ಬೆಲೆ ಏರಿಕೆ ನಿಯಂತ್ರಿಸಲು ಗೋಧಿಯ ಬಳಿಕ ಸಕ್ಕರೆ ರಫ್ತಿಗೆ ಮಿತಿ ವಿಧಿಸಲು ಕೇಂದ್ರ ಸರಕಾರ ಚಿಂತನೆ - Vistara News

ಪ್ರಮುಖ ಸುದ್ದಿ

ಬೆಲೆ ಏರಿಕೆ ನಿಯಂತ್ರಿಸಲು ಗೋಧಿಯ ಬಳಿಕ ಸಕ್ಕರೆ ರಫ್ತಿಗೆ ಮಿತಿ ವಿಧಿಸಲು ಕೇಂದ್ರ ಸರಕಾರ ಚಿಂತನೆ

ಗೋಧಿಯ ಬಳಿಕ ಸಕ್ಕರೆಯ ರಫ್ತಿಗೆ ಮಿತಿ ವಿಧಿಸಲು ಕೇಂದ್ರ ಸರಕಾರ ಪರಿಶೀಲಿಸುತ್ತಿದ್ದು, ದರ ಏರಿಕೆ ನಿಯಂತ್ರಣ ಇದರ ಉದ್ದೇಶವಾಗಿದೆ.

VISTARANEWS.COM


on

Indian Government extends curbs on sugar export
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಬೆಲೆ ಏರಿಕೆಯನ್ನು ನಿಯಂತ್ರಿಸುವ ಸಲುವಾಗಿ ಗೋಧಿಯ ರಫ್ತಿಗೆ ಇತ್ತೀಚೆಗೆ ನಿರ್ಬಂಧಗಳನ್ನು ವಿಧಿಸಿದ್ದ ಕೇಂದ್ರ ಸರಕಾರ ಇದೀಗ ಸಕ್ಕರೆಯ ರಫ್ತಿಗೂ ಮಿತಿಯನ್ನು ವಿಧಿಸಲು ಉದ್ದೇಶಿಸಿದೆ.

ಕಳೆದ 6 ವರ್ಷಗಳಲ್ಲಿ ಮೊದಲ ಬಾರಿಗೆ ಸಕ್ಕರೆಯ ರಫ್ತಿಗೆ ಮಿತಿ ವಿಧಿಸಲು ಭಾರತ ಪರಿಶೀಲನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಭಾರತ ವಿಶ್ವದ ಅತಿ ದೊಡ್ಡ ಸಕ್ಕರೆ ಉತ್ಪಾದಕ ಹಾಗೂ ಎರಡನೇ ಅತಿ ದೊಡ್ಡ ರಫ್ತುದಾರ ರಾಷ್ಟ್ರವಾಗಿದೆ. ಈ ಸುದ್ದಿ ಹಿನ್ನೆಲೆಯಲ್ಲಿ ಸಕ್ಕರೆ ವಲಯದ ಷೇರುಗಳು ದಲಾಲ್‌ ಸ್ಟ್ರೀಟ್‌ನಲ್ಲಿ ಶೇ.5ರಷ್ಟು ದರ ಇಳಿಕೆ ದಾಖಲಿಸಿವೆ.
ಉಕ್ರೇನ್‌ ವಿರುದ್ಧ ರಷ್ಯಾ ಸಂಘರ್ಷ ತಾರಕಕ್ಕೇರಿದ ಬಳಿಕ ಜಗತ್ತಿನಾದ್ಯಂತ ಆಹಾರ ವಸ್ತುಗಳ ದರ ಏರಿಕೆಯಾಗಿದೆ. ಸರಕಾರಗಳು ದೇಶಿ ಮಾರುಕಟ್ಟೆಗಳಲ್ಲಿ ಆಹಾರ ವಸ್ತುಗಳ ಲಭ್ಯತೆ ಮತ್ತು ಪೂರೈಕೆಗೆ ಕೊರತೆಯಾಗದಂತೆ ನೋಡಿಕೊಳ್ಳುತ್ತಿವೆ. ಅದರ ಅನಿವಾರ್ಯತೆಯೂ ಉಂಟಾಗಿದೆ. ಮಲೇಷ್ಯಾ ಜೂನ್‌ 1ರಿಂದ ಕೋಳಿ ಮಾಂಸದ ರಫ್ತಿಗೆ ನಿರ್ಬಂಧ ವಿಧಿಸಿದೆ. ಇಂಡೊನೇಷ್ಯಾ ಇತ್ತೀಚೆಗೆ ತಾಳೆ ಎಣ್ಣೆ ರಫ್ತಿಗೆ ನಿಷೇಧ ವಿಧಿಸಿತ್ತು. ಸರ್ಬಿಯಾ, ಕಝಕಿಸ್ತಾನ ಇತ್ಯಾದಿ ರಾಷ್ಟ್ರಗಳು ಆಹಾರ ಧಾನ್ಯ ರಫ್ತಿಗೆ ನಿರ್ಬಂಧ ವಿಧಿಸಿವೆ.

ಭಾರತದಲ್ಲಿ ಮಾರ್ಚ್‌ ಅಂತ್ಯದ ವೇಳೆಗೆ ಬಿಸಿಗಾಳಿಗೆ ಗೋಧಿ ಬೆಳೆ ಹಾನಿಯಾಗಿತ್ತು. ಆದ್ದರಿಂದ ಭಾರತ ಭಾಗಶಃ ರಫ್ತು ನಿಷೇಧ ಜಾರಿಗೊಳಿಸಿತ್ತು. ಇಂಡೊನೇಷ್ಯಾ ಏ.28ರಂದು ತಾಳೆ ಎಣ್ಣೆ ರಫ್ತು ನಿಷೇಧವನ್ನು ತೆರವುಗೊಳಿಸಿತ್ತು. ಈ ನಡುವೆ ರಫ್ತಿಗೆ ನಿರ್ಬಂಧ ವಿಧಿಸಿರುವುದರಿಂದ ಗೋಧಿ ಬೆಳೆಗಾರರು ಅಸಮಾಧಾನಗೊಂಡಿದ್ದಾರೆ. ದೇಶಿ ಮಾರುಕಟ್ಟೆಯಲ್ಲಿ ಗೋಧಿಯ ದರ ಕುಸಿದಿರುವುದು ಇದಕ್ಕೆ ಕಾರಣ. ರಫ್ತು ಮೂಲಕ ಹೆಚ್ಚು ಆದಾಯ ಗಳಿಸುವ ದಾರಿ ಇದೀಗ ಕೈತಪ್ಪಿದೆ ಎಂಬುದು ಬೆಳೆಗಾರರ ವಾದ. ಆದರೆ ಆಹಾರ ಭದ್ರತೆ ಮತ್ತು ಬೆಲೆ ಏರಿಕೆ ನಿಯಂತ್ರಣಕ್ಕೆ ರಫ್ತು ಮೇಲೆ ಮಿತಿ ಅಗತ್ಯ ಎನ್ನುವುದು ಸರಕಾರದ ನಿಲುವು.

ಮತ್ತೊಂದು ಸುತ್ತಿನ ಸುಂಕ ಕಡಿತ
ಹಣದುಬ್ಬರವನ್ನು ನಿಯಂತ್ರಿಸುವ ಸಲುವಾಗಿ ಸರಕಾರ ಮತ್ತೊಂದು ಸತ್ತಿನಲ್ಲಿ ಆಮದು ಸುಂಕ ಕಡಿತವನ್ನು ಘೋಷಿಸುವ ನಿರೀಕ್ಷೆ ಇದೆ. ಕಳೆದ ವಾರ ಸರಕಾರ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿತ್ತು. ಇದೀಗ ಮತ್ತೊಂದು ಸುತ್ತಿನಲ್ಲಿ ಖಾದ್ಯ ತೈಲಗಳು ಮತ್ತು ಕೈಗಾರಿಕೆಗೆ ಅವಶ್ಯವಿರುವ ಕಚ್ಚಾ ವಸ್ತುಗಳ ಮೇಲಿನ ಆಮದು ಸುಂಕವನ್ನು ಕಡಿತಗೊಳಿಸುವ ಸಾಧ್ಯತೆ ಇದೆ. ಹಣಕಾಸು ಸಚಿವಾಲದ ಅಧಿಕಾರಿಗಳು ಪ್ರಧಾನಿಯವರ ಕಚೇರಿ ಜತೆಗೆ ಕಳೆದ ವಶರ ಬೆಲೆ ಏರಿಕೆ ನಿಯಂತ್ರಿಸುವ ಬಗ್ಗೆ ಚರ್ಚೆ ನಡೆಸಿದ್ದರು. ರಿಟೇಲ್‌ ಹಣದುಬ್ಬರ ಕಳೆದ ಏಪ್ರಿಲ್‌ನಲ್ಲಿ ಶೇ.7.79ಕ್ಕೆ ಏರಿದ್ದು, ಕಳೆದ 8 ವರ್ಷಗಳಲ್ಲಿಯೇ ಗರಿಷ್ಠ ಪ್ರಮಾಣವಾಗಿದೆ.

ಇದನ್ನೂ ಓದಿ: Wheat export ban: ಭಾರತದಿಂದ ಗೋಧಿ ರಫ್ತಿಗೆ ನಿಷೇಧ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

EXPLAINER

Train Accident: ‘ಕವಚ’ ಇಲ್ಲದಿರುವುದೇ ಬಂಗಾಳ ರೈಲು ಅಪಘಾತಕ್ಕೆ ಕಾರಣ; ಹಾಗಾದರೆ ಏನಿದು?

Train Accident: ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ಬಳಿ ಸೋಮವಾರ ಕಾಂಚನಜುಂಗಾ ಎಕ್ಸ್​ಪ್ರೆಸ್​ ರೈಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದ ಪರಿಣಾಮ 5 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೀಲ್ದಾಹ್‌ಗೆ ಹೋಗುವ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಈ ಮಾರ್ಗದಲ್ಲಿ ಕವಚ ಸುರಕ್ಷತಾ ವ್ಯವಸ್ಥೆ ಇಲ್ಲದಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

VISTARANEWS.COM


on

Train Accident
Koo

ಕೋಲ್ಕೊತಾ: ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ಬಳಿ ಸೋಮವಾರ ಕಾಂಚನಜುಂಗಾ ಎಕ್ಸ್​ಪ್ರೆಸ್​ (Kanchanjunga Express) ರೈಲಿಗೆ ಗೂಡ್ಸ್​ ರೈಲು ಡಿಕ್ಕಿಯಾಗಿ (Train Accident) 15 ಮಂದಿ ಮೃತಪಟ್ಟಿದ್ದಾರೆ. 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೀಲ್ದಾಹ್‌ಗೆ ಹೋಗುವ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಅದರಲ್ಲೂ, ಈ ಮಾರ್ಗದಲ್ಲಿ ರೈಲುಗಳ ಸುರಕ್ಷತೆಗಾಗಿ ಅಳವಡಿಸಿಕೊಳ್ಳಲಾಗಿರುವ ಕವಚ (Kavach) ಸುರಕ್ಷಾ ವ್ಯವಸ್ಥೆ ಇಲ್ಲದಿರುವುದೇ ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಹಾಗಾದರೆ, ಏನಿದು ಕವಚ ಸುರಕ್ಷಾ ವ್ಯವಸ್ಥೆ? ಇದು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದರ ಕಿರು ಮಾಹಿತಿ ಇಲ್ಲಿದೆ.

ಏನಿದು ಕವಚ?

ಆತ್ಮನಿರ್ಭರ ಭಾರತದ ಭಾಗವಾಗಿ 2022-23ರಲ್ಲಿ ರೈಲುಗಳ ಸುರಕ್ಷತೆ ಮತ್ತು ಸಾಮರ್ಥ್ಯ ಹೆಚ್ಚಳಕ್ಕಾಗಿ ಸುಮಾರು 2,000 ಕಿ.ಮೀ. ಮಾರ್ಗವನ್ನು ಕವಚ ಸುರಕ್ಷತಾ ವಿಧಾನದ ಅಡಿಯಲ್ಲಿ ತರಲಾಗುವುದು ಎಂದು ಸಚಿವಾಲಯ ಹೇಳಿತ್ತು. ಕವಚ ಎಂಬುದು ಸೇಫ್ಟಿ ಇಂಟೆಗ್ರಿಟಿ ಲೆವೆಲ್ 4 ಮಾನದಂಡಗಳಾಗಿವೆ. ಇದನ್ನು ಸಂಶೋಧನಾ ವಿನ್ಯಾಸ ಮತ್ತು ಗುಣಮಟ್ಟ ಸಂಸ್ಥೆ (ಆರ್​​ಡಿಎಸ್​​ಒ) ಅಭಿವೃದ್ಧಿಪಡಿಸಿದೆ. ಕವಚ​ ವ್ಯವಸ್ಥೆಯು ರೈಲುಗಳು ಕೆಂಪು ಸಿಗ್ನಲ್​ ದಾಟಿ ಮುಂದಕ್ಕೆ ಹೋಗುವುದನ್ನು ತಡೆಯುತ್ತದೆ. ಒಂದು ವೇಳೆ ದಾಟಿದರೆ ಸ್ವಯಂಚಾಲಿತ ಬ್ರೇಕಿಂಗ್ ವ್ಯವಸ್ಥೆ ಆ್ಯಕ್ವಿವೇಟ್​ ಆಗುತ್ತದೆ. ಹೀಗಾಗಿ ಎರಡು ರೈಲುಗಳ ನಡುವಿನ ಮುಖಾಮುಖಿ ಡಿಕ್ಕಿಯ ಸಂಭವ ಕಡಿಮೆ.

ಕವಚ ಕಾರ್ಯನಿರ್ವಹಿಸುವುದು ಹೇಗೆ?

ಯಾವುದೇ ತುರ್ತು ಸಂದರ್ಭದಲ್ಲಿ ರೈಲು ಅಪಘಾತ ತಡೆಯುವುದೇ ಕವಚದ ಉದ್ದೇಶವಾಗಿದೆ. ರೈಲು ಹಳಿಗಳು, ಸ್ಟೇಷನ್‌ ಯಾರ್ಡ್‌ ಹಾಗೂ ಸಿಗ್ನಲ್‌ಗಳಿಗೆ ಆರ್‌ಎಫ್‌ಐಡಿ (ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಶನ್)‌ ಟ್ಯಾಗ್‌ಗಳನ್ನು ಅಳವಡಿಸಲಾಗಿರುತ್ತದೆ. ಇದರಿಂದ ರೈಲುಗಳು ಎದುರು ಬದಿರಾಗಿ ಒಂದೇ ಹಳಿಯ ಮೇಲೆ ಚಲಿಸಿದರೂ ಎರಡೂ ಡಿಕ್ಕಿಯಾಗುವ ಮುನ್ನ ಸ್ವಯಂಚಾಲಿತವಾಗಿಯೇ ರೈಲುಗಳು ಬ್ರೇಕ್‌ ಹಾಕಿಕೊಳ್ಳುತ್ತವೆ. ಲೋಕೊ ಪೈಲಟ್‌ ಬ್ರೇಕ್‌ ಹಾಕುವುದನ್ನು ಮರೆತರೂ, ಸಿಗ್ನಲ್‌ನಿಂದಾಗಿಯೇ ಸ್ವಯಂಚಾಲಿತವಾಗಿ ಬ್ರೇಕ್‌ ಹಾಕಿಕೊಳ್ಳುತ್ತವೆ.

ಅಷ್ಟೇ ಅಲ್ಲ, ಒಂದು ರೈಲಿನ ಹಿಂದೆ ಮತ್ತೊಂದು ರೈಲು ಚಲಿಸುವಾಗ ಹಿಂದಿನ ರೈಲು ನಿಧಾನಗತಿಯಲ್ಲಿ ಸಾಗುವುದು, ರೈಲಿನ ಸಮೀಪ ಹೋದಾಗ ಬ್ರೇಕ್‌ ಹಾಕುವುದು, ಹವಾಮಾನ ವೈಪರೀತ್ಯದಿಂದ ಮಂದ ಬೆಳಕು ಇದ್ದಾಗ ಬ್ರೇಕ್‌ ಹಾಕುವುದು, ಗೇಟ್‌ಗಳು ಅಡ್ಡ ಬಂದಾಗ ಬ್ರೇಕ್‌ ಹಾಕುವುದು ಸೇರಿ ಯಾವುದೇ ತುರ್ತು ಸಂದರ್ಭದಲ್ಲಿ ಲೋಕೊಮೋಟಿವ್‌ ಪೈಲಟ್‌ ಬ್ರೇಕ್‌ ಹಾಕುವುದನ್ನು ಮರೆತರೂ, ಸ್ವಯಂಚಾಲಿತವಾಗಿ ಕವಚ ವ್ಯವಸ್ಥೆಯ ಅಡಿಯಲ್ಲಿ ಬ್ರೇಕ್‌ ಹಾಕಿಕೊಳ್ಳುತ್ತವೆ.

ದೇಶಾದ್ಯಂತ ವಿಸ್ತರಣೆ ಯಾವಾಗ?

ಕವಚ ಸುರಕ್ಷಾ ವಿಧಾನದ ಅಳವಡಿಕೆಯಿಂದ ರೈಲುಗಳ ಅಪಘಾತವು ಗಣನೀಯವಾಗಿ ಕುಸಿದಿದೆ. ಆದರೆ, ಇದುವರೆಗೆ 1,500 ಕಿಲೋಮೀಟರ್‌ ರೈಲು ಮಾರ್ಗಕ್ಕೆ ಮಾತ್ರ ಕವಚ ಅಳವಡಿಸಲಾಗಿದೆ. ಆರಂಭಿಕ ಹಂತದಲ್ಲಿ 2 ಸಾವಿರ ಕಿಲೋಮೀಟರ್‌ ಹಾಗೂ ಹಂತ ಹಂತವಾಗಿ 34 ಸಾವಿರ ಕಿಲೋಮೀಟರ್‌ ಉದ್ದದ ರೈಲು ಮಾರ್ಗಕ್ಕೆ ಕವಚ ಅಳವಡಿಸುವುದು ಕೇಂದ್ರ ಸರ್ಕಾರದ ಗುರಿಯಾಗಿದೆ. ಭಾರತೀಯ ರೈಲ್ವೆಯು ಸುಮಾರು 1 ಲಕ್ಷ ಕಿಲೋಮೀಟರ್‌ ಮಾರ್ಗವನ್ನು ಹೊಂದಿರುವ ಕಾರಣ ಎಲ್ಲ ಮಾರ್ಗಗಳಲ್ಲೂ ಕವಚ ಅಳವಡಿಸಲು ಸಮಯ ಬೇಕಾಗುತ್ತದೆ.

ಇದನ್ನೂ ಓದಿ: Train Accident: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್​ ರೈಲು ಡಿಕ್ಕಿ; ಕನಿಷ್ಠ 15 ಮಂದಿ ಸಾವು

Continue Reading

ಪ್ರಮುಖ ಸುದ್ದಿ

Death News: “ಕಾಂಗ್ರೆಸ್‌ ಶವಯಾತ್ರೆ….” ಭಾಷಣ ಮುಗಿಸಿ ಬಿಜೆಪಿ ನಾಯಕ ಭಾನುಪ್ರಕಾಶ್ ಸ್ಥಳದಲ್ಲೇ ನಿಧನ

Death News: ಶಿವಮೊಗ್ಗದ ಗೋಪಿ ಸರ್ಕಲ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್‌, ಭಾಷಣ ಮುಗಿಸಿದ ಕೂಡಲೇ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದರು.

VISTARANEWS.COM


on

death news bhanuprakash petrol diesel price hike
Koo

ಶಿವಮೊಗ್ಗ: ಪೆಟ್ರೋಲ್- ಡಿಸೇಲ್ ಬೆಲೆ ಏರಿಕೆ (Petrol Diesel Price hike) ಪ್ರತಿಭಟಿಸಿ ಬಿಜೆಪಿ (BJP protest) ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗಿಯಾದ ಬಿಜೆಪಿ ನಾಯಕ, ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಬಿ ಭಾನುಪ್ರಕಾಶ್‌ (MB Bhanuprakash) ಅವರು ಭಾಷಣ ಮುಗಿಸಿದ ತಕ್ಷಣವೇ ಹೃದಯಾಘಾತಕ್ಕೊಳಗಾಗಿ (Heart Attack) ಮೃತಪಟ್ಟಿದ್ದಾರೆ (Death News).

ಬಿಜೆಪಿ ಪ್ರತಿಭಟನೆಯಲ್ಲಿ ಅವರು ʼಕಾಂಗ್ರೆಸ್‌ನ ಶವಯಾತ್ರೆ ಮಾಡಬೇಕುʼ ಎಂದು ನೀಡಿದ ಭಾಷಣ ಇದೀಗ ವೈರಲ್‌ (Viral speech) ಆಗುತ್ತಿದೆ. ಶಿವಮೊಗ್ಗದ ಗೋಪಿ ಸರ್ಕಲ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್‌, ಭಾಷಣ ಮುಗಿಸಿದ ಕೂಡಲೇ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದರು. ಕೂಡಲೇ ಅವರನ್ನು ಶಿವಮೊಗ್ಗದ ಮ್ಯಾಕ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಭಾನುಪ್ರಕಾಶ್‌ ಅವರು ಕೊನೆಯುಸಿರು ಎಳೆದರು.

“ಕಾಂಗ್ರೆಸ್ ಶವಯಾತ್ರೆ ಮಾಡಲು ನೀವು ಇಲ್ಲಿಗೆ ಬರಬೇಕು ಎಂದು ಹೇಳಿದರು. ಯಾವಾಗ, ಎಷ್ಟು ಹೊತ್ತಿಗೆ, ಯಾಕೆ ಡಾಕ್ಟರ್ ಬಳಿ ತೋರಿಸಿಲ್ಲವೆ, ಸಂಬಂಧಿಕರಿಗೆ ತಿಳಿಸಿದ್ದೀರಾ ಎಂದು ಕೇಳಿದೆ. ಶವಯಾತ್ರೆಗೆ ಕಾಂಗ್ರೆಸ್ ಪರವಾಗಿ ಸಿದ್ದು, ಡಿಕೆಶಿ ಬರುತ್ತಾರೆ ಎಂದರು. ಸರ್ಕಾರ ಆರಿಸಿ ಬರಲಿಕ್ಕೆ ಬೇಕಾಗಿ ಭರವಸೆ ಕೊಡುವ ಗ್ಯಾರಂಟಿ ನೀಡಿದರು. ಅದನ್ನು ನಾವು ಸ್ವಾಗತಿಸಿದ್ದೇವೆ. ಅದನ್ನು ಮಾಡಬಾರದು ಎಂದಿದ್ದರೆ ನಾವು ಬಡವರ ವಿರೋಧಿಗಳಾಗುತ್ತಿದ್ದೆವು. ನಾವು ಬಡವರ ಪರ, ನಾವೆಲ್ಲ ದೀನ ದಲಿತರ ಪರವಾಗಿಯೆ ಇದ್ದೆವು. ಆದರೆ ಬರೀ ಬಾಯಿಮಾತಿನಲ್ಲಿ ಹೇಳದೆ ನಾವು ಅದನ್ನು ಮಾಡುತ್ತಾ ಬಂದಿದ್ದೇವೆ” ಎಂದು ಭಾನುಪ್ರಕಾಶ್‌ ಭಾಷಣದಲ್ಲಿ ಹೇಳಿದ್ದರು.

“ಕಾಂಗ್ರೆಸ್‌ ಸರಕಾರ ತುಘ್ಲಕ್‌ ಸರಕಾರದಂತಾಗಿದೆ. ಸಾವಿರಾರು ಜನ ಸತ್ತರೂ ಆತ ತಲೆ ಕೆಡಿಸಿಕೊಳ್ಳುತ್ತಿರಲಿಲ್ಲ. ಬೆಲೆ ಏರಿಕೆ, ಹಿಂದೂಗಳ ದಮನ ಆಗುತ್ತಿದ್ದರೂ ಕಾಂಗ್ರೆಸ್‌ ಸರಕಾರ ತಲೆ ಕೆಡಿಸಿಕೊಳ್ಳುತ್ತಿಲ್ಲ. ಇಂಧನ ಬೆಲೆ‌ ಹೆಚ್ಚುತ್ತಾ ಹೋದಂತೆ ಎಲ್ಲ ವಸ್ತುಗಳ ಬೆಲೆ ಹೆಚ್ಚುತ್ತಾ ಹೋಗುತ್ತದೆ. ಸರಕಾರದಲ್ಲಿನ ವ್ಯಕ್ತಿಗಳ ಬೆಲೆ, ಯೋಗ್ಯತೆ ಇಳಿಯುತ್ತದೆ. ನಾವು ಪ್ರತಿಭಟನೆ ಮೂಲಕ ಕಾಂಗ್ರೆಸ್‌ಗೆ ಕೊನೆಯ ಮೊಳೆ ಹೊಡೆಯುವ ಎಚ್ಚರಿಕೆ ನೀಡುತ್ತಿದ್ದೇನೆ. ಇವತ್ತು ನಡೆದಿರುವುದು ಸಾಂಕೇತಿಕ ಪ್ರತಿಭಟನೆ ಮಾತ್ರ. ನಿಮ್ಮ ಭ್ರಷ್ಟ ಆಡಳಿತ ತೊಲಗಿಸುವ ತನಕ ನಾವು ವಿಶ್ರಮಿಸುವುದಿಲ್ಲ” ಎಂದು ಭಾನುಪ್ರಕಾಶ್‌ ಭಾಷಣ ಮುಗಿಸಿದರು.

ತದನಂತರ ಅವರು ಅಸ್ವಸ್ಥರಾದರು. ಕೂಡಲೇ ಆಸ್ಪತ್ರೆಗೆ ಅವರನ್ನು ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟರು. ಭಾನುಪ್ರಕಾಶ್ ಅವರ ಮೃತದೇಹವನ್ನು ಶಿವಮೊಗ್ಗ ತಾಲೂಕಿನ ಮತ್ತೂರು ಗ್ರಾಮದ ಸ್ವಗೃಹಕ್ಕೆ ಕೊಂಡೊಯ್ಯಲಾಗಿದೆ.

ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಏರಿಸಿದ (Petrol Diesel Price Hike) ರಾಜ್ಯ ಸರಕಾರದ (Karnataka Govt) ಕ್ರಮವನ್ನು ಖಂಡಿಸಿದ ಪ್ರತಿಪಕ್ಷ ಬಿಜೆಪಿ (BJP protest) ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ (Freedom park) ಬಿಜೆಪಿಯ ರಾಜ್ಯ ಪದಾಧಿಕಾರಿಗಳು ಹಾಗೂ ಇತರ ನಾಯಕರು ಪ್ರತಿಭಟಿಸಿ ಭಾಷಣ ಮಾಡಿದರು. ಪ್ರತಿಭಟನೆ ಮಾಡಿ ಸಿಎಂ ಸಿದ್ದರಾಮ‌ಯ್ಯ (CM Siddarmaiah) ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಆರ್.‌ ಅಶೋಕ್‌ (R Ashok) ಸೇರಿದಂತೆ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿದರು.

ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಬಳಿಕ ಎತ್ತಿನಗಾಡಿ ಮೂಲಕ ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಗೆ ಮುತ್ತಿಗೆ ಹಾಕಲು ಹೊರಟ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ. ಅಶೋಕ್ ಮತ್ತು ಇತರ ಕಾರ್ಯಕರ್ತರನ್ನು ಪೊಲೀಸರು ತಡೆದರು. ʼʼಪೆಟ್ರೋಲ್ ರೇಟ್‌ ಹೆಚ್ಚಾಗಿದೆ. ಬಸ್‌ವರೆಗೂ ಎತ್ತಿನಗಾಡಿ ಬಿಡಿ” ಎಂದು ಅಶೋಕ್ ಆಗ್ರಹಿಸಿದರು. ಪೊಲೀಸರು ಮತ್ತು ಅಶೋಕ್ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಬಸ್‌ವರೆಗೂ ಎತ್ತಿನ ಗಾಡಿ ಬಿಟ್ಟು ನಂತರ ಅವರನ್ನು ಬಂಧಿಸಿದ ಪೊಲೀಸರು, ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಕರೆದೊಯ್ದರು.

ವಿಭಿನ್ನ ರೀತಿಯ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಚಟ್ಟ ಕಟ್ಟಿ ರಾಜ್ಯ ಸರ್ಕಾರದ ಹೆಣದ ಮೆರವಣಿಗೆ ಮಾಡಿದರು. ʼಐದು ಗ್ಯಾರಂಟಿಗಳ ಗೋವಿಂದ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗೋವಿಂದʼ ಎಂದು ಚಟ್ಟ ಹಿಡಿದು ಮೆರವಣಿಗೆ ಮಾಡಿದರು.

ಇದನ್ನೂ ಓದಿ: Petrol Diesel Price Hike: ಬಿಜೆಪಿಯವರು ಪ್ರತಿಭಟನೆ ಮಾಡಬೇಕಿರೋದು ಕೇಂದ್ರದ ವಿರುದ್ಧ: ಸಿಎಂ ತಿರುಗೇಟು

Continue Reading

ದೇಶ

Kisan Samman Nidhi: ರೈತರಿಗೆ ಗುಡ್‌ನ್ಯೂಸ್‌; ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ನಾಳೆ ನಿಮ್ಮ ಅಕೌಂಟ್‌ಗೆ; ಹೀಗೆ ಪರಿಶೀಲಿಸಿ

Kisan Samman Nidhi: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ 17ನೇ ಕಂತಿನ ಹಣ ನಾಳೆ (ಜೂನ್‌ 18) ಬಿಡುಗಡೆಯಾಗಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಳೆ ವಾರಣಾಸಿಗೆ ಭೇಟಿ ನೀಡಲಿದ್ದು, ಈ ವೇಳೆ ಸುಮಾರು 9.3 ಕೋಟಿ ರೈತರ ಖಾತೆಗಳಿಗೆ 20,000 ರೂ. ಬಿಡುಗಡೆ ಮಾಡಲಿದ್ದಾರೆ. ಫೆಬ್ರವರಿ 28ರಂದು ಫಲಾನುಭವಿ ಕೃಷಿಕರ ಖಾತೆಗೆ ಕಿಸಾನ್‌ ಸಮ್ಮಾನ್‌ ಯೋಜನೆಯ 16ನೇ ಕಂತು ಬಿಡುಗಡೆ ಮಾಡಲಾಗಿತ್ತು.

VISTARANEWS.COM


on

Kisan Samman Nidhi
Koo

ನವದೆಹಲಿ: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ (PM Kisan Samman Nidhi Yojana)ಯ 17ನೇ ಕಂತಿನ ಹಣ ನಾಳೆ (ಜೂನ್‌ 18) ಬಿಡುಗಡೆಯಾಗಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ನಾಳೆ ವಾರಣಾಸಿಗೆ ಭೇಟಿ ನೀಡಲಿದ್ದು, ಈ ವೇಳೆ ಸುಮಾರು 9.3 ಕೋಟಿ ರೈತರ ಖಾತೆಗಳಿಗೆ 20,000 ರೂ. ಬಿಡುಗಡೆ ಮಾಡಲಿದ್ದಾರೆ. ಕೇಂದ್ರ ಸರ್ಕಾರ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯನ್ನು 2೦19ರಲ್ಲಿ ಜಾರಿಗೆ ತಂದಿದೆ (Kisan Samman Nidhi).

3 ಕಂತುಗಳಲ್ಲಿ ಪಾವತಿ

ಪಿಎಂ-ಕಿಸಾನ್ ಸಮ್ಮಾನ್‌ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಇ-ಕೆವೈಸಿ ಕಡ್ಡಾಯ

ಕಿಸಾನ್‌ ಸಮ್ಮಾನ್‌ ನಿಧಿಯ ಕಂತನ್ನು ಪಡೆಯಲು ಫಲಾನುಭವಿ ರೈತರು ಇ-ಕೆವೈಸಿ ಪೂರ್ಣಗೊಳಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಇ-ಕೆವೈಸಿ ಮಾಡದ ರೈತರಿಗೆ ಖಾತೆಗೆ ಹಣ ಬಿಡುಗಡೆಯಾಗುವುದಿಲ್ಲ. ಒಟಿಪಿ ಆಧಾರಿತ ಇ-ಕೆವೈಸಿಯನ್ನು ಆನ್‌ಲೈನ್‌ ಮತ್ತು ಆಫ್‌ಲೈನ್‌ ಮೂಲಕ ಮಾಡಬಹುದು.

ಹೀಗೆ ಚೆಕ್‌ ಮಾಡಿ

ನೀವು ಈ ಯೋಜನೆಯ ಫಲಾನುಭವಿಯಾಗಿದ್ದರೆ, ಹಣ ನಿಮ್ಮ ಖಾತೆಗೆ ಜಮೆ ಆಗಿದೆಯೇ ಎನ್ನುವುದನ್ನು ಆನ್‌ಲೈನ್‌ ಮೂಲಕ ನಿಮಗೇ ಪರಿಶೀಲಿಸಲು ಸಾಧ್ಯವಿದೆ. ಅದಕ್ಕಾಗಿ ಮಾಡಬೇಕಾದುದು ಇಷ್ಟೆ.

  • ಅಧಿಕೃತ ವೆಬ್‌ಸೈಟ್‌ pmkisan.gov.in ಭೇಟಿ ನೀಡಿ
  • ಆಗ ಓಪನ್‌ ಆಗುವ ಪೇಜ್‌ನ ಬಲ ಬದಿಯಲ್ಲಿರುವ ‘Know Your Status’ ಆಯ್ಕೆ ಮೇಲೆ ಕ್ಲಿಕ್‌ ಮಾಡಿ
  • ರಿಜಿಸ್ಟ್ರೇಷನ್‌ ನಂಬರ್‌ ನಮೂದಿಸಿ, ಕ್ಯಾಪ್ಚ ಕೋಡ್‌ ಭರ್ತಿ ಮಾಡಿ ‘Get Data’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ
  • ಈಗ ಫಲಾನುಭವಿಯ ವಿವರ, ಹಣ ಜಮೆಯಾದ ಮಾಹಿತಿ ಸ್ಕ್ರೀನ್‌ ಮೇಲೆ ಮೂಡುತ್ತದೆ.

ಹೆಸರು ನೋಂದಾಯಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ pmkisan.gov.in ಭೇಟಿ ನೀಡಿ
  •  ‘New Farmer Registration’ ಆಯ್ಕೆ ಮೇಲೆ ಕಲಿಕ್‌ ಮಾಡಿ ಮತ್ತು ಆಧಾರ್‌ ಕಾರ್ಡ್‌ ನಂಬರ್‌ ನಮೂದಿಸಿ ಕ್ಯಾಪ್ಚ ಕೋಡ್‌ ಭರ್ತಿ ಮಾಡಿ
  • ಅಗತ್ಯ ಮಾಹಿತಿ ತುಂಬಿ ‘Yes’ ಬಟನ್‌ ಕ್ಲಿಕ್‌ ಮಾಡಿ
  • ಅರ್ಜಿ ಫಾರಂ ತುಂಬಿ, ಸೇವ್‌ ಮಾಡಿ ಭವಿಷ್ಯದ ಅಗತ್ಯಗಳಿಗಾಗಿ ಪ್ರಿಂಟ್‌ ಔಟ್‌ ತೆಗೆದಿಡಿ.

ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ www.pmkisan.gov.inಗೆ ಭೇಟಿ ನೀಡಿ
  • ಆಗ ತೆರೆದುಕೊಳ್ಳುವ ಪುಟದಲ್ಲಿನ ‘Beneficiary list’ ಆಯ್ಕೆಯ ಮೇಲೆ ಕ್ಲಿಕ್‌ ಮಾಡಿ
  • ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್‌ ಮತ್ತು ಗ್ರಾಮವನ್ನು ಆಯ್ಕೆ ಮಾಡಿ
  • ‘Get report’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌ 155261 ಮತ್ತು 011-24300606 ಅನ್ನು ಸಂಪರ್ಕಿಸಿ.

ಇದನ್ನೂ ಓದಿ: Real Estate: ಹಲವರಿಗೆ ಮನೆ ಇಲ್ಲ, ಇದ್ದವರು ಬಳಸುತ್ತಿಲ್ಲ! ದೇಶದಲ್ಲಿ 1 ಕೋಟಿಗೂ ಹೆಚ್ಚು ಫ್ಲ್ಯಾಟ್ ಗಳು ಖಾಲಿ ಬಿದ್ದಿವೆ!

Continue Reading

ಪ್ರಮುಖ ಸುದ್ದಿ

Petrol Diesel Price Hike: ಪೆಟ್ರೋಲ್‌ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವ್ಯಾಪಕ ಪ್ರತಿಭಟನೆ; ಎತ್ತಿನಗಾಡಿ, ಹೆಣ ಮೆರವಣಿಗೆ

Petrol Diesel Price Hike: ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಬಳಿಕ ಎತ್ತಿನಗಾಡಿ ಮೂಲಕ ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಗೆ ಮುತ್ತಿಗೆ ಹಾಕಲು ಹೊರಟ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ. ಅಶೋಕ್ ಮತ್ತು ಇತರ ಕಾರ್ಯಕರ್ತರನ್ನು ಪೊಲೀಸರು ತಡೆದರು.

VISTARANEWS.COM


on

petrol diesel price hike bjp protest
Koo

ಬೆಂಗಳೂರು: ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಏರಿಸಿದ (Petrol Diesel Price Hike) ರಾಜ್ಯ ಸರಕಾರದ (Karnataka Govt) ಕ್ರಮವನ್ನು ಖಂಡಿಸಿದ ಪ್ರತಿಪಕ್ಷ ಬಿಜೆಪಿ (BJP protest) ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ (Freedom park) ಬಿಜೆಪಿಯ ರಾಜ್ಯ ಪದಾಧಿಕಾರಿಗಳು ಹಾಗೂ ಇತರ ನಾಯಕರು ಪ್ರತಿಭಟಿಸಿ ಭಾಷಣ ಮಾಡಿದರು. ಪ್ರತಿಭಟನೆ ಮಾಡಿ ಸಿಎಂ ಸಿದ್ದರಾಮ‌ಯ್ಯ (CM Siddarmaiah) ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಆರ್.‌ ಅಶೋಕ್‌ (R Ashok) ಸೇರಿದಂತೆ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿದರು.

ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಬಳಿಕ ಎತ್ತಿನಗಾಡಿ ಮೂಲಕ ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಗೆ ಮುತ್ತಿಗೆ ಹಾಕಲು ಹೊರಟ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ. ಅಶೋಕ್ ಮತ್ತು ಇತರ ಕಾರ್ಯಕರ್ತರನ್ನು ಪೊಲೀಸರು ತಡೆದರು. ʼʼಪೆಟ್ರೋಲ್ ರೇಟ್‌ ಹೆಚ್ಚಾಗಿದೆ. ಬಸ್‌ವರೆಗೂ ಎತ್ತಿನಗಾಡಿ ಬಿಡಿ” ಎಂದು ಅಶೋಕ್ ಆಗ್ರಹಿಸಿದರು. ಪೊಲೀಸರು ಮತ್ತು ಅಶೋಕ್ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಬಸ್‌ವರೆಗೂ ಎತ್ತಿನ ಗಾಡಿ ಬಿಟ್ಟು ನಂತರ ಅವರನ್ನು ಬಂಧಿಸಿದ ಪೊಲೀಸರು, ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಕರೆದೊಯ್ದರು.

ವಿಭಿನ್ನ ರೀತಿಯ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಚಟ್ಟ ಕಟ್ಟಿ ರಾಜ್ಯ ಸರ್ಕಾರದ ಹೆಣದ ಮೆರವಣಿಗೆ ಮಾಡಿದರು. ʼಐದು ಗ್ಯಾರಂಟಿಗಳ ಗೋವಿಂದ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗೋವಿಂದʼ ಎಂದು ಚಟ್ಟ ಹಿಡಿದು ಮೆರವಣಿಗೆ ಮಾಡಿದರು.

ಢೋಂಗಿ ಮುಖ್ಯಮಂತ್ರಿ ಸಿದ್ದರಾಮಯ್ಯ: ಆರ್.‌ ಅಶೋಕ್

“ಸಿದ್ದರಾಮಯ್ಯ ಅವರಿಗೆ ಎರಡು ನಾಲಿಗೆ.‌ ಅಂದು ಒಂದು ರೂಪಾಯಿ ಪೆಟ್ರೋಲ್ ಬೆಲೆ ಏರಿಸಿದ್ದಕ್ಕೆ, ನಿಮಗೆ ಮಾನ ಮರ್ಯಾದೆ ಇದೆಯಾ ಅಂತ ಸಿದ್ದರಾಮಯ್ಯ ಹೇಳಿದ್ರು. ಸಿದ್ದರಾಮಯ್ಯ ಈಗ ಮೂರುವರೆ ರೂಪಾಯಿ ಏರಿಸಿದ್ದೀರಿ, ನಿಮಗೆ ಮಾನಮರ್ಯಾದೆ ಇದೆಯಾ?” ಎಂದು ಅಶೋಕ್‌ ಹರಿಹಾಯ್ದರು.

“ಮೊನ್ನೆ ಒಂದು ವಿಕೆಟ್ ಬಿದ್ದಿದೆ. 187 ಕೋಟಿ ಹಣ ನುಂಗಿ, ನಾಗೇಂದ್ರ ಔಟ್ ಆಗಿದ್ದಾನೆ. ನೆಕ್ಸ್ಟ್ ವಿಕೆಟ್ ಸಿದ್ದರಾಮಯ್ಯ. ನಾಗೇಂದ್ರ ಪಾಪದವನು, ಜೇನು ಕಿತ್ತ ಅಷ್ಟೇ. ನಾಗೇಂದ್ರ ಪಾಲು ಬರೀ 20%, 80% ಸಿದ್ದರಾಮಯ್ಯ ಪಾಲಾಗಿದೆ. ನಿಗಮದ ದಲಿತರ ಹಣ, ಬಾರ್‌ಗೆ ಹೋಗಿದೆ. ತರಕಾರಿ ಅಂಗಡಿಗೆ ಕೊಡಬೇಕಾದ್ದು, ವೈನ್ ಸ್ಟೋರಿಗೆ ಹೋಯ್ತು. ಅಮಾಯಕ ಅಧಿಕಾರಿ ಒಬ್ಬ ಸತ್ತೋದ. ನಿಷ್ಠಾವಂತ ಅಧಿಕಾರಿಗಳಿಗೆ ಇಲ್ಲಿ ಭದ್ರತೆ ಇಲ್ಲ. ಪೆಟ್ರೋಲ್ ಬೆಲೆ ಹೆಚ್ಚಾದ್ರೆ ಸೆಮೆಂಟ್ ಬೆಲೆ ಹೆಚ್ಚಾಗುತ್ತೆ ಅಂದ್ರು. ಮೂರುವರೆ ರೂಪಾಯಿ ಹೆಚ್ಚು ಮಾಡಿದ್ರಿ, ಈಗ ಏನು ಬೆಲೆ ಹೆಚ್ಚಾಗುತ್ತೆ ಹೇಳಿ?” ಎಂದು ಅಶೋಕ್‌ ಆಕ್ಷೇಪಿಸಿದರು.

“ಪೆಟ್ರೋಲ್ ಬೆಲೆ ಹೆಚ್ಚು ಮಾಡಿದ್ದಾರೆ. ನಾಳೆ ಇಂದ ಕಾಫಿ ಕುಡಿಯಲು ಹೋದ್ರೆ ಬೆಲೆ ಹೆಚ್ಚಾಗಿರುತ್ತೆ. ಈ ಸರ್ಕಾರ ಎಣ್ಣೇನು ನಮ್ಮದು, ಬಾರು ನಮ್ದು, ಚೇರು ನಮ್ಮದು,‌ ದುಡ್ಡು ಮಾತ್ರ ನಿಮ್ಮದು ಅಂತ ಬರ್ತಾರೆ. ಟೀಚರ್‌ಗಳಿಗೆ ಒಂದು ವರ್ಷದಿಂದ ಸಂಬಳ‌ ಕೊಟ್ಟಿಲ್ಲ. ಪಾಟ್ ಹೋಲ್ ಬಗ್ಗೆ ನಮಗೆ ಹೇಳಿದ್ರು, ಈಗ ಎಲ್ಲಿ ನೋಡಿದ್ರೂ ಗುಂಡಿ ಇದೆ. ಡಿಕೆ‌ ಶಿವಕುಮಾರ್ ಅವರೇ ಬ್ರಾಂಡ್ ಬೆಂಗಳೂರು ಅಂದ್ರಿ, ಬರೀ ಗುಂಡಿ ಬೆಂಗಳೂರು ಆಗಿದೆ. ನೀರು ಕುಡಿದು ಆರು ಜನ ಸತ್ತಿದ್ದಾರೆ. ಕಿಡ್ನಿ ಸರಿ ಇಲ್ಲ ಅಂತ ಹೇಳಿದ್ದಾರೆ. ಶಾಲೆ ಆರಂಭವಾಗಿ ಇಷ್ಟು ದಿನ ಆದ್ರೂ ಪಠ್ಯ ಪುಸ್ತಕ ಕೊಟ್ಟಿಲ್ಲ. ಕಳ್ಳ ಕಾಂಗ್ರೆಸ್‌ನವರು, ದರೋಡೆಕೋರರು. ಆಲಿಬಾಬ ಮತ್ತು 40 ಕಳ್ಳರ ಥರ ಈ ಕಾಂಗ್ರೆಸ್ ಸರ್ಕಾರ” ಎಂದು ಟೀಕಿಸಿದರು.

ಮುಂದಿನ ವಾರ ರಸ್ತೆ ತಡೆ: ವಿಜಯೇಂದ್ರ

“ಜನವಿರೋಧಿ ಸರ್ಕಾರ, ರಾಜ್ಯದಲ್ಲಿರೋ ಜನವಿರೋಧಿ ಸಿಎಂ ವಿರುದ್ಧ ಬಿಜೆಪಿ ಪ್ರತಿಭಟನೆ ಕೈಗೆತ್ತಿಕೊಂಡಿದೆ. ಬೆಂಗಳೂರು ಮಹಾನಗರದಲ್ಲಿ ಮತ್ತು ರಾಜ್ಯದಲ್ಲಿ ಬಿಜೆಪಿ ಜನವಿರೋಧಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾಗಿದೆ. ರಾಜ್ಯ ಸರ್ಕಾರದ ಆತುರದ ನಿರ್ಧಾರ, ಅವಿವೇಕದ ನಿರ್ಧಾರ ವಿರೋಧಿಸಿ ಹೋರಾಟ ತೆಗೆದುಕೊಂಡಿದೆ. ಏಕಾಏಕಿ ಪೆಟ್ರೋಲ್, ಡೀಸೆಲ್ ತೆರಿಗೆ ಹೆಚ್ಚಳ ಆಗಿದೆ. ಲೋಕಸಭಾ ಚುನಾವಣೆ ಮೊದಲು, ಕಾಂಗ್ರೆಸ್ ಪಕ್ಷದ ಶಾಸಕರು ಹೇಳಿಕೆ ನೀಡಿದ್ರು. ಲೋಕಸಭಾ ಚುನಾವಣೆ ಸಂಧರ್ಭದಲ್ಲಿ ಕಾಂಗ್ರೆಸ್ ಪಕ್ಷ 18-20 ಸ್ಥಾನ ಗೆಲ್ಲದಿದ್ರೆ ಗ್ಯಾರಂಟಿ ನಿಲ್ಲಿಸೋದಾಗಿ ಹೇಳಿದ್ರು. ಲೋಕಸಭಾ ಚುನಾವಣೆ ಆಯ್ತು. 18-20 ಸ್ಥಾನ ಗೆಲ್ಲುವ ನಿರೀಕ್ಷೆ ಇದ್ದ ಸಿಎಂ, ಡಿಸಿಎಂಗೆ ಮುಖಭಂಗ ಆಯ್ತು. ಗ್ಯಾರಂಟಿ ನಿಲ್ಲಿಸಿದ್ರೆ ಜನ ದಂಗೆ ಏಳ್ತಾರೆ ಅಂತ ಗೊತ್ತಾಯಿತು. ಹಾಗೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ರು” ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕಿಸಿದರು.

ವಿಪಕ್ಷ ನಾಯಕರಾಗಿದ್ದಾಗ ಸಿದ್ದರಾಮಯ್ಯ ಅವರಿಗಿದ್ದ ಜನಪರ ಕಾಳಜಿ, ಸಿಎಂ‌ ಆದ ಮೇಲೆ ಎಲ್ಲಿ ಹೋಯ್ತು? ನೀವು ಅಧಿಕಾರಕ್ಕೆ ಬಂದ ಮೇಲೆ ಒಂದೇ ಒಂದು ರೂಪಾಯಿ ಅಭಿವೃದ್ಧಿ ಕಾರ್ಯ ಆಗಿಲ್ಲ. ಬೊಮ್ಮಾಯಿ ಅವರು ಸಿಎಂ ಸ್ಥಾನದಿಂದ ಕೆಳಗೆ ಇಳಿಯುವಾಗ ರೆವಿನ್ಯೂ ಪ್ಲಸ್ ಇತ್ತು. ಕಾಂಗ್ರೆಸ್ ಬಂದ ಒಂದೇ ವರ್ಷದಲ್ಲಿ ದಿವಾಳಿ ಅಂಚಿಗೆ ಬಂದಿದೆ. ನಿಮ್ಮನ್ನು ಅಧಿಕಾರದಿಂದ ಕೆಳಗಿಳಿಸೋ ತಾಕತ್ತು ರಾಜ್ಯದ ಜನರಿಗಿದೆ. ನಮ್ಮ‌ ಪಕ್ಷದ‌ ಮುಖಂಡರು, ಕಾರ್ಯಕರ್ತರು ಕುಳಿತು ತೀರ್ಮಾನ ಮಾಡಿದ್ದೇವೆ. ಮುಂದಿನ ಗುರುವಾರ ರಾಜ್ಯಾದ್ಯಂತ ರಸ್ತೆ ತಡೆ ನಡೆಸಲಿದ್ದೇವೆ. ಜೆಡಿಎಸ್‌, ವ್ಯಾಪಾರಸ್ಥರು, ಸಂಘಟನೆಗಳ ಬೆಂಬಲ ಪಡೆಯಲಿದ್ದೇವೆ. ರಾಜ್ಯದ ಜನರು ಇವರಿಗೆ ತಕ್ಕ ಪಾಠ ಕಲಿಸಬೇಲಿದೆ” ಎಂದು ಅವರು ಆಕ್ರೋಶಿಸಿದರು.

ಮಂಗಳೂರು, ಉಡುಪಿ, ಹುಬ್ಬಳ್ಳಿ, ಬೆಳಗಾವಿ, ಮೈಸೂರು ಸೇರಿದಂತೆ ಎಲ್ಲ ಪ್ರಮುಖ ನಗರಗಳಲ್ಲಿಯೂ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಸೇರಿ ತೈಲ ಬೆಲೆ ಏರಿಕೆಯನ್ನು ವಿರೋಧಿಸಿ ಪ್ರತಿಭಟಿಸಿದರು. ಹಲವು ಕಡೆ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದರು.

ಇದನ್ನೂ ಓದಿ: Water Price Hike : ತೈಲ ದರ ಬಳಿಕ ಕುಡಿಯುವ ನೀರು ದುಬಾರಿ! ನೀರಿನ ದರ ಏರಿಕೆಗೆ ಜಲಮಂಡಳಿ ಪ್ರಸ್ತಾವನೆ!

Continue Reading
Advertisement
Team India
ಕ್ರೀಡೆ14 mins ago

Team India: ಬಾರ್ಬಡೋಸ್​ನಲ್ಲಿ ಬೀಚ್​ ವಾಲಿಬಾಲ್​ ಆಡಿದ ಟೀಮ್​ ಇಂಡಿಯಾ; ವಿಡಿಯೊ ವೈರಲ್​

Self harming
ಕರ್ನಾಟಕ17 mins ago

Self Harming: ಆನ್‌ಲೈನ್‌ ಹೂಡಿಕೆಯಲ್ಲಿ ನಷ್ಟ; ಮಹಾರಾಣಿ ಕ್ಲಸ್ಟರ್ ವಿವಿ ವಿದ್ಯಾರ್ಥಿನಿ ನೇಣಿಗೆ ಶರಣು

Train Accident
EXPLAINER26 mins ago

Train Accident: ‘ಕವಚ’ ಇಲ್ಲದಿರುವುದೇ ಬಂಗಾಳ ರೈಲು ಅಪಘಾತಕ್ಕೆ ಕಾರಣ; ಹಾಗಾದರೆ ಏನಿದು?

Train Accident
ದೇಶ29 mins ago

Train Accident: ಕಾಂಚನಜುಂಗಾ ಎಕ್ಸ್​ಪ್ರೆಸ್ ರೈಲು​ ದುರಂತ; ಮೃತರ ಕುಟುಂಬಗಳಿಗೆ ಪರಿಹಾರ ಧನ ಘೋಷಣೆ

Model Fashion pratibha nataraj
ಫ್ಯಾಷನ್34 mins ago

Model Fashion: ಸೀಸನ್‌ ಗೆ ತಕ್ಕಂತೆ ಫ್ಯಾಷನ್‌ ಬದಲಿಸುವ ಮಿಸೆಸ್‌ ಬೆಂಗಳೂರು ಟೈಟಲ್‌ ವಿಜೇತೆ ಪ್ರತಿಭಾ ನಟರಾಜ್‌

Amy Jackson shares a glimpse of her Paris bachelorette
ಸಿನಿಮಾ46 mins ago

Amy Jackson: ಮದುವೆಗೂ ಮುನ್ನ ತಾಯಿಯಾಗಿದ್ದ ಆ್ಯಮಿ ಜಾಕ್ಸನ್‌ ಮತ್ತೆ ಸಪ್ತಪದಿ ತುಳಿಯಲು ರೆಡಿ!

PGCET 2024
ಶಿಕ್ಷಣ49 mins ago

PGCET 2024: ಪಿಜಿಸಿಇಟಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ; ಶುಲ್ಕ ಪಾವತಿಗೂ ಅವಕಾಶ

Euro 2024
ಕ್ರೀಡೆ54 mins ago

Euro 2024: ಇಂದು ರೊಮೇನಿಯಾ-ಉಕ್ರೇನ್ ನಡುವೆ ಕಾಲ್ಚೆಂಡಿನ ಕಾದಾಟ; ಯಾರಿಗೆ ಒಲಿಯಲಿದೆ ಗೆಲುವಿನ ಲಕ್​?

death news bhanuprakash petrol diesel price hike
ಪ್ರಮುಖ ಸುದ್ದಿ1 hour ago

Death News: “ಕಾಂಗ್ರೆಸ್‌ ಶವಯಾತ್ರೆ….” ಭಾಷಣ ಮುಗಿಸಿ ಬಿಜೆಪಿ ನಾಯಕ ಭಾನುಪ್ರಕಾಶ್ ಸ್ಥಳದಲ್ಲೇ ನಿಧನ

Petrol Diesel Price Hike
ಕರ್ನಾಟಕ1 hour ago

Petrol Diesel Price Hike: ಬಡವರ ಮೇಲೆ ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಸುವುದು ದ್ರೋಹ: ಬೊಮ್ಮಾಯಿ ಆಕ್ರೋಶ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bakrid 2024
ಬೆಂಗಳೂರು4 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ22 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ23 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

ಟ್ರೆಂಡಿಂಗ್‌