Kantara Cinema | ಮುಂದಿನ ವರ್ಷ ಆಸ್ಕರ್‌ಗೆ ಕಾಂತಾರ ಸಿನಿಮಾ ಕಳುಹಿಸಿ ಎಂದ ನಟಿ ಕಂಗನಾ - Vistara News

ಪ್ರಮುಖ ಸುದ್ದಿ

Kantara Cinema | ಮುಂದಿನ ವರ್ಷ ಆಸ್ಕರ್‌ಗೆ ಕಾಂತಾರ ಸಿನಿಮಾ ಕಳುಹಿಸಿ ಎಂದ ನಟಿ ಕಂಗನಾ

ಕಾಂತಾರ (Kantara Cinema) ಜಾಗತಿಕವಾಗಿ ಭಾರತವನ್ನು ಪ್ರತಿನಿಧಿಸುವ ಸಿನಿಮಾ. ಮುಂದಿನ ವರ್ಷ ಆಸ್ಕರ್ ಸ್ಪರ್ಧೆಗೆ ಕಳುಹಿಸಬೇಕು ಎಂದು ನಟಿ ಕಂಗನಾ ರಣಾವತ್ ಹೇಳಿದ್ದಾರೆ.

VISTARANEWS.COM


on

Kantara Cinema
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ದೇಶಾದ್ಯಂತ ಜನಪ್ರಿಯವಾಗಿರುವ ರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಟನೆಯ ಕಾಂತಾರ ಚಿತ್ರ(Kantara Cinema)ವನ್ನು ಯಾವಾಗ ನೋಡುತ್ತೇನೋ ಎಂದು ಈ ಹಿಂದೆ ಹೇಳಿದ್ದ, ಬಾಲಿವುಡ್ ನಟಿ ಕಂಗನಾ ರಣಾವತ್ ಈಗ ಸಿನಿಮಾ ನೋಡಿದ್ದಾರೆ. ಅಷ್ಟೇ ಅಲ್ಲದೇ, ಮುಂದಿನ ವರ್ಷ ಭಾರತದಿಂದ ಆಸ್ಕರ್ ಪ್ರಶಸ್ತಿಗೆ ಕಾಂತಾರ ಸಿನಿಮಾವನ್ನು ಕಳುಹಿಸಬೇಕು ಎಂದು ಹೇಳಿದ್ದಾರೆ.

ಆಸ್ಕರ್ ಸ್ಪರ್ಧೆಗೆ ಭಾರತದಿಂದ ಸೂಕ್ತ ಸಿನಿಮಾವನ್ನು ಕಳುಹಿಸಬೇಕು. ಕನ್ನಡ ಸಿನಿಮಾ ಕಾಂತಾರ ಆ ಎಲ್ಲ ಗುಣಗಳನ್ನು ಹೊಂದಿದೆ. ಇಡೀ ಜಗತ್ತೇ ನೋಡಬೇಕಾದಂಥ ಸಿನಿಮಾ ಇದು ಎಂದು, ಸದಾ ಬಾಲಿವುಡ್ ಟೀಕಿಸುವ ಕಂಗನಾ ಅವರು ಹೇಳಿದ್ದಾರೆ. ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಕಂಬಳ ಓಟಗಾರನಾಗಿ, ಕಿಶೋರ್ ಡಿಆರ್‌ಎಫ್ಒ ಆಗಿ ಕಾಣಿಸಿಕೊಂಡಿದ್ದಾರೆ. ರಿಷಬ್ ಅವರೇ ಈ ಚಿತ್ರದ ನಿರ್ದೇಶಕರು. ಈ ಸಿನಿಮಾ ಬಿಡುಗಡೆಯಾದ ದಿನದಿಂದಲೂ ಪ್ರೇಕ್ಷಕರಿಂದ ಭಾರೀ ಮೆಚ್ಚುಗೆ ಪಡೆದುಕೊಂಡಿದೆ. ಮೊದಲ ಕನ್ನಡದಲ್ಲಿ ರಿಲೀಸ್ ಆದ ಸಿನಿಮಾ ಆ ಬಳಿಕ, ಹಿಂದಿ ಸೇರಿದಂತೆ ಇತರ ಭಾಷೆಗಳಿಗೆ ಡಬ್ ಮಾಡಿ ರಿಲೀಸ್ ಮಾಡಲಾಗಿದೆ.

ತಾವು ಸಿನಿಮಾ ನೋಡಿದ ಕುರಿತು ಇನ್‌ಸ್ಟಾಗ್ರಾಮ್ ಬರೆದುಕೊಂಡಿರುವ ಕಂಗನಾ, ಮುಂದಿನ ವರ್ಷಕ್ಕೆ ಕಾಂತಾರ ಭಾರತದಿಂದ ಆಸ್ಕರ್ ಸ್ಪರ್ಧೆಗೆ ಆಯ್ಕೆಯಾಗಬೇಕು. ಈ ವರ್ಷ ಈಗಷ್ಟೇ ಮುಗಿಯುತ್ತಿದ್ದೆ. ಇನ್ನು ಟೈಮ್ ಇದೆ. ಅತ್ಯುತ್ತಮ ಚಿತ್ರಗಳು ಬರಬಹುದು. ಆದರೆ, ಆಸ್ಕರ್‌ಗಿಂತಲೂ ಹೆಚ್ಚಾಗಿ ಜಾಗತಿಕವಾಗಿ ಭಾರತವು ಸೂಕ್ತ ಚಿತ್ರವನ್ನು ಪ್ರತಿನಿಧಿಸಬೇಕು. ಭಾರತವು ಒಂದು ಪವಾಡದಂತೆ. ನೀವು ಅದನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದರೆ ನೀವು ನಿರಾಶೆಗೊಳ್ಳುವಿರಿ. ಆದರೆ ನೀವು ಪವಾಡಕ್ಕೆ ಶರಣಾದರೆ ನೀವು ಕೂಡ ಅದರಲ್ಲಿ ಒಂದಾಗಬಹುದು. ಕಾಂತಾರ ಒಂದು ಅಂಥ ಅನುಭವದ ವಾಸ್ತವವಾಗಿದೆ ಇದನ್ನು ಜಗತ್ತು ಅನುಭವಿಸಬೇಕು ಎಂದು ಹೇಳಿದ್ದಾರೆ.

ನನ್ನ ಕುಟುಂಬದ ಸದಸ್ಯರೊಂದಿಗೆ ನಾನು ಈಗಷ್ಟೇ ಸಿನಿಮಾ ನೋಡಿ ಬಂದಿದ್ದೇನೆ. ನಾನು ಈಗಲೂ ಅದೇ ಗುಂಗಿನಲ್ಲಿದ್ದೇನೆ. ಇದೊಂದು ಸ್ಫೋಟಕ ಅನುಭವ. ರಿಷಬ್ ಶೆಟ್ಟಿ ನಿಮಗೆ ಹ್ಯಾಟ್‌ಆಫ್. ಕತೆ, ನಿರ್ದೇಶನ, ಅಭಿನಯ, ಆ್ಯಕ್ಷನ್ ಎಲ್ಲವೂ ಬ್ರಿಲಿಯಂಟ್ ಹಾಗೂ ನಂಬಲು ಅಸಾಧ್ಯ ಎಂದು ತಮ್ಮ ವಿಡಿಯೋ ರೆಕಾರ್ಡಿಂಗ್ ಮೇಸೆಜ್ ಕೂಡ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ | Kantara Movie | ಆಸ್ಕರ್‌ ಅವಾರ್ಡ್‌ಗೆ ಕಾಂತಾರ ನಾಮಿನೇಟ್ ಮಾಡಿ: ಶುರುವಾಯ್ತು ಟ್ವಿಟರ್ ಆಂದೋಲನ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

White House: ಭಾರತದಲ್ಲಿದೆ ಅತ್ಯುತ್ತಮ ಪ್ರಜಾಪ್ರಭುತ್ವ ವ್ಯವಸ್ಥೆ: ಅಮೆರಿಕದ ಮೆಚ್ಚುಗೆ; ಮೋದಿ ನಾಯಕತ್ವಕ್ಕೂ ಸಿಕ್ತು ಶಹಬ್ಬಾಸ್‌ಗಿರಿ

White House: ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿರುವುದಕ್ಕೆ ಅಮೆರಿಕದ ಶ್ವೇತಭವನವು ಭಾರತೀಯರನ್ನು ಶ್ಲಾಘಿಸಿದೆ. ಶ್ವೇತಭವನದ ವಕ್ತಾರ ಜಾನ್ ಕಿರ್ಬಿ ಈ ಬಗ್ಗೆ ಮಾತನಾಡಿ, ಭಾರತವು ಜಾಗತಿಕವಾಗಿ ಅತ್ಯಂತ ರೋಮಾಂಚಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದೆ ಎಂದು ಬಣ್ಣಿಸಿದ್ದಾರೆ.

VISTARANEWS.COM


on

White House
Koo

ವಾಷಿಂಗ್ಟನ್‌: ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿರುವುದಕ್ಕೆ ಅಮೆರಿಕದ ಶ್ವೇತಭವನ (White House)ವು ಭಾರತೀಯರನ್ನು ಶ್ಲಾಘಿಸಿದೆ. ಶ್ವೇತಭವನದ ವಕ್ತಾರ ಜಾನ್ ಕಿರ್ಬಿ (John Kirby) ಈ ಬಗ್ಗೆ ಮಾತನಾಡಿ, ಭಾರತವು ಜಾಗತಿಕವಾಗಿ ಅತ್ಯಂತ ರೋಮಾಂಚಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದೆ ಎಂದು ಬಣ್ಣಿಸಿದ್ದಾರೆ. ʼʼಸುಮಾರು 2,660 ನೋಂದಾಯಿತ ಪಕ್ಷಗಳನ್ನು ಪ್ರತಿನಿಧಿಸುವ ಸಾವಿರಾರು ಅಭ್ಯರ್ಥಿಗಳ ಪೈಕಿ 545 ಸಂಸದರನ್ನು ಆಯ್ಕೆ ಮಾಡಲು ಕೋಟ್ಯಂತರ ಮಂದಿ ಹತ್ತು ಲಕ್ಷಕ್ಕೂ ಅಧಿಕ ಮತದಾನ ಕೇಂದ್ರಗಳಲ್ಲಿ ಹಕ್ಕು ಚಲಾ ಚಲಾಯಿಸುತ್ತಿದ್ದಾರೆʼʼ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“ಭಾರತಕ್ಕಿಂತ ಹೆಚ್ಚು ವ್ಯವಸ್ಥಿತ ಪ್ರಜಾಪ್ರಭುತ್ವ ಜಗತ್ತಿನ ಬೇರೆ ಕಡೆ ಇಲ್ಲ. ಮತ ಚಲಾಯಿಸುವ ಮೂಲಕ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸುತ್ತಿರುವುದಕ್ಕಾಗಿ ಮತ್ತು ತಮ್ಮ ಭವಿಷ್ಯದ ಸರ್ಕಾರವನ್ನು ನಿರ್ಧರಿಸಲು ಸೂಕ್ತ ಕ್ರಮ ಕೈಗೊಳ್ಳುತ್ತಿರುವುದಕ್ಕಾಗಿ ನಾವು ಭಾರತೀಯರನ್ನು ಶ್ಲಾಘಿಸುತ್ತೇವೆ. ಈ ಮತದಾನದ ಪ್ರಕ್ರಿಯೆಯುದ್ದಕ್ಕೂ ನಾವು ಅವರಿಗೆ ಶುಭ ಹಾರೈಸುತ್ತೇವೆ” ಎಂದು ಜಾನ್ ಕಿರ್ಬಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರಿಗೂ ಮೆಚ್ಚುಗೆ

ಇದರ ಜತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತ ಮತ್ತು ಅಮೆರಿಕದ ನಡುವಿನ ಸಂಬಂಧ ವೃದ್ಧಿಸುತ್ತಿರುವ ಬಗ್ಗೆಯೂ ಅವರು ಪ್ರಸ್ತಾವಿಸಿದ್ದಾರೆ. ʼʼಮೋದಿ ಅವರ ನಾಯಕತ್ವದ ಅಡಿಯಲ್ಲಿ ವಿಶೇಷವಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ಆಡಳಿತದ ಕೊನೆಯ ಮೂರು ವರ್ಷಗಳಲ್ಲಿ ಭಾರತ-ಅಮೆರಿಕ ಸಂಬಂಧ ಬಲವಾಗಿದೆ. ಉಭಯ ದೇಶಗಳ ನಡುವಿನ ಬಂಧವು ನಿರಂತರವಾಗಿ ವೃದ್ಧಿಸುತ್ತಿದೆʼʼ ಎಂದು ವಿವರಿಸಿದ್ದಾರೆ.

“ನಾವು ಎರಡೂ ದೇಶಗಳ ಸಂಬಂಧ ವೃದ್ಧಿಗೆ ಎಲ್ಲ ರೀತಿಯ ಹೊಸ ಉಪಕ್ರಮಗಳನ್ನು ಪ್ರಾರಂಭಿಸಿದ್ದೇವೆ. ನಿರ್ಣಾಯಕ ಉದಯೋನ್ಮುಖ ತಂತ್ರಜ್ಞಾನಗಳ ಮೇಲೆ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಮತ್ತು ಇಂಡೋ-ಪೆಸಿಫಿಕ್ ಕ್ವಾಡ್‌ನ ಪ್ರಸ್ತುತತೆಯನ್ನು ಹೆಚ್ಚಿಸುತ್ತಿದ್ದೇವೆ. ಜತೆಗೆ ನಾವು ರಕ್ಷಣಾ ಕ್ಷೇತ್ರದಲ್ಲಿಯೂ ಪರಸ್ಪರ ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸುತ್ತಿದ್ದೇವೆ. ಪ್ರಧಾನಿ ಮೋದಿ ಅವರ ನಾಯಕತ್ವಕ್ಕೆ ನಾವು ಕೃತಜ್ಞರಾಗಿದ್ದೇವೆʼʼ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: PM Modi US visit : ಶ್ವೇತಭವನದ ಔತಣಕೂಟದಲ್ಲಿ ಮಿಂಚಿದ ಮುಕೇಶ್‌, ನೀತಾ ಅಂಬಾನಿ, ನಿಖಿಲ್‌ ಕಾಮತ್

ಶ್ವೇತಭವನದಲ್ಲಿ ಮೊಳಗಿದ ʼಸಾರೆ ಜಹಾನ್‌ ಸೇ ಅಚ್ಚಾʼ

ಇತ್ತೀಚೆಗಷ್ಟೇ ಅಮೆರಿಕದಲ್ಲಿ ಆಯೋಜಿಸಲಾಗಿದ್ದ ಸರ್ಕಾರಿ ಕಾರ್ಯಕ್ರಮದಲ್ಲಿ ಭಾರತದ ದೇಶಭಕ್ತಿಗೀತೆ ʼಸಾರಾ ಜಹಾನ್‌ ಸೇ ಅಚ್ಚಾʼ ಹಾಡು ಮೊಳಗಿತ್ತು. ಶ್ವೇತಭವನದಲ್ಲಿ ಆಯೋಜನೆಗೊಂಡಿದ್ದ ಏಷಿಯನ್‌ ಅಮೆರಿಕನ್‌, ಸ್ಥಳೀಯ ಹವಾಯಿಯನ್‌ ಮತ್ತು ಪೆಸಿಫಿಕ್‌ ಐಲ್ಯಾಂಡರ್‌ ಪಾರಂಪರ್ಯ ಮಾಸಾಚರಣೆ ಕಾರ್ಯಕ್ರಮದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಮತ್ತು ಉಪಾಧ್ಯಕ್ಷ ಕಮಲಾ ಹ್ಯಾರೀಸ್‌ ಭಾಗಿಯಾಗಿದ್ದರು. ಈ ವೇಳೆ ಶ್ವೇತಭವನದ ಮೆರೈನ್ ಬ್ಯಾಂಡ್ ʼಸಾರೆ ಜಹಾನ್ ಸೆ ಅಚ್ಚಾ ಹಿಂದೂಸ್ತಾನ್ ಹಮಾರಾʼ ಹಾಡನ್ನು ಹಾಡಿ ಎಲ್ಲರನ್ನು ರಂಜಿಸಿತ್ತು. ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿ ವೈರಲ್‌ ಆಗಿತ್ತು. ಅದಾಗಿ ಕೆಲವೇ ದಿನಗಳಲ್ಲಿ ಶ್ವೇತಭವನ ಭಾರತದ ಬಗ್ಗೆ ಮೆಚ್ಚುಗೆ ಮಾತುಗಳನ್ನು ಆಡಿದೆ.

Continue Reading

ಕ್ರೀಡೆ

IPL 2024 : ಆರ್​ಸಿಬಿ- ಚೆನ್ನೈ ಪಂದ್ಯದ ವೇಳೆ ಮಳೆ ಬಂದು ರದ್ದಾದರೆ ಮುಂದೇನಾಗುವುದು?

IPL 2024 : ಪ್ರಶಸ್ತಿ ಗೆಲ್ಲುವ ಭರವಸೆಯನ್ನು ಹಾದಿಯೊಂದಿಗೆ ಸಾಗಲು ಆರ್​ಸಿಬಿ ಸಿಎಸ್​ಕೆ ವಿರುದ್ಧದ ಪಂದ್ಯವನ್ನು ಗೆಲ್ಲಬೇಕಾಗಿದೆ. ಇಲ್ಲಿ ಕೇವಲ ಗೆಲುವು ಮಾತ್ರ ಸಿಕ್ಕರೆ ಸಾಲುವುದಿಲ್ಲ. ಹಾಲಿ ಚಾಂಪಿಯನ್ ಗಳಿಗಿಂತ ಅವರ ನೆಟ್ ರನ್ ರೇಟ್ ಅನ್ನು ಉತ್ತಮಗೊಳಿಸಬೇಕು. ಅದಕ್ಕಾಗಿ ದೊಡ್ಡ ಅಂತರದಿಂದ ಗೆಲ್ಲಬೇಕಾಗಿದೆ.

VISTARANEWS.COM


on

IPL 2024
Koo

ಬೆಂಗಳೂರು: ಐಪಿಎಲ್ 2024 ರ (IPL 2024) ಮುಕ್ತಾಯಕ್ಕೆ ಹತ್ತಿರವಾಗುತ್ತಿದೆ. ಇದರ ನಡುವೆ ರೋಚಕ ಪಂದ್ಯವೊಂದು ಎದುರಾಗಿದೆ. ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಮ್ಮ ಕೊನೆಯ ಲೀಗ್ ಹಂತದ ಮುಖಾಮುಖಿಯಲ್ಲಿ ಬಾಕಿ ಇರುವ ಒಂದು ಪ್ಲೇಆಫ್ ಸ್ಥಾನಕ್ಕಾಗಿ ಹೋರಾಡಬೇಕಾಗಿದೆ. ಹೀಗಾಗಿ ಕ್ರಿಕೆಟ್ ಅಭಿಮಾನಿಗಳ ಉತ್ಸಾಹವು ಉತ್ತುಂಗದಲ್ಲಿದೆ. ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕೋಲ್ಕತಾ ನೈಟ್ ರೈಡರ್ಸ್ (KKR), ರಾಜಸ್ಥಾನ್ ರಾಯಲ್ಸ್ (RR) ಮತ್ತು ಸನ್ರೈಸರ್ಸ್ ಹೈದರಾಬಾದ್ (SRH) ಈಗಾಗಲೇ ನಾಕೌಟ್ ಹಂತಗಳಿಗೆ ತಮ್ಮ ಸ್ಥಾನವನ್ನು ಕಾಯ್ದಿರಿಸಿವೆ. ಹಿಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 47 ರನ್​ಗಳಿಂದ ಸೋಲಿಸಿದ ನಂತರ ಆರ್​ಸಿಬಿ ಐದು ಪಂದ್ಯಗಳ ಗೆಲುವಿನ ಹಾದಿಯಲ್ಲಿದೆ.

ಪ್ರಶಸ್ತಿ ಗೆಲ್ಲುವ ಭರವಸೆಯನ್ನು ಹಾದಿಯೊಂದಿಗೆ ಸಾಗಲು ಆರ್​ಸಿಬಿ ಸಿಎಸ್​ಕೆ ವಿರುದ್ಧದ ಪಂದ್ಯವನ್ನು ಗೆಲ್ಲಬೇಕಾಗಿದೆ. ಇಲ್ಲಿ ಕೇವಲ ಗೆಲುವು ಮಾತ್ರ ಸಿಕ್ಕರೆ ಸಾಲುವುದಿಲ್ಲ. ಹಾಲಿ ಚಾಂಪಿಯನ್ ಗಳಿಗಿಂತ ಅವರ ನೆಟ್ ರನ್ ರೇಟ್ ಅನ್ನು ಉತ್ತಮಗೊಳಿಸಬೇಕು. ಅದಕ್ಕಾಗಿ ದೊಡ್ಡ ಅಂತರದಿಂದ ಗೆಲ್ಲಬೇಕಾಗಿದೆ.

ಮತ್ತೊಂದೆಡೆ, ಋತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ 13 ಪಂದ್ಯಗಳಲ್ಲಿ 14 ಅಂಕಗಳನ್ನು ಹೊಂದಿದ್ದು, ಪ್ರಸ್ತುತ ಪಾಯಿಂಟ್ಸ್ ಟೇಬಲ್ನಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಬೆಂಗಳೂರು ಮೂಲದ ತಂಡದ ವಿರುದ್ಧದ ಗೆದ್ದರೆ ಅವರಿಗೆ ಇನ್ಯಾವುದೇ ಮಂಡೆ ಬಿಸಿ ಇಲ್ಲ. ಅದೇ ರೀತಿ ಪಂದ್ಯ ಸೋತರೂ ನೆಟ್ ರನ್ ರೇಟ್ ಆಧಾರದ ಮೇಲೆಯೂ ಅರ್ಹತೆ ಪಡೆಯಬಹುದು. ಸಿಎಸ್​ಕೆ ತನ್ನ ನೆಟ್​​ರನ್​ರೇಟ್​​ ಅನ್ನು ಉಳಿಸಿಕೊಳ್ಳಲು ಸೋಲಿನ ಅಂತರವನ್ನು ಕಡಿಮೆ ಮಾಡಬೇಕಾಗಿದೆ.

ಇದನ್ನೂ ಓದಿ: Aiden Markarm : ವಿಂಡೀಸ್ ವಿರುದ್ಧದ ಸರಣಿಗೆ ದ. ಆಫ್ರಿಕಾ ತಂಡದಲ್ಲಿ ಮಾರ್ಕ್ರಮ್​​ಗೆ ಇಲ್ಲ ಚಾನ್ಸ್​

ಮಳೆ ಬಂದರೆ ಏನಾಗುವುದು?

ಶುಕ್ರವಾರ ಮತ್ತು ಶನಿವಾರ (ಪಂದ್ಯದ ದಿನ) ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿರುವುದರಿಂದ ಪ್ರವಾಹ ಉಂಟಾಗುವ ಸಾಧ್ಯತೆಯಿದೆ. ವಾಶ್ ಔಟ್ ಅಥವಾ ಪಂದ್ಯ ರದ್ದಾದರೆ, ಆ ಸನ್ನಿವೇಶಗಳು ಆರ್ ಸಿಬಿಗಿಂತ ಆತಿಥೇಯರಿಗೆ ಹೆಚ್ಚು ಅನುಕೂಲಕರವಾಗಿರುತ್ತವೆ. ಫಲಿತಾಂಶವಿಲ್ಲದಿದ್ದರೆ ಎರಡೂ ತಂಡಗಳು ತಲಾ ಒಂದು ಪಾಯಿಂಟ್ ಪಡೆಯುತ್ತವೆ, ಆದರೆ ಓವರ್​ಗಳನ್ನು ಕಡಿಮೆ ಮಾಡಿದರೆ, ಗೆಲುವಿನ ನಂತರವೂ ಆರ್​ಸಿಬಿಗೆ ತನ್ನ ನೆಟ್​ರನ್​ರೇಟ್​ ಹೆಚ್ಚಿಸಲು ಕಷ್ಟವಾಗುತ್ತದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆಯಲಿರುವ ಪಂದ್ಯದಲ್ಲಿ ಚೆನ್ನೈ ತಂಡ ಬೆಂಗಳೂರು ತಂಡವನ್ನು ಎದುರಿಸಲಿದೆ. ಇದು ಹಾಲಿ ಆವೃತ್ತಿಯ ವರ್ಚುಯಲ್ ನಾಕೌಟ್ ಪಂದ್ಯ ಎಂದೇ ಹೇಳಲಾಗುತ್ತಿದೆ.

ಆರ್​ಸಿಬಿ ಆಟಗಾರರಿಗೆ ಬ್ಯಾಟಿಂಗ್ ಅಭ್ಯಾಸ ನಡೆಸಲು ನೆರವಾದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB ) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ಮೇ 18 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವು ಐಪಿಎಲ್​ನ (IPL 2024) ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಎರಡೂ ತಂಡಗಳು ಲಭ್ಯವಿರುವ ಕೊನೆಯ ಪ್ಲೇಆಫ್ ಸ್ಥಾನದ ಮೇಲೆ ಕಣ್ಣಿಟ್ಟಿರುವುದರಿಂದ ಈ ಪಂದ್ಯವು ನಿರ್ಣಾಯಕವಾಗಿದೆ. ಇದನ್ನು ಸದರ್ನ್​ ಡರ್ಬಿ ಎಂದು ಕರೆಯಲಾಗಿದ್ದು ಪಂದ್ಯ ಅತ್ಯಂತ ರೋಚಕವಾಗಿರುವುದು ಖಚಿತ. ಅದರಲ್ಲೂ ಆರ್​ಸಿಬಿ ತಂಡಕ್ಕೆ ದೊಡ್ಡ ಸವಾಲಾಗಿದೆ. ಅದೇ ರೀತಿ ವಿರಾಟ್ ಕೊಹ್ಲಿಯ (Virat kohli) ಮೇಲೆ ಜವಾಬ್ದಾರಿ ಹೆಚ್ಚಿದೆ.

ಈ ದಕ್ಷಿಣ ಡರ್ಬಿ ಪಂದ್ಯಕ್ಕೆ ಮುಂಚಿತವಾಗಿ, ಆರ್​ಸಿಬಿ ಸ್ಟಾರ್ ಬ್ಯಾಟರ್​ ವಿರಾಟ್ ಕೊಹ್ಲಿ ಅಭ್ಯಾಸದ ಸಮಯದಲ್ಲಿ ಬೌಲಿಂಗ್​ ಮಾಡುವ ಮತ್ತು ಥ್ರೋಡೌನ್​ ಮಾಡುವ ಮೂಲಕ ಬ್ಯಾಟರ್​ಗಳಿಗೆ ನೆರವಾದರು. ಪಂದ್ಯದ ಮುನ್ನಾದಿನದಂದು ಫ್ರಾಂಚೈಸಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಕೊಹ್ಲಿ ಸಹ ಆಟಗಾರ ಮಹಿಪಾಲ್ ಲೊಮ್ರೊರ್ ಅವರ ಥ್ರೋಡೌನ್ ಸ್ಪೆಷಲಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿರುವುದನ್ನು ತೋರಿಸಲಾಗಿದೆ. ಕೊಹ್ಲಿ ಕೇವಲ ಥ್ರೋಡೌನ್​​ಗಳನ್ನು ನೀಡುತ್ತಿರಲಿಲ್ಲ; ಅವರು ಸಕ್ರಿಯವಾಗಿ ಲೊಮ್ರೊರ್​ಗೆ ತರಬೇತಿ ನೀಡುತ್ತಿದ್ದರು, ಸಲಹೆ ನೀಡುತ್ತಿದ್ದರು ಮತ್ತು ದೊಡ್ಡ ಶಾಟ್​ಗಳನ್ನು ಆಡಲು ಪ್ರೋತ್ಸಾಹಿಸುತ್ತಿದ್ದರು.

ಸ್ಫೋಟಕ ಇಂಗ್ಲಿಷ್ ಆಲ್ರೌಂಡರ್ ವಿಲ್ ಜಾಕ್ಸ್ ಅನುಪಸ್ಥಿತಿಯ ಹಿನ್ನೆಲೆಯಲ್ಲಿ ಈ ಪಂದ್ಯದ ನಡುವೆ ಅಭಿಮಾನಿಗಳ ಊಹಾಪೋಹಗಳನ್ನು ಹುಟ್ಟುಹಾಕಿದೆ. ರಾಷ್ಟ್ರೀಯ ಕರ್ತವ್ಯಗಳಿಂದಾಗಿ ಜಾಕ್ಸ್ ಈಗಾಗಲೇ ತಂಡದ ಶಿಬಿರವನ್ನು ತೊರೆದಿರುವುದರಿಂದ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಕನಿಷ್ಠ ಒಂದು ಬದಲಾವಣೆಯನ್ನು ಮಾಡಬೇಕಾಗುತ್ತದೆ.

Continue Reading

ಪ್ರಮುಖ ಸುದ್ದಿ

HD Deve Gowda: ಈ ಅವಮಾನದಿಂದ ಪಾರು ಮಾಡು: 93ರ ಜನ್ಮದಿನಂದು ದೇವೇಗೌಡರ ಮೌನ ಪ್ರಾರ್ಥನೆ

HD Deve Gowda: ಮೊಮ್ಮಗ ಪ್ರಜ್ವಲ್‌ ಪ್ರಕರಣ ತಂದಿಟ್ಟ ಸಂಕಷ್ಟದಿಂದ ನೊಂದಿರುವ ಗೌಡರು 92 ವರ್ಷದಲ್ಲಿ ಮೊದಲ ಬಾರಿಗೆ ಗಡ್ಡಧಾರಿಯಾಗಿದ್ದರು. ಇಂದು
ಜನ್ಮದಿನದ ನಿಮಿತ್ತ ಮತ್ತೆ ನೀಟ್‌ ಶೇವ್‌ ಮಾಡಿಕೊಂಡ ಗೌಡರು ಮುಂಜಾನೆ ಬೆಂಗಳೂರಿನ ಜೆಪಿ ನಗರ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನಕ್ಕೆ ತೆರೆಳಿ ವಿಶೇಷ ಪೂಜೆ ಸಲ್ಲಿಸಿದರು.

VISTARANEWS.COM


on

hd deve gowda birthday
Koo

ಬೆಂಗಳೂರು: ದಣಿವರಿಯದ ನಾಯಕ, ರಾಜಕೀಯ ಭೀಷ್ಮ, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು (HD Deve Gowda) ಇಂದು 93ರ ಹುಟ್ಟುಹಬ್ಬ (HD Deve Gowda birthday) ಆಚರಿಸಿಕೊಂಡಿದ್ದಾರೆ. ಆದರೆ ಸರಳವಾಗಿ ದೇವಾಲಯ ಭೇಟಿಯೊಂದಿಗೆ (Temple visit) ಆಚರಣೆ ಮುಗಿಸಿದ್ದು, ಯಾವುದೇ ಅದ್ಧೂರಿ ಸಂಭ್ರಮಾಚರಣೆಗೆ ತಡೆ ಹಾಕಿದ್ದಾರೆ. ಮೊಮ್ಮಗ (Prajwal Revanna Case) ನೀಡಿದ ಏಟಿನಿಂದ ಇನ್ನೂ ಪೂರ್ಣವಾಗಿ ಚೇತರಿಸಿಕೊಳ್ಳದ ದೇವೇಗೌಡರು, ದೇವರ ಮುಂದೆ ಈ ಅವಮಾನದಿಂದ ಪಾರು ಮಾಡೆಂದು ಮೌನವಾಗಿ ಪ್ರಾರ್ಥಿಸಿದರು.

ಮೊಮ್ಮಗ ಪ್ರಜ್ವಲ್‌ ಪ್ರಕರಣ ತಂದಿಟ್ಟ ಸಂಕಷ್ಟದಿಂದ ನೊಂದಿರುವ ಗೌಡರು 92 ವರ್ಷದಲ್ಲಿ ಮೊದಲ ಬಾರಿಗೆ ಗಡ್ಡಧಾರಿಯಾಗಿದ್ದರು. ಇಂದು ಮನೆಯಿಂದ ಹೊರಗೆ ಬಂದು ದೇವಾಲಯಕ್ಕೆ ಹೊರಟ ಸಂದರ್ಭದಲ್ಲಿ ಮತ್ತೆ ನೀಟ್‌ ಶೇವ್‌ ಮಾಡಿಕೊಂಡಿದ್ದಾರೆ. ಇಂದು ಮುಂಜಾನೆ ಅವರು ಬೆಂಗಳೂರಿನ ಜೆಪಿ ನಗರ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನಕ್ಕೆ ತೆರೆಳಿ ವಿಶೇಷ ಪೂಜೆ ಸಲ್ಲಿಸಿದರು. ಪೂಜೆಯ ಬಳಿಕ ಅವರು ಮತ್ತೆ ಮನೆ ಸೇರಿಕೊಂಡರು.

ಜನ್ಮದಿನವಾಗಿದ್ದರೂ ದೇವೇಗೌಡರ ನಿವಾಸದ ಮುಂದೆ ಇಂದು ಹಬ್ಬದ ವಾತಾವರಣ ಕಂಡುಬಂದಿಲ್ಲ. ಇಂದು ಯಾರನ್ನೂ ಭೇಟಿ ಆಗುವುದಿಲ್ಲ. ಇದ್ದಲ್ಲಿಂದಲೇ ಹಾರೈಸಿ ಎಂದು ದೇವೇಗೌಡರು ಸಂದೇಶ ರವಾನಿಸಿದ್ದಾರೆ. “ಇಂದು ನನ್ನ ಜನ್ಮ ದಿನ. ಮನೆ ಬಳಿ ಬಂದು ಯಾರೂ ಆಚರಣೆ ಮಾಡದಂತೆ ಮನವಿ ಮಾಡಿದ್ದೇನೆ. ಅವರು ಇದ್ದಲ್ಲಿಯೇ ಹಾರೈಸಿ ಎಂದು ಹೇಳಿದ್ದೇನೆ” ಎಂದಿದ್ದಾರೆ.

“ಪ್ರಜ್ವಲ್ ರೇವಣ್ಣ ಬಗ್ಗೆ, ರೇವಣ್ಣ ಪ್ರಕರಣ (HD Revanna Case) ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಪ್ರಜ್ವಲ್ ರೇವಣ್ಣ ಹೊರಗಡೆ ಹೋಗಿದ್ದಾರೆ. ರೇವಣ್ಣ ಪ್ರಕರಣದ ಜಾಮೀನು ಅರ್ಜಿ ಸೋಮವಾರ ವಿಚಾರಣೆ ಇದೆ. ಅದರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಕಾನೂನಿನ ಪ್ರಕಾರ ಏನೇನು ಕ್ರಮ ಕೈಗೊಳ್ಳಬೇಕೊ ಅದನ್ನು ತೆಗೆದುಕೊಳ್ಳುವಂತೆ ಕುಮಾರಸ್ವಾಮಿಯವರು ಹೇಳಿದ್ದಾರೆ. ಈ ಪ್ರಕರಣದಲ್ಲಿ ಬಹಳ ಜನ ಇದ್ದಾರೆ. ಇದರಲ್ಲಿ ಯಾರೇ ಇದ್ದರೂ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಿ ಎಂದಿದ್ದಾರೆ. ಆ ಘಟನೆ ಬಗ್ಗೆ ಕುಮಾರಸ್ವಾಮಿಯವರು (HD Kumaraswamy) ಇಡೀ ನಮ್ಮ ಕುಟುಂಬದ ಪರವಾಗಿ ಮಾತನಾಡುತ್ತಾರೆ. ಕಾನೂನು ಏನಿದೆಯೋ ಆ ಕಾನೂನು ವ್ಯಾಪ್ತಿಯಲ್ಲಿ ಏನೇನು ಕ್ರಮ ಕೈಗೊಳ್ಳಬೇಕೋ ಆ ಕ್ರಮ ಕೈಗೊಳ್ಳೋದು ಸರ್ಕಾರದ ಜವಾಬ್ದಾರಿ ಅಂತ ಹೇಳಿದ್ದಾರೆ. ನಾನು ಅದನ್ನು ಪುನರುಚ್ಚರಿಸುತ್ತೇನೆ” ಎಂದು ದೇವೇಗೌಡರು ಹೇಳಿದರು.

ಡಿ.ಕೆ ಶಿವಕುಮಾರ್ (DK Shivakumar) ವಿರುದ್ಧ ದೇವರಾಜೇಗೌಡ 100 ಕೋಟಿ ರೂ. ಆಫರ್ ಆರೋಪದ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ ಅವರು, “ಇದೆಲ್ಲದಕ್ಕೂ ಕುಮಾರಸ್ವಾಮಿಯವರು ಉತ್ತರ ಕೊಟ್ಟಿದ್ದಾರೆ. ನಾನು ಅದರ ಬಗ್ಗೆ ಮಾತನಾಡೊಲ್ಲ. ಕುಮಾರ ಸ್ವಾಮಿಯವರು ಎಲ್ಲ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡ್ತಿದ್ದಾರೆ. ಕುಮಾರಸ್ವಾಮಿಯವರಿಗೆ ಹೋರಾಟದ ಛಲ ಇದೆ. ಹೀಗಾಗಿ ಅವರು ಎಲ್ಲ ವಿಚಾರವನ್ನೂ ಹೇಳ್ತಾರೆ. ಜೂನ್ 4ರ ನಂತರ ನಾನು ಮಾಧ್ಯಮಗಳ ಮುಂದೆ ಮಾತಾಡ್ತೀನಿ. ಅಲ್ಲಿಯವರೆಗೂ ನಾನು ಯಾರ ಜೊತೆಯೂ ಮಾತನಾಡೊಲ್ಲ” ಎಂದಿದ್ದಾರೆ.

“ಇದರಲ್ಲಿ ಅನೇಕ ಜನ ಇದ್ದಾರೆ. ನಾನು ಅವರ್ಯಾರ ಹೆಸರನ್ನೂ ಹೇಳಲು ಹೋಗಲ್ಲ. ಈ ವಿಚಾರದಲ್ಲಿ ಯಾರ್ಯಾರು ಇದ್ದಾರೆ ಅವರೆಲ್ಲರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ನ್ಯಾಯ ಸಿಗಬೇಕು. ಯಾವ ಹೆಣ್ಣು ಮಕ್ಕಳು ಅಪಾಯಕ್ಕೆ ಸಿಕ್ಕಿದ್ದಾರೆ, ಅವರಿಗೆ ಪರಿಹಾರ ನೀಡಬೇಕು. ಈ ಎಲ್ಲ ವಿಚಾರಗಳನ್ನು ಕುಮಾರಸ್ವಾಮಿ ಬಿಡಿಸಿ ಬಿಡಿಸಿ ಹೇಳಿದ್ದಾರೆ. ಪ್ರಜ್ವಲ್ ಬಗ್ಗೆ ಕ್ರಮ ತೆಗೆದುಕೊಳ್ಳುವುದರ ಬಗ್ಗೆ ಯಾವ ತಕರಾರೂ ಇಲ್ಲ. ಆದರೆ ರೇವಣ್ಣ ಅವರ ಬಗ್ಗೆ ಮಾಡಿರುವುದು ರಾಜ್ಯದ ಜನತೆಗೆ ಗೊತ್ತಿದೆ. ಯಾವ ರೀತಿ ಕೇಸ್ ದಾಖಲು ಮಾಡಿದ್ದಾರೆ ಅಂತ ನೋಡಿ. ಒಂದು ಕೇಸ್, ಮೂರು ಬೇಲ್ ಕೊಟ್ಟಿದ್ದಾರೆ. ಇನ್ನೊಂದು ನಾಡಿದ್ದು ಜಡ್ಜ್‌ಮೆಂಟ್ ಇದೆ. ಅದು ಯಾವ ರೀತಿ ನಡೆಯಿತು ಅನ್ನೋದನ್ನ ನಾನು ವಿಶ್ಲೇಷಣೆ ಮಾಡಲ್ಲ” ಎಂದಿದ್ದಾರೆ.

ಇದು ರಾಜಕೀಯವಾಗಿ ದೇವೆಗೌಡರ ಕುಟುಂಬಕ್ಕೆ ಹಿನ್ನಡೆ ಉಂಟುಮಾಡುವ ಕೆಲಸವಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನಿಜ, ಒಟ್ಟಾರೆ ಏನು ನಡೆದಿದೆ, ದೇವರಾಜೇಗೌಡರ ಹೇಳಿಕೆಯಂತೆ, ಇದರಲ್ಲಿ ತುಂಬ ಜನ ಇದ್ದಾರೆ. ಬೇರೆ ಬೇರೆಯವರೆಲ್ಲ ಇದ್ದಾರೆ” ಎಂದಿದ್ದಾರೆ.

“ಇವತ್ತು ನನ್ನ 91 ವರ್ಷ ಮುಗಿಯಿತು. ನಾನು ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಸಿಕೊಂಡು ಬಂದಿದ್ದೇನೆ. ನಾನು ನನ್ನ ಅಭಿಮಾನಿಗಳಿಗೆ ಈ ವರ್ಷದ ಹುಟ್ಟುಹಬ್ಬದ ಆಚರಣೆ ಮಾಡಬಾರದು ಅಂತ ವಿನಂತಿಸಿದ್ದೇನೆ. ಅಭಿಮಾನಿಗಳು ದೇವಸ್ಥಾನದಲ್ಲಿ ಪೂಜೆ ಮಾಡಿದ್ದಾರೆ. ರಾಜ್ಯದ ಎಲ್ಲ ಅಭಿಮಾನಿಗಳಿಗೆ ಶುಭ ಕೋರುತ್ತೇನೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Prajwal Revanna Case: ಪೆನ್‌ಡ್ರೈವ್‌ ಕೇಸ್‌ನಲ್ಲಿ ಶಾಮೀಲಾಗಲು ಡಿಕೆಶಿಯಿಂದ 100 ಕೋಟಿ ರೂಪಾಯಿ ಆಫರ್; ದೇವರಾಜೇಗೌಡ ಆರೋಪ

Continue Reading

ಪ್ರಮುಖ ಸುದ್ದಿ

Aiden Markarm : ವಿಂಡೀಸ್ ವಿರುದ್ಧದ ಸರಣಿಗೆ ದ. ಆಫ್ರಿಕಾ ತಂಡದಲ್ಲಿ ಮಾರ್ಕ್ರಮ್​​ಗೆ ಇಲ್ಲ ಚಾನ್ಸ್​

Aiden Markarm: ಮುಂದಿನ ತಿಂಗಳು ನಡೆಯಲಿರುವ ಟಿ 20 ವಿಶ್ವಕಪ್ 2024 ಗೆ ಮುಂಚಿತವಾಗಿ, ಸಿಎಸ್ಎ ವೆಸ್ಟ್ ಇಂಡೀಸ್​ನಲ್ಲಿ ಮುಂಬರುವ ಮೂರು ಪಂದ್ಯಗಳ ಟಿ 20 ಐ ಸರಣಿಗಾಗಿ ತನ್ನ 15 ಸದಸ್ಯರ ತಂಡ ಆಯ್ಕೆ ಮಾಡಿದೆ. ಅದರಲ್ಲಿ ಹಲವಾರು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಆಯ್ಕೆ ಸಮಿತಿಯು ವಿಶ್ರಾಂತಿ ಪಡೆದ ಹಿರಿಯ ಆಟಗಾರರಲ್ಲಿ ಡೇವಿಡ್ ಮಿಲ್ಲರ್ ಮತ್ತು ಹೆನ್ರಿಕ್ ಕ್ಲಾಸೆನ್ ಮತ್ತು ನಿಯಮಿತ ಸೀಮಿತ ಓವರ್​ಗಳ ನಾಯಕ ಐಡೆನ್ ಮಾರ್ಕ್ರಮ್ ಸೇರಿದ್ದಾರೆ.

VISTARANEWS.COM


on

Aiden Markram
Koo

ಬೆಂಗಳೂರು: ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಕ್ರಿಕೆಟ್ ದಕ್ಷಿಣ ಆಫ್ರಿಕಾ (ಸಿಎಸ್ಎ) 15 ಸದಸ್ಯರ ತಂಡ ಪ್ರಕಟಿಸಿದೆ. ಜಮೈಕಾದಲ್ಲಿ ಮೇ 23 ರಿಂದ ಮೇ 26 ರವರೆಗೆ ನಡೆಯಲಿರುವ ಈ ಸರಣಿಯು ಮುಂದಿನ ತಿಂಗಳು ನಡೆಯಲಿರುವ 2024 ರ ಟಿ 20 ವಿಶ್ವಕಪ್​​ಗೆ ಮುಂಚಿತವಾಗಿ ಎರಡೂ ತಂಡಗಳಿಗೆ ಅಭ್ಯಾಸವಾಗಲಿದೆ. ವಿಶ್ವಕಪ್​​ನಲ್ಲಿ ದಕ್ಷಿಣ ಆಫ್ರಿಕಾವನ್ನು ಮುನ್ನಡೆಸಲು ಸಜ್ಜಾಗಿರುವ ಏಡೆನ್ ಮಾರ್ಕ್ರಮ್, ಡೇವಿಡ್ ಮಿಲ್ಲರ್ ಅವರೊಂದಿಗೆ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ವಿಶ್ರಾಂತಿ ಪಡೆದಿದ್ದಾರೆ. ನಿಯಮಿತ ನಾಯಕನ ಅನುಪಸ್ಥಿತಿಯಲ್ಲಿ ಸಂಕ್ಷಿಪ್ತ ಪ್ರವಾಸಕ್ಕೆ ರಾಸ್ಸಿ ವಾನ್ ಡೆರ್ ಡುಸೆನ್ ಅವರನ್ನು ದಕ್ಷಿಣ ಆಫ್ರಿಕಾ ನಾಯಕನಾಗಿ ನೇಮಿಸಲಾಗಿದೆ.

ಸರಣಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ

ಮುಂದಿನ ತಿಂಗಳು ನಡೆಯಲಿರುವ ಟಿ 20 ವಿಶ್ವಕಪ್ 2024 ಗೆ ಮುಂಚಿತವಾಗಿ, ಸಿಎಸ್ಎ ವೆಸ್ಟ್ ಇಂಡೀಸ್​ನಲ್ಲಿ ಮುಂಬರುವ ಮೂರು ಪಂದ್ಯಗಳ ಟಿ 20 ಐ ಸರಣಿಗಾಗಿ ತನ್ನ 15 ಸದಸ್ಯರ ತಂಡ ಆಯ್ಕೆ ಮಾಡಿದೆ. ಅದರಲ್ಲಿ ಹಲವಾರು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಆಯ್ಕೆ ಸಮಿತಿಯು ವಿಶ್ರಾಂತಿ ಪಡೆದ ಹಿರಿಯ ಆಟಗಾರರಲ್ಲಿ ಡೇವಿಡ್ ಮಿಲ್ಲರ್ ಮತ್ತು ಹೆನ್ರಿಕ್ ಕ್ಲಾಸೆನ್ ಮತ್ತು ನಿಯಮಿತ ಸೀಮಿತ ಓವರ್​ಗಳ ನಾಯಕ ಐಡೆನ್ ಮಾರ್ಕ್ರಮ್ ಸೇರಿದ್ದಾರೆ.

ದಕ್ಷಿಣ ಆಫ್ರಿಕಾದ ಟಿ 20 ವಿಶ್ವಕಪ್ 2024 ಗುಂಪಿನಿಂದ ಹೊರಗುಳಿದಿದ್ದ ರಾಸ್ಸಿ ವಾನ್ ಡೆರ್ ಡುಸೆನ್ ಅವರಿಗೆ ಮಾರ್ಕ್ರಮ್ ಅನುಪಸ್ಥಿತಿಯಲ್ಲಿ ತಂಡದ ಜವಾಬ್ದಾರಿ ನೀಡಲಾಗಿದೆ. ದಕ್ಷಿಣ ಆಫ್ರಿಕಾದ ಸಂಪೂರ್ಣ ತಂಡ ಮತ್ತು ಕೆರಿಬಿಯನ್ನಲ್ಲಿ ಮುಂಬರುವ ಮೂರು ಪಂದ್ಯಗಳ ಟಿ 20 ಐ ಸರಣಿಯ ವೇಳಾಪಟ್ಟಿ ಈ ಕೆಳಗಿನಂತಿದೆ.

ಇದನ್ನೂ ಓದಿ: T20 World Cup : ಭಾರತ- ಪಾಕಿಸ್ತಾನ ಟಿ20 ವಿಶ್ವ ಕಪ್​ ಪಂದ್ಯದ ಟಿಕೆಟ್ ಬೆಲೆ 1.8 ಕೋಟಿ ರೂಪಾಯಿ!

ಮೂರು ಪಂದ್ಯಗಳು ಮೇ 23, ಮೇ 25 ಮತ್ತು ಮೇ 26 ರಂದು ಜಮೈಕಾದ ಸಬೀನಾ ಪಾರ್ಕ್​ನಲ್ಲಿ ನಡೆಯಲಿವೆ. ಸರಣಿ ಮುಗಿದ ಒಂದೆರಡು ದಿನಗಳ ನಂತರ, ದಕ್ಷಿಣ ಆಫ್ರಿಕಾದ ಆಟಗಾರರು 2024 ರ ಟಿ 20 ವಿಶ್ವಕಪ್ ಸಿದ್ಧತೆಗಳ ಭಾಗವಾಗಿ ಫ್ಲೋರಿಡಾದಲ್ಲಿ ಇಂಟ್ರಾ-ಸ್ಕ್ವಾಡ್ ಪಂದ್ಯ ಆಡಲಿದ್ದಾರೆ.

‘ಡಿ’ ಗುಂಪಿನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ, ನೇಪಾಳ ಮತ್ತು ನೆದರ್ಲೆಂಡ್ಸ್ ತಂಡಗಳಿವೆ. ಐಡೆನ್ ಮಾರ್ಕ್ರಮ್ ನಾಯಕತ್ವದಲ್ಲಿ ಭಾರತ ತಂಡ ಜೂನ್ 3ರಂದು ನ್ಯೂಯಾರ್ಕ್ನ ನಸ್ಸಾವು ಕೌಂಟಿ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಶ್ರೀಲಂಕಾ ವಿರುದ್ಧ ಪಂದ್ಯದೊಂದಿಗೆ 2024ರ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

Continue Reading
Advertisement
Kajal Aggarwal Kannappa Movie Entry
ಟಾಲಿವುಡ್14 mins ago

Kajal Aggarwal: ವಿಷ್ಣು ಮಂಚು `ಕಣ್ಣಪ್ಪ’ ಚಿತ್ರಕ್ಕೆ ಕಾಜಲ್ ಅಗರ್​ವಾಲ್​​ ಎಂಟ್ರಿ; ಪಾತ್ರ ಏನಿರಬಹುದು?

White House
ವಿದೇಶ16 mins ago

White House: ಭಾರತದಲ್ಲಿದೆ ಅತ್ಯುತ್ತಮ ಪ್ರಜಾಪ್ರಭುತ್ವ ವ್ಯವಸ್ಥೆ: ಅಮೆರಿಕದ ಮೆಚ್ಚುಗೆ; ಮೋದಿ ನಾಯಕತ್ವಕ್ಕೂ ಸಿಕ್ತು ಶಹಬ್ಬಾಸ್‌ಗಿರಿ

IPL 2024
ಕ್ರೀಡೆ16 mins ago

IPL 2024 : ಆರ್​ಸಿಬಿ- ಚೆನ್ನೈ ಪಂದ್ಯದ ವೇಳೆ ಮಳೆ ಬಂದು ರದ್ದಾದರೆ ಮುಂದೇನಾಗುವುದು?

hd deve gowda birthday
ಪ್ರಮುಖ ಸುದ್ದಿ17 mins ago

HD Deve Gowda: ಈ ಅವಮಾನದಿಂದ ಪಾರು ಮಾಡು: 93ರ ಜನ್ಮದಿನಂದು ದೇವೇಗೌಡರ ಮೌನ ಪ್ರಾರ್ಥನೆ

Gurucharan Singh returns home after almost a month
ಕಿರುತೆರೆ38 mins ago

Gurucharan Singh: ಕಾಣೆಯಾಗಿದ್ದ ʻತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಖ್ಯಾತಿಯ ನಟ ಮತ್ತೆ ಮನೆಗೆ ವಾಪಸ್‌!

Pavithra Jayaram Last Instagram post to chandrakanth
South Cinema59 mins ago

Pavithra Jayaram: ಗೆಳೆಯ ಚಂದು ಜತೆ ಪವಿತ್ರ ಜಯರಾಮ್ ರೀಲ್ಸ್ ನೋಡಿದ್ರೆ ಕಣ್ಣು ಒದ್ದೆಯಾಗುತ್ತೆ!

Aiden Markram
ಪ್ರಮುಖ ಸುದ್ದಿ1 hour ago

Aiden Markarm : ವಿಂಡೀಸ್ ವಿರುದ್ಧದ ಸರಣಿಗೆ ದ. ಆಫ್ರಿಕಾ ತಂಡದಲ್ಲಿ ಮಾರ್ಕ್ರಮ್​​ಗೆ ಇಲ್ಲ ಚಾನ್ಸ್​

Fire Accident
ದೇಶ1 hour ago

Fire Accident: ಚಲಿಸುತ್ತಿದ್ದ ಬಸ್‌ನಲ್ಲಿ ಕಾಣಿಕೊಂಡ ಬೆಂಕಿ; 10 ಮಂದಿ ಭಕ್ತರ ಸಜೀವ ದಹನ

SSLC exam
ಪ್ರಮುಖ ಸುದ್ದಿ1 hour ago

SSLC Exam- 2: ಜೂ.14ರಿಂದ 2ನೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

t20 world cup
ಕ್ರಿಕೆಟ್1 hour ago

T20 World Cup : ಭಾರತ- ಪಾಕಿಸ್ತಾನ ಟಿ20 ವಿಶ್ವ ಕಪ್​ ಪಂದ್ಯದ ಟಿಕೆಟ್ ಬೆಲೆ 1.8 ಕೋಟಿ ರೂಪಾಯಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ13 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌