Viral video | ಕಳಶಕ್ಕಿಟ್ಟ ತೆಂಗಿನಕಾಯಿಯಂತಿರುವ ಇದು ಸಿಹಿತಿಂಡಿಯೋ, ಕಲಾಕೃತಿಯೋ? - Vistara News

ಆಹಾರ/ಅಡುಗೆ

Viral video | ಕಳಶಕ್ಕಿಟ್ಟ ತೆಂಗಿನಕಾಯಿಯಂತಿರುವ ಇದು ಸಿಹಿತಿಂಡಿಯೋ, ಕಲಾಕೃತಿಯೋ?

ಥರಹೇವಾರಿ ನಮೂನೆಯ ಕೇಕ್‌ ಹಾಗೂ ಪೇಸ್ಟ್ರಿಗಳನ್ನು ಮಾಡಿ ಜಗತ್ತಿನ ಮುಂದಿಟ್ಟು ದಂಗುಬಡಿಸುವ ಪೇಸ್ಟ್ರಿ ಕಲಾವಿದ ಗುಯ್ಚಾನ್‌ ಈಗ ಹೊಸತೊಂದು ಸಿಹಿಯ ಜೊತೆಗೆ ಬಂದಿದ್ದಾರೆ. ಈ ಬಾರಿ ಮಾಡಿದ ಸಿಹಿತಿಂಡಿ ನಿಜವಾದ ತೆಂಗಿನಕಾಯಿಯನ್ನು ಹೋಲುತ್ತಿದೆ.

VISTARANEWS.COM


on

pastry art
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಫಕ್ಕನೆ ನೋಡಿದರೆ, ಹಬ್ಬಕ್ಕೆ ರೆಡಿ ಮಾಡಿದ ಕಳಶದ ತೆಂಗಿನಕಾಯಿ ಎಂದು ಕನ್ಫ್ಯೂಸ್‌ ಆದರೆ ಅಚ್ಚರಿಯಿಲ್ಲ. ಯಾಕೆಂದರೆ ಅಮೌರಿ ಗುಯ್ಚಾನ್‌ ಎಂಬ ಪೇಸ್ಟ್ರಿ ಕಲಾವಿದ ಮಾಡುವ ಸಿಹಿತಿಂಡಿ, ಕೇಕ್‌, ಪೇಸ್ಟ್ರಿಗಳೆಲ್ಲವೂ ಹಾಗೆಯೇ. ನೈಜ ವಸ್ತುವಿಗೂ ಸೆಡ್ಡು ಹೊಡೆಯುವಂಥ ವಿನ್ಯಾಸದಿಂದ ನೋಡುಗರನ್ನು ಅಚ್ಚರಿಗೆ ನೂಕುತ್ತದೆ.

ಥರಹೇವಾರಿ ನಮೂನೆಯ ಕೇಕ್‌ ಹಾಗೂ ಪೇಸ್ಟ್ರಿಗಳನ್ನು ಮಾಡಿ ಜಗತ್ತಿನ ಮುಂದಿಟ್ಟು ದಂಗುಬಡಿಸುವ ಪೇಸ್ಟ್ರಿ ಕಲಾವಿದ ಗುಯ್ಚಾನ್‌ ಈಗ ಹೊಸತೊಂದು ಸಿಹಿಯ ಜೊತೆಗೆ ಬಂದಿದ್ದಾರೆ. ಈ ಬಾರಿ ಮಾಡಿದ ಸಿಹಿತಿಂಡಿ ನಿಜವಾದ ತೆಂಗಿನಕಾಯಿಯನ್ನು ಹೋಲುತ್ತಿದ್ದು ಅದನ್ನು ಒಡೆದು ನೋಡಿದರೆ, ಥೇಟ್‌ ತೆಂಗಿನಕಾಯಿಯ ರಚನೆಯಂತೆಯೇ ಇರುವುದು ಈ ಕೇಕ್‌ ಕಲಾವಿದನ ಕಲಾ ನೈಪುಣ್ಯತೆಗೆ ಸಾಕ್ಷಿಯಾಗಿದೆ.

ಈಗ ಆಹಾರವೆಂದರೆ ಕೇವಲ ಹೊಟ್ಟೆತುಂಬಿಸುವ ಭಾವವಷ್ಟೇ ಅಲ್ಲ. ಅಲ್ಲೂ ಕಲೆಯಿದೆ. ಅಡುಗೆ ಮಾಡುವುದೇ ಒಂದು ಕಲೆ ಎಂಬುದು ಒಪ್ಪಿಕೊಂಡ ಸತ್ಯವೇ ಆಗಿದ್ದರೂ, ಅಡುಗೆಯನ್ನು ಕಲೆಯಂತೆಯೇ ಪರಿಗಣಿಸಿ ನಿಜಾರ್ಥದಲ್ಲಿ ಕಲಾಕೃತಿಯಂಥದ್ದೇ ತಿನಿಸುಗಳನ್ನೇ ಮಾಡಿ, ತಿನ್ನಲೂ ಹಿಂದೆ ಮುಂದೆ ನೋಡುವಷ್ಟು ನೈಜವಾಗಿ ಕಾಣುವಂಥ ತಿನಿಸುಗಳನ್ನು ಲೋಕದ ಮುಂದಿಡುವ ಗುಯ್‌ಚಾನ್‌ನ ಕೇಕ್‌, ಪೇಸ್ಟ್ರೀ ಕಲೆಗೆ ಮರುಳಾಗದವರಿಲ್ಲ.

ಈಗ ಗುಯ್ಚಾನ್‌ ತನ್ನ ಇನ್ಸ್‌ಟಾ ಖಾತೆಯಲ್ಲಿ ಸಿಹಿತಿಂಡಿಯೊಂದನ್ನು ಮಾಡಿದ್ದು, ಮಾಡುವ ವಿಧಾನದ ವಿಡಿಯೋದೊಂದಿಗೆ ಪೋಸ್ಟ್‌ ಮಾಡಿದ್ದಾರೆ. ಇದನ್ನು ನಡಿದವರು ಖಂಡಿತವಾಗಿ ಕಳಶಕ್ಕಿಟ್ಟ ತೆಂಗಿನಕಾಯಿ ಎಂದು ಭಾವಿಸಿಯಾರು. ಅಷ್ಟು ನೈಜವಾಗಿ ತೆಂಗಿನಕಾಯಿಯನ್ನೇ ಹೋಲುವ ಈ ಸಿಹಿತಿಂಡಿಯ ಮೇಲ್ಭಾವನ್ನು ಕತ್ತರಿಸಿ ಒಡೆದ ತೆಂಗಿನಕಾಯಿಯ ಲುಕ್‌ ನೀಡಿದ್ದಾರೆ. ಮೇಲಿನಿಂದ ಎಲೆಯ ಅಲಂಕಾರವೂ ಮಾಡಿರುವುದರಿಂದ ಶುಭ ಸಂದರ್ಭಗಳಲ್ಲಿ ಕಳಶದ ಮೇಲಿರುವ ತೆಂಗಿನಕಾಯಿಯಂತೆ ಕಾಣುತ್ತದೆ.‌

ಇದನ್ನೂ ಓದಿ | Bengaluru Belly | ಬೆಂಗಳೂರು ಬೆಲ್ಲಿ ರೆಸ್ಟೋರೆಂಟ್‌ನಲ್ಲಿ ಏನುಂಟು ಏನಿಲ್ಲ!

ಈತ ಅದೆಷ್ಟು ಪ್ರೀತಿಯಿಂದ ಈ ಸಿಹಿತಿಂಡಿಯನ್ನು ಮಾಡುತ್ತಾರೆಂದು ಆತನ ವಿಡಿಯೋದಲ್ಲೇ ನೋಡಬೇಕು. ಪ್ರತಿಯೊಂದು ಸಣ್ಣ ಸಣ್ಣ ವಿವರಗಳೂ ಈ ವಿಡಿಯೋದಲ್ಲಿ ದಾಖಲಾಗುತ್ತದೆ. ಹೂರಣದಿಂದ ಹಿಡಿದು ತೆಂಗಿನಕಾಯಿಯ ಹೊರಕವಚದವರೆಗೆ ಏನೆಲ್ಲ ವಸ್ತುಗಳನ್ನು ಇದರಲ್ಲಿ ಬಳಸಲಾಗಿದೆ ಎಂಬ ವಿವರಗಳನ್ನು ಈತನ ವಿಡಿಯೋದಲ್ಲಿ ಕಣ್ಣಾರೆ ಕಾಣಬಹುದು. ಇದೆಲ್ಲವನ್ನು ಆತ ಹೇಗೆ ಮಾಡುತ್ತಾನೆಂಬ ಆತನ ಕೈಚಳಕವನ್ನೂ ನೋಡಬಹುದು. ಈ ವಿಡಿಯೋದಲ್ಲಿ ತೋರಿಸಿದ ಹಾಗೆ ತೆಂಗಿನಕಾಯಿ ಆಕಾರದ ಸಿಹಿತಿಂಡಿಯೊಳಗೆ ಬಳಸಿದ ಹೂರಣ ಮಾವಿನಹಣ್ಣು ಹಾಗೂ ಅನಾನಾಸು. ಇದಾದ ಮೇಲೆ ತೆಂಗಿನ ಕಾಯಿಯ ಬಿಳಿಯ ಭಾಗವನ್ನೂ ನೈಜವಾಗಿ ಬರುವಂತೆ ಮಾಡಿದ್ದು ಕೊನೆಯಲ್ಲಿ ಚಾಕೋಲೇಟ್‌ನಿಂದ ಡಿಪ್‌ ಮಾಡಿ ಅದಕ್ಕೆ ತೆಂಗಿನಕಾಯಿಯ ಒರಟು ಲುಕ್‌ ಬರುವಂತೆ ಮಾಡಲಾಗಿದೆ. ಮೇಲಿನ ಭಾಗವನ್ನು ಒಡೆದು, ಅದರಲ್ಲಿ ಎಲೆಯಂತಹ ಅಲಂಕಾರವನ್ನು ಮಾಡಲಾಗಿದೆ. ಈ ಇಡೀ ಸಿಹಿ ತಿನಿಸನ್ನು ಮಾವಿನಹಣ್ಣು, ಅನಾನಾಸು, ಪ್ಯಾಷನ್‌ ಫ್ರುಟ್‌, ತೆಂಗಿನಕಾಯಿ, ವೆನಿಲ್ಲಾ ಹಾಗೂ ರಮ್‌ ಬಳಸಿ ಮಾಡಲಾಗಿದೆ.

ಪ್ರತಿ ಬಾರಿಯಂತೆ ಈ ಬಾರಿಯೂ, ಸಾಮಾಜಿಕ ಜಾಲತಾಣದಲ್ಲಿ ಇದು ಮಿಲಿಯಗಟ್ಟಲೆ ವೀಕ್ಷಣೆ ಪಡೆದಿದ್ದು, ಈತನ ಕೈಚಳಕಕ್ಕೆ ಹಾಗೂ ಕ್ರಿಯಾತ್ಮಕ ಆಲೋಚನೆಗಳಿಗೆ ಜನರು ಫಿದಾ ಆಗಿದ್ದಾರೆ. ಈತನೊಬ್ಬ ಕಲಾಕಾರ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಅಡುಗೆಯೂ ಒಂದು ಕಲೆ ಎಂದು ಪ್ರತಿನಿತ್ಯವೂ ಸಾಬೀತುಪಡಿಸುವ ಈತನ ಕಲಾನೈಪುಣ್ಯಕ್ಕೆ ಈತನ ಕಲಾಕೃತಿಗಳೇ ಸಾಕ್ಷಿ ಎಂದು ಮೆಚ್ಚಿ ಕಾಮೆಂಟ್‌ ಮಾಡಿದ್ದಾರೆ.

ನೀವು ಯಾವ ಟೈಟಲ್‌ ಕೊಡುತ್ತೀರಿ ಎಂಬುದನ್ನೂ ನೋಡದೆ, ನಿಮ್ಮ ವಿಡಿಯೋವನ್ನು ಅದನ್ನು ಮಾಡುವ ಬಗೆಯನ್ನು ಪ್ರತಿ ಬಾರಿಯೂ ಕೌತುಕದಿಂದ ವೀಕ್ಷಿಸುತ್ತೇನೆ. ಅದ್ಭುತ ಕಲಾಕೃತಿಯಿದು ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ.

ಇನ್ನೊಬ್ಬಾತ, ನೀವೊಬ್ಬ ಕ್ರಿಯೇಟಿವ್‌ ಜೀನಿಯಸ್‌. ಈದನ್ನು ನೋಡಿದರೆ, ತಿಂದು ರುಚಿ ನೋಡಬೇಕೆಂಬ ಆಸೆ ಹೆಚ್ಚಾಗುತ್ತಿದೆ ಎಂದು ಕಾಮೆಂಟಿಸಿದ್ದಾರೆ.

ಇದನ್ನೂ ಓದಿ | Viral video | ಮನಸೆಳೆದ ಈ ಪಿಂಟಾರಾ ಕೇಕ್‌ ಮಾಡಲು ಐದು ದಿನ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಆಹಾರ/ಅಡುಗೆ

Healthy Salad Tips: ನೀವು ಸಲಾಡ್‌ ಪ್ರಿಯರೇ? ಸಲಾಡ್‌ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ!

ಕೆಲವು ಬಗೆಯ ಹಣ್ಣುಗಳು, ಒಣಬೀಜಗಳು, ಒಣಹಣ್ಣುಗಳು, ಹಸಿ ತರಕಾರಿಗಳು, ಮೊಳಕೆ ಕಾಳುಗಳು, ಬೇಯಿಸಿದ ಕಾಳುಗಳು ಹೀಗೆ ಹತ್ತು ಹಲವು ಬಗೆಯ ಕಾಂಬಿನೇಶನ್ನಿನ ಸಲಾಡ್‌ಗಳನ್ನು ನಿತ್ಯವೂ ತಯಾರಿಸಬಹುದು. ಕಡಿಮೆ ಕ್ಯಾಲರಿಯ, ಪ್ರೊಟೀನ್‌ ಹಾಗೂ ಸಾಕಷ್ಟು ಪೋಷಕಾಂಶಗಳನ್ನು ನಮ್ಮ ದೇಹಕ್ಕೆ ಒದಗಿಸಬಲ್ಲ ಆಹಾರವಾದ ಈ ಸಲಾಡ್‌ಗಳು ಆರೋಗ್ಯಕರ ಎಂಬುದರಲ್ಲಿ ಎರಡು ಮಾತೇ ಇಲ್ಲ. ಹಸಿವಾದಾಗ ತಕ್ಷಣ ಹಸಿವು ಕಡಿಮೆ ಮಾಡಬಲ್ಲ ಆಪದ್ಬಾಂಧವ ಕೂಡಾ ಈ ಸಲಾಡ್‌ಗಳೇ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಈ ಆರೋಗ್ಯ ವರ್ಧಿಸುವ ಸಲಾಡ್‌ಗಳನ್ನು ಮಾಡುವ ಸಮಯದಲ್ಲಿ (healthy salad tips) ಕೆಲವು ತಪ್ಪುಗಳನ್ನು ಮಾಡುವ ಅಪಾಯವೂ ಇದೆ.

VISTARANEWS.COM


on

Healthy Salad Tips
Koo

ಪೋಷಕಾಂಶಯುಕ್ತ ಆಹಾರ ಎಂದಾಕ್ಷಣ ಸುಲಭವಾಗಿ ನೆನಪಿಗೆ ಬರುವುದು ಸಲಾಡ್‌ಗಳು. ಸುಲಭವಾಗಿ ಮಾಡಬಹುದಾದ, ಹೆಚ್ಚೂ ಶ್ರಮ ಬೇಡದ, ಬೇಗ ಹೊಟ್ಟೆ ತುಂಬಿಸುವ ಗುಣ ಉಳ್ಳ ಸಲಾಡ್‌ಗಳು ತೂಕ ಇಳಿಸುವ ಮಂದಿಯ ಪರಮಾಪ್ತ ಸ್ನೇಹಿತನಂತೆ. ಕಚೇರಿಗಳಿಗೆ ಬಿಡು ಹೊತ್ತಿನಲ್ಲಿ ತಿನ್ನಬಹುದಾದ ಸ್ನ್ಯಾಕ್‌ಗಳ ಬದಲಿಗೂ ಈ ಸಲಾಡ್‌ಗಳು ಅನೇಕರಿಗೆ ಸುಲಭವಾಗಿ ಮಾಡಬಹುದಾದ ಆಹಾರವೇ ಆಗಿದೆ. ಕೆಲವು ಬಗೆಯ ಹಣ್ಣುಗಳು, ಒಣಬೀಜಗಳು, ಒಣಹಣ್ಣುಗಳು, ಹಸಿ ತರಕಾರಿಗಳು, ಮೊಳಕೆ ಕಾಳುಗಳು, ಬೇಯಿಸಿದ ಕಾಳುಗಳು ಹೀಗೆ ಹತ್ತು ಹಲವು ಬಗೆಯ ಕಾಂಬಿನೇಶನ್ನಿನ ಸಲಾಡ್‌ಗಳನ್ನು ನಿತ್ಯವೂ ತಯಾರಿಸಬಹುದು. ಕಡಿಮೆ ಕ್ಯಾಲರಿಯ, ಪ್ರೊಟೀನ್‌ ಹಾಗೂ ಸಾಕಷ್ಟು ಪೋಷಕಾಂಶಗಳನ್ನು ನಮ್ಮ ದೇಹಕ್ಕೆ ಒದಗಿಸಬಲ್ಲ ಆಹಾರವಾದ ಈ ಸಲಾಡ್‌ಗಳು ಆರೋಗ್ಯಕರ ಎಂಬುದರಲ್ಲಿ ಎರಡು ಮಾತೇ ಇಲ್ಲ. ಹಸಿವಾದಾಗ ತಕ್ಷಣ ಹಸಿವು ಕಡಿಮೆ ಮಾಡಬಲ್ಲ ಆಪದ್ಬಾಂಧವ ಕೂಡಾ ಈ ಸಲಾಡ್‌ಗಳೇ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಈ ಆರೋಗ್ಯ ವರ್ಧಿಸುವ ಸಲಾಡ್‌ಗಳನ್ನು ಮಾಡುವ ಸಮಯದಲ್ಲಿ ಕೆಲವು ತಪ್ಪುಗಳನ್ನು ಮಾಡುವ ಅಪಾಯವೂ ಇದೆ. ಬನ್ನಿ, ನೀವು ಸಲಾಡ್‌ಗಳನ್ನು ಮಾಡುವ ಸಂದರ್ಭ ಈ ಕೆಳಗಿನ ತಪ್ಪುಗಳನ್ನು ಮಾಡುತ್ತಿದ್ದೀರಿ ಎಂದಾದಲ್ಲಿ, ಆರೋಗ್ಯಕ್ಕೆ ಒಳಿತಾಗುವ ರೀತಿಯಲ್ಲಿ ತಿದ್ದಿಕೊಳ್ಳಿ. ಬನ್ನಿ, ಸಲಾಡ್‌ ಮಾಡುವ ಸಮಯದಲ್ಲಿ ಸಾಮಾನ್ಯವಾಗಿ (healthy salad tips) ಮಾಡುವ ತಪ್ಪುಗಳೇನು ಎಂಬುದನ್ನು ನೋಡೋಣ.

Greek Salad

ಡ್ರೆಸ್ಸಿಂಗ್‌ ಅತಿಯಾಗಿ ಮಾಡುವುದು

ಹೌದು, ಸಲಾಡ್‌ ಎಂದಾಕ್ಷಣ ಡ್ರೆಸ್ಸಿಂಗ್‌ ಸಹಜ. ಯಾಕೆಂದರೆ ಸಲಾಡ್‌ಗೆ ಒಂದು ರುಚಿಯನ್ನು ನೀಡುವುದೇ ಈ ಡ್ರೆಸ್ಸಿಂಗ್‌. ಆದರೆ, ಅತಿಯಾದ ಡ್ರೆಸ್ಸಿಂಗ್‌ ಮಾಡುವುದರಿಂದ ಸಲಾಡ್‌ನಲ್ಲಿ ಕೊಬ್ಬು ಜಾಸ್ತಿಯಾಗಬಹುದು. ಹೆಚ್ಚು ಕ್ಯಾಲರಿ ಸೇರಿಕೊಳ್ಳಬಹುದು. ಕೇವಲ ರುಚಿಗೆ ತಕ್ಕಷ್ಟೇ ಡ್ರೆಸ್ಸಿಂಗ್‌ ಮಾಡಿ.

ತರಕಾರಿಗಳನ್ನು ತೊಳೆಯದೆ ಇರುವುದು

ಹಸಿಯಾದ ತರಕಾರಿಗಳನ್ನು ಹಾಗೆಯೇ ಸಲಾಡ್‌ಗೆ ಬಳಸುವುದರಿಂದ ತರಕಾರಿಗಳನ್ನು ತೊಳೆಯುವುದು ಅತ್ಯಂತ ಮುಖ್ಯವಾದ ಘಟ್ಟ. ಹಾಗಾಗಿ ತರಕಾರಿಗಳನ್ನು ಒಮ್ಮೆ ಉಪ್ಪು ನೀರಿನಲ್ಲಿ ಹಾಕಿಟ್ಟು ತೊಳೆಯುವುದನ್ನು ರೂಢಿ ಮಾಡಿಕೊಳ್ಳಿ. ಯಾಕೆಂದರೆ ಇಲ್ಲಿ ತರಕಾರಿ ಬೇಯುವುದಿಲ್ಲವಾದ್ದರಿಂದ ಕೆಲವು ರಾಸಾಯನಿಕಗಳು ತರಕಾರಿಗೆ ಸಿಂಪಡಿಸಲ್ಪಟ್ಟದ್ದು ಹಾಗೆಯೇ ಉಳಿದಿರುವ ಸಾಧ್ಯತೆಯೂ ಇದೆ. ಹಾಗಾಗಿ, ತರಕಾರಿಯನ್ನು ಎರಡೆರಡು ಬಾರಿ ತೊಳೆದುಕೊಂಡು ಬಳಸಿ.

ಇದನ್ನೂ ಓದಿ: Which Type Of Roti Is Best: ಯಾರಿಗೆ ಯಾವ ರೊಟ್ಟಿ ಸೂಕ್ತ? ತಿನ್ನುವ ಮೊದಲು ತಿಳಿದುಕೊಂಡಿರಿ!

ಅತಿಯಾಗಿ ತರಕಾರಿಗಳನ್ನು ಬಳಸುವುದು

ಸಲಾಡ್‌ ಎಂದಾಕ್ಷಣ ಬೇಕಾದ ಹಾಗೆ ತರಕಾರಿಗಳನ್ನು ಬಳಸಬಹುದು ಎಂಬ ನಿಮ್ಮ ಎಣಿಕೆಯಾಗಿದ್ದರೆ ಅದು ತಪ್ಪು. ತರಕಾರಿಗಳ ಸಂಖ್ಯೆಯೂ ಅತಿಯಾಗಬಾರದು. ಒಂದಕ್ಕೊಂದು ಹೊಂದಿಕೊಳ್ಳುವ ಮೂರ್ನಾಲ್ಕು ಬಗೆಯ ತರಕಾರಿಗಳಿಗಿಂತ ಹೆಚ್ಚು ಬಳಸಬೇಡಿ. ತರಕಾರಿಗಳು ಅತಿಯಾದರೆ, ಅವು ಹಸಿಯಾಗಿರುವುದರಿಂದ ಇವು ಗ್ಯಾಸ್‌ನಂತಹ ಸಮಸಯೆಯನ್ನು ತಂದೊಡ್ಡಬಹುದು. ಜೀರ್ಣದ ಸಮಸ್ಯೆಗಳೂ ತಲೆದೋರಬಹುದು. ಕೆಲವರಿಗೆ ಹಸಿ ತರಕಾರಿಗಳು ಕರಗುವುದಿಲ್ಲ. ಇಂಥ ಮಂದಿ ತರಕಾರಿಗಳನ್ನು ಸ್ವಲ್ಪ ಬೇಯಿಸಿಕೊಂಡು ತಿನ್ನಬಹುದು. ಹೀಗೆ ಮಾಡುವುದರಿಂದ ಜೀರ್ಣ ಸಮಸ್ಯೆಗಳು ಬರದು.

Continue Reading

ಆರೋಗ್ಯ

Fruit and Veggie Smoothies: ಹಣ್ಣು, ತರಕಾರಿಗಳ ಆರೋಗ್ಯಕರ ಸ್ಮೂದಿ ಎಂಬ ಟ್ರೆಂಡ್‌! ಒಳ್ಳೆಯದೇ, ಕೆಟ್ಟದ್ದೇ?

ಒಂದಿಷ್ಟು ಹಣ್ಣುಗಳನ್ನು ಸೇರಿಸಿ ಮಾಡುವ ಸ್ಮೂದಿ, ತರಕಾರಿಗಳನ್ನು ಸೇರಿಸಿ ಮಾಡುವ ಸ್ಮೂದಿ, ಬೀಜಗಳು ಒಣ ಹಣ್ಣುಗಳು, ವೇಗನ್‌ ಹಾಲು ಇತ್ಯಾದಿ ಇತ್ಯಾದಿ ಹಲವು ಬಗೆಯನ್ನು ಸೇರಿಸಿ ಮಾಡಬಹುದಾದ ಸ್ಮೂದಿಗಳು ಬಹುತೇಕರ ಜೀವನದಲ್ಲಿ ಇಂದು ಪ್ರತಿನಿತ್ಯದ ಆಹಾರ. ಹಲವು ಪೋಷಕಾಂಶಗಳನ್ನು ಒಳಗೊಂಡ, ಒಮ್ಮೆಲೇ ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಸುಲಭವಾಗಿ ದೇಹಕ್ಕೆ ಸಿಗುವಂತೆ ಮಾಡಬಲ್ಲ, ಸುಲಭ ಸರಳವಾದ, ಫಟಾಫಟ್‌ ಮಾಡಬಹುದಾದ ಆಯ್ಕೆ ಇದು ಎಂಬುದರಲ್ಲಿ (Fruit and Veggie Smoothies) ಯಾವ ಸಂಶಯವೂ ಇಲ್ಲ. ಆದರೆ…

VISTARANEWS.COM


on

Fruit and Veggie Smoothie
Koo

ಸದ್ಯದ ಯುವಜನರ ಆಹಾರದ ಟ್ರೆಂಡ್‌ ಎಂದರೆ ಅದು ಸ್ಮೂದಿ. ಬಹಳ ಸುಲಭವಾಗಿ ಮಾಡಬಲ್ಲ, ಹೊಟ್ಟೆ ತುಂಬಿಸಿಕೊಳ್ಳಬಹುದಾದ ಹಾಗೂ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಲಾದ ಟ್ರೆಂಡ್‌ ಆದ ಆಹಾರ ಕ್ರಮ. ಒಂದಿಷ್ಟು ಹಣ್ಣುಗಳನ್ನು ಸೇರಿಸಿ ಮಾಡುವ ಸ್ಮೂದಿ, ತರಕಾರಿಗಳನ್ನು ಸೇರಿಸಿ ಮಾಡುವ ಸ್ಮೂದಿ, ಬೀಜಗಳು ಒಣ ಹಣ್ಣುಗಳು, ವೇಗನ್‌ ಹಾಲು ಇತ್ಯಾದಿ ಇತ್ಯಾದಿ ಹಲವು ಬಗೆಯನ್ನು ಸೇರಿಸಿ ಮಾಡಬಹುದಾದ ಸ್ಮೂದಿಗಳು ಬಹುತೇಕರ ಜೀವನದಲ್ಲಿ ಇಂದು ಪ್ರತಿನಿತ್ಯದ ಆಹಾರ. ಹಲವು ಪೋಷಕಾಂಶಗಳನ್ನು ಒಳಗೊಂಡ, ಒಮ್ಮೆಲೇ ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಸುಲಭವಾಗಿ ದೇಹಕ್ಕೆ ಸಿಗುವಂತೆ ಮಾಡಬಲ್ಲ, ಸುಲಭ ಸರಳವಾದ, ಫಟಾಫಟ್‌ ಮಾಡಬಹುದಾದ ಆಯ್ಕೆ ಇದು ಎಂಬುದರಲ್ಲಿ ಯಾವ ಸಂಶಯವೂ ಇಲ್ಲ. ಹಾಗಾದರೆ, ಈ ಸ್ಮೂದಿಗಳನ್ನು ಕುಡಿಯುವುದರಿಂದ, ದೇಹಕ್ಕೆ ಹಣ್ಣು, ತರಕಾರಿ, ಬೀಜಗಳನ್ನು ತಿಂದಷ್ಟೇ ಲಾಭಗಳು ದೊರೆಯುತ್ತವೆಯೇ ಎಂಬ ಬಗ್ಗೆ ನಿಮಗೆ ಪ್ರಶ್ನೆ ಉದ್ಭವಿಸಿದಲ್ಲಿ ಅದಕ್ಕೆ (Fruit and Veggie Smoothies) ಉತ್ತರ ಇಲ್ಲಿದೆ.

  • ನೀವು ಸ್ಮೂದಿಗಾಗಿ ಬಳಸುವ ಹಣ್ಣು ಹಂಪಲಾಗಿರಬಹುದು, ತರಕಾರಿಗಳಿರಬಹುದು, ಬೀಜ ಒಣಹಣ್ಣುಗಳಿರಬಹುದು, ಅವುಗಳನ್ನು ಹಾಗೆಯೇ ಜಗಿದು ತಿಂದರೆ ಆ ಜಗಿಯುವ ಪ್ರಕ್ರಿಯೆಯಲ್ಲಿ ಬಾಯಲ್ಲಿ ಲಾಲಾರಸವೂ ಅಂದರೆ ಜೊಲ್ಲೂ ಕೂಡಾ ಅದಕ್ಕೆ ಸೇರುತ್ತದೆ. ಈ ರಸ ಜೀರ್ಣಕ್ರಿಯೆಗೆ ಸಹಾಯ ಮಾಡುವ ರಸ. ಜೊತೆಗೆ ಇದು ಬಾಯಿಯನ್ನು ತೇವವಾಗಿ ಇಟ್ಟುಕೊಳ್ಳುವ ರಸವಾದ್ದರಿಂದ ಇದು ಬಾಯಿಯ ಮೂಲಕ ದೇಹಕ್ಕೆ ಇನ್‌ಫೆಕ್ಷನ್‌ ಹೋಗದಂತೆಯೂ ರಕ್ಷಿಸುತ್ತದೆ. ಸ್ಮೂದಿ ಮಾಡಿ ಕುಡಿಯುವುದರಿಂದ ದೇಹದ ಈ ನೈಸರ್ಗಿಕ ಕ್ರಿಯೆಯನ್ನೇ ನೀವು ದೂರ ಮಾಡಿ ಸುಲಭವಾಗಿ ಆಹಾರವನ್ನು ಹೊಟ್ಟೆಗೆ ಕಳುಹಿಸುತ್ತಿದ್ದೀರಿ ಎಂದಾಯಿತು. ಬಾಯಿಗೆ ಕೆಲಸವೇ ಇಲ್ಲ. ಜೀರ್ಣಕ್ರಿಗೆ ಸಹಾಐ ಆಡುವ ಅಂಶಗಳೂ ಅಲ್ಲಿ ಸೇರಲಿಲ್ಲ!
  • ಸ್ಮೂದಿಯನ್ನು ಕುಡಿಯುವುದರಿಂದ ಬಾಯಿಗೆ ಕೆಲಸವಿಲ್ಲದೆ ಅದು ನೇರವಾಗಿ ಹೊಟ್ಟೆಗೆ ಇಳಿಯುತ್ತದೆ. ಅಲ್ಲಿ ನಿಮ್ಮ ಜೊಲ್ಲುರಸ ಅಂದರೆ ಲಾಲಾರಸ ಈ ಆಹಾರದ ಜೊತೆಗೆ ಸರಿಯಾಗಿ ಸೇರಲಿಲ್ಲ ಅಂತಾಯಿತು. ಇದರಿಂದಾಗಿ ನಿಮ್ಮ ಜೀರ್ಣಕ್ರಿಯೆಯ ಸಾಮರ್ಥ್ಯ ನಿಧಾನವಾಗಿ ಕುಂಠಿತವಾಗುತ್ತಾ ಬರುತ್ತದೆ. ಕೇವಲ ಜೀರ್ಣಕ್ರಿಯೆಯಷ್ಟೇ ಅಲ್ಲ, ರೋಗನಿರೋಧಕ ಶಕ್ತಿಯೂ ಕುಂಠಿತವಾಗುತ್ತಾ ಬರುತ್ತದೆ. ಇಂತಹ ಬಗೆಯ ಆಹಾರಕ್ಕೇ ದೇಹ ಹೊಂದಿಕೊಂಡು, ಜೀರ್ಣ ಮಾಡುವ ಶಕ್ತಿ ಇಳಿಕೆಯಾಗುತ್ತದೆ.
  • ಸ್ಮೂದಿಯು ದ್ರವರೂಪದಲ್ಲಿರುವುದರಿಂದ ಸಹಜವಾಗಿಯೇ, ಸ್ಮೂದಿಯಲ್ಲಿರುವ ನೈಸರ್ಗಿಕ ಸಕ್ಕರೆ ಬಹುಬೇಗನೆ ರಕ್ತಕ್ಕೆ ಸೇರಿ ರಕ್ತದಲ್ಲಿರುವ ಸಕ್ಕರೆಯ ಪ್ರಮಾಣ ಇದ್ದಕ್ಕಿದ್ದಂತೆ ಏರಿಕೆಯಾಗುತ್ತದೆ. ಇದರಿಂದಾಗಿ ಸುಸ್ತಿನ ಅನುಭವ, ತಲೆಸುತ್ತಿನಂತ ಸಮಸ್ಯೆಗಳೂ ಮುಂದೆ ತಲೆದೋರಬಹುದು. ಹಣ್ಣುಗಳು, ಹಂಪಲುಗಳು ಹಾಗೂ ತರಕಾರಿಗಳಲ್ಲಿರುವ ನಾರಿನಂಶ ಸರಿಯಾಗಿ ಹೊಟ್ಟೆ ಸೇರದೆ, ವ್ಯರ್ಥವಾಗಬಹುದು. ಪೋಷಕಾಂಶವೂ ನಷ್ಟವಾಗಬಹುದು. ಇವೆಲ್ಲವನ್ನೂ ಜಗಿದು ತಿನ್ನುವಾಗ ಸಿಗಬಃಉದಾದ ಆರೋಗ್ಯದ ಲಾಭಗಳೆಲ್ಲವೂ ಸ್ಮೂದಿಯ ಮೂಲಕ ಸಿಗದೇ ಹೋಗುವ ಸಾಧ್ಯತೆಗಳೇ ಹೆಚ್ಚು.
  • ಕೆಲವು ಮಂದಿಗೆ ದೇಹದಲ್ಲಿರುವ ಸಕ್ಕರೆಯ ಅಂಶದ ಏರಿಕೆಯಿಂದಾಗಿ ತಕ್ಷಣ ತಲೆಸುತ್ತು, ತಲೆನೋವು ಮತ್ತಿತರ ಸಮಸ್ಯೆಯೂ ಕಾಡಬಹುದು. ಆದರೆ, ಸ್ಮೂದಿಗೆ ಬಳಸಿದ ಹಣ್ಣು ಹಂಪಲು ಅಥವಾ ತರಕಾರಿ, ಒಣ ಹಣ್ಣು ಬೀಜಗಳನ್ನು ಹಾಗೆಯೇ ತಿನ್ನುವುದರಿಂದ ಈ ಪರಿಣಾಮಗಳು ಕಾಣಿಸಿಕೊಳ್ಳಲಾರದು. ಹಾಗಾಗಿ, ಸ್ಮೂದಿಗಿಂತ ಹಾಗೆಯೇ ತಿನ್ನುವುದೇ ಆರೋಗ್ಯಕ್ಕೆ ಹೆಚ್ಚು ಸೂಕ್ತ ಎಂಬುದನ್ನು ನೆನಪಿಡಿ.

ಇದನ್ನೂ ಓದಿ: Nosebleeds In Summer: ಬೇಸಿಗೆಯ ತಾಪಕ್ಕೆ ಮೂಗಿನಲ್ಲಿ ರಕ್ತಸ್ರಾವವೇ? ತಡೆಯಲು ಇಲ್ಲಿವೆ ಸರಳ ಉಪಾಯ

Continue Reading

ಆಹಾರ/ಅಡುಗೆ

Which Type Of Roti Is Best: ಯಾರಿಗೆ ಯಾವ ರೊಟ್ಟಿ ಸೂಕ್ತ? ತಿನ್ನುವ ಮೊದಲು ತಿಳಿದುಕೊಂಡಿರಿ!

ಹಲವಾರು ರೀತಿಯ ರೊಟ್ಟಿಗಳು ಆಹಾರವಾಗಿ ಜನಪ್ರಿಯತೆ ಗಳಿಸಿವೆ. ಒಂದೊಂದು ಪ್ರಾಂತ್ಯದಲ್ಲಿ ಒಂದೊಂದು ಧಾನ್ಯ ಪರಂಪರಾಗತ ಆಹಾರವಾಗಿಯೂ ಬಳಕೆಯಲ್ಲಿದೆ. ಆದರೆ ಯಾರಿಗೆ ಯಾವ ರೊಟ್ಟಿ ಒಳ್ಳೆಯದು? ಯಾವ ರೊಟ್ಟಿಯಲ್ಲಿ ಏನೇನು ಸತ್ವಗಳು ದೊರೆಯುತ್ತವೆ? ಇಲ್ಲಿವೆ (Which Type Of Roti Is Best) ವಿವರ.

VISTARANEWS.COM


on

Which Type Of Roti Is Best
Koo

ಭಾರತದಲ್ಲಿ ಎಲ್ಲವೂ ವೈವಿಧ್ಯಮಯ, ಊಟವೂ ಸೇರಿ. ಅನ್ನ ಎಂದರೆ ಎಲ್ಲವೂ ಒಂದೇ ಅಲ್ಲ. ಬಿಳಿಯಕ್ಕಿ, ಕೆಂಪಕ್ಕಿ, ಕುಚ್ಚಲಕ್ಕಿ ಮುಂತಾದ ಹಲವು ರೀತಿಯ ಅಕ್ಕಿಗಳಲ್ಲಿ ಅನ್ನ ಮಾಡಲಾಗುತ್ತದೆ. ರೊಟ್ಟಿ ಎಂದರೆ ಅದರಲ್ಲೂ ಭಿನ್ನತೆಯಿದೆ. ಅಕ್ಕಿರೊಟ್ಟಿ ದಕ್ಷಿಣ ಭಾರತದಲ್ಲಿ ಹೆಚ್ಚು ಪ್ರಚಲಿತ; ಗೋಧಿ ರೊಟ್ಟಿ ಭಾರತದೆಲ್ಲೆಡೆ ಚಾಲ್ತಿಯಲ್ಲಿದೆ; ಜೋಳದ್ದು ಕರ್ನಾಟಕವೂ ಸೇರಿದಂತೆ ಹಲವೆಡೆ ಬಳಕೆಯಲ್ಲಿದೆ; ರಾಗಿ ರೊಟ್ಟಿ ಕರ್ನಾಟಕದಲ್ಲಿ ಹೆಚ್ಚು ಪ್ರಿಯ; ಸಜ್ಜೆ ರೊಟ್ಟಿ ಗುಜರಾತ್‌, ರಾಜಸ್ಥಾನಗಳಲ್ಲಿ ಮುಖ್ಯ ಆಹಾರ; ಪಂಜಾಬ್‌ ಪ್ರಾಂತ್ಯದಲ್ಲಿ ಮೈದಾ ನಾನ್‌ಗಳು ಜನಪ್ರಿಯ. ಆದರೆ ಈ ಎಲ್ಲಾ ರೊಟ್ಟಿಗಳಲ್ಲಿ ತೂಕ ಇಳಿಸುವವರಿಗೆ ಸೂಕ್ತವಾಗಿದ್ದು (Which Type Of Roti Is Best) ಯಾವುದು? ಇತ್ತೀಚಿನ ವರ್ಷಗಳಲ್ಲಿ ಸಿರಿಧಾನ್ಯದ ಬಳಕೆ ಹೆಚ್ಚಿದೆ. ಆರೋಗ್ಯದ ಬಗ್ಗೆ ಕಾಳಜಿಯೂ ಹೆಚ್ಚಿರುವುದರಿಂದ, ಯಾವುದು ಹೆಚ್ಚು ಆರೋಗ್ಯಕರ ಎಂಬ ಚರ್ಚೆಗೆ ಕಾವೇರಿದೆ. ಆಹಾರ ತಜ್ಞರು ಈ ಬಗ್ಗೆ ನಾನಾ ರೀತಿಯ ವಿವರಣೆಗಳನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಲವು ರೀತಿಯ ರೊಟ್ಟಿಗಳ ಸತ್ವ ಮತ್ತು ಕ್ಯಾಲೊರಿಗಳ ವಿವರಗಳನ್ನು ಇಲ್ಲಿ ನೀಡಲಾಗಿದೆ. ಇವೆಲ್ಲವೂ ಆರೋಗ್ಯಕ್ಕೆ ಒಳ್ಳೆಯದೇ ಆದರೂ ಒಂದೊಂದು ಧಾನ್ಯಗಳಿಗೂ ಅದರದ್ದೇ ಆದ ಅನನ್ಯತೆಯಿದೆ. ಹಾಗಾಗಿ ಅವುಗಳ ಸತ್ವಗಳು ಭಿನ್ನವಾಗುತ್ತವೆ.

Wheat Roti

ಗೋಧಿ ರೊಟ್ಟಿ

ಒಂದು ಮಧ್ಯಮ ಗಾತ್ರದ ಗೋಧಿ ರೊಟ್ಟಿಯಲ್ಲಿ 70-80 ಕ್ಯಾಲರಿ ಶಕ್ತಿ ದೊರೆಯುತ್ತದೆ. ಇದರಲ್ಲಿ ನಾರು, ಪಿಷ್ಟ, ಅಲ್ಪ ಪ್ರಮಾಣದ ಪ್ರೊಟೀನ್‌ ಮತ್ತು ಕೊಬ್ಬು, ಮ್ಯಾಂಗನೀಸ್‌, ಫಾಸ್ಫರಸ್‌ನಂಥ ಖನಿಜಗಳು, ಹಲವು ರೀತಿಯ ಬಿ ವಿಟಮಿನ್‌ಗಳು ಇದರಲ್ಲಿ ವಿಫುಲವಾಗಿವೆ. ಈ ಧಾನ್ಯ ದೊರೆಯುವುದು, ಇದರಲ್ಲಿ ಆಹಾರ ತಯಾರಿಸುವುದು ಕಷ್ವವಲ್ಲ ಮತ್ತು ಇದರ ರುಚಿಯೂ ಇಷ್ಟವಾಗುವಂಥದ್ದು.

Millet Roti

ರಾಗಿ ರೊಟ್ಟಿ

ಒಂದು ರಾಗಿ ರೊಟ್ಟಿಯಲ್ಲಿ 80-90 ಕ್ಯಾಲರಿ ಶಕ್ತಿ ದೊರೆಯುತ್ತದೆ. ಜೊತೆಗೆ, ಕ್ಯಾಲ್ಶಿಯಂ, ಕಬ್ಬಿಣ, ನಾರು, ಪ್ರೊಟೀನ್‌, ಪಿಷ್ಟ, ಉತ್ಕರ್ಷಣ ನಿರೋಧಕಗಳಿಂದ ಭರಿತವಾಗಿದೆ. ಹಲವು ರೀತಿಯ ಖನಿಜಾಂಶಗಳು ಇದರಲ್ಲಿವೆ. ಮೂಳೆಗಳ ಆರೋಗ್ಯಕ್ಕೆ ಇದು ಸೂಕ್ತವಾದದ್ದು ಮಾತ್ರವಲ್ಲ, ಮಧುಮೇಹಿಗಳಿಗೆ ಇದು ಒಳ್ಳೆಯ ಆಹಾರವಾಗಿದ್ದು, ರಕ್ತದಲ್ಲಿ ಸಕ್ಕರೆಯಂಶ ಏರದಂತೆ ಕಾಪಾಡಲು ನೆರವಾಗುತ್ತದೆ. ರಾಗಿ ತಿಂದವ ನಿರೋಗಿ ಎಂಬ ಮಾತು ವ್ಯಾಪಕ ಮನ್ನಣೆ ಪಡೆದಿದೆ.

jolada Roti

ಜೋಳದ ರೊಟ್ಟಿ

ಒಂದು ದೊಡ್ಡ ಜೋಳದ ರೊಟ್ಟಿಯಲ್ಲಿ 50-60 ಕ್ಯಾಲರಿ ಶಕ್ತಿ ದೊರೆಯುತ್ತದೆ. ಜೋಳ ತಿಂದವ ತೋಳದಂತಿರಬಹುದು ಎಂಬುದು ಜನಪ್ರಿಯ ಗಾದೆ. ಗ್ಲೂಟೆನ್‌ ರಹಿತವಾದ ಆಹಾರ ಇದಾಗಿದ್ದು, ಮಧುಮೇಹಿಗಳಿಗೆ ಸೂಕ್ತವಾದ ಆಹಾರವಿದು. ಇದರಲ್ಲಿ ಪ್ರೊಟೀನ್‌, ಕೊಬ್ಬು, ನಾರು, ಪಿಷ್ಟ, ಕ್ಯಾಲ್ಶಿಯಂ, ರಂಜಕ, ಕಬ್ಬಿಣ ಮುಂತಾದ ಸೂಕ್ಷ್ಮ ಪೋಷಕಾಂಶಗಳು ಬಹಳಷ್ಟಿವೆ.

Multigrain Roti

ಬಹುಧಾನ್ಯಗಳ ರೊಟ್ಟಿ

ಇದರಲ್ಲಿ ಹಲವಾರು ರೀತಿಯ ಧಾನ್ಯಗಳನ್ನು ಮಿಶ್ರ ಮಾಡಲಾಗುತ್ತದೆ. ಅಂದಾಜಿಗೆ ಹೇಳುವುದಾದರೆ, ಒಂದು ರೊಟ್ಟಿಯಲ್ಲಿ 80-100 ಕ್ಯಾಲರಿ ಶಕ್ತಿ ದೊರೆಯಬಹುದು. ಆದರೆ ಯಾವ್ಯಾವ ಧಾನ್ಯಗಳನ್ನು ಎಷ್ಟು ಪ್ರಮಾಣದಲ್ಲಿ ಮಿಶ್ರ ಮಾಡಲಾಗುತ್ತದೆ ಎನ್ನುವುದರ ಮೇಲೆ, ಇದರ ಕ್ಯಾಲರಿಗಳು ನಿರ್ಧಾರವಾಗುತ್ತದೆ. ಇದರಿಂದ ಹಲವು ರೀತಿಯ ಧಾನ್ಯಗಳು ಮತ್ತು ಸಿರಿಧಾನ್ಯಗಳು ಒಟ್ಟಿಗೇ ದೇಹಕ್ಕೆ ದೊರೆಯುವುದಕ್ಕೆ ಸಾಧ್ಯ. ಇದರಲ್ಲಿ ಹಲವು ರೀತಿಯ ವಿಟಮಿನ್‌ ಮತ್ತು ಖನಿಜಗಳು, ನಾರು ಹೇರಳವಾಗಿ ದೊರೆಯುತ್ತದೆ.

ಇದನ್ನೂ ಓದಿ: Health Benefits Of Tofu: ಪನೀರ್‌ನಂತೆ ಕಾಣುವ ಈ ಆಹಾರದ ಬಗ್ಗೆ ನಿಮಗೆ ಗೊತ್ತೆ?

ಯಾವುದು ಸೂಕ್ತ?

ಗ್ಲೂಟೆನ್‌ ಮುಕ್ತ ಆಹಾರ ಬೇಕೆಂದರೆ ರಾಗಿ ಮತ್ತು ಜೋಳದ ರೊಟ್ಟಿಗಳು ಸೂಕ್ತ. ಬಹುಧಾನ್ಯಗಳಲ್ಲಿ ಗೋಧಿ ಮಿಶ್ರವಾಗಿರುವ ಸಾಧ್ಯತೆ ಹೆಚ್ಚಾಗಿರುವುದರಿಂದ ಇದನ್ನು ಬಿಡುವುದು ಒಳಿತು. ಮಧುಮೇಹ ನಿಯಂತ್ರಣಕ್ಕೆ ಪ್ರಯತ್ನಿಸುತ್ತಿದ್ದರೆ ರಾಗಿ ಮತ್ತು ಜೋಳದ ರೊಟ್ಟಿಗಳು ಒಳ್ಳೆಯದು. ಹೆಚ್ಚು ಸಮತೋಲಿತ ಆಹಾರದ ಬಗ್ಗೆ ಗಮನ ಹೊಂದಿದ್ದರೆ ಬಹುಧಾನ್ಯಗಳ ರೊಟ್ಟಿ ಒಳ್ಳೆಯ ಆಯ್ಕೆ. ತೂಕ ಇಳಿಸುವುದು ಮುಖ್ಯ ಉದ್ದೇಶವಾಗಿದ್ದರೆ ಜೋಳದ ರೊಟ್ಟಿ ಸೂಕ್ತವಾದದ್ದು.

Continue Reading

ಆರೋಗ್ಯ

Colour In Food: ನಾವು ಸೇವಿಸುವ ಕಲ್ಲಂಗಡಿ ಸುರಕ್ಷಿತವೇ?; ಆಹಾರ ತಜ್ಞರು ಏನು ಹೇಳಿದ್ದಾರೆ?

ಕೆಂಪುಕೆಂಪಾಗಿರುವ ಕಲ್ಲಂಗಡಿ ಹಣ್ಣುಗಳಿಗೆ ನಿಜವಾಗಲೂ ಬಣ್ಣ ಬರಲು (Colour In Food) ಚುಚ್ಚು ಮದ್ದು ನೀಡಲಾಗುತ್ತದೆಯೇ? ಈ ಕುರಿತು ಆಹಾರ ತಜ್ಞರು ಏನು ಹೇಳಿದ್ದಾರೆ? ಇಲ್ಲಿದೆ ಮಾಹಿತಿ.

VISTARANEWS.COM


on

By

Color In Food
Koo

ಮಾರುಕಟ್ಟೆಯಲ್ಲಿ (market) ಕೆಂಪು ಕೆಂಪಾಗಿರುವ (Colour In Food) ಕಲ್ಲಂಗಡಿ (Watermelon) ಹಣ್ಣನ್ನು ಕಂಡರೆ ಎಂಥವರ ಬಾಯಲ್ಲೂ ನೀರೂರುತ್ತದೆ. ಆದರೆ ಇತ್ತೀಚೆಗಂತೂ ಈ ಹಣ್ಣುಗಳಿಗೆ ಚುಚ್ಚು ಮದ್ದು (inject the harmful colour) ನೀಡಲಾಗುತ್ತದೆ ಎಂಬ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ (social media) ಭಾರಿ ಚರ್ಚೆಯಾಗುತ್ತಿದೆ. ಆದರೆ ಇದು ನಿಜ ಹೌದೋ ಅಲ್ಲವೋ ಎನ್ನುವ ಕುರಿತು ಆಹಾರ ತಜ್ಞರು (Food expert) ಹೇಳುವುದೇನು ಗೊತ್ತೇ?

ಮಾರುಕಟ್ಟೆಯಲ್ಲಿ ಸಿಗುವ ಕಲ್ಲಂಗಡಿ ಹಣ್ಣುಗಳ ಬಗ್ಗೆ ಚಿಂತಿಸುವುದು ಬಿಡಿ. ಇದಕ್ಕೆ ಹಾನಿಕಾರಕ ಬಣ್ಣಗಳಿಂದ ಚುಚ್ಚಲಾಗುತ್ತದೆ ಎಂಬ ವರದಿ ಸರಿಯಲ್ಲ ಎಂದು ಆಹಾರ ಪರಿಣತರು ಹೇಳಿದ್ದಾರೆ.

ಹಣ್ಣು ಮಾರಾಟಗಾರರು ಕಲ್ಲಂಗಡಿಗಳಿಗೆ ರೆಡ್-ಬಿ ಎಂದು ಕರೆಯಲ್ಪಡುವ ಹಾನಿಕಾರಕ ಬಣ್ಣದ ಎರಿಥ್ರೋಸಿನ್- ಬಿ ಅನ್ನು ಚುಚ್ಚುತ್ತಾರೆ ಎನ್ನುವ ಮಾಧ್ಯಮ ವರದಿಗಳ ಕುರಿತು ಮಾಧ್ಯಮದವರನ್ನು ಹಿರಿಯ ಆಹಾರ ಪರಿಣತರು ತರಾಟೆಗೆ ತೆಗೆದುಕೊಂಡಿದ್ದಾರೆ.

ಅವರ ಪ್ರಕಾರ, ಕಲ್ಲಂಗಡಿ ಹಣ್ಣಿಗೆ ಒಂದೇ ಸ್ಥಳದಲ್ಲಿ ಬಣ್ಣವನ್ನು ಚುಚ್ಚುವುದರಿಂದ ನಿರ್ದಿಷ್ಟ ಭಾಗದಲ್ಲಿ ಮಾತ್ರ ಹಣ್ಣು ಕೆಂಪಾಗಲು ಸಾಧ್ಯ. ಸಂಪೂರ್ಣ ಹಣ್ಣು ಕೆಂಪಾಗುವುದಿಲ್ಲ. ಒಂದು ಸ್ಥಳದಲ್ಲಿ ಕಲ್ಲಂಗಡಿಗೆ ಬಣ್ಣವನ್ನು ಚುಚ್ಚಿದರೆ ಅಲ್ಲಿನ ಪ್ರದೇಶ ಮಾತ್ರ ಬಣ್ಣ ಪಡೆಯುತ್ತದೆ. ಆದರೆ ಮಾಧ್ಯಮಗಳಲ್ಲಿ ತೋರಿಸಿರುವ ಹಣ್ಣುಗಳು ಸಂಪೂರ್ಣವಾಗಿ, ಸಮವಾಗಿ ಕೆಂಪು ಬಣ್ಣದಲ್ಲಿದೆ. ಇದು ಹೇಗೆ ಸಾಧ್ಯ ಎಂದು ಪ್ರಶ್ನಿಸಿರುವ ಅವರು ಇದರಲ್ಲಿ ಫೋಟೋಶಾಪ್ ಕಾರ್ಯನಿರ್ವಹಿಸಿದೆ.


ಅನೇಕ ಮಂದಿ ಕಲ್ಲಂಗಡಿಯಲ್ಲಿ ಬಳಸುವ ಸಾಮಾನ್ಯ ಕಲಬೆರಕೆ ಎರಿಥ್ರೋಸಿನ್ ಬಿ ಎಂದು ಹೇಳಿದ್ದಾರೆ. ಇದು ಕೆಂಪು ಬಣ್ಣವಾಗಿದ್ದು ಅದು ಹಣ್ಣನ್ನು ಮಾಗಿದ ಮತ್ತು ರಸಭರಿತವಾಗಿ ಕಾಣುವಂತೆ ಮಾಡುತ್ತದೆ. ಇದು ಕಲ್ಲಂಗಡಿಗಳ ಬಾಳಿಕೆ ಅವಧಿಯನ್ನು ಹೆಚ್ಚಿಸುತ್ತದೆ ಎನ್ನಲಾಗುತ್ತದೆ.

ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಇದರ ವಿಡಿಯೋ ಭಾರಿ ವೈರಲ್ ಆಗಿದೆ. ಯೂಟ್ಯೂಬ್ ಚಾನೆಲ್‌ನಲ್ಲಿ ಪೋಸ್ಟ್ ಮಾಡಿದ ಕ್ಲಿಪ್ ನಲ್ಲಿ ಈ ಪ್ರಯೋಗ ಮಾಡುತ್ತಿರುವ ವ್ಯಕ್ತಿಯೊಬ್ಬ ಕಲ್ಲಂಗಡಿಗೆ ರಾಸಾಯನಿಕಗಳನ್ನು ಚುಚ್ಚುತ್ತಿರುವುದನ್ನು ಕಾಣಬಹುದು.


ಎರಿಥ್ರೋಸಿನ್ ಬಿ ಸೇವನೆ ಪರಿಣಾಮ

WebMD ಪ್ರಕಾರ, ಎರಿಥ್ರೋಸಿನ್ ಬಿ ಸೇವನೆಯಿಂದ ವಾಕರಿಕೆ, ವಾಂತಿ, ಅತಿಸಾರ, ಹೊಟ್ಟೆ ನೋವು ಮತ್ತು ಹಸಿವಾಗದಿರುವುದಕ್ಕೆ ಕಾರಣವಾಗಬಹುದು. ಪ್ರಸ್ತುತ ಸಂಶೋಧನೆ ಮತ್ತು ಆಹಾರ ವಿಜ್ಞಾನ ಜರ್ನಲ್‌ನಲ್ಲಿನ ಅಧ್ಯಯನವು ಈ ವಿಷಕಾರಿ ಸಂಯುಕ್ತವು ಗರ್ಭಿಣಿಯರ ಹೊಟ್ಟೆಯಲ್ಲಿರುವ ಭ್ರೂಣಗಳ ಮೇಲೆ ಪರಿಣಾಮ ಬೀರುತ್ತದೆ. ಇದು ಬಂಜೆತನದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಹೇಳಿದೆ.

ಇದನ್ನೂ ಓದಿ: Fruit Juice Side Effects: ಹಣ್ಣು ತಿಂದರೆ ಒಳ್ಳೆಯದೋ, ಹಣ್ಣಿನ ಜ್ಯೂಸ್‌ ಕುಡಿದರೆ ಒಳ್ಳೆಯದೋ?

ಈ ಚುಚ್ಚುಮದ್ದು ಹಾಕಿರುವ ಹಣ್ಣುಗಳು ವೇಗವಾಗಿ ಕೊಳೆಯಲು ಪ್ರಾರಂಭಿಸುತ್ತದೆ. ಹೀಗಾಗಿ ಇದು ಹೆಚ್ಚಿನ ಕಲ್ಲಂಗಡಿಗಳಿಗೆ ಬಳಸಲು ಸಾಧ್ಯವಿಲ್ಲ ಎಂದು ಆಹಾರ ಪರಿಣತರು ಹೇಳಿದ್ದಾರೆ.

ಚುಚ್ಚುಮದ್ದುಗಳನ್ನು ಹಾಕಿರುವ ಹಣ್ಣುಗಳಲ್ಲಿ ರಂಧ್ರಗಳು ಕಾಣಿಸುತ್ತವೆ. ಭಾರತದ ಬೇಸಿಗೆಯಲ್ಲಿ ಈ ಹಣ್ಣುಗಳು ವೇಗವಾಗಿ ಕೊಳೆಯಲು ಕಾರಣವಾಗುತ್ತವೆ. ಹೀಗಾಗಿ ಭಾರತೀಯ ರೈತರು ಈ ಅಪಾಯವನ್ನು ತೆಗೆದುಕೊಳ್ಳುವುದಿಲ್ಲ ಎಂದವರು ಅಭಿಪ್ರಾಯಪಟ್ಟಿದ್ದಾರೆ.

Continue Reading
Advertisement
LPG Price Cut
ವಾಣಿಜ್ಯ4 mins ago

LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ ಇಳಿಕೆ

Paris Olympics 2024
ಕ್ರೀಡೆ11 mins ago

Paris Olympics 2024: ಒಲಿಂಪಿಕ್ಸ್‌ಗೆ‌ ಅರ್ಹತೆ ಪಡೆದ ಬಾಕ್ಸರ್ ನಿಶಾಂತ್ ದೇವ್

Dolly Dhananjay kotee distribution rights held by KRG Studios
ಸ್ಯಾಂಡಲ್ ವುಡ್15 mins ago

Dolly Dhananjay: ಕೆಆರ್​ಜಿ ಸ್ಟುಡಿಯೋಸ್ ಪಾಲಾದ ‘ಕೋಟಿ‌’ ವಿತರಣಾ ಹಕ್ಕು; ರಿಲೀಸ್‌ಗೆ ಕೌಂಟ್‌ ಡೌನ್!

bhavani revanna case
ಪ್ರಮುಖ ಸುದ್ದಿ39 mins ago

Bhavani Revanna: `ಮನೆಗೆ ಬನ್ನಿʼ ಎಂದ ಭವಾನಿ ರೇವಣ್ಣ ಮನೆಯಲ್ಲಿಲ್ಲ! ಹಾಗಾದ್ರೆ ಎಲ್ಲಿ?

KCET Result 2024
ಬೆಂಗಳೂರು39 mins ago

KCET Result 2024 : ಜೂನ್‌ ಮೊದಲ ವಾರ ಸಿಇಟಿ ಪರೀಕ್ಷೆ ಫಲಿತಾಂಶ ಖಚಿತ!

Heat Wave
ದೇಶ58 mins ago

Heat Wave: ಬಿಹಾರದಲ್ಲಿ ಬಿಸಿಲಾಘಾತ; ಶಾಖಕ್ಕೆ 10 ಮತಗಟ್ಟೆ ಸಿಬ್ಬಂದಿ ಸೇರಿ 14 ಮಂದಿ ಬಲಿ

driving licence
ಪ್ರಮುಖ ಸುದ್ದಿ1 hour ago

New Driving Licence Rules: ಇಂದಿನಿಂದ ಹೊಸ ಟ್ರಾಫಿಕ್‌ ರೂಲ್ಸ್: ತರಬೇತಿ ಕೇಂದ್ರಗಳಲ್ಲೇ ಟೆಸ್ಟ್‌, ಅಪ್ರಾಪ್ತರಿಗೆ ವಾಹನ ಕೊಟ್ರೆ ನೋಂದಣಿ ರದ್ದು

Cardamom Benefits
ಆರೋಗ್ಯ2 hours ago

Cardamom Benefits: ಏಲಕ್ಕಿ ಕೇವಲ ಘಮದಲ್ಲಷ್ಟೇ ಅಲ್ಲ, ಇದರ ಪ್ರಯೋಜನಗಳು ಎಷ್ಟೊಂದು!

Karnataka Weather Forecast
ಮಳೆ2 hours ago

Karnataka Weather : ವಾರಾಂತ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಿಸ್‌ಯಿಲ್ಲದೇ ಮಳೆ ಹಾಜರ್‌

Healthy Salad Tips
ಆಹಾರ/ಅಡುಗೆ3 hours ago

Healthy Salad Tips: ನೀವು ಸಲಾಡ್‌ ಪ್ರಿಯರೇ? ಸಲಾಡ್‌ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌