Business success | Yulu | ಬೆಂಗಳೂರಿನ ಯುಲು ಬೈಕ್ಸ್‌ನಲ್ಲಿ ನಾನಾ ಕಂಪನಿಗಳ 653 ಕೋಟಿ ರೂ. ಹೂಡಿಕೆ! - Vistara News

ಆಟೋಮೊಬೈಲ್

Business success | Yulu | ಬೆಂಗಳೂರಿನ ಯುಲು ಬೈಕ್ಸ್‌ನಲ್ಲಿ ನಾನಾ ಕಂಪನಿಗಳ 653 ಕೋಟಿ ರೂ. ಹೂಡಿಕೆ!

ಬೆಂಗಳೂರಿನಲ್ಲಿ 2017ರಲ್ಲಿ ಆರಂಭವಾದ ಯುಲು ಎಲೆಕ್ಟ್ರಿಕ್‌ ಬೈಕ್ಸ್‌ನಲ್ಲಿ ಬಜಾಜ್‌ ಆಟೊದಿಂದ ಅಮೆರಿಕದ ಮ್ಯಾಗ್ನಾ ತನಕ ದೇಶ-ವಿದೇಶಗಳ ಕಂಪನಿಗಳು ಬಂಡವಾಳ ಹೂಡಲು ಕಾರಣವೇನು? ( Yulu ) ಇಲ್ಲಿದೆ ವಿವರ!

VISTARANEWS.COM


on

yulu
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನಲ್ಲಿ ನೀವು ಸಣ್ಣ ಎಲೆಕ್ಟ್ರಿಕ್‌ ಬೈಕ್‌ಗಳನ್ನು ನೋಡಿರಬಹುದು. ಬಹುಶಃ ಅದರಲ್ಲಿ ಪ್ರಯಾಣಿಸರಬಹುದು. 2017ರಲ್ಲಿ ಆರಂಭವಾದ ಯುಲು ಬೈಕ್ಸ್‌ ( Yulu ) ಇದೀಗ ದೇಶ-ವಿದೇಶಗಳ ಕಂಪನಿಗಳಿಂದ ಹೂಡಿಕೆಯನ್ನು ಆಕರ್ಷಿಸುವ ಮಟ್ಟಿಗೆ ಬೆಳೆದಿದೆ!

ಇತ್ತೀಚೆಗೆ ಬಜಾಜ್‌ ಆಟೊ, ಅಮೆರಿಕ ಮೂಲದ ಮ್ಯಾಗ್ನಾ ಇಂಟರ್‌ನ್ಯಾಶನಲ್‌ ಕಂಪನಿಯಿಂದ 653 ಕೋಟಿ ರೂ.ಗಳ ಹೂಡಿಕೆಯನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. ಬಜಾಜ್‌ ಆಟೊ ಈ ಹಿಂದೆಯೂ ಯುಲು ಬೈಕ್ಸ್‌ನಲ್ಲಿ (Yulu Bikes Pvt Ltd) 57 ಕೋಟಿ ರೂ.ಗಳನ್ನು ಹೂಡಿಕೆ ಮಾಡಿತ್ತು. ಇದರಿಂದಾಗಿ ಯುಲುಗೆ ತನ್ನ ಪ್ರಾಡಕ್ಟ್‌ಗಳನ್ನು ಬಲಪಡಿಸಲು, ಹೊಸ ಆವಿಷ್ಕಾರಗಳನ್ನು ಕೈಗೊಳ್ಳಲು ಆರ್ಥಿಕ ಚೈತನ್ಯ ಸಿಕ್ಕಿದಂತಾಗಿದೆ. ಯುಲು ಈಗ 1 ಲಕ್ಷಕ್ಕೂ ಹೆಚ್ಚು ಎಲೆಕ್ಟ್ರಿಕ್‌ ಬೈಕ್‌ಗಳನ್ನು ಹೊಂದಲು ಸಿದ್ಧತೆ ನಡೆಸಿದೆ. ಮುಂದಿನ 12 ತಿಂಗಳಿನಲ್ಲಿ 500 ಬ್ಯಾಟರಿ ಚಾರ್ಜಿಂಗ್‌ ಸ್ಟೇಶನ್‌ಗಳು ಮತ್ತು ಸ್ವೈಪಿಂಗ್‌ ಸ್ಟೇಶನ್‌ಗಳನ್ನು ಅಳವಡಿಸಲು ಉದ್ದೇಶಿಸಿದೆ.

ಯುಲುಗೆ ಬೆಳೆಯಲು ನೂರು ಪಟ್ಟು ಅವಕಾಶ!

ಯುಲು ಬೈಕ್ಸ್‌ಗೆ 100 ಪಟ್ಟು ಬೆಳೆಯಲು ಅವಕಾಶ ಸೃಷ್ಟಿಯಾಗಿದೆ. ಒಂದು ಕಡೆ ಸಾರಿಗೆ ಸೇವೆ (Mobility as a service) ಮತ್ತೊಂದು ಕಡೆ ಬ್ಯಾಟರಿ ಬಿಸಿನೆಸ್‌ (Battery as a service) ಕೂಡ ಮಾಡಲು ಹೇರಳ ಅವಕಾಶಗಳು ಇವೆ ಎನ್ನುತ್ತಾರೆ ಯುಲುವಿನ ಸಹ ಸಂಸ್ಥಾಪಕ ಅಮಿತ್‌ ಗುಪ್ತಾ.

2017ರಲ್ಲಿ ಸ್ಥಾಪನೆಯಾದ ಯುಲು ಬೆಂಗಳೂರಿನಲ್ಲಿ ಜನಪ್ರಿಯವಾಗುತ್ತಿದೆ. ಜನರಿಗೆ ಮೆಟ್ರೊ ನಿಲ್ದಾಣದಿಂದ, ರೈಲ್ವೆ ಸ್ಟೇಶನ್‌ನಿಂದ ಬಸ್‌ ನಿಲ್ದಾಣಗಳಿಂದ ಮನೆಗೆ ತೆರಳಲು, ಕಚೇರಿಗೆ ಅಥವಾ ಇನ್ನೆಲ್ಲಿಗೊ ಹೋಗಲು ಯುಲು ಎಲೆಕ್ಟ್ರಿಕ್‌ ಬೈಕ್‌ ನೆರವಾಗುತ್ತದೆ. ಇವಿ ಚಾರ್ಜಿಂಗ್‌ ಸ್ಟೇಶನ್‌ಗಳ ನೆಟ್‌ ವರ್ಕ್‌ಗಳನ್ನು ಹೊಂದಿದೆ. ಮ್ಯಾಗ್ನಾದ ಸಹಭಾಗಿತ್ವದೊಂದಿಗೆ ಯುಲು ಎನರ್ಜಿ ಅಸ್ತಿತ್ವಕ್ಕೆ ಬರಲಿದದು, ರಾಷ್ಟ್ರವ್ಯಾಪಿಯಾಗಿ ಚಾರ್ಜಿಂಗ್‌ ಮತ್ತು ಇತರ ಮೂಲಸೌಕರ್ಯಗಳನ್ನು ಒದಗಸಲಿದೆ. ಇದರಿಂದ ಜನತೆಗೆ ಎಲೆಕ್ಟ್ರಿಕ್‌ ವಾಹನವನ್ನು ಖರೀದಿಸುವ ಖರ್ಚು ಉಳಿತಾಯವಾಗಬಹುದು ಎಂದು ಅಮಿತ್‌ ಗುಪ್ತಾ ಹೇಳಿದ್ದಾರೆ.

ಯುಲು 2020-21ರಲ್ಲಿ 13.7 ಕೋಟಿ ರೂ.ಗಳ ಆದಾಯವನ್ನು ಗಳಿಸಿತ್ತು. ಪ್ರಸ್ತುತ 10,000 ಎಲೆಕ್ಟ್ರಿಕ್‌ ದ್ವಿ ಚಕ್ರ ವಾಹನಗಳನ್ನು ಒಳಗೊಂಡಿದೆ. ಬೆಂಗಳೂರು-ದಿಲ್ಲಿ ಮತ್ತು ಮುಂಬಯಿನಲ್ಲಿ ವಹಿವಾಟು ನಡೆಸುತ್ತಿದೆ. ಮುಂದಿನ ಒಂದೂವರೆ ವರ್ಷಗಳಲ್ಲಿ ಮತ್ತೆ 18 ನಗರಗಳಿಗೆ ವಿಸ್ತರಣೆಯಾಗಲಿದೆ. ಕಡಿಮೆ ವೇಗದ, ಹಗುರ ಹಾಗೂ ಅಗಲ ಕಿರಿದಾದ ರಸ್ತೆಯಲ್ಲೂ ಸುಲಭವಾಗಿ ಸಂಚರಿಸಲು ಸೂಕ್ತವಾದ ಇ-ಬೈಕ್‌ಗಳ ಸೇವೆಯನ್ನು ಜನತೆಗೆ ಯುಲು ಒದಗಿಸುತ್ತದೆ.

ಬೆಂಗಳೂರಿನಂತಹ ಮಹಾ ನಗರಗಳಲ್ಲಿ ಟ್ರಾಫಿಕ್‌ ಸಮಸ್ಯೆಯಿಂದ ಪಾರಾಗಲು ಯುಲು ಯುಪಯುಕ್ತ. ಇದು ಸಣ್ಣ ಬ್ಯಾಟರಿ ಚಾಲಿತ ದ್ವಿಚಕ್ರ ವಾಹನ. ನೋಡಲು ಮಕ್ಕಳ ಆಟದ ಸೈಕಲ್‌ನಂತೆ ಕಾಣುತ್ತದೆ. ಬೇರೆ ಎಲ್ಲ ಸ್ಕೂಟರ್‌ಗಿಂತ ಹಗುರ. ಆದರೆ ನಗರದ ಒಳಗೆ ಸಂಚರಿಸಲು ಉಪಯುಕ್ತ. ಸೈಕಲ್‌ಗಿಂತ ವೇಗವಾಗಿ ಇದರಲ್ಲಿ ಚಲಿಸಬಹುದು. ಗಂಟೆಗೆ ಗರಿಷ್ಠ ವೇಗ 25 ಕಿ.ಮೀ. ಯುಲು ಅಪ್ಲಿಕೇಷನ್‌ ಅನ್ನು ಮೊಬೈಲ್‌ನಲ್ಲಿ ಡೌನ್‌ ಲೋಡ್‌ ಮಾಡಿಕೊಂಡು ಸೇವೆ ಪಡೆಯಬಹುದು.

ಯಾರಿವರು ಯುಲು ಸ್ಥಾಪಕ ಅಮಿತ್‌ ಗುಪ್ತಾ?

ಯುಲು ಸಂಸ್ಥಾಪಕ ಅಮಿತ್‌ ಗುಪ್ತಾ

ಬೆಂಗಳೂರಿನಲ್ಲಿ ಯುಲು ಸೇವೆಯನ್ನು ಪರಿಚಯಿಸಿದ ಅಮಿತ್‌ ಗುಪ್ತಾ 1996ರಲ್ಲಿ ಕಾನ್ಪುರದ ಐಐಟಿಯಿಲ್ಲಿ ಮೆಕಾನಿಕಲ್‌ ಎಂಜಿನಿಯರಿಂಗ್‌ನಲ್ಲಿ ಬಿಟೆಕ್‌ ಗಳಿಸಿದವರು. ಹಾರ್ವರ್ಡ್‌ ಬಿಸಿನೆಸ್‌ ಸ್ಕೂಲ್‌ನಲ್ಲಿ ಉನ್ನತ ಶಿಕ್ಷಣ ಪಡೆದವರು. ಉತ್ತರ ಅಮೆರಿಕದಲ್ಲಿ ಇನ್‌ಮೊಬಿ ಕಂಪನಿಯ ಮೊಬೈಲ್‌ ಜಾಹೀರಾತು ವಹಿವಾಟನ್ನು ಅಭಿವೃದ್ಧಿಪಡಿಸಿದವರು. ಒಇಎಂ ಮತ್ತು ಟೆಲ್ಕೊ ಸಲ್ಯೂಷನ್ಸ್‌ನ ಸಹ ಸಂಸ್ಥಾಪಕರು. ಕಳೆದ 2017ರಲ್ಲಿ ಯುಲುವನ್ನು ಬೆಂಗಳೂರಿನಲ್ಲಿ ಸ್ಥಾಪಿಸಿದರು.

ಇದನ್ನೂ ಓದಿ: Business success |‌ 10,000 ರೂ.ನಿಂದ ಆರಂಭವಾದ ಶರ್ಟ್‌ ಮಾರಾಟ ಈಗ 400 ಕೋಟಿ ರೂ. ಫ್ಯಾಷನ್‌ ಬ್ರಾಂಡ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Tata Motors: ನೆಕ್ಸಾನ್, ಪಂಚ್‌ ಮೂಲಕ ಎಸ್‌ಯುವಿ ಮಾರುಕಟ್ಟೆಯಲ್ಲಿ ಮುನ್ನಡೆ ಸಾಧಿಸಿದ ಟಾಟಾ ಮೋಟಾರ್ಸ್

Tata Motors: ಟಾಟಾ ಮೋಟಾರ್ಸ್‌ನ ಎರಡು ಉತ್ಪನ್ನಗಳಾದ ಪಂಚ್ ಮತ್ತು ನೆಕ್ಸಾನ್ ದೇಶದಲ್ಲಿ ಹೆಚ್ಚು ಮಾರಾಟವಾಗುವ ಎಸ್‌ಯುವಿಗಳಾಗಿ ಹೊರಹೊಮ್ಮಿರುವುದರಿಂದ ಆರ್ಥಿಕ ವರ್ಷ 24 ಅನ್ನು ಅತ್ಯುತ್ತಮ ರೀತಿಯಲ್ಲಿ ಆರಂಭಿಸಿದೆ. ಟಾಟಾ ನೆಕ್ಸಾನ್ ರೇಸ್‌ನಲ್ಲಿ ಇದ್ದಂತೆ ಪೋಲ್ ಪೊಸಿಷನ್ ಅನ್ನು ಪಡೆದುಕೊಂಡಿದ್ದು, ಈ ವಿಭಾಗದಲ್ಲಿ ಸತತ ಮೂರು ವರ್ಷಗಳ ಕಾಲ ಪ್ರಾಬಲ್ಯ ಸಾಧಿಸಿದೆ.

VISTARANEWS.COM


on

Tata Motors has taken the lead in the SUV market with Nexon Punch
Koo

ಬೆಂಗಳೂರು: ಭಾರತದ ಪ್ರಮುಖ ವಾಹನ ತಯಾರಕರಲ್ಲಿ ಒಂದಾದ ಟಾಟಾ ಮೋಟಾರ್ಸ್ (Tata Motors) ಅದರ ಎರಡು ಉತ್ಪನ್ನಗಳಾದ ಪಂಚ್ ಮತ್ತು ನೆಕ್ಸಾನ್ ದೇಶದಲ್ಲಿ ಹೆಚ್ಚು ಮಾರಾಟವಾಗುವ ಎಸ್‌ಯುವಿಗಳಾಗಿ ಹೊರಹೊಮ್ಮಿರುವುದರಿಂದ ಆರ್ಥಿಕ ವರ್ಷ 24 ಅನ್ನು ಅತ್ಯುತ್ತಮ ರೀತಿಯಲ್ಲಿ ಮುಕ್ತಾಯಗೊಳಿಸಿದೆ. ಟಾಟಾ ನೆಕ್ಸಾನ್ ರೇಸ್‌ನಲ್ಲಿ ಇದ್ದಂತೆ ಪೋಲ್ ಪೊಸಿಷನ್ ಅನ್ನು ಪಡೆದುಕೊಂಡಿದ್ದು, ಈ ವಿಭಾಗದಲ್ಲಿ ಸತತ ಮೂರು ವರ್ಷಗಳ ಕಾಲ ಪ್ರಾಬಲ್ಯ ಸಾಧಿಸಿದೆ. ವಿಭಾಗದಲ್ಲಿ ಭಾರಿ ಸ್ಪರ್ಧೆಯ ಹೊರತಾಗಿಯೂ ಪಂಚ್ ಎರಡನೇ ಸ್ಥಾನದಲ್ಲಿದೆ.

Tata Punch

ಟಾಟಾ ನೆಕ್ಸಾನ್ ಇತ್ತೀಚೆಗೆ ತನ್ನ 7ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ 7 ಲಕ್ಷ ಯುನಿಟ್ ಮಾರಾಟದ ಮೈಲಿಗಲ್ಲನ್ನು ಸಾಧಿಸಿದ್ದು, ಇದು ಭಾರತದ ಅತ್ಯಂತ ಪ್ರೀತಿಪಾತ್ರ ಎಸ್‌ಯುವಿ ಆಗಿದೆ.

ಕಾಂಪ್ಯಾಕ್ಟ್ ಎಸ್‌ಯುವಿ ವಿಭಾಗವು ಇತ್ತೀಚಿನ ವರ್ಷಗಳಲ್ಲಿ ಗಮನಾರ್ಹ ಬೆಳವಣಿಗೆಯನ್ನು ಪ್ರದರ್ಶಿಸಿದೆ. ಈ ವಿಭಾಗವು ಅತ್ಯಂತ ಸ್ಪರ್ಧಾತ್ಮಕ ಮತ್ತು ತೀವ್ರ ಪೈಪೋಟಿಯ ವಿಭಾಗವಾಗಿದೆ ಮತ್ತು ಟಾಟಾ ಮೋಟಾರ್ಸ್ ಈ ವಿಭಾಗದಲ್ಲಿರುವ ನಾಯಕರಲ್ಲಿ ಒಬ್ಬರಾಗಿದೆ. ನೆಕ್ಸಾನ್ ಮತ್ತು ಪಂಚ್‌ಗಾಗಿ ವಿವಿಧ ಆವಿಷ್ಕಾರಗಳನ್ನು ಪರಿಚಯಿಸಲು ಕಂಪನಿಯು ಮಾಡಿರುವ ಪ್ರಯತ್ನಗಳನ್ನು ಗಮನಿಸಬಹುದಾಗಿದೆ.

ಇದನ್ನೂ ಓದಿ: Agumbe Ghat: ಭಾರಿ ಮಳೆ; ಸೆ.15ರವರೆಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ!

2017ರಲ್ಲಿ ಪ್ರಾರಂಭವಾದಾಗಿನಿಂದಲೂ ನೆಕ್ಸಾನ್ ತನ್ನ ವಿಶಿಷ್ಟತೆ ಮತ್ತು ಔಟ್ ಆಫ್ ದಿ ಬಾಕ್ಸ್ ಗುಣ ಅಂದರೆ ವಿಭಿನ್ನತೆಯನ್ನು ಬಯಸುವ ಗ್ರಾಹಕರನ್ನು ಆಕರ್ಷಿಸಿದೆ ಮತ್ತು ಇದು ಅತ್ಯುತ್ತಮವಾದ ಕಾರ್ಯಕ್ಷಮತೆ ಮತ್ತು ಸೌಕರ್ಯವನ್ನು ಒದಗಿಸುತ್ತದೆ. ನೆಕ್ಸಾನ್‌ನ ಭವಿಷ್ಯಕ್ಕೆ ಸಲ್ಲುವ ವಿನ್ಯಾಸ, ಉನ್ನತ ಸುರಕ್ಷತಾ ಫೀಚರ್‌ಗಳು ಮತ್ತು ಸ್ಥಿರವಾದ ಬೆಳವಣಿಗೆಯಿಂದ ಇದು ಭಾರತೀಯ ಗ್ರಾಹಕರ ಜನಪ್ರಿಯ ಆಯ್ಕೆಯಾಗಿದೆ ಮತ್ತು ವಿಶ್ವಾಸಾರ್ಹತೆಯ ಖ್ಯಾತಿಯನ್ನು ಗಳಿಸಿದೆ.

ನೆಕ್ಸಾನ್ 2018 ರ ಭಾರತದ ಮೊದಲ ಜಿಎನ್‌ಸಿಎಪಿ 5 ಸ್ಟಾರ್ ರೇಟಿಂಗ್ ಪಡೆದ ವಾಹನವಾಗಿದೆ, ಆ ಮೂಲಕ ಇದು ಎಲ್ಲಾ ಭಾರತೀಯ ಆಟೋಮೊಬೈಲ್‌ಗಳಿಗೆ ಅನುಸರಿಸಲು ಮಾನದಂಡವನ್ನು ಸ್ಥಾಪಿಸಿದೆ. ಅಂದಿನಿಂದ ಇಂದಿನವರೆಗೂ ಪರಂಪರೆ ಮುಂದುವರಿದಿದೆ. 2024ರ ಫೆಬ್ರವರಿಯಲ್ಲಿ ಹೊಸ ಜನರೇಷನ್‌ನ ನೆಕ್ಸಾನ್ ವರ್ಧಿತ 2022 ಪ್ರೋಟೋಕಾಲ್ ಪ್ರಕಾರ ತನ್ನ ಜಿಎನ್‌ಸಿಎಪಿ 5 ಸ್ಟಾರ್ ರೇಟಿಂಗ್ ಅನ್ನು ಪಡೆದುಕೊಂಡಿತು. ಅದರ ಬೆನ್ನಲ್ಲೇ ನೆಕ್ಸಾನ್.ಇವಿ ಈ ತಿಂಗಳು ಭಾರತ್- ಎನ್‌ಸಿಎಪಿಯಿಂದ ಪ್ರತಿಷ್ಠಿತ 5-ಸ್ಟಾರ್ ರೇಟಿಂಗ್ ಅನ್ನು ಪಡೆಯಿತು.

ಭಾರತೀಯ ರಸ್ತೆಗಳಲ್ಲಿ 7 ಲಕ್ಷ ನೆಕ್ಸಾನ್‌ ಇವೆ ಮತ್ತು ನೆಕ್ಸಾನ್ 41 ಪ್ರತಿಷ್ಠಿತ ಪ್ರಶಸ್ತಿಗಳನ್ನು ಗಳಿಸಿವೆ. ಅದರ ಅತ್ಯದ್ಭುತ ಕಾರ್ಯಕ್ಷಮತೆ ಅದರ ಮಾರಾಟದ ಬೆಳವಣಿಗೆಯಲ್ಲಿ ಪ್ರಮುಖ ಕೊಡುಗೆ ನೀಡಿರುವುದು ಎಲ್ಲರೂ ಗಮನಿಸಬಹುದಾಗಿದೆ. ಕಳೆದ ಎರಡು ವರ್ಷಗಳಲ್ಲಿ (2022 ಮತ್ತು 2023) ನೆಕ್ಸಾನ್ ನ 3 ಲಕ್ಷಕ್ಕೂ ಹೆಚ್ಚು ಯುನಿಟ್‌ಗಳು ಮಾರಾಟವಾಗಿವೆ. ನೆಕ್ಸಾನ್ ಪೆಟ್ರೋಲ್, ಡೀಸೆಲ್ ಮತ್ತು ಎಲೆಕ್ಟ್ರಿಕ್ ನ ಬಹು ಪವರ್‌ಟ್ರೇನ್‌ಗಳಲ್ಲಿ ಲಭ್ಯವಿದೆ. ನೆಕ್ಸಾನ್ ಕಾಲ ಕಾಲಕ್ಕೆ ದೃಢವಾಗಿ ಬೆಳೆದಿದೆ ಮತ್ತು ಅದರ ವಿಭಾಗ ಪ್ರಮುಖ ವಿನ್ಯಾಸ, ವಿಭಾಗದ ಅತ್ಯುತ್ತಮ ಫೀಚರ್ ಗಳು ಮತ್ತು ಅತ್ಯಾಧುನಿಕ ತಂತ್ರಜ್ಞಾನದಿಂದಾಹಿ ನಿಷ್ಠಾವಂತ ಅಭಿಮಾನಿಗಳನ್ನು ಗಳಿಸಿದೆ.

ಇದನ್ನೂ ಓದಿ: Lakshmi Hebbalkar: ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ: ಹೆಬ್ಬಾಳಕರ್

ಟಾಟಾ ಪಂಚ್: ಮತ್ತೊಂದೆಡೆ ಟಾಟಾ ಪಂಚ್ ಎಸ್‌ಯುವಿ ಗುಣಲಕ್ಷಣಗಳನ್ನು ಎಲ್ಲರೂ ಮೆಚ್ಚುವಂತೆ ಮಾಡಿದೆ. ಪಂಚ್‌ನ ಅದ್ಭುತ ವಿನ್ಯಾಸ, ಸೌಕರ್ಯ ಮತ್ತು ಅಪ್ರತಿಮ ಸಾಮರ್ಥ್ಯವು ಈಗಾಗಲೇ ಕಾರು ಹೊಂದಿರುವ ಮತ್ತು ಮೊದಲ ಬಾರಿಯ ಕಾರು ಖರೀದಿದಾರರಿಗೂ ಆಸಕ್ತಿ ಹುಟ್ಟುವಂತೆ ಮಾಡುತ್ತದೆ.

ಪಂಚ್ ಎಸ್‌ಯುವಿಯು ಅದ್ಭುತ ನಿಲುವು, ವಿಶಾಲವಾದ ಇಂಟೀರಿಯರ್‌ಗಳು ಮತ್ತು ವಿಭಾಗದಲ್ಲಿಯೇ ಅತ್ಯುನ್ನತ ಸುರಕ್ಷತಾ ರೇಟಿಂಗ್ (ಜಿಎನ್‌ಸಿಎಪಿ 5 ಸ್ಟಾರ್ ರೇಟಿಂಗ್) ಅನ್ನು ಹೊಂದಿದ್ದು, ನಿಸ್ಸಂದೇಹವಾಗಿ ಸಮಗ್ರ ಪ್ಯಾಕೇಜ್ ಹೊಂದಿರುವ ಕಾರ್ ಆಗಿದೆ. ಅದಲ್ಲದೆ, ಪಂಚ್.ಇವಿ ಇತ್ತೀಚೆಗೆ 5-ಸ್ಟಾರ್ ಬಿ ಎನ್ ಸಿ ಎ ಪಿ ರೇಟಿಂಗ್ ಅನ್ನು ಪಡೆದುಕೊಂಡಿದೆ, ಆ ಮೂಲಕ ಇದು ಭಾರತದ ಸುರಕ್ಷಿತ ಇವಿ ವಾಹನ ಎಂಬ ಹೆಗ್ಗಳಿಕೆ ಗಳಿಸಿದೆ.

ಒಟ್ಟಾರೆಯಾಗಿ, ಪಂಚ್ ಉಪ-ಕಾಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಮುಂಚೂಣಿ ಸಾಧಿಸಿದೆ ಮತ್ತು ಆರ್ಥಿಕ ವರ್ಷ 24ರಲ್ಲಿ ಶ್ಲಾಘನೀಯ 170,076 ಯುನಿಟ್‌ಗಳನ್ನು ಮಾರಾಟ ಮಾಡಿದೆ ಮತ್ತು ಮಾರುಕಟ್ಟೆಯಲ್ಲಿ ತನ್ನ ಸ್ಥಾನವನ್ನು ಗಟ್ಟಿಗೊಳಿಸಿದೆ. ಮಾರ್ಚ್ 2024ರ ಸಮಯದಲ್ಲಿ ಪಂಚ್ ಉದ್ಯಮದಲ್ಲಿ #1 ಮಾರಾಟವಾದ ಕಾರು ಎಂಬ ಮನ್ನಣೆ ಗಳಿಸಿತ್ತು.

ಇದನ್ನೂ ಓದಿ: KMH CUP: ʼಕೆಎಂಎಚ್‌ ಕಪ್‌ʼ ಕ್ರಿಕೆಟ್‌ಗೆ ನಟಿ ಭಾವನಾ ರಾಮಣ್ಣ ರಾಯಭಾರಿ

ಭಾರತದಲ್ಲಿನ ಕಾಂಪ್ಯಾಕ್ಟ್ ಎಸ್‌ಯುವಿ ಮಾರುಕಟ್ಟೆಯು ಕಳೆದ ಕೆಲವು ವರ್ಷಗಳಲ್ಲಿ ಗಣನೀಯ ಬೆಳವಣಿಗೆಯನ್ನು ಕಂಡಿದೆ. ಮಾರುಕಟ್ಟೆಯ ಸ್ಥಿರ ಬೆಳವಣಿಗೆಯಿಂದ ಈ ವಿಚಾರ ವ್ಯಕ್ತವಾಗಿದೆ. ಉದ್ಯಮವು ಈ ವಿಭಾಗದಲ್ಲಿ ಮಾರುಕಟ್ಟೆ ಪಾಲಿನಲ್ಲಿ 4% ರಿಂದ 7%ಗೆ ಏರಿಕೆ ಕಂಡಿದೆ ಮತ್ತು ದೊಡ್ಡ ಎಸ್‌ಯುವಿ ಮಾರುಕಟ್ಟೆಯಲ್ಲಿ, ಮಾರುಕಟ್ಟೆ ಪಾಲು 8% ರಿಂದ 14%ಗೆ ಬೆಳೆದಿದೆ. ಈ ಅಭಿವೃದ್ಧಿಯು ಆಟೋಮೋಟಿವ್ ಕ್ಷೇತ್ರದಲ್ಲಿ ಕಾಂಪ್ಯಾಕ್ಟ್ ಎಸ್‌ಯುವಿಗಳ ಹೆಚ್ಚುತ್ತಿರುವ ಬೇಡಿಕೆ ಮತ್ತು ಅದರ ಮೇಲೆ ಹೆಚ್ಚುತ್ತಿರುವ ಆಕರ್ಷಣೆಯನ್ನು ಸಾರುತ್ತದೆ ಮತ್ತು ಉದ್ಯಮದಲ್ಲಿ ಪ್ರಮುಖ ಶಕ್ತಿಯಾಗಿ ಅದರ ಸ್ಥಾನವನ್ನು ಗಟ್ಟಿಗೊಳಿಸುತ್ತದೆ.

Continue Reading

ಪ್ರಮುಖ ಸುದ್ದಿ

Nitin Gadkari : ಕೆಟ್ಟದಾಗಿರುವ ಹೈವೆಗಳಿಗೆ ಟೋಲ್​ ಶುಲ್ಕ ಕಟ್ಟಬೇಡಿ; ನಿತಿನ್​ ಗಡ್ಕರಿ ಸೂಚನೆ

Nitin Gadkari: ಶುಲ್ಕವನ್ನು ಸಂಗ್ರಹಿಸಲು ಮತ್ತು ನಮ್ಮ ಹಿತಾಸಕ್ತಿಗಳನ್ನು ರಕ್ಷಿಸಲು ನಾವು ಟೋಲ್​​ಗಳನ್ನು ಪರಿಚಯಿಸುವ ಅವಸರದಲ್ಲಿದ್ದೇವೆ. ಉತ್ತಮ ಗುಣಮಟ್ಟದ ರಸ್ತೆಗಳನ್ನು ಒದಗಿಸುವಲ್ಲಿ ಬಳಕೆದಾರ ಶುಲ್ಕವನ್ನು ವಿಧಿಸಬೇಕು ಎಂದು ಗಡ್ಕರಿ ಅವರು ಹೇಳಿದ್ದಾರೆ.

VISTARANEWS.COM


on

Nitin Gadkari
Koo

ಬೆಂಗಳೂರು: ಕಳಪೆ ಗುಣಮಟ್ಟದ ರಸ್ತೆಗಳಿದ್ದರೆ ವಾಹನಗಳ ಮಾಲೀಕರಿಗೆ ಹೆದ್ದಾರಿ ಅಧಿಕಾರಿಗಳು ಟೋಲ್ ಶುಲ್ಕ ವಿಧಿಸಬಾರದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಬುಧವಾರ ಹೇಳಿದ್ದಾರೆ. ಪ್ರಸಕ್ತ (2024-25) ಹಣಕಾಸು ವರ್ಷದಲ್ಲಿ 5,000 ಕಿ.ಮೀ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪರಿಚಯಿಸಲಾಗುವ ಜಿಪಿಎಸ್​ ಆಧಾರಿತ ಟೋಲ್ ಪಾವತಿ ವ್ಯವಸ್ಥೆಗಳ ಕುರಿತ ಜಾಗತಿಕ ಕಾರ್ಯಾಗಾರದಲ್ಲಿ ಮಾತನಾಡಿದ ಬಿಜೆಪಿ ನಾಯಕ, ” ಗುಣಮಟ್ಟದ ಸೇವೆಯನ್ನು ಒದಗಿಸದಿದ್ದರೆ, ನೀವು ಟೋಲ್ ವಿಧಿಸಬಾರದು” ಎಂದು ಹೇಳಿದ್ದಾರೆ.

“ಶುಲ್ಕವನ್ನು ಸಂಗ್ರಹಿಸಲು ಮತ್ತು ನಮ್ಮ ಹಿತಾಸಕ್ತಿಗಳನ್ನು ರಕ್ಷಿಸಲು ನಾವು ಟೋಲ್​​ಗಳನ್ನು ಅಳಡಿಸಿಕೊಂಡು ಹೋಗಲಾಗುತ್ತಿದೆ. ಅದಕ್ಕೆ ಅವಸರ ಮಾಡಲಾಗುತ್ತಿದೆ. ವಾಸ್ತವದಲ್ಲಿ ಉತ್ತಮ ಗುಣಮಟ್ಟದ ರಸ್ತೆಗಳನ್ನು ಒದಗಿಸಿದರೆ ಮಾತ್ರ ಬಳಕೆದಾರ ಶುಲ್ಕ ವಿಧಿಸಬೇಕು. ಗುಂಡಿಗಳು ಮತ್ತು ಮಣ್ಣಿನಿಂದ ಕೂಡಿದ ರಸ್ತೆಗಳಲ್ಲಿ ನೀವು ಟೋಲ್ ವಿಧಿಸಿದರೆ, ಜನರು ಪ್ರತೀಕಾರ ತೀರಿಸಿಕೊಳ್ಳುತ್ತಾರೆ” ಎಂದು ರಸ್ತೆ ಮತ್ತು ಸಾರಿಗೆ ಸಚಿವರು ಹೇಳಿದ್ದಾರೆ.

ಪ್ರಸ್ತುತ ಫಾಸ್ಟ್ತಾಗ್​ ವ್ಯವಸ್ಥೆಯಡಿ ಜಿಎನ್ಎಸ್ಎಸ್ ಆಧಾರಿತ ಎಲೆಕ್ಟ್ರಾನಿಕ್ ಟೋಲ್ ವ್ಯವಸ್ಥೆಯನ್ನು ಪರಿಚಯಿಸಲು ಸರ್ಕಾರಿ ಸ್ವಾಮ್ಯದ ಎನ್ಎಚ್ಎಐ ಉದ್ದೇಶಿಸಿದೆ. ಆರಂಭದಲ್ಲಿ ಆರ್​ಎಫ್​ಐಡಿ ಆಧಾರಿತ ಮತ್ತು ಜಿಎನ್ಎಸ್ಎಸ್ (ಗ್ಲೋಬಲ್ ನ್ಯಾವಿಗೇಷನ್​ ಸ್ಯಾಟ್​ಲೈಟ್​ ಸಿಸ್ಟಮ್​) ಆಧಾರಿತ ಟೋಲ್ ವ್ಯವಸ್ಥೆಗಳ ಮೂಳಕ ಹೈಬ್ರಿಡ್ ವಿಧಾನವನ್ನು ಅಳವಡಿಸಿಕೊಳ್ಳಲಾಗುತ್ತಿದೆ.

ಗೌಪ್ಯತೆ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು ಮೊದಲು ವಾಣಿಜ್ಯ ವಾಹನಗಳಿಗೆ ಮತ್ತು ನಂತರ ಖಾಸಗಿ ವಾಹನಗಳಿಗೆ ಈ ವ್ಯವಸ್ಥೆ ಜಾರಿಗೆ ತರಲು ಎನ್ಎಚ್ಎಐ ಯೋಜಿಸಿದೆ. ವಂಚನೆ ಪತ್ತೆಹಚ್ಚಲು ಚಾಲಕರ ನಡವಳಿಕೆ ವಿಶ್ಲೇಷಣೆ ಮತ್ತು ಬ್ಯಾಕ್ ಎಂಡ್ ಡೇಟಾ ವಿಶ್ಲೇಷಣೆಯೂ ನಡೆಯಲಿದೆ.

ಬ್ಯಾಂಕ್​ನಿಂದ ಟೋಲ್​ ಸಾಲ

ಜಿಎನ್​ಎಸ್​ಎಸ್​ ಮೂಲಕ ಪಾವತಿ ವಿಧಾನಗಳನ್ನು ಪ್ರಿಪೇಯ್ಡ್​​ನಿಂದ ಪೋಸ್ಟ್​​​ಪೇಯ್ಡ್​ಗೆ ಬದಲಾಯಿಸಬಹುದು. ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳು ಪ್ರಯಾಣದ ಯೋಜನೆಗಳ ಆಧಾರದ ಮೇಲೆ ತ್ವರಿತ ಸಾಲ ನೀಡಬಹುದು ಎಂದು ಎನ್ಎಚ್ಎಐ ಹೇಳಿದೆ.

ಇದನ್ನೂ ಓದಿ:Vande Bharath Train: ಬೆಂಗಳೂರು-ಮಧುರೈ ʼವಂದೇ ಭಾರತ್ʼ ರೈಲು ಜುಲೈನಿಂದ ಆರಂಭ

ಹೈಬ್ರಿಡ್ ವರ್ಷಾಶನ ಮಾದರಿ (ಎಚ್ಎಎಂ) ಅಡಿಯಲ್ಲಿ, ಹೆದ್ದಾರಿ ನಿರ್ಮಾಣವನ್ನು ಹೊಂದಿಕೊಳ್ಳುವ ಮತ್ತು ಮಾರುಕಟ್ಟೆ ಚಾಲಿತವಾಗಿಸಬಹುದು ಎಂದು ಗಡ್ಕರಿ ಮಂಗಳವಾರ ಹೇಳಿದ್ದಾರೆ. “ಗುತ್ತಿಗೆದಾರರು ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಬೇಕು ಎಂದು ನಾನು ನಂಬುತ್ತೇನೆ.”

ಹೈಬ್ರಿಡ್ ಆನ್ಯುಟಿ ಮಾಡೆಲ್​ ಅಡಿಯಲ್ಲಿ, ಯೋಜನಾ ವೆಚ್ಚದ ಸುಮಾರು ಶೇಕಡಾ 40 ಸರ್ಕಾರ ಭರಿಸಿದರೆ, ಉಳಿದದ್ದನ್ನು ಗುತ್ತಿಗೆದಾರರು ಭರಿಸುತ್ತಾರೆ. “ಗುತ್ತಿಗೆದಾರರು ಯೋಜನೆಯ ಶೇಕಡಾ 60 ಕ್ಕಿಂತ ಹೆಚ್ಚು ಹೂಡಿಕೆ ಮಾಡಲು ಸಿದ್ಧರಿದ್ದರೆ ಸರ್ಕಾರವು ಅದಕ್ಕೂ ಬದ್ಧವಾಗಿರುತ್ತದೆ. ನಮಗೆ ಬೇಕಾಗಿರುವುದು ಒಪ್ಪಂದ ಮತ್ತು ಚಾಲಿತ ಮಾರುಕಟ್ಟೆ ” ಎಂದು ಗಡ್ಕರಿ ಹೇಳಿದ್ದಾರೆ.

ಜಿಪಿಎಸ್​ ಮೂಲಕ ಟೋಲ್​ ಸಂಗ್ರಹ ಹೆಚ್ಚಳ

ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಮ್ (ಜಿಎನ್ಎಸ್ಎಸ್) ಆಧಾರಿತ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹವನ್ನು ಪರಿಚಯಿಸುವುದರಿಂದ ಭಾರತದ ಒಟ್ಟು ಟೋಲ್ ಆದಾಯವನ್ನು ಕನಿಷ್ಠ 10,000 ಕೋಟಿ ರೂ.ಗೆ ಹೆಚ್ಚಿಸುವ ನಿರೀಕ್ಷೆಯಿದೆ ಎಂದು ಗಡ್ಕರಿ ಹೇಳಿದ್ದಾರೆ, 2023-24ರಲ್ಲಿ, ಭಾರತದಲ್ಲಿ ಒಟ್ಟು ಟೋಲ್ ಸಂಗ್ರಹವು 64,809.86 ಕೋಟಿ ರೂ.ಗೆ ತಲುಪಿದೆ, ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇಕಡಾ 35 ರಷ್ಟು ಹೆಚ್ಚಳವಾಗಿದೆ.

Continue Reading

ಕರ್ನಾಟಕ

Mahindra Paddy Walker: ಮಹೀಂದ್ರಾ ಕಂಪನಿಯಿಂದ ʻ6ಆರ್‌ಒ ಪ್ಯಾಡಿ ವಾಕರ್ʼ ಭತ್ತ ನಾಟಿ ಯಂತ್ರ ಬಿಡುಗಡೆ

Mahindra Paddy Walker: : ಭತ್ತವನ್ನು ಪ್ರಮುಖ ಬೆಳೆಯುವ ಕರ್ನಾಟಕವು ವಿಶ್ವ ದರ್ಜೆಯ ಅಕ್ಕಿಗೆ ಹೆಸರುವಾಸಿಯಾಗಿದೆ ಮತ್ತು ಭತ್ತದ ಯಾಂತ್ರೀಕರಣ ತಂತ್ರಜ್ಞಾನಗಳನ್ನು ಆರಂಭಿಕವಾಗಿ ಅಳವಡಿಸಿಕೊಂಡ ರಾಜ್ಯಗಳಲ್ಲಿ ಒಂದಾಗಿದೆ. ರಾಜ್ಯದ ಹಲವಾರು ಭಾಗಗಳಲ್ಲಿ ಉತ್ತಮ ಗುಣಮಟ್ಟದ ಅಕ್ಕಿಯನ್ನು ಬೆಳೆಯಲಾಗುತ್ತದೆ. ಹೊಸ ಪರಿಹಾರವು ನೀರಿನ ಸಂರಕ್ಷಣೆ, ಕಡಿಮೆ ಪರಿಸರ ಮಾಲಿನ್ಯ ತಡೆಯುತ್ತದೆ.

VISTARANEWS.COM


on

Mahindra Paddy Walker
Koo

ಬೆಂಗಳೂರು : ಮಹೀಂದ್ರಾ ಗ್ರೂಪ್‌ನ ಭಾಗವಾಗಿರುವ ʻಮಹೀಂದ್ರಾ & ಮಹೀಂದ್ರಾ ಲಿಮಿಟೆಡ್ʼನ ʻಕೃಷಿ ಉಪಕರಣಗಳ ವಿಭಾಗವುʼ (ಫಾರ್ಮ್‌ ಎಕ್ವಿಪ್‌ಮೆಂಟ್‌ ಸೆಕ್ಟರ್‌-ಎಫ್‌ಇಎಸ್) ಹೊಸ 6 ಸಾಲು ಭತ್ತದ ನಾಟಿ (Mahindra Paddy Walker) ಯಂತ್ರವನ್ನು ಬಿಡುಗಡೆ ಮಾಡಿದೆ. ಕರ್ನಾಟಕದಲ್ಲಿ 4ಆರ್‌ಒ ವಾಕ್ ಬಿಹೈಂಡ್‌ ನಾಟಿಯಂತ್ರ (ಎಂಪಿ 461) ಮತ್ತು 4 ಆರ್​ಒ ರೈಡ್-ಆನ್ (ಪ್ಲಾಂಟಿಂಗ್ ಮಾಸ್ಟರ್ ಪ್ಯಾಡಿ 4 ಆರ್​ಒ) ಅನ್ನು ಯಶಸ್ವಿಯಾಗಿ ಪರಿಚಯಿಸಿದ ನಂತರ, ಮಹೀಂದ್ರಾ ಅವರ ಹೊಸ ʻ6ಆರ್​ಒ ಪ್ಯಾಡಿ ವಾಕರ್ʼ ಭತ್ತದ ನಾಟಿ ಯಂತ್ರವು ಭತ್ತ ನಾಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಮಹೀಂದ್ರಾದ ಸ್ಥಿತಿಗತಿಯನ್ನು ಹೆಚ್ಚಿಸಿದೆ.

ಇದನ್ನೂ ಓದಿ: Mahindra XUV 3XO : ಮಹೀಂದ್ರಾದ ವಿಶೇಷ ದಾಖಲೆ; 60 ನಿಮಿಷದಲ್ಲಿ 50 ಸಾವಿರ ಕಾರು ಬುಕಿಂಗ್​!

ಈ ವಿಭಾಗದಲ್ಲಿ ಕಂಪನಿಯು ಈಗಾಗಲೇ ಮುಂಚೂಣಿ ಸ್ಥಾನ ಹೊಂದಿದ್ದು, ಇದನ್ನು ಮತ್ತಷ್ಟು ಉತ್ತಮಗೊಳಿಸಲು ಹೊಸ ಯಂತ್ರ ನೆರವಾಗಲಿದೆ. ಭತ್ತವನ್ನು ಪ್ರಮುಖ ಬೆಳೆಯುವ ಕರ್ನಾಟಕವು ವಿಶ್ವ ದರ್ಜೆಯ ಅಕ್ಕಿಗೆ ಹೆಸರುವಾಸಿಯಾಗಿದೆ ಮತ್ತು ಭತ್ತದ ಯಾಂತ್ರೀಕರಣ ತಂತ್ರಜ್ಞಾನಗಳನ್ನು ಆರಂಭಿಕವಾಗಿ ಅಳವಡಿಸಿಕೊಂಡ ರಾಜ್ಯಗಳಲ್ಲಿ ಒಂದಾಗಿದೆ. ರಾಜ್ಯದ ಹಲವಾರು ಭಾಗಗಳಲ್ಲಿ ಉತ್ತಮ ಗುಣಮಟ್ಟದ ಅಕ್ಕಿಯನ್ನು ಬೆಳೆಯಲಾಗುತ್ತದೆ. ಹೊಸ ಪರಿಹಾರವು ನೀರಿನ ಸಂರಕ್ಷಣೆ, ಕಡಿಮೆ ಪರಿಸರ ಮಾಲಿನ್ಯ ತಡೆಯುತ್ತದೆ. ಇದರ ಜೊತೆಗೆ, ಕಾರ್ಮಿಕ-ಕೇಂದ್ರಿತ ತಂತ್ರಗಳಿಗೆ ಹೋಲಿಸಿದರೆ ಕಡಿಮೆ ಕಾರ್ಮಿಕ ವೆಚ್ಚ ಸೇರಿದಂತೆ, ಭತ್ತದ ಕೃಷಿಗೆ ಸಂಬಂಧಿಸಿದ ಒಟ್ಟಾರೆ ಲಾಭದಾಯಕತೆ ನೀಡುತ್ತದೆ.

ಹೊಸ ʻಮಹೀಂದ್ರಾ 6 ಆರ್​ಒ ಪ್ಯಾಡಿ ವಾಕರ್ʼ ಭತ್ತ ನಾಟಿ ಯಂತ್ರವು ಅತ್ಯುತ್ತಮ ಆಪರೇಟರ್ ದಕ್ಷತೆ ಒದಗಿಸುತ್ತದೆ. ನಿಖರತೆ ಮತ್ತು ಪರಿಣಾಮಕಾರಿ ನಾಟಿಗಾಗಿ ಇದನ್ನು ವಿನ್ಯಾಸಗೊಳಿಸಲಾಗಿದೆ. ಇದು ಭತ್ತದ ಕೃಷಿಯಲ್ಲಿ ಹೊಸ ಮಾನದಂಡಗಳನ್ನು ಸ್ಥಾಪಿಸುತ್ತದೆ. ಹಸ್ತಚಾಲಿತವಾಗಿ ನಿರ್ವಹಿಸಲ್ಪಡುವ ಹೊಸ ನಾಟಿ ಯಂತ್ರವು ವಿನ್ಯಾಸದಲ್ಲಿ ಚಿಕ್ಕದಾಗಿದೆ ಆಗಿದೆ ಮತ್ತು ಸೀಮಿತ ಸ್ಥಳಗಳಲ್ಲಿ ಸುಲಭವಾಗಿ ಇದನ್ನು ಕಾರ್ಯಾಚರಿಸಬಹುದಾಗಿದೆ.

ಆರು ಸಾಲುಗಳಲ್ಲಿ ಭತ್ತ ನಾಟಿ

ಏಕಕಾಲದಲ್ಲಿ ಆರು ಸಾಲುಗಳಲ್ಲಿ, ಒಂದೇ ಪಾಸ್ ನಲ್ಲಿ ಏಕರೂಪದ ನಾಟಿ ಮಾಡಲು ಇದು ಅವಕಾಶ ಕಲ್ಪಿಸಲಿದೆ. ಶಕ್ತಿ, ವಿಶ್ವಾಸಾರ್ಹತೆ ಮತ್ತು ಕಾರ್ಯಕ್ಷಮತೆಯ ಮೇಲೆ ಗಮನ ಕೇಂದ್ರೀಕರಿಸಿ, ಹೊಸ ಭತ್ತ ನಾಟಿ ಯಂತ್ರವನ್ನು ತಯಾರಿಸಲಾಗಿದ್ದು, ಇದು ಹೆಚ್ಚು ಬಾಳಿಕೆ ಬರುವ ಗೇರ್‌ಬಾಕ್ಸ್ ಮತ್ತು 4-ಲೀಟರ್ ಸಾಮರ್ಥ್ಯದೊಂದಿಗೆ ಶಕ್ತಿಯುತ ಎಂಜಿನ್ ಅನ್ನು ಹೊಂದಿದೆ. ಇದು ಹೆಚ್ಚಿನ ಉತ್ಪಾದನೆ ಮತ್ತು ಕಡಿಮೆ ಇಂಧನ ಬಳಕೆಯನ್ನು ಖಾತರಿಪಡಿಸುತ್ತದೆ, ಭತ್ತದ ಕೃಷಿಯಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ, ಜೊತೆಗೆ ಸರ್ವೀಸ್‌ ಅಂತರ ಹೆಚ್ಚಿರುವ ಕಾರಣದಿಂದ ಸೇವಾ ವೆಚ್ಚವನ್ನು ಕಡಿಮೆ ಮಾಡುತ್ತದೆ.

2 ವರ್ಷಗಳ ಮರುಪಾವತಿ ಅವಧಿ ಮತ್ತು ಕೇವಲ 200 ಎಕರೆಗಳ ಕನಿಷ್ಠ ಕಾರ್ಯಾಚರಣಾ ಪ್ರದೇಶದೊಂದಿಗೆ, ಹೊಸ ಭತ್ತ ನಾಟಿ ಯಂತ್ರವು ಬಾಡಿಗೆ ವ್ಯವಹಾರಗಳಿಗೆ ಅತ್ಯುತ್ತಮ ಭವಿಷ್ಯ ಒದಗಿಸುತ್ತದೆ. ಕರ್ನಾಟಕದಲ್ಲಿ ಲಭ್ಯವಿರುವ ಮಹೀಂದ್ರಾದ ವ್ಯಾಪಕವಾದ ಕೃಷಿ ಯಂತ್ರೋಪಕರಣಗಳ ಡೀಲರ್ ನೆಟ್‌ವರ್ಕ್‌ ಮೂಲಕ ರೈತರು ಮನೆ ಬಾಗಿಲಿಗೆ ಸೇವೆ ಪಡೆಯಬಹುದು. ಇದನ್ನು ‘ಮಹೀಂದ್ರಾ ಸಾಥಿ’ ಎಂಬ ಹೊಸ ಬಳಕೆದಾರ-ಸ್ನೇಹಿ ಅಪ್ಲಿಕೇಶನ್ ಮೂಲಕ ಮೇಲ್ವಿಚಾರಣೆ ಮಾಡಬಹುದು. ಹೊಸ ಮಹೀಂದ್ರಾ ʻ6 ಆರ್ಒ ಪ್ಯಾಡಿ ವಾಕರ್ʼ ಮತ್ತು ಮಹೀಂದ್ರಾದ ಸಂಪೂರ್ಣ ಶ್ರೇಣಿಯ ಭತ್ತದ ನಾಟಿ ಯಂತ್ರಗಳನ್ನು ಮಹೀಂದ್ರ ಫೈನಾನ್ಸ್ ಮತ್ತು ಶ್ರೀರಾಮ್ ಫೈನಾನ್ಸ್‌ನಿಂದ ಅತ್ಯುತ್ತಮ ದರ್ಜೆಯ ಹಣಕಾಸು ಆಯ್ಕೆಗಳೊಂದಿಗೆ ನೀಡಲಾಗುವುದು.

Continue Reading

ಆಟೋಮೊಬೈಲ್

Doodle V3 E-Cycle: ‘ಕಲ್ಕಿ 2898 ಎಡಿ’ನಿಂದ ಪ್ರೇರಿತವಾದ ಇ-ಸೈಕಲ್ ಮಾರುಕಟ್ಟೆಗೆ

ದೇಶದಲ್ಲಿ ಮುಂಚೂಣಿಯಲ್ಲಿರುವ ಎಲೆಕ್ಟ್ರಿಕ್ ಸೈಕಲ್ ತಯಾರಕರಾದ ಮೋಟೋರಾಡ್ ಬಹುನಿರೀಕ್ಷಿತ ಪ್ರಭಾಸ್ ಅಭಿನಯದ “ಕಲ್ಕಿ: 2898 ಎಡಿ” ಯೊಂದಿಗೆ ವಿಶಿಷ್ಟ ಪಾಲುದಾರಿಕೆಯಲ್ಲಿ ಇ ಸೈಕಲ್ ಅನ್ನು ಪರಿಚಯಿಸುತ್ತಿದೆ.
“ಕಲ್ಕಿ ಲಿಮಿಟೆಡ್ ಎಡಿಷನ್ ಡೂಡಲ್” (Doodle V3 E-Cycle) ಎಂಬ ಹೆಸರಿನ ಈ ಸೈಕಲ್ ಚಲನಚಿತ್ರದ ಸಾಹಸಮಯ ಮನೋಭಾವ ಮತ್ತು ಭವಿಷ್ಯದ ಸೆಟ್ಟಿಂಗ್ ಅನ್ನು ಒಳಗೊಂಡಂತೆ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ.

VISTARANEWS.COM


on

By

Doodle V3 E-Cycle
Koo

ಪುಣೆ (Pune) ಮೂಲದ ಎಲೆಕ್ಟ್ರಿಕ್ ಬೈಸಿಕಲ್ ಕಂಪನಿಯಾದ ಇಮೊಟೊರಾಡ್ (EMotorad) ಇತ್ತೀಚೆಗೆ ಕಲ್ಕಿ ಸಹಭಾಗಿತ್ವದಲ್ಲಿ ಸೀಮಿತ ಆವೃತ್ತಿಯ ಇ-ಸೈಕಲ್ (Doodle V3 E-Cycle) ಅನ್ನು ಬಿಡುಗಡೆ ಮಾಡಿದೆ. ಬಾಹುಬಲಿ ಖ್ಯಾತಿಯ ಪ್ರಭಾಸ್ (Prabhas) ಅವರ ಅಭಿನಯದ ಮುಂಬರುವ ಆಕ್ಷನ್ ಚಿತ್ರ 2898 ಎಡಿ ಯಿಂದ (Kalki 2898 AD) ಪ್ರೇರಿತವಾದ ಇ ಸೈಕಲ್ ಇದಾಗಿದೆ.

ದೇಶದಲ್ಲಿ ಮುಂಚೂಣಿಯಲ್ಲಿರುವ ಎಲೆಕ್ಟ್ರಿಕ್ ಸೈಕಲ್ ತಯಾರಕರಾದ ಮೋಟೋರಾಡ್ ಬಹುನಿರೀಕ್ಷಿತ ಪ್ರಭಾಸ್ ಅಭಿನಯದ “ಕಲ್ಕಿ: 2898 ಎಡಿ” ಯೊಂದಿಗೆ ವಿಶಿಷ್ಟ ಪಾಲುದಾರಿಕೆಯಲ್ಲಿ ಇ ಸೈಕಲ್ ಅನ್ನು ಪರಿಚಯಿಸುತ್ತಿದೆ.
ಕಲ್ಕಿ: 2898 ಎಡಿ ಚಿತ್ರದಲ್ಲಿ ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಬ್ ಬಚ್ಚನ್, ಕಮಲ್ ಹಾಸನ್, ದುಲ್ಕರ್ ಸಲ್ಮಾನ್, ದಿಶಾ ಪಟಾನಿ, ರಾಣಾ ದಗ್ಗುಬಾಟಿ ಮೊದಲಾದವರು ನಟಿಸಿದ್ದಾರೆ. “ಕಲ್ಕಿ ಲಿಮಿಟೆಡ್ ಎಡಿಷನ್ ಡೂಡಲ್” ಎಂಬ ಹೆಸರಿನ ಈ ಸೈಕಲ್ ಚಲನಚಿತ್ರದ ಸಾಹಸಮಯ ಮನೋಭಾವ ಮತ್ತು ಭವಿಷ್ಯದ ಸೆಟ್ಟಿಂಗ್ ಅನ್ನು ಒಳಗೊಂಡಂತೆ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ.

ಕಲ್ಕಿ: 2898 ಎಡಿ ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಆಕ್ಷನ್- ಸಾಹಸ ಚಲನಚಿತ್ರ. ಅದರ ದೃಶ್ಯ ವೈಭವ ಮತ್ತು ತಾರಾ ಬಳಗದ ಶಕ್ತಿಯನ್ನು ಸಂಯೋಜಿಸಿ ಇದನ್ನು ತಯಾರಿಸಲಾಗಿದೆ. ಮೊಟೊರಾಡ್ ನ ಸೀಮಿತ ಆವೃತ್ತಿಯ ಇ-ಸೈಕಲ್ ಜನಪ್ರಿಯ ಡೂಡಲ್ ವಿ3 ಮಾದರಿಯನ್ನು ಆಧರಿಸಿದೆ.

“ಕಲ್ಕಿ ಲಿಮಿಟೆಡ್ ಎಡಿಷನ್ ಡೂಡಲ್” ನ ಈ ವಿಶೇಷ ಆವೃತ್ತಿಯು ಚಲನಚಿತ್ರದಿಂದ ಪ್ರೇರಿತವಾದ ವಿಶೇಷ ಗ್ರಾಫಿಕ್ಸ್ ಮತ್ತು ಬಣ್ಣದ ಯೋಜನೆಗಳನ್ನು ಹೊಂದಿದೆ. ಇದು ಅಭಿಮಾನಿಗಳಿಗೆ ಸಂಗ್ರಹಿಸಬಹುದಾದಂತೆ ಮಾಡುತ್ತದೆ.
ಈ ವಿಶಿಷ್ಟವಾದ ಸೀಮಿತ ಆವೃತ್ತಿಯ ಡೂಡಲ್ ವಿ3 ಇ-ಸೈಕಲ್ ಅನ್ನು ಪರಿಚಯಿಸಲು ಪ್ರಭಾಸ್ ಅವರ ಇತ್ತೀಚಿನ ಚಲನಚಿತ್ರ ಕಲ್ಕಿಯೊಂದಿಗೆ ಸಹಕರಿಸಲು ನಾವು ರೋಮಾಂಚನಗೊಂಡಿದ್ದೇವೆ ಎಂದು ಇಮೊಟೊರಾಡ್‌ನ ಸಿಇಒ ಕುನಾಲ್ ಗುಪ್ತಾ ಹೇಳಿದರು.

ನಮ್ಮ ಪಾಲುದಾರಿಕೆಯು ನಾವೀನ್ಯತೆಗೆ ನಮ್ಮ ಬದ್ಧತೆ ಮತ್ತು ಉತ್ಪನ್ನಗಳನ್ನು ರಚಿಸುವ ನಮ್ಮ ಉತ್ಸಾಹವನ್ನು ಪ್ರತಿನಿಧಿಸುತ್ತದೆ. ಅದು ನಮ್ಮ ಗ್ರಾಹಕರ ಜೀವನಶೈಲಿ ಮತ್ತು ಆಸಕ್ತಿಗಳೊಂದಿಗೆ ಅನುರಣಿಸುತ್ತದೆ. ಅಭಿಮಾನಿಗಳಿಗೆ ಫ್ಯೂಚರಿಸ್ಟಿಕ್ ಇ-ಸೈಕಲ್ ಅನ್ನು ನೀಡಲು ನಾವು ಸಂತೋಷಪಡುತ್ತೇವೆ. ಅದು ಅವರಿಗೆ ನಿಕಟವಾಗಿ ಸಂಯೋಜಿಸಲು ಮತ್ತು ಅಂತಹ ಐಕಾನಿಕ್ ಚಲನಚಿತ್ರದ ಭಾಗವನ್ನು ಮನೆಗೆ ತೆಗೆದುಕೊಂಡು ಹೋಗಲು ಸಹಾಯ ಮಾಡುತ್ತದೆ ಎಂದು ಅವರು ತಿಳಿಸಿದ್ದಾರೆ.

Doodle V3 E-Cycle


ಮುಂಗಡ ಬುಕ್ಕಿಂಗ್ ಲಭ್ಯ

ಇದರ ಬೆಲೆ 55,999 ರೂಪಾಯಿ. ಕಲ್ಕಿ ಲಿಮಿಟೆಡ್ ಎಡಿಷನ್ ಡೂಡಲ್ ಅನ್ನು ಮುಂಗಡವಾಗಿ ಬುಕ್ಕಿಂಗ್ ಮಾಡಲು 2,898 ರೂ. ಗಳ ಮುಂಗಡ ಪಾವತಿಯ ವಿಶೇಷ ಸೌಲಭ್ಯವೂ ಇದೆ.

ಇದನ್ನೂ ಓದಿ: Top 10 Motar Bike: ಭಾರತದಲ್ಲಿ ಅತಿ ಹೆಚ್ಚು ಮಾರಾಟವಾಗುವ ಟಾಪ್ 10 ಬೈಕ್‌ಗಳಿವು

ವಿಶೇಷತೆ ಏನು?

ಕಲ್ಕಿ ಲಿಮಿಟೆಡ್ ಆವೃತ್ತಿಯು ವಿಶೇಷವಾದ “ಕಲ್ಕಿ: 2898ಎಡಿ” ನಿಂದ ಪ್ರೇರಿತವಾಗಿ ವಿನ್ಯಾಸಗೊಳಿಸಲಾಗಿದೆ. ಸುಲಭವಾಗಿ ಸಾಗಿಸಲು ಮಡಿಚಬಹುದಾದ ಫ್ರೇಮ್ ಇದರಲ್ಲಿದೆ. ವರ್ಧಿತ ಸ್ಥಿರತೆಗಾಗಿ ಫ್ಯಾಟ್ ಟೈರ್‌ಗಳು ಇದರ ವೈಶಿಷ್ಟ್ಯವಾಗಿದೆ. ವಿಶೇಷ ವಿನ್ಯಾಸದ ಜೊತೆಗೆ ಇ-ಸೈಕಲ್ ಅನ್ನು ಮಡಚಬಹುದು. ಇದು ನಗರ ಪ್ರಯಾಣಿಕರಿಗೆ ಸೂಕ್ತವಾಗಿದೆ. ಎಲ್ಲಾ ರೀತಿಯ ಭೂಪ್ರದೇಶಗಳಲ್ಲಿ ಉತ್ತಮ ಸ್ಥಿರತೆ ಮತ್ತು ಸೌಕರ್ಯಕ್ಕಾಗಿ ಇದರ ಟೈರ್‌ ಗಳು ಸೂಕ್ತವಾಗಿದೆ.

60ಕ್ಕಿಂತ ಹೆಚ್ಚು ಕಿ.ಮೀ. ವ್ಯಾಪ್ತಿ ಮತ್ತು 25ಕೆಎಂಪಿಹೆಚ್ ಗರಿಷ್ಠ ವೇಗವನ್ನು ಹೊಂದಿರುವ ಇದು ಬಹುಮುಖ ಕಾರ್ಯಕ್ಷಮತೆಗಾಗಿ ಐದು ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ. ವಿಶಿಷ್ಟ ವಿನ್ಯಾಸ ಮತ್ತು ಸೀಮಿತ ಲಭ್ಯತೆಯೊಂದಿಗೆ ಕಲ್ಕಿ ಲಿಮಿಟೆಡ್ ಆವೃತ್ತಿಯ ಡೂಡಲ್ ಇ-ಸೈಕಲ್ ಉತ್ಸಾಹಿಗಳು ಮತ್ತು ಚಲನಚಿತ್ರದ ಅಭಿಮಾನಿಗಳಿಗೆ ಬೇಡಿಕೆಯ ಉತ್ಪನ್ನವಾಗಿದೆ.

Continue Reading
Advertisement
IND vs ENG Semi Final
ಕ್ರೀಡೆ1 hour ago

IND vs ENG Semi Final: ಇಂಗ್ಲೆಂಡ್​ ಮಣಿಸಿ 10 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸಿದ ಭಾರತ

Abhyas Trial
ದೇಶ3 hours ago

Abhyas Trial: ದೇಶದ ಕ್ಷಿಪಣಿ ವ್ಯವಸ್ಥೆಗೆ ಬಲ ತುಂಬುವ ‘ಅಭ್ಯಾಸ್’‌ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿ

Congress Protest
ಕರ್ನಾಟಕ3 hours ago

ಹಾಲು, ಪೆಟ್ರೋಲ್‌ ಬೆಲೆ ಏರಿಸಿ, ಎಸಿ ಬಸ್‌ನಲ್ಲಿ ಪ್ರತಿಭಟನೆಗೆ ಹೊರಟ ಕಾಂಗ್ರೆಸ್‌ ಹಣದ ಮೂಲ ಏನು? ಬಿಜೆಪಿ ಪ್ರಶ್ನೆ

NEET Aspirant
ದೇಶ4 hours ago

NEET Aspirant: ನೀಟ್‌ ಅಕ್ರಮ ಬಯಲಾದ ಬೆನ್ನಲ್ಲೇ 17 ವರ್ಷದ NEET ಅಭ್ಯರ್ಥಿ ಆತ್ಮಹತ್ಯೆ; ಸಾವಿಗೆ ಯಾರು ಹೊಣೆ?

Tata Motors has taken the lead in the SUV market with Nexon Punch
ಕರ್ನಾಟಕ4 hours ago

Tata Motors: ನೆಕ್ಸಾನ್, ಪಂಚ್‌ ಮೂಲಕ ಎಸ್‌ಯುವಿ ಮಾರುಕಟ್ಟೆಯಲ್ಲಿ ಮುನ್ನಡೆ ಸಾಧಿಸಿದ ಟಾಟಾ ಮೋಟಾರ್ಸ್

Rohit Sharma
ಕ್ರೀಡೆ4 hours ago

Rohit Sharma: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ವಿಶ್ವ ದಾಖಲೆ ಬರೆದ ಹಿಟ್​ಮ್ಯಾನ್ ರೋಹಿತ್

virat kohli
ಕ್ರೀಡೆ5 hours ago

Virat Kohli: ಮೊದಲ ಬಾರಿಗೆ ಸೆಮಿಫೈನಲ್​ನಲ್ಲಿ ಸಿಂಗಲ್​ ಡಿಜಿಟ್​ಗೆ ಔಟ್​ ಆದ​ ಕೊಹ್ಲಿ; ಸಮಾಧಾನಪಡಿಸಿದ ಕೋಚ್​

DCM DK Shivakumar latest statement about CM change issue
ಪ್ರಮುಖ ಸುದ್ದಿ5 hours ago

DK Shivakumar: ಸಿಎಂ ಬದಲಾವಣೆ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಡಿ.ಕೆ. ಶಿವಕುಮಾರ್

roopantara Movie First Look Poster released
ಕರ್ನಾಟಕ5 hours ago

Kannada New Movie: ‘ರೂಪಾಂತರ’ಗೊಂಡ ರಾಜ್ ಬಿ. ಶೆಟ್ಟಿ! ಮತ್ತೊಂದು ವಿಭಿನ್ನ ಚಿತ್ರ

Hosur Airport
ಪ್ರಮುಖ ಸುದ್ದಿ5 hours ago

Hosur Airport: ಬೆಂಗಳೂರಿನಿಂದ ಕೇವಲ 40 ಕಿ.ಮೀ ದೂರದ ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ8 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ9 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು11 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ15 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ7 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು2 weeks ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌