Suicide Case | ವಿಜಯನಗರ, ಶಿವಮೊಗ್ಗದಲ್ಲಿ ಪ್ರತ್ಯೇಕ ಕಡೆ ಇಬ್ಬರು ರೈತರು ಸೇರಿ ಮೂವರ ಆತ್ಮಹತ್ಯೆ - Vistara News

ಕರ್ನಾಟಕ

Suicide Case | ವಿಜಯನಗರ, ಶಿವಮೊಗ್ಗದಲ್ಲಿ ಪ್ರತ್ಯೇಕ ಕಡೆ ಇಬ್ಬರು ರೈತರು ಸೇರಿ ಮೂವರ ಆತ್ಮಹತ್ಯೆ

ವಿಜಯನಗರದಲ್ಲಿ ಪ್ರತ್ಯೇಕ ಕಡೆ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಶಿವಮೊಗ್ಗದಲ್ಲೂ ರೈತರೊಬ್ಬರು ಸಾಲಬಾಧೆ ತಾಳಲಾರದೆ ನೇಣಿಗೆ ಶರಣಾಗಿರುವ (Suicide Case) ಘಟನೆ ನಡೆದಿದೆ.

VISTARANEWS.COM


on

ಪ್ರತ್ಯೇಕ ಕಡೆಗಳಲ್ಲಿ ಮೂವರು ನೇಣಿಗೆ ಶರಣು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯಪುರ/ಶಿವಮೊಗ್ಗ: ಸಾಲಗಾರರ ಕಾಟಕ್ಕೆ ರೈತರಿಬ್ಬರು ಪ್ರತ್ಯೇಕ ಕಡೆಗಳಲ್ಲಿ ಆತ್ಮಹತ್ಯೆ (Suicide Case) ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಹಾಗೂ ವಿಜಯನಗರದಲ್ಲಿ ನಡೆದಿದ್ದರೆ, ಇನ್ನೊಬ್ಬರು ವಿಜಯನಗರದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣ ತಿಳಿದುಬಂದಿಲ್ಲ.

ವಿಜಯಪುರ ನಗರದ ಸಾಯಿಪಾರ್ಕ್ ಬಳಿ 43 ವರ್ಷದ ಭೀರಪ್ಪ ಭೀಮಪ್ಪ ಅಬಲಾಪುರ ಎಂಬುವವರು ನೇಣಿಗೆ ಶರಣಾದ ದುರ್ದೈವಿ. ಸಾಲಗಾರರ ಕಾಟಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆ ನಿರ್ಮಾಣಕ್ಕೆಂದು 7 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಸಾಲಗಾರರು ಹಣ ನೀಡುವಂತೆ ಕೇಳುತ್ತಿದ್ದರು, ಆದರೆ ಹಣ ಹೊಂದಿಸಲು ಆಗದೆ ಗುರುವಾರ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಬ್ಯಾಂಕ್‌ನಲ್ಲಿ ಸಾಲ ಮಾಡಿದ್ದ ರೈತ ಆತ್ಮಹತ್ಯೆ

ಸಾಲದ ಬಾಧೆ ತಾಳಲಾರದೆ ರೈತರೊಬ್ಬರು ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗದ ಶಿಕಾರಿಪುರ ತಾಲೂಕಿನ ತರಲಘಟ್ಟದಲ್ಲಿ ಘಟನೆ ನಡೆದಿದೆ. ತಾಂಡಾದ ದೊಡ್ಮನೆ ನಿವಾಸಿ ಜಯನಾಯ್ಕ ಎಂಬಾತತನ್ನ ಚಿಕ್ಕಪ್ಪನ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತರಲಘಟ್ಟ ತಾಂಡ ಸರ್ವೆ ನಂಬರ್ 44ರಲ್ಲಿ ತನ್ನ ಹೆಂಡತಿಯ ಹೆಸರಿಗೆ ಮೂರು ಎಕರೆ 37 ಗುಂಟೆ ಜಮೀನಿನ ಇದ್ದು, ಇದರ ಮೇಲೆ 6 ಲಕ್ಷ ಬ್ಯಾಂಕ್ ಸಾಲ ಮಾಡಿಕೊಂಡಿದ್ದರು. ಸರ್ವೆ ನಂಬರ್ 39/5 ರಲ್ಲಿ ಸ್ವತಃ ತನ್ನ ಹೆಸರಿಗಿದ್ದ ಒಂದು ಎಕರೆ ಜಮೀನಿನ ಮೇಲೂ ಎರಡು ಲಕ್ಷ ಸಾಲ ಮಾಡಿಕೊಂಡಿದ್ದ ಜಯನಾಯ್ಕ ಅವರಿಗೆ ಒಟ್ಟು ಎಂಟು ಲಕ್ಷ ರೂಪಾಯಿ ಸಾಲವಿತ್ತು. ಜತೆಗೆ ಕೈ ಸಾಲವೂ ಇತ್ತು ಎನ್ನಲಾಗಿದೆ. 15 ದಿನಗಳ ಹಿಂದೆ ಬ್ಯಾಂಕಿನಿಂದ ಜಯನಾಯ್ಕ್‌ಗೆ ನೋಟಿಸ್ ಬಂದಿತ್ತು. ಇತ್ತ ಎರಡು ವರ್ಷದಿಂದ ಶುಂಠಿ, ಮೆಕ್ಕೆ‌ಜೋಳ‌ ಬೆಳೆ ಕೈಹಿಡಿದಿರಲಿಲ್ಲ. ಈ ಬಾರಿಯೂ ಅತಿವೃಷ್ಟಿಯಿಂದ ಬೆಳೆ ನಾಶವಾಗಿತ್ತು. ಇದರಿಂದ ನೊಂದ ಜಯನಾಯ್ಕ್‌ ನೇಣಿಗೆ ಶರಣಾಗಿದ್ದಾರೆ.

ಕಬ್ಬಿಣದ ತಂತಿಗೆ ನೇಣಿಗೆ ಶರಣು

ವಿಜಯಪುರದ ಪ್ರತಾಪ್ ನಗರದಲ್ಲಿ ಕಬ್ಬಿಣದ ತಂತಿಗೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆನಂದ ವರನಾಳ ಮೃತಪಟ್ಟಿರುವ ದುರ್ದೈವಿ. ಆನಂದ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಆತನು ಧರಿಸಿದ್ದ ಅಂಗಿಯಿಂದಲೇ ನೇಣು ಬಿಗಿದುಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿಜಯಪುರ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ | ಪತಿಯ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಡುತ್ತಿದ್ದ ಮಹಿಳೆ ಮನನೊಂದು ಆತ್ಮಹತ್ಯೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉಡುಪಿ

Electric shock : ಕರೆಂಟ್‌ ಶಾಕ್‌ಗೆ ಲೈನ್‌ಮ್ಯಾನ್‌ ಸೇರಿ ಹಸು ಬಲಿ

Electric shock : ಉಡುಪಿಯಲ್ಲಿ ಟ್ರಾನ್ಸ್‌ಫಾರ್ಮರ್‌ ದುರಸ್ತಿ ವೇಳೆ ವಿದ್ಯುತ್‌ ಪ್ರವಹಿಸಿ ಲೈನ್‌ಮ್ಯಾನ್‌ ಸ್ಥಳದಲ್ಲೇ ಮೃತಪಟ್ಟರೆ, ಆನೇಕಲ್‌ನಲ್ಲಿ ರಸ್ತೆ ಬದಿ ಹೋಗುತ್ತಿದ್ದ ಹಸುವೊಂದು ಕರೆಂಟ್‌ ಶಾಕ್‌ಗೆ ಒದ್ದಾಡಿ ಪ್ರಾಣಬಿಟ್ಟಿದೆ.

VISTARANEWS.COM


on

By

Cow including lineman dies of electric shock
Koo

ಉಡುಪಿ/ ಆನೇಕಲ್‌: ವಿದ್ಯುತ್ ಟ್ರಾನ್ಸ್‌ಫಾರ್ಮರ್ ರಿಪೇರಿ ಮಾಡುವ ವೇಳೆ ವಿದ್ಯುತ್ ಪ್ರವಹಿಸಿ (Electric shock) ಲೈನ್‌ಮ್ಯಾನ್ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಉಡುಪಿಯ ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದ ಹೆಗ್ಗೇರಿಯಲ್ಲಿ ಅವಘಡ ನಡೆದಿದೆ.

ಲೈನ್ ಮ್ಯಾನ್ ಸಲೀಂ (38) ಮೃತ ದುರ್ದೈವಿ. ಟ್ರಾನ್ಸ್‌ಫಾರ್ಮರ್ ಬಳಿ ವಿದ್ಯುತ್ ಸಂಪರ್ಕ ರಿಪೇರಿ ಮಾಡುವಾಗ ಶಾಕ್‌ ಹೊಡೆದಿದೆ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉತ್ತರ ಕರ್ನಾಟಕದ ಮುಂಡಗೋಡು ನಿವಾಸಿಯಾಗಿರುವ ಸಲೀಂ, ಬೈಂದೂರು ಮೆಸ್ಕಾಂನಲ್ಲಿ ಕಳೆದ ಎಂಟು ವರ್ಷದಿಂದ ಸೇವೆ ಸಲ್ಲಿಸುತ್ತಿದ್ದಾರೆ. ಬೈಂದೂರಿನಲ್ಲಿ ಸಲೀಂ ಜನಸ್ನೇಹಿ ಲೈನ್‌ಮ್ಯಾನ್ ಆಗಿದ್ದರು.

ಇದನ್ನೂ ಓದಿ: Road Accident : ಎದುರಿಗೆ ಬಂದ ಬೈಕ್‌ ತಪ್ಪಿಸಲು ಹೋಗಿ ಮಹಿಳೆಗೆ ಗುದ್ದಿದ ಕಾರು; ಎಗರಿ ಬಿದ್ದವಳು ಸ್ಥಳದಲ್ಲೇ ಸಾವು

ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮೂಕಜೀವಿ ಬಲಿ

ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಮಂಚನಹಳ್ಳಿಯಲ್ಲಿ ವಿದ್ಯುತ್ ಶಾಕ್‌ನಿಂದ ಹಸುವೊಂದು ದಾರುಣವಾಗಿ ಮೃತಪಟ್ಟಿದೆ. ಕರೆಂಟ್ ಶಾಕ್‌ನಿಂದ ಹಸು ಮೃತಪಡುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕರಗಪ್ಪ ಎಂಬುವವರು ಹಸುಗಳನ್ನ ಮೇಯಿಸಿಕೊಂಡು ರಸ್ತೆಯಲ್ಲಿ ನಡೆದು ಬರುತ್ತಿದ್ದರು. ಈ ವೇಳೆ ವಿದ್ಯುತ್ ಕಂಬದ ಬಳಿ ಕರೆಂಟ್ ಗ್ರೌಂಡಿಂಗ್ ಆಗಿ ಹಸು ಮೃತಪಟ್ಟಿದೆ. ಇದೇ ರೀತಿ ನಾಲ್ಕೈದು ಹಸುಗಳಿಗೆ ಅದೇ ಜಾಗದಲ್ಲಿ ಗ್ರೌಂಡಿಂಗ್‌ನಿಂದ ಶಾಕ್ ಆಗಿದೆ.

ರೈತನ ಜೀವನಾಧಾರೆಯಾಗಿದ್ದ ಹಸು ಮೃತಪಟ್ಟಿದ್ದಕ್ಕೆ ಜಿಗಣಿ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಾರಣವೆಂದು ಆರೋಪಿಸಿದ್ದಾರೆ. ಒಂದು ಲಕ್ಷಕ್ಕೂ ಬೆಲೆಬಾಳುವ ಹಸುವನ್ನು ಕಳೆದುಕೊಂಡ ರೈತ ಕಂಗಾಲಾಗಿದ್ದಾರೆ. ಬೆಸ್ಕಾಂ ಇಲಾಖೆ ಸೂಕ್ತ ಪರಿಹಾರ ಕಲ್ಪಿಸಿಕೊಡಬೇಕೆಂದು ಕರಗಪ್ಪ ಒತ್ತಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Rave Party: ರೇವ್ ಪಾರ್ಟಿ ಪ್ರಕರಣ; ವಿಚಾರಣೆಗೆ ಹಾಜರಾದ ತೆಲುಗು ನಟಿ ಹೇಮಾ ಸಿಸಿಬಿ ವಶಕ್ಕೆ

Rave Party: ಬೆಂಗಳೂರಿನ ಚಾಮರಾಜಪೇಟೆ ಬಳಿ ಇರುವ ಸಿಸಿಬಿ ಕಚೇರಿಗೆ ನಟಿ ಹೇಮಾ ಸೋಮವಾರ ಹಾಜರಾದ ವೇಳೆ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಳೆ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲು ಸಿಸಿಬಿ ಅಧಿಕಾರಿಗಳು ತೀರ್ಮಾನಿಸಿದ್ದಾರೆ.

VISTARANEWS.COM


on

Rave Party
Koo

ಬೆಂಗಳೂರು: ರೇವ್ ಪಾರ್ಟಿ ಪ್ರಕರಣದಲ್ಲಿ (Rave Party) ಮಾದಕ ವಸ್ತು ಸೇವಿಸಿದ ಹಿನ್ನೆಲೆಯಲ್ಲಿ ತೆಲುಗು ನಟಿ ಹೇಮಾ (Telugu actress Hema), ಸಿಸಿಬಿ ಪೊಲೀಸರ ಮುಂದೆ ಸೋಮವಾರ ವಿಚಾರಣೆಗೆ ಹಾಜರಾಗಿದ್ದುಮ ಅವರನ್ನು ವಶಕ್ಕೆ ಪಡೆಯಲಾಗಿದೆ. ಚಾಮರಾಜಪೇಟೆ ಬಳಿ ಇರುವ ಸಿಸಿಬಿ ಕಚೇರಿಗೆ ನಟಿ ಹೇಮಾ ಹಾಜರಾಗಿದ್ದು, ಸಿಸಿಬಿ ತನಿಖಾಧಿಕಾರಿಗಳು ನಟಿಯ ಹೇಳಿಕೆ ಪಡೆಯುತ್ತಿದ್ದಾರೆ.

ಮೇ 19ರಂದು ಎಲೆಕ್ಟ್ರಾನಿಕ್‌ ಸಿಟಿಯ (Electronic city) ಫಾರ್ಮ್‌ ಹೌಸ್‌ನಲ್ಲಿ ನಡೆದ ರೇವ್‌ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಮಂದಿ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ವೈದ್ಯಕೀಯ ತಪಾಸಣೆಯಲ್ಲಿ ನಟಿ ಹೇಮಾ ಸೇರಿ 86 ಮಂದಿ ಮಾದಕ ವಸ್ತು ಸೇವಿನೆ ಮಾಡಿರುವುದು ದೃಢಪಟ್ಟಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಗೆ ನಟಿ ಹಾಜರಾಗಿದ್ದರು. ಅವರನ್ನು ಅಧಿಕಾರಿಗಳು ವಶಕ್ಕೆ ಪಡೆದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆ.

ಡ್ರಗ್ಸ್ ಮತ್ತು ರೇವ್ ಪಾರ್ಟಿ ಆಯೋಜನೆಯಲ್ಲಿ ನಟಿ ಪ್ರಮುಖ ಪಾತ್ರ ವಹಿಸಿದ್ದರು. ಹಾಗೆಯೇ ತಾವು ಬೇರೆ ಕಡೆ ಇರುವುದಾಗಿ ವಿಡಿಯೊ ಮಾಡಿ ಪೊಲೀಸರ ತನಿಖೆಯ ದಿಕ್ಕು ತಪ್ಪಿಸಲು ಯತ್ನಿಸಿದ್ದರಿಂದ ನಟಿಯನ್ನು ವಶಕ್ಕೆ ಪಡೆದಿದ್ದು, ನಾಳೆ ಕೋರ್ಟ್‌ಗೆ ಹಾಜರುಪಡಿಸಲು ಸಿಸಿಬಿ ತೀರ್ಮಾನಿಸಿದೆ.

Continue Reading

ಕರ್ನಾಟಕ

Hornbill Bird: ಗಂಗಾವತಿಯಲ್ಲಿ ‘ಹಾರ್ನ್‌ಬಿಲ್’ ಪಕ್ಷಿ ಪ್ರತ್ಯಕ್ಷ

Hornbill Bird: ಪಶ್ಚಿಮಘಟ್ಟದಂತ ಮಲೆನಾಡು ಮತ್ತು ಸಮುದ್ರ ತೀರಗಳನ್ನು ಹೊಂದಿರುವ ಪ್ರದೇಶದಲ್ಲಿ ಹೆಚ್ಚಾಗಿ ಕಾಣ ಸಿಗುವ ಹಾರ್ನ್‌ಬಿಲ್ ಎಂಬ ಪಕ್ಷಿ ಇದೀಗ ಗಂಗಾವತಿಯಲ್ಲಿ ಅಪರೂಪಕ್ಕೆ ಪ್ರತ್ಯಕ್ಷವಾಗಿ ಗಮನ ಸೆಳೆದಿವೆ.

VISTARANEWS.COM


on

Hornbill bird sighting in Gangavathi
Koo

ಗಂಗಾವತಿ: ಪಶ್ಚಿಮಘಟ್ಟದಂತ ಮಲೆನಾಡು ಮತ್ತು ಸಮುದ್ರ ತೀರಗಳನ್ನು ಹೊಂದಿರುವ ಪ್ರದೇಶದಲ್ಲಿ ಹೆಚ್ಚಾಗಿ ಕಾಣ ಸಿಗುವ ಹಾರ್ನ್‌ಬಿಲ್ (Hornbill Bird) ಎಂಬ ಪಕ್ಷಿಗಳು ಇದೀಗ ಬಯಲು ಸೀಮೆಯಲ್ಲಿ ಅಪರೂಪಕ್ಕೆ ಪ್ರತ್ಯಕ್ಷವಾಗಿ ಗಮನ ಸೆಳೆದಿವೆ.

ಇಲ್ಲಿನ ಜಯನಗರದ ಬೈಪಾಸ್ ರಸ್ತೆಯಲ್ಲಿರುವ ಹಸಿರು ಹೊಲ-ಗಿಡ ಮರಗಳ ಮಧ್ಯೆ ಇರುವ ನಿರ್ಮಾಣ ಹಂತದ ಲೇಔಟ್‌ನಲ್ಲಿ ಹಾರ್ನ್‌ಬಿಲ್, ಮಂಗಟ್ಟೆ ಹಕ್ಕಿ ಎಂದು ಸ್ಥಳೀಯ ಭಾಷೆಯಲ್ಲಿ ಕರೆಯುವ ಹಕ್ಕಿಯು ವಾಯು ವಿಹಾರಿಗಳಿಗೆ ಕಾಣ ಸಿಕ್ಕಿದೆ.

ಇದನ್ನೂ ಓದಿ: Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

ಸಾಮಾನ್ಯವಾಗಿ ಇದನ್ನು ಪಕ್ಷಿತಜ್ಞರು ಗ್ರೇಟ್ ಹಾರ್ನ್‌ಬಿಲ್, ಗ್ರೇಟ್ ಇಂಡಿಯನ್ ಹಾರ್ನ್‌ಬಿಲ್ ಮತ್ತು ಗ್ರೇಟ್ ಫೈಡ್ ಹಾರ್ನ್‌ಬಿಲ್ ಎಂದು ಗುರುತಿಸುತ್ತಾರೆ. ಭಾರತ, ಮಲೇಶಿಯಾ, ಸುಮಾತ್ರ, ಇಂಡೋನೇಷ್ಯಾ, ಮಲಯ ದ್ವೀಪದ ಅರಣ್ಯಗಳಲ್ಲಿ ಕಾಣ ಸಿಕ್ಕುತ್ತವೆ.

ಇವುಗಳಲ್ಲಿ ಹಲವು ಪ್ರಭೇದಗಳಿದ್ದು, ಆಕರ್ಷಕ ಬಣ್ಣ, ವಿನ್ಯಾಸ, ಗಾತ್ರದಲ್ಲಿ ಕಂಡು ಬರುತ್ತವೆ. ಸಾಮಾನ್ಯವಾಗಿ ಇವು ಆಹಾರವನ್ನು ಹುಡುಕಿಕೊಂಡು ನೂರಾರು ಕಿಲೋ ಮೀಟರ್ ದೂರದವರೆಗೂ ಪ್ರಯಾಣ ಮಾಡುತ್ತವೆ. ಹಣ್ಣಿನ ಮರಗಳನ್ನು ಹುಡುಕಿಕೊಂಡು ಹೋಗುತ್ತವೆ.

ಇದನ್ನೂ ಓದಿ: World Bicycle Day: ಸೈಕಲ್‌ ಹೊಡೆಯುವುದರ ಲಾಭಗಳು ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚು!

ಬಯಲುಸೀಮೆಯಲ್ಲಿ ಅಪರೂಪ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹವ್ಯಾಸಿ ಪಕ್ಷಿತಜ್ಞ ಹಾಗೂ ಮಹಿಳಾ ಮತ್ತು ಮಕ್ಕಳ ಇಲಾಖೆಯ ಯೋಜನಾಧಿಕಾರಿ ಪ್ರವೀಣ್, ಸಹಜವಾಗಿ ಹಾರ್ನ್‌ಬಿಲ್ ಪಕ್ಷಿಗಳು ಕಾರವಾರದ ದಾಂಡೇಲಿಯಲ್ಲಿ ಸಂತಾನೋತ್ಪತ್ತಿಗೆಂದು ಬರುತ್ತವೆ. ಈ ಮುಂಗಾರು ಕಾಲ ಈ ಪಕ್ಷಿಗಳಿಗೆ ಸಂತಾನೋತ್ಪತಿ ಕಾಲ. ಹೀಗೆ ಬಂದಿರುವ ಪಕ್ಷಿಗಳಲ್ಲಿ ಕೆಲವು ಗಂಗಾವತಿಯಂತ ಬಯಲು ಸೀಮೆಗೆ ಆಹಾರ ಹುಡಿಕಿಕೊಂಡು ಬಂದಿರುವ ಸಾಧ್ಯತೆ ಇದೆ. ಈ ಪಕ್ಷಿಗಳು ಭಾರತದಲ್ಲಿ ಕಾಣಸಿಗುತ್ತವೆ. ಆದರೆ ಬಯಲು ಸೀಮೆಯಂತ ಪ್ರದೇಶದಲ್ಲಿ ಅಪರೂಪ ಎಂದು ಪ್ರವೀಣ್ ತಿಳಿಸಿದ್ದಾರೆ.

Continue Reading

ದೇಶ

Samsung: ಸ್ಯಾಮ್‌ಸಂಗ್‌ನ ʼಬಿಗ್‌ ಟಿವಿ ಡೇಸ್‌ʼ ಸೇಲ್‌; ದೊಡ್ಡ ಟಿವಿಗಳ ಮೇಲೆ ಅತ್ಯಾಕರ್ಷಕ ಆಫರ್‌!

Samsung: ಸ್ಯಾಮ್‌ಸಂಗ್ ಅಲ್ಟ್ರಾ ಪ್ರೀಮಿಯಂ ನಿಯೋ ಕ್ಯೂಎಲ್‌ಇಡಿ, ಓಎಲ್‌ಇಡಿ ಮತ್ತು ಕ್ರಿಸ್ಟಲ್ 4ಕೆ ಯುಎಚ್‌ಡಿ ಟಿವಿಗಳು ಸೇರಿದಂತೆ ತನ್ನ ದೊಡ್ಡ ಟಿವಿಗಳ ಮೇಲೆ ಅತ್ಯಾಕರ್ಷಕ ಆಫರ್‌ಗಳನ್ನು ಘೋಷಿಸಿದೆ. ಟಿ20 ವಿಶ್ವಕಪ್‌ ಕ್ರಿಕೆಟ್ ಸಮೀಪಿಸುತ್ತಿದ್ದಂತೆ ಗ್ರಾಹಕರು ದೊಡ್ಡ ಟಿವಿಗಳಲ್ಲಿ ಕ್ರೀಡಾಂಗಣದ ಅನುಭವ ಪಡೆಯಲು ‘ಬಿಗ್ ಟಿವಿ ಡೇಸ್’ ಮಾರಾಟ ಪರಿಚಯಿಸಲಾಗಿದೆ.

VISTARANEWS.COM


on

Samsung Big TV Days Sale Exciting offer on big TVs
Koo

ಬೆಂಗಳೂರು: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆಗಿರುವ ಸ್ಯಾಮ್‌ಸಂಗ್ (Samsung) ಅಲ್ಟ್ರಾ ಪ್ರೀಮಿಯಂ ನಿಯೋ ಕ್ಯೂಎಲ್‌ಇಡಿ, ಓಎಲ್‌ಇಡಿ ಮತ್ತು ಕ್ರಿಸ್ಟಲ್ 4ಕೆ ಯುಎಚ್‌ಡಿ ಟಿವಿಗಳು ಸೇರಿದಂತೆ ತನ್ನ ದೊಡ್ಡ ಟಿವಿಗಳ ಮೇಲೆ ಅತ್ಯಾಕರ್ಷಕ ಆಫರ್‌ಗಳನ್ನು ಘೋಷಿಸಿದೆ. ಟಿ20 ವಿಶ್ವಕಪ್‌ ಕ್ರಿಕೆಟ್ ಸಮೀಪಿಸುತ್ತಿದ್ದಂತೆ ಗ್ರಾಹಕರು ದೊಡ್ಡ ಟಿವಿಗಳಲ್ಲಿ ಕ್ರೀಡಾಂಗಣದ ಅನುಭವ ಪಡೆಯಲು ‘ಬಿಗ್ ಟಿವಿ ಡೇಸ್’ ಮಾರಾಟ ಪರಿಚಯಿಸಲಾಗಿದೆ.

‘ಬಿಗ್ ಟಿವಿ ಡೇಸ್’ ಆಫರ್ ಸಮಯದಲ್ಲಿ ಸ್ಯಾಮ್‌ಸಂಗ್ ಟಿವಿಗಳನ್ನು ಖರೀದಿಸುವ ಗ್ರಾಹಕರು, ಅವರು ಖರೀದಿಸಿದ ಟಿವಿಯನ್ನು ಅವಲಂಬಿಸಿ ರೂ. 89990 ಮೌಲ್ಯದ ಸೆರಿಫ್ ಟಿವಿ ಅಥವಾ ರೂ. 79990 ಮೌಲ್ಯದ ಸೌಂಡ್‌ಬಾರ್ ಅನ್ನು ಉಚಿತವಾಗಿ ಪಡೆಯುತ್ತಾರೆ. ಗ್ರಾಹಕರು ರೂ.2990 ದಿಂದ ಆರಂಭವಾಗುವ ಸುಲಭ ಇಎಂಐ ಸೌಲಭ್ಯವನ್ನು ಪಡೆಯಬಹುದು ಮತ್ತು 20% ವರೆಗಿನ ಕ್ಯಾಶ್‌ಬ್ಯಾಕ್ ಅನ್ನು ಕೂಡ ಪಡೆಯಬಹುದು. ಈ ಆಫರ್‌ಗಳು Samsung.com, ಪ್ರಮುಖ ರಿಟೇಲ್ ಅಂಗಡಿಗಳು ಮತ್ತು ಹಲವಾರು ಇತರ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಲಭ್ಯವಿರುತ್ತವೆ. ರಾಷ್ಟ್ರವ್ಯಾಪಿ ಇರುವ ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ. ಆಫರ್‌ಗಳು ಜೂನ್ 1 ರಿಂದ ಆರಂಭವಾಗುತ್ತದೆ ಮತ್ತು ಜೂನ್ 30, 2024ಕ್ಕೆ ಕೊನೆಗೊಳ್ಳಲಿದೆ. ಆಫರ್‌ಗಳು 98″/85″/83″/77″/75″ ಗಾತ್ರಗಳ ನಿಯೋ ಕ್ಯೂಎಲ್‌ಇಡಿ, ಓಎಲ್‌ಇಡಿ ಮತ್ತು ಕ್ರಿಸ್ಟಲ್ 4ಕೆ ಯುಎಚ್‌ಡಿ ಶ್ರೇಣಿಯ ಆಯ್ದ ಮಾಡೆಲ್‌ಗಳ ಮೇಲೆ ಲಭ್ಯವಿದೆ.

ಇದನ್ನೂ ಓದಿ: Mysore News: ಶಾಸ್ತ್ರ ಜ್ಞಾನಕ್ಕೆ ಪ್ರಪಂಚದ ಎಲ್ಲೆಡೆ ಮಾನ್ಯತೆ: ಮಂತ್ರಾಲಯ ಶ್ರೀ

ಸ್ಯಾಮ್‌ಸಂಗ್ ಗ್ರಾಹಕರ ಟಿವಿ ವೀಕ್ಷಣೆ ಅನುಭವವನ್ನು ಅತ್ಯುನ್ನತಗೊಳಿಸಲು ಮತ್ತು ಅಸಾಧಾರಣ ವೀಕ್ಷಣೆಯ ಅನುಭವಗಳನ್ನು ಒದಗಿಸಲು ಟಿವಿಗಳಲ್ಲಿ ಕೃತಕ ಬುದ್ಧಿಮತ್ತೆಯ (ಎಐ) ಕ್ರಾಂತಿಕಾರಕ ಶಕ್ತಿಯನ್ನು ಪರಿಚಯಿಸಿದೆ. ಈ ಟೆಲಿವಿಷನ್‌ಗಳು ಎಐ ಬಳಕೆಯ ಮೂಲಕ ಮನೆಯ ಮನರಂಜನಾ ಅನುಭವಕ್ಕೆ ಹೊಸ ರೂಪ ನೀಡಲಿದೆ. ಸುಸ್ಥಿರತೆ ಮತ್ತು ಹೆಚ್ಚಿನ ಭದ್ರತೆ ಒದಗಿಸುತ್ತದೆ.

ಸ್ಯಾಮ್‌ಸಂಗ್ ಇಂಡಿಯಾದ ವಿಷುಯಲ್ ಡಿಸ್‌ಪ್ಲೇ ಬ್ಯುಸಿನೆಸ್‌ನ ಹಿರಿಯ ಉಪಾಧ್ಯಕ್ಷ ಮೋಹನ್‌ದೀಪ್ ಸಿಂಗ್ ಈ ಕುರಿತು ಮಾತನಾಡಿ, ಟಿ20 ವಿಶ್ವಕಪ್‌ ಕ್ರಿಕೆಟ್ ಸಂದರ್ಭದಲ್ಲಿ ದೊಡ್ಡ ಗಾತ್ರದ ಪರದೆ ಮತ್ತು ಪ್ರೀಮಿಯಂ ವೀಕ್ಷಣೆಯ ಅನುಭವಕ್ಕೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೇಡಿಕೆಯನ್ನು ಪೂರೈಸುವ ನಿಟ್ಟಿನಲ್ಲಿ ನಮ್ಮ ‘ಬಿಗ್ ಟಿವಿ ಡೇಸ್’ ಮಾರಾಟವನ್ನು ಸೂಕ್ತವಾಗಿ ಆಯೋಜಿಸಲಾಗಿದೆ.

ನಿಯೋ ಕ್ಯೂಎಲ್‌ಇಡಿ, ಓಎಲ್‌ಇಡಿ ಮತ್ತು ಕ್ರಿಸ್ಟಲ್ 4ಕೆ ಯುಎಚ್‌ಡಿ ಟಿವಿಗಳು ಸೇರಿದಂತೆ ನಮ್ಮ ಅಲ್ಟ್ರಾ-ಪ್ರೀಮಿಯಂ ಶ್ರೇಣಿಯ ಟಿವಿಗಳನ್ನು ಅತ್ಯಾಕರ್ಷಕ ಕೊಡುಗೆಗಳ ಜತೆಗೆ ನೀಡುವ ಮೂಲಕ ನಮ್ಮ ಗ್ರಾಹಕರಿಗೆ ತಮ್ಮ ಮನೆಗಳಲ್ಲಿ ನೇರವಾಗಿ ಕ್ರೀಡಾಂಗಣದಲ್ಲಿಯೇ ಕ್ರಿಕೆಟ್ ನೋಡುವಂತೆ ಅನ್ನಿಸುವ ಅನುಭವವನ್ನು ಒದಗಿಸುವ ಗುರಿಯನ್ನು ಹೊಂದಿದ್ದೇವೆ. ನಮ್ಮ ಅತ್ಯಾಧುನಿಕ ಎಐ-ಚಾಲಿತ ಟೆಲಿವಿಷನ್‌ಗಳಲ್ಲಿ ನಮ್ಮ ಗ್ರಾಹಕರು ಅಸಾಧಾರಣ ದೃಶ್ಯ ಗುಣಮಟ್ಟ, ಅಪೂರ್ವ ಆಡಿಯೋ ಮತ್ತು ಸಪೂರ ವಿನ್ಯಾಸಗಳನ್ನು ನಿರೀಕ್ಷೆ ಮಾಡಬಹುದು. ಇದಲ್ಲದೆ ಎಐ ಬಳಕೆಯಿಂದ 8ಕೆ ಎಐ ಅಪ್‌ಸ್ಕೇಲಿಂಗ್ ಮತ್ತು ಎಐ ಮೋಷನ್‌ ಎನ್ ಹ್ಯಾನ್ಸರ್ ಪ್ರೊ ನಂತಹ ಫೀಚರ್‌ಗಳು ಕ್ರಿಕೆಟ್ ನೇರಪ್ರಸಾರದ ಸಂದರ್ಭದಲ್ಲಿ ಬಾಲ್ ಅನ್ನು ಸ್ಪಷ್ಟವಾಗಿ ಕಾಣಿಸುವ ಮೂಲಕ ಗ್ರಾಹಕರಿಗೆ ಅದ್ಭುತ ಕ್ರಿಕೆಟ್ ವೀಕ್ಷಣೆಯ ಅನುಭವವನ್ನು ಒದಗಿಸುತ್ತದೆ ಎಂದು ತಿಳಿಸಿದ್ದಾರೆ.

ಸ್ಯಾಮ್‌ಸಂಗ್ ಕಂಪನಿಯು ಭಾರತೀಯ ಗ್ರಾಹಕರಿಗಾಗಿಯೇ ಪ್ರಾದೇಶಿಕವಾಗಿ ಸಿದ್ಧಗೊಳಿಸಲಾದ ಸ್ಮಾರ್ಟ್ ಅನುಭವಗಳನ್ನು ನೀಡಲು ಈ ಟಿವಿಗಳಲ್ಲಿ ಗೇಮಿಂಗ್, ಮನರಂಜನೆ, ಶಿಕ್ಷಣ ಮತ್ತು ಫಿಟ್‌ನೆಸ್‌ನಂತಹ ಸೌಲಭ್ಯಗಳನ್ನು ಒದಗಿಸಿದೆ. ಕ್ಲೌಡ್ ಗೇಮಿಂಗ್ ಸೇವೆಯು ಬಳಕೆದಾರರಿಗೆ ಯಾವುದೇ ಕನ್ಸೋಲ್ ಅಥವಾ ಪಿಸಿ ಅಗತ್ಯವಿಲ್ಲದೆಯೇ ಎಎಎ ಗೇಮ್‌ಗಳನ್ನು ಪ್ಲಗ್ ಮತ್ತು ಪ್ಲೇ ಮೂಲಕ ಆಡಲು ಅನುವು ಮಾಡಿಕೊಡುತ್ತದೆ.

ಇದನ್ನೂ ಓದಿ: Battery Life Tips: ಈ 5 ಸಲಹೆ ಪಾಲಿಸಿ; ನಿಮ್ಮ ಸ್ಮಾರ್ಟ್‌ಫೋನ್ ಬ್ಯಾಟರಿ ಸಾಮರ್ಥ್ಯ ಹೆಚ್ಚಿಸಿ!

ಸ್ಯಾಮ್‌ಸಂಗ್ ಎಜುಕೇಶನ್ ಹಬ್ ಬಳಕೆದಾರರಿಗೆ ಲೈವ್ ತರಗತಿಗಳ ಜತೆಗೆ ದೊಡ್ಡ ಪರದೆಯ ಕಲಿಕೆಯನ್ನು ಒದಗಿಸುತ್ತಿದ್ದು, ನಿಮ್ಮ ಮಕ್ಕಳಿಗೆ ಹೆಚ್ಚು ಸಂವಾದಾತ್ಮಕ ಮತ್ತು ಖುಷಿದಾಯ ಕಲಿಕೆಯ ಸೌಲಭ್ಯ ಒದಗಿಸುತ್ತದೆ. ಎಲ್ಲಕ್ಕಿಂತ ಹೆಚ್ಚಾಗಿ ಟಿವಿ ಕೀ ಕ್ಲೌಡ್ ಸೇವೆಯ ಮೂಲಕ ಕ್ಲೌಡ್ ಮೂಲಕ ವಿಷಯದ ನೇರ ಪ್ರಸಾರವನ್ನು ಒದಗಿಸುವುದರಿಂದ ಗ್ರಾಹಕರಿಗೆ ಇನ್ನು ಮುಂದೆ ಸೆಟ್-ಟಾಪ್ ಬಾಕ್ಸ್ ಅಗತ್ಯ ಇರುವುದಿಲ್ಲ. ಸ್ಯಾಮ್‌ಸಂಗ್ ಟಿವಿ ಪ್ಲಸ್ ಫೀಚರ್ ಸುದ್ದಿ, ಚಲನಚಿತ್ರಗಳು, ಮನರಂಜನೆ ಮತ್ತು ಇತ್ಯಾದಿಗಳನ್ನು ವೀಕ್ಷಿಸಲು 100+ ಚಾನೆಲ್‌ಗಳನ್ನು ಉಚಿತವಾಗಿ ಒದಗಿಸುತ್ತದೆ.

ನಿಯೋ ಕ್ಯೂಎಲ್ಇಡಿ 8ಕೆ

ನಿಯೋ ಕ್ಯೂಎಲ್ಇಡಿ 8ಕೆ ಶ್ರೇಣಿಯು ಎನ್‌ಕ್ಯೂ8 ಎಐ ಜೆನ್2 ಪ್ರೊಸೆಸರ್‌ನಿಂದ ಕಾರ್ಯ ನಿರ್ವಹಿಸುತ್ತದೆ. ಅದು ಎಐ-ಆಧರಿತ ಅನುಭವವನ್ನು ಒದಗಿಸುತ್ತದೆ ಮತ್ತು ಸ್ಪಷ್ಟವಾಗಿರುವ ಚಿತ್ರ ಗುಣಮಟ್ಟವನ್ನು ನೀಡುತ್ತದೆ. ಎನ್‌ಕ್ಯೂ8 ಎಐ ಜೆನ್2 ಪ್ರೊಸೆಸರ್, 256 ಎಐ ನ್ಯೂರಲ್ ನೆಟ್‌ವರ್ಕ್‌ಗಳಿಂದ ಚಾಲಿತವಾಗಿದ್ದು, ನೀವು ಓಟಿಟಿ ನೋಡುತ್ತಿರಲಿ, ನಿಮ್ಮ ಮೆಚ್ಚಿನ ವೀಡಿಯೊ ಗೇಮ್ ಗಳನ್ನು ಆಡುತ್ತಿರಲಿ ಅಥವಾ ಲೈವ್ ಕ್ರೀಡೆಗಳನ್ನು ವೀಕ್ಷಿಸುತ್ತಿರಲಿ ಎಲ್ಲಾ ಸಂದರ್ಭಗಳಲ್ಲೂ 8ಕೆ ಅನುಭವವನ್ನು ನೀಡುವಂತಹ ದೃಶ್ಯ ಮತ್ತು ಆಡಿಯೋ ಎರಡನ್ನೂ ಒದಗಿಸಲು ಸಹಾಯ ಮಾಡುತ್ತದೆ. ಸ್ಯಾಮ್‌ಸಂಗ್‌ನ ನಿಯೋ ಕ್ಯೂಎಲ್ಇಡಿ 8ಕೆ ಟಿವಿಗಳು ಮೋಷನ್ ಆಕ್ಸಲೇಟರ್ ಟರ್ಬೋ ಪ್ರೋ ಫೀಚರ್ ಹೊಂದಿದ್ದು, ಅದು ಹೆಚ್ಚಿನ ವೇಗದ ಗೇಮಿಂಗ್‌ ಆಡುವ ಸಂದರ್ಭದಲ್ಲಿ ದೃಶ್ಯಗಳನ್ನು ಸ್ಥಿರವಾಗಿ ಕಾಣಿಸುತ್ತದೆ ಮತ್ತು ಅಪೂರ್ವ ವೇಗವನ್ನು ಒದಗಿಸುತ್ತದೆ.

ನಿಯೋ ಕ್ಯೂಎಲ್ಇಡಿ 4ಕೆ 2024

ನಿಯೋ ಕ್ಯೂಎಲ್ಇಡಿ 4ಕೆ ಉತ್ಪನ್ನ ಶ್ರೇಣಿಯು ಎನ್‌ಕ್ಯೂ4 ಎಐ ಜೆನ್2 ಪ್ರೊಸೆಸರ್‌ನಿಂದ ಕಾರ್ಯ ನಿರ್ವಹಿಸುತ್ತದೆ. ಈ ಪ್ರೊಸೆಸರ್ ಯಾವುದೇ ವಿಷಯವನ್ನು ಅದ್ಭುತವಾದ 4ಕೆ ದೃಶ್ಯಾವಳಿಯಲ್ಲಿ ತೋರಿಸುತ್ತದೆ ಮತ್ತು ಪ್ರತೀ ದೃಶ್ಯಕ್ಕೂ ಜೀವ ತುಂಬುತ್ತದೆ. ಕ್ವಾಂಟಮ್ ಮ್ಯಾಟ್ರಿಕ್ಸ್ ತಂತ್ರಜ್ಞಾನದಿಂದ ಮತ್ತಷ್ಟು ಶಕ್ತಿ ತುಂಬಲ್ಪಟ್ಟಿದ್ದು, ಸಂಕೀರಣ ದೃಶ್ಯಗಳಲ್ಲಿಯೂ ಅತ್ಯುತ್ತಮ ದೃಶ್ಯ ವೈಭವವನ್ನು ಒದಗಿಸುತ್ತದೆ. ಆಡಿಯೋ ಅನುಭವ ಉನ್ನತೀಕರಿಸಲು ಡಾಲ್ಬಿ ಅಟ್ಮೋಸ್ ವ್ಯವಸ್ಥೆ ಇದೆ. ಒಟ್ಟಾರೆ ನಿಯೋ ಕ್ಯೂಎಲ್ಇಡಿ 4ಕೆ ಶ್ರೇಣಿಯ ಟಿವಿಗಳು ಅತ್ಯದ್ಭುತ 4ಕೆ ಅನುಭವ ನೀಡುತ್ತವೆ.

ಕ್ಯೂಎಲ್ಇಡಿ ಟಿವಿ

ಸ್ಯಾಮ್‌ಸಂಗ್‌ನ ಕ್ಯೂಎಲ್ಇಡಿ ಟಿವಿ ಕ್ವಾಂಟಮ್ ಡಾಟ್ ತಂತ್ರಜ್ಞಾನದೊಂದಿಗೆ ಅತ್ಯದ್ಭುತ ದೃಶ್ಯ ಗುಣಮಟ್ಟವನ್ನು ಒದಗಿಸುತ್ತದೆ. 100% ಬಣ್ಣ ಸ್ಪಷ್ಟತೆ ಹೊಂದಿರುವುದರಿಂದ ಈ ಟಿವಿ, ಎಷ್ಟೇ ಬ್ರೈಟ್‌ನೆಸ್ ಇದ್ದರೂ ಜಾಸ್ತಿ ಮಾಡಿದರೂ ಕಡಿಮೆ ಇದ್ದರೂ ಸೂಕ್ತವಾದ ಬಣ್ಣಗಳನ್ನೇ ಕಾಣಿಸುತ್ತವೆ. ಇದರ ಅಲ್ಟ್ರಾ-ಸ್ಲಿಮ್ ವಿನ್ಯಾಸವು ಯಾವುದೇ ರೀತಿ ಮನೆಯೊಳಗೆ ಸುಂದರವಾಗಿ ಕಾಣಿಸುತ್ತದೆ. ನೀವು ವಾಸಿಸುವ ಸ್ಥಳದ ಸೊಬಗನ್ನು ಹೆಚ್ಚಿಸುತ್ತದೆ.

ಒಎಲ್ಇಡಿ ಟಿವಿ

ಪ್ರಪಂಚದ ಮೊದಲ ಗ್ಲೇರ್-ಫ್ರೀ ಓಎಲ್ಇಡಿ ಟಿವಿ ಯಾವುದೇ ರೀತಿಯ ಬೆಳಕು ಇದ್ದರೂ ಗಾಢ ಕಪ್ಪು ಮತ್ತು ಸ್ಪಷ್ಟ ದೃಶ್ಯಗಳನ್ನು ಪ್ರಸಾರ ಮಾಡುವಾಗ ಯಾವುದೇ ರೀತಿಯ ಅನಗತ್ಯ ರಿಫ್ಲೆಕ್ಷನ್‌ಗಳನ್ನು (ಪ್ರತಿಬಿಂಬ) ಕಾಣಿಸುವುದಿಲ್ಲ. ಈ ಟಿವಿಗಳೂ ಅದೇ ಅಸಾಧಾರಣ ಎನ್‌ಕ್ಯೂ4 ಎಐ ಜೆನ್2 ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸುತ್ತದೆ.

ಸ್ಯಾಮ್‌ಸಂಗ್‌ನ ಓಎಲ್ಇಡಿ ಟಿವಿಗಳು ರಿಯಲ್ ಡೆಪ್ತ್ ಎನ್‌ಹಾನ್ಸರ್ ಮತ್ತು ಒಎಲ್ಇಡಿ ಎಚ್‌ಡಿಆರ್ ಪ್ರೊನಂತಹ ವೈಶಿಷ್ಟ್ಯಗಳನ್ನು ಹೊಂದಿದ್ದು, ಅದರಿಂದ ದೃಶ್ಯದ ಗುಣಮಟ್ಟವನ್ನು ಮತ್ತಷ್ಟು ಉನ್ನತೀಕರಿಸುತ್ತದೆ. ಜತೆಗೆ ಮೋಷನ್ ಆಕ್ಸಲೇಟರ್ 144 ಹರ್ಟ್ಜ್ ಫೀಚರ್ ಸುಗಮ ಚಲನೆ ಮತ್ತು ವೇಗದ ತ್ವರಿತ ಪ್ರತಿಕ್ರಿಯೆ ಸೌಲಭ್ಯ ಒದಗಿಸುತ್ತಿದ್ದು, ಆದ್ದರಿಂದಲೇ ಸ್ಯಾಮ್ ಓಎಲ್ಇಡಿ ಗೇಮಿಂಗ್‌ಗೆ ಸೂಕ್ತ ಆಯ್ಕೆಯಾಗಿದೆ. ಸಪೂರವಾದ ವಿನ್ಯಾಸ ಹೊಂದಿರುವ ಈ ಓಎಲ್ಇಡಿ ಟಿವಿಗಳು ಮನೆಯಲ್ಲಿ ಎಲ್ಲಿ ಟಿವಿ ಇಟ್ಟಿದ್ದೀರೋ ಆ ಸ್ಥಳದ ಸೊಬಗು ಹೆಚ್ಚಿಸುತ್ತದೆ.

ಇದನ್ನೂ ಓದಿ: World Bicycle Day: ಸೈಕಲ್‌ ಹೊಡೆಯುವುದರ ಲಾಭಗಳು ನಾವಂದುಕೊಂಡಿದ್ದಕ್ಕಿಂತ ಹೆಚ್ಚು!

ಯುಎಚ್‌ಡಿ ಟಿವಿ

ಸ್ಯಾಮ್‌ಸಂಗ್‌ನ ಯುಎಚ್‌ಡಿ ಟಿವಿ ವಿಶಿಷ್ಟವಾದ ಕ್ರಿಸ್ಟಲ್ ಕಲರ್ ತಂತ್ರಜ್ಞಾನ ಹೊಂದಿದ್ದು, ಬಣ್ಣಗಳಿಗೆ ಜೀವ ತುಂಬುತ್ತದೆ, ಪ್ರತಿ ಛಾಯೆಯಲ್ಲೂ ಸೂಕ್ಷ್ಮ ವಿವರಗಳನ್ನು ಕಾಣಿಸುತ್ತದೆ ಮೋಷನ್ ಆಕ್ಸಲೇಟರ್ ಫೀಚರ್ ವೇಗವಾಗಿ ಚಲಿಸುವ ದೃಶ್ಯಗಳನ್ನು ಸುಗಮವಾಗಿ ಮತ್ತು ಸ್ಪಷ್ಟವಾಗಿ ಕಾಣಿಸುತ್ತದೆ. ಪ್ರತಿ ಗೇಮ್, ಚಲನಚಿತ್ರ ಅಥವಾ ಯಾವುದೋ ಶೋ ಅನ್ನು ಹೆಚ್ಚು ಸೊಗಸಾಗಿ ಕಾಣಿಸುತ್ತದೆ ಮತ್ತು ಆನಂದಿಸುವಂತೆ ಮಾಡುತ್ತದೆ.

Continue Reading
Advertisement
Cow including lineman dies of electric shock
ಉಡುಪಿ26 seconds ago

Electric shock : ಕರೆಂಟ್‌ ಶಾಕ್‌ಗೆ ಲೈನ್‌ಮ್ಯಾನ್‌ ಸೇರಿ ಹಸು ಬಲಿ

Rave Party
ಕರ್ನಾಟಕ2 mins ago

Rave Party: ರೇವ್ ಪಾರ್ಟಿ ಪ್ರಕರಣ; ವಿಚಾರಣೆಗೆ ಹಾಜರಾದ ತೆಲುಗು ನಟಿ ಹೇಮಾ ಸಿಸಿಬಿ ವಶಕ್ಕೆ

Saree Fashion
ಫ್ಯಾಷನ್5 mins ago

Saree Fashion: ರಫಲ್‌ ಡಿಸೈನ್‌ನಲ್ಲಿ ಬಂದಿದೆ ಜಾರ್ಜೆಟ್ ಲೆಹೆಂಗಾ ಸೀರೆ!

Hornbill bird sighting in Gangavathi
ಕರ್ನಾಟಕ7 mins ago

Hornbill Bird: ಗಂಗಾವತಿಯಲ್ಲಿ ‘ಹಾರ್ನ್‌ಬಿಲ್’ ಪಕ್ಷಿ ಪ್ರತ್ಯಕ್ಷ

Samsung Big TV Days Sale Exciting offer on big TVs
ದೇಶ10 mins ago

Samsung: ಸ್ಯಾಮ್‌ಸಂಗ್‌ನ ʼಬಿಗ್‌ ಟಿವಿ ಡೇಸ್‌ʼ ಸೇಲ್‌; ದೊಡ್ಡ ಟಿವಿಗಳ ಮೇಲೆ ಅತ್ಯಾಕರ್ಷಕ ಆಫರ್‌!

Davangere Lok Sabha Constituency
ದಾವಣಗೆರೆ12 mins ago

Davangere Lok Sabha Constituency: ದಾವಣಗೆರೆಯಲ್ಲಿ ನಾರಿಶಕ್ತಿ ಕದನ, ಯಾರು ಗೆದ್ದರೂ ಇತಿಹಾಸ

Rahul Dravid
ಕ್ರಿಕೆಟ್13 mins ago

Rahul Dravid: ರೋಹಿತ್​, ಕೊಹ್ಲಿ, ಪಂತ್​ ಸೇರಿ ಎಲ್ಲ ಆಟಗಾರರಿಗೆ ಖಡಕ್​ ಎಚ್ಚರಿಕೆ ನೀಡಿದ ಕೋಚ್​ ದ್ರಾವಿಡ್​

Kannada New Movie Mandela nari shrinivas
ಸ್ಯಾಂಡಲ್ ವುಡ್14 mins ago

Kannada New Movie: `ಮಂಡೇಲಾ’ ಚಿತ್ರಕ್ಕೆ ನಾರಿ ಶ್ರೀನಿವಾಸ್ ನಾಯಕ!

Election Result 2024
ಪ್ರಮುಖ ಸುದ್ದಿ19 mins ago

Election Result 2024: ಇಂಡಿ ಒಕ್ಕೂಟ ಸಭೆ ಸೇರಿದ್ದ ಸ್ಥಳದಲ್ಲೇ ವಾಸ್ತುದೋಷ, ಅಂದು ಅಮವಾಸ್ಯೆ ಬೇರೆ; ಹಾಗಾಗಿ…

Fact Check
Fact Check31 mins ago

Fact Check: ಸೋಲುವ ಭೀತಿಯಲ್ಲಿ ಬ್ಯಾಂಕಾಕ್‌ಗೆ ಹಾರಲು ಸಿದ್ಧರಾದ್ರಾ ರಾಹುಲ್‌ ಗಾಂಧಿ? ವೈರಲ್‌ ಆಗಿರುವ ಬೋರ್ಡಿಂಗ್‌ ಪಾಸ್‌ನ ಅಸಲಿಯತ್ತೇನು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 hour ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಟ್ರೆಂಡಿಂಗ್‌