Gandhi Jayanti 2022 | ನಿಜವಾದ ಸಭ್ಯತೆ ಎಂಥದು? ಭಾರತೀಯರ ಸಭ್ಯತೆ ಬಗ್ಗೆ ಗಾಂಧೀಜಿ ಹೇಳಿದ್ದೇನು ಗೊತ್ತೇ? - Vistara News

ದೇಶ

Gandhi Jayanti 2022 | ನಿಜವಾದ ಸಭ್ಯತೆ ಎಂಥದು? ಭಾರತೀಯರ ಸಭ್ಯತೆ ಬಗ್ಗೆ ಗಾಂಧೀಜಿ ಹೇಳಿದ್ದೇನು ಗೊತ್ತೇ?

ಇಂದು ಗಾಂಧಿ ಜಯಂತಿ (Gandhi Jayanti 2022). ರಾಷ್ಟ್ರಪಿತ ಗಾಂಧೀಜಿಯ ಜೀವನ, ಹೋರಾಟ, ಸರಳತೆ ಬಗ್ಗೆ ನಮಗೆಲ್ಲರಿಗೂ ಗೊತ್ತು. ಅವರು ಬರೆದ ಲೇಖನಗಳಲ್ಲಿ ಸಭ್ಯತೆಯ ಕುರಿತ ಅವರ ಪುಟ್ಟ ಬರಹ ಈಗಲೂ ಪ್ರಸ್ತುತವೆನಿಸಿದೆ. ಸಭ್ಯತೆಯನ್ನು ಭಾರತೀಯರು ಯಾರಿಂದಲೂ ಕಲಿಯಬೇಕಾಗಿಲ್ಲ ಎಂಬ ಗಾಂಧೀಜಿಯ ಮಾತುಗಳನ್ನು ಈಗ ಜಗತ್ತೇ ಒಪ್ಪಿಕೊಳ್ಳುತ್ತಿದೆ.

VISTARANEWS.COM


on

Gandhi Jayanti 2022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗಾಂಧಿ ಜಯಂತಿಯ ದಿನ (Gandhi Jayanti 2022) ನಾವು ಅವರನ್ನು ಸ್ಮರಿಸುತ್ತೇವೆ, ಪೂಜಿಸುತ್ತೇವೆ. ಸ್ವಾತಂತ್ರಕ್ಕಾಗಿ ಹೋರಾಡಿದ ಮಹಾತ್ಮ ಗಾಂಧೀಜಿ 1908ರಲ್ಲಿಯೇ ಭಾರತಕ್ಕೆ ಎಂತಹ ಸ್ವರಾಜ್ಯ ಬೇಕು ಎಂಬುದನ್ನು ವಿವರಿಸಲು “ಹಿಂದ್‌ ಸ್ವರಾಜ್‌ʼʼ ಎಂಬ ಕೃತಿ ಬರೆದಿದ್ದರು. ಲಂಡನ್‌ನಿಂದ ಹಿಂದಿರುಗುವಾಗ ಹಡಗಿನಲ್ಲಿ ಬರೆದ ಕೃತಿ ಇದು. ಎಲ್ಲರಿಂದಲೂ ಮೆಚ್ಚುಗೆ ಪಡೆದ ಪ್ರಶ್ನೋತ್ತರ ಮಾದರಿಯ (ಓದುಗ-ಸಂಪಾದಕ) ಈ ಕೃತಿ ಮೂಲತಃ ಗುಜರಾತಿ ಭಾಷೆಯಲ್ಲಿದೆ. ಆ ನಂತರ ಬೇರೆ ಬೇರೆ ಭಾಷೆಗಳಿಗೆ ಅನುವಾದಗೊಂಡಿತು. ಸುಮಾರು 30 ಸಾವಿರ ಪದಗಳನ್ನು ಒಳಗೊಂಡ ಈ ಕೃತಿ ದ್ವೇಷದ ಬದಲು ಪ್ರೀತಿಯನ್ನು ಬೋಧಿಸುತ್ತದೆ. ಹಿಂಸೆಗೆ ಬದಲು ಅತ್ಮತ್ಯಾಗವನ್ನು ಕಲಿಸುತ್ತದೆ. ಪಶುಬಲಕ್ಕೆ ವಿರುದ್ಧವಾಗಿ ಆತ್ಮಬಲವನ್ನು ಇದಿರು ನಿಲ್ಲಿಸುತ್ತದೆ.

ಈ ಕೃತಿಯ 13ನೇ ಅಧ್ಯಾಯದಲ್ಲಿ “ನಿಜವಾದ ಸಭ್ಯತೆ ಎಂಥದು?ʼʼ ಎಂದು ಗಾಂಧೀಜಿಯವರು ವಿವರಿಸಿದ್ದಾರೆ. ಭಾರತೀಯರೆಲ್ಲರೂ ಓದಲೇಬೇಕಾದ ಅಧ್ಯಾಯ ಇದು. ಈ ಅಧ್ಯಾಯವನ್ನು ಇಲ್ಲಿ ನೀಡಲಾಗಿದೆ.

ಓದುಗ: ರೈಲಿನ, ವೈದ್ಯರ, ವಕೀಲರ ಟೀಕೆಯಾಯಿತು. ಸರಿ, ಯಂತ್ರಗಳೇ ಬೇಡ ಎನ್ನುತ್ತೀರಿ ನೀವು. ಹಾಗಾದರೆ ಸಭ್ಯತೆಯೆಂದರೇನು?

ಸಂಪಾದಕ: ಅದಕ್ಕೆ ಉತ್ತರ ಕಷ್ಟವಲ್ಲ. ನಾನು ಭಾರತೀಯ ಸಭ್ಯತೆಗಿಂತ ಹೆಚ್ಚಿನದು ಯಾವುದೂ ಇಲ್ಲವೆಂದು ನಂಬಿದ್ದೇನೆ. ನಮ್ಮ ಪೂರ್ವಜರು ಬಿತ್ತಿದ ಬೀಜಕ್ಕೆ ಸಾಟಿಯಾದುದು ಯಾವುದೂ ಇಲ್ಲ, ರೋಂ ಮಣ್ಣುಗೂಡಿತು, ಗ್ರೀಸೂ ಅಷ್ಟೇ. ಈಜಿಪ್ಟಿನ ಫರೋಹಾ ಸಾಮ್ರಾಜ್ಯ ನಾಶವಾಯಿತು; ಜಪಾನ್ ಪಶ್ಚಿಮದ ವೇಷ ತೊಟ್ಟಿತು; ಚೀನಾದ ಬಗ್ಗೆ ಹೇಳುವಂತಿಲ್ಲ. ಆದರೆ ಹಿಂದೂಸ್ಥಾನ ಮಾತ್ರ ಏಳುತ್ತ ಬೀಳುತ್ತ ಇನ್ನೂ ಭದ್ರವಾಗಿಯೇ ಇದೆ, ಬುಡದಲ್ಲಿ, ರೋಂ ಗ್ರೀಸುಗಳ ವೈಭವ ಈಗಿಲ್ಲ. ಆದರೂ ಯೂರೋಪಿನ ಜನರು ರೋಂ ಗ್ರೀಸುಗಳ ಪಾಠವನ್ನ ಕಲಿಯುತ್ತ ಅವರು, ಮಾಡಿದ ತಪ್ಪುಗಳನ್ನು ನಾವು ಬಿಡೋಣ ಎಂದು ಆಶಿಸುತ್ತಾರೆ.

ಹೀಗಿದೆ ಅವರ ದಯನೀಯ ಸ್ಥಿತಿ. ಇಂಥದರಲ್ಲಿಯೂ ಹಿಂದೂಸ್ಥಾನ ಮಾತ್ರ ಅಚಲವಾಗಿದೆ. ಇದೇ ಅದರ ಶೋಭೆ. ಇಲ್ಲಿನ ಜನರು ಅನಾಗರಿಕರು, ಅಜ್ಞಾನಿಗಳು,ಸೋಮಾರಿಗಳು; ಏನು ಬದಲಾವಣೆ ಮಾಡಬೇಕೆಂದರೂ ಅವರನ್ನು ತಿದ್ದುವುದು ಕಷ್ಟ ಎಂದು ಹಿಂದೂಸ್ಥಾನದ ಮೇಲೆ ಆರೋಪವಿದೆ. ಆದರೆ ಇದು ನಮ್ಮ ದೋಷವಲ್ಲ, ಗುಣ, ಅನುಭವದ ಒರೆಗಲ್ಲಿಗೆ ತಿಕ್ಕಿ ಸರಿಯೆಂದು ಕಂಡು ಕೊಂಡದನ್ನು ಬದಲಿಸೋಣವೆ? ಹಿಂದೂಸ್ಥಾನಕ್ಕೆ ಬುದ್ಧಿ ಹೇಳುವವರು ಬಹಳ  ಜನ. ಆದರೂ ಹಿಂದೂಸ್ಥಾನ ಅವಿಚಲಿತವಾಗಿ ಇದೆ. ಇದೇ ಅದರ ಸೊಬಗು; ಇದೇ ನಮ್ಮ ಆಶಾಕಿರಣ.

ಮನುಷ್ಯನಿಗೆ ಕರ್ತವ್ಯ ತೋರಿಸುವ ಆಚಾರ ವ್ಯವಹಾರವೇ ಸಭ್ಯತೆ, ಕರ್ತವ್ಯ  ಪಾಲನೆ ನೀತಿಪಾಲನೆಯೆ. ಅದಕ್ಕೇ ಇನ್ನೊಂದು ಹೆಸರು ಇದು, ನೀತಿಪಾಲನೆ ಯೆಂದರೆ ಇಂದ್ರಿಯನಿಗ್ರಹ, ರಾಗದ್ವೇಷಗಳ ಸಂಯಮ. ಹಾಗೆ ನಡೆದರೆ ನಮ್ಮನ್ನು ನಾವು ಅರಿತುಕೊಳ್ಳುತ್ತೇವೆ. ಸಭ್ಯತೆ ಎಂದರೆ ಒಳ್ಳೆಯ ನಡತೆ, ಈ ವ್ಯಾಖ್ಯೆ ಸರಿಯೆಂದರೆ, ಅನೇಕ ಲೇಖಕರು ಹೇಳಿರುವಂತೆ ಹಿಂದೂಸ್ಥಾನ ಯಾರಿಂದಲೂ ಏನೂ ಕಲಿಯಬೇಕಾಗಿಲ್ಲ. ಅದು ಸರಿ. ಮನುಷ್ಯನ ಮನಸ್ಸು ಅತಿ ಚಂಚಲವೆಂಬುದು ನಮಗೆ ಗೊತ್ತು. ಕೊಟ್ಟಷ್ಟೂ ಬೇಕು ಎನ್ನುತ್ತದೆ, ಸಾಲದು ಎನ್ನುತ್ತದೆ. ಇಂದ್ರಿಯಗಳನ್ನು ಎಷ್ಟು ಸಡಿಲಬಿಟ್ಟರೆ ಅಷ್ಟು ಭೋಗಲಾಲಸೆ ಹೆಚ್ಚುತ್ತದೆ.

ಆದುದರಿಂದಲೇ ನಮ್ಮ ಪೂರ್ವಜರು ಅದಕ್ಕೆ ಮಿತಿ ಮೇರೆ ಕಲ್ಪಿಸಿದ್ದರು. ಸುಖ ಎಂಬುದು ನಮ್ಮ ಮನಸ್ಸಿನದೇ ಒಂದು ಸೃಷ್ಟಿ ಎಂಬುದನ್ನು ಅವರು ಅರಿತಿದ್ದರು. ಸಿರಿವಂತನಾದುದರಿಂದ ಒಬ್ಬನು ಸುಖಿಯಲ್ಲ. ಬಡವನಾದುದರಿಂದ ಒಬ್ಬನು ದುಃಖಿಯಲ್ಲ. ಎಷ್ಟೋ ಸಂದರ್ಭಗಳಲ್ಲಿ ಸಿರಿವಂತನೇ ದುಃಖಿ, ಬಡವನೇ ಸುಖಿ ಆಗಿರುವುದು ಕಾಣಬರುತ್ತದೆ. ಜನಸ್ತೋಮ ಯಾವಾಗಲೂ ಬಡವರಾಗಿಯೇ ಇರುತ್ತಾರೆ. ಇದನ್ನೆಲ್ಲ ನೋಡಿ ತಿಳಿದೇ ನಮ್ಮ ಹಿರಿಯರು ಭೋಗವಿಲಾಸಕ್ಕೆ ಬಲಿಯಾಗಬೇಡಿ ಎಂದು ನಮಗೆ ಹೇಳಿದ್ದಾರೆ.

ಸಾವಿರಾರು ವರ್ಷಗಳಿಂದ ಅದೇ ನೇಗಿಲನ್ನೇ ನಾವು ಬಳಸುತ್ತಿದ್ದೇವೆ. ಸಾವಿರಾರು ವರ್ಷಗಳ ಹಿಂದೆ ಇದ್ದಂಥ ಗುಡಿಸಲೇ ಈಗಲೂ ಇದೆ. ನಮ್ಮ ದೇಶೀಶಿಕ್ಷಣ ಮೊದಲಿನ ಹಾಗೆಯೇ ಇದೆ. ನಮ್ಮಲ್ಲಿ ಈ ಸರ್ವನಾಶಕ ಸ್ಪರ್ಧೆಯಿರಲಿಲ್ಲ. ಪ್ರತಿಯೊಬ್ಬನೂ ತನ್ನ ತನ್ನ ಕಸಬನ್ನು ನಡೆಸಿಕೊಂಡು ಹೋಗುತ್ತಿದ್ದ, ನಿಯಮಿತವಾದ ಪ್ರತಿಫಲ ಪಡೆಯುತ್ತಿದ್ದ. ಯಂತ್ರಗಳನ್ನು ಮಾಡುವುದು ನಮಗೆ ಗೊತ್ತಿರಲಿಲ್ಲವೆಂದಲ್ಲ. ಆದರೆ ಯಂತ್ರದ ಮಾಯೆಗೆ ಸಿಲುಕಿದರೆ ಮನುಷ್ಯ ಅದರ ದಾಸನಾಗಿ ಅನೀತಿಯ ಪಾಲಾಗುತ್ತಾನೆ ಎಂಬುದನ್ನು ನಮ್ಮ ಹಿರಿಯರು ಕಂಡಿದ್ದರು. ಆದುದರಿಂದ ದೀರ್ಘ ಚಿಂತನೆ ಮಾಡಿ, ನಮ್ಮ ಕೈಕಾಲುಗಳಿಂದ ಎಷ್ಟು ಸಾಧ್ಯವೋ ಏನು ಸಾಧ್ಯವೋ ಅದನ್ನೇ ಮಾಡಬೇಕು ಎಂದು ನಿರ್ಣಯಿ ಸಿದರು. ನಮ್ಮ ಕೈಕಾಲುಗಳನ್ನು ಸರಿಯಾಗಿ ಉಪಯೋಗಿಸುವುದೇ ಆಯುರಾರೋಗ್ಯ ಸುಖಸಂತೋಷಗಳಿಗೆ ದಾರಿ ಎಂದು ಅವರು ಅರಿತಿದ್ದರು. ದೊಡ್ಡ ದೊಡ್ಡ ಪಟ್ಟಣಗಳು ಬರೀ ಜಂಜಾಟ, ವ್ಯರ್ಥ ಮಾಯಾಜಾಲ; ಅದರಲ್ಲಿನ ಜನಕ್ಕೆ ಸುಖವಿಲ್ಲ ಎಂದು ಅವರು ತೀರ್ಮಾನಿಸಿದರು.

ಆ ಮಾಯಾ ಬಜಾರುಗಳಲ್ಲಿ ದುರಾಚಾರ, ದುರ್ನಿತಿ, ಸೂಳೆಗಾರಿಕೆ, ಜೂಜು ಹೆಚ್ಚಾಗಿ ಬೆಳೆದು, ಕಳ್ಳಕಾಕರಿಗೆ ದರೋಡೆಗಾರರ ತಂಡಗಳಿಗೆ ಅವು ನೆಲೆವೀಡಾಗುತ್ತವೆ. ಬಡವರನ್ನು ಭಾಗ್ಯವಂತರು ಸುಲಿಯುತ್ತಾರೆ ಎಂಬುದನ್ನೂ ಅರಿತುಕೊಂಡಿದ್ದರು. ಅದರಿಂದ ಚಿಕ್ಕ ಚಿಕ್ಕ ಹಳ್ಳಿಗಳೇ ಅವರಿಗೆ ತೃಪ್ತಿದಾಯಕ ವಾಗಿದ್ದವು. ರಾಜರು, ರಾಜದಂಡ, ಅವರ ಖಡ್ಗ ಎಲ್ಲವೂ ನೈತಿಕ ಬಲಕ್ಕೆ ಸಮನಲ್ಲ ಎಂಬುದು ಅವರಿಗೆ ತಿಳಿದಿತ್ತು. ಹೀಗಾಗಿ ರಾಜಧಿರಾಜರಿಗಿಂತ ಋಷಿಮುನಿಗಳು ಸಾಧುಶರಣರು ಹೆಚ್ಚು ಎಂದು ಅವರ ಅಭಿಪ್ರಾಯವಾಗಿತ್ತು, ಇಂಥ ರಚನೆಯುಳ್ಳ ರಾಷ್ಟ್ರ ಯಾರಿಂದ ಏನು ಕಲಿಯಬೇಕು? ಇತರರಿಗೆ ಕಲಿಸುವ ರಾಷ್ಟ್ರ ಇದು. ಈ ರಾಷ್ಟ್ರದಲ್ಲಿಯೂ ವೈದ್ಯರು, ವಕೀಲರು, ಕೋರ್ಟು ಕಚೇರಿ ಎಲ್ಲವೂ ಇತ್ತು. ಎಲ್ಲಕ್ಕೂ ಒಂದು ಮಿತಿಯಿತ್ತು. ಈ ವೃತ್ತಿ ಯಾವುದೂ ಉಳಿದುದಕ್ಕಿಂತ ಶ್ರೇಷ್ಠ ಎಂದು ಯಾರೂ ತಿಳಿದಿರಲಿಲ್ಲ. ಅಲ್ಲದೆ ಆ ವಕೀಲರು, ವೈದ್ಯರು ಜನರನ್ನು ಕೊಳ್ಳೆ ಹೊಡೆಯುತ್ತಿರಲಿಲ್ಲ; ಜನತೆಯ ಆಶ್ರಿತರು ಅವರು, ಆಶ್ರಯದಾತರಲ್ಲ ಎಂದು ಎಲ್ಲರೂ ತಿಳಿದಿದ್ದರು. ನ್ಯಾಯ ತೃಪ್ತಿಕರವಾಗಿತ್ತು.

ಸಾಧಾರಣವಾಗಿ ಯಾರೂ ನ್ಯಾಯಾಲಕ್ಕೆ ಹೋಗುತ್ತಿರಲಿಲ್ಲ. ಕೋರ್ಟುಗಳಿಗೆ ಜನರನ್ನು ಸೆಳೆಯಲು ದಳ್ಳಾಳಿಗಳು ಯಾರೂ ಇರಲಿಲ್ಲ. ಅಂಥದೇನಾದರೂ ಇದ್ದರೆ, ರಾಜಧಾನಿಗಳಲ್ಲಿ ಮಾತ್ರ ಸಾಮಾನ್ಯ ಜನತೆ ತಮ್ಮ ಬೇಸಾಯ ಮಾಡುತ್ತ ಸ್ವತಂತ್ರವಾಗಿದ್ದರು. ಅವರದು ನಿಜವಾಗಿಯೂ ಸ್ವರಾಜ್ಯ ಈಗಲೂ ಈ ದುಷ್ಟ ಆಧುನಿಕ ನಾಗರಿಕತೆ ಎಲ್ಲಿ ವ್ಯಾಪಿಸಿಲ್ಲವೋ ಅಲ್ಲಿ ಹಿಂದೂಸ್ಥಾನ ಮೊದಲಿನಂತೆಯೇ ಇದೆ. ಆ ಪ್ರದೇಶಗಳ ಜನತೆ ನಿಮ್ಮ ಹೊರ ಆಡಂಬರವನ್ನು ನೋಡಿ ನಗುತ್ತಾರೆ. ಇಂಗ್ಲಿಷರು ಅವರನ್ನು ಅಳುತ್ತಿಲ್ಲ. ನೀವೂ ಎಂದಿಗೂ ಅವರನ್ನು ಆಳಲಾರಿರಿ. ನಾನು ಯಾರ ಮಾತನ್ನಾಡುತ್ತಿದ್ದೇವೋ ಅವರು ನಮ್ಮನ್ನು ಅರಿಯರು, ನಾವು ಅವರನ್ನು ಅರಿಯೆವು, ದೇಶ ಪ್ರೇಮವಿರುವ ನಿಮ್ಮಂಥವರು ನಮ್ಮ ದೇಶದಲ್ಲಿ ರೈಲಿಗೆ ಇನ್ನೂ ಎಟುಕದ ಪ್ರದೇಶಗಳಿಗೆ ಹೋಗಿ ಆರು ತಿಂಗಳು ವಾಸಮಾಡಿ ಎಂದು ನಾನು ಸಲಹೆ ಕೊಡುತ್ತೇನೆ. ಆಮೇಲೆ ನೀವು ನಿಜವಾದ ದೇಶಭಕ್ತಿ ಕಲಿತೀರಿ; ಆಗ ಸ್ವರಾಜ್ಯದ ಮಾತನ್ನು ಆಡಿ.

ಯಾವುದನ್ನು ನಾನು ನಿಜವಾದ ಸಭ್ಯತೆ ಎನ್ನುತ್ತೇನೋ ತಿಳಿಯಿತಲ್ಲ. ಈ ಪರಿಸ್ಥಿತಿಯನ್ನೆಲ್ಲ ಬದಲಿಸಬೇಕೆನ್ನುವವರು ಹಿಂದೂಸ್ಥಾನದ ಶತ್ರುಗಳು.

ಓದುಗ: ನೀವು ಹೇಳಿದ ಹಾಗೆ ಹಿಂದೂಸ್ತಾನ ಇದ್ದಿದ್ದರೆ ಸರಿ, ಆದರೆ ಈ ನೂರಾರು ಬಾಲವಿಧವೆಯರು, ಎರಡು ವರ್ಷಕ್ಕೆ ಮದುವೆಯಾದ ಮಕ್ಕಳು, ಹನ್ನೆರಡು ವರ್ಷಕ್ಕೆ ಮಕ್ಕಳನ್ನು ಹೆತ್ತ ಬಾಲಮಾತೃ ಗೃಹಿಣಿಯರು, ಬಹುಪತಿಗಳುಳ್ಳ ಸತಿಯರು, ನಿಯೋಗ ಪದ್ಧತಿ, ಧರ್ಮ ಹೆಸರಿನಲ್ಲಿ ಕುರಿ ಮೇಕೆಗಳ ಪ್ರಾಣಿ ಬಲಿ, ಇದೆಲ್ಲವೂ ಇದೆಯಲ್ಲ ಹಿಂದೂಸ್ಥಾನದಲ್ಲಿ? ಇವು ನೀವು ವರ್ಣಿಸಿದ ಸಭ್ಯತೆಯ ಲಕ್ಷಣಗಳೇನು?

ಸಂಪಾದಕ: ನೀವು ತಪ್ಪು ಮಾಡುತ್ತಿದ್ದೀರಿ. ನೀವು ತೋರಿಸಿದ ದೋಷಗಳೆಲ್ಲವೂ ದೋಷಗಳೇ. ಇವು ಪುರಾತನ ಸಭ್ಯತೆ ಎಂದು ಯಾರೂ ತಿಳಿದಿಲ್ಲ. ಆ ಸಭ್ಯತೆಗೂ ಮೀರಿ ಈ ದೋಷ ನಿಂತಿದೆ. ಇದನ್ನು ನಿವಾರಿಸಲು ಸದಾ ಪ್ರಯತ್ನ ನಡೆದಿದೆ. ಮುಂದೆಯೂ ನಡೆಯುತ್ತದೆ. ಈ ದೋಷಗಳನ್ನು ತೊಳೆಯಲು ನಮ್ಮೊಳಗೆ ಈಗ ಆಗಿರುವ ಹೊಸ ಜಾಗೃತಿಯನ್ನು ಉಪಯೋಗಿಸಬಹುದು. ಆದರೆ ಆಧುನಿಕ ನಾಗರಿಕತೆಯ ಲಕ್ಷಣಗಳೆಂದು ನಾನು ತೋರಿಸಿದುದನ್ನೆಲ್ಲ ಹಾಗೆಂದು ಅದರ ಭಕ್ತರೇ ಒಪ್ಪಿದ್ದಾರೆ. ಭಾರತೀಯ ಸಭ್ಯತೆಯನ್ನು ಅದರ ಭಕ್ತರು ಹೀಗೆ ವರ್ಣಿಸಿದ್ದಾರೆ. ಯಾವ ಸಭ್ಯತೆಯಿಂದಲೂ ಯಾವ ದೇಶದಲ್ಲಿಯೂ ಸಮಸ್ತರೂ ಪೂರ್ಣತೆ ಪಡೆದಿಲ್ಲ. ಆದರೆ, ಭಾರತೀಯ ಸಭ್ಯತೆಯ ಪ್ರವೃತ್ತಿ ನೈತಿಕ ವಿಕಾಸಕ್ಕೆ ಪಶ್ಚಿಮದ ನಾಗರಿಕತೆಯ ಪ್ರವೃತ್ತಿ ಅನೈತಿಕತೆಗೆ, ಪ್ರೋತ್ಸಾಹ. ಪಶ್ಚಿಮದ ನಾಗರಿಕತೆ ನಾಸ್ತಿಕವಾದುದು, ಭಾರತೀಯ ಸಭ್ಯತೆ ಆಸ್ತಿಕವಾದುದು, ಇದನ್ನು ತಿಳಿದು ಹಿಂದೂಸ್ಥಾನದ ಹಿತೈಷಿಗಳು ಪ್ರಾಚೀನ ಭಾರತೀಯ ಸಭ್ಯತೆ ಯನ್ನು, ಮಗು ತಾಯಿಯ ಎದೆಯನ್ನು ಅವಚಿಕೊಳ್ಳುವಂತೆ, ಅಷ್ಟು ಶ್ರದ್ಧೆಯಿಂದ ಅಪ್ಪಿಕೊಳ್ಳಬೇಕು.

ಇದನ್ನೂ ಓದಿ | Amrit Mahotsav | ಗಾಂಧೀಜಿ ಪ್ರೇರಣೆಯಾದರೂ ಕ್ರಾಂತಿಕಾರಿಯಾಗಿದ್ದ ಅಣ್ಣು ಗುರೂಜಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Chhota Rajan: ಹೊಟೇಲ್‌ ಉದ್ಯಮಿ ಹತ್ಯೆ ಕೇಸ್‌; ಗ್ಯಾಂಗ್‌ಸ್ಟರ್‌ ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ

Chhota Rajan:ಮುಂಬೈಯ ಗಾಮ್‌ದೇವಿಯ ಗೋಲ್ಡನ್‌ ಕ್ರೌನ್‌ ಹೊಟೇಲ್‌ ಮಾಲೀಕರಾಗಿದ್ದ ಜಯಾ ಶೆಟ್ಟಿ ಅವರಿಗೆ ಛೋಟಾ ರಾಜನ್‌ ಗ್ಯಾಂಗ್‌ನಿಂದ ಹಣಕ್ಕಾಗಿ ಬೇಡಿಕೆ ಇಟ್ಟು ಆಗಾಗ ಕರೆ ಬರುತ್ತಿತ್ತು. ಇದಾದ ಬಳಿಕ ಕಲವೇ ದಿನಗಳಲ್ಲಿ ಅಂದರೆ ಮೇ 4, 2001ರಂದು ಹೊಟೇಲ್‌ ಒಳಗಡೆಯೇ ಜಯಾ ಶೆಟ್ಟಿ ಅವರನ್ನು ಛೋಟಾ ರಾಜನ್‌ ಗ್ಯಾಂಗ್‌ನ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.

VISTARANEWS.COM


on

Chhota Rajan
Koo

ಮುಂಬೈ: ಹೊಟೇಲ್‌ ಉದ್ಯಮಿ ಜಯಾ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್‌ಸ್ಟರ್‌, ಭೂಗತ ಪಾತಕಿ ಛೋಟಾ ರಾಜನ್‌(Chhota Rajan)ನನ್ನು ಅಪರಾಧಿ ಎಂದು ಮುಂಬೈ ಕೋರ್ಟ್‌(Mumbai court) ಘೋಷಿಸಿದೆ. 2001ರಲ್ಲಿ ನಡೆದ ಜಯಾ ಶೆಟ್ಟಿ ಕೊಲೆ ಪ್ರಕರಣದ ಅಂತಿಮ ತೀರ್ಪು ಇಂದು ಹೊರಬಿದ್ದಿದ್ದು, ರಾಜನ್‌ನನ್ನು ದೋಷಿ ಎಂದು ಘೋಷಿಸಿ, ಜೀವಾವಧಿ ಶಿಕ್ಷೆ ಘೋಷಿಸಿದೆ. ಮಹಾರಾಷ್ಟ್ರದ ಸಂಘಟಿತ ಅಪರಾಧ ನಿಯಂತ್ರಣ ಕಾಯಿದೆ(MCOCA) ಕೇಸ್‌ಗಳ ವಿಚಾರಣೆ ನಡೆಸುವ ಮುಂಬೈ ವಿಶೇಷ ಕೋರ್ಟ್‌ ನ್ಯಾಯಾಧೀಶ ಎ ಎಂ ಪಾಟೀಲ್‌ ರಾಜನ್‌ನನ್ನು ಅಪರಾಧಿ ಎಂದು ಘೋಷಿಸಿದ್ದಾರೆ.

ಜಯಾ ಶೆಟ್ಟಿ ಯಾರು?

ಮುಂಬೈಯ ಗಾಮ್‌ದೇವಿಯ ಗೋಲ್ಡನ್‌ ಕ್ರೌನ್‌ ಹೊಟೇಲ್‌ ಮಾಲೀಕರಾಗಿದ್ದ ಜಯಾ ಶೆಟ್ಟಿ ಅವರಿಗೆ ಛೋಟಾ ರಾಜನ್‌ ಗ್ಯಾಂಗ್‌ನಿಂದ ಹಣಕ್ಕಾಗಿ ಬೇಡಿಕೆ ಇಟ್ಟು ಆಗಾಗ ಕರೆ ಬರುತ್ತಿತ್ತು. ಇದಾದ ಬಳಿಕ ಕಲವೇ ದಿನಗಳಲ್ಲಿ ಅಂದರೆ ಮೇ 4, 2001ರಂದು ಹೊಟೇಲ್‌ ಒಳಗಡೆಯೇ ಜಯಾ ಶೆಟ್ಟಿ ಅವರನ್ನು ಛೋಟಾ ರಾಜನ್‌ ಗ್ಯಾಂಗ್‌ನ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಜಯಾ ಅವರಿಗೆ ಬೆದರಿಕೆ ಬರುತ್ತಿದ್ದಂತೆ ಮುಂಬೈ ಪೊಲೀಸರು ಅವರಿಗೆ ಭಾರೀ ಭದ್ರತೆ ಒದಗಿಸಿದ್ದರು. 2000ನೇ ಇಸವಿ ನವೆಂಬರ್ ತಿಂಗಳಿನಿಂದ ಛೋಟಾ ರಾಜನ್‌ ಬೆದರಿಕೆ ಕರೆಯಿಂದ ಪೊಲೀಸರಿಗೆ ದೂರು ನೀಡಿದ್ದ ಜಯಾ ಶೆಟ್ಟಿ, 2001ರ ಮಾರ್ಚ್ ಅಂತ್ಯದಲ್ಲಿ ಭದ್ರತೆ ಹಿಂತೆಗೆದುಕೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದರು. ಪೊಲೀಸ್ ಭದ್ರತೆ ಬಳಿಕ ಛೋಟಾ ರಾಜನ್‌ ದೂರವಾಣಿ ಕರೆ ಮಾಡಿ ಬೆದರಿಸುವ ಪ್ರಯತ್ನ ಮಾಡಿರಲಿಲ್ಲ. ಹೀಗಾಗಿ ಛೋಟಾ ರಾಜನ್‌ ತಮ್ಮ ತಂಟೆಗೆ ಬರುವುದಿಲ್ಲ ಎಂದು, ಪೊಲೀಸ್ ಭದ್ರತೆ ವಾಪಸ್ ಪಡೆಯಲು ಪೊಲೀಸರಿಗೆ ಮನವಿ ಮಾಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ 2015 ಅಕ್ಟೋಬರ್‌ನಲ್ಲಿ ಚೋಟಾ ರಾಜನ್‌ ಇಂಡೋನೇಷ್ಯಾದಿಂದ ಭಾರತಕ್ಕೆ ಗಡಿಪಾರಾಗುತ್ತಿದ್ದಂತೆ ಆತನನ್ನು ಅರೆಸ್ಟ್‌ ಮಾಡಿ ದಿಲ್ಲಿಯ ತಿಹಾರ್‌ ಜೈಲಿಗೆ ಕಳುಹಿಸಲಾಗಿತ್ತು. ಇನ್ನು ಘಟನೆ ನಡೆದ ಸಂದರ್ಭದಲ್ಲೇ ಹೊಟೇಲ್‌ನ ಮ್ಯಾನೇಜರ್‌ ಮತ್ತು ನೌಕರರು ಸೇರಿಕೊಂಡು ಇಬ್ಬರು ಶೂಟರ್‌ಗಳನ್ನು ಅರೆಸ್ಟ್‌ ಮಾಡಿದ್ದಾರೆ.

ಚೋಟಾ ರಾಜನ್‌ ಯಾರು?

ಚೋಟಾ ರಾಜನ್‌ನ ನಿಜವಾದ ಹೆಸರು ರಾಜೇಂದ್ರ ಸದಾಶಿವ ನಿಕಲ್ಜೆ . 2001ರಲ್ಲಿ ಛೋಟಾ ರಾಜನ್‌ ಹಾವಳಿ ಜೋರಾಗಿತ್ತು. ಮುಂಬೈನ ಉದ್ಯಮಿಗಳಿಂದ ಕೋಟಿ ಕೋಟಿ ರೂಪಾಯಿ ಸುಲಿಗೆ ಮಾಡೋದನ್ನೇ ದಂಧೆಯನ್ನಾಗಿ ಮಾಡಿಕೊಂಡಿದ್ದ.

ಇದನ್ನೂ ಓದಿ:Madhu Chopra: ಮಗಳು-ಅಳಿಯನ ವಯಸ್ಸಿನ ಅಂತರ ಬಗ್ಗೆ ಪ್ರಿಯಾಂಕಾ ಚೋಪ್ರಾ ತಾಯಿ ಹೇಳಿದ್ದೇನು?

ಇತ್ತೀಚೆಗೆ ಛೋಟಾ ರಾಜನ್‌ ಆಪ್ತ ಪ್ರಸಾದ್​ ಪೂಜಾರಿಯನ್ನು 20 ವರ್ಷಗಳ ಬಳಿಕ ಚೀನಾವು ಮುಂಬೈಗೆ ಗಡಿಪಾರು ಮಾಡಿತ್ತು. ಪ್ರಸಾದ್ ಪೂಜಾರಿ ಅಲಿಯಾಸ್ ಸುಭಾಷ್ ವಿಠ್ಠಲ್ ನನ್ನು ಚೀನಾದಿಂದ ಮುಂಬೈಗೆ ಗಡಿಪಾರು ಮಾಡಿದ್ದು, ಈತ ಛೋಟಾ ರಾಜನ್ ಗ್ಯಾಂಗ್‌ನೊಂದಿಗೆ ಸಂಪರ್ಕ ಹೊಂದಿದ್ದು, ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

Continue Reading

ತಂತ್ರಜ್ಞಾನ

Agnikul Cosmos: ಯಶಸ್ವಿಯಾಗಿ ರಾಕೆಟ್ ಉಡಾವಣೆ ಮಾಡಿದ ಸ್ಟಾರ್ಟ್ ಅಪ್ ಕಂಪನಿ ಅಗ್ನಿಕುಲ್ ಕಾಸ್ಮೋಸ್; ಮೋದಿ ಅಭಿನಂದನೆ

Agnikul Cosmos: ಚೆನ್ನೈ ಮೂಲದ ಖಾಸಗಿ ಬಾಹ್ಯಾಕಾಶ ಸ್ಟಾರ್ಟ್ ಅಪ್ ಅಗ್ನಿಕುಲ್ ಕಾಸ್ಮೋಸ್ ಅಗ್ನಿಬಾನ್ ಎಸ್‌ಒಆರ್‌ಟಿಇಡಿ ಎಂಬ ರಾಕೆಟ್ ಅನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಈ ಐತಿಹಾಸಿಕ ಸಾಧನೆಗೆ ಇಸ್ರೋ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದನೆ ತಿಳಿಸಿದ್ದಾರೆ.

VISTARANEWS.COM


on

Agnikul Cosmos
Koo

ಚೆನ್ನೈ: ಚೆನ್ನೈ ಮೂಲದ ಖಾಸಗಿ ಬಾಹ್ಯಾಕಾಶ ಸ್ಟಾರ್ಟ್ ಅಪ್ ಅಗ್ನಿಕುಲ್ ಕಾಸ್ಮೋಸ್ (Agnikul Cosmos) ಇಂದು (ಮೇ 30) ಅಗ್ನಿಬಾನ್ ಎಸ್‌ಒಆರ್‌ಟಿಇಡಿ (Suborbital Tech Demonstrator) ಎಂಬ ರಾಕೆಟ್ ಅನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಈ ಸಂಬಂಧ ಇಸ್ರೋ (Indian Space Research Organisation) ಸಂತಸ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅಭಿನಂದನೆ ತಿಳಿಸಿದೆ.‌

ʼʼಅಗ್ನಿಬಾನ್‌ ಸಾರ್ಟೆಡ್ 01 (Agnibaan SOrTeD) ಮಿಷನ್‌ ಅನ್ನು ತಮ್ಮ ಉಡಾವಣಾ ಪ್ಯಾಡ್‌ನಿಂದ ಯಶಸ್ವಿಯಾಗಿ ಉಡಾವಣೆ ಮಾಡಿದ್ದಕ್ಕಾಗಿ ಅಗ್ನಿಕುಲ್‌ ಕಾಸ್ಮೋಸ್‌ಗೆ ಅಭಿನಂದನೆಗಳು. ಅರೆ-ಕ್ರಯೋಜೆನಿಕ್‌ ಲಿಕ್ವಿಡ್‌ ಎಂಜಿನ್‌ನ ಮೊದಲ ನಿಯಂತ್ರಿತ ಹಾರಾಟವು ಪ್ರಮುಖ ಮೈಲಿಗಲ್ಲು ಎನಿಸಿಕೊಂಡಿದೆʼʼ ಎಂದು ಇಸ್ರೋ ತಿಳಿಸಿದೆ. ಐಐಟಿ ಮದ್ರಾಸ್‌ನ ಪ್ರಾಧ್ಯಾಪಕ ಮತ್ತು ಅಗ್ನಿಕುಲ್‌ನ ಮಾರ್ಗದರ್ಶಕ ಸತ್ಯ ಆರ್. ಚಕ್ರವರ್ತಿ ಕೂಡ ಶ್ರೀಹರಿಕೋಟಾದಿಂದ ಉಡಾವಣೆ ಯಶಸ್ವಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

“ಶ್ರೀಹರಿಕೋಟಾದ ಎಸ್‌ಡಿಎಸ್‌ಸಿ-ಶಾರ್‌(SDSC-SHAR)ನಿಂದ ಭಾರತದ ಮೊದಲ ಮತ್ತು ಏಕೈಕ ಖಾಸಗಿ ಲಾಂಚ್‌ ಪ್ಯಾಡ್‌ನಿಂದ ಅಗ್ನಿಬಾನ್ ಸಾರ್ಟೆಡ್‌ ಮಿಷನ್ 01 ಅನ್ನು ಯಶಸ್ವಿಯಾಗಿ ಉಡಾವಣೆಗೊಳಿಸಲಾಗಿದೆ. ಈ ರಾಕೆಟ್‌ ವಿಶ್ವದ ಮೊದಲ ಸಿಂಗಲ್ ಪೀಸ್ 3 ಡಿ ಮುದ್ರಿತ ಎಂಜಿನ್‌ನಿಂದ ಚಾಲಿತವಾಗಿದೆ ಮತ್ತು ಇದು ಸೆಮಿ ಕ್ರಯೋ ಎಂಜಿನ್ ಹೊಂದಿರುವ ಭಾರತದ ಮೊದಲ ಹಾರಾಟ ಎನಿಸಿಕೊಂಡಿದೆ” ಎಂದು ಅಗ್ನಿಕುಲ್‌ ತಿಳಿಸಿದೆ.

ಅಭಿನಂದನೆ ತಿಳಿಸಿದ ಪ್ರಧಾನಿ ಮೋದಿ

ಇತ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೂಡ ಈ ಅಭೂತಪೂರ್ವ ಸಾಧನೆಗೆ ಮೆಚ್ಚುಗೆ ಸೂಚಿಸಿದ್ದಾರೆ. ಎಕ್ಸ್‌ ಮೂಲಕ ಅಭಿನಂದನೆ ತಿಳಿಸಿದ ಅವರು, “ಇಡೀ ರಾಷ್ಟ್ರವೇ ಹೆಮ್ಮೆ ಪಡುವಂತಹ ಗಮನಾರ್ಹ ಸಾಧನೆ. ವಿಶ್ವದ ಮೊದಲ ಸಿಂಗಲ್-ಪೀಸ್ 3ಡಿ ಮುದ್ರಿತ ಅರೆ-ಕ್ರಯೋಜೆನಿಕ್ ಎಂಜಿನ್‌ನಿಂದ ಚಾಲಿತ ಅಗ್ನಿಬಾನ್ ರಾಕೆಟ್‌ನ ಯಶಸ್ವಿ ಉಡಾವಣೆ ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಒಂದು ಮಹತ್ವದ ಕೊಡುಗೆಯಾಗಿದೆ ಮತ್ತು ನಮ್ಮ ಯುವ ಶಕ್ತಿಯ ಗಮನಾರ್ಹ ಜಾಣ್ಮೆಗೆ ಸಾಕ್ಷಿಯಾಗಿದೆ. ಅಗ್ನಿಕುಲ್ ಕಾಸ್ಮೋಸ್ ತಂಡಕ್ಕೆ, ಅವರ ಭವಿಷ್ಯದ ಪ್ರಯತ್ನಗಳಿಗೆ ನನ್ನ ಶುಭ ಹಾರೈಕೆಗಳು” ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Chandrayaan 4: ಚಂದ್ರಯಾನ 4ಕ್ಕೆ ಇಸ್ರೋ ಸಜ್ಜು; ಚಂದ್ರನ ವಿಶೇಷ ಸ್ಥಳದಲ್ಲಿ ಬಾಹ್ಯಾಕಾಶ ನೌಕೆ ಲ್ಯಾಂಡಿಂಗ್!

5ನೇ ಪ್ರಯತ್ನ

ಇದು ಅಗ್ನಿಕುಲ್ ಕಾಸ್ಮೋಸ್ ನಡೆಸಿದ 5ನೇ ಪ್ರಯತ್ನವಾಗಿತ್ತು. ಈ ಹಿಂದೆ ರಾಕೆಟ್‌ ಉಡಾವಣೆ ಮಾಡಲು 4 ಬಾರಿ ಪ್ರಯತ್ನ ನಡೆದಿತ್ತಾದರೂ ಕೊನೆಯ ಕ್ಷಣದಲ್ಲಿ ತಾಂತ್ರಿಕ ಸಮಸ್ಯೆಯಿಂದ ರದ್ದುಗೊಳಿಸಲಾಗಿತ್ತು. 575 ಕೆಜಿ ತೂಕ ಮತ್ತು 6.2 ಮೀಟರ್ ಉದ್ದದ ರಾಕೆಟ್ ಶ್ರೀಹರಿಕೋಟಾದಿಂದ ಬಂಗಾಳ ಕೊಲ್ಲಿಗೆ ಯಶಸ್ವಿಯಾಗಿ ಹಾರಾಟ ನಡೆಸಿತು. ʼʼಅಗ್ನಿಬಾನ್ ಸಾರ್ಟೆಡ್‌ ಅರೆ-ಕ್ರಯೋಜೆನಿಕ್ ಎಂಜಿನ್‌ನಿಂದ ನಿಯಂತ್ರಿಸಲ್ಪಡುತ್ತದೆ. ಇದು ವಾಣಿಜ್ಯಿಕವಾಗಿ ಲಭ್ಯವಿರುವ ವಾಯುಯಾನ ಟರ್ಬೈನ್ ಇಂಧನವನ್ನು, ಮುಖ್ಯವಾಗಿ ಸೀಮೆಎಣ್ಣೆ ಮತ್ತು ವೈದ್ಯಕೀಯ ದರ್ಜೆಯ ದ್ರವ ಆಮ್ಲಜನಕವನ್ನು ಬಳಸುತ್ತದೆʼʼ ಎಂದು ಅಗ್ನಿಕುಲ್ ಕಾಸ್ಮೋಸ್ ಪ್ರೈವೇಟ್ ಲಿಮಿಟೆಡ್‌ನ ಸಹ ಸಂಸ್ಥಾಪಕ ಮೊಯಿನ್ ಎಸ್‌ಪಿಎಂ ತಿಳಿಸಿದ್ದಾರೆ.

Continue Reading

Lok Sabha Election 2024

PM Modi: ಕನ್ಯಾಕುಮಾರಿಯಲ್ಲಿ ಪ್ರಧಾನಿ ಧ್ಯಾನ; ಪ್ರಧಾನಿ ಈ ಸ್ಥಳವನ್ನೇ ಆಯ್ಕೆ ಮಾಡಲು ಏನು ಕಾರಣ?

ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಈ ಬಾರಿ ಲೋಕ ಸಭಾ ಚುನಾವಣಾ ಪ್ರಚಾರದ ಅಂತ್ಯವನ್ನು ಕನ್ಯಾಕುಮಾರಿಯ ಸ್ವಾಮಿ ವಿವೇಕಾನಂದ ಕಲ್ಲಿನ ಸ್ಮಾರಕದಲ್ಲಿ ನಡೆಸಲಿದ್ದಾರೆ. ಇಲ್ಲಿ ಸುಮಾರು 45 ಗಂಟೆಗಳ ಕಾಲ ಅವರು ಕಳೆಯಲಿದ್ದಾರೆ.

VISTARANEWS.COM


on

By

PM Modi
Koo

ಲೋಕಸಭಾ ಚುನಾವಣೆ- 2024ರ (Loksabha election-2024) ಬಿಜೆಪಿ ಪ್ರಚಾರ ಕಾರ್ಯವನ್ನು ಅಂತ್ಯಗೊಳಿಸಿ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಕನ್ಯಾಕುಮಾರಿಗೆ ತೆರಳಲಿದ್ದು, ( Kanyakumari) ಇಲ್ಲಿನ ವಿವೇಕಾನಂದ ಕಲ್ಲಿನ ಸ್ಮಾರಕದಲ್ಲಿ (Vivekananda Rock Memorial) ಮೇ 30ರಿಂದ ಜೂನ್ 1ರವರೆಗೆ ಒಟ್ಟು 45 ಗಂಟೆಗಳ ಕಾಲ ಧ್ಯಾನ ಮಾಡಲಿದ್ದಾರೆ.

ಇದೇ ಸ್ಥಳದಲ್ಲಿ ಭಾರತದ ಆಧ್ಯಾತ್ಮಿಕ ನಾಯಕ ಸ್ವಾಮಿ ವಿವೇಕಾನಂದರು 1892ರಲ್ಲಿ ಮೂರು ದಿನಗಳ ಕಾಲ ಧ್ಯಾನ ಮಾಡಿ ಜ್ಞಾನೋದಯವನ್ನು ಪಡೆದಿದ್ದರು.

2019ರ ಚುನಾವಣಾ ಪ್ರಚಾರದ ಕೊನೆಯಲ್ಲಿ ಪ್ರಧಾನಿ ಮೋದಿ ಅವರು ಉತ್ತರಾಖಂಡದ ಕೇದಾರನಾಥ ದೇಗುಲಕ್ಕೆ ಭೇಟಿ ನೀಡಿ 15 ಗಂಟೆಗಳ ‘ಏಕಾಂತವಾಸ್’ (ಏಕಾಂತ ಧ್ಯಾನ) ಕೈಗೊಂಡಿದ್ದರು.

2014 ರಲ್ಲಿ ಮಹಾರಾಷ್ಟ್ರದ ಪ್ರತಾಪಗಢಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದರು. 1659ರ ನವೆಂಬರ್ ನಲ್ಲಿ ಬಿಜಾಪುರದ ಆದಿಲ್ ಶಾಹಿ ಸುಲ್ತಾನರ ಸೇನಾಪತಿ ಅಫ್ಜಲ್ ಖಾನ್ ಅವರನ್ನು ಕೊಂದು ಯುದ್ಧದಲ್ಲಿ ಗೆದ್ದ ಛತ್ರಪತಿ ಶಿವಾಜಿಗೆ ಗೌರವ ಸಲ್ಲಿಸಿದರು. ಈ ವಿಜಯವು ಮರಾಠಾ ಸಾಮ್ರಾಜ್ಯದ ಮುಖ್ಯಸ್ಥನಾಗಿ ಶಿವಾಜಿಯ ಪಟ್ಟಾಭಿಷೇಕಕ್ಕೆ ದಾರಿ ಮಾಡಿಕೊಟ್ಟಿತು. ಇದನ್ನು ಹಿಂದವಿ ಸ್ವರಾಜ್ ಎಂದು ಛತ್ರಪತಿ ಶಿವಾಜಿ ಕರೆದರು.

ಇದೀಗ ಜೂನ್ 4 ರಂದು ಪ್ರಕಟವಾಗಲಿರುವ ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಮುಂಚಿತವಾಗಿ ಮೋದಿ ಕನ್ಯಾಕುಮಾರಿ ಪ್ರವಾಸ ಯೋಜನೆ ಹಾಕಿಕೊಂಡಿದ್ದಾರೆ.


ವಿವೇಕಾನಂದ ಬಂಡೆಯ ಮಹತ್ವ ಏನು?

ಹಿಂದೂ ಮಹಾಸಾಗರ, ಅರಬ್ಬೀ ಸಮುದ್ರ ಮತ್ತು ಬಂಗಾಳಕೊಲ್ಲಿಯ ಸಂಗಮದಲ್ಲಿರುವ ಭಾರತದ ದಕ್ಷಿಣ ತುದಿಯಾದ ಕನ್ಯಾಕುಮಾರಿಯ ವವತುರೈ ಕಡಲತೀರದಿಂದ ಸುಮಾರು 500 ಮೀಟರ್ ದೂರದಲ್ಲಿರುವ ಈ ದ್ವೀಪದ ಮೇಲೆ ಧ್ಯಾನ ಮಾಡುವಾಗ ಸ್ವಾಮಿ ವಿವೇಕಾನಂದರು ಅಭಿವೃದ್ಧಿ ಹೊಂದಿದ ಭಾರತದ ಕನಸು ಕಂಡಿದ್ದರು.

ಭಾರತದಾದ್ಯಂತ ನಾಲ್ಕು ವರ್ಷಗಳ ಕಾಲ ಅಲೆದಾಡಿದ ಅವರು ದೈವಿಕ ಸ್ವಭಾವ, ಸತ್ಯ, ಶುದ್ಧತೆ, ಪ್ರಾಮಾಣಿಕತೆ, ಪರಿಶ್ರಮ, ಧೈರ್ಯ, ಶಕ್ತಿ ಮತ್ತು ಪ್ರೀತಿಯಲ್ಲಿ ನಂಬಿಕೆಯ ಇಡುವ ತತ್ತ್ವವನ್ನು ಸಾರಿದರು.

ಸ್ವಾಮಿ ರಾಮಕೃಷ್ಣಾನಂದರಿಗೆ 1894ರಲ್ಲಿ ವಿವೇಕಾನಂದರು, ಭಾರತೀಯ ಬಂಡೆಯ ಕೊನೆಯ ತುಣುಕಿನ ಮೇಲೆ ಕುಳಿತು ನಾನು ಒಂದು ಯೋಜನೆಯನ್ನು ಕಂಡಿದ್ದೇನೆ. ಸನ್ಯಾಸಿಗಳು ಅಲೆದಾಡುತ್ತಾ ಜನರಿಗೆ ಆಧ್ಯಾತ್ಮಿಕತೆಯನ್ನು ಕಲಿಸುವುದು ಹುಚ್ಚುತನ. ಬಡವರು ಅತ್ಯಂತ ಕಷ್ಟವಾದ ಜೀವನ ನಡೆಸುತ್ತಿರುವುದು ಅವರ ಅಜ್ಞಾನದಿಂದಾಗಿ. ನಾವು ಅದನ್ನು ಹೋಗಲಾಡಿಸುವ ಬದಲು ಅವರ ರಕ್ತವನ್ನು ಹೀರುತ್ತಿದ್ದೇವೆ ಮತ್ತು ಅವರನ್ನು ಪಾದದಡಿಯಲ್ಲಿ ತುಳಿಯುತ್ತಿದ್ದೇವೆ ಎಂದು ಹೇಳಿದ್ದರು.

1963ರಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ಶತಮಾನೋತ್ಸವದ ಮುನ್ನಾದಿನ ಆರ್‌ಎಸ್‌ಎಸ್ ಕಾರ್ಯಕರ್ತ ಏಕನಾಥ್ ರಾನಡೆ ನೇತೃತ್ವದ ವಿವೇಕಾನಂದ ರಾಕ್ ಸ್ಮಾರಕ ಸಮಿತಿಯು ಈ ಸ್ಥಳವನ್ನು ನೆನಪಿಸಿತ್ತು. ಇದನ್ನು 1970 ರಲ್ಲಿ ರಾಷ್ಟ್ರಪತಿ ವಿ.ವಿ.ಗಿರಿ ಅವರು ಔಪಚಾರಿಕವಾಗಿ ಉದ್ಘಾಟಿಸಿದರು.

ಒಂದು ನಂಬಿಕೆಯ ಪ್ರಕಾರ ಪಾರ್ವತಿ ದೇವಿಯು ಶಿವನಿಗಾಗಿ ಕಾಯುತ್ತಿರುವಾಗ ಇದೇ ಬಂಡೆಯ ಮೇಲೆ ಒಂದೇ ಕಾಲಿನ ಮೇಲೆ ಧ್ಯಾನ ಮಾಡುತ್ತಿದ್ದಳು.

ವವತುರೈನಿಂದ 15 ನಿಮಿಷಗಳ ದೋಣಿ ಸಂಚಾರದ ಮೂಲಕ ಕಲ್ಲಿನ ದ್ವೀಪವನ್ನು ಪ್ರವೇಶಿಸಬಹುದು. ಇದು ಹಿಂದೂ ಮಹಾಸಾಗರ, ಬಂಗಾಳ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರದ ಸಂಗಮ ಸ್ಥಳವಾಗಿದೆ.


ಮೋದಿ ಈ ಸ್ಥಳ ಆಯ್ಕೆ ಮಾಡಿದ್ದು ಯಾಕೆ?

ಪ್ರಧಾನಿ ನರೇಂದ್ರ ಮೋದಿ ಅವರು ವಿವೇಕಾನಂದ ಅವರನ್ನು ತಮ್ಮ ಜೀವನಕ್ಕೆ ಆದರ್ಶ ಎಂದು ಪರಿಗಣಿಸುತ್ತಾರೆ. ಸ್ವಾಮಿ ವಿವೇಕಾನಂದರು ಸ್ಥಾಪಿಸಿರುವ ರಾಮಕೃಷ್ಣ ಮಿಷನ್‌ನ ಸದಸ್ಯರೂ ಆಗಿದ್ದಾರೆ.

ಕಳೆದ ವರ್ಷ ರಾಮಕೃಷ್ಣ ಮಿಷನ್‌ನ 125 ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ ಮೋದಿ, ಸ್ವಾಮಿ ವಿವೇಕಾನಂದರು ಭಾರತದ ಬಗ್ಗೆ ಕಂಡಿರುವ ಕನಸನ್ನು ನನಸು ಮಾಡಲು ಭಾರತವು ಕೆಲಸ ಮಾಡುವುದನ್ನು ಅವರು ಹೆಮ್ಮೆಯಿಂದ ನೋಡುತ್ತಿದ್ದಾರೆ ಎಂದು ನನಗೆ ಖಾತ್ರಿಯಿದೆ ಎಂದು ಹೇಳಿದ್ದರು.

ಈ ಬಾರಿ ತಮಿಳುನಾಡಿನ ಕನ್ಯಾಕುಮಾರಿಯನ್ನು ಅವರು ಧ್ಯಾನ ಮಾಡಲು ಅವರು ಆಯ್ಕೆ ಮಾಡಿರುವುದು ಈ ವರ್ಷದ ಚುನಾವಣಾ ಪ್ರಚಾರದ ಸಮಯದಲ್ಲಿ ಅವರ ಪಕ್ಷ ದಕ್ಷಿಣ ಭಾರತದಲ್ಲಿ ಬಲವಾಗಿರುವುದನ್ನು ಸೂಚಿಸುತ್ತದೆ. ಕಳೆದ ಮೂರು ವರ್ಷಗಳಲ್ಲಿ ಅವರ ಒಟ್ಟು ಪ್ರವಾಸಗಳಲ್ಲಿ ಮೂರನೇ ಒಂದು ಭಾಗದಷ್ಟು ಅವರು ದಕ್ಷಿಣ ಭಾರತಕ್ಕೆ ಪ್ರವಾಸ ಕೈಗೊಂಡಿದ್ದರು. 2024ರಲ್ಲಿ ತಮಿಳುನಾಡಿಗೆ ಏಳು ಭಾರಿ ಭೇಟಿ ನೀಡಿದ್ದಾರೆ.

ದಕ್ಷಿಣದ ರಾಜ್ಯಗಳ ಮೇಲೆ ದೃಷ್ಟಿ

ಕೇರಳ, ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಕರ್ನಾಟಕವು ಒಟ್ಟು 543 ಲೋಕಸಭಾ ಸ್ಥಾನಗಳಲ್ಲಿ 131 ಸ್ಥಾನಗಳನ್ನು ಹೊಂದಿವೆ. ತಮಿಳುನಾಡುವೊಂದೇ ಸಂಸತ್ತಿನಲ್ಲಿ 39 ಸ್ಥಾನಗಳನ್ನು ಹೊಂದಿದೆ. ದಕ್ಷಿಣದಲ್ಲಿ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದರು.

ಮೋದಿ ಭೇಟಿಗೆ ಸಿದ್ಧತೆ ಏನು?

ಗುರುವಾರ ವಿವೇಕಾನಂದ ಕಲ್ಲಿನ ಸ್ಮಾರಕದಲ್ಲಿ ಪ್ರಧಾನಿಯವರ 45 ಗಂಟೆಗಳ ವಾಸ್ತವ್ಯ ಸುಗಮವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಸುಮಾರು 2,000 ಪೊಲೀಸರು ಮತ್ತು ಭದ್ರತಾ ಏಜೆನ್ಸಿಗಳನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: Modi Meditation: ಮೋದಿಗೆ ಧ್ಯಾನ ಮಾಡಲು ಬಿಡಬೇಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ಮೊರೆ!

ತಿರುನೆಲ್ವೇಲಿ ವ್ಯಾಪ್ತಿಯ ಡಿಐಜಿ ಪ್ರವೇಶ್ ಕುಮಾರ್ ಅವರು ಪೊಲೀಸ್ ವರಿಷ್ಠಾಧಿಕಾರಿ ಇ. ಸುಂದರವತನಂ ಅವರೊಂದಿಗೆ ಇಲ್ಲಿನ ಕಲ್ಲಿನ ಸ್ಮಾರಕ, ಬೋಟ್ ಜೆಟ್ಟಿ, ಹೆಲಿಪ್ಯಾಡ್ ಮತ್ತು ರಾಜ್ಯ ಅತಿಥಿ ಗೃಹದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ.

ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಚುನಾವಣಾ ಪ್ರಚಾರವನ್ನು ಮುಗಿಸಿದ ಅನಂತರ ಪ್ರಧಾನಿ ಗುರುವಾರ ಮಧ್ಯಾಹ್ನ ತಿರುವನಂತಪುರಂ ವಿಮಾನ ನಿಲ್ದಾಣವನ್ನು ತಲುಪಲಿದ್ದಾರೆ. ಸಂಜೆ ಕನ್ಯಾಕುಮಾರಿಯಲ್ಲಿರುವ ರಾಜ್ಯ ಅತಿಥಿ ಗೃಹ ತಲುಪಿ ದೋಣಿ ಮೂಲಕ ವಿವೇಕಾನಂದ ಕಲ್ಲಿನ ಸ್ಮಾರಕಕ್ಕೆ ತೆರಳಲಿದ್ದಾರೆ. ಅವರು ಶನಿವಾರ ಮಧ್ಯಾಹ್ನದವರೆಗೆ ಅಲ್ಲಿಯೇ ಇರುತ್ತಾರೆ ಎನ್ನಲಾಗಿದೆ.

ಮೋದಿ ಶನಿವಾರ ಸಂಜೆ ವೇಳೆಗೆ ಕನ್ಯಾಕುಮಾರಿ ಹೆಲಿಪ್ಯಾಡ್ ತಲುಪಿ ತಿರುವನಂತಪುರಕ್ಕೆ ಹಿಂತಿರುಗಿ ಅದೇ ದಿನ ದೆಹಲಿಗೆ ತೆರಳಲಿದ್ದಾರೆ.

ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಸರ್ಕಾರವು ಪ್ರಧಾನಿಯವರ ಈ ಭೇಟಿಗೆ ಅನುಮತಿಯನ್ನು ವಿರೋಧಿಸಿ ಪ್ರಸ್ತುತ ಜಾರಿಯಲ್ಲಿರುವ ಚುನಾವಣಾ ಮಾದರಿ ನೀತಿ ಸಂಹಿತೆ ಮತ್ತು ನಡೆಯುತ್ತಿರುವ ಪ್ರವಾಸೋದ್ಯಮ ಋತುವನ್ನು ಉಲ್ಲೇಖಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

Continue Reading

ದೇಶ

PM Narendra Modi: ಪ್ರಧಾನಿ ಮೋದಿ ಸ್ಪರ್ಧೆ ಅನರ್ಹತೆಗೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತ

PM Narendra Modi:ಪ್ರಧಾನಿ ಮೋದಿ ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿದ್ದಾರೆ ಮತ್ತು ತಮ್ಮ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಅರ್ಜಿದಾರ ದೀಪಕ್‌ ಕುಮಾರ್‌ ಆರೋಪಿಸಿದ್ದು, ಮೋದಿ ವಿಮಾನ ಅಪಘಾತ ಮಾಡಿಸಿ ನನ್ನ ಕೊಲೆಗೆ ಯತ್ನಿಸಿದ್ದಾರೆ ಎಂದು ದೂರಿದ್ದಾರೆ. 08.07.2018ರಂದು ಏರ್‌ಇಂಡಿಯಾ ವಿಮಾನ ಅಪಘಾತ ಮಾಡಿಸುವ ಮೂಲಕ ದೇಶದಲ್ಲಿ ಶಾಂತಿ ಸುವ್ಯವಸ್ಥೆ ಕದಡುವ ಪ್ರಯತ್ನ ನಡೆಸಿದ್ದರು ಎಂದು ಅರ್ಜಿಯಲ್ಲಿ ದೀಪಕ್‌ ದೂರಿದ್ದಾರೆ.

VISTARANEWS.COM


on

PM Narendra Modi
Koo

ನವದೆಹಲಿ: ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ(PM Narendra Modi) ಸ್ಪರ್ಧೆಯನ್ನು ಅನರ್ಹ(Disqualification)ಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದಿಲ್ಲಿ ಹೈಕೋರ್ಟ್‌(Delhi high Court) ವಜಾಗೊಳಿಸಿದೆ. ಪ್ರಧಾನಿ ಮೋದಿ ವಿರುದ್ಧ ವಿಮಾನ ಪೈಲಟ್‌(Pilot) ಕ್ಯಾ. ದೀಪಕ್‌ ಕುಮಾರ್‌ ಸಲ್ಲಿಸಿದ್ದ ಅರ್ಜಿಯನ್ನು ಇಂದು ಕೋರ್ಟ್‌ ತಿರಸ್ಕರಿಸಿದೆ. ಪ್ರಧಾನಮಂತ್ರಿ ಅವರು ಭಾರತದ ಸಂವಿಧಾನಕ್ಕೆ ನಿಜವಾದ ನಂಬಿಕೆ ಮತ್ತು ನಿಷ್ಠೆಯನ್ನು ಹೊಂದಿರುವುದಾಗಿ ಸುಳ್ಳು ಪ್ರಮಾಣ ಮಾಡಿದ್ದಾರೆ ಎಂದು ಆರೋಪಿಸಿ ದೀಪಕ್‌ ಕುಮಾರ್‌ ಅರ್ಜಿ ಸಲ್ಲಿಸಿದ್ದರು.

ಪ್ರಧಾನಿ ಮೋದಿ ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿದ್ದಾರೆ ಮತ್ತು ತಮ್ಮ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಅರ್ಜಿದಾರ ದೀಪಕ್‌ ಕುಮಾರ್‌ ಆರೋಪಿಸಿದ್ದು, ಮೋದಿ ವಿಮಾನ ಅಪಘಾತ ಮಾಡಿಸಿ ನನ್ನ ಕೊಲೆಗೆ ಯತ್ನಿಸಿದ್ದಾರೆ ಎಂದು ದೂರಿದ್ದಾರೆ. 08.07.2018ರಂದು ಏರ್‌ಇಂಡಿಯಾ ವಿಮಾನ ಅಪಘಾತ ಮಾಡಿಸುವ ಮೂಲಕ ದೇಶದಲ್ಲಿ ಶಾಂತಿ ಸುವ್ಯವಸ್ಥೆ ಕದಡುವ ಪ್ರಯತ್ನ ನಡೆಸಿದ್ದರು ಎಂದು ಅರ್ಜಿಯಲ್ಲಿ ದೀಪಕ್‌ ದೂರಿದ್ದಾರೆ.

ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಅರ್ಜಿದಾರರು ಪ್ರಧಾನಿ ನರೇಂದ್ರ ಮೋದಿ ನಿರಾಧಾರ ಆರೋಪ ಮಾಡಿದ್ದಾರೆ. ಪ್ರಧಾನಿ ವಿರುದ್ಧದ ಆರೋಪ ನಿರಾಧಾರ. ಸುಖಾ ಸುಮ್ಮನೆ ಪ್ರಧಾನಿ ವಿರುದ್ಧ ಹಗರಣದ ಆರೋಪ ಹೊರಿಸುತ್ತಿದ್ದಾರೆ ಎಂದು ಹೇಳಿರುವ ಕೋರ್ಟ್‌ ದೀಪಕ್‌ ಕುಮಾರ್‌ ಅವರ ಅರ್ಜಿಯನ್ನು ತಿರಸ್ಕರಿಸಿದೆ. ಪ್ರಧಾನಿ ಮೋದಿ ಮಾತ್ರವಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಅಮಿತ್‌ ಶಾ, ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯಾ ಸಿಂದಿಯಾ ಅವರ ಸ್ಪರ್ಧೆಯನ್ನೂ ಅನರ್ಹಗೊಳಿಸುವಂತೆ ದೀಪಕ್‌ ಕುಮಾರ್‌ ತಮ್ಮ ಅರ್ಜಿಯಲ್ಲಿ ಮನವಿ ಮಾಡಿದ್ದರು.

ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ನೀತಿ ಸಂಹಿತೆ ಉಲ್ಲಂಘನೆ(Code of conduct) ಮಾಡಿದ್ದಾರೆ ಅವರನ್ನು ಚುನಾವಣೆಯಿಂದ 6 ವರ್ಷ ಅನರ್ಹಗೊಳಿಸಬೇಕಂದು ಮನವಿ ಮಾಡಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದಿಲ್ಲಿ ಕೋರ್ಟ್‌ ಈ ಹಿಂದೆ ವಜಾಗೊಳಿಸಿತ್ತು. ಆನಂದ್‌ ಎಸ್‌. ಜೋಂದಲ್‌ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ದಿಲ್ಲಿ ಕೋರ್ಟ್‌ ಅದನ್ನು ವಜಾಗೊಳಿಸಿತ್ತು. ಉತ್ತರಪ್ರದೇಶದ ಪಿಲಿಬಿತ್‌ನಲ್ಲಿ ಏ.6ರಂದು ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಸಿಖ್‌ ಮತ್ತು ಹಿಂದೂ ಭಕ್ತರ ಭಕ್ತ ಬಗ್ಗೆ ಉಲ್ಲೇಖಸಿದ್ದರು ಆ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದರು ಎಂದು ಅರ್ಜಿಯಲ್ಲಿ ತಿಳಿಸಿದ್ದರು.

ಇದನ್ನೂ ಓದಿ: Firecracker Explosion: ಪುರಿ ಜಗನ್ನಾಥ ದೇಗುಲದಲ್ಲಿ ಅಗ್ನಿ ದುರಂತ; 15 ಮಂದಿಗೆ ಗಾಯ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವುದನ್ನು ಇಂಡಿಯಾ ಒಕ್ಕೂಟ ಸದಾ ದ್ವೇಷಿಸಿತ್ತು. ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ನೀಡಿದ್ದರೂ ಅದನ್ನು ತಿರಸ್ಕರಿಸಿ ರಾಮಲಲ್ಲಾಗೆ ಅವಮಾನ ಮಾಡಿದ್ದರು. ಅವರ ಪಕ್ಷಗಳಿಂದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಾಯಕರನ್ನು ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿತ್ತು. ʼಶಕ್ತಿʼಯನ್ನು ನಿರ್ಣಾಮ ಮಾಡಬೇಕೆಂದು ಇಂಡಿಯಾ ಪಣತೊಟ್ಟಿದೆ. ಇಡೀ ದೇಶವೇ ಪೂಜಿಸುವ ಶಕ್ತಿಯನ್ನು ಕಾಂಗ್ರೆಸ್‌ ಅವಮಾನಿಸಿದೆ. ಶಕ್ತಿಯನ್ನು ಪೂಜಿಸುವ ದೇಶದ ಜನ ಕಾಂಗ್ರೆಸ್‌ ಅನ್ನು ಎಂದೂ ಕ್ಷಮಿಸಲ್ಲ ಎಂದು ಪಿಲಿಬಿತ್‌ ಅಭ್ಯರ್ಥಿ ಜಿತಿನ್‌ ಪ್ರಸಾದ್‌ ಪರ ಪ್ರಚಾರದ ವೇಳೆ ಪ್ರಧಾನಿ ವಾಗ್ದಾಳಿ ನಡೆಸಿದ್ದರು.

Continue Reading
Advertisement
Chhota Rajan
ಕ್ರೈಂ3 mins ago

Chhota Rajan: ಹೊಟೇಲ್‌ ಉದ್ಯಮಿ ಹತ್ಯೆ ಕೇಸ್‌; ಗ್ಯಾಂಗ್‌ಸ್ಟರ್‌ ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ

Fake CBI Officer
ಬೆಂಗಳೂರು8 mins ago

Fake CBI Officer : ಸಿಬಿಐ ಪೊಲೀಸರೆಂದು ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡಿದ ನಾಲ್ವರು ಅರೆಸ್ಟ್‌

Prajwal Devaraj death news take leagal action by family
ಸ್ಯಾಂಡಲ್ ವುಡ್24 mins ago

Prajwal Devaraj: ಪ್ರಜ್ವಲ್​ ದೇವರಾಜ್ ಇನ್ನಿಲ್ಲ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು; ಕುಟುಂಬಸ್ಥರ ಆಕ್ರೋಶ!

Prajwal Revanna Case
ಕ್ರೈಂ28 mins ago

Prajwal Revanna Case: ಅಶ್ಲೀಲ ವಿಡಿಯೋ ಹಂಚಿದ ಆರೋಪಿಗಳಾದ ಚೇತನ್‌, ಲಿಖಿತ್‌ಗೆ ಜಾಮೀನು

Agnikul Cosmos
ತಂತ್ರಜ್ಞಾನ44 mins ago

Agnikul Cosmos: ಯಶಸ್ವಿಯಾಗಿ ರಾಕೆಟ್ ಉಡಾವಣೆ ಮಾಡಿದ ಸ್ಟಾರ್ಟ್ ಅಪ್ ಕಂಪನಿ ಅಗ್ನಿಕುಲ್ ಕಾಸ್ಮೋಸ್; ಮೋದಿ ಅಭಿನಂದನೆ

PM Modi
Lok Sabha Election 202448 mins ago

PM Modi: ಕನ್ಯಾಕುಮಾರಿಯಲ್ಲಿ ಪ್ರಧಾನಿ ಧ್ಯಾನ; ಪ್ರಧಾನಿ ಈ ಸ್ಥಳವನ್ನೇ ಆಯ್ಕೆ ಮಾಡಲು ಏನು ಕಾರಣ?

Love Case in vijayapura
ವಿಜಯಪುರ57 mins ago

Love Case : ಪ್ರೇಮಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಕೇಸ್‌; ಯುವತಿ ತಂದೆ ಅರೆಸ್ಟ್‌

Kantara Movie Mollywood actor enters
ಸಿನಿಮಾ1 hour ago

Kantara Movie: `ಕಾಂತಾರ ಚಾಪ್ಟರ್‌ 1‌’ ಸಿನಿಮಾಗೆ ಖ್ಯಾತ ಮಾಲಿವುಡ್‌ ನಟ ಎಂಟ್ರಿ!

Singapore Open
ಕ್ರೀಡೆ1 hour ago

Singapore Open: ದ್ವಿತೀಯ ಸುತ್ತಿಗೆ ಆಟ ಮುಗಿಸಿದ ಭಾರತದ ಪಿ.ವಿ.ಸಿಂಧು

prajwalrevanna case hassan protest
ಕ್ರೈಂ1 hour ago

Prajwal Revanna Case: ಪ್ರಜ್ವಲ್‌ ರೇವಣ್ಣ ಬಂಧಿಸಲು ಆಗ್ರಹಿಸಿ ಹಾಸನದಲ್ಲಿ ಬೃಹತ್‌ ಪ್ರತಿಭಟನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌