ಮದುವೆ ಮಂಟಪದಲ್ಲಿ ಕಳಚಿ ಬಿದ್ದ ವಿಗ್‌, ವರನಿಂದ ಖರ್ಚು ವಸೂಲಿ ಮಾಡಿದ ವಧು! - Vistara News

ದೇಶ

ಮದುವೆ ಮಂಟಪದಲ್ಲಿ ಕಳಚಿ ಬಿದ್ದ ವಿಗ್‌, ವರನಿಂದ ಖರ್ಚು ವಸೂಲಿ ಮಾಡಿದ ವಧು!

ಕಳಚಿ ಬಿದ್ದ ವಿಗ್‌: ಮದುವೆಯ ಕೊನೆಯ ಹಂತದಲ್ಲಿ ವರ ಬಾಲ್ಡಿ ಎಂದು ತಿಳಿದ ಯುವತಿ ಮದುವೆ ನಿಲ್ಲಿಸಿದ್ದಲ್ಲದೆ, ಖರ್ಚಿನ ಹಣವನ್ನೂ ವಸೂಲಿ ಮಾಡಿದ್ದಾಳೆ!

VISTARANEWS.COM


on

bald
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: ಬಾಲಿವುಡ್‌ನಲ್ಲಿ 2019ರಲ್ಲಿ ಒಂದು ಸಿನಿಮಾ ರಿಲೀಸ್‌ ಆಗಿತ್ತು. ಆಯುಷ್ಮಾನ್‌ ಖುರಾನಾ ನಟಿಸಿದ ಬಾಲಾ. ಈ ಚಿತ್ರದಲ್ಲಿ ಬಾಲಮುಕುಂದನ್‌ ಎಂಬ ಹುಡುಗ ತನ್ನ ʻಬಾಲ್ಡಿʼ ಶಿಕ್ಷಕರನ್ನು ವಿಪರೀತವಾಗಿ ಕಾಡುತ್ತಾನೆ. ಅದೇ ಹುಡುಗನಿಗೆ ಕೆಲವು ವರ್ಷಗಳ ನಂತರ ಕೂದಲು ಉದುರಲು ಆರಂಭವಾಗುತ್ತದೆ. ಆಗ ಆತ ತನ್ನ ತಂದೆಯನ್ನು ದೂರಲು ಆರಂಭಿಸುತ್ತಾನೆ. ಬಾಲ್ಡಿ ತಂದೆಯ ವಂಶವಾಹಿಯ ಕಾರಣದಿಂದಲೇ ತನಗೆ ಹೀಗಾಗಿದೆ ಎನ್ನುವುದು ಆತನ ತಕರಾರು. ಉದುರುವ ಕೂದಲಿನಿಂದ ಸಾಕಷ್ಟು ಹಿಂಸೆ ಅನುಭವಿಸುವ ಆತನಿಗೆ ಕೊನೇಗೆ ಇದೆಲ್ಲ ಸಹಜ ಎನ್ನುವ ಪರಿಜ್ಞಾನ ಮೂಡುತ್ತದೆ. ಹೀಗೆ ಕೂದಲು ಉದುರಿದೆ ಎಂಬ ಕಾರಣಕ್ಕೆ ಯಾರನ್ನೂ ಅಪಮಾನಿಸಬೇಡಿ ಎಂಬ ಒಳ್ಳೆಯ ಸಂದೇಶವಿರುವ ಚಿತ್ರವಿದು. ಕನ್ನಡದಲ್ಲಿ ರಾಜ್‌ ಬಿ. ಶೆಟ್ಟಿ ಅವರ ಒಂದು ಮೊಟ್ಟೆಯ ಕಥೆ ಇಂಥಹುದೇ ಕಥೆಯನ್ನು ಹೊಂದಿದೆ.

ಈ ಕಥೆಯನ್ನು ನೆನಪಿಸುವ ಘಟನೆಯೊಂದು ಉತ್ತರ ಪ್ರದೇಶದ ಉನ್ನಾವೋದಲ್ಲಿ ನಡೆದಿದೆ. ಇಲ್ಲೊಬ್ಬ ಯುವಕ ತಲೆ ಕೂದಲು ಉದುರಿದ ಕಾರಣಕ್ಕೆ ವಿಗ್‌ ಧರಿಸುತ್ತಿದ್ದ. ಆತನಿಗೆ ಮದುವೆ ನಿಶ್ಚಯವಾಗುತ್ತದೆ. ಯುವಕ ತನ್ನೆಲ್ಲ ಗುಣ ವಿಶೇಷಣಗಳನ್ನು ಬಣ್ಣ ಬಣ್ಣದ ಮಾತುಗಳಿಂದ ಯುವತಿಗೆ ವಿವರಿಸಿದ್ದನಾದರೂ ತನ್ನ ತಲೆ ಬೋಳು, ಹಾಕಿಕೊಂಡಿರುವುದು ವಿಗ್‌ ಎಂದು ಎಲ್ಲೂ ಹೇಳಿರುವುದಿಲ್ಲ.

ಈ ನಡುವೆ ಮದುವೆ ಸಮಾರಂಭ ಶುರುವಾಗಿ ಅರ್ಥ ಭಾಗ ಮುಗಿದಿತ್ತು. ಅಷ್ಟು ಹೊತ್ತಿಗೆ ಹುಡುಗನ ‌ʻವಿಗ್ ಕಳಚಿ ಬಿತ್ತುʼ! ಭಾವಿ ಗಂಡನಿಗೆ ಕೂದಲು ಇಲ್ಲ ಎನ್ನುವುದನ್ನು ತಿಳಿದ ವಧು ಯಾವ ಕಾರಣಕ್ಕೂ ಮದುವೆ ಮುಂದುವರಿಸಬಾರದು ಎಂದು ತಾಕೀತು ಮಾಡಿದಳು.

ಇದನ್ನೂ ಓದಿ | Viral Video: ಶಾಲಾ ಸಮವಸ್ತ್ರದಲ್ಲಿಯೇ ಬೀದಿಯಲ್ಲಿ ಬಡಿದಾಡಿಕೊಂಡ ಹುಡುಗಿಯರು

ಕಳಚಿ ಬಿದ್ದಿದ್ದು ಹೇಗೆ?
ವರನ ವಿಗ್‌ ಕಳಚಿ ಬಿದ್ದಿದ್ದು ಕೂಡಾ ಒಂದು ವಿಚಿತ್ರ ವಿದ್ಯಮಾನದಲ್ಲೇ. ಮದುವೆಯ ಬಹುತೇಕ ಭಾಗ ಮುಗಿದಿತ್ತು. ಒಂದು ಕಾರ್ಯಕ್ರಮ ಮುಗಿಸಿ ಇನ್ನೊಂದು ಕಾರ್ಯಕ್ರಮಕ್ಕೆ ವರನ ಮಂಟಪಕ್ಕೆ ಬರುತ್ತಿದ್ದ. ಕಳೆದ ರಾತ್ರಿಯಿಂದಲೇ ನಿದ್ದೆಗೆಟ್ಟಿದ್ದರಿಂದಲೋ ಏನೋ ಆತನಿಗೆ ತಲೆ ತಿರುಗಿ ಅಲ್ಲೇ ಬಿದ್ದುಬಿಟ್ಟ. ಆಗ ವಿಗ್‌ ಕಳಚಿಬಿತ್ತು. ಎಲ್ಲರೂ ಹುಡುಗನಿಗೇನಾಯ್ತಪ್ಪಾ ಅಂತ ಕಳವಳಪಡುತ್ತಿದ್ದರೆ ಹುಡುಗಿಯ ಕಣ್ಣು ಬಿದ್ದಿದ್ದು ಅವನ ಬೋಳು ತಲೆಯ ಮೇಲೆ. ಹುಡುಗನ ಆರೋಗ್ಯದ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳದ ಆಕೆ ಯಾವ ಕಾರಣಕ್ಕೂ ಮದುವೆ ಮುಂದುವರಿಸಬಾರದು ಎಂದು ತಾಕೀತು ಮಾಡಿದಳು.

ಮದುವೆಗೆ ಮೊದಲು ಈ ವಿಷಯವನ್ನು ತಿಳಿಸದೆ ಇದ್ದುದು ಆಕೆಯ ಕೋಪವನ್ನು ಇನ್ನಷ್ಟು ಹೆಚ್ಚಿಸಿತ್ತು. ಮದುವೆಯಾದ ಬಳಿಕವೂ ಆತ ಬೇರೆ ವಿಚಾರದಲ್ಲಿ ಮೋಸ ಮಾಡಬಹುದಲ್ಲ ಎಂದು ವಾದಿಸಿದಳು. ಜತೆಗೆ ಗೆಳತಿಯರ ಮುಂದೆ ಗಂಡನ ಬಣ್ಣ ಕಳಚಿ ಬಿದ್ದಿದ್ದು ಆಕೆಗೆ ಅಪಮಾನವಾಗಿತ್ತು. ನಿಜವೆಂದರೆ, ಆಕೆಯ ಮನೆಯವರೇ ಅಕೆಯನ್ನು ಸಾಕಷ್ಟು ಸಮಾಧಾನ ಮಾಡಲು ಪ್ರಯತ್ನಿಸಿದರಾದರೂ ಆಕೆ ಯಾರ ಮಾತನ್ನೂ ಕೇಳಲಿಲ್ಲ.

ಪೊಲೀಸ್‌ ಠಾಣೆ ಹತ್ತಿದ ಪ್ರಕರಣ
ಸ್ಥಳೀಯ ಪೊಲೀಸ್‌ ಠಾಣೆಗೆ ವಿಷಯ ತಲುಪಿ ಅವರು ಮನವೊಲಿಸಿದರೂ ಹುಡುಗಿ ಮಾತ್ರ ಕೇಳಲೇ ಇಲ್ಲ. ಮದುವೆ ಆಗುವುದೇ ಇಲ್ಲ ಎಂದು ಹಠ ಹಿಡಿದಳು. ಈ ನಡುವೆ, ಪಂಚಾಯಿತಿಯೊಂದು ನಡೆಯಿತು. ಅದರಲ್ಲಿ ಹುಡುಗಿಯ ಕುಟುಂಬದವರೆಲ್ಲ ಸೇರಿಕೊಂಡು ಈ ರೀತಿ ಸುಳ್ಳು ಹೇಳಿದ್ದು ಅನ್ಯಾಯ ಎಂಬ ತೀರ್ಮಾನಕ್ಕೆ ಬಂದರು. ಮಾತ್ರವಲ್ಲ ಮದುವೆಗೆ ಖರ್ಚು ಮಾಡಿದ 5.66 ಲಕ್ಷ ರೂ.ಯನ್ನು ಮರಳಿ ಕೊಡಬೇಕು ಎಂದು ತಾಕೀತು ಮಾಡಿದರು. ಹುಡುಗನ ಕಡೆಯವರು ವಿಧಿ ಇಲ್ಲದೆ ಹಣ ಹಿಂದಿರುಗಿಸುವುದಾಗಿ ಹೇಳಿದರು. ಮದುವೆಯ ದೊಡ್‌ ಕನಸಿನೊಂದಿಗೆ ಉನ್ನಾವೋಗೆ ಬಂದಿದ್ದ ಹುಡುಗ ಮತ್ತು ದಿಬ್ಬಣ ಹುಡುಗಿಯೇ ಇಲ್ಲದೇ ಕಾನ್ಪುರಕ್ಕೆ ಬೇಸರದಿಂದ ಮರಳಿತು.

ಇದನ್ನೂ ಓದಿ| Viral News: ಆಕೆ 36 ವರ್ಷ ಪುರುಷ ವೇಷದಲ್ಲಿ ಬದುಕಿದರು, ಎಲ್ಲವೂ ಮಗಳಿಗಾಗಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Modi 3.0 Cabinet: ನಡ್ಡಾ To ಎಚ್‌ಡಿಕೆ ;‌ ಮೋದಿ ಸಂಪುಟದಲ್ಲಿ ಸ್ಥಾನ ಪಡೆದ ಹೊಸ ಮುಖಗಳಿವು

Modi 3.0 Cabinet:‌ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕೇಂದ್ರದಲ್ಲಿ 10 ವರ್ಷಗಳ ಬಳಿಕ ಸಮ್ಮಿಶ್ರ ಸರ್ಕಾರ ರಚನೆಯಾಗಿದೆ. ಇದರ ಬೆನ್ನಲ್ಲೇ, ನರೇಂದ್ರ ಮೋದಿ ಅವರ ಸಂಪುಟಕ್ಕೆ ಹೊಸ ಮುಖಗಳಿಗೆ ಆದ್ಯತೆ ನೀಡಲಾಗಿದೆ. ಯಾವ ಹೊಸ ಮುಖಗಳಿಗೆಲ್ಲ ಮೋದಿ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ? ಇಲ್ಲಿದೆ ಮಾಹಿತಿ.

VISTARANEWS.COM


on

Modi 3.0 Cabinet
Koo

ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ (Narendra Modi) ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದಾದ ಬಳಿಕ ಮೈತ್ರಿಕೂಟದ ಪಕ್ಷಗಳ ಸಂಸದರು ಸಚಿವರಾಗಿ (Modi 3.0 Cabinet) ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಮ್ಮಿಶ್ರ ಸರ್ಕಾರವಾದ ಕಾರಣ ಸಹಜವಾಗಿಯೇ ಈ ಬಾರಿ ಹೊಸ ಮುಖಗಳಿಗೆ ಸಂಪುಟಕ್ಕೆ ಸೇರಿಸಿಕೊಳ್ಳಲು ಆದ್ಯತೆ ನೀಡಿದೆ. ಅದರಲ್ಲೂ, ಕೇರಳದಲ್ಲಿ ಬಿಜೆಪಿಯ ಖಾತೆ ತೆರೆದ ಸುರೇಶ್‌ ಗೋಪಿ, ಬಿಹಾರದ ಧೀಮಂತ ನಾಯಕ, ಭಾರತರತ್ನ ಪುರಸ್ಕೃತ ಕರ್ಪೂರಿ ಠಾಕೂರ್‌ ಅವರ ಪುತ್ರ ರಾಮನಾಥ್‌ ಠಾಕೂರ್‌ ಸೇರಿ ಹಲವು ಹೊಸಬರಿಗೆ ಸಚಿವ ಸ್ಥಾನ ನೀಡಲಾಗಿದೆ.

ಕರ್ಪೂರಿ ಠಾಕೂರ್‌ ಪುತ್ರಗೆ ಮಣೆ

ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್‌ ಅವರ ಪುತ್ರ ರಾಮನಾಥ್‌ ಠಾಕೂರ್‌ ಅವರಿಗೆ ರಾಜ್ಯ ಖಾತೆಯ ಉಸ್ತುವಾರಿ ನೀಡಲಾಗಿದೆ. ಜೆಡಿಯು ಸಂಸದ, ನಿತೀಶ್‌ ಕುಮಾರ್‌ ಅವರ ನಿಕಟವರ್ತಿಯಾಗಿರುವ ಇವರಿಗೆ ನರೇಂದ್ರ ಮೋದಿ ಅವರು ಮಣೆ ಹಾಕಿದ್ದಾರೆ. ಕರ್ಪೂರಿ ಠಾಕೂರ್‌ ಅವರಿಗೆ ಪ್ರಸಕ್ತ ವರ್ಷದಲ್ಲಿಯೇ ಕೇಂದ್ರ ಸರ್ಕಾರವು ಮರಣೋತ್ತರವಾಗಿ ಭಾರತರತ್ನ ಘೋಷಿಸಿತ್ತು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಕೇಂದ್ರ ಸಂಪುಟ ದರ್ಜೆ ಸ್ಥಾನ ನೀಡಲಾಗಿದ್ದು, ಇವರು ಶೀಘ್ರದಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ತೊರೆಯಲಿದ್ದಾರೆ ಎನ್ನಲಾಗುತ್ತದೆ. ಇನ್ನು, ಮಧ್ಯಪ್ರದೇಶ ಸಿಎಂ ಸ್ಥಾನ ತೊರೆದ ಶಿವರಾಜ್‌ ಸಿಂಗ್‌ ಚೌಹಾಣ್‌, ಹರಿಯಾಣ ಮಾಜಿ ಸಿಎಂ ಮನೋಹರ ಲಾಲ್‌ ಖಟ್ಟರ್‌, ಎಲ್‌ಜೆಪಿ ಮುಖ್ಯಸ್ಥ ಚಿರಾಗ್‌ ಪಾಸ್ವಾನ್‌ ಅವರಿಗೆ ಸಂಪುಟ ದರ್ಜೆ ಖಾತೆ ನೀಡಲಾಗಿದೆ. ಕೇರಳ ತ್ರಿಶ್ಶೂರ್‌ ಸಂಸದ ಸುರೇಶ್‌ ಗೋಪಿ, ಕರ್ನಾಟಕದ ವಿ.ಸೋಮಣ್ಣ, ತೆಲಂಗಾಣದ ಬಂಡಿ ಸಂಜಯ್‌ ಕುಮಾರ್‌ ಸೇರಿ ಹಲವು ಹೊಸ ಮುಖಗಳನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ.

ಮೋದಿ ಸಂಪುಟ ಸೇರಿದ ಹೊಸಮುಖಗಳು

ಕ್ಯಾಬಿನೆಟ್‌ ದರ್ಜೆಯ ಸಚಿವರು

  • ಜೆ.ಪಿ.ನಡ್ಡಾ (ಬಿಜೆಪಿ- ಹಿಮಾಚಲ ಪ್ರದೇಶ)
  • ಶಿವರಾಜ್ ಸಿಂಗ್ ಚೌಹಾಣ್ (ಬಿಜೆಪಿ- ಮಧ್ಯಪ್ರದೇಶ )
  • ಮನೋಹರ ಲಾಲ್‌ ಖಟ್ಟರ್‌ (ಬಿಜೆಪಿ- ಹರಿಯಾಣ)
  • ಎಚ್‌.ಡಿ.ಕುಮಾರಸ್ವಾಮಿ (ಜೆಡಿಎಸ್‌- ಕರ್ನಾಟಕ)
  • ಜಿತನ್ ರಾಮ್ ಮಾಂಝಿ (ಎಚ್‌ಎಎಂ- ಬಿಹಾರ)
  • ರಾಜೀವ್‌ ರಂಜನ್‌ ಸಿಂಗ್‌ (ಲಲನ್‌ ಸಿಂಗ್-ಜೆಡಿಯು-ಬಿಹಾರ)
  • ರಾಮ್‌ ಮೋಹನ್‌ ನಾಯ್ಡು (ಟಿಡಿಪಿ-ಆಂಧ್ರಪ್ರದೇಶ)
  • ಜುವೆಲ್‌ ಒರಾಮ್‌ (ಬಿಜೆಪಿ- ಒಡಿಶಾ) (ಇವರು ವಾಜಪೇಯಿ ಸರ್ಕಾರದಲ್ಲೂ ಕೇಂದ್ರ ಸಚಿವರಾಗಿದ್ದರು)
  • ಚಿರಾಗ್‌ ಪಾಸ್ವಾನ್‌ (ಎಲ್‌ಜೆಪಿ-ಬಿಹಾರ)
  • ಸಿ.ಆರ್‌.ಪಾಟೀಲ್‌ (ಬಿಜೆಪಿ-ಗುಜರಾತ್)

ರಾಜ್ಯ/ ಸ್ವತಂತ್ರ ಖಾತೆ

  • ಪ್ರತಾಪ್‌ ರಾವ್‌ ಗಣಪತ್‌ ರಾವ್‌ ಜಾಧವ್‌ (ಶಿವಸೇನೆ ಏಕನಾಥ್‌ ಶಿಂಧೆ ಬಣದ ಸಂಸದ-ಮಹಾರಾಷ್ಟ್ರ)
  • ಜಯಂತ್‌ ಚೌಧರಿ (ಆರ್‌ಎಲ್‌ಡಿ-ಉತ್ತರ ಪ್ರದೇಶ)‌

ರಾಜ್ಯ ಖಾತೆ ಸಚಿವರು

  • ಜಿತಿನ್‌ ಪ್ರಸಾದ್‌ (ಬಿಜೆಪಿ-ಉತ್ತರ ಪ್ರದೇಶ)
  • ರಾಮನಾಥ್‌ ಠಾಕೂರ್‌ (ಜೆಡಿಯು-ಬಿಹಾರ)
  • ವಿ. ಸೋಮಣ್ಣ (ಬಿಜೆಪಿ-ಕರ್ನಾಟಕ)
  • ಪೆಮ್ಮಸಾನಿ ಚಂದ್ರಶೇಖರ್‌ (ಟಿಡಿಪಿ-ಆಂಧ್ರಪ್ರದೇಶ)
  • ಎಸ್‌ಪಿ ಸಿಂಗ್‌ ಬಘೇಲ್‌ (ಬಿಜೆಪಿ-ಉತ್ತರ ಪ್ರದೇಶ)
  • ಕೀರ್ತಿ ವರ್ಧನ್‌ ಸಿಂಗ್‌ (ಬಿಜೆಪಿ-ಉತ್ತರ ಪ್ರದೇಶ)
  • ಬಂಡಿ ಸಂಜಯ್‌ ಕುಮಾರ್‌ (ಬಿಜೆಪಿ-ತೆಲಂಗಾಣ)
  • ಕಮಲೇಶ್‌ ಪಾಸ್ವಾನ್‌ (ಬಿಜೆಪಿ-ಉತ್ತರ ಪ್ರದೇಶ)
  • ಭಾಗೀರಥ್‌ ಚೌಧರಿ (ಬಿಜೆಪಿ-ರಾಜಸ್ಥಾನ)
  • ಸತೀಶ್‌ ಚಂದ್ರ ದುಬೆ (ಬಿಜೆಪಿ-ಬಿಹಾರ)‌
  • ಸಂಜಯ್‌ ಸೇಠ್‌ (ಬಿಜೆಪಿ-ಜಾರ್ಖಂಡ್)‌
  • ರವನೀತ್‌ ಸಿಂಗ್‌ ಬಿಟ್ಟು (ಬಿಜೆಪಿ-ಪಂಜಾಬ್)
  • ದುರ್ಗಾದಾಸ್‌ ಉಯಿಕೆ (ಬಿಜೆಪಿ- ಮಧ್ಯಪ್ರದೇಶ)
  • ರಕ್ಷಾ ನಿಖಿಲ್‌ ಖಡ್ಸೆ (ಬಿಜೆಪಿ-ಮಹಾರಾಷ್ಟ್ರ)
  • ಸುಕಾಂತ ಮಜುಂದಾರ್‌ (ಬಿಜೆಪಿ-ಪಶ್ಚಿಮ ಬಂಗಾಳ)
  • ತೋಖನ್‌ ಸಾಹು (ಬಿಜೆಪಿ-ಛತ್ತೀಸ್‌ಗಢ)
  • ಡಾ.ರಾಜ್‌ಭೂಷಣ್‌ ಚೌಧರಿ (ಬಿಜೆಪಿ-ಬಿಹಾರ)
  • ಹರ್ಷ ಮಲ್ಹೋತ್ರಾ (ಬಿಜೆಪಿ-ದೆಹಲಿ)
  • ಮುರಳೀಧರ್‌ ಮೊಹೊಲ್‌ (ಬಿಜೆಪಿ-ಮಹಾರಾಷ್ಟ್ರ)
  • ನಿಮುಬೆನ್‌ ಬಾಂಭಣಿಯಾ (ಬಿಜೆಪಿ-ಗುಜರಾತ್)
  • ಜಾರ್ಜ್‌ ಕುರಿಯನ್‌ (ಬಿಜೆಪಿ-ಕೇರಳ)

ಇದನ್ನೂ ಓದಿ: Narendra Modi: ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ; 3.0 ಯುಗಾರಂಭ!

Continue Reading

ದೇಶ

Modi 3.0 Cabinet: 30 ಕ್ಯಾಬಿನೆಟ್‌ ದರ್ಜೆ, 5 ಸ್ವತಂತ್ರ, 36 ಸಂಸದರಿಗೆ ರಾಜ್ಯ ಖಾತೆ; ಇಲ್ಲಿದೆ ಕಂಪ್ಲೀಟ್‌ ಲಿಸ್ಟ್

Modi 3.0 Cabinet: ನರೇಂದ್ರ ಮೋದಿ ಅವರ ಸಚಿವ ಸಂಪುಟ ಸೇರುವವರ ಪಟ್ಟಿ ಅಂತಿಮವಾಗಿದೆ. ಮೈತ್ರಿ ಸರ್ಕಾರದಲ್ಲಿ ಹಲವು ಅನುಭವಿಗಳಿಗೆ, ಹಲವು ಹೊಸ ಮುಖಗಳಿಗೆ ಆದ್ಯತೆ ನೀಡಲಾಗಿದೆ. ಯಾರೆಲ್ಲ ಸಚಿವರಾಗಿ ಆಯ್ಕೆಯಾಗಿದ್ದಾರೆ? ಮೈತ್ರಿಕೂಟದ ಬೇರೆ ಪಕ್ಷಗಳ ಯಾರಿಗೆ ಮಣೆ ಹಾಕಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Modi 3.0 Cabinet
Koo

ನವದೆಹಲಿ: ನರೇಂದ್ರ ಮೋದಿ (Narendra Modi) ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರೊಂದಿಗೆ ದೇಶದಲ್ಲಿ ನರೇಂದ್ರ ಮೋದಿ ಅವರ ಮೂರನೇ ಅವಧಿಯ ಆಡಳಿತ ಆರಂಭವಾಗಿದೆ. ಅಷ್ಟೇ ಅಲ್ಲ, ನರೇಂದ್ರ ಮೋದಿ ಅವರ ಜತೆ ಸಂಸದರು ಕೂಡ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಎನ್‌ಡಿಎ ಮೈತ್ರಿಕೂಟದ 30 ಸಂಸದರಿಗೆ ಕ್ಯಾಬಿನೆಟ್‌ ದರ್ಜೆಯ ಸ್ಥಾನ ನೀಡಲಾಗಿದೆ. ಹಾಗೆಯೇ, ಐವರಿಗೆ ಸ್ವತಂತ್ರ ನಿರ್ವಹಣೆ ಮತ್ತು ‌36 ಸಂಸದರನ್ನು ರಾಜ್ಯ ಸಹಾಯಕ ಸಚಿವರನ್ನಾಗಿ ನೇಮಿಸಲಾಗಿದೆ.

ಕರ್ನಾಟಕದ ಪ್ರಲ್ಹಾದ್‌ ಜೋಶಿ, ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಸಂಪುಟ ದರ್ಜೆ ಸ್ಥಾನ ಸಿಕ್ಕರೆ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ ಅವರು ರಾಜ್ಯ ಖಾತೆ ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿ ಹಲವರು ಇದೇ ಮೊದಲ ಬಾರಿಗೆ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಯಾವ ಪಕ್ಷದವರಿಗೆ ಯಾವ ಸ್ಥಾನಮಾನ ನೀಡಲಿದೆ ಎಂಬುದು ಸೇರಿ ಇಡೀ ಸಂಪುಟ ಸಚಿವರ ಪಟ್ಟಿ ಇಲ್ಲಿದೆ.

ಹೀಗಿದೆ ಸಂಪುಟ ದರ್ಜೆ ಸಚಿವರ ಪಟ್ಟಿ

  • ಅಮಿತ್ ಶಾ (ಬಿಜೆಪಿ- ಗುಜರಾತ್)
  • ರಾಜನಾಥ್ ಸಿಂಗ್ (ಬಿಜೆಪಿ- ಉತ್ತರ ಪ್ರದೇಶ)
  • ನಿತಿನ್ ಗಡ್ಕರಿ (ಬಿಜೆಪಿ- ಮಹಾರಾಷ್ಟ್ರ)
  • ಜೆ.ಪಿ.ನಡ್ಡಾ (ಬಿಜೆಪಿ- ಹಿಮಾಚಲ ಪ್ರದೇಶ)
  • ಶಿವರಾಜ್ ಸಿಂಗ್ ಚೌಹಾಣ್ (ಬಿಜೆಪಿ- ಮಧ್ಯಪ್ರದೇಶ )
  • ನಿರ್ಮಲಾ ಸೀತಾರಾಮನ್ (ರಾಜ್ಯಸಭೆ ಬಿಜೆಪಿ ಸದಸ್ಯೆ)
  • ಎಸ್.ಜೈ ಶಂಕರ್ (ರಾಜ್ಯಸಭೆ ಬಿಜೆಪಿ ಸದಸ್ಯ)
  • ಮನೋಹರ ಲಾಲ್‌ ಖಟ್ಟರ್‌ (ಬಿಜೆಪಿ- ಹರಿಯಾಣ)
  • ಎಚ್‌.ಡಿ.ಕುಮಾರಸ್ವಾಮಿ (ಜೆಡಿಎಸ್‌- ಕರ್ನಾಟಕ)
  • ಪಿಯೂಷ್‌ ಗೋಯಲ್‌ (ಬಿಜೆಪಿ- ಮಹಾರಾಷ್ಟ್ರ )
  • ಧರ್ಮೇಂದ್ರ ಪ್ರಧಾನ್ (ಬಿಜೆಪಿ- ಒಡಿಶಾ)
  • ಜಿತನ್ ರಾಮ್ ಮಾಂಝಿ (ಎಚ್‌ಎಎಂ- ಬಿಹಾರ)
  • ರಾಜೀವ್‌ ರಂಜನ್‌ ಸಿಂಗ್‌ (ಲಲನ್‌ ಸಿಂಗ್-ಜೆಡಿಯು-ಬಿಹಾರ)
  • ಸರ್ಬಾನಂದ ಸೋನೊವಾಲ್‌‌ (ಬಿಜೆಪಿ- ಅಸ್ಸಾಂ)
  • ರಾಮ್‌ ಮೋಹನ್‌ ನಾಯ್ಡು (ಟಿಡಿಪಿ-ಆಂಧ್ರಪ್ರದೇಶ)
  • ಪ್ರಲ್ಹಾದ್‌ ಜೋಶಿ (ಬಿಜೆಪಿ- ಕರ್ನಾಟಕ)
  • ಡಾ.ವೀರೇಂದ್ರ ಕುಮಾರ್ (ಬಿಜೆಪಿ-ಮಧ್ಯಪ್ರದೇಶ)
  • ಜುವೆಲ್‌ ಒರಾಮ್‌ (ಬಿಜೆಪಿ- ಒಡಿಶಾ)
  • ಗಿರಿರಾಜ್‌ ಸಿಂಗ್‌ (ಬಿಜೆಪಿ-ಬಿಹಾರ)
  • ಅಶ್ವಿನಿ ವೈಷ್ಣವ್‌ (ಬಿಜೆಪಿ-ರಾಜಸ್ಥಾನ-ರಾಜ್ಯಸಭೆ ಸದಸ್ಯ)
  • ಜ್ಯೋತಿರಾದಿತ್ಯ ಸಿಂಧಿಯಾ (ಬಿಜೆಪಿ-ಮಧ್ಯಪ್ರದೇಶ)
  • ಭೂಪೇಂದ್ರ ಯಾದವ್‌ (ಬಿಜೆಪಿ-ರಾಜಸ್ಥಾನ)
  • ಗಜೇಂದ್ರ ಸಿಂಗ್ ಶೇಖಾವತ್ (ಬಿಜೆಪಿ- ರಾಜಸ್ಥಾನ)
  • ಅನ್ನಪೂರ್ಣ ದೇವಿ (ಬಿಜೆಪಿ-ಜಾರ್ಖಂಡ್)
  • ಕಿರಣ್‌ ರಿಜಿಜು (ಬಿಜೆಪಿ- ಅರುಣಾಚಲ ಪ್ರದೇಶ)
  • ಹರ್ದೀಪ್ ಸಿಂಗ್ ಪುರಿ (ರಾಜ್ಯಸಭೆ ಬಿಜೆಪಿ ಸದಸ್ಯ-ಪಂಜಾಬ್)
  • ಡಾ.ಮನ್ಸುಖ್‌ ಮಂಡಾವೀಯ (ಬಿಜೆಪಿ-ಗುಜರಾತ್)‌
  • ಜಿ.ಕಿಶನ್‌ ರೆಡ್ಡಿ (ಬಿಜೆಪಿ-ತೆಲಂಗಾಣ)
  • ಚಿರಾಗ್‌ ಪಾಸ್ವಾನ್‌ (ಎಲ್‌ಜೆಪಿ-ಬಿಹಾರ)
  • ಸಿ.ಆರ್‌.ಪಾಟೀಲ್‌ (ಬಿಜೆಪಿ-ಗುಜರಾತ್)

ಸ್ವತಂತ್ರ ನಿರ್ವಹಣೆ

  • ಇಂದ್ರಜೀತ್‌ ಸಿಂಗ್‌ (ಬಿಜೆಪಿ-ಹರಿಯಾಣ)
  • ಡಾ.ಜಿತೇಂದ್ರ ಸಿಂಗ್‌ (ಬಿಜೆಪಿ-ಜಮ್ಮು)
  • ಅರ್ಜುನ್‌ ರಾಮ್‌ ಮೇಘ್ವಾಲ್‌ (ಬಿಜೆಪಿ-ರಾಜಸ್ಥಾನ)
  • ಪ್ರತಾಪ್‌ ರಾವ್‌ ಗಣಪತ್‌ ರಾವ್‌ ಜಾಧವ್‌ (ಶಿವಸೇನೆ ಏಕನಾಥ್‌ ಶಿಂಧೆ ಬಣದ ಸಂಸದ-ಮಹಾರಾಷ್ಟ್ರ)
  • ಜಯಂತ್‌ ಚೌಧರಿ (ಆರ್‌ಎಲ್‌ಡಿ-ಉತ್ತರ ಪ್ರದೇಶ)

ರಾಜ್ಯ ಖಾತೆ ಸಚಿವರು

  • ಜಿತಿನ್‌ ಪ್ರಸಾದ್‌ (ಬಿಜೆಪಿ-ಉತ್ತರ ಪ್ರದೇಶ)
  • ಶ್ರೀಪಾದ್‌ ನಾಯ್ಕ್ (ಬಿಜೆಪಿ-ಗೋವಾ)
  • ಪಂಕಜ್‌ ಚೌಧರಿ (ಬಿಜೆಪಿ-ಉತ್ತರ ಪ್ರದೇಶ)
  • ಕ್ರಿಶನ್‌ ಪಾಲ್‌ (ಬಿಜೆಪಿ-ಹರಿಯಾಣ)
  • ರಾಮ್‌ದಾಸ್‌ ಅಠಾವಳೆ (ಆರ್‌ಪಿಐ-ಮಹಾರಾಷ್ಟ್ರ)
  • ರಾಮನಾಥ್‌ ಠಾಕೂರ್‌ (ಜೆಡಿಯು-ಬಿಹಾರ)
  • ನಿತ್ಯಾನಂದ್‌ ರಾಯ್‌ (ಬಿಜೆಪಿ-ಬಿಹಾರ)
  • ಅನುಪ್ರಿಯಾ ಪಟೇಲ್‌ (ಅಪ್ನಾದಳ್‌ (ಎಸ್‌)-ಉತ್ತರ ಪ್ರದೇಶ)
  • ವಿ. ಸೋಮಣ್ಣ (ಬಿಜೆಪಿ-ಕರ್ನಾಟಕ)
  • ಪೆಮ್ಮಸಾನಿ ಚಂದ್ರಶೇಖರ್‌ (ಟಿಡಿಪಿ-ಆಂಧ್ರಪ್ರದೇಶ)
  • ಎಸ್‌ಪಿ ಸಿಂಗ್‌ ಬಘೇಲ್‌ (ಬಿಜೆಪಿ-ಉತ್ತರ ಪ್ರದೇಶ)
  • ಶೋಭಾ ಕರಂದ್ಲಾಜೆ (ಬಿಜೆಪಿ-ಕರ್ನಾಟಕ)
  • ಕೀರ್ತಿ ವರ್ಧನ್‌ ಸಿಂಗ್‌ (ಬಿಜೆಪಿ-ಉತ್ತರ ಪ್ರದೇಶ)
  • ಬಿ.ಎಲ್‌.ವರ್ಮಾ (ಬಿಜೆಪಿ-ಉತ್ತರ ಪ್ರದೇಶ)
  • ಶಂತನು ಠಾಕೂರ್‌ (ಬಿಜೆಪಿ- ಪಶ್ಚಿಮ ಬಂಗಾಳ)
  • ಸುರೇಶ್‌ ಗೋಪಿ (ಬಿಜೆಪಿ-ಕೇರಳ)
  • ಡಾ.ಎಲ್‌.ಮುರುಗನ್‌ (ಬಿಜೆಪಿ-ತಮಿಳುನಾಡು)
  • ಅಜಯ್‌ ತಮ್ಟಾ (ಬಿಜೆಪಿ-ಉತ್ತರಾಖಂಡ)
  • ಬಂಡಿ ಸಂಜಯ್‌ ಕುಮಾರ್‌ (ಬಿಜೆಪಿ-ತೆಲಂಗಾಣ)
  • ಕಮಲೇಶ್‌ ಪಾಸ್ವಾನ್‌ (ಬಿಜೆಪಿ-ಉತ್ತರ ಪ್ರದೇಶ)
  • ಭಾಗೀರಥ್‌ ಚೌಧರಿ (ಬಿಜೆಪಿ-ರಾಜಸ್ಥಾನ)
  • ಸತೀಶ್‌ ಚಂದ್ರ ದುಬೆ (ಬಿಜೆಪಿ-ಬಿಹಾರ)
  • ಸಂಜಯ್‌ ಸೇಠ್‌ (ಬಿಜೆಪಿ-ಜಾರ್ಖಂಡ್)
  • ರವನೀತ್‌ ಸಿಂಗ್‌ ಬಿಟ್ಟು (ಬಿಜೆಪಿ-ಪಂಜಾಬ್)
  • ದುರ್ಗಾದಾಸ್‌ ಉಯಿಕೆ (ಬಿಜೆಪಿ- ಮಧ್ಯಪ್ರದೇಶ)
  • ರಕ್ಷಾ ನಿಖಿಲ್‌ ಖಡ್ಸೆ (ಬಿಜೆಪಿ-ಮಹಾರಾಷ್ಟ್ರ)
  • ಸುಕಾಂತ ಮಜುಂದಾರ್‌ (ಬಿಜೆಪಿ-ಪಶ್ಚಿಮ ಬಂಗಾಳ)
  • ಸಾವಿತ್ರಿ ಠಾಕೂರ್‌ (ಬಿಜೆಪಿ-ಮಧ್ಯಪ್ರದೇಶ)
  • ತೋಖನ್‌ ಸಾಹು (ಬಿಜೆಪಿ-ಛತ್ತೀಸ್‌ಗಢ)
  • ಡಾ.ರಾಜ್‌ಭೂಷಣ್‌ ಚೌಧರಿ (ಬಿಜೆಪಿ-ಬಿಹಾರ)
  • ಭೂಪತಿ ರಾಜು ಶ್ರೀನಿವಾಸ್‌ ವರ್ಮಾ (ಬಿಜೆಪಿ-ಆಂಧ್ರಪ್ರದೇಶ)
  • ಹರ್ಷ ಮಲ್ಹೋತ್ರಾ (ಬಿಜೆಪಿ-ದೆಹಲಿ)
  • ನಿಮುಬೆನ್‌ ಬಾಂಭಣಿಯಾ (ಬಿಜೆಪಿ-ಗುಜರಾತ್)
  • ಮುರಳೀಧರ್‌ ಮೊಹೊಲ್‌ (ಬಿಜೆಪಿ-ಮಹಾರಾಷ್ಟ್ರ)
  • ಜಾರ್ಜ್‌ ಕುರಿಯನ್‌ (ಬಿಜೆಪಿ-ಕೇರಳ)
  • ಪವಿತ್ರ ಮಾರ್ಗರಿಟಾ (ಬಿಜೆಪಿ-ಅಸ್ಸಾಂ)

ಇದನ್ನೂ ಓದಿ: Narendra Modi: 3ನೇ ಬಾರಿ ಪ್ರಧಾನಿಯಾಗಿ ಇಂದು ಸಂಜೆ ಮೋದಿ ಪ್ರಮಾಣ; ಇಲ್ಲಿದೆ ಬಾಲ್ಯದಿಂದ ವಿಶ್ವನಾಯಕತನಕದ ಜೀವನ ಚಿತ್ರಣ

Continue Reading

ಪ್ರಮುಖ ಸುದ್ದಿ

V Somanna profile : ಅಂದು ಜನತಾ ಬಜಾರ್‌ನಲ್ಲಿ ಸೇಲ್ಸ್‌ಮ್ಯಾನ್‌; ಇಂದು ಕೇಂದ್ರ ಸಚಿವ! ವಿ ಸೋಮಣ್ಣ ರಾಜಕೀಯ ಹಾದಿ ಕುತೂಹಲಕರ

V Somanna profile: ಅತಿ ಸಣ್ಣ ಕುಗ್ರಾಮವೊಂದರಿಂದ ಒಂದು ಜತೆ ಬಟ್ಟೆ ಮತ್ತು ಪುಟ್ಟ ಬ್ಯಾಗ್ ಹಿಡಿದುಕೊಂಡು ಹೊಟ್ಟೆಪಾಡಿಗಾಗಿ ಬೆಂಗಳೂರೆಂಬ ಮಹಾ ನಗರಕ್ಕೆ ಕಾಲಿಟ್ಟ ಸೋಮಣ್ಣ ಅವರು, ಮುಂದಿನ ಕೆಲವೇ ವರ್ಷದಲ್ಲಿ ಬೆಂಗಳೂರಿನ ಪ್ರಮುಖ ನಾಯಕರಾಗಿ ಬೆಳೆದರು. ಮೊದಲು ಕಾರ್ಪೊರೇಟರ್‌, ಬಳಿಕ ಶಾಸಕ, ಈಗ ಸಂಸದ-ಸಚಿವ…ಹೀಗೆ ವಿ ಸೋಮಣ್ಣ ಅವರ ರಾಜಕೀಯ ಹಾದಿ ರೋಚಕವಾಗಿದೆ.

VISTARANEWS.COM


on

V Somanna profile
Koo

ವಿ ಸೋಮಣ್ಣ ಅವರು (V Somanna profile) ಬೆಂಗಳೂರಿನ ಬಿನ್ನಿಪೇಟೆಯಲ್ಲಿ ಕಾರ್ಪೋರೇಟರ್‌ ಆಗಿ ರಾಜಕೀಯ ಹಾದಿ ತುಳಿದವರು. ಈಗ ಕೇಂದ್ರ ಸಚಿವರಾಗುವ ತನಕ ಅವರು ಸಾಗಿ ಬಂದ ರಾಜಕೀಯ ಹಾದಿ ರೋಚಕವಾಗಿದೆ. ವಿ ಸೋಮಣ್ಣ ಅವರು ಜನ ಸಮೂಹದ ನಡುವಿನಿಂದ ನಾಯಕರಾಗಿ ಬೆಳೆದು ಬಂದವರು. ಹಾಗಾಗಿ 40 ವರ್ಷಗಳ ಬಳಿಕವೂ ಅವರ ಪ್ರಭಾವ ಮತ್ತು ವರ್ಚಸ್ಸು ರಾಜ್ಯ ರಾಜಕಾರಣದಲ್ಲಿ ಪ್ರಖರವಾಗಿ ಉಳಿದಿದೆ.
ನಾಡಿನ ಅತಿ ಸಣ್ಣ ಕುಗ್ರಾಮವೊಂದರಿಂದ ಒಂದು ಜತೆ ಬಟ್ಟೆ ಮತ್ತು ಪುಟ್ಟ ಬ್ಯಾಗ್ ಹಿಡಿದುಕೊಂಡು ಹೊಟ್ಟೆಪಾಡಿಗಾಗಿ ಬೆಂಗಳೂರೆಂಬ ಮಹಾ ನಗರಕ್ಕೆ ಕಾಲಿಟ್ಟ ಸೋಮಣ್ಣ ಅವರು, ಮುಂದಿನ ಕೆಲವೇ ವರ್ಷದಲ್ಲಿ ಬೆಂಗಳೂರಿನ ಪ್ರಮುಖ ನಾಯಕರಾಗಿ ಬೆಳೆದರು.

ಅವರು ರಾಮನಗರ ಜಿಲ್ಲೆಯ ಮರಳವಾಡಿ ಎಂಬ ಸಣ್ಣ ಊರಿನ ತೇರಬೀದಿಯಿಂದ ಬೆಂಗಳೂರೆಂಬ ರಾಜಬೀದಿಯಲ್ಲಿ ಅಂಬೆಗಾಲಿಟ್ಟು, ಜನತಾ ಬಜಾರ್‌ನಿಂದ ಜನತಾಪಕ್ಷಕ್ಕೆ ಪ್ರವೇಶ ಪಡೆದು, ಕಾರ್ಪೊರೇಟರ್ ಆಗಿ ಲೋಕಲ್ ಲೀಡರ್ ಎಂದು ಗುರುತಿಸಿಕೊಂಡು, ಶಾಸಕರಾಗಿ ವಿಧಾನಸಭೆಗೆ ಪ್ರವೇಶ ಪಡೆದು, ಸಚಿವರಾಗಿ ಇಡೀ ರಾಜ್ಯ ಗುರುತಿಸುವಂಥ ಕೆಲಸ ಮಾಡುವ ಮೂಲಕ ನಾಡಿನ ಮುಂಚೂಣಿ ರಾಜಕೀಯ ಧುರೀಣರಾಗಿ ಬೆಳೆದವರು.
ಶಿಸ್ತು, ಶ್ರದ್ಧೆ, ನೇರ ನಡೆ-ನುಡಿ, ಸರಳ ಸಜ್ಜನಿಕೆ, ಎನಗಿಂತ ಕಿರಿಯರಿಲ್ಲ ಎಂಬ ನಿನಮ್ರತೆ, ಹಿಡಿದ ಕೆಲಸವನ್ನು ಬಿಡದೆ ಮಾಡಿ ಮುಗಿಸುವ ಛಲ, ಜನ ಸಾಮಾನ್ಯರ ತೀರಾ ಸಾಮಾನ್ಯ ಸಮಸ್ಯೆಗಳಿಗೂ ಸ್ಪಂದಿಸುವ ಗುಣ, ಅಭಿವೃದ್ಧಿ ಕುರಿತ ದೂರದೃಷ್ಟಿ, ಅಧ್ಯಯನ ಪ್ರವೃತ್ತಿ, ಜಾತಿ ಧರ್ಮ ಜನಾಂಗದ ಸೀಮಾ ರೇಖೆಯನ್ನು ದಾಟಿ ಜನರೊಂದಿಗೆ ಬೆರೆಯುವಿಕೆ, ಬಸವಣ್ಣನವರ ಕಾಯಕವೇ ಕೈಲಾಸ ಎಂಬ ತತ್ವಕ್ಕೆ ನಿಷ್ಠೆ, ಆದರೆ ನಾಲ್ಕು ಜನರಿಗೆ ಒಳಿತಾಗುತ್ತದೆ ಎಂದೆನಿಸಿದರೆ ಸಾಮ ದಾನ ಭೇದ ದಂಡ ಅಸ್ತ್ರ ಪ್ರಯೋಗಿಸಲೂ ಹಿಂಜರಿದ ದಿಟ್ಟತನ, ಧರ್ಮೋ ರಕ್ಷತಿ ರಕ್ಷಿತಃ ಎಂಬ ಗೀತೋಪದೇಶದ ಪಾಲನೆ, ಸರ್ವ ಜಾತಿ-ಧರ್ಮಗಳ ಸ್ವಾಮೀಜಿಗಳ ಪ್ರೀತಿ ವಿಶ್ವಾಸಕ್ಕೆ ಪಾತ್ರ…ಹೀಗೆ ಹತ್ತು ಹಲವಾರು ಹೆಚ್ಚುಗಾರಿಕೆಗಳು ಸೋಮಣ್ಣ ಅವರನ್ನು ಇಂದು ರಾಜಕೀಯವಾಗಿ ಇಷ್ಟು ಎತ್ತರಕ್ಕೆ ತಂದು ನಿಲ್ಲಿಸಿವೆ.

ಊರು ಬಿಡುವಾಗ ಅಮ್ಮ ಕೊಟ್ಟ 15 ರೂ. ಇತ್ತು…

ಮರಳವಾಡಿ ಎಂಬ ಕುಗ್ರಾಮದಿಂದ ಬದುಕಿನ ದಾರಿ ಹುಡುಕುತ್ತ ತಾವು ಬೆಂಗಳೂರಿಗೆ ಬಂದ ಕತೆಯನ್ನು ಸೋಮಣ್ಣ ಹೇಳುವುದು ಹೀಗೆ:
ಊರಲ್ಲಿ ಪಿಯುಸಿ ಮುಗಿಯುತ್ತಿದ್ದಂತೆ, ಅದ್ಯಾವುದೋ ಹೊಸ ದಿಕ್ಕಿನತ್ತ ನನ್ನ ಮನಸ್ಸು ತುಡಿಯುತ್ತಿತ್ತು. ಊರು ಬಿಟ್ಟು ಬೆಂಗಳೂರಿಗೆ ಹೋಗಲು ಮನಸ್ಸು ತವಕಿಸುತ್ತಿತ್ತು. ಆದರೆ ಮನೆಯಲ್ಲಿ ವ್ಯವಸಾಯ ಮಾಡುವಂತೆ ಒತ್ತಾಯಿಸುತ್ತಿದ್ದರು. ಅದೊಂದು ದಿನ ಗಟ್ಟಿ ಮನಸ್ಸು ಮಾಡಿ ಊರು ಬಿಟ್ಟೆ. ಜೇಬಿನಲ್ಲಿ ಅಮ್ಮ ಕೊಟ್ಟ 15 ರೂ. ಇತ್ತು. ಜತೆಗೆ ಇನ್ನೊಂದು ಜತೆ ಬಟ್ಟೆಯ ಸಣ್ಣ ಬ್ಯಾಗು.

ಬೆಂಗಳೂರಿನಲ್ಲಿ ಬಸಪ್ಪ ಸರ್ಕಲ್ ನಲ್ಲಿ ಬಂದು ಇಳಿದೆ. ನನಗಾಗ 18 ವರ್ಷ. ಅಲ್ಲೇ ಪಕ್ಕದಲ್ಲಿ ಸಣ್ಣ ಧೋಬಿ ಅಂಗಡಿ ಇಟ್ಟುಕೊಂಡಿದ್ದ ನಾಗಣ್ಣ ಎಂಬುವರು ನನ್ನನ್ನು ಗುರುತಿಸಿ, ಏನ್ ಸೋಮಣ್ಣ ಇಲ್ಲಿ ಎಂದರು. ಅಣ್ಣಾ ಏನಾದರು ಒಂದು ದಾರಿ ತೋರಿಸು ಅಣ್ಣಾ ಎಂದು ಅವರಿಗೆ ದುಂಬಾಲು ಬಿದ್ದೆ. ಅವರು ಸೀದಾ ನನ್ನನ್ನು ಚಂಗಲ್ ರಾಯ ಶೆಟ್ಟಿ ಎಂಬುವರ ಬಳಿ ಕರೆದೊಯ್ದರು. ಅವರದು ಮೋಟಾರ್ ರಿಪೇರಿ ಅಂಗಡಿ. ಹುಡುಗಾ ನನ್ನ ಜತೆಗೇ ಇದ್ದುಬಿಡು ಎಂದರವರು. ತಮ್ಮ ಅಂಗಡಿಯಲ್ಲೇ ಉಳಿದುಕೊಳ್ಳಲು ತಾತ್ಕಾಲಿಕವಾಗಿ ವ್ಯವಸ್ಥೆ ಮಾಡಿಕೊಟ್ಟರು. ಮೋಟಾರು ಬಿಡಿ ಭಾಗಗಳನ್ನು ಎತ್ತಿ ಕೊಡುವುದು, ಅವರು ಕರೆದಲ್ಲಿಗೆ ಹೋಗುವುದು…ಇಷ್ಟೇ ನನ್ನ ಕೆಲಸ.
ಕೆಲ ದಿನಗಳ ಬಳಿಕ ಸಿಂಗಲ್ ರೂಮಿನ ಮನೆಯೊಂದಕ್ಕೆ ಶಿಫ್ಟ್ ಆದೆ. ಕೇವಲ ಆರಡಿ ಎಂಟಡಿ ಅಳತೆಯ ಶೀಟಿನ ಮನೆ ಅದು. ಬಾಡಿಗೆ ತಿಂಗಳಿಗೆ ಕೇವಲ 7 ರೂಪಾಯಿ!

ಪಿಯುಸಿಯಲ್ಲಿ ಫೇಲ್‌ ಆಗಿದ್ದೆ

ನಾನು ಪಿಯುಸಿಯ ಒಂದು ವಿಷಯದಲ್ಲಿ ಫೇಲ್ ಆಗಿದ್ದೆ. ಅದನ್ನು ಪಾಸ್ ಮಾಡಿಕೊಂಡೆ. ಆಗೆಲ್ಲ ಪಿಯುಸಿ ಅಂದರೆ ಒಂದೇ ವರ್ಷ. ಹಗಲು ಮೋಟಾರು ರಿಪೇರಿ ಅಂಗಡಿಯಲ್ಲಿ ಕೆಲಸ ಮಾಡುತ್ತಲೇ ವಿವಿ ಪುರಂ ಸಂಜೆ ಕಾಲೇಜು ಸೇರಿದೆ. ರಾತ್ರಿಯಿಡೀ ಕಷ್ಟಪಟ್ಟು ಓದಿ ಪದವಿಯಲ್ಲಿ ಒಳ್ಳೆಯ ಅಂಕ ಗಳಿಸಿದೆ.

ಮುಂದೆ ಧೋಬಿ ಅಂಗಡಿಯ ನಾಗಣ್ಣ ನನ್ನನ್ನು ಜಯಸಿಂಹ ಎಂಬುವವರನ್ನು ಪರಿಚಯಿಸಿ ಅವರ ಕಂಪನಿಯಲ್ಲಿ ಕೆಲಸ ಕೊಡಿಸಿದರು. ನಾಗಣ್ಣ ಬಲು ಬುದ್ಧಿವಂತ ಮತ್ತು ಶ್ರಮಜೀವಿ. ನನ್ನ ಬದುಕಿನ ಆರಂಭದ ದಿನಗಳಲ್ಲಿ ನನಗೆ ಆಸರೆಯಾಗಿ ನಿಂತರು. ನಂತರ 1971ರಲ್ಲಿ ನಾನು ಕನ್ಷುಮರ್ ಫೆಡರೇಷನ್ ಗೆ ಅರ್ಜಿ ಸಲ್ಲಿಸಿದೆ. ಗುಮಾಸ್ತನ ಕೆಲಸ ಗಿಟ್ಟಿಸುವುದು ಆ ದಿನಗಳಲ್ಲಿ ನನ್ನ ಮಹತ್ವಾಕಾಂಕ್ಷೆಯಾಗಿತ್ತು! ಎ ಶಾಂತಮಲ್ಲಪ್ಪ ಅವರು ಫೆಡರೇಷನ್ ನ ಅಧ್ಯಕ್ಷರಾಗಿದ್ದರು. ಅವರು ಸಂದರ್ಶನ ತಗೊಂಡು, ”ಗುಮಾಸ್ತನ ಕೆಲಸ ಬೇಡ ನಿನಗೆ. ಸೇಲ್ಸ್ ಅಸಿಸ್ಟೆಂಟ್ ಕೆಲಸಕ್ಕೆ ಬಾ” ಎಂದರು.

ಸೇಲ್ಸ್‌ ಅಸಿಸ್ಟಂಟ್‌ ಕೆಲಸ

ಕೆಲಸಕ್ಕೆ ಸೇರಲು 500 ರೂ. ಡಿಪಾಸಿಟ್ ಕಟ್ಟಬೇಕಿತ್ತು. ಅಷ್ಟು ದುಡ್ಡು ಹೊಂದಿಸಲು ನಾನು ಪಟ್ಟ ಕಷ್ಟ ಅಷ್ಟಿಷ್ಟಲ್ಲ. ಊರಲ್ಲಿ ಹೋಗಿ ಕೇಳಿದರೆ, ಏಯ್ ಇಲ್ಲಿ ಬೇಸಾಯ ಮಾಡಿಕೊಂಡಿರು. ಬೆಂಗಳೂರಿಗೆ ಯಾಕೆ ಹೋಗಬೇಕು ನೀನು ಎಂದರು. ಕೊನೆಗೆ ಅಮ್ಮ 200 ರೂ. ಕೊಟ್ಟು ಕಳಿಸಿದರು. ಬೆಂಗಳೂರಿನ ಶಿವಾಜಿ ಟಾಕೀಸ್ ಬಳಿ ಆಗ ಉರುವಲು ಕಟ್ಟಿಗೆ ಮಾರುವ ವೇ ಬ್ರಿಡ್ಜ್ ಇತ್ತು. ಅಲ್ಲಿ ತಿಮ್ಮಯ್ಯ ಎಂಬೊಬ್ಬರ ಪರಿಚಯವಾಗಿತ್ತು. ಅವರ ಬಳಿ ಹೋಗಿ ಸಮಸ್ಯೆ ಹೇಳಿಕೊಂಡಾಗ 500 ರೂ. ಕೊಟ್ಟರು. ಅಂತೂ ಬೆಂಗಳೂರಿನ ಕೆ ಜಿ ರೋಡ್ ನ ಜನತಾ ಬಜಾರ್ ನಲ್ಲಿ ಕೆಲಸ ಶುರು ಮಾಡಿದೆ. ಅಲ್ಲಿಂದ ನನ್ನ ಬದುಕಿಗೆ ಹೊಸ ತಿರುವು ಸಿಕ್ಕಿತು.

ಜನತಾ ಬಜಾರ್ ನಲ್ಲಿ ಕೆಲಸ ಮಾಡುತ್ತಿರುವಾಗಲೇ, ಇನ್ನಷ್ಟು ದುಡಿಯಬೇಕು ಎಂದೆನಿಸುತ್ತಿತ್ತು. ಅದೇ ಹೊತ್ತಿಗೆ ವಿಜಯಾ ಬ್ಯಾಂಕ್ ಮ್ಯಾನೇಜರ್ ಪ್ರಭಾಕರ್ ಎಂಬುವರ ಪರಿಚಯವಾಯಿತು. ಇನ್ನು ಏನಾದರು ಮಾಡಬೇಕಲ್ಲ ಸರ್ ನಾನು ಅಂದೆ. ಪಿಗ್ಮಿ ಕಲೆಕ್ಟ್ ಮಾಡು ನೀನು ಎಂದು ಸಲಹೆ ನೀಡಿದರು. ಮಧ್ಯಾಹ್ನ 1.30ರಿಂದ 4 ಗಂಟೆಯವರೆಗಿನ ಬಿಡುವಿನ ಅವಧಿಯಲ್ಲಿ ಅಂಗಡಿ ಅಂಗಡಿ ತಿರುಗಿ ಪಿಗ್ಮಿ ಕಲೆಕ್ಟ್ ಮಾಡತೊಡಗಿದೆ. ಸಂಜೆ ಡ್ಯೂಟಿ ಮುಗಿದ ಮೇಲೆ ರಾತ್ರಿ 9 ಗಂಟೆವರೆಗೆ ಮತ್ತೆ ಇದೇ ಕೆಲಸ. ಇದರಿಂದ ತಿಂಗಳಿಗೆ ಸುಮಾರು 2 ಸಾವಿರ ರೂ. ಎಕ್ಟ್ರಾ ಇನ್ ಕಮ್ ಬರತೊಡಗಿತು. ಜನತಾ ಬಜಾರ್ ಸಂಬಳ ಹೆಚ್ಚು ಕಡಿಮೆ ಇಷ್ಟೇ ಬರುತ್ತಿತ್ತು.

ಜನತಾ ಬಜಾರ್‌ನಿಂದ ಜನತಾ ಪಕ್ಷಕ್ಕೆ…

ಜನತಾ ಬಜಾರ್ ಯೂನಿಯನ್‌ನಲ್ಲಿ ನಾನು ಮುಂಚೂಣಿ ನಾಯಕನಾಗಿ ಬೆಳೆದೆ. ಸಹಜವಾಗಿಯೇ ದೇವೇಗೌಡರು, ಬಿ ಎಲ್ ಶಂಕರ್, ಪಿ ಜಿ ಆರ್ ಸಿಂಧಿಯಾ ಮತ್ತಿರರ ಸಂಪರ್ಕಕ್ಕೆ ಬಂದೆ. ಅವರ ಮೂಲಕ ನಾನು ಅನಧಿಕೃತವಾಗಿ ಜನತಾ ಪಕ್ಷಕ್ಕೆ ಎಂಟ್ರಿ ಪಡೆದೆ. ಈ ನಡುವೆ, ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಲೋಕ ನಾಯಕ ಜಯಪ್ರಕಾಶ್ ನಾರಾಯಣ್ ಅವರು ಕೈಗೊಂಡಿದ್ದ ಆಂದೋಲನದಲ್ಲೂ ಕೈ ಜೋಡಿಸಿದೆ. ಚಂದ್ರಶೇಖರ ಅವರು ನಡೆಸಿದ ರಾಷ್ಟ್ರವ್ಯಾಪಿ ಪಾದಯಾತ್ರೆಯಲ್ಲೂ ಹೆಜ್ಜೆ ಹಾಕಿದೆ.

1986ರ ವಿಧಾನಸಭೆ ಚುನಾವಣೆಯಲ್ಲಿ ಕನಕಪುರ ಕ್ಷೇತ್ರದಲ್ಲಿ ಪಿ ಜಿ ಆರ್ ಸಿಂಧಿಯಾ ಪರ ಸಕ್ರಿಯವಾಗಿ ಕೆಲಸ ಮಾಡಿದೆ. ಅದೇ ವರ್ಷ ಬೆಂಗಳೂರು ಕಾರ್ಪೊರೇಷನ್ ಎಲೆಕ್ಷನ್ ಘೋಷಣೆ ಆಯಿತು. ಮುನಿಯಪ್ಪ ಅಂತ ಒಬ್ಬರು ರೆವಿನ್ಯು ಇನ್ಸ್ ಪೆಕ್ಟರ್ ನನಗೆ ಆತ್ಮೀಯರಾಗಿದ್ದರು. ಅವರು, ಸೋಮಣ್ಣ ನೀನೂ ಎಲೆಕ್ಷನ್ ಗೆ ನಿಂತು ಬಿಡು ಎಂದು ಹವಾ ಹಾಕಿದರು. ನನಗೂ ಉಮೇದು ಬಂತು. ವಿಜಯ ನಗರ ಕ್ಷೇತ್ರದಲ್ಲಿ ಜನತಾ ಪಕ್ಷದಿಂದ ಟಿಕೆಟ್‌ ಕೊಡುವ ಭರವಸೆಯೂ ಸಿಕ್ಕಿತು. ಆದರೆ ನಾಮಪತ್ರ ಸಲ್ಲಿಸಬೇಕು ಎನ್ನುವಷ್ಟರಲ್ಲಿ ಜೀವರಾಜ್ ಆಳ್ವ, ರಘುಪತಿ ಇನ್ನೂ ಕೆಲವರು ಬೇರೆಯವರಿಗೆ ಟಿಕೆಟ್ ಕೊಡಲು ಶತಪ್ರಯತ್ನ ನಡೆಸಿದರು.

ಡಿ ಮಂಜುನಾಥ್ ಆಗ ಜನತಾ ಪಕ್ಷದ ರಾಜ್ಯಾಧ್ಯಕ್ಷರು. ಮಂಜುನಾಥ್, ವಿ ಆರ್ ಕೃಷ್ಣಯ್ಯರ್, ಟಿ ಆರ್ ಶಾಮಣ್ಣ, ಎಚ್ ಡಿ ದೇವೇಗೌಡ, ಬಿ ಎಲ್ ಶಂಕರ್ ಮತ್ತಿತರರನ್ನು ಸಂಪರ್ಕಿಸಿ ನಾನು ಟಿಕೆಟ್ ಗೆ ಪಟ್ಟು ಹಿಡಿದೆ. ಇದಕ್ಕಾಗಿ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ ಚಂದ್ರಶೇಖರ ಅವರನ್ನೂ ಸಂಪರ್ಕಿಸಿ ವಿನಂತಿಸಿದೆ. ಆದರೆ ಕೊನೆಗೆ ಬಿ ಎಲ್ ಶಂಕರ್ ಒಬ್ಬರು ಮಾತ್ರ ನನ್ನ ಪರವಾಗಿ ನಿಂತರು. ಅಂತಿಮವಾಗಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಮೊರೆ ಹೋದೆ. ಕನಕಪುರ ಬೈ ಎಲೆಕ್ಷನ್ ನಲ್ಲಿ ಹೆಗಡೆ ಅವರಿಗಾಗಿ ಸಿಂಧಿಯಾ ರಾಜೀನಾಮೆ ನೀಡಿದ್ದರು. ಹೆಗಡೆ ಅವರನ್ನು ಸೋಲಿಸಲು ಕಾಂಗ್ರೆಸ್ ನಾಯಕರೆಲ್ಲ ಶಕ್ತಿ ಪ್ರಯೋಗದಲ್ಲಿ ತೊಡಗಿದ್ದರು. ನಾನು ಯುವಕರ ತಂಡ ಕಟ್ಟಿಕೊಂಡು ಕಾಂಗ್ರೆಸ್ ಮುಖಂಡರನ್ನು ದಿಗ್ಬಂಧನ ಹಾಕಿ ನೀರಿಳಿಸಿದ್ದು ಹೆಗಡೆ ಅವರಿಗೆ ತಿಳಿದಿತ್ತು. ಹಾಗಾಗಿ ಹೆಗಡೆ ಅವರು ಕೃಪೆಯಿಂದಾಗಿ ಕೊನೆಗೂ ಬಿ ಫಾರಂ ಸಿಕ್ಕಿತು. ನಾನು ನಾಮಪತ್ರ ಸಲ್ಲಿಸಿದೆ. ಆದಿ ಚುಂಚನಗಿರಿಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಬೆಂಬಲವೂ ನನಗೆ ಸಿಕ್ಕಿತು.

ಈ ನಡುವೆ, ನಮ್ಮ ಕಾರ್ಯಕರ್ತರನ್ನು ಸ್ಟೇಷನ್ ಗೆ ಒಯ್ದು ಹಲ್ಲೆ ನಡೆಸಿದ ದುರಹಂಕಾರಿ ಪೊಲೀಸ್ ಅಧಿಕಾರಿಯೊಬ್ಬರಿಗೆ ನಾನು ಸಖತ್ತಾಗಿ ಬೆಂಡೆತ್ತಿದ ಘಟನೆಯಿಂದಾಗಿ ಇಡೀ ವಾರ್ಡ್ ನಲ್ಲಿ ನನ್ನ ಹವಾ ಜೋರಾಯಿತು. ನಾನು ಭಾರಿ ಬಹುಮತದಿಂದ ಗೆಲುವು ಸಾಧಿಸಿದೆ. ಆಗ ಆ ವಾರ್ಡ್ ನಲ್ಲಿ ಏನೇನೂ ಮೂಲಸೌಕರ್ಯ ಇರಲಿಲ್ಲ. ಶಾಂತಿ ಸುವ್ಯವಸ್ಥೆ ಕೂಡ ಕಳವಳಕಾರಿಯಾಗಿತ್ತು. ನಾನು ಹಂತಹಂತವಾಗಿ ಎಲ್ಲ ವರ್ಗದ ಜನರ ವಿಶ್ವಾಸ ಗಳಿಸುತ್ತ, ಮೂಲ ಸೌಕರ್ಯ ಕಲ್ಪಿಸುತ್ತ ಬಂದೆ. ಹಾಗಾಗಿ ಮುಂದಿನ 1987ರ ಕಾರ್ಪೊರೇಷನ್ ಚುನಾವಣೆಯಲ್ಲೂ ಭರ್ಜರಿ ಗೆಲುವು ನನ್ನದಾಯಿತು.

ಬಿನ್ನಿಪೇಟೆಯಿಂದ ವಿಧಾನಸಭೆ ಪ್ರವೇಶ

ಎರಡು ಅವಧಿಗೆ ಕಾರ್ಪೋರೇಟರ್ ಆಗಿ ಜನಪ್ರಿಯತೆ ಗಳಿಸಿದ್ದ ನನಗೆ 1994ರಲ್ಲಿ ಬಿನ್ನಿಪೇಟೆ ಕ್ಷೇತ್ರದಲ್ಲಿ ನಿರಾಯಾಸವಾಗಿ ಜನತಾ ಪಕ್ಷದ ಟಿಕೆಟ್ ಸಿಕ್ಕಿತು. ದಾಖಲೆ ಮತಗಳ ಅಂತರದಿಂದ ಗೆದ್ದೆ.
ಆದರೆ ಮುಖ್ಯಮಂತ್ರಿಯಾಗಲು ರಾಮಕೃಷ್ಣ ಹೆಗಡೆ ಮತ್ತು ದೇವೇಗೌಡರ ನಡುವೆ ಪೈಪೋಟಿ ನಡೆದು ರಣರಂಪವಾಯಿತು. ನಾನು ದೇವೇಗೌಡರ ಪರ ನಿಂತೆ. ನ್ಯಾಯಯುತವಾಗಿ ದೇವೇಗೌಡರೇ ಮುಖ್ಯಮಂತ್ರಿ ಆಗಬೇಕು ಎನ್ನುವುದು ನಮ್ಮ ಆಶಯವಾಗಿತ್ತು. ವಿಂಡ್ಸರ್ ಮ್ಯಾನರ್ ನನ್ನನ್ನು ಕರೆಸಿದರು. ಅಲ್ಲಿ ಹೆಗಡೆ, ಜೆ ಎಚ್ ಪಟೇಲ್ ಮತ್ತು ಬೊಮ್ಮಾಯಿ ಚಿಂತಾಕ್ರಾಂತರಾಗಿ ಕೂತಿದ್ದರು. ಹೆಗಡೆ ಮನೆ ಬಳಿ ಮತ್ತು ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಭಾರಿ ಗದ್ದಲದ ಕುರಿತಾಗಿ ನನ್ನಿಂದ ಮಾಹಿತಿ ಪಡೆದರು. ನಾನು ಇದ್ದ ವಿಷಯ ವಿವರಿಸಿದೆ. ಹೆಗಡೆಯವರು ಗರಂ ಆಗಿದ್ದರು. ಬೊಮ್ಮಾಯಿಯವರು ಸೂಕ್ಷ್ಮವಾಗಿ ನನಗೊಂದು ಬುದ್ಧಿಮಾತು ಹೇಳಿ ಕಳುಹಿಸಿದರು!

ದೇವೇಗೌಡರು ಮುಖ್ಯಮಂತ್ರಿಯಾದರು. ಆದರೆ ನನ್ನನ್ನು ಮಂತ್ರಿ ಮಾಡಲೇ ಇಲ್ಲ! ನಿನ್ನನ್ನು ಮಂತ್ರಿ ಮಾಡಿದರೆ ಹೆಗಡೆಯವರು ತಕರಾರು ಮಾಡ್ತಾರೆ, ಸದ್ಯ ಸುಮ್ಮನಿರು ಎಂದರು!

ಮುಂದೆ ಅನಿರೀಕ್ಷಿತವಾಗಿ ದೇವೇಗೌಡರು ಪ್ರಧಾನಿಯಾದರು. ಮುಖ್ಯಮಂತ್ರಿ ಹುದ್ದೆಗೆ ಮತ್ತೆ ಪೈಪೋಟಿ ಶುರುವಾಯಿತು. ನಾವು 86 ಮಂದಿ ಸಿದ್ದರಾಮಯ್ಯ ಪರ ಸಹಿ ಮಾಡಿ ಪತ್ರ ರೆಡಿ ಮಾಡಿದೆವು. ಆದರೆ ಆ ಪತ್ರ ವರಿಷ್ಠರಿಗೆ ತಲುಪಿಸುವ ಧೈರ್ಯ ಯಾರೂ ಮಾಡಲಿಲ್ಲ. ನಾನೊಬ್ಬನೆ ಆ ಪತ್ರ ಹಿಡಿದು, ಬೆಂಗಳೂರಿನಲ್ಲಿ ಠಿಕಾಣಿ ಹೂಡಿದ್ದ ಜನತಾದಳ ರಾಷ್ಟ್ರ ಮಟ್ಟದ ನಾಯಕರಾದ ಬಿಜು ಪಟ್ನಾಯಕ್, ಮಧು ದಂಡವತೆ ಬಳಿ ಹೋಗಿದ್ದೆ. ಅಲ್ಲೇ ಇದ್ದ ಪಟೇಲರು, ನಾನ್ಯಾಕೆ ಮುಖ್ಯಮಂತ್ರಿ ಆಗಬಾರದು ಎಂದು ನನ್ನನ್ನು ಪ್ರಶ್ನಿಸಿದರು! ನಾನು ಏನೋ ಹೇಳಿ ಅಲ್ಲಿಂದ ಜಾಗ ಖಾಲಿ ಮಾಡಿದೆ.

ಜೆ ಎಚ್‌ ಪಟೇಲರು ಮಂತ್ರಿ ಮಾಡಿದರು

ನಾಟಕೀಯ ಬೆಳವಣಿಗೆಯಲ್ಲಿ ಸಿದ್ದರಾಮಯ್ಯ ಅವರನ್ನು ಮಾಡದೆ ಜೆ ಎಚ್ ಪಟೇಲರನ್ನು ಸಿಎಂ ಮಾಡಲಾಯಿತು. ವಿಶೇಷ ಅಂದರೆ ಪಟೇಲರು ನನ್ನನ್ನು ಮಂತ್ರಿಯನ್ನಾಗಿ ಮಾಡಿದರು! ನಿನಗೆ ಕೆಲಸ ಬಾರದ ಖಾತೆ ಕೊಡ್ತೇನೆ ನೋಡು ಎಂದು ಗದರಿಸುತ್ತ ಬಂದೀಖಾನೆ ಇತ್ಯಾದಿ ಪ್ರಮುಖವಲ್ಲದ ಖಾತೆ ಕೊಟ್ಟರು. ಯಾವ ಖಾತೆ ಆದರೇನು ಎಂದು ನಾನು ನಿಷ್ಠೆಯಿಂದ ಕೆಲಸ ಮಾಡಿದೆ.

ಸನ್ನಡತೆಯ ಕೈದಿಗಳ ಬಿಡುಗಡೆ ಸಮಾರಂಭಕ್ಕೆ ಅಂದಿನ ರಾಜ್ಯಪಾಲ ಖರ್ಷಿದ್ ಅಲಂ ಖಾನ್ ಅವರನ್ನು ಕರೆದಿದ್ದೆ. ಪಟೇಲರೂ ಜತೆಗಿದ್ದರು. ಆಗ ರಾಜ್ಯಪಾಲರು ನನ್ನ ಕಾರ್ಯಶೈಲಿ ಬಗ್ಗೆ ಪಟೇಲರಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು. ಇದರ ಪರಿಣಾಮವೋ ಏನೋ‌. ಪಟೇಲರು ನನಗೆ ಬೆಂಗಳೂರು ನಗರಾಭಿವೃದ್ಧಿಯಂಥ ಮಹತ್ವದ ಖಾತೆಯ ಹೊಣೆಗಾರಿಕೆ ನೀಡಿದರು. ಬೆಂಗಳೂರಿನ ಹಲವಾರು ಫ್ಲೈ ಓವರ್, ಅಂಡರ್ ಪಾಸ್, ಕಾವೇರಿ ನಾಲ್ಕನೇ ಹಂತದ ಯೋಜನೆ ಸೇರಿದಂತೆ ದೂರದೃಷ್ಟಿಯ ಹಲವಾರು ಯೋಜನೆಗಳು ಆಗ ಜಾರಿಗೆ ಬಂದವು.

1999ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು

ಆದರೆ 1999ರಲ್ಲಿ ಪರಿಸ್ಥಿತಿ ಭಿನ್ನವಾಗಿತ್ತು. ಜನತಾದಳ ಒಡೆದು ಚೂರಾಗಿತ್ತು. ಯಾವ ಬಣದಲ್ಲಿ ಯಾರಿದ್ದಾರೆ ಎಂದು ತಿಳಿಯಲಾರದಷ್ಟು ಪರಿಸ್ಥಿತಿ ಡೋಲಾಯಮಾನವಾಗಿತ್ತು. ”ನೀನು ಕಾಂಗ್ರೆಸ್ ಸೇರು. ಎಸ್ ಎಂ ಕೃಷ್ಣ ಮುಖ್ಯಮಂತ್ರಿ ಆಗೋದು ಖಚಿತ. ನಿನ್ನನ್ನು ಅವರು ಮಂತ್ರಿ ಮಾಡ್ತಾರೆ,” ಎಂದು ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರು ಸಲಹೆ ನೀಡಿದರು. ನಾನು ಕಾಂಗ್ರೆಸ್ ಸೇರಲು ನಿರ್ಧರಿಸಿ ಕೃಷ್ಣ ಅವರ ಮೇಲೆ ನಂಬಿಕೆ ಇಟ್ಟೆ. ದಿಲ್ಲಿವರೆಗೂ ಹೋಗಿ ಬಂದೆ. ಕಾಂಗ್ರೆಸ್ ಟಿಕೆಟ್ ಕೊಡಿಸುತ್ತೇವೆ ಎಂದು ಹೇಳಿದವರು ಕೊನೇ ಕ್ಷಣದಲ್ಲಿ ಕೈ ಎತ್ತಿದರು.

ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರು ನನಗೆ ಕರೆ ಮಾಡಿ, ನಾಳೆ ಬೆಳಗ್ಗೆಯೇ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಸೂಚಿಸಿದರು. ನಿನಗೆ ಟಿಕೆಟ್ ಕೊಡದೇ ಇದ್ದುದು ಗೊತ್ತಾಗಿ ಬೇಸರವಾಯಿತು. ನಿನ್ನಂಥ ಕೆಲಸಗಾರ ಈ ಕ್ಷೇತ್ರಕ್ಕೆ ಬೇಕು. ನಿನ್ನ ಬೆಂಬಲಕ್ಕೆ ನಾವಿದ್ದೇವೆ. ಈಗಷ್ಟೇ ಕಾಲಭೈರವನ ಪೂಜೆ ಮುಗಿಸಿ ಬಂದಿದ್ದೇನೆ. ನಿನಗೆ ಒಳ್ಳೆಯದಾಗುತ್ತದೆ ಎಂದು ಹರಸಿದರು.

ಮರುದಿನ ನಾಮಪತ್ರ ಸಲ್ಲಿಸುವಾಗ ಸಾವಿರಾರು ಜನ ಸೇರಿದ್ದರು. ಪಕ್ಷೇತರ ಅಭ್ಯರ್ಥಿಯಾಗಿ ನಿಂತು ನಾನು ಭಾರೀ ಮತಗಳ ಅಂತರದಿಂದ ಜಯಶಾಲಿಯಾದೆ. ನನ್ನ ಗೆಲುವಿನ ಆರ್ಭಟ ಕಂಡು ಎಲ್ಲ ಪಕ್ಷಗಳ ಹಿರಿಯ ಮುಖಂಡರೂ ಅಚ್ಚರಿಪಟ್ಟರು.

ಬದಲಾದ ಸನ್ನಿವೇಶದಲ್ಲಿ 2004ರಲ್ಲಿ ಬಿನ್ನಿಪೇಟೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಿಂತು ಮೂರನೇ ಬಾರಿ ಆಯ್ಕೆ ಆದೆ. 2008ರಲ್ಲಿ ಮತ್ತೆ ಕಾಂಗ್ರೆಸ್ ನಿಂದ ಗೋವಿಂದರಾಜ ನಗರ ಕ್ಷೇತ್ರದಿಂದ ಗೆಲುವು ಸಾಧಿಸಿದೆ.
2010ರಲ್ಲಿ ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ ಆಗಿ ಆಹಾರ-ನಾಗರಿಕ ಪೂರೈಕೆ, ಮುಜರಾಯಿ ಮತ್ತು ವಸತಿ ಸಚಿವನಾಗಿ ಕಾರ್ಯ ನಿರ್ವಹಿಸಿದೆ. 2016ರಲ್ಲಿ ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿ ಎರಡನೇ ಬಾರಿ ಆಯ್ಕೆಯಾದೆ. 2019ರಲ್ಲಿ ಗೋವಿಂದರಾಜ ನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಿಂತು ಭಾರಿ ಮತಗಳ ಅಂತರದಿಂದ ಜಯ ಸಾಧಿಸಿದೆ. ಮೊದಲು ತೋಟಗಾರಿಕೆ ಮತ್ತು ರೇಷ್ಮೆ ಖಾತೆ ನೀಡಿದ್ದರು. ಬಳಿಕ 2021ರಲ್ಲಿ ಮಹತ್ವದ ವಸತಿ ಮತ್ತು ಮೂಲ ಸೌಕರ್ಯ ಖಾತೆಗಳ ಹೊಣೆಗಾರಿಕೆ ನೀಡಿದರು.

2023ರ ವಿಧಾನಸಭೆ ಚುನಾವಣೆಯಲ್ಲಿ ಸೋಮಣ್ಣಗೆ ಡಬಲ್‌ ಸೋಲು

ಗೋವಿಂದರಾಜ ನಗರ ಕ್ಷೇತ್ರದಿಂದಲೇ ವಿಧಾನಸಭೆ ಚುನಾವಣೆಗೆ ನಿಲ್ಲಲು ವಿ ಸೋಮಣ್ಣ ತಯಾರಿ ನಡೆಸಿದ್ದರು. ಆದರೆ ಬಿಜೆಪಿ ಹೈಕಮಾಂಡ್‌ ಇವರಿಗೆ ಗೋವಿಂದರಾಜ ನಗರದಲ್ಲಿ ಟಿಕೆಟ್‌ ನೀಡದೆ ಚಾಮರಾಜ ನಗರ ಮತ್ತು ಸಿದ್ದರಾಮಯ್ಯ ಅವರು ಸ್ಪರ್ಧಿಸಿದ್ದ ವರುಣ ಕ್ಷೇತ್ರಗಳಲ್ಲಿ ಟಿಕೆಟ್‌ ನೀಡಿತು. ಸೋಮಣ್ಣ ಅವರು ಚುನಾವಣೆ ಎದುರಿಸಿದರು. ಆದರೆ ಎರಡೂ ಕ್ಷೇತ್ರಗಳಲ್ಲಿ ಸೋತು ಹೋದರು. ಆದರೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಹೈಕಮಾಂಡ್‌ ತುಮಕೂರು ಕ್ಷೇತ್ರದ ಟಿಕೆಟ್‌ ನೀಡಿತು. ಸೋಮಣ್ಣ ಅವರು ಇಲ್ಲಿ ನಿರಾಯಾಸವಾಗಿ ಗೆದ್ದರು. ಜತೆಗೆ ಕೇಂದ್ರದಲ್ಲಿ ಮಂತ್ರಿಯೂ ಆದರು!

Continue Reading

ಕ್ರೈಂ

Terror Attack: ಕಾಶ್ಮೀರದಲ್ಲಿ ಹಿಂದೂ ಯಾತ್ರಿಗಳಿದ್ದ ಬಸ್‌ ಮೇಲೆ ಉಗ್ರರ ದಾಳಿ; 10 ಸಾವು

ಉಗ್ರಗಾಮಿಗಳ ದಾಳಿಯಿಂದಾಗಿ ಹತ್ತು ಮಂದಿ ಹಿಂದೂ ಯಾತ್ರಿಕರು ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೋನಿ ಪ್ರದೇಶದ ತೆರ್ಯಾತ್ ಗ್ರಾಮದಲ್ಲಿ ನಡೆದಿದೆ. ರಿಯಾಸಿಯಲ್ಲಿರುವ ಶಿವಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಮೇಲೆ ಭಾನುವಾರ ದಾಳಿ (Terror Attack) ನಡೆದಿದೆ. ದಾಳಿ ವೇಳೆ ಬಸ್‌ ಕಂದಕಕ್ಕೆ ಉರುಳಿ ಬಿದ್ದಿದೆ.

VISTARANEWS.COM


on

By

Terror Attack
Koo

ರಿಯಾಸಿ(ಕಾಶ್ಮೀರ): ಯಾತ್ರಾರ್ಥಿಗಳಿದ್ದ (pilgrims) ಬಸ್ (bus) ಮೇಲೆ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರು (Terror Attack) ಗುಂಡಿನ ದಾಳಿ ನಡೆಸಿದ್ದು, ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಇದರಿಂದ ಹತ್ತು ಮಂದಿ ಹಿಂದೂ ಯಾತ್ರಿಕರು ಸಾವನ್ನಪ್ಪಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ (jammu and kashmir) ಪೋನಿ ಪ್ರದೇಶದ ತೆರ್ಯಾತ್ ಗ್ರಾಮದಲ್ಲಿ ಭಾನುವಾರ ಈ ಘಟನೆ ನಡೆದಿದೆ.

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿರುವ ಶಿವಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಮೇಲೆ ಭಾನುವಾರ ಉಗ್ರರ ದಾಳಿ ನಡೆದಿದೆ ಎನ್ನಲಾಗಿದೆ. ಗುಂಡಿನ ದಾಳಿಯ ಕಾರಣ ಬಸ್‌ ಕಂದಕಕ್ಕೆ ಉರುಳಿ ಬಿದ್ದಿದೆ ಎನ್ನಲಾಗಿದೆ.


ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಮೊದಲು ಮೂವರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ದಾಳಿ ನಡೆಯುತ್ತಿದ್ದಂತೆ ಬಸ್ ಆಳವಾದ ಕಮರಿಗೆ ಉರುಳಿ ಬಿದ್ದಿದೆ. ಇದರಿಂದಾಗಿ ಏಳು ಮಂದಿ ಮೃತ ಪಟ್ಟಿದ್ದು, ಒಟ್ಟು ಹತ್ತು ಮಂದಿ ಸಾವನ್ನಪ್ಪಿರುವುದಾಗಿ ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಮತ್ತು ಪೊಲೀಸ್, ಸೇನೆ ಮತ್ತು ಅರೆಸೇನಾ ಪಡೆಗಳು ಸ್ಥಳಕ್ಕೆ ಧಾವಿಸಿತು ಎಂದು ಪೋನಿ ಪ್ರದೇಶದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಬಸ್ಸಿನ ಮೇಲೆ ಹಲವು ಬಾರಿ ದಾಳಿ ನಡೆಸಲಾಗಿದ್ದು, ಸ್ಥಳದಲ್ಲಿ ಹಲವಾರು ಖಾಲಿ ಗುಂಡುಗಳು ಕೂಡ ಪತ್ತೆಯಾಗಿವೆ.


ಇದನ್ನೂ ಓದಿ: Road Accident : ಟೆಂಪೋ ಪಲ್ಟಿ; ಓವರ್‌ಟೇಕ್‌ ಧಾವಂತಕ್ಕೆ ಕಾರ್ಮಿಕ ಸಾವು, ಮತ್ತೋರ್ವ ಗಂಭೀರ

ಈ ಹಿಂದೆ 22 ಯಾತ್ರಾರ್ಥಿಗಳು ಸಾವನ್ನಪ್ಪಿದ್ದರು

ಉತ್ತರಪ್ರದೇಶದ ಹತ್ರಾಸ್‌ನಿಂದ ಬಂದ ಬಸ್ ಅಖ್ನೂರ್‌ನ ಆಳವಾದ ಕಮರಿಗೆ ಬಿದ್ದ ಪರಿಣಾಮ ಒಂಬತ್ತು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ 22 ಯಾತ್ರಾರ್ಥಿಗಳು ಪ್ರಾಣ ಕಳೆದುಕೊಂಡು 57 ಮಂದಿ ಗಾಯಗೊಂಡ ಕೆಲವು ದಿನಗಳ ಅನಂತರ ಈ ಘಟನೆ ನಡೆದಿದೆ.

ಅಖ್ನೂರ್‌ನಲ್ಲಿ ಬಸ್ ಅಪಘಾತದಿಂದ ಪ್ರಾಣಹಾನಿಯಿಂದ ದುಃಖವಾಗಿದೆ. ನನ್ನ ಬೆಂಬಲ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಜೊತೆಯಲ್ಲಿವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಬಸ್ ಅಪಘಾತದಿಂದಾಗಿ ಗಾಯಗೊಂಡವರಿಗೆ 50,000 ರೂ. ನೆರವನ್ನು ಘೋಷಿಸಿ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

Continue Reading
Advertisement
Modi 3.0 Cabinet
ದೇಶ7 mins ago

Modi 3.0 Cabinet: ನಡ್ಡಾ To ಎಚ್‌ಡಿಕೆ ;‌ ಮೋದಿ ಸಂಪುಟದಲ್ಲಿ ಸ್ಥಾನ ಪಡೆದ ಹೊಸ ಮುಖಗಳಿವು

Modi 3.0 Cabinet
ದೇಶ18 mins ago

Modi 3.0 Cabinet: 30 ಕ್ಯಾಬಿನೆಟ್‌ ದರ್ಜೆ, 5 ಸ್ವತಂತ್ರ, 36 ಸಂಸದರಿಗೆ ರಾಜ್ಯ ಖಾತೆ; ಇಲ್ಲಿದೆ ಕಂಪ್ಲೀಟ್‌ ಲಿಸ್ಟ್

V Somanna profile
ಪ್ರಮುಖ ಸುದ್ದಿ1 hour ago

V Somanna profile : ಅಂದು ಜನತಾ ಬಜಾರ್‌ನಲ್ಲಿ ಸೇಲ್ಸ್‌ಮ್ಯಾನ್‌; ಇಂದು ಕೇಂದ್ರ ಸಚಿವ! ವಿ ಸೋಮಣ್ಣ ರಾಜಕೀಯ ಹಾದಿ ಕುತೂಹಲಕರ

Terror Attack
ಕ್ರೈಂ1 hour ago

Terror Attack: ಕಾಶ್ಮೀರದಲ್ಲಿ ಹಿಂದೂ ಯಾತ್ರಿಗಳಿದ್ದ ಬಸ್‌ ಮೇಲೆ ಉಗ್ರರ ದಾಳಿ; 10 ಸಾವು

Ind vs pak
ಪ್ರಮುಖ ಸುದ್ದಿ2 hours ago

IND VS PAK : ಭಾರತ- ಪಾಕಿಸ್ತಾನ ಪಂದ್ಯ ಅರ್ಧ ಗಂಟೆ ತಡ; ಟಾಸ್ ಗೆದ್ದ ಪಾಕ್​ನಿಂದ ಫೀಲ್ಡಿಂಗ್ ಆಯ್ಕೆ

Narendra Modi
ದೇಶ2 hours ago

Narendra Modi: ರಾಜಕೀಯದಾಚೆ ಕವಿ, ಗಾಳಿಪಟ ಪ್ರೇಮಿ; ಮೋದಿ ಬಗ್ಗೆ ನಿಮಗೆ ಗೊತ್ತಿರದ 20 ಸಂಗತಿ ಇಲ್ಲಿವೆ

Bus Accident
ಕ್ರೈಂ2 hours ago

Bus Accident: ಪಂಕಜಾ ಮುಂಡೆ ಸೋತರೆ ಸಾಯುತ್ತೇನೆ ಎಂದು ವಿಡಿಯೊ ಮಾಡಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು!

HD Kumaraswamy
ಕರ್ನಾಟಕ2 hours ago

HD Kumaraswamy Profile: ಹರದನಹಳ್ಳಿಯಿಂದ ದೆಹಲಿವರೆಗೆ; ಕುಮಾರಸ್ವಾಮಿ ಸಾಗಿಬಂದ ದಾರಿ ಹೀಗಿದೆ

Narendra Modi
ದೇಶ3 hours ago

Narendra Modi: ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ; 3.0 ಯುಗಾರಂಭ!

Narendra Modi 3.0
ಪ್ರಮುಖ ಸುದ್ದಿ3 hours ago

Narendra Modi 3.0 : ಮೋದಿ ಪ್ರಮಾಣ ವಚನ; ಬಿರಿಯಾನಿ, ಹೋಳಿಗೆ ಹಂಚಿದ ಕರುನಾಡಿನ ಅಭಿಮಾನಿಗಳು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌