ವಿಸ್ತಾರ ವಿಶ್ಲೇಷಣೆ | ಮೂರನೇ ಶಕ್ತಿಕೇಂದ್ರ ಆಗಲಿದ್ದಾರ ಮಲ್ಲಿಕಾರ್ಜುನ ಖರ್ಗೆ?: ಯಾವ ಬಣಕ್ಕೆ ಲಾಭ, ಯಾರಿಗೆ ನಷ್ಟ? - Vistara News

ಕರ್ನಾಟಕ

ವಿಸ್ತಾರ ವಿಶ್ಲೇಷಣೆ | ಮೂರನೇ ಶಕ್ತಿಕೇಂದ್ರ ಆಗಲಿದ್ದಾರ ಮಲ್ಲಿಕಾರ್ಜುನ ಖರ್ಗೆ?: ಯಾವ ಬಣಕ್ಕೆ ಲಾಭ, ಯಾರಿಗೆ ನಷ್ಟ?

ಕರ್ನಾಟಕದ ಅನೇಕ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಸೋಲಲು ಎದುರಾಳಿಗಳ ಶಕ್ತಿಗಿಂತಲೂ ಕಾಂಗ್ರೆಸ್‌ನ ಒಳಜಗಳವೇ ಕಾರಣ ಎನ್ನುವುದು ಅನೇಕ ಬಾರಿ ಸಾಬೀತಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿರುವ ಸಂದರ್ಭದಲ್ಲಿ ಈ ಆಮತರಿಕ ಸಂಘರ್ಷ ಯಾವ ಸ್ವರೂಪ ಪಡೆಯುತ್ತದೆ ನೋಡಬೇಕಿದೆ.

VISTARANEWS.COM


on

congress to organise scst aikyata samavesha in january
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಮೇಶ ದೊಡ್ಡಪುರ ಬೆಂಗಳೂರು
ಎಐಸಿಸಿ ಅಧ್ಯಕ್ಷ (Congress President) ಸ್ಥಾನಕ್ಕೆ ಅಕ್ಟೋಬರ್ 17ರಂದು ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದ್ದು, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದರ ಜತೆಗೇ, ಕರ್ನಾಟಕ ಕಾಂಗ್ರೆಸ್‌ನಲ್ಲಿ ಮೂರನೇ ಶಕ್ತಿ ಕೇಂದ್ರ ಉದಯವಾಯಿತೇ ಎಂಬ ಮಾತುಗಳೂ ಕೇಳಿಬರುತ್ತಿವೆ.

ಕಳೆದ 22 ವರ್ಷದಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಮನೆತನ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾದಂತಾಗಿದೆ. ಇದು ರಾಷ್ಟ್ರಮಟ್ಟದ ವಿಚಾರವಾದರೆ, ಎಸ್‌. ನಿಜಲಿಂಗಪ್ಪ ಅವರ ನಂತರ ಕಾಂಗ್ರೆಸ್‌ ಅಧ್ಯಕ್ಷರಾದ ಎರಡನೇ ಕನ್ನಡಿಗ ಎಂಬ ಹೆಗ್ಗಳಿಕೆಗೂ ಖರ್ಗೆ ಪಾತ್ರರಾಗಿದ್ದಾರೆ. ಇದು ಒಟ್ಟಾರೆ ಕರ್ನಾಟಕ ಕಾಂಗ್ರೆಸ್‌ನ ವಿಚಾರವಾದರೆ, ಮುಂಬರುವ ವಿಧಾನಸಭೆಯ ಮೇಲೆ ಪರಿಣಾಮ ಬೀರುತ್ತದೆ.

ಈಗಾಗಲೆ ರಾಜ್ಯ ಕಾಂಗ್ರೆಸ್‌ನಲ್ಲಿ ಕನಿಷ್ಟ ಎರಡು ಬಣಗಳಿರುವುದು ಸ್ಪಷ್ಟವಾಗಿದೆ. ಮೂಲ ಕಾಂಗ್ರೆಸಿಗರಲ್ಲಿ ಬಹಳಷ್ಟು ಜನರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ಜತೆಗಿದ್ದಾರೆ. ಕೆಲ ಮೂಲ ಕಾಂಗ್ರೆಸಿಗರ ಜತೆಗೆ ಹೊರಗಿನಿಂದ ಬಂವರೆಲ್ಲರೂ ಸಿದ್ದರಾಮಯ್ಯ ಬೆನ್ನಿಗಿದ್ದಾರೆ. ಇದು ಕಾಂಗ್ರೆಸ್‌ ಪಕ್ಷಕ್ಕೆ ಉಪಯುಕ್ತ ಎಂಬ ವ್ಯಾಖ್ಯಾನವನ್ನು ಕೆಲವರು ಮಾಡುತ್ತಿದ್ದಾರೆ.

ಒಂದೆಡೆ ಸಿದ್ದರಾಮಯ್ಯ, ಮತ್ತೊಂದೆಡೆ ಡಿ.ಕೆ. ಶಿವಕುಮಾರ್‌ ಬಣ ಇರುವುದರಿಂದ ಕಾಂಗ್ರೆಸ್‌ ಪಕ್ಷದಲ್ಲಿ ಸ್ಪರ್ಧಾತ್ಮಕತೆ ಏರ್ಪಡುತ್ತದೆ. ಯಾರ ಕಡೆಯವರು ಹೆಚ್ಚಿನ ಶಾಸಕರಾಗುತ್ತಾರೆಯೋ ಅವರು ಸಿಎಂ ಆಗುತ್ತಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಹೆಚ್ಚು ಶಾಸಕರು ತಮ್ಮ ಬೆಂಬಲಕ್ಕೆ ಇದ್ದರೆ ತಮ್ಮನ್ನೇ ಹೈಕಮಾಂಡ್‌ ಸಹ ಸಿಎಂ ಎಂದು ಘೋಷಿಸುತ್ತದೆ ಎಂದು ಇಬ್ಬರಿಗೂ ಎನ್ನಿಸುತ್ತದೆ. ಹಾಗಾಗಿ ಹೆಚ್ಚು ಶಾಸಕರನ್ನು ಗೆಲ್ಲಿಸಿಕೊಂಡುಬರಲು ಎಲ್ಲರೂ ಪ್ರಯತ್ನಿಸುತ್ತಾರೆ ಎಂದು ಕೆಲ ಕಾಂಗ್ರೆಸಿಗರು ಥಿಯರಿ ಹರಿಬಿಡುತ್ತಿದ್ದಾರೆ. ಆದರೆ ಕಾಂಗ್ರೆಸ್‌ ಇತಿಹಾಸ ಹಾಗಿಲ್ಲ.

ಒಬ್ಬ ನಾಯಕನಿಗೆ ಟಿಕೆಟ್‌ ನೀಡಿದರೆ ಮತ್ತೊಬ್ಬ ಟಿಕೆಟ್‌ ಆಕಾಂಕ್ಷಿ ಬೆಂಬಲ ನೀಡುವುದಿಲ್ಲ. ಸುಮ್ಮನೆಯೂ ಕೂರುವುದಿಲ್ಲ. ಟಿಕೆಟ್‌ ಸಿಕ್ಕವನನ್ನೇ ಸೋಲಿಸಲು ಪ್ರತಿಪಕ್ಷಗಳೊಂದಿಗೂ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳು ಕೈ ಜೋಡಿಸಿದ ಉದಾಹರಣೆಗಳೂ ಇವೆ. ಎಲ್ಲಕ್ಕಿಂತ ಹೆಚ್ಚಾಗಿ, ಮುಂದೆ ತಮ್ಮ ಸಿಎಂ ಕುರ್ಚಿಗೆ ಅಡ್ಡವಾಗಬಹುದು ಎಂದು ಸ್ವತಃ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್‌ ಅವರನ್ನೇ ಸಿದ್ದರಾಮಯ್ಯ ಸೋಲಿಸಿದರು ಎಂಬ ಮಾತು ಕಾಂಗ್ರೆಸ್‌ನಲ್ಲಿ ಹಾಸುಹೊಕ್ಕಾಗಿದೆ. ಹೀಗಾಗಿ, ಇಬ್ಬರ ಬಣದಿಂದ ಪಕ್ಷಕ್ಕೆ ಲಾಭವಾಗುತ್ತದೆ ಎಂಬ ಥಿಯರಿಯನ್ನು ನಂಬಲು ಯಾವುದೇ ಪುರಾವೆ, ಕಾಂಗ್ರೆಸ್‌ ಮಟ್ಟಿಗಂತೂ ಇಲ್ಲ.

ಅಲ್ಲಲ್ಲಿ ಘರ್ಷಣೆ

ಸಿದ್ದರಾಮಯ್ಯ ಅವರ ಹುಟ್ಟುಹಬ್ಬವನ್ನು ಭವ್ಯ ಕಾರ್ಯಕ್ರಮವಾಗಿ ಆಯೋಜನೆ ಮಾಡಿದಾಗ ಎರಡೂ ಬಣಗಳ ನಡುವೆ ಸಂಘರ್ಷ ಮಿತಿ ಮೀರಿತ್ತು. ನಾಯಕರ ಮಟ್ಟದಲ್ಲಿ ಪರೋಕ್ಷ ಯುದ್ಧದಂತೆಯೇ ಇದ್ದ ಭಿನ್ನಾಭಿಪ್ರಾಯ ಕಾರ್ಯಕರ್ತರ ಮಟ್ಟಕ್ಕೂ ಇಳಿದಿದೆ. ಕಾರ್ಯಕರ್ತರನ್ನು ಸಂಘಟಿಸುವ ಸಲುವಾಗಿ ಕಳೆದ ತಿಂಗಳು ಕೋಲಾರದ ಕಾಂಗ್ರೆಸ್‌ ಭವನದಲ್ಲಿ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯಲ್ಲಿ ಮಾಜಿ ಸಚಿವ ಕೆ.ಆರ್‌. ರಮೇಶ್‌ ಕುಮಾರ್‌ ಹಾಗೂ ಮಾಜಿ ಸಚಿವ ಕೆ.ಎಚ್‌. ಮುನಿಯಪ್ಪ ಬೆಂಬಲಿಗರ ನಡುವೆ ತಿಕ್ಕಾಟ ನಡೆದಿತ್ತು. ಗದ್ದಲ ಹೆಚ್ಚಾಗಿ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿತ್ತು. ಈ ವೇಳೆ ಕೆಲ ಕಾರ್ಯಕರ್ತರು ವೇದಿಕೆಯ ಮೇಲೇರಿ ಪ್ರತಿಭಟನೆ ನಡೆಸಿದ್ದರು. ಹಾಸನದಲ್ಲಿ ಸ್ವಾತಂತ್ರ್ಯ ನಡಿಗೆ ಆಯೋಜಿಸುವ ಸಂಬಂಧ ಕಾಂಗ್ರೆಸ್‌ನ ಎರಡು ಬಣಗಳ ನಡುವೆ ಗದ್ದಲ ಏರ್ಪಟ್ಟಿತ್ತು.

ಇಬ್ಬರನ್ನೂ ಒಂದು ಮಾಡಲು ರಾಹುಲ್‌ ಗಾಂಧಿ ಹರಸಾಹಸ ಪಡುತ್ತಿದ್ದಾರೆ ಎಂಬುದು, ದಾವಣಗೆರೆಯಲ್ಲಿ ಸಿದ್ದರಾಮೋತ್ಸವದ ಸಂದರ್ಭದಲ್ಲಿ ಕಂಡುಬಂದಿತ್ತು. ಇಬ್ಬರೂ ಪರಸ್ಪರ ತಬ್ಬಿಕೊಳ್ಳಿ ಎಂದು ಕೈಸನ್ನೆ ಮಾಡಿದ್ದನ್ನು ಇಡೀ ದೇಶವೇ ನೋಡಿತ್ತು. ಇದೀಗ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಆಯೋಜಿಸಿರುವ ಯಾತ್ರೆಯಲ್ಲೂ ಈ ಯತ್ನವನ್ನು ರಾಹುಲ್‌ ಮುಂದುವರಿಸಿದ್ದಾರೆ. ಇದೆಲ್ಲದರ ನಡುವೆ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ತಟಸ್ಥರ ಬೆಂಬಲ ಸಿಗಬಹುದೇ?

ಕಾಂಗ್ರೆಸ್‌ನಲ್ಲಿ ಅನಿವಾರ್ಯವಾಗಿ ಎರಡು ಬಣವಾಗಿದೆ. ಆದರೆ ಅಸಲಿಗೆ ಮೂರನೇ ಬಣ ಇದ್ದೇ ಇದೆ. ಅತ್ತ ಸಿದ್ದರಾಮಯ್ಯ ಅವರ ಜತೆಗೂ ಗುರುತಿಸಿಕೊಳ್ಳಲು ಇಷ್ಟಪಡದೇ, ಇತ್ತ ಡಿ.ಕೆ. ಶಿವಕುಮಾರ್‌ ಅವರನ್ನು ಕಿರಿಯ ವಯಸ್ಸು, ಆಕ್ರಮಣಕಾರಿ ನಡವಳಿಕೆಯಿಂದಾಗಿ ಒಪ್ಪಿಕೊಳ್ಳಲಾಗದ ಅನೇಕ ಹಿರಿಯ, ಮೂಲ ಕಾಂಗ್ರೆಸಿಗರು ಇದ್ದಾರೆ. ಆದರೆ ಅವರು ಇದೀಗ ಇರುವ ಇಬ್ಬರು ನಾಯಕರಲ್ಲಿ ಒಬ್ಬರನ್ನು ಅನಿವಾರ್ಯವಾಗಿ ಒಪ್ಪಿಕೊಡು ಸುಮ್ಮನಿದ್ದಾರೆ.

ಇದೀಗ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿರುವುದು ಇಂತಹ ಅನೇಕರಿಗೆ ನಿರೀಕ್ಷೆಯನ್ನು ಗರಿಗೆದರಿಸಿದೆ. ಖರ್ಗೆ ಅವರ ಬೆನ್ನಿಗೆ ನಿಂತರೆ, ಹಿರಿಯರೊಂದಿಗೆ ಇದ್ದಂತೆಯೂ ಆಗುತ್ತದೆ, ಪಕ್ಷಕ್ಕೆ ನಿಷ್ಠೆಯನ್ನೂ ತೋರಿದಂತೆ ಆಗುತ್ತದೆ. ಹೀಗಾಗಿ ನಿಧಾನವಾಗಿ ಖರ್ಗೆ ಪರ ವಾಲುವ ಸಾಧ್ಯತೆಗಳಿವೆ. ಈ ರೀತಿ ಆದರೆ ಡಿ.ಕೆ. ಶಿವಕುಮಾರ್‌ ಅವರಿಗೆ ಹೆಚ್ಚು ನಷ್ಟವಾಗುತ್ತದೆ.

ದಲಿತ ಎಂಬ ಪ್ಲಸ್‌ ಪಾಯಿಂಟ್‌

ಖರ್ಗೆ ಏನೇ ಎಂದರೂ ಮೂಲ ಕಾಂಗ್ರೆಸಿಗರ ಪರ ನಿಲ್ಲುತ್ತಾರೆ ಎನ್ನುವುದು ಶತಃಸಿದ್ಧ. ಇದು ನೇರವಾಗಿ ಸಿದ್ದರಾಮಯ್ಯ ಅವರಿಗೆ ನೆಗೆಟಿವ್‌ ಆಗಬಹುದು. ತಾನು ದಲಿತರ ಪರ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ, ಖರ್ಗೆ ಅವರ ವಿರುದ್ಧ ಹೋಗಲು ಸಾಧ್ಯವಾಗುವುದಿಲ್ಲ. ಕರ್ನಾಟಕದಲ್ಲಿ ದಲಿತ ಮುಖ್ಯಮಂತ್ರಿ ಆಗಬೇಕು ಎಂಬ ಬೇಡಿಕೆ ಅನೇಕ ದಿನಗಳಿಂದಲೂ ಇದೆ. ಸದ್ಯದ ಪರಿಸ್ಥಿತಿಯಲ್ಲಿ ಜೆಡಿಎಸ್‌ನಲ್ಲಿ ದಲಿತರೊಬ್ಬರು ಸಿಎಂ ಅಭ್ಯರ್ಥಿ ಆಗುವುದು ದೂರದ ಮಾತು. ಬಿಜೆಪಿಯಲ್ಲಿ ಅನೇಕ ಎಸ್‌ಸಿಎಸ್‌ಟಿ ಮುಖಂಡರು ಇದ್ದಾರಾದರೂ ಸಿಎಂ ಅಭ್ಯರ್ಥಿಯಾಗಿ ಪರಿಗಣಿಸುವಷ್ಟು ಸಂಘಟನೆಯಲ್ಲಿ, ಸಂಘ ಪರಿವಾರದ ವಿಚಾರಗಳನ್ನು ಒಪ್ಪಿಕೊಂಡಿರುವವರು ಕಾಣುತ್ತಿಲ್ಲ. ಹೀಗಾಗಿ ಕಾಂಗ್ರೆಸ್‌ ಪಕ್ಷ ಮಾತ್ರವೇ ದಲಿತ ಸಿಎಂ ಮಾಡಬಹುದು ಎಂಬ ನಿರೀಕ್ಷೆಯಲ್ಲಿ ಖರ್ಗೆ ಅವರ ಪರವಾಗಿ ದಲಿತ ಸಮುದಾಯ ನಿಲ್ಲಬಹುದು. ಹೀಗಾದರೆ ಸಿದ್ದರಾಮಯ್ಯ ಅವರ ಶಕ್ತಿ ಕುಂದುವ ಸಾಧ್ಯತೆಯಿದೆ ಎಂಬ ಚರ್ಚೆಗಳು ಪಕ್ಷದಲ್ಲಿ ನಡೆಯುತ್ತಿವೆ.

ಖರ್ಗೆ ಮನಸ್ಸು ಮಾಡುತ್ತಾರ?

ಖರ್ಗೆ ಅವರ ಆಯ್ಕೆಯಿಂದ ರಾಜ್ಯದ ಮೂಲ ಕಾಂಗ್ರೆಸಿಗರಲ್ಲಿ, ದಲಿತದಲ್ಲಿ ನಿರೀಕ್ಷೆ ಚಿಗುರಿದೆ. ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆ ಆಗಿರುವುದರಿಂದ ಸಿದ್ದರಾಮಯ್ಯ ಬಣಕ್ಕೆ ನಷ್ಟವಾಗುತ್ತದೆಯೇ? ಡಿ.ಕೆ. ಶಿವಕುಮಾರ್‌ ಹೆಚ್ಚು ಪೆಟ್ಟು ತಿನ್ನುತ್ತಾರ? ಎನ್ನುವ ಚರ್ಚೆ ಇದೆ. ಆದರೆ ಇದೆಲ್ಲ ಚರ್ಚೆಗಳಲ್ಲಿ ಯಾವುದೇ ಸಂಭವಿಸಬೇಕಾದರೂ ಅದು ಖರ್ಗೆ ಅವರ ನಡೆಯನ್ನು ಆಧರಿಸಿದೆ.

ಖರ್ಗೆ ಹೇಳಿಕೇಳಿ ಪಕ್ಷ ನಿಷ್ಠರು. ಪಕ್ಷ ನಿಷ್ಠರು ಎಂದರೆ ನೆಹರೂ ಕುಟುಂಬದ ನಿಷ್ಠರು. ಇದೇ ಕಾರಣಕ್ಕೆ ಕಾಂಗ್ರೆಸ್‌ನ ಮೊದಲ ಕುಟುಂದ ಅಭ್ಯರ್ಥಿಯಾಗಿ ಭರ್ಜರಿ ಅಂತರದಲ್ಲಿ ಜಯಿಸಿದ್ದಾರೆ. ಕರ್ನಾಟಕದಲ್ಲಿ ಪವರ್‌ ಸೆಂಟರ್‌ ಆಗಲು ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಹಸಿರು ನಿಶಾನೆ ತೋರುತ್ತಾರ? ಎನ್ನುವುದು ಮೊದಲ ಪ್ರಶ್ನೆ. ಸ್ವತಃ ಯಾವುದೇ ಬಣ ಘರ್ಷಣೆಯಲ್ಲಿ ಕಾಣಿಸಿಕೊಳ್ಳದ ಖರ್ಗೆ, ಒತ್ತಡ ತಂತ್ರಕ್ಕೆ ಮುಂದಾಗದ ಖರ್ಗೆ ತಾವಾಗಿಯೇ ಇನ್ನೊಂದು ಪವರ್‌ ಸೆಂಟರ್‌ ಆಗಲು ಮುಂದಾಗುತ್ತಾರೆ ಎಂದು ನಿರೀಕ್ಷಿಸುವಂತಿಲ್ಲ. ಹಾಗಾಗಿ, ಕಾಂಗ್ರೆಸ್‌ನ ನಿಜವಾದ ಹೈಕಮಾಂಡ್‌ ಏನು ಹೇಳುತ್ತದೆ ಎನ್ನುವುದರ ಆಧಾರದಲ್ಲಿ ಕರ್ನಾಟಕದಲ್ಲಿ ಮೂರನೇ ಪವರ್‌ ಸೆಂಟರ್‌ ಸೃಜನೆ, ಅದರಿಂದ ಉಳಿದೆರಡು ಬಣಗಳ ಮೇಲಿನ ಪರಿಣಾಮ ಕಾಣಿಸಲಿದೆ.

ಇದನ್ನೂ ಓದಿ | ಮಲ್ಲಿಕಾರ್ಜುನ ಖರ್ಗೆಗೆ ತಮ್ಮ ನಿವಾಸದಲ್ಲಿ ಭೇಟಿಗೆ ಅವಕಾಶ ಕೊಡದ ಸೋನಿಯಾ ಗಾಂಧಿ; ಶಿಷ್ಟಾಚಾರ ಪಾಲಿಸಿದ ಮಾಜಿ ಅಧ್ಯಕ್ಷೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Teachers Recruitment: ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು, ಮುಖ್ಯ ಶಿಕ್ಷಕರ ನೇಮಕಾತಿ: ಕೌನ್ಸೆಲಿಂಗ್‌ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

Teachers Recruitment: ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್‌ ನಡೆಸಿ, ಸ್ಥಳ ನಿಯುಕ್ತಿಗೊಳಿಸಲು ಪರಿಷ್ಕೃತ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ.

VISTARANEWS.COM


on

Teachers Recruitment
Koo

ಬೆಂಗಳೂರು: 2023-24ನೇ ಸಾಲಿಗೆ ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ (Specified Post) ಲಿಖಿತ ಪರೀಕ್ಷೆ ನಡೆಸುವ ಮೂಲಕ ಭರ್ತಿ ಮಾಡಲು (Teachers Recruitment) ಶಾಲಾ ಶಿಕ್ಷಣ ಇಲಾಖೆ ಪರಿಷ್ಕೃತ ಆದೇಶ ಹೊರಡಿಸಿತ್ತು. ಇದೀಗ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್‌ ನಡೆಸಿ, ಸ್ಥಳ ನಿಯುಕ್ತಿಗೊಳಿಸಲು ಪರಿಷ್ಕೃತ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರ ಹುದ್ದೆಗಳ ಭರ್ತಿಗೆ ಲಿಖಿತ ಪರೀಕ್ಷೆ ನಡೆಸಲು ಇತ್ತೀಚೆಗೆ ಅಧಿಸೂಚನೆ ಹೊರಡಿಸಲಾಗಿತ್ತು. ಲೋಕಸಭಾ ಚುನಾವಣಾ ಮಾದರಿ ನೀತಿ ಸಹಿತೆ ಹಿನ್ನೆಲೆ ಕೌನ್ಸೆಲಿಂಗ್ ದಿನಾಂಕ ಪ್ರಕಟಿಸಿರಲಿಲ್ಲ. ಆದ್ದರಿಂದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್‌ ನಡೆಸಲು ಇದೀಗ ಪರಿಷ್ಕೃತ ವೇಳಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ನಡೆದ ಪರೀಕ್ಷೆಯ ಫಲಿತಾಂಶ ಪಟ್ಟಿ ಪ್ರಕಟಣೆ (ಪರೀಕ್ಷಾ ಅಂಕಗಳ ಜತೆಗೆ ಅಭ್ಯರ್ಥಿಗಳ ಸೇವಾ ಅನುಭವ ಹಾಗೂ ಹೆಚ್ಚಿನ ವಿದ್ಯಾರ್ಹತೆಗೆ ನಿಗದಿಪಡಿಸಿರುವ ಅಂಕಗಳ ಕ್ರೋಡೀಕರಣದೊಂದಿಗೆ) ಮಾಡಲು ಜೂನ್‌ 11 ನಿಗದಿ ಮಾಡಲಾಗಿದೆ. ಪ್ರಕಟಿತ ಫಲಿತಾಂಶ ಪಟ್ಟಿಗೆ ಸೇವಾನುಭವ ಹಾಗೂ ವಿದ್ಯಾರ್ಹತೆ ಸಂಬಂಧ ಅಂಕಗಳ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಜೂನ್‌ 11ರಿಂದ 14ರವರೆಗೆ ಅವಕಾಶ ನೀಡಲಾಗಿದೆ.

ಇನ್ನು ಆಕ್ಷೇಪಣೆಗಳನ್ನು ಪರಿಶೀಲಿಸಿ ತಂತ್ರಾಂಶದಲ್ಲಿ ಸರಿಪಡಿಸಿ ಸರಿಪಡಿಸಲು ಜೂನ್‌ 15ರಿಂದ 19ರವರೆಗೆ ಅವಕಾಶ ನೀಡಲಾಗಿದೆ. ಅದೇ ರೀತಿ ಜೂನ್‌ 24ರಂದು ಅಂತಿಮ ಅರ್ಹತಾ ಪಟ್ಟಿ ಪ್ರಕಟಿಸಲು ಸೂಚಿಸಲಾಗಿದೆ.

ಇದನ್ನೂ ಓದಿ | University Grants Commission : ಇನ್ನು ಮುಂದೆ ವಿಶ್ವವಿದ್ಯಾಲಯಗಳಲ್ಲಿ ವರ್ಷಕ್ಕೆ ಎರಡು ಬಾರಿ ಅಡ್ಮಿಷನ್​

Continue Reading

ಪ್ರಮುಖ ಸುದ್ದಿ

Actor Darshan Arrested: ರೇಣುಕಾಸ್ವಾಮಿಗೆ ದರ್ಶನ್‌ ಗ್ಯಾಂಗ್‌ನಿಂದ ಕ್ರೂರ ಹಿಂಸೆ; ಪೋಸ್ಟ್‌ಮಾರ್ಟಂ ವರದಿಯಲ್ಲಿದೆ ಭಯಾನಕ ಡಿಟೇಲ್ಸ್‌

Actor Darshan Arrested: ಮರಣೋತ್ತರ ಪರೀಕ್ಷೆಯ ವರದಿಯ ಆಧಾರದ ಮೇಲೆ ಪೊಲೀಸರು ತನಿಖಾ ವರದಿ ರಚಿಸಲಿದ್ದಾರೆ. ಆರೋಪಿಗಳ ಬಾಯಿ ಬಿಡಿಸಲಿದ್ದಾರೆ. ಆರೋಪಿಗಳು ಪ್ರಕರಣದಿಂದ ತಪ್ಪಿಸಿಕೊಳ್ಳಲು ಹೇಳಬಹುದಾದ ಸುಳ್ಳುಗಳನ್ನು ಆ ಕ್ಷಣದಲ್ಲೇ ತಡೆಯಲಿದ್ದಾರೆ. ಸಾಂದರ್ಭಿಕ ಪ್ರಶ್ನೆಗಳನ್ನು ಹಾಕುವ ಮೂಲಕ ನೈಜ ಉತ್ತರವನ್ನು ಪಡೆಯಲಿದ್ದಾರೆ. ಇವೆಲ್ಲವೂ ತನಿಖೆಯ ಪ್ರಗತಿಗೆ ನೆರವಾಗಲಿದೆ.

VISTARANEWS.COM


on

Actor Darshan Arrested
Koo

ಬೆಂಗಳೂರು: ದರ್ಶನ್ ಮತ್ತು ಆತನ ಗ್ಯಾಂಗ್​ನ(Actor Darshan Arrested ) ಕೈಗೆ ಸಿಕ್ಕಿ ಅಮಾನುಷವಾಗಿ ಕೊಲೆಯಾದ ಚಿತ್ರದುರ್ಗದ ರೇಣುಕಾ ಸ್ವಾಮಿಯ ಮರಣೋತ್ತರ ಪರೀಕ್ಷೆಯ ವರದಿ ಪ್ರಕಟವಾಗಿದೆ. ವರದಿಯ ಪ್ರಕಾರ ಆರೋಪಿಗಳು ಅತ್ಯಂತ ಹೀನಾಯವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ರೇಣುಕಾ ಸ್ವಾಮಿಯ ದೇಹದ ಸರ್ವ ಅಂಗಗಳ ಮೇಲೂ ಕೊಲೆಗಾರರ ಗ್ಯಾಂಗ್​ ಪ್ರಹಾರ ಮಾಡಿದೆ. ಕೈಗೆ ಸಿಕ್ಕಿದ್ದ ವಸ್ತುಗಳಿಂದೆಲ್ಲ ಹೊಡೆದು ಆಘಾತ ಮಾಡಿದ್ದಾರೆ. ರಕ್ತ ಹೆಪ್ಪುಗಟ್ಟಿಸಿ ಕೊಲೆ ಮಾಡಿದ್ದಾರೆ.

ಮರಣೋತ್ತರ ಪರೀಕ್ಷೆಯ ವರದಿಯ ಆಧಾರದ ಮೇಲೆ ಪೊಲೀಸರು ತನಿಖಾ ವರದಿ ರಚಿಸಲಿದ್ದಾರೆ. ಆರೋಪಿಗಳ ಬಾಯಿ ಬಿಡಿಸಲಿದ್ದಾರೆ. ಆರೋಪಿಗಳು ಪ್ರಕರಣದಿಂದ ತಪ್ಪಿಸಿಕೊಳ್ಳಲು ಹೇಳಬಹುದಾದ ಸುಳ್ಳುಗಳನ್ನು ಆ ಕ್ಷಣದಲ್ಲೇ ಭೇದಿಸಲಿದ್ದಾರೆ. ಸಾಂದರ್ಭಿಕ ಪ್ರಶ್ನೆಗಳನ್ನು ಹಾಕುವ ಮೂಲಕ ಆರೋಪಿಗಳಿಂದ ನೈಜ ಉತ್ತರವನ್ನು ಕಕ್ಕಿಸಲಿದ್ದಾರೆ. ಇವೆಲ್ಲವೂ ತನಿಖೆಯ ಪ್ರಗತಿಗೆ ನೆರವಾಗಲಿದೆ.

ರೇಣುಕಾಸ್ವಾಮಿ ದೇಹದ ಎಲ್ಲೆಲ್ಲಿ ಗಾಯವಾಗಿತ್ತು?

ಮರಣೋತ್ತರ ಪರಿಕ್ಷೆ ವರದಿಯ ಆಧಾರದಲ್ಲಿ ರೇಣುಕಾ ಸ್ವಾಮಿಯ ಮರ್ಮಾಂಗದ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದಾರೆ. ಇದು ಮನುಷ್ಯನಿಗೆ ಅತೀವವಾದ ನೋವು ತರುವ ಆಘಾತವಾಗಿದೆ. ಕೊಲೆಗಾರರ ಹೊಡೆತಕ್ಕೆ ರೇಣುಕಾ ಅವರ ಮರ್ಮಾಂಗದಲ್ಲಿ ಆಂತರಿಕ ಹಾಗೂ ಬಾಹ್ಯ ರಕ್ತ ಸ್ರಾವ ಉಂಟಾಗಿದೆ.

ರೇಣುಕಾ ಅವರ ಹೊಟ್ಟೆ ಭಾಗದಲ್ಲೂ ರಕ್ತ ಸೋರಿಕೆಯಾಗಿದೆ. ಒಳ ಭಾಗದಲ್ಲೂ ರಕ್ತ ಹೆಪ್ಪುಗಟ್ಟಿದೆ. ಹೊರಗಿನಿಂದ ಅಪ್ಪಳಿಸಿರುವ ಬಾಹ್ಯ ವಸ್ತುಗಳಿಂದ ಈ ಗಾಯಗಳು ಉಂಟಾಗಿವೆ. ಅಂದರೆ ಮರದ ದೊಣ್ಣೆಗಳಿಂದ ಅವರ ಮುಖ, ಮೂತಿ ನೋಡದೆ ಹಲ್ಲೆ ಮಾಡಿರುವುದು ಖಾತರಿಯಾಗಿದೆ.

ರೇಣುಕಾ ಅವರ ತಲೆ ಭಾಗಕ್ಕೆ ಒಳಗಿನಿಂದ ಗಂಭೀರವಾಗಿ ಪೆಟ್ಟು ಬಿದ್ದಿದೆ. ತಲೆ ಭಾಗದಲ್ಲಿ ರಕ್ತ ಸೋರಿಕೆ ಆಗಿಲ್ಲ. ಆದರೆ, ಯಾವುದೋ ವಸ್ತುವಿನಿಂದ ಅಪ್ಪಳಿಸಿರುವ ಆಘಾತ ತಲೆಗೆ ಆಗಿದೆ.

ಇದನ್ನೂ ಓದಿ: Renuka Swamy Murder Case: ಚಿತ್ರದುರ್ಗದಲ್ಲಿ ಮೌನ ಪ್ರತಿಭಟನೆ; ದರ್ಶನ್‌ ಸೇರಿ ಇತರ ಆರೋಪಿಗಳಿಗೆ ಜೀವಾವಧಿ ಶಿಕ್ಷೆಗೆ ಆಗ್ರಹ

ಕೈ ಮತ್ತು ಕಾಲುಗಳು ಹಾಗೂ ಬೆನ್ನಿನಲ್ಲಿ ಸಿಕ್ಕಾಪಟ್ಟೆ ರಸ್ತ ಸ್ರಾವ ಉಂಟಾಗಿದೆ. ಪದೇ ಪದೇ ಆಗಿರುವ ಪ್ರಹಾರದಿಂದ ಚರ್ಮ ಕಿತ್ತು ಬಂದು ರಕ್ತ ಸ್ರಾವ ಉಂಟಾಗಿದೆ. ರೇಣುಕಾ ಅವರ ಸಾವಿನ ಆರ್ತನಾದವನ್ನೂ ಕೇಳದೆ ಆರೋಪಿಗಳು ಹಲ್ಲೆ ಮಾಡಿರುವುದು ಈ ವರದಿಯಿಂದ ಖಚಿತವಾಗಿದೆ. ಎದೆ ಭಾಗಕ್ಕೂ ಪೆಟ್ಟು ಬಿದ್ದಿದ್ದು ಹೃದಯ ಹಾಗೂ ಶ್ವಾಸಕೋಶಗಳಿರುವ ಪ್ರದೇಶಗಳು ಜರ್ಜರಿತಗೊಂಡಿದೆ.

ಹಲ್ಲೆಗೆ ಬಳಸಿರಬಹುದಾದ ವಸ್ತುಗಳು


ಮರದ ಪೀಸ್​ಗಳಿಂದಲೇ ಹಲ್ಲೆ ಮಾಡಿರುವುದು ಗಾಯದ ಆಳ ಮತ್ತು ತೀವ್ರತೆಯಿಂದ ಗೊತ್ತಾಗಿದೆ. ಚರ್ಮ ಸುಲಿದು ಹೋಗುವ ರೀತಿಯಲ್ಲಿ ಬಾರಿಸಿದ್ದನ್ನು ಗಮನಿಸಿದ್ದರೆ ಚರ್ಮದ ಬೆಲ್ಟ್ ಕೂಡ ಬಳಸಿರಬಹುದು. ಗಂಟೆಗಟ್ಟೆ ರೇಣುಕಾ ಸ್ವಾಮಿ ಮೇಲೆ ಹಲ್ಲೆ ನಡೆಸಲಾಗಿದ್ದು ಏಟಿನ ಆಘಾತಕ್ಕೆ ಅವರು ಮೂರ್ಛೆ ತಪ್ಪಿರಬಹುದು. ಅದೇ ರೀತಿ ಅವರ ತಲೆಯನ್ನು ಹಿಡಿದು ಯಾವುದೇ ಗಟ್ಟಿ ವಸ್ತುವಿಗೆ ಅಪ್ಪಳಿಸಿದ ಸೂಚನೆಯೂ ಇದೆ. ದೇಹದಲ್ಲಿ ಒಟ್ಟಾರೆಯಾಗಿ ಕೊಲೆಗಾರರ ಗ್ಯಾಂಗ್​ 15 ಕಡೆ ಗಾಯ ಮಾಡಿದೆ. ಶವವನ್ನು ಎಸೆದು ಹೋದ ಬಳಿಕ ಮುಖ ಹಾಗೂ ದವಡೆಯನ್ನು ನಾಯಿಗಳು ಕಿತ್ತು ಎಳೆದಿರುವುದು ಕೂಡ ಮರಣೋತ್ತರ ಪರೀಕ್ಷೆಯಲ್ಲಿ ಗೊತ್ತಾಗಿದೆ.

ಲಾರಿಗೆ ತಲೆ ಅಪ್ಪಳಿಸಿದ್ದನ್ನು ಒಪ್ಪಿಕೊಂಡ ಕೊಲೆಗಾರರು

ದರ್ಶನ್ ಗ್ಯಾಂಗ್​ನ (Actor Darshan) ಅಮಾನುಷ ಕೃತ್ಯಕ್ಕೆ ಬಲಿಯಾದ ರೇಣುಕಾ ಸ್ವಾಮಿ ಪ್ರಕರಣ ಥೇಟ್‌ ಸಿನಿಮಾ ಮಾದರಿಯಲ್ಲಿಯೇ ನಡೆದಿದೆ. ಪೊಲೀಸರ ಮುಂದೆ ಆರೋಪಿಗಳು ಕೊಲೆ ಮಾಡಿದ್ದು ಹೇಗೆ ಎಂಬುದನ್ನು ವಿವರಸಿದ್ದಾರೆ. ಪೊಲೀಸರು ಸತತ ಪ್ರಶ್ನೆಗಳು ಹಾಗೂ ಕೆಂಗಣ್ಣನ್ನು ಎದುರಿಸಲಾಗದ ಆರೋಪಿಗಳು ಕೊಲೆ ಮಾಡಿರುವ ಪ್ರತಿ ಕ್ಷಣವನ್ನೂ ವಿವರಿಸಿದ್ದಾರೆ.

ಪೊಲೀಸರ ಲಾಠಿ ಏಟು ರುಚಿ ತಿನ್ನುತ್ತಿದ್ದಂತೆ ಆರೋಪಿಗಳು ಹೇಳಿಕೆ ನೀಡಿದ್ದು ಹೀಗೆ. ʻʻಮೊದಲಿಗೆ ದರ್ಶನ್‌ ಅವರು ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ್ದಾರೆ. ದರ್ಶನ್‌ ಅವರು ರೇಣುಕಾ ಸ್ವಾಮಿಯನ್ನು ಜೋರಾಗಿ ತಳ್ಳಿದ್ದರು. ಇದರಿಂದಾಗಿ ಶೆಡ್‌ನಲ್ಲಿದ್ದ ಲಾರಿಗೆ ರೇಣುಕಾಸ್ವಾಮಿ ತಲೆ ತಾಗಿ ಆತ ಅಲ್ಲಿಯೇ ಪ್ರಜ್ಞೆ ತಪ್ಪಿ ಬಿದ್ದಿದ್ದ. ಆಗ ದರ್ಶನ್‌ ಹಾಗೂ ಪವಿತ್ರಾ ಇಬ್ಬರೂ ಅಲ್ಲಿದ್ದರು. ಆ ಬಳಿಕ ದರ್ಶನ್‌ ಮತ್ತು ಪವಿತ್ರಾ ಮನೆಗೆ ಹೋಗಿದ್ದರು. ನಾವು ಮತ್ತೆ ರೇಣುಕಾ ಸ್ವಾಮಿಗೆ ಹೊಡೆದೆವು. ರೇಣುಕಾ ಸ್ವಾಮಿ ಕಾಲು ಹಿಡಿದು ಕಾಂಪೌಂಡ್‌ಗೆ ಬಡಿದೆವು. ಆಗ ರೇಣುಕಾಸ್ವಾಮಿ ಸ್ಥಳದಲ್ಲೇ ಮೃತಪಟ್ಟರು. ತಕ್ಷಣ ನಮ್ಮ ದರ್ಶನ್‌ ಅವರಿಗೆ ಕರೆ ಮಾಡಿದೆವು. ಬಾಡಿನ ಏನಾದ್ರು ಮಾಡಿ ಮುಚ್ಚಾಕಿ ಅಂದರು. ಭಯದಲ್ಲಿ ಏನ್ಮಾಡಬೇಕು ಅಂತಾ ಗೊತ್ತಾಗದೆ ಮೋರಿಗೆ ಬಿಸಾಕಿ ಮನೆಗೆ ಹೋಗಿದ್ವಿʼʼಎಂದು ಹೇಳಿಕೆ ನೀಡಿದ್ದಾರೆ.

Continue Reading

ಕರ್ನಾಟಕ

Actor Darshan: ದರ್ಶನ್‌ ಹೀರೋ ಅಲ್ಲ ಖಳನಾಯಕ, ಆತನಿಗೆ ಶಿಕ್ಷೆ ಆಗಲೇಬೇಕು: ರೇಣುಕಾ ಸ್ವಾಮಿ ತಂದೆ ಕಿಡಿ

Actor Darshan: ದರ್ಶನ್ ಬರೀ ತೆರೆ ಮೇಲೆ ಮಾತ್ರ ಹೀರೋ ತರ ನಾಟಕವಾಡುತ್ತಾನೆ. ಅವನಿಗೆ ಮಾನವೀಯತೆ ಅನ್ನೋದೇ ಗೊತ್ತಿಲ್ಲ, ಮನಷ್ಯ ಅಲ್ಲ, ಆತ ಪಶು‌ ಎಂದು ರೇಣುಕಾ ಸ್ವಾಮಿ ತಂದೆ ಕಾಶಿನಾಥ ಶಿವನಗೌಡ ಆಕ್ರೋಶ ಹೊರಹಾಕಿದ್ದಾರೆ.

VISTARANEWS.COM


on

Actor Darshan
Koo

ಚಿತ್ರದುರ್ಗ: ನನ್ನ ಮಗ ಯಾವುದೇ ತಪ್ಪು ಮಾಡಿಲ್ಲ, ಅವನಿಗೆ ಇಂತಹ ಶಿಕ್ಷೆಯಾ? ಏನು ಮಾಡದ ತಪ್ಪಿಗೆ ನನ್ನ ಮಗ ಬಲಿ ಆದ. ಅವನ ಪಾಡಿಗೆ ಅವನು ಇದ್ದ, ಏನೂ ಮಾಡಿಲ್ಲ. ಯಾವುದೇ ಗಲಾಟೆ ಗೋಜಿಗೆ ಹೋಗಿರಲಿಲ್ಲ. ನಟ ದರ್ಶನ್‌ಗೆ ಶಿಕ್ಷೆ ಆಗಲೇಬೇಕು, ಅವನು ಹೀರೋ ಅಲ್ಲ ಖಳನಾಯಕ. ಬರೀ ತೆರೆ ಮೇಲೆ ಮಾತ್ರ ಹೀರೋ ತರ ನಾಟಕವಾಡುತ್ತಾನೆ. ಅವನಿಗೆ ಮಾನವೀಯತೆ ಅನ್ನೋದೇ ಗೊತ್ತಿಲ್ಲ, ಮನಷ್ಯ ಅಲ್ಲ, ಆತ ಪಶು ಎಂದು ರೇಣುಕಾ ಸ್ವಾಮಿ ತಂದೆ ಕಾಶಿನಾಥ ಶಿವನಗೌಡ ಕಿಡಿಕಾರಿದ್ದಾರೆ.

ನಗರದಲ್ಲಿ ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯಿಸಿರುವ ಅವರು, ಏನು ಮಾಡದ ತಪ್ಪಿಗೆ ನನ್ನ ಮಗ ಬಲಿಯಾಗಿದ್ದಾನೆ, ನಟ ದರ್ಶನ್‌ ಸೇರಿ ಇತರ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ನನ್ನ ಮಗ ಹಾಗೂ ಪವಿತ್ರ ಗೌಡ ನಡುವೆ ಚಾಟಿಂಗ್ ನಡೆದಿತ್ತು

ನನ್ನ ಮಗ ಹಾಗೂ ಪವಿತ್ರಾ ಗೌಡ ನಡುವೆ ಚಾಟಿಂಗ್ ನಡೆಯುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ. ನಿರಂತರ ಚಾಟಿಂಗ್ ಮಾಡುತ್ತಿದ್ದರು ಎಂದು ಮಾಹಿತಿ ಕೊಟ್ಟಿದ್ದಾರೆ ಎಂದು ರೇಣುಕಾ ಸ್ವಾಮಿ ತಾಯಿ ಹೇಳಿದ್ದಾರೆ. ಹಾಗಾದರೆ ಮೊದಲಿನಿಂದಲೂ ಪವಿತ್ರಾ ಹಾಗೂ ರೇಣುಕಾ ಮಧ್ಯೆ ಪರಿಚಯ ಇತ್ತೇ? ಕುಟುಂಬಕ್ಕೆ ಹೇಳದೆ ರೇಣುಕಾ ಸ್ವಾಮಿ ವಿಷಯ ಮುಚ್ಚಿಟ್ಟಿದ್ದರಾ? ಹಾಗಾದರೆ ಇಬ್ಬರ ಮಧ್ಯೆ ಏನು ಚಾಟಿಂಗ್‌ ನಡೆದಿತ್ತು ಎಂಬುವುದು ಕುತೂಹಲ ಮೂಡಿಸಿದ್ದು, ರೇಣುಕಾಸ್ವಾಮಿ ತಾಯಿ ಹೇಳಿಕೆ ಕೂಡ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಇದನ್ನೂ ಓದಿ Renuka Swamy Murder Case: ಚಿತ್ರದುರ್ಗದಲ್ಲಿ ಮೌನ ಪ್ರತಿಭಟನೆ; ದರ್ಶನ್‌ ಸೇರಿ ಇತರ ಆರೋಪಿಗಳಿಗೆ ಜೀವಾವಧಿ ಶಿಕ್ಷೆಗೆ ಆಗ್ರಹ

ಲಾರಿಗೆ ತಲೆಯನ್ನು ಬಡಿದು ಸಿನಿಮಾ ಶೈಲಿಯಲ್ಲೇ ರೇಣುಕಾ ಸ್ವಾಮಿ ಕೊಲೆ ಮಾಡಿದ್ದ ದರ್ಶನ್ ಗ್ಯಾಂಗ್​!

ಬೆಂಗಳೂರು: ದರ್ಶನ್ ಗ್ಯಾಂಗ್​ನ (Actor Darshan) ಅಮಾನುಷ ಕೃತ್ಯಕ್ಕೆ ಬಲಿಯಾದ ರೇಣುಕಾ ಸ್ವಾಮಿ ಪ್ರಕರಣ ಥೇಟ್‌ ಸಿನಿಮಾ ಮಾದರಿಯಲ್ಲಿಯೇ ನಡೆದಿದೆ. ಪೊಲೀಸರ ಮುಂದೆ ಆರೋಪಿಗಳು ಕೊಲೆ ಮಾಡಿದ್ದು ಹೇಗೆ ಎಂಬುದನ್ನು ವಿವರಸಿದ್ದಾರೆ. ಪೊಲೀಸರು ಸತತ ಪ್ರಶ್ನೆಗಳು ಹಾಗೂ ಕೆಂಗಣ್ಣನ್ನು ಎದುರಿಸಲಾಗದ ಆರೋಪಿಗಳು ಕೊಲೆ ಮಾಡಿರುವ ಪ್ರತಿ ಕ್ಷಣವನ್ನೂ ವಿವರಿಸಿದ್ದಾರೆ.

ಪೊಲೀಸರ ಲಾಠಿ ಏಟು ರುಚಿ ತಿನ್ನುತ್ತಿದ್ದಂತೆ ಆರೋಪಿಗಳು ಹೇಳಿಕೆ ನೀಡಿದ್ದು ಹೀಗೆ. ʻʻಮೊದಲಿಗೆ ದರ್ಶನ್‌ ಅವರು ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ್ದಾರೆ. ದರ್ಶನ್‌ ಅವರು ರೇಣುಕಾ ಸ್ವಾಮಿಯನ್ನು ಜೋರಾಗಿ ತಳ್ಳಿದ್ದರು. ಇದರಿಂದಾಗಿ ಶೆಡ್‌ನಲ್ಲಿದ್ದ ಲಾರಿಗೆ ರೇಣುಕಾಸ್ವಾಮಿ ತಲೆ ತಾಗಿ ಆತ ಅಲ್ಲಿಯೇ ಪ್ರಜ್ಞೆ ತಪ್ಪಿ ಬಿದ್ದಿದ್ದ. ಆಗ ದರ್ಶನ್‌ ಹಾಗೂ ಪವಿತ್ರಾ ಇಬ್ಬರೂ ಅಲ್ಲಿದ್ದರು. ಆ ಬಳಿಕ ದರ್ಶನ್‌ ಮತ್ತು ಪವಿತ್ರಾ ಮನೆಗೆ ಹೋಗಿದ್ದರು. ನಾವು ಮತ್ತೆ ರೇಣುಕಾ ಸ್ವಾಮಿಗೆ ಹೊಡೆದೆವು. ರೇಣುಕಾ ಸ್ವಾಮಿ ಕಾಲು ಹಿಡಿದು ಕಾಂಪೌಂಡ್‌ಗೆ ಬಡಿದೆವು. ಆಗ ರೇಣುಕಾಸ್ವಾಮಿ ಸ್ಥಳದಲ್ಲೇ ಮೃತಪಟ್ಟರು. ತಕ್ಷಣ ನಮ್ಮ ದರ್ಶನ್‌ ಅವರಿಗೆ ಕರೆ ಮಾಡಿದೆವು. ಬಾಡಿನ ಏನಾದ್ರು ಮಾಡಿ ಮುಚ್ಚಾಕಿ ಅಂದರು. ಭಯದಲ್ಲಿ ಏನ್ಮಾಡಬೇಕು ಅಂತಾ ಗೊತ್ತಾಗದೆ ಮೋರಿಗೆ ಬಿಸಾಕಿ ಮನೆಗೆ ಹೋಗಿದ್ವಿʼʼಎಂದು ಹೇಳಿಕೆ ನೀಡಿದ್ದಾರೆ.

Continue Reading

ಕರ್ನಾಟಕ

Kalaburagi News: ಜೂ.14ರಂದು ಸಿಎಂ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನಾ ಸಭೆ

Kalaburagi News: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಜೂ.14 ರಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ತಿಳಿಸಿದ ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್, ಪ್ರಸಕ್ತ 2024-25ನೇ ಸಾಲಿಗೆ 5,000 ಕೋಟಿ ರೂ. ಅನುದಾನ ನೀಡಿದ್ದು, ಇದನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲು ಮತ್ತು ಸದರಿ ಅನುದಾನ ಇದೇ ವರ್ಷದಲ್ಲಿ ಖರ್ಚು ಮಾಡುವ ಸಂಬಂಧ ಯೋಜನಾ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಕ.ಕ. ಭಾಗದ ಸಚಿವರನ್ನು ಸಹ ಸಭೆಗೆ ಆಹ್ವಾನಿಸಲಾಗಿದೆ ಎಂದು ಹೇಳಿದ್ದಾರೆ.

VISTARANEWS.COM


on

KKRDB Chairman Dr Ajay Singh pressmeet in Kalaburagi
Koo

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ನೇತೃತ್ವದಲ್ಲಿ ಇದೇ ಜೂನ್ 14ರಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ. ಅಜಯ್ ಸಿಂಗ್ (Kalaburagi News) ಹೇಳಿದರು.

ಇಲ್ಲಿನ ಕೆ.ಕೆ.ಆರ್.ಡಿ.ಬಿ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ 2024-25ನೇ ಸಾಲಿಗೆ 5,000 ಕೋಟಿ ರೂ. ಅನುದಾನ ನೀಡಿದ್ದು, ಇದನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲು ಮತ್ತು ಸದರಿ ಅನುದಾನ ಇದೇ ವರ್ಷದಲ್ಲಿ ಖರ್ಚು ಮಾಡುವ ಸಂಬಂಧ ಯೋಜನಾ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಕ.ಕ. ಭಾಗದ ಸಚಿವರನ್ನು ಸಹ ಸಭೆಗೆ ಆಹ್ವಾನಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Gold Rate Today: ಚಿನ್ನದ ದರ ಮತ್ತೆ ಗಗನಮುಖಿ; ಇಂದಿನ ಬೆಲೆ ಇಷ್ಟಿದೆ

ಸಿಎಂ ಸಭೆ ನಂತರ ಇದೇ ಜೂನ್ 28ಕ್ಕೆ ಮಂಡಳಿ ಸಭೆ ನಡೆಸಲು ನಿರ್ಧರಿಸಿದ್ದು, 15 ದಿನದೊಳಗೆ ಪ್ರದೇಶದ ಶಾಸಕರಿಂದ ಕ್ರಿಯಾ ಯೋಜನೆ ಪಡೆದು ಪ್ರಸಕ್ತ ಸಾಲಿನ ಕೆಲಸಗಳು ಆರಂಭಿಸಲಾಗುವುದು ಎಂದರು. ಕಳೆದ ವರ್ಷ ನಮ್ಮ ಸರ್ಕಾರ ಈ ಭಾಗಕ್ಕೆ 5 ಸಾವಿರ ಕೋಟಿ ರೂ. ಅನುದಾನ ಘೋಷಿಸಿ 3 ಸಾವಿರ ಕೋಟಿ ರೂ. ಅನುದಾನ ಹಂಚಿಕೆ ಮಾಡಿದ್ದು, ಅದರಂತೆ ಪ್ರದೇಶದಲ್ಲಿ ರಸ್ತೆ, ಚರಂಡಿ ನಿರ್ಮಾಣ, ಮೂಲಸೌಕರ್ಯ ಕೆಲಸ ಭರದಿಂದ ಸಾಗಿದೆ. ಇದರೊಂದಿಗೆ ಪ್ರದೇಶದಲ್ಲಿ ವಿಶೇಷವಾಗಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗೆ ಅಕ್ಷರ ಆವಿಷ್ಕಾರ, ಆರೋಗ್ಯ ಆವಿಷ್ಕಾರ ಯೋಜನೆ ಜಾರಿಗೆ ತರಲಾಗಿದೆ ಎಂದು ಹೇಳಿದರು.

ನೀಟ್ ಪರೀಕ್ಷೆ ಅವ್ಯವಹಾರ ಕುರಿತಂತೆ ಪ್ರತಿಕ್ರಿಯಿಸಿದ ಡಾ.ಅಜಯ್ ಸಿಂಗ್, ಲೋಕಸಭಾ ಚುನಾವಣಾ ಫಲಿತಾಂಶ ದಿನವೇ ಪರೀಕ್ಷೆ ರಿಸಲ್ಟ್ ಘೋಷಣೆ ಮಾಡಿದ್ದು, ಹಲವು ಅವಮಾನಕ್ಕೆ ಎಡೆಮಾಡಿಕೊಟ್ಟಿದೆ. ಎಲ್ಲೆಡೆ ಅವ್ಯವಹಾರ ಕೇಳಿ ಬರುತ್ತಿದೆ ಎಂದು ಆರೋಪಿಸಿದ ಅವರು, ಕೂಡಲೇ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕ್ರಮ‌ ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಅವರು, ಮಕ್ಕಳ ಭವಿಷ್ಯದ ಜತೆಗೆ ಚೆಲ್ಲಾಟವಾಡುವುದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ‌ ಎಂದು ತಿಳಿಸಿದರು.

ಇದನ್ನೂ ಓದಿ:Tata Motors: ಟಾಟಾ ಮೋಟಾರ್ಸ್‌ನಿಂದ ʼಆಲ್ಟ್ರೋಜ್ ರೇಸರ್ʼ ಬಿಡುಗಡೆ; ದರ ಎಷ್ಟು?

ಶಿಕ್ಷಣಕ್ಕೆ ಹೆಚ್ಚಿನ ಒತ್ತು

ಪ್ರದೇಶದಲ್ಲಿ ಶಿಕ್ಷಕರ ಕೊರತೆ ಇರುವುದು ನಿಜ. ಮಂಡಳಿ ಅತಿಥಿ ಶಿಕ್ಷಕರನ್ನು ನೇಮಿಸಬಹುದು. ಪೂರ್ಣ ಪ್ರಮಾಣದಲ್ಲಿ ಶಿಕ್ಣಕರ ನೇಮಕ ಸರ್ಕಾರದ ಹಂತದಲ್ಲಿಯೇ ನಡೆಯಬೇಕಾಗುತ್ತದೆ. ಮುಖ್ಯಮಂತ್ರಿಗಳಲ್ಲಿ ಶಿಕ್ಷಕರ ಹುದ್ದೆ ಭರ್ತಿಗೆ ಒತ್ತಾಯ ಮಾಡಲಾಗುವುದು. ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆ ನಿಟ್ಟಿನಲ್ಲಿ ಅನುಭವಿ ಶಿಕ್ಷಣ ತಜ್ಞರ ಸಮಿತಿ ರಚಿಸಿ ಅವರ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು. ಕಳೆದ ವರ್ಷ ಮಂಡಳಿಯು ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಲಾದ 652 ಕೋಟಿ ರೂ. ಮೊತ್ತದಲ್ಲಿ ಫಲಿತಾಂಶ‌ ಸುಧಾರಣೆ ನಿಟ್ಟಿನಲ್ಲಿ ಕೇವಲ 3 ಕೋಟಿ ರೂ. ಖರ್ಚು ಮಾಡಿದೆ. ಮುಂದಿನ‌ ದಿನದಲ್ಲಿ ಈ ಮೊತ್ತ ಹೆಚ್ಚಿಸಲಾಗುವುದು ಎಂದು ತಿಳಿಸಿದರು.

2,009 ಕೋಟಿ ರೂ. ಖರ್ಚು

ಕೆ.ಕೆ.ಆರ್.ಡಿ.ಬಿ. ಮಂಡಳಿಗೆ 2023-24ನೇ ಸಾಲಿಗೆ ರಾಜ್ಯ ಸರ್ಕಾರ 5 ಸಾವಿರ ಕೋಟಿ ರೂ. ಅನುದಾನ ಘೋಷಿಸಿ, 3 ಸಾವಿರ ಕೋಟಿ ರೂ. ಹಂಚಿಕೆ‌ ಮಾಡಲಾಗಿದೆ. ಇದರಲ್ಲಿ ಇದುವರೆಗೆ 2,009 ಕೋಟಿ ರೂ. ಖರ್ಚು ಮಾಡಿದ್ದು, ಬರುವ ಆಗಸ್ಟ್ ಮಾಹೆವರೆಗೆ ಉಳಿದ ಅನುದಾನ ಸಹ ಖರ್ಚು ಮಾಡಲಾಗುವುದು ಎಂದರು.

ಇದನ್ನೂ ಓದಿ: Bird Flu: ದೇಶದಲ್ಲಿ ಎರಡನೇ ಹಕ್ಕಿ ಜ್ವರದ ಪ್ರಕರಣ ಪತ್ತೆ; ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ

371ಜೆ ಮೀಸಲಾತಿ ವಿರೋಧಕ್ಕೆ ಖಂಡನೆ

ದೇಶದಲ್ಲಿ ಅತ್ಯಂತ ಹಿಂದುಳಿದ ಪ್ರದೇಶವೆಂದು ಕಲ್ಯಾಣ ಕರ್ನಾಟಕ ಭಾಗಕ್ಕೆ ದಶಕಗಳ ಹೋರಾಟ ಫಲವಾಗಿ 371(ಜೆ) ಮೀಸಲಾತಿ ದೊರಕಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಕೆಲವು ಸಂಘಟನೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದಕ್ಕೆ ಖಂಡಿಸುತ್ತೇನೆ ಎಂದ ಅವರು, ಈ ಭಾಗಕ್ಕೆ ಸಂವಿಧಾನ ಬದ್ಧ ಸಿಗಬೇಕಾದ ಸವಲತ್ತು ದೊರಕಿಸಲು ಮತ್ತು ಮೀಸಲಾತಿ ರಕ್ಷಣೆ‌ಗೆ ತಾವು ಬದ್ಧರಾಗಿದ್ದೇವೆ. ಯಾವುದೇ ಹಂತದ ಹೋರಾಟಕ್ಕೂ ಹಿಂಜರಿಯುವುದಿಲ್ಲ ಎಂದು ತಿಳಿಸಿದರು.

Continue Reading
Advertisement
Narendra Modi
ದೇಶ17 mins ago

Narendra Modi: ಜೂನ್‌ 21ರ ಯೋಗ ದಿನದಂದು ವಿಶೇಷ ಸ್ಥಳದಲ್ಲಿ ಮೋದಿ ಯೋಗ; ಯಾವುದದು?

Kuwait fire
ಪ್ರಮುಖ ಸುದ್ದಿ25 mins ago

Kuwait fire : ಕುವೈತ್ ನಲ್ಲಿ ಅಗ್ನಿ ಅವಘಡ: 5 ಭಾರತೀಯರು ಸೇರಿ 35 ಮಂದಿ ಸಾವು

IND vs USA
ಕ್ರಿಕೆಟ್26 mins ago

IND vs USA: ಇಂದಿನ ಪಂದ್ಯಕ್ಕೆ ಟೀಮ್​ ಇಂಡಿಯಾದಲ್ಲಿ 2 ಮಹತ್ವದ ಬದಲಾವಣೆ; ಯಾರಿಗೆ ಕೊಕ್​?

Kathua Terror Attack
ದೇಶ30 mins ago

Kathua Terror Attack: ಯೋಧನ ಹತ್ಯೆಗೆ ಪ್ರತಿಕಾರ; ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

Teachers Recruitment
ಪ್ರಮುಖ ಸುದ್ದಿ32 mins ago

Teachers Recruitment: ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು, ಮುಖ್ಯ ಶಿಕ್ಷಕರ ನೇಮಕಾತಿ: ಕೌನ್ಸೆಲಿಂಗ್‌ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

Dolly Dhananjay mana manakke Kotee Movie release
ಸ್ಯಾಂಡಲ್ ವುಡ್40 mins ago

Dolly Dhananjay: ಬಿಡುಗಡೆಗೂ ಮುನ್ನ ‘ಕೋಟಿ’ ಪೇಯ್ಡ್ ಪ್ರೀಮಿಯರ್ ಶೋ: ಜೂನ್‌ 14ಕ್ಕೆ ತೆರೆಗೆ!

AUS vs NAM
ಕ್ರೀಡೆ59 mins ago

AUS vs NAM: 17 ವರ್ಷಗಳ ಹಿಂದಿನ ಅನಗತ್ಯ ಟಿ20 ದಾಖಲೆ ಮುರಿದ ಗೆರ್ಹಾರ್ಡ್ ಎರಾಸ್ಮಸ್

Actor Darshan Arrested
ಪ್ರಮುಖ ಸುದ್ದಿ1 hour ago

Actor Darshan Arrested: ರೇಣುಕಾಸ್ವಾಮಿಗೆ ದರ್ಶನ್‌ ಗ್ಯಾಂಗ್‌ನಿಂದ ಕ್ರೂರ ಹಿಂಸೆ; ಪೋಸ್ಟ್‌ಮಾರ್ಟಂ ವರದಿಯಲ್ಲಿದೆ ಭಯಾನಕ ಡಿಟೇಲ್ಸ್‌

Actor Darshan
ಕರ್ನಾಟಕ1 hour ago

Actor Darshan: ದರ್ಶನ್‌ ಹೀರೋ ಅಲ್ಲ ಖಳನಾಯಕ, ಆತನಿಗೆ ಶಿಕ್ಷೆ ಆಗಲೇಬೇಕು: ರೇಣುಕಾ ಸ್ವಾಮಿ ತಂದೆ ಕಿಡಿ

KKRDB Chairman Dr Ajay Singh pressmeet in Kalaburagi
ಕರ್ನಾಟಕ2 hours ago

Kalaburagi News: ಜೂ.14ರಂದು ಸಿಎಂ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನಾ ಸಭೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ23 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ24 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ1 day ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ1 day ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ1 day ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌