Farooq Abdullah | ಕಾಶ್ಮೀರದಲ್ಲಿ ಎಲ್ಲಿಯ ತನಕ ಕೊಲೆಗಳಾಗಲಿವೆ? ಫಾರೂಖ್ ಅಬ್ದುಲ್ಲಾ ಹೇಳಿದ್ದೇನು? - Vistara News

ದೇಶ

Farooq Abdullah | ಕಾಶ್ಮೀರದಲ್ಲಿ ಎಲ್ಲಿಯ ತನಕ ಕೊಲೆಗಳಾಗಲಿವೆ? ಫಾರೂಖ್ ಅಬ್ದುಲ್ಲಾ ಹೇಳಿದ್ದೇನು?

ನ್ಯಾಯ ಸಿಗುವವರೆಗೂ ಕಣಿವೆ ರಾಜ್ಯದಲ್ಲಿ ಹತ್ಯೆಗಳು ನಿಲ್ಲುವುದಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಖ್ ಅಬ್ದುಲ್ಲಾ (Farooq Abdullah) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

VISTARANEWS.COM


on

Article 370 may came back in 200 years Says Farooq Abdullah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ನ್ಯಾಯ ಸಿಗುವವರೆಗೂ ಹತ್ಯೆಗಳು ನಿಲ್ಲುವುದಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್(ಎನ್‌ಸಿ) ನಾಯಕ ಫಾರೂಖ್ ಅಬ್ದುಲ್ಲಾ (Farooq Abdullah) ವಿವಾದತ್ಮಕ ಹೇಳಿಕೆ ನೀಡಿದ್ದಾರೆ. ಈಗ ಕಣಿವೆ ರಾಜ್ಯದಲ್ಲಿ 370 ಆರ್ಟಿಕಲ್ ಕೂಡ ಇಲ್ಲ. ಆದರೂ ಏಕೆ ಹತ್ಯೆಗಳು ನಡೆಯುತ್ತಿವೆ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಶೋಪಿಯಾನ್ ಪ್ರದೇಶದಲ್ಲಿ ಹಾಡಹಗಲೇ ಕಾಶ್ಮೀರ ಪಂಡಿತ ಪೂರನ್ ಕೃಷ್ಣ ಭಟ್ ಅವರ ಭೀಕರ ಹತ್ಯೆ ನಡೆದ ಎರಡು ದಿನಗಳ ಬೆನ್ನಲ್ಲೇ ಫಾರೂಖ್ ಈ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು ಚರ್ಚೆಗೆ ಕಾರಣವಾಗಿದೆ.

ನ್ಯಾಯ ಸಿಗುವವರೆಗೂ ಹತ್ಯೆಗಳು ನಿಲ್ಲುವುದಿಲ್ಲ. ಈ ಮೊದಲು ಅವರು(ಬಿಜೆಪಿ) ಕಣಿವೆ ರಾಜ್ಯದಲ್ಲಾಗುವ ಎಲ್ಲ ಅವಘಡಗಳಿಗೂ ಆರ್ಟಿಕಲ್ 379 ಮೇಲೆ ಗೂಬೆ ಕೂರಿಸುತ್ತಿದ್ದರು. ಈಗ 370 ಆರ್ಟಿಕಲ್ ತೆಗೆದು ಹಾಕಲಾಗಿದೆಯಲ್ಲ, ಈಗಲೂ ಅಂಥ ಘಟನೆಗಳು ಏಕೆ ಕಣಿವೆ ರಾಜ್ಯದಲ್ಲಾಗುತ್ತಿವೆ? ಇದಕ್ಕೆ ಯಾರು ಜವಾಬ್ದಾರರು ಹೇಳಿ ನೋಡೋಣ? ಅವರು ಹೇಳಿದ ಹಾಗೇ ಕಣಿವೆ ರಾಜ್ಯದಲ್ಲಿ ನಿಜವಾಗಲೂ ಪರಿಸ್ಥಿತಿ ಸುಧಾರಿಸಿದ್ದರೆ ಪಂಡಿತರ ಕೊಲೆಗಳು ಏಕೆ ನಡೆಯುತ್ತಿವೆ ಎಂದು ಫಾರೂಖ್ ಅಬ್ದುಲ್ಲಾ ಪ್ರಶ್ನಿಸಿದ್ದಾರೆ.

ಫಾರೂಖ್ ಅಬ್ದುಲ್ಲಾ ಅವರ ಹೇಳಿಕೆಯನ್ನು ಜಮ್ಮು ಮತ್ತು ಕಾಶ್ಮೀರ ಅವಾಮಿ ನ್ಯಾಷನಲ್ ಕಾನ್ಫರೆನ್ಸ್(ಜೆಕೆಎಎನ್‌ಸಿ) ಬೆಂಬಲಿಸಿದೆ. ಅಬ್ದುಲ್ಲಾ ಅವರು ಹೇಳಿದ್ದು ಸಂಪೂರ್ಣವಾಗಿ ಸರಿಯಾಗಿದೆ. 370 ಆರ್ಟಿಕಲ್ ತೆಗೆದು ಹಾಕಿದರೂ ಟಾರ್ಗೆಟ್ ಕಿಲ್ಲಿಂಗ್ ಏಕೆ ನಡೆಯುತ್ತಿದೆ ಎಂದು ಪಕ್ಷದ ಹಿರಿಯ ನಾಯಕ ಮುಝ್ಪಪರ್ ಅಹ್ಮದ್ ಅವರು ಹೇಳಿದ್ದಾರೆ.

ಕಳೆದ ಬಾರಿ ಕುಟುಂಬದ ಸದಸ್ಯರ ಭದ್ರತೆಯನ್ನು ಕೇಳಿದ್ದರೂ ಭದ್ರತೆಯನ್ನು ಒದಗಿಸಲಿಲ್ಲ. ಕೊನೆಗೆ ಪಂಡಿತ ಗುಂಡಿಗೆ ಬಲಿಯಾಗಬೇಕಾಯಿತು. ಆದರೆ, ಮತ್ತೊಂದೆಡೆ, ಬಿಜೆಬಿ ನಾಯಕರು ಮತ್ತು ಆಡಳಿತದಲ್ಲಿ ಇರುವವರಿಗೆ ಭದ್ರತಾ ಸಿಬ್ಬಂದಿಯ ಶೇ.30 ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಸರ್ಕಾರ ಏನೂ ಮಾಡುತ್ತಿಲ್ಲ. ಇದು ಅನ್ಯಾಯದ ಪರಮಾವಧಿ. 2010ರಿಂದ ಯಾವ ನಾಗರಿಕರು ಕಣಿವೆ ರಾಜ್ಯದಲ್ಲಿ ಸತ್ತಿರಲಿಲ್ಲ. ಆದರೆ, ರಾಜ್ಯಪಾಲರ ಆಡಳಿತದಲ್ಲಿ ಕಣಿವೆ ತುಂಬ ಹತ್ಯೆಗಳಾಗುತ್ತಿವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ | ಮತ್ತೊಬ್ಬ ಕಾಶ್ಮೀರಿ ಪಂಡಿತನನ್ನು ಹತ್ಯೆ ಮಾಡಿದ ಉಗ್ರರು; ಆತನ ಸಹೋದರನಿಗೆ ಗಂಭೀರ ಗಾಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Tollgates: ಇನ್ನು ಫಾಸ್ಟ್‌ಟ್ಯಾಗ್‌‌ ಮರೆತುಬಿಡಿ; ಟೋಲ್‌ ಸಂಗ್ರಹಕ್ಕೆ ಬರುತ್ತಿದೆ ಸ್ಯಾಟಲೈಟ್‌ ಆಧಾರಿತ ವ್ಯವಸ್ಥೆ: ಏನಿದರ ಪ್ರಯೋಜನ?

Tollgates: ವಾಹನ ಸವಾರರಿಗೆ ಗುಡ್‌ನ್ಯೂಸ್‌. ಇನ್ನು ಹೆದ್ದಾರಿಯಲ್ಲಿ ಟೋಲ್‌ ಕಟ್ಟಲು ಕಾಯುವ ಕಿರಿಕಿರಿ ತಪ್ಪಲಿದೆ. ಫಾಸ್ಟ್‌ಟ್ಯಾಗ್‌‌ ಟೋಲ್‌ ಸಂಗ್ರಹಕ್ಕಿಂತ ಭಿನ್ನವಾದ, ಸ್ಯಾಟಲೈಟ್‌ ಆಧಾರಿತ ಟೋಲ್‌ ಸಿಸ್ಟಂ ಜಾರಿಗೆ ತರುವುದು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಹೊಸ ತಂತ್ರಜ್ಞಾನದಿಂದ ಏನೆಲ್ಲ ಪ್ರಯೋಜನಗಳಿವೆ, ಸವಾಲುಗಳೇನು ಎನ್ನುವ ವಿವರ ಇಲ್ಲಿದೆ.

VISTARANEWS.COM


on

Tollgates
Koo

ನವದೆಹಲಿ: ಕೇಂದ್ರ ಸರ್ಕಾರ ಹೆದ್ದಾರಿಗಳಲ್ಲಿನ ಟೋಲ್‌ ಸಂಗ್ರಹ (Tollgates) ವ್ಯವಸ್ಥೆಯ ಬದಲಾವಣೆಗೆ ಚಿಂತನೆ ನಡೆಸಿದೆ. ಕಳೆದ ವರ್ಷವೇ ಸರ್ಕಾರ ಈ ಬಗ್ಗೆ ಸೂಚನೆ ನೀಡಿದೆ. ಫಾಸ್ಟ್‌ಟ್ಯಾಗ್‌‌ (FASTag) ಟೋಲ್‌ ಸಂಗ್ರಹಕ್ಕಿಂತ ಭಿನ್ನವಾದ, ಸ್ಯಾಟಲೈಟ್‌ ಆಧಾರಿತ ಟೋಲ್‌ ಸಿಸ್ಟಂ ಜಾರಿಗೆ ತರುವುದು ಸರ್ಕಾರದ ಯೋಜನೆ. ಉಪಗ್ರಹ ಆಧಾರಿತವಾಗಿ ಇದು ಕಾರ್ಯ ನಿರ್ವಹಿಸಲಿದೆ (Satellite Based Toll System). ಉಪಗ್ರಹ ಆಧಾರಿತ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಜಾರಿಗೆ ತರಲು ವಿವಿಧ ಜಾಗತಿಕ ಸಂಸ್ಥೆಗಳ ಜತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NationalHighway aAuthority of India) ಚರ್ಚೆ ನಡೆಸಿದೆ. ಈ ಹೊಸ ತಂತ್ರಜ್ಞಾನದಿಂದ ಏನೆಲ್ಲ ಪ್ರಯೋಜನಗಳಿವೆ, ಸವಾಲುಗಳೇನು ಎನ್ನುವ ವಿವರ ಇಲ್ಲಿದೆ.

ಕೇಂದ್ರ ಸರ್ಕಾರವು 2021ರಿಂದ ಫಾಸ್ಟ್‌ಟ್ಯಾಗ್‌ ಕಡ್ಡಾಯಗೊಳಿಸಿದ್ದು, ಇದರಿಂದ ಟೋಲ್‌ಗೇಟ್‌ಗಳಲ್ಲಿ ಜನರ ಅರ್ಧ ಸಮಯ ಉಳಿತಾಯವಾಗಿದೆ. ರಸ್ತೆಯ ಉದ್ದಕ್ಕೂ ಕ್ಯೂ ನಿಲ್ಲುವ ಪ್ರಮೇಯ ತಪ್ಪಿದೆ. ಅದಾಗ್ಯೂ ಕಾಯುವ ಕಿರಿಕಿರಿ ಪೂರ್ತಿಯಾಗಿ ತಪ್ಪಿಲ್ಲ. ಇದೀಗ ಹೊಸ ವ್ಯವಸ್ಥೆ ಮೂಲಕ ಈ ಎಲ್ಲ ಸಮಸ್ಯೆ ಪರಿಹಾರವಾಗಲಿದೆ ಎನ್ನುವ ನಿರೀಕ್ಷೆ ಇದೆ.

ಜಿಪಿಎಸ್‌ ಆಧಾರಿತ ಟೋಲ್‌ ಸಿಸ್ಟಮ್‌ ಹೇಗೆ ಕಾರ್ಯ ನಿರ್ವಹಿಸುತ್ತದೆ?

ಭಾರತದಲ್ಲಿ ಜಾರಿಗೆ ತರಲು ಉದ್ದೇಶಿಸಿರುವ ಜಿಪಿಎಸ್ ಅಥವಾ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯಲ್ಲಿ ಫಾಸ್ಟ್‌ಟ್ಯಾಗ್‌ ಐಡಿಗಳನ್ನು ಸ್ಕ್ಯಾನ್ ಮಾಡುವ ಬದಲು, ವಾಹನದ ನಂಬರ್ ಪ್ಲೇಟ್ ಅನ್ನು ಸ್ಕ್ಯಾನ್ ಮಾಡಲಾಗುತ್ತದೆ. ಇದಕ್ಕಾಗಿ ಹೆದ್ದಾರಿಗಳನ್ನು ವರ್ಚುವಲ್ ಟೋಲ್‌ನಿಂದ ಸಜ್ಜುಗೊಳಿಸಲಾಗುತ್ತದೆ. ಇದರಲ್ಲಿನ ಕ್ಯಾಮೆರಾ ಚಲಿಸುತ್ತಿರುವ ವಾಹನಗಳ ನಂಬರ್‌ ಪ್ಲೇಟ್‌ ಅನ್ನು ಗುರುತಿಸುತ್ತದೆ. ಬಳಿಕ ವಾಹನ ಪ್ರಯಾಣಿಸಿದ ದೂರವನ್ನು ಆಧರಿಸಿ ಬ್ಯಾಂಕ್ ಖಾತೆಯಿಂದ ಟೋಲ್ ಮೊತ್ತವನ್ನು ಸ್ವಯಂಚಾಲಿತವಾಗಿ ಕಡಿತಗೊಳಿಸಲಾಗುತ್ತದೆ. ಜತೆಗೆ ವಿವಿಧ ವಿವರಗಳನ್ನು ಮೇಲ್ವಿಚಾರಣೆ ನಡೆಸಲು ಜಿಪಿಎಸ್ ಅನ್ನು ಬಳಸಲಾಗುತ್ತದೆ. ಒಟ್ಟಿನಲ್ಲಿ ಉಪಗ್ರಹ ಆಧಾರಿತ ಟೋಲ್‌ ಸಂಗ್ರಹ ವ್ಯವಸ್ಥೆಯು ಜಾರಿಗೆ ಬಂದರೆ ಸಮಯದ ಜತೆಗೆ ಹಣವೂ ಉಳಿತಾಯವಾಗುತ್ತದೆ. ಟೋಲ್‌ ಸಂಗ್ರಹ ಇರುವ ಹೆದ್ದಾರಿಯಲ್ಲಿ ನಾವು ಎಷ್ಟು ದೂರ ಕ್ರಮಿಸಿದ್ದೇವೋ, ಅಷ್ಟಕ್ಕೆ ಮಾತ್ರ ಟೋಲ್‌ ಶುಲ್ಕ ಪಾವತಿಸದರೆ ಸಾಕಾಗುತ್ತದೆ.

ಅನುಕೂಲಗಳೇನು?

ಈ ಹೊಸ ಟೋಲ್ ಸಂಗ್ರಹ ವ್ಯವಸ್ಥೆಯ ಕಾಯುವ ಸಮಯವನ್ನು ಕಡಿಮೆ ಮಾಡುತ್ತದೆ. ಇದು ಸರಾಸರಿ ಕಾಯುವ ಸಮಯವನ್ನು 714 ಸೆಕೆಂಡುಗಳಿಂದ (ಸುಮಾರು 11 ನಿಮಿಷ) 47 ಸೆಕೆಂಡುಗಳಿಗೆ ಇಳಿಸುತ್ತದೆ. ಅಂತಿಮವಾಗಿ ಪ್ರಯಾಣದ ಸಮಯವನ್ನೂ ಕಡಿಮೆ ಮಾಡುತ್ತದೆ. ಹೆಚ್ಚುವರಿಯಾಗಿ, ಈ ವಿಧಾನವು ಸಂಚಾರ ದಟ್ಟಣೆಯನ್ನು ಇಳಿಸಲು ಸಹಾಯ ಮಾಡುತ್ತದೆ. ಇದಕ್ಕಾಗಿ ವಿಶೇಷ ಟೋಲ್ ಲೇನ್‌ಗಳನ್ನು ನಿರ್ಮಿಸುವ ಅಗತ್ಯವಿಲ್ಲ. ಟೋಲ್‌ ಬೂತ್‌ಗಳನ್ನು ತೆಗೆದುಹಾಕುವುದರಿಂದ ಇವುಗಳ ನಿರ್ವಹಣೆ ಮತ್ತು ನಿರ್ಮಾಣ ವೆಚ್ಚಗಳನ್ನು ಉಳಿಸಬಹುದು. ಇದಲ್ಲದೆ, ಬಿಲ್ಲಿಂಗ್ ಪ್ರಕ್ರಿಯೆಯು ಸುಲಭವಾಗುತ್ತದೆ. ಏಕೆಂದರೆ ಬಳಕೆದಾರರು ಅವರು ಪ್ರಯಾಣಿಸುವ ದೂರಕ್ಕೆ ಮಾತ್ರ ಪಾವತಿಸಿದರೆ ಸಾಕು. ಅಂದರೆ ಈಗ ನಾವು ಟೋಲ್‌ ಗೇಟ್‌ ನಂತರ ಅರ್ಧ ಕಿಲೋಮೀಟರ್‌ ಇದ್ದರೂ, ಪೂರ್ತಿ ಹಣವನ್ನು ಪಾವತಿಸಬೇಕು. ಆದರೆ ಸ್ಯಾಟಲೈಟ್‌ ಆಧಾರಿತ ಟೋಲ್‌ ವ್ಯವಸ್ಥೆ ಜಾರಿಗೆ ಬಂದರೆ, ಎಷ್ಟು ದೂರ ಕ್ರಮಿಸಿದ್ದೇವೋ, ಅಷ್ಟಕ್ಕೆ ಮಾತ್ರ ಹಣ ಪಾವತಿ ಮಾಡಿದರಾಯ್ತು.

ಸವಾಲುಗಳೇನು?

ಇನ್ನು ಸ್ಯಾಟಲೈಟ್‌ ಆಧಾರಿತ ಟೋಲ್‌ ವ್ಯವಸ್ಥೆ ಜಾರಿಗೆ ಹಲವು ಸವಾಲುಗಳಿವೆ. ಪ್ರಸ್ತುತ ಬಳಸಲಾಗುವ ಫಾಸ್ಟ್‌ಟ್ಯಾಗ್‌ಗೆ ಹೋಲಿಸಿದರೆ ಇದು ಮುಂದುವರಿದಿದ ತಂತ್ರಜ್ಞಾನವಾಗಿದ್ದರೂ ಈ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆ ಅಗತ್ಯ. ಉದಾಹರಣೆಗೆ, ವಾಹನ ದಟ್ಟಣೆ ಇರುವ ಸ್ಥಳಗಳಲ್ಲಿ ನಿಖರವಾದ ಡೇಟಾವನ್ನು ಸಂಗ್ರಹಿಸಲು ಸಿಸ್ಟಮ್‌ಗೆ ಸಾಧ್ಯವಾಗದಿರಬಹುದು. ಈ ಸಮಸ್ಯೆಗಳು ಗ್ರಾಮೀಣ ಭಾಗಗಳು ಅಥವಾ ಭೌಗೋಳಿಕವಾಗಿ ಸವಾಲಿನ ಭೂ ಪ್ರದೇಶವನ್ನು ಹೊಂದಿರುವ ಪ್ರದೇಶಗಳಲ್ಲಿ ನಿರಂತರವಾಗಿರಬಹುದು. ಈ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಅಲ್ಲದೆ ಇದು ಗ್ರಾಹಕರ ಗೌಪ್ಯತೆಯ ಬಗ್ಗೆಯೂ ಪ್ರಶ್ನೆ ಏಳುವಂತೆ ಮಾಡುತ್ತದೆ.

ಸ್ಯಾಟಲೈಟ್‌ ಆಧಾರಿತ ಟೋಲ್‌ ವ್ಯವಸ್ಥೆ ಜಾರಿಯಲ್ಲಿರುವ ದೇಶಗಳಿವು

ಈ ಸ್ಯಾಟಲೈಟ್‌ ಆಧಾರಿತ ಟೋಲ್‌ ವ್ಯವಸ್ಥೆಯನ್ನು ಈಗಾಗಲೇ ಹಲವು ದೇಶಗಳು ಬಳಸುತ್ತಿವೆ. ಜರ್ಮನಿ, ರಷ್ಯಾ ಮತ್ತು ಸ್ಲೋವಾಕಿಯಾದಂತಹ ಯುರೋಪಿಯನ್‌ ರಾಷ್ಟ್ರಗಳು ತಮ್ಮ ಹೆದ್ದಾರಿಗಳಲ್ಲಿ ಪ್ರಯಾಣವನ್ನು ಸುಗಮಗೊಳಿಸಲು ಈ ವ್ಯವಸ್ಥೆಯನ್ನು ಯಶಸ್ವಿಯಾಗಿ ಬಳಸುತ್ತಿವೆ. ಈ ದೇಶಗಳಲ್ಲಿನ ಸಾವಿರಾರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಭಾರತದಲ್ಲಿ ಯಾವಾಗ ಜಾರಿಗೆ ಬರಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: Money Guide: ಫಾಸ್ಟ್‌ಟ್ಯಾಗ್‌ ಇದ್ದರೂ ದಂಡ ಕಟ್ಟುತ್ತಿದ್ದೀರಾ?; ಪರಿಹಾರ ಇಲ್ಲಿದೆ

Continue Reading

ದೇಶ

Doda Terror Attacks: ಶಂಕಿತ ನಾಲ್ವರು ಭಯೋತ್ಪಾದಕರ ರೇಖಾಚಿತ್ರ ಬಿಡುಗಡೆ; ಸುಳಿವು ನೀಡಿದವರಿಗೆ 20 ಲಕ್ಷ ರೂ. ಬಹುಮಾನ

Doda Terror Attacks: ಜಮ್ಮು ಮತ್ತು ಕಾಶ್ಮೀರದ (Jammu & Kashmir) ದೋಡಾ ಜಿಲ್ಲೆಯಲ್ಲಿ ನಡೆದ ಎರಡು ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾದ ನಾಲ್ವರು ಶಂಕಿತರ ರೇಖಾಚಿತ್ರಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದು, ಮಾಹಿತಿ ನೀಡಿದವರಿಗೆ 20 ಲಕ್ಷ ರೂ.ಗಳ ಬಹುಮಾನವನ್ನು ಘೋಷಿಸಿದ್ದಾರೆ. ಬುಧವಾರ ಗಂಡೋಹ್ ಪ್ರದೇಶದಲ್ಲಿ ಶೋಧ ತಂಡದ ಮೇಲೆ ಮತ್ತೆ ದಾಳಿ ನಡೆದಿದ್ದು, ಪೊಲೀಸ್ ಸೇರಿದಂತೆ ಏಳು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.

VISTARANEWS.COM


on

Doda Terror Attacks
Koo

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu & Kashmir) ದೋಡಾ ಜಿಲ್ಲೆಯಲ್ಲಿ ನಡೆದ ಎರಡು ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾದ ನಾಲ್ವರು ಶಂಕಿತರ ರೇಖಾಚಿತ್ರಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದು, ಮಾಹಿತಿ ನೀಡಿದವರಿಗೆ 20 ಲಕ್ಷ ರೂ.ಗಳ ಬಹುಮಾನವನ್ನು ಘೋಷಿಸಿದ್ದಾರೆ (Doda Terror Attacks). ಮಂಗಳವಾರ ಭದೇರ್ವಾದ ಚಟರ್ಗಲ್ಲಾದಲ್ಲಿ ರಾಷ್ಟ್ರೀಯ ರೈಫಲ್ಸ್ ಮತ್ತು ಪೊಲೀಸರ ಜಂಟಿ ಚೆಕ್‌ ಪಾಯಿಂಟ್‌ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಬುಧವಾರ ಗಂಡೋಹ್ ಪ್ರದೇಶದಲ್ಲಿ ಶೋಧ ತಂಡದ ಮೇಲೆ ಮತ್ತೆ ದಾಳಿ ನಡೆದಿದ್ದು, ಪೊಲೀಸ್ ಸೇರಿದಂತೆ ಏಳು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ʼʼಈ ನಾಲ್ವರು ಭಯೋತ್ಪಾದಕರ ಸುಳಿವು ನೀಡಿದವರಿಗೆ ತಲಾ 5 ಲಕ್ಷ ರೂ. ನೀಡಲಾಗುವುದುʼʼ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಜತೆಗೆ ಭಯೋತ್ಪಾದಕರ ಚಟುವಟಿಕೆ, ಚಲನವಲನಗಳ ಬಗ್ಗೆ ಸಂಶಯ ಮೂಡಿದರೆ ಕೂಡಲೇ ತಮ್ಮನ್ನು ಸಂಪರ್ಕಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ದೋಡಾ ಜಿಲ್ಲೆಯ ಚೆಕ್ ಪೋಸ್ಟ್ ಮೇಲೆ ಭಯೋತ್ಪಾದಕರ ಒಂದು ಗುಂಪು ದಾಳಿ ನಡೆಸಿದ ನಂತರ ಬುಧವಾರ ನಡೆದ ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಐವರು ಸೈನಿಕರು ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ. ಸದ್ಯ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಘಟನೆ ವಿವರ

ಮೊದಲ ದಾಳಿಯಲ್ಲಿ, ಮೂರರಿಂದ ನಾಲ್ಕು ಭಯೋತ್ಪಾದಕರ ಗುಂಪು ಬುಧವಾರ ಮುಂಜಾನೆ 1.45ಕ್ಕೆ ಭದೇರ್ವಾ-ಪಠಾಣ್ಕೋಟ್ ರಸ್ತೆಯ ದೋಡಾದ ಚಟ್ಟರ್ಗಲಾ ಪ್ರದೇಶದಲ್ಲಿ ರಾಷ್ಟ್ರೀಯ ರೈಫಲ್ಸ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಚೆಕ್‌ಪೋಸ್ಟ್‌ ಮೇಲೆ ಗುಂಡು ಹಾರಿಸಿತು. ನಂತರ ಛತ್ತರ್ಗಾಲದಿಂದ 150 ಕಿ.ಮೀ. ದೂರದಲ್ಲಿರುವ ಕೋಟಾ ಟಾಪ್ ಪ್ರದೇಶದಲ್ಲಿ ಎರಡನೇ ದಾಳಿ ನಡೆದಿತ್ತು. ಭಯೋತ್ಪಾದಕರ ಗುಂಪು ಪೊಲೀಸ್ ತಂಡದ ಮೇಲೆ ದಾಳಿ ನಡೆಸಿ ಹೆಡ್ ಕಾನ್ಸ್‌ಸ್ಟೇಬಲ್‌ ಗಾಯಗೊಂಡಿದ್ದರು.

ಇನ್ನು ಕಥುವಾದಲ್ಲಿ ಮಂಗಳವಾರ ತಡರಾತ್ರಿ ಪ್ರಾರಂಭವಾದ ಮತ್ತೊಂದು ಗುಂಡಿನ ಚಕಮಕಿ ಬುಧವಾರ ಬೆಳಿಗ್ಗೆಯವರೆಗೂ ಮುಂದುವರೆದಿದ್ದು, ಒಬ್ಬ ಕೇಂದ್ರ ಮೀಸಲು ಪೊಲೀಸ್ ಪಡೆ ಜವಾನ್ ಹುತಾತ್ಮರಾಗಿದ್ದಾರೆ. ಜತೆಗೆ ಆರು ಭದ್ರತಾ ಸಿಬ್ಬಂದಿ ಮತ್ತು ಒಬ್ಬ ನಾಗರಿಕ ಗಾಯಗೊಂಡಿದ್ದಾರೆ. ಪ್ರತೀಕಾರವಾಗಿ ಭದ್ರತಾ ಸಿಬ್ಬಂದಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ: Reasi Terror Attack: ರಿಯಾಸಿ ಭಯೋತ್ಪಾದಕ ದಾಳಿಯ ಶಂಕಿತನ ರೇಖಾಚಿತ್ರ ಬಿಡುಗಡೆ; ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಘೋಷಣೆ

ಹಿರಿಯ ಪೊಲೀಸ್ ಅಧಿಕಾರಿಗಳು ಜಮ್ಮುವಿನಲ್ಲಿ ಒಳನುಸುಳುವಿಕೆ ಹೆಚ್ಚಾಗುತ್ತಿದೆ, ವಿದೇಶಿ ಭಯೋತ್ಪಾದಕರ ಹಾವಳಿ ಮಿತಿ ಮೀರುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನವನ್ನು ಹೆಸರಿಸದೆ ಎಡಿಜಿಪಿ ಆನಂದ್ ಜೈನ್, “ಶತ್ರು” ನೆರೆಹೊರೆಯವರು ಯಾವಾಗಲೂ ಜಮ್ಮು ಪ್ರದೇಶದಲ್ಲಿ ಶಾಂತಿಯನ್ನು ಕದಡಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಮಂಗಳವಾರ ಜಮ್ಮು ಮತ್ತು ಕಾಶ್ಮೀರ ಪೋಲೀಸರು ಪೊಲೀಸರು ರಿಯಾಸಿ ಜಿಲ್ಲೆಯ ಪೂನಿ ಪ್ರದೇಶದಲ್ಲಿ ಇತ್ತೀಚೆಗೆ ಬಸ್ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕನ ರೇಖಾ ಚಿತ್ರ ಬಿಡುಗಡೆ ಮಾಡಿದ್ದರು. ಜತೆಗೆ ಆತನ ಸುಳಿವು ನೀಡಿದವರಿಗೆ 20 ಲಕ್ಷ ರೂ.ಗಳ ಬಹುಮಾನವನ್ನು ಘೋಷಿಸಿದ್ದರು.

Continue Reading

ರಾಜಕೀಯ

Richest MP’s: ಇವರೇ ನೋಡಿ, ಟಾಪ್ 10 ಶ್ರೀಮಂತ ಸಂಸದರು! ಇವರ ಆಸ್ತಿ ಎಷ್ಟು?

ಲೋಕಸಭಾ ಚುನಾವಣೆಯನ್ನು ಗೆದ್ದ ಅಭ್ಯರ್ಥಿಗಳಲ್ಲಿ ಶೇ. 93ರಷ್ಟು ಮಂದಿ ಕೋಟ್ಯಧಿಪತಿಗಳಾಗಿದ್ದಾರೆ ಎಂದು ಪಿ ಆರ್ ಎಸ್ ವರದಿ ಹೇಳಿದೆ. ಇದರಲ್ಲಿ ಅತೀ ಹೆಚ್ಚು ಶ್ರೀಮಂತರನ್ನು (Richest MP’s) ಗುರುತಿಸಲಾಗಿದ್ದು, ಟಾಪ್ ಹತ್ತರಲ್ಲಿ ಇರುವ ಕರ್ನಾಟಕದ ಸಂಸದೆ ಸೇರಿ ಉಳಿದವರು ಯಾರು, ಅವರ ಆಸ್ತಿ ಮೌಲ್ಯ ಎಷ್ಟಿದೆ ಗೊತ್ತೇ? ಈ ಕುರಿತ ಕುತೂಹಲಕರ ಮಾಹಿತಿ ಇಲ್ಲಿದೆ.

VISTARANEWS.COM


on

By

Richest MP's
Koo

ಭಾರತೀಯ ಜನತಾ ಪಕ್ಷದ (BJP) ವರ್ಚಸ್ವಿ ನಾಯಕ ನರೇಂದ್ರ ಮೋದಿ (Narendra Modi) ಅವರು ಸತತ ಮೂರನೇ ಬಾರಿಗೆ ದೇಶದ ಪ್ರಧಾನ ಮಂತ್ರಿಯಾಗಿ (Prime Minister) ಅಧಿಕಾರ ವಹಿಸಿಕೊಳ್ಳುವುದರೊಂದಿಗೆ ಭಾರತದ (India) 2024ರ ಲೋಕಸಭಾ ಚುನಾವಣೆ (Loksabha election 2024) ಪ್ರಕ್ರಿಯೆ ಮುಕ್ತಾಯಗೊಂಡಿದೆ.

ಈ ವರ್ಷದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (NDA) 293 ಸ್ಥಾನಗಳನ್ನು ಗೆದ್ದು ಬಹುಮತವನ್ನು ಪಡೆದುಕೊಂಡಿದೆ. ಅಸೋಸಿಯೇಷನ್ ​​ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ನ ಇತ್ತೀಚಿನ ವರದಿಯ ಪ್ರಕಾರ ಪ್ರಸ್ತುತ ಲೋಕಸಭೆಯಲ್ಲಿ ಗೆದ್ದ ಅಭ್ಯರ್ಥಿಗಳಲ್ಲಿ ಶೇ. 93ರಷ್ಟು ಮಂದಿ ಕೋಟ್ಯಧಿಪತಿಗಳು (Richest MP’s). 2019ರಲ್ಲಿ ಇದು ಶೇ. 88ರಷ್ಟಿದ್ದು, 2014 ರಲ್ಲಿ ಇದು ಶೇ. 82ರಷ್ಟಾಗಿತ್ತು.

ಪಿಆರ್‌ಎಸ್ ಶಾಸಕಾಂಗ ಸಂಶೋಧನೆ ವರದಿಯ ಪ್ರಕಾರ ಲೋಕಸಭೆಯ 543 ಸ್ಥಾನಗಳಿಗೆ 8,039 ಅಭ್ಯರ್ಥಿಗಳು ಅಂತಿಮವಾಗಿ ಚುನಾವಣಾ ಕಣದಲ್ಲಿದ್ದರು. 1996ರ ಬಳಿಕ ಈ ಚುನಾವಣೆಯಲ್ಲೇ ಅತೀ ಹೆಚ್ಚು ಅಭ್ಯರ್ಥಿಗಳನ್ನು ಸ್ಪರ್ಧಿಸಿರುವುದು ಈಗ ದಾಖಲೆಯಾಗಿದೆ.

ಈ ಬಾರಿ ಲೋಕಸಭೆಯನ್ನು ಪ್ರವೇಶಿಸಿದ ಅತೀ ಹೆಚ್ಚು ಶ್ರೀಮಂತರನ್ನು ಗುರುತಿಸಲಾಗಿದ್ದು, ಟಾಪ್ ಹತ್ತರಲ್ಲಿರುವ ಶ್ರೀಮಂತ ಸಂಸದರ ಮಾಹಿತಿ ಇಲ್ಲಿದೆ.


1. ಡಾ. ಚಂದ್ರಶೇಖರ್ ಪೆಮ್ಮಸಾನಿ- ಟಿಡಿಪಿ

ಗ್ರಾಮೀಣಾಭಿವೃದ್ಧಿ ಮತ್ತು ಸಂವಹನ ಸಚಿವಾಲಯದ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಡಾ. ಚಂದ್ರಶೇಖರ್ ಪೆಮ್ಮಸಾನಿ ಅವರು ಮೋದಿ 3.0 ಕ್ಯಾಬಿನೆಟ್‌ನಲ್ಲಿ 2024ರ ಶ್ರೀಮಂತ ಲೋಕಸಭೆ ಅಭ್ಯರ್ಥಿ ಮತ್ತು ಸಂಸದರಾಗಿದ್ದಾರೆ. ಇವರು ಒಟ್ಟು 5,705 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ. ಪೆಮ್ಮಸಾನಿ ಅವರು ಗುಂಟೂರು ಕ್ಷೇತ್ರದಿಂದ ತಮ್ಮ ಸಮೀಪದ ಪ್ರತಿಸ್ಪರ್ಧಿ ವೈಎಸ್‌ಆರ್‌ಸಿಪಿಯ ಕಿಲಾರಿ ವೆಂಕಟ ರೋಸಾಲ ಅವರನ್ನು 3,44,695 ಮತಗಳ ಅಂತರದಿಂದ ಸೋಲಿಸಿದರು.

2. ಕೊಂಡ ವಿಶ್ವೇಶ್ವರ್ ರೆಡ್ಡಿ- ಬಿಜೆಪಿ

ತೆಲಂಗಾಣದ ಚೆಲ್ಲೆವಾ ಕ್ಷೇತ್ರದಿಂದ ಬಿಜೆಪಿಯ ಕೊಂಡ ವಿಶ್ವೇಶ್ವರ್ ರೆಡ್ಡಿ ಅವರು ಕಾಂಗ್ರೆಸ್ ನ ಡಾ. ಗದ್ದಂ ರಂಜಿತ್ ರೆಡ್ಡಿ ಅವರನ್ನು 1,72,897 ಮತಗಳ ಅಂತರದಿಂದ ಸೋಲಿಸಿದ್ದಾರೆ. ರೆಡ್ಡಿ ಅವರು 4,568 ಕೋಟಿ ರೂ. ಮೌಲ್ಯದ ಒಟ್ಟು ಆಸ್ತಿಯನ್ನು ಹೊಂದಿದ್ದಾರೆ. ಇವರು ಲೋಕಸಭೆಯಲ್ಲಿ ಪ್ರಸ್ತುತ ಸಂಸದರಲ್ಲಿ ಎರಡನೇ ಅತ್ಯಂತ ಶ್ರೀಮಂತರಾಗಿದ್ದಾರೆ.

3. ನವೀನ್ ಜಿಂದಾಲ್- ಬಿಜೆಪಿ

14 ಮತ್ತು 15ನೇ ಲೋಕಸಭೆಯಲ್ಲಿ ಸಂಸದರಾಗಿದ್ದ ನವೀನ್ ಜಿಂದಾಲ್ ಅವರು ಕುರುಕ್ಷೇತ್ರ ಕ್ಷೇತ್ರದಿಂದ ಬಿಜೆಪಿಗೆ 2024 ರ ಲೋಕಸಭೆ ಚುನಾವಣೆಯಲ್ಲಿ ತಮ್ಮ ಸಮೀಪದ ಪ್ರತಿಸ್ಪರ್ಧಿ ಎಎಪಿಯ ಸುಶೀಲ್ ಗುಪ್ತಾ ಅವರನ್ನು 29,021 ಮತಗಳಿಂದ ಸೋಲಿಸಿದರು. ನವೀನ್ ಜಿಂದಾಲ್ ಏಷ್ಯಾದ ಅತ್ಯಂತ ಶ್ರೀಮಂತ ಕುಟುಂಬದಿಂದ ಬಂದವರು ಮತ್ತು ಭಾರತದ ಪ್ರಮುಖ ಉಕ್ಕಿನ ಕಂಪೆನಿಯಾದ ಜಿಂದಾಲ್ ಸ್ಟೀಲ್ ಮತ್ತು ಪವರ್ ಲಿಮಿಟೆಡ್‌ನ ಅಧ್ಯಕ್ಷರಾಗಿದ್ದಾರೆ. ಅವರ ಒಟ್ಟು ಆಸ್ತಿ ಮೌಲ್ಯ 1,241 ಕೋಟಿ ರೂ. ಗಿಂತ ಹೆಚ್ಚಿದ್ದು, ಲೋಕಸಭೆಯಲ್ಲಿ ಮೂರನೇ ಅತ್ಯಂತ ಶ್ರೀಮಂತ ಸಂಸದರಾಗಿದ್ದಾರೆ.

4. ಪ್ರಭಾಕರ ರೆಡ್ಡಿ ವೇಮಿರೆಡ್ಡಿ- ಟಿಡಿಪಿ

ಪ್ರಭಾಕರ ರೆಡ್ಡಿ ವೇಮಿರೆಡ್ಡಿ ಅವರು ವಿಪಿಆರ್ ಮೈನಿಂಗ್ ಇನ್ಫ್ರಾ ಪ್ರೈ. ಲಿಮಿಟೆಡ್ ನ ಮಾಲೀಕರಾಗಿದ್ದು, 716 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. ನೆಲ್ಲೂರು ಕ್ಷೇತ್ರದಲ್ಲಿ ಅವರು ವೈಎಸ್‌ಆರ್‌ಸಿಪಿಯ ವೇಣುಂಬಾಕ ವಿಜಯ ರೆಡ್ಡಿ ಅವರನ್ನು 2,45,902 ಮತಗಳ ಅಂತರದಿಂದ ಸೋಲಿಸಿದರು.

5. ಸಿ.ಎಂ. ರಮೇಶ್- ಬಿಜೆಪಿ

ಚಿಂತಕುಂಟಾ ಮುನುಸ್ವಾಮಿ ಅಥವಾ ಸಿ.ಎಂ. ರಮೇಶ್ ಅವರು ಭಾರತದ ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆಯಲ್ಲಿ ಸಂಸತ್ ಸದಸ್ಯರಾಗಿದ್ದರು. ಒಟ್ಟು 497 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವ ಇವರು ಆಂಧ್ರಪ್ರದೇಶದ ಅನಕಾಪಲ್ಲಿ ಕ್ಷೇತ್ರದಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಡಿ. ಮುತ್ಯಾಲ ನಾಯ್ಡು ಅವರನ್ನು 2,96,530 ಮತಗಳ ಅಂತರದಿಂದ ಸೋಲಿಸಿದರು.

6. ಜ್ಯೋತಿರಾದಿತ್ಯ ಎಂ. ಸಿಂಧಿಯಾ- ಬಿಜೆಪಿ

ಜ್ಯೋತಿರಾದಿತ್ಯ ಎಂ. ಸಿಂಧಿಯಾ ಅವರು 424 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. 2021 ರಲ್ಲಿ ಮೋದಿ ಕ್ಯಾಬಿನೆಟ್ ಅಡಿಯಲ್ಲಿ ನಾಗರಿಕ ವಿಮಾನಯಾನ ಮತ್ತು ಉಕ್ಕು ಸಚಿವರಾಗಿದ್ದ ಸಿಂಧಿಯಾ ಈ ಬಾರಿಯ ಚುನಾವಣೆಯಲ್ಲಿ ಮಧ್ಯದ ಗುನಾ ಕ್ಷೇತ್ರದಿಂದ ಗೆದ್ದು, ಸಂವಹನ ಮತ್ತು ಈಶಾನ್ಯ ಪ್ರದೇಶದ ಅಭಿವೃದ್ಧಿ ಸಚಿವರಾಗಿ ನೇಮಕಗೊಂಡಿದ್ದಾರೆ.


7. ಛತ್ರಪತಿ ಶಾಹು ಮಹಾರಾಜ್- ಐ ಎನ್ ಸಿ

ಕೊಲ್ಲಾಪುರದ ರಾಜಮನೆತನದವರಾದ ಛತ್ರಪತಿ ಶಾಹು ಮಹಾರಾಜರ ಒಟ್ಟು ಆಸ್ತಿ 342 ಕೋಟಿ ರೂ. 2024ರ ಸಾರ್ವತ್ರಿಕ ಚುನಾವಣೆಯಲ್ಲಿ, ಅವರು ಕಾಂಗ್ರೆಸ್ ಪಕ್ಷವನ್ನು ಪ್ರತಿನಿಧಿಸಿದರು. ಮಹಾರಾಷ್ಟ್ರದ ಕೊಲ್ಲಾಪುರ ಕ್ಷೇತ್ರದಿಂದ 1,54,964 ಮತಗಳ ಗೆಲುವಿನ ಅಂತರದಿಂದ ಶಿವಸೇನೆಯ ಸಂಜಯ್ ಸದಾಶಿವರಾವ್ ಮಾಂಡ್ಲಿಕ್ ಅವರನ್ನು ಸೋಲಿಸಿದರು.

ಇದನ್ನೂ ಓದಿ: Tamilisai Soundararajan: ವೇದಿಕೆ ಮೇಲೆಯೇ ತಮಿಳ್‌ಸಾಯಿಗೆ ಅಮಿತ್‌ ಶಾ ಭರ್ಜರಿ ಕ್ಲಾಸ್;‌ ವಿಡಿಯೊ ನೋಡಿ

8. ಶ್ರೀಭರತ್ ಮಾತುಕುಮಿಲ್ಲಿ- ಟಿಡಿಪಿ

ಭಾರತೀಯ ಶಿಕ್ಷಣ ತಜ್ಞ ಮತ್ತು ಗಾಂಧಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್ ನ (GITAM) ಅಧ್ಯಕ್ಷ, ಟಿಡಿಎಸ್ ನ ಶ್ರೀಭರತ್ ಮಟ್ಟುಕುಮಿಲ್ಲಿ ಅವರು ಒಟ್ಟು 298 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ. ಆಂಧ್ರಪ್ರದೇಶದ ವಿಶಾಖಪಟ್ಟಣಂ ಕ್ಷೇತ್ರದಲ್ಲಿ ಅವರು ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಝಾನ್ಸಿ ಲಕ್ಷ್ಮಿ ಬೋಟ್ಚಾ ಅವರನ್ನು 5,04,247 ಮತಗಳ ಅಂತರದಿಂದ ಸೋಲಿಸಿದರು.

9. ಹೇಮಾ ಮಾಲಿನಿ- ಬಿಜೆಪಿ

2024ರ ಲೋಕಸಭಾ ಚುನಾವಣೆಯಲ್ಲಿ ಮಥುರಾ ಕ್ಷೇತ್ರದಿಂದ ಗೆಲ್ಲುವ ಮೂಲಕ ಮಾಲಿನಿ ಹ್ಯಾಟ್ರಿಕ್ ಸಾಧಿಸಿದರು. ಅವರ ಹತ್ತಿರದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಮುಖೇಶ್ ಧಂಗರ್ ಅವರನ್ನು 2,93,407 ಮತಗಳ ಅಂತರದಿಂದ ಸೋಲಿಸಿದರು. ಅವರು 278 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ.

10. ಡಾ ಪ್ರಭಾ ಮಲ್ಲಿಕಾರ್ಜುನ್- ಕಾಂಗ್ರೆಸ್

ಕಾಂಗ್ರೆಸ್‌ನ ಡಾ. ಪ್ರಭಾ ಮಲ್ಲಿಕಾರ್ಜುನ್ ಒಟ್ಟು 241 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಇವರು ಕರ್ನಾಟಕದ ದಾವಣಗೆರೆ ಕ್ಷೇತ್ರದಲ್ಲಿ ಬಿಜೆಪಿಯ ಗಾಯತ್ರಿ ಸಿದ್ದೇಶ್ವರ ಅವರನ್ನು 26,094 ಮತಗಳ ಅಂತರದಿಂದ ಸೋಲಿಸಿ ಸಂಸತ್ತು ಪ್ರವೇಶಿಸಿದ್ದಾರೆ.

Continue Reading

ದೇಶ

Fire Accident: ಮನೆಯೊಂದರಲ್ಲಿ ಕಾಣಿಸಿಕೊಂಡ ಬೆಂಕಿ; 7 ತಿಂಗಳ ಮಗು ಸಹಿತ ಐವರ ಸಜೀವ ದಹನ

Fire Accident: ಉತ್ತರ ಪ್ರದೇಶದ ಗಾಜಿಯಾಬಾದ್‌ ಜಿಲ್ಲೆಯ ಲೋನಿ ಗಡಿ ಪ್ರದೇಶದ ಬೆಹ್ತಾ ಹಾಜಿಪುರ ಗ್ರಾಮದ ಮನೆಯೊಂದರಲ್ಲಿ ಬುಧವಾರ (ಜೂನ್‌ 12) ರಾತ್ರಿ ಕಾಣಿಸಿಕೊಂಡ ಈ ಬೆಂಕಿಗೆ 7 ತಿಂಗಳ ಮಗು ಸೇರಿದಂತೆ ಐವರು ಬಲಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ʼʼಸದ್ಯ ಬೆಂಕಿಯನ್ನು ನಂದಿಸಲಾಗಿದೆ ಮತ್ತು ಮಹಿಳೆ ಮತ್ತು ಮಗು ಸೇರಿದಂತೆ ಗಂಭೀರ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆʼʼ ಎಂದು ಗಾಜಿಯಾಬಾದ್‌ನ ಹೆಚ್ಚುವರಿ ಪೊಲೀಸ್ ಆಯುಕ್ತ ದಿನೇಶ್ ಕುಮಾರ್ ಪಿ. ಹೇಳಿದ್ದಾರೆ.

VISTARANEWS.COM


on

Fire Accident
Koo

ಲಕ್ನೋ: ಕುವೈತ್‌ನ ಮಂಗಾಫ್ ನಗರದಲ್ಲಿರುವ ಆರು ಮಹಡಿಯ ಬೃಹತ್‌ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿಯೂ ಅಗ್ನಿ ಅವಘಡ ಸಂಭವಿಸಿದೆ. ಗಾಜಿಯಾಬಾದ್‌ ಜಿಲ್ಲೆಯ ಲೋನಿ ಗಡಿ ಪ್ರದೇಶದ ಬೆಹ್ತಾ ಹಾಜಿಪುರ ಗ್ರಾಮದ ಮನೆಯೊಂದರಲ್ಲಿ ಬುಧವಾರ (ಜೂನ್‌ 12) ರಾತ್ರಿ ಕಾಣಿಸಿಕೊಂಡ ಈ ಬೆಂಕಿಗೆ 7 ತಿಂಗಳ ಮಗು ಸೇರಿದಂತೆ ಐವರು ಬಲಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ (Fire Accident).

ʼʼಸದ್ಯ ಬೆಂಕಿಯನ್ನು ನಂದಿಸಲಾಗಿದೆ ಮತ್ತು ಮಹಿಳೆ ಮತ್ತು ಮಗು ಸೇರಿದಂತೆ ಗಂಭೀರ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆʼʼ ಎಂದು ಗಾಜಿಯಾಬಾದ್‌ನ ಹೆಚ್ಚುವರಿ ಪೊಲೀಸ್ ಆಯುಕ್ತ ದಿನೇಶ್ ಕುಮಾರ್ ಪಿ. ಹೇಳಿದ್ದಾರೆ. ದುರಂತದ ಬಗ್ಗೆ ಮಾಹಿತಿ ನೀಡಿದ ಅವರು, “ಜೂನ್ 12ರ ತಡರಾತ್ರಿ ಲೋನಿ ಪ್ರದೇಶದ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಕರೆ ಬಂದಿತ್ತು. ಮಾಹಿತಿ ಪಡೆದ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ತಕ್ಷಣ ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡರುʼʼ ಎಂದು ಹೇಳಿದ್ದಾರೆ.

“ಮಹಿಳೆ ಮತ್ತು ಮಗು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿಯು ನೆಲಮಹಡಿಯಿಂದ ಮೇಲಿನ ಮಹಡಿಗಳಿಗೆ ಹರಡಿತ್ತು. ಮೊದಲ ಮತ್ತು ಎರಡನೇ ಮಹಡಿಗಳಲ್ಲಿದ್ದ ಜನರನ್ನು ರಕ್ಷಿಸಲಾಗಿದೆ. ಅದಾಗ್ಯೂ ಐದು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಅವರನ್ನು ಗುರುತಿಸಲಾಗುತ್ತಿದೆ. ಮೃತರಲ್ಲಿ ಮಕ್ಕಳು, ವಯಸ್ಕರು ಮತ್ತು ವೃದ್ಧರು ಸೇರಿದ್ದಾರೆ. ಘಟನೆಯಲ್ಲಿ ಏಳು ವರ್ಷದ ಬಾಲಕಿ ಮತ್ತು ಏಳು ತಿಂಗಳ ಮಗು ಸಹ ಸಾವನ್ನಪ್ಪಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆʼʼ ಎಂದು ದಿನೇಶ್ ಕುಮಾರ್ ತಿಳಿಸಿದ್ದಾರೆ.

“ಕೆಲವು ಪ್ರತ್ಯಕ್ಷದರ್ಶಿಗಳ ಪ್ರಕಾರ, ಮನೆಯಲ್ಲಿ ಫೋಮ್ ಕ್ಯೂಬ್‌ಗಳು ಇದ್ದವು. ಇದರಿಂದ ಬೆಂಕಿ ಬಹಳ ಬೇಗ ಕಟ್ಟಡಕ್ಕೆ ವ್ಯಾಪಿಸಿದೆ. ಆದಾಗ್ಯೂ ಬೆಂಕಿ ದುರಂತದ ಕಾರಣವನ್ನು ವಿಚಾರಣೆ ಮೂಲಕ ಕಂಡು ಹಿಡಿಯಲಾಗುವುದುʼʼ ಎಂದು ಅವರು ಹೇಳಿದ್ದಾರೆ.

ಕುವೈತ್‌ ಬೆಂಕಿ ದುರಂತ: ಮೃತರ ಸಂಖ್ಯೆ 49ಕ್ಕೆ ಏರಿಕೆ

ಕುವೈತ್‌ನ ಮಂಗಾಫ್ ನಗರದಲ್ಲಿರುವ ಆರು ಮಹಡಿಯ ಬೃಹತ್‌ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತರ ಸಂಖ್ಯೆ 49ಕ್ಕೆ ಏರಿದೆ. ಈ ಪೈಕಿ ಬಹುತೇಕ ಮಂದಿ ಭಾರತೀಯರು ಎನ್ನಲಾಗಿದೆ. ಆರು ಮಹಡಿಯ ಕಟ್ಟಡದ ಅಡುಗೆ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬಳಿಕ ಇಡೀ ಕಟ್ಟಡಕ್ಕೆ ಆವರಿಸಿದೆ. ಹಲವಾರು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಘಟನೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್‌ ಅವರು ಕೂಡ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಬುಧವಾರ ಮುಂಜಾನೆ 4.30ಕ್ಕೆ ಕಾರ್ಮಿಕ ಶಿಬಿರದ ಅಡುಗೆಮನೆಯಲ್ಲಿ ಬೆಂಕಿ ಪ್ರಾರಂಭಗೊಂಡಿತ್ತು. ಬೆಂಕಿಯನ್ನು ನೋಡಿದ ನಂತರ ಕೆಲವರು ಅಪಾರ್ಟ್​ಮೆಂಟ್​ನಿಂದ ಜಿಗಿದು ಮೃತಪಟ್ಟಿದ್ದರೆ ಇತರರು ಸುಟ್ಟಗಾಯಗಳು ಮತ್ತು ಹೊಗೆ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Kuwait Fire: ಕುವೈತ್‌ನಲ್ಲಿ ಭೀಕರ ಅಗ್ನಿ ದುರಂತಕ್ಕೆ 41 ಭಾರತೀಯರ ಬಲಿ; ದಕ್ಷಿಣ ಭಾರತದವರೇ ಹೆಚ್ಚು!

Continue Reading
Advertisement
Namma Metro
ಬೆಂಗಳೂರು11 mins ago

Namma Metro : ತಾಂತ್ರಿಕ ಸಮಸ್ಯೆಯಿಂದಾಗಿ ಮೆಟ್ರೋ ರೈಲು ಓಡಾಟದಲ್ಲಿ ವ್ಯತ್ಯಯ; ಕಾದು ಸುಸ್ತಾದ ಪ್ರಯಾಣಿಕರು

T20 World Cup Viral Video
ಕ್ರಿಕೆಟ್13 mins ago

T20 World Cup Viral Video: ಪಾಕ್​ ತಂಡದ ವೇಗಿಗೆ ತವರಿನ ಅಭಿಮಾನಿಗಳಿಂದಲೇ ಗೇಲಿ

Dengue Fever
ಪ್ರಮುಖ ಸುದ್ದಿ30 mins ago

Dengue Fever : ಡೆಂಗ್ಯೂ ಜ್ವರಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ ಬಲಿ

murder case
ಬೆಂಗಳೂರು38 mins ago

Murder Case : ಬೆಂಗಳೂರಿನಲ್ಲಿ ಬರ್ಬರ ಹತ್ಯೆ; ನಡು ರಸ್ತೆಯಲ್ಲೇ ರಕ್ತಕಾರಿದ ರೌಡಿಶೀಟರ್‌

Khalistan Terror
ವಿದೇಶ40 mins ago

Khalistan Terror: ಇಟಲಿಯಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ವಿರೂಪಗೊಳಿಸಿದ ಖಲಿಸ್ತಾನಿಗಳು

Actor Darshan Another Sandalwood actor arrested for supporting Darshan
ಸ್ಯಾಂಡಲ್ ವುಡ್55 mins ago

Actor Darshan: ದರ್ಶನ್‌ಗೆ ನೆರವು ಕೊಟ್ಟ ಮತ್ತೊಬ್ಬ ಸ್ಯಾಂಡಲ್‌ವುಡ್‌ ನಟ ಅರೆಸ್ಟ್‌!

prajwal revanna case
ಪ್ರಮುಖ ಸುದ್ದಿ1 hour ago

Prajwal Revanna Case : ಭವಾನಿ ರೇವಣ್ಣ ಕಾರಿನ ಚಾಲಕ ಅಜಿತ್ ಸಂಬಂಧಿಕನ ಮನೆಗೆ ನುಗ್ಗಿ ಹಲ್ಲೆ

Actor Darshan Pavitra Gowda's ex-husband Sanjay Singh statement
ಸ್ಯಾಂಡಲ್ ವುಡ್1 hour ago

Actor Darshan: ಪವಿತ್ರಾ ಗೌಡ ಜೈಲು ಸೇರುತ್ತಿದ್ದಂತೆ ಮಾಜಿ ಪತಿ ಪ್ರತ್ಯಕ್ಷ; ಅವರು ಹೇಳಿದ್ದೇನು?

Tollgates
ದೇಶ1 hour ago

Tollgates: ಇನ್ನು ಫಾಸ್ಟ್‌ಟ್ಯಾಗ್‌‌ ಮರೆತುಬಿಡಿ; ಟೋಲ್‌ ಸಂಗ್ರಹಕ್ಕೆ ಬರುತ್ತಿದೆ ಸ್ಯಾಟಲೈಟ್‌ ಆಧಾರಿತ ವ್ಯವಸ್ಥೆ: ಏನಿದರ ಪ್ರಯೋಜನ?

WI vs NZ
ಕ್ರೀಡೆ1 hour ago

WI vs NZ: ಕಿವೀಸ್​ ಕಿವಿ ಹಿಂಡಿ ಸೂಪರ್​-8ಗೆ ಪ್ರವೇಶಿಸಿದ ವೆಸ್ಟ್​ ಇಂಡೀಸ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌