Kantara Movie | ಚೇತನ್‌ ಟೀಕೆಗೆ ಉತ್ತರ ಕೊಟ್ಟ ರಿಷಬ್‌ ಶೆಟ್ಟಿ: ಏನಂದರು ಗೊತ್ತೆ? - Vistara News

ಸಿನಿಮಾ

Kantara Movie | ಚೇತನ್‌ ಟೀಕೆಗೆ ಉತ್ತರ ಕೊಟ್ಟ ರಿಷಬ್‌ ಶೆಟ್ಟಿ: ಏನಂದರು ಗೊತ್ತೆ?

ಭೂತಾರಾಧನೆ ಹಿಂದೂ ಸಂಸ್ಕೃತಿಯಲ್ಲ ಎಂದು ನಟ ಚೇತನ್‌ ಮಾಡಿರುವ ಟೀಕೆಗೆ ಕಾಂತಾರದ ಹೀರೋ ರಿಷಬ್‌ ಶೆಟ್ಟಿ ಸಂದರ್ಶನವೊಂದರಲ್ಲಿ ಉತ್ತರ ನೀಡಿದ್ದಾರೆ.

VISTARANEWS.COM


on

Kantara Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಕಾಂತಾರ ಸಿನಿಮಾ (Kantara Movie) ಹಿಂದೂ ಧರ್ಮದ ಭಾಗವಲ್ಲ ಎಂದಿರುವುದು ಚರ್ಚೆಗೆ ಕಾರಣವಾಗಿದೆ. ತೆಲುಗು ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ರಿಷಬ್ ಶೆಟ್ಟಿ ಅವರಿಗೆ, ‘ನೀವು ಭೂತಾರಾಧನೆಯನ್ನು ತಿರುಚಿ ಪ್ರಸ್ತುತ ಪಡಿಸಿದ್ದೀರೆಂದು ಕರ್ನಾಟಕದ ನಟರೊಬ್ಬರು ಹೇಳಿದ್ದಾರೆ ಅದು ನಿಜವೇ?’ ಎಂದು ಸಂದರ್ಶಕರೊಬ್ಬರು ಪ್ರಶ್ನೆ ಕೇಳಿದ್ದಾರೆ.

‘ಯಾರವರು, ಅವರು ಚೆನ್ನಾಗಿದ್ದಾರಾ? ಅವರೇನು ಮಾಡುತ್ತಿದ್ದಾರೆ” ಎಂದು ವ್ಯಂಗ್ಯವಾಗಿ ನಗುತ್ತಲೇ ಪ್ರಶ್ನಿಸಿದ ರಿಷಬ್ ಶೆಟ್ಟಿ, ‘ಈ ವಿಷಯದಲ್ಲಿ ನನ್ನದು ನೋ ಕಮೆಂಟ್ಸ್’ ಎಂದಿದ್ದಾರೆ. ಹಾಗೇ ಇಂತಹಾ ವಿಷಯದಲ್ಲಿ ನಾನು ಉತ್ತರಿಸುವ ಅವಶ್ಯಕತೆ ನನಗಿಲ್ಲ. ಆ ಸಂಸ್ಕೃತಿಯನ್ನು ಆರಾಧಿಸುವವರೆ ಇದನ್ನು ಒಪ್ಪಿದ್ದಾರೆ. ನಾನು ಈ ಸಿನಿಮಾ ಮಾಡಬೇಕಾದರೆ ಈ ಬಗ್ಗೆಯೂ ಜಾಗೃತ ವಹಿಸಿ , ಆ ಸಂಸ್ಕೃತಿಯನ್ನು ಉಳಿಸಿ , ಬೆಳೆಸುತ್ತಿರುವವರೆ ನನ್ನ ಜತೆ ಇದ್ದರು. ನಾನೂ ಅಲ್ಲಿಯವನೆ. ಅದನ್ನು ನೋಡುತ್ತಾ ಬೆಳೆದವನು ʼʼಎಂದಿದ್ದಾರೆ ರಿಷಬ್‌.

ಇದನ್ನೂ ಓದಿ | Kantara Movie | ʻದೈವಾರಾಧನೆ ನಮ್ಮ ನಂಬಿಕೆʼ ಚೇತನ್‌ ಕಿವಿ ಹಿಂಡಿದ ಉಪ್ಪಿ

ಅದೇ ರೀತಿ ʻʻಸಿನಿಮಾ ಮಾಡುವ ಯೋಚನೆ ಬಂದಾಗಲೇ ಆ ದೈವ ಆರಾಧನೆ ಮಾಡುವವರ ಭಾವನೆಗಳಿಗೆ ದಕ್ಕೆ ಆಗಬಾರದೆಂಬ ಎಚ್ಚರಿಕೆ ಇತ್ತು. ದೈವಾರಾಧಕರನ್ನು ಜತೆಯಲ್ಲಿಯೇ ಇಟ್ಟುಕೊಂಡು ಪ್ರತಿಯೊಂದು ದೃಶ್ಯ ತೆಗೆಯುವಾಗಲೂ ಇದು ಸರಿಯಾ ಎಂದು ಕೇಳಿ ಚಿತ್ರೀಕರಣ ಮಾಡಿದ್ದೇನೆʼʼ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಿನಿಮಾ ಮಾಡಿದ್ದೇನೆ. ಈ ಸಿನಿಮಾಕ್ಕಾಗಿ ರಕ್ತ ಸುರಿಸಿದ್ದೇನೆ. ಜನಕ್ಕೆ ಅದು ಇಷ್ಟವಾದರೆ ಅವರೇ ಸ್ವೀಕರಿಸುತ್ತಾರೆ. ಅಂತಿಮವಾಗಿ ಮಾತನಾಡಬೇಕಿರುವುದು ಸಿನಿಮಾ ವೀಕ್ಷಿಸಿದ ಜನ. ಭೂತಕೋಲಕ್ಕೆ ಅದರದ್ದೇ ಆದ ಭವ್ಯ ಇತಿಹಾಸವಿದೆ. ಗೊತ್ತಿಲ್ಲದೆ ಅದರ ಬಗ್ಗೆ ಮಾತನಾಡುವುದು ತಪ್ಪಾಗುತ್ತದೆ” ಎಂದಿದ್ದಾರೆ ರಿಷಬ್.

ʻʻಕಾಂತಾರ ಸಿನಿಮಾ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿ ಇದೆ. ಆದರೆ ಭೂತಕೋಲ ಹಿಂದೂ ಸಂಸ್ಕೃತಿ ಎಂದು ರಿಷಬ್‌ ಶೆಟ್ಟಿ ಹೇಳಿದ್ದಾರೆ. ಇದು ನಿಜವಲ್ಲ. ನಮ್ಮ ಪಂಬದ, ನಲಿಕೆ, ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣೀಯ ಹಿಂದೂ ಧರ್ಮಕ್ಕಿಂತ ಹಿಂದಿನವು. ಮೂಲನಿವಾಸಿ ಸಂಸ್ಕೃತಿಗಳನ್ನು ಸಿನಿಮಾದಲ್ಲಿ ಸತ್ಯದೊಂದಿಗೆ ಪ್ರದರ್ಶಿಸಬೇಕು ಎಂದು ನಾನು ಕೋರುತ್ತೇನೆʼʼ ಎಂದು ಚೇತನ್‌ ಟ್ವೀಟ್‌ ಮಾಡಿದ್ದರು.

ಇದನ್ನೂ ಓದಿ | Kantara Movie | ರಿಷಬ್‌ ಶೆಟ್ಟಿಯ ನಿಜವಾದ ಹೆಸರಿಗೆ ನೆಟ್ಟಿಗರಿಂದ ಫುಲ್ ಟ್ರೋಲ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka Swamy murder : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಸೇರಿ ಈಗಾಗಲೇ ಆರೋಪಿಗಳ ಬಂಧನವಾಗಿದೆ. ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿದ್ದ ಆಟೋ ಹಾಗೂ ಕಾರನ್ನು ಸೀಜ್ ಮಾಡಲಾಗಿದೆ. ಇದೇ ವೇಳೆ ಎ1 ಆರೋಪಿ ಪವಿತ್ರಾ ಗೌಡ ಸೇರಿ ಹಲವು ಆರೋಪಿಗಳನ್ನು ಕರೆತಂದು ಸ್ಥಳ ಮಹಜರು ಮಾಡಲಾಯಿತು.

VISTARANEWS.COM


on

By

Renukaswamy murder case The location of the accused is complete
Koo

ಬೆಂಗಳೂರು/ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ (Renuka Swamy murder) ಪ್ರಕರಣ ಸಂಬಂಧ ತನಿಖೆಯು ಚುರುಕುಗೊಂಡಿದೆ. ಭಾನುವಾರ ಆರೋಪಿಗಳ ಮನೆಯಲ್ಲಿ ಸ್ಥಳ ಮಹಜರು ಪ್ರಕ್ರಿಯೆಯನ್ನು ನಡೆಸಲಾಯಿತು. ಚಿತ್ರದುರ್ಗದಲ್ಲಿ ಬೆಂಗಳೂರು ಪೊಲೀಸರಿಂದ ಸ್ಥಳ ಮಹಜರು ವೇಳೆ ರೇಣುಕಾಸ್ವಾಮಿ ಕಿಡ್ನ್ಯಾಪ್‌ಗೆ ಬಳಸಿದ್ದ ಆಟೋವನ್ನು ಸೀಜ್‌ ಮಾಡಲಾಯಿತು. ಜತೆಗೆ ಆರೋಪಿ ರವಿ ಮನೆ ಬಳಿ ಇದ್ದ ಟೊಯೊಟಾ ಇಟಿಯೋಸ್ ಕಾರನ್ನು ಜಪ್ತಿ ಮಾಡಲಾಗಿದೆ. ಭೀಕರವಾಗಿ ಕೊಂದರೂ ಆರೋಪಿಗಳಿಗೆ ಪಾಪಪ್ರಜ್ಞೆ ಕಾಡುತ್ತಿಲ್ವಾ? ಅಥವಾ ಪ್ರಭಾವಿಗಳ ಬೆಂಬಲ ಇದೆ ಎಂಬಂತೆ ನಗುತ್ತಲೇ ಪವಿತ್ರಾ ಗೌಡ ಹಾಗೂ ಪವನ್‌ ಮನೆಯಿಂದ ಹೊರಬಂದಿದ್ದಾರೆ.

ಪವಿತ್ರಾಗೌಡ ಮನೆಯಲ್ಲಿ ಸತತ 3 ಗಂಟೆಗಳ ಕಾಲ ಪರಿಶೀಲನೆ

ಬೆಂಗಳೂರಿನ ಆರ್‌ಆರ್ ನಗರದಲ್ಲಿ ಕಳೆದ 10 ವರ್ಷಗಳಿಂದ ಪವಿತ್ರಾಗೌಡ ವಾಸವಿದ್ದು, ಭಾನುವಾರ ಅವರ ನಿವಾಸದಲ್ಲಿ ಪೊಲೀಸರು ಸ್ಥಳ ಮಹಜರ್ ಮಾಡಿದರು. ಪವಿತ್ರಾ ಜೂನ್ 9 – 10ರಂದು ಎಲ್ಲಿದ್ದರು? ಎಷ್ಟೊತ್ತಿಗೆ ಮನೆಯಿಂದ ತೆರಳಿದ್ದರು ಎಂಬುದನ್ನು ತಿಳಿಯಲು ಸಿಸಿಟಿವಿ ಪರಿಶೀಲನೆ ನಡೆಸಲಾಯಿತು.

ಪವಿತ್ರಾಗೌಡ ಇರುವ ಮನೆಯು ಡುಪ್ಲೆಕ್ಸ್ ಆಗಿದ್ದು ಒಟ್ಟು ಮೂರು ಮಹಡಿ ಇದೆ. ಇದರಲ್ಲಿ ಕೆಳಗಡೆ ಪಾರ್ಕಿಂಗ್‌ ಜಾಗದೊಂದಿಗೆ ಪವನ್ ವಾಸಕ್ಕೆ ಮನೆಯೊಂದು ಇದೆ. ಪವನ್ ಪವಿತ್ರಾ ಗೌಡಗೆ ಮನೆ‌ ಕೆಲಸಗಾರ ಜತೆಗೆ ನಾಯಿಯನ್ನು ನೋಡಿಕೊಳ್ಳುತ್ತಿದ್ದ. ಆಗಾಗ ದರ್ಶನ್ ಈ ಮನೆಗೆ ಫಾರ್ಚುನರ್ ಕಾರಿನಲ್ಲಿ ಬರುತ್ತಿದ್ದರು ಎನ್ನಲಾಗಿದೆ. ಅಕ್ಕಪಕ್ಕ ಮನೆಯವರ ಜತೆ ಪವಿತ್ರಾಗೆ ಸಂಪರ್ಕವೇ ಇರಲಿಲ್ಲ. ಪವಿತ್ರಾ ವೊಲ್ಸ್ ವ್ಯಾಗೆನ್ ಮತ್ತು ರೇಂಜ್ ರೋವರ್‌ ಕಾರಿನಲ್ಲಿ ಓಡಾಡುತ್ತಿದ್ದಳು ಎನ್ನಲಾಗಿದೆ. ಇನ್ನೂ ಪವಿತ್ರಾ ಗೌಡ ಮಗಳು ಹಾಸ್ಟೆಲ್‌ನಲ್ಲಿ ಇದ್ದು, ಆಗಾಗ ಬಂದು ಹೋಗುತ್ತಿದ್ದಳು.

ಗುಸು ಗುಸು ಮಾತು, ನಗುತ್ತಲೇ ಮಹಜರ್‌ ಪ್ರಕ್ರಿಯೆಯಲ್ಲಿ ಭಾಗಿ

ಪವಿತ್ರಾಗೌಡ ಜತೆಗೆ ಪವನ್‌ನನ್ನು ಸ್ಥಳ ಮಹಜರಿಗೆ ಕರೆತರಲಾಗಿತ್ತು. ಈ ವೇಳೆ ಇಬ್ಬರು ಗುಸು ಗುಸು ಎಂದು ಮಾತನಾಡುತ್ತಿರುವುದು ಕಂಡು ಬಂತು. ಪವನ್ ನಗು ನಗುತ್ತಲೇ ಮಹಜರ್ ಪ್ರಕ್ರಿಯೆಯಲ್ಲಿ ಭಾಗಿಯಾಗಿ, ಪ್ರಭಾವಿಗಳ ರಕ್ಷಣೆಯ ವಿಶ್ವಾಸ ತೋರಿದಂತೆ ಇತ್ತು. ಅತ್ತ ಸತತ ಮೂರು ಗಂಟೆಗಳ ಮಹಜರ್ ಪ್ರಕ್ರಿಯೆ ನಂತರ ಹೊರ ಬಂದ ಪವಿತ್ರ ಗೌಡ ಕೂಡ ನಗುಮುಖದಲ್ಲೇ ಪೊಲೀಸ್‌ ವ್ಯಾನ್‌ ಹತ್ತಿದ್ದರು.

ಎಫ್‌ಎಸ್‌ಎಲ್ ತಂಡದಿಂದ ಮಹತ್ತರ ಸಾಕ್ಷಿಗಳ ಸಂಗ್ರಹ ಮಾಡಿ, ಎರಡು ಬಟ್ಟೆಗಂಟುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಸ್ಥಳ ಮಹಜರು ಮುಗಿಸಿದ ಬಳಿಕ ಪವಿತ್ರಗೌಡ ಹಾಗೂ ಪವನ್‌ನನ್ನು ವಾಪಸ್‌ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಕರೆತರಲಾಯಿತು.

ಇತ್ತ ಎ5 ಆರೋಪಿ ನಂದೀಶ್‌ನನ್ನು ಪಟ್ಟಣಗೆರೆ ಶೆಡ್‌ನಿಂದ ನೇರವಾಗಿ ದರ್ಶನ್‌ ಮನೆಗೆ ಕರೆತಂದು ಪರಿಶೀಲನೆ ಮಾಡಲಾಯಿತು. ಈ ವೇಳೆ ನಂದೀಶ್‌ ಶೂ ಮತ್ತೆ ಬಟ್ಟೆಯನ್ನು ಜಪ್ತಿ ಮಾಡಲಾಯಿತು. ಸ್ಥಳ ಮಹಜರಿಗಾಗಿ ಆರೋಪಿ ವಿನಯ್ ಜತೆಗೆ ನಿಖಿಲ್‌ನನ್ನು ಅವರ ಮನೆಯಲ್ಲಿ ಕರೆದುಕೊಂಡು ಹೋಗಲಾಗಿತ್ತು. ಕೃತ್ಯ ನಡೆದ ದಿನ ಧರಿಸಿದ್ದ ಬಟ್ಟೆ , ಶೂ ಇನ್ನಿತರ ವಸ್ತುಗಳ ರಿಕವರಿಗಾಗಿ ‌ಮುಂದಾದರು.

ಚಿತ್ರದುರ್ಗದಲ್ಲೂ ಸ್ಥಳ ಮಹಜರು

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಆರೋಪಿಗಳನ್ನು ಚಿತ್ರದುರ್ಗಕ್ಕೆ ಕರೆ ತಂದು ಸ್ಥಳ ಮಹಜರು ಮಾಡಲಾಯಿತು. ರೇಣುಕಾ ಸ್ವಾಮಿ ಕೊಲೆ ಆರೋಪಿಗಳಾದ ರಘು, ರವಿ, ಅನು, ಜಗ್ಗನ ಕರೆ ತರಲಾಯಿತು. ಪೊಲೀಸ್ ಬಿಗಿ ಬಂದೋಬಸ್ತ್‌ನಲ್ಲಿ ನಗರದ ಮಹಾವೀರ ನಗರದಲ್ಲಿರುವ ಜಗ್ಗ ಅಲಿಯಾಸ್‌ ಜಗದೀಶ್ ಮನೆಯನ್ನು ಪರಿಶೀಲನೆ ನಡೆಸಿದರು. ಗೋವಿಂದರಾಜ ನಗರ ಪೊಲೀಸ್ ಇನ್‌ಸ್ಪೆಕ್ಟರ್‌ ಸುಬ್ರಹ್ಮಣ್ಯ ನೇತೃತ್ವದಲ್ಲಿ ಮಹಜರು ನಡೆಸಲಾಯಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿತ್ರದುರ್ಗ

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Renuka swamy Murder : ರೇಣುಕಾಸ್ವಾಮಿಯನ್ನು ಮನುಷ್ಯತ್ವವನ್ನು ಇಲ್ಲದಂತೆ ಕ್ರೂರಿಗಳ ರೀತಿಯಲ್ಲಿ ಕೊಲೆ ಮಾಡಲಾಗಿದೆ. ಪ್ರಕರಣದಲ್ಲಿ ರಾಜಕೀಯ ಹಸ್ತಕ್ಷೇಪ ಆಗದಂತೆ ನಿಷ್ಪಕ್ಷಪಾತವಾಗಿ ತನಿಖೆಯನ್ನು ನಡೆಸಬೇಕು ಎಂದು ಬಾಳೇ ಹೊನ್ನೂರು ಶ್ರೀಗಳು ಆಗ್ರಹಿಸಿದರು.

VISTARANEWS.COM


on

By

Renuka swamy murder
Koo

ಚಿತ್ರದುರ್ಗ: ಚಿತ್ರದುರ್ಗದಲ್ಲಿರುವ ರೇಣುಕಾಸ್ವಾಮಿ (Renuka swamy Murder) ಮನೆಗೆ ಭಾನುವಾರ ಬಾಳೆ ಹೊನ್ನೂರು ಮಠದ ರಂಭಾಪುರಿ ಶ್ರೀಗಳು ಭೇಟಿ ನೀಡಿದರು. ಮೃತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ರೇಣುಕಾಸ್ವಾಮಿ ಪೋಷಕರು ಶ್ರೀಗಳ ಪಾದಪೂಜೆ ಮಾಡಿ ಆಶೀರ್ವಾದ ಪಡೆದರು.

ಬಳಿಕ ಮಾತನಾಡಿದ ಶ್ರೀಗಳು ರೇಣುಕಾಸ್ವಾಮಿ ಕೊಲೆಯು ಅಮಾನವೀಯವಾಗಿದೆ. ಮನುಷ್ಯತ್ವ ಇಲ್ಲದಂತೆ ಕ್ರೂರಿಗಳ ರೀತಿಯಲ್ಲಿ ಕೊಲೆ ಮಾಡಲಾಗಿದೆ. ಇತ್ತೀಚೆಗೆ ಇಂತಹ ಘಟನೆಗಳು ಹೆಚ್ಚಾಗುತ್ತಿದ್ದು, ಭಯದ ವಾತಾವರಣ ನಿರ್ಮಾಣವಾಗುತ್ತಿದೆ. ಯಾವುದೇ ಪಕ್ಷದ ಸರ್ಕಾರಗಳು ಇರಲಿ ನಿರ್ದಾಕ್ಷಣ್ಯವಾಗಿ ಕ್ರಮಕೈಗೊಳ್ಳಬೇಕು. ಆರೋಪಿಗಳಿಗೆ ತಕ್ಕ ಶಿಕ್ಷೆಯನ್ನು ವಿಧಿಸಬೇಕು. ಮೃತ ಕುಟುಂಸ್ಥರಿಗೆ ಸರ್ಕಾರ ಬೆಂಬಲವಾಗಿ ನಿಲ್ಲಬೇಕು ಎಂದರು.

ನಟರು ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು- ಜಯ ಮೃತ್ಯುಂಜಯ ಸ್ವಾಮೀಜಿ

ಕಲಾವಿದರ ಬದುಕು ಮತ್ತು ಬರಹ ಒಂದೆ ಆಗಿರಬೇಕು. ಪರದೆ ಮೇಲಿನ ನಟನೆಗೂ ಬದುಕಿಗೂ ಸಾಮೀಪ್ಯವಾಗುವಂತೆ ಬದಕುವ ಪ್ರಯತ್ನ ಮಾಡಬೇಕು. ಪರದೇ ಮೇಲೆ ಒಂದು ನಟನೆ, ಪರದೇ ಹಿಂದೆ ಒಂದು ನಟನೆ ಮಾಡಿದಾಗ ಇಂತಹ ಅವಘಡ ಆಗುತ್ತವೆ ಎಂದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಪಂಚಮಸಾಲಿ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ. ಇಂತಹ ಅವಘಡಗಳಿಗೆ ಅವಕಾಶ ಕೊಡದೆ ಪ್ರತಿಯೊಬ್ಬ ನಟರು ತಮ್ಮ ವ್ಯಕ್ತಿತ್ವ ರೂಪಿಸಿಕೋಳ್ಳಬೇಕು. ಡಾ ರಾಜಕುಮಾರ, ಡಾ ವಿಷ್ಣುವರ್ಧನ್‌ ಆದರ್ಶವಾಗಿದ್ದಾರೆ. ಅಂತಹ ಮಹಾನ್‌ ನಟರಂತೆ ಎಲ್ಲರಿಗೂ ಆದರ್ಶವಾಗಬೇಕು ಎಂದರು.

ದರ್ಶನ ವಿರುದ್ಧ ರೊಚ್ಚಿಗೆದ್ದ ಕರವೇ ಕಾರ್ಯಕರ್ತರು

ಬೆಳಗಾವಿಯಲ್ಲಿ ನಟ ದರ್ಶನ ವಿರುದ್ಧ ಕರವೇ ಕಾರ್ಯಕರ್ತರು ರೊಚ್ಚಿಗೆದ್ದರು. ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಖಂಡಿಸಿ ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ಜಿಲ್ಲಾ ಘಟಕದಿಂದ ದರ್ಶನ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ರಾಜ್ಯದಲ್ಲಿ ಸಣ್ಣಪುಟ್ಟ ವಿಷಯಕ್ಕೂ ಕೊಲೆಗಳಾಗುತ್ತಿವೆ. ಹೀಗಾಗಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತರಬೇಕು. ರೇಣುಕಾಸ್ವಾಮಿ ಕೊಲೆ ಆರೋಪಿಗಳಾದ ದರ್ಶನ ಮತ್ತು ಪವಿತ್ರಾಗೌಡ ಸೇರಿದಂತೆ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಮನವಿ ಮಾಡಿದರು.

ಇದನ್ನೂ ಓದಿ: Renuka Swamy Murder:‌ ರೇಣುಕಾಸ್ವಾಮಿಗೆ 4 ಬಾರಿ ಎಲೆಕ್ಟ್ರಿಕ್ ಶಾಕ್; ಪೋಸ್ಟ್ ಮಾರ್ಟಂ ವರದಿಯಲ್ಲಿವೆ ಭಯಾನಕ ಅಂಶಗಳು!

ಚಿತ್ರರಂಗದಿಂದ ಬ್ಯಾನ್‌ ಮಾಡಿ

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಖಂಡಿಸಿ ಮೈಸೂರಿನ ತಿ.ನರಸೀಪುರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಬಸವ ಬಳಗಗಳ ಒಕ್ಕೂಟ ಪ್ರತಿಭಟಿಸಿದೆ. ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಒಕ್ಕೂಟದ ಸದಸ್ಯರು ನಟ ದರ್ಶನ್‌ ಚಿತ್ರರಂಗದಿಂದ ಬ್ಯಾನ್ ಆಗಬೇಕು ಎಂದು ಒತ್ತಾಯಿಸಿದರು.

ನಟ ದರ್ಶನ್‌ ಚಿತ್ರಗಳು ತೆರೆಯ ಮೇಲೆ ಬರದಂತೆ ವಾಣಿಜ್ಯ ಮಂಡಳಿ ಕ್ರಮ ಕೈಗೊಳ್ಳಬೇಕು. ರೇಣುಕಾಸ್ವಾಮಿ ಕುಟುಂಬಕ್ಕೆ ಸರ್ಕಾರವು 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಈ ಪ್ರಕರಣದಲ್ಲಿ ಯಾರ ಒತ್ತಡಕ್ಕೂ ಮಣಿಯಬಾರದು. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಒತ್ತಾಯಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Kannada New Movie: ಪೃಥ್ವಿ ಅಂಬಾರ್ ಈಗ ‘ಚೌಕಿದಾರ್’: ರಥಾವರ ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಹೊಸ ಹೆಜ್ಜೆ!

Kannada New Movie: ಚೌಕಿದಾರ್ ಟೈಟಲ್ ಕೇಳಿದ ತಕ್ಷಣ ಇದು ಮಾಸ್ ಸಿನಿಮಾ ಎಂದುಕೊಳ್ಳಬೇಡಿ. ಇದು ಪಕ್ಕ ಫ್ಯಾಮಿಲಿ ಎಂಟರ್ ಟೈನರ್. ಚಂದ್ರಶೇಖರ್ ಬಂಡಿಯಪ್ಪ ಪ್ರತಿ ಸಿನಿಮಾದಲ್ಲಿಯೂ ಹೊಸ ಕಥೆಯೊಂದಿಗೆ ಬರ್ತಾರೆ. ಆನೆ ಪಟಾಕಿಯಲ್ಲಿ ಕಾಮಿಡಿ, ರಥಾವರದಲ್ಲಿ ಕಲ್ಟ್, ತಾರಕಾಸುರದಲ್ಲೊಂದು ಬಗೆ, ರೆಡ್ ಕಾಲರ್ ನಲ್ಲಿ ಕ್ರೈಮ್ ಥ್ರಿಲ್ಲರ್, ಕರಾವಳಿಯಲ್ಲಿ ಕರಾವಳಿ ಸೊಡಗನ್ನು ಕಟ್ಟಿಕೊಟ್ಟಿರುವ ಅವರು ಚೌಕಿದಾರ್ ಸಿನಿಮಾದಲ್ಲಿ ಯಾವ ರೀತಿ ಕಥೆಯನ್ನು ಕಟ್ಟಿಕೊಟ್ಟಿದ್ದಾರೆಂಬನ ಕುತೂಹಲ ಪ್ರೇಕ್ಷಕರಲ್ಲಿದೆ.

VISTARANEWS.COM


on

Kannada New Movie Chowkidar pruthvi ambaar
Koo

ಬೆಂಗಳೂರು: ದಿಯಾ ಫೇಮ್‌ ಪೃಥ್ವಿ ಅಂಬಾರ್ (Kannada New Movie) ಹಾಗೂ ರಥಾವರ ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಜೋಡಿಯ ಹೊಸ ಸಿನಿಮಾಗೆ ಮಾಸ್ ಟೈಟಲ್ ಫಿಕ್ಸ್ ಮಾಡಲಾಗಿದೆ. ಪೃಥ್ವಿ ಈಗ ʻಚೌಕಿದಾರ್ʼ ಆಗಿದ್ದಾರೆ. ಕೆಂಪು ಬಣ್ಣದ ಅಕ್ಷರದ ಮೂಲಕ ಚಿತ್ರತಂಡ ಚೌಕಿದಾರ್ ರಿವೀಲ್ ಮಾಡಿದೆ. ರೋರಿಂಗ್ ಸ್ಟಾರ್ ಶ್ರೀಮುರಳಿ ಚಂದ್ರಶೇಖರ್ ಬಂಡಿಯಪ್ಪ ಅವರ 6ನೇ ಪ್ರಯತ್ನಕ್ಕೆ ಸಾಥ್ ಕೊಟ್ಟಿದ್ದು, ಚೌಕಿದಾರ್ ಟೈಟಲ್ ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭಾಶಯ ತಿಳಿಸಿದ್ದಾರೆ. ಚೌಕಿದಾರ್ ಬಹುಭಾಷೆಯಲ್ಲಿ ಮೂಡಿ ಬರ್ತಿದೆ. ಕನ್ನಡದ ಜತೆಗೆ ಹಲವು ಭಾಷೆಯಲ್ಲಿ ಚಿತ್ರ ತಯಾರಾಗುತ್ತಿದೆ.

ಚೌಕಿದಾರ್ ಟೈಟಲ್ ಕೇಳಿದ ತಕ್ಷಣ ಇದು ಮಾಸ್ ಸಿನಿಮಾ ಎಂದುಕೊಳ್ಳಬೇಡಿ. ಇದು ಪಕ್ಕ ಫ್ಯಾಮಿಲಿ ಎಂಟರ್ ಟೈನರ್. ಚಂದ್ರಶೇಖರ್ ಬಂಡಿಯಪ್ಪ ಪ್ರತಿ ಸಿನಿಮಾದಲ್ಲಿಯೂ ಹೊಸ ಕಥೆಯೊಂದಿಗೆ ಬರ್ತಾರೆ. ಆನೆ ಪಟಾಕಿಯಲ್ಲಿ ಕಾಮಿಡಿ, ರಥಾವರದಲ್ಲಿ ಕಲ್ಟ್, ತಾರಕಾಸುರದಲ್ಲೊಂದು ಬಗೆ, ರೆಡ್ ಕಾಲರ್ ನಲ್ಲಿ ಕ್ರೈಮ್ ಥ್ರಿಲ್ಲರ್, ಕರಾವಳಿಯಲ್ಲಿ ಕರಾವಳಿ ಸೊಡಗನ್ನು ಕಟ್ಟಿಕೊಟ್ಟಿರುವ ಅವರು ಚೌಕಿದಾರ್ ಸಿನಿಮಾದಲ್ಲಿ ಯಾವ ರೀತಿ ಕಥೆಯನ್ನು ಕಟ್ಟಿಕೊಟ್ಟಿದ್ದಾರೆಂಬನ ಕುತೂಹಲ ಪ್ರೇಕ್ಷಕರಲ್ಲಿದೆ.

ಪೃಥ್ವಿ-ಚಂದ್ರಶೇಖರ್ ಬಂಡಿಯಪ್ಪ ಸಂಗಮದ ಸಿನಿಮಾವನ್ನು ವಿದ್ಯಾ ಶೇಖರ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡುತ್ತಿದ್ದಾರೆ. ಸಚಿನ್ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ವಿ. ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆಯುತ್ತಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರದ ಉಳಿದ ತಾರಾಬಳಗ ಹಾಗೂ ತಾಂತ್ರಿಕ ಬಳಗವನ್ನು ಚಿತ್ರತಂಡದ ಒಂದೊಂದಾಗಿ ಮಾಹಿತಿ ನೀಡಲಿದೆ.

ಇದನ್ನೂ ಓದಿ: V Cinemas: ರಮೇಶ್ ಅರವಿಂದ್ – ಡಾಲಿ ಧನಂಜಯರಿಂದ ‘ವಿ ಸಿನಿಮಾಸ್’ ಮಲ್ಟಿಪ್ಲೆಕ್ಸ್ ಉದ್ಘಾಟನೆ

ಇದನ್ನೂ ಓದಿ: Kusina Mane: ಗ್ರಾಮೀಣ ಮಹಿಳೆಯರ ಪಾಲಿಗೆ ವರದಾನವಾದ ಕೂಸಿನ ಮನೆ; ಮಕ್ಕಳ ದಾಖಲಾತಿ ಹೆಚ್ಚಳ

ಆನೆ ಪಟಾಕಿ ಮೂಲಕ ಸ್ಯಾಂಡಲ್ ವುಡ್‌ಗೆ ಹೆಜ್ಜೆ ಇಟ್ಟಿದ್ದ ಚಂದ್ರಶೇಖರ್ ಬಂಡಿಯಪ್ಪ ಆ ಬಳಿಕ ರಥಾವರ ಸಿನಿಮಾ ಮೂಲಕ ದೊಡ್ಡ ಹೆಸರು ಪಡೆದುಕೊಂಡರು. ಆ ಬಳಿಕ ತಾರಕಾಸುರ ಸಿನಿಮಾ ಮಾಡಿ ಗೆದ್ದರು. ಈ ಚಿತ್ರಗಳ ಸಕ್ಸೆಸ್‌ ಬಳಿಕ ಬಾಲಿವುಡ್ ಗೆ ಹಾರಿರುವ ಚಂದ್ರಶೇಖರ್ ಬಂಡಿಯಪ್ಪ ರೆಡ್ ಕಾಲರ್ ಎಂಬ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಈ ಸಿನಿಮಾದಲ್ಲಿ ಕನ್ನಡದ ಕಿಶೋರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಕೆಲಸ ಮುಗಿಸಿರುವ ಅವರು ಗುರುದತ್ ಗಾಣಿಗ ನಿರ್ದೇಶನದ ಕರಾವಳಿ ಚಿತ್ರಕ್ಕೂ ಕಥೆ ಬರೆದಿದ್ದಾರೆ. ಇದೀಗ ಚಂದ್ರಶೇಖರ್ ಬಂಡಿಯಪ್ಪ ಹೊಸ ಕಥೆ ಹೇಳೋದಿಕ್ಕೆ ನಿಮ್ಮ ಮುಂದೆ ಬರ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Actor Darshan:  ಇನ್​ಸ್ಟಾಗ್ರಾಮ್‌ ಖಾತೆಯನ್ನು ಸಕ್ರಿಯಗೊಳಿಸಿದ ದರ್ಶನ್‌ ಪತ್ನಿ; ಮಾಧ್ಯಮದ ಮುಂದೆ ಬರ್ತಾರಾ?

Actor Darshan: ದರ್ಶನ್‌ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದವು. ಇನ್ನು ಕೌಟುಂಬಿಕ ಕಲಹದಲ್ಲಿಯೂ 28 ದಿನಗಳ ಕಾಲ ಜೈಲಿನಲ್ಲಿ ಇದ್ದು ಬಂದಿದ್ದರು. 2011ರಲ್ಲಿ ವಿಜಯಲಕ್ಷ್ಮಿ ಮೇಲೆ ದರ್ಶನ್ ಮಾರಣಾಂತಿಕ ಹಲ್ಲೆ ಮಾಡಿದ್ದರು. 2016ರಲ್ಲಿ ಮತ್ತೊಮ್ಮೆ ದರ್ಶನ್ ವಿರುದ್ಧ ವಿಜಯಲಕ್ಷ್ಮಿ ದೂರು ನೀಡಿದ್ದ ಘಟನೆಯೂ ನಡೆದಿತ್ತು. ಮಗನನ್ನು ಹತ್ಯೆ ಮಾಡುವುದಾಗಿಯೂ ದರ್ಶನ್‌ ಬೆದರಿಸುವುದಾಗಿ ಕೇಳಿ ಬಂದಿತ್ತು.

VISTARANEWS.COM


on

Vijayalakshmi Darshan Reactivated Instagram Account
Koo

ಬೆಂಗಳೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ (Actor Darshan) ಜೈಲು ಸೇರಿದ ಬಳಿಕ ಪತ್ನಿ ವಿಜಯಲಕ್ಷ್ಮಿ ಅವರು ತಮ್ಮ ಇನ್ಸ್ಟಾ ಖಾತೆಯನ್ನು ಡಿಲಿಟ್‌ ಮಾಡಿದ್ದರು. ಈಗ ಮತ್ತೆ ತಮ್ಮ ಇನ್​ಸ್ಟಾಗ್ರಾಂ ಖಾತೆಯನ್ನು ಸಕ್ರಿಯಗೊಳಿಸಿದ್ದಾರೆ. ಮಾತ್ರವಲ್ಲ ವಿಜಯಲಕ್ಷ್ಮಿ ಅವರೇ ದರ್ಶನ್‌ ಪರ ವಕೀಲ ಅನಿಲ್ ಬಾಬು ಅವರನ್ನು ನೇಮಿಸಿದ್ದಾರೆ. ಇನ್ನು ದರ್ಶನ್‌ ಜೈಲು ಸೇರಿದಾಗಿನಿಂದ ಅವರ ಸಹೋದರ ಆಗಲಿ, ತಾಯಿಯಾಗಲಿ ದರ್ಶನ್‌ ಅವರನ್ನು ಠಾಣೆಗೆ ಭೇಟಿ ನೀಡಿಲ್ಲ.

ಇದೀಗ ವಿಜಯಲಕ್ಷ್ಮಿ ಹಳೆಯ ಖಾತೆಯನ್ನೇ ಮುಂದುವರಿಸಿದ್ದಾರೆ. ಎಲ್ಲ ಪೋಸ್ಟ್​ಗಳನ್ನು ಡಿಲೀಟ್ ಮಾಡಿದ್ದಾರೆ. ಫಾಲೋ ಮಾಡುತ್ತಿದ್ದವರನ್ನು ಸಹ ಅನ್​ಫಾಲೋ ಮಾಡಿದ್ದಾರೆ.ಖಾತೆ ಹೆಸರು ‘ವಿಜಿ ದರ್ಶನ್’ ಎಂದೇ ಇದೆ. ಬಯೋನಲ್ಲಿ ವಿಜಯಲಕ್ಷ್ಮಿ ದರ್ಶನ್ ಎಂದಿದೆ. ಆದರೆ ಪ್ರೊಫೈಲ್ ಚಿತ್ರ, ಮಾಡಲಾಗಿದ್ದ ಪೋಸ್ಟ್​ಗಳೆಲ್ಲವನ್ನೂ ಸಹ ವಿಜಯಲಕ್ಷ್ಮಿ ಡಿಲೀಟ್ ಮಾಡಿದ್ದಾರೆ.

ವಕೀಲ ಅನಿಲ್ ಬಾಬು ಮಾಧ್ಯಮದವರ ಮುಂದೆ ಮಾತನಾಡಿ ʻʻವಿಜಯಲಕ್ಷ್ಮಿ ಅವರ ಪತ್ನಿಗೆ ಬೇಜಾರು ಆಗಿದ್ದು, ಪವಿತ್ರಾ ಗೌಡ ಅವರು ದರ್ಶನ್‌ ಹೆಂಡತಿ ಎಂದು ಎಲ್ಲ ಮೀಡಿಯಾಗಳು ತೋರಿಸಿದ್ದರು. ದರ್ಶನ್‌ ಅವರಿಗೆ ಇರವ ಏಕೈಕ ಪತ್ನಿ ಎಂದರೆ ಅದು ವಿಜಯಲಕ್ಷ್ಮಿ. ದಂಪತಿಗೆ ವಿನೀಶ್‌ ಎಂಬ ಪುತ್ರನಿದ್ದಾನೆ. ಮಾಧ್ಯಮಗಳು ಪವಿತ್ರಾ ಅವರನ್ನು ದರ್ಶನ್​ರ ಪತ್ನಿ ಎಂದು ಸಂಭೋದಿಸಬಾರದು’ ಎಂದಿದ್ದರು. ವಿಜಯಲಕ್ಷ್ಮಿ ಅವರು ಮಾನಸಿಕವಾಗಿ ಜರ್ಜರಿತವಾಗಿದ್ದಾರೆ. ಸದ್ಯಕ್ಕೆ ಅವರಿಗೆ ಸಮಯದ ಅಗತ್ಯವಿದೆ. ಆದಷ್ಟು ಬೇಗ ಅವರು ಎಲ್ಲರ ಮುಂದೆ ಬರಲಿದ್ದಾರೆ ಎಂದಿದ್ದರು.

ಇದನ್ನೂ ಓದಿ: V Cinemas: ರಮೇಶ್ ಅರವಿಂದ್ – ಡಾಲಿ ಧನಂಜಯರಿಂದ ‘ವಿ ಸಿನಿಮಾಸ್’ ಮಲ್ಟಿಪ್ಲೆಕ್ಸ್ ಉದ್ಘಾಟನೆ

ಕೌಟುಂಬಿಕ ಕಲಹದಲ್ಲಿ ʼದಾಸʼ

ದರ್ಶನ್‌ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದವು. ಇನ್ನು ಕೌಟುಂಬಿಕ ಕಲಹದಲ್ಲಿಯೂ 28 ದಿನಗಳ ಕಾಲ ಜೈಲಿನಲ್ಲಿ ಇದ್ದು ಬಂದಿದ್ದರು. 2011ರಲ್ಲಿ ವಿಜಯಲಕ್ಷ್ಮಿ ಮೇಲೆ ದರ್ಶನ್ ಮಾರಣಾಂತಿಕ ಹಲ್ಲೆ ಮಾಡಿದ್ದರು. 2016ರಲ್ಲಿ ಮತ್ತೊಮ್ಮೆ ದರ್ಶನ್ ವಿರುದ್ಧ ವಿಜಯಲಕ್ಷ್ಮಿ ದೂರು ನೀಡಿದ್ದ ಘಟನೆಯೂ ನಡೆದಿತ್ತು. ಮಗನನ್ನು ಹತ್ಯೆ ಮಾಡುವುದಾಗಿಯೂ ದರ್ಶನ್‌ ಬೆದರಿಸುವುದಾಗಿ ಕೇಳಿ ಬಂದಿತ್ತು. ಮಾತ್ರವಲ್ಲ ವಿಜಯಲಕ್ಷ್ಮಿ ಅವರಿಗೆ ಸಿಗರೇಟ್‌ನಿಂದ ಸುಟ್ಟು ಗಾಯಗೊಳಿಸಿದ್ದರು. ಅಂಬರೀಶ್ ಮಧ್ಯಪ್ರವೇಶದಿಂದ ವಿಜಯಲಕ್ಷ್ಮಿ ಎಲ್ಲವನ್ನೂ ಮರೆತು ರಾಜಿ ಸಂಧಾನಕ್ಕೆ ಒಪ್ಪಿದ್ದರು.

ಇದಾದ ಬಳಿಕ ದರ್ಶನ್‌ ಕುಡಿದು ಬಂದು ವಿಜಯಲಕ್ಷ್ಮಿ ವಿರುದ್ಧ ಕೂಗಾಡಿರುವ ಆಡಿಯೊ ವೈರಲ್‌ ಆಗಿತ್ತು. ಸ್ವತಃ ವಿಜಯಲಕ್ಷ್ಮಿ ಅವರೇ ಆಡಿಯೊ ಸುಳ್ಳು ಎಂದು ಹೇಳಿಕೆ ನೀಡಿದ್ದರು. ಹೀಗೆ ಸಿಹಿ-ಕಹಿ ಜೀವನ ನಡೆಸುತ್ತಿದ್ದ ದಂಪತಿ ಮಧ್ಯೆ ಮತ್ತೆ ಬಿರುಗಾಳಿಯಂತೆ ಬಂದಿದ್ದು ಪವಿತ್ರಾ ಗೌಡ.

ಪಾರ್ಟಿಯಲ್ಲಿ ಕುಣಿದು ಕುಪ್ಪಳಿಸಿದ್ದ ದರ್ಶನ್‌

ಇತ್ತೀಚೆಗಷ್ಟೇ ಹುಟ್ಟು ಹಬ್ಬ ಆಚರಿಸಿಕೊಂಡಿದ್ದ ನಟ ದರ್ಶನ್‌ ಸ್ನೇಹಿತರು ಹುಟ್ಟುಹಬ್ಬವನ್ನು ಜೋರಾಗಿಯೇ ಸೆಲೆಬ್ರೇಟ್ ಮಾಡಿದ್ದರು. ಪಾರ್ಟಿಯೊಂದರಲ್ಲಿ ದರ್ಶನ್ ಅವರು ಪತ್ನಿ ವಿಜಯಲಕ್ಷ್ಮಿ ಅವರೊಂದಿಗೆ ಮಸ್ತ್‌ ಡಾನ್ಸ್ ‌ಮಾಡಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ನಿರ್ಮಾಪಕ ಉಮಾಪತಿ ಗೌಡ ಹಾಗೂ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಪದಗಳ ಬಳಕೆ ಹಿನ್ನೆಲೆಯಲ್ಲಿ ಮಹಿಳಾ ಸಂಘಟನೆಗಳು ಸೇರಿ ವಿವಿಧ ಸಂಘಗಳು, ನಟನ ವಿರುದ್ಧ ಅಸಮಾಧಾನ ಹೊರಹಾಕಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದವು. ಆದರೆ, ವಿವಾದಗಳಿಗೆ ಸೊಪ್ಪು ಹಾಕದ ದರ್ಶನ್‌, ಪಾರ್ಟಿಯೊಂದರಲ್ಲಿ ಭಾಗಿಯಾಗಿ ಪತ್ನಿ ಜತೆ ಕುಣಿದು ಕುಪ್ಪಳಿಸಿದ್ದರು.

Continue Reading
Advertisement
Lok Sabha Speaker
ದೇಶ7 mins ago

Lok Sabha Speaker: ಸ್ಪೀಕರ್‌ ಆಯ್ಕೆ ವಿಚಾರದಲ್ಲಿ ಟಿಡಿಪಿಗೆ ಬೆಂಬಲ ಎಂದ ಇಂಡಿಯಾ ಒಕ್ಕೂಟ; ಯಾರಾಗ್ತಾರೆ ಸ್ಪೀಕರ್?

Renukaswamy murder case The location of the accused is complete
ಸಿನಿಮಾ25 mins ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Petrol Diesel Price
ಕರ್ನಾಟಕ1 hour ago

Petrol Diesel Price: ಚುನಾವಣೆ ಸೋಲಿನ ಸೇಡು ತೀರಿಸಿಕೊಳ್ಳಲು ತೈಲ ದರ ಏರಿಸಿದ ಕಾಂಗ್ರೆಸ್ ಸರ್ಕಾರ: ಆರ್‌. ಅಶೋಕ್‌ ಕಿಡಿ

Renuka swamy murder
ಚಿತ್ರದುರ್ಗ1 hour ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Road Accident
ಕರ್ನಾಟಕ2 hours ago

Road Accident: ಸುಂಟಿಕೊಪ್ಪ‌ ಬಳಿ ಖಾಸಗಿ ಬಸ್- ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

Kannada New Movie Chowkidar pruthvi ambaar
ಸಿನಿಮಾ2 hours ago

Kannada New Movie: ಪೃಥ್ವಿ ಅಂಬಾರ್ ಈಗ ‘ಚೌಕಿದಾರ್’: ರಥಾವರ ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಹೊಸ ಹೆಜ್ಜೆ!

Patna Boat Accident
ದೇಶ2 hours ago

Patna Boat Accident: ಗಂಗಾ ನದಿಯಲ್ಲಿ ದೋಣಿ ಮುಳುಗಿ 6 ಮಂದಿ ನಾಪತ್ತೆ

Sachin Tendulkar
ಕ್ರೀಡೆ2 hours ago

Sachin Tendulkar: ವಿಶ್ವ ಅಪ್ಪಂದಿರ ದಿನದಂದು ವಿಶೇಷ ಫೋಟೊ ಹಂಚಿಕೊಂಡು ಭಾವುಕರಾದ ಸಚಿನ್​ ತೆಂಡೂಲ್ಕರ್​

Petrol Diesel Price
ಪ್ರಮುಖ ಸುದ್ದಿ2 hours ago

Petrol Diesel Price: ನೆರೆ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ಪೆಟ್ರೋಲ್, ಡಿಸೇಲ್ ಬೆಲೆ ಕಡಿಮೆ: ಸಿಎಂ ಸಮರ್ಥನೆ

Child Marriage
ವಿದೇಶ2 hours ago

12ರ ಹರೆಯದ ಮಗಳನ್ನು 5 ಲಕ್ಷ ರೂ.ಗೆ ಮಾರಿ 72 ವರ್ಷದ ವೃದ್ಧನೊಂದಿಗೆ ಮದುವೆ ಮಾಡಿಸಲು ಮುಂದಾದ ಪಾಪಿ ತಂದೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ25 mins ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 hour ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ6 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 day ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌