Death of a monkey | ಪ್ರೀತಿಯಿಂದ ಸಾಕಿದ ಕೋತಿಯ ಸಾವಿಗೆ ಮನೆ ಮಾತ್ರವಲ್ಲ ಇಡೀ ಗ್ರಾಮವೇ ಕಣ್ಣೀರು ಹಾಕಿತು! - Vistara News

ಉತ್ತರ ಕನ್ನಡ

Death of a monkey | ಪ್ರೀತಿಯಿಂದ ಸಾಕಿದ ಕೋತಿಯ ಸಾವಿಗೆ ಮನೆ ಮಾತ್ರವಲ್ಲ ಇಡೀ ಗ್ರಾಮವೇ ಕಣ್ಣೀರು ಹಾಕಿತು!

death of a monkey | ಕಾಡಿನಲ್ಲಿ ಗಾಯಗೊಂಡಿದ್ದ ಕೋತಿ ಮರಿಯೊಂದನ್ನು ಊರಿನವರು ಆರೈಕೆ ಮಾಡಿದ್ದರು. ಅದನ್ನು ಮರಳಿ ಕಾಡಿಗೆ ಬಿಟ್ಟಾಗ ಪರಿವಾರ ಸೇರಿಸಿಕೊಳ್ಳಲಿಲ್ಲ. ಹೀಗಾಗಿ ಮತ್ತೆ ಅದನ್ನು ಊರವರೇ ತಂದು ಸಾಕಿದ್ದರು. ಮುಂದೆ ಅದು ಇಡೀ ಊರಿನ ಪ್ರೀತಿಯ ರಾಮು ಆಯಿತು.

VISTARANEWS.COM


on

death of a monkey
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ಪ್ರಾಣಿಗಳು ಮನುಷ್ಯರೊಂದಿಗೆ ಬೆರೆತಾಗ ಮನುಷ್ಯ ಕೂಡಾ ಅವುಗಳನ್ನು ತಮ್ಮಂತೆಯೇ ನೋಡಿಕೊಳ್ಳುವುದು ಮಾನವನ ಸ್ವಭಾವ. ಸಾಕಿದ ಪ್ರಾಣಿಗಳು ಕಾಣೆಯಾದಾಗ, ಮೃತಪಟ್ಟಾಗ ಮನೆಯ ಸದಸ್ಯನನ್ನೇ ಕಳೆದುಕೊಂಡ ಅನುಭವವನ್ನು ಕೆಲವರು ಹೊಂದುತ್ತಾರೆ. ಇಂಥಹುದೇ ಒಂದು ಪ್ರಾಣಿ- ಮಾನವನ ಅವಿನಾಭಾವ ಸಂಬಂಧಕ್ಕೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಪಟ್ಟಣ ಸಾಕ್ಷಿಯಾಗಿದೆ.

ಕಳೆದ ಎರಡು ಮೂರು ವರ್ಷಗಳಿಂದ ಸಾಕಿದ್ದ ಕೋತಿ ಮರಿಯೊಂದು ಅನಾರೋಗ್ಯದಿಂದ ಮೃತಪಟ್ಟಿದ್ದಕ್ಕೆ ಮನೆ ಮಂದಿ, ಗ್ರಾಮಸ್ಥರೆಲ್ಲ ಕಣ್ಣೀರ ವಿದಾಯ ತೋರಿದ್ದಾರೆ. ಮನೆಯ ಸದಸ್ಯನನ್ನು ಕಳೆದುಕೊಂಡಂತೆ, ಊರಿನ ಮಗನೊಬ್ಬ ದೂರವಾದಂತೆ ಮನೆಯವರು, ಗ್ರಾಮಸ್ಥರು ಅತ್ತಿದ್ದಾರೆ. ಮರಳಿ ಬಾ ಎಂದು ಭಾವುಕರಾಗಿ ಕರೆದಿದ್ದಾರೆ.

ದಾಂಡೇಲಿ ಪಟ್ಟಣದ ಕಂಜರಪೇಟೆ ಗಲ್ಲಿಯ ರೆಹೋನೆತ್ ಎನ್ನುವವರ ಮನೆಯಲ್ಲಿ ಈ ಕೋತಿ ಮರಿ ವಾಸವಿರುತ್ತಿತ್ತು. ಕೋತಿಗೆ ರಾಮು ಎಂದು ಹೆಸರನ್ನ ಇಡಲಾಗಿತ್ತು. ಕಂಜರಪೇಟೆ ಗಲ್ಲಿಯಲ್ಲಿ ಓಡಾಡಿಕೊಂಡು, ಗ್ರಾಮಸ್ಥರೊಂದಿಗೂ ಅನ್ಯೋನ್ಯತೆಯಿಂದಿದ್ದ ರಾಮು, ಎಲ್ಲರ ಪ್ರೀತಿಗೆ ಪಾತ್ರನಾಗಿದ್ದ.

ಕಳೆದೆರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಾಮುಗೆ ಸ್ಥಳೀಯ ಪಶು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿತ್ತು. ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಗೆ ಕರೆದೊಯ್ಯಲು ಶಿಫಾರಸು ಮಾಡಿದ್ದರು. ಆದರೆ ಹುಬ್ಬಳ್ಳಿಗೆ ತೆರಳುವ ಮಾರ್ಗ ಮಧ್ಯದಲ್ಲಿ ಕೋತಿ ಮರಿ ಕೊನೆಯುಸಿರೆಳೆದಿದೆ. ಕೋತಿ ರಾಮುಗೆ ಮನೆ ಮಂದಿ, ಗ್ರಾಮಸ್ಥರು ಭಾವುಕ ವಿದಾಯ ಹೇಳಿದ್ದಾರೆ. ಧಾರ್ಮಿಕ ವಿಧಿ ವಿಧಾನಗಳ ಮೂಲಕ ಕೋತಿಯ ಅಂತ್ಯಸಂಸ್ಕಾರ ನಡೆಸಲಾಗಿದ್ದು, ಈ ವೇಳೆ ಮಕ್ಕಳು, ಮಹಿಳೆಯರು, ಹಿರಿಯರೆನ್ನದೇ ಎಲ್ಲರೂ ಕಣ್ಣೀರು ಹಾಕಿದ್ದಾರೆ.

ಕೋತಿಯ ಸಾವಿಗೆ ಮಮ್ಮಲ ಮರುಗಿದ ಮಕ್ಕಳು

ಗಾಯಗೊಂಡಾಗ ಆರೈಕೆ ಮಾಡಿದ್ದ ಜನರು: ಕೋತಿ ರಾಮು ಎರಡ್ಮೂರು ವರ್ಷಗಳ ಹಿಂದೆ ಮಾಮೂಲಿ ಕೋತಿಯಂತೆ ಇತ್ತು. ಕಾಡಿನಲ್ಲಿ ತಿರುಗಾಡಿಕೊಂಡು, ಕಪಿ ಚೇಷ್ಟೆ ಮಾಡಿಕೊಂಡಿತ್ತು. ಚಿಕ್ಕ ಮರಿಯಾಗಿದ್ದ ಕಾರಣ ಚೇಷ್ಟೆ ತುಸು ಹೆಚ್ಚೇ ಇತ್ತು. ಹೀಗೆ ಒಂದು ದಿನ ಮರದಿಂದ ಮರಕ್ಕೆ ಹಾರುತ್ತಾ ಮಂಗನಾಟ ಆಡುವ ವೇಳೆ ಆಕಸ್ಮಾತ್ ಆಗಿ ಕಂಜರಪೇಟೆ ವ್ಯಾಪ್ತಿಯಲ್ಲಿ ಮೇಲಿನಿಂದ ಕೆಳಕ್ಕೆ ಬಿದ್ದು ಗಾಯಗೊಂಡಿತ್ತು‌. ಈ ವೇಳೆ ಕಂಜರಪೇಟೆ ಗ್ರಾಮಸ್ಥರು ಈ ಕೋತಿಯನ್ನ ಹಿಡಿದು, ಶುಷ್ರೂಷೆ ನೀಡಿದ್ದರು. ವೈದ್ಯರಿಂದ ಚಿಕಿತ್ಸೆ ಕೊಡಿಸಿ ಆರೈಕೆ ಮಾಡಿದ್ದರು.

ಕೊಂಚ ಚೇತರಿಸಿಕೊಂಡ ಬಳಿಕ ಈ ಕೋತಿ ಮರಿಯನ್ನ ಪುನಃ ಕಾಡಿನತ್ತ ಬಿಡಲಾಗಿತ್ತು. ಆದರೆ ಕಾಡಿನ ಇತರೆ ಕೋತಿಗಳೆಲ್ಲ ಈ ಮರಿ ಕೋತಿಯನ್ನು ಸೇರಿಸಿಕೊಳ್ಳದೇ ದೂರ ಮಾಡಿದ್ದವು. ಇದರಿಂದಾಗಿ ನೊಂದಿದ್ದ ಈ ಕೋತಿ, ಪುನಃ ಆರೈಕೆ ನೀಡಿದ್ದ ಕಂಜರಪೇಟೆ ಗ್ರಾಮಕ್ಕೆ ಬಂದಿತ್ತು. ಇದನ್ನು ಕಂಡ ಗ್ರಾಮದ ರೆಹೋನೆತ್, ಮರಿಯನ್ನ ಹಿಡಿದು ಮನೆಯ ಸದಸ್ಯನಂತೆ ಸಾಕಿದ್ದರು.

ಮನೆಯ ಮಕ್ಕಳೆಲ್ಲ ಈ ಕೋತಿಯೊಂದಿಗೆ ಸಲುಗೆಯಿಂದ, ಆಟವಾಡಿಕೊಂಡಿದ್ದರು‌. ಹೀಗೆ ಎರಡ್ಮೂರು ವರ್ಷಗಳಿಂದ ಗ್ರಾಮದಲ್ಲಿ ಓಡಾಡಿಕೊಂಡಿದ್ದ ಕೋತಿಗೆ ಗ್ರಾಮಸ್ಥರೂ ಹತ್ತಿರವಾಗಿದ್ದರು. ಹಿರಿ- ಕಿರಿಯರೆನ್ನದೆ ಎಲ್ಲರೂ ಅನ್ಯೋನ್ಯತೆಯಿಂದಿದ್ದರು. ಇದೀಗ ಕೋತಿ ರಾಮು ಅಗಲಿಕೆಯಿಂದಾಗಿ ಇಡೀ ಊರಿಗೆ ಶೋಕದ ಛಾಯೆ ಆವರಿಸಿದೆ. ದುಃಖ ಮಡುಗಟ್ಟಿದೆ.

ಇದನ್ನೂ ಓದಿ | video Viral: ಹಸಿದ ಕೋತಿ, ಮರಿಗೆ ಮಾವಿನಹಣ್ಣು ನೀಡಿದ ಕಾನ್‌ಸ್ಟೆಬಲ್ ನೆಟ್ಟಿಗರು ಫಿದಾ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Uttara Kannada News: ಮಾನವೀಯ ದೃಷ್ಟಿಯಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಶಾಸಕ ಶಿವರಾಮ ಹೆಬ್ಬಾರ್ ಸೂಚನೆ

Uttara Kannada News: ಯಲ್ಲಾಪುರ ಪಟ್ಟಣದ ಗಾಂಧಿ ಕುಟೀರದಲ್ಲಿ ಮಂಗಳವಾರ ತಾಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮಕ್ಕೆ ಶಾಸಕ ಶಿವರಾಮ ಹೆಬ್ಬಾರ್ ಚಾಲನೆ ನೀಡಿದರು. ಅಧಿಕಾರಿಗಳು ಮಾನವೀಯ ದೃಷ್ಟಿಯಿಂದ ಕಾರ್ಯನಿರ್ವಹಿಸಬೇಕು. ಸಮಯಕ್ಕೆ ಸರಿಯಾಗಿ ಕೆಲಸಗಳನ್ನು ಮುಗಿಸಿ ಎಂದು ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.

VISTARANEWS.COM


on

MLA Shivaram Hebbar spoke in Taluk level janaspandana programme yallapur
Koo

ಯಲ್ಲಾಪುರ: ಶಾಸಕಾಂಗ ಮತ್ತು ಕಾರ್ಯಾಂಗ ಒಂದು ರಥದ ಎರಡು ಗಾಲಿಯಿದ್ದಂತೆ. ನಾವೆಷ್ಟೇ ವೇಗವಾಗಿ ಮುನ್ನಡೆದರೂ, ಅಧಿಕಾರಿಗಳು ಅದನ್ನು ಅಷ್ಟೇ ವೇಗವಾಗಿ ಜಾರಿಗೆ ತರದಿದ್ದರೆ, ಅಭಿವೃದ್ಧಿ ಸಾಧಿಸಲು ಸಾಧ್ಯವಾಗದು ಎಂದು ಶಾಸಕ ಶಿವರಾಮ ಹೆಬ್ಬಾರ್ (Uttara Kannada News) ಹೇಳಿದರು.

ಪಟ್ಟಣದ ಗಾಂಧಿ ಕುಟೀರದಲ್ಲಿ ಮಂಗಳವಾರ ನಡೆದ ತಾಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಮಾನವೀಯ ದೃಷ್ಟಿಯಿಂದ ಕಾರ್ಯನಿರ್ವಹಿಸಬೇಕು. ನೀವು ಮಾಡುವ ಕೆಲಸದಿಂದ ಬಡವರ ಕಷ್ಟ ದೂರವಾಗುವುದಿದ್ದರೆ, ಅದಕ್ಕಾಗಿ ಕಾನೂನಿನ ತೊಡಕನ್ನು ಮಧ್ಯ ತಾರದಿರಿ. ಕಷ್ಟವನ್ನು ಅರಿತವರು ಮಾತ್ರ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಲು ಸಾಧ್ಯ. ಸಮಯಕ್ಕೆ ಸರಿಯಾಗಿ ಕೆಲಸಗಳನ್ನು ಮುಗಿಸಿ ಎಂದು ತಿಳಿಸಿದರು.

ಇದನ್ನೂ ಓದಿ: Eshwar Khandre: ಚಾರಣಪಥಗಳ ಆನ್‌ಲೈನ್ ಟಿಕೆಟ್‌ಗೆ ಶೀಘ್ರ ಚಾಲನೆ; ಸಚಿವ ಈಶ್ವರ ಖಂಡ್ರೆ

ಸಭೆಯುದ್ದಕ್ಕೂ ಹೆಸ್ಕಾಂ ಹಾಗೂ ಕೆಎಸ್‌ಆರ್‌ಟಿಸಿ ಚರ್ಚೆಯ ವಿಷಯವಾಗಿತ್ತು. ಹೆಸ್ಕಾಂ ಗ್ರಾಮೀಣ ಭಾಗದಲ್ಲಿ ಕರೆಂಟ್‌ ಕಣ್ಣಾಮುಚ್ಚಾಲೆಯಾಡುತ್ತಿದೆ. ಕಳಚೆ ಭಾಗದಲ್ಲಿ ಭೂಕುಸಿತದ ನಂತರ 3 ಕಿಮೀ ಹೊಸದಾಗಿ ಲೈನ್‌ ಎಳೆಯಲಾಗಿದ್ದು, ಈವರೆಗೂ ಸಹ ಅದರಿಂದ ಮನೆಗಳಿಗೆ ವಿದ್ಯುತ್‌ ಸಂಪರ್ಕ ನೀಡಲಾಗಿಲ್ಲ ಎಂದು ಗ್ರಾಮಸ್ಥರು ದೂರಿದರು. ಯು.ಕೆ. ನೇಚರ್‌ ಸ್ಟೇ ಮಾಲಿಕ ನಿರಂಜನ ಹೆಗಡೆ, ಪ್ರವಾಸೋದ್ಯಮವನ್ನು ಬೆಳೆಸಬೇಕೆಂದು ಎಲ್ಲರೂ ಹೇಳುತ್ತಾರೆ. ಆದರೆ ಗ್ರಾಮೀಣ ಭಾಗದಲ್ಲಿರುವ ಹೋಂ ಸ್ಟೇಗಳಿಗೆ ವಿದ್ಯುತ್‌ ವ್ಯತ್ಯಯ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಪಟ್ಟಣ ಪ್ರದೇಶದಲ್ಲಿ ಕರೆಂಟ್‌ ಇದ್ದರೂ, ಗ್ರಾಮೀಣ ಭಾಗದಲ್ಲಿ ಸಂಜೆ ಹೋದರೆ ಬೆಳಗ್ಗಿನವರೆಗೂ ಬರುವುದಿಲ್ಲ. ಇದರಿಂದ ನಾವು ಉದ್ಯಮ ನಡೆಸುವುದು ಕಷ್ಟಸಾಧ್ಯವಾಗಿದೆ ಎಂದು ಆರೋಪಿಸಿದರು.

ಆನಗೋಡು ಗ್ರಾ.ಪಂ. ವ್ಯಾಪ್ತಿಯಲ್ಲಿ ಕೆಲ ಮನೆಗಳ ಮೇಲೆ ವಿದ್ಯುತ್‌ ತಂತಿ ಹಾದುಹೋಗುತ್ತಿದ್ದು, ಇದನ್ನು ತೆರವುಗೊಳಿಸುವಂತೆ ಪಂಚಾಯಿತಿ ಉಪಾಧ್ಯಕ್ಷೆ ಕೋರಿದರು. ತಾಲೂಕಿನಲ್ಲಿ ವಿದ್ಯುತ್‌ ಸಂಪರ್ಕಕ್ಕಾಗಿ ಕೋಟ್ಯಾಂತರ ರೂ.ಗಳನ್ನು ವ್ಯಯಿಸಲಾಗುತ್ತಿದ್ದು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಮರ್ಪಕ ಸಂಪರ್ಕ ಒದಗಿಸಿ ಎಂದು ಶಾಸಕ ಶಿವರಾಮ ಹೆಬ್ಬಾರ್‌ ಸೂಚಿಸಿದರು.

ಇನ್ನು ಗ್ರಾಮೀಣ ಭಾಗದಲ್ಲಿ ಬಸ್‌ ಸೌಲಭ್ಯ ಸಮರ್ಪಕವಾಗಿಲ್ಲದಿದ್ದು, ಇದರಿಂದ ಪಟ್ಟಣಕ್ಕೆ ಬರುವ ಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಹೆಚ್ಚುವರಿ ಬಸ್‌ಗಳನ್ನು ಬಿಡಬೇಕೆಂದು ಸಾರ್ವಜನಿಕರು ಆಗ್ರಹಿಸಿದರು.

ಇದನ್ನೂ ಓದಿ: Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

ಇದೇ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳ ಕುಟುಂಬಸ್ಥರು, ಇಲ್ಲಿನ ಸಿಬ್ಬಂದಿಗೆ ವಸತಿ ವ್ಯವಸ್ಥೆ ಇಲ್ಲದಾಗಿದೆ. ಇಲ್ಲಿ ಕಾರ್ಯ ನಿರ್ವಹಿಸುವ ಬಹುತೇಕರು ಉತ್ತರ ಕರ್ನಾಟಕ ಭಾಗದಿಂದ ಆಗಮಿಸಿರುತ್ತಾರೆ. ಬಾಡಿಗೆ ಮನೆ ನಿರ್ವಹಣೆ ಕಷ್ಟವಾಗಿದೆ. ಹೀಗಾಗಿ ಸಿಬ್ಬಂದಿಗಳಿಗಾಗಿ ವಸತಿ ಸಮುಚ್ಛಯ ನಿರ್ಮಾಣ ಮಾಡಿಕೊಡುವಂತೆ ಅವರು ತಮ್ಮ ಅಹವಾಲು ಸಲ್ಲಿಸಿದರು.

ತಾಲೂಕಿನ ಪ್ರವಾಸಿ ಸ್ಥಳಗಳಿಗೆ ಹೆಚ್ಚುವರಿ ವಾಹನ ಶುಲ್ಕ ವಸೂಲಾತಿ ಮಾಡಲಾಗುತ್ತಿರುವ ಕುರಿತು ದೂರು ಕೇಳಿಬಂದ ಹಿನ್ನೆಲೆಯಲ್ಲಿ, ಯಾವುದೇ ಕಾರಣಕ್ಕೂ ಜಿಲ್ಲಾಧಿಕಾರಿಗಳ ಆದೇಶ ಇಲ್ಲದೇ ಶುಲ್ಕ ವಸೂಲಾತಿ ಮಾಡಬಾರದು. ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸಬೇಕೆ ಹೊರತು ಪ್ರವಾಸಿಗರ ಮೇಲೆ ಹೊರೆ ಹೇರಬಾರದು ಎಂದು ಶಾಸಕ ಶಿವರಾಮ ಹೆಬ್ಬಾರ್‌ ಎಚ್ಚರಿಸಿದರು. ಈ ಕುರಿತು ವಿಎಫ್‌ಸಿ ಅಧ್ಯಕ್ಷರು ಹಾಗೂ ಪೊಲೀಸ್‌ ಇಲಾಖೆಯ ಒಂದು ಸಭೆ ಕರೆಯುವಂತೆ ಸಿಪಿಐ ಅವರಿಗೆ ಸೂಚಿಸಿದರು.

ಬೇಡ್ತಿ ಕುಡಿಯುವ ನೀರಿನ ಯೋಜನೆಗೆ ಬಳಸಲಾದ ಯಂತ್ರೋಪಕರಣಗಳು ಲಕ್ಷಾಂತರ ಮೌಲ್ಯದ್ದಾಗಿದ್ದು, ಅವುಗಳು ಕಳುವಾಗಿರುವ ಕುರಿತು ಸಮರ್ಪಕ ತನಿಖೆಯಾಗಬೇಕು ಎಂದು ಶಾಸಕರು ಆಗ್ರಹಿಸಿದರು. ಅಂತೆಯೇ ಸರ್ಕಾರಿ ಅಧಿಕಾರಿಗಳು, ಕೃಷಿ ಜಮೀನಿನಲ್ಲಿ ನಿರ್ಮಿಸಲಾದ ನಿವೇಶನಗಳನ್ನು ಕೊಂಡು, ಮನೆ ನಿರ್ಮಿಸುವ ಮುನ್ನ ಯೋಚಿಸಬೇಕು. ಅವುಗಳಿಗೆ ಈ ಸ್ವತ್ತು ಮಾಡಲು ಸಾಧ್ಯವಿಲ್ಲ. ಹೀಗಾಗಿ ಇನ್ನು ಮುಂದೆ ಆಲೋಚಿಸಿ ತಮ್ಮ ಹಣ ಹೂಡಿಕೆ ಮಾಡಿ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ 3 ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್, ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಸೇರಿದಂತೆ ವಿವಿಧ ಇಲಾಖೆಯ ಫಲಾನುಭವಿಗಳಿಗೆ ಆದೇಶ ಪತ್ರ ಹಂಚಲಾಯಿತು. ಸಭೆಯಲ್ಲಿ 43 ಅರ್ಜಿ ಸಲ್ಲಿಕೆಯಾಗಿದ್ದು ಈ ಪೈಕಿ 17 ಅರ್ಜಿಯನ್ನು ಸ್ಥಳದಲ್ಲಿಯೇ ಪರಿಹರಿಸಿ ಆದೇಶ ಪತ್ರ ನೀಡಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಎನ್.ಆರ್. ಹೆಗಡೆ, ಇಡಗುಂದಿ ಗ್ರಾ.ಪಂ. ಅಧ್ಯಕ್ಷ ಶ್ರೀಕಾಂತ ಶೆಟ್ಟಿ, ಪ.ಪಂ. ಸದಸ್ಯೆ ಸುನಂದಾ ದಾಸ್, ಗ್ರಾ.ಪಂ. ಅಧ್ಯಕ್ಷರು ಹಾಗೂ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: Yuva Sambhrama 2024: ಬೆಂಗಳೂರಿನಲ್ಲಿ ಜು.12ರಿಂದ 3 ದಿನ ಯುವ ಸಂಭ್ರಮ

ತಹಸೀಲ್ದಾರ್ ಅಶೋಕ್ ಭಟ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ದಿಲೀಪ್‌ ದೊಡ್ಮನಿ ನಿರ್ವಹಿಸಿದರು.

Continue Reading

ಉತ್ತರ ಕನ್ನಡ

Uttara Kannada News: ಉತ್ತರ ಕನ್ನಡ ಸ್ಥಳೀಯ ಸಂಸ್ಥೆಗಳ ಕಾಮಗಾರಿ ಚುರುಕುಗೊಳಿಸಲು ಡಿಸಿ ಸೂಚನೆ

Uttara Kannada News: ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯವಿರುವ 2024-25ನೇ ಸಾಲಿನ ಕ್ರಿಯಾ ಯೋಜನೆಯಲ್ಲಿನ ಎಲ್ಲಾ ಕಾಮಗಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ ಅನುಮೋದನೆ ನೀಡಿದರು. ಈ ಎಲ್ಲಾ ಕಾಮಗಾರಿಗಳನ್ನು ಶೀಘ್ರದಲ್ಲಿ ಆರಂಭಿಸುವಂತೆ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಡಿಸಿ ಸೂಚನೆ ನೀಡಿದ್ದಾರೆ.

VISTARANEWS.COM


on

Uttara Kannada News Meeting by DC Gangubai Manakar in Karwar
Koo

ಕಾರವಾರ: ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯವಿರುವ 2024-25ನೇ ಸಾಲಿನ ಕ್ರಿಯಾ ಯೋಜನೆಯಲ್ಲಿನ ಎಲ್ಲಾ ಕಾಮಗಾರಿಗಳಿಗೆ ಅನುಮೋದನೆ ನೀಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌, ಈ ಎಲ್ಲಾ ಕಾಮಗಾರಿಗಳನ್ನು ಶೀಘ್ರದಲ್ಲಿ ಆರಂಭಿಸುವಂತೆ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ (Uttara Kannada News) ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಎಲ್ಲಾ ಕಾಮಗಾರಿಗಳಿಗೆ ಅವರು ಅನುಮೋದನೆ ನೀಡಿದರು.

13ನೇ ಹಣಕಾಸು ಯೋಜನೆಯಡಿ ಜಿಲ್ಲೆಯ ಎಲ್ಲಾ 13 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 16.84 ಕೋಟಿ ರೂ ಮೊತ್ತದ ಕಾಮಗಾರಿಗಳ ಕ್ರಿಯಾ ಯೋಜನೆ, ಎಸ್.ಎಫ್.ಸಿ ಯೋಜನೆಯ 7.81 ಕೋಟಿ ರೂ. ಮೊತ್ತದ ಕಾಮಗಾರಿಗಳ ಕ್ರಿಯಾ ಯೋಜನೆ ಮತ್ತು ಎಂ.ಆರ್.ಎಫ್ ಘಟಕಗಳ ಸ್ಥಾಪನೆಗೆ ಮತ್ತು 7 ಇಂದಿರಾ ಕ್ಯಾಂಟೀನ್‌ಗಳಲ್ಲಿ ಅಗತ್ಯವಿರುವ ದುರಸ್ತಿ ಕಾಮಗಾರಿಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿದ ಜಿಲ್ಲಾಧಿಕಾರಿಗಳು, ಈ ಎಲ್ಲಾ ಕಾಮಗಾರಿಗಳಿಗೆ ಕೂಡಲೇ ಟೆಂಡರ್ ಕರೆದು, ನಿಗದಿತ ಅವಧಿಯೊಳಗೆ ವರ್ಕ್ ಆರ್ಡರ್ ನೀಡಿ, ಮಳೆಗಾಲದ ಮುಗಿದ ಕೂಡಲೇ ಈ ಕಾಮಗಾರಿಗಳನ್ನು ಆರಂಭಿಸಲು, ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದರು.

ಇದನ್ನೂ ಓದಿ: Eshwar Khandre: ಚಾರಣಪಥಗಳ ಆನ್‌ಲೈನ್ ಟಿಕೆಟ್‌ಗೆ ಶೀಘ್ರ ಚಾಲನೆ; ಸಚಿವ ಈಶ್ವರ ಖಂಡ್ರೆ

ಕ್ರಿಯಾ ಯೋಜನೆಯಲ್ಲಿನ ಕಾಮಗಾರಿಗಳು ಮಾತ್ರವಲ್ಲದೇ ಸಾರ್ವಜನಿಕರಿಂದ ಬೇಡಿಕೆ ಬರುವ ಅಗತ್ಯ ತುರ್ತು ಕಾಮಗಾರಿಗಳನ್ನು ಆದ್ಯತೆಯಲ್ಲಿ ಕೈಗೊಳ್ಳಿ, ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯುವಂತೆ ನಿರಂತರವಾಗಿ ಪರಿಶೀಲಿಸಿ, ಚರಂಡಿಯಲ್ಲಿ ಕಸ ಸಂಗ್ರಹವಾಗಿ ಮಳೆಯಿಂದ ಯಾವುದೇ ಮನೆಗಳಿಗೆ ನೀರು ನುಗ್ಗದಂತೆ ಎಚ್ಚರಿಕೆ ವಹಿಸಿ, ಎಲ್ಲೆಡೆ ಸ್ವಚ್ಛತೆಗೆ ಪ್ರಥಮಾದ್ಯತೆ ನೀಡಬೇಕು ಎಂದರು.

ಎಲ್ಲಾ ನಗರಸ್ಥಳೀಯ ಸಂಸ್ಥೆಗಳು ತಮ್ಮ ಅನುದಾನದಲ್ಲಿ, ಪ.ಜಾತಿ, ಪ.ಪಂಗಡ ಮತ್ತು ವಿಕಲಚೇತನರಿಗೆ ಮೀಸಲಿಟ್ಟಿರುವ ಸಂಪೂರ್ಣ ಅನುದಾನವನ್ನು ಸದ್ಭಳಕೆ ಮಾಡಿಕೊಂಡು ಅವರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವಂತೆ ತಿಳಿಸಿದರು.

ಜಿಲ್ಲೆಯ ಕಾರವಾರ, ಅಂಕೋಲಾ ಮತ್ತು ಭಟ್ಕಳದಲ್ಲಿನ ಇಂದಿರಾ ಕ್ಯಾಂಟೀನ್‌ಗಳಲ್ಲಿ ಸರ್ಕಾರದ ಪರಿಷ್ಕೃತ ಮೆನು ಪ್ರಕಾರ ಸಾರ್ವಜನಿಕರಿಗೆ ಬೆಳಗಿನ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿಯ ಭೋಜನ ವಿತರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತೆರಿಗೆ ವಸೂಲಾತಿಗೆ ಆದ್ಯತೆ ನೀಡುವಂತೆ ಹಾಗೂ ನಿಗದಿತ ಅವಧಿಯಲ್ಲಿ ಶೇ.100 ರಷ್ಟು ತೆರಿಗೆ ವಸೂಲಾತಿಯನ್ನು ಮಾಡುವಂತೆ ಕಟುನಿಟ್ಟಿನ ಸೂಚನೆ ನೀಡಿದ ಅವರು, ತೆರಿಗೆ ಸಂಗ್ರಹದಲ್ಲಿ ಗುರಿ ಸಾಧಿಸದಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ: Bengaluru News: ಕಲಾ ರಸಿಕರ ಮನಸೂರೆಗೊಳಿಸಿದ ‘ಶ್ರದ್ಧಾ ನೃತ್ಯಾರ್ಣವʼ ವಿಶೇಷ ನೃತ್ಯೋತ್ಸವ

ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ಸ್ಟೆಲ್ಲಾ ವರ್ಗಿಸ್ ಹಾಗೂ ಜಿಲ್ಲೆಯ ಎಲ್ಲಾ ನಗರಸ್ಥಳೀಯ ಸಂಸ್ಥೆಗಳು ಆಯುಕ್ತರು, ಮುಖ್ಯಾಧಿಕಾರಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Bomb Blast: ಜೋಯಿಡಾದಲ್ಲಿ ಪತ್ರಕರ್ತರು ಸಾಗುತ್ತಿದ್ದ ಕಾರಿನಡಿ ನಾಡ ಬಾಂಬ್ ಸ್ಫೋಟ

Bomb Blast: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ಗುಂದ ಗ್ರಾಮದ ಬಳಿ ಪತ್ರಕರ್ತರ ಕಾರಿನಡಿ ನಾಡ ಬಾಂಬ್ ಸ್ಫೋಟವಾಗಿದೆ. ಜೋಯಿಡಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

VISTARANEWS.COM


on

Bomb Blast
Koo

ಕಾರವಾರ: ಪತ್ರಕರ್ತರು ಸಾಗುತ್ತಿದ್ದ ಕಾರಿನ ಕೆಳಗೆ ನಾಡ ಬಾಂಬ್ ಸ್ಫೋಟವಾಗಿರುವ (Bomb Blast) ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ಗುಂದ ಗ್ರಾಮದ ಬಳಿ ಮಂಗಳವಾರ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಸಂದೇಶ್ ದೇಸಾಯಿ ಎನ್ನುವ ಪತ್ರಕರ್ತರಿಗೆ ಸೇರಿದ ಕಾರಿನಲ್ಲಿ ಮೂವರು ಪತ್ರಕರ್ತರು, ಶಾಸಕ ಆರ್.ವಿ. ದೇಶಪಾಂಡೆ ಸಭೆಗೆ ತೆರಳುತ್ತಿದ್ದರು. ಜೋಯಿಡಾದ ಗುಂದ ಗ್ರಾಮದ ಬಳಿ ಕಾರಿನ ಟಯರ್‌ಗೆ ಸಿಕ್ಕಿ ಬಾಂಬ್ ಸ್ಫೋಟವಾಗಿದೆ. ಅದೃಷ್ಟವಶಾತ್ ಪತ್ರಕರ್ತರು ಅಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ | Uttar Pradesh stampede: ಹತ್ರಾಸ್‌ ಕಾಲ್ತುಳಿತ ದುರ್ಘಟನೆ; ಸಾವಿನ ಸಂಖ್ಯೆ 60ಕ್ಕೆ ಏರಿಕೆ

Sandalwood theft : ಶ್ರೀಗಂಧ ಕದಿಯಲು ಬಂದವನಿಗೆ ಗುಂಡೇಟು;‌ ಮತ್ತೊಬ್ಬ ಗಾಯಾಳು ಸೇರಿ ಹಲವರು ಪರಾರಿ

ಕೋಲಾರ : ಅರಣ್ಯ ಪ್ರದೇಶದಲ್ಲಿ ಶ್ರೀಗಂಧವನ್ನು ಕದಿಯಲು (Sandalwood theft) ಬಂದವನು ಅರಣ್ಯ ಇಲಾಖೆ ಸಿಬ್ಬಂದಿಯಿಂದ ಗುಂಡೇಟು ತಿಂದಿದ್ದಾನೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕಾಶಿಪುರ ಅರಣ್ಯ ಪ್ರದೇಶದಲ್ಲಿ (Kashipura Forest) ಘಟನೆ ನಡೆದಿದೆ.

ತಾಯಲೂರು ಗ್ರಾಮದ ಭತ್ಯಪ್ಪ ಎಂಬಾತ ಕಾಲಿಗೆ ಗುಂಡು ತಗುಲಿದೆ. ಅರಣ್ಯ ಇಲಾಖೆ ರಕ್ಷಕ ಅನಿಲ್ ಗುಂಡು ಹಾರಿಸಿದ್ದಾರೆ. ಶ್ರೀಗಂಧ ಕಳ್ಳತನಕ್ಕೆ ಆಂಧ್ರಪ್ರದೇಶದ ಐದಾರು ಮಂದಿ ಜತೆಗೆ ಭತ್ಯಪ್ಪ ಬಂದಿದ್ದ. ಈ ವೇಳೆ ರಕ್ಷಕ ಅನಿಲ್ ಮೇಲೆ ಹಲ್ಲೆಗೆ ಮುಂದಾಗಿದ್ದ.

ರಕ್ಷಣೆಗಾಗಿ ಭತ್ಯಪ್ಪ ಹಾಗೂ ಮತ್ತೋರ್ವನಿಗೆ ಅರಣ್ಯ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಭತ್ಯಪ್ಪ ಸಿಕ್ಕಿಬಿದ್ದರೆ ಉಳಿದವರು ಕಾಲ್ಕಿತ್ತಿದ್ದಾರೆ. ಗಾಯಾಳು ಭತ್ಯಪ್ಪಗೆ ಮುಳಬಾಗಿಲು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Drowned In water : ರಭಸವಾಗಿ ಹರಿಯುತ್ತಿದ್ದ ನೀರಲ್ಲಿ ಈಜಲು ಹೋಗಿ ಕೊಚ್ಚಿ ಹೋದ ಮಾಜಿ ಸೈನಿಕ

ಕೋರ್ಟ್‌ ಆವರಣದಲ್ಲೇ ಡೆಡ್ಲಿ ಅಟ್ಯಾಕ್‌

ಕಲಬುರಗಿ ಕೋರ್ಟ್ ಆವರಣದಲ್ಲಿ ಸಿನಿಮೀಯ ಶೈಲಿಯಲ್ಲಿ ವ್ಯಕ್ತಿಯ ಬೆನ್ನತ್ತಿ ದುಷ್ಕರ್ಮಿಗಳು ತಲವಾರ್‌ನಿಂದ ದಾಳಿ ನಡೆಸಿದ್ದಾರೆ. ಧೀರಜ್ ಎಂಬಾತನ ಮೇಲೆ ತಲವಾರ್‌‌ನಿಂದ ದಾಳಿ ನಡೆಸಿದ್ದಾರೆ.

ತಲವಾರ್ ದಾಳಿಯಿಂದ ಧೀರಜ್‌ ಎಂಬಾತ ಗಾಯಗೊಂಡಿದ್ದು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇತ್ತ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ದುಷ್ಕರ್ಮಿಗಳನ್ನು ಸಾರ್ವಜನಿಕರು ಹಾಗೂ ವಕೀಲರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಘಟನೆ ಸಂಬಂಧ ಪ್ರಶಾಂತ್ ಪಾಟೀಲ್ (20), ವಿರೇಶ್ ಪಾಟೀಲ್ (19), ರಾಮು ಪಾಟೀಲ್ (38) ಈ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಕಲಬುರಗಿ ನಗರದ ಬಾಪುನಗರ ಬಡಾವಣೆಯ ನಿವಾಸಿಗಳು ಎನ್ನಲಾಗಿದೆ. ವೈಯುಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

Karnataka Weather Forecast :ರಾಜ್ಯಾದ್ಯಂತ ಮಳೆ ಅಬ್ಬರಕ್ಕೆ (Rain News) ಗುಡ್ಡ ಕುಸಿತದಂತಹ ಪ್ರಕರಣಗಳು ಹೆಚ್ಚಾಗುತ್ತಿದೆ. ಕೊಡಗಿನಲ್ಲಿ ಗುಡ್ಡ ಕುಸಿದರೆ, ಮಂಗಳೂರಲ್ಲಿ ರಸ್ತೆ ಕುಸಿದಿದೆ. ಚಿಕ್ಕಮಗಳೂರಲ್ಲಿ ಗಾಳಿ- ಮಳೆಗೆ ಶಾಲೆಗೆ ಹಾನಿಯಾಗಿದೆ. ಇನ್ನೊಂದು ವಾರವು ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ನೈರುತ್ಯ ಮುಂಗಾರು (Rain News) ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣವಾಗಿದ್ದು, ಉತ್ತರ ಒಳನಾಡಿನಲ್ಲಿ (Karnataka Weather Forecast) ದುರ್ಬಲಗೊಂಡಿದೆ. ಕರಾವಳಿ, ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದ್ದು, ಗುಡ್ಡ ಕುಸಿತದಂತಹ ಪ್ರಕರಣಗಳು ಹೆಚ್ಚಾಗಿವೆ. ಕೊಲ್ಲೂರು, ಸಿದ್ದಾಪುರ, ಕೊಟ್ಟಿಗೆಹಾರದಲ್ಲಿ 9 ಸೆಂ.ಮೀ ಮಳೆಯಾಗಿದೆ. ಕೋಟ, ಆಗುಂಬೆಯಲ್ಲಿ ತಲಾ 8 ಸೆಂ.ಮೀ ಹಾಗೂ ಉಡುಪಿ, ಧರ್ಮಸ್ಥಳ, ಲಿಂಗನಮಕ್ಕಿಯಲ್ಲಿ 7 ಸೆಂ.ಮೀ ಮಳೆಯಾಗಿದೆ.

ಆರಿದ್ರಾ ಮಳೆ ಎಫೆಕ್ಟ್‌ ಕೊಡಗಿನಲ್ಲಿ ಗುಡ್ಡ ಕುಸಿತ

ಕೊಡಗಿನಲ್ಲಿ ಸುರಿದ ಆರಿದ್ರಾ ಮಳೆಯ ಎಫೆಕ್ಟ್‌ನಿಂದಾಗಿ ಅಲ್ಲಲ್ಲಿ ಸಣ್ಣ ಪ್ರಮಾಣದ ಗುಡ್ಡ ಕುಸಿತ ಉಂಟಾಗುತ್ತಿದೆ. ನಿನ್ನೆ ಸೋಮವಾರ ಸುರಿದ ಮಳೆಗೆ ಬೆಟ್ಟದ ಮಣ್ಣು ಕುಸಿದು ಮನೆ ಮತ್ತು ದೇವಸ್ಥಾನಕ್ಕೆ ಅಲ್ಪಪ್ರಮಾಣದಲ್ಲಿ ಹಾನಿಯಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಪಾಲೆಮಾಡುವಿನಲ್ಲಿ ಘಟನೆ ನಡೆದಿದೆ. ಪಾಲೆಮಾಡುವಿನ ಎಂಆರ್ ಕಾಳಪ್ಪ ಅವರ ಮನೆಯ ಸಮೀಪದ ಮಣ್ಣು ಕುಸಿದಿದೆ. ದೇವಸ್ಥಾನದ ಗೋಡೆ ಪಕ್ಕದಲ್ಲಿ ಮತ್ತು ವಾಸದ ಮನೆಯ ಪಕ್ಕದಲ್ಲಿ ರಾಶಿ ಮಣ್ಣು ತುಂಬಿದೆ.

ಇದನ್ನೂ ಓದಿ: Student Death : ಅಮ್ಮನ ಸೀರೆಯಲ್ಲಿ ನೇಣು ಬಿಗಿದುಕೊಂಡಳು ಅಪ್ರಾಪ್ತೆ

ಮಂಗಳೂರಿನ ಬಂಗ್ರ ಕೂಳೂರಿನಲ್ಲೂ ರಸ್ತೆ ಕುಸಿತ

ಭಾರೀ ಮಳೆಯಿಂದಾಗಿ ಮಂಗಳೂರಿನಲ್ಲಿ ಅವಾಂತರವೇ ಸೃಷ್ಟಿಯಾಗಿದೆ. ಮಂಗಳೂರಿನ ಬಂಗ್ರ ಕೂಳೂರಿನಲ್ಲಿ ರಸ್ತೆ ಕುಸಿದಿದೆ. ಎ ಜೆ ಇಂಜಿನಿಯರಿಂಗ್ ಕಾಲೇಜಿಗೆ ಸಂಪರ್ಕಿಸುವ ರಸ್ತೆ ಇದಾಗಿದ್ದು, ಮಣ್ಣಿನ ಸವೆತಕ್ಕೆ ಕ್ಷಣ ಕ್ಷಣಕ್ಕೂ ರಸ್ತೆಯು ಕುಸಿಯುತ್ತಿದೆ.

350 ಮೀಟರ್ ಉದ್ದದ ಈ ರಸ್ತೆಯಲ್ಲಿ ರಾಜಕಾಲುವೆಯು ಹೊಂದಿಕೊಂಡಿದೆ. ಹೀಗಾಗಿ ಈ ರಸ್ತೆಯಲ್ಲಿ ವಾಹನ ಸಂಚಾರ ಹಾಗೂ ಜನರ ಓಡಾಟವನ್ನು ನಿಷೇಧಿಸಲಾಗಿದೆ. ರಸ್ತೆ ಪಕ್ಕದ 10ಕ್ಕೂ ಹೆಚ್ಚು ಮನೆಗಳು ಕೂಡ ಅಪಾಯದಲ್ಲಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ.

ಚಿಕ್ಕಮಗಳೂರಲ್ಲಿ ಗಾಳಿ- ಮಳೆಗೆ ಶಾಲೆಗೆ ಹಾನಿ

ಚಿಕ್ಕಮಗಳೂರಿನಲ್ಲಿ ಗಾಳಿ-ಮಳೆ ಮುಂದುವರಿದಿದೆ. ಭಾರಿ ಮಳೆಗೆ ಶಾಲಾ ಕಟ್ಟಡವೊಂದು ಶಿಥಿಲಾವಸ್ಥೆಗೊಂಡಿದೆ. ಸರ್ಕಾರಿ ಶಾಲೆಯ ಚಾವಣಿಗೆ ಹಾನಿಯಾಗಿದ್ದು, ಗೋಡೆಯ ಮಣ್ಣು ಉದುರುತ್ತಿದೆ. ಮೂಡಿಗೆರೆ ತಾಲೂಕಿನ ಹಾಲೂರು ಸರ್ಕಾರಿ ಶಾಲೆಯಲ್ಲಿ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಶಾಲೆಗೆ ಭೇಟಿ ನೀಡಿದ ಸ್ಥಳೀಯ ಶಾಸಕಿ ನಯನ ಮೋಟಮ್ಮ, ಶಿಥಿಲಾವಸ್ಥೆ ಗೊಂಡಿರುವ ಚಾವಣಿ ಸರಿಪಡಿಸಲು ಕ್ರಮವಹಿಸಲು ಸೂಚಿಸಿದರು.

ಧಾರಾಕಾರ ಮಳೆಗೆ ಧುಮ್ಮಿಕ್ಕಿದ ಜೋಗ್‌ ಫಾಲ್ಸ್‌

ಶಿವಮೊಗ್ಗದ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯಿಂದ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಜೋಗ ಜಲಪಾತದ ಸೌಂದರ್ಯಕ್ಕೆ ಪ್ರವಾಸಿಗರು ಮನ ಸೋತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Physical Abuse
ಕರ್ನಾಟಕ5 mins ago

Physical Abuse : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Mahua Moitra
ಪ್ರಮುಖ ಸುದ್ದಿ59 mins ago

Mahua Moitra: ಸುಮ್ನೆ ಕೂತ್ಕೊಳ್ಳಿ ರಾಹುಲ್‌ ಗಾಂಧಿ; ಸಂಸತ್ತಲ್ಲೇ ಮಹುವಾ ಮೊಯಿತ್ರಾ ಹೀಗೆ ಸಿಟ್ಟಾಗಿದ್ದೇಕೆ?

Viral Video
Latest1 hour ago

Viral Video: ಲೈವ್‌ ವರದಿ ಮಾಡುತ್ತಿದ್ದಾಗ ಪಾಕ್ ಟಿವಿ ವರದಿಗಾರ್ತಿ ಮೇಲೆ ಗೂಳಿ ದಾಳಿ!

Hemant Nimbalkar
ಪ್ರಮುಖ ಸುದ್ದಿ1 hour ago

Hemant Nimbalkar: ವಾರ್ತಾ ಇಲಾಖೆ ಆಯುಕ್ತರಾಗಿ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ನೇಮಕ

Kolar News
ಕರ್ನಾಟಕ1 hour ago

Kolar News: ಕಾಲೇಜಿನ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಯುವಕನ ಬಂಧನ

Tamanna Bhatia
Latest1 hour ago

Tamanna Bhatia: ‘ಜೀ ಕರ್ದಾ’ದಲ್ಲಿ ತಮನ್ನಾ ಭಾಟಿಯಾ ಪೂರ್ತಿ ಟಾಪ್‌ಲೆಸ್‌! ವಿಡಿಯೊ ಇದೆ

bengaluru student Vaishnavi M who won the prestigious award from IIT Bombay
ಬೆಂಗಳೂರು1 hour ago

Bengaluru News: ಬೆಂಗಳೂರಿನ ವಿದ್ಯಾರ್ಥಿನಿಗೆ ಐಐಟಿ ಬಾಂಬೆಯ ಪ್ರತಿಷ್ಠಿತ ಪ್ರಶಸ್ತಿ

IPL 2025
ಪ್ರಮುಖ ಸುದ್ದಿ2 hours ago

IPL 2025 : ಐಪಿಎಲ್​ ತಂಡಗಳಲ್ಲಿ ಉಳಿಸಿಕೊಳ್ಳುವ ಆಟಗಾರರ ವಿಚಾರದಲ್ಲಿ ಫ್ರಾಂಚೈಸಿಗಳ ನಡುವೆ ಭಿನ್ನಾಭಿಪ್ರಾಯ

Dharma Keerthiraj starrer production No 1 movie Muhurta
ಕರ್ನಾಟಕ2 hours ago

Kannada New Movie: ಗೋಪಿನಾಥ ಬೆಟ್ಟದಲ್ಲಿ ನಡೆದ ಧರ್ಮ ಕೀರ್ತಿರಾಜ್ ಅಭಿನಯದ ʼಪ್ರೊಡಕ್ಷನ್ ನಂ 1ʼ ಚಿತ್ರದ ಮುಹೂರ್ತ

Anjanadri Temple Hundi Count
ಕರ್ನಾಟಕ2 hours ago

Koppala News: ಅಂಜನಾದ್ರಿ ದೇಗುಲ ಹುಂಡಿಯಲ್ಲಿ 32.95 ಲಕ್ಷ ರೂ; ವಿವಿಧ ದೇಶಗಳ ನೋಟುಗಳು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ4 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ1 day ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌