Kantara controversy | ಭೂತ ಕೋಲ ಯಾವುದೇ ಸಮುದಾಯಕ್ಕೆ ಸೀಮಿತವಾದುದಲ್ಲ, ನಟ ಚೇತನ್‌ಗೆ ತಿಳಿವಳಿಕೆ ಇಲ್ಲ! - Vistara News

ಕರ್ನಾಟಕ

Kantara controversy | ಭೂತ ಕೋಲ ಯಾವುದೇ ಸಮುದಾಯಕ್ಕೆ ಸೀಮಿತವಾದುದಲ್ಲ, ನಟ ಚೇತನ್‌ಗೆ ತಿಳಿವಳಿಕೆ ಇಲ್ಲ!

ಭೂತಾರಾಧನೆ ಹಿಂದು ಸಂಸ್ಕೃತಿಯಲ್ಲ ಎಂಬ ನಟ ಚೇತನ್‌ ವಾದಕ್ಕೆ ಸಾಂಸ್ಕೃತಿಕ ತಜ್ಞರೂ, ಕಲಾವಿದರೂ ಆಗಿರುವ ಕದ್ರಿ ನವನೀತ್‌ ಶೆಟ್ಟಿ ʼವಿಸ್ತಾರʼ ವೇದಿಕೆಯಲ್ಲಿ
ವಿಸ್ತೃತವಾಗಿ ಪ್ರತಿಕ್ರಿಯಿಸಿದ್ದಾರೆ. ಸಮಾಜ ಅದೆಷ್ಟೋ ಮುಂದೆ ಸಾಗಿದೆ. ಆದರೆ ಚೇತನ್‌ ಹಳೆಯದನ್ನೇ ಕನವರಿಸುತ್ತಿದ್ದಾರೆ ಎಂದು ನವನೀತ್‌ ವ್ಯಾಖ್ಯಾನಿಸಿದ್ದಾರೆ.

VISTARANEWS.COM


on

kantara
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
ಕದ್ರಿ ನವನೀತ ಶೆಟ್ಟಿ

ಕದ್ರಿ ನವನೀತ ಶೆಟ್ಟಿ, ಸಾಂಸ್ಕೃತಿಕ ತಜ್ಞರು, ಕಲಾವಿದರು, ಮಂಗಳೂರು
ಭೂತಾರಾಧನೆ ಎನ್ನುವ ವಿಶಾಲ ಪರಿಕಲ್ಪನೆಯನ್ನು ಕೇವಲ ಒಂದು ವರ್ಗಕ್ಕೆ ಸೀಮಿತಗೊಳಿಸುವುದು ಸರಿಯಲ್ಲ. ಇದು ಹಿಂದು ಸಂಸ್ಕೃತಿ ಅಲ್ಲ ಎನ್ನುವುದು ಈ ಭಾಗದ ಆಚರಣೆ, ನಂಬಿಕೆ ಮತ್ತು ನಡೆಯುತ್ತಿರುವ ವಾಸ್ತವಿಕ ಘಟನಾವಳಿಗಳ ಅರಿವಿಲ್ಲದದವರು ಮಾತ್ರ ಮಾಡಬಹುದಾದ ಕೆಲವರಿಗೆ ಸೀಮಿತವಾದ ವಾದ. ಈಗ ಅದು ಹಿಂದೂ ಧರ್ಮವನ್ನು ಮಾತ್ರವಲ್ಲ, ಅನ್ಯ ಧರ್ಮಗಳನ್ನು ಕೂಡಾ ತನ್ನ ಭಕ್ತಿಯ ತೆಕ್ಕೆಗೆ ಸೆಳೆದುಕೊಳ್ಳುವಷ್ಟು ಸಶಕ್ತವಾದ ದೈವಿಕ ಆರಾಧನೆಯಾಗಿ ಬೆಳೆದಿದೆ.

VISTARA-EXCLUSIVE

ಭೂತಾರಾಧನೆಯಲ್ಲಿ ಭೂತ ಕಟ್ಟುವವರು, ಅದಕ್ಕೆ ಸಂಬಂಧಿಸಿದ ಪಾಡ್ದನಗಳನ್ನು ಹೇಳುವವರು ಪಂಬದ, ನಲಿಕೆ ಮತ್ತು ಪರವ ಜನಾಂಗದವರು ಎನ್ನುವುದು ಸತ್ಯ. ಹಾಗಂತ, ಭೂತಾರಾಧನೆಯಲ್ಲಿ ಅದೊಂದೇ ಇರುವುದಲ್ಲ. ಭೂತಾರಾಧನೆ ಎನ್ನುವುದು ಸಮಾಜದ ಎಲ್ಲ ಜನ ವರ್ಗಗಳು ಸೇರಿ ಜತೆಯಾಗಿ ರೂಪಿಸಿರುವ ಒಂದು ಆರಾಧನಾ ಕಲೆ. ಇಲ್ಲಿ ಭೂತ ಕಟ್ಟುವ ಪಂಬದ, ನಲಿಕೆ, ಪರವ ಜನಾಂಗದವರೂ ಇದ್ದಾರೆ, ಪರಿಚಾರಕರಾಗಿ ಕೆಲಸ ಮಾಡುವ ವರ್ಗವೂ ಇದೆ, ಭೂತ ನರ್ತನಕ್ಕೆ ಬೆಂಬಲವಾಗುವ ಶೇರೆಗಾರರು ಇದ್ದಾರೆ. ಮುಕ್ತಾಲ್ದಿ, ಮೊಕ್ತೇಸರರು ಸಮಾಜದ ಯಾವುದೇ ಜಾತಿಯವರೂ ಇರುತ್ತಾರೆ. ದೈವವೇ ಹೆಬ್ಬಾರ್ರೆ, ಪೂಜಾರ್ರೆ ಎಂದು ಬ್ರಾಹ್ಮಣರನ್ನು ಕರೆಯುವ ರೂಢಿ ಇದೆ. ಜೈನರು, ಬಂಟರು, ಬಿಲ್ಲವರು, ಕುಲಾಲರು, ಮಡಿವಾಳರು, ದೇವಾಡಿಗರು, ಪರಿಶಿಷ್ಟ ಜಾತಿ, ಪಂಗಡಗಳ ಎಲ್ಲರೂ ಭೂತಾರಾಧನೆಯಲ್ಲಿ ಒಂದಾಗಿ ನಿಲ್ಲುತ್ತಾರೆ. ಆ ಮಟ್ಟಿಗೆ ಇದು ಖಂಡಿತವಾಗಿಯೂ ಸರ್ವ ಜನಾಂಗಗಳು ತಮ್ಮದೇ ಆದ ಜವಾಬ್ದಾರಿಗಳೊಂದಿಗೆ ಪಾಲ್ಗೊಳ್ಳುವ ಪ್ರಕ್ರಿಯೆ ಇಲ್ಲಿದೆ. ಹಾಗಿದ್ದರೆ ಇವರು ಹಿಂದುಗಳಲ್ಲವೇ?

ಭೂತಾರಾಧನೆ ಎಂದರೆ ಕೇವಲ ಒಂದೆರಡು ದೈವ, ಭೂತಗಳ ಆರಾಧನೆಯಲ್ಲ. ಕೇವಲ ಕಾಂತಾರ ಸಿನಿಮಾದಲ್ಲಿ ತೋರಿಸಿರುವ ಪಂಜುರ್ಲಿ, ಗುಳಿಗಗಳಂತೆ ಸಾವಿರಾರು ದೈವಗಳು ಕರಾವಳಿಯಲ್ಲಿವೆ. ಇದರಲ್ಲಿ ಊರಿನ ದೈವವಿದೆ, ಗ್ರಾಮ ದೈವವಿದೆ, ಪರಿವಾರದ ದೈವವಿದೆ, ಕುಟುಂಬದ ದೈವವಿದೆ, ಮಾತ್ರವಲ್ಲ ಮನೆಗೇ ಸೀಮಿತವಾದ ದೈವವೂ ಇದೆ. ಕೊಡಮಣಿತ್ತಾಯ ಮೊದಲಾದ ರಾಜನ್‌ ದೈವಗಳಿವೆ. ಕೆಲವು ದೈವಗಳು ಇಡೀ ಕರಾವಳಿ, ಮಲೆನಾಡನ್ನು ವ್ಯಾಪಿಸಿದ್ದರೆ ಇನ್ನು ಕೆಲವು ಕೇವಲ ಗ್ರಾಮಕ್ಕೆ ಸೀಮಿತವಾದ ದೈವಗಳೂ ಇವೆ. ಕೆಲವು ಒಂದು ಮನೆಗೆ ಮಾತ್ರ ದೈವವಾಗಿವೆ.

ಕರಾವಳಿಯ ಬಿಲ್ಲವ ಜನಾಂಗದ ಅವಳಿ ವೀರರಾದ ಕೋಟಿ ಚೆನ್ನಯರು ದೈವಗಳಾಗಿ ಆರಾಧನೆಗೆ ಒಳಗಾಗುತ್ತಿದ್ದಾರೆ. ಆದರೆ ಅವರನ್ನು ಗರಡಿ ಕಟ್ಟಿ ಆರಾಧನೆ ಮಾಡುತ್ತಿರುವುದು ಕೇವಲ ಬಿಲ್ಲವರಲ್ಲ. ಜೈನರು, ಬಂಟರು ಮತ್ತು ಇತರ ಜನಾಂಗದವರೂ ಆರಾಧಿಸುತ್ತಿದ್ದಾರೆ. ಹೀಗಿರುವಾಗ ಅದು ಒಂದು ಜಾತಿಗೆ ಹೇಗೆ ಸೀಮಿತವಾಗುತ್ತದೆ?

ಕೊರಗಜ್ಜನೆಂಬ ದೈವ ದಲಿತ ವರ್ಗಕ್ಕೆ ಸೇರಿದ ಒಬ್ಬ ವ್ಯಕ್ತಿ ದೈವವಾಗಿದ್ದಾರೆ ಎನ್ನುವುದು ಎಲ್ಲರ ನಂಬಿಕೆ. ಆದರೆ, ಕೊರಗಜ್ಜನನ್ನು ಇಡೀ ಸಮಾಜ ಭಕ್ತಿಯಿಂದ ಆಧರಿಸುತ್ತದೆ. ಅದರಲ್ಲೂ ಈಗಿನ ಯುವಜನರಿಗಂತೂ ಕೊರಗಜ್ಜನ ಮೇಲೆ ಅಪಾರವಾದ ನಂಬಿಕೆ. ಕೊರಗಜ್ಜ ಎಲ್ಲ ಜಾತಿ, ಧರ್ಮಗಳಿಗೂ ಪ್ರಿಯವಾದ ದೈವ. ಇದು ಇಲ್ಲಿನ ಧಾರ್ಮಿಕ ಸ್ವೀಕರಣ ಶಕ್ತಿಯ ಪ್ರತೀಕ.

ಭೂತ ಅಥವಾ ದೈವ ಎನ್ನುವುದು ಜಗತ್ತಿಗೆ ಒಳಿತು ಮಾಡುವ ಮಾಯಾಶಕ್ತಿ ಎನ್ನುವುದು ನಂಬಿಕೆ. ಇವುಗಳಲ್ಲಿ ಹೆಚ್ಚಿನವು ಹಿಂದೆ ಜೀವಂತವಾಗಿದ್ದು, ಮರಣದ ಬಳಿಕ ಮಾಯಾಶಕ್ತಿಯಾಗಿ ಪೊರೆಯುತ್ತಿರುವ ದೈವಗಳು. ಕೆಲವು ದೇವರ ಶಕ್ತಿಗಳು. ಗುಳಿಗ ಎಂದರೆ ಶಿವನ ಶಕ್ತಿ, ಚಾಮುಂಡಿ ದೇವಿ ಶಕ್ತಿ, ಪಂಜುರ್ಲಿ ವಿಷ್ಣು ಶಕ್ತಿ ಹೀಗೆ. ಇಲ್ಲಿ ಪ್ರಾಣಿಗಳೂ ದೈವಗಳಾಗುತ್ತವೆ. ಕರಾವಳಿ ಭಾಗದಲ್ಲಿ ಈಗಾಗಲೇ ದಾಖಲಾದಂತೆ ಸಾವಿರಕ್ಕೂ ಅಧಿಕ ದೈವಗಳಿವೆ. ಪ್ರತಿಯೊಂದಕ್ಕೂ ಒಂದೊಂದು ಐತಿಹ್ಯವಿದೆ. ಮತ್ತು ಇವೆಲ್ಲವೂ ಯಾವುದೋ ಕಾಲದಲ್ಲಿ ಹುಟ್ಟಿದವು ಎಂದೇನಲ್ಲ. ಈ ಭೂತಗಳ ಸೃಷ್ಟಿ ಎಷ್ಟು ಉದಾರವಾಗಿದೆ ಎಂದರೆ, ಒಳ್ಳೆಯ ಕೆಲಸ ಮಾಡಿ ಅಗಲಿ ಹೋದ ಒಬ್ಬ ವ್ಯಕ್ತಿ ಕೂಡಾ ನಮ್ಮನ್ನು ಈಗಲೂ ಕಾಯುತ್ತಿದ್ದಾನೆ ಎನ್ನುವ ನಂಬಿಕೆಯಲ್ಲಿ ದೈವದ ಸ್ಥಾನ ನೀಡಿ ಗೌರವಿಸಲು, ಪೂಜಿಸಲು, ಆರಾಧಿಸಲು ಅವಕಾಶವಿದೆ. ಇಲ್ಲಿ ಪೊಲೀಸ್‌ ಭೂತವೂ ಇದೆ, ಆಲಿ ಭೂತವೂ ಇದೆ. ಆಲಿ ಭೂತವೆಂದರೆ ಹಿಂದೆ ಅಗಲಿ ಹೋದ ಒಬ್ಬ ಒಳ್ಳೆಯ ಮುಸಲ್ಮಾನ ವ್ಯಕ್ತಿ ಈಗಲೂ ನಮ್ಮನ್ನು ಕಾಯುತ್ತಾನೆ ಎಂಬ ನಂಬಿಕೆಯಲ್ಲಿ ಜನರೇ ಕಲ್ಪಿಸಿಕೊಂಡ ಭೂತ. ಕೆಲವು ಮನೆಗಳಲ್ಲಿ ಹಿರಿಯಾಯೆ ಎನ್ನುವ ಭೂತಗಳಿವೆ. ಅದು ಕೇವಲ ಆ ಮನೆಗೆ ಸೀಮಿತವಾದ ಒಂದು ದೈವವಾಗುತ್ತದೆ. ಆ ಮನೆಯಲ್ಲಿ ತೀರಿಕೊಂಡ ಹಿರಿಯರೊಬ್ಬರು ದೈವವಾಗಿ ಕಾಯುತ್ತಾರೆ ಎನ್ನುವ ನಂಬಿಕೆಯಲ್ಲಿ ಅವರಿಗೆ ಆರಾಧನಾ ಕಲಾ ರೂಪದಲ್ಲಿ ಸೇವೆ ಸಲ್ಲಿಸುವ ವಾಡಿಕೆಯೂ ಇದೆ.

ಇವತ್ತಿಗೂ ಒಂದು ಭೂತವನ್ನು ಸೃಷ್ಟಿ ಆರಾಧನೆ ಮಾಡುವಷ್ಟು ಲಿಬರಲ್‌ ಆಗಿದೆ ಭೂತಾರಾಧನೆ. ಹೇಗೆ ದೇವರನ್ನು ಬಹುನಾಮಗಳಿಂದ ಪೂಜಿಸುತ್ತೇವೋ, ಬಹು ದೇವರನ್ನು ಪೂಜಿಸುತ್ತೇವೋ ಹಾಗೆಯೇ ಒಬ್ಬ ವ್ಯಕ್ತಿ ಹಲವು ದೈವಗಳನ್ನು ಆರಾಧಿಸುತ್ತಾನೆ. ತನ್ನ ನಂಬಿಕೆಯ ದೈವಗಳನ್ನು ನಂಬಲು ಅವಕಾಶವಿದೆ. ಇದು ಹಿಂದೂ ಧರ್ಮದ ವೈವಿಧ್ಯತೆಯ ಶಕ್ತಿಯೂ ಹೌದು.
ಬಹುಶಃ ಭೂತಾರಾಧನೆ ಎನ್ನುವುದು ಒಂದು ವರ್ಗಕ್ಕೆ ಸೀಮಿತಗೊಳ್ಳದೆ ಎಲ್ಲರನ್ನೂ ಒಳಗೊಂಡ ಕಾರಣಕ್ಕಾಗಿಯೇ ಇಷ್ಟೊಂದು ಸಮೃದ್ಧವಾಗಿ ಬೆಳೆದಿದೆ. ಎಲ್ಲರನ್ನೂ ಒಳಗೊಂಡಿರುವುದರಿಂದಲೇ ದೈವಕ್ಕೂ ಶಕ್ತಿ ಬಂದಿದೆ. ಇದನ್ನು ಸ್ವತಃ ದೈವವೇ ತನ್ನ ಮಾತುಗಳಲ್ಲಿ ಹೇಳುವ ರೂಢಿ ಇದೆ.

ಕಂಬಳದ ಕುರಿತಾದ ತಪ್ಪು ನಂಬಿಕೆಗಳು
ಇನ್ನು ಚೇತನ್‌ ಅವರು ತಮ್ಮ ಮಾತುಗಳಲ್ಲಿ ಕಂಬಳದ ಕುರಿತಾಗಿಯೂ ತಪ್ಪು ಮಾಹಿತಿ ನೀಡಿದ್ದಾರೆ. ಕಂಬಳ ಎನ್ನುವುದು ಉಳ್ಳವರು ಅದರಲ್ಲೂ ಬಂಟರ ಕೈಯಲ್ಲಿರುವ ಆಡುಂಬೊಲ ಎನ್ನುವ ಹಾಗೆ. ಇಲ್ಲಿ ಬಂಟರು ಕೋಣ ಕಟ್ಟುತ್ತಾರೆ, ಬಿಲ್ಲವರು ಓಡಿಸುತ್ತಾರೆ, ದಲಿತರನ್ನು ಕಂಬಳ ಪೂರ್ವದಲ್ಲಿ ಓಡಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಆದರೆ, ಇದು ಕಂಬಳದ ಬಗ್ಗೆ ವಾಸ್ತವಿಕ ಜ್ಞಾನವಿಲ್ಲದೆ ಮಾಡುವ ಆರೋಪಗಳು. ಕಂಬಳದ ಹುಟ್ಟು ಒಂದು ಧಾರ್ಮಿಕ ಆಚರಣೆಯಾಗಿ ಆರಂಭವಾಗಿದ್ದು, ಅದು ದೇವರ ಆರಾಧನೆಯೂ ಆಗಿದೆ. ಆದರೆ, ಕಾಲಾಂತರದಲ್ಲಿ ಅದು ಆಧುನಿಕತೆಯೊಂದಿಗೆ ಮೇಳೈಸುತ್ತಾ ಒಂದು ಕ್ರೀಡಾಕೂಟವಾಗಿ ಬೆಳೆದಿದೆ. ಇಲ್ಲಿ ಎಲ್ಲ ಜಾತಿ, ಧರ್ಮಗಳೂ ಇವೆ. ಕೋಣ ಕಟ್ಟುವುದು ಕೇವಲ ಬಂಟರಲ್ಲ, ಜೈನರಲ್ಲ. ಬ್ರಾಹ್ಮಣರು, ಬಿಲ್ಲವರು, ದಲಿತರು ಅಷ್ಟೇ ಏಕೆ ಮುಸ್ಲಿಂ, ಕ್ರೈಸ್ತರೂ ಕೋಣಗಳ ಯಜಮಾನರಾಗಿದ್ದಾರೆ, ಪ್ರಶಸ್ತಿ ಗೆಲ್ಲುವುದರಲ್ಲೂ ಮುಂದಿದ್ದಾರೆ. ಕೋಣ ಓಡಿಸುವವರಲ್ಲಿ ಜೈನರೂ ಇದ್ದಾರೆ, ಬಂಟರೂ, ಬ್ರಾಹ್ಮಣರೂ ಎಲ್ಲರೂ ಇದ್ದಾರೆ. ಆರನೇ ಕ್ಲಾಸಿನಲ್ಲಿ ಕಲಿಯುತ್ತಿರುವ ಪುಟ್ಟ ಬ್ರಾಹ್ಮಣ ಹುಡುಗಿ ಚೈತ್ರಾ ಪರಮೇಶ್ವರ ಭಟ್ ತಾನು ಕಂಬಳದ ಜಾಕಿ ಆಗುತ್ತೇನೆ ಎಂದು ತರಬೇತಿ ಪಡೆಯುತ್ತಿದ್ದಾಳೆ.

ಚೇತನ್‌ ಅವರಿಗೆ ಮಾಹಿತಿಯ ಕೊರತೆ ಇದೆ. ಇತಿಹಾಸದ ಯಾವುದೋ ಎಳೆಯನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಈಗಲೂ ಅದೇ ರೀತಿ ನಡೆಯುತ್ತಿದೆ ಎನ್ನುವಂತೆ ಮಾತನಾಡುತ್ತಿದ್ದಾರೆ. ಸಮಾಜ ಅಲ್ಲಿಂದ ಅದೆಷ್ಟೋ ಮುಂದೆ ಸಾಗಿಬಂದಿದೆ. ಅವರು ಮಾತ್ರ ಅದೇ ಹಳೆಯದನ್ನೇ ಕನವರಿಸುತ್ತಿದ್ದಾರೆ. ನಿಜವೆಂದರೆ, ಇವರು ಪೂರ್ವಗ್ರಹಪೀಡಿತ ಮನಸುಗಳ ಪ್ರತಿನಿಧಿ. ಇವರಿಗೆಲ್ಲ ಮೇಲ್ಜಾತಿ, ಕೀಳ್ಜಾತಿ ಎನ್ನುವುದು ತಮ್ಮ ಅಸ್ಮಿತೆಯನ್ನು ಪ್ರಕಟಿಸಲು ಇರುವ ಅಸ್ತ್ರ.

ನಿಜವೆಂದರೆ, ಕಾಂತಾರ ಸಿನಿಮಾ ಭೂತಾರಾಧನೆ, ದೈವಾರಾಧನೆ ಮತ್ತು ದೇವತಾರಾಧನೆಗಳ ಕಡೆಗೆ ಜನರನ್ನು ಮತ್ತೆ ಜಾಗೃತಗೊಳಿಸಿದೆ. ಇದು ಹಿಂದುಗಳ ಧಾರ್ಮಿಕ ನಂಬಿಕೆಯನ್ನು ಇನ್ನಷ್ಟು ಗಟ್ಟಿಗೊಳಿಸುವ ಕೆಲಸ ಮಾಡಿದೆ. ಇದುವರೆಗೆ ಭೂತ, ದೈವದ ಬಗ್ಗೆ ಅಷ್ಟೊಂದು ಆಸಕ್ತಿ ಪ್ರಕಟಿಸದೆ ಇದ್ದವರು ಕೂಡಾ ಈಗ ಇನ್ನು ಮತ್ತೆ ತಮ್ಮ ಮೂಲ ನೆಲೆಗಳನ್ನು ಹುಡುಕಲು ಶುರುಮಾಡಿದ್ದಾರೆ. ಹಿಂದುಗಳಲ್ಲಿ ಆಸ್ತಿಕ ಭಾವ, ಧಾರ್ಮಿಕ ಭಾವ ಹೆಚ್ಚಿರುವುದು ಕೂಡಾ ಕೆಲವರ ಕೆಂಗಣ್ಣಿಗೆ ಕಾರಣವಾಗಿರಬಹುದು. ಹಿಂದುಗಳ ಒಗ್ಗಟ್ಟನ್ನು ಮುರಿಯಲು ಪ್ರಯತ್ನಿಸುತ್ತಿರುವ ಇಂಥ ಶಕ್ತಿಗಳಿಗೆ ಕಾಂತಾರ ಸೃಷ್ಟಿಸಿದೆ ಧಾರ್ಮಿಕ ಗಟ್ಟಿಗೊಳ್ಳುವಿಕೆ, ಧಾರ್ಮಿಕ ಜಾಗೃತಿ ಕೆಂಡದಂತೆ ಸುಡುತ್ತಿರುವಂತಿದೆ. ಹೀಗಾಗಿ ಸಹಬಾಳ್ವೆಯನ್ನು ಮುರಿಯಲು ಇಂಥ ಸಂಶಯದ ಬೀಜಗಳನ್ನು ಬಿತ್ತುತ್ತಿದ್ದಾರೆ.

ಒಂದು ಮಾತು ಸ್ಪಷ್ಟವಾಗಿ ಹೇಳಬೇಕು.. ನಾವು ದೇವರನ್ನು ಅವನ ಹುಟ್ಟಿನ ಜಾತಿ ನೋಡಿ ಪೂಜಿಸುವುದಿಲ್ಲ. ಕೃಷ್ಣ ಗೊಲ್ಲನಾದರೂ ಗೊಲ್ಲರಿಗೆ ಸೀಮಿತನಲ್ಲ, ರಾಮ ಕ್ಷತ್ರಿಯನಾದರೂ ಸರ್ವರಿಗೂ ಪೂಜ್ಯ. ಇದೇ ಮಾತು ನಮ್ಮ ದೈವಗಳಿಗೂ ಅನ್ವಯವಾಗುತ್ತದೆ. ದೈವದ ಮೂಲವನ್ನಷ್ಟೇ ನೋಡದೆ ಅದರ ಒಳಿತನ್ನೂ ಗಮನಿಸಿ ಸರ್ವರೂ ಆರಾಧಿಸುವುದು ನಮ್ಮ ಇಲ್ಲಿನ ನೆಲದ ನಂಬಿಕೆ. ಇಂಥ ಸಹಬಾಳ್ವೆಯನ್ನು ಕದಡುವ ಪ್ರಯತ್ನ ಯಾವತ್ತೂ ಫಲಿಸುವುದಿಲ್ಲ.

ಇದನ್ನೂ ಓದಿ | ಭೂತಕೋಲ ಹಿಂದೂ ಸಂಸ್ಕೃತಿಯಲ್ಲ ಎಂದ ನಟ ಚೇತನ್ | ಕಾಂತಾರ ಅಭಿಮಾನಿಗಳ ಕಿಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

R Ashok: ರಾಜ್ಯದಲ್ಲಿ ಮಳೆಗಿಂತ ಹೆಚ್ಚಾಗಿ ಕೊಲೆಗಳೇ ನಡೆಯುತ್ತಿವೆ: ಆರ್‌.ಅಶೋಕ್‌ ಕಿಡಿ

R Ashok: ಪ್ರಜ್ವಲ್‌ ರೇವಣ್ಣ ಪ್ರಕರಣ ಮುಚ್ಚಿಹಾಕಲು ಎಸ್‌ಐಟಿ ಸಿದ್ಧತೆ ನಡೆಸುತ್ತಿದ್ದು, ಸರ್ಕಾರವೇ ಅಪರಾಧಿ ಸ್ಥಾನದಲ್ಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ.

VISTARANEWS.COM


on

R Ashok
ಬೆಂಗಳೂರಿನ ಪದ್ಮನಾಭನಗರ ನಿವಾಸದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ವಿಪಕ್ಷ ನಾಯಕ ಆರ್‌.ಅಶೋಕ್‌ ಭೇಟಿಯಾಗಿ ಜನ್ಮದಿನದ ಶುಭಾಶಯ ತಿಳಿಸಿದರು.
Koo

ಬೆಂಗಳೂರು: ರಾಜ್ಯದಲ್ಲಿ ಕೊಲೆ, ಕಳ್ಳತನ, ದರೋಡೆ ಹೆಚ್ಚಾಗಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರೌಡಿ, ಕೊಲೆಗಡುಕರಿಗೆ ಹಬ್ಬ. ಈ ಹಬ್ಬಕ್ಕೆ ಕಾಂಗ್ರೆಸ್ಸೇ ನೇರ ಕಾರಣ. ಇತ್ತೀಚೆಗೆ ಹತ್ಯೆಯಾದ ಅಂಜಲಿ ಕುಟುಂಬದವರು ಕೊಲೆಗಾರರನ್ನು ಗಲ್ಲಿಗೇರಿಸಬೇಕು ಎಂದು ಹೇಳಿದ್ದಾರೆ. ಆದರೆ ರಾಜ್ಯ ಸರ್ಕಾರವೇ ಅಪರಾಧಿ ಸ್ಥಾನದಲ್ಲಿದ್ದು, ಸರ್ಕಾರವನ್ನೇ ಗಲ್ಲಿಗೇರಿಸಬೇಕು. ಮಳೆ ಸುರಿಯುವುದಕ್ಕಿಂತ ಹೆಚ್ಚಾಗಿ ಕೊಲೆಗಳು ನಡೆಯುತ್ತಿವೆ. ಇದರಿಂದ ಗೃಹ ಇಲಾಖೆಯು ಡಾ.ಜಿ.ಪರಮೇಶ್ವರ್‌ ಅವರ ಕೈಯಲ್ಲಿಲ್ಲ. ಇದನ್ನು ಬೇರೆ ಯಾರೋ ಹೈಜಾಕ್‌ ಮಾಡಿ ನಡೆಸುತ್ತಿದ್ದಾರೆ ಎನಿಸುತ್ತದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ (R Ashok) ಆರೋಪಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರಾಜೇಗೌಡ ಸ್ವತಃ ಹೇಳಿಕೆ ನೀಡಿ, ಡಿ.ಕೆ.ಶಿವಕುಮಾರ್‌ ಅವರ ಆಡಿಯೊ ಬಿಡುಗಡೆ ಮಾಡಿದ್ದಾರೆ. ನಿಜ ಇರುವುದಕ್ಕೆ ದಾಖಲೆ ಬಿಡುಗಡೆ ಮಾಡಿದ್ದು, ಅದಕ್ಕಾಗಿ ಅವರ ಬಂಧನವಾಗಿದೆ. ಲೋಕಸಭೆ ಚುನಾವಣೆಯ ಸಮಯದಲ್ಲಿ ಎಚ್ಚರವಾಗಿರಬೇಕೆಂದು ಹೀಗೆ ಮಾಡಿದ್ದಾರೆ. ಮಾಧ್ಯಮಗಳಲ್ಲಿ ಪ್ರಸಾರವಾಗುವುದನ್ನೂ ತಡೆಯುವ ಉದ್ದೇಶ ಡಿ.ಕೆ.ಶಿವಕುಮಾರ್‌ ಅವರಿಗಿದೆ ಎಂದರು.

ಇದನ್ನೂ ಓದಿ | BY Vijayendra: ವಿಧಾನಪರಿಷತ್ ವಿವಿಧ ಕ್ಷೇತ್ರಗಳ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ; ಬಿ.ವೈ.ವಿಜಯೇಂದ್ರ

ಸುರ್ಜೇವಾಲ, ಡಿ.ಕೆ.ಶಿವಕುಮಾರ್‌, ಸಿಎಂ ಸಿದ್ದರಾಮಯ್ಯ ಸೇರಿ ಮಾಸ್ಟರ್‌ ಪ್ಲ್ಯಾನ್‌ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಈಗಾಗಲೇ ದಲಿತ ನಾಯಕರನ್ನು ಮುಗಿಸಿದ್ದಾರೆ. ಇದೇ ರೀತಿ ಒಕ್ಕಲಿಗರನ್ನು ಮುಗಿಸಲು ಯೋಜನೆ ರೂಪಿಸಿದ್ದಾರೆ. ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸಬೇಕಿದೆ. ಆದರೆ ಸಿಬಿಐ ಬಳಿ ಹೋದರೆ ಸರ್ಕಾರದಲ್ಲಿ ಇರುವವರೇ ಕಂಬಿ ಎಣಿಸಬೇಕಾಗುತ್ತದೆ. ಇಡೀ ಗೃಹ ಇಲಾಖೆಯರನ್ನು ಬೇರೆ ಯಾರೋ ಹೈಜಾಕ್‌ ಮಾಡಿ ನಡೆಸುತ್ತಿದ್ದಾರೆ. ಮಾಜಿ ಸಚಿವ ರೇವಣ್ಣ ಅವರನ್ನು ಬಂಧಿಸಿದಂತೆ ಚಾಲಕನನ್ನು ಬಂಧಿಸಿಲ್ಲ. ಪೊಲೀಸರು ಕಾಂಗ್ರೆಸ್‌ ನಾಯಕರು ಹೇಳಿದಂತೆ ಕೇಳುತ್ತಾರೆ ಎಂದರು.

ಪ್ರಜ್ವಲ್‌ ರೇವಣ್ಣ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿ. ಆದರೆ ವೀಡಿಯೋ ಹಂಚಿದವರ ವಿರುದ್ಧ ಕ್ರಮ ವಹಿಸಿಲ್ಲ. ಹೀಗೆ ಕಾಂಗ್ರೆಸ್‌ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ. ಪ್ರಕರಣವನ್ನು ಮುಚ್ಚಿಹಾಕಲು ಎಸ್‌ಐಟಿ ಸಿದ್ಧತೆ ಮಾಡುತ್ತಿದೆ ಎಂದರು.

ಇದನ್ನೂ ಓದಿ | Arvind Kejriwal: “ತಾಕತ್‌ ಇದ್ರೆ ಅರೆಸ್ಟ್‌ ಮಾಡಿ…”; ಪ್ರಧಾನಿ ಮೋದಿಗೆ ಕೇಜ್ರಿವಾಲ್‌ ಓಪನ್‌ ಚಾಲೆಂಜ್‌

ದೇವೇಗೌಡರ ಭೇಟಿ

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಭೇಟಿಯಾಗಿ ಜನ್ಮದಿನದ ಶುಭಾಶಯ ತಿಳಿಸಿದ್ದೇನೆ. ಇದೇ ವೇಳೆ ರಾಜ್ಯ ರಾಜಕೀಯದ ಕುರಿತಾಗಿ ಕೆಲವು ಮಾತನಾಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲವೆಂದು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಅಶೋಕ್‌ ತಿಳಿಸಿದರು.

Continue Reading

ಕರ್ನಾಟಕ

Prajwal Revanna Case: ಪೆನ್‌ಡ್ರೈವ್‌ ಕೇಸ್‌ಗೆ ಟ್ವಿಸ್ಟ್;‌ ದೇವರಾಜೇಗೌಡ, ಡಿಕೆಶಿ ಆಡಿಯೊ ಬಯಲು, ಇಲ್ಲಿದೆ ಸ್ಫೋಟಕ ಮಾಹಿತಿ

Prajwal Revanna Case: ಲಭ್ಯವಾಗಿರುವ ಆಡಿಯೊ ಪ್ರಕಾರ, ಮೊದಲು ದೇವರಾಜೇಗೌಡ ಹಾಗೂ ಎಲ್‌.ಆರ್.ಶಿವರಾಮೇಗೌಡ ದೂರವಾಣಿಯಲ್ಲಿ ಮಾತನಾಡಿದ್ದಾರೆ. “ನಾನು ಫೋನ್‌ಅನ್ನು ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡುತ್ತೇನೆ. ಏನೇನಾಗಿದೆ ಎಲ್ಲದರ ಕುರಿತು ಮಾಹಿತಿ ಕೊಡು” ಎಂಬುದಾಗಿ ಶಿವರಾಮೇಗೌಡ ಅವರು ದೇವರಾಜೇಗೌಡರಿಗೆ ತಿಳಿಸುತ್ತಾರೆ. ಇದಾದ ಬಳಿಕ ದೇವರಾಜೇಗೌಡ ಹಾಗೂ ಡಿ.ಕೆ.ಶಿವಕುಮಾರ್‌ ಅವರು ಪೆನ್‌ಡ್ರೈವ್‌ ಕೇಸ್‌ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೊ ಈಗ ಲಭ್ಯವಾಗಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣಕ್ಕೆ (Prajwal Revanna Case) ಸಂಬಂಧಿಸಿದಂತೆ ಮತ್ತೊಂದು ಆಡಿಯೊ ಬಯಲಾಗಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಹಾಸನ ಪೆನ್‌ಡ್ರೈವ್‌ ಕೇಸ್‌ಗೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ (Devarajegowda), ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ (LR Shivarame Gowda) ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ಅವರ ನಡುವಿನ ದೂರವಾಣಿ ಸಂಭಾಷಣೆ ಎನ್ನಲಾದ ಆಡಿಯೊ ಲಭ್ಯವಾಗಿದ್ದು, ಮಾತುಕತೆಯು ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ ಕುರಿತೇ ಇವರು ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ.

ಲಭ್ಯವಾಗಿರುವ ಆಡಿಯೊ ಪ್ರಕಾರ, ಮೊದಲು ದೇವರಾಜೇಗೌಡ ಹಾಗೂ ಎಲ್‌.ಆರ್.ಶಿವರಾಮೇಗೌಡ ದೂರವಾಣಿಯಲ್ಲಿ ಮಾತನಾಡಿದ್ದಾರೆ. “ನಾನು ಫೋನ್‌ಅನ್ನು ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡುತ್ತೇನೆ. ಏನೇನಾಗಿದೆ ಎಲ್ಲದರ ಕುರಿತು ಮಾಹಿತಿ ಕೊಡು” ಎಂಬುದಾಗಿ ಶಿವರಾಮೇಗೌಡ ಅವರು ದೇವರಾಜೇಗೌಡರಿಗೆ ತಿಳಿಸುತ್ತಾರೆ. ಇದಾದ ಬಳಿಕ ದೇವರಾಜೇಗೌಡ ಅವರು ಡಿಸಿಎಂ ಡಿ.ಕೆ.ಶಿವಕುಮಾರ್‌ ಜತೆ ದೂರವಾಣಿಯಲ್ಲಿ ಮಾತನಾಡಿದ್ದಾರೆ.

ಇಲ್ಲಿದೆ ಆಡಿಯೊ ಸಂಭಾಷಣೆ

“ಏನೇನಾಯ್ತು? ಏನಿದೆ ಪರಿಸ್ಥಿತಿ” ಎಂಬುದಾಗಿ ಡಿ.ಕೆ.ಶಿವಕುಮಾರ್‌ ಕೇಳುತ್ತಾರೆ. ಆಗ ದೇವರಾಜೇಗೌಡ ಅವರು, “ಸದ್ಯದ ಪರಿಸ್ಥಿತಿಯಲ್ಲಿ ನಾಳೆ ಕೋರ್ಟ್‌ನಲ್ಲಿ ಸ್ಟೇ ಆಗೋ ಚಾನ್ಸ್‌ ಇದೆ. ಸರಿಯಾಗಿ ದೂರು ಕೊಟ್ಟಿಲ್ಲ. ಮಹಿಳೆ ನೀಡಿರುವ ಹೇಳಿಕೆ ಹಾಗೂ ನಡೆದಿರುವ ಘಟನೆ ಮಧ್ಯೆ ಹಲವು ವರ್ಷ ವ್ಯತ್ಯಾಸ ಇದೆ. ಆದರೆ, ಎಸ್‌ಐಟಿಯವರು ಮಹಿಳೆಯನ್ನು ಕರೆದುಕೊಂಡು ಹೋಗಿ ವಿಚಾರಣೆ, ತನಿಖೆ ನಡೆಸಿದರೆ ಸೀರಿಯಸ್‌ ಕೇಸ್‌ ಆಗುತ್ತದೆ. ಆದರೆ, ಮಹಿಳೆಯು ಪ್ರಕರಣದಲ್ಲಿ ಸ್ಟ್ರಾಂಗ್‌ ಇಲ್ಲ” ಎಂದಿದ್ದಾರೆ.

ಇದಾದ ಬಳಿಕ ಡಿ.ಕೆ.ಶಿವಕುಮಾರ್‌, “ಏನಾದರೂ ಬೇರೆ ಎವಿಡೆನ್ಸ್‌ ಇದೆಯಾ” ಎಂದು ಪ್ರಶ್ನಿಸಿದ್ದಾರೆ. ಆಗ, ದೇವರಾಜೇಗೌಡ ಅವರು “ಯಾವುದೇ ಎವಿಡೆನ್ಸ್‌ ಇಲ್ಲ” ಎಂದಿದ್ದಾರೆ. ಇದಾದ ಬಳಿಕ ಇಬ್ಬರ ನಡುವಿನ ಮಾತುಕತೆ ಮುಗಿದಿದೆ. ದೇವರಾಜೇಗೌಡ ಅವರು ಜೈಲಿಗೆ ಹೋಗುವ ಮೊದಲು ನಡೆದ ಮಾತುಕತೆ ಇದಾಗಿದೆ ಎಂದು ಮೂಲಗಳು ತಿಳಿಸಿವೆ.

ದೇವರಾಜೇಗೌಡ ಗಂಭೀರ ಆರೋಪ

ಪೆನ್‌ಡ್ರೈವ್‌ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್‌ ಅವರ ಬಗ್ಗೆ ದೇವರಾಜೇಗೌಡ ಗಂಭೀರ ಆರೋಪ ಮಾಡಿದ್ದಾರೆ. “ಪೆನ್‌ ಡ್ರೈವ್‌ ಪ್ರಕರಣದ ಹಿಂದೆ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಇದ್ದಾರೆ. ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಳಿ ಪೆನ್‌ಡ್ರೈವ್‌ ತರಿಸಿಕೊಂಡು ಎಲ್ಲವನ್ನೂ ರೆಡಿ ಮಾಡಿದ್ದು ಡಿಕೆಶಿ, ಇದರಲ್ಲಿ ಸುಮ್ಮನಾಗಲು 100 ಕೋಟಿ ರೂಪಾಯಿ ಆಫರ್‌ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಎಲ್.ಆರ್. ಶಿವರಾಮೇಗೌಡ ಮೂಲ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು. ಡಿ.ಕೆ. ಶಿವಕುಮಾರ್ ನೇರವಾಗಿ ನನ್ನ ಜತೆಗೆ ಮಾತನಾಡಿದ್ದಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಕಾಂಗ್ರೆಸ್‌ ಸರ್ಕಾರದಿಂದ ಪ್ರಜ್ವಲ್‌ ಕೇಸ್‌ ನಿಯಂತ್ರಣ; ಡೈವರ್ಟ್‌ ಮಾಡಲು ಬಿಜೆಪಿಗರ ಮೇಲೆ ದಾಳಿ ಎಂದ ಅಶೋಕ್‌!

Continue Reading

ಕ್ರೈಂ

Road Accident: ಬೆಂಗಳೂರು, ಗದಗದಲ್ಲಿ ಸರಣಿ ಅಪಘಾತ; ಗ್ಯಾಸ್ ಟ್ಯಾಂಕರ್ ಸ್ಫೋಟಕ್ಕೆ ಮನೆಗಳೇ ಭಸ್ಮ

Road Accident: ಬೆಂಗಳೂರು ಹಾಗೂ ಗದಗದಲ್ಲಿ ಸರಣಿ ಅಪಘಾತ ಸಂಭವಿಸಿದ್ದು. ಹಲವರು ಗಾಯಗೊಂಡಿದ್ದಾರೆ. ಮಹಾರಾಷ್ಟ್ರದ ಪುಣೆಯ ಚಾಕನ ಶಿಕ್ರಾಪುರ ರಾಷ್ಟ್ರೀಯ ಹೆದ್ದಾರಿ ಮೇಲೆ ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡಿದ್ದು, ಹೋಟೆಲ್‌ ಸೇರಿ ಮನೆಗಳಿಗೆ ಹಾನಿಯಾಗಿವೆ.

VISTARANEWS.COM


on

By

Road Accident
Koo

ಬೆಂಗಳೂರು/ಗದಗ/ಪುಣೆ: ಮಹಾರಾಷ್ಟ್ರದ ಪುಣೆಯ ಚಾಕನ ಶಿಕ್ರಾಪುರ ರಾಷ್ಟ್ರೀಯ ಹೆದ್ದಾರಿ ಮೇಲೆ ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡಿದೆ. ಸ್ಫೋಟದಿಂದ ಮೂರು ಕಂಟೇನರ್ ವಾಹನಗಳು, ಒಂದು ಹೋಟೆಲ್ ಮತ್ತು ಮೂರು ಮನೆಗಳು ಬೆಂಕಿ ಆಹುತಿಯಾಗಿವೆ. ಭಾನುವಾರ ಬೆಳಗಿನ ಜಾವ 5 ಗಂಟೆಗೆ ಸುಮಾರಿಗೆ ಘಟನೆ ನಡೆದಿದೆ. ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಎರಡು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ (road Accident) ನಡೆದಿದೆ.

road Accident

ಕುಡಿದು ಅಡ್ಡಾದಿಡ್ಡಿ ಕಾರು ಚಾಲನೆ

ಕುಡಿದ ಅಮಲಿನಲ್ಲಿ ಕಾರು ಚಾಲನೆ ಮಾಡಿದ್ದರಿಂದ ಬೆಂಗಳೂರಿನಲ್ಲಿ ಸರಣಿ ಅಪಘಾತ ಸಂಭವಿಸಿದೆ. ಸ್ವಿಫ್ಟ್ ಕಾರು ಚಾಲಕನಿಂದ ಅಡ್ಡಾದಿಡ್ಡಿ ಚಾಲನೆಗೆ ಆಟೋ, ಎರಡು ಬೈಕ್‌ಗೆ ಡಿಕ್ಕಿಯಾಗಿದೆ. ಬೆಂಗಳೂರಿನ ರಾಜಾಜಿನಗರದ ಈಸ್ಟ್ ವೆಸ್ಟ್ ಪಬ್ಲಿಕ್ ಸ್ಕೂಲ್ ಬಳಿ ಅಪಘಾತ ನಡೆದಿದೆ. ಘಟನೆಯಲ್ಲಿ ಓರ್ವ ಸ್ಥಿತಿ‌ ಗಂಭೀರವಾಗಿದೆ. ಮಲ್ಲೇಶ್ವರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

road Accident

ಇದನ್ನೂ ಓದಿ: Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಗದಗದಲ್ಲಿ ಭೀಕರ ಅಪಘಾತ

ಗದಗ ಜಿಲ್ಲೆಯ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ವಿಜಯಪುರ- ಹುಬ್ಬಳ್ಳಿ ರಾಜ್ಯ ಹೆದ್ದಾರಿಯಲ್ಲಿ ನಸುಕಿನ ಜಾವ 4 ಗಂಟೆ ಸುಮಾರಿಗೆ ಸರಣಿ ಅಪಘಾತ ನಡೆದಿದೆ. ಹುಬ್ಬಳ್ಳಿಯಿಂದ ಬಾಗಲಕೋಟೆ ಕಡೆ ಹೋಗುತ್ತಿದ್ದ ವಾಹನಗಳ ನಡುವೆ ಅಪಘಾತ ನಡೆದಿದೆ.

road Accident

ಬೊಲೆರೋ ಪಿಕಪ್ ವಾಹನ ಎರ್ಟಿಗಾ ಕಾರಿಗೆ ಡಿಕ್ಕಿಯಾಗಿದೆ. ಪರಿಣಾಮ ಎರ್ಟಿಗಾ ಕಾರು ಚಾಲಕನ ನಿಯಂತ್ರಣ ತಪ್ಪಿ ಮುಂದಿನ ಕ್ಯಾಂಟರ್ ಡಿಕ್ಕಿಯಾಗಿದೆ. ಅದೃಷ್ಟವಾಶತ್‌ ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಎರ್ಟಿಗಾ ಚಾಲಕ ಮತ್ತು ಸ್ನೇಹಿತ ಪಾರಾಗಿದ್ದಾರೆ. ಅಪಘಾತ ರಭಸಕ್ಕೆ ಕಾರು ‌ನಜ್ಜುಗುಜ್ಜಾಗಿದೆ. ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Kundapur News: ಅನಾರೋಗ್ಯದಿಂದ ತಾಯಿ ಸಾವು, ಶವದ ಜತೆ 4 ದಿನ ಕಳೆದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು!

Kundapur News: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೂಡುಗೋಪಾಡಿಯ ದಾಸನಹಾಡಿಯಲ್ಲಿ ಮನ ಕಲಕುವ ಘಟನೆ ನಡೆದಿದೆ. ತಾಯಿ ಶವದ ಜತೆ 4 ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಕೂಡ ತೀವ್ರ ಅಸ್ವಸ್ಥಗೊಂಡು ಕೊನೆಯುಸಿರೆಳೆದಿದ್ದಾಳೆ.

VISTARANEWS.COM


on

Kundapur News
Koo

ಉಡುಪಿ: ಒಂದೆಡೆ ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಮೃತಪಟ್ಟಿದ್ದರೆ, ಆ ಬಗ್ಗೆ ಅರಿವೇ ಇಲ್ಲದ ಬುದ್ಧಿಮಾಂದ್ಯ ಪುತ್ರಿಯೂ ಕೂಡ ತೀವ್ರ ಅಸ್ವಸ್ಥಗೊಂಡು ಕೊನೆಯುಸಿರೆಳೆದಿರುವ ಮನ ಕಲಕುವ ಘಟನೆ ಜಿಲ್ಲೆಯ ಕುಂದಾಪುರ (Kundapur News) ತಾಲೂಕಿನ ಮೂಡುಗೋಪಾಡಿಯ ದಾಸನಹಾಡಿಯಲ್ಲಿ ನಡೆದಿದೆ.

ತಾಯಿ ಜಯಂತಿ ಶೆಟ್ಟಿ (62), ಮಗಳು ಪ್ರಗತಿ ಶೆಟ್ಟಿ (32) ಮೃತರು. ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಶೆಟ್ಟಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ತಾಯಿಯ ಶವದ ಜತೆಗೆ 4 ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿ, ತೀವ್ರ ಅಸ್ವಸ್ಥಗೊಂಡಿದ್ದಳು.

ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪರಿಶೀಲಿಸಿದಾಗ ಮಹಿಳೆ ಮೃತಪಟ್ಟಿರುವ ವಿಷಯ ಬೆಳಕಿಗೆ ಬಂದಿದೆ. ಈ ವೇಳೆ ತೀವ್ರ ಅಸ್ವಸ್ಥಗೊಂಡಿದ್ದ ಮಗಳನ್ನು ರಕ್ಷಿಸಿದ್ದ ಕುಂದಾಪುರ ಪೊಲೀಸರು, ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಯುವತಿ ಮೃತಪಟ್ಟಿದ್ದಾಳೆ.

ಇದನ್ನೂ ಓದಿ | Viral News: ಬಾಯ್‌ಫ್ರೆಂಡ್‌ನ ಗುಪ್ತಾಂಗವನ್ನೇ ಕಟ್‌ ಮಾಡಿ ಕಸದ ಬುಟ್ಟಿಗೆ ಎಸೆದ ಮಹಿಳೆ

ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಶಾಕ್‌ನಿಂದ ವ್ಯಕ್ತಿ ಸ್ಪಾಟ್‌ ಡೆತ್‌

Electric shock in udupi

ಉಡುಪಿ: ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ (Electric shock) ಮೃತಪಟ್ಟಿದ್ದಾರೆ. ಇರ್ಷಾದ್ (56) ಮೃತ ದುರ್ದೈವಿ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿ ಘಟನೆ ನಡೆದಿದೆ.

ಮನೆಯಿಂದ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ ದುರಂತ ನಡೆದಿದೆ. ಶನಿವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆ (Rain News) ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ವಿದ್ಯುತ್ ತಂತಿ ನೆಲದ ಮೇಲೆ ಬಿದ್ದಿರುವುದನ್ನು ಗಮನಿಸದ ಇರ್ಷಾದ್ ತುಳಿದಿದ್ದಾರೆ. ಕ್ಷಣಾರ್ಧದಲ್ಲೇ ಇರ್ಷಾದ್‌ ಶಾಕ್‌ನಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಇದನ್ನೂ ಓದಿ: Suspicious Case : ಮೈಸೂರಿನಲ್ಲಿ ದಂಪತಿ ಅನುಮಾನಾಸ್ಪದ ಸಾವು; ಕೊಲೆಯೋ.. ಆತ್ಮಹತ್ಯೆಯೋ?

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಮತ್ತು ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಂದೂರು ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಇನ್ನೂ ತುಂಡಾಗಿದ್ದ ವಿದ್ಯುತ್ ತಂತಿಯನ್ನು ಸರಿಪಡಿಸುವ ಕಾರ್ಯದಲ್ಲಿ ಮೆಸ್ಕಾಂ ಸಿಬ್ಬಂದಿ ತೊಡಗಿದ್ದಾರೆ.

Continue Reading
Advertisement
R Ashok
ರಾಜಕೀಯ21 mins ago

R Ashok: ರಾಜ್ಯದಲ್ಲಿ ಮಳೆಗಿಂತ ಹೆಚ್ಚಾಗಿ ಕೊಲೆಗಳೇ ನಡೆಯುತ್ತಿವೆ: ಆರ್‌.ಅಶೋಕ್‌ ಕಿಡಿ

Thailand Open 2024
ಬ್ಯಾಡ್ಮಿಂಟನ್40 mins ago

Thailand Open 2024: ಥಾಯ್ಲೆಂಡ್‌ ಓಪನ್‌ ಗೆದ್ದ ಭಾರತದ ಚಿರಾಗ್‌-ಸಾತ್ವಿಕ್‌ ಜೋಡಿ

Prajwal Revanna Case
ಕರ್ನಾಟಕ44 mins ago

Prajwal Revanna Case: ಪೆನ್‌ಡ್ರೈವ್‌ ಕೇಸ್‌ಗೆ ಟ್ವಿಸ್ಟ್;‌ ದೇವರಾಜೇಗೌಡ, ಡಿಕೆಶಿ ಆಡಿಯೊ ಬಯಲು, ಇಲ್ಲಿದೆ ಸ್ಫೋಟಕ ಮಾಹಿತಿ

Money Guide
ಮನಿ-ಗೈಡ್53 mins ago

Money Guide: ಪ್ಯಾನ್‌ ಕಾರ್ಡ್‌ ಇಲ್ಲದೆಯೂ ಸಿಬಿಲ್‌ ಸ್ಕೋರ್‌ ಪರಿಶೀಲಿಸಬೇಕೆ? ಈ ಟಿಪ್ಸ್‌ ಫಾಲೋ ಮಾಡಿ

Road Accident
ಕ್ರೈಂ57 mins ago

Road Accident: ಬೆಂಗಳೂರು, ಗದಗದಲ್ಲಿ ಸರಣಿ ಅಪಘಾತ; ಗ್ಯಾಸ್ ಟ್ಯಾಂಕರ್ ಸ್ಫೋಟಕ್ಕೆ ಮನೆಗಳೇ ಭಸ್ಮ

Janhvi Kapoor felt sexualised at the age of 12
ಬಾಲಿವುಡ್1 hour ago

Janhvi Kapoor: 12ನೇ ವಯಸ್ಸಿನಲ್ಲಿಯೇ ಅಶ್ಲೀಲ ವೆಬ್‌ಸೈಟ್‌ನಲ್ಲಿ ನನ್ನ ಫೋಟೊ ಅಪ್‌ಲೋಡ್‌ ಆಗಿತ್ತು ಎಂದ ಶ್ರೀದೇವಿ ಮಗಳು!

Kundapur News
ಕರ್ನಾಟಕ1 hour ago

Kundapur News: ಅನಾರೋಗ್ಯದಿಂದ ತಾಯಿ ಸಾವು, ಶವದ ಜತೆ 4 ದಿನ ಕಳೆದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು!

RCB vs CSK
ಕ್ರಿಕೆಟ್1 hour ago

RCB vs CSK: ಧೋನಿ ವರ್ತನೆಗೆ ‘ಇಟ್‌ ಹರ್ಟ್ಸ್‌​’ ಎಂದ ಆರ್​ಸಿಬಿ ಅಭಿಮಾನಿಗಳು; ಧೋನಿ ಮಾಡಿದ ತಪ್ಪೇನು?

Congress Manifesto
ದೇಶ1 hour ago

Congress Manifesto: ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಅಪಪ್ರಚಾರ; ವ್ಯಕ್ತಿ ಅರೆಸ್ಟ್‌-ಬಿಜೆಪಿ ಕಿಡಿ

Prajwal Revanna Case
ಕರ್ನಾಟಕ2 hours ago

Prajwal Revanna Case: ಡಿಕೆಶಿ 100 ಕೋಟಿ ರೂ. ಆಫರ್;‌ ಬೆಂಕಿ ಇಲ್ಲದೆ ಹೊಗೆಯಾಡಲ್ಲ ಎಂದ ಆರ್.‌ ಅಶೋಕ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌