Shivamogga Dasara 2022 | ವಿಜೃಂಭಣೆಯಿಂದ ನಡೆಯುತ್ತಿರುವ ದಸರಾದಲ್ಲಿ ನಾಟಕೋತ್ಸವ, ಶ್ವಾನ ಪ್ರದರ್ಶನ - Vistara News

ದಸರಾ ಸಂಭ್ರಮ

Shivamogga Dasara 2022 | ವಿಜೃಂಭಣೆಯಿಂದ ನಡೆಯುತ್ತಿರುವ ದಸರಾದಲ್ಲಿ ನಾಟಕೋತ್ಸವ, ಶ್ವಾನ ಪ್ರದರ್ಶನ

ಶಿವಮೊಗ್ಗದಲ್ಲಿ ದಸರಾ (Shivamogga Dasara 2022) ನಿಮಿತ್ತ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿ ಕಾರ್ಯಕ್ರಮಗಳು ನಡೆಯುತ್ತಿವೆ. ಹಾಸ್ಯನಾಟಕ ಸ್ಪರ್ಧೆ ಹಾಗೂ ಶ್ವಾನ ಪ್ರದರ್ಶನ ಈ ಬಾರಿಯ ವಿಶೇಷವಾಗಿವೆ.

VISTARANEWS.COM


on

Shivamogga Dasara 2022
ಶಿವಮೊಗ್ಗ ದಸರಾ ಕಾರ್ಯಕ್ರಮಗಳಲ್ಲಿ ಕಲಾತಂಡಗಳ ಪ್ರದರ್ಶನ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಮಹಾನಗರ ಪಾಲಿಕೆ ವತಿಯಿಂದ ನಡೆಯುತ್ತಿರುವ ಶಿವಮೊಗ್ಗ ದಸರಾ ಮಹೋತ್ಸವ (Shivamogga Dasara 2022) ಅತ್ಯಂತ ವಿಜೃಂಭಣೆಯಿಂದ ಮುಂದುವರಿದಿದ್ದು, ಬುಧವಾರ ಮಕ್ಕಳ ದಸರಾದಲ್ಲಿ ಸಾವಿರಾರು ಮಕ್ಕಳು ಭಾಗವಹಿಸಿದ್ದರು.

ನಗರದ ಗೋಪಿವೃತ್ತದಲ್ಲಿ ಮಕ್ಕಳ ಕಲರವ ಮುಗಿಲು ಮುಟ್ಟಿತ್ತು. ಸಾವಿರಾರು ಮಕ್ಕಳು ಒಟ್ಟಿಗೆ ಸೇರಿ ಮಕ್ಕಳ ದಸರಾದಲ್ಲಿ ಸಂಭ್ರಮಿಸಿದರು. ನೃತ್ಯ ಮಾಡಿದರು. ಕೀಲು ಕುದುರೆ ಇತರೆ ಜಾನಪದ ಕಲಾತಂಡಗಳು ಭಾಗಿಯಾಗಿಯಾಗಿ ಮಕ್ಕಳ ಸಂಭ್ರಮವನ್ನು ಹೆಚ್ಚಿಸಿದ್ದವು.

ಮಕ್ಕಳ ದಸರಾವನ್ನು ಈ ಬಾರಿಯ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ೬೨೫ ಕ್ಕೆ ೬೨೫ ಅಂಕ ಪಡೆದ ಪಂಚಮಿ, ನಯನಾ ಸಿದ್ದಪ್ಪ ಪೂಜಾರ್ ಅವರು ಉದ್ಘಾಟಿಸಿದರು. ನಗರದ ಸರ್ಕಾರಿ ಹಾಗೂ ಅನುದಾನ ಮತ್ತು ಅನುದಾನರಹಿತ ಶಾಲೆಗಳ ಸಾವಿರಾರು ಸಂಖ್ಯೆಯ ಮಕ್ಕಳು ಗೋಪಿ ವೃತ್ತದಿಂದ ಫ್ರೀಡಂ ಪಾರ್ಕ್ ವರೆಗೆ ಜಾಥಾ ನಡೆಸಿದರು. ಮೇಯರ್ ಸುನಿತಾ ಅಣ್ಣಪ್ಪ, ಮಕ್ಕಳದಸರಾ ಸಮಿತಿ ಅಧ್ಯಕ್ಷೆ ಲತಾ ಗಣೇಶ್ ಮೊದಲಾದವರಿದ್ದರು.

ಫ್ರೀಡಂ ಪಾರ್ಕ್‌ನಲ್ಲಿ ಸಾಗರದ “ನಮ್ಮ ವನಶ್ರೀʼʼ ತಂಡದಿಂದ ನೃತ್ಯ-ಯೋಗ, ಜಿಲ್ಲಾ ಪೊಲೀಸ್ ತಂಡದಿಂದ ಶ್ವಾನಗಳ ಪ್ರದರ್ಶನ ಮತ್ತು ಜಿಲ್ಲಾ ಅಗ್ನಿಶಾಮಕದಳದಿಂದ ಅಗ್ನಿ ಅವಘಡ ಕುರಿತು ಅಣಕು ಪ್ರದರ್ಶನ ನಡೆದವು.

Shivamogga Dasara 2022
ಮಕ್ಕಳ ದಸರಾದಲ್ಲಿ ಶಾಲಾ ಮಕ್ಕಳ ಕಲರವ

“ಪರಿಸರ ದಸರಾʼʼ ಅಂಗವಾಗಿ ಬಿ.ಎಚ್.ರಸ್ತೆಯ ಮೇನ್ ಮಿಡ್ಲ್ ಸ್ಕೂಲ್ನಲ್ಲಿ ಶಾಲಾ ಮಕ್ಕಳಿಗೆ ಕ್ವಿಜ್ ಮತ್ತು ಪ್ರಬಂಧ ಸ್ಪರ್ಧೆ ನಡೆಯಿತು. ಯುವ ದಸರಾ ನಿಮಿತ್ತ ಕ್ರಾಸ್ ಕಂಟ್ರಿ ಓಟದ ಸ್ಪರ್ಧೆ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯಿತು. ನೆಹರು ಕ್ರೀಡಾಂಗಣದಲ್ಲಿ ಸಂಜೆ ನಡೆದ ಕಬಡ್ಡಿ ಪಂದ್ಯಾವಳಿ ಯುವ ದಸರಾಕ್ಕೆ ಮೆರುಗು ನೀಡಿತು. ಯುವ ದಸರಾ ಸಮಿತಿ ಅಧ್ಯಕ್ಷ ಧೀರರಾಜ್ ಹೊನ್ನವಿಲೆ, ಪಾಲಿಕೆ ಸದಸ್ಯ ಬಿ.ಎ.ರಮೇಶ್ ಹೆಗ್ಡೆ, ಸಮಿತಿ ಸದಸ್ಯರಾದ ನಾಗರಾಜ್ ಕಂಕಾರಿ ಅನಿತಾ ರವಿಶಂಕರ್ ಮತ್ತಿತರರು ಇದ್ದರು.

ಕಲಾ ದಸರಾದಲ್ಲಿ ಛಾಯಾ ಚಿತ್ರ ಪ್ರದರ್ಶನ

ಕುವೆಂಪು ರಂಗಮಂದಿರದಲ್ಲಿ ನಡೆದ “ಕಲಾ ದಸರಾʼʼದಲ್ಲಿ ಹವ್ಯಾಸಿ ಛಾಯಾಗ್ರಾಹಕರ ಛಾಯಾಚಿತ್ರ ಪ್ರದರ್ಶನವನ್ನು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಉದ್ಘಾಟಿಸಿದರು. ಚಿತ್ರಕಲಾ ಪ್ರದರ್ಶನ ಮತ್ತು ಚಿತ್ರ ಸಂತೆಗೂ ಚಾಲನೆ ನೀಡಲಾಯಿತು. ಸಂಜೆ ಕವಿಗೋಷ್ಠಿ, ವಿಚಾರ ಸಂಕಿರಣ ನಡೆಯಿತು. ಎಂ.ಎಸ್.ನರಸಿಂಹಮೂರ್ತಿ, ವೈ.ಎಚ್. ಗುಂಡೂರಾವ್, ಇಂದುಮತಿ ಸಾಲಿಮಠ, ಉಮೇಶ್ ಗೌಡ ಅವರಿಂದ ಹರಟೆ ಕಾರ್ಯಕ್ರಮ ಕೂಡ ಜನರ ಮೆಚ್ಚುಗೆಗೆ ಪಾತ್ರವಾಯಿತು.

Shivamogga Dasara 2022
ಕಲಾ ತಂಡಗಳ ನೃತ್ಯ ಪ್ರದರ್ಶನ

ಮಹಿಳೆಯರ ಸ್ವಾತಂತ್ರ್ಯದ ನಡಿಗೆ

“ಮಹಿಳಾ ದಸರಾʼʼದ ಭಾಗವಾಗಿ ನಗರದ ಗೋಪಿ ವೃತ್ತದಿಂದ ಫ್ರೀಡಂ ಪಾರ್ಕ್‌ವರೆಗೆ ಮಹಿಳಾ ಸ್ವಾತಂತ್ರ್ಯದ ನಡಿಗೆ ಜರುಗಿತು. ಕಲಾ ಸಾಂಸ್ಕೃತಿಕ ತಂಡಗಳು, ಬೊಂಬೆ ಕುಣಿತ, ಡೊಳ್ಳು ಹಾಗೂ ವಿವಿಧ ವೇಷಭೂಷಣಗಳನ್ನು ತೊಟ್ಟ ಮಹಿಳೆಯರು ಹೆಜ್ಜೆ ಹಾಕಿದರು. ತದ ನಂತರ ನಡೆದ “ಮಹಿಳಾ ದಸರಾʼʼದ ಸಮಾರೋಪ ಸಮಾರಂಭವನ್ನು ಕಿರುತೆರೆ ನಟಿಯರಾದ ನಯನಾ ಹಾಗೂ ಅನ್ವಿತಾ ಉದ್ಘಾಟಿಸಿದರು.

ಕಾಫಿನಾಡು ಚಂದು ವಿಶೇಷ ಅತಿಥಿಯಾಗಿದ್ದರು. ಮೇಯರ್ ಸುನೀತಾ ಅಣ್ಣಪ್ಪ, ರೇಖಾ ರಂಗನಾಥ್, ಅನಿತಾ ರವಿಶಂಕರ್, ಎಸ್.ಜ್ಞಾನೇಶ್ವರ್, ಆರತಿ ಪ್ರಕಾಶ್, ಸುವರ್ಣಾ ಶಂಕರ್, ಸುರೇಖಾ ಮುರುಳೀಧರ್, ಮಂಜುಳಾ ಶಿವಣ್ಣ, ಸಂಗೀತಾ ನಾಗರಾಜು, ಭಾನುಮತಿ ವಿನೋದಕುಮಾರ್, ಕಲ್ಪನಾ ರಮೇಶ್, ಲಕ್ಷ್ಮೀ ಶಂಕರ್ ನಾಯ್ಕ, ಅನ್ನಪೂರ್ಣಾ ಇತರರು ಇದ್ದರು.

Shivamogga Dasara 2022
ಜಿಲ್ಲಾ ಪೊಲೀಸ್ ತಂಡದಿಂದ ಶ್ವಾನಗಳ ಪ್ರದರ್ಶನ

ಇಂದಿನಿಂದ ಹಾಸ್ಯನಾಟಕ ಸ್ಪರ್ಧೆ

ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಆಯೋಜನೆಗೊಂಡಿರುವ ರಂಗದಸರಾ ಭಾಗವಾಗಿ ಇಂದಿನಿಂದ ( ಸೆ. ೨೯) ರಾಜ್ಯ ಮಟ್ಟದ ಹಾಸ್ಯ ನಾಟಕ ಸ್ಪರ್ಧೆಗಳು ಆಯೋಜನೆಗೊಂಡಿವೆ. ಈ ನಾಟಕ ಸ್ಪರ್ಧೆಗಳು ಸೆ. ೨೯ ಮತ್ತು ೩೦ ರಂದು ಕುವೆಂಪು ರಂಗ ಮಂದಿರ ಹಾಗೂ ಅ. ೦೧ ಮತ್ತು ೦೨ ರಂದು ಸುವರ್ಣ ಸಂಸ್ಕೃತಿ ಭವನದಲ್ಲಿ ನಡೆಯಲಿವೆ.

ರಾಜ್ಯದ ವಿವಿಧೆಡೆಯಿಂದ ಬಂದ ಒಟ್ಟು 28 ತಂಡಗಳು ಈ ನಾಟಕ ಸ್ಪರ್ಧೆಯಲ್ಲಿ ಭಾಗವಹಿಸುತ್ತಿವೆ. ಈ ಪೈಕಿ ಸಮಯ ಹಾಗೂ ಸ್ಥಳದ ಲಭ್ಯತೆಯ ಆಧಾರದ ಮೇಲೆ ೧೬ ನಾಟಕಗಳನ್ನು ಮಾತ್ರ ಪ್ರದರ್ಶನಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ. ವಿಜೇತ ತಂಡಕ್ಕೆ ಪ್ರಥಮ ಬಹುಮಾನವಾಗಿ 30,000 ರೂ., ದ್ವಿತೀಯ ಬಹುಮಾನ 20,000 ರೂ. ಹಾಗೂ ತೃತೀಯ ಬಹುಮಾನ 15,000 ರೂ. ನಗದು ಪುರಸ್ಕಾರ ಜೊತೆಗೆ ಚಾಮುಂಡೇಶ್ವರಿ ಟ್ರೋಫಿ ನೀಡಲಾಗುತ್ತದೆ. ಇದಲ್ಲದೇ ಶ್ರೇಷ್ಠ ನಟ, ಶ್ರೇಷ್ಠ ನಟಿ ಹಾಗೂ ಶ್ರೇಷ್ಠ ನಿರ್ದೇಶನಕ ಪ್ರಶಸ್ತಿ ನೀಡಲಾಗುತ್ತದೆ. ಇದಕ್ಕೆ ನಗದು ಪುರಸ್ಕಾರವೂ ಇದೆ.

ಈ ನಾಟಕ ಸ್ಪರ್ಧೆಗಳನ್ನು ಹೆಸರಾಂತ ರಂಗಕರ್ಮಿ, ಪರಿಸರಚಿಂತಕ, ವಿಶ್ರಾಂತ ಪ್ರಾಚಾರ್ಯ ಪ್ರೊ. ಬಿ. ಎಂ.ಕುಮಾರಸ್ವಾಮಿ ಉದ್ಘಾಟಿಸಲಿದ್ದು, ರಂಗಕರ್ಮಿಗಳಾದ ಬಿ.ಎಂ.ರಾಜಕುಮಾರ್, ಗಾಯತ್ರಿ, ಅಭಿರುಚಿತಂಡದ ಅಧ್ಯಕ್ಷರಾದ ಡಾ.ಶಿವರಾಮ ಕೃಷ್ಣನ್, ರಂಗದಸರಾ ಸಮಿತಿಯ ಸದಸ್ಯ ಎಸ್. ಎನ್. ಚೆನ್ನಬಸಪ್ಪ, ಪ್ರಭಾಕರ್, ರಾಹುಲ್ ಬಿದರೆ, ಆರ್.ಸಿ.ನಾಯ್ಕ, ಆರ್. ಎಸ್. ಸತ್ಯನಾರಾಯಣ, ಮೀನಾ ಗೋವಿಂದರಾಜ್, ಹೆಚ್.ಮೂರ್ತಿ, ಮಧು ನಾಯ್ಕ, ಡಾ.ರೇಖಾ, ಕೆ. ಸುರೇಶ್, ಶ್ರೀಕಾಂತ್, ಅನಿಲ್ ಮೂರ್ತಿ, ಪ್ರತೀಕ್ಷಾ, ಶೋಭಾ, ವಿನೀತ್, ರೂಪಾ, ಲಕ್ಷ್ಮೀ, ನಾಗರಾಜ್‌ ರಾವ್‌ ಪಾಲ್ಗೊಳ್ಳಲಿದ್ದಾರೆ. ರಂಗದಸರಾ ಸಮಿತಿಯ ಅಧ್ಯಕ್ಷ ಶಿರೀಶ್ ಅಧ್ಯಕ್ಷತೆ ವಹಿಸಲಿದ್ದಾರೆ.

ರಾಜ್ಯಮಟ್ಟದ ಶ್ವಾನ ಪ್ರದರ್ಶನ
“ರೈತ ದಸರಾ -2022ʼʼ ಅಂಗವಾಗಿ ಅ.2ರಂದು ಬೆಳಗ್ಗೆ 9ಕ್ಕೆ ಗಾಂಧಿ ಪಾರ್ಕ್ ಆವರಣದಲ್ಲಿ ರಾಜ್ಯ ಮಟ್ಟದ ಶ್ವಾನ ಪ್ರದರ್ಶನ ಏರ್ಪಡಿಸಲಾಗಿದೆ.
ಈ ಬಾರಿಯ ಶ್ವಾನ ಪ್ರದರ್ಶನದಲ್ಲಿ 15 ಕ್ಕೂ ಹೆಚ್ಚು ವಿವಿಧ ಆಕರ್ಷಕ ತಳಿಯ ಶ್ವಾನಗಳು ಪಾಲ್ಗೊಳ್ಳಲಿದ್ದು, 10 ಕೋಟಿ ರೂಪಾಯಿ ಬೆಲೆ ಬಾಳುವ ಟಿಬೇಟಿಯನ್ ಮ್ಯಾಸ್ಟಿಫ್ ಶ್ವಾನವು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ. ಪ್ರದರ್ಶನದಲ್ಲಿ ಭಾಗವಹಿಸುವ ಅತ್ಯುತ್ತಮ ಶ್ವಾನಗಳಿಗೆ ತಳಿವಾರು ಪ್ರಥಮ ಬಹುಮಾನ15,000 ರೂ., ದ್ವಿತೀಯ ಬಹುಮಾನ10,000 ರೂ. ಹಾಗೂ ತೃತೀಯ ಬಹುಮಾನ 7000 ರೂ., 4ನೇ ಬಹುಮಾನ ರೂ. 5000, 5ನೇ ಬಹುಮಾನ ರೂ. 3000ಗಳೊಂದಿಗೆ ಪಾರಿತೋಷಕ ಹಾಗೂ 6 ರಿಂದ 8ನೇ ಬಹುಮಾನ ಪಾರಿತೋಷಕವನ್ನು ನೀಡಲಾಗುವುದು.
ಆಸಕ್ತ ಶ್ವಾನ ಮಾಲೀಕರು ತಮ್ಮ ಶ್ವಾನಗಳ ಭಾಗವಹಿಸಲು ನೊಂದಾಯಿಸಲು ಹತ್ತಿರದ ಪಶುವೈದ್ಯರನ್ನು ಸಂಪರ್ಕಿಸುವುದು. ಶ್ವಾನ ಮಾಲೀಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡುವಂತೆ ರೈತ ದಸರಾ ಸಮಿತಿ ಅಧ್ಯಕ್ಷ ಡಿ. ನಾಗರಾಜ ಕೋರಿದ್ದಾರೆ.

ಯಾವ್ಯಾವ ನಾಟಕ ಪ್ರದರ್ಶನ?: ಸೆ.29ರಂದು ಕುವೆಂಪು ರಂಗಮಂದಿರದಲ್ಲಿ ಸಂಜೆ 4 ರಿಂದ ಬೆಂಗಳೂರಿನ ಉದಯ ಕಲಾ ನಿಕೇತನತಂಡದಿಂದ “ಬ್ಲಾಕ್ಔಟ್ʼʼ, ತೆಕ್ಕಟ್ಟೆಯ ಕಲಾಶಕ್ತಿ ಕಲಾ ತಂಡದಿಂದ “ಆಟಗಾರʼʼ, ಬಳ್ಳಾರಿಯ ಧಾತ್ರಿ ಸಿರಿಗೆರೆ ತಂಡದಿಂದ ರಾಜೇಂದ್ರ ಕಾರಂತ್‌ ರಚನೆಯ ದಾವಣಗೆರೆ ಭೀಮೇಶ್ ನಿರ್ದೇಶನದ “ಮುದ್ದಣ್ಣನ ಪ್ರಮೋಷನ್ ಪ್ರಸಂಗʼʼ ನಾಟಕ ಪ್ರದರ್ಶನಕಾಣಲಿವೆ.
ಸೆ.30 ರಂದು ಸಂಜೆ 4ರಿಂದ ಶಿವಮೊಗ್ಗದ ಬೆಳಕು ತಂಡದಿಂದ “ಚೋರಚರಣದಾಸʼʼ, ಶಿಕಾರಿಪುರದ ರಂಗ ಜೀವಿಗಳು ತಂಡದಿಂದ “ಲ್ಯಾಂಡ್ ಟು ಭೂಲೋಕʼʼ, ದಾವಣಗೆರೆ ರಂಗ ಅನಿಕೇತನ ತಂಡದಿಂದ “ಪುಕ್ಕಟೆ ಸಲಹೆʼʼ ಹಾಗೂ ಕಲ್ಪ ಸಹ್ಯಾದ್ರಿ ತಂಡದಿಂದ “ಚೀಟಿಕಾಟʼʼ ನಾಟಕಗಳ ಪ್ರದರ್ಶನ ನಡೆಯಲಿದೆ.

Shivamogga Dasara 2022
ಮಕ್ಕಳಿಂದ ನೃತ್ಯ ಪ್ರದರ್ಶನ

ಅ.1 ರಂದು ಸುವರ್ಣ ಸಂಸ್ಕೃತಿ ಭವನದಲ್ಲಿ ಸಂಜೆ 4ರಿಂದ ಬೆಂಗಳೂರಿನ ಶಾರದಾ ಕಲಾ ನಿಕೇತನ ತಂಡದಿಂದ “ಹೋಂ ರೂಲ್ʼʼ, ಸಂಜೆ 5.30ರಿಂದ ಬೆಂಗಳೂರಿನ ಪ್ರವರ್ ಥಿಯೇಟರ್‌ ತಂಡದಿಂದ “ಬೆಗ್ ಬಾರೋ ಅಳಿಯʼʼ, ಬೆಂಗಳೂರಿನ ರಂಗ ಪಯಣತಂಡದಿಂದ “ಬಿದ್ದೂರಿನ ಬಿಗ್ ಬೆನ್ʼʼ ಹಾಗೂ ರಂಗ ಸಂಗಮ ತಂಡದಿಂದ “ಕೃಷ್ಣ ರಾಯಭಾರʼʼ ನಾಟಕಗಳು ಪ್ರದರ್ಶನ ಕಾಣಲಿವೆ.
ಅ.2 ರಂದು ಮಧ್ಯಾಹ್ನ 10.30ರಿಂದ ಬೆಂಗಳೂರಿನ ಜನಪದರು ಸಾಂಸ್ಕೃತಿಕ ವೇದಿಕೆ ತಂಡದಿಂದ “ಸಮ್ ಸಾರʼʼ, ಮೈಸೂರಿನ ರಂಗ ಬದುಕುತಂಡದಿಂದ “ಮುದುಕನ ಮದುವೆʼʼ, ಮಂಗಳೂರಿನ ಅಸ್ತಿತ್ವ ತಂಡದಿಂದ “ಕಂಡೋನಿಯನ್ಸ್ʼʼ ನಾಟಕಗಳು ಪ್ರದರ್ಶನಗೊಳ್ಳಲಿವೆ.

ಇದನ್ನೂ ಓದಿ | Shivamogga Dasara 2022 | ಶಿವಮೊಗ್ಗ ದಸರಾದಲ್ಲಿ ಕರಾಟೆ, ಸೈಕ್ಲಿಂಗ್‌ ಸ್ಪರ್ಧೆ; ಚಲನ ಚಿತ್ರೋತ್ಸವಕ್ಕೂ ಚಾಲನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Mysore Dasara: ಚೆಕ್‌ ಬೌನ್ಸ್‌; ದಸರಾ ಕಲಾವಿದರಿಗೆ ಅವಮಾನ ಎಂದು ಯತ್ನಾಳ್‌ ಕಿಡಿ

Mysore Dasara: ಮೈಸೂರು ಉಸ್ತುವಾರಿ ಸಚಿವರು ಹಾಗೂ ಮುಖ್ಯ ಮಂತ್ರಿಗಳು ಕಲಾವಿದರಿಗೆ ಬೇಷರತ್ ಕ್ಷಮೆ ಕೇಳಿ ಲಲಿತಕಲೆ ಹಾಗೂ ಕರಕುಶಲ ಉಪಸಮಿತಿಯ ಸಂಬಂಧಪಟ್ಟ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆಗ್ರಹಿಸಿದ್ದಾರೆ.

VISTARANEWS.COM


on

Basanagouda Patil Yatnal
Koo

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysore Dasara) ಮುಕ್ತಾಯವಾದರೂ ಕಲಾವಿದರ ಅಸಮಾಧಾನ ನಿಂತಿಲ್ಲ. ಅಧಿಕಾರಿಗಳ ಎಡವಟ್ಟಿನಿಂದ ಬಹುಮಾನದ ಚೆಕ್‌ ಬೌನ್ಸ್‌ ಆಗಿರುವುದರಿಂದ ಬಹುಮಾನ ವಿಜೇತರು ಅಲೆದಾಡುವಂತಾಗಿದೆ. ಚೆಕ್‌ ವಾಪಸ್‌ ಬಂದರೂ ಬ್ಯಾಂಕ್‌ ಖಾತೆಯಲ್ಲಿ ಹಣ ಕಡಿತವಾಗಿರುವುದಕ್ಕೆ ಕಲಾವಿದರೊಬ್ಬರು ಅಸಮಾಧಾನ ಹೊರಹಾಕಿದ್ದಾರೆ. ಮತ್ತೊಂದೆಡೆ ರಾಜ್ಯ ಸರ್ಕಾರದಿಂದ ಕಲಾವಿದರಿಗೆ ಅವಮಾನವಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿ ಕಾರಿದ್ದಾರೆ.

ಅ.26 ರಂದು ಮೈಸೂರಿನ ಹವ್ಯಾಸಿ ಛಾಯಾಚಿತ್ರಗಾರ ಎನ್.ಜಿ. ಸುಧೀರ್‌ಗೆ 7 ಸಾವಿರ ರೂ. ಬಹುಮಾನದ ಚೆಕ್ ನೀಡಲಾಗಿತ್ತು‌. ಅ.27 ರಂದು ಸುದೀರ್ ಬ್ಯಾಂಕ್‌ಗೆ ಸಲ್ಲಿಸಿದ್ದರು. ಆದರೆ ಅ.30ರಂದು ಚೆಕ್ ವಾಪಸ್ ಆಗಿದೆ. ಈ ವೇಳೆ ಅಕೌಂಟ್‌ನಿಂದ 118 ರೂ. ಕಟ್ ಮಾಡಲಾಗಿದೆ.

ಇದನ್ನೂ ಓದಿ | Karnataka Politics : ನಾನು ಮುಖ್ಯಮಂತ್ರಿ ಆಗಲು ಸಿದ್ಧ ಎಂದ ಪ್ರಿಯಾಂಕ್ ಖರ್ಗೆ

ಈ ಬಗ್ಗೆ ಪ್ರತಿಕ್ರಿಯಿಸಿರುವ ಎನ್.ಜಿ. ಸುಧೀರ್, ಸ್ಪರ್ಧೆಯಲ್ಲಿ ಭಾಗಿಯಾಗಿ ಬಹುಮಾನ ಪಡೆದ ನನಗೆ 118 ರೂ. ದಂಡ ಬಿದ್ದಿದೆ. ಇಂತಹ ಬೇಜಾವ್ದಾರಿತನ ಏಕೆ? ತಮ್ಮಂತೆ ಸಾಕಷ್ಟು ಕಲಾವಿದರಿಗೆ ಅನ್ಯಾಯ ಆಗಿದೆ ಎಂದು ಅಧಿಕಾರಿಗಳ ವಿರುದ್ಧ ಬೇಸರ ಹೊರಹಾಕಿದ್ದಾರೆ.

ದಸರಾ ಲಲಿತ ಕಲೆ ಮತ್ತು ಕರಕುಶಲ ಉಪಸಮಿತಿಯಿಂದ ಕಲಾವಿದರಿಗೆ ನೀಡಿದ್ದ ಬಹುಮಾನದ ಚೆಕ್‌ಗಳು ನಗದಾಗಿ ಪರಿವರ್ತನೆ ಆಗದೆ ವಾಪಸ್‌ ಆಗುತ್ತಿವೆ. ಅಧಿಕಾರಿಗಳ ಸಹಿಯಲ್ಲಿನ ವ್ಯತ್ಯಾಸ ಇದಕ್ಕೆ ಕಾರಣವಾಗಿದೆ. ಉಪಸಮಿತಿಯ ಈ ಹಿಂದಿನ ಕಾರ್ಯಾಧ್ಯಕ್ಷ, ಕಾರ್ಯದರ್ಶಿಗಳ ಸಹಿಗಳೇ ಚೆಕ್‌ ಮೇಲೆ ಇದ್ದಿದ್ದರಿಂದ ಚೆಕ್‌ ಬೌನ್ಸ್‌ ಆಗಿವೆ ಎನ್ನಲಾಗಿದೆ. ಚೆಕ್ ವಾಪಸ್‌ ಆಗಿರುವುದು ತಿಳಿದುಬರುತ್ತಿದ್ದಂತೆ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಂಡಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ | Karnataka Politics : ಪರಮೇಶ್ವರ್‌ ಮುಖ್ಯಮಂತ್ರಿ ಆಗಬೇಕು; ನಾನು ಎಐಸಿಸಿಗೂ ಹೆದರಲ್ಲವೆಂದ ಕೆ.ಎನ್.‌ ರಾಜಣ್ಣ

ರಾಜ್ಯ ಸರ್ಕಾರದ ವಿರುದ್ಧ ಯತ್ನಾಳ್‌ ಆಕ್ರೋಶ

ಕಲಾವಿದರಿಗೆ ನೀಡಿದ್ದ ಚೆಕ್‌ ಬೌನ್ಸ್‌ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ದಸರಾ ಹಬ್ಬದಲ್ಲಿ ಭಾಗವಹಿಸಿದ ಕಲಾವಿದರಿಗೆ ನೀಡಿದ ಚೆಕ್ ಬೌನ್ಸ್ ಆಗಿರುವುದು ಕಲಾವಿದರಿಗೆ ಮಾಡಿದ ಅವಮಾನ. ಗಾಯದ ಮೇಲೆ ಬರೆ ಇಟ್ಟಂತೆ ಬೌನ್ಸ್ ಆದ ಚೆಕ್ ಬ್ಯಾಂಕ್‌ಗೆ ನೀಡಿದ್ದಕ್ಕೆ ಕಲಾವಿದರಿಗೆ ಬ್ಯಾಂಕ್ ದಂಡ ಹಾಕಿದೆ. ದಸರಾ ಹಾಗೂ ಮೈಸೂರು ಉಸ್ತುವಾರಿ ಸಚಿವರು ಹಾಗೂ ಮುಖ್ಯ ಮಂತ್ರಿಗಳು ಕಲಾವಿದರಿಗೆ ಬೇಷರತ್ ಕ್ಷಮೆ ಕೇಳಿ ಲಲಿತಕಲೆ ಹಾಗೂ ಕರಕುಶಲ ಉಪಸಮಿತಿಯ ಸಂಬಂಧಪಟ್ಟ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು. ಉತ್ತರದಾಯಿತ್ವವಿಲ್ಲದೆ, ಬೇಜವಾಬ್ದಾರಿ ವರ್ತನೆಯಿಂದ ಕೆಲಸ ಮಾಡುವವರಿಗೆ ಸರ್ಕಾರ ಶಿಸ್ತು ಕ್ರಮ ಜರುಗಿಸಲಿ. ಉಸ್ತುವಾರಿ ಸಚಿವರ ದುರಾಡಳಿತದಿಂದ ದಸರಾ ಸಂಭ್ರಮದಲ್ಲಿ ವಿದ್ಯುತ್ ಬೇಲಿ ಹಾರಿ ಬಂದು ಭದ್ರತಾ ವೈಫಲ್ಯವೆಸಗಿದ್ದು, ಈಗ ಕಲಾವಿದರಿಗೆ ನೀಡಿದ ಚೆಕ್ ಬೌನ್ಸ್ ನೀಡಿ ಸರಣಿ ವೈಫಲ್ಯಗಳು ಆಗಿವೆ ಎಂದು ಅಕ್ರೋಶ ಹೊರಹಾಕಿದ್ದಾರೆ.

Continue Reading

ಕರ್ನಾಟಕ

Mysore Dasara: ಮೈಸೂರು ದಸರಾ ಸಂಭ್ರಮದ ಸ್ಮರಣೀಯ ಚಿತ್ರಗಳಿವು

Mysore Dasara: ವಿಶ್ವ ವಿಖ್ಯಾತ ಮೈಸೂರು ದಸರಾ ಮಂಗಳವಾರ ಜಂಬೂ ಸವಾರಿಯೊಂದಿಗೆ ಮುಕ್ತಾಯವಾಯಿತು. ದಸರಾ ಸಂಭ್ರಮದ ಸ್ಮರಣೀಯ ಚಿತ್ರಗಳನ್ನು ಇಲ್ಲಿ ನೀಡಲಾಗಿದೆ

VISTARANEWS.COM


on

Dasara sambhrama
Koo

ಮೈಸೂರು: ಅ.15ರಂದು ಆರಂಭವಾದ ವಿಶ್ವ ವಿಖ್ಯಾತ ಮೈಸೂರು ದಸರಾ (Mysore Dasara) ಮಹೋತ್ಸವ, ವಿಜಯದಶಮಿ ದಿನವಾದ ಮಂಗಳವಾರ ಜಂಬೂ ಸವಾರಿಯೊಂದಿಗೆ ಮುಕ್ತಾಯವಾಯಿತು. ಕೊನೆಯ ದಿನ ವಿವಿಧ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು, ಸ್ತಬ್ಧಚಿತ್ರಗಳ ಮೆರವಣಿಗೆ, ಜಂಬೂ ಸವಾರಿ, ಪಂಜಿನ ಕವಾಯತು ಅದ್ಧೂರಿಯಾಗಿ ನೆರವೇರಿದ್ದು, ಜಂಬೂ ಸವಾರಿ ವೀಕ್ಷಿಸಲು ಲಕ್ಷಾಂತರ ಜನರು ಆಗಮಿಸಿದ್ದರು. ದಸರಾ ಸಂಭ್ರಮದ ಸ್ಮರಣೀಯ ಚಿತ್ರಗಳನ್ನು ಇಲ್ಲಿ ನೀಡಲಾಗಿದೆ.

ಇದನ್ನೂ ಓದಿ | Mysore Dasara : ಕಣ್ಮನ ಸೆಳೆದ ಪಂಜಿನ ಕವಾಯತು; ಮೈಸೂರು ದಸರಾ ಅದ್ಧೂರಿಯಾಗಿ ಮುಗಿಯಿತು!

Continue Reading

ಕರ್ನಾಟಕ

Mysore Dasara : ಕಣ್ಮನ ಸೆಳೆದ ಪಂಜಿನ ಕವಾಯತು; ಮೈಸೂರು ದಸರಾ ಅದ್ಧೂರಿಯಾಗಿ ಮುಗಿಯಿತು!

Mysore Dasara : ಯೋಧರು ಮತ್ತು ಪೊಲೀಸರ ಬೈಕ್‌ ಸಾಹಸಗಳ ಪ್ರದರ್ಶನಗಳು ಸೇರಿದ್ದವರ ಮೈನವಿರೇಳುವಂತೆ ಮಾಡಿತು. ಕೆಲ ಕಾಲ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದ್ದು, ಗಮನ ಸೆಳೆದವು. ಅಂತಿಮವಾಗಿ ಸುಮಾರು 25 ನಿಮಿಷಗಳ ಕಾಲ ಪಂಜಿನ ಕವಾಯತು ನಡೆಯಿತು. ಈ ಕವಾಯತು ಪ್ರದರ್ಶನದ ಅಷ್ಟೂ ಸಮಯವು ನೋಡುಗರು ಉಸಿರು ಬಿಗಿಹಿಡಿದು ವೀಕ್ಷಣೆ ಮಾಡಿದ್ದು ಕಂಡು ಬಂತು.

VISTARANEWS.COM


on

Torch Light Parade 2023
Koo

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ (Mysore Dasara) ಅದ್ಧೂರಿಯಾಗಿ ಮುಕ್ತಾಯಗೊಂಡಿದೆ. ಇಡೀ ದಸರಾದ ಆಕರ್ಷಣೆಯಲ್ಲಿ ಜಂಬೂ ಸವಾರಿ (Jumboo Savari) ನಂತರ ಪ್ರಮುಖವಾಗಿ ಎದ್ದು ಕಾಣುವ ಪಂಜಿನ ಕವಾಯತಿಗೆ (Torch Light Parade 2023) ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Governor Thaawar Chand Gehlot) ಚಾಲನೆ ನೀಡಿದರು. ಪೊಲೀಸ್‌ ಪಡೆಯಿಂದ ಗೌರವ ವಂದನೆ ಸ್ವೀಕರಿಸುವ ಮೂಲಕ ಅವರು ವರ್ಣರಂಜಿತ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು.

ಮೊದಲು ರಾಷ್ಟ್ರಗೀತೆಯನ್ನು (National Anthem) ನುಡಿಸುವ ಮೂಲಕ ಕವಾಯತು ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ದೊರೆಯಿತು. ರಾಷ್ಟ್ರಗೀತೆ ಮುಕ್ತಾಯವಾಗುತ್ತಿದ್ದಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಬಳಿ ಬಂದ ಕಿಂಗ್‌ ಪವರ್‌ ಅಶ್ವರೂಢ ಖಡ್ಗಧಾರಿ ಪ್ರಧಾನ ದಳಪತಿ ಕವಾಯತು ವರದಿಯನ್ನು ಅತಿಥಿಗಳಿಗೆ ಸಮರ್ಪಿಸಿದರು. ತರುವಾಯ ನಿಶ್ಚಳ ದಳಗಳ ಪರಿವೀಕ್ಷಣೆಗಾಗಿ ರಾಜ್ಯಪಾಲರನ್ನು ಆಹ್ವಾನಿಸಿದರು.

ಆಹ್ವಾನವನ್ನು ಒಪ್ಪಿ ಅಲಂಕೃತ ತೆರೆದ ವಾಹನವನ್ನು ಹತ್ತಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ವಿವಿಧ ಸೇವಾದಳಗಳ ನಿಶ್ಚಳದಳಗಳ ಪರಿವೀಕ್ಷಣೆಯನ್ನು ನಡೆಸಿದರು. ಮೈಸೂರು ನಗರ ಪೊಲೀಸ್‌ ಆಯುಕ್ತ ರಮೇಶ್‌ ಬಿ. ಅವರು ರಾಜ್ಯಪಾಲರಿಗೆ ವ್ಯಕ್ತಿಪರಿವೀಕ್ಷಕರಾಗಿದ್ದರು.

ಇದಾದ ಬಳಿಕ 21 ಕುಶಾಲತೋಪುಗಳನ್ನು ಮೂರು ಹಂತಗಳಲ್ಲಿ ಸಿಡಿಸಲಾಯಿತು. ನಿಶ್ಚಳದ ದಳ ಅಶ್ವಪಡೆಗಳ ಒಂದೊಂದಾಗಿ ಮೂರು ಕುದುರೆಗಳು ಒಂದು ಸುತ್ತು ಸುತ್ತಿ ಬಂದ ಬಳಿಕ ಗಾಳಿಯಲ್ಲಿ ಗುಂಡುಹಾರಿಸುವ ಮೂಲಕ ಗೌರವ ನಮನ ಸಲ್ಲಿಸಲಾಯಿತು. ಈ ವೇಳೆ ಮತ್ತೊಮ್ಮೆ ರಾಷ್ಟ್ರಗೀತೆಯನ್ನು ಮೊಳಗಿಸಲಾಯಿತು.

18 ತುಕಡಿಗಳಿಂದ ಪ್ರದರ್ಶನ

ಒಟ್ಟು 18 ತುಕಡಿಗಳು ಪ್ರದರ್ಶನ ತೋರಿದವು. ಈ ತುಕಡಿಗಳು ಹಲವು ಹಿರಿಯ ಅಧಿಕಾರಿಗಳ ಮಾರ್ಗದರ್ಶನದ ಮೂಲಕ ಕೆಲವು ದಿನಗಳಿಂದ ತಾಲೀಮು ನಡೆಸಿವೆ. ಲಯಬದ್ಧ ಸಂಗೀತಕ್ಕೆ ಶಿಸ್ತುಬದ್ಧ ಹೆಜ್ಜೆಯನ್ನು ಹಾಕುತ್ತಾ ಸಾಗುತ್ತಿರುವುದನ್ನು ನೋಡುವುದೇ ಕಣ್ಣಿಗೆ ಒಂದು ಹಬ್ಬದಂತೆ ಇತ್ತು. ಎದೆ ಸೆಟೆದು ಕೈಬೀಸಿ ಕಾಲನ್ನು ಜೋರಾಗಿ ನೆಲಕ್ಕೆ ಗುದ್ದಿ ಧೂಳೆಬ್ಬಿಸುತ್ತಾ ಆರಕ್ಷಕ ದಳದವರು ವೀರ ನಡಿಗೆ ಸಾಗುತ್ತಿದ್ದರೆ ಸೇರಿದ್ದ ಜನಸ್ತೋಮ ಚಪ್ಪಾಳೆಯ ಸುರಿಮಳೆಯನ್ನೇ ಸುರಿಸಿತು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ, ಗೃಹ ಸಚಿವ ಡಾ. ಜಿ. ಪರಮೇಶ್ವರ್‌, ಸಚಿವರಾದ ವೆಂಕಟೇಶ್‌, ಶಿವರಾಜ್‌ ತಂಗಡಗಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಕಣ್ತುಂಬಿದ ಲೈಟಿಂಗ್‌

ಧ್ವನಿ ಬೆಳಕಿನ ಸಂಭ್ರಮ ಇದೇ ವೇಳೆ ಅನಾವರಣಗೊಳಿಸಲಾಯಿತು. ಧ್ವನಿ ಮೊದಲೋ ಬೆಳಕೋ ಎಂಬ ಪ್ರಶ್ನೆಗೆ ಉತ್ತರ ಸಿಗದಿದ್ದರೂ ಡಿಎನ್‌ಎ ಸಹಯೋಗದಲ್ಲಿ ಧ್ವನಿ – ಬೆಳಕಿನ ಪ್ರದರ್ಶನವು ನೋಡುಗರನ್ನು ರೋಮಾಂಚನಗೊಳಿಸಿತು.

ಮನ ಮುಟ್ಟಿದ ನೃತ್ಯ ರೂಪಕ

ಡಿಎನ್‌ಎ ಸಮೂಹದ ಮೂಲಕ ನೃತ್ಯ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಇದಕ್ಕೆ ಭಜರಂಗಿ ಮೋಹನ್‌ ಅವರು ನೃತ್ಯ ಸಂಯೋಜನೆಯನ್ನು ಮಾಡಿದ್ದಾರೆ. ಈ ವೇಳೆ ಐಗಿರಿ ನಂದಿನಿ ಹಾಡಿಗೆ ನೃತ್ಯ ಮಾಡಲಾಯಿತು. ಜತೆಗೆ ಶಂಕರ್‌ ನಾಗ್‌ ಅಭಿನಯದ ಗೀತಾ ಸಿನಿಮಾದ “ಸಂತೋಷಕ್ಕೆ ಹಾಡು ಸಂತೋಷಕ್ಕೆ”, ರವಿಚಂದ್ರನ್‌ ಅಭಿನಯದ ಮಲ್ಲ ಸಿನಿಮಾದ “ಕರುನಾಡೇ ಕೈ ಚಾಚಿದೆ ನೋಡೇ..” ಹಾಡುಗಳಿಗೆ ಹೆಜ್ಜೆ ಹಾಕಲಾಯಿತು. ಬಳಿಕ ಕಿಚ್ಚ ಸುದೀಪ್‌ ಅಭಿನಯದ ಪೈಲ್ವಾನ್‌ ಸಿನಿಮಾದ “ಪೈಲ್ವಾನ್‌” ಹಾಡಿನಗೆ ಮಲ್ಲಕಂಭ ಸಾಹಸ ಪ್ರದರ್ಶನವನ್ನು ಮಾಡುವ ಮೂಲಕ ಡ್ಯಾನ್ಸ್‌ ಮಾಡಲಾಯಿತು. ಇದಲ್ಲದೆ, ಶಿವರಾಜ್‌ಕುಮಾರ್‌ ಅಭಿನಯದ ಶ್ರೀ ಆಂಜನೇಯಂ, ಪ್ರಸನ್ನಾಂಜನೇಯಂ ಹಾಗೂ ಪುನೀತ್‌ ರಾಜಕುಮಾರ್‌ ಅಭಿನಯದ ಯುವರತ್ನ ಸಿನಿಮಾದ “ಡಾನ್ಸ್‌ ವಿಥ್‌ ಅಪ್ಪು” ಹಾಡಿಗೂ ಹೆಜ್ಜೆ ಹಾಕಲಾಯಿತು. ಕೊನೆಯಲ್ಲಿ ಡಾ. ರಾಜಕುಮಾರ್‌ ಅಭಿನಯದ “ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು” ಹಾಡು ನೋಡುಗರ ಮನ ಗೆಲ್ಲುವಲ್ಲಿ ಯಶ ಕಂಡಿತು.

ಗಮನ ಸೆಳೆದ ಸಾಹಸ ಪ್ರದರ್ಶನ

ಕೊನೆಯಲ್ಲಿ ಯೋಧರು ಮತ್ತು ಪೊಲೀಸರ ಬೈಕ್‌ ಸಾಹಸಗಳ ಪ್ರದರ್ಶನಗಳು ಸೇರಿದ್ದವರ ಮೈನವಿರೇಳುವಂತೆ ಮಾಡಿತು. ಕೆಲ ಕಾಲ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದ್ದು, ಗಮನ ಸೆಳೆದವು. ಅಂತಿಮವಾಗಿ ಸುಮಾರು 25 ನಿಮಿಷಗಳ ಕಾಲ ಪಂಜಿನ ಕವಾಯತು ನಡೆಯಿತು. ಈ ಕವಾಯತು ಪ್ರದರ್ಶನದ ಅಷ್ಟೂ ಸಮಯವು ನೋಡುಗರು ಉಸಿರು ಬಿಗಿಹಿಡಿದು ವೀಕ್ಷಣೆ ಮಾಡಿದ್ದು ಕಂಡು ಬಂತು. ಒಂದೊಂದು ರೀತಿಯ ವಿಶಿಷ್ಟ ಸಾಹಸ ಪ್ರದರ್ಶನಗಳಿಗೂ ಜೋರಾದ ಚಪ್ಪಾಳೆ, ಶಿಳ್ಳೆಗಳು ಕೇಳಿಬಂದವು.

ನೂರಾರು ಜನ ಪೊಲೀಸರಿಂದ ಸಾಹಸ ಪ್ರದರ್ಶನ ನಡೆಯಿತು. ಇದೇ ವೇಳೆ ವೆಲ್‌ ಕಮ್‌ ಟು ಮೈಸೂರು ದಸರಾ, ಫೇರ್‌ ವೆಲ್‌ ಟು ದಸರಾ, ಸಿ ಯು ದಸರಾ ಇನ್ 2024 ಎಂಬಿತ್ಯಾದಿ ಸಂದೇಶಗಳು ಕಂಡು ಬಂದವು.

ಇದನ್ನೂ ಓದಿ: Mysore Dasara : ವೈಭವದ ಜಂಬೂ ಸವಾರಿಗೆ ಸಿಎಂ ಚಾಲನೆ; ರಾಜ ಬೀದಿಯಲ್ಲಿ ಚಾಮುಂಡಿ ವಿಲಾಸ

ಜೋಶ್‌ ಹೆಚ್ಚಿಸಿದ ಪೊಲೀಸ್‌ ಬ್ಯಾಂಡ್‌

ಈ ಮಧ್ಯೆ ಪೊಲೀಸ್‌ ಬ್ಯಾಂಡ್‌ನವರು ಪೊಲೀಸ್‌ ಹಾಗೂ ಸೈನಿಕ ಗೀತೆಗಳನ್ನು ಪ್ರಸ್ತುತಿಪಡಿಸಿದರು. “ಸಾರೇ ಜಹಾಸೇ ಅಚ್ಚಾ” ಸೇರಿದಂತೆ ಇನ್ನೂ ಹಲವು ಗೀತೆಯನ್ನು ಪೊಲೀಸ್‌ ಬ್ಯಾಂಡ್‌ನವರು ನುಡಿಸಿ ಗಮನ ಸೆಳೆದರು. ಸೇರಿದ್ದವರಿಗೆಲ್ಲರಿಗೂ ಒಮ್ಮೆ ದೇಶಭಕ್ತಿ ಗೀತೆಯ ಬೀಟ್‌ಗಳು ಜೋಶ್‌ ಅನ್ನು ಹೆಚ್ಚಿಸುತ್ತಿದ್ದವು.

Continue Reading

ಕರ್ನಾಟಕ

Anekal Dasara : ಆನೇಕಲ್‌ನಲ್ಲಿ ಜಂಬೂ ಸವಾರಿಗೆ ಮೆರುಗು ನೀಡಿದ ಕೇರಳದ ಸಾಧು ಆನೆ

Anekal Dasara : ಬೆಂಗಳೂರು ಹೊರವಲಯದ ಆನೇಕಲ್ ಹಾಗೂ ಬನ್ನೇರುಘಟ್ಟದಲ್ಲಿ ವಿಜೃಂಭಣೆಯಿಂದ ಜಂಬೂ ಸವಾರಿ ಜರುಗಿತು. ಮಿನಿ ಮೈಸೂರು ಖ್ಯಾತಿಯ ಆನೇಕಲ್‌ನಲ್ಲಿ ಚೌಡೇಶ್ವರಿ ಜಂಬೂಸವಾರಿಗೆ ಕೇರಳದ ಸಾಧು ಆನೆ ಮೆರಗು ನೀಡಿತು.

VISTARANEWS.COM


on

By

Anekal Dasara 2023
Koo

ಆನೇಕಲ್‌: ನಾಡಹಬ್ಬ ಮೈಸೂರು ದಸರಾ ಮಾದರಿಯಲ್ಲೇ ಆನೇಕಲ್‌ನಲ್ಲೂ (Anekal Dasara) ವಿಜಯದಶಮಿ ದಸರಾ ಉತ್ಸವ ಮತ್ತು ಜಂಬೂ ಸವಾರಿ (Jambu savari) ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು. ಕೇರಳ ಮೂಲದ ಸಾಧು ಆನೆ ಚೌಡೇಶ್ವರಿ ದೇವಿ ಉತ್ಸವ ಮೂರ್ತಿ ಅಂಬಾರಿ ಹೊತ್ತು ಜಂಬೂಸವಾರಿ ಮೂಲಕ ಆನೇಕಲ್ ದಸರಾ ಉತ್ಸವಕ್ಕೆ ಮೆರಗು ನೀಡಿತು. ರಾಜಗಾಂಭೀರ್ಯದಲ್ಲಿ ಗಜರಾಜ ಹೆಜ್ಜೆ ಹಾಕಿದ್ದು ಭಕ್ತ ಸಾಗರ ಅದ್ಧೂರಿ ದಸರಾ ಜಂಬು ಸವಾರಿಯನ್ನು ಕಂಡು ಪುನೀತರಾಗಿದ್ದಾರೆ.

Anekal And bannerughatta  Dasara 2023

ಮೈಸೂರಿನಲ್ಲಿ ನಾಡದೇವತೆ ಚಾಮುಂಡೇಶ್ವರಿ ದೇವಿ ಜಂಬೂಸವಾರಿ ನಡೆಸಿದಂತೆ ಆನೇಕಲ್‌ನಲ್ಲೂ ನಾಡಹಬ್ಬ ದಸರಾ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಿದ್ದಾರೆ. ನಗರದ ಆದಿ ದೇವತೆ ಚೌಡೇಶ್ವರಿ ದೇವಿ ಅಂಬಾರಿಯನ್ನು ಹೊತ್ತ ಕೇರಳದ ಸಾಧು ಆನೆ ಸವಾರಿ ಪಟ್ಟಣದ ತಾಲೂಕು ಕಚೇರಿಯಿಂದ ತಿಲಕ್ ವೃತ್ತದ ಚೌಡೇಶ್ವರಿ ದೇವಾಲಯದ ಬಳಿ ಬರುತ್ತಿದ್ದಂತೆ ಜನಸಾಗರ ತುಂಬಿತ್ತು.

Anekal And bannerughatta  Dasara 2023

ದಿವ್ಯ ಜ್ಞಾನನಂದ ಸ್ವಾಮಿ ಹಾಗೂ ಶಾಸಕ ಬಿ.ಶಿವಣ್ಣ ಸೇರಿದಂತೆ ಗಣ್ಯರು ಜಂಬೂಸವಾರಿ ಹೊರಟಿದ್ದ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿದರು. ಬಳಿಕ ಆನೇಕಲ್ ‌ನಗರದ ಪ್ರಮುಖ ಬೀದಿಗಳಲ್ಲಿ ಜಂಬೂಸವಾರಿ ಗಜಗಾಂಭೀರ್ಯವಾಗಿ ಸಾಗಿತು. ಚೌಡೇಶ್ವರಿ ದೇವಿ ಅಂಬಾರಿ ಹೊತ್ತು ಸಾಗಿದ ಸಾಧು ಆನೆಯನ್ನು ಕಂಡು ಭಕ್ತರು ರೋಮಾಂಚನಗೊಂಡರು.

ಇದನ್ನೂ ಓದಿ: Karnataka Weather : ಮಳೆಯಾಟ ಬಂದ್‌; ಇನ್ನೆರಡು ದಿನ ಕರ್ನಾಟಕ ಸಿಕ್ಕಾಪಟ್ಟೆ Hot

Anekal And bannerughatta  Dasara 2023

ತಮಿಳುನಾಡು, ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಿಂದ ಅಪಾರ ಸಂಖ್ಯೆಯ ಭಕ್ತರು ತಿಲಕ್ ವೃತ್ತದ ಬಳಿ ಚೌಡೇಶ್ವರಿ ದೇವಿ ಅಂಬಾರಿ ದೃಶ್ಯವನ್ನು ಕಣ್ತುಂಬಿಕೊಂಡರು. ಎಂದಿನಂತೆ ತೋಗಟವೀರ ಜನಾಂಗದ ಸದಸ್ಯರು ವಿಜಯದಶಮಿ ಉತ್ಸವ ವಿಜೃಂಭಣೆಯಿಂದ ನೆರವೇರಿಸಿದ್ದರು. ತಾಯಿ ಚೌಡೇಶ್ವರಿ ಸರ್ವರಿಗೂ ಒಳಿತು ಮಾಡಲಿ ಎಂದು ಶಾಸಕ ಬಿ ಶಿವಣ್ಣ ಪ್ರಾರ್ಥಿಸಿದರು.

Anekal And bannerughatta  Dasara 2023

ವಿಶ್ವ ವಿಖ್ಯಾತ ಮೈಸೂರು ದಸರಾ ಮಾದರಿಯಲ್ಲಿಯೇ ಆನೇಕಲ್ ದಸರಾ ನಡೆಯುತ್ತಿದ್ದು, ಮಿನಿ ದಸರಾ ಎಂದೇ ಪ್ರಖ್ಯಾತಿಗಳಿಸುತ್ತಿದೆ. ಕಲಾತಂಡಗಳ ಜತೆಗೆ ಅಂಬಾರಿ ಸಾಗುವ ದೃಶ್ಯ ನೋಡುವುದೇ ಒಂದು ಹಬ್ಬವಾಗಿತ್ತು. ಕಲಾತಂಡಗಳು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ನೆರೆದಿದ್ದ ಜನರನ್ನು ರಂಜಿಸಿದ್ದರು.

Anekal And bannerughatta  Dasara 2023

ಚಂಪಕಧಾಮಸ್ವಾಮಿ ಜಂಬೂ ಸವಾರಿ

ಬನ್ನೇರುಘಟ್ಟದಲ್ಲೂ ಶ್ರೀ ಚಂಪಕಧಾಮಸ್ವಾಮಿ ಜಂಬೂ ಸವಾರಿ ನಡೆದಿದೆ. ದೇವರ ಉತ್ಸವ ಮೂರ್ತಿ ಹೊತ್ತಿದ ಅಂಬಾರಿಗೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿ ಜಂಬೂ ಸವಾರಿಗೆ ಚಾಲನೆ ನೀಡಿದರು. ಉತ್ಸವ ಮೂರ್ತಿಯನ್ನು ಹೊತ್ತ ಗಜರಾಜ ಬನ್ನೇರುಘಟ್ಟದ ರಾಜಬೀದಿಗಳಲ್ಲಿ ರಾಜಗಾಂಭೀರ್ಯದಿಂದ ಜಾನಪದ ಕಲಾತಂಡಗಳ ಜತೆ ಹೆಜ್ಜೆ ಹಾಕಿತು. ಬೆಂಗಳೂರು, ತಮಿಳುನಾಡು ಸೇರಿದಂತೆ ನಾನಾ ಕಡೆಗಳಿಂದ ಆಗಮಿಸಿರುವ ಭಕ್ತ ಸಾಗರ ಕಣ್ತುಂಬಿಕೊಂಡರು.

Anekal And bannerughatta  Dasara 2023

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
Karnataka weather Forecast
ಮಳೆ19 mins ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

World Hypertension Day Today is Global Blood Pressure Day
ಆರೋಗ್ಯ2 hours ago

World Hypertension Day: ಇಂದು ಜಾಗತಿಕ ರಕ್ತದೊತ್ತಡ ದಿನ; ಈ ಸಮಸ್ಯೆಯ ಅರಿವು ನಿಮಗೆಷ್ಟಿದೆ?

Pakistan
ಸಂಪಾದಕೀಯ7 hours ago

ವಿಸ್ತಾರ ಸಂಪಾದಕೀಯ: ಒಪ್ಪಿಕೊಂಡರೆ ಸಾಲದು, ಪಾಕ್‌ ತನ್ನನ್ನು ಸರಿಪಡಿಸಿಕೊಳ್ಳಲಿ

Kapil Sibal
ದೇಶ7 hours ago

Kapil Sibal: ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ಕಪಿಲ್‌ ಸಿಬಲ್‌ ಆಯ್ಕೆ

MS Dhoni
ಕ್ರೀಡೆ7 hours ago

MS Dhoni : ಆರ್​​ಸಿಬಿ ವಿರುದ್ಧ ಬೌಲಿಂಗ್ ಮಾಡಲು ಅಭ್ಯಾಸ ನಡೆಸಿದ ಎಂ ಎಸ್​ ಧೋನಿ

cauvery dispute
ಕರ್ನಾಟಕ7 hours ago

Cauvery Dispute: ಕರ್ನಾಟಕದಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ; ತಮಿಳುನಾಡಿಗೆ CWRC ಚಾಟಿ

MS Dhoni
ಪ್ರಮುಖ ಸುದ್ದಿ7 hours ago

MS Dhoni : ಆರ್​ಸಿಬಿಯವರು ಕೊಟ್ಟ ಬೆಂಗಳೂರಿನ ಸ್ಪೆಷಲ್​ ಚಹಾ ಕುಡಿದ ಧೋನಿ; ಇಲ್ಲಿದೆ ವಿಡಿಯೊ

Sri Vedavyasa Jayanti programme at Bengaluru
ಬೆಂಗಳೂರು8 hours ago

Bengaluru News: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮ: ವಿ. ಅಪ್ಪಣ್ಣ ಆಚಾರ್ಯ

Opposition party leader r ashok latest statement in Mysuru
ಪ್ರಮುಖ ಸುದ್ದಿ8 hours ago

R Ashok: ಪೊಲೀಸ್‌ ಇಲಾಖೆ ಸತ್ತಿದೆಯೋ ಬದುಕಿದೆಯೋ ತಿಳಿಯುತ್ತಿಲ್ಲ: ಆರ್.ಅಶೋಕ್ ಆಕ್ರೋಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ19 mins ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ14 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ17 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು20 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌