Bigg Boss Kannada | ಮನೆ ಸದಸ್ಯರಿಗೆ ಆರ್ಯವರ್ಧನ್‌ ಟಿಪ್ಸ್ ಕೊಡ್ತಾರಂತೆ; ಈ ವಾರ ಕಿಚ್ಚನ ಲುಕ್‌ ಹೀಗಿದೆ!  - Vistara News

ಬಿಗ್ ಬಾಸ್

Bigg Boss Kannada | ಮನೆ ಸದಸ್ಯರಿಗೆ ಆರ್ಯವರ್ಧನ್‌ ಟಿಪ್ಸ್ ಕೊಡ್ತಾರಂತೆ; ಈ ವಾರ ಕಿಚ್ಚನ ಲುಕ್‌ ಹೀಗಿದೆ! 

ಈ ವಾರ ಬಿಗ್‌ ಬಾಸ್‌ (Bigg Boss Kannada) ಮನೆಯಲ್ಲಿ ಯಾರು ಮನೆಯಿಂದ ಹೊರಕ್ಕೆ ಹೋಗಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ. ಈ ವಾರ ಕಿಚ್ಚನ ಲುಕ್‌ ಹೀಗಿದೆ! 

VISTARANEWS.COM


on

Bigg Boss Kannada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌ 9ರ (Bigg Boss Kannada) ವಾರದ ಕತೆ ಕಿಚ್ಚನ ಜತೆ ವೀಕೆಂಡ್‌ ಪಂಚಾಯಿತಿಯ ಕಿಚ್ಚ ಸುದೀಪ್‌ ಲುಕ್‌ ರಿವೀಲ್‌ ಆಗಿದೆ. 18 ಸ್ಪರ್ಧಿಗಳಲ್ಲಿ ಈ ವಾರ 12 ಸ್ಪರ್ಧಿಗಳು ನಾಮಿನೇಟ್‌ ಆಗಿದ್ದಾರೆ. ಹುಡುಗಿಯರು ಬೀಳುವ ವಿಚಾರಕ್ಕೆ ಆರ್ಯವರ್ಧನ್‌ ಗುರೂಜಿ ದರ್ಶ್‌ಗೆ ಟಿಪ್ಸ್‌ ನೀಡಿದ್ದಾರೆ. ಈ ಕುರಿತು ಕಿಚ್ಚ ಸುದೀಪ್‌ ಸ್ಪರ್ಧಿಗಳಿಗೆ ತಮಾಷೆ ಮಾಡಿರುವ ಪ್ರೋಮೊವನ್ನು ಕಲರ್ಸ್‌ ಕನ್ನಡ ಹಂಚಿಕೊಂಡಿದೆ.

ಕಿಚ್ಚ ಸುದೀಪ್‌ ಬಿಗ್‌ ಬಾಸ್‌ ಸ್ಪರ್ಧಿ ದರ್ಶ್‌ಗೆ ʻʻಆರ್ಯವರ್ಧನ್‌ ನಿಮಗೆ ಏನು ಹೇಳಿಕೊಟ್ಟರು?ʼʼ ಎಂದು ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಿದ ದರ್ಶ್‌, ʻʻನೀನು ಚೆನ್ನಾಗಿದ್ದೀಯಾ. ನಿನಗೆ ಹುಡುಗೀರು ಬೀಳುತ್ತಾರೆ. ಕ್ಯಾಚ್‌ ಹಾಕೊಂಡ್ರೆ ತುಂಬಾ ದಿನ ಬರುತ್ತಿಯಾ ಎಂದು ಹೇಳಿದ್ದುಂಟುʼʼಎಂದರು. ಅದಾದ ನಂತರ ಕಿಚ್ಚ ಸುದೀಪ್‌ ʻʻಅದಾದ ಮೇಲೆ ಹಂಗೆ ಕೈ ಕೊಡ್ತಾರೆ ಅಂದ್ರು ಅಲ್ವಾʼʼ ಎಂದು ಆರ್ಯವರ್ಧನ್‌ ಕಾಲೆಳಿದಿದ್ದಾರೆ.

ಇದನ್ನೂ ಓದಿ | Bigg Boss Kannada | ಮೊದಲ ಕ್ಯಾಪ್ಟನ್‌ ಆಗಿ ವಿನೋದ್‌ ಗೊಬ್ಬರಗಾಲ ಆಯ್ಕೆ! ಕ್ಯಾಪ್ಟನ್ಸಿ ಪವರ್ ಬಗ್ಗೆ ಸಂಬರಗಿ ಕ್ಲಾಸ್!

ಇದೇ ವಿಚಾರಕ್ಕೆ ಕಾವ್ಯಶ್ರೀ ಮಾತನಾಡಿ ʻʻನನಗೂ ರೂಪೇಶ್‌ ಮತ್ತೆ ಸಾನ್ಯ ಜತೆ ಇದ್ದಾಗ, ನೀನು ಬಿಟ್ಟುಕೊಡಬೇಡ. ಉರ್ಸ್‌ಬೇಕುʼʼ ಎಂದು ಹೇಳಿಕೊಟ್ಟಿದ್ದಾರೆ ಎಂದರು. ಅದಕ್ಕೆ ರೂಪೇಶ್‌ ಮಾತನಾಡಿ ʻʻಇಬ್ಬರಲ್ಲಿ ನಂಗೆ ಕನ್‌ಫ್ಯೂಸ್‌ ಆಗಿದೆʼʼ ಎಂದರು. ಅದಕ್ಕೆ ಸುದೀಪ್‌ ಪ್ರತಿಕ್ರಿಯೆ ನೀಡಿ ʻʻಆರ್ಯವರ್ಧನ್‌ ಈಗಷ್ಟೇ ಸೊಲ್ಯೂಷನ್‌ ಕೊಟ್ಟರು ಅಲ್ವಾ?ʼʼ ಎಂದು ಕೇಳಿದ್ದಾರೆ.

Bigg Boss Kannada

ಈ ವಾರ ಕಿಚ್ಚ ಸುದೀಪ್‌ ವೀಕೆಂಡ್‌ ಪಂಚಾಯಿತಿಯಲ್ಲಿ ಸ್ಪರ್ಧಿಗಳ ವಾರದ ಕಥೆಗಳನ್ನು ಚರ್ಚಿಸಲಿದ್ದಾರೆ. ಈ ವಾರ ಯಾರು ಮನೆಯಿಂದ ಹೊರಗೆ ಹೋಗಲಿದ್ದಾರೆ ಎಂಬುದು ನೋಡಬೇಕಿದೆ.

ಇದನ್ನೂ ಓದಿ | Bigg Boss Kannada | ಪ್ರಾಸದಿಂದ ಮಾತು ಮಾತಿನ ಚಕಮಕಿ : ವಿನೋದ್‌-ಕಾವ್ಯಶ್ರೀ ನಡುವೆ ವಾರ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Bigg Boss Telugu 8: ಶುರುವಾಗ್ತಿದೆ ಬಿಗ್​ಬಾಸ್ ತೆಲುಗು ಸೀಸನ್ 8; ಸ್ಪರ್ಧಿಗಳು ಯಾರೆಲ್ಲ?

Bigg Boss Telugu 8: ಸೀಸನ್‌ 7ರ ವರೆಗೆ ನಾಗಾರ್ಜುನ ಅವರೇ ನಿಭಾಯಿಸುತ್ತಿದ್ದಾರೆ. ನಾಗುರ್ಜನ ಅವರ ವಿಶಿಷ್ಟ ವರ್ಚಸ್ಸು ಮತ್ತು ಮಾತನಾಡುವ ಶೈಲಿಗೆ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಇದೀಗ ಮಾಹಿತಿ ಪ್ರಕಾರ ಈ ಸೀಸನ್‌ನಲ್ಲಿ ನಟರು, ಯೂಟ್ಯೂಬರ್‌ಗಳು ಮತ್ತು ಇತರ ಸಾರ್ವಜನಿಕ ವ್ಯಕ್ತಿಗಳ ಸಮ್ಮಿಶ್ರಣ ಇರಲಿದೆ ಎಂದು ವರದಿಯಾಗಿದೆ.

VISTARANEWS.COM


on

Bigg Boss Telugu 8 Contestants List Leaked
Koo

ಬೆಂಗಳೂರು:ಬಿಗ್ ಬಾಸ್ ತೆಲುಗು ಸೀಸನ್-7 ಮುಗಿದ ಬಳಿಕ ಸೀಸನ್‌ 8 (Bigg Boss Telugu 8) ಶುರು ಯಾವಾಗ ಎಂದು ಪ್ರೇಕ್ಷಕರು ಕಾಯುತ್ತಿದ್ದರು. TRP ರೇಟಿಂಗ್‌ಗಳಿಗೆ ಸಂಬಂಧಿಸಿದಂತೆ ಕಳೆದ ಸೀಸನ್ ಭರ್ಜರಿ ಹಿಟ್ ಆಗಿತ್ತು. ಮಾತ್ರವಲ್ಲ ಬಿಗ್ ಬಾಸ್ ತೆಲುಗು ಸೀಸನ್-7 (Bigg Boss Telugu 7) ವಿಜೇತ ಪಲ್ಲವಿ ಪ್ರಶಾಂತ್ ಅರೆಸ್ಟ್‌ ಆಗಿ ಸಖತ್‌ ಸುದ್ದಿಯಲ್ಲಿದ್ದರು. ಇದೀಗ ಬಿಗ್​ಬಾಸ್ ತೆಲುಗು ಮತ್ತೆ ಪ್ರಾರಂಭವಾಗುತ್ತಿದೆ.ಆಗಸ್ಟ್ 4 ರಂದು ಬಿಗ್​ಬಾಸ್ ತೆಲುಗು ಸೀಸನ್ 8 ಪ್ರಾರಂಭ ಆಗಲಿದೆ. ಈ ಬಾರಿ ಬಿಗ್​ಬಾಸ್​ನಲ್ಲಿ ಭಾಗಿಯಾಗಲಿರುವ ಸ್ಪರ್ಧಿಗಳು ಈಗಾಗಲೇ ಖಾತ್ರಿ ಆಗಿದ್ದಾರೆ ಎನ್ನಲಾಗುತ್ತಿದೆ.

ಜೂನಿಯರ್ ಎನ್‌ಟಿಆರ್ ಮೊದಲ ಆವೃತ್ತಿಯನ್ನು ಹೋಸ್ಟ್ ಮಾಡಿದ್ದರೆ, ನಾನಿ ಎರಡನೇ ಆವೃತ್ತಿಯನ್ನು ಹೋಸ್ಟ್ ಮಾಡಿದ್ದರು. ಆ ಬಳಿಕ ನಾಗಾರ್ಜುನ ಅವರು ಹೋಸ್ಟ್‌ ಮಾಡುತ್ತ ಬಂದಿದ್ದಾರೆ. ಸೀಸನ್‌ 7ರ ವರೆಗೆ ನಾಗಾರ್ಜುನ ಅವರೇ ನಿಭಾಯಿಸುತ್ತಿದ್ದಾರೆ. ನಾಗುರ್ಜನ ಅವರ ವಿಶಿಷ್ಟ ವರ್ಚಸ್ಸು ಮತ್ತು ಮಾತನಾಡುವ ಶೈಲಿಗೆ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಇದೀಗ ಮಾಹಿತಿ ಪ್ರಕಾರ ಈ ಸೀಸನ್‌ನಲ್ಲಿ ನಟರು, ಯೂಟ್ಯೂಬರ್‌ಗಳು ಮತ್ತು ಇತರ ಸಾರ್ವಜನಿಕ ವ್ಯಕ್ತಿಗಳ ಸಮ್ಮಿಶ್ರಣ ಇರಲಿದೆ ಎಂದು ವರದಿಯಾಗಿದೆ. . ಪ್ರತಿಬಾರಿಯಂತೆ ನಟ ನಾಗಾರ್ಜುನ ಅವರೇ ಈ ಬಾರಿಯೂ ಶೋ ನಡೆಸಿಕೊಡಲಿದ್ದಾರೆ.

ಇದನ್ನೂ ಓದಿ: Bigg Boss Telugu 7: ಬಿಗ್ ಬಾಸ್ ತೆಲುಗು ಸೀಸನ್-7 ವಿಜೇತ ಪಲ್ಲವಿ ಪ್ರಶಾಂತ್ ಅರೆಸ್ಟ್‌!

ಸಂಭಾವ್ಯ ಪಟ್ಟಿ ಹೀಗಿದೆ!

ಬಾಂಚಿಕ್ ಬಬ್ಲು: ಜನಪ್ರಿಯ ಯೂಟ್ಯೂಬರ್. ರಾಜ್ ತರುಣ್: ಟಾಲಿವುಡ್‌ನ ಪ್ರಸಿದ್ಧ ನಟ. ಸೋನಿಯಾ ಸಿಂಗ್: ಸಾಮಾಜಿಕ ಮಾಧ್ಯಮದಲ್ಲಿ ಅಪಾರ ಬಳಗ ಹೊಂದಿರುವ ನಟಿ, ಡ್ರಗ್ಸ್ ಪ್ರಕರಣದ ಆರೋಪಿ ಹೇಮಾ ಸಹ ಈ ಬಾರಿ ಬಿಗ್​ಬಾಸ್​ಗೆ ಬರಲಿದ್ದಾರೆ ಎನ್ನಲಾಗುತ್ತಿದೆ. ಮರ್ಯಾದಾ ಹತ್ಯೆಯ ಸಂತ್ರಸ್ತೆ ಅಮೃತಾ ಪ್ರಣಯ್ಈ ಬಾರಿ ಬಿಗ್​ಬಾಸ್​ಗೆ ಹೋಗಲಿದ್ದಾರೆ. ಭಾರಿ ದುಬಾರಿ ಬೆಲೆಗೆ ಆಹಾರ ಮಾರಾಟ ಮಾಡುತ್ತಾ ಜನಪ್ರಿಯವಾಗಿರುವ ಕುಮಾರಿ ಆಂಟಿ ಈ ಬಾರಿ ಬಿಗ್​ಬಾಸ್ ಮನೆಗೆ ಹೋಗಲಿದ್ದಾರೆ ಎನ್ನಲಾಗುತ್ತಿದೆ. ಜನಪ್ರಿಯ ಯೂಟ್ಯೂಬ್ ಕಪಲ್ ಆಗಿರುವ ನೇತ್ರಾ ಮತ್ತು ವಂಶಿ ಸಹ ಈ ಬಾರಿ ಬಿಗ್​ಬಾಸ್​ಗೆ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ.

ಸೆಪ್ಟೆಂಬರ್ 3 ರಂದು ತೆಲುಗು ಬಿಗ್​ಬಾಸ್ ಸೀಸನ್ 7 ಆರಂಭವಾಗಿತ್ತು. 19 ಮಂದಿ ಸ್ಪರ್ಧಿಗಳು ಶೋನಲ್ಲಿ ಭಾಗಿಯಾಗಿದ್ದರು. ಅವರಲ್ಲೇ ಇಬ್ಬರು ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮತ್ತೆ ಮನೆಗೆ ಬಂದಿದ್ದರು. ಅಲ್ಲಿಗೆ ಒಟ್ಟು 21 ಸ್ಪರ್ಧಿಗಳು ಈ ಬಾರಿಯ ಬಿಗ್​ಬಾಸ್ ತೆಲುಗು ಸೀಸನ್ 7ರಲ್ಲಿ ಆಡಿದರುಪಲ್ಲವಿ ಪ್ರಶಾಂತ್ ವಿನ್ನರ್ ಆಗಿದ್ದು, ಹಲವರಿಗೆ ಖುಷಿ ನೀಡಿತ್ತು. ಆದರೆ ಮೊದಲಿನಿಂದಲೂ ಶಿವಾಜಿ ವಿನ್ನರ್ ಎಂದುಕೊಂಡಿದ್ದ ಹಲವರಿಗೆ ಬೇಸರವಾಗಿತ್ತು.

Continue Reading

ಬಿಗ್ ಬಾಸ್

Actress Siri: ಬಿಗ್​ಬಾಸ್​ನಲ್ಲಿ ಚಿಗುರಿತಾ ಪ್ರೇಮ? ‘ರಂಗೋಲಿ’ ಖ್ಯಾತಿಯ ಸಿರಿಯ ವರನ್ಯಾರು?

Actress Siri: ಬಿಗ್ ಬಾಸ್ ಸಿರಿ ಮದುವೆಯಾಗಿರುವ ಹುಡುಗ ಮೂಲತಃ ಮಂಡ್ಯದವರು ಸದ್ಯ ಬೆಂಗಳೂರಿನಲ್ಲಿ ನಲೆಸಿದ್ದಾರೆ. ಅವರ ಹೆಸರು ಪ್ರಭಾಕರ್ ಬೋರೇಗೌಡ. ಪ್ರಭಾಕರ್‌ ಬೋರೇಗೌಡ ಮತ್ತು ಸಿರಿ ಒಟ್ಟಿಗೆ ನಟಿಸಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್‌ ಮನೆಯಿಂದ ಸಿರಿ ಎಲಿಮಿನೇಟ್‌ ಆದ ಬಳಿಕ ಸಿರಿ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ.

VISTARANEWS.COM


on

Actress Siri marriage to actor prabhakar
Koo

ಬೆಂಗಳೂರು: ‘ರಂಗೋಲಿ’, ‘ಮನೆಯೊಂದು ಮೂರು ಬಾಗಿಲು’, ‘ಬದುಕು’ ಮುಂತಾದ ಧಾರಾವಾಹಿಗಳನ್ನು ಪ್ರೇಕ್ಷಕರು ಮನಗೆದ್ದ ಸಿರಿ ಬಿಗ್ ಬಾಸ್ (BBK Season 10) ಈಗ ಮದುವೆಯಾಗಿದ್ದಾರೆ. ಇನ್ನೂ (Actress Siri) ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆಗಳನ ನಡುವೆ ಅವರು ಸದ್ದಿಲ್ಲದೇ, ಸಿಂಪಲ್‌ ಆಗಿ ಹಸೆ ಮಣೆ ಏರಿದ್ದಾರೆ. ಮೂಲಗಳ ಪ್ರಕಾರ ಸಿರಿ ಮದುವೆಯಾದ ಹುಡುಗನ ಹೆಸರು ಪ್ರಭಾಕರ್. ಮಂಡ್ಯ ಮೂಲದವರಾದ ಇವರು ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಇವರಿಬ್ಬರೂ ಚಿಕ್ಕಬಳ್ಳಾಪುರದ ನಂದಿ ಗ್ರಾಮದಲ್ಲಿ ಮದುವೆ ಮಾಡಿಕೊಂಡಿದ್ದಾರೆ.

ಬಿಗ್ ಬಾಸ್ ಸಿರಿ ಮದುವೆಯಾಗಿರುವ ಹುಡುಗ ಮೂಲತಃ ಮಂಡ್ಯದವರು ಸದ್ಯ ಬೆಂಗಳೂರಿನಲ್ಲಿ ನಲೆಸಿದ್ದಾರೆ. ಅವರ ಹೆಸರು ಪ್ರಭಾಕರ್ ಬೋರೇಗೌಡ. ಪ್ರಭಾಕರ್‌ ಬೋರೇಗೌಡ ಮತ್ತು ಸಿರಿ ಒಟ್ಟಿಗೆ ನಟಿಸಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್‌ ಮನೆಯಿಂದ ಸಿರಿ ಎಲಿಮಿನೇಟ್‌ ಆದ ಬಳಿಕ ಸಿರಿ ಈ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ. ‘ನಿಮ್ಮಲ್ಲರ ಸಪೋರ್ಟ್‌ಗೆ ವಂದನೆಗಳು’ ಎಂದು ಪ್ರಭಾಕರ್ ಬರೆದುಕೊಂಡಿದ್ದರು.

ಇವರಿಬ್ಬರ ಪರಿಚಯ ಆಗಿದ್ದು ಹೇಗೆ? ಲವ್ ಮ್ಯಾರೇಜ್ ಆಗಿರಬಹುದಾ? ಬಿಗ್ ಬಾಸ್‌ ನಂತರ ಅರಳಿದ ಪ್ರೀತಿನಾ ಎಂದು ಜನರು ಕಮೆಂಟ್‌ ಮೂಲಕ ಪ್ರಶ್ನೆ ಇಡುತ್ತಿದ್ದಾರೆ.

ಇದನ್ನೂ ಓದಿ: Actress Siri: ಸಿಂಪಲ್‌ ಆಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ `ಬಿಗ್‌ ಬಾಸ್‌ ಕನ್ನಡ 10′ ಸ್ಪರ್ಧಿ, ನಟಿ ಸಿರಿ!

ಸಿರಿ ಅವರಿಗೆ ಮೈತುಂಬ ಅರಿಷಿಣ ಹಚ್ಚಿರುವ ವಿಡಿಯೊ ವೈರಲ್ ಆಗಿದೆ. ಇದು ಸಿನಿಮಾ ಅಥವಾ ಧಾರಾವಾಹಿ ಶೂಟಿಂಗ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ ಸಿರಿ ಅವರು ರಿಯಲ್ ಲೈಫ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಹುಡುಗ ಯಾರು ಎಂಬುದು ಇನ್ನೂ ರಿವೀಲ್‌ ಆಗಿಲ್ಲ. ಹಾಗೇ ಸಿರಿ ಕೂಡ ಎಲ್ಲಿಯೂ ಪೋಸ್ಟ್‌ ಶೇರ್‌ ಮಾಡಿಕೊಂಡಿಲ್ಲ. ಸಿರಿ ಅವರಿಗೆ ಈಗ 40 ವರ್ಷ ವಯಸ್ಸು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಕಲರ್ಸ್‌ ಕನ್ನಡದ ʻರಾಮಾಚಾರಿʼ ಧಾರಾವಾಹಿಯಲ್ಲಿ ನಟಿ ಬಣ್ಣ ಹಚ್ಚಿದ್ದರು. ಈಗ ಪರಭಾಷೆಯ ಕಿರುತೆರೆಯಲ್ಲಿಯೂ ಮಿಂಚುತ್ತಿದ್ದಾರೆ. ಕೆಲ ಸಿನಿಮಾಗಳಲ್ಲಿ ಕೂಡ ಸಿರಿ ಅವರು ನಟಿಸಿದ್ದಾರೆ. 30 ವರ್ಷಗಳ ಕಾಲ ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ಸಿರಿ ಯಾಕೆ ಮದುವೆಯಾಗಲಿಲ್ಲ ಎಂದು ನೆಟ್ಟಿಗರು ನಟಿಗೆ ಹಲವು ಬಾರಿ ಪ್ರಶ್ನೆ ಮಾಡಿದ್ದೂ ಇದೆ.

ಬಿಗ್‌ ಬಾಸ್‌ ವೇದಿಕೆಯಲ್ಲಿ ಈ ಬಗ್ಗೆ ಸಿರಿ ಮಾತನಾಡಿದ್ದು ಇದೆ. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು.

ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

Continue Reading

ಬಿಗ್ ಬಾಸ್

Actress Siri: ಸಿಂಪಲ್‌ ಆಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ `ಬಿಗ್‌ ಬಾಸ್‌ ಕನ್ನಡ 10′ ಸ್ಪರ್ಧಿ, ನಟಿ ಸಿರಿ!

Actress Siri: ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

VISTARANEWS.COM


on

Actress Bbk 10 Siri Marriage Video Goes Viral
Koo

ಬೆಂಗಳೂರು: ‘ರಂಗೋಲಿ’, ‘ಮನೆಯೊಂದು ಮೂರು ಬಾಗಿಲು’, ‘ಬದುಕು’ ಮುಂತಾದ ಧಾರಾವಾಹಿಗಳನ್ನು ಪ್ರೇಕ್ಷಕರು ಮನಗೆದ್ದ ಸಿರಿ ಬಿಗ್ ಬಾಸ್ (BBK Season 10) ಈಗ ಮದುವೆಯಾಗಿದ್ದಾರೆ. ಇನ್ನೂ (Actress Siri) ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆ ಅವರ ಫ್ಯಾನ್ಸ್‌ನಲ್ಲಿ ಪದೇ ಪದೇ ಕಾಡುತ್ತಿತ್ತು. ಈಗ ಸದ್ದಿಲ್ಲದೇ ಸಿಂಪಲ್‌ ಆಗಿ ಮದುವೆಯಾಗಿದ್ದಾರೆ ಸಿರಿ.

ಸಿರಿ ಅವರಿಗೆ ಮೈತುಂಬ ಅರಿಷಿಣ ಹಚ್ಚಿರುವ ವಿಡಿಯೊ ವೈರಲ್ ಆಗಿದೆ. ಇದು ಸಿನಿಮಾ ಅಥವಾ ಧಾರಾವಾಹಿ ಶೂಟಿಂಗ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ ಸಿರಿ ಅವರು ರಿಯಲ್ ಲೈಫ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಹುಡುಗ ಯಾರು ಎಂಬುದು ಇನ್ನೂ ರಿವೀಲ್‌ ಆಗಿಲ್ಲ. ಹಾಗೇ ಸಿರಿ ಕೂಡ ಎಲ್ಲಿಯೂ ಪೋಸ್ಟ್‌ ಶೇರ್‌ ಮಾಡಿಕೊಂಡಿಲ್ಲ. ಸಿರಿ ಅವರಿಗೆ ಈಗ 40 ವರ್ಷ ವಯಸ್ಸು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಕಲರ್ಸ್‌ ಕನ್ನಡದ ʻರಾಮಾಚಾರಿʼ ಧಾರಾವಾಹಿಯಲ್ಲಿ ನಟಿ ಬಣ್ಣ ಹಚ್ಚಿದ್ದರು. ಈಗ ಪರಭಾಷೆಯ ಕಿರುತೆರೆಯಲ್ಲಿಯೂ ಮಿಂಚುತ್ತಿದ್ದಾರೆ. ಕೆಲ ಸಿನಿಮಾಗಳಲ್ಲಿ ಕೂಡ ಸಿರಿ ಅವರು ನಟಿಸಿದ್ದಾರೆ. 30 ವರ್ಷಗಳ ಕಾಲ ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ಸಿರಿ ಯಾಕೆ ಮದುವೆಯಾಗಲಿಲ್ಲ ಎಂದು ನೆಟ್ಟಿಗರು ನಟಿಗೆ ಹಲವು ಬಾರಿ ಪ್ರಶ್ನೆ ಮಾಡಿದ್ದೂ ಇದೆ.

ಇದನ್ನೂ ಓದಿ: Kotee Movie: ಡಾಲಿ ಧನಂಜಯ್ ಅಭಿನಯದ ‘ಕೋಟಿ’ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆ

ಬಿಗ್‌ ಬಾಸ್‌ ವೇದಿಕೆಯಲ್ಲಿ ಈ ಬಗ್ಗೆ ಸಿರಿ ಮಾತನಾಡಿದ್ದು ಇದೆ. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು.

ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

Continue Reading

ಬಿಗ್ ಬಾಸ್

Bigg Boss OTT 3: ಬಿಗ್​ ಬಾಸ್​ ಒಟಿಟಿ ಪ್ರಸಾರಕ್ಕೆ ಮುಹೂರ್ತ ಫಿಕ್ಸ್​: ಹೊಸ ನಿರೂಪಕನಾಗಿ ಅನಿಲ್​ ಕಪೂರ್​ ಎಂಟ್ರಿ!

Bigg Boss OTT 3: ಮೂರನೇ ಸೀಸನ್​ನಲ್ಲಿ ಸಲ್ಮಾನ್​ ಖಾನ್​ ಅವರು ನಿರೂಪಣೆ ಮಾಡಲು ಸಾಧ್ಯವಾಗುತ್ತಿಲ್ಲ. ಯಾಕೆಂದರೆ, ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಸಿಕಂದರ್​’ ಸಿನಿಮಾಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ.. ಅನಿಲ್ ಕಪೂರ್ ಅವರ ಹೋಸ್ಟಿಂಗ್ ಜತೆಗೆ ಈ ಬಾರಿ ಜನಪ್ರಿಯ ತಾರೆಗಳಾದ ಶಿವಂಗಿ ಜೋಶಿ ಮತ್ತು ಶಫಕ್ ನಾಜ್ ಕೂಡ ಇರಲಿದ್ದಾರೆ ಎನ್ನಲಾಗಿದೆ.  ಈ ಬಾರಿ ಯಾವೆಲ್ಲ ಸ್ಪರ್ಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂಬುದನ್ನು ತಿಳಿಯುವ ಕುತೂಹಲ ಮೂಡಿದೆ. 

VISTARANEWS.COM


on

Bigg Boss OTT 3 Know when and where to stream the show
Koo

ಬೆಂಗಳೂರು: ಹಿಂದೆ ʻಬಿಗ್ ಬಾಸ್ OTTʼ ಹೊಸ ಸೀಸನ್‌ ಮತ್ತೆ ಬರುತ್ತಿದೆ. ಜಿಯೋ ಸಿನಿಮಾ’ ಒಟಿಟಿಯಲ್ಲಿ ‘ಬಿಗ್​ ಬಾಸ್​ ಒಟಿಟಿ 3’ ಆರಂಭ ಆಗಲಿದೆ. ಹಿಂದಿಯ ‘ಬಿಗ್​ ಬಾಸ್​ ಒಟಿಟಿ 3 (Bigg Boss OTT 3) ಕಾರ್ಯಕ್ರಮವನ್ನು ಈ ಬಾರಿ ಅನಿಲ್​ ಕಪೂರ್​ (Anil Kapoor) ನಡೆಸಿಕೊಡಲಿದ್ದಾರೆ. ಸಲ್ಮಾನ್‌ ಖಾನ್‌ ಈ ಬಾರಿ ಒಟಿಟಿ ಸೀಸನ್‌ನಿಂದ ಹಿಂದೆ ಸರಿದಿದ್ದಾರೆ. ಜೂನ್​ 21ರಂದು ಈ ಕಾರ್ಯಕ್ರಮದ ಪ್ರಸಾರ ಆರಂಭ ಆಗಲಿದೆ.

ಬಿಗ್ ಬಾಸ್ OTT ಯ ಹೊಸ ಸೀಸನ್‌ಗೆ ಹೊಸ ಹೋಸ್ಟ್ʼʼಎಂದು ಪ್ರೋಮೊ ಹಂಚಿಕೊಂಡಿದೆ ಜಿಯೋ ಸಿನಿಮಾ. ಆರಂಭದಲ್ಲಿ ಒಟಿಟಿ ಸೀಸನನ್ನು ಕರಣ್ ಜೋಹರ್ ಹೋಸ್ಟ್ ಮಾಡಿದರು, ನಂತರ ಎರಡನೇ ಸೀಸನ್‌ನಲ್ಲಿ ಸಲ್ಮಾನ್ ಖಾನ್ ಮಾಡಿದರು. ಮೇಗೆ ಒಟಿಟಿ ಪ್ರೀಮಿಯರ್‌ ಆಗಲಿದೆ ಎನ್ನಲಾಗಿತ್ತು. ಬಿಡುಗಡೆ ಆಗಿರುವ ಈ ಪ್ರೋಮೋದಲ್ಲಿ ಅನಿಲ್​ ಕಪೂರ್​ ಅವರ ಮುಖ ಕಾಣಿಸಿಲ್ಲ. ಆದರೆ ಧ್ವನಿ ಕೇಳಿಸಿದೆ. ಹಾಗಾಗಿ ಇದು ಪಕ್ಕಾ ಅನಿಲ್​ ಕಪೂರ್​ ಎಂಬುದು ಖಚಿತವಾಗಿದೆ.

ಮೂರನೇ ಸೀಸನ್​ನಲ್ಲಿ ಸಲ್ಮಾನ್​ ಖಾನ್​ ಅವರು ನಿರೂಪಣೆ ಮಾಡಲು ಸಾಧ್ಯವಾಗುತ್ತಿಲ್ಲ. ಯಾಕೆಂದರೆ, ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಸಿಕಂದರ್​’ ಸಿನಿಮಾಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ.. ಅನಿಲ್ ಕಪೂರ್ ಅವರ ಹೋಸ್ಟಿಂಗ್ ಜತೆಗೆ ಈ ಬಾರಿ ಜನಪ್ರಿಯ ತಾರೆಗಳಾದ ಶಿವಂಗಿ ಜೋಶಿ ಮತ್ತು ಶಫಕ್ ನಾಜ್ ಕೂಡ ಇರಲಿದ್ದಾರೆ ಎನ್ನಲಾಗಿದೆ.  ಈ ಬಾರಿ ಯಾವೆಲ್ಲ ಸ್ಪರ್ಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂಬುದನ್ನು ತಿಳಿಯುವ ಕುತೂಹಲ ಮೂಡಿದೆ. 

ಇದನ್ನೂ ಓದಿ: Bigg Boss OTT 3: ಶುರುವಾಗಲಿದೆ ಬಿಗ್​ ಬಾಸ್​ ಒಟಿಟಿ 3: ನಿರೂಪಣೆಗೆ ಸಲ್ಮಾನ್​ ಖಾನ್​ ಬದಲು ಅನಿಲ್​ ಕಪೂರ್!

ದಿವ್ಯಾ ಅಗರ್ವಾಲ್ ಬಿಗ್ ಬಾಸ್ OTT ಮೊದಲ ಸೀಸನ್ ಗೆದ್ದಿದ್ದರು. ಎರಡನೇ ಸೀಸನ್‌ನಲ್ಲಿ, ಎಲ್ವಿಶ್ ಯಾದವ್ ಇತಿಹಾಸವನ್ನು ಬರೆದರು. ದಲ್ಜಿತ್ ಕೌರ್, ಶೆಹಜಾದಾ ಧಾಮಿ, ಪ್ರತೀಕ್ಷಾ ಹೊನ್ಮುಖೆ ಮತ್ತು ಅರ್ಹಾನ್ ಬೆಹ್ಲ್ ಅವರಂತಹ ಸೆಲೆಬ್ರಿಟಿಗಳು ‘ಬಿಗ್ ಬಾಸ್ OTT 3’ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.ಈ ಬಾರಿ ಒಟಿಟಿ ಸೀಸನ್‌ಗೆ ಸೋಷಿಯಲ್ ಮೀಡಿಯಾ ಸ್ಟಾರ್ ಜಾಸ್ಮಿನ್ ಕೌರ್ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ʻಸೋ ಬ್ಯೂಟಿಫುಲ್, ಸೋ ಎಲಿಗೆಂಟ್, ಜಸ್ಟ್ ಲುಕಿಂಗ್ ಲೈಕ್ ಎ ವಾವ್ʼ ಎಂದು ಹೇಳುವ ಮೂಲಕ ರಾತ್ರೋ ರಾತ್ರಿ ಫೇಮಸ್ ಆದವರು ಜಾಸ್ಮಿನ್ ಕೌರ್.

ಸಲ್ಮಾನ್ ಖಾನ್ ‘ಬಿಗ್ ಬಾಸ್ OTT 2’ ಅನ್ನು ಆಯೋಜಿಸಿದ್ದರು. ಇದರಲ್ಲಿ ಎಲ್ವಿಶ್ ಯಾದವ್ ವಿಜೇತರಾಗಿ ಹೊರಹೊಮ್ಮಿದ್ದರು. ಅಭಿಷೇಕ್ ಮಲ್ಹಾನ್ ರನ್ನರ್ ಅಪ್ ಆಗಿ ಹೊರಹೊಮ್ಮಿದರೆ, ಮನೀಶಾ ರಾಣಿ ಎರಡನೇ ರನ್ನರ್ ಅಪ್ ಆಗಿದ್ದರು. ಎಲ್ವಿಶ್ ಯಾದವ್ ಗೆಲುವಿನ ನಂತರ ಹಲವು ವಿವಾದಗಳನ್ನು ಎದುರಿಸಿದ್ದರು. ವಿಶೇಷವಾಗಿ ಹಾವಿನ ವಿಷದ ಪ್ರಕರಣದಲ್ಲಿ ನೋಯ್ಡಾ ಪೊಲೀಸರು ಬಂಧಿಸಿದ್ದರು, ಜಾಮೀನಿನ ಬಳಿಕ ಎಲ್ವಿಶ್ ಯಾದವ್ ಅವರನ್ನು ಬಿಡುಗಡೆ ಮಾಡಿದ್ದರು.

Continue Reading
Advertisement
Gold Rate Today
ಚಿನ್ನದ ದರ10 mins ago

Gold Rate Today: ಇಂದು ಏರಿಕೆಯಾಗಿಲ್ಲ ಚಿನ್ನದ ದರ; ಬೆಲೆ ಎಷ್ಟಿದೆ ನೋಡಿ

Physical Abuse
ಬೆಂಗಳೂರು16 mins ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Team India
ಕ್ರಿಕೆಟ್22 mins ago

Team India: ವಿಶ್ವಕಪ್ ಟ್ರೋಫಿ ಮೇಲೆ ಕಾಲಿಡುವುದು ನಮ್ಮ ಸಂಸ್ಕೃತಿಯಲ್ಲ ಎಂದು ತೋರಿಸಿಕೊಟ್ಟ ಟೀಮ್​ ಕ್ರಿಕೆಟಿಗರು

ಉದ್ಯೋಗ29 mins ago

Job Alert: ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 2,700 ಅಪ್ರೆಂಟಿಸ್ ಶಿಪ್ ಹುದ್ದೆ; ಆಯ್ಕೆಯಾಗಲು ಏನು ಮಾಡಬೇಕು? ವಿಸ್ತೃತ ಮಾಹಿತಿ

Actor Darshan SIM Secret Revealed investigation start
ಸ್ಯಾಂಡಲ್ ವುಡ್30 mins ago

Actor Darshan: ದರ್ಶನ್ ಬಳಸುತ್ತಿದ್ದ ಸಿಮ್ ಸೀಕ್ರೆಟ್‌ ರಿವೀಲ್; ಆಪ್ತರಿಗೆ ತಟ್ಟಿದೆ ವಿಚಾರಣೆ ಬಿಸಿ!

Brain-Eating Mmoeba
ಆರೋಗ್ಯ38 mins ago

Brain-Eating Amoeba: ಮೆದುಳು ತಿನ್ನುವ ಅಮೀಬಾಕ್ಕೆ ಮತ್ತೊಂದು ಬಲಿ; 2 ತಿಂಗಳ ಅಂತರದಲ್ಲಿ 3ನೇ ಪ್ರಕರಣ

Self Harming in bengaluru
ಬೆಂಗಳೂರು50 mins ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

salary hike cm siddaramaiah
ಪ್ರಮುಖ ಸುದ್ದಿ52 mins ago

Salary Hike: ಸರ್ಕಾರಿ ನೌಕರರ ವೇತನ ಏರಿಕೆ ಸದ್ಯಕ್ಕಿಲ್ಲ: ನೌಕರರ ಸಂಬಳ ನುಂಗಿದ ʼಗ್ಯಾರಂಟಿʼ!

Chaithra J Achar Kittale Roopanthara Raj B Shetty out
ಸ್ಯಾಂಡಲ್ ವುಡ್1 hour ago

Chaithra J Achar: ʻರೂಪಾಂತರʼ ಸಿನಿಮಾದ ಹಾಡು ರಿಲೀಸ್‌; ಇಳಕಲ್‌ ಸೀರೆಯಲ್ಲಿ ಮಿಂಚಿದ ಚೈತ್ರಾ ಆಚಾರ್!

UK Election
ವಿದೇಶ1 hour ago

UK Election: ಯುಕೆ ಎಲೆಕ್ಷನ್‌ನಲ್ಲಿ ಹೀನಾಯ ಸೋಲು; ರಿಶಿ ಸುನಕ್‌ ಫಸ್ಟ್‌ ರಿಯಾಕ್ಷನ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast Rain
ಮಳೆ5 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ17 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ19 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ20 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ22 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ22 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ23 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ1 day ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ3 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ4 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಟ್ರೆಂಡಿಂಗ್‌