ಕೊಪ್ಪಳದಲ್ಲಿ ಸಿಡಿಲು ಬಡಿದು ಯುವಕ ಸಾವು, ಮಹಿಳೆಗೆ ಗಂಭೀರ ಗಾಯ - Vistara News

ಕೊಪ್ಪಳ

ಕೊಪ್ಪಳದಲ್ಲಿ ಸಿಡಿಲು ಬಡಿದು ಯುವಕ ಸಾವು, ಮಹಿಳೆಗೆ ಗಂಭೀರ ಗಾಯ

ಕೊಪ್ಪಳ ತಾಲೂಕಿನ ಕಾಟ್ರಳ್ಳಿ ಬಳಿ ಹೊಲಕ್ಕೆ ಕೆಲಸಕ್ಕೆಂದು ಹೋಗಿ ವಾಪಸ್‌ ಮನೆಗೆ ತೆರಳುತ್ತಿದ್ದಾಗ ಸಿಡಿಲು ಬಡಿದಿದ್ದರಿಂದ ದುರಂತ ಸಂಭವಿಸಿದೆ.

VISTARANEWS.COM


on

ಸಿಡಿಲು
ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಹಳೆಯ ಪೇಟೆ ಬನಶಂಕರಿ ದೇವಸ್ಥಾನಕ್ಕೆ ಸಿಡಿಲು ಬಡಿದು ಗೋಪುರಕ್ಕೆ ಹಾನಿಯಾಗಿದೆ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಪ್ಪಳ: ಹೊಲದಿಂದ ಮನೆಗೆ ವಾಪಸ್‌ ತೆರಳುತ್ತಿದ್ದಾಗ ತಾಲೂಕಿನ ಕಾಟ್ರಳ್ಳಿ ಬಳಿ ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿದ್ದು, ಮಹಿಳೆಯೊಬ್ಬರಿಗೆ ಗಂಭೀರ ಗಾಯಗಳಾಗಿವೆ.

ಕಾಟ್ರಳ್ಳಿಯ ಕೋಟ್ರೇಶ (23) ಮೃತ, ಚಿಕ್ಕಸಿಂದೋಗಿಯ ಹನುಮಂತೆವ್ವ ಗಾಯಾಳು. ಇವರು ಹೊಲಕ್ಕೆ ಕೆಲಸಕ್ಕೆಂದು ಹೋಗಿ ಶುಕ್ರವಾರ ಸಂಜೆ ವಾಪಸ್‌ ಮನೆಗೆ ಬರುತ್ತಿದ್ದಾಗ ಸಿಡಿಲು ಬಡಿದು ಅವಘಡ ಸಂಭವಿಸಿದೆ. ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ಎಂಎಲ್‌ಸಿ ಹೇಮಲತಾ ನಾಯಕ ನೆರವಾಗಿದ್ದಾರೆ. ಮುಂಡರಗಿಯಿಂದ ಕೊಪ್ಪಳಕ್ಕೆ ಬರುತ್ತಿದ್ದ ಹೇಮಲತಾ ನಾಯಕ, ಗಾಯಾಳುವನ್ನು ನೋಡಿ ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿದ್ದಾರೆ.

ದೇವಸ್ಥಾನಕ್ಕೆ ಬಡಿದ ಸಿಡಿಲು, ಗೋಪುರ ಜಖಂ
ಗದಗ: ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಹಳೆಯ ಪೇಟೆ ಬನಶಂಕರಿ ದೇವಸ್ಥಾನಕ್ಕೆ ಸಿಡಿಲು ಬಡಿದು ಗೋಪುರ ಜಖಂ ಆಗಿದೆ. ಶುಕ್ರವಾರ ಸಂಜೆ 4 ಗಂಟೆಗೆ ಭಾರಿ ಮಳೆ ಸುರಿಯುತ್ತಿದ್ದಾಗ ಸಿಡಿಲು ಬಡಿದಿದೆ. ಈ ವೇಳೆ ದೇವಸ್ಥಾನದಲ್ಲಿ ನಿಂತಿದ್ದ ಏಳೆಂಟು ಜನರು ಪ್ರಾಣಾಪಾಯದಿಂದ ಪಾರಾಗಿದ್ದು, ರವಿ ಅನ್ಬಿಗೇರಿ ಎಂಬುವವರಿಗೆ ಕೈಗೆ ಗಾಯಗಳಾಗಿವೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಇದನ್ನೂ ಓದಿ | ಸಿನಿಮಾ ಸೇರುವ ಆಸೆಯಿಂದ ಬಂದವನು ಪಿಜಿ ಅವ್ಯವಸ್ಥೆಯಿಂದ ಹೆಣವಾದ! ಸತ್ತು 2 ದಿನವಾದರೂ ಗೊತ್ತೇ ಆಗಲಿಲ್ಲ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕೈಯಲ್ಲಿ ಛತ್ರಿ ಹಿಡಿದು ಬಸ್ ಡ್ರೈವಿಂಗ್; ಮಳೆಗೆ ಕುಸಿದು ಬಿದ್ದ ಮಾಳಿಗೆ ಮನೆ

Karnataka Weather Forecast : ಮಳೆ ಅವಾಂತರವು ಮುಂದುವರಿದಿದೆ. ನಿರಂತರ ಮಳೆಗೆ (Rain News) ಕೆಎಸ್‌ಆರ್‌ಟಿಸಿ ಬಸ್ಸಿನೊಳಗೆ ನೀರು ಸೋರುತ್ತಿರುವ ಕಾರಣಕ್ಕೆ ಚಾಲಕನೊಬ್ಬ ಕೈಯಲ್ಲಿ ಛತ್ರಿ ಹಿಡಿದು ಚಲಾಯಿಸಿದ್ದಾರೆ. ಇತ್ತ ವ್ಯಾಪಕ ಮಳೆಗೆ ಮಾಳಿಗೆ ಮನೆ ಕುಸಿದಿದ್ದು, ಮನೆಯಲ್ಲಿದ್ದ ಮಕ್ಕಳಿಬ್ಬರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

VISTARANEWS.COM


on

By

Karnataka Weather Forecast
Koo

ಧಾರವಾಡ/ದಾವಣಗೆರೆ: ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಮಳೆ (Rain News) ಬಂದರು ಕಷ್ಟ ಬಾರದೆ ಇದ್ದರೂ ನಷ್ಟ ಎನ್ನುವಂತಾಗಿದೆ. ಮಳೆಯಿಂದಾಗಿ (karnataka Weather Forecast) ಅವಾಂತರವೇ ಸೃಷ್ಟಿಯಾಗಿದ್ದು, ಸಾವು-ನೋವು ಸಂಭವಿಸಿದೆ. ಧಾರವಾಡದಲ್ಲಿ ಭಾರಿ ಮಳೆಗೆ ಸಾರಿಗೆ ಬಸ್‌ನಲ್ಲಿ ನೀರು ಸೋರುತ್ತಿದ್ದ ಕಾರಣಕ್ಕೆ, ಚಾಲಕರೊಬ್ಬರು ಒಂದು ಕೈಯಲ್ಲಿ ಛತ್ರಿ ಹಿಡಿದು ಮತ್ತೊಂದು ಕೈಯಲ್ಲಿ ಬಸ್ ಡ್ರೈವಿಂಗ್ ಮಾಡಿದ್ದಾರೆ.

ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿಗೆ ಗ್ರಾಮಕ್ಕೆ ಸಂಚರಿಸುವ ಸಾರಿಗೆ ಬಸ್‌ ಇದಾಗಿದ್ದು, ಭಾರಿ ಮಳೆಗೆ ಎಲ್ಲ ಕಡೆಯು ನೀರು ಸೋರಿದೆ. ಮಳೆಯಿಂದ ರಕ್ಷಣೆ ಪಡೆಯುವ ಸಲುವಾಗಿ ಚಾಲಕ ಛತ್ರಿ ಹಿಡಿದುಕೊಂಡು ಬಸ್‌ ಅನ್ನು ಚಾಲನೆ ಮಾಡಿದ್ದಾರೆ. ಈ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ. ಚಾಲಕ ಛತ್ರಿ ಹಿಡಿದ ದೃಶ್ಯವನ್ನು ನಿರ್ವಾಹಕಿ ವಿಡಿಯೊ ಮಾಡಿದ್ದಾರೆ ಎನ್ನಲಾಗಿದೆ.

karnataka Weather Forecast

ದಾವಣಗೆರೆಯಲ್ಲಿ ಕುಸಿದು ಬಿದ್ದ ಮಾಳಿಗೆ ಮನೆ

ಭಾರಿ ಮಳೆಗೆ ಮಾಳಿಗೆ ಮನೆಯೊಂದು ಕುಸಿದು ಬಿದ್ದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹುಚ್ಚವ್ವನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಶುಕ್ರವಾರ ಬೆಳಗ್ಗೆ ಸುರಿದ ಮಳೆಯಿಂದ ಮಾಳಿಗೆ ಮನೆ ಕುಸಿದಿದೆ. ಕುಟುಂಬಸ್ಥರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಚ್ಚವ್ವನಹಳ್ಳಿ ಗ್ರಾಮದ ಸನಾವುಲ್ಲಾ ಎಂಬುವರಿಗೆ ಸೇರಿದ ಮಾಳಿಗೆ ಮನೆಯಲ್ಲಿ ಮಕ್ಕಳು ಪಾರಾಗಿದ್ದು, ಸನಾವುಲ್ಲಾ ಅವರಿಗೆ ಸಣ್ಣ-ಪುಟ್ಟ ಗಾಯವಾಗಿದೆ. ಚಿಕಿತ್ಸೆಗಾಗಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ: Karnataka Rain : ಸಿಡಿಲಾಘಾತಕ್ಕೆ ವಿದ್ಯಾರ್ಥಿ ಬಲಿ; ಗಾಳಿ-ಮಳೆಗೆ ಮರ ಮುರಿದು ಬಿದ್ದು ಜಾನುವಾರು ಸಾವು

ಹಾಸನದಲ್ಲಿ ಮಳೆ ಗಾಳಿಗೆ ರಸ್ತೆಗೆ ಬಿದ್ದ ಮರ

ಹಾಸನ ನಗರದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿದಿದೆ. ಸತತ ಒಂದು ಗಂಟೆಗಳ ಕಾಲ ಸುರಿದ ಗಾಳಿ ಮಳೆಗೆ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು. ಇದರಿಂದಾಗಿ ಒಂದು ಕಾರು ಜಖಂ ಆಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಹಾಸನ ನಗರದ ಹೌಸಿಂಗ್ ಬೋರ್ಡ್‌ ಬಡಾವಣೆಯಲ್ಲಿ ಈ ಘಟೆನೆ ನಡೆದಿದೆ. ಇತ್ತ ನಗರದ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿತ್ತು. ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಯಿಂದಾಗಿ ಹಾಸನ ನಗರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.

ಚಿಕ್ಕಬಳ್ಳಾಪುರದಲ್ಲಿ ಧರೆಗುರುಳಿದ 50 ವರ್ಷದ ಅರಳಿ ಮರ

ಬಿರುಗಾಳಿ ಸಹಿತ‌ ಮಳೆಗೆ ಬೃಹತ್ ಗಾತ್ರದ ಮರವೊಂದು ಧರೆಗುರುಳಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅರಳಿಕಟ್ಟೆಯಲ್ಲಿದ್ದ 50 ವರ್ಷಗಳಿಗೂ ಹಳೆಯ ಅರಳಿ ಮರ ಉರುಳಿ ಬಿದ್ದಿದೆ. ಅದೃಷ್ಟವಶಾತ್‌ ಆ ಸಮಯದಲ್ಲಿ ಯಾರು ಇಲ್ಲದ ಕಾರಣಕ್ಕೆ ಅಪಾಯವೊಂದು ತಪ್ಪಿದೆ. ಇಶಾ ಫೌಂಡೇಶನ್ ಸುತ್ತಮುತ್ತ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಬಿರುಗಾಳಿಗೆ ಜಾಹೀರಾತು ಫಲಕಗಳು ನೆಲಕ್ಕೆ ಬಿದ್ದಿವೆ. ಚಿಕನ್ ಹಾಗೂ ಚಾಟ್ಸ್ ಅಂಗಡಿ ಮೇಲೆ ಫಲಕ ಬಿದ್ದಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಸಿಡಿಲಾಘಾತಕ್ಕೆ ವಿದ್ಯಾರ್ಥಿ ಬಲಿ; ಗಾಳಿ-ಮಳೆಗೆ ಮರ ಮುರಿದು ಬಿದ್ದು ಜಾನುವಾರು ಸಾವು

Karnataka Rain : ಉಡುಪಿಯಲ್ಲಿ ಸಿಡಿಲಾಘಾತಕ್ಕೆ ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದಾನೆ. ಹಲವೆಡೆ ಭಾರಿ ಮಳೆ-ಗಾಳಿಯಿಂದಾಗಿ ಮರಗಳು ಧರೆಗುರುಳುತ್ತಿವೆ. ಪರಿಣಾಮ ಅನಾಹುತಗಳು ಸಂಭವಿಸುತ್ತಿವೆ. ಮರದ ಬೃಹತ್‌ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ಜಾನುವಾರವೊಂದು ಮೃತಪಟ್ಟಿದೆ. ಕೆಲವೆಡೆ ಮನೆಯ ಶೆಡ್‌ಗಳು ಹಾರಿ ಹೋಗಿವೆ.

VISTARANEWS.COM


on

By

Karnataka Rain
Koo

ಉಡುಪಿ/ಬೆಳಗಾವಿ: ರಾಜ್ಯಾದ್ಯಂತ ಗುಡುಗು, ಸಿಡಿಲು ಸಹಿತ ಮಳೆಯಾಗುತ್ತಿದ್ದು, ಸಾವು- ನೋವು (Karnataka Rain) ಸಂಭವಿಸುತ್ತಿದೆ. ಉಡುಪಿಯಲ್ಲಿ ಸಿಡಿಲಾಘಾತಕ್ಕೆ ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದಾನೆ. ಉಡುಪಿಯ ಶಿರ್ವ ಪಂಚಾಯತ್ ವ್ಯಾಪ್ತಿಯ ಮಾಣಿಬೆಟ್ಟು ಬಳಿ ಘಟನೆ ನಡೆದಿದೆ. ಶಿರ್ವ ಮಾಣೆಬೆಟ್ಟು ನಿವಾಸಿ ರಕ್ಷಿತ್ ಪೂಜಾರಿ ಮೃತ ದುರ್ದೈವಿ.

ರಕ್ಷಿತ್‌ ಶಿರ್ವ ಎಂಎಸ್‌ಆರ್‌ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿಯಾಗಿದ್ದ. ಗುರುವಾರ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದಾಗ ಸಿಡಿಲು ಬಡಿದಿದೆ. ನೆಲದಲ್ಲಿ ಬಿದ್ದಿದ್ದ ರಕ್ಷಿತ್‌ನನ್ನು ಕೂಡಲೇ ಕುಟುಂಬಸ್ಥರು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10 ಗಂಟೆಗೆ ಮೃತಪಟ್ಟಿದ್ದಾನೆ.

ಬೆಳಗಾವಿಯಲ್ಲಿ ಮರದಡಿ ನಿಂತಿದ್ದ ಆಕಳು ಸಾವು

ಬೆಳಗಾವಿಯ ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಗಾಳಿಯೊಂದಿಗೆ ಭಾರಿ‌ ಮಳೆಯಾಗಿದೆ. ಮಳೆಗೆ ಬೃಹತ್ ಗಾತ್ರದ ಮರ ಧರೆಗುರುಳಿದೆ. ಗುರುವಾರ ಸಂಜೆ ಸುರಿದ ಮಳೆಯಿಂದ ಮನೆ ಮುಂದಿದ್ದ ಮರ ಬಿದ್ದಿದೆ. ಮರದ ಕೆಳಗೆ ಕಟ್ಟಿದ್ದ ಆಕಳು ಮೇಲೆ ಬೃಹತ್‌ ಗಾತ್ರದ ಕೊಂಬೆ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದೆ. ರೈತ ಶಂಕರ್ ರೊಡ್ಡಣ್ಣವರ್ ಎಂಬುವವರಿಗೆ ಸೇರಿದ ಆಕಳು ಮೃತಪಟ್ಟಿದೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಳೆಗೆ ಮನೆ ಬಿದ್ದು ಬೀದಿಗೆ ಬಂದ ಕುಟುಂಬ

ಕಳೆದ ರಾತ್ರಿ ಸುರಿದ ಭಾರಿ ಮಳೆ ಗಾಳಿಗೆ ಎಲ್ಲವನ್ನೂ ಕಳೆದುಕೊಂಡು ಕುಟುಂಬವೊಂದು ಬೀದಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರ ಗ್ರಾಮದಲ್ಲಿ ಭಾರಿ ಮಳೆಗೆ ಲಕ್ಷ್ಮೀ ಮಾದರ್ ಎಂಬುವವರ ಮನೆಯ ಚಾವಣಿ ಹಾರಿ ಹೋಗಿದೆ. ಲಕ್ಷ್ಮಿ ಅವರ ಕೈ ಮೇಲೂ ಚಾವಣಿ ಬಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯಲ್ಲಿದ್ದ ಎಲ್ಲ ಸಾಮಾಗ್ರಿಗಳಿಗೂ ಹಾನಿಯಾಗಿವೆ. ಸರ್ಕಾರದಿಂದ ಸೂಕ್ತ ಪರಿಹಾರಕ್ಕೆ ಲಕ್ಷ್ಮೀ ಮನವಿ ಮಾಡಿದ್ದಾರೆ. ಇನ್ನೂ ಭಾರಿ ಬಿರುಗಾಳಿಗೆ 5ಕ್ಕೂ ಹೆಚ್ಚು ಶೆಡ್‌ಗಳ ಚಾವಣಿ, 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಮನೆಗಳಿಗೆ ಹಾನಿ ಹಿನ್ನೆಲೆ ಇಬ್ಬರಿಗೆ ಗಾಯವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಾಗಲಕೋಟೆಯಲ್ಲಿ ನೆಲಕ್ಕುರುಳಿದ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌

ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಬಾಗಲಕೋಟೆಯ ತುಳಸಿಗೇರಿ ಗ್ರಾಮದಲ್ಲಿ ಬಿರುಗಾಳಿಗೆ ಮರ ಮುರಿದು ಬಿದ್ದು, ಚಾವಣಿಗೆ ಹಾರಿಹೋಗಿದೆ. ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ನೆಲಕ್ಕುರಳಿದೆ. ನೋಡ ನೋಡುತ್ತಿದ್ದಂತೆ ಶೆಡ್‌ನ ಚಾವಣಿ ಶಿಟ್ ಗಾಳಿಯಲ್ಲಿ ಹಾರಾಡಿದ್ದವು. ಕಾಯಿ ಅಂಗಡಿಗಳ ಮೇಲೆ ಮರದ ಕೊಂಬೆ ಮುರಿದು ಬಿದ್ದ ಹಾನಿಯಾಗಿತ್ತು.

ಇದನ್ನೂ ಓದಿ: Karnataka Weather : ಕರಾವಳಿಯಲ್ಲಿ ಬಿರುಗಾಳಿ ಮಳೆ; ಕಡಲಿಗಿಳಿಯದಂತೆ ಮೀನುಗಾರರಿಗೆ ಅಲರ್ಟ್!‌

ಕುಸಿದು ಬಿದ್ದ ಕಳವಾಡಿ ಈಶ್ವರ ಮಾರಿಕಾಂಬಾ ದೇವಳದ ಅನ್ನಛತ್ರ

ಭಾರಿ ಗಾಳಿ ಮಳೆಗೆ ದೇವಳದ ಅನ್ನಛತ್ರ ಕುಸಿದು ಭಾರಿ ಅನಾಹುತ ತಪ್ಪಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಳವಾಡಿ ಈಶ್ವರ ಮಾರಿಕಾಂಬಾ ದೇವಳದ ಅನ್ನಛತ್ರದಲ್ಲಿ ಘಟನೆ ನಡೆದಿದೆ. ಕೊಲ್ಲೂರು ರಸ್ತೆಯಲ್ಲಿ ಮರ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ವಿದ್ಯುತ್ ತಂತಿಯ ಮೇಲೆ ಮರ ಬಿದ್ದು, ತಡರಾತ್ರಿಯವರಗೂ ಹಲವೆಡೆ ವಿದ್ಯುತ್ ವ್ಯತ್ಯಯವಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿದರು.

ಚಿಕ್ಕಮಗಳೂರಲ್ಲಿ ಮರ ಬಿದ್ದು ಐವರು ಕೂದಲೆಳೆ ಅಂತರದಲ್ಲಿ ಪಾರು

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಭಾರಿ ಬಿರುಗಾಳಿ ಮಳೆಗೆ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದೆ. ಇದೇ ವೇಳೆ ಮನೆಯಲ್ಲಿದ್ದ ಐವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಚಿಕ್ಕಮಗಳೂರಿನ ಕಳಸ ತಾಲೂಕಿನ ಬಾಳೆಹೊಳೆ ಕಗ್ಗನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಮಲಗಿದ್ದಾಗ ಮಂಚದ ಮೇಲೆಯೇ ಬೃಹತ್ ಗಾತ್ರದ ಕೊಂಬೆ ಬಿದ್ದಿದೆ. ಮನೆಯಲ್ಲಿದ್ದ ಕುಟುಂಬಸ್ಥರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಮನೆಯೊಳಗೆ ಸಿಲುಕಿದ್ದವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮನೆ ಸಂಪೂರ್ಣ ಜಖಂಗೊಂಡಿದ್ದು, ಪಿಠೋಪಕರಣಗಳಿಗೆ ಹಾನಿಯಾಗಿದೆ. ಮನೆಯಲ್ಲಿ ಸಂಗ್ರಹಿಸಿದ್ದ ಆಹಾರ ಪದಾರ್ಥಗಳು ಮಣ್ಣು ಪಾಲಾಗಿದೆ. ಬೆಳಗಿನ ಜಾವ ನಾಲ್ಕು ಗಂಟೆಗೆ ಈ ಅವಘಡ ಸಂಭವಿಸಿದೆ. ಬೃಹತ್ ಗಾತ್ರದ ಮರ ಬಿದ್ದರೂ ಐವರು ಉಳಿದಿದ್ದೆ ಪವಾಡ ಎಂದಿದ್ದಾರೆ.

ಮಳೆ ಅನಾಹುತಕ್ಕೆ ಶುಂಠಿ ಬೆಳೆ ನಾಶ

ಮೈಸೂರಿನಲ್ಲಿ ಮಳೆ ಅನಾಹುತ ಮುಂದುವರಿದಿದೆ. ಸರಗೂರು ತಾಲೂಕಿನ ಬಾಡಿಗೆ ಗ್ರಾಮದಲ್ಲಿ ರೈತ ಜವರಯ್ಯ ಹಾಗೂ ಪುಟ್ಟತಾಯಮ್ಮ ಅವರಿಗೆ ಸೇರಿದ ಶುಂಠಿ ಬೆಳೆ ನಾಶವಾಗಿದೆ. ಇದರಿಂದಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಜಮೀನಿನಲ್ಲಿ ಮಳೆ ನೀರು ನಿಂತಿದ್ದರಿಂದ ಪುಟ್ಟತಾಯಮ್ಮ ಕಣ್ಣೀರಿಟ್ಟು, ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

ರಾಯಚೂರಲ್ಲಿ ಸುರಿದ ಒಂದೇ ಮಳೆಗೆ ಜಮೀನು ಜಲಾವೃತ

ರಾಯಚೂರು ತಾಲೂಕಿನ ಕೆರೆಬೂದೂರು ಗ್ರಾಮದ ಬಳಿ ಒಂದೇ ಮಳೆಗೆ ಜಮೀನು ಜಲಾವೃತಗೊಂಡಿದೆ. ಮಳೆಯಿಂದಾಗಿ ನೂರಾರು ಎಕರೆ ಜಮೀನು ಜಲಾವೃತಗೊಂಡಿದ್ದರಿಂದ ಬಿತ್ತನೆಗೆ ತಯಾರಿ ನಡೆಸಿದ್ದ ರೈತರಿಗೆ ಭಾರೀ‌ ನಿರಾಸೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿಯಲ್ಲಿ ಬಿರುಗಾಳಿ ಮಳೆ; ಕಡಲಿಗಿಳಿಯದಂತೆ ಮೀನುಗಾರರಿಗೆ ಅಲರ್ಟ್!‌

karnataka Weather Forecast : ಒಳನಾಡು ಹಾಗೂ ಮಲೆನಾಡು, ಕರಾವಳಿಯಲ್ಲಿ ಮಳೆ (Rain News) ಅಬ್ಬರ ಜೋರಾಗಿ ಇರಲಿದ್ದು, ಮೀನುಗಾರರಿಗೆ ಕಡಲಿಗಿಳಿಯದಂತೆ ಎಚ್ಚರಿಕೆ (Fisher Waring) ನೀಡಲಾಗಿದೆ. ಬಿರುಗಾಳಿಯು 55 ಕಿ.ಮೀ ವೇಗದಲ್ಲಿ ಬೀಸಲಿದ್ದು, ಈ ವೇಳೆ ಸಮುದ್ರಕ್ಕೆ ಇಳಿಯಬಾರೆಂದು ಸೂಚಿಸಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ವರುಣಾರ್ಭಟ ಮುಂದುವರಿದಿದ್ದು, ಗುಡುಗು, ಮಿಂಚು ಸಹಿತ (Rain News) ಬಿರುಗಾಳಿಯೊಂದಿಗೆ ಮಳೆಯಾಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಾಳಿ ವೇಗವು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ (Karnataka Weather Forecast) ಬೀಸಲಿದೆ.

ಇನ್ನೂ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ ಮತ್ತು ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬಳ್ಳಾರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರದ ಹಲವು ಕಡೆಗಳಲ್ಲಿ ಗಾಳಿಯು ರಭಸವಾಗಿ ಬೀಸಲಿದ್ದು, ಗುಡುಗು ಸಹಿತ ಮಳೆ ಲಘು ಮಳೆಯಾಗಲಿದೆ. ತುಮಕೂರು ಮತ್ತು ವಿಜಯನಗರ ಸೇರಿದಂತೆ ಬೀದರ್, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲೂ ಗಾಳಿ ಸಹಿತ ಭಾರಿ ಮಳೆಯಾಗಲಿದೆ.

Karnataka Weather Forecast

ಇದನ್ನೂ ಓದಿ: SSLC Toper: ಓದೋಕೂ ಬರದವ ಎಸ್‌ಎಸ್‌ಎಲ್‌ಸಿ ಟಾಪರ್‌ ಆಗಿ ಜವಾನನಾದ! ಜಡ್ಜ್‌ ದೂರಿನಿಂದ ಹೊರ ಬಿತ್ತು ಅಸಲಿಯತ್ತು!

ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯೊಂದಿಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬಿರುಗಾಳಿ ಬೀಸಲಿದ್ದು, ಹಳದಿ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಮೀನುಗಾರರಿಗೆ ಅಲರ್ಟ್‌

ಮೇ 24ರಂದು ಕರ್ನಾಟಕ ಕರಾವಳಿ ಭಾಗದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಗಾಳಿಯ ವೇಗವು ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹಾಗಾಗಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ತೆರಳದಂತೆ ಸೂಚಿಸಲಾಗಿದೆ. ಪ್ರವಾಸಿಗರು ಕಡಲ ತೀರಕ್ಕೆ ಹೋಗದಂತೆ ಎಚ್ಚರಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕೊಪ್ಪಳ

Koppala News: ವಿಜಯನಗರ ಅರಸರ ಕಾಲದಲ್ಲಿ ನಿರ್ಮಿಸಿದ್ದ ಹುಲಗಿ ಕಟ್ಟೆಯ ಶಾಸನ ಪತ್ತೆ

Koppala News: ವಿಜಯನಗರ ಅರಸರ ಕಾಲದಲ್ಲಿ ನಿರ್ಮಿಸಿದ್ದ ಹುಲಗಿ ಕಟ್ಟೆಯ ಶಾಸನವೊಂದು ಕೊಪ್ಪಳ ತಾಲೂಕಿನ ಹೊಳೆ ಮುದ್ಲಾಪುರದ ಬಳಿ ಪತ್ತೆಯಾಗಿದೆ. ಈ ಶಾಸನವು ತುಂಗಾಭದ್ರಾ ನದಿಗೆ ಅಡ್ಡಲಾಗಿ ಕಟ್ಟಿರುವ ಹುಲಗಿಯ ಅಣೆಕಟ್ಟೆಯ ಹೊಳೆ ಮುದ್ಲಾಪುರದ ಹತ್ತಿರದ ಅಣೆಕಟ್ಟಿನ ಪಕ್ಕದಲ್ಲಿ ಹುಟ್ಟುಬಂಡೆಯಲ್ಲಿದೆ.

VISTARANEWS.COM


on

an inscription of Hulagi Katte built during the Vijayanagara kings was discovered
Koo

ಕೊಪ್ಪಳ: ವಿಜಯನಗರ ಅರಸರ ಕಾಲದಲ್ಲಿ ನಿರ್ಮಿಸಿದ್ದ ಹುಲಗಿ ಕಟ್ಟೆಯ ಶಾಸನವೊಂದು ತಾಲೂಕಿನ (Koppala News) ಹೊಳೆ ಮುದ್ಲಾಪುರದ ಬಳಿ ಪತ್ತೆಯಾಗಿದೆ.

ತಾಲೂಕಿನ ಹೊಳೆ ಮುದ್ಲಾಪುರದ ಬಳಿ ಹುಲಗಿ ಅಣೆಕಟ್ಟೆಯ ಹತ್ತಿರ ವಿಜಯನಗರ ಕಾಲುವೆ ಯೋಜನೆಯನ್ನು ಕರ್ನಾಟಕ ನೀರಾವರಿ ನಿಗಮ, ವಿಜಯನಗರ ಕಾಲುವೆಗಳ ಆಧುನಿಕರಣ ಯೋಜನೆ ನಂ-1 ಮುನಿರಾಬಾದ್‌ನ ತುಂಗಾಭದ್ರ ಜಲಾಶಯ ವಿಭಾಗದವರು ಕಾಮಗಾರಿ ಕೈಗೊಳ್ಳುವಾಗ ಶಾಸನವು ಇರುವ ಬಗ್ಗೆ ಮಾಹಿತಿಯನ್ನು ರಾಜ್ಯ ಪುರಾತತ್ತ್ವ ಸಂಗ್ರಹಾಲಯಗಳು ಪರಂಪರೆ ಇಲಾಖೆಗೆ ವಿಜಯನಗರ ಕಾಲುವೆ ಯೋಜನೆಯ ಸಂವಹನ ಮತ್ತು ದಾಖಲಾತಿ ತಜ್ಞ ಮಲ್ಲಿಕಾರ್ಜುನ ಹೊಸಪಾಳ್ಯ ತಿಳಿಸಿದ್ದರು. ಕಮಲಾಪುರ-ಹಂಪಿಯ ರಾಜ್ಯ ಪುರಾತತ್ವ ಸಂಗ್ರಹಾಲಯಗಳು ಪರಂಪರೆ ಇಲಾಖೆಯ ಉಪ ನಿರ್ದೇಶಕ ಡಾ.ಆರ್.ಶೇಜೇಶ್ವರ ಹಾಗೂ ಪುರಾತತ್ವ ಇಲಾಖೆಯ ಸಹಾಯಕ ಡಾ.ಆರ್. ಮಂಜನಾಯ್ಕ ಅವರು ಕ್ಷೇತ್ರ ಕಾರ್ಯ ಕೈಗೊಂಡಾಗ ಅಲ್ಲಿ ಆರು ಸಾಲಿನ ವಿಜಯನಗರ ಅರಸರ ಕಾಲದ ಶಾಸನವು ಕಂಡುಬಂದಿದೆ.

ಇದನ್ನೂ ಓದಿ: Yadgiri News: ಶ್ರೀಶೈಲಂನಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ

ಶಾಸನವು ತುಂಗಾಭದ್ರಾ ನದಿಗೆ ಅಡ್ಡಲಾಗಿ ಕಟ್ಟಿರುವ ಹುಲಗಿಯ ಅಣೆಕಟ್ಟೆಯ ಹೊಳೆ ಮುದ್ಲಾಪುರದ ಹತ್ತಿರದ ಅಣೆಕಟ್ಟಿನ ಪಕ್ಕದಲ್ಲಿ ಹುಟ್ಟುಬಂಡೆಯಲ್ಲಿದೆ. ಇದು 14 ಆಡಿ ಉದ್ದ ಹಾಗೂ 3 ಆಡಿ ಆಗಲವಾಗಿದ್ದು ಆರು ಸಾಲಿನ ಕನ್ನಡ ಶಾಸನವಾಗಿದೆ. ಈ ಶಾಸನವು ತುಂಗಾಭದ್ರ ನೀರಿನಿಂದ ಮುಳುಗಿರುತ್ತಿತ್ತು ಈ ವರ್ಷ ಮಳೆ ಕಡಿಮೆ ಇದ್ದರಿಂದ ಶಾಸನವು ಕಂಡು ಬಂದಿದೆ.‌

ಇದನ್ನೂ ಓದಿ: Golden Star Ganesh: ಮೈಸೂರಿನಲ್ಲಿ ಮೇ 25ರಂದು ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ಫಸ್ಟ್‌ ಸಾಂಗ್‌ ರಿಲೀಸ್‌

ಶಾಸನದ ಸಾರಾಂಶ

ವಿಜಯನಗರದ ಅರಸರ ಮಹಾಪ್ರಧಾನ ನಾಗಂಣದಂಣನಾಯಕನು ಮಲಿನಾಥದೇವರ ವಾಯುವ್ಯಕ್ಕೆ ಕಲಊರ ಎಂಬ ಸ್ಥಳದಲ್ಲಿ ತುಂಗಾಭದ್ರ ನದಿಗೆ ಅಡ್ಡಲಾಗಿ ಕಟ್ಟೆಯನ್ನು ಕಟ್ಟಿಸುತ್ತಾರೆ. ಈ ಕಟ್ಟೆಗೆ ಹುಲಿಗಿಯಕಟ್ಟಿ ಎಂಬ ಉಲ್ಲೇಖವಿದೆ. ಇಲ್ಲಿಂದ ಒಂದು ಕಾಲುವೆಯನ್ನು ನಿರ್ಮಿಸಿ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹುಲಿಗಿಗೆ ನೀರನ್ನು ಕಾಲುವೆಯ ಮುಖಾಂತರ ನೀರನ್ನು ಹರಿಸಿರುವುದು ಈ ಶಾಸನದಿಂದ ತಿಳಿದುಬರುತ್ತದೆ. ಇದರಲ್ಲಿ ಕಾಲುವೆಯ ಉಲ್ಲೇಖವು ಸಹ ಇದೆ. ಶಾಸನವನ್ನು ಡಾ.ಜಗದೀಶ ಅಗಸಿಬಾಗಿಲ ಓದಿದ್ದು,ಈ ಶಾಸನದ ಕುರಿತು ಇಲಾಖೆಯಿಂದ ಹೆಚ್ಚಿನ ಅಧ್ಯಯನ ನಡೆಯುತ್ತಿದೆ ಎಂದು ರಾಜ್ಯ ಪುರಾತತ್ತ್ವ ಸಂಗ್ರಹಾಲಯಗಳು ಪರಂಪರೆ ಇಲಾಖೆಯ ಉಪ ನಿರ್ದೇಶಕ ಡಾ.ಆರ್. ಶೇಜೇಶ್ವರ ತಿಳಿಸಿದ್ದಾರೆ.

Continue Reading
Advertisement
Former DGP Arrested
ಕ್ರೈಂ8 mins ago

Former DGP Arrested: ವಿಚ್ಛೇದಿತ ಪತ್ನಿಯ ದೂರು; ಮಾಜಿ ಡಿಜಿಪಿ ಜೈಲು ಪಾಲು

ಕ್ರೈಂ9 mins ago

Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ 5ನೇ ಆರೋಪಿಗೆ ಲಷ್ಕರ್–ಎ–ತಯ್ಬಾ ಜತೆ ಲಿಂಕ್‌!

CSK vs RC
ಕ್ರೀಡೆ14 mins ago

CSK vs RCB: ಮತ್ತೆ ಆರ್​ಸಿಬಿ, ಕೊಹ್ಲಿಯ ಬಗ್ಗೆ ಕಿಡಿಕಾರಿದ ಚೆನ್ನೈ ತಂಡದ ಮಾಜಿ ಆಟಗಾರ

BSNL network problem in Hosanagara The lawyer decided to climb the tower and protest
ಕರ್ನಾಟಕ16 mins ago

Hosanagara News: ಹೊಸನಗರದಲ್ಲಿ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ ಸಮಸ್ಯೆ; ಟವರ್‌ ಏರಿ ಪ್ರತಿಭಟನೆಗೆ ಮುಂದಾದ ವಕೀಲ!

union minister pralhad joshi spoke in North East Graduate Constituency Electoral Convention at ballari
ಕರ್ನಾಟಕ20 mins ago

MLC Election: ಜಗತ್ತು ತೆವಳುತ್ತಿದ್ದರೆ ಮೋದಿ ಭಾರತ ಓಡುತ್ತಿದೆ; ಸಚಿವ ಪ್ರಲ್ಹಾದ್‌ ಜೋಶಿ ವ್ಯಾಖ್ಯಾನ

Crocodile Attack
ಕರ್ನಾಟಕ27 mins ago

Crocodile Attack: ಕೃಷ್ಣಾ ನದಿಯಲ್ಲಿ ಬಾಲಕನನ್ನು ಎಳೆದೊಯ್ದ ಮೊಸಳೆ

Washing Machine Cleaning Tips
ಲೈಫ್‌ಸ್ಟೈಲ್28 mins ago

Washing Machine Cleaning Tips: ವಾಷಿಂಗ್ ಮೆಷಿನ್ ಹೆಚ್ಚು ಬಾಳಿಕೆ ಬರಬೇಕೆ? ಈ ರೀತಿ ಸ್ವಚ್ಛಗೊಳಿಸಿ

Ebola Virus
ಪ್ರಮುಖ ಸುದ್ದಿ36 mins ago

Ebola Virus: ಲ್ಯಾಬ್‌ನಲ್ಲಿ ಮತ್ತೊಂದು ಡೆಡ್ಲಿ ವೈರಸ್‌ ಸೃಷ್ಟಿಸಿದ ಚೀನಾ; ಈ ಲಕ್ಷಣ ಕಂಡರೆ ಮರಣ ನಿಶ್ಚಿತ!

Karnataka Weather Forecast
ಮಳೆ45 mins ago

Karnataka Weather : ಕೈಯಲ್ಲಿ ಛತ್ರಿ ಹಿಡಿದು ಬಸ್ ಡ್ರೈವಿಂಗ್; ಮಳೆಗೆ ಕುಸಿದು ಬಿದ್ದ ಮಾಳಿಗೆ ಮನೆ

Murder Attempt
ಕ್ರೈಂ45 mins ago

Murder Attempt: ಮಗು ಹೆಣ್ಣೋ ಗಂಡೋ ನೋಡಲು ಹೆಂಡತಿಯ ಹೊಟ್ಟೆ ಸೀಳಿದವನಿಗೆ ಜೀವಾವಧಿ ಶಿಕ್ಷೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ7 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌