Horoscope Today | ಕನ್ಯಾ ರಾಶಿಯವರಿಗೆ ಉದ್ಯೋಗದಲ್ಲಿ ಶುಭ ಫಲ; ನಿಮ್ಮ ಭವಿಷ್ಯ ಹೀಗಿದೆ - Vistara News

ಪ್ರಮುಖ ಸುದ್ದಿ

Horoscope Today | ಕನ್ಯಾ ರಾಶಿಯವರಿಗೆ ಉದ್ಯೋಗದಲ್ಲಿ ಶುಭ ಫಲ; ನಿಮ್ಮ ಭವಿಷ್ಯ ಹೀಗಿದೆ

ಶುಭಕೃತ ನಾಮ ಸಂವತ್ಸರ, ಶರದ್ ಋತು, ಆಶ್ವಯುಜ ಮಾಸ, ಶುಕ್ಲ ಪಕ್ಷದ ಚತುರ್ಥಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (29-09-2022)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ದಕ್ಷಿಣಾಯನ, ಶರದ್ ಋತು, ಆಶ್ವಯುಜ ಮಾಸ, ಶುಕ್ಲ ಪಕ್ಷ

ತಿಥಿ: ಚತುರ್ಥಿ 24:08 ವಾರ: ಗುರುವಾರ
ನಕ್ಷತ್ರ: ವಿಶಾಖಾ 29:11 ಯೋಗ: ವಿಷ್ಕುಂಭ 24:54
ಕರಣ: ವಣಿಜ 12:49 ದಿನ ವಿಶೇಷ: ಶರನ್ನವರಾತ್ರಿ ಮಹೋತ್ಸವದ ನಾಲ್ಕನೇ ದಿನ. ಕೂಷ್ಮಾಂಡ ಅವತಾರ.
ವಿಶ್ವ ಹೃದಯ ದಿನ. ವರ್ಣ: ಹಳದಿ
ಅಮೃತಕಾಲ: ರಾತ್ರಿ 08 ಗಂಟೆ 39 ನಿಮಿಷದಿಂದ 10 ಗಂಟೆ 13 ನಿಮಿಷದವರೆಗೆ.

ಸೂರ್ಯೋದಯ: 06: 20     ಸೂರ್ಯಾಸ್ತ: 06: 20

ರಾಹುಕಾಲ :ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ: ಹೊಸದಾದ ಹಣಕಾಸಿನ ವ್ಯವಹಾರ ಲಾಭವೆಂದು ಕಂಡರು ಅಷ್ಟೇನೂ ಲಾಭ ಸಿಗುವುದಿಲ್ಲ. ಮಾನಸಿಕ ನೆಮ್ಮದಿ, ಒತ್ತಡದಿಂದ ಹೊರಬರಲು ಯೋಗ, ಧ್ಯಾನ ಮಾಡಿ. ಆಪ್ತ ಸಂಬಂಧಿಗಳೊಂದಿಗೆ ಮಾತನಾಡಿ ಸಂಬಂಧ ಬಲಪಡಿಸಿಕೊಳ್ಳುವಿರಿ. ಆರೋಗ್ಯ ಪರಿಪೂರ್ಣ. ಉದ್ಯೋಗದಲ್ಲಿ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಕುಟುಂಬದ ಆಪ್ತರೊಂದಿಗೆ ಪ್ರಯಾಣ ಮಾಡುವ ಸಾಧ್ಯತೆ. ನಿಮ್ಮ ವರ್ತನೆಯಿಂದ ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು. ಆರೋಗ್ಯ ಪರಿಪೂರ್ಣ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಉದ್ಯೋಗದಲ್ಲಿ ಇಂದು ಯಶಸ್ಸನ್ನು ಪಡೆಯುವಿರಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಆರೋಗ್ಯದ ಕಡೆಗೆ ಗಮನ ಹರಿಸಿ. ದಿನದ ಮಟ್ಟಿಗೆ ಖರ್ಚು. ಸಂಗಾತಿಯೊಂದಿಗೆ ವಿನಾಕಾರಣ ವಿವಾದವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಗೌಪ್ಯ ವಿಷಯಗಳು ಕಾರ್ಯದಲ್ಲಿ ಯಶಸ್ಸು ತರುವವರೆಗೆ ರಟ್ಟಾಗದಿರಲಿ. ಧರ್ಮ ಕಾರ್ಯಗಳಿಗೆ ಖರ್ಚು. ಉದ್ಯೋಗಿಗಳಿಗೆ ಒತ್ತಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಇತರರು ನಿಮಗೆ ನೀಡುವ ಸಲಹೆಗಳಿಗೆ ಮನ್ನಣೆ ನೀಡಿ,ಅವುಗಳನ್ನು ಪರಿಶೀಲಿಸಿ ಮುಂದುವರಿಯಿರಿ. ತಪ್ಪು ಹಾಗೂ ಆತುರದ ನಿರ್ಧಾರ ಕೈಗೊಂಡು ನಂತರ ಪಶ್ಚಾತಾಪ ಪಡುವುದು ಬೇಡ. ಒತ್ತಡಗಳಿಂದ ದೂರ ಇರಿ. ನಿಮ್ಮ ಕಾರ್ಯಕ್ಕೆ ಪ್ರಶಂಸೆ ದೊರೆಯಲಿದೆ. ಆರೋಗ್ಯ ಮಧ್ಯಮ. ಉದ್ಯೋಗದಲ್ಲಿ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ಸಿಂಹ: ಮನರಂಜನೆಗಾಗಿ ಖರ್ಚು ಮಾಡುವಿರಿ. ಅವಸರದಲ್ಲಿ ಯಾವ ತೀರ್ಮಾನವನ್ನೂ ತೆಗೆದುಕೊಳ್ಳುವುದು ಬೇಡ. ಬೇರೆಯವರಿಗೆ ಅಮೂಲ್ಯ ಸಲಹೆಗಳನ್ನು ನೀಡುವ ಸಾಧ್ಯತೆ. ಬಾಕಿ ಇರುವ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಉತ್ತಮ. ವ್ಯಪಾರ ವ್ಯವಹಾರಗಳಲ್ಲಿ ಮಧ್ಯಮ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಇತರರೊಂದಿಗೆ ಅನಾವಶ್ಯಕವಾಗಿ ವಾದಕ್ಕೆ ಇಳಿಯುವುದು ಬೇಡ. ಹಿಂದೆ ಪಡೆದಿರುವ ಸಾಲವನ್ನು ಮರಳಿಸುವ ಸಾಧ್ಯತೆ. ತಾಳ್ಮೆಯಿಂದ ವರ್ತಿಸಿ. ಕುಟುಂಬದ ಸಹಕಾರ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಹಾಗೂ ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ತುಲಾ: ದೀರ್ಘಕಾಲದ ಅನಾರೋಗ್ಯ ಉಲ್ಭಣಗೊಳ್ಳುವ ಸಾಧ್ಯತೆ. ಮಾನಸಿಕ ಒತ್ತಡ ಹೆಚ್ಚಾಗಲಿದೆ, ಆದಷ್ಟು ಧ್ಯಾನ, ಕ್ಷೇತ್ರ ದರ್ಶನ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವುದು ಒಳ್ಳೆಯದು. ಆಲಸ್ಯದಿಂದ ಕಾರ್ಯ ವಿಳಂಬವಾಗುವ ಸಾಧ್ಯತೆ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ನಿಮ್ಮ ಉದಾರತೆ ಸ್ವಭಾವ ಇಮ್ಮುಡಿ ಸಂತೋಷ ತರುವುದು. ಧರ್ಮ ಕಾರ್ಯಗಳಿಗೆ ಖರ್ಚು ಮಾಡುವ ಸಾಧ್ಯತೆ. ದೀರ್ಘಕಾಲದ ಕಾರ್ಯ ಯೋಜನೆ ಅಪಾರ ಯಶಸ್ಸನ್ನು ತಂದು ಕೊಡಲಿದೆ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಹಣಕಾಸಿನ ಹೂಡಿಕೆ ವ್ಯವಹಾರದಲ್ಲಿ ತೊಡುಗುವ ಮೊದಲು ಆಲೋಚಿಸಿ ಮುಂದೆ ಹೆಜ್ಜೆ ಇಡಿ. ಆರೋಗ್ಯ ಉತ್ತಮ. ಆದಷ್ಟು ಒತ್ತಡದಿಂದ ಮುಕ್ತರಾಗಿ. ಆಪ್ತರ, ಹಿರಿಯರ ಮಾರ್ಗದರ್ಶನ ಸಿಗಲಿದೆ. ಆಪ್ತರಿಂದ ಶುಭ ಸುದ್ದಿ ಕೇಳುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಕರ: ಇಂದು ನಿಮಗೆ ಸಂತೋಷ, ನೆಮ್ಮದಿ ಸಿಗುವ ದಿನ. ನೀವು ಹಿಡಿದ ಕಾರ್ಯದಲ್ಲಿ ಯಶಸ್ಸನ್ನು ಪಡೆಯುತ್ತೀರಿ. ಹಣಗಳಿಕೆಯೂ ಆಗಲಿದೆ. ಮನದಲ್ಲಿ ಗೊತ್ತಿಲ್ಲದೆಯೇ ಪ್ರೇಮಾಂಕುರವಾಗುವ ಸಾಧ್ಯತೆ. ಬಾಕಿ ಇರುವ ಕಾರ್ಯಗಳಲ್ಲಿ ಯಶಸ್ಸು ಕೀರ್ತಿ ಸಿಗುವುದು. ಆರೋಗ್ಯ ಉತ್ತಮ. ಆತುರದಲ್ಲಿ ಯಾವುದೇ ಸಂಕಲ್ಪ ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಅತಿಯಾದ ಕೆಲಸದಿಂದ ಒತ್ತಡ ತಂದುಕೊಳ್ಳುವುದು ಬೇಡ. ಆದಷ್ಟು ತಾಳ್ಮೆಯಿಂದ ವರ್ತಿಸಿ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ, ಆಸ್ತಿ ಖರೀದಿ ಲಾಭ ತರಲಿದೆ. ಕುಟುಂಬದವರ ಬೆಂಬಲ ಸಿಗಲಿದೆ. ಉದ್ಯೋಗಿಗಳಿಕೆ ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮೀನ: ನಿಮ್ಮ ಅಸಡ್ಡೆ ವರ್ತನೆಯಿಂದ ಹಿರಿಯರ ಮನಸ್ಸಿಗೆ ನೋವು ತರುವ ಸಾಧ್ಯತೆ. ಆರೋಗ್ಯ ಮಧ್ಯಮ. ಆರ್ಥಿಕ ಪ್ರಗತಿ. ಉದ್ಯೋಗಿಗಳಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು. ಯಾರೊಂದಿಗೂ ಅತಿಯಾದ ಸಲುಗೆ ಒಳ್ಳೆಯದಲ್ಲ. ನಿಮ್ಮ ಬಗ್ಗೆ ಟೀಕೆಗಳು ಶುರು ಆಗಬಹುದು ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಮಧ್ಯಮ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ | Navaratri 2022 | ಎರಡನೇ ದಿನ ಆರಾಧಿಸಲ್ಪಡುವ ದೇವಿ ಯಾರು? ಯಾವ ವರ್ಣದ ವಸ್ತ್ರ ಶ್ರೇಷ್ಠ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಪ್ರಮುಖ ಸುದ್ದಿ

Actor Darshan : ನಟ ದರ್ಶನ್ ಬಿಡುಗಡೆಗೆ ಮುಹೂರ್ತ ಫಿಕ್ಸ್; ಜನ್ಮ ಜಾತಕದ ಪ್ರಕಾರ ಶುಭ ಸಮಯ ಶುರು

Actor Darshan : ದರ್ಶನ್ ಬಿಡುಗಡೆ ಬಗ್ಗೆ ಜ್ಯೋತಿಷ್ಯ ಹೇಳುತ್ತಿರುವಾಗಲೇ ತಾಯಿ ಮೂಕಾಂಬಿಕಾ ದೇವಿ ಬಲಗಡೆ ಹೂ ಪ್ರಸಾದ ಕೊಟ್ಟಿದೆ. ದೇವಿಯ ಹೂ ಪ್ರಸಾದದಿಂದ ದರ್ಶನ್ ಬಿಡುಗಡೆಯನ್ನು ಜ್ಯೋತಿಷಿ ಡಾ ಲಕ್ಷ್ಮೀಕಾಂತ ಆಚಾರ್ಯ ದೃಢೀಕರಿಸಿದ್ದಾರೆ.

VISTARANEWS.COM


on

By

Actor Darshan
Koo

ತುಮಕೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ (Actor Darshan) ಆಶ್ವೀಜ-ಕಾರ್ತಿಕ ಮಾಸದ ಮಧ್ಯ ಭಾಗದಲ್ಲಿ ಬಿಡುಗಡೆ ಆಗುತ್ತಾರೆ ಎಂದು ಸ್ಫೋಟಕ ಭವಿಷ್ಯವನ್ನು ಜ್ಯೋತಿಷಿ ಡಾ.ಲಕ್ಷ್ಮಿಕಾಂತ ಆಚಾರ್ಯ ನುಡಿದಿದ್ದಾರೆ. 2027ಕ್ಕೆ ಶನಿ ದಶಾಬುಕ್ತಿ ಪ್ರಾರಂಭವಾಗಲಿದ್ದು, ದರ್ಶನ್ ರಾಜಕೀಯ ಜೀವನ ತುಂಬಾ ಚೆನ್ನಾಗಿರಲಿದೆ. ತುಮಕೂರು ಸನಿಹದ ಚಿನಗ ಗ್ರಾಮದಲ್ಲಿ ನೆಲೆಸಿರುವ ಶ್ರೀ ಮೂಕಾಂಬಿಕಾ ದೇವಿ ಹೂ ಪ್ರಸಾದ ಕೊಡುವ ಮೂಲಕ ದರ್ಶನ್ ಬಿಡುಗಡೆಗೆ ಮುನ್ಸೂಚನೆ ಕೊಟ್ಟಿದ್ದಾಳೆ.

ಮೂಕಾಂಬಿಕಾ ದೇವಿ ಆರಾಧಕರು, ಜ್ಯೋತಿಷಿ ಡಾ. ಲಕ್ಷ್ಮೀಕಾಂತ ಆಚಾರ್ಯ ಅವರು ಈ ಬಗ್ಗೆ ಮಾತಾನಾಡಿದ್ದಾರೆ. ದರ್ಶನ್ ಬಿಡುಗಡೆ ಬಗ್ಗೆ ಜ್ಯೋತಿಷ್ಯ ಹೇಳುತ್ತಿರುವಾಗಲೇ ತಾಯಿ ಮೂಕಾಂಬಿಕಾ ದೇವಿ ಬಲಗಡೆ ಹೂ ಪ್ರಸಾದ ಕೊಟ್ಟಿದೆ. ದೇವಿಯ ಹೂ ಪ್ರಸಾದದಿಂದ ದರ್ಶನ್ ಬಿಡುಗಡೆ ದೃಢೀಕರಿಸಿದ್ದಾರೆ. ಕಾರ್ತಿಕ್ ಮಾಸದ ಅಂತ್ಯದೊಳಗೆ ನಟ ದರ್ಶನ್ ಬಿಡುಗಡೆ ಆಗುತ್ತಾರೆ. ದರ್ಶನ್ ಅವರ ಜನ್ಮ ಜಾತಕದ ಪ್ರಕಾರ ಶುಭ ಸಮಯ ಪ್ರಾರಂಭವಾಗಿದೆ. ದೇವಿಯ ಆಶೀರ್ವಾದ ಸಂಪೂರ್ಣ ಇದ್ದು, ಎಲ್ಲವೂ ಶುಭ ಆಗುತ್ತದೆ. ದರ್ಶನ್‌ರ ದಶಾಬುಕ್ತಿಗಳು ಅಂತ್ಯವಾಗಿ, ಶುಭ ದಶಾಬುಕ್ತಿಗಳು ಪ್ರಾರಂಭವಾಗಿವೆ. ಅಭಿಮಾನಿಗಳಿಗೆ ಯಾವುದೇ ರೀತಿಯ ಆತಂಕ ಬೇಡ. ಪೂಜೆ-ಪುನಸ್ಕಾರ ಎಲ್ಲವನ್ನೂ ನಡೆಸಿಕೊಂಡು ಬಂದಿರುವುದರಿಂದ ಆ ದೇವಿಯ ಅನುಗ್ರಹ ಇರುತ್ತದೆ. ಇದರಲ್ಲಿ ಯಾವುದೇ ರೀತಿಯ ಅನುಮಾನ ಬೇಡ ಎಂದು ಜ್ಯೋತಿಷಿ ಡಾ.ಲಕ್ಷ್ಮೀಕಾಂತ ಆಚಾರ್ಯ ತಿಳಿಸಿದ್ದಾರೆ.

ಈ ದೇವಿ ಹೂ ಪ್ರಸಾದ ಕೊಟ್ಟರೆ ಇಲ್ಲಿವರೆಗೂ ಯಾವುದೂ ಕೂಡ ಸುಳ್ಳಾಗಿಲ್ಲ. ಸಾಕಷ್ಟು ರೀತಿಯಲ್ಲಿ ಒಳ್ಳೆಯದಾಗಿದೆ ಎಂದು ಭಕ್ತಾಧಿಗಳು ಹೇಳಿಕೊಂಡು ಬಂದಿದ್ದಾರೆ. ಇದಕ್ಕೆ ಸಾಕಷ್ಟು ಉದಾಹರಣೆ ಕೂಡ ಇದೆ. ನಟ ದರ್ಶನ್‌ಗೆ ಇಷ್ಟು ದಿವಸ ಜನ್ಮ‌ ಜಾತಕದಲ್ಲಿ ಗುರುದಶಾಬುಕ್ತಿ ನಡೆಯುತ್ತಿತ್ತು. 2027ಕ್ಕೆ ಶನಿ ದಶಾಬುಕ್ತಿ ಪ್ರಾರಂಭವಾಗಲಿದೆ. ದರ್ಶನ್ ರಾಜಕೀಯ ಜೀವನ ತುಂಬಾ ಚೆನ್ನಾಗಿರಲಿದೆ. 2027ರ ನಂತರ ರಾಜಕೀಯದಲ್ಲಿ ಉನ್ನತ ಸ್ಥಾನ ಪಡೆಯುತ್ತಾರೆ. ಹಾಗಾಗಿ ಇದರಲ್ಲಿ ಯಾವುದೇ ಅನುಮಾನ ಬೇಡ. 2027ರ ನಂತರ ದರ್ಶನ್ ಜೀವನ ಶೈಲಿ ಬದಲಾಗಲಿದೆ. ಈಗ 2024ರ ಅಂತ್ಯದಲ್ಲಿ ಇದ್ದೇವೆ, 2025-2026ರ ನಂತರ 2027ರಿಂದ ಒಳ್ಳೆಯ ಸಮಯ ಪ್ರಾರಂಭವಾಗುತ್ತದೆ. ಒಳ್ಳೆಯ ರೀತಿಯ ಜೀವನ ಕಲ್ಪಿಸಿಕೊಡುತ್ತಾಳೆ. ರಾಜಕೀಯ ಪ್ರವೇಶದ ಯೋಗ ಕೂಡ ದರ್ಶನ್‌ಗೆ ಇದೆ. ದಶಾಬುಕ್ತಿಗಳು ಮನುಷ್ಯನ ಜೀವನ ಶೈಲಿಯನ್ನೇ ಬದಲಾಯಿಸಿ ಬಿಡುತ್ತದೆ.

ಒಳ್ಳೆಯದು ಪ್ರಾರಂಭ ಆಗಬೇಕು ಅಂದಾಗ ಕೆಟ್ಟದು ನಮ್ಮ‌ ಕಣ್ಣಿಗೆ ಯಾವುದು ಕಾಣಿಸಲ್ಲ. ದೇವಿಯು ಆಶೀರ್ವಾದ ಮಾಡಿರುವುದರಿಂದ ಅವರ ಜೀವನ ಸುಗಮವಾಗಿ ನಡೆಯುತ್ತದೆ. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಚಂಡಿಕಾ ಯಾಗ ಮಾಡಿಸಿದ್ದರು. ಆದಾದ ನಂತರ ಕುಮಾರಸ್ವಾಮಿ ಮುಖ್ಯಮಂತ್ರಿ ಆದರು. ಕ್ಷೇತ್ರಕ್ಕೆ ಸಿರಾದ ದಿವಂಗತ ಸತ್ಯನಾರಾಯಣ್, ವಾಸು, ಬೆಮೆಲ್ ಕಾಂತರಾಜು, ಗೌರಿಶಂಕರ್, ಸುರೇಶ್‌ಗೌಡ ಹಾಗೂ ಪರಮೇಶ್ವರ, ಮುದ್ದಹನುಮೇಗೌಡ ಸಾಕಷ್ಟು ರೀತಿಯ ರಾಜಕೀಯ ವ್ಯಕ್ತಿಗಳು ದೇವಿಯ ಆಶೀರ್ವಾದ ಪಡೆದಿದ್ದಾರೆ. ಎಲ್ಲರಿಗೂ ಒಳ್ಳೆಯದಾಗಿರುವ ನಿದರ್ಶನಗಳಿವೆ ಎಂದು ತುಮಕೂರಿನಲ್ಲಿ ಜ್ಯೋತಿಷಿ ಡಾ. ಲಕ್ಷ್ಮೀಕಾಂತ ಆಚಾರ್ಯ ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿಕ್ಕೋಡಿ

Physical Abuse: ಬಾಲಕಿಯನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಅತ್ಯಾಚಾರವೆಸಗಿ ಕೊಂದಿದ್ದ ನೀಚನಿಗೆ ಗಲ್ಲುಶಿಕ್ಷೆ ವಿಧಿಸಿದ ಕೋರ್ಟ್‌

Physical Abuse: ಬಾಲಕಿಯನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಅತ್ಯಾಚಾರವೆಸಗಿ ಕೊಂದಿದ್ದ ನೀಚನಿಗೆ ಕೋರ್ಟ್‌ ಗಲ್ಲುಶಿಕ್ಷೆ ಹಾಗೂ ದಂಡವನ್ನು ವಿಧಿಸಿದೆ.

VISTARANEWS.COM


on

By

ಸಾಂದರ್ಭಿಕ ಚಿತ್ರ
Koo

ಚಿಕ್ಕೋಡಿ: ಬಾಲಕಿಯ ಮೇಲೆ ಎರಗಿ ತನ್ನ ಕಾಮದಾಸೆಯನ್ನು (Physical Abuse) ತೀರಿಸಿಕೊಂಡು ಕೊಂದು (murder case) ಹಾಕಿದ್ದ ಕಾಮುಕನಿಗೆ ಗಲ್ಲುಶಿಕ್ಷೆ ಪ್ರಕಟವಾಗಿದೆ. ಬೆಳಗಾವಿಯ ಪೋಕ್ಸೊ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಆದೇಶ ಹೊರಡಿಸಿದೆ. ಆರೋಪಿ ಉದ್ದಪ್ಪ ರಾಮಪ್ಪ ಗಾಣಿಗೇರ(32) ಎಂಬಾತನಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.

2017ರಲ್ಲಿ ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಅಪ್ರಾಪ್ತೆ ಮೇಲೆ ತನ್ನ‌ ಕಾಮದ ಕಣ್ಣಿಟ್ಟಿದ್ದ ಕಾಮುಕ ಉದ್ದಪ್ಪ ರಾಮಪ್ಪ , ಯಾರು ಇಲ್ಲದೆ ಇರುವಾಗ ಬಾಲಕಿಗೆ ಚಾಕೋಲೇಟ್ ಆಸೆ ತೋರಿಸಿದ್ದ. ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಚಾಕೋಲೇಟ್‌ ಕೊಡಿಸಿ ಪುಸಲಾಯಿಸಿದ್ದ ಕೀಚಕ ಬಳಿಕ ಕಬ್ಬಿನ ಗದ್ದೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದ. ತನ್ನ ಕೃತ್ಯ ಎಲ್ಲಿ ಹೊರಬರುತ್ತೋ ಎಂದು ನಂತರ ಮಗುವಿನ ಕಣ್ಣು, ಮೂಗಿಗೆ ಮಣ್ಣು ಹಾಕಿ ಕೊಲೆ ಮಾಡಿದ್ದ.

Physical Abuse
Physical Abuse

ಪ್ರಕರಣದ ಕೂಲಂಕುಷ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಅಪರಾಧಿಗೆ ಗಲ್ಲು ಶಿಕ್ಷೆ ಮತ್ತು 45 ಸಾವಿರ ದಂಡ ವಿಧಿಸಿ ಆದೇಶಿಸಿದೆ. ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಬಾಲಕಿ ಪೋಷಕರಿಗೆ 3 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಹಾರೂಗೇರಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಇದಾಗಿದೆ.

ರಾಯಚೂರಿನಲ್ಲಿ ಮನೆ ಮಾಲೀಕಿಯನ್ನು ಕೊಂದ ಬಾಡಿಗೆದಾರ

ರಾಯಚೂರಿನಲ್ಲಿ ಬಾಡಿಗೆದಾರನಿಂದ ಮಹಿಳೆಯೊಬ್ಬರ ಕೊಲೆ ಆಗಿದೆ. ರಾಯಚೂರು ನಗರದ ಉದಯ್ ನಗರದಲ್ಲಿ ಘಟನೆ ನಡೆದಿದೆ. ಶೋಭಾ ಪಾಟೀಲ್(60) ಕೊಲೆಯಾದವರು. ಇದೇ ಸೆಪ್ಟೆಂಬರ್25 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೊಲೆ ಮಾಡಿ ಸ್ವ ಗ್ರಾಮದಲ್ಲಿ ಆರೋಪಿ ತಲೆಮರೆಸಿಕೊಂಡಿದ್ದ. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಆರೋಪಿ ಶಿವು ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ವೃದ್ಧೆ ಶೋಭಾ ಮನೆಯಲ್ಲಿ ಶಿವು ಬಾಡಿಗೆಗೆ ಇದ್ದ. ಬೆಂಗಳೂರಿನಲ್ಲಿ ಮಕ್ಕಳ ಜತೆ ಇದ್ದ ಶೋಭಾ ಇತ್ತೀಚೆಗೆ ರಾಯಚೂರಿಗೆ ಬಂದಿದ್ದರು. ಮನೆ‌ ಖಾಲಿ ಮಾಡುವಂತೆ ಆರೋಪಿ ಶಿವುಗೆ ತಿಳಿಸಿದ್ದರು. ಘಟನಾ ದಿನ ಶೋಭಾರ ಮನೆಗೆ ಬಂದಿದ್ದ. ಮಲಗಿದ್ದ ವೃದ್ಧೆಯನ್ನು ಉಸಿರುಗಟ್ಟಿಸಿ ಕೊಂದು, ಚಿನ್ನಾಭರಣ, ಫೋನ್ ಕದ್ದೊಯ್ದಿದ್ದ. ಬಳಿಕ ತಾನೇನು ಮಾಡಿಲ್ಲ ಎಂಬಂತೆ ಮೃತ ಮಹಿಳೆ ಕುಟುಂಬಸ್ಥರ ಜತೆಗೆ ಓಡಾಡಿಕೊಂಡಿದ್ದ. ಶೋಭಾ ಅಂತ್ಯಕ್ರಿಯೆ ಬಳಿಕ ಆಕೆ ಚಿನ್ನಾಭರಣ ಕಾಣದೇ ಇದ್ದಾಗ ಪೊಲೀಸರಿಗೆ ದೂರು ನೀಡಿದ್ದರು. ಸಿಸಿಟಿವಿ ಒಂದರಲ್ಲಿ ಆತ ಓಡಾಡಿದ್ದ ದೃಶ್ಯ ಸೆರೆ ಆಗಿತ್ತು. ಅದರ ಆಧಾರದಲ್ಲಿ ಆರೋಪಿ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ಕೃತ್ಯ ಬಯಲಾಗಿದೆ. ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Street Dogs : ಬೀದಿನಾಯಿಗಳ ಹಸಿವು ನೀಗಿಸಲು ಮುಂದಾದ ಬಿಬಿಎಂಪಿ; ಸಾರ್ವಜನಿಕರು ಕೈ ಜೋಡಿಸುವಂತೆ ಮನವಿ

Street Dogs‌ : ಬೀದಿ ನಾಯಿಗಳಿಗೆ ಆಹಾರ ವ್ಯವಸ್ಥೆ ಮಾಡಲು ಹೊಸ ಯೋಜನೆ ಜಾರಿಗೆ ಕ್ರಮವಹಿಸಲಾಗುವುದು ಎಂದು ಬಿಬಿಎಂಪಿ ಪಶುಸಂಗೋಪನಾದ ವಿಶೇಷ ಆಯುಕ್ತ ಸುರೋಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ.

VISTARANEWS.COM


on

By

BBMP plans to make arrangements for food in areas where stray dogs do not get food
Koo

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ (Street dogs) ಆಹಾರ ಸಿಗದಂತಹ ಪ್ರದೇಶದಲ್ಲಿ ಆಹಾರದ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಬಿಬಿಎಂಪಿಯ ಪಶುಸಂಗೋಪನಾ ವಿಭಾಗದಿಂದ ಪ್ರಾಯೋಗಿಕವಾಗಿ ಹೊಸ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಪಶುಸಂಗೋಪನಾ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ.

ಬೀದಿನಾಯಿಗಳ ಅಟ್ಯಾಕ್‌ಗೆ ಕಾರಣ ಹಸಿವು?

ನಗರದಲ್ಲಿ ಅನೇಕ ಸ್ಥಳಗಳಲ್ಲಿ ಸಮುದಾಯ ಪ್ರಾಣಿಗಳಿಗೆ ದಿನಕ್ಕೆ ಒಂದು ಹೊತ್ತಿನ ಆಹಾರವೂ ಸಹ ಸಿಗದಿರುವುದು ಪಾಲಿಕೆಯ ಗಮನಕ್ಕೆ ಬಂದಿದೆ. ಇದರಿಂದ ಬೀದಿ ನಾಯಿಗಳು ಆಕ್ರಮಣಕಾರಿಯಾಗಿ ವರ್ತಿಸುತ್ತವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗೆ ಬೀದಿ ನಾಯಿಗಳು ಸಾರ್ವಜನಿಕರಿಗೆ ಕಚ್ಚುವ ಪ್ರಕರಣಗಳು ಕಂಡಬರುತ್ತಿದ್ದು, ಅದನ್ನು ನಿಂಯಂತ್ರಿಸಬೇಕಿದೆ. ಆದ್ದರಿಂದ ನಾಯಿಗಳಿಗೆ ಸರಿಯಾಗಿ ಆಹಾರ ಸಿಗುವಂತೆ ಮಾಡಲು ಪಾಲಿಕೆಯು ಪ್ರಾಣಿ ಪಾಲಕರು, ಪೌರಕಾರ್ಮಿಕರು, ಹೋಟೆಲ್ ಮಾಲಿಕರು, ಆರೋಗ್ಯ ವಿಭಾಗದ ಸಿಬ್ಬಂದಿ ಹಾಗೂ ಇತರೆ ಆಸಕ್ತರೊಂದಿಗೆ ಸಮನ್ವಯ ಸಾಧಿಸಿ ಇದನ್ನು ಮಾಡಲಾಗುತ್ತಿದೆ.

BBMP plans to make arrangements for food in areas where stray dogs do not get food
BBMP plans to make arrangements for food in areas where stray dogs do not get food

ಯೋಜನೆಯ ಜಾರಿ ವಿಧಾನ

ಪ್ರಾಣಿಗಳಿಗೆ ಆಹಾರ ನೀಡುವ ಪ್ರಾಣಿ ಪ್ರಿಯರ ನೋಂದಣಿಗೆ ಅವಕಾಶ ಕಲ್ಪಿಸಲಾಗುವುದು. ನಂತರ ಪೌರ ಕಾರ್ಮಿಕರು ಮತ್ತು ಖಾಸಗಿ ಹೋಟೆಲ್ ಮಾಲಿಕರನ್ನು ಇದರಲ್ಲಿ ಪಾಲ್ಗೊಳ್ಳುವಂತೆ ಮಾಡಿ ಆಹಾರ ನೀಡುವ ಸ್ಥಳಗಳನ್ನು ಗುರುತಿಸಿ ಬೀದಿ ನಾಯಿಗಳಿಗೆ ಸರಿಯಾಗಿ ಆಹಾರ ಸಿಗುವಂತೆ ಮಾಡುವುದು. ಅದಾದ ಬಳಿಕ ಈ ಅಭಿಯಾನವನ್ನು ಪ್ರಾಯೋಗಿಕವಾಗಿ ಆಯ್ದ ಸ್ಥಳಗಳಲ್ಲಿ ಅನುಷ್ಟಾನಗೊಳಿಸಿ ಎಲ್ಲಾ ಪಾಲುದಾರರ ಪ್ರತಿಕ್ರಿಯೆಯನ್ನು ಸಂಗ್ರಹಿಸಲಾಗುವುದು. ಯೋಜನೆ ಯಶಸ್ವಿಯಾದಲ್ಲಿ ಪಾಲಿಕೆಯ ಎಲ್ಲಾ ವಾರ್ಡ್ಗಳಲ್ಲಿ ಈ ಅಭಿಯಾನವನ್ನು ಅನುಷ್ಟಾನಗೊಳಿಸುವುದು ಎಂದು ಆಯಕ್ತರು ಮಾಹಿತಿ ನೀಡಿದ್ದಾರೆ.

ವಿವರವಾದ ಯೋಜನೆಯ ಶೀಘ್ರ ಬಿಡುಗಡೆ:

ಸಮುದಾಯದ ಪ್ರಾಣಿಗಳಿಗೆ ಉತ್ತಮ ಸಹಾಯ ಮಾಡಲು ಕೇರ್‌ಟೇಕರ್‌ಗಳನ್ನು ಬಲಪಡಿಸುವುದರ ಜೊತೆಗೆ, ಪ್ರಾಣಿಗಳ ಸಂರಕ್ಷಣೆ ಕಾರ್ಯಾಚರಣೆ ಹಾಗೂ ಶಸ್ತ್ರಚಿಕಿತ್ಸಾ ನಂತರದ ಆರೈಕೆ, ವೈದ್ಯಕೀಯ ಮೇಲ್ವಿಚಾರಣೆಗೆ ಅಗತ್ಯವಿರುವ ಸಂದರ್ಭಗಳಲ್ಲಿ ಪ್ರತ್ಯೇಕ ವಲಯಗಳಲ್ಲಿ ರಕ್ಷಣೆ ಮತ್ತು ಚೇತರಿಸಿಕೊಳ್ಳುವಿಕೆಯನ್ನು ಬೆಂಬಲಿಸುವ ಸಾಮರ್ಥ್ಯವನ್ನು ಪಾಲಿಕೆ ನಿರ್ಮಿಸುತ್ತಿದೆ. ಈ ಕುರಿತು ವಿವರವಾದ ಯೋಜನೆಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು.

ಪ್ರಾಣಿ ಪಾಲಕರು ನೋಂದಣಿ ಮಾಡಿಕೊಳ್ಳಿ:

ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಯಿಗಳಿಗೆ ಆಹಾರ ನೀಡುತ್ತಿರುವ ಪ್ರಾಣಿ ಪಾಲಕರು ಪಾಲಿಕೆ ಪಶುಸಂಗೋಪನಾ ಇಲಾಖೆಯಿಂದ ನೊಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ಪಶಸಂಗೋಪನೆ ವಿಬಾಗದ ಸಾಮಾಜಿಕ ಜಾಲತಾಣವಾದ X, Facebook ಮತ್ತು Instagram (@bbmp_animalhusbandry) ಪುಟಗಳಲ್ಲಿ ನೋಂದಣಿಯ ಮಾಡಿಕೊಳ್ಳುವ ಲಿಂಕ್ ಅನ್ನು ನೀಡಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಈ ಯೋಜನೆಯನ್ನು ಯಶಸ್ವಿಗೊಳಿಸಲು ಪಾಲಿಕೆ ಜೊತೆ ಕೈಜೋಡಿಸುವಂತೆ ಎಲ್ಲಾ ಸಮುದಾಯ ಪ್ರಾಣಿ ಪಾಲಕರಲ್ಲಿ ಕೋರಲಾಗಿದೆ.

ನೋಂದಣಿ ಕಡ್ಡಾಯವಲ್ಲ:

ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ಪಾಲಕರ ನೋಂದಣಿಯು 2ನೇ ಅಕ್ಟೋಬರ್ 2024 ರಿಂದ ಪ್ರಾರಂಭವಾಗಲಿದ್ದು, 31ನೇ ಅಕ್ಟೋಬರ್ 2024ರವರೆಗೆ ನೊಂದಣಿಯಾಗಲು ಅವಕಾಶವಿರುತ್ತದೆ. ಪ್ರಾಣಿ ಪಾಲಕರ ನೋಂದಣಿ ಕಡ್ಡಾಯವಾಗಿರುವುದಿಲ್ಲ. ಈ ನೋಂದಣಿಯು ಅಭಿಯಾನವನ್ನು ಯೋಜಿಸಲು ಮತ್ತು ಅದನ್ನು ಸಮರ್ಥನೀಯವಾಗಿ ಡೇಟಾಬೇಸ್ ರಚಿಸುವ ದೃಷ್ಟಿಯಿಂದ ಪಾಲಿಕೆ ಈ ಕ್ರಮಕ್ಕೆ ಮುಂದಾಗಿದೆ.

ಪಾಲಿಕೆ ಜೊತೆ ಕೈ ಜೋಡಿಸಿ:

ಬೀದಿ ನಾಯಿಗಳಿಗೆ ಆಹಾರ ನೀಡುವ ಅಭಿಯಾನದ ಮೂಲಕ, ನಾಗರೀಕರಲ್ಲಿ ಸಹಾನುಭೂತಿಯ ಅರ್ಥವನ್ನು ಹಾಗೂ ಪ್ರಾಣಿಗಳೊಂದಿಗಿನ ಸಹಬಾಳ್ವೆಯ ಅನುಕೂಲವನ್ನು ಮನವರಿಕೆ ಮಾಡಲು Coexisting Champion ಆಗಿ ಪಾಲಿಕೆ ಜೊತೆ ಕೈ ಜೋಡಿಸಲು ಕೋರುತ್ತಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಸ್ಥಳೀಯರು ತಮ್ಮ ಪ್ರದೇಶದಲ್ಲಿ ಸಮುದಾಯದ ಪ್ರಾಣಿಗಳ ಆರೈಕೆಯ ಸಾಮಾಜಿಕ ಕಾಳಜಿಯ ಕಾರ್ಯವನ್ನು ಕೈಗೊಳ್ಳಲು ಪ್ರೋತ್ಸಾಹಿಸಲು ಕೋರಿದೆ.

1533ಗೆ ಕರೆ ಮಾಡಿ:

ಬೀದಿ ನಾಯಿಗಳಿಗೆ ಸಂಬಂಧಿಸಿದಂತೆ ಪಾಲಿಕೆಯ ಪಶಸಂಗೋಪನಾ ವಿಭಾಗದಿಂದ ಸಾಕಷ್ಟು ಉಪ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ನಾಗರೀಕರಿಗೆ ಅಗತ್ಯವಿರುವ ಯಾವುದೇ ಸಹಾಯಕ್ಕಾಗಿ ಬಿಬಿಎಂಪಿ ಸಹಾಯವಾಣಿ ಸಂಖ್ಯೆಯಾದ 1533 ಗೆ ಸಂಪರ್ಕಿಸಬಹುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

CM Siddaramaiah : ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ದ್ವಿಸದಸ್ಯ ಪೀಠಕ್ಕೆ ಅಪೀಲು ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ತೀರ್ಮಾನ

VISTARANEWS.COM


on

By

Cm Siddaramaiah
Koo

ಬೆಂಗಳೂರು: ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನೆ ಮಾಡಿ ದ್ವಿಸದಸ್ಯ ಪೀಠಕ್ಕೆ ಅಪೀಲು ಅರ್ಜಿ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತೀರ್ಮಾನ ಮಾಡಿದ್ದಾರೆ. ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ದೆಹಲಿಯಿಂದ ವಾಪಸ್‌ ಆಗಿದ್ದು, ಎರಡು ಪ್ರತ್ಯೇಕ ಅಪೀಲು ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ. ಸಿಎಂ ಪರ ವಕೀಲರು ಸೋಮವಾರ ದ್ವಿಸದಸ್ಯ ಪೀಠದ ಮುಂದೆ ಅರ್ಜಿ ಸಲ್ಲಿಕೆ ಮಾಡಲಿದ್ದಾರೆ. ಏಕಸದಸ್ಯ ಪೀಠದ ಆದೇಶದಲ್ಲಿ ಕೆಲ ವಿಚಾರಗಳ ಬಗ್ಗೆ ಅಪೀಲು ಸಲ್ಲಿಸಲಿದ್ದಾರೆ.

ಮತ್ತೊಂದು ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ವಿರುದ್ಧ ಅಪೀಲು ಅರ್ಜಿ ಅಲ್ಲಿಸಲಿದ್ದಾರೆ. ಜುಲೈ ಒಂದು 2024 ರಿಂದ ಹೊಸ ಕಾನೂನು ಬಂದಿದೆ. ಬಿಎನ್ಎಸ್ಎಸ್ ಅಡಿಯಲ್ಲಿ ವಿಚಾರಣೆ ಆಗಬೇಕು. ಹಳೆಯ ಸಿಪಿಆರ್ಪಿ ಐಪಿಸಿಯಲ್ಲಿ ಆರೋಪಿಗೆ ರಕ್ಷಣೆ ಕಡಿಮೆ ಇದೆ. ಹೀಗಾಗಿ ಬಿಎನ್ಎಸ್ಎಸ್ ಅಡಿಯಲ್ಲಿ ತನಿಖೆಗೆ ಆದೇಶ ಮಾಡಬೇಕಿತ್ತು. ಆದರೆ ನ್ಯಾಯಲಯದ ಹಳೆಯ ಕಾನೂನು ಪ್ರಕಾರ ಮಾಡಿರುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರ ವಕೀಲರು ಅಪೀಲು ಸಲ್ಲಿಕೆ ಮಾಡಲಿದ್ದಾರೆ. ಅರ್ಜಿ ತೀರ್ಮಾನ ಆಗುವವರೆಗೂ ಮುಡಾ ತನಿಖೆಗೆ ಸಿದ್ದರಾಮಯ್ಯ ತಡೆ ಕೋರಲಿದ್ದಾರೆ.

ಸಿಎಂ ವಿರುದ್ಧದ ತನಿಖೆಗೆ ನಾಲ್ಕು ತಂಡಗಳ ರಚನೆ

ಸಿದ್ದರಾಮಯ್ಯ ವಿರುದ್ಧದ ಎಫ್ಐಆರ್ ದಾಖಲು‌ ಹಿನ್ನೆಲೆಯಲ್ಲಿ ತನಿಖೆಗೆ ನಾಲ್ಕು ತಂಡಗಳ ರಚನೆ ಮಾಡಲಾಗಿದೆ.
ಎಸ್‌ಪಿ ಉದೇಶ್, ಡಿವೈಎಸ್‌ಪಿ ಎಸ್.ಮಾಲತೀಶ್, ಚಾಮರಾಜನಗರ ಡಿವೈಎಸ್‌ಪಿ ಮ್ಯಾಥ್ಯೂ ಥಾಮಸ್ ಹಾಗೂ ಇನ್‌ಸ್ಪೆಕ್ಟರ್‌ ಒಳಗೊಂಡ ತನಿಖಾ ತಂಡ ಇದಾಗಿದೆ. ಎಲ್ಲಾ ಅಧಿಕಾರಿಗಳ ಜತೆ ಎಸ್‌ಪಿ ಸಭೆ ನಡೆಸಿದ್ದು, ಕೋರ್ಟ್‌ನಿಂದ ನೀಡಿರುವ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ದೂರಿನಲ್ಲಿ ಅಡಕವಾಗಿರುವ ದಾಖಲೆಗಳನ್ನು ಇನ್ನು ಒಂದೆರಡು ದಿನಗಳ ಕಾಲ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಪ್ರತಿಯೊಬ್ಬ ಅಧಿಕಾರಿಗಳ ಕೆಲಸವನ್ನು ವಿಂಗಡಣೆ ಮಾಡಿಕೊಳ್ಳಲಿದ್ದಾರೆ. ಸದ್ಯಕ್ಕೆ ಎಲ್ಲ ದಾಖಲೆಗಳನ್ನು ಓದಿಕೊಂಡು ಪಾಯಿಂಟ್ಸ್ ಮಾಡಿಕೊಳ್ಳುತ್ತಿದ್ದಾರೆ.

ಏನಿದು ಮುಡಾ ಪ್ರಕರಣ?

ಮುಡಾ ನಿವೇಶನ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಟಿ.ಜೆ. ಅಬ್ರಾಹಂ, ರಾಜ್ಯಪಾಲರಿಗೆ ದೂರು ನೀಡಿದ್ದರು. ಇದೇ ದೂರು ಸಿಎಂ ಸಿದ್ದರಾಮಯ್ಯನವರಿಗೆ ಸಂಕಷ್ಟ ತಂದಿತ್ತು. ಟಿ.ಜೆ. ಅಬ್ರಾಹಂ ನೀಡಿದ ದೂರಿನ ಮೇರೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿಮ್ಮ ವಿರುದ್ಧ ಯಾಕೆ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಬಾರದು ಎಂದು ಸಿದ್ದರಾಮಯ್ಯಗೆ ಶೋಕಾಸ್​ ನೋಟಿಸ್ ನೀಡಿದ್ದರು. ಸಿದ್ದರಾಮಯ್ಯಗೆ ನೀಡಿರುವ ನೋಟಿಸ್ ವಾಪಸ್ ಪಡೆಯಬೇಕೆಂದು ಸಚಿವ ಸಂಪುಟ ನಿರ್ಣಯ ಅಂಗೀಕರಿಸಿತ್ತು. ಆದರೆ ರಾಜ್ಯಪಾಲರು ಸಚಿವ ಸಂಪುಟದ ನಿರ್ಣಯ ಧಿಕ್ಕರಿಸಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರದ ಕುರಿತು ತಟಸ್ಥ, ವಸ್ತುನಿಷ್ಠ ಮತ್ತು ನಿಷ್ಪಕ್ಷಪಾತ ತನಿಖೆ ಅಗತ್ಯ ಎಂದು ಸಿಎಂ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ಪ್ರದೀಪ್ ಕುಮಾರ್ ಎಸ್.ಪಿ, ಟಿ.ಜೆ. ಅಬ್ರಹಾಂ ಮತ್ತು ಸ್ನೇಹಮಯಿ ಕೃಷ್ಣ ಅರ್ಜಿಗಳನ್ನು ಸಲ್ಲಿಸಿದ್ದರು.

ಮೈಸೂರಿನ ಸ್ನೇಹಮಯಿ ಕೃಷ್ಣ, ಸಿಎಂ ವಿರುದ್ಧ ಮತ್ತೂಂದು ದೂರು ಸಲ್ಲಿಸಿದ್ದರು. ಅಕ್ರಮ ಭೂ ಡಿನೋಟಿಫಿಕೇಶನ್‌ಗೆ ಸಿದ್ದರಾಮಯ್ಯ ಪ್ರಭಾವ ಬೀರಿದ್ದಾರೆಂದು ಆರೋಪಿಸಿದ್ದರು. ಮೈಸೂರು ಮೂಲದ ಸ್ನೇಹಮಯಿ ಕೃಷ್ಣ, 1979ರಲ್ಲಿ ಮೈಸೂರು ತಾಲೂಕು ವರುಣದ ಉತ್ತನಹಳ್ಳಿಯಲ್ಲಿ ಆಶ್ರಯ ಮನೆಗಳಿಗಾಗಿ ಭೂಸ್ವಾಧೀನ ಮಾಡಿದ್ದ ಜಮೀನಿಗೆ 30 ವರ್ಷದ ಬಳಿಕ ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಮರಪ್ಪ ಎಂಬುವವರ ಹೆಸರಿಗೆ 1.39 ಎಕರೆ ಜಮೀನು ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಶಿಫಾರಸು ಮಾಡಿದ್ದರು. ಮರಪ್ಪ ಎಂಬುವವರಿಗೆ ಸಂಬಂಧವೇ ಇರದಿದ್ದರೂ ನಕಲಿ ದಾಖಲೆ ಆಧರಿಸಿ ಮರಪ್ಪ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ ಎಂದು ದೂರುದಾರ ಆರೋಪಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Actor Darshan
ಪ್ರಮುಖ ಸುದ್ದಿ8 ನಿಮಿಷಗಳು ago

Actor Darshan : ನಟ ದರ್ಶನ್ ಬಿಡುಗಡೆಗೆ ಮುಹೂರ್ತ ಫಿಕ್ಸ್; ಜನ್ಮ ಜಾತಕದ ಪ್ರಕಾರ ಶುಭ ಸಮಯ ಶುರು

KEA UGCET 2024
ಬೆಂಗಳೂರು50 ನಿಮಿಷಗಳು ago

UGCET 2024 : ದ್ವಿತೀಯ ಪಿಯುಸಿ 3ನೇ ಪರೀಕ್ಷೆಯಲ್ಲಿ ಅರ್ಹರಾದವರಿಗೆ ಆಪ್ಷನ್‌ ದಾಖಲಿಸಲು ಲಿಂಕ್‌ ಓಪನ್‌

ಚಿಕ್ಕೋಡಿ1 ಗಂಟೆ ago

Physical Abuse: ಬಾಲಕಿಯನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಅತ್ಯಾಚಾರವೆಸಗಿ ಕೊಂದಿದ್ದ ನೀಚನಿಗೆ ಗಲ್ಲುಶಿಕ್ಷೆ ವಿಧಿಸಿದ ಕೋರ್ಟ್‌

BBMP plans to make arrangements for food in areas where stray dogs do not get food
ಬೆಂಗಳೂರು2 ಗಂಟೆಗಳು ago

Street Dogs : ಬೀದಿನಾಯಿಗಳ ಹಸಿವು ನೀಗಿಸಲು ಮುಂದಾದ ಬಿಬಿಎಂಪಿ; ಸಾರ್ವಜನಿಕರು ಕೈ ಜೋಡಿಸುವಂತೆ ಮನವಿ

Cm Siddaramaiah
ಬೆಂಗಳೂರು2 ಗಂಟೆಗಳು ago

CM Siddaramaiah : ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ದ್ವಿಸದಸ್ಯ ಪೀಠಕ್ಕೆ ಅಪೀಲು ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ತೀರ್ಮಾನ

Mahalaya Amavasya on Gandhi Jayanti Poultry Association demands withdrawal of ban on sale of meat
ಬೆಂಗಳೂರು3 ಗಂಟೆಗಳು ago

Mahalaya Amavasya 2024: ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆ; ಮಾಂಸ ಮಾರಾಟ ನಿಷೇಧ ಹಿಂಪಡೆಯುವಂತೆ ಒತ್ತಾಯ

Road Accident
ಬೆಂಗಳೂರು5 ಗಂಟೆಗಳು ago

Road Accident : ಆಟೋಗೆ ಲೋಡ್‌ ತುಂಬಿದ್ದ ಲಾರಿ ಡಿಕ್ಕಿ; ಚಾಲಕನ ನಿದ್ರೆ ಮಂಪರಿಗೆ ಜೀವ ಬಿಟ್ಟಳು ಯುವತಿ

Techie robbery plans to delete her photo video from lovers mobile phone
ಬೆಂಗಳೂರು6 ಗಂಟೆಗಳು ago

Robbery case : ಲವ್ವರ್ ಮೊಬೈಲ್‌ನಲ್ಲಿದ್ದ ತನ್ನ ಫೋಟೊ, ವಿಡಿಯೊ ಡಿಲೀಟ್‌ ಮಾಡಿಸಲು ಟೆಕ್ಕಿಯ ಖರ್ತನಾಕ್‌ ರಾಬರಿ ಪ್ಲ್ಯಾನ್‌

Hopcoms store loses charm in Bengaluru
ಬೆಂಗಳೂರು6 ಗಂಟೆಗಳು ago

HOPCOMS Outlets : ಬೆಂಗಳೂರಿನಲ್ಲಿ ಚಾರ್ಮ್‌ ಕಳೆದುಕೊಂಡ ಹಾಪ್‌ಕಾಮ್ಸ್‌ ಮಳಿಗೆ

fire accident
ಬೆಂಗಳೂರು ಗ್ರಾಮಾಂತರ7 ಗಂಟೆಗಳು ago

Fire Accident : ಹೊಸೂರು ಸಮೀಪದ ಟಾಟಾ ಕಂಪೆನಿಯಲ್ಲಿ ಭಾರಿ ಅಗ್ನಿ ಅವಘಡ; ಪ್ರಾಣ ಉಳಿಸಿಕೊಳ್ಳಲು ಓಡಿ ಬಂದ ಕಾರ್ಮಿಕರು ‌

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌