನಾಡಹಬ್ಬ ದಸರಾ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಿದ್ದಾರೆ. ನಗರದ ಆದಿ ದೇವತೆ ಚೌಡೇಶ್ವರಿ ದೇವಿ ಅಂಬಾರಿಯನ್ನು ಹೊತ್ತ ಕೇರಳದ ಸಾಧು ಆನೆ ಸವಾರಿ ಪಟ್ಟಣದ ತಾಲೂಕು ಕಚೇರಿಯಿಂದ ತಿಲಕ್ ವೃತ್ತದ ಚೌಡೇಶ್ವರಿ ದೇವಾಲಯದ ಬಳಿ ಬರುತ್ತಿದ್ದಂತೆ ಜನಸಾಗರ ತುಂಬಿತ್ತು.

Anekal And bannerughatta  Dasara 2023

ದಿವ್ಯ ಜ್ಞಾನನಂದ ಸ್ವಾಮಿ ಹಾಗೂ ಶಾಸಕ ಬಿ.ಶಿವಣ್ಣ ಸೇರಿದಂತೆ ಗಣ್ಯರು ಜಂಬೂಸವಾರಿ ಹೊರಟಿದ್ದ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿದರು. ಬಳಿಕ ಆನೇಕಲ್ ‌ನಗರದ ಪ್ರಮುಖ ಬೀದಿಗಳಲ್ಲಿ ಜಂಬೂಸವಾರಿ ಗಜಗಾಂಭೀರ್ಯವಾಗಿ ಸಾಗಿತು. ಚೌಡೇಶ್ವರಿ ದೇವಿ ಅಂಬಾರಿ ಹೊತ್ತು ಸಾಗಿದ ಸಾಧು ಆನೆಯನ್ನು ಕಂಡು ಭಕ್ತರು ರೋಮಾಂಚನಗೊಂಡರು.

ಇದನ್ನೂ ಓದಿ: Karnataka Weather : ಮಳೆಯಾಟ ಬಂದ್‌; ಇನ್ನೆರಡು ದಿನ ಕರ್ನಾಟಕ ಸಿಕ್ಕಾಪಟ್ಟೆ Hot

Anekal And bannerughatta  Dasara 2023

ತಮಿಳುನಾಡು, ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಿಂದ ಅಪಾರ ಸಂಖ್ಯೆಯ ಭಕ್ತರು ತಿಲಕ್ ವೃತ್ತದ ಬಳಿ ಚೌಡೇಶ್ವರಿ ದೇವಿ ಅಂಬಾರಿ ದೃಶ್ಯವನ್ನು ಕಣ್ತುಂಬಿಕೊಂಡರು. ಎಂದಿನಂತೆ ತೋಗಟವೀರ ಜನಾಂಗದ ಸದಸ್ಯರು ವಿಜಯದಶಮಿ ಉತ್ಸವ ವಿಜೃಂಭಣೆಯಿಂದ ನೆರವೇರಿಸಿದ್ದರು. ತಾಯಿ ಚೌಡೇಶ್ವರಿ ಸರ್ವರಿಗೂ ಒಳಿತು ಮಾಡಲಿ ಎಂದು ಶಾಸಕ ಬಿ ಶಿವಣ್ಣ ಪ್ರಾರ್ಥಿಸಿದರು.

Anekal And bannerughatta  Dasara 2023

ವಿಶ್ವ ವಿಖ್ಯಾತ ಮೈಸೂರು ದಸರಾ ಮಾದರಿಯಲ್ಲಿಯೇ ಆನೇಕಲ್ ದಸರಾ ನಡೆಯುತ್ತಿದ್ದು, ಮಿನಿ ದಸರಾ ಎಂದೇ ಪ್ರಖ್ಯಾತಿಗಳಿಸುತ್ತಿದೆ. ಕಲಾತಂಡಗಳ ಜತೆಗೆ ಅಂಬಾರಿ ಸಾಗುವ ದೃಶ್ಯ ನೋಡುವುದೇ ಒಂದು ಹಬ್ಬವಾಗಿತ್ತು. ಕಲಾತಂಡಗಳು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ನೆರೆದಿದ್ದ ಜನರನ್ನು ರಂಜಿಸಿದ್ದರು.

Anekal And bannerughatta  Dasara 2023

ಚಂಪಕಧಾಮಸ್ವಾಮಿ ಜಂಬೂ ಸವಾರಿ

ಬನ್ನೇರುಘಟ್ಟದಲ್ಲೂ ಶ್ರೀ ಚಂಪಕಧಾಮಸ್ವಾಮಿ ಜಂಬೂ ಸವಾರಿ ನಡೆದಿದೆ. ದೇವರ ಉತ್ಸವ ಮೂರ್ತಿ ಹೊತ್ತಿದ ಅಂಬಾರಿಗೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿ ಜಂಬೂ ಸವಾರಿಗೆ ಚಾಲನೆ ನೀಡಿದರು. ಉತ್ಸವ ಮೂರ್ತಿಯನ್ನು ಹೊತ್ತ ಗಜರಾಜ ಬನ್ನೇರುಘಟ್ಟದ ರಾಜಬೀದಿಗಳಲ್ಲಿ ರಾಜಗಾಂಭೀರ್ಯದಿಂದ ಜಾನಪದ ಕಲಾತಂಡಗಳ ಜತೆ ಹೆಜ್ಜೆ ಹಾಕಿತು. ಬೆಂಗಳೂರು, ತಮಿಳುನಾಡು ಸೇರಿದಂತೆ ನಾನಾ ಕಡೆಗಳಿಂದ ಆಗಮಿಸಿರುವ ಭಕ್ತ ಸಾಗರ ಕಣ್ತುಂಬಿಕೊಂಡರು.

Anekal And bannerughatta  Dasara 2023

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
Harbhajan Singh
ಕ್ರೀಡೆ12 mins ago

Harbhajan Singh : ಭಾರತ ತಂಡದ ಕೋಚ್ ಆಗಲು ಉತ್ಸಾಹ ತೋರಿದ ಹರ್ಭಜನ್​ ಸಿಂಗ್​

Tamil Nadu Officers
ದೇಶ28 mins ago

ಐಎಎಸ್‌ ಆಫೀಸರ್‌ ಆಗಿರುವ ಮಾಜಿ ಪತ್ನಿಯಿಂದ ನನ್ನ ಮನೆಗೆ ವಿದ್ಯುತ್‌ ಕಟ್; ಇದು ಐಪಿಎಸ್‌ ಆಫೀಸರ್‌ ಅಳಲು!

Rameshwaram Cafe Blast
ಕರ್ನಾಟಕ44 mins ago

Rameshwaram Cafe Blast: ಹುಬ್ಬಳ್ಳಿ ಸೇರಿ 4 ರಾಜ್ಯಗಳ ಹಲವೆಡೆ ಎನ್‌ಐಎ ದಾಳಿ; 11 ಶಂಕಿತ ಉಗ್ರರು ವಶಕ್ಕೆ

Virat kohli
ಪ್ರಮುಖ ಸುದ್ದಿ51 mins ago

IPL 2024 : ಕೊಹ್ಲಿಯನ್ನು ಗಂಭೀರ್ ಅಪ್ಪಿಕೊಂಡಿದ್ದು ಫೇರ್​ಪ್ಲೇ ಅವಾರ್ಡ್​ಗಾಗಿಯಾ? ಅವರ ಮಾತಲ್ಲೇ ಕೇಳಿ

Phone tapping case and R Ashok demands for CBI investigation
ರಾಜಕೀಯ1 hour ago

Phone tapping: ಸಿಬಿಐಗೆ ಫೋನ್‌ ಕದ್ದಾಲಿಕೆ ಪ್ರಕರಣ ವಹಿಸಲಿ: ಸರ್ಕಾರಕ್ಕೆ ಅಶೋಕ್‌ ಸವಾಲು ಏನು?

Porsche Crash
ದೇಶ1 hour ago

Porsche Crash: 2 ಕಾರು, 4 ನಗರ, 1 ಸಿಮ್‌ ಕಾರ್ಡ್;‌ ಮಗ ಕಾರು ಗುದ್ದಿದ ಬಳಿಕ ಅಪ್ಪನ ಪ್ಲಾನ್‌ ಏನು? ಇಲ್ಲಿದೆ ಭೀಕರ ಮಾಹಿತಿ

IPL 2024
ಕ್ರೀಡೆ1 hour ago

IPL 2024 : ಕೊಹ್ಲಿಯನ್ನೂ ಟೀಕಿಸುವುದರ ನಡುವೆಯೂ ಆರ್​​ಸಿಬಿ ಕಪ್​ ಗೆಲ್ಲುತ್ತದೆ ಎಂದ ಗವಾಸ್ಕರ್​

Road Accident
ಶಿವಮೊಗ್ಗ2 hours ago

Road Accident: ಮರಕ್ಕೆ ಬಸ್‌ ಡಿಕ್ಕಿಯಾಗಿ ಹಲವರಿಗೆ ಗಾಯ; ಆಟೋ ಪಲ್ಟಿಯಾಗಿ ಚಾಲಕ ಸಾವು

Dwayne Bravo
ಪ್ರಮುಖ ಸುದ್ದಿ2 hours ago

Dwayne Bravo : ಅಫಘಾನಿಸ್ತಾನ ತಂಡದಲ್ಲಿ ದೊಡ್ಡ ಜವಾಬ್ದಾರಿ ವಹಿಸಿಕೊಂಡ ಡ್ವೇನ್ ಬ್ರಾವೊ

Narendra Modi
ಪ್ರಮುಖ ಸುದ್ದಿ2 hours ago

Narendra Modi: ಅಂಬೇಡ್ಕರ್‌ ಇರದಿದ್ದರೆ ಮೀಸಲಾತಿ ಜಾರಿಗೆ ನೆಹರು ಬಿಡುತ್ತಿರಲಿಲ್ಲ ಎಂದ ಮೋದಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು8 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು10 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

ಟ್ರೆಂಡಿಂಗ್‌