Cyber crime | ಖ್ಯಾತ ವೈದ್ಯೆ ಪದ್ಮಿನಿ ಪ್ರಸಾದ್ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಸಿ ಮಹಿಳೆಯರ ಜತೆ ಅಸಭ್ಯ ವರ್ತನೆ - Vistara News

ಕರ್ನಾಟಕ

Cyber crime | ಖ್ಯಾತ ವೈದ್ಯೆ ಪದ್ಮಿನಿ ಪ್ರಸಾದ್ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಸಿ ಮಹಿಳೆಯರ ಜತೆ ಅಸಭ್ಯ ವರ್ತನೆ

ಖ್ಯಾತ ವೈದ್ಯರಾಗಿರುವ ಡಾ. ಪದ್ಮಿನಿ ಪ್ರಸಾದ್‌ ಅವರ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಮಹಿಳೆಯರ ಜತೆ ಅಸಭ್ಯವಾಗಿ ವರ್ತಿಸುತ್ತಿರುವ ಬಗ್ಗೆ ಸೈಬರ್‌ ಕ್ರೈಮ್‌ ದೂರು ದಾಖಲಾಗಿದೆ.

VISTARANEWS.COM


on

cyber crime Fake account love matter
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಖ್ಯಾತ ಮಹಿಳಾ ವೈದ್ಯರಾಗಿರುವ ಪದ್ಮಿನಿ ಪ್ರಸಾದ್‌ ಅವರ ಹೆಸರಿನಲ್ಲಿ ಸಾಮಾಜಿಕ ಜಾಲ ತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ ಮಹಿಳೆಯರ ಜತೆ ಅಸಭ್ಯವಾಗಿ ವರ್ತಿಸುತ್ತಿರುವ ಬಗ್ಗೆ ದೂರು ದಾಖಲಾಗಿದೆ. ಡಾ. ಪದ್ಮಿನಿ ಪ್ರಸಾದ್‌ ಅವರೇ ಈ ಬಗ್ಗೆ ಉತ್ತರ ವಿಭಾಗ ಸೈಬರ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪದ್ಮಿನಿ ಪ್ರಸಾದ್‌ ಅವರು ಖ್ಯಾತ ಮಹಿಳಾ ಮತ್ತು ಪ್ರಸೂತಿ ತಜ್ಞರು. ಗರ್ಭಧಾರಣೆ, ಸಂತಾನ ಸಮಸ್ಯೆ, ಕೃತಕ ಗರ್ಭಧಾರಣೆಯ ಆಧುನಿಕ ವಿಧಾನಗಳ ಬಗ್ಗೆ ಸಾಕಷ್ಟು ಜನರರಲ್ಲಿ ಅರಿವು ಮೂಡಿಸಿದವರು. ಲೈಂಗಿಕ ಸಮಸ್ಯೆಗಳಿಗೆ ಮುಕ್ತವಾದ ಸಲಹೆಗಳನ್ನು ನೀಡುವುದಕ್ಕೆ ಪ್ರಸಿದ್ಧರು.

ಡಾ. ಪದ್ಮಿನಿ ಪ್ರಸಾದ್‌

ಯಾರೋ ಕಿಡಿಗೇಡಿಗಳು ಅವರ ಹೆಸರಿನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿ ಮಾಡಿದ್ದಲ್ಲದೆ, ಲೈಂಗಿಕ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ. ಜತೆಗೆ ಮಹಿಳೆಯರ ಜತೆ ಅಸಭ್ಯವಾಗಿ ವರ್ತಿಸುತ್ತಿರುವುದು ಡಾ. ಪದ್ಮಿನಿ ಪ್ರಸಾದ್‌ ಅವರ ಗಮನಕ್ಕೆ ಬಂದಿದೆ. ಹೀಗಾಗಿ ಅವರು ದೂರು ನೀಡಿದ್ದಾರೆ.

ಈ ಹಿಂದೆಯೂ ಇದೇ ರೀತಿ ಆಗಿತ್ತು
೨೦೨೧ರ ಜನವರಿಯಲ್ಲೂ ಪದ್ಮಿನಿ ಪ್ರಸಾದ್‌ ಅವರು ಇದೇ ರೀತಿ ದೂರು ನೀಡಿದ್ದರು. ಆಗಲೂ ಅವರ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ವಂಚನೆ ಮಾಡಿದ್ದಲ್ಲದೆ, ಮಹಿಳೆಯರ ಜತೆಗೆ ಅಸಭ್ಯವಾಗಿ ವರ್ತಿಸಲಾಗಿತ್ತು.

ಡಾ. ಪದ್ಮಿನಿ ಅವರ ನೈಜ ಖಾತೆಯಲ್ಲಿನ ಫೋಟೊಗಳನ್ನು ಎತ್ತಿಕೊಂಡ ಖದೀಮರು, ನಕಲಿ ಖಾತೆ ಸೃಷ್ಟಿ ಮಾಡಿದ್ದಲ್ಲದೆ ಸೈಕಾಲಜಿಸ್ಟ್‌ ಎಂದು ಬರೆದುಕೊಂಡಿದ್ದರು. ನಕಲಿ ಖಾತೆಯಿಂದ ನೂರಾರು ಮಹಿಳೆಯರಿಗೆ ಫ್ರೆಂಡ್‌ ರಿಕ್ವೆಸ್ಟ್‌ ಕಳುಹಿಸಿದ್ದರು. ರಿಕ್ವೆಸ್ಟ್‌ ಸ್ವೀಕರಿಸಿದವರ ಜತೆ ಅಸಭ್ಯವಾಗಿ ಮಾತನಾಡುತ್ತಿರುವುದು ಕಂಡುಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Dengue Fever : ಡೆಂಗ್ಯೂ ಭೀತಿ- ಸೊಳ್ಳೆಗಳ ನಾಶಕ್ಕೆ ಫೀಲ್ಡಿಗಿಳಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

Dengue Fever : ಡೆಂಗ್ಯೂ ವಿರುದ್ಧದ ಜಾಗೃತಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ವತಃ ಫೀಲ್ಡಿಗಿಳಿದರು. ಇದೇ ವೇಳೆ ಬೆಂಗಳೂರಿನ ರಾಮಸ್ವಾಮಿಪಾಳ್ಯ ಕೊಳೆಗೆರೆ ಪ್ರದೇಶದಲ್ಲಿ ಫೀವರ್ ಕ್ಲಿನಿಕ್‌ಗೆ ಚಾಲನೆ ನೀಡಿ, ವಸಂತನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶೀಘ್ರ ಉಚಿತ ಡಯಾಲಿಸಿಸ್ ಸೇವೆ ಪ್ರಾರಂಭಿಸಲು ಸೂಚನೆ ನೀಡಿದರು.

VISTARANEWS.COM


on

By

Dengue Fever
Koo

ಬೆಂಗಳೂರು: ರಾಜ್ಯದ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದ್ದು, ಡೆಂಗ್ಯೂ ಪ್ರಕರಣಗಳು (Dengue Fever) ಹೆಚ್ಚಾಗುತ್ತಿದೆ. ಹೀಗಾಗಿ ಖುದ್ದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಅವರೇ ಫೀಲ್ಡಿಗಿಳಿದು ಜಾಗೃತಿ ಮೂಡಿಸಲು ಮುಂದಾದರು. ಡೆಂಗ್ಯೂ ನಿಯಂತ್ರಣಕ್ಕೆ ಪ್ರತಿ ಶುಕ್ರವಾರ ಆರೋಗ್ಯ ಇಲಾಖೆ ನಡೆಸುತ್ತಿರುವ ಈಡಿಸ್ ಲಾರ್ವಾ ನಾಶಪಡಿಸುವ ಅಭಿಯಾನದಲ್ಲಿ ಸಚಿವರು ಭಾಗಿಯಾದರು.

ಬೆಂಗಳೂರಿನ ವಸಂತನಗರ, ರಾಮಸ್ವಾಮಿಪಾಳ್ಯದಲ್ಲಿ ಮನೆ ಮನೆಗೆ ತೆರಳಿ ಡೆಂಗ್ಯೂ ಹರಡುವ ಸೊಳ್ಳೆ ಉತ್ಪತ್ತಿ ತಾಣಗಳ ಪರಿಶೀಲನೆ ನಡೆಸಿದರು. ಲಾರ್ವಾ ನಾಶಪಡಿಸುವ ಔಷಧಿ ಸಿಂಪಡಿಸಿದ ಸಚಿವರು, ಫಾಗಿಂಗ್ ಕೂಡ ಮಾಡುವ ಮೂಲಕ ತಳ ಮಟ್ಟದಲ್ಲಿ ಸ್ವಚ್ಚತೆ ಕಾಪಾಡುವಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಸಿಬ್ಬಂದಿಗಳ ಕಾರ್ಯಕ್ಕೆ ಉತ್ಸಾಹ ತುಂಬಿದರು. ಅಲ್ಲದೇ ನಿವಾಸಿಗಳಲ್ಲಿ ಡೆಂಗ್ಯೂ ವಿಚಾರವಾಗಿ ಎಚ್ಚರ ವಹಿಸಿ, ನೀರು ಶೇಖರಣೆಯಾಗದಂತೆ ಮುಂಜಾಗೃತೆ ಕ್ರಮಗಳನ್ನು ಅನುಸರಿಸಿ ಎಂದು ಕರೆ ನೀಡಿದರು.

ರಾಮಸ್ವಾಮಿ ಪಾಳ್ಯದ ಕೊಳಗೇರಿ ಪ್ರದೇಶದಲ್ಲಿರುವ ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಡೀಟ್(Odomos) ಕ್ರೀಮ್ ವಿತರಿಸಿದ ಆರೋಗ್ಯ ಸಚಿವರು, ಕೈ ಮತ್ತು ಕಾಲುಗಳಿಗೆ ಹಚ್ಚಿಕೊಳ್ಳಲು ತಿಳಿಸಿದರು. ಅಲ್ಲದೆ ಡೆಂಗ್ಯೂ ನಿಯಂತ್ರಣಕ್ಕಾಗಿ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸಲು ನಿಮ್ಮ ಮನೆಯಲ್ಲಿ ಪೋಷಕರು ಹಾಗೂ ಸುತ್ತಮುತ್ತಲಿನ ಮನೆಯವರಲ್ಲಿ ಅರಿವು ಮೂಡಿಸಲು ವಿದ್ಯಾರ್ಥಿಗಳಿಗೆ ತಿಳಿಸಿದರು.

ಇದನ್ನೂ ಓದಿ: Road Accident : ಮೈಸೂರಿನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ದಂಪತಿ ಗಂಭೀರ; ಎಎಸ್‌ಐಗೆ ಬಡಿದ ಅಪರಿಚಿತ ವಾಹನ

100 ಮೀ ಅಂತರದಲ್ಲಿ ಡೆಂಗ್ಯೂ ಹೆಚ್ಚಾದರೆ ಹಾಟ್‌ ಸ್ಪಾಟ್‌ ಎಂದು ಗುರುತು

100 ಮೀಟರ್ ವ್ಯಾಪ್ತಿಯಲ್ಲಿ 2 ಕ್ಕಿಂತ ಹೆಚ್ಚು ಡೆಂಗ್ಯೂ ಪ್ರಕರಣಗಳು ಕಂಡು ಬಂದರೆ ಅದನ್ನು ಹಾಟ್ ಸ್ಪಾಟ್ ಎಂದು ಗುರುತಿಸಲಾಗುತ್ತದೆ. ಬೆಂಗಳೂರಿನ ರಾಮಸ್ವಾಮಿ ಪಾಳ್ಯದ ಕೊಳಗೇರಿ ಪ್ರದೇಶದಲ್ಲಿ ಫೀವರ್ ಕ್ಲಿನಿಕ್‌ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಬಳಿಕ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಹೆಚ್ಚು ಪ್ರಕರಣಗಳು ಕಂಡುಬರುವ ಕೊಳಗೇರಿ ಪ್ರದೇಶಗಳಲ್ಲಿ ಫೀವರ್ ಕ್ಲಿನಿಕ್‌ಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಇದೇ ವೇಳೆ ಸೂಚಿಸಿದರು.

Dengue Fever

ನಗರದಲ್ಲಿ 100 ಮೀಟರ್ ಪ್ರದೇಶದ ವ್ಯಾಪ್ತಿಯಲ್ಲಿ 2 ಕ್ಕಿಂತ ಹೆಚ್ಚು ಡೆಂಗ್ಯೂ ಪ್ರಕರಣಗಳು ಕಂಡು ಬಂದರೆ ಅದನ್ನು ಹಾಟ್ ಸ್ಪಾಟ್ ಎಂದು ಗುರುತಿಸಬೇಕು. ಜೊತೆಗೆ 100 ಮೀಟರ್ ವ್ಯಾಪ್ತಿಯಲ್ಲಿ ಬರುವ ಮನೆಗಳಿಗೆ ಭೇಟಿ ನೀಡಿ ಫೀವರ್ ಪರೀಕ್ಷೆ, ಲಾರ್ವಾ ಸರ್ವೆ, ಫಾಗಿಂಗ್, ಸ್ಪ್ರೇ ಹಾಗೂ ಡೆಂಘೀ ಹರಡದಂತೆ ಮುಂಜಾಗ್ರತಾ ವಹಿಸಲು ಬಿತ್ತಿ ಪತ್ರಗಳನ್ನು ವಿತರಿಸಿ ಅರಿವು ಮೂಡಿಸಬೇಕು. ಇದಲ್ಲದೆ ಸೊಳ್ಳೆಗಳು ಕಚ್ಚದಂತೆ ಡೀಟ್(Odomos) ಕ್ರೀಮ್ ವಿತರಿಸಿ ಕೈ ಮತ್ತು ಕಾಲುಗಳಿಗೆ ಹಚ್ಚಿಕೊಳ್ಳಲು ತಿಳಿಸುವಂತೆ ಅಧಿಕಾರಿಗಳಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು.

ನಗರದಲ್ಲಿ ಡೆಂಗ್ಯೂ ತಡೆಗಟ್ಟಲು ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸುಮಾರು 3161 ತಂಡಗಳಿಂದ 25 ಲಕ್ಷ ಮನೆಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಾಗುತ್ತಿದೆ. ನಗರದಲ್ಲಿ ಪ್ರತಿನಿತ್ಯ ಸರಾಸರಿ 130 ರಿಂದ 150 ಪ್ರಕರಣಗಳು ಕಂಡು ಬರುತ್ತಿವೆ.

ಶೀಘ್ರ ಉಚಿತ ಡಯಾಲಿಸಿಸ್ ಕೇಂದ್ರ ಆರಂಭ

ವಸಂತನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಡಯಾಲಿಸಿಸ್ ಕೇಂದ್ರ ಶೀಘ್ರದಲ್ಲಿ ಪ್ರಾರಂಭಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಉಚಿತ ಡಯಾಲಿಸಿಸ್ ಸೇವೆ ಪ್ರಾರಂಭಿಸಿಸುವುದರಿಂದ ಇಲ್ಲಿನ ಸುತ್ತಮುತ್ತಲಿನ ಬಡವರ್ಗದ ಜನರಿಗೆ ಸಾಕಷ್ಟು ಅನುಕೂಲವಾಗಲಿದ್ದು, ಅದಕ್ಕಾಗಿ ಅಗತ್ಯ ಉಪಕರಣಗಳ ವ್ಯವಸ್ಥೆ ಮಾಡಿಕೊಂಡು ತ್ವರಿತಗತಿಯಲ್ಲಿ ಕೇಂದ್ರವನ್ನು ಆರಭಿಸಬೇಕೆಂದು ತಿಳಿಸಿದರು ವಸಂತನಗರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇದೇ ವೇಳೆ ಭೇಟಿ ನೀಡಿ ಕೇಂದ್ರದ ಕಾರ್ಯವೈಖರಿಯನ್ನು ಪರಿಶೀಲಿಸಿದರು. ಈ ವೇಳೆ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಹರ್ಷದ್, ಆರೋಗ್ಯ ಇಲಾಖೆಯ ಆಯುಕ್ತರಾದ ಡಿ. ರಂದೀಪ್, ಎನ್.ಎಚ್.ಎಮ್ ಎಂ.ಡಿ ಡಾ. ನವೀನ್ ಭಟ್ ಉಪಸ್ಥಿತರಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

KPSC Recruitment 2024: ಕೆಪಿಎಸ್‌ಸಿ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

KPSC Recruitment 2024: 2024ನೇ ಸಾಲಿನ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆಯುವ ದಿನಾಂಕವನ್ನು ಕೆಪಿಎಸ್‌ಸಿ ಬಿಡುಗಡೆ ಮಾಡಿದೆ. ಯಾವೆ ಇಲಾಖೆ ಪರೀಕ್ಷೆ ಯಾವಾಗ ನಡೆಯಲಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

KPSC Recruitment 2024
Koo

ಬೆಂಗಳೂರು: ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಕರ್ನಾಟಕ ಲೋಕಸೇವಾ ಆಯೋಗ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆ ಸೇರಿ ವಿವಿಧ ಇಲಾಖೆಗಳ ಹುದ್ದೆಗಳ ಭರ್ತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ವೇಳಾಪಟ್ಟಿಯನ್ನು (KPSC Recruitment 2024) ಬಿಡುಗಡೆ ಮಾಡಲಾಗಿದೆ.

ವಿವಿಧ ಪರೀಕ್ಷೆ ವೇಳಾಪಟ್ಟಿ

ಅಧಿಸೂಚನೆ ಸಂಖ್ಯೆ: ಪಿಎಸ್‌ಸಿ 1 ಆರ್‌ಟಿಬಿ- 1/2023 ದಿನಾಂಕ 13-03-2024 ರ ಹುದ್ದೆಗಳಿಗೆ ಪರೀಕ್ಷೆ

  • ಕನ್ನಡ ಭಾಷಾ ಪರೀಕ್ಷೆ (ಉಳಿಕೆ ಮೂಲ ವೃಂದ): 14-09-2024 (ಶನಿವಾರ ಮಧ್ಯಾಹ್ನ)
  • ಸಾಮಾನ್ಯ ಪತ್ರಿಕೆ-I (ಉಳಿಕೆ ಮೂಲ ವೃಂದ) : 15-09-2024 (ಭಾನುವಾರ ಬೆಳಗ್ಗೆ)
  • ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕರು / ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು (ಉಳಿಕೆ ಮೂಲ ವೃಂದ) : 15-09-2024 (ಭಾನುವಾರ ಮಧ್ಯಾಹ್ನ) (ನಿರ್ದಿಷ್ಟ ಪತ್ರಿಕೆ)

ಅಧಿಸೂಚನೆ ಸಂಖ್ಯೆ ಪಿಎಸ್‌ಸಿ 1 ಆರ್‌ಟಿಬಿ- 2/2023 ದಿನಾಂಕ 13-03-2024 ರಂದು ಅಧಿಸೂಚಿಸಿದ ಹುದ್ದೆಗಳಿಗೆ ಪರೀಕ್ಷೆ

  • ಕನ್ನಡ ಭಾಷಾ ಪರೀಕ್ಷೆ (ಹೈದರಾಬಾದ್ ಕರ್ನಾಟಕ ) : 19-10-2024 (ಶನಿವಾರ ಮಧ್ಯಾಹ್ನ)
  • ಸಾಮಾನ್ಯ ಪತ್ರಿಕೆ-I (ಹೈದರಾಬಾದ್ ಕರ್ನಾಟಕ ) : 20-10-2024 (ಭಾನುವಾರ ಬೆಳಗ್ಗೆ)
  • ಸಾಮಾನ್ಯ ಪತ್ರಿಕೆ-I (ಹೈದರಾಬಾದ್ ಕರ್ನಾಟಕ ) : 20-10-2024 (ಭಾನುವಾರ ಬೆಳಗ್ಗೆ)
  • ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕರು / ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು (ಹೈದರಾಬಾದ್ ಕರ್ನಾಟಕ ) : 19-10-2024 (ಭಾನುವಾರ ಮಧ್ಯಾಹ್ನ) (ನಿರ್ದಿಷ್ಟ ಪತ್ರಿಕೆ)

ಅಧಿಸೂಚನೆ: ಇ(2) 598/ 2023-24 ಪಿಎಸ್‌ಸಿ ದಿನಾಂಕ 15-03-2024 ರಂದು ಅಧಿಸೂಚಿಸಿದ ಹುದ್ದೆಗಳಿಗೆ ಪರೀಕ್ಷೆ

  • ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯಲ್ಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ – 97 ಹುದ್ದೆಗಳು (ಹೈದರಾಬಾದ್ ಕರ್ನಾಟಕ) : 16-11-2024 (ಶನಿವಾರ ಮಧ್ಯಾಹ್ನ) ಕನ್ನಡ ಭಾಷಾ ಪರೀಕ್ಷೆ. 17-11-2024 (ಭಾನುವಾರ) (ಸ್ಪರ್ಧಾತ್ಮಕ ಪರೀಕ್ಷೆ)

ಅಧಿಸೂಚನೆ: ಇ(2) 597/ 2023-24 ಪಿಎಸ್‌ಸಿ ದಿನಾಂಕ 15-03-2024 ರಂದು ಅಧಿಸೂಚಿಸಿದ ಹುದ್ದೆಗಳಿಗೆ ಪರೀಕ್ಷೆ ವೇಳಾಪಟ್ಟಿ

  • ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯಲ್ಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ – 150 ಹುದ್ದೆಗಳು (ಉಳಿಕೆ ಮೂಲ ವೃಂದ) : 07-12-2024 (ಶನಿವಾರ) (ಮಧ್ಯಾಹ್ನ) ಕನ್ನಡ ಭಾಷಾ ಪರೀಕ್ಷೆ. 08-12-2024 (ಭಾನುವಾರ) (ಸ್ಪರ್ಧಾತ್ಮಕ ಪರೀಕ್ಷೆ)

Job Alert: ಪದವೀಧರರಿಗೆ ಗುಡ್‌ನ್ಯೂಸ್‌; SCDCC ಬ್ಯಾಂಕ್‌ನಲ್ಲಿದೆ 123 ಹುದ್ದೆ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

Job Alert: HALನಲ್ಲಿದೆ ವಿವಿಧ ಹುದ್ದೆ; ಬೆಂಗಳೂರಿನಲ್ಲಿ ಉದ್ಯೋಗ ಹುಡುಕುವವರಿಗೆ ಉತ್ತಮ ಅವಕಾಶ

ಬೆಂಗಳೂರು: ಬೆಂಗಳೂರಿನಲ್ಲಿ ಒಂದೊಳ್ಳೆ ಉದ್ಯೋಗ ಹೊಂದಬೇಕು ಎಂದು ಬಯಸಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ (Hindustan Aeronautics Limited)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ (HAL India Recruitment 2024). ಟೆಕ್ನಿಷಿಯನ್, ಅಸಿಸ್ಟಂಟ್‌, ಫಿಟ್ಟರ್‌ ಸೇರಿ 28 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಡಿಪ್ಲೋಮಾ, ಐಟಿಐ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜುಲೈ 18 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಡಿಪ್ಲೊಮಾ ಟೆಕ್ನಿಷಿಯನ್ (ಮೆಕ್ಯಾನಿಕಲ್) – 9 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಮೆಕ್ಯಾನಿಕಲ್ ಎಂಜಿನಿಯರಿಂಗ್
ಡಿಪ್ಲೊಮಾ ಟೆಕ್ನಿಷಿಯನ್ (ಎಲೆಕ್ಟ್ರಿಕಲ್)- 2 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಎಲೆಕ್ಟ್ರಿಕಲ್ ಎಂಜಿನಿಯರಿಂಗ್
ಅಸಿಸ್ಟೆಂಟ್ (ಸಿವಿಲ್)- 1 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಸಿವಿಲ್ ಎಂಜಿನಿಯರಿಂಗ್
ಟೆಕ್ನಿಷಿಯನ್ (ಫಿಟ್ಟರ್) – 7 ಹುದ್ದೆ, ವಿದ್ಯಾರ್ಹತೆ: ಐಟಿಐ
ಟೆಕ್ನಿಷಿಯನ್ (ಎಲೆಕ್ಟ್ರಿಕಲ್) – 5 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್ ಎಲೆಕ್ಟ್ರಿಷಿಯನ್
ಟೆಕ್ನಿಷಿಯನ್ (ಮೆಷಿನಿಸ್ಟ್) -2 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್ ಮೆಷಿನಿಸ್ಟ್
ಟರ್ನರ್‌ನಲ್ಲಿ ಟೆಕ್ನಿಷಿಯನ್ (ಫಿಟ್ಟರ್) -1 ಹುದ್ದೆ, ವಿದ್ಯಾರ್ಹತೆ: ಐಟಿಐ
ಟೆಕ್ನಿಷಿಯನ್ (ಎಲೆಕ್ಟ್ರಾನಿಕ್ಸ್-ಮೆಕ್ಯಾನಿಕ್ಸ್) -1 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್ ಎಲೆಕ್ಟ್ರಾನಿಕ್ಸ್-ಮೆಕ್ಯಾನಿಕ್ಸ್

ವಯೋಮಿತಿ

ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 28 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ-ಎನ್‌ಸಿಎಲ್‌ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ (ಸಾಮಾನ್ಯ)-10 ವರ್ಷ, ಪಿಡಬ್ಲ್ಯುಬಿಡಿ (ಒಬಿಸಿ)-13 ವರ್ಷ, ಪಿಡಬ್ಲ್ಯುಬಿಡಿ (ಎಸ್‌ಸಿ/ಎಸ್‌ಟಿ)-15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ, ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ವಿವಿಧ ಹುದ್ದೆಗಳಿಗೆ ಅನುಗುಣವಾಗಿ 22,000 ರೂ.-46,511 ರೂ. ಮಾಸಿಕ ವೇತನವಿದೆ. ಆಯ್ಕೆಯಾದವರಿಗೆ 1 ವರ್ಷ ಅವಧಿಯ ತರಬೇತಿ ನೀಡಲಾಗುತ್ತದೆ. ಉದ್ಯೋಗದ ಸ್ಥಳ: ಬೆಂಗಳೂರು.

ಅರ್ಜಿ ಸಲ್ಲಿಕೆ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://halardc.formflix.com/apply-online)
  • ಅಗತ್ಯ ಮಾಹಿತಿ, ಇಮೇಲ್‌ ವಿಳಾಸ ನಮೂದಿಸಿ ಹೆಸರು ನೋಂದಾಯಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಹೆಸರು, ವಿಳಾಸ, ಶೈಕ್ಷಣಿಕ ಮಾಹಿಸಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌, ಫೋಟೊ ಅಪ್‌ಲೋಡ್‌ ಮಾಡಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.
  • ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ: https://www.hal-india.co.in/ಗೆ ಭೇಟಿ ನೀಡಿ.

HAL India Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಪದವೀಧರರಿಗೆ ಗುಡ್‌ನ್ಯೂಸ್‌; SCDCC ಬ್ಯಾಂಕ್‌ನಲ್ಲಿದೆ 123 ಹುದ್ದೆ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

Continue Reading

ಹಾಸನ

Dengue Fever: ಹಾಸನದಲ್ಲಿ ಡೆಂಗ್ಯೂಗೆ ಎಂಬಿಬಿಎಸ್‌ ವಿದ್ಯಾರ್ಥಿ ಬಲಿ; ಧಾರವಾಡದಲ್ಲಿ 5 ತಿಂಗಳ ಮಗು ಸಾವು

Dengue Fever: ಹಾಸನದಲ್ಲಿ ಎಂಬಿಬಿಎಸ್‌ ವಿದ್ಯಾರ್ಥಿ ಹಾಗೂ ಧಾರವಾಡದಲ್ಲಿ 5 ತಿಂಗಳ ಮಗುವೊಂದು ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

VISTARANEWS.COM


on

By

Dengue Fever
Koo

ಹಾಸನ: ಹಾಸನದಲ್ಲಿ‌ ಡೆಂಗ್ಯೂಗೆ (Dengue Fever) ಮತ್ತೊಬ್ಬ ಯುವಕ ಬಲಿಯಾಗಿದ್ದಾನೆ. ಎಂಬಿಬಿಎಸ್ ವಿದ್ಯಾರ್ಥಿ ಕುಶಾಲ್ (22) ಡೆಂಗ್ಯು ಜ್ವರದಿಂದ ಮೃತಪಟ್ಟವರು. ಹಾಸನದ ಹೊಳೆನರಸೀಪುರ ‌ತಾಲೂಕಿನ ಹಳ್ಳೀ ಮೈಸೂರು ಸಮೀಪದ ಗೋಹಳ್ಳಿ ಗ್ರಾಮದ ಕುಶಾಲ್‌, ಒಂದು ವಾರದಿಂದ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.

ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಗುರುವಾರ ರಾತ್ರಿ ಕುಶಾಲ್‌ ಮೃತಪಟ್ಟಿದ್ದಾರೆ. ಪ್ರತಿಭಾನ್ವಿತ ಹಾಗೂ ಬಡ ವಿದ್ಯಾರ್ಥಿಯಾಗಿದ್ದ ಕುಶಾಲ್, ಹಾಸನದ ಹಿಮ್ಸ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಓದುತ್ತಿದ್ದ. ಕುಶಾಲ್ ಸಾವನ್ನಪ್ಪಿದ ಆಸ್ಪತ್ರೆಯಲ್ಲೇ ತಾಯಿ ರೇಖಾ ಅವರು ಡೆಂಗ್ಯೂಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಯಿ ರೇಖಾ ಮತ್ತು ತಂದೆ ಮಂಜುನಾಥ್ ಮಗನ ಎಂಬಿಬಿಎಸ್ ಕನಸು ಹೊತ್ತಿದ್ದರು. ರೇಖಾ ಟೈಲರ್ ವೃತ್ತಿ ಮಾಡುತ್ತಿದ್ದರೆ, ಮಂಜುನಾಥ್‌ ಅವರು ಶಿಕ್ಷಕ ವೃತ್ತಿಯಲ್ಲಿದ್ದರು. ಆದರೆ ಇದೀಗ ಡೆಂಗ್ಯೂಗೆ ಮಗ ಕುಶಾಲ್‌ ಬಲಿಯಾಗಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Road Accident : ಮೈಸೂರಿನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಛಿದ್ರಗೊಂಡ ದಂಪತಿ; ಎಎಸ್‌ಐಗೆ ಬಡಿದ ಅಪರಿಚಿತ ವಾಹನ

ಧಾರವಾಡದಲ್ಲೂ ಡೆಂಗ್ಯೂಗೆ ಮಗು ಬಲಿ

ಧಾರವಾಡದಲ್ಲಿ ಡೆಂಗ್ಯೂ ಜ್ವರಕ್ಕೆ ಮತ್ತೊಂದು ಮಗು ಬಲಿಯಾಗಿದೆ. ಧಾರವಾಡ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ 5 ತಿಂಗಳ ಆರಾಧ್ಯ ಲಮಾಣಿ ಡೆಂಗ್ಯೂಯಿಂದ ಮೃತಪಟ್ಟಿದೆ. ಧಾರವಾಡ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿರುವ ಗೋಪಾಲ್ ಲಮಾಣಿ ಮಗು ಆರಾಧ್ಯ ಮೃತ ದುರ್ದೈವಿ. ಕಳೆದ ಜುಲೈ 15ರಂದು ಜ್ವರದಿಂದ ಬಳಲುತಿದ್ದ ಆರಾಧ್ಯಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಬರದೇ ಮಗು ಮೃತಪಟ್ಟಿದೆ.

ಡೆಂಗ್ಯೂ ಭೀತಿ; ಶಾಲೆ ಸುತ್ತಲ ಕೊಳಚೆ ನೀರು

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹೊತ್ತಿನಲ್ಲಿ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಬೇಕು. ಆದರೆ ಕೊಪ್ಪಳದ ಬೆಟಗೇರಿ ಗ್ರಾಮದಲ್ಲಿ ಶಾಲೆಯ ಸುತ್ತಲೂ ಕೊಳಚೆ ನೀರು ತುಂಬಿದ್ದು, ಮಕ್ಕಳಿಗೆ ಡೆಂಗ್ಯೂ ಜ್ವರ ಕಾಣಿಸಿಕೊಳ್ಳುತ್ತಿದೆ. ಶಾಲೆ ಸುತ್ತಲು ಸ್ವಚ್ಛತೆ ಕಾಪಾಡಲು ಆಗ್ರಹಿಸಿ, ಮಕ್ಕಳ ಪಾಲಕರು ಬೆಟೆಗೇರಿ ಗ್ರಾಮ ಪಂಚಾಯತ್ ಮುಂದೆ ಪ್ರತಿಭಟನೆ ನಡೆಸಿದರು. ಬೆಟಗೇರಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸುತ್ತಲು ಕೊಳಚೆ ನೀರು ಇದೆ. ಈಗಾಗಲೇ ಕೊಳಚೆಯಿಂದಾಗಿ ನಾಲ್ಕು ಜನರಿಗೆ ಡೆಂಗ್ಯೂ ಕಾಣಿಸಿಕೊಂಡಿದೆ ಎಂದು ಕಿಡಿಕಾರಿದರು.

ಸಾವಿನ ಸಂಖ್ಯೆ 8ಕ್ಕೆ ಏರಿಕೆ

ರಾಜ್ಯಾದ್ಯಂತ ಡೆಂಗ್ಯೂಗೆ 8 ಮಂದಿ ಮೃತಪಟ್ಟಿದ್ದಾರೆ. ಜನವರಿಯಿಂದ ಈವರೆಗೆ (ಜು.18) 85,270 ಮಂದಿ ರಕ್ತ ಮಾದರಿಯನ್ನು ಪರೀಕ್ಷಿಸಿದ್ದು, ಇದರಲ್ಲಿ 11,451 ಮಂದಿಗೆ ಡೆಂಗ್ಯೂ ದೃಢಪಟ್ಟಿದೆ. ಇದರಲ್ಲಿ 620 ಸಕ್ರಿಯ ಪ್ರಕರಣಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Karnataka Assembly Live: ಇಡಿಗೆ ಹೆದರುವುದಿಲ್ಲ, ನಿಮ್ಮನ್ನು ಬಲಿ ಹಾಕಿಯೇ ಸಿದ್ಧ: ವಾಲ್ಮೀಕಿ ಹಗರಣ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ

Karnataka Assembly Live: ಆಂಧ್ರಪ್ರದೇಶ, ತೆಲಂಗಾಣಕ್ಕೆ ಹೋಗಿರುವುದು 89 ಕೋಟಿ ಮಾತ್ರ. ಅದನ್ನು ವಾಪಸು ತರುವ ಕೆಲಸ ಮಾಡ್ತಿದ್ದೇವೆ. ನಾವು ಯಾರನ್ನು ಸಹ ರಕ್ಷಣೆ ಮಾಡುವುದಿಲ್ಲ. ಇವರ ಕಾಲದಲ್ಲಿ ನಡೆದ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಇವರು ಹೀಗೆ ಮಾಡುತ್ತಿದ್ದಾರೆ. ನಾವು ಈ ಬಿಜೆಪಿ ಹಾಗೂ ಇಡಿಗೆ ಹೆದರುವುದಿಲ್ಲ ಎಂದು ಸಿಎಂ ನುಡಿದರು. ಸಿಎಂ ಭಾಷಣಕ್ಕೆ ಪ್ರತಿಪಕ್ಷ ಬಿಜೆಪಿ ಸದಸ್ಯರು ಬಾವಿಗಿಳಿದು ಪ್ರತಿಭಟಿಸಿ ಅಡ್ಡಿ ಒಡ್ಡಿದರು.

VISTARANEWS.COM


on

Karnataka assembly live cm siddaramaiah
Koo

ಬೆಂಗಳೂರು: “ನಾವು ಇಡಿಗೆ, ಬಿಜೆಪಿಗೆ ಹೆದರುವುದಿಲ್ಲ. ತಪ್ಪು ಮಾಡಿದವರನ್ನು ರಕ್ಷಿಸುವುದಿಲ್ಲ. ನಿಮ್ಮನ್ನು ಬಲಿ ಹಾಕಿಯೇ ಸಿದ್ಧ” ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ವಿಧಾನಸಭೆಯಲ್ಲಿ (Vidhan Sabha) ಬಿಜೆಪಿ ಸದಸ್ಯರಿಗೆ ಗುಡುಗಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ (Valmiki Corporation Scam) ಕುರಿತು ನಡೆದ ಚರ್ಚೆಗೆ ಅವರು ಇಂದು ಕಲಾಪದಲ್ಲಿ (Karnataka Assembly Live) ಉತ್ತರ ನೀಡಿದರು.

ʼʼನೀವು ಕಳ್ಳರು, ಲೂಟಿಕೋರರು ಎಂದು ನಿಮ್ಮನ್ನು ಅಲ್ಲಿ ಕೂರಿಸಿದ್ದಾರೆ. ತಾಕತ್ ಇದ್ಯಾ ಅಂದವರು 64ಕ್ಕೆ ಬಂದಿರಿ. ನಾವು 136 ಶಾಸಕರು ಗೆದ್ದು ಬಂದೆವು. ಬೊಮ್ಮಾಯಿ- ಯಡಿಯೂರಪ್ಪ ಆಡಳಿತಾವಧಿಯಲ್ಲಿ ಕೋಟ್ಯಂತರ ರೂಪಾಯಿ ಹಗರಣಗಳು ನಡೆದಿವೆ. ಎಲ್ಲದರ ಬಗ್ಗೆಯೂ ತನಿಖೆ ನಡೆಸುತ್ತೇವೆ. ಯಾರು ತಪ್ಪು ಮಾಡಿದ್ದರೋ ಅವರನ್ನು ಜೈಲಿಗೆ ಕಳುಹಿಸುತ್ತೇವೆ. ನಿಮ್ಮನ್ನು ಬಲಿ ಹಾಕಿಯೇ ಸಿದ್ಧ” ಎಂದು ಸಿಎಂ ಹೇಳಿದರು.

ಆಂಧ್ರಪ್ರದೇಶ, ತೆಲಂಗಾಣಕ್ಕೆ ಹೋಗಿರುವುದು 89 ಕೋಟಿ ಮಾತ್ರ. ಅದನ್ನು ವಾಪಸು ತರುವ ಕೆಲಸ ಮಾಡ್ತಿದ್ದೇವೆ. ನಾವು ಯಾರನ್ನು ಸಹ ರಕ್ಷಣೆ ಮಾಡುವುದಿಲ್ಲ. ಇವರ ಕಾಲದಲ್ಲಿ ನಡೆದ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಇವರು ಹೀಗೆ ಮಾಡುತ್ತಿದ್ದಾರೆ. ನಾವು ಈ ಬಿಜೆಪಿ ಹಾಗೂ ಇಡಿಗೆ ಹೆದರುವುದಿಲ್ಲ ಎಂದು ಸಿಎಂ ನುಡಿದರು. ಸಿಎಂ ಭಾಷಣಕ್ಕೆ ಪ್ರತಿಪಕ್ಷ ಬಿಜೆಪಿ ಸದಸ್ಯರು ಬಾವಿಗಿಳಿದು ಪ್ರತಿಭಟಿಸಿ ಅಡ್ಡಿ ಒಡ್ಡಿದರು.

ʼಬೊಮ್ಮಾಯಿ ಕಾಲದಲ್ಲಿ ಹಗರಣ ಆಗಿದೆ. ದೇವರಾಜ ಅರಸು ಟ್ರಕ್ ಟರ್ಮಿನಲ್ 50 ಕೋಟಿ ಅವ್ಯವಹಾರ ಆಗಿದೆ. ವೀರಯ್ಯ ಬಂಧನವಾಗಿದ್ದಾರೆ. ನಿಮಗೆ ನಾಚಿಕೆ ಆಗಲ್ವಾ?ʼ ಎಂದ ಸಿಎಂ ಬಿಜೆಪಿ ಕಾಲದ 21 ಹಗರಣಗಳ ದಾಖಲೆ ಬಿಡುಗಡೆ ಮಾಡಿದರು. ಕಿಯೋನಿಕ್ಸ್‌ನಲ್ಲಿ 500 ಕೋಟಿ ಅವ್ಯವಹಾರ ಆಗಿದೆ. ಆಗ ಯಡಿಯೂರಪ್ಪ ಸಿಎಂ, ಬಸವರಾಜ ಬೊಮ್ಮಾಯಿ ಗೃಹ ಸಚಿವರಾಗಿದ್ದರು. ಕೋವಿಡ್ ಹಗರಣ, ಭದ್ರಾ ಮೇಲ್ದಂಡೆ ಯೋಜನೆ ಸೇರಿ 40 ಸಾವಿರ ಕೋಟಿ ಹಗರಣ ನಡೆದಿದೆ. ಪಿಎಸ್ಐ ಹಗರಣ ಯಾರ ಕಾಲದಲ್ಲಿ ನಡೆಯಿತು? 40% ಕಮಿಷನ್ ಹಗರಣ ಸಿಎಂ ಬೊಮ್ಮಾಯಿ ಕಾಲದಲ್ಲಿ. ಕಾರ್ಕಳ ಪರುಶುರಾಮ ಥೀಮ್ ಪಾರ್ಕ್ ಹಗರಣ, ಬಿಟ್ ಕಾಯಿನ್ ಹಗರಣ ನಡೆಯಿತು. 750 ಕೋಟಿಗೂ ಹೆಚ್ಚು ಹಣ ಯಡಿಯೂರಪ್ಪ ಆಪ್ತರ ಬಳಿ ಸಿಕ್ಕಿತು. ಇಡಿ ಮತ್ತು ಸಿಬಿಐ ಬರಲಿಲ್ಲ. ಈಶ್ವರಪ್ಪ ರಾಜ್ಯಪಾಲರಿಗೆ ದೂರು ಕೊಟ್ಟರು. ಕೆಕೆಆರ್‌ಡಿಬಿ 200 ಕೋಟಿ ಹಗರಣ ನಡೆಯಿತು. ಆಗ ಕಂದಾಯ ಹಗರಣ ಆಶೋಕ್ ಸಚಿವರಾಗಿದ್ದರುʼ ಎಂದು ಸಿಎಂ ವಿವರಿಸಿದರು.

ಸಿಎಂ ಸಿದ್ದರಾಮಯ್ಯ ಅವರು ನೀಡಿದ ಲಿಖಿತ ಉತ್ತರದ ಪೂರ್ಣ ಪಾಠ ಇಲ್ಲಿದೆ:

ಮಾನ್ಯ ಅಧ್ಯಕ್ಷರೆ,
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ಹಗರಣ ಕುರಿತ ಮುಂದುವರೆದ ಉತ್ತರವನ್ನು ಸದನದಲ್ಲಿ ಲಿಖಿತ ರೂಪದಲ್ಲಿ ಮಂಡಿಸುತ್ತಿದ್ದೇನೆ.

1) ಬಿ.ಜೆ.ಪಿ. ಯವರ ಹುನ್ನಾರ ಇಷ್ಟೆ. ಒಂದು, ಮುಖ್ಯಮಂತ್ರಿಯ ಹೆಸರಿಗೆ ಮಸಿ ಬಳಿಯುವುದು. ಎರಡನೆಯದು, ಸರ್ಕಾರ ಪರಿಶಿಷ್ಟ ಜಾತಿ/ ಪಂಗಡಗಳ ವಿರುದ್ಧ ಎಂದು ಬಿಂಬಿಸುವುದು. ಈ ಎರಡೂ ಎಂದಾದರೂ ಸಾಧ್ಯವೆ? ಇಡೀ ಬಿಜೆಪಿ, ಬಿಜೆಪಿಯ ನಾಯಕತ್ವ ಸಂವಿಧಾನ ಜಾರಿಗೆ ಬಂದ ದಿನದಿಂದಲೂ ದಮನಿತ ಸಮುದಾಯಗಳ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿರುದ್ಧವಾಗಿದೆ. ಮಹಿಳೆಯರ ವಿರುದ್ಧವಾಗಿದೆ. ದಮನಿತರ ಪರವಾದ ಪ್ರತಿ ನಿಲುವು, ಪ್ರತಿ ಕಾಯ್ದೆ, ಯೋಜನೆಗಳನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ನೇತೃತ್ವದ ಸರ್ಕಾರಗಳೆ.

2) ಇದೇ ಬಿಜೆಪಿ ಆಡಳಿತದಲ್ಲಿದ್ದಾಗ ಯಾವ ಯಾವ ನಿಗಮಗಳಲ್ಲಿ ಏನೇನೆಲ್ಲ ನುಂಗಿದ್ದಾರೆ ಎಂದು ಕೂಡ ಚರ್ಚೆ ನಡೆಯುತ್ತಿದೆ. ನುಂಗುವುದರಲ್ಲಿ ಜಾಣರಾಗಿರುವ ಬಿಜೆಪಿಯವರು ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದಾರೆ. ಇದಕ್ಕಿಂತ ದುರಂತ ಬೇರೆ ಇಲ್ಲ. ವಿರೋಧ ಪಕ್ಷದವರು ತಮ್ಮ ಅಜೆಂಡಾ ಸಾಧಿಸಿಕೊಳ್ಳಲು ಯಾವ ಸುಳ್ಳನ್ನು ಬೇಕಾದರೂ ಹೇಳಬಲ್ಲರು ಎಂಬುದು ಇಲ್ಲಿ ಸಾಬೀತಾಗಿದೆ.

3) ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಈ 89.63 ಕೋಟಿಗಳಷ್ಟು ಹಣ ಅಕ್ರಮವಾಗಿ ಹೈದರಾಬಾದಿನ ಆರ್ ಬಿ ಎಲ್ ಬ್ಯಾಂಕಿಗೆ ವರ್ಗಾವಣೆಯಾಗಿರುತ್ತದೆ. [ಈ 89.63 ಕೋಟಿಗಳಲ್ಲಿ 5 ಕೋಟಿ ರೂ ವಾಪಸ್ಸು ಬಂದಿರುತ್ತದೆ]. 89.63 ಕೋಟಿ ರೂಪಾಯಿಗಳಲ್ಲಿ 45,02,98,000 ರೂಪಾಯಿಗಳು ಉಳಿತಾಯ ಖಾತೆಯಿಂದ ವರ್ಗಾವಣೆಯಾಗಿರುತ್ತವೆ. ಇನ್ನುಳಿದ 44.60 ಕೋಟಿ ರೂಪಾಯಿಗಳನ್ನು ನಿಗಮವು ಇಟ್ಟಿದ್ದ ಫಿಕ್ಸೆಡ್ ಡಿಪಾಸಿಟ್ ಮೇಲೆ ಓವರ್ ಡ್ರಾಫ್ಟ್ ತೆಗೆದಿದ್ದಾರೆ. ಓವರ್ ಡ್ರಾಫ್ಟ್ ಎಂದರೆ ಒಂದು ರೀತಿಯ ಸಾಲವೇ. ಇದು ಅತ್ಯಂತ ಪರಿಣತರಾದ, ಪಳಗಿದ ಖದೀಮರ ಕೆಲಸವೆ. ನಿಗಮವು ದಿನಾಂಕ: 30-3-2024 ರಂದು 50.00 ಕೋಟಿ ರೂಪಾಯಿಗಳನ್ನು ಫಿಕ್ಸೆಡ್ ಡಿಪಾಸಿಟ್ ನಲ್ಲಿಟ್ಟಿದೆ. ಸ್ಪಿಕ್ಸ್‌ಲಿ ಸ್ಪೀಕಿಂಗ್, ಈ 50.00 ಕೋಟಿ ಫಿಕ್ಸೆಡ್ ಡಿಪಾಸಿಟ್ ನಮ್ಮ ವಶದಲ್ಲಿಯೇ ಇದೆ. ಯಾಕೆಂದರೆ ಅದು ಫಿಕ್ಸೆಡ್ ಡಿಪಾಸಿಟ್.

4) ವಿರೋಧ ಪಕ್ಷದವರು [ ವಿಜಯೇಂದ್ರ ಹೇಳಿದ ಎರಡನೆ ಸುಳ್ಳು ರಾಜ್ಯ ಸರ್ಕಾರವು ಸಿಬಿಐನವರು ಎಫ್‌ಐಆರ್ ದಾಖಲಿಸಿದ ಮೇಲೆ ಎಸ್.ಐ.ಟಿ. ರಚಿಸಿದೆ ಎಂದು ಹೇಳಿದ್ದಾರೆ. ವಾಸ್ತವವಾಗಿ ನಮ್ಮಲ್ಲಿ ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಿನಾಂಕ 28- 5-2024 ರಂದು ಕ್ರೈಂ ನಂ. 118/2024 ರಂತೆ ಏಫ್ ಐ ಆರ್ ದಾಖಲಾಗಿದೆ. ರಾಜ್ಯ ಸರ್ಕಾರವು 31-5-2024 ರಂದು ಆದೇಶ ಹೊರಡಿಸಿ ಎಸ್.ಐ.ಟಿ. ರಚಿಸಿದೆ. ಸಿಬಿಐ ದಿನಾಂಕ 3-6-2024 ರಂದು ಎಫ್‌ಐಆರ್ ದಾಖಲಿಸಿದ್ದಾರೆ.

5) ದಿನಾಂಕ: 03.06.2024 ರಂದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಜನರಲ್ ಮ್ಯಾನೇಜರ್ (ಹೆಚ್.ಆರ್.) ಗಿರೀಶ್ ಚಂದ್ರ ಜೋಶಿ ಎನ್ನುವವರು ಎಂ.ಜಿ. ರಸ್ತೆ ಶಾಖೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶ್ರೀಮತಿ ಸುಚಿಸ್ಮಿತಾ ರಾವುಲ್, ಚೀಫ್ ಮ್ಯಾನೇಜರ್ (ಬ್ರಾಂಚ್ ಹೆಡ್) ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಹಾಗೂ Prevention of Corruption Act ರ Section 17(A) ರಡಿ ತನಿಖೆ ಮಾಡಲು ಅನುಮತಿ ನೀಡಿ ಸಿ.ಬಿ.ಐ. ಗೆ ಪತ್ರ ಬರೆದಿರುತ್ತಾರೆ. 17(A) ರಡಿ ತನಿಖೆ ಮಾಡಲು ಅನುಮತಿ ನೀಡಿ ಸಿ.ಬಿ.ಐ. ಗೆ ಪತ್ರ ಬರೆದಿರುತ್ತಾರೆ.

6) ಸಿ.ಬಿ.ಐ.ಗೆ ಬರೆದಿರುವ ಈ ಪತ್ರದ ಮುಖ್ಯಾಂಶಗಳನ್ನು ನಾನು ಅನುಬಂಧ-1 ರಲ್ಲಿಟ್ಟು ಸದನದಲ್ಲಿ ಮಂಡಿಸುತ್ತಿದ್ದೇನೆ. ಈ ಎರಡರಲ್ಲೂ ಬ್ಯಾಂಕಿನವರೆ ಒಪ್ಪಿಕೊಂಡಿರುವ ಹಾಗೆ ಬ್ಯಾಂಕಿನ ಸಿಬ್ಬಂದಿಗಳೇ ನೇರವಾಗಿ ಈ ಹಗರಣದಲ್ಲಿ ಶಾಮೀಲಾಗಿದ್ದಾರೆ ಎಂಬುದು ಕಂಡುಬರುತ್ತದೆ.

7) ದಿನಾಂಕ 28-5-2024 ರಂದು ಮಹರ್ಷಿ ವಾಲ್ಮೀಕಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಎನ್ನವವರು ನಿಗಮದ ಹಣ ಖಾಲಿಯಾಗಿರುವುದರ ಕುರಿತು ಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುತ್ತಾರೆ. ದಿನಾಂಕ: 28.05.2024 ರಂದು ಶ್ರೀ ಎ. ರಾಜಶೇಖರ, ಪ್ರಧಾನ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಇವರು ನಿಗಮದಲ್ಲಿ ನಡೆದ ಅವ್ಯವಹಾರದ ಕುರಿತು ಎ. ಮಣಿಮೇಖಲೈ, ಎಂ.ಡಿ. & ಸಿ.ಇ.ಓ., ಯುಬಿಐ, ಶ್ರೀ ನಿತೇಶ್ ರಂಜನ್, ಶ್ರೀ ರಾಮಸುಬ್ರಮಣ್ಯಂ, ಶ್ರೀ ಸಂಜಯ್‌ ರುದ್ರ, ಶ್ರೀ ಪಂಕಜ್ ದ್ವಿವೇದಿ, ಕಾರ್ಯನಿರ್ವಾಹಕ ನಿರ್ದೇಶಕರು ಯುಬಿಐನ ಮುಖ್ಯ ವ್ಯವಸ್ಥಾಪಕರಾದ ಶ್ರೀಮತಿ ಶುಚಿಸ್ಮಿತಾ ರವುಲ್, ಎಂ.ಜಿ. ರಸ್ತೆ ಶಾಖೆ ಇವರುಗಳ ವಿರುದ್ಧ ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಿಸಿರುತ್ತಾರೆ.

8) ಅಕ್ರಮ ನಡೆದಿದೆಯೆಂದು ಗೊತ್ತಾದ ಕೂಡಲೆ ಎಫ್.ಐ.ಆರ್ ರಿಜಿಸ್ಟರ್ ಆಗಿದೆ. ಅಕ್ರಮದ ಕುರಿತು ತನಿಖೆ ಮಾಡಲು ಸಮರ್ಥ ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ದಿನಾಂಕ: 31-5-2024 ರಂದು ಎಸ್‌ಐಟಿ ರಚಿಸಿದ್ದೇವೆ. ಮೇಲಿನ ಎರಡೂ ಕ್ರಿಮಿನಲ್ ಕೇಸುಗಳನ್ನು ತನಿಖೆ ಮಾಡುವ ಉದ್ದೇಶದಿಂದಲೇ 4 ಜನ ಪೊಲೀಸ್ ಅಧಿಕಾರಿಗಳ ತಂಡವನ್ನು ರಚಿಸಲಾಗಿದೆ. ಎಚ್‌ಡಿ 64 ಸಿಐಡಿ 2024 ರ ಆದೇಶದಂತೆ ಈ ತಂಡ ರಚನೆಯಾಗಿದೆ.

9) ಎಸ್.ಐ.ಟಿ.ಯು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡುತ್ತಿದೆ. ಎಸ್.ಐ.ಟಿ. ರಚನೆಯಾದ ಕೂಡಲೆ ಕೂಡಲೆ ಕಾರ್ಯಪ್ರವೃತ್ತವಾದ ಈ ತಂಡವು ಕೆಳಕಂಡವರುಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ.

  1. ಜೆ ಜಿ ಪದ್ಮನಾಭ, ಪ್ರಧಾನ ವ್ಯವಸ್ಥಾಪಕ ಮಹರ್ಷಿ ವಾಲ್ಮೀಕಿ ನಿಗಮ
  2. ಪರಶುರಾಮ್ ದುರ್ಗಣ್ಣನವರ್ ಲೆಕ್ಕಾಧೀಕ್ಷಕ
  3. ಸತ್ಯನಾರಾಯಣ ಇಟಕಾರಿ ಅಧ್ಯಕ್ಷರು ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ
    ಆಪರೇಟಿವ್ ಸೊಸೈಟಿ ನಿಯಮಿತ
  4. ನೆಕ್ಕುಂಟೆ ನಾಗರಾಜ್‌- ಇವರು ಹಿಂದೆ ಶ್ರೀರಾಮುಲು ಜೊತೆ ಇದ್ದರು.
  5. ನಾಗೇಶ್ವರರಾವ್, ನೆಕ್ಕುಂಟೆ ನಾಗರಾಜ್ ಅವರ ಭಾವಮೈದುನ
  6. ಎಂ ಚಂದ್ರ ಮೋಹನ್, ಹೈದರಾಬಾದ್
  7. ಗಾದಿರಾಜು ಸೂರ್ಯನಾರಾಯಣ ವರ್ಮ, ಹೈದರಾಬಾದ್
  8. ಜಗದೀಶ್ ಜಿ ಕೆ ಉಡುಪಿ
  9. ತೇಜ ತಮಟಂ, ಬೆಂಗಳೂರು
  10. ಪಿಟ್ಟಲ ಶ್ರೀನಿವಾಸ ಗಚ್ಚಿ ಬೌಲಿ
  11. ಸಾಯಿತೇಜ ಹೈದರಾಬಾದ್
    12.ಕಾಕಿ ಶ್ರೀನಿವಾಸ ರಾವ್, ಆಂಧ್ರಪ್ರದೇಶ.

10) ವಿರೋಧ ಪಕ್ಷದವರು ಉದ್ದೇಶಪೂರ್ವಕವಾಗಿಯೆ ಅನೇಕ ವಿಚಾರಗಳನ್ನು ಮರೆಮಾಚುತ್ತಿದ್ದಾರೆ. ಪ್ರಮುಖವಾಗಿ, ಬ್ಯಾಂಕಿನವರೆ ದಿನಾಂಕ 3-6-2024 ರಂದು ಸಿಬಿಐಗೆ ನೀಡಿರುವ ದೂರಿನಲ್ಲಿ ಒಪ್ಪಿಕೊಂಡಿರುವ ಹಾಗೆ ಎಂಜಿ ರಸ್ತೆಯ ಬ್ರಾಂಚಿನ ಅಧಿಕಾರಿಗಳು ನೇರವಾಗಿ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಬ್ಯಾಂಕಿನ ಅಧಿಕಾರಿಗಳು ಶಿವಕುಮಾರ ಎಂಬ ಅಕ್ರಮ ವ್ಯಕ್ತಿ [ಇದುವರೆಗೆ ತಿಳಿದು ಬಂದ ಮಾಹಿತಿಯ ಪ್ರಕಾರ ಹೈದರಾಬಾದಿನ ಸಾಯಿತೇಜ ಎಂಬ ವ್ಯಕ್ತಿಯನ್ನು ಶಿವಕುಮಾರ ಎಂದು ಹೇಳಿ ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ] ಯ ವಿವರಗಳನ್ನು ಸರಿಯಾಗಿ ಪರಿಶೀಲಿಸದೆ ಅಕ್ರಮವಾಗಿ ಹಣ ವರ್ಗಾಯಿಸಲು ನೆರವಾಗಿದ್ದಾರೆ. ಈ ಮಾತನ್ನು ನಾನು ಹೇಳುತ್ತಿಲ್ಲ. ಬ್ಯಾಂಕಿನವರೆ ಹೇಳಿದ್ದಾರೆ. ಈ ಅಕ್ರಮ ವ್ಯಕ್ತಿಗೆ ಚೆಕ್ ಬುಕ್ಕನ್ನು ಕೊಟ್ಟಿದ್ದು ಯಾಕೆ? ಆ ಚೆಕ್ಕುಗಳನ್ನು ಆಧರಿಸಿ
NEFT / RTGS ಮಾಡಲು ಅವಕಾಶಕೊಟ್ಟಿದ್ದು ಏಕೆ?

  • ಎಂಜಿ ರಸ್ತೆಯ ಶಾಖೆಯ ಮುಖ್ಯಸ್ಥರು ಉಪ ಮುಖ್ಯಸ್ಥರು ಚೆಕ್ಕುಗಳನ್ನು ಸರಿಯಾಗಿ ಪರಿಶೀಲಿಸದೆ ಅಕ್ರಮ ಎಸಗಿದ್ದಾರೆ ಎಂದು ಬ್ಯಾಂಕಿನವರೆ ಹೇಳಿದ್ದಾರೆ. ಇದನ್ನೆಲ್ಲ ಆಧರಿಸಿಯೇ ಬ್ಯಾಂಕಿನ ಮೇಲಧಿಕಾರಿಗಳು ಸಿಬಿಐಗೆ ಬರೆದ ದೂರಿನಲ್ಲಿ ತಮ್ಮ ಸಿಬ್ಬಂದಿಯ / ಅಧಿಕಾರಿಗಳ ತಪ್ಪುಗಳನ್ನು ಒಪ್ಪಿಕೊಂಡಿದ್ದಾರೆ.
  • ವಿರೋಧ ಪಕ್ಷದವರಿಗೆ ನಾನು ಕೇಳಬಯಸುವುದೇನೆಂದರೆ, ಯೂನಿಯನ್ ಬ್ಯಾಂಕು ರಾಷ್ಟ್ರೀಕೃತ ಬ್ಯಾಂಕ್ ಅಥವಾ ಖಾಸಗಿ ಬ್ಯಾಂಕೊ? ರಾಷ್ಟ್ರೀಕೃತ ಬ್ಯಾಂಕು ಹೌದಾದರೆ ಕೇಂದ್ರದ ಯಾವ ಇಲಾಖೆಯ ಕೆಳಗೆ ಬರುತ್ತಾರೆ? ಹಣಕಾಸು ಇಲಾಖೆಯ ಕೆಳಗೆ ತಾನೆ? ಹಣಕಾಸು ಇಲಾಖೆ ಯಾರ ಅಧೀನದಲ್ಲಿದೆ? ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಹಗರಣದ
    ಜವಾಬ್ದಾರಿಯನ್ನು ಹೊರುತ್ತಾರೆಯೆ? ನಾನು ಯಾಕೆ ಈ ಪ್ರಶ್ನೆಯನ್ನು ಕೇಳಿದೆ ಎಂದರೆ 47.16 ಕೋಟಿ ರೂಗಳ ರಾಜ್ಯದ APMC ಯಲ್ಲಿ ಹಗರಣ ನಡೆದಾಗ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದರು. ಬೊಮ್ಮಾಯಿ ಗೃಹ ಸಚಿವರು ಹಾಗೂ ಎಪಿಎಂಸಿ ಸಚಿವರೂ ಆಗಿದ್ದರು. ಈಗ ವಾಲ್ಮೀಕಿ ನಿಗಮದಲ್ಲಿ ಯಾವ ನಿಗಮದಲ್ಲಿ ಯಾವ ರೀತಿ ಹಗರಣ ನಡೆದಿತ್ತೊ ಅದೇ ರೀತಿಯಲ್ಲಿ ಹಗರಣ ನಡೆದಿತ್ತು. ಆದರೆ ಬ್ಯಾಂಕಿನವರು ತಮ್ಮ ಸಸ್ಪೆನ್ಸ್ ಅಕೌಂಟಿನಲ್ಲಿದ್ದ ಹಣವನ್ನು ತೆಗೆದು ವಾಪಸ್ಸು ತುಂಬಿದ್ದರು. ಈಗ ಹಣ ವಾಪಸ್ಸು ತುಂಬಿ ಎಂದು ಸಿಬಿಐಗೆ ಪತ್ರ ಬರೆದಿದ್ದಾರೆ. ವಾಪಸ್ಸು ಕಟ್ಟದಂತೆ ತಡೆದ ಶಕ್ತಿಗಳು ಯಾವುವು? ಎಂಬುದು ಕೂಡ ತನಿಖೆಯಿಂದ ಬಯಲಾಗಬೇಕು. ಸಸ್ಪೆನ್ಸ್ ಖಾತೆಯಿಂದ ಹಣ ವಾಪಾಸ್ ಕೊಟ್ಟರೆ ಲೂಟಿ ಮಾಡಿದವರಿಂದ ವಸೂಲಿ ಮಾಡುವುದು ಯಾವಾಗ? ಅದಕ್ಕೆ ಯಾರು ಜವಾಬ್ದಾರರು?

II) ವಾಲ್ಮೀಕಿ ಅಭಿವೃದ್ಧಿ ನಿಗಮದ ಹೆಸರಿನಲ್ಲಿ ಹಾಗೂ ಇತರೆ ಯಾವುದೇ ನಿಗಮದಲ್ಲಿ ಖಾತೆ ತೆರೆಯುವುದು, ವರ್ಗಾಯಿಸುವುದು ಮತ್ತು ತಮಗೆ ಬಿಡುಗಡೆಯಾದ ಅನುದಾನಗಳನ್ನು ಸಮರ್ಪಕ ರೀತಿಯಲ್ಲಿ ಜನರ ಕಲ್ಯಾಣಕ್ಕೆ ಬಳಸುವುದು ಮುಖ್ಯಸ್ಥರಾದ ವ್ಯವಸ್ಥಾಪಕ ನಿರ್ದೇಶಕರ ಜವಾಬ್ದಾರಿಯಾಗಿರುತ್ತದೆ.

12) ದಿನಾಂಕ:26.02.2014 ರಂದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಎಂ.ಜಿ.ರಸ್ತೆ ಶಾಖೆಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಒಂದು ಪತ್ರವನ್ನು ಸಲ್ಲಿಸಿರುತ್ತಾರೆ. ಆ ಪತ್ರದಲ್ಲಿ ಉಳಿತಾಯ ಖಾತೆಯನ್ನು ವ್ಯವಸ್ಥಾಪಕ ನಿರ್ದೇಶಕರು ಮತ್ತು ಲೆಕ್ಕಾಧಿಕಾರಿಯವರು ಜಂಟಿಯಾಗಿ ನಿರ್ವಹಿಸುತ್ತಾರೆಂದು ತಿಳಿಸಿದ್ದು, ಎರಡು ಮಾದರಿ ಸಹಿ, ಇತರೆ ಕೆ.ವೈ.ಸಿ. ವಿವರಗಳು ಹಾಗೂ ದಾಖಲೆಗಳನ್ನು ಸಲ್ಲಿಸಿರುತ್ತಾರೆ.

13) ದಿನಾಂಕ: 04.03.2024 ರಂದು ವ್ಯವಸ್ಥಾಪಕ ನಿರ್ದೇಶಕರು ಮತ್ತು ಲೆಕ್ಕಾಧಿಕಾರಿಗಳು ಜಂಟಿಯಾಗಿ ಬ್ಯಾಂಕಿಗೆ ಪತ್ರವನ್ನು ನೀಡಿದಂತೆ ಅಕ್ರಮ ಪತ್ರ ನೀಡಲಾಗಿದೆಯೆಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಈ ಉಳಿತಾಯ ಖಾತೆಗೆ ಸಂಬಂಧಪಟ್ಟಂತೆ ಎಲ್ಲಾ ರೀತಿಯ ವ್ಯವಹಾರಗಳನ್ನು ಅಂದರೆ, ಚೆಕ್‌ಬುಕ್ ಪಡೆಯುವುದು, ಫಿಕ್ಸೆಡ್ ಡೆಪಾಸಿಟ್ ರಸೀದಿಯನ್ನು ಪಡೆಯುವುದು, ಓವರ್ ಡ್ರಾಫ್ಟ್ ದಾಖಲೆಗಳನ್ನು ಪಡೆಯುವುದು ಹಾಗೂ ನಿಗಮದ ಎಲ್ಲಾ ವ್ಯವಹಾರಗಳನ್ನು ಈ ಖಾತೆಯಲ್ಲಿ ನಿರ್ವಹಿಸಲು ನಕಲಿ ಪತ್ರವೊಂದನ್ನು ಸೃಷ್ಟಿಸಿ, ಅದರಲ್ಲಿ ನಿಗಮದಲ್ಲಿಯೇ ಇಲ್ಲದ ಶ್ರೀ ಶಿವಕುಮಾರ್‌ ಎಂಬ ಅಕ್ರಮ ವ್ಯಕ್ತಿಯನ್ನು ಸೃಷ್ಟಿಸಿ ಅವನನ್ನು ಕಿರಿಯ ಲೆಕ್ಕಾಧಿಕಾರಿ ಎಂದು ಹೇಳಿ ಆತನೇ ಇನ್ನು ಮುಂದಿನ ಅಧಿಕೃತ ಸಹಿದಾರ ಎಂದು ಅನಧಿಕೃತವಾಗಿ ಮಾಡಿ ಆತನ ವಶಕ್ಕೆ ಚೆಕ್ ಬುಕ್‌ನ್ನು ನೀಡಬೇಕೆಂದು ತಿಳಿಸುವ ಪತ್ರವೊಂದನ್ನು ನೀಡಿ, ಚೆಕ್‌ಬುಕ್ಕನ್ನು 04.03.2024 ರಂದು ಪಡೆದಿರುವುದಾಗಿ ತಿಳಿದು ಬಂದಿರುತ್ತದೆ. ಈ ಶಿವಕುಮಾರ್ ಎಂಬ ವ್ಯಕ್ತಿ ನಿಜವಾಗಿ ವಾಲ್ಮೀಕಿ ನಿಗಮದ ಸಿಬ್ಬಂದಿಯೆ? ಎಂಬ ಬಗ್ಗೆ ಬ್ಯಾಂಕಿನ ಮ್ಯಾನೇಜರ್ ತಿಳಿದುಕೊಳ್ಳುವ ಪ್ರಯತ್ನವನ್ನೆ ಮಾಡಲಿಲ್ಲ.

14) ನಿರ್ದೇಶಕರ ಮಂಡಳಿ ಸಭೆ ದಿನಾಂಕ;30-3-2024 ರಂದು ನಡೆಯಿತೆಂದು ಬ್ಯಾಂಕಿಗೆ ತಿಳಿಸಲಾಗಿದೆಯೆಂಬಂತೆ ದಾಖಲೆಗಳನ್ನು ಸೃಷ್ಟಿಸಲಾಗಿದೆ. ಆದರೆ ಚುನಾವಣೆಯ ಕೋಡ್ ಆಫ್ ಕಂಡಕ್ಟ್ ಇರುವಾಗ ಯಾವ ಸಭೆ ನಡೆಯಲು ಹೇಗೆ ಸಾಧ್ಯ?

15) ಚುನಾವಣಾ ಸಂದರ್ಭದಲ್ಲಿ ಇಷ್ಟು ದೊಡ್ಡ ಪ್ರಮಾಣದ ವ್ಯವಹಾರಗಳು ನಡೆಯುವಾಗ ಆದಾಯ ತೆರಿಗೆ ಇಲಾಖೆಯವರು ಬ್ಯಾಂಕನ್ನು ಬ್ಯಾಂಕನ್ನು ಕೇಳಲಿಲ್ಲವೆ? ಬ್ಯಾಂಕಿನವರು ಚುನಾವಣಾ ಆಯೋಗದ ಗಮನಕ್ಕೆ ತರಬೇಕಾಗಿಲ್ಲ. ಯಾಕೆ ತರಲಿಲ್ಲ? ಬ್ಯಾಂಕಿನ ಮ್ಯಾನೇಜರ್ ಆದಿಯಾಗಿ ಅನೇಕ ಅಧಿಕಾರಿ, ಸಿಬ್ಬಂದಿಗಳು ವಾಲ್ಮೀಕಿ ನಿಗಮದ ಅಧಿಕಾರಿ ಸಿಬ್ಬಂದಿ ಮತ್ತು ಹೊರಗಿನ ಖಾಸಗಿ Fraud ಮಾಡುವ ವ್ಯಕ್ತಿಗಳು ಸೇರಿ ಇದು ಮಾಡಿರುವ ಹುನ್ನಾರ ಎಂದು ವ್ಯಕ್ತವಾಗುತ್ತದೆ. ತನಿಖೆಯಿಂದ ಈ ಎಲ್ಲಾ ಅಂಶಗಳು ಬಯಲಾಗುತ್ತವೆ.

16) ನಿಗಮದವರು ಹೊಸ ಖಾತೆ ತೆರೆಯಬೇಕಾದರೆ, ಖಾತೆ ವರ್ಗಾವಣೆ ಮಾಡಬೇಕಾದರೆ ಆರ್ಥಿಕ ಇಲಾಖೆಯ ಗಮನಕ್ಕೆ ತರಬೇಕು, ಅನುಮತಿ ಪಡೆದುಕೊಳ್ಳಬೇಕು. ಆದರೆ ಈ ಯಾವ ಕೆಲಸವನ್ನೂ ಮಾಡಿಲ್ಲ. ನೇರವಾಗಿ ಖಾತೆಯ ವಿವರವನ್ನು ಖಜಾನೆ-2 ರಲ್ಲಿ ಅಪ್ ಲೋಡ್ ಮಾಡಿದ್ದಾರೆ. ದಿನಾಂಕ: 19.03.2024 ರಂದು ಡಿಡಿಓ ಕಛೇರಿ, ಅಂದರೆ ನಿರ್ದೇಶಕರು, ಪರಿಶಿಷ್ಟ ಪಂಗಡಗಳ ಇಲಾಖೆಯ ವ್ಯವಸ್ಥಾಪಕರು ಹೊಸ ಬ್ಯಾಂಕ್ ಖಾತೆಯನ್ನು ಕೆ-2 ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಇದನ್ನು ಡಿ.ಡಿ.ಓ.ರವರು (ನಿರ್ದೇಶಕರು, ಪರಿಶಿಷ್ಟ ಪಂಗಡಗಳ ಇಲಾಖೆ) ಅನುಮೋದಿಸಿದ್ದಾರೆ. ಡಿ.ಡಿ.ಒ.ರವರ ಜವಾಬ್ದಾರಿಯ ಮೇಲೆ ದಿನಾಂಕ 25-2-2024 ರಂದು 43.33 ಕೋಟಿ ರೂಪಾಯಿಗಳನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಎಂಜಿ ರಸ್ತೆಯ ಶಾಖೆಗೆ ಉಳಿತಾಯ ಖಾತೆಗೆ ವರ್ಗಾಯಿಸಲಾಗಿದೆ. ವರ್ಷದ ಕಡೆಯಲ್ಲಿ ಆಯವ್ಯಯದಲ್ಲಿ ಕಲ್ಪಿಸಿದ ಅನುದಾನವನ್ನು ಎಲ್ಲರಿಗೂ ಬಿಡುಗಡೆ ಮಾಡುವ ಹಾಗೆಯೇ ಈ ಖಾತೆಗೂ ಹಣ ಬಿಡುಗಡೆಯಾಗಿದೆ. ಯೂನಿಯನ್ ಬ್ಯಾಂಕು ಕೂಡ ರಾಷ್ಟ್ರೀಕೃತ ಬ್ಯಾಂಕೆ, ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಕಳ್ಳತನ ನಡೆದಿದೆ.

ಅಶೋಕ್ ಅವರು ನಿಗಮಕ್ಕೆ ಹಣ ಯಾಕೆ ಬಿಡುಗಡೆ ಮಾಡಿದ್ದು ಎಂದು ಕೇಳಿದ್ದಾರೆ. ಹಣ ವರ್ಷ ವರ್ಷವೂ ಬಿಡುಗಡೆಯಾಗಲೇಬೇಕು. ಇಲ್ಲದಿದ್ದರೆ ಲ್ಯಾಪ್ಸ್ ಆಗುತ್ತದೆ. ವಿಚಾರ ಇರುವುದು ಹಣ ಯಾಕೆ ಬಿಡುಗಡೆ ಮಾಡಿದ್ದು ಎಂಬುದಲ್ಲ. ಬಿಡುಗಡೆ ಮಾಡಿದ ಹಣವನ್ನು ಹೇಗೆ ಬಳಕೆ ಮಾಡಲಾಗುತ್ತದೆ ಎಂಬುದು ಮುಖ್ಯ. ಬಿಡುಗಡೆ ಮಾಡಿದ ಹಣಕ್ಕೆ ನಾನು ಟ್ರಸ್ಟಿ ಎಂಬ ನೈತಿಕತೆ ಪ್ರತಿಯೊಬ್ಬರಿಗೂ ಇರಬೇಕಾಗುತ್ತದೆ. ಕಳ್ಳತನ ಮಾಡಿ ಎಂದು ನಾವು ಹಣ ಬಿಡುಗಡೆ ಮಾಡುತ್ತೇವಾ? ಆದರೆ ಕಳ್ಳತನ ಮಾಡಿದ್ದಾರೆ. ಕಳ್ಳತನ ಮಾಡಿದವರು ಯಾರೇ ಆಗಿದ್ದರೂ ಕಳ್ಳರೆ, ಕಳ್ಳರನ್ನು ಈ ಸರ್ಕಾರವು ಸಹಿಸುವುದಿಲ್ಲ. ಬಿಜೆಪಿಯವರು ಇಮ್ಯುನಿಟಿ ಬೂಸ್ಟರ್ ನೀಡಿದ ಹಾಗೆ ನಾವು ನೀಡುವುದಿಲ್ಲ.

18) ಯಾವುದೇ ಸಂದರ್ಭದಲ್ಲಿ ಕಳ್ಳರು ಏಕಾಏಕಿ ಹುಟ್ಟುವುದಿಲ್ಲ. ಅವರು ಪ್ರೊಫೆಶನಲ್ ಆಗಬೇಕಾದರೆ ಅವರಿಗೆ ಹಿಂದೆ ಬಹಳ ಇಮ್ಯುನಿಟಿ ಸಿಕ್ಕಿರುತ್ತದೆ. ಹಾಗಾಗಿ ಕಳ್ಳರು ಎಲ್ಲಿಂದ ಪ್ರಾರಂಭವಾದರು? ಹೇಗೆ ಪ್ರಾರಂಭವಾದರು? ಅವರನ್ನು ಬೆಳೆಸಿದವರು ಯಾರು? ಎಂಬುದೆಲ್ಲ ಬಹಳ ಮುಖ್ಯವಾದ ಸಂಗತಿಗಳು. ಈ ಎಲ್ಲವುಗಳನ್ನು ತನಿಖಾ ಸಂಸ್ಥೆಗಳು ಗಮನದಲ್ಲಿಟ್ಟುಕೊಂಡು ತನಿಖೆ ನಡೆಸಬೇಕಾಗಿದೆ.

19) ಈ ವಿಷಯದಲ್ಲಿ ಆರೋಪಿಗಳಾಗಿರುವ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ 2017-18 ನೇ ಸಾಲಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಬೆಂಗಳೂರು ನಗರ ಜಿಲ್ಲೆಯಲ್ಲಿ ಜಿಲ್ಲಾ ವ್ಯವಸ್ಥಾಪಕರಾಗಿರುವ ಸಂದರ್ಭದಲ್ಲಿ ಈ ವಾಲ್ಮೀಕಿ ನಿಗಮದಲ್ಲಿ ಮಾಡಿದ ಮಾದರಿಯಲ್ಲಿ 4.96 ಕೋಟಿಗೂ ಹೆಚ್ಚು ಅವ್ಯವಹಾರ ನಡೆಸಿದ್ದ ಆರೋಪದ ಮೇಲೆ ಅಮಾನತ್ತಾಗಿ ಇಲಾಖಾ ವಿಚಾರಣೆ ಪ್ರಾರಂಭಿಸಲಾಗಿತ್ತು. ಆದರೆ, ಅವರನ್ನು ನಿಮ್ಮ ಸರ್ಕಾರ ಆರೋಪಮುಕ್ತಗೊಳಿಸಿ ಆದೇಶಿಸಿತ್ತು.

20) ಹಾಗಿದ್ದರೆ, ಈ ಪದ್ಮನಾಭನನ್ನು ಆರೋಪಮುಕ್ತಗೊಳಿಸಿದ್ದಾಗ ಅಧಿಕಾರದಲ್ಲಿ ಬಿಜೆಪಿ ಸರ್ಕಾರವೆ ಇತ್ತು. ಹಾಗಾಗಿ ಆರೋಪ ಮುಕ್ತಗೊಳಿಸಿ ಅವನಿಗೆ ಇನ್ನೂ ದೊಡ್ಡ ದರೋಡೆ ಮಾಡಲು ಇಮ್ಯುನಿಟಿಯನ್ನು ಒದಗಿಸಿಕೊಟ್ಟಿದ್ದು ಬಿಜೆಪಿ ಸರ್ಕಾರವೇ ಅಲ್ಲವೆ? ಬಿಜೆಪಿ ಸರ್ಕಾರದ ಅಧೀನದಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿಗಳು ಪ್ರಕರಣವನ್ನು ಸರಿಯಾಗಿ ನಿಭಾಯಿಸಿದ್ದರೆ ಆತ ಆರೋಪಮುಕ್ತನಾಗುತ್ತಿದ್ದನೆ?

21) ಪರಿಶಿಷ್ಟ ಜಾತಿ/ ಪಂಗಡಗಳ, ಹಿಂದುಳಿದವರ, ರೈತರ, ಕಾರ್ಮಿಕರ, ರೈತರ, ಮಹಿಳೆಯರ ಏಳಿಗೆಗಾಗಿ ಅವರ ಬದುಕು ಸುಧಾರಿಸುವುದಕ್ಕಾಗಿ ನಮ್ಮ ಸರ್ಕಾರ ಯಾವುದೇ ತ್ಯಾಗಕ್ಕೂ ಸಿದ್ಧ. ಈ ವರ್ಗಗಳ ಕಲ್ಯಾಣಕ್ಕಾಗಿ ಮೀಸಲಿಟ್ಟ ಒಂದು ರೂಪಾಯಿಯನ್ನೂ ಕದಿಯಲು ಬಿಡುವುದಿಲ್ಲ. ದುರುಪಯೋಗವಾಗಲು ಬಿಡುವುದಿಲ್ಲ.

22) ಬಿ.ಜೆ.ಪಿ. ಸರ್ಕಾರದ ಅವಧಿಯಲ್ಲಿ ಅಸಂಖ್ಯಾತ ಹಗರಣಗಳು ನಡೆದಿವೆ. ಕೆಲವು ಮುಖ್ಯ ಹಗರಣಗಳ ಮಾಹಿತಿಯನ್ನು ಸದನದಲ್ಲಿ ಸದನದಲ್ಲಿ ಅನುಬಂಧ-2 ಅನುಬಂಧ-2 ರಲ್ಲಿಟ್ಟು ಮಂಡಿಸುತ್ತಿದ್ದೇನೆ. ತಿಂದವರು ತಿಂದುಕೊಂಡು ಹೋಗಲಿ ಎಂದು ಬಿಡುವುದಕ್ಕೆ ನಮ್ಮದು ಯಡಿಯೂರಪ್ಪನವರ ಸರ್ಕಾರವಲ್ಲ, ಬೊಮ್ಮಾಯಿಯವರ ಸರ್ಕಾರವೂ ಅಲ್ಲ. ಮೋದಿ ಸರ್ಕಾರವೂ ಅಲ್ಲ. ಯಾರೇ ತಪ್ಪೆಸಗಿದ್ದರೂ ಅವರನ್ನು ಬಿಡುವ ಪ್ರಶ್ನೆಯೇ ಇಲ್ಲ. We will not compromise with corruption.

23) ಕಳ್ಳರಿಗೆ ಇಮ್ಯುನಿಟಿ ಸಿಕ್ಕಾಗ ಮಾತ್ರ ಬಲಿತುಕೊಳ್ಳುತ್ತಾರೆಂದು ಆಗಲೆ ಹೇಳಿದೆ. ಹಿಂದಿನ ಇಬ್ಬರು ಮುಖ್ಯ ಮಂತ್ರಿಗಳ ಕಾಲದಲ್ಲಿ ಈ ಕಳ್ಳರನ್ನು ಮಟ್ಟ ಹಾಕಿದ್ದರೆ, ಅಥವಾ ಮೋದಿ ಸರ್ಕಾರ ಖದೀಮ ಬ್ಯಾಂಕ್ ಮ್ಯಾನೇಜರುಗಳನ್ನು ಮಟ್ಟ ಹಾಕಿದ್ದರೆ ಇಂದು ದೇಶದಲ್ಲಿ ಈ ರೀತಿಯ ಪ್ರಕರಣಗಳು ನಡೆಯುತ್ತಿದ್ದವೆ? ದೇಶದ ಎಷ್ಟೊಂದು ಬ್ಯಾಂಕುಗಳಲ್ಲಿ ಈ ರೀತಿಯ ಪ್ರಕರಣಗಳು ನಡೆದಿವೆ ಎಂಬ ಮಾಹಿತಿಯನ್ನು ಆರ್‌ಬಿಐ ಪ್ರಕಟಿಸಬೇಕು ಆಗ ಸತ್ಯಾಂಶ ಹೊರಬರುತ್ತದೆ.

24) ಕರ್ನಾಟಕದಲ್ಲಿ ಕಳೆದ 5-6 ವರ್ಷಗಳಲ್ಲಿ ಅನೇಕ ಬ್ಯಾಂಕುಗಳಲ್ಲಿ ಫ್ರಾಡುಗಳು ನಡೆದಿವೆ. ರಾಷ್ಟ್ರೀಕೃತ ಬ್ಯಾಂಕುಗಳು ಯಾರ ಅಧೀನದಲ್ಲಿವೆ? ಆ ಖದೀಮ ಮ್ಯಾನೇಜರುಗಳು ಯಾರ ಅಧೀನದಲ್ಲಿದ್ದಾರೆ? ಕೇಂದ್ರದ ಹಣಕಾಸು ಸಚಿವರ ಅಧೀನದಲ್ಲಿದ್ದಾರೆ ತಾನೆ? ಅಂತಿಮವಾಗಿ ಮೋದಿಯವರ ಅಧೀನದಲ್ಲಿದ್ದಾರೆ ತಾನೆ? ನಮ್ಮ ಜನರ ದುಡ್ಡನ್ನು ಹೇಗೆಂದರೆ ಹಾಗೆ ಲೂಟಿ ಮಾಡುವುದಕ್ಕಾ ಈ ಬ್ಯಾಂಕುಗಳು ಇರುವುದು?

25) ಇದೇ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಿಂದೆಯೂ ಹಗರಣಗಳಾಗಿವೆ. ಹಗರಣಗಳನ್ನು ಹೊರತರುವ ಕೆಲಸವನ್ನು ನಾವು ಮಾಡುತ್ತೇವೆ. ವಿವಿಧ ಆರೋಪಿಗಳಿಂದ 34.25 ಕೋಟಿ ಹಣ ವಸೂಲಿ ಮಾಡಲಾಗಿದೆ. ಇದುವರೆಗೆ ಸರ್ಕಾರವು 85,25,07,698 ರೂ. ಹಣವನ್ನು (ರೂ. 85.25 ಕೋಟಿ) ವಿವಿಧ ಹಂತಗಳಲ್ಲಿ ತನ್ನ ವಶಕ್ಕೆ ಪಡೆದಿದೆ. ಉಳಿದದ್ದನ್ನು ವಶಕ್ಕೆ ಪಡೆಯುವ ಕೆಲಸ ಮಾಡುತ್ತಿದೆ. ಈ ವಿವರನ್ನು ಅನುಬಂಧ-2 ರಲ್ಲಿಟ್ಟು ಮಂಡಿಸುತ್ತಿದ್ದೇನೆ. ನಿಮ್ಮ ಅವಧಿಯಲ್ಲಿ ನಡೆದಿರುವ ಹಗರಣಗಳಲ್ಲಿ ಎಷ್ಟು ಮೊತ್ತವನ್ನು ರಿಕವರಿ ಮಾಡಿದ್ದೀರಿ ಹೇಳಿ? ನಾವು ತಪ್ಪು ಮಾಡಿದವರನ್ನು ಜೈಲಿಗೂ ಕಳಿಸಿದ್ದೇವೆ. ಹಣವನ್ನೂ ವಾಪಸ್ಸು ತರುತ್ತಿದ್ದೇವೆ. ಆದರೆ ನೀವು ಕಳ್ಳರು ಇನ್ನಷ್ಟು ಕಳ್ಳರಾಗುವಂತೆ ಮಾಡಿದಿರಿ. ಲೂಟಿ ಮಾಡಿದ ಹಣವನ್ನೂ ವಾಪಸ್ಸು ತರಲಿಲ್ಲ.

26) ಅಂತಿಮವಾಗಿ, ಈಗಾಗಲೇ ಈ ಹಗರಣದ ತನಿಖೆಯನ್ನು ರಾಜ್ಯ ಸರ್ಕಾರವು CID, SIT ಗೆ ನೀಡಿ ಆದೇಶಿರುತ್ತದೆ. ಸಿ.ಬಿ.ಐ. ಹಾಗೂ ಇ.ಡಿ. ಸಂಸ್ಥೆಗಳೂ ಕೂಡ ತನಿಖೆ ನಡೆಸುತ್ತಿವೆ. ಈ ಹಗರಣದಲ್ಲಿ ಯಾರು ಯಾರು ಭಾಗಿಯಾಗಿದ್ದಾರೆ ಹಾಗೂ ನಿಗಮದ ಖಾತೆಯಿಂದ ಯಾರ ಖಾತೆಗಳಿಗೆ ಹಣ ವರ್ಗಾವಣೆಯಾಗಿರುತ್ತದೆ ಹಾಗೂ ಇದರ ಮೂಲ (Ultimate) ಫಲಾನುಭವಿಗಳು ಯಾರು ಎಂಬುದು ತನಿಖೆಯು ಪೂರ್ಣಗೊಂಡ ನಂತರವೇ ತಿಳಿಯುತ್ತದೆ. ಕಾರಣಕರ್ತರು ತನಿಖೆ ನಡೆಯುತ್ತಿರುವಾಗ ನಾನು ಯಾವುದೇ ವ್ಯಕ್ತಿಯ ಬಗ್ಗೆ ಸ್ಪಷ್ಟವಾಗಿ ಇವರೇ ಎಂದು ಹೇಳಿದರೆ ತಪ್ಪಾಗುತ್ತದೆ. ಹಾಗೂ ತನಿಖಾ ಸಂಸ್ಥೆಯ ತನಿಖೆಯನ್ನು ದಾರಿ ತಪ್ಪಿಸಿದಂತಾಗುತ್ತದೆ. ಆದುದರಿಂದ, ತನಿಖೆ ಮುಗಿಯುವವರೆಗೂ ಕಾಯಬೇಕಾಗುತ್ತದೆ. ತದನಂತರ ತನಿಖೆಯ ಫಲಿತಾಂತದ ಆಧಾರದ ಮೇಲೆ ತಪ್ಪಿಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಹಾಗೂ ನಿಗಮಕ್ಕೆ ಹಣ ವಾಪಸ್ಸು ಪಡೆಯುವ ಕೆಲಸ ಮಾಡಬೇಕಾಗುತ್ತದೆ.

27) ರಾಜ್ಯ ಸರ್ಕಾರವು ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಜೆ.ಜಿ. ಪದ್ಮನಾಭ, ಹಾಗೂ ಲೆಕ್ಕಾಧೀಕ್ಷಕ ಪರಶುರಾಮ್ ದುರ್ಗಣ್ಣನವರ್ ಇವರನ್ನು ಅಮಾನತ್ತು ಮಾಡಿದೆ. ಎಸ್.ಐ.ಟಿ. ಯು ಬಂಧಿಸಿ ಜೈಲಿಗೆ ಅಟ್ಟಿದೆ. ಇಲಾಖೆಯ ಸಚಿವರಾಗಿದ್ದ ನಾಗೇಂದ್ರ ಅವರು ರಾಜೀನಾಮೆ ನೀಡಿ ವಿಚಾರಣೆ ಎದುರಿಸುತ್ತಿದ್ದಾರೆ. ಅವರನ್ನು ಇ.ಡಿ. ಯು ಬಂಧಿಸಿದೆ. ಹಾಗೆಯೇ, ಬ್ಯಾಂಕಿನ ಸಿಬ್ಬಂದಿಗಳನ್ನು ಸಹ ಎಸ್.ಐ.ಟಿ. ಯವರೆ ಅರೆಸ್ಟ್ ಮಾಡಿ ಜೈಲಿಗೆ ಅಟ್ಟಿದ್ದಾರೆ.

28) ಈ ಹಗರಣದಲ್ಲಿ ಹಣಕಾಸು ಇಲಾಖೆಯ ಯಾವುದೇ ಪಾತ್ರ ಇರುವುದಿಲ್ಲ. ಹಣಕಾಸು ಇಲಾಖೆಯ ಆದೇಶದಂತೆ, ಆಯವ್ಯಯದಲ್ಲಿ ತಿಳಿಸಿದಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯು ನಿಗಮಕ್ಕೆ 4 ಕಂತುಗಳಲ್ಲಿ ಅನುದಾನ ಬಿಡುಗಡೆ ಮಾಡಿರುತ್ತದೆ. ಆಡಳಿತ ಇಲಾಖೆಯ ಆದೇಶದ ನಂತರ ಸಂಬಂಧಪಟ್ಟ DDO (Drawing and Disbursing Officer) (ನಿರ್ದೇಶಕರು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ) ಇವರು ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕೋರಿಕೆಯಂತೆ, ಖಜಾನೆಯಿಂದ ಹಣ ಸೆಳೆದು ನಿಗಮದ ಖಾತೆಗೆ ಜಮೆ ಮಾಡಿರುತ್ತಾರೆ. ಇದು ಇಲಾಖೆಯಲ್ಲಿ ಪ್ರತಿ ಕಂತಿನ ಹಣವನ್ನು ಸೆಳೆಯಲು ಇರುವಂತಹ ವಿಧಾನ (Procedure).

ಮಾನ್ಯ ವಿರೋಧ ಪಕ್ಷದ ನಾಯಕರು ಎನ್.ಟಿ.ಟಿ. ಮಾಡ್ಯೂಲ್ ಬಗ್ಗೆ ಪ್ರಸ್ತಾಪಿಸಿದ್ದಾರೆ. ಅದರಿಂದ ಎಲ್ಲಾ ಬ್ಯಾಂಕ್ ಖಾತೆಗಳಲ್ಲಿ ನಡೆಯುವ ಟ್ರಾನ್ಸಾಕ್ಷನ್ ಆರ್ಥಿಕ ಇಲಾಖೆಗೆ ತಿಳಿಯುವುದರಿಂದ ಈ ಹಗರಣದ ಬಗ್ಗೆ ಮಾಹಿತಿ ಇದ್ದರೂ ಆರ್ಥಿಕ ಇಲಾಖೆ ಏನೂ ಮಾಡಿರುವುದಿಲ್ಲವೆಂದು ಆರೋಪಿಸಿದ್ದಾರೆ. ಆದರೆ, ಎನ್.ಟಿ.ಟಿ. ಮಾಡ್ಯೂಲ್‌ನ್ನು 2022 ರಲ್ಲಿ ಜಾರಿ ಮಾಡಲಾಗಿದೆ. ಇದರಲ್ಲಿ ದಾಖಲಾಗಿರುವ ಎಲ್ಲಾ ಬ್ಯಾಂಕ್ ಖಾತೆಗಳಲ್ಲಿ ಆಯಾ ದಿನ ಎಷ್ಟು ಹಣ ಬ್ಯಾಲೆನ್ಸ್ ಇದೆ ಎಂದು ಮಾಹಿತಿ ಖಜಾನೆಗೆ ಲಭ್ಯವಾಗುತ್ತದೆ. ಈ ಮಾಹಿತಿಯನ್ನು ಖಜಾನೆಯಿಂದ ಹಣ ಬಿಡುಗಡೆಗೊಳಿಸಲು ಓಪನಿಂಗ್ ಬ್ಯಾಲೆನ್ಸ್ ನಿರ್ಧಿಷ್ಟಪಡಿಸಲು ನೆರವಾಗುತ್ತದೆ. ಆಧಾರದ ಮೇಲೆ ಹೊಸದಾಗಿ ಹಣ ಬಿಡುಗಡೆಗೊಳಿಸಲು ನಿರ್ಧಾರ ಮಾಡಲಾಗುವುದು. ಇದನ್ನು ಹೊರತುಪಡಿಸಿ ಯಾವುದೇ ಖಾತೆಯಲ್ಲಿರುವ ಪ್ರತಿದಿನದ ವಹಿವಾಟಿನ ಮಾಹಿತಿ ಬ್ಯಾಂಕ್‌ಗಳಿಂದ ಆರ್ಥಿಕ ಇಲಾಖೆಗೆ ಲಭ್ಯವಾಗುವುದಿಲ್ಲ.

29) ವಿರೋಧ ಪಕ್ಷದವರು ನಿಗಮದಲ್ಲಿ ನಡೆದಿರುವ ಹಗರಣದ ಕುರಿತು ಮಾತನಾಡುವಾಗ ಮುಖ್ಯಮಂತ್ರಿಗಳನ್ನು, ಆರ್ಥಿಕ ಇಲಾಖೆಯನ್ನು ಗುರಿ ಮಾಡುತಿದ್ದಾರೆ. ಆದರೆ, ರಾಜ್ಯದಲ್ಲಿ ಹಗರಣಗಳ ಸರಮಾಲೆಯನ್ನೇ ನಡೆಸಿರುವ ಯೂನಿಯನ್ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಹಾಗೂ ಇನ್ನಿತರೆ ಬ್ಯಾಂಕುಗಳು ಯಾರ ಅಧೀನದಲ್ಲಿ ಬರುತ್ತವೆ? ವಿರೋಧ ಪಕ್ಷದವರಿಗೆ ಅರ್ಥವಾಗದಿದ್ದರೆ ಬಿಡಿಸಿ ಹೇಳುತ್ತೇನೆ. ಇವೆಲ್ಲವೂ ರಾಷ್ಟ್ರೀಕೃತ ಬ್ಯಾಂಕುಗಳು, ಕೇಂದ್ರ ಸರ್ಕಾರದ ಹಣಕಾಸು ಇಲಾಖೆಯ ಅಧೀನದಲ್ಲಿ ಬರುತ್ತವೆ. ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವರಾಗಿದ್ದಾರೆ. ದೇಶದಲ್ಲಿ ಹೆಚ್ಚು ಬ್ಯಾಂಕಿಂಗ್ ಹಗರಣಗಳು ಪ್ರಾರಂಭವಾಗಿದ್ದೇ ಕಳೆದ 6-7 ವರ್ಷಗಳಿಂದ ಉದಾಹರಣೆಗೆ, ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕಿನಲ್ಲಿ ಆಗಿರುವ ಬೃಹತ್ ಹಗರಣದ ಕುರಿತು ಯಾಕೆ ಕೇಂದ್ರ ಸರ್ಕಾರ ಯಾವುದೇ ಕ್ರಮವಹಿಸದೆ ಸುಮ್ಮನಿದೆ? ಬಡ ಠೇವಣಿದಾರರಿಗೆ ಮರಳಿಸಲಾಗಿದೆ? ಬ್ಯಾಂಕಿನ ಆಡಳಿತ ಮಂಡಳಿಯಲ್ಲಿದ್ದ ಬಲಿಷ್ಠ ರಾಜಕಾರಣಿಗಳಿಗೆ ಯಾವ ಶಿಕ್ಷೆ ಆಯಿತು? ಜಯನಗರ, ಬಸವನಗುಡಿಯ ಜನ ಮನೆಮನೆಗಳಲ್ಲಿ, ಬೀದಿ ಬೀದಿಗಳಲ್ಲಿ ಹಗರಣದಲ್ಲಿ ಭಾಗವಹಿಸಿದ್ದವರು ವಿಧಾನಸೌಧ, ಪಾರ್ಲಿಮೆಂಟಿಗೂ ಹೋಗಿದ್ದಾರೆ ಎಂದು ಮಾತನಾಡುತ್ತಿದ್ದಾರೆ. ಕೇಂದ್ರ ಸರ್ಕಾರದ ಸೆಲೆಕ್ಟಿವ್ ಅಪ್ರೋಚ್‌ನಿಂದಾಗಿ ಹಗರಣಗಳು ಹೆಚ್ಚಾಗುತ್ತಿವೆಯೇ ಹೊರತು,
ಕಡಿಮೆಯಾಗುತ್ತಿಲ್ಲ. ವಿರೋಧ ಪಕ್ಷಗಳ ಮುಖಂಡರ ಮೇಲೆ ಹಗರಣಗಳ ಆರೋಪಗಳಿದ್ದರೆ ಅವರನ್ನು ಬಿ.ಜೆ.ಪಿ. ಗೆ ಸೇರಿಸಿಕೊಂಡ ನಂತರವೇ ಹಗರಣ ಮುಕ್ತ ಮಾಡಲಾಗುತ್ತಿದೆ. ಹೀಗಿದ್ದರೆ ಯಾವ ಕಳ್ಳರಿಗೆ ತಾನೆ ಭಯ ಹುಟ್ಟಲು ಸಾಧ್ಯ? ವಿರೋಧ ಪಕ್ಷದವರನ್ನು ನೋಡಿದರೆ ಇಲ್ಲಿ ಗಂಟೆಗಟ್ಟಲೆ ನಿಂತು ನೈತಿಕತೆಯ ಬಗ್ಗೆ ಪಾಠ ಮಾಡುತ್ತಾರೆ.

30) ನಾನು ಪದೆ ಪದೆ ಈ ಸದನಕ್ಕೂ ನಾಡಿನ ಜನರಿಗೂ ಭರವಸೆ ನೀಡಬಯಸುತ್ತೇನೆ. ನಾವು ಪರಿಶಿಷ್ಟ ಜಾತಿ, ಪಂಗಡ, ದಮನಿತ ಸಮುದಾಯದವರಿಗೆ ಒದಗಿಸಿದ ಪ್ರತಿ ಪೈಸೆಯನ್ನೂ ಖರ್ಚು ಮಾಡುತ್ತೇವೆ ಮತ್ತು ಗುಣಾತ್ಮಕವಾಗಿ ವಿನಿಯೋಗಿಸುತ್ತೇವೆ ಹಾಗೂ ಈ ಪ್ರಕರಣದಲ್ಲಿ ಭಾಗಿಯಾಗಿರುವ ಕಳ್ಳರು ಯಾರೇ ಇದ್ದರೂ ಅವರನ್ನು ನಿರ್ಧಾಕ್ಷಿಣ್ಯವಾಗಿ ಶಿಕ್ಷಿಸುತ್ತೇವೆ. ಬಿ.ಜೆ.ಪಿ. ಅವಧಿಯ ಎಲ್ಲ ಹಗರಣಗಳನ್ನೂ ತನಿಖೆಗೆ ಒಪ್ಪಿಸುತ್ತೇವೆ.

ಇದನ್ನೂ ಓದಿ: Karnataka Assembly Live: ವಿಧಾನಸಭೆಯಲ್ಲಿ ಶಾಸಕರಿಗೆ ಮಧ್ಯಾಹ್ನ ಮಲಗಲು ವ್ಯವಸ್ಥೆ ಮಾಡಿಸಿದ ಸ್ಪೀಕರ್!

Continue Reading
Advertisement
Krishan Kumar Daughter Tishaa Dies Of Cancer At 21
ಬಾಲಿವುಡ್4 mins ago

Krishan Kumar: ಕೇವಲ 21ನೇ ವಯಸ್ಸಿಗೆ ನಿಧನ ಹೊಂದಿದ ‘ಅನಿಮಲ್’ ಸಿನಿಮಾ ನಿರ್ಮಾಪಕನ ಮಗಳು

Indian Navy Recruitment
ಉದ್ಯೋಗ19 mins ago

Indian Navy Recruitment: ಭಾರತೀಯ ನೌಕಾ ಪಡೆಯಲ್ಲಿದೆ 741 ಹುದ್ದೆ; 10ನೇ ತರಗತಿ ಪಾಸಾದವರಿಗೂ ಇದೆ ಅವಕಾಶ

Microsoft Windows Outage
ಪ್ರಮುಖ ಸುದ್ದಿ25 mins ago

Microsoft Windows Outage: ಮೈಕ್ರೊಸಾಫ್ಟ್​​ ಸಮಸ್ಯೆ ; ಬೆಂಗಳೂರು ಸೇರಿದಂತೆ ದೇಶದ ವಿಮಾನ ನಿಲ್ದಾಣಗಳಲ್ಲಿ ಅಲ್ಲೋಲಕಲ್ಲೋಲ

Dengue Fever
ಬೆಂಗಳೂರು33 mins ago

Dengue Fever : ಡೆಂಗ್ಯೂ ಭೀತಿ- ಸೊಳ್ಳೆಗಳ ನಾಶಕ್ಕೆ ಫೀಲ್ಡಿಗಿಳಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

Hit and Run Case
Latest36 mins ago

Accident Video: ಸ್ಕೂಟರ್‌ಗೆ ಅಪ್ಪಳಿಸಿದ ಕಾರು; 30 ಅಡಿ ದೂರ ಎಗರಿ ಬಿದ್ದ ಮಹಿಳಾ ಕಾನ್‌ಸ್ಟೇಬಲ್‌

Indian Olympics History
ಕ್ರೀಡೆ44 mins ago

Indian Olympics History: ಭಾರತಕ್ಕೆ ಒಲಿಂಪಿಕ್ಸ್​ನಲ್ಲಿ ವೈಯಕ್ತಿಕ ಚಿನ್ನ ಗೆದ್ದ ಮೊದಲ ಸಾಧಕ ಅಭಿನವ್‌ ಬಿಂದ್ರಾ

Sexual Abuse
Latest48 mins ago

Sexual Abuse : ಬಿಸ್ಕೆಟ್‌ಗೆ ಆಸೆ ಪಟ್ಟು ಹೋಗಿದ್ದ ಪುಟ್ಟ ಬಾಲಕಿ ಕಾಮುಕನ ಕೈಗೆ ಸಿಕ್ಕಿ ಕೊಲೆಯಾದಳು

KPSC Recruitment 2024
ಕರ್ನಾಟಕ58 mins ago

KPSC Recruitment 2024: ಕೆಪಿಎಸ್‌ಸಿ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Dengue Fever
ಹಾಸನ58 mins ago

Dengue Fever: ಹಾಸನದಲ್ಲಿ ಡೆಂಗ್ಯೂಗೆ ಎಂಬಿಬಿಎಸ್‌ ವಿದ್ಯಾರ್ಥಿ ಬಲಿ; ಧಾರವಾಡದಲ್ಲಿ 5 ತಿಂಗಳ ಮಗು ಸಾವು

Tharun Sudhir says Darshan Will Attend My Marriage
ಸ್ಯಾಂಡಲ್ ವುಡ್1 hour ago

Tharun Sudhir: ಮದುವೆ ಡೇಟ್‌ ಚೇಂಜ್‌ ಮಾಡಬೇಡ, ನಾನು ಬರ್ತೀನಿ ಅಂದ್ರು ದರ್ಶನ್‌ ಎಂದ ತರುಣ್​ ಸುಧೀರ್

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ4 hours ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ4 hours ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ24 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ1 day ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌