Bigg Boss Kannada | ಪ್ರಶಾಂತ್‌-ರೂಪೇಶ್‌ ಮಾತಿನ ಚಕಮಕಿ: ಅವರವರ ಭಾವಕ್ಕೆ ಅವರವರ ವಾದ, ಯಾವುದು ಸರಿ? - Vistara News

ಬಿಗ್ ಬಾಸ್

Bigg Boss Kannada | ಪ್ರಶಾಂತ್‌-ರೂಪೇಶ್‌ ಮಾತಿನ ಚಕಮಕಿ: ಅವರವರ ಭಾವಕ್ಕೆ ಅವರವರ ವಾದ, ಯಾವುದು ಸರಿ?

ಕಳಪೆ ಅನೌನ್ಸ್‌ ವೇಳೆ ಪ್ರಶಾಂತ್‌ ಸಂಬರಗಿ (Bigg Boss Kannada) ಹಾಗೂ ರೂಪೇಶ್‌ ರಾಜಣ್ಣ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಪ್ರಶಾಂತ್‌ ಸಂಬರಗಿ ಕಳಪೆಯನ್ನು ನೀಡಿ ಕಾರಣ ಕೊಟ್ಟರು.

VISTARANEWS.COM


on

Bigg Boss Kannada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌9ರ (Bigg Boss Kannada) 20ನೇ ದಿನ ರೂಪೇಶ್‌ ರಾಜಣ್ಣ ಮನೆಯವರ ಮುಂದೆ ಪ್ರಶಾಂತ್ ಸಂಬರಗಿ ಬಳಿ ಕ್ಷಮೆ ಕೇಳಿದ್ದಾರೆ. ಹಾಗೇ ಕಳಪೆ ಪ್ರದರ್ಶನದ ಅನೌನ್ಸ್‌ ವೇಳೆಯಲ್ಲಿ ಪ್ರಶಾಂತ್‌ ಸಂಬರಗಿ ಹಾಗೂ ರೂಪೇಶ್‌ ರಾಜಣ್ಣ ಮಧ್ಯೆ ಮಾತಿನ ಚಕಮಕಿ ನಡೆದಿದೆ.

ರೂಪೇಶ್‌ ರಾಜಣ್ಣ ಮನೆಯವರ ಮುಂದೆ ʻʻಎಲ್ಲರ ಸಮ್ಮುಖದಲ್ಲಿ ನಾನು ಎರಡು ಪದಗಳನ್ನ ಉಪಯೋಗಿಸಿದ್ದೆ. ಆ ಎರಡು ಪದಗಳಿಗೆ ಮಾತ್ರ ನಾನು ಕ್ಷಮೆ ಕೇಳುತ್ತೇನೆ, ವಾಪಸ್ ಪಡೆಯುತ್ತೇನೆ. ಉಳಿದ ಚರ್ಚೆ ಹಾಗೇ ಇರುತ್ತೆ’’ ಎಂದರು. ಈ ವೇಳೆ ಅರುಣ್‌ ಸಾಗರ್‌ ಪ್ರತಿಕ್ರಿಯೆ ನೀಡಿ ‘’ಮಾತು ಜಾರದೇ ಇದ್ದರೆ ಅದು ಮುತ್ತು. ಮಾತು ಜಾರಿದರೆ ಅದೇ ನಿಮಗೆ ಕುತ್ತು’ ಎಂದರು.

ಇದನ್ನೂ ಓದಿ | Bigg Boss Kannada | ನಿಮ್ಮೊಳಗೆ ತುಂಬ ಜನಕ್ಕೆ ಮಾನವೀಯತೆ ಇಲ್ಲ: ಗರಂ ಆದ್ರು ಅರುಣ್‌ ಸಾಗರ್‌!

Bigg Boss Kannada


ರೂಪೇಶ್ ರಾಜಣ್ಣಗೆ ಪ್ರಶಾಂತ್ ಸಂಬರಗಿ ಕಳಪೆ ಕೊಡುವ ಸಂದರ್ಭದಲ್ಲಿ ‘’ಮಾತಿನ ಭರದಲ್ಲಿ ನನ್ನ ತಾಯಿಯನ್ನ ಅವಮಾನ ಮಾಡಿದ್ದಾರೆ. ಮಾನನಷ್ಟ ಮೊಕದ್ದಮೆ ಹೂಡುವಷ್ಟು ಪದಗಳನ್ನು ಆಡಿ, ನಮ್ಮ ತಾಯಿಯ ಮಾನವನ್ನು ಕರ್ನಾಟಕದ ಜನತೆ ಮುಂದೆ ಹರಾಜಿಗೆ ಹಾಕಿದ್ದೀರಲ್ಲ, ಇದಕ್ಕೆ ಬೇರೆ ಯಾವ ಶಿಕ್ಷೆಯೂ ಇಲ್ಲʼʼ ಎಂದು ಕೂಗಾಡಿದ್ದಾರೆ.

ರೂಪೇಶ್‌ ರಾಜಣ್ಣರ ಸರದಿ ಬಂದಾಗ ಈ ಕುರಿತು ಪ್ರತಿಕ್ರಿಯೆ ನೀಡಿ ʻʻನಾನಾಗಿ ನಾನು ಜಗಳವನ್ನ ಪ್ರಾರಂಭ ಮಾಡಲಿಲ್ಲ. ನೀವು ಗ್ಲಾಸ್‌ ಡೋರ್‌ ಕ್ರಾಸ್ ಮಾಡುವಾಗ ಯಾವ ಶಬ್ದ ಬಳಸಿದ್ದೀರಿ ಅನ್ನೋದನ್ನು ಕರ್ನಾಟಕದ ಜನತೆ ನೋಡಿದ್ದಾರೆ. ಶಬ್ದವನ್ನ ಪ್ರಯೋಗ ಮಾಡಿ ನನ್ನನ್ನ ಪ್ರಚೋದಿಸಿದ್ದೀರಿ. ಅದಾದ ಮೇಲೆ ನೀವು ಒಳಗೆ ಹೋಗುತ್ತೀರಿ, ಹೊರಗಡೆ ನನ್ನನ್ನ ಮಾತಾಡುವ ಹಾಗೆ ಮಾಡುತ್ತೀರಿ. ನಾನು ಮೋಸ ಮಾಡಿ ಆಟ ಆಡಲಿಲ್ಲ. ಆದರೆ ನೀವು ಮಹಾ ಮೋಸ ಮಾಡಿ ನನ್ನನ್ನ ಸೋಲಿಸಿದ್ದೀರಿ’’ ಎಂದು ಗರಂ ಆಗಿ ಹೇಳಿದ್ದಾರೆ.

Bigg Boss Kannada

ಇದನ್ನೂ ಓದಿ |Bigg Boss Kannada | ಪ್ರಶಾಂತ್‌ ಆಟಕ್ಕೆ ಮನೆಯವರ ಹೊಗಳಿಕೆ: ನಿಮ್ಮನ್ನು ಟ್ರಸ್ಟ್‌ ಮಾಡೋದು ಕಷ್ಟ ಅಂದ್ರು ನೇಹಾ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಟಾಲಿವುಡ್

Bigg Boss Telugu 8: ಬಿಗ್‌ ಬಾಸ್‌ ಮನೆಗೆ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಎಂಟ್ರಿ?

Bigg Boss Telugu 8: ರಶ್ಮಿಕಾ, ಸಮಂತಾ, ನಯನತಾರಾ ಹೀಗೆ ಹಲವು ಟಾಪ್‌ ನಟಿಯರ ಭವಿಷ್ಯ ನುಡಿದು ಫೇಮಸ್‌ ಆದವರು ವೇಣುಸ್ವಾಮಿ. ಕೆಲವು ದಿನಗಳ ಹಿಂದೆ ನಟಿ ಶ್ರೀಲೀಲಾ ಬಗ್ಗೆ ಭವಿಷ್ಯ ನುಡಿದಿದ್ದರು. ಟಾಲಿವುಡ್ ಟಾಪ್ ನಟಿಯರಾಗಿ ಗುರುತಿಸಿಕೊಂಡಿರುವ ಸಮಂತಾ, ರಶ್ಮಿಕಾ ಮಂದಣ್ಣ, ಪೂಜಾ ಹೆಗ್ಡೆ ಅವರಂತೆ ಶ್ರೀಲೀಲಾ ಅವರಿಗೂ ಒಳ್ಳೆಯ ಹೆಸರು ಬರಲಿದೆ. ಆದರೆ ಸೌತ್ ಸಿನಿಮಾಗಳಲ್ಲಿ ಶ್ರೀಲೀಲಾ ನಂಬರ್ 1 ನಟಿಯಾಗುತ್ತಾರೆ ಎಂದು ವೇಣುಸ್ವಾಮಿ ಜ್ಯೋತಿಷ್ಯ ಹೇಳಿದ್ದರು. ವೇಣುಸ್ವಾಮಿ, ಟಾಲಿವುಡ್​ನ ಹಲವು ಸ್ಟಾರ್ ನಟ-ನಟಿಯರ ಭವಿಷ್ಯ ಹೇಳಿದ್ದರು. ಸಮಂತಾ-ನಾಗಚೈತನ್ಯ ಬೇರೆಯಾಗುತ್ತಾರೆ ಎಂದು ಸಹ ಭವಿಷ್ಯ ನುಡಿದಿದ್ದರು.

VISTARANEWS.COM


on

Bigg Boss Telugu 8 Astrologer Venu Swamy A Contestant
Koo

ಬೆಂಗಳೂರು: ಬಿಗ್​ಬಾಸ್ ತೆಲುಗು (Bigg Boss Telugu 8) ಮತ್ತೆ ಪ್ರಾರಂಭವಾಗುತ್ತಿದೆ.ಆಗಸ್ಟ್ 4 ರಂದು ಬಿಗ್​ಬಾಸ್ ತೆಲುಗು ಸೀಸನ್ 8 ಪ್ರಾರಂಭ ಆಗಲಿದೆ ಎಂದು ವರದಿಯಾಗಿದೆ. ಈ ಬಾರಿ ಬಿಗ್​ಬಾಸ್​ನಲ್ಲಿ ಭಾಗಿಯಾಗಲಿರುವ ಸ್ಪರ್ಧಿಗಳ ಬಗ್ಗೆ ವದಂತಿಗಳು ಹಬ್ಬಿವೆ. ತೆಲುಗಿನಲ್ಲಿ, ಬಿಗ್ ಬಾಸ್ ಶೋ (Bigg Boss Telugu Season 8 Starting Date) ದೊಡ್ಡ ಕ್ರೇಜ್‌ ಗಳಿಸಿದೆ. ಹಿಂದಿನ ಸೀಸನ್‌ಗಳಲ್ಲಿ ಭಾಗವಹಿಸಿದ ಅನೇಕ ಸ್ಪರ್ಧಿಗಳು ಆರ್ಥಿಕವಾಗಿ ಸಾಕಷ್ಟು ಯಶಸ್ವಿಯಾಗಿದ್ದಾರೆ. ಮತ್ತು ಮನರಂಜನಾ ಉದ್ಯಮದಲ್ಲಿ ಹೊಸ ಇಮೇಜ್ ಗಳಿಸಿದ್ದಾರೆ (bigg boss telugu contestants). ಈ ರಿಯಾಲಿಟಿ ಶೋನಲ್ಲಿ ಪಾಲ್ಗೊಳ್ಳುವ ಅವಕಾಶಕ್ಕಾಗಿ ಸಣ್ಣ-ಪರದೆಯ ಸೆಲೆಬ್ರಿಟಿಗಳು ಕಾಯುತ್ತಾರೆ ಎಂದರೆ ಅತಿಶಯೋಕ್ತಿಯಲ್ಲ. ಇದೀಗ ಬಿಗ್‌ ಬಾಸ್‌ ಮನೆಗೆ (Venu swamy) ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ವೇಣು ಸ್ವಾಮಿ ಜನಪ್ರಿಯ ಜ್ಯೋತಿಷಿಯಾಗಿದ್ದು, ಅವರು ಟಾಲಿವುಡ್ ಉದ್ಯಮದೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ. ಬಹುತೇಕ ಸರಿಯಾದ ಭವಿಷ್ಯವಾಣಿಯೊಂದಿಗೆ ಸಂಚಲನ ಮೂಡಿಸಿದ್ದಾರೆ. ಟಾಲಿವುಡ್ ಸೆಲೆಬ್ರಿಟಿಗಳ ಪ್ರೀತಿ, ಮದುವೆ ಮತ್ತು ವಿಚ್ಛೇದನದ ಬಗ್ಗೆ ಭವಿಷ್ಯ ನುಡಿದ ನಂತರ ಅವರು ವ್ಯಾಪಕವಾದ ಮೆಚ್ಚುಗೆಯನ್ನು ಗಳಿಸಿದರು. ಅನೇಕ ಬಾರಿ, ಅವರ ಭವಿಷ್ಯವಾಣಿಗಳು ನಿಜವಾಗಿದ್ದವು.

ಇದನ್ನೂ ಓದಿ: Bigg Boss Telugu 8: ಶುರುವಾಗ್ತಿದೆ ಬಿಗ್​ಬಾಸ್ ತೆಲುಗು ಸೀಸನ್ 8; ಸ್ಪರ್ಧಿಗಳು ಯಾರೆಲ್ಲ?

ರಶ್ಮಿಕಾ, ಸಮಂತಾ, ನಯನತಾರಾ ಹೀಗೆ ಹಲವು ಟಾಪ್‌ ನಟಿಯರ ಭವಿಷ್ಯ ನುಡಿದು ಫೇಮಸ್‌ ಆದವರು ವೇಣುಸ್ವಾಮಿ. ಕೆಲವು ದಿನಗಳ ಹಿಂದೆ ನಟಿ ಶ್ರೀಲೀಲಾ ಬಗ್ಗೆ ಭವಿಷ್ಯ ನುಡಿದಿದ್ದರು. ಟಾಲಿವುಡ್ ಟಾಪ್ ನಟಿಯರಾಗಿ ಗುರುತಿಸಿಕೊಂಡಿರುವ ಸಮಂತಾ, ರಶ್ಮಿಕಾ ಮಂದಣ್ಣ, ಪೂಜಾ ಹೆಗ್ಡೆ ಅವರಂತೆ ಶ್ರೀಲೀಲಾ ಅವರಿಗೂ ಒಳ್ಳೆಯ ಹೆಸರು ಬರಲಿದೆ. ಆದರೆ ಸೌತ್ ಸಿನಿಮಾಗಳಲ್ಲಿ ಶ್ರೀಲೀಲಾ ನಂಬರ್ 1 ನಟಿಯಾಗುತ್ತಾರೆ ಎಂದು ವೇಣುಸ್ವಾಮಿ ಜ್ಯೋತಿಷ್ಯ ಹೇಳಿದ್ದರು. ವೇಣುಸ್ವಾಮಿ, ಟಾಲಿವುಡ್​ನ ಹಲವು ಸ್ಟಾರ್ ನಟ-ನಟಿಯರ ಭವಿಷ್ಯ ಹೇಳಿದ್ದರು. ಸಮಂತಾ-ನಾಗಚೈತನ್ಯ ಬೇರೆಯಾಗುತ್ತಾರೆ ಎಂದು ಸಹ ಭವಿಷ್ಯ ನುಡಿದಿದ್ದರು.

ಜ್ಯೋತಿಷಿ ವೇಣುಸ್ವಾಮಿ (Venu Swamy) ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ ಮುನ್ನ, ಜಗನ್​ ಪಕ್ಷ ಮತ್ತೆ ಗೆಲ್ಲುತ್ತದೆ, ಮತ್ತೆ ಜಗನ್ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಅವರ ಭವಿಷ್ಯ ಸುಳ್ಳಾಗಿತ್ತು. ಆ ಬಳಿಕ ಜ್ಯೋತಿಷಿ ವೇಣುಸ್ವಾಮಿ ವಿಡಿಯೊ ಮೂಲಕ ಕ್ಷಮೆ ಕೇಳಿದ್ದರು. ರಾಜಕೀಯ ಮತ್ತು ಚಿತ್ರರಂಗದ ಗಣ್ಯರ ವೈಯಕ್ತಿಕ ಜೀವನದ ಬಗ್ಗೆ ಇನ್ನು ಮುಂದೆ ಭವಿಷ್ಯ ಹೇಳುವುದಿಲ್ಲ ಎಂದು ಜ್ಯೋತಿಷಿ ವೇಣು ಸ್ವಾಮಿ ವಿಡಿಯೊ ಮೂಲಕ ಹೇಳಿಕೊಂಡಿದ್ದರು.

ತೆಲುಗು ವರದಿಯ ಪ್ರಕಾರ ವೇಣು ಸ್ವಾಮಿ ಬಿಗ್‌ ಬಾಸ್‌ಗೆ ಎಂಟ್ರಿ ಕೊಡಲಿದ್ದಾರೆ ಎಂದು ವರದಿಯಾಗಿದೆ.ಈ ಸುದ್ದಿ ನಿಜವೇ ಆಗಿದ್ದರೆ ವೇಣು ಸ್ವಾಮಿ ಅವರ ಸಂಭಾವನೆ ಬಿಗ್ ಬಾಸ್ ತೆಲುಗು ಇತಿಹಾಸದಲ್ಲಿ ಇದುವರೆಗಿನ ಅತಿ ಹೆಚ್ಚು ಸಂಭಾವನೆಯಾಗಲಿದೆ.

ಸೀಸನ್‌ 7ರ ವರೆಗೆ ನಾಗಾರ್ಜುನ ಅವರೇ ನಿಭಾಯಿಸುತ್ತಿದ್ದಾರೆ. ನಾಗುರ್ಜನ ಅವರ ವಿಶಿಷ್ಟ ವರ್ಚಸ್ಸು ಮತ್ತು ಮಾತನಾಡುವ ಶೈಲಿಗೆ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಇದೀಗ ಮಾಹಿತಿ ಪ್ರಕಾರ ಈ ಸೀಸನ್‌ನಲ್ಲಿ ನಟರು, ಯೂಟ್ಯೂಬರ್‌ಗಳು ಮತ್ತು ಇತರ ಸಾರ್ವಜನಿಕ ವ್ಯಕ್ತಿಗಳ ಸಮ್ಮಿಶ್ರಣ ಇರಲಿದೆ ಎಂದು ವರದಿಯಾಗಿದೆ. . ಪ್ರತಿಬಾರಿಯಂತೆ ನಟ ನಾಗಾರ್ಜುನ ಅವರೇ ಈ ಬಾರಿಯೂ ಶೋ ನಡೆಸಿಕೊಡಲಿದ್ದಾರೆ.

ಸಂಭಾವ್ಯ ಪಟ್ಟಿ ಹೀಗಿದೆ!

ಬಾಂಚಿಕ್ ಬಬ್ಲು: ಜನಪ್ರಿಯ ಯೂಟ್ಯೂಬರ್. ರಾಜ್ ತರುಣ್: ಟಾಲಿವುಡ್‌ನ ಪ್ರಸಿದ್ಧ ನಟ. ಸೋನಿಯಾ ಸಿಂಗ್: ಸಾಮಾಜಿಕ ಮಾಧ್ಯಮದಲ್ಲಿ ಅಪಾರ ಬಳಗ ಹೊಂದಿರುವ ನಟಿ, ಡ್ರಗ್ಸ್ ಪ್ರಕರಣದ ಆರೋಪಿ ಹೇಮಾ ಸಹ ಈ ಬಾರಿ ಬಿಗ್​ಬಾಸ್​ಗೆ ಬರಲಿದ್ದಾರೆ ಎನ್ನಲಾಗುತ್ತಿದೆ. ಮರ್ಯಾದಾ ಹತ್ಯೆಯ ಸಂತ್ರಸ್ತೆ ಅಮೃತಾ ಪ್ರಣಯ್ಈ ಬಾರಿ ಬಿಗ್​ಬಾಸ್​ಗೆ ಹೋಗಲಿದ್ದಾರೆ. ಭಾರಿ ದುಬಾರಿ ಬೆಲೆಗೆ ಆಹಾರ ಮಾರಾಟ ಮಾಡುತ್ತಾ ಜನಪ್ರಿಯವಾಗಿರುವ ಕುಮಾರಿ ಆಂಟಿ ಈ ಬಾರಿ ಬಿಗ್​ಬಾಸ್ ಮನೆಗೆ ಹೋಗಲಿದ್ದಾರೆ ಎನ್ನಲಾಗುತ್ತಿದೆ. ಜನಪ್ರಿಯ ಯೂಟ್ಯೂಬ್ ಕಪಲ್ ಆಗಿರುವ ನೇತ್ರಾ ಮತ್ತು ವಂಶಿ ಸಹ ಈ ಬಾರಿ ಬಿಗ್​ಬಾಸ್​ಗೆ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ.

Continue Reading

ಬಿಗ್ ಬಾಸ್

Bigg Boss Telugu 8: ಶುರುವಾಗ್ತಿದೆ ಬಿಗ್​ಬಾಸ್ ತೆಲುಗು ಸೀಸನ್ 8; ಸ್ಪರ್ಧಿಗಳು ಯಾರೆಲ್ಲ?

Bigg Boss Telugu 8: ಸೀಸನ್‌ 7ರ ವರೆಗೆ ನಾಗಾರ್ಜುನ ಅವರೇ ನಿಭಾಯಿಸುತ್ತಿದ್ದಾರೆ. ನಾಗುರ್ಜನ ಅವರ ವಿಶಿಷ್ಟ ವರ್ಚಸ್ಸು ಮತ್ತು ಮಾತನಾಡುವ ಶೈಲಿಗೆ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಇದೀಗ ಮಾಹಿತಿ ಪ್ರಕಾರ ಈ ಸೀಸನ್‌ನಲ್ಲಿ ನಟರು, ಯೂಟ್ಯೂಬರ್‌ಗಳು ಮತ್ತು ಇತರ ಸಾರ್ವಜನಿಕ ವ್ಯಕ್ತಿಗಳ ಸಮ್ಮಿಶ್ರಣ ಇರಲಿದೆ ಎಂದು ವರದಿಯಾಗಿದೆ.

VISTARANEWS.COM


on

Bigg Boss Telugu 8 Contestants List Leaked
Koo

ಬೆಂಗಳೂರು:ಬಿಗ್ ಬಾಸ್ ತೆಲುಗು ಸೀಸನ್-7 ಮುಗಿದ ಬಳಿಕ ಸೀಸನ್‌ 8 (Bigg Boss Telugu 8) ಶುರು ಯಾವಾಗ ಎಂದು ಪ್ರೇಕ್ಷಕರು ಕಾಯುತ್ತಿದ್ದರು. TRP ರೇಟಿಂಗ್‌ಗಳಿಗೆ ಸಂಬಂಧಿಸಿದಂತೆ ಕಳೆದ ಸೀಸನ್ ಭರ್ಜರಿ ಹಿಟ್ ಆಗಿತ್ತು. ಮಾತ್ರವಲ್ಲ ಬಿಗ್ ಬಾಸ್ ತೆಲುಗು ಸೀಸನ್-7 (Bigg Boss Telugu 7) ವಿಜೇತ ಪಲ್ಲವಿ ಪ್ರಶಾಂತ್ ಅರೆಸ್ಟ್‌ ಆಗಿ ಸಖತ್‌ ಸುದ್ದಿಯಲ್ಲಿದ್ದರು. ಇದೀಗ ಬಿಗ್​ಬಾಸ್ ತೆಲುಗು ಮತ್ತೆ ಪ್ರಾರಂಭವಾಗುತ್ತಿದೆ.ಆಗಸ್ಟ್ 4 ರಂದು ಬಿಗ್​ಬಾಸ್ ತೆಲುಗು ಸೀಸನ್ 8 ಪ್ರಾರಂಭ ಆಗಲಿದೆ. ಈ ಬಾರಿ ಬಿಗ್​ಬಾಸ್​ನಲ್ಲಿ ಭಾಗಿಯಾಗಲಿರುವ ಸ್ಪರ್ಧಿಗಳು ಈಗಾಗಲೇ ಖಾತ್ರಿ ಆಗಿದ್ದಾರೆ ಎನ್ನಲಾಗುತ್ತಿದೆ.

ಜೂನಿಯರ್ ಎನ್‌ಟಿಆರ್ ಮೊದಲ ಆವೃತ್ತಿಯನ್ನು ಹೋಸ್ಟ್ ಮಾಡಿದ್ದರೆ, ನಾನಿ ಎರಡನೇ ಆವೃತ್ತಿಯನ್ನು ಹೋಸ್ಟ್ ಮಾಡಿದ್ದರು. ಆ ಬಳಿಕ ನಾಗಾರ್ಜುನ ಅವರು ಹೋಸ್ಟ್‌ ಮಾಡುತ್ತ ಬಂದಿದ್ದಾರೆ. ಸೀಸನ್‌ 7ರ ವರೆಗೆ ನಾಗಾರ್ಜುನ ಅವರೇ ನಿಭಾಯಿಸುತ್ತಿದ್ದಾರೆ. ನಾಗುರ್ಜನ ಅವರ ವಿಶಿಷ್ಟ ವರ್ಚಸ್ಸು ಮತ್ತು ಮಾತನಾಡುವ ಶೈಲಿಗೆ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಇದೀಗ ಮಾಹಿತಿ ಪ್ರಕಾರ ಈ ಸೀಸನ್‌ನಲ್ಲಿ ನಟರು, ಯೂಟ್ಯೂಬರ್‌ಗಳು ಮತ್ತು ಇತರ ಸಾರ್ವಜನಿಕ ವ್ಯಕ್ತಿಗಳ ಸಮ್ಮಿಶ್ರಣ ಇರಲಿದೆ ಎಂದು ವರದಿಯಾಗಿದೆ. . ಪ್ರತಿಬಾರಿಯಂತೆ ನಟ ನಾಗಾರ್ಜುನ ಅವರೇ ಈ ಬಾರಿಯೂ ಶೋ ನಡೆಸಿಕೊಡಲಿದ್ದಾರೆ.

ಇದನ್ನೂ ಓದಿ: Bigg Boss Telugu 7: ಬಿಗ್ ಬಾಸ್ ತೆಲುಗು ಸೀಸನ್-7 ವಿಜೇತ ಪಲ್ಲವಿ ಪ್ರಶಾಂತ್ ಅರೆಸ್ಟ್‌!

ಸಂಭಾವ್ಯ ಪಟ್ಟಿ ಹೀಗಿದೆ!

ಬಾಂಚಿಕ್ ಬಬ್ಲು: ಜನಪ್ರಿಯ ಯೂಟ್ಯೂಬರ್. ರಾಜ್ ತರುಣ್: ಟಾಲಿವುಡ್‌ನ ಪ್ರಸಿದ್ಧ ನಟ. ಸೋನಿಯಾ ಸಿಂಗ್: ಸಾಮಾಜಿಕ ಮಾಧ್ಯಮದಲ್ಲಿ ಅಪಾರ ಬಳಗ ಹೊಂದಿರುವ ನಟಿ, ಡ್ರಗ್ಸ್ ಪ್ರಕರಣದ ಆರೋಪಿ ಹೇಮಾ ಸಹ ಈ ಬಾರಿ ಬಿಗ್​ಬಾಸ್​ಗೆ ಬರಲಿದ್ದಾರೆ ಎನ್ನಲಾಗುತ್ತಿದೆ. ಮರ್ಯಾದಾ ಹತ್ಯೆಯ ಸಂತ್ರಸ್ತೆ ಅಮೃತಾ ಪ್ರಣಯ್ಈ ಬಾರಿ ಬಿಗ್​ಬಾಸ್​ಗೆ ಹೋಗಲಿದ್ದಾರೆ. ಭಾರಿ ದುಬಾರಿ ಬೆಲೆಗೆ ಆಹಾರ ಮಾರಾಟ ಮಾಡುತ್ತಾ ಜನಪ್ರಿಯವಾಗಿರುವ ಕುಮಾರಿ ಆಂಟಿ ಈ ಬಾರಿ ಬಿಗ್​ಬಾಸ್ ಮನೆಗೆ ಹೋಗಲಿದ್ದಾರೆ ಎನ್ನಲಾಗುತ್ತಿದೆ. ಜನಪ್ರಿಯ ಯೂಟ್ಯೂಬ್ ಕಪಲ್ ಆಗಿರುವ ನೇತ್ರಾ ಮತ್ತು ವಂಶಿ ಸಹ ಈ ಬಾರಿ ಬಿಗ್​ಬಾಸ್​ಗೆ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ.

ಸೆಪ್ಟೆಂಬರ್ 3 ರಂದು ತೆಲುಗು ಬಿಗ್​ಬಾಸ್ ಸೀಸನ್ 7 ಆರಂಭವಾಗಿತ್ತು. 19 ಮಂದಿ ಸ್ಪರ್ಧಿಗಳು ಶೋನಲ್ಲಿ ಭಾಗಿಯಾಗಿದ್ದರು. ಅವರಲ್ಲೇ ಇಬ್ಬರು ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮತ್ತೆ ಮನೆಗೆ ಬಂದಿದ್ದರು. ಅಲ್ಲಿಗೆ ಒಟ್ಟು 21 ಸ್ಪರ್ಧಿಗಳು ಈ ಬಾರಿಯ ಬಿಗ್​ಬಾಸ್ ತೆಲುಗು ಸೀಸನ್ 7ರಲ್ಲಿ ಆಡಿದರುಪಲ್ಲವಿ ಪ್ರಶಾಂತ್ ವಿನ್ನರ್ ಆಗಿದ್ದು, ಹಲವರಿಗೆ ಖುಷಿ ನೀಡಿತ್ತು. ಆದರೆ ಮೊದಲಿನಿಂದಲೂ ಶಿವಾಜಿ ವಿನ್ನರ್ ಎಂದುಕೊಂಡಿದ್ದ ಹಲವರಿಗೆ ಬೇಸರವಾಗಿತ್ತು.

Continue Reading

ಬಿಗ್ ಬಾಸ್

Actress Siri: ಬಿಗ್​ಬಾಸ್​ನಲ್ಲಿ ಚಿಗುರಿತಾ ಪ್ರೇಮ? ‘ರಂಗೋಲಿ’ ಖ್ಯಾತಿಯ ಸಿರಿಯ ವರನ್ಯಾರು?

Actress Siri: ಬಿಗ್ ಬಾಸ್ ಸಿರಿ ಮದುವೆಯಾಗಿರುವ ಹುಡುಗ ಮೂಲತಃ ಮಂಡ್ಯದವರು ಸದ್ಯ ಬೆಂಗಳೂರಿನಲ್ಲಿ ನಲೆಸಿದ್ದಾರೆ. ಅವರ ಹೆಸರು ಪ್ರಭಾಕರ್ ಬೋರೇಗೌಡ. ಪ್ರಭಾಕರ್‌ ಬೋರೇಗೌಡ ಮತ್ತು ಸಿರಿ ಒಟ್ಟಿಗೆ ನಟಿಸಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್‌ ಮನೆಯಿಂದ ಸಿರಿ ಎಲಿಮಿನೇಟ್‌ ಆದ ಬಳಿಕ ಸಿರಿ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ.

VISTARANEWS.COM


on

Actress Siri marriage to actor prabhakar
Koo

ಬೆಂಗಳೂರು: ‘ರಂಗೋಲಿ’, ‘ಮನೆಯೊಂದು ಮೂರು ಬಾಗಿಲು’, ‘ಬದುಕು’ ಮುಂತಾದ ಧಾರಾವಾಹಿಗಳನ್ನು ಪ್ರೇಕ್ಷಕರು ಮನಗೆದ್ದ ಸಿರಿ ಬಿಗ್ ಬಾಸ್ (BBK Season 10) ಈಗ ಮದುವೆಯಾಗಿದ್ದಾರೆ. ಇನ್ನೂ (Actress Siri) ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆಗಳನ ನಡುವೆ ಅವರು ಸದ್ದಿಲ್ಲದೇ, ಸಿಂಪಲ್‌ ಆಗಿ ಹಸೆ ಮಣೆ ಏರಿದ್ದಾರೆ. ಮೂಲಗಳ ಪ್ರಕಾರ ಸಿರಿ ಮದುವೆಯಾದ ಹುಡುಗನ ಹೆಸರು ಪ್ರಭಾಕರ್. ಮಂಡ್ಯ ಮೂಲದವರಾದ ಇವರು ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಇವರಿಬ್ಬರೂ ಚಿಕ್ಕಬಳ್ಳಾಪುರದ ನಂದಿ ಗ್ರಾಮದಲ್ಲಿ ಮದುವೆ ಮಾಡಿಕೊಂಡಿದ್ದಾರೆ.

ಬಿಗ್ ಬಾಸ್ ಸಿರಿ ಮದುವೆಯಾಗಿರುವ ಹುಡುಗ ಮೂಲತಃ ಮಂಡ್ಯದವರು ಸದ್ಯ ಬೆಂಗಳೂರಿನಲ್ಲಿ ನಲೆಸಿದ್ದಾರೆ. ಅವರ ಹೆಸರು ಪ್ರಭಾಕರ್ ಬೋರೇಗೌಡ. ಪ್ರಭಾಕರ್‌ ಬೋರೇಗೌಡ ಮತ್ತು ಸಿರಿ ಒಟ್ಟಿಗೆ ನಟಿಸಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್‌ ಮನೆಯಿಂದ ಸಿರಿ ಎಲಿಮಿನೇಟ್‌ ಆದ ಬಳಿಕ ಸಿರಿ ಈ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ. ‘ನಿಮ್ಮಲ್ಲರ ಸಪೋರ್ಟ್‌ಗೆ ವಂದನೆಗಳು’ ಎಂದು ಪ್ರಭಾಕರ್ ಬರೆದುಕೊಂಡಿದ್ದರು.

ಇವರಿಬ್ಬರ ಪರಿಚಯ ಆಗಿದ್ದು ಹೇಗೆ? ಲವ್ ಮ್ಯಾರೇಜ್ ಆಗಿರಬಹುದಾ? ಬಿಗ್ ಬಾಸ್‌ ನಂತರ ಅರಳಿದ ಪ್ರೀತಿನಾ ಎಂದು ಜನರು ಕಮೆಂಟ್‌ ಮೂಲಕ ಪ್ರಶ್ನೆ ಇಡುತ್ತಿದ್ದಾರೆ.

ಇದನ್ನೂ ಓದಿ: Actress Siri: ಸಿಂಪಲ್‌ ಆಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ `ಬಿಗ್‌ ಬಾಸ್‌ ಕನ್ನಡ 10′ ಸ್ಪರ್ಧಿ, ನಟಿ ಸಿರಿ!

ಸಿರಿ ಅವರಿಗೆ ಮೈತುಂಬ ಅರಿಷಿಣ ಹಚ್ಚಿರುವ ವಿಡಿಯೊ ವೈರಲ್ ಆಗಿದೆ. ಇದು ಸಿನಿಮಾ ಅಥವಾ ಧಾರಾವಾಹಿ ಶೂಟಿಂಗ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ ಸಿರಿ ಅವರು ರಿಯಲ್ ಲೈಫ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಹುಡುಗ ಯಾರು ಎಂಬುದು ಇನ್ನೂ ರಿವೀಲ್‌ ಆಗಿಲ್ಲ. ಹಾಗೇ ಸಿರಿ ಕೂಡ ಎಲ್ಲಿಯೂ ಪೋಸ್ಟ್‌ ಶೇರ್‌ ಮಾಡಿಕೊಂಡಿಲ್ಲ. ಸಿರಿ ಅವರಿಗೆ ಈಗ 40 ವರ್ಷ ವಯಸ್ಸು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಕಲರ್ಸ್‌ ಕನ್ನಡದ ʻರಾಮಾಚಾರಿʼ ಧಾರಾವಾಹಿಯಲ್ಲಿ ನಟಿ ಬಣ್ಣ ಹಚ್ಚಿದ್ದರು. ಈಗ ಪರಭಾಷೆಯ ಕಿರುತೆರೆಯಲ್ಲಿಯೂ ಮಿಂಚುತ್ತಿದ್ದಾರೆ. ಕೆಲ ಸಿನಿಮಾಗಳಲ್ಲಿ ಕೂಡ ಸಿರಿ ಅವರು ನಟಿಸಿದ್ದಾರೆ. 30 ವರ್ಷಗಳ ಕಾಲ ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ಸಿರಿ ಯಾಕೆ ಮದುವೆಯಾಗಲಿಲ್ಲ ಎಂದು ನೆಟ್ಟಿಗರು ನಟಿಗೆ ಹಲವು ಬಾರಿ ಪ್ರಶ್ನೆ ಮಾಡಿದ್ದೂ ಇದೆ.

ಬಿಗ್‌ ಬಾಸ್‌ ವೇದಿಕೆಯಲ್ಲಿ ಈ ಬಗ್ಗೆ ಸಿರಿ ಮಾತನಾಡಿದ್ದು ಇದೆ. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು.

ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

Continue Reading

ಬಿಗ್ ಬಾಸ್

Actress Siri: ಸಿಂಪಲ್‌ ಆಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ `ಬಿಗ್‌ ಬಾಸ್‌ ಕನ್ನಡ 10′ ಸ್ಪರ್ಧಿ, ನಟಿ ಸಿರಿ!

Actress Siri: ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

VISTARANEWS.COM


on

Actress Bbk 10 Siri Marriage Video Goes Viral
Koo

ಬೆಂಗಳೂರು: ‘ರಂಗೋಲಿ’, ‘ಮನೆಯೊಂದು ಮೂರು ಬಾಗಿಲು’, ‘ಬದುಕು’ ಮುಂತಾದ ಧಾರಾವಾಹಿಗಳನ್ನು ಪ್ರೇಕ್ಷಕರು ಮನಗೆದ್ದ ಸಿರಿ ಬಿಗ್ ಬಾಸ್ (BBK Season 10) ಈಗ ಮದುವೆಯಾಗಿದ್ದಾರೆ. ಇನ್ನೂ (Actress Siri) ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆ ಅವರ ಫ್ಯಾನ್ಸ್‌ನಲ್ಲಿ ಪದೇ ಪದೇ ಕಾಡುತ್ತಿತ್ತು. ಈಗ ಸದ್ದಿಲ್ಲದೇ ಸಿಂಪಲ್‌ ಆಗಿ ಮದುವೆಯಾಗಿದ್ದಾರೆ ಸಿರಿ.

ಸಿರಿ ಅವರಿಗೆ ಮೈತುಂಬ ಅರಿಷಿಣ ಹಚ್ಚಿರುವ ವಿಡಿಯೊ ವೈರಲ್ ಆಗಿದೆ. ಇದು ಸಿನಿಮಾ ಅಥವಾ ಧಾರಾವಾಹಿ ಶೂಟಿಂಗ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ ಸಿರಿ ಅವರು ರಿಯಲ್ ಲೈಫ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಹುಡುಗ ಯಾರು ಎಂಬುದು ಇನ್ನೂ ರಿವೀಲ್‌ ಆಗಿಲ್ಲ. ಹಾಗೇ ಸಿರಿ ಕೂಡ ಎಲ್ಲಿಯೂ ಪೋಸ್ಟ್‌ ಶೇರ್‌ ಮಾಡಿಕೊಂಡಿಲ್ಲ. ಸಿರಿ ಅವರಿಗೆ ಈಗ 40 ವರ್ಷ ವಯಸ್ಸು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಕಲರ್ಸ್‌ ಕನ್ನಡದ ʻರಾಮಾಚಾರಿʼ ಧಾರಾವಾಹಿಯಲ್ಲಿ ನಟಿ ಬಣ್ಣ ಹಚ್ಚಿದ್ದರು. ಈಗ ಪರಭಾಷೆಯ ಕಿರುತೆರೆಯಲ್ಲಿಯೂ ಮಿಂಚುತ್ತಿದ್ದಾರೆ. ಕೆಲ ಸಿನಿಮಾಗಳಲ್ಲಿ ಕೂಡ ಸಿರಿ ಅವರು ನಟಿಸಿದ್ದಾರೆ. 30 ವರ್ಷಗಳ ಕಾಲ ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ಸಿರಿ ಯಾಕೆ ಮದುವೆಯಾಗಲಿಲ್ಲ ಎಂದು ನೆಟ್ಟಿಗರು ನಟಿಗೆ ಹಲವು ಬಾರಿ ಪ್ರಶ್ನೆ ಮಾಡಿದ್ದೂ ಇದೆ.

ಇದನ್ನೂ ಓದಿ: Kotee Movie: ಡಾಲಿ ಧನಂಜಯ್ ಅಭಿನಯದ ‘ಕೋಟಿ’ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆ

ಬಿಗ್‌ ಬಾಸ್‌ ವೇದಿಕೆಯಲ್ಲಿ ಈ ಬಗ್ಗೆ ಸಿರಿ ಮಾತನಾಡಿದ್ದು ಇದೆ. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು. ಮದುವೆ ಬಗ್ಗೆ ಸಿರಿ ಮಾತನಾಡಿ ʻʻನಟನೆಯಲ್ಲಿ ಇರುವುದರಿಂದ ನನ್ನನ್ನು ಅರ್ಥ ಮಾಡಿಕೊಳ್ಳುವ ಹುಡುಗ ಬೇಕು. ಈಗ ನನ್ನ ಮನೆಗೆ ಅಳಿಯ ಎನ್ನುವುದಕ್ಕಿಂತ ಮಗನಾಗಿ ಬರಬೇಕು. ತಂದೆ ಹೋದ ಮೇಲೆ ನಾವು ಹೆಣ್ಣು ಮಕ್ಕಳೇ ಇರುವುದು. ಮದುವೆ ನನಗೆ ನಿಜವಾಗಲೂ ಬೇಕಾ ಎಂದು ಕೆಲವೊಮ್ಮೆ ಅನ್ನಿಸಿದಾಗ ನನಗೇನು ಮದುವೆ ಅವಶ್ಯ ಇದೆ ಎಂದು ಎನಿಸಲಿಲ್ಲʼʼ ಎಂದಿದ್ದರು.

ಬಿಗ್‌ಬಾಸ್‌ ಮನೆಗೆ ಇವರ ವ್ಯಕ್ತಿತ್ವ ಹೊಂದುವುದಿಲ್ಲ’, ‘ಯಾವುದರಲ್ಲಿಯೂ ಅಷ್ಟಾಗಿ ತೊಡಗಿಕೊಳ್ಳುವುದಿಲ್ಲ’ ‘ಟಾಸ್ಕ್‌ಗಳಲ್ಲಿ ಪರ್ಫಾರ್ಮ್‌ ಮಾಡಿಲ್ಲ’ ಇಂಥ ಮಾತುಗಳನ್ನೆಲ್ಲ ಮನೆಯ ಸದಸ್ಯರಿಂದ ಕೇಳುತ್ತಲೇ ಬಿಗ್‌ಬಾಸ್‌ ಸೀಸನ್‌ನ ಮುಕ್ಕಾಲು ದಾರಿಯನ್ನು ಕ್ರಮಿಸಿ ಸೈ ಎನಿಸಿಕೊಂಡಿದ್ದರು ಸಿರಿ.

Continue Reading
Advertisement
MS Dhoni Birthday
ಕ್ರಿಕೆಟ್49 seconds ago

MS Dhoni Birthday: ಸಲ್ಮಾನ್​ ಖಾನ್​ ಜತೆ ಕೇಕ್​ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ ಧೋನಿ

Building Collapse
ದೇಶ18 mins ago

Building Collapse: ಐದು ಅಂತಸ್ತಿನ ಕಟ್ಟಡ ಧರಾಶಾಹಿ- ಏಳು ಜನ ದಾರುಣ ಸಾವು

Kannada New Movie Not Out Trailer out
ಸ್ಯಾಂಡಲ್ ವುಡ್25 mins ago

Kannada New Movie: ಕುತೂಹಲ ಮೂಡಿಸಿದೆ ʻನಾಟ್ ಔಟ್ʼ ಚಿತ್ರದ ಟ್ರೈಲರ್‌!

Boiler Blast
ಕರ್ನಾಟಕ31 mins ago

Boiler Blast: ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್‌ ಸ್ಫೋಟ; ತಪ್ಪಿದ ಬಹುದೊಡ್ಡ ಅನಾಹುತ

MS Dhoni Birthday
ಕ್ರೀಡೆ33 mins ago

MS Dhoni Birthday: 43ನೇ ವಸಂತಕ್ಕೆ ಕಾಲಿಟ್ಟ ಮಹೇಂದ್ರ ಸಿಂಗ್‌ ಧೋನಿ

Pearl Fashion
ಫ್ಯಾಷನ್51 mins ago

Pearl Fashion: ಮುತ್ತಿನ ಹಾರಕ್ಕೆ ಸಿಕ್ತು ನ್ಯೂ ಲುಕ್‌!

Crime News
ಕ್ರೈಂ1 hour ago

Crime News: ಗಾಂಜಾ ಮತ್ತಿನಲ್ಲಿ ಕಾರು ಓಡಿಸಿ ಬೈಕ್‌ಗಳಿಗೆ ಗುದ್ದಿದ ಚಾಲಕ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳರು

Health Food Tips
ಆರೋಗ್ಯ1 hour ago

Health Food Tips: ಈ ಕೆಲವು ಆಹಾರಗಳ ಸೇವನೆಯಿಂದ ಬಾಯಾರಿ, ಗಂಟಲೊಣಗಿ ನೀರು ಬೇಕೆನಿಸುತ್ತದೆ!

Toothbrush Using Tips
ಲೈಫ್‌ಸ್ಟೈಲ್2 hours ago

Toothbrush Using Tips: ನಿಮ್ಮ ಬ್ರಷ್‌ ಬದಲಿಸಿದ್ದು ಯಾವಾಗ ನೆನಪಿದೆಯಾ?

karnataka weather Forecast
ಮಳೆ3 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ14 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ17 hours ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ18 hours ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು20 hours ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ22 hours ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ1 day ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ2 days ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ2 days ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ2 days ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

ಟ್ರೆಂಡಿಂಗ್‌