Congress President | ಅಧ್ಯಕ್ಷ ಚುನಾವಣೆಗೆ ಮುನ್ನವೇ ಕಾಂಗ್ರೆಸ್‌ ಮಹತ್ವದ ಬದಲಾವಣೆ, ಏನದು? - Vistara News

ದೇಶ

Congress President | ಅಧ್ಯಕ್ಷ ಚುನಾವಣೆಗೆ ಮುನ್ನವೇ ಕಾಂಗ್ರೆಸ್‌ ಮಹತ್ವದ ಬದಲಾವಣೆ, ಏನದು?

ಕಾಂಗ್ರೆಸ್‌ ಅಧ್ಯಕ್ಷ (Congress President) ಸ್ಥಾನಕ್ಕೆ ಸ್ಪರ್ಧಿಸಿದವರ ಹೆಸರುಗಳ ಮುಂದೆ ‘1’ ಎಂದು ಬರೆಯಬೇಕಿತ್ತು. ಆದರೆ, ಈಗ ಹೆಸರಿನ ಮುಂದೆ ‘ರೈಟ್‌ ಮಾರ್ಕ್’ ಬರೆಯಬೇಕು ಎಂಬುದಾಗಿ ಪಕ್ಷ ಸೂಚಿಸಿದೆ.

VISTARANEWS.COM


on

Shashi Tharoor
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷ (Congress President) ಚುನಾವಣೆಗೆ ಕ್ಷಣಗಣನೆ ಆರಂಭವಾದ ಬೆನ್ನಲ್ಲೇ ಚುನಾವಣೆ ಪ್ರಕ್ರಿಯೆಯಲ್ಲಿ ಪಕ್ಷವು ಮಹತ್ವದ ಬದಲಾವಣೆ ಮಾಡಿದೆ. ಇದುವರೆಗೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದವರ ಹೆಸರುಗಳ ಮುಂದೆ ‘1’ ಎಂದು ಬರೆಯುವ ಬದಲು, ‘ರೈಟ್‌ ಮಾರ್ಕ್’ ಬರೆಯಬೇಕು ಎಂಬುದಾಗಿ ಪಕ್ಷ ಸೂಚಿಸಿದೆ.

ಕಾಂಗ್ರೆಸ್‌ ನಿಯಮ ಬದಲಾವಣೆ ಕುರಿತು ಪಕ್ಷದ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಶಶಿ ತರೂರ್‌ ಅವರು ಟ್ವೀಟ್‌ ಮಾಡಿದ್ದಾರೆ. “ಕಾಂಗ್ರೆಸ್‌ ಚುನಾವಣೆ ಪ್ರಾಧಿಕಾರವು ಮತದಾನ ಪ್ರಕ್ರಿಯೆಯ ನಿಯಮ ಬದಲಿಸಿದೆ. ಮತಪತ್ರದಲ್ಲಿ ಅಭ್ಯರ್ಥಿಗಳ ಹೆಸರಿನ ಎದುರು ‘1’ ಎಂದು ಬರೆಯುವ ಬದಲು ಟಿಕ್‌ ಮಾರ್ಕ್‌ ಬರೆಯಬೇಕು” ಎಂಬುದಾಗಿ ತಿಳಿಸಿದ್ದಾರೆ.

“ಟಿಕ್‌ ಮಾರ್ಕ್‌ ಹೊರತಾಗಿ ಬೇರೆ ಯಾವುದೇ ಮಾರ್ಕ್‌ ಹಾಕಿದರೆ ಅಥವಾ ಬರೆದರೆ ಆ ಮತ ಅಮಾನ್ಯ” ಎಂದು ಕಾಂಗ್ರೆಸ್‌ ತಿಳಿಸಿದೆ. ಸೋಮವಾರ (ಅಕ್ಟೋಬರ್‌ ೧೭) ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್‌ ಕಣದಲ್ಲಿದ್ದಾರೆ. ಬೆಳಗ್ಗೆ ೧೦ ಗಂಟೆಯಿಂದ ಸಂಜೆ ೪ರವರೆಗೆ ಮತದಾನ ನಡೆಯಲಿದೆ.

ಇದನ್ನೂ ಓದಿ | ವಿಸ್ತಾರ Explainer | 22 ವರ್ಷದ ಬಳಿಕ ನಾಳೆ ಕಾಂಗ್ರೆಸ್‌ ಅಧ್ಯಕ್ಷ ಚುನಾವಣೆ, ಹೇಗಿರಲಿದೆ ಪ್ರಕ್ರಿಯೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Bangladesh Protests: ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ, ದೇಶದಿಂದ ಪಲಾಯನ; ಪ್ರಧಾನಿ ಅರಮನೆಗೇ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

Bangladesh Protests: ಪ್ರಧಾನಿ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸಿ ಲಕ್ಷಾಂತರ ಪ್ರತಿಭಟನಾಕಾರರು ಕರ್ಫ್ಯೂ ಧಿಕ್ಕರಿಸಿ, ರಾಜಧಾನಿಯ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು ಮತ್ತು ಪ್ರಧಾನಿಯವರ ಅರಮನೆಗೆ ನುಗ್ಗಿ ಬೆಂಕಿ ಹಚ್ಚಿದರು. ಶೇಖ್‌ ಹಸೀನಾ ಮತ್ತು ಅವರ ಸಹೋದರಿ ಪ್ರಧಾನಿಗಳ ಅಧಿಕೃತ ನಿವಾಸವನ್ನು ತೊರೆದು ಸುರಕ್ಷಿತ ಸ್ಥಳದತ್ತ ತೆರಳಿದ್ದಾರೆ. ಅವರು ಅಧಿಕೃತ ಭಾಷಣವನ್ನು ರೆಕಾರ್ಡ್ ಮಾಡಲು ಬಯಸಿದ್ದರು. ಆದರೆ ಅದನ್ನು ಮಾಡಲು ಆಕೆಗೆ ಅವಕಾಶ ಸಿಗಲಿಲ್ಲ ಎಂದು ಹೇಳಲಾಗಿದೆ. ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ಶೇಖ್‌ ಹಸೀನಾ ರಾಜೀನಾಮೆ ನೀಡಿದ್ದಾರೆ.

VISTARANEWS.COM


on

Bangladesh Protests
Koo

ಹೊಸದಿಲ್ಲಿ/ಢಾಕಾ: ದೇಶಾದ್ಯಂತ ಹಿಂಸಾಚಾರ, ಘರ್ಷಣೆಗಳು (Bangladesh Protests) ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ (Bangladesh Prime Minister Sheikh Hasina) ಅವರು ರಾಜೀನಾಮೆ ನೀಡಿ ರಾಜಧಾನಿ ಢಾಕಾವನ್ನು (Dhaka) ತೊರೆದಿದ್ದಾರೆ. ಪ್ರತಿಭಟನಾಕಾರರು ಪಿಎಂ ನಿವಾಸದತ್ತ ನುಗ್ಗುತ್ತಿದ್ದಾರೆ ಹಾಗೂ ಬೀದಿಗಳಲ್ಲಿ ಬೆಂಕಿ ಹಚ್ಚುತ್ತಿದ್ದಾರೆ. ಪ್ರಧಾನಿಯ ಅರಮನೆಗೇ ಬೆಂಕಿ ಹಚ್ಚಿದ್ದಾರೆ. ಹೀಗಾಗಿ ಹೆಚ್ಚು ಸುರಕ್ಷಿತ ಪ್ರದೇಶದತ್ತ ಹಸೀನಾ ತೆರಳಿದ್ದಾರೆ ಎಂದು ಸುದ್ದಿ ಮೂಲಗಳು ತಿಳಿಸಿವೆ. ಅವರು ದೇಶದಿಂದ ಪಲಾಯನ ಮಾಡಿದ್ದಾರೆ ಎಂದು ಮತ್ತೊಂದು ಮೂಲ ತಿಳಿಸಿದೆ.

ಶೇಖ್‌ ಹಸೀನಾ ಮತ್ತು ಅವರ ಸಹೋದರಿ ಪ್ರಧಾನಿಗಳ ಅಧಿಕೃತ ನಿವಾಸವನ್ನು ತೊರೆದು ಸುರಕ್ಷಿತ ಸ್ಥಳದತ್ತ ತೆರಳಿದ್ದಾರೆ. ಅವರು ಅಧಿಕೃತ ಭಾಷಣವನ್ನು ರೆಕಾರ್ಡ್ ಮಾಡಲು ಬಯಸಿದ್ದರು. ಆದರೆ ಅದನ್ನು ಮಾಡಲು ಆಕೆಗೆ ಅವಕಾಶ ಸಿಗಲಿಲ್ಲ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ, ಶೇಖ್‌ ಹಸೀನಾ ರಾಜೀನಾಮೆ ನೀಡಿದರು ಎಂದು ಹೇಳಲಾಗಿದೆ.

ಪ್ರಧಾನಿ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸಿ ಲಕ್ಷಾಂತರ ಪ್ರತಿಭಟನಾಕಾರರು ಕರ್ಫ್ಯೂ ಧಿಕ್ಕರಿಸಿ, ರಾಜಧಾನಿಯ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು ಮತ್ತು ಪ್ರಧಾನಿಯವರ ಅರಮನೆಯನ್ನು ನುಗ್ಗಲು ಯತ್ನಿಸಿದರು. ಢಾಕಾದಲ್ಲಿ ಶಸ್ತ್ರಸಜ್ಜಿತ ವಾಹನಗಳೊಂದಿಗೆ ಸೈನಿಕರು ಮತ್ತು ಪೊಲೀಸರು ಪ್ರಧಾನಿ ಕಚೇರಿ ಹಾಗೂ ನಿವಾಸಕ್ಕೆ ಮುಳ್ಳುತಂತಿಯ ಬೇಲಿಗಳ ಮೂಲಕ ಬಂದೋಬಸ್ತ್‌ ಮಾಡಿದರಾದರೂ, ಅಪಾರ ಜನಸಮೂಹದ ಮುಂದೆ ಅವರು ನಿಸ್ಸಹಾಯಕರಾದರು. ಬೀದಿಗಳಲ್ಲಿ ಹರಿದುಬಂದ ಪ್ರತಿಭಟನಾಕಾರರ ಪ್ರವಾಹ ಅಡೆತಡೆಗಳನ್ನು ಕಿತ್ತುಹಾಕಿತು. ಸ್ಥಳೀಯ ಮಾಧ್ಯಮಗಳ ಪ್ರಕಾರ ಅಂದಾಜು 400,000 ಪ್ರತಿಭಟನಾಕಾರರು ಬೀದಿಗಳಲ್ಲಿದ್ದಾರೆ.

ನಿನ್ನೆ ನಡೆದ ಭೀಕರ ಘರ್ಷಣೆಗಳಲ್ಲಿ 98 ಜನರು ಸಾವನ್ನಪ್ಪಿದ್ದರು. ನಂತರ ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ವಾಕರ್-ಉಜ್-ಜಮಾನ್ ಅವರು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲು ಸಜ್ಜಾಗಿದ್ದಾರೆ. ಕಳೆದ ತಿಂಗಳು ಪ್ರತಿಭಟನೆಗಳು ಭುಗಿಲೆದ್ದಿದ್ದವು. ಇದುವರೆಗೆ ಸಾವಿನ ಸಂಖ್ಯೆ 300ನ್ನೂ ದಾಟಿ ಏರುತ್ತಿದೆ.

ರಾಜೀನಾಮೆಗೆ ಒತ್ತಾಯಿಸಿ ಹಿಂಸೆ

ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ (Bangladesh Protests) ಹಲವು ದಿನಗಳ ಹಿಂದೆ ನಡೆದ ಹಿಂಸಾಚಾರದಲ್ಲಿ ನೂರಾರು ಜನ ಮೃತಪಟ್ಟ ಬೆನ್ನಲ್ಲೇ ಮತ್ತೊಂದು ಹಿಂಸಾಚಾರ ಭುಗಿಲೆದ್ದಿದೆ. ಪ್ರಧಾನಿ ಶೇಖ್‌ ಹಸೀನಾ (Sheikh Hasina) ಅವರ ರಾಜೀನಾಮೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಯು ಹಿಂಸಾರೂಪ ತಾಳಿದ್ದು, ಮೃತರ ಸಂಖ್ಯೆ 98ಕ್ಕೆ ತಲುಪಿದೆ. ಈ ಪೈಕಿ 14 ಮಂದಿ ಪೊಲೀಸರು ಅಸುನೀಗಿದ್ದು, ಬಾಂಗ್ಲಾದೇಶಕ್ಕೆ ತೆರಳದಂತೆ ಭಾರತೀಯರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ಭಾನುವಾರ (ಆಗಸ್ಟ್‌ 4) ನಡೆದ ಭೀಕರ ಘರ್ಷಣೆಗಳಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ. ಜುಲೈಯಲ್ಲಿ ಪ್ರತಿಭಟನೆಗಳು ಪ್ರಾರಂಭವಾದಾಗಿನಿಂದ ಮೃತರ ಸಂಖ್ಯೆ ಒಟ್ಟು 300ಕ್ಕೆ ಏರಿದೆ. ಬಾಂಗ್ಲಾದಲ್ಲಿ ಕೆಲ ದಿನಗಳ ಹಿಂದೆ ತೀವ್ರ ಕೋಲಾಹಲಕ್ಕೆ ಕಾರಣವಾದ ಬಾಂಗ್ಲಾ ವಿಮೋಚನೆ ಹೋರಾಟದಲ್ಲಿ ಭಾಗಿಯಾಗಿದ್ದವರ ಕುಟುಂಬದವರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ. 30ರಷ್ಟು ಮೀಸಲಾತಿ ನೀಡುವ ನಿಯಮವನ್ನು ಕೋರ್ಟ್‌ ಹಿಂತೆಗೆದುಕೊಂಡಿದೆ. ಆದರೆ ಸಂಪೂರ್ಣ ರದ್ದುಗೊಳಿಸಲಿಲ್ಲ. ಶೇ. 30ರಷ್ಟಿದ್ದ ಮೀಸಲಾತಿಯನ್ನು ಶೇ. 5ಕ್ಕೆ ಇಳಿಸಲಾಗಿದೆ. ಇದರಿಂದಾಗಿ ಪ್ರತಿಪಕ್ಷಗಳ ಮುಖಂಡರು, ಸಾರ್ವಜನಿಕರು ಸೇರಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಮೀಸಲಾತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಇಲ್ಲವೇ ಶೇಖ್‌ ಹಸೀನಾ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಭಾನುವಾರ ಸಾವಿರಾರು ಪ್ರತಿಭಟನಾಕಾರರು ದೇಶದ ಹಲವಾರು ಭಾಗಗಳಲ್ಲಿ ಜಮಾಯಿಸಿ ಪ್ರಧಾನಿ ಶೇಖ್‌ ಹಸೀನಾ ರಾಜೀನಾಮೆ ನೀಡುವಂತೆ ಆಗ್ರಹಿಸಿದರು. ಪ್ರತಿಭಟನಾಕಾರರು ಈಶಾನ್ಯ ಪಟ್ಟಣ ಎನಾಯೆತ್ಪುರದ ಠಾಣೆಗೂ ಮುತ್ತಿಗೆ ಹಾಕಿದರು. ದೇಶಾದ್ಯಂತ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳ ಮಧ್ಯೆ ಸಾರ್ವಜನಿಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸೋಮವಾರ, ಮಂಗಳವಾರ ಮತ್ತು ಬುಧವಾರ ಮೂರು ದಿನಗಳ ಸಾರ್ವತ್ರಿಕ ರಜಾದಿನವನ್ನು ಘೋಷಿಸಲಾಗಿದೆ.

ಈ ಮಧ್ಯೆ ಭಾರತ ಬಾಂಗ್ಲಾದೇಶದಲ್ಲಿರುವ ತನ್ನ ಎಲ್ಲ ಪ್ರಜೆಗಳಿಗೆ ತೀವ್ರ ಎಚ್ಚರಿಕೆ ವಹಿಸಲು ಸೂಚನೆ ನೀಡಿದೆ. ಅನಗತ್ಯವಾಗಿ ಹೊರಗಡೆ ಓಡಾಡದಂತೆ ತಿಳಿಸಿದೆ. ʼʼಸಿಲ್ಹೆಟ್‌ನ ಸಹಾಯಕ ಹೈಕಮಿಷನ್ ವ್ಯಾಪ್ತಿಯಲ್ಲಿ ವಾಸಿಸುವ ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ಭಾರತೀಯ ಪ್ರಜೆಗಳು ಈ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ಕೋರಲಾಗಿದೆ. ತುರ್ತು ಸಂದರ್ಭಗಳಲ್ಲಿ ಸಹಾಯವಾಣಿ ಸಂಖ್ಯೆ +88-01313076402 ಅನ್ನು ಸಂಪರ್ಕಿಸಿ” ಎಂದು ಸಹಾಯಕ ಹೈಕಮಿಷನ್ ಕಚೇರಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದೆ.

ಇದನ್ನೂ ಓದಿ: Bangladesh: ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ ಹಿಂಸಾಚಾರ; 91 ಜನ ಸಾವು

Continue Reading

ದೇಶ

Cloudburst: ಮೇಘಸ್ಫೋಟದಿಂದ ಹಿಮಾಚಲ ಪ್ರದೇಶದಲ್ಲಿ ಮೃತರ ಸಂಖ್ಯೆ 13ಕ್ಕೆ ಏರಿಕೆ; 40ಕ್ಕೂ ಹೆಚ್ಚು ಮಂದಿ ನಾಪತ್ತೆ

Cloudburst: ಹಿಮಾಚಲ ಪ್ರದೇಶದ 3 ಜಿಲ್ಲೆಗಳಲ್ಲಿ ಕಂಡುಬಂದ ಮೇಘಸ್ಫೋಟ ದಿಂದ ಉಂಟಾದ ದಿಢೀರ್‌ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, ಮಂಡಿ ಮತ್ತು ಶಿಮ್ಲಾ ಜಿಲ್ಲೆಗಳಲ್ಲಿ ಭಾನುವಾರ 4 ಮೃತದೇಹ ಪತ್ತೆಯಾಗಿದೆ. ಕಾಣೆಯಾದ 40ಕ್ಕೂ ಅಧಿಕ ಮಂದಿ ಇನ್ನೂ ಪತ್ತೆಯಾಗಿಲ್ಲ. ಜುಲೈ 31ರ ರಾತ್ರಿ ಹಿಮಾಚಲ ಪ್ರದೇಶದ ಕುಲ್ಲುವಿನ ನಿರ್ಮಾಂಡ್, ಸೈಂಜ್ ಮತ್ತು ಮಲಾನಾ, ಮಂಡಿಯ ಪಧರ್ ಮತ್ತು ಶಿಮ್ಲಾದ ರಾಂಪುರ ಉಪವಿಭಾಗದಲ್ಲಿ ಸರಣಿ ಮೇಘಸ್ಫೋಟ ಸಂಭವಿಸಿತ್ತು.

VISTARANEWS.COM


on

Cloudburst
Koo

ಧರ್ಮಶಾಲಾ: ಹಿಮಾಚಲ ಪ್ರದೇಶ (Himachal Pradesh)ದ 3 ಜಿಲ್ಲೆಗಳಲ್ಲಿ ಕಂಡುಬಂದ ಮೇಘಸ್ಫೋಟ (Cloudburst)ದಿಂದ ಉಂಟಾದ ದಿಢೀರ್‌ ಪ್ರವಾಹ (Flash floods)ದಿಂದ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, ಮಂಡಿ ಮತ್ತು ಶಿಮ್ಲಾ ಜಿಲ್ಲೆಗಳಲ್ಲಿ ಭಾನುವಾರ 4 ಮೃತದೇಹ ಪತ್ತೆಯಾಗಿದೆ. ಕಾಣೆಯಾದ 40ಕ್ಕೂ ಅಧಿಕ ಮಂದಿ ಇನ್ನೂ ಪತ್ತೆಯಾಗಿಲ್ಲ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಜುಲೈ 31ರ ರಾತ್ರಿ ಹಿಮಾಚಲ ಪ್ರದೇಶದ ಕುಲ್ಲುವಿನ ನಿರ್ಮಾಂಡ್, ಸೈಂಜ್ ಮತ್ತು ಮಲಾನಾ, ಮಂಡಿಯ ಪಧರ್ ಮತ್ತು ಶಿಮ್ಲಾದ ರಾಂಪುರ ಉಪವಿಭಾಗದಲ್ಲಿ ಸರಣಿ ಮೇಘಸ್ಫೋಟ ಸಂಭವಿಸಿತ್ತು. ಕಳೆದ ಐದು ದಿನಗಳಲ್ಲಿ ಉಂಟಾದ ಮೇಘಸ್ಫೋಟ, ಪ್ರವಾಹ ಮತ್ತು ಭೂಕುಸಿತದಿಂದಾಗಿ ಹಿಮಾಚಲ ಪ್ರದೇಶದಲ್ಲಿನ ಒಟ್ಟು 87 ರಸ್ತೆಗಳ ಸಂಚಾರ ನಿರ್ಬಂಧಿಲಾಗಿದೆ.

ಕಾರ್ಯಾಚರಣೆ

ಯಂತ್ರೋಪಕರಣಗಳು, ಸ್ನಿಫರ್ ಶ್ವಾನದಳ, ಡ್ರೋನ್‌ ಮತ್ತು ಇತರ ಉಪಕರಣಗಳ ಮೂಲಕ ರಕ್ಷಣಾ ಸಿಬ್ಬಂದಿ ಶೋಧ ಕಾರ್ಯವನ್ನು ತೀವ್ರಗೊಳಿಸಿದ್ದಾರೆ. ಅವಶೇಷಗಳಡಿ ಸಿಲುಕಿರುವವರ ಪತ್ತೆ ಕಾರ್ಯಾಚರಣೆಯನ್ನು ಚುರುಕುಗೊಳಿಸಲಾಗಿದೆ. ಶಿಮ್ಲಾ ಮತ್ತು ಕುಲ್ಲು ಗಡಿಯಲ್ಲಿರುವ ಸಮೇಜ್, ಧಾರಾ ಸರ್ದಾ ಮತ್ತು ಕುಶ್ವಾ ಎಂಬ ಮೂರು ಹಳ್ಳಿಗಳಲ್ಲಿ ದುರಂತ ಸಂಭವಿಸಿದಾಗಿನಿಂದ ವಿದ್ಯುತ್ ಇಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಹೀಗಾಗಿ ವಿದ್ಯುತ್‌ ವ್ಯವಸ್ಥೆಯನ್ನು ಮರುಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಸೇನೆ, ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ಐಟಿಬಿಪಿ, ಸಿಐಎಸ್ಎಫ್, ಹಿಮಾಚಲ ಪ್ರದೇಶ ಪೊಲೀಸ್ ಮತ್ತು ಗೃಹರಕ್ಷಕ ದಳದ 410 ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ʼʼಹೆಚ್ಚುವರಿಯಾಗಿ ಇನ್ನೂ 4 ಜೆಸಿಬಿ ಯಂತ್ರಗಳನ್ನು ನಿಯೋಜಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ನದಿಯಲ್ಲಿ ನೀರಿನ ಹರಿವು ಕಡಿಮೆಯಾದ ಕಾರಣ ಶೋಧ ಕಾರ್ಯಕ್ಕೆ ವೇಗ ಸಿಕ್ಕಿದೆʼʼ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಒಂದೇ ಗ್ರಾಮದ 30 ಮಂದಿ ನಾಪತ್ತೆ

ರಾಂಪುರ ಉಪವಿಭಾಗದ ಸಮೇಜ್ ಗ್ರಾಮದ 30ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ. ಬುಧವಾರ ರಾತ್ರಿ ಹಠಾತ್ ಪ್ರವಾಹ ಸಂಭವಿಸಿದಾಗಿನಿಂದ ಹಳ್ಳಿಗಳಲ್ಲಿ ವಿದ್ಯುತ್‌ ಇಲ್ಲ ಮತ್ತು ರಸ್ತೆಗಳು ಸಹ ಹಾನಿಗೊಳಗಾಗಿವೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಜೈ ರಾಮ್ ಠಾಕೂರ್ ಸೋಮವಾರ ಸಮೇಜ್ ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿ ಸಂಸತ್ರಸ್ತರೊಂದಿಗೆ ಸಮಾಲೋಚನೆ ನಡೆಸಿದರು.

ಇದನ್ನೂ ಓದಿ: Cloudburst: ಮೇಘಸ್ಫೋಟದಿಂದ ಉತ್ತರ ಭಾರತದಲ್ಲಿ ಅಲ್ಲೋಲ ಕಲ್ಲೋಲ; ಏನಿದು ವಿದ್ಯಮಾನ? ಹೇಗೆ ಸಂಭವಿಸುತ್ತದೆ? ಇಲ್ಲಿದೆ ವಿವರ

ಪರಿಹಾರ ಧನ ಘೋಷಣೆ

ರಾಜ್ಯ ಸರ್ಕಾರವು ಶುಕ್ರವಾರ ಸಂತ್ರಸ್ತರಿಗೆ 50,000 ರೂ.ಗಳ ತಕ್ಷಣದ ಪರಿಹಾರವನ್ನು ಘೋಷಿಸಿದೆ ಮತ್ತು ಮುಂದಿನ ಮೂರು ತಿಂಗಳವರೆಗೆ ಗ್ಯಾಸ್, ಆಹಾರ ಮತ್ತು ಇತರ ಅಗತ್ಯ ವಸ್ತುಗಳನ್ನು ನೀಡುವುದಾಗಿ ತಿಳಿಸಿದೆ. ಜತೆಗೆ ತಿಂಗಳಿಗೆ 5,000 ರೂ.ಗಳನ್ನು ಬಾಡಿಗೆಗೆ ನೀಡಲಾಗುವುದು ಎಂದು ಹೇಳಿದೆ. ಮಳೆಗಾಲ ಆರಂಭವಾದಾಗಿನಿಂದ ಜೂನ್ 27ರಿಂದ ಆಗಸ್ಟ್ 4ರವರೆಗೆ ಹಿಮಾಚಲ ಪ್ರದೇಶ ಸುಮಾರು 662 ಕೋಟಿ ರೂ.ಗಳ ನಷ್ಟ ಅನುಭವಿಸಿದೆ. ಮಳೆ ಸಂಬಂಧಿತ ಘಟನೆಗಳಲ್ಲಿ ಒಟ್ಟು 85 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ.

Continue Reading

ಪ್ರಮುಖ ಸುದ್ದಿ

Stock Market News: ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ, ರೂ.17.03 ಲಕ್ಷ ಕೋಟಿ ನಷ್ಟ

Stock Market News: ಷೇರು ಮಾರುಕಟ್ಟೆ ಮೌಲ್ಯ ಹಿಂದಿನ ದಾಖಲಾತಿ ರೂ.457.16 ಲಕ್ಷ ಕೋಟಿಯ ಮೌಲ್ಯದಿಂದ ರೂ.440.13 ಲಕ್ಷ ಕೋಟಿಗೆ ಒಟ್ಟಾರೆ ಮೌಲ್ಯ ಕುಸಿಯಿತು. ಸೆನ್ಸೆಕ್ಸ್ 2,037 ಅಂಕಗಳನ್ನು ಕಳೆದುಕೊಂಡು 78,944ಕ್ಕೆ ಮತ್ತು ನಿಫ್ಟಿ 661 ಅಂಕಗಳನ್ನು ಕಳೆದುಕೊಂಡು 24,056ಕ್ಕೆ ತಲುಪಿತು.

VISTARANEWS.COM


on

Indian stock market
Koo

ಮುಂಬಯಿ: ಷೇರು ಮಾರುಕಟ್ಟೆಯಲ್ಲಿ (Stock Market News) ಇಂದು ಸಂಭವಿಸಿದ ಭಾರೀ ಕುಸಿತದ ಪರಿಣಾಮ, ಹೂಡಿಕೆದಾರರ (Investors) ) ಸಂಪತ್ತು ರೂ.17.03 ಲಕ್ಷ ಕೋಟಿಯಷ್ಟು ನಷ್ಟ ಕಂಡಿತು. ಷೇರು ಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ (Sensex) ಮತ್ತು ನಿಫ್ಟಿ (Nifty) ಇಂದು ಎರಡು ಸಲ ಭಾರಿ ಕುಸಿತ ದಾಖಲಿಸಿದವು. ಅಮೆರಿಕದ ಆರ್ಥಿಕತೆಯ (US Economy recession) ಹಿಂಜರಿತದ ಭೀತಿಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಭಾರಿ ಪಲ್ಲಟ ಆಗಿದೆ.

ಷೇರು ಮಾರುಕಟ್ಟೆ ಮೌಲ್ಯ ಹಿಂದಿನ ದಾಖಲಾತಿ ರೂ.457.16 ಲಕ್ಷ ಕೋಟಿಯ ಮೌಲ್ಯದಿಂದ ರೂ.440.13 ಲಕ್ಷ ಕೋಟಿಗೆ ಒಟ್ಟಾರೆ ಮೌಲ್ಯ ಕುಸಿಯಿತು. ಸೆನ್ಸೆಕ್ಸ್ 2,037 ಅಂಕಗಳನ್ನು ಕಳೆದುಕೊಂಡು 78,944ಕ್ಕೆ ಮತ್ತು ನಿಫ್ಟಿ 661 ಅಂಕಗಳನ್ನು ಕಳೆದುಕೊಂಡು 24,056ಕ್ಕೆ ತಲುಪಿತು. ಟಾಟಾ ಮೋಟಾರ್ಸ್, ಅದಾನಿ ಪೋರ್ಟ್ಸ್, ಎಂ & ಎಂ, ಎಸ್‌ಬಿಐ, ಜೆಎಸ್‌ಡಬ್ಲ್ಯೂ ಸ್ಟೀಲ್ ಮತ್ತು ಟೈಟಾನ್‌ನಂತಹ ಷೇರುಗಳು ಸೆನ್ಸೆಕ್ಸ್ 5.04% ವರೆಗೆ ಕುಸಿದವು. ಸೆನ್ಸೆಕ್ಸ್‌ನ 30 ಷೇರುಗಳಲ್ಲಿ 28 ಷೇರುಗಳು ರೆಡ್‌ನಲ್ಲಿ ವಹಿವಾಟಾಗುತ್ತಿವೆ.

ನಿಫ್ಟಿ ಷೇರುಗಳು ಕುಸಿದವು. 46 ನಿಫ್ಟಿ ಶೇರುಗಳು ರೆಡ್‌ನಲ್ಲಿ ವಹಿವಾಟಾಗುತ್ತಿವೆ. ಟಾಟಾ ಮೋಟಾರ್ಸ್, ಹಿಂಡಾಲ್ಕೊ, ಒಎನ್‌ಜಿಸಿ, ಶ್ರೀರಾಮ್ ಫೈನಾನ್ಸ್ ಮತ್ತು ಜೆಎಸ್‌ಡಬ್ಲ್ಯೂ ಸ್ಟೀಲ್ ನಿಫ್ಟಿಯಲ್ಲಿ ಟಾಪ್ ಲೂಸರ್ ಆಗಿದ್ದು, ಆರಂಭಿಕ ವ್ಯವಹಾರಗಳಲ್ಲಿ 4.37% ವರೆಗೆ ಕುಸಿದಿದೆ.

ಇಂದು 88 ಷೇರುಗಳು ತಮ್ಮ 52 ವಾರಗಳ ಗರಿಷ್ಠ ಮಟ್ಟವನ್ನು ತಲುಪಿವೆ. ಮತ್ತೊಂದೆಡೆ, ಸೋಮವಾರದ ಆರಂಭಿಕ ವ್ಯವಹಾರಗಳಲ್ಲಿ 42 ಷೇರುಗಳು ಬಿಎಸ್‌ಇಯಲ್ಲಿ ತಮ್ಮ 52 ವಾರಗಳ ಕನಿಷ್ಠ ಮಟ್ಟವನ್ನು ತಲುಪಿದವು. 3,421 ಷೇರುಗಳಲ್ಲಿ 394 ಷೇರುಗಳು ಹಸಿರು ಬಣ್ಣದಲ್ಲಿ ವಹಿವಾಟಾಗಿವೆ. ಸುಮಾರು 2891 ಷೇರುಗಳು ಕೆಂಪು ಬಣ್ಣದಲ್ಲಿ ವಹಿವಾಟು ನಡೆಸುತ್ತಿದ್ದರೆ 136 ಷೇರುಗಳು ಬದಲಾಗದೆ ಉಳಿದಿವೆ.

ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಶುಕ್ರವಾರ ನಿವ್ವಳ ಆಧಾರದ ಮೇಲೆ ರೂ. 3,310 ಕೋಟಿ ಮೌಲ್ಯದ ಈಕ್ವಿಟಿಗಳನ್ನು ಮಾರಾಟ ಮಾಡಿದರು. ಆದರೆ ದೇಶೀಯ ಹೂಡಿಕೆದಾರರು ರೂ. 2,965.94 ಕೋಟಿ ಷೇರುಗಳನ್ನು ಖರೀದಿಸಿದ್ದಾರೆ. ಇದು ತಾತ್ಕಾಲಿಕ ಎನ್‌ಎಸ್‌ಇ ಡೇಟಾ.

ಶುಕ್ರವಾರದ ವಹಿವಾಟಿನಲ್ಲಿ ನಿಫ್ಟಿ 293 ಪಾಯಿಂಟ್‌ಗಳ ಕುಸಿತದೊಂದಿಗೆ 24,717 ಕ್ಕೆ ಕೊನೆಗೊಂಡಿತು ಮತ್ತು ಸೆನ್ಸೆಕ್ಸ್ 886 ಪಾಯಿಂಟ್‌ಗಳನ್ನು ಕಳೆದುಕೊಂಡು 80,982 ಕ್ಕೆ ತಲುಪಿದೆ.

ಅಮೆರಿಕದ ಮಾರುಕಟ್ಟೆಗಳು

ಯುಎಸ್ ಆರ್ಥಿಕತೆಯು ಆರ್ಥಿಕ ಹಿಂಜರಿತದ ಕಡೆಗೆ ಹೋಗಬಹುದು ಎಂದು ಆರ್ಥಿಕ ಮಾಹಿತಿ ತೋರಿಸಿದೆ. ಕಳೆದ ವಾರ ಬಿಡುಗಡೆಯಾದ ದುರ್ಬಲ US ಉದ್ಯೋಗಗಳ ಮಾಹಿತಿಯು ಶುಕ್ರವಾರ US ಮಾರುಕಟ್ಟೆಗಳಲ್ಲಿ ಕುಸಿತಕ್ಕೆ ಕಾರಣವಾಯಿತು. NASDAQ ಸಂಯೋಜಿತ ಸೂಚ್ಯಂಕವು 417 ಅಂಕಗಳು ಅಥವಾ 2.43% ರಷ್ಟು ಕುಸಿದು 16,776 ಕ್ಕೆ ತಲುಪಿದರೆ, S&P 500 ಸೂಚ್ಯಂಕ 1.84% ಅಥವಾ 100 ಪಾಯಿಂಟ್‌ಗಳು ಕಡಿಮೆಯಾಗಿ 5,346 ಕ್ಕೆ ತಲುಪಿದೆ. ಡೌ ಜೋನ್ಸ್ ಇಂಡಸ್ಟ್ರಿಯಲ್ ಸರಾಸರಿ 1.51% ಅಥವಾ 610 ಪಾಯಿಂಟ್‌ಗಳು ಶುಕ್ರವಾರ 39,737 ಕ್ಕೆ ಕುಸಿದವು.

ಅಮೆರಿಕದ ಕಾರ್ಮಿಕ ಮಾರುಕಟ್ಟೆಯಲ್ಲಿ 249,000 ಉದ್ಯೋಗ ಕುಸಿತ ಆಗಬಹುದು ಎಂದು ವರದಿಗಳು ಸೂಚಿಸಿವೆ. ಅಲ್ಲದೆ, USನಲ್ಲಿ ಜುಲೈನಲ್ಲಿ ISM ಉತ್ಪಾದನೆಯು ಕುಸಿದಿದೆ ಎಂದು ಡೇಟಾ ತೋರಿಸಿದೆ. ISM ಉತ್ಪಾದನಾ ಸೂಚ್ಯಂಕವು ಜೂನ್‌ನಲ್ಲಿ 48.5% ರಿಂದ ಜುಲೈನಲ್ಲಿ 46.8% ಕ್ಕೆ ಕುಸಿಯಿತು. ಇದು ಎಂಟು ತಿಂಗಳ ಕನಿಷ್ಠ. US ಕಾರ್ಖಾನೆಗಳು ಇನ್ನೂ ಕುಸಿಯುತ್ತಿವೆ.

ಏಷ್ಯ, ಯುರೋಪ್‌ ಮಾರುಕಟ್ಟೆಯಲ್ಲಿ ಕುಸಿತ

ಯುಎಸ್ ಮಾರುಕಟ್ಟೆಯಲ್ಲಿನ ದುರ್ಬಲತೆಯ ಭಾವನೆ ಏಷ್ಯನ್ ಮತ್ತು ಯುರೋಪಿಯನ್ ಮಾರುಕಟ್ಟೆಗಳ ಮೇಲೂ ಪರಿಣಾಮ ಬೀರಿದೆ. ಜಪಾನ್‌ನ ನಿಕ್ಕಿ ಇಂದು 2747 ಅಂಕಗಳಿಂದ 33,162 ಅಂಕಗಳಿಗೆ ಕುಸಿದಿದೆ ಮತ್ತು ಹ್ಯಾಂಗ್ ಸೆಂಗ್ 36 ಅಂಕಗಳಿಂದ 16,908ಕ್ಕೆ ಕುಸಿದಿದೆ. ತೈವಾನ್ ಸೂಚ್ಯಂಕವು 1584 ಅಂಕಗಳನ್ನು ಕಳೆದುಕೊಂಡು 20,044 ಕ್ಕೆ ತಲುಪಿದೆ. ಕೊಸ್ಪಿ ಸೋಮವಾರ 182 ಅಂಕಗಳ ಕುಸಿತ ಕಂಡು 2,494 ಅಂಕಗಳಿಗೆ ತಲುಪಿತ್ತು.

FTSE ಶುಕ್ರವಾರ 108 ಅಂಕಗಳೊಂದಿಗೆ 8174ಕ್ಕೆ ಕುಸಿದಿದೆ. ಫ್ರಾನ್ಸ್‌ನ CAC 119 ಅಂಕಗಳನ್ನು ಕಳೆದುಕೊಂಡು 7251 ಕ್ಕೆ ತಲುಪಿತು ಮತ್ತು DAX 421 ಅಂಕಗಳು ಕಡಿಮೆಯಾಗಿ 17,661 ಕ್ಕೆ ಕೊನೆಗೊಂಡಿತು.

ಇದನ್ನೂ ಓದಿ: Stock Market: ಷೇರುಪೇಟೆ ಮಹಾ ಪತನ; ಸೆನ್ಸೆಕ್ಸ್‌ 2,000 ಅಂಕ ಕುಸಿತ; 17 ಲಕ್ಷ ಕೋಟಿ ರೂ. ಲಾಸ್‌!

Continue Reading

ಪ್ರಮುಖ ಸುದ್ದಿ

AAP VS Delhi LG: ಆಪ್‌ಗೆ ಹಿನ್ನಡೆ; ದಿಲ್ಲಿ ನಗರಸಭೆಗೆ ಸದಸ್ಯರನ್ನು ನೇಮಿಸುವ ಎಲ್‌ಜಿ ಅಧಿಕಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್

AAP VS Delhi LG: ಮುಖ್ಯ ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್, ನ್ಯಾ. ಜೆಬಿ ಪರ್ದಿವಾಲಾ, ನ್ಯಾ. ಪಿ.ಎಸ್ ನರಸಿಂಹ ಅವರಿದ್ದ ಪೀಠ ತೀರ್ಪು ಪ್ರಕಟಿಸಿದೆ. ಈ ವಿಷಯದಲ್ಲಿ ರಾಜ್ಯ ಸಚಿವ ಸಂಪುಟದ ನೆರವು ಮತ್ತು ಸಲಹೆಗೆ ಎಲ್‌ಜಿ ಬದ್ಧರಾಗಿರಬೇಕಿಲ್ಲ. ಎಲ್‌ಜಿ ಅವರ “ಕಾನೂನುಬದ್ಧ ಕರ್ತವ್ಯ”ದ ಪ್ರಕಾರ ಆಲ್ಡರ್‌ಮೆನ್‌ಗಳ ನೇಮಕವಾಗಿದೆ ಎಂದು ನ್ಯಾಯಪೀಠ ಹೇಳಿದೆ.

VISTARANEWS.COM


on

Koo

ಬೆಂಗಳೂರು: ರಾಜ್ಯ ಸಚಿವ ಸಂಪುಟವನ್ನು (Cabinet) ಸಮಾಲೋಚಿಸದೆ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (Delhi Municipal Corporation- ಎಂಸಿಡಿ)ಗೆ ಹತ್ತು ಆಲ್ಡರ್‌ಮನ್‌ಗಳನ್ನು (ನಗರಸಭೆ ಸದಸ್ಯ) ನೇಮಿಸಿರುವ ಲೆಫ್ಟಿನೆಂಟ್ ಗವರ್ನರ್ (Leftinant Governor) ಕ್ರಮವನ್ನು ಸುಪ್ರೀಂ ಕೋರ್ಟ್ (Supreme Court) ಎತ್ತಿಹಿಡಿದಿದೆ. ಹೀಗಾಗಿ, ಎಲ್‌ಜಿ (LG) ನಡೆಯನ್ನು ಪ್ರಶ್ನಿಸಿದ್ದ ಆಮ್ ಆದ್ಮಿ ಪಕ್ಷ (Aam Admi Party- ಎಎಪಿ) ನೇತೃತ್ವದ ದೆಹಲಿ ಸರ್ಕಾರಕ್ಕೆ (AAP VS Delhi LG) ಹಿನ್ನಡೆಯಾಗಿದೆ.

ಮುಖ್ಯ ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್, ನ್ಯಾ. ಜೆಬಿ ಪರ್ದಿವಾಲಾ, ನ್ಯಾ. ಪಿ.ಎಸ್ ನರಸಿಂಹ ಅವರಿದ್ದ ಪೀಠ ತೀರ್ಪು ಪ್ರಕಟಿಸಿದೆ. ಈ ವಿಷಯದಲ್ಲಿ ರಾಜ್ಯ ಸಚಿವ ಸಂಪುಟದ ನೆರವು ಮತ್ತು ಸಲಹೆಗೆ ಎಲ್‌ಜಿ ಬದ್ಧರಾಗಿರಬೇಕಿಲ್ಲ. ಎಲ್‌ಜಿ ಅವರ “ಕಾನೂನುಬದ್ಧ ಕರ್ತವ್ಯ”ದ ಪ್ರಕಾರ ಆಲ್ಡರ್‌ಮೆನ್‌ಗಳ ನೇಮಕವಾಗಿದೆ ಎಂದು ನ್ಯಾಯಪೀಠ ಹೇಳಿದೆ.

1993ರಲ್ಲಿ ತಿದ್ದುಪಡಿ ಮಾಡಲಾದ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಡಿಎಂಸಿ) ಕಾಯಿದೆಯ ಸೆಕ್ಷನ್ 3(3)(ಬಿ)(ಐ) ಪ್ರಕಾರ ಎಲ್‌ಜಿಗೆ ಆಲ್ಡರ್‌ಮೆನ್‌ಗಳನ್ನು ನೇಮಿಸಲು ಅಧಿಕಾರ ಇರುತ್ತದೆ ಎಂದು ಪೀಠ ಸ್ಪಷ್ಟಪಡಿಸಿದೆ. ಗವರ್ನರ್‌ಗೆ ನೀಡಲಾದ ಈ ಅಧಿಕಾರ ಸಾಂವಿಧಾನಿಕ ಅಧಿಕಾರದ ಅತಿಕ್ರಮಣವಲ್ಲ ಎಂದಿದೆ.

ಕಳೆದ ವರ್ಷ ಮೇ 17ರಂದು ನ್ಯಾಯಾಲಯ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಆಲ್ಡರ್‌ಮೆನ್‌ಗಳನ್ನು ನಾಮನಿರ್ದೇಶನ ಮಾಡಲು ಎಲ್‌ಜಿ ಅಧಿಕಾರವನ್ನು ನೀಡುವುದು ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಎಂಸಿಡಿಯನ್ನು ಅಸ್ಥಿರಗೊಳಿಸಬಹುದು ಎಂದು ಅದು ಹಿಂದೆ ಎಚ್ಚರಿಸಿತ್ತು. ಎಂಸಿಡಿ 250 ಚುನಾಯಿತ ಮತ್ತು 10 ನಾಮನಿರ್ದೇಶಿತ ಸದಸ್ಯರನ್ನು ಹೊಂದಿದೆ.

“ಎಂಸಿಡಿಯಲ್ಲಿ ವಿಶೇಷ ವ್ಯಕ್ತಿಗಳ ನಾಮನಿರ್ದೇಶನದ ಅಧಿಕಾರವನ್ನು ಎಲ್‌ಜಿಗೆ ನೀಡುವುದು ಎಂದರೆ ಅವರು ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಮುನ್ಸಿಪಲ್ ಸಮಿತಿಗಳನ್ನು ಅಸ್ಥಿರಗೊಳಿಸಿದಂತಾಗಬಹುದು. ಏಕೆಂದರೆ ಆಲ್ಡರ್‌ಮೆನ್ ಸಹ ಮತದಾನದ ಅಧಿಕಾರವನ್ನು ಹೊಂದಿರುತ್ತಾರೆ” ಎಂದು ಉನ್ನತ ನ್ಯಾಯಾಲಯ ಹಿಂದೆ ಹೇಳಿತ್ತು.

ಡಿಸೆಂಬರ್ 2022ರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) 134 ವಾರ್ಡ್‌ಗಳನ್ನು ಪೌರ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದಿತ್ತು. ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಸೋಲಿಸಿತ್ತು. ಎಂಸಿಡಿ ಮೇಲಿನ ಬಿಜೆಪಿಯ 15 ವರ್ಷಗಳ ನಿಯಂತ್ರಣವನ್ನು ಕೊನೆಗೊಳಿಸಿತು. ಬಿಜೆಪಿ 104 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಕಾಂಗ್ರೆಸ್ 9 ಸ್ಥಾನಗಳನ್ನು ಗಳಿಸಿದೆ.

ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು, ನಾಮನಿರ್ದೇಶನ ಮಾಡುವವರು ನಗರಾಡಳಿತದ ಸಹಾಯ ಮತ್ತು ಸಲಹೆಯನ್ನು ಅನುಸರಿಸಬೇಕು, ಅದು 30 ವರ್ಷಗಳ ರೂಢಿ ಎಂದರು. ಆದರೆ ದೀರ್ಘಕಾಲದ ರೂಢಿ ಇದ್ದ ಮಾತ್ರಕ್ಕೆ ಅದು ಸರಿ ಎಂದಲ್ಲ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಸಂಜಯ್ ಜೈನ್ ಪ್ರತಿಪಾದಿಸಿದರು.

ಇದನ್ನೂ ಓದಿ: Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ಮತ್ತೊಂದು ಸಂಕಷ್ಟ; ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸಿದ ಸಿಬಿಐ

Continue Reading
Advertisement
Sheikh Hasina
ಪ್ರಮುಖ ಸುದ್ದಿ5 mins ago

Sheikh Hasina: ರಾಜೀನಾಮೆ ನೀಡಿ ಶೇಖ್‌ ಹಸೀನಾ ವಿದೇಶಕ್ಕೆ ಪಲಾಯನ; ಸುರಕ್ಷತೆಗಾಗಿ ಭಾರತಕ್ಕೆ ಆಗಮನ?

Nia Sharma Trolled For Wearing Plunging Neckline Bralette
ಬಾಲಿವುಡ್10 mins ago

Nia Sharma: ಬ್ರಾ ಧರಿಸಿ ಪೋಸ್‌ ಕೊಟ್ಟ ಕಿರುತೆರೆ ನಟಿ ನಿಯಾ ಶರ್ಮಾರನ್ನು ಕಾಲೆಳೆದ ನೆಟ್ಟಿಗರು!

Emergency Landing
ವೈರಲ್ ನ್ಯೂಸ್31 mins ago

Emergency Landing: ವಿಮಾನದ ಎಮರ್ಜೆನ್ಸಿ ಲ್ಯಾಂಡಿಂಗ್‌ಗೆ ಕಾರಣವಾಯ್ತು ಹೇನು! ಏನಿದು ವಿಚಿತ್ರ ಪ್ರಕರಣ? ಇಲ್ಲಿದೆ ವಿವರ

BJP-JDS Padayatra
ಪ್ರಮುಖ ಸುದ್ದಿ38 mins ago

BJP-JDS Padayatra: ಪಾದಯಾತ್ರೆ ವೇಳೆ ಹೃದಯಾಘಾತದಿಂದ ಜೆಡಿಎಸ್ ಕಾರ್ಯಕರ್ತೆ ಸಾವು

Bangladesh Protests
ಪ್ರಮುಖ ಸುದ್ದಿ41 mins ago

Bangladesh Protests: ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ, ದೇಶದಿಂದ ಪಲಾಯನ; ಪ್ರಧಾನಿ ಅರಮನೆಗೇ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

Shira News
ತುಮಕೂರು1 hour ago

Shira News: ಶಿರಾ ನಗರಸಭೆಯಿಂದ ದೊಡ್ಡಕೆರೆಯ ಸುತ್ತಲಿನ ಪ್ರದೇಶದ ಸ್ವಚ್ಛತೆ

Shravana 2024
ಧಾರ್ಮಿಕ1 hour ago

Shravana 2024: ಶ್ರಾವಣ ಉಪವಾಸದ ವೇಳೆ ಈ 5 ಪಾನೀಯ ಆರೋಗ್ಯಕರ

bs yediyurappa
ಪ್ರಮುಖ ಸುದ್ದಿ1 hour ago

BS Yediyurappa: ಮುಂದಿನ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್‌ 150 ಸೀಟು ಖಚಿತ: ಬಿಎಸ್‌ ಯಡಿಯೂರಪ್ಪ

PSI Parashuram Case
ಕರ್ನಾಟಕ1 hour ago

PSI Parashuram Case: ನಾನು ಯಾವ ಪೊಲೀಸ್‌ ಬಳಿಯೂ ದುಡ್ಡು ಕೇಳಿಲ್ಲ: ಶಾಸಕ ಚನ್ನಾರೆಡ್ಡಿ ಪಾಟೀಲ

Snake Bite
ವೈರಲ್ ನ್ಯೂಸ್2 hours ago

Snake Bite: ಹಾವು ಹಿಡಿಯುವವನನ್ನು ಕಚ್ಚಿ ತಾನೇ ಜೀವ ಬಿಟ್ಟ ಕಾಳಿಂಗ ಸರ್ಪ! ಸಾವಿಗೆ ಕಾರಣ ಏನು?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ1 day ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ4 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ6 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ6 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ7 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ7 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌