New expressway | ಬೆಂಗಳೂರಿನಿಂದ ಮುಂಬಯಿಗೆ 5 ಗಂಟೆಯಲ್ಲಿ ಪ್ರಯಾಣ? ನಿತಿನ್‌ ಗಡ್ಕರಿ ಭರವಸೆ - Vistara News

ಪ್ರಮುಖ ಸುದ್ದಿ

New expressway | ಬೆಂಗಳೂರಿನಿಂದ ಮುಂಬಯಿಗೆ 5 ಗಂಟೆಯಲ್ಲಿ ಪ್ರಯಾಣ? ನಿತಿನ್‌ ಗಡ್ಕರಿ ಭರವಸೆ

ಬೆಂಗಳೂರು ಮತ್ತು ಮುಂಬಯಿ ನಡುವೆ ಎಕ್ಸ್‌ಪ್ರೆಸ್‌ವೇ ನಿರ್ಮಾಣದಿಂದ ಉಭಯ ನಗರಗಳ (New expressway) ನಡುವೆ ರಸ್ತೆ ಪ್ರಯಾಣ ಅವಧಿ 15ರಿಂದ 5 ಗಂಟೆಗೆ ಇಳಿಕೆಯಾಗುವ ನಿರೀಕ್ಷೆ ಇದೆ.

VISTARANEWS.COM


on

way
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಪುಣೆ: ಬೆಂಗಳೂರಿನಿಂದ ಮುಂಬಯಿಗೆ ಭವಿಷ್ಯದ ದಿನಗಳಲ್ಲಿ ರಸ್ತೆ ಮೂಲಕ ಕಾರಿನಲ್ಲಿ ಪ್ರಯಾಣಿಸುವುದಿದ್ದರೆ, ಕೇವಲ 5 ಗಂಟೆಗಳಲ್ಲಿ ತಲುಪಬಹುದು! (New expressway) ಹೀಗಾಗಿ ರೈಲು ಅಥವಾ ವಿಮಾನದ ಬದಲು ಕಾರಿನಲ್ಲಿ ಪ್ರಯಾಣಿಸುವ ಆಯ್ಕೆಯೂ ನಿಮ್ಮದಾಗಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಭರವಸೆ ನೀಡಿದ್ದಾರೆ.

ಬೆಂಗಳೂರು-ಮುಂಬಯಿ ನಡುವೆ ಗ್ರೀನ್‌ ಎಕ್ಸ್‌ಪ್ರೆಸ್‌ವೇ ಹೆದ್ದಾರಿ ಯೋಜನೆ ಪೂರ್ಣವಾದ ಬಳಿಕ ಉಭಯ ನಗರಗಳ ನಡುವೆ ರಸ್ತೆ ಮೂಲಕ ಪ್ರಯಾಣಕ್ಕೆ 5 ಗಂಟೆ ಸಾಕು ಎಂದು ಸಚಿವರು ತಿಳಿಸಿದ್ದಾರೆ. ಈಗ 15 ಗಂಟೆ ಬೇಕಾಗುತ್ತದೆ.

ನೂತನ ಎಕ್ಸ್‌ಪ್ರೆಸ್‌ವೇ (Green express highway) ಬಗ್ಗೆ ಯೋಜಿಸಲಾಗಿದ್ದು, ಶೀಘ್ರದಲ್ಲಿ ಅನುಷ್ಠಾನವಾಗಲಿದೆ ಎಂದರು. ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ (NHAI) ತನ್ನ ಮಹತ್ತ್ವಾಕಾಂಕ್ಷೆಯ ರಸ್ತೆ ನೆಟ್‌ ವರ್ಕ್‌ ಯೋಜನೆಯ ಅಡಿಯಲ್ಲಿ ಹೊಸ ಎಕ್ಸ್‌ಪ್ರೆಸ್‌ ವೇಯನ್ನು ಕಾರ್ಯಗತಗೊಳಿಸಲಿದೆ.

ಎಕ್ಸ್‌ಪ್ರೆಸ್‌ ವೇ ಹೇಗೆ? ಮುಂಬಯಿ-ಪುಣೆಯ ನಡುವೆ ಎಕ್ಸ್‌ಪ್ರೆಸ್‌ವೇ ಈಗಾಗಲೇ ಇದ್ದು, ಪುಣೆಯಿಂದ ಬೆಂಗಳೂರಿಗೆ ವಿಸ್ತರಣೆಯಾಗಲಿದೆ. ಮುಂಬಯಿ-ಬೆಂಗಳೂರು ನಡುವೆ 985 ಕಿ.ಮೀ ದೂರ ಇದೆ. ಈಗ ರಾಷ್ಟ್ರೀಯ ಹೆದ್ದಾರಿ 48 ಅಥವಾ ರಾಷ್ಟ್ರೀಯ ಹೆದ್ದಾರಿ 50 ಮೂಲಕ ತಲುಪಬಹುದು. ಆದರೆ 15 ಗಂಟೆಗಳ ಸಮಯ ತಗಲುತ್ತದೆ. ಹೊಸ ಎಕ್ಸ್‌ಪ್ರೆಸ್‌ವೇ ಪರಿಣಾಮ ಪ್ರಯಾಣದ ಅವಧಿ ಗಣನೀಯ ಇಳಿಕೆಯಾಗಿದೆ. ಉಭಯ ನಗರಗಳ ನಡುವೆ ಹಲವು ನಗರಗಳಿಗೆ ರಸ್ತೆ ಸಂಪರ್ಕ ಸಿಗಲಿದೆ. ಬೆಂಗಳೂರು-ಪುಣೆ ನಡುವಣ ಪ್ರಯಾಣದ ಅವಧಿ ಕೂಡ ಮೂರೂವರೆ ಗಂಟೆಗೆ ಇಳಿಕೆಯಾಗಲಿದೆ.

ದೇಶದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 26 ಗ್ರೀನ್‌ ಎಕ್ಸ್‌ಪ್ರೆಸ್‌ವೇ ಹೆದ್ದಾರಿಗಳು ನಿರ್ಮಾಣವಾಗಲಿದೆ. ಇದರಿಂದ ಪ್ರಯಾಣದ ಅವಧಿಯಲ್ಲಿ ಇಳಿಕೆಯಾಗಲಿದೆ ಎಂದು ನಿತಿನ್‌ ಗಡ್ಕರಿ ತಿಳಿಸಿದ್ದಾರೆ. ಈ 26 ಎಕ್ಸ್‌ಪ್ರೆಸ್‌ವೇಗಳಲ್ಲಿ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇ ಕೂಡ ಒಂದಾಗಿದೆ. ಹಾಗೂ ಎರಡೂ ನಗರಗಳ ಪ್ರಯಾಣ ಅವಧಿ 2 ಗಂಟೆಗೆ ಇಳಿಯಲಿದೆ ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಕುಡುಕ ಬಾಲಕನಿಂದ ಅಪಘಾತ ಪ್ರಕರಣ; ಪುಣೆ ಪೊಲೀಸರ ದಿಟ್ಟ ಕ್ರಮ ಶ್ಲಾಘನೀಯ

ವಿಸ್ತಾರ ಸಂಪಾದಕೀಯ: ಪೊಲೀಸ್ ವ್ಯವಸ್ಥೆಯನ್ನು ಪ್ರಾಮಾಣಿಕವಾಗಿ ಕೆಲಸ ಮಾಡಲು ಪ್ರಚೋದಿಸಿದಾಗ, ಪ್ರಭಾವ ಬಳಸಿ ಅಥವಾ ಅಧಿಕಾರ ಬಳಸಿ ದಾರಿ ತಪ್ಪಿಸಲು ಪ್ರಯತ್ನಿಸದೆ ಇದ್ದರೆ, ಸರಿಯಾಗಿಯೇ ಕೆಲಸ ಮಾಡುತ್ತಾರೆ. ಅದಕ್ಜೆ ಪುಣೆ ಪ್ರಕರಣವೇ ಉದಾಹರಣೆ.

VISTARANEWS.COM


on

Porsche car accident ವಿಸ್ತಾರ ಸಂಪಾದಕೀಯ
Koo

ಪುಣೆಯಲ್ಲಿ ಕಂಠಮಟ್ಟ ಮದ್ಯಪಾನ (Drink and drive) ಮಾಡಿ, ಅಪ್ಪ ಕೊಡಿಸಿದ ಐಷಾರಾಮಿ ಪೋರ್ಷೆ ಕಾರನ್ನು (Pune Porsche car accident) ಯದ್ವಾತದ್ವಾ ಓಡಿಸಿ ಇಬ್ಬರ ಜೀವ ತೆಗೆದ ಅಪ್ರಾಪ್ತ ವಯಸ್ಕನ (Juvenile) ಪ್ರಕರಣದಲ್ಲಿ ಹಲವು ಬೆಳವಣಿಗೆಗಳು ಆಗಿವೆ. 17 ವರ್ಷದ ವೇದಾಂತ್‌ ಅಗರ್‌ವಾಲ್‌ ಐಷಾರಾಮಿ ಪೋರ್ಷೆ ಕಾರನ್ನು ಗಂಟೆಗೆ 200 ಕಿ.ಮೀ. ವೇಗದಲ್ಲಿ ಓಡಿಸಿ ಬೈಕ್‌ಗೆ ಡಿಕ್ಕಿ ಹೊಡೆಸಿದ್ದ. ಪರಿಣಾಮ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಮಧ್ಯಪ್ರದೇಶದ ಎಂಜಿನಿಯರ್‌ಗಳಾದ (Engineers) 24 ವರ್ಷದ ಅನೀಶ್ ಅವಧಿ ಮತ್ತು ಅಶ್ವಿನಿ ಕೊಶ್ತಾ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಘಟನೆಯ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಅಪಘಾತ ಆಗುತ್ತಿದ್ದಂತೆ ಸ್ಥಳೀಯರೆಲ್ಲ ಒಟ್ಟುಗೂಡಿ ಸೆರೆ ಹಿಡಿದು ಥಳಿಸಿ ಅವನನ್ನು ಪೊಲೀಸರಿಗೆ ಒಪ್ಪಿಸಿದ್ದರು. ದುರಂತ ಎಂದರೆ ವೇದಾಂತ್‌ ಅಗರ್‌ವಾಲ್‌ನ ಬಂಧನವಾದ ಕೇವಲ 15 ಗಂಟೆಗಳಲ್ಲೇ ಬಾಲಾಪರಾಧಿ ನ್ಯಾಯ ಮಂಡಳಿ ಆತನಿಗೆ ಜಾಮೀನು ಮಂಜೂರು ಮಾಡಿತ್ತು. ಜಾಮೀನು ನಿರಾಕರಿಸುವಷ್ಟು ಅಪರಾಧವು ಗಂಭೀರವಾಗಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ, ಅಪಘಾತಗಳ ಬಗ್ಗೆ 300 ಪದಗಳ ಪ್ರಬಂಧ ಬರೆಯಲು ಹೇಳಿತ್ತು. ಈ ಹಾಸ್ಯಾಸ್ಪದ ತೀರ್ಪಿಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು.

ಈ ಪ್ರಕರಣದಲ್ಲಿ ನ್ಯಾಯಾಂಗದ ಬಗ್ಗೆ ಬಂದ ಕಟು ಟೀಕೆಯ ನಂತರ ಪೊಲೀಸರು ಹಾಗೂ ನ್ಯಾಯಾಂಗವೂ ಎಚ್ಚೆತ್ತುಕೊಂಡಂತಿದೆ. ಪೊಲೀಸರು ಚುರುಕಾಗಿ ಕಾರ್ಯಪ್ರವೃತ್ತರಾಗಿದ್ದಾರೆ. ನ್ಯಾಯಾಂಗವೂ ಈ ಜಾಮೀನನ್ನು ರದ್ದುಪಡಿಸಿದ್ದು, ಆರೋಪಿ ಬಾಲಕನನ್ನು ರಿಮ್ಯಾಂಡ್‌ ಹೋಂಗೆ ಕಳುಹಿಸಿದೆ. ಈತನನ್ನು ವಯಸ್ಕನಂತೆ ಪರಿಗಣಿಸಿ ವಿಚಾರಣೆ ಮಾಡಲಾಗುತ್ತದೆ ಎಂದಿದ್ದಾರೆ ಪೊಲೀಸರು. ಈ ಪ್ರಕರಣದಲ್ಲಿ ಲೈಸೆನ್ಸ್‌ ರಹಿತ ಅಪ್ರಾಪ್ತನಿಗೆ ಕಾರನ್ನು ಓಡಿಸಲು ಕೊಟ್ಟ ಅಪ್ಪನೂ ಅಪರಾಧಿ, ಆತ ತಪ್ಪಿಸಿಕೊಳ್ಳಲು ಅವಕಾಶ ಮಾಡಿಕೊಟ್ಟ ಅಜ್ಜನೂ ಅಪರಾಧಿಯಾಗಿದ್ದು, ಇಬ್ಬರನ್ನೂ ಬಂಧಿಸಲಾಗಿದೆ. ಅಪಘಾತವಾದಾಗ ಕಾರನ್ನು ತಾನು ಓಡಿಸುತ್ತಿದ್ದೆ ಎಂದು ಹೇಳಿಕೊಳ್ಳುವಂತೆ ಕಾರು ಚಾಲಕನನ್ನು ಬಲವಂತ ಮಾಡಿದ್ದು ಕೂಡ ಬೆಳಕಿಗೆ ಬಂದಿದ್ದು, ಅದೂ ಕೂಡ ಒಂದು ಅಪರಾಧ. ಅಪಘಾತಕ್ಕೂ ಮುನ್ನ ಅಪ್ರಾಪ್ತ ವಯಸ್ಕ ಮದ್ಯ ಸೇವಿಸಿದ ಎರಡು ಬಾರ್‌ಗಳ ಮಾಲೀಕರು ಮತ್ತು ನೌಕರರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಸರ್ಕಾರಿ ಆಸ್ಪತ್ರೆಯ ವೈದ್ಯರಿಬ್ಬರು ಬಾಲಾಪರಾಧಿಯ ರಕ್ತದ ಮಾದರಿಯನ್ನು ಬದಲಾಯಿಸಿ ಆರೋಪಿಯನ್ನು ಬಚಾವ್‌ ಮಾಡಲು ಯತ್ನಿಸಿರುವುದು ಬೆಳಕಿಗೆ ಬಂದಿದ್ದು, ಇಬ್ಬರನ್ನೂ ಅರೆಸ್ಟ್‌ ಮಾಡಲಾಗಿದೆ. ದುಡ್ಡಿಗಾಗಿ ರಕ್ತದ ಮಾದರಿಯನ್ನು ಡಸ್ಟ್‌ ಬಿನ್‌ಗೆ ಎಸೆದ ಲ್ಯಾಬ್‌ ಗುಮಾಸ್ತನನ್ನೂ ವಶಕ್ಕೆ ಪಡೆಯಲಾಗಿದೆ.

ಈ ಪ್ರಕರಣದಲ್ಲಿ ಪೊಲೀಸರು ಕೆಲ ಆರಂಭಿಕ ಜಡತೆಗಳ ನಂತರ, ಸಾಕಷ್ಟು ಚುರುಕಾಗಿ ಹಾಗೂ ಸಮಗ್ರವಾಗಿಯೇ ಕಾರ್ಯ ನಿರ್ವಹಿಸಿದ್ದಾರೆ ಎನ್ನಬೇಕು. ಹೀಗೆ ಒಂದು ಅಪರಾಧದ ಎಲ್ಲ ಮಗ್ಗುಲುಗಳಲ್ಲಿಯೂ ತನಿಖೆ ನಡೆಸಿ, ಸಾಕ್ಷ್ಯಗಳನ್ನು ಸಂಗ್ರಹಿಸಿ, ವಿವರವಾದ ಹಾಗೂ ಗಟ್ಟಿಯಾದ ಚಾರ್ಜ್‌ಶೀಟ್‌ ಸಲ್ಲಿಸಿದಾಗ ಮಾತ್ರ ನಿಜವಾದ ಅಪರಾಧಿಗಳಿಗೆ ಶಿಕ್ಷೆಯಾಗಲು ಸಾಧ್ಯ. ನ್ಯಾಯಾಂಗವೂ ಅಷ್ಟೆ, ಆರಂಭದಲ್ಲಿ ಪ್ರಕರಣದ ಗಂಭೀರತೆಯನ್ನು ಅರ್ಥ ಮಾಡಿಕೊಂಡಿರಲಿಲ್ಲ; ದೇಶಾದ್ಯಂತ ಅಸಮಾಧಾನ ವ್ಯಕ್ತವಾದಾಗ ಅದಕ್ಕೂ ಈ ಪ್ರಕರಣದ ಗಂಭೀರತೆ ಅರ್ಥವಾದಂತಿದೆ. ಶ್ರೀಮಂತರ ಮಕ್ಕಳು ಉದ್ದೇಶರಹಿತ ಹಾಗೂ ನಿರಂಕುಶವಾಗಿ ಬೆಳೆದಾಗ ಇಂಥ ಸನ್ನಿವೇಶ ಸೃಷ್ಟಿಯಾಗುತ್ತದೆ. ಸರಿಯಾದ ಶಿಕ್ಷಣ ಹಾಗೂ ಸಂಸ್ಕಾರ ಕೊಡಿಸದ ಪೋಷಕರೂ ಈ ಘೋರ ಅಪರಾಧದ ಹೊಣೆಯನ್ನು ಹೊರಬೇಕಾಗುತ್ತದೆ. ಇಂಥ ಅಪ್ರಾಪ್ತರನ್ನು ವಯಸ್ಕರೆಂದೇ ಪರಿಗಣಿಸಿ ಶಿಕ್ಷಿಸಬೇಕಾದ ಅಗತ್ಯವಿದೆ. ದಿಲ್ಲಿ ನಿರ್ಭಯಾ ರೇಪ್ ಮತ್ತು ಕಗ್ಗೊಲೆ ಪ್ರಕರಣದಲ್ಲಿ ಅಪ್ರಾಪ್ತ ವಯಸ್ಕ ಆರೋಪಿಯೇ ಅತಿ ಬರ್ಬರವಾಗಿ ನಡೆದುಕೊಂಡಿದ್ದ ಎಂಬುದನ್ನು ನೆನಪಿಸಿಕೊಳ್ಳಬೇಕು.

ಪೊಲೀಸ್ ವ್ಯವಸ್ಥೆಯನ್ನು ಪ್ರಾಮಾಣಿಕವಾಗಿ ಕೆಲಸ ಮಾಡಲು ಪ್ರಚೋದಿಸಿದಾಗ, ಪ್ರಭಾವ ಬಳಸಿ ಅಥವಾ ಅಧಿಕಾರ ಬಳಸಿ ದಾರಿ ತಪ್ಪಿಸಲು ಪ್ರಯತ್ನಿಸದೆ ಇದ್ದರೆ, ಸರಿಯಾಗಿಯೇ ಕೆಲಸ ಮಾಡುತ್ತಾರೆ. ಅದಕ್ಜೆ ಪುಣೆ ಪ್ರಕರಣವೇ ಉದಾಹರಣೆ. ಇನ್ನು ವಿಚಾರಣೆಯ ಹಂತದಲ್ಲಿ ಆರೋಪಿಯ ಅಪರಾಧವನ್ನು ರುಜುವಾತುಪಡಿಸುವ ಸಾಕ್ಷ್ಯಾಧಾರಗಳನ್ನು ನ್ಯಾಯಾಲಯದ ಮುಂದೆ ಸಮರ್ಪಕವಾಗಿ ಮಂಡಿಸಿ, ಪಾತಕಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕಿದೆ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಗುಜರಾತ್ ಬೆಂಕಿ ದುರಂತ ನಮಗೆ ಎಚ್ಚರಿಕೆಯ ಪಾಠವಾಗಲಿ

Continue Reading

ಭವಿಷ್ಯ

Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಹೊರ ಬರುತ್ತೀರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ಪಂಚಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮಂಗಳವಾರವೂ ಕುಂಭ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ನೀವು ಇಂದು ಸಾಲಗಳಿಂದ ಮುಕ್ತರಾಗಬಹುದು. ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣ ಗಳಿಕೆಯ ವಿಚಾರಗಳಿಂದ ಲಾಭ ತೆಗೆದುಕೊಳ್ಳುವ ಸಾಧ್ಯತೆ ಇದೆ. ವೃಶ್ಚಿಕ ರಾಶಿಯವರು ನೆರೆಹೊರೆಯವರೊಂದಿಗೆ ಜಗಳವಾಗುವ ಸಾಧ್ಯತೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕುಟುಂಬದ ಸದಸ್ಯರೊಬ್ಬರ ಆರೋಗ್ಯ ಹದಗೆಡವ ಕಾರಣ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತೆರೆದಿಡುತ್ತದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (28-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ಪಂಚಮಿ 15:23 ವಾರ: ಮಂಗಳವಾರ
ನಕ್ಷತ್ರ: ಉತ್ತರಾಷಾಡ 09:32 ಯೋಗ: ಬ್ರಹ್ಮ 26:04
ಕರಣ: ತೈತುಲ 15:23 ಅಮೃತ ಕಾಲ: ರಾತ್ರಿ 10:38 ರಿಂದ 12:10ರವರಗೆ

ಸೂರ್ಯೋದಯ : 05:52   ಸೂರ್ಯಾಸ್ತ : 06:42

ರಾಹುಕಾಲ : ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಕೆಲವು ಮಾನಸಿಕ ಒತ್ತಡಗಳ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಆರ್ಥಿಕ ಜೀವನದಲ್ಲಿ ಇಂದು ಸಂತೋಷ ಉಳಿದಿರುತ್ತದೆ. ಇದರೊಂದಿಗೆ ನೀವು ಇಂದು ಸಾಲಗಳಿಂದ ಮುಕ್ತರಾಗಬಹುದು. ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣ ಗಳಿಕೆಯ ವಿಚಾರಗಳಿಂದ ಲಾಭ ತೆಗೆದುಕೊಳ್ಳುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ:ಇಂದು ನಿಮ್ಮ ಪ್ರೀತಿಯ ಜೀವನದಲ್ಲಿ ಅದ್ಭುತ ದಿನವಾಗಿದೆ. ನೀವು ದೀರ್ಘಕಾಲದ ಪ್ರಯೋಜನಗಳನ್ನು ಹೊಂದಿರುವ ಯೋಜನೆಗಳ ಮೇಲೆ ಕೆಲಸ ಮಾಡವ ಸಾಧ್ಯತೆ ಇದೆ. ಪ್ರವಾಸ ಮನರಂಜನೆ ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ನಿಮ್ಮ ವೈವಾಹಿಕ ಜೀವನದಲ್ಲಿ ಅನೇಕ ಏರಿಳಿತಗಳ ನಂತರ, ಇಂದು ಪರಸ್ಪರರಿಗೆ ನಿಮ್ಮ ಪ್ರೀತಿಯನ್ನು ಆಸ್ವಾದಿಸುವ ಸುವರ್ಣ ದಿನವಿದು. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ ಇರಲಿದೆ. ಉದ್ಯೋಗಿಗಳಿಗೆ ಶುಭ. ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಉದ್ಯೋಗಿಗಳಿಗೆ ಆಪ್ತರಿಂದ ಸಲಹೆ ಸೂಚನೆಗಳು ಸಿಗಲಿದೆ. ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರಿಕೆವಹಿಸಿ. ಶ್ರೇಷ್ಠ ಜನರೊಡನೆ ಸಂಬಂಧ ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಸಭಲತೆ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕಟಕ: ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರ್ಥಿಕವಾಗಿ ಸದೃಢ ಇರಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ಉದ್ಯೋಗಕ್ಕೆ ಸಂಬಂಧಿಸಿದ ಜನರು ಇಂದು ಕೆಲಸದ ಸ್ಥಳದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು, ತಾಳ್ಮೆಯಿಂದ ಇರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಸಿಂಹ: ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡುವ ಸಾಧ್ಯತೆ ಇದೆ. ನಿಮ್ಮ ಸರ್ವಾಧಿಕಾರಿ ಧೋರಣೆಯಿಂದಾಗಿ ನಿಮ್ಮ ಸಹೋದ್ಯೋಗಿಗಳಿಂದ ಟೀಕೆಗೆ ಗುರಿಯಾಗುವ ಸಾಧ್ಯತೆ ಹೆಚ್ಚು. ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ, ಅನಗತ್ಯ ಖರ್ಚುಗಳ ಬಗ್ಗೆ ಹಿಡಿತವಿರಲಿ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 8

Horoscope Today

ಕನ್ಯಾ:ಅನಗತ್ಯ ಒತ್ತಡದಿಂದ ಹೊರಬರಲು ನಿಮ್ಮ ಪ್ರೀತಿ ಪಾತ್ರರೊಡನೆ ಸಮಯವನ್ನು ಕಳೆಯಿರಿ. ಅತಿಥಿಗಳ ಆಗಮನದಿಂದಾಗಿ ಕೊಂಚಮಟ್ಟಿಗೆ ಸಮಾಧಾನ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಕೊಂಚಮಟ್ಟಿಗೆ ನಿಧಾನವಾದರೂ ಪ್ರಯತ್ನವನ್ನು ಬಿಡಬೇಡಿ. ಮುಂದೊಂದು ದಿನ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ದೃಷ್ಟಿಯಿಂದ ಉತ್ತಮವಾದ ದಿನ. ನಿಮ್ಮ ಹರ್ಷಚಿತ್ತದ ಮನಸ್ಸು ನಿಮಗೆ ಇನ್ನಷ್ಟೂ ಆತ್ಮವಿಶ್ವಾಸ ತರಲಿದೆ. ಒಬ್ಬ ಆಸಕ್ತಿದಾಯಕ ವ್ಯಕ್ತಿಯನ್ನು ಭೇಟಿ ಮಾಡುವ ಸಾಧ್ಯತೆಗಳಿವೆ. ಆರ್ಥಿಕವಾಗಿ ಸಾಧಾರಣ ಫಲ ಇರಲಿದೆ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಸಂತೋಷದ ವಾತಾವರಣ ಇರಲಿದೆ. ಅದೃಷ್ಟ ಸಂಖ್ಯೆ: 9

Horoscope Today

ವೃಶ್ಚಿಕ: ನೆರೆಹೊರೆಯವರೊಂದಿಗೆ ಜಗಳವಾಗುವ ಸಾಧ್ಯತೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕುಟುಂಬದ ಸದಸ್ಯರೊಬ್ಬರ ಆರೋಗ್ಯ ಹದಗೆಡವ ಕಾರಣ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತೆರೆದಿಡುತ್ತದೆ. ಉದ್ಯೋಗಿಗಳಿಗೆ ಕಿರಿಕಿರಿ ಇರಲಿದೆ. ಸಂಗಾತಿಯಿಂದ ಸಲಹೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

Horoscope Today

ಧನಸ್ಸು: ದೃಢ ವಿಶ್ವಾಸದ ನಿರ್ಧಾರದಿಂದಾಗಿ ಸುದೀರ್ಘವಾದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಸ್ನೇಹಿತರಿಂದ ಆರ್ಥಿಕ ಸಹಾಯವನ್ನು ಬೇಡುವರು ಆಲೋಚಿಸಿ ಸಹಾಯ ಮಾಡಿ. ಬಹಳ ದಿನಗಳಿಂದ ಪ್ರಯತ್ನಿಸುತ್ತಿದ್ದ ಕಾರ್ಯಗಳು ಯಶಸ್ಸನ್ನು ತಂದುಕೊಡಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮಗೆ ಪ್ರಸಂಶೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ಮಕರ: ಇಂದು ನೀವು ಹಲವಾರು ಒತ್ತಡಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾಗಬಹುದು, ಇದು ನಿಮಗೆ ಕಿರಿಕಿರಿ ಹಾಗೂ ಆತಂಕದ ಭಾವನೆಗಳನ್ನು ಉಂಟುಮಾಡಬಹುದು. ಕುಟುಂಬದವರ ಬೆಂಬಲ ಪ್ರೋತ್ಸಾಹದಿಂದಾಗಿ ಕೊಂಚಮಟ್ಟಿಗೆ ನಿರಾಳವಾಗುವಿರಿ. ಆರೋಗ್ಯದ ಬಗ್ಗೆ ಕಿಂಚಿತ್ತು ಕಾಳಜಿ ವಹಿಸುವುದು ಉತ್ತಮ. ಉದ್ಯೋಗದ ಸ್ಥಳದಲ್ಲಿ ಒತ್ತಡ ಹೆಚ್ಚಲಿದೆ. ಖರ್ಚಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ದಿನದ ಮಟ್ಟಿಗೆ ಮಾಡುವುದು ಬೇಡ. ಆತುರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ. ಸ್ನೇಹಿತರ ಜತೆ ಕೆಲವು ಆಹ್ಲಾದಕರ ಕ್ಷಣಗಳನ್ನು ಕಳೆಯುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರಗಳಲ್ಲಿ ಮಧ್ಯಮ ಲಾಭ ಇರಲಿದೆ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿಯಾಗಿರಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಹೂಡಿಕೆಯಲ್ಲಿ ಲಾಭಾಂಶ ಕಡಿಮೆ ಇರಲಿದೆ. ನೀವು ಯಾವುದೇ ದೊಡ್ಡ ಸಮಸ್ಯೆಯಿಂದ ಹೊರಬರಬಹುದು. ಪ್ರೀತಿ ಪಾತ್ರರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಕೊಂಚ ನೆಮ್ಮದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ ನೀಡಲಿದೆ. ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

Vijayapura News : ಪ್ರೀತಿಸಿದವಳನ್ನೇ ಮದುವೆಯಾಗಲು ಯುವಕನ ಹಠ; ಪರಸ್ಪರ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿಕೊಂಡು ಆಸ್ಪತ್ರೆ ಸೇರಿದರು!

Vijayapura News: ಘಟನೆಯಲ್ಲಿ ಯಾರು ಯಾರಿಗೆ ಪೆಟ್ರೋಲ್ ಎರಚಿ ಹತ್ಯೆಗೆ ಯತ್ನಿಸಿದರು ಅನ್ನೋದು ತನಿಖೆಯಿಂದ ಹೊರಬರಬೇಕಿದೆ. ತಮ್ಮ ಪ್ರೀತಿಗೆ ಮೋಸವಾಗಿದ್ದು ರಾಹುಲ್ ಸಿಟ್ಟಿಗೆ ಕಾರಣವಾಗಿತ್ತು. ಇನ್ನೊಂದು ಕಡೆಗೆ ರಾಹುಲ್​ ಕಿರುಕುಳದಿಂದ ಯುವತಿ ಮನೆಯವರು ಬೇಸತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

VISTARANEWS.COM


on

Vijayapura news
Koo

ವಿಜಯಪುರ : ತಮ್ಮ ಮಗಳನ್ನು ಮದುವೆಯಾಗಲು ಬಂದ ಆಕೆಯ ಪ್ರಿಯಕರನ ಮೇಲೆ ಪೋಷಕರೇ ಪೆಟ್ರೋಲ್​ ಹಾಕಿ ಸುಟ್ಟಿರುವ ಪ್ರಕರಣವೊಂದು ವಿಜಯಪುರ ಜಿಲ್ಲೆಯ (Vijayapura News) ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ. ಅದರೆ, ಯುವತಿಯ ಪೋಷಕರು ಇದನ್ನು ನಿರಾಕರಿಸಿದ್ದು ಮಗಳನ್ನು ಕೊಡದಿರಲು ನಿರ್ಧರಿಸಿದ ನಮ್ಮನ್ನು ಸುಡಲು ಯುವಕ ಪೆಟ್ರೋಲ್ ತಂದಿದ್ದ ಎಂದು ಆರೋಪಿಸಿದ್ದಾರೆ. ಘಟನೆಯಲ್ಲಿ ಪ್ರಿಯಕರ ರಾಹುಲ್​ ರಾಮನಗೌಡ ಬಿರಾದಾರ ಸುಟ್ಟ ಗಾಯಗಳು ಹಾಗೂ ಮಾರಕಾಸ್ತ್ರಗಳ ಪೆಟ್ಟಿನಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಯುವತಿಯ ಮನೆಯ ನಾಲ್ವರು ಆಸ್ಪತ್ರೆ ಸೇರಿದ್ದಾರೆ. ಘಟನೆ ಬಗ್ಗೆ ಎರಡೂ ಕಡೆಯಿಂದ ದೂರು ಹಾಗೂ ಪ್ರತಿದೂರು ದಾಖಲಾಗಿದೆ.

ಆಸ್ಪತ್ರೆ ಸೇರಿರುವ ಢವಳಗಿ ಗ್ರಾಮದ ರಾಹುಲ್ ರಾಮನಗೌಡ ಬಿರಾದಾರ ಅವರ ಕುಟುಂಬಸ್ಥರು ಆತನ ಪ್ರಿಯತಮೆ ಐಶ್ವರ್ಯ ಮದರಿ ಅವರ ಚಿಕ್ಕಪ್ಪ ಮುತ್ತು ಮದರಿ, ಚಿಕ್ಕಮ್ಮ ಸೀಮಾ ಮದರಿ ಎಂಬುವರ ಮೇಲೆ ದೂರು ದಾಖಲಿಸಿದ್ದಾರೆ. ಕನ್ಯೆ ಕೇಳಲು ಹೋದ ನಮ್ಮಣ್ಣನಿಗೆ ಬೆಂಕಿ ಹಾಕಿ ಸುಟ್ಟು ರಾಡ್​ನಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿದ್ದಾರೆ. ಆದರೆ ಐಶ್ವರ್ಯ ಸೇರಿದಂತೆ ಅವರ ಕುಟುಂಬಸ್ಥರು ಮದುವೆಗೆ ಒಪ್ಪದ ನಮ್ಮನ್ನು ಸುಡಲು ರಾಹುಲ್ ಯತ್ನಿಸಿದ್ದಾನೆ ಎಂದು ದೂರು ನೀಡಿದ್ದಾರೆ. ಶೇಕಡಾ 70ರಷ್ಟು ಸುಟ್ಟ ಗಾಯಗಳಿಗೆ ಒಳಗಾಗಿರುವ ರಾಹುಲ್​ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಏನಿದು ಪ್ರಕರಣ?

ರಾಹುಲ್ ರಾಮನಗೌಡ ಬಿರಾದಾರ ಅವರು ಐಶ್ವರ್ಯ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದ. ಮೂರು ವರ್ಷದಿಂದ ಪರಸ್ಪರ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದರು. ಅಂತೆಯೇ ಅವರು ಮದುವೆಯಾಗಲು ನಿರ್ಧರಿಸಿದ್ದರು. ಇಬ್ಬರ ಪ್ರೀತಿ ವಿಚಾರ ತಿಳಿದ ಯುವತಿಯ ಪೋಷಕರು ಹುಡುಗನ ಮನೆಯವರಿಗೆ ಬರಲು ಹೇಳಿದ್ದರು. ಅವರು ಅಲ್ಲಿಗೆ ಹೋಗಿದ್ದಾಗ ಯುವತಿ ಮದುವೆ ನಿರಾಕರಿಸಿದ್ದಳು. ಆತನ ಗುಣ ಸರಿ ಇಲ್ಲ, ಹೀಗಾಗಿ ನಾನು ಮದ್ವೆಯಾಗಲ್ಲ ಎಂದು ಹೇಳಿದ್ದಳು. ಹುಡುಗಿ ಮದುವೆ ನಿರಾಕರಣೆ ಮಾಡಿದ್ದಾಳೆ ಎಂದು ರಾಹುಲ್ ಮನೆಯವರು ವಾಪಸ್ ಹೋಗಿದ್ದರು.

ಪ್ರೀತಿಸಿದ ಹುಡುಗಿಯೇ ಸಿಗಬೇಕು ಹಠ ಹಿಡಿದು ರಾಹುಲ್​ ಮತ್ತೆ ಹುಡುಗಿ ಮನೆಗೆ ಹೋಗಿದ್ದ. ಅಲ್ಲದೆ, ಮದುವೆಯಾಗದೇ ಹೋದರೆ ತಾವಿಬ್ಬರು ಜತೆಗಿದ್ದ ಫೋಟೋಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಸಿದ್ದ. ಫೋಟೋ ಬೆದರಿಕೆಗೆ ತಣ್ಣಾಗಾದ ಯುವತಿಯ ಕುಟುಂಬಸ್ಥರು ಆಕೆ ಒಪ್ಪಿದರೆ ಲಗ್ನ ಮಾಡಿ ಕೊಡುವುದಾಗಿ ರಾಜಿ ಮಾಡಿ ಕಳುಹಿಸಿದ್ದರು. ಆ ಬಳಿಕವೂ ವಿವಾದ ಮುಂದುವರಿದಿತ್ತು. ಅಲ್ಲದೆ, ಹಲವು ಬಾರಿ ರಾಜಿ ಪಂಚಾಯತಿ ಕೂಡಾ ಮಾಡಲಾಗಿತ್ತು.

ಇದನ್ನೂ ಓದಿ: Mandya News : ಬೆಳ್ಳೂರಿನಲ್ಲಿ ಮುಸ್ಲಿಮ್ ಯುವಕರ ಗುಂಪಿನಿಂದ ಅಭಿಲಾಷ್​ ಎಂಬುವರ ಮೇಲೆ ಮಾರಕ ಹಲ್ಲೆ

ಸೋಮವಾರ ಮತ್ತೆ ರಾಹುಲ್ ಬಿರಾದಾರ ಐಶ್ವರ್ಯಾ ಮನೆಗೆ ಮತ್ತೆ ಹೋಗಿದ್ದ. ಈ ವೇಳೆ ಮತ್ತೆ ಮಾತುಕತೆ ನಡೆದಿದೆ. ಐಶ್ವರ್ಯಾ ಪೋಷಕರ ಪ್ರಕಾರ ಆತ ಮಾತುಕತೆಗೆ ಬರುವಾಗ ಪೆಟ್ರೋಲ್ ತಂದಿದ್ದ. ಅದನ್ನು ನಮ್ಮ ಮೇಲೆ ಹಾಕಿ ಸುಡಲು ಯತ್ನಿಸಿದ್ದ. ಆದರೆ, ಯುವಕನ ಪೋಷಕರು ಹೇಳುವ ಪ್ರಕಾರ ಐಶ್ವರ್ಯಾ ಅವರ ಪೋಷಕರು ರಾಹುಲ್ ಕೈಯಲ್ಲಿದ್ದ ಮೊಬೈಲ್ ಕಸಿಯಲು ಯತ್ನಿಸಿದ್ದಾರೆ. ಕೊಡದೇ ಹೋದಾಗ ರಾಡ್​ನಿಂದ ತಲೆಗೆ ಹಲ್ಲೆ ಮಾಡಿದ್ದಾರೆ. ಬಳಿಕ ಮೊದಲೇ ತಂದಿಟ್ಟಿದ್ದ ಪೆಟ್ರೋಲ್​ನಿಂದ ಸುಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಬಸವನ ಬಾಗೇವಾಡಿ ಡಿಎಸ್ಪಿ ಬಾಳಪ್ಪ ನಂದಗಾಂವ, ಸಿಪಿಐ ಮಲ್ಲಿಕಾರ್ಜುನ ತುಳಸೀಗೇರಿ, ಪಿಎಸೈಗಳಾದ ಸಂಜಯ್ ತಿಪ್ಪರಡ್ಡಿ, ಎಸ್.ಆರ್.ನಾಯಕ ಅವರು ಭೇಟಿ ನೀಡಿ ತನಿಖೆ ಕೈಕೊಂಡಿದ್ದಾರೆ. ವಿಜಯಪುರದಿಂದ ಆಗಮಿಸಿದ್ದ ವಿಶೇಷ ತಂಡ ಘಟನಾ ಸ್ಥಳದಲ್ಲಿನ ಬೆರಳಚ್ಚು ಸೇರಿ ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಿದೆ.

ಘಟನೆಯಲ್ಲಿ ಯಾರು ಯಾರಿಗೆ ಪೆಟ್ರೋಲ್ ಎರಚಿ ಹತ್ಯೆಗೆ ಯತ್ನಿಸಿದರು ಅನ್ನೋದು ತನಿಖೆಯಿಂದ ಹೊರಬರಬೇಕಿದೆ. ತಮ್ಮ ಪ್ರೀತಿಗೆ ಮೋಸವಾಗಿದ್ದು ರಾಹುಲ್ ಸಿಟ್ಟಿಗೆ ಕಾರಣವಾಗಿತ್ತು. ಇನ್ನೊಂದು ಕಡೆಗೆ ರಾಹುಲ್​ ಕಿರುಕುಳದಿಂದ ಯುವತಿ ಮನೆಯವರು ಬೇಸತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

Prajwal Revanna Case : ವಿಡಿಯೋ ಹಂಚಿದ ಆರೋಪಿ ಚೇತನ್​ಗೆ ಎಸ್ಐಟಿ ನೋಟಿಸ್

Prajwal Revanna Case: ಮಂಗಳವಾರ (ಮೇ 27ರಂದು) ನಾಳೆ ಯಾವುದೇ ಪರಿಸ್ಥಿತಿಯಲ್ಲಿ ಸಿಐಡಿ ಕಚೇರಿಗೆ ಹಾಜರಾಗಿ ವಿಚಾರಣೆಗೆ ಒಳಪಡಬೇಕು ಎಂದು ಎಸ್ಐಟಿ ತಿಳಿಸಿದೆ. ಪೆನ್ ಡ್ರೈವ್ ಪ್ರಕರಣ ಸದ್ದು ಮಾಡಿದಾಗ ಅದರಲ್ಲಿ ಕೇಳಿ ಬಂದ ಹೆಸರಗಳಲ್ಲಿ ಒಂದು ಹೆಸರು ಚೇತನ್​. ಸದ್ಯ ಎಸ್ಐಟಿ ಯಿಂದ ಚೇತನ್ ಗೌಡ ಗೆ ನೋಟಿಸ್ ಜಾರಿ ಮಾಡಲಾಗಿದ್ದು ವಿಚಾರಣೆ ಬಳಿಕ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಪ್ರಜ್ವಲ್ ರೇವಣ್ಣಗೆ ಸೇರಿದ್ದು ಎನ್ನಲಾದ ಲೈಂಗಿಕ ದೌರ್ಜನ್ಯದ ವಿಡಿಯೊ ಹಗರಣದ (Prajwal Revanna Case ) ಸಂಬಂಧ ತನಿಖೆ ನಡೆಸುತ್ತಿರುವ ಎಸ್​ಐಟಿ ಪೊಲೀಸರು ವಿಡಯೋ ಹಂಚಿದ ಸಂಬಂಧವಾಗಿ ಚೇತನ್ ಗೌಡ ಎಂಬಾತನಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಹಾಸನದ ಸೆನ್ ಪೋಲಿಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಿದ್ದಾರೆ.

ಮಂಗಳವಾರ (ಮೇ 27ರಂದು) ನಾಳೆ ಯಾವುದೇ ಪರಿಸ್ಥಿತಿಯಲ್ಲಿ ಸಿಐಡಿ ಕಚೇರಿಗೆ ಹಾಜರಾಗಿ ವಿಚಾರಣೆಗೆ ಒಳಪಡಬೇಕು ಎಂದು ಎಸ್ಐಟಿ ತಿಳಿಸಿದೆ. ಪೆನ್ ಡ್ರೈವ್ ಪ್ರಕರಣ ಸದ್ದು ಮಾಡಿದಾಗ ಅದರಲ್ಲಿ ಕೇಳಿ ಬಂದ ಹೆಸರುಗಳಲ್ಲಿ ಒಂದು ಹೆಸರು ಚೇತನ್​. ಸದ್ಯ ಎಸ್ಐಟಿ ಯಿಂದ ಚೇತನ್ ಗೌಡಗೆ ನೋಟಿಸ್ ಜಾರಿ ಮಾಡಲಾಗಿದ್ದು ವಿಚಾರಣೆ ಬಳಿಕ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ.

ಇಬ್ಬರು ಚೇತನ್ ಈ ಪ್ರಕರಣದಲ್ಲಿ ಇದ್ದಾರೆ. ಒಬ್ಬ ಈಗಾಗಲೇ ಆರೆಸ್ಟ್ ಆಗಿದ್ದಾನೆ. ಆರೆಸ್ಟ್ ಆದವನು ಪ್ರೀತಂ ಗೌಡ ಆಪ್ತ. ಈಗ ನೋಟೀಸ್ ಬಂದಿರುವುದು ಇನ್ನೊಬ್ಬನಿಗೆ.

ನಾಳೆ ಚೇತನ್ ಗೌಡ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದ್ದು, ಬೆಳಗ್ಗೆ 11 ಗಂಟೆ ಮೊದಲು ಬರಲು ಸೂಚನೆ ನೀಡಲಾಗಿದೆ. ಹೀಗಾಗಿ ಚೇತನ್​ 10 ಗಂಟೆ ಸುಮಾರಿಗೆ ಸಿಐಡಿ ಕಚೇರಿಗೆ ಬರಲಿದ್ದಾರೆ. ಪೆನ್ ಡ್ರೈವ್ ಲೀಕ್ ವಿಚಾರವಾಗಿ ಚೇತನ್ ಗೌಡ ನನ್ನು ಎಸ್.ಐ.ಟಿ ವಿಚಾರಿಸುವ ಸಾಧ್ಯತೆ ಇದೆ.

ಪ್ರಜ್ವಲ್‌ ಬಂದ್ರೆ ಎಸ್‌ಐಟಿ ಮುಂದೆ ನಾನೂ ಹಾಜರಾಗುವೆ: ಆರೋಪಿ ನವೀನ್‌ ಗೌಡ

ಪ್ರಜ್ವಲ್‌ ರೇವಣ್ಣ ಅವರು ಬರಲಿ ವಿಚಾರಣೆ ಎದುರಿಸಲಿ. ಸಂತ್ರಸ್ತೆಯರಲ್ಲಿ ಜೆಡಿಎಸ್‌ ಕಾರ್ಯಕರ್ತರೆಯರೇ ಹೆಚ್ಚಾಗಿದ್ದಾರೆ. ಅವರಿಗೆಲ್ಲ ನ್ಯಾಯ ದೊರಕಬೇಕು. ಪ್ರಜ್ವಲ್‌ ಕೇಸ್‌ನಿಂದ (Prajwal Revanna Case) ಎಷ್ಟೋ ಜನ ಹೆಣ್ಣು ಮಕ್ಕಳು ತಲೆ ಎತ್ತಿ ಓಡಾಡಲು ಆಗುತ್ತಿಲ್ಲ. ಎಸ್‌ಐಟಿ ಮುಂದೆ ವಿಚಾರಣೆಗೆ ಅವರೂ ಬರಲಿ, ನಾನೂ ಹಾಜರಾಗುತ್ತೇನೆ ಎಂದು ಅಶ್ಲೀಲ ವಿಡಿಯೊ ವೈರಲ್‌ ಪ್ರಕರಣದ ಆರೋಪಿ, ತಲೆಮರೆಸಿಕೊಂಡಿರುವ ನವೀನ್‌ ಗೌಡ ಹೇಳಿದ್ದಾನೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಪ್ರತ್ಯಕ್ಷವಾದ ಬೆನ್ನಲ್ಲೇ ನಿರೀಕ್ಷಣಾ ಜಾಮೀನಿಗೆ ಭವಾನಿ ರೇವಣ್ಣ ಅರ್ಜಿ

ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಮೇ 31ರಂದು ಬೆಂಗಳೂರಿಗೆ ಆಗಮಿಸುತ್ತೇನೆ ಎಂದು ಹೇಳಿದ ಬೆನ್ನಲ್ಲೇ ನವೀನ್‌ ಗೌಡ ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದಾನೆ.

ಅಶ್ಲೀಲ ವಿಡಿಯೊ ಆರೋಪದಲ್ಲಿ ಏ. 23ರಂದು ನನ್ನ ಮೇಲೆಯೂ ಎಫ್‌ಐಆರ್‌ ದಾಖಲಿಸಿದ್ದಾರೆ. ಹಾಸನದಲ್ಲಿ ಕಳೆದ 10 ವರ್ಷದಲ್ಲಿ ಎಷ್ಟು ಹೆಣ್ಣು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಹಾಗೂ ನಾಪತ್ತೆಯಾಗಿದ್ದಾರೆ ಎಂಬುವುದು ಮರು ತನಿಖೆಯಾಗಬೇಕಿದೆ. ಈ ಆತ್ಮಹತ್ಯೆಗಳಿಗೂ ಕೂಡ ಪ್ರಜ್ವಲ್‌ ರೇವಣ್ಣಗೆ ಸಂಬಂಧವಿದೆ. ಎಸ್‌ಐಟಿಯವರುವ ವಿಚಾರಣೆಗೆ ನನ್ನನ್ನು ಕರೆದಿಲ್ಲ. ಅವರು ಕರೆದರೆ ನಾನು ಹೋಗುತ್ತೇನೆ. ನಾನು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದಕ್ಕೆ ಕೇಸ್‌ ಹಾಕಿದ್ದಾರೆ ಹೇಳಿದ್ದಾನೆ.

ಅಶ್ಲೀಲ ವಿಡಿಯೊ ವಿಷಯ ಬಹಿರಂಗಪಡಿಸದಂತೆ ನನಗೂ ಪ್ರಜ್ವಲ್‌ ರೇವಣ್ಣ ಅವರು ಆಮಿಷ ಒಡ್ಡಿದ್ದರು. ಅವರ ಸಹಚರನನ್ನು ನನ್ನ ಭೇಟಿಯಾಗಲು ಕಳುಹಿಸಿದ್ದರು ಎಂದು ಆರೋಪಿಸಿದ್ದಾನೆ.

ನವೀನ್‌ ಗೌಡ ಯಾರು?

ನವೀನ್‌ ಗೌಡ ಕಾಂಗ್ರೆಸ್‌ ಕಾರ್ಯಕರ್ತರಾಗಿದ್ದು, ಶಾಸಕ ಜಮೀರ್‌ ಅಹಮ್ಮದ್‌ ಆಪ್ತರಲ್ಲೊಬ್ಬನಾಗಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೆ, ಈತ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೀಲ್‌ಗೂ ಆಪ್ತರಾಗಿದ್ದರು. ಚುನಾವಣೆ ವೇಳೆ ಶ್ರೇಯಸ್‌ ಪರವಾಗಿ ಪ್ರಚಾರವನ್ನೂ ಮಾಡಿದ್ದ. ಈತನೇ ಹಾಸನ ಜಿಲ್ಲಾದ್ಯಂತ ಪೆನ್‌ಡ್ರೈವ್‌ ಅನ್ನು ಹಂಚಿಕೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ ನವೀನ್ ಗೌಡ ಮೇಲೆ ಏ.23ರಂದು ಹಾಸನ ಸೆನ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್ ಬಳಿಕ ನವೀನ್ ಗೌಡ ನಾಪತ್ತೆಯಾಗಿದ್ದ. ಆದರೆ, ಭಾನುವಾರ ಫೇಸ್‌ಬುಕ್‌ನಲ್ಲಿ ದಿಢೀರನೆ ಪ್ರತ್ಯಕ್ಷ

Continue Reading
Advertisement
India Head Coach
ಕ್ರೀಡೆ23 mins ago

India Head Coach: ಗಂಭೀರ್‌ ಕೋಚ್​ ಆಗುವುದು ಬಹುತೇಕ ಖಚಿತ; ಕುತೂಹಲ ಮೂಡಿಸಿದ ಜಯ್‌ ಶಾ ಭೇಟಿ

hindalaga jail assault case
ಕ್ರೈಂ42 mins ago

Assault Case: ಹಿಂಡಲಗಾ ಜೈಲಿನಲ್ಲಿ ಕೈದಿಯಿಂದಲೇ ಮಾರಣಾಂತಿಕ ಹಲ್ಲೆ; ಭಯದಲ್ಲಿ ಬದುಕುತ್ತಿರುವ ಸಿಬ್ಬಂದಿ!

Viral Video
ವೈರಲ್ ನ್ಯೂಸ್42 mins ago

Viral Video: ನಡು ರಸ್ತೆಯಲ್ಲಿ ಪಿಸ್ತೂಲ್‌ ತೋರಿಸಿ ವ್ಯಕ್ತಿ ಮೇಲೆ ಹಲ್ಲೆ; ಅಂತಾರಾಷ್ಟ್ರೀಯ ಮಟ್ಟದ ಶೂಟರ್‌ನಿಂದ ದಾಂಧಲೆ

swagat babu no more
ಸಿನಿಮಾ1 hour ago

Swagat Babu: ಕನ್ನಡ ಚಲನಚಿತ್ರ ನಿರ್ಮಾಪಕ ಸ್ವಾಗತ್ ಬಾಬು ಇನ್ನಿಲ್ಲ

Porsche car accident ವಿಸ್ತಾರ ಸಂಪಾದಕೀಯ
ಪ್ರಮುಖ ಸುದ್ದಿ2 hours ago

ವಿಸ್ತಾರ ಸಂಪಾದಕೀಯ: ಕುಡುಕ ಬಾಲಕನಿಂದ ಅಪಘಾತ ಪ್ರಕರಣ; ಪುಣೆ ಪೊಲೀಸರ ದಿಟ್ಟ ಕ್ರಮ ಶ್ಲಾಘನೀಯ

Cooking In An Iron Pot
ಆರೋಗ್ಯ2 hours ago

Cooking In An Iron Pot: ಕಬ್ಬಿಣದ ಪಾತ್ರೆಯಲ್ಲಿ ಅಡುಗೆ ಮಾಡುವುದು ಒಳ್ಳೆಯದು! ಯಾಕೆ ಗೊತ್ತೇ?

karnataka weather Forecast
ಮಳೆ2 hours ago

Karnataka Weather : ಕರಾವಳಿ, ಮಲೆನಾಡಲ್ಲಿ ಗುಡುಗು, ಮಿಂಚು; ಒಳನಾಡಿನಲ್ಲಿ ಸಾಧಾರಣ ಮಳೆ

Which Type Of Roti Is Best
ಆಹಾರ/ಅಡುಗೆ3 hours ago

Which Type Of Roti Is Best: ಯಾರಿಗೆ ಯಾವ ರೊಟ್ಟಿ ಸೂಕ್ತ? ತಿನ್ನುವ ಮೊದಲು ತಿಳಿದುಕೊಂಡಿರಿ!

Dina Bhavishya
ಭವಿಷ್ಯ4 hours ago

Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಹೊರ ಬರುತ್ತೀರಿ

Vijayapura news
ಪ್ರಮುಖ ಸುದ್ದಿ9 hours ago

Vijayapura News : ಪ್ರೀತಿಸಿದವಳನ್ನೇ ಮದುವೆಯಾಗಲು ಯುವಕನ ಹಠ; ಪರಸ್ಪರ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿಕೊಂಡು ಆಸ್ಪತ್ರೆ ಸೇರಿದರು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ15 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು7 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು7 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌