Aimchess Rapid Online | ವಿಶ್ವ ನಂಬರ್‌ ಒನ್‌ ಆಟಗಾರನಿಗೆ ಮತ್ತೊಬ್ಬ ಭಾರತೀಯನಿಂದ ಆಘಾತ - Vistara News

ಕ್ರೀಡೆ

Aimchess Rapid Online | ವಿಶ್ವ ನಂಬರ್‌ ಒನ್‌ ಆಟಗಾರನಿಗೆ ಮತ್ತೊಬ್ಬ ಭಾರತೀಯನಿಂದ ಆಘಾತ

ವಿಶ್ವದ ನಂಬರ್‌ ಒನ್‌ ಚೆಸ್‌ ಪಟು ಮ್ಯಾಗ್ನಸ್‌ ಕಾರ್ಲ್‌ಸೆನ್‌ ಅವರನ್ನು ಮಣಿಸಿದ ಭಾರತದ ಅತ್ಯಂತ ಕಿರಿಯ ಗ್ರಾಂಡ್ ಮಾಸ್ಟರ್‌ ಎಂಬ ದಾಖಲೆ ಡಿ. ಗುಕೇಶ್‌ ಅವರ ಪಾಲಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ವಿಶ್ವದ ನಂಬರ್‌ ಒನ್‌ ಆಟಗಾರ ಹಾಗೂ ಮಾಜಿ ಚಾಂಪಿಯನ್‌ ಮ್ಯಾಗ್ನೆಸ್‌ ಕಾರ್ಲ್‌ಸೆನ್‌ ಅವರಿಗೆ ಭಾರತದ ಮತ್ತೊಬ್ಬ ಆಟಗಾರ ಆಘಾತ ಕೊಟ್ಟಿದ್ದಾರೆ. ಏಮ್‌ಚೆಸ್‌ ರಾಪಿಡ್‌ ಆನ್‌ಲೈನ್‌ (Aimchess Rapid Online) ಟೂರ್ನಮೆಂಟ್‌ನ ೯ನೇ ಸುತ್ತಿನ ಆಟದಲ್ಲಿ ಭಾರತದ ೧೬ ವರ್ಷದ ಗ್ರಾಂಡ್‌ ಮಾಸ್ಟರ್‌ ಡಿ. ಗುಕೇಶ್ ವಿರುದ್ಧ ಅವರು ಸೋಲು ಕಂಡಿದ್ದಾರೆ. ಈ ಮೂಲಕ ನಾರ್ವೆಯ ಆಟಗಾರ ಸತತ ಎರಡು ದಿನಗಳಲ್ಲಿ ಇಬ್ಬರು ಭಾರತೀಯರ ವಿರುದ್ಧ ಸೋಲು ಕಂಡಂತಾಗಿದೆ. ಭಾನುವಾರ ಅವರು ೧೯ ವರ್ಷದ ಗ್ರಾಂಡ್ ಮಾಸ್ಟರ್‌ ಅರ್ಜನ್‌ ಎರಿಗೈಸಿ ವಿರುದ್ಧ ಮಣಿದಿದ್ದರು.

ಸೋಮವಾರ ಮುಂಜಾನೆ ನಡೆದ ಸ್ಪರ್ಧೆಯ ೨೯ನೇ ನಡೆಯ ವೇಳೆ ಗುಕೇಶ್‌ ಅವರು ಅನುಭವಿ ಆಟಗಾರನನ್ನು ಹಿಮ್ಮೆಟ್ಟಿಸಿದರು. ಬಿಳಿ ಕಾಯಿಯೊಂದಿಗೆ ಆಡಿದ ಭಾರತದ ಆಟಗಾರ ವಿಶ್ವದ ಬಲಿಷ್ಠ ಚೆಸ್ ಪಟುವನ್ನು ಮಣಿಸುವ ಜತೆಗೆ ಟೂರ್ನಿಯಲ್ಲಿ ೨೧ ಅಂಕಗಳೊಂದಿಗೆ ಮೂರನೇ ಸ್ಥಾನಕ್ಕೇರಿದರು. ಪೋಲೆಂಡ್‌ನ ಜಾನ್ ಕ್ರಿಸ್ಟೋಪ್‌(೨೫) ಮೊದಲ ಸ್ಥಾನದಲ್ಲಿದ್ದರೆ, ಅಜೆರ್‌ಬೈಜಾನ್‌ನ ಶಕ್ರಿಯಾರ್‌ ಮಮೆಡ್‌ಯೊರಾವ್‌ (೨೩) ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.

ಡಿ. ಗುಕೇಶ್‌ ಅವರು ಪ್ರಸ್ತುತ ವಿಶ್ವದ ನಂಬರ್‌ ಒನ್‌ ಆಟಗಾರನನ್ನು ಸೋಲಿಸಿದ ಭಾರತದ ಅತ್ಯಂತ ಕಿರಿಯ ಚೆಸ್‌ ಪಟು ಎಂಬ ಖ್ಯಾತಿ ಪಡೆದುಕೊಂಡಿದ್ದಾರೆ. ಅವರಿಗೆ ಈಗ ೧೬ ವರ್ಷ ೪ ತಿಂಗಳು ಹಾಗೂ ೨೦ ದಿನಗಳು. ಈ ದಾಖಲೆ ಈ ಹಿಂದೆ ತಮಿಳುನಾಡಿನ ಇನ್ನೊಬ್ಬ ಚೆಸ್‌ ಪಟು ಆರ್‌. ಪ್ರಜ್ಞಾನಂದ ಅವರ ಹೆಸರಿನಲ್ಲಿತ್ತು. ಅವರು ೧೬ ವರ್ಷ ೬ ತಿಂಗಳು ಹಾಗೂ ೧೦ ದಿನಗಳಾಗಿದ್ದಾಗ ಕಾರ್ಲ್‌ಸೆನ್‌ ಅವರನ್ನು ಮಣಿಸಿದ್ದರು.

ಮ್ಯಾಗ್ನಸ್‌ ಕಾರ್ಲ್‌ಸೆನ್ ಅವರು ಪ್ರಸ್ತುತ ಟೂರ್ನಿಯಲ್ಲಿ ಐದನೇ ಸ್ಥಾನವನ್ನ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ | Aimchess Rapid Tournament | ವಿಶ್ವ ನಂಬರ್‌ ಒನ್‌ ಆಟಗಾರನಿಗೆ ಸೋಲುಣಿಸಿದ ಭಾರತದ ಚೆಸ್‌ ಪಟು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Paris Olympics 2024 : ರಿಲಯನ್ಸ್ ಫೌಂಡೇಷನ್ ಸಹಯೋಗದಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ “ಇಂಡಿಯಾ ಹೌಸ್”

“ಭಾರತಕ್ಕೆ ಒಲಿಂಪಿಕ್ ಸಂಭ್ರಮವನ್ನು ತರಬೇಕು ಎಂಬ ನೂರಾ ನಲವತ್ತು ಕೋಟಿ ಭಾರತೀಯರ ಕನಸನ್ನು ನನಸಾಗಿಸಲು ಇಂಡಿಯಾ ಹೌಸ್ ಮತ್ತೊಂದು ಹೆಜ್ಜೆಯಾಗಲಿದೆ ಎಂದು ನಾವು ನಿಜವಾಗಿಯೂ ಭಾವಿಸುತ್ತೇವೆ!” ನೀತಾ ಅಂಬಾನಿ ಹೇಳಿದ್ದಾರೆ.

VISTARANEWS.COM


on

Paris Olympics 2024
Koo

ಮುಂಬೈ : ವಿಶ್ವ ಮಟ್ಟದಲ್ಲಿ ಪ್ರಮುಖ ಕ್ರೀಡಾಕೂಟವಾದ ಒಲಿಂಪಿಕ್ಸ್ (Paris Olympics 2024) ಆರಂಭಕ್ಕೆ ಇನ್ನು ಕೇವಲ ಒಂದು ತಿಂಗಳಷ್ಟೇ ಬಾಕಿ ಇದೆ. ಪ್ಯಾರಿಸ್ ಒಲಿಂಪಿಕ್ಸ್- 2024ರ ಕಡೆಗೆ ವಿಶ್ವಾದ್ಯಂತದ ಕ್ರೀಡಾಸಕ್ತರು ಕಣ್ಣು ನೆಟ್ಟಿದ್ದಾರೆ. ಅಂದಹಾಗೆ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ “ಇಂಡಿಯಾ ಹೌಸ್” ಕಾಣಬಹುದಾಗಿದೆ. ಭಾರತೀಯ ಒಲಿಂಪಿಕ್ಸ್ ಒಕ್ಕೂಟದ (ಐಒಎ) ಸಹಭಾಗಿತ್ವ ವಹಿಸಿರುವಂಥ ರಿಲಯನ್ಸ್ ಫೌಂಡೇಷನ್ ನಿಂದ ಈ “ಇಂಡಿಯಾ ಹೌಸ್” ಪರಿಕಲ್ಪನೆ ಮೂಡಿದೆ. ಈ ಇಂಡಿಯಾ ಹೌಸ್ ನಲ್ಲಿ ಭಾರತದ ಕ್ರೀಡಾ ಸಂಸ್ಕೃತಿ- ಪರಂಪರೆಯನ್ನು ಪ್ರದರ್ಶಿಸಲಾಗುತ್ತದೆ. ಅದರಲ್ಲಿ ಕ್ರೀಡೆಗೆ ಸಂಬಂಧಿಸಿ ಭಾರತದ ಭೂತ- ಭವಿಷ್ಯತ್ ಹಾಗೂ ವರ್ತಮಾನದ ಸಾಧನೆ, ಕನಸುಗಳನ್ನು ಸಹ ತೋರಿಸಲಾಗುತ್ತದೆ. ತಂತ್ರಜ್ಞಾನ ಮತ್ತು ಡಿಜಿಟಲೈಸೇಷನ್ ನಲ್ಲಿ ಭಾರತದ ಸಾಧನೆಯನ್ನು ಜಗತ್ತಿನೆದುರು ತೆರೆದಿಡಲಾಗುತ್ತದೆ. ವಿಶ್ವದ ವಿವಿಧ ಅಥ್ಲೀಟ್ ಗಳು, ಗಣ್ಯರು, ಕ್ರೀಡಾ ಉತ್ಸಾಹಿಗಳು ಈ ಇಂಡಿಯಾ ಹೌಸ್ ಗೆ ಭೇಟಿ ನೀಡುವ ನಿರೀಕ್ಷೆ ಇದೆ. ಇನ್ನು ಭಾರತದ ನೀತಿಯನ್ನು ವ್ಯಾಖ್ಯಾನಿಸುವ ಏಕತೆ, ವೈವಿಧ್ಯತೆ ಮತ್ತು ಶ್ರೇಷ್ಠತೆಯನ್ನು ಸಾರುವುದಕ್ಕೂ ಇದು ಸಹಕಾರಿ ಆಗುತ್ತದೆ.

ಇಂಡಿಯಾ ಹೌಸ್ ಎಂಬುದು ಯಾಕೆ ಮಹತ್ವದ್ದು ಎಂಬ ಬಗ್ಗೆ ಮಾತನಾಡಿದ ಐಒಎ ಸದಸ್ಯೆ , ರಿಲಯನ್ಸ್ ಫೌಂಡೇಷನ್ ಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ ಅವರು , “ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಇದೇ ಮೊದಲ ಬಾರಿಗೆ ಇಂಡಿಯಾ ಹೌಸ್ ಅನ್ನು ಘೋಷಿಸಲು ನಾನು ಅಪಾರ ಸಂತೋಷ ಪಡುತ್ತೇನೆ ಮತ್ತು ಇದೇ ಉತ್ಸಾಹದಿಂದ ರೋಮಾಂಚನಗೊಂಡಿದ್ದೇನೆ. ಕಳೆದ ವರ್ಷ ಭಾರತದಲ್ಲಿ ನಡೆದ ಐಒಸಿ ಅಧಿವೇಶನವು 40 ವರ್ಷಗಳಲ್ಲಿ ಮೊದಲನೆಯದು, ನಮ್ಮ ಒಲಿಂಪಿಕ್ ಪಯಣದಲ್ಲಿ ಪ್ರಮುಖ ಇದು ಮೈಲುಗಲ್ಲು. ಮತ್ತು ನಮ್ಮ ಕ್ರೀಡಾಪಟುಗಳನ್ನು ಗೌರವಿಸುವ, ನಮ್ಮ ವಿಜಯಗಳನ್ನು ಆಚರಿಸುವ, ನಮ್ಮ ಯಶೋಗಾಥೆಗಳನ್ನು- ಸಾಧನೆಗಳನ್ನು ಹಂಚಿಕೊಳ್ಳುವ ಮತ್ತು ಜಗತ್ತನ್ನು ಭಾರತಕ್ಕೆ ಸ್ವಾಗತಿಸುವ ಜಾಗವಾದ ಇಂಡಿಯಾ ಹೌಸ್ ಅನ್ನು ಪ್ರಾರಂಭಿಸುವುದರೊಂದಿಗೆ ಈ ಪ್ರಯತ್ನಕ್ಕೆ ವೇಗ ನೀಡುವುದನ್ನು ಮುಂದುವರಿಸಲು ನಾವು ಸಂತೋಷಪಡುತ್ತೇವೆ,” ಎಂದಿದ್ದಾರೆ.

“ಭಾರತಕ್ಕೆ ಒಲಿಂಪಿಕ್ ಸಂಭ್ರಮವನ್ನು ತರಬೇಕು ಎಂಬ ನೂರಾ ನಲವತ್ತು ಕೋಟಿ ಭಾರತೀಯರ ಕನಸನ್ನು ನನಸಾಗಿಸಲು ಇಂಡಿಯಾ ಹೌಸ್ ಮತ್ತೊಂದು ಹೆಜ್ಜೆಯಾಗಲಿದೆ ಎಂದು ನಾವು ನಿಜವಾಗಿಯೂ ಭಾವಿಸುತ್ತೇವೆ!” ಎಂದಿದ್ದಾರೆ.

ಇದನ್ನೂ ಓದಿ: Rohit Sharma : ನಿಮ್ಮತಲೆಯಲ್ಲಿರುವ ಮೆದುಳು ಉಪಯೋಗಿಸಿ, ಪಾಕ್​ ಮಾಜಿ ನಾಯಕನ ಚೆಂಡು ವಿರೂಪದ ಆರೋಪಕ್ಕೆ ರೋಹಿತ್ ಶರ್ಮಾ ತಿರುಗೇಟು

ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷೆ ಪಿ.ಟಿ.ಉಷಾ ಮಾತನಾಡಿ , ”ರಿಲಯನ್ಸ್ ಫೌಂಡೇನ್ ಸಹಭಾಗಿತ್ವದಲ್ಲಿ ಉದ್ಘಾಟನೆ ಆಗಲಿರುವ ಇಂಡಿಯಾ ಹೌಸ್ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತೀಯ ಅಭಿಮಾನಿಗಳು ಮತ್ತು ಕ್ರೀಡಾಪಟುಗಳ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದೆ. ಇದು ಅಭಿಮಾನಿಗಳಿಗೆ ಮತ್ತು ಇತರ ದೇಶಗಳ ಜನರು ಭಾರತದ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ಉತ್ತಮ ಮಾರ್ಗವಾಗಿದೆ. ಮತ್ತು ಭಾರತವು ಪ್ರಮುಖ ಕ್ರೀಡಾವಳಿಗಳ ಆತಿಥೇಯ ಆಗಿ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದೆ ಮತ್ತು ಇಂಡಿಯಾ ಹೌಸ್ ನಾವು ಕ್ರೀಡಾ ರಾಷ್ಟ್ರವಾಗಿ ಮತ್ತು ಒಲಿಂಪಿಕ್ ನಲ್ಲಿ ಮಾಡಿದ ಸಾಧನೆಗಳನ್ನು ಪ್ರತಿಬಿಂಬಿಸುತ್ತದೆ. ಈ ಉಪಕ್ರಮ ಮತ್ತು ಭಾರತದ ಒಲಿಂಪಿಕ್ ಪಯಣಕ್ಕೆ ಚಾಲನೆ ನೀಡಿದ ಐಒಸಿ ಸದಸ್ಯೆ ನೀತಾ ಅಂಬಾನಿ ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ,” ಎಂದಿದ್ದಾರೆ.

ಭಾರತೀಯ ಸಂಸ್ಕೃತಿ- ಪರಂಪರೆಯ ಪ್ರದರ್ಶನ

ಒಲಿಪಿಕ್ಸ್ ಕ್ರೀಡಾಕೂಟದ ಸಮಯದಲ್ಲಿ “ಪಾರ್ಕ್ ಆಫ್ ನೇಷನ್ಸ್” ಎಂದು ಹೆಸರಿಸಲಾದ ಐಕಾನಿಕ್ ಪಾರ್ಕ್ ಡೆ ಲಾ ವಿಲ್ಲೆಟ್ ನಲ್ಲಿ ಇಂಡಿಯಾ ಹೌಸ್ ಇರಲಿದ್ದು, ನೆದರ್ ಲೆಂಡ್ಸ್, ಕೆನಡಾ, ಬ್ರೆಜಿಲ್ ಮತ್ತು ಅತಿಥೇಯ ಫ್ರಾನ್ಸ್ ಸೇರಿದಂತೆ ಒಟ್ಟು 14 ಇತರ ಆತಿಥ್ಯ ಹೌಸ್ ಗಳಿಂದ ಸುತ್ತುವರಿದಿದೆ. ಇಂಡಿಯಾ ಹೌಸ್ ಎಂಬುದು ಸಂಸ್ಕೃತಿಯಿಂದ ಕಲೆ ಮತ್ತು ಕ್ರೀಡೆಗಳವರೆಗೆ ಅಡುಗೆಯ ಸತ್ಕಾರಗಳು ಮತ್ತು ಯೋಗ, ಕರಕುಶಲ ವಸ್ತುಗಳು, ಸಂಗೀತ, ಭಾರತೀಯ ನೃತ್ಯ ಗುಂಪುಗಳಿಂದ ಪ್ರದರ್ಶನಗಳು ಮತ್ತಿತರ ಅನುಭವಗಳನ್ನು ಅಭಿಮಾನಿಗಳಿಗೆ ದೊರಕಿಸುತ್ತದೆ. ಈ ಮೂಲಕ ಜಗತ್ತಿಗೆ ಭಾರತದ ಪ್ರತಿಭೆ, ಸಾಮರ್ಥ್ಯ ಮತ್ತು ಮಹತ್ವಾಕಾಂಕ್ಷೆಯ ಒಂದು ನೋಟವನ್ನು ನೀಡುತ್ತದೆ.

ಭಾರತೀಯ ಕ್ರೀಡಾಪಟುಗಳು ಮತ್ತು ಅಭಿಮಾನಿಗಳಿಗೆ ಮನೆಯಿಂದ ದೂರ

ಇಂಡಿಯಾ ಹೌಸ್ ಭಾರತದ ವಿಜಯಗಳು ಮತ್ತು ಪದಕ ಗೆಲುವುಗಳನ್ನು ಆಚರಿಸುವ ಗುರಿಯನ್ನು ಹೊಂದಿದೆ. ಸಂದರ್ಶಕರು, ಕ್ರೀಡಾ ದಂತಕಥೆಗಳೊಂದಿಗೆ ಮಾತುಕತೆ ನಡೆಸಲು ಮತ್ತು ತೊಡಗಿಸಿಕೊಳ್ಳುವ ಕಾರ್ಯಕ್ರಮಗಳ ಮೂಲಕ ಸ್ನೇಹಿತರೊಂದಿಗೆ ಪ್ರಮುಖ ಘಟನೆಗಳನ್ನು ಸ್ಮರಣೀಯವಾಗಿಸುವ ಗಮ್ಯಸ್ಥಾನವಾಗಿದೆ. ಇದು ಎಲ್ಲಾ ದೇಶಗಳ ಮಾಧ್ಯಮ ಮತ್ತು ಅಭಿಮಾನಿಗಳಿಗೆ ಮುಕ್ತವಾಗಿರುತ್ತದೆ. ಪ್ರಮುಖ ಭಾರತೀಯ ಕಾರ್ಯಕ್ರಮಗಳ ಸಂಭ್ರಮಾಚರಣೆಯನ್ನು ಇಂಡಿಯಾ ಹೌಸ್‌ನಲ್ಲಿ ಭಾರತದಲ್ಲಿ ಒಲಂಪಿಕ್ ಗೇಮ್ಸ್‌ನ ವಿಶೇಷ ಮಾಧ್ಯಮ ಹಕ್ಕುದಾರರಾದ ವಯಾಕಾಮ್18 ಸಹಭಾಗಿತ್ವದಲ್ಲಿ ಪ್ರತ್ಯೇಕವಾಗಿ ನಡೆಸಲಾಗುತ್ತದೆ.

ಒಂದು ಪ್ರಯತ್ನ

ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (IOA)ನ ಪ್ರಮುಖ ಪಾಲುದಾರರಾಗಿ ರಿಲಯನ್ಸ್ ಫೌಂಡೇಷನ್ ಸ್ಥಾಪಿಸಿದ ಇಂಡಿಯಾ ಹೌಸ್ ಎಂಬುದು ಜಾಗತಿಕವಾಗಿ ಭಾರತೀಯ ಕ್ರೀಡೆಗಳನ್ನು ಉನ್ನತ ಸ್ಥಾನಕ್ಕೆ ಒಯ್ಯುವ ಸಾಮೂಹಿಕ ಪ್ರಯತ್ನವನ್ನು ಪ್ರತಿನಿಧಿಸುತ್ತದೆ.

Continue Reading

ಕ್ರೀಡೆ

Paris Olympics 2024: ಒಲಿಂಪಿಕ್ಸ್​ಗೆ ಅರ್ಹತೆ ಪಡೆದ​ ರಾಜ್ಯದ ಇಬ್ಬರು ಸ್ವಿಮ್ಮರ್​ಗಳು

Paris Olympics 2024: ಮಹಿಳೆಯರ ವಿಭಾಗದಲ್ಲಿ ಆಯ್ಕೆಯಾದ ಕಿರಿಯ ಈಜುಪಟು ಎನಿಸಿಕೊಂಡಿರುವ ಧಿನಿಧಿ 200 ಮೀ. ಫ್ರೀ ಸ್ಟೈಲ್ ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ.

VISTARANEWS.COM


on

Paris Olympics 2024
Koo

ಬೆಂಗಳೂರು: ಕರ್ನಾಟಕದ ಸ್ವಿಮ್ಮರ್​ಗಳಾದ ಶ್ರೀಹರಿ ನಟರಾಜನ್‌(Srihari Nataraj) ಹಾಗೂ ಧಿನಿಧಿ ದೇಸಿಂಘು(Dhinidhi Desinghu) ಮುಂದಿನ ತಿಂಗಳು ಆರಂಭಗೊಳ್ಳಲಿರುವ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(Paris Olympics 2024) ಭಾರತವನ್ನು ಪ್ರತಿನಿಧಿಸಲಿದ್ದಾರೆ. ಶ್ರೀಹರಿಗೆ ಇದು ಸತತ 2ನೇ ಒಲಿಂಪಿಕ್ಸ್​ ಕ್ರೀಡಾಕೂಡವಾಗಿದೆ. 14 ವರ್ಷದ ಧಿನಿಧಿ ಇದೇ ಮೊದಲ ಒಲಿಂಪಿಕ್ಸ್ ಸ್ಫರ್ದೆಯಾಗಿದೆ. ಈ ಇಬ್ಬರಿಗೂ ಒಲಿಂಪಿಕ್ಸ್​ ಅರ್ಹತೆ ಸಿಕ್ಕಿರುವ ವಿಚಾರವನ್ನು ಭಾರತೀಯ ಈಜು ಫೆಡರೇಶನ್ (ಎಸ್ ಎಫ್‌ಐ) ಬುಧವಾರ ಖಚಿತಪಡಿಸಿದೆ. ಯುನಿವರ್ಸಲಿಟಿ ಕೋಟಾದಲ್ಲಿ ಇವರಿಗೆ ಈ ಅರ್ಹತೆ ಲಭಿಸಿದೆ.

2021ರ ಟೋಕಿಯೊ ಒಲಿಂಪಿಕ್ಸ್‌ ಶ್ರೀಹರಿ ಮೊದಲ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಆದರೆ ಮೊದಲ ಪದಕ ಗೆಲ್ಲುವಲ್ಲಿ ವಿಫಲರಾಗಿದ್ದರು. ಇದೀಗ ದ್ವಿತೀಯ ಪ್ರಯತ್ನದಲ್ಲಿ ಐತಿಹಾಸಿಕ ಪದಕವೊಂದನ್ನು ಗೆಲ್ಲುವ ವಿಶ್ವಾಸದೊಂದಿಗೆ ಕಣಕ್ಕಿಳಿಯಲಿದ್ದಾರೆ. ‘ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿರುವುದು ಸಂತಸ ತಂದಿದೆ‘ ಎಂದು 23 ವರ್ಷದ ಶ್ರೀಹರಿ ಹೇಳಿದರು. ಅವರು 100 ಮೀ, ಬ್ಯಾಕ್‌ಸ್ಟೋಕ್ ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ.

ಮಹಿಳೆಯರ ವಿಭಾಗದಲ್ಲಿ ಆಯ್ಕೆಯಾದ ಕಿರಿಯ ಈಜುಪಟು ಎನಿಸಿಕೊಂಡಿರುವ ಧಿನಿಧಿ 200 ಮೀ. ಫ್ರೀ ಸ್ಟೈಲ್ ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ. ಒಲಿಂಕ್ಸ್​ನಲ್ಲಿ ದೇಶವನ್ನು ಪ್ರತಿನಿಧಿಸುವುದು ಜೀವಮಾನ ಶ್ರೇಷ್ಠ ಅನುಭವ ಎಂದು ಧಿನಿಧಿ ಹೇಳಿದರು.

ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಕರ್ನಾಟಕದ ಅದಿತಿ ಅಶೋಕ್

ಕಳೆದ ವರ್ಷ ಚೀನಾದ ಹ್ಯಾಂಗ್ ಝೂ ನಲ್ಲಿ ನಡೆದಿದ್ದ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಐತಿಹಾಸಿಕ ಪದಕ ಗೆದ್ದ ಕರ್ನಾಟಕದ ಗಾಲ್ಫರ್ ಅದಿತಿ ಅಶೋಕ್(Aditi Ashok) ಅವರು ಇದೀಗ ಪ್ಯಾರಿಸ್ ಒಲಿಂಪಿಕ್ಸ್‌ಗೆ(Paris Olympics 2024) ಅರ್ಹತೆ ಪಡೆದಿದ್ದಾರೆ. ಇವರ ಜತೆಗೆ ದೀಕ್ಷಾ ದಾಗರ್(Diksha Dagar) ಕೂಡ ಅರ್ಹತೆ ಪಡೆದಿದ್ದಾರೆ. ವಿಶ್ವ ರ್‍ಯಾಂಕಿಂಗ್ ಮೂಲಕ ಉಭಯ ಆಟಗಾರ್ತಿಯರಿಗೆ ಒಲಿಂಪಿಕ್ಸ್‌ ಟಿಕೆಟ್​ ಲಭಿಸಿದೆ.

ನಾಲ್ಕು ಮಂದಿಯ ಭಾರತದ ಗಾಲ್ಫ್​ ತಂಡದಲ್ಲಿ 24ನೇ ರ್‍ಯಾಂಕ್‌ನೊಡನೆ ಅದಿತಿ ಅರ್ಹತೆ ಪಡೆದರೆ, ದೀಕ್ಷಾ 40ನೇ ರ್‍ಯಾಂಕ್‌ನೊಡನೆ ಅವಕಾಶ ಪಡೆದರು. ಪುರುಷರ ವಿಭಾಗದಲ್ಲಿ ಅಗ್ರಮಾನ್ಯ ಗಾಲ್ಫರ್ ಶುಭಂಕರ್ ಶರ್ಮಾ ಮತ್ತು ಗಗನ್‌ಜೀತ್‌ ಭುಲ್ಲರ್ ಈಗಾಗಲೇ ಅರ್ಹತೆ ಪಡೆದಿದ್ದಾರೆ.

ಇದನ್ನೂ ಓದಿ Paris Olympics 2024: ಒಲಿಂಪಿಕ್ಸ್‌ಗೆ ಬಲಿಷ್ಠ ತಂಡ ಪ್ರಕಟಿಸಿದ ಹಾಕಿ ಇಂಡಿಯಾ

ಬೆಂಗಳೂರಿನ ಅದಿತಿ ಅಶೋಕ್ ಏಷ್ಯನ್ ಗೇಮ್ಸ್​ನಲ್ಲಿ ಬೆಳ್ಳಿ ಪದಕ ಗೆದ್ದು ಈ ಕ್ರೀಡಾಕೂಟದ ಗಾಲ್ಫ್ ಕ್ರೀಡೆಯಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳಾ ಕ್ರೀಡಾಪಟು ಎಂಬ ದಾಖಲೆ ಬರೆದಿದ್ದರು. ಮುಂದಿನ ತಿಂಗಳು ನಡೆಯುವ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿಯೂ ಅವರು ಐತಿಹಾಸಿಕ ಚಿನ್ನ ಗೆಲ್ಲುವಂತಾಗಲಿ ಎನ್ನುವುದು ಭಾರತೀಯರ ಮತ್ತು ಕನ್ನಡಿಗ ಹಾರೈಕೆ. ಕಳೆದ ಟೋಕಿಯೊ ಒಲಿಂಪಿಕ್ಸ್‌ನಲ್ಲಿಯೂ ಅದಿತಿ ಅಮೋಘ ಪ್ರದರ್ಶನ ತೋರಿ 4 ನೇ ಸ್ಥಾನ ಗಳಿಸಿ ದೇಶದ ಗಮನ ಸೆಳೆದಿದ್ದರು. 27 ವರ್ಷ ವಯಸ್ಸಿನ ಶರ್ಮಾ ಮತ್ತು 36 ವರ್ಷ ವಯಸ್ಸಿನ ಭುಲ್ಲರ್ ಅವರಿಗೆ ಇದು ಮೊದಲ ಒಲಿಂಪಿಕ್ಸ್‌ ಆಗಿದೆ.

Continue Reading

ಕ್ರೀಡೆ

IND vs ENG Semi Final: ಗಯಾನದಲ್ಲಿ ಭಾರೀ ಗಾಳಿ-ಮಳೆ ಶುರು; ರದ್ದಾಗುತ್ತಾ ಸೆಮಿಫೈನಲ್​ ಪಂದ್ಯ?

IND vs ENG Semi Final: ಪಂದ್ಯ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗ ಜೋರು ಮಳೆ ಸುರಿಯಲು ಆರಂಭವಾಗಿದೆ. ಸದ್ಯ ಬೀಸುತ್ತಿರುವ ಗಾಳಿ ಮಳೆಯನ್ನು ಗಮನಿಸುವಾಗ ಇದು ನಿಲ್ಲುವಂತೆ ಕಾಣುತ್ತಿಲ್ಲ.

VISTARANEWS.COM


on

IND vs ENG Semi Final
Koo

ಪ್ರೊವಿಡೆನ್ಸ್‌: ಹವಾಮಾನ ಇಲಾಖೆ ನೀಡಿದ ಎಚ್ಚರಿಕೆಯಂತೆ ಗಯಾನದಲ್ಲಿ ಭಾರೀ ಮಳೆ ಸುರಿಯಲು ಆರಂಭಗೊಂಡಿದೆ. ಹೀಗಾಗಿ ಭಾರತ ಮತ್ತು ಇಂಗ್ಲೆಂಡ್​(IND vs ENG Semi Final) ನಡುವಣ ಟಿ20 ವಿಶ್ವಕಪ್​ ಸೆಮಿಫೈನಲ್​ ಪಂದ್ಯ ನಡೆಯುವುದು ಅನುಮಾನ ಎನ್ನಲಡ್ಡಿಯಿಲ್ಲ. ಗಾಳಿ ಮಳೆಯ ವಿಡಿಯೊವನ್ನು ಎಎನ್​ಐ ಸುದ್ದಿ ಸಂಸ್ಥೆ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದೆ. ದಿನೇಶ್​ ಕಾರ್ತಿಕ್​ ಅವರು ಮೈದಾನವನ್ನು ಕವರ್​ನಿಂದ ಮುಚ್ಚಿದ ಫೋಟೊ ಮತ್ತು ವಿಡಿಯೊವನ್ನು ಹಂಚಿಕೊಂಡಿದ್ದಾರೆ.

ಪಂದ್ಯಕ್ಕೂ 2 ದಿನ ಮುನ್ನವೇ ಹವಾಮಾನ ಇಲಾಖೆ ಪಂದ್ಯಕ್ಕೆ ಶೇ.88ರಷ್ಟು ಮಳೆ ಎಚ್ಚರಿಕೆ ನೀಡಿತ್ತು. ಜತೆಗೆ ಪಂದ್ಯ ನಡೆಯುವುದು ಕೂಡ ಅನುಮಾನ ಎಂದು ತನ್ನ ವರದಿಯಲ್ಲಿ ತಿಳಿಸಿತ್ತು. ಇದೀಗ ಪಂದ್ಯ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗ ಜೋರು ಮಳೆ ಸುರಿಯಲು ಆರಂಭವಾಗಿದೆ. ಸದ್ಯ ಬೀಸುತ್ತಿರುವ ಗಾಳಿ ಮಳೆಯನ್ನು ಗಮನಿಸುವಾಗ ಇದು ನಿಲ್ಲುವಂತೆ ಕಾಣುತ್ತಿಲ್ಲ.

ಇತ್ತಂಡಗಳ ಈ ಪಂದ್ಯಕ್ಕೆ ಭಾರೀ ಮಳೆ ಭೀತಿ ಇದ್ದರೂ ಕೂಡ ಮೀಸಲು ದಿನದ ಸೌಲಭ್ಯವೂ ಇಲ್ಲ. ಹೆಚ್ಚುವರಿ 250 ನಿಮಿಷವನ್ನು ನೀಡಲಾಗಿದ್ದರೂ, ಫಲಿತಾಂಶ ನಿರ್ಧರಿಸಲು ಉಭಯ ತಂಡಗಳು ಕನಿಷ್ಠ 10 ಓವರ್​ ಆಡುವುದು ಅಗತ್ಯವಾಗಿದೆ. ಒಂದೊಮ್ಮೆ ಪಂದ್ಯ ನಡೆಯದೇ ಇದ್ದರೆ ಸೂಪರ್​-8 ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಹೊಂದಿರುವ ಭಾರತ ನೇರವಾಗಿ ಫೈನಲ್​ ಪ್ರವೇಶಿಸಲಿದೆ.

​2022ರಲ್ಲಿ ಅಡಿಲೇಡ್​ನಲ್ಲಿ ನಡೆದ ಟಿ20 ವಿಶ್ವಕಪ್​ ಸೆಮೀಸ್​ನಲ್ಲಿ ಇಂಗ್ಲೆಂಡ್​ ತಂಡ ಭಾರತಕ್ಕೆ 10 ವಿಕೆಟ್​ಗಳ ಹೀನಾಯ ಸೋಲುಣಿಸಿ ಫೈನಲ್​ ಪ್ರವೇಶಿಸಿತ್ತು. ಇದೀಗ ಅಂದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಅಪೂರ್ವ ಅವಕಾಶವೊಂದು ಭಾರತಕ್ಕೆ ಎದುರಾಗಿದೆ. ಇದರಲ್ಲಿ ರೋಹಿತ್​ ಬಳಗ ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತದೆ ಎಂಬುದೊಂದು ಕುತೂಹಲ.

ಇದನ್ನೂ ಓದಿ IND vs ENG: ಸೆಮಿ ಪಂದ್ಯಕ್ಕೂ ಮುನ್ನ ಬಿಸಿಸಿಐ ವಿರುದ್ಧ ಗಂಭೀರ ಆರೋಪ ಮಾಡಿದ ಮಾಜಿ ನಾಯಕ

ಬಲಾಬಲ

ಭಾರತ ಮತ್ತು ಇಂಗ್ಲೆಂಡ್​ ಇದುವರೆಗೆ ಟಿ20 ಕ್ರಿಕೆಟ್​ನಲ್ಲಿ 23 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಭಾರತ 12 ಪಂದ್ಯ ಗೆದ್ದಿದ್ದರೆ, ಇಂಗ್ಲೆಂಡ್​ 11 ಪಂದ್ಯಗಳನ್ನು ಗೆದ್ದಿದೆ. ಕಳೆದ 2 ವರ್ಷಗಳಿಂದ ಇಂಗ್ಲೆಂಡ್​ ವಿರುದ್ಧ ಭಾರತ ಗೆಲುವು ಕಂಡಿಲ್ಲ. 2022ರ ಟಿ20 ವಿಶ್ವಕಪ್(T20 World Cup 2024)​ ಸೆಮಿಫೈನಲ್​ ಪಂದ್ಯದ ಬಳಿಕ ಉಭಯ ತಂಡಗಳು ಇದುವರೆಗೂ ಟಿ20ಯಲ್ಲಿ ಮುಖಾಮುಖಿಯಾಗಿಲ್ಲ. ಆ ಪಂದ್ಯದಲ್ಲಿ ಭಾರತ 10 ವಿಕೆಟ್​ ಸೋಲು ಕಂಡಿತ್ತು. ಅಂದಿನ ಸೋಲಿಗೆ ಈ ಬಾರಿಯ ಸೆಮಿ ಕಾದಾಟದಲ್ಲಿ ಭಾರತ ಸೇಡು ತೀರಿಸಿಕೊಂಡೀತೇ ಎಂದು ಕಾದು ನೋಡಬೇಕಿದೆ.

ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಇತ್ತಂಡಗಳು 4 ಪಂದ್ಯಗಳನ್ನು ಆಡಿ ತಲಾ 2 ಪಂದ್ಯಗಳಲ್ಲಿ ಗೆಲುವು ಮತ್ತು ಸೋಲು ಕಂಡಿವೆ. ಭಾರತ ಕೊನೆಯ ಬಾರಿಗೆ ಇಂಗ್ಲೆಂಡ್​ ವಿರುದ್ಧ ಟಿ20 ಗೆಲುವು ಕಂಡಿದ್ದು 2012ರಲ್ಲಿ. ಆ ಪಂದ್ಯದಲ್ಲಿ ಧೋನಿ ಪಡೆ 90 ರನ್​ ಗೆಲುವು ಸಾಧಿಸಿತ್ತು.

ಸಂಭಾವ್ಯ ತಂಡಗಳು


ಭಾರತ:
 ರೋಹಿತ್​ ಶರ್ಮ(ನಾಯಕ), ವಿರಾಟ್ ಕೊಹ್ಲಿ, ರಿಷಭ್​ ಪಂತ್​(ವಿಕೀ), ಸೂರ್ಯಕುಮಾರ್ ಯಾದವ್, ಶಿವಂ ದುಬೆ/ ಸಂಜು ಸ್ಯಾಮ್ಸನ್​, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಜಸ್​ಪ್ರೀತ್​ ಬುಮ್ರಾ.

ಇಂಗ್ಲೆಂಡ್​: ಫಿಲಿಪ್ ಸಾಲ್ಟ್, ಜೋಸ್ ಬಟ್ಲರ್ (ನಾಯಕ), ಜಾನಿ ಬೈರ್‌ಸ್ಟೋವ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರನ್, ಕ್ರಿಸ್ ಜೋರ್ಡಾನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ರೀಸ್ ಟೋಪ್ಲಿ.

Continue Reading

ಕ್ರೀಡೆ

IND vs ENG: ಸೆಮಿ ಪಂದ್ಯಕ್ಕೂ ಮುನ್ನ ಬಿಸಿಸಿಐ ವಿರುದ್ಧ ಗಂಭೀರ ಆರೋಪ ಮಾಡಿದ ಮಾಜಿ ನಾಯಕ

IND vs ENG: . ಭಾರತ ತಂಡಕ್ಕೆ ಅನುಕೂಲವಾಗುವಂತೆ ಸೆಮಿಫೈನಲ್ ವೇಳಾಪಟ್ಟಿಯನ್ನು ಮೊದಲೇ ನಿರ್ಧರಿಸಲಾಗಿದೆ ಎಂದು ಇಂಗ್ಲೆಂಡ್​ ಮಾಜಿ ಆಟಗಾರ ಮೈಕೆಲ್ ವಾನ್(Michael Vaughan) ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.

VISTARANEWS.COM


on

IND vs ENG
Koo

ಪ್ರೊವಿಡೆನ್ಸ್‌: ಭಾರತ ಮತ್ತು ಇಂಗ್ಲೆಂಡ್(IND vs ENG)​ ನಡುವಣ ಹೈವೋಲ್ಟೇಜ್​ ಸೆಮಿ ಫೈನಲ್​ ಪಂದ್ಯಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಈ ಪಂದ್ಯ ಆರಂಭಕ್ಕೂ ಮುನ್ನವೇ ಇಂಗ್ಲೆಂಡ್​ ಮಾಜಿ ಆಟಗಾರ ಮೈಕೆಲ್ ವಾನ್(Michael Vaughan) ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ಭಾರತ ತಂಡಕ್ಕೆ ಅನುಕೂಲವಾಗುವಂತೆ ಸೆಮಿಫೈನಲ್ ವೇಳಾಪಟ್ಟಿಯನ್ನು ಮೊದಲೇ ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

ವಾನ್​ ಅವರು ಈ ಆರೋಪ ಮಾಡಲು ಪ್ರಮುಖ ಕಾರಣವೆಂದರೆ, ಇತ್ತಂಡಗಳ ಈ ಪಂದ್ಯಕ್ಕೆ ಭಾರೀ ಮಳೆ ಭೀತಿ ಇದ್ದರೂ ಕೂಡ ಮೀಸಲು ದಿನದ ಸೌಲಭ್ಯವೂ ಇಲ್ಲ. ಹೆಚ್ಚುವರಿ 250 ನಿಮಿಷವನ್ನು ನೀಡಲಾಗಿದ್ದರೂ, ಫಲಿತಾಂಶ ನಿರ್ಧರಿಸಲು ಉಭಯ ತಂಡಗಳು ಕನಿಷ್ಠ 10 ಓವರ್​ ಆಡುವುದು ಅಗತ್ಯವಾಗಿದೆ. ಒಂದೊಮ್ಮೆ ಪಂದ್ಯ ನಡೆಯದೇ ಇದ್ದರೆ ಸೂಪರ್​-8 ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಹೊಂದಿರುವ ಭಾರತ ನೇರವಾಗಿ ಫೈನಲ್​ ಪ್ರವೇಶಿಸಲಿದೆ. ಇದು ವಾನ್ ಹಾಗೂ ಇಂಗ್ಲೆಂಡ್​ ಕ್ರಿಕೆಟಿಗರನ್ನು ಸಹಜವಾಗಿಯೇ ಕೆರಳಿಸುವಂತೆ ಮಾಡಿದೆ.

ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ವಾನ್​, ಒಂದು ಸೆಮಿ ಫೈನಲ್​ಗೆ ಮೀಸಲು ದಿನ ನಿಗದಿಪಡಿಸಿ ಮತ್ತೊಂದು ಪಂದ್ಯಕ್ಕೆ ಈ ನಿಯಮ ಅನ್ವಯವಾಗುವುದಿಲ್ಲ ಎನ್ನುವುದು ಎಷ್ಟರ ಮಟ್ಟಿಗೆ ಸರಿ. ನಿಯಮ ಎಂದರೆ ಎಲ್ಲ ತಂಡಗಳಿಗೂ ಮತ್ತು ಪಂದ್ಯಗಳಿಗೂ ಅನ್ವಯವಾಗಬೇಕು. ನನ್ನ ಪ್ರಕಾರ ಭಾರತ ಮತ್ತು ಇಂಗ್ಲೆಂಡ್ ನಡುವಣ ಸೆಮಿಫೈನಲ್ ಮೊದಲು ನಡೆಯಬೇಕಿತ್ತು. ಆದರೆ ಭಾರತ ತಂಡಕ್ಕೆ ಅನುಕೂಲವಾಗುವಂತೆ 2ನೇ ಸೆಮಿಫೈನಲ್​ನಲ್ಲಿ ಟೀಮ್ ಇಂಡಿಯಾವನ್ನು ಆಡಿಸಲಾಗಿದೆ. ಇದು ಪಕ್ಷಪಾತ ಧೋರಣೆ, ಇದರಿಂದ ಇಂಗ್ಲೆಂಡ್​ಗೆ ಅನ್ಯಾಯವಾಗಿದೆ. ಇದರಲ್ಲಿ ಬಿಸಿಸಿಐ ಕೈವಾಡವಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ IND vs ENG Semi Final: ಇಂದಿನ ಪಂದ್ಯಕ್ಕೆ ಭಾರತ ಆಡುವ ಬಳಗದಲ್ಲಿ ಒಂದು ಬದಲಾವಣೆ ಖಚಿತ!

ಐಸಿಸಿ ಪ್ರಕಾರ, ಬಾರ್ಬಡೋಸ್‌ನಲ್ಲಿ ಫೈನಲ್ ಪಂದ್ಯ ಶನಿವಾರ ನಡೆಯಲಿದೆ. ಕೆರಿಬಿಯನ್ ದ್ವೀಪಗಳ ನಡುವಿನ ಪ್ರಯಾಣದ ಯೋಜನೆಗಳನ್ನು ಸರಿಹೊಂದಿಸಲು ಪಂದ್ಯಗಳ ನಡುವೆ 24-ಗಂಟೆಗಳ ಅಂತರವಿರುತ್ತದೆ. ಹೀಗಾಗಿ ಮೀಸಲು ದಿನ ಇರಿಸಿಲ್ಲ ಎನ್ನುವುದು ಐಸಿಸಿ ಹೇಳಿಕೆಯಾಗಿದೆ.

ಇಂಗ್ಲೆಂಡ್​ ನಾಯಕ ಜಾಸ್​ ಬಟ್ಲರ್‌, ಫಿಲ್​ ಸಾಲ್ಟ್​, ಜಾನಿ ಬೇರ್‌ಸ್ಟೊ, ​ಲಿವಿಂಗ್​​ಸ್ಟೋನ್​, ಹ್ಯಾರಿ ಬ್ರೂಕ್​, ಸ್ಯಾಮ್​ ಕರನ್​, ಮೊಯಿನ್​ ಅಲಿ ಅವರನ್ನೊಳಗೊಂಡ ಬ್ಯಾಟಿಂಗ್‌ ಸರದಿ ಟಿ20ಗೆ ಹೇಳಿ ಮಾಡಿಸಿದಂತಿದೆ. ಇವರನ್ನು ನಿಯಂತ್ರಿಸುವುದರಲ್ಲಿ ಭಾರತದ ಯಶಸ್ಸು ಅಡಗಿದೆ. ಕಳೆದ ಕೆಲವು ವರ್ಷಗಳಿಂದ ಕ್ರಿಕೆಟ್​ನಿಂದ ದೂರ ಉಳಿದಿದ್ದ ಘಾತಕ ವೇಗಿ ಜೋಫ್ರಾ ಆರ್ಚರ್​ ಕೂಡ ತಂಡಕ್ಕೆ ಮರಳಿದ್ದು ಇಂಗ್ಲೆಂಡ್​ ಬೌಲಿಂಗ್​ ಬಲವನ್ನು ಹೆಚ್ಚಿಸಿದೆ.

Continue Reading
Advertisement
Paris Olympics 2024
ಕ್ರೀಡೆ9 mins ago

Paris Olympics 2024 : ರಿಲಯನ್ಸ್ ಫೌಂಡೇಷನ್ ಸಹಯೋಗದಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ “ಇಂಡಿಯಾ ಹೌಸ್”

Viral Video
ವೈರಲ್ ನ್ಯೂಸ್14 mins ago

Viral Video: ಅಬ್ಬಾ.. ಎಂಥಾ ಕ್ರೌರ್ಯ! ಮಹಿಳೆ ಮೇಲೆ ಕಿಡಿಗೇಡಿಗಳಿಂದ ಇದೆಂಥಾ ದೌರ್ಜನ್ಯ-ವಿಡಿಯೋ ಇದೆ ನೋಡಿ

Jio Tariffs
ದೇಶ14 mins ago

Jio Tariffs: ಜಿಯೋ ಬಳಕೆದಾರರಿಗೆ ಬ್ಯಾಡ್‌ ನ್ಯೂಸ್;‌ ಶೇ.20ರಷ್ಟು ಶುಲ್ಕ ಹೆಚ್ಚಳ, ನೂತನ ದರಪಟ್ಟಿ ಇಲ್ಲಿದೆ

Internet Addiction
ಆರೋಗ್ಯ24 mins ago

Internet Addiction: ಈ 10 ಲಕ್ಷಣಗಳು ನಿಮ್ಮಲ್ಲಿದ್ದರೆ, ನೀವೂ ಇಂಟರ್ನೆಟ್‌ ಚಟಕ್ಕೆ ಬಿದ್ದಿದ್ದೀರಿ ಎಂದರ್ಥ!

Paris Olympics 2024
ಕ್ರೀಡೆ28 mins ago

Paris Olympics 2024: ಒಲಿಂಪಿಕ್ಸ್​ಗೆ ಅರ್ಹತೆ ಪಡೆದ​ ರಾಜ್ಯದ ಇಬ್ಬರು ಸ್ವಿಮ್ಮರ್​ಗಳು

Illegal ganja storage in Ballari Arrest of two accused Rs 19 10 lakh Valuable ganja seized
ಕರ್ನಾಟಕ1 hour ago

Ballari News: ಬಳ್ಳಾರಿಯಲ್ಲಿ ಅಕ್ರಮ ಗಾಂಜಾ ಸಂಗ್ರಹ; ಇಬ್ಬರು ಆರೋಪಿಗಳ ಬಂಧನ

Arvind Kejriwal
ದೇಶ1 hour ago

Arvind Kejriwal: ಪ್ಯಾಂಟ್‌ ಲೂಸ್‌ ಆಗಿದೆ, ಒಂದು ಬೆಲ್ಟ್‌ ಕೊಡಿ; ಕೋರ್ಟ್‌ಗೆ ಅರವಿಂದ್‌ ಕೇಜ್ರಿವಾಲ್‌ ಮನವಿ‌

Karnataka Weather Forecast
ಮಳೆ1 hour ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

Railway New Rules
Latest1 hour ago

Railway New Rules: ರೈಲು ಪ್ರಯಾಣಿಕರೇ, ಬರ್ತ್‌ನಲ್ಲಿ ಮಲಗುವ ಕುರಿತ ಈ ಹೊಸ ರೂಲ್ಸ್‌ ನೆನಪಿನಲ್ಲಿರಲಿ!

Ashada Sale 2024
ಫ್ಯಾಷನ್1 hour ago

Ashada Sale 2024: ಆಷಾಢ ಸೇಲ್‌ನಲ್ಲಿ ಶಾಪಿಂಗ್‌ ಮಾಡುವಾಗ ಗಮನದಲ್ಲಿಟ್ಟುಕೊಳ್ಳಬೇಕಾದ 5 ಸಂಗತಿಗಳು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ1 hour ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ8 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ6 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌