Britain PM | ಬ್ರಿಟನ್ ಪಿಎಂ ಯಾರು? ಸುನಕ್, ಬೋರಿಸ್, ಪೆನ್ನಿ- ಯಾರು ಹಿತವರು ಈ ಮೂವರೊಳಗೆ! - Vistara News

EXPLAINER

Britain PM | ಬ್ರಿಟನ್ ಪಿಎಂ ಯಾರು? ಸುನಕ್, ಬೋರಿಸ್, ಪೆನ್ನಿ- ಯಾರು ಹಿತವರು ಈ ಮೂವರೊಳಗೆ!

ಅಕ್ಟೋಬರ್ 31ರೊಳಗೆ ಬ್ರಿಟನ್ ಪಿಎಂ (Britain PM) ಯಾರೆಂಬುದು ಗೊತ್ತಾಗಲಿದೆ. ರಿಷಿ ಸುನಕ್, ಬೋರಿಸ್ ಜಾನ್ಸನ್ ಮತ್ತು ಪೆನ್ನಿ ಮೋರ್ಡಾಂಟ್ ಅವರ ಮಧ್ಯೆ ಸ್ಪರ್ಧೆ ಸಾಧ್ಯತೆ ಇದೆ. ಈ ಕುರಿತ ವಿಶ್ಲೇಷಣೆ ಇಲ್ಲಿದೆ.

VISTARANEWS.COM


on

Britain PM
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

| ಮಲ್ಲಿಕಾರ್ಜುನ ತಿಪ್ಪಾರ ಬೆಂಗಳೂರು

vistara-vishleshane-

ರಾಜಕೀಯ ಅಸ್ಥಿರತೆಯ ನಡುವೆ ಲಿಜ್ ಟ್ರಸ್ ಅವರು ಕೇವಲ 45 ದಿನಗಳಲ್ಲಿ ಬ್ರಿಟನ್ ಪ್ರಧಾನಿ (Britain PM) ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಜತೆಗೆ, ಅತಿ ಕಡಿಮೆ ಅವಧಿಯ ಪ್ರಧಾನಿ ಎಂಬ ಕುಖ್ಯಾತಿಗೆ ಪಾತ್ರರಾಗಿದ್ದಾರೆ. 1827ರಲ್ಲಿ ಜಾರ್ಜ್ ಕ್ಯಾನ್ನಿಂಗ್ ಅವರು 4 ತಿಂಗಳವರೆಗೆ ಪಿಎಂ ಆಗಿದ್ದರು. ಆ ದಾಖಲೆಯನ್ನು ಲಿಜ್ ಮುರಿದಿದ್ದಾರೆ. ಆದರೆ, ಬಹು ಮುಖ್ಯ ಪ್ರಶ್ನೆ ಏನೆಂದರೆ- ಬ್ರಿಟನ್ ಮುಂದಿನ ಪ್ರಧಾನಿ ಯಾರು? ಮೇಲ್ನೋಟಕ್ಕೆ ಭಾರತೀಯ ಮೂಲದ ರಿಷಿ ಸುನಕ್ ಅವರಿಗೆ ಪಿಎಂ ಹುದ್ದೆ ಒಲಿಯಲಿದೆ ಎಂದು ಹೇಳಬಹುದಾದರೂ, ಇಂಗ್ಲೆಂಡ್‌ನ ರಾಜಕೀಯ ಪರಿಸ್ಥಿತಿ ಅಷ್ಟು ಸರಳವಾಗಿಲ್ಲ!

ಏನೇ ಆದರೂ ಅಕ್ಟೋಬರ್ 31ರೊಳಗೇ ಹೊಸ ಪ್ರಧಾನಿಯನ್ನು ಆಯ್ಕೆ ಮಾಡಲೇಬೇಕಾದ ಅನಿವಾರ್ಯ ಟೋರಿ (ಕನ್ಸರ್ವೇಟಿವ್) ಪಕ್ಷಕ್ಕೆ ಇದೆ. ಬಹುತೇಕರು ರಿಷಿ ಸುನಕ್ ಅವರು ಪ್ರಧಾನಿಯಾಗಲಿದ್ದಾರೆಂದು ಭಾವಿಸಿದ್ದಾರೆ. ಆದರೆ, ಈ ಹಿಂದೆ ಮೂರನೇ ಸ್ಥಾನದಲ್ಲಿದ್ದ ಪೆನ್ನಿ ಮೋರ್ಡಾಂಟ್ ಮತ್ತು ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಕೂಡ ಸ್ಪರ್ಧೆಗಿಳಿಯುವ ಸಾಧ್ಯತೆ ಇರುವುದರಿಂದ ರಿಷಿ ಹಾದಿ ಅಷ್ಟು ಸುಲಭವಾಗಿಲ್ಲ.

ಮುಂದೇನು?
ಲಿಜ್ ಟ್ರಸ್ ಅವರು ಪ್ರಧಾನಿಗೆ ಹುದ್ದೆ ರಾಜೀನಾಮೆ ನೀಡುತ್ತಿದ್ದಂತೆ ಹೊಸ ಪ್ರಧಾನಿ ಆಯ್ಕೆ ಪ್ರಕ್ರಿಯೆಗಳೂ ಚಾಲನೆಗೊಂಡಿವೆ. ಸೋಮವಾರ ಅಂದರೆ, ಅಕ್ಟೋಬರ್ 24ರ ಮಧ್ಯಾಹ್ನ 2 ಗಂಟೆಯವರೆಗೂ ಉಮೇದುವಾರಿಕೆಗೆ ಅವಕಾಶವಿರುತ್ತದೆ. ಪ್ರಧಾನಿ ಹುದ್ದೆ ಸ್ಪರ್ಧೆಯಲ್ಲಿ ಉಳಿಯಲು ಯಾವುದೇ ಅಭ್ಯರ್ಥಿಗೆ 100 ಸಂಸದರ ಬೆಂಬಲ ಅತ್ಯಗತ್ಯ. ಸಂಸತ್ತಿನಲ್ಲಿ ಒಟ್ಟು 357 ಕನ್ಸರ್ವೇಟಿವ್ ಸಂಸದರಿದ್ದಾರೆ. ಹಾಗಾಗಿ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅವಕಾಶವಿದೆ.

ಅಕ್ಟೋಬರ್ 24ರಂದು ಮಧ್ಯಾಹ್ನ 3.30ರಿಂದ ಸಂಜೆ 5.30ರವರೆಗೆ ಮೊದಲ ಮತದಾನ ನಡೆಯಲಿದೆ. ಅದೇ ದಿನ ಸಂಜೆ 6 ಗಂಟೆಗೆ ರಿಸಲ್ಟ್ ಕೂಡ ಘೋಷಿಸಲಾಗುತ್ತದೆ. ಒಂದು ವೇಳೆ, ಎರಡನೇ ಸುತ್ತಿನ ಮತದಾನ ಅಗತ್ಯವಾದರೆ ಸಂಜೆ, 6.30ಕ್ಕೆ ಮತ್ತೆ ಚುನಾವಣಾ ಪ್ರಕ್ರಿಯೆ ಆರಂಭವಾಗುತ್ತದೆ. ಈ ಹೊತ್ತಿಗೆ ಕೊನೆಯುಲ್ಲಿ ಉಳಿದ ಇಬ್ಬರು ಅಭ್ಯರ್ಥಿಗಳು ಯಾರು ಎಂಬುದು ಪಕ್ಷದ ಸದಸ್ಯರಿಗೆ ಗೊತ್ತಿರುತ್ತದೆ. ಈ ಮತದಾನ ರಿಸಲ್ಟ್ ಅದೇ ದಿನ ರಾತ್ರಿ 9 ಗಂಟೆಗೆ ಗೊತ್ತಾಗಲಿದೆ.

ಅಂತಿಮವಾಗಿ ಸ್ಪರ್ಧೆಯಲ್ಲಿ ಉಳಿದಿರುವ ಇಬ್ಬರು ಅಭ್ಯರ್ಥಿಗಳ ನಡುವೆ ಒಪ್ಪಂದ ಮೂಲಕ ಆಯ್ಕೆ ಸಾಧ್ಯತೆಯೂ ಇರುತ್ತದೆ. ಒಂದೊಮ್ಮೆ ಡೀಲ್ ಸಾಧ್ಯವಾಗದೇ ಹೋದರೆ, ಕನ್ಸರ್ವೇಟಿವ್ ಪಕ್ಷದ ಸದಸ್ಯರು ಸುರಕ್ಷಿತ ಆನ್‌ಲೈನ್ ವೋಟಿಂಗ್ ಸಿಸ್ಟಮ್ ಮೂಲಕ ಮತದಾನ ನಡೆಸಲಿದ್ದಾರೆ. ಈ ಮತದಾನವು ಅಕ್ಟೋಬರ್ 28ರಂದು ಬೆಳಗ್ಗೆ 11ಕ್ಕೆ ಅಂತ್ಯಗೊಳ್ಳುತ್ತದೆ. ಫಲಿತಾಂಶವನ್ನು ಅದೇ ದಿನ ಘೋಷಿಸಲಾಗುತ್ತದೆ. ಅಕ್ಟೋಬರ್ 28ಕ್ಕೆ ಬ್ರಿಟನ್ ಮುಂದಿನ ಪ್ರಧಾನಿ ಯಾರು ಎಂಬುದು ಸ್ಪಷ್ಟವಾಗಿ ಗೊತ್ತಾಗಲಿದೆ. ಬ್ರಿಟನ್ ಸರ್ಕಾರದಲ್ಲಿ ಅಕ್ಟೋಬರ್ 31ಕ್ಕೆ ಫೈನಾನ್ಷಿಯಲ್ ಸ್ಟೇಟ್ಮೆಂಟ್ ಸಲ್ಲಿಸಲಾಗುತ್ತದೆ. ಅದಕ್ಕೂ ಮುಂಚೆಯೇ ಪ್ರಧಾನಿಯನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಇದೆ. ಪಕ್ಷದ 1922 ಕಮೀಟಿ ಅಧ್ಯಕ್ಷ ಗ್ರಹಾಮ್ ಬ್ರಾಡಿ ಅವರು ನಿಯಮಗಳನ್ನು ರೂಪಿಸಿದ್ದಾರೆ.

ರಿಷಿ ಸುನಕ್ ಪ್ರಧಾನಿ ಆಗ್ತಾರ?
ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅವರ ಅಳಿಯ ಕೂಡ ಆಗಿರುವ, ಮಾಜಿ ವಿತ್ತ ಸಚಿವ ರಿಷಿ ಸುನಕ್ ಅವರು ಬ್ರಿಟನ್ ಪಿಎಂ ಆಗಿ ಆಯ್ಕೆಯಾಗುವ ಸಾಧ್ಯತೆಗಳಿವೆ. ಯಾಕೆಂದರೆ, ಬೋರಿಸ್ ಜಾನ್ಸನ್ ಅವರು ರಾಜೀನಾಮೆ ನೀಡಿದಾಗಲೂ ರಿಷಿ ಸುನಕ್ ಅವರು ಪ್ರಧಾನಿಯಾಗುತ್ತಾರೆಂದು ಭಾವಿಸಲಾಗಿತ್ತು. ಅವರಿಗೆ ಸಂಸದರ ಬೆಂಬಲವೂ ವ್ಯಕ್ತವಾಗಿತ್ತು. ಆದರೆ, ಅಂತಿಮವಾಗಿ ಪ್ರಧಾನಿ ಸ್ಥಾನಕ್ಕೆ ಮಾಜಿ ವಿದೇಶಾಂಗ ಸಚಿವೆ ಲಿಜ್ ಟ್ರಸ್ ಅವರು ಪ್ರಧಾನಿಯಾಗಿ ಆಯ್ಕೆಯಾದರು. ರಿಷಿ ಎರಡನೇ ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು.

ಈಗ ಲಿಜ್ ಕೂಡ ರಾಜೀನಾಮೆ ನೀಡಿದ್ದಾರೆ. ಈಗಾಗಲೇ ರಿಷಿ ಸುನಕ್, ರೆಡಿ ಫಾರ್ ರಿಷಿ ಕ್ಯಾಂಪೇನ್ ಶುರು ಮಾಡಿದ್ದಾರೆ. ಟೋರಿ ಸಂಸದರೂ ಬೆಂಬಲವೂ ಅವರಿಗೆ ಇದೆ. ಆದರೆ, ಪಿಎಂ ರೇಸಿನಲ್ಲಿ ಅವರಿಗೆ ನಿಜವಾಗೂ ಗೆಲುವು ಸಿಗುವುದಾ? ಕಾದುನೋಡಬೇಕು. ಯಾಕೆಂದರೆ, ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಕೂಡ ಸ್ಪರ್ಧೆಗೆ ಎಂಟ್ರಿ ಕೊಡುವ ಸಾಧ್ಯತೆ ಇದೆ.

ಪೆನ್ನಿ ಮೋರ್ಡಾಂಟ್
ಈ ಹಿಂದೆ ನಡೆದ ಬ್ರಿಟನ್ ಪಿಎಂ ಆಯ್ಕೆ ಸ್ಪರ್ಧೆಯಲ್ಲಿ ಪೆನ್ನಿ ಮೋರ್ಡಾಂಟ್ ಅವರು ಮೂರನೇ ಸ್ಥಾನದಲ್ಲಿದ್ದರು. ಅವರೂ ಈಗ ಪ್ರಧಾನಿ ಹುದ್ದೆಯ ಆಕಾಂಕ್ಷಿ. ಬ್ರಿಟನ್ ಸಾಮಾನ್ಯರ ಸಭೆಯ ನಾಯಕಿಯೂ ಆಗಿರುವ ಮೋರ್ಡಾಂಟ್ ಅವರು ರಿಷಿಗೆ ತೀವ್ರ ಸ್ಪರ್ಧೆ ನೀಡುವ ಸಾಧ್ಯತೆ ಇದೆ. ಕೊನೆ ಗಳಿಗೆಯಲ್ಲಿ ಟೋರಿ ಪಕ್ಷದ ಸದಸ್ಯರು ಪೆನ್ನಿ ಬೆನ್ನಿಗೆ ನಿಂತರೆ, ಮತ್ತೆ ರಿಷಿಗೆ ಸೋಲು ಖಚಿತ.

ಬೋರಿಸ್ ಜಾನ್ಸನ್
ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಡಾರ್ಕ್ ಹಾರ್ಸ್ ಆಗುವ ಸಾಧ್ಯತೆಗಳಿವೆ. ಲಿಜ್ ಟ್ರಸ್ ರಾಜೀನಾಮೆ ನೀಡುವ ಸಂದರ್ಭದಲ್ಲಿ ಸೂಟಿಯಲ್ಲಿದ್ದ ಬೋರಿಸ್ ಲಂಡನ್‌ಗೆ ವಾಪಸ್ ಆಗಿದ್ದಾರೆ. ಮೂಲಗಳ ಪ್ರಕಾರ ಅವರು ಪಿಎಂ ಹುದ್ದೆಗೆ ಉಮೇದುವಾರಿಕೆ ಸಲ್ಲಿಸುವ ಸಾಧ್ಯತೆಗಳಿವೆ. ಹಗರಣಗಳಿಂದಾಗಿ ಅಧಿಕಾರವನ್ನು ಕಳೆದುಕೊಂಡಿದ್ದರೂ ಕನ್ಸರ್ವೇಟಿವ್ ಪಕ್ಷದಲ್ಲಿ ಈಗಲೂ ಹಿಡಿತವನ್ನು ಹೊಂದಿದ್ದಾರೆ. ಬಹಳಷ್ಟು ಸಂಸದರು ಬೋರಿಸ್ ನಾಯಕತ್ವವನ್ನು ಒಪ್ಪಿಕೊಂಡಿದ್ದಾರೆ. ಹಾಗಾಗಿ, ಮೋರ್ಡಾಂಟ್ ಹಾಗೂ ರಿಷಿಗೆ ಬೋರಿಸ್ ಪೆಟ್ಟುಕೊಡಬಹುದು. ಈ ಹಿಂದಿನ ಚುನಾವಣೆ ವೇಳೆ, ರಿಷಿಯನ್ನು ಬೆಂಬಲಿಸಿಬೇಡಿ ಎಂದು ಬಹಿರಂಗವಾಗಿಯೇ ಲಿಜ್ ತಮ್ಮ ಬೆಂಬಲ ನೀಡಿದ್ದರು ಬೋರಿಸ್.

ಯಾರು ಹಿತವರು ಮೂವರಲ್ಲಿ?
ಬೋರಿಸ್ ಜಾನ್ಸನ್ ಅವರು ಪ್ರಧಾನಿ ಹುದ್ದೆಗೆ ಉಮೇದುವಾರಿಕೆ ಸಲ್ಲಿಸುವುದನ್ನು ಇನ್ನೂ ಪಕ್ಕಾ ಆಗಿಲ್ಲ. ಹೀಗಿದ್ದಾಗ್ಯೂ, ತ್ರಿಕೋನ ಸ್ಪರ್ಧೆ ಏರ್ಪಡಬಹುದು ಎನ್ನಲಾಗುತ್ತಿದೆ. ಬೋರಿಸ್ ಜಾನ್ಸನ್ ಅವರು ಸಾಲು ಸಾಲು ಹಗರಣಗಳಿಂದಾಗಿಯೇ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಬೇಕಾಯಿತು. ಹಾಗೆಯೇ, ರಿಷಿ ಸುನಕ್ ಅವರನ್ನು ಒಂದು ಬಾರಿ ಕನ್ಸರ್ವೇಟಿವ್ ಪಕ್ಷದ ಮತದಾರರು ತಿರಸ್ಕರಿಸಿದ್ದಾರೆ. ಅಲ್ಲದೇ, ಅವರು ಪ್ರತಿಪಾದಿಸುವ ಆರ್ಥಿಕ ನೀತಿಗಳ ಬಗ್ಗೆ ಅಂಥ ಒಲವುಗಳಿಲ್ಲ. ಇವರಿಬ್ಬರಿಗೆ ಹೋಲಿಸಿದರೆ, ಪೆನ್ನಿ ಮೋರ್ಡಾಂಟ್ ಕ್ಲೀನ್ ಇಮೇಜ್ ಹೊಂದಿದ್ದಾರೆ. ಯಾವುದೇ ಬ್ಯಾಗೇಜುಗಳಿಲ್ಲ. ಹಾಗಾಗಿ, ಪೆನ್ನಿ ಕೂಡ ಪ್ರಧಾನಿಯಾಗಿ ಆಯ್ಕೆಯಾದರೆ ಅಚ್ಚರಿ ಇಲ್ಲ.

ರಿಷಿ ಸೋಲಲು ಕಾರಣಗಳೇ ಇಲ್ಲ
ಸದ್ಯದ ಪರಿಸ್ಥಿತಿ ನೋಡಿದರೆ, ರಿಷಿ ಸುನಕ್ ಅವರಿಗೆ ಸೋಲಲು ಕಾರಣಗಳೇ ಇಲ್ಲ. ತೊಂದರೆಯಲ್ಲಿ ಸಿಲುಕಿರುವ ಇಂಗ್ಲೆಂಡ್ ಆರ್ಥಿಕತೆಯನ್ನು ಮತ್ತೆ ಮೇಲಕ್ಕೆತ್ತಲು, ಗಟ್ಟಿ ನಿರ್ಧಾರ ಕೈಗೊಳ್ಳುವ ರಿಷಿಯಂಥ ನಾಯಕರ ನೇತೃತ್ವವು ಅಗತ್ಯವಿದೆ. ಲಿಜ್ ಅವರನ್ನು ಆಯ್ಕೆ ಮಾಡಿ ತಪ್ಪು ಮಾಡಲಾಗಿದೆ ಎಂದು ಕನ್ಸರ್ವೇಟಿವ್ ಪಕ್ಷದ ಕಾರ್ಯಕರ್ತರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಹಾಗಾಗಿ, ಈ ಬಾರಿ ಅವರು ಸೋಲಲು ಕಾರಣಗಳೇ ಇಲ್ಲ. ಪಕ್ಷದ ಕಾರ್ಯಕರ್ತರು ಹಾಗೂ ಬಹುತೇಕ ಸಂಸದರು ಅವರ ಬಗ್ಗೆ ಒಲವು ಹೊಂದಿದ್ದಾರೆ. ಆದರೂ, ಸೋತರೂ ಅಚ್ಚರಿ ಪಡಬೇಕಿಲ್ಲ. ಯಾಕೆಂದರೆ, ಪಶ್ಚಿಮ ರಾಷ್ಟ್ರಗಳು ಎಷ್ಟೇ ಮುಂದುವರಿದಿದ್ದರೂ ಬಣ್ಣದ ಆಧಾರದ ಮೇಲೆ ತಾರತಮ್ಯ ಅನುಸರಿಸುವ ನೀತಿಯಿಂದ ಇನ್ನೂ ಪೂರ್ತಿಯಾಗಿ ಹೊರ ಬಂದಿಲ್ಲ. ವರ್ಣಭೇದ ಅವರ ಮನಸ್ಸಿನಾಳದಲ್ಲಿದೆ. ಹಾಗಂತ, ಬ್ರಿಟನ್ ಪಿಎಂ ಆಯ್ಕೆಯಲ್ಲಿ ವರ್ಣಭೇದವು ಪ್ರಭಾವ ಬೀರಲಿದೆ ಎಂದು ನೇರವಾಗಿ ಹೇಳುವುದು ಅಪಕ್ವವಾಗಬಹುದು. ಕನ್ಸರ್ವೇಟಿವ್ ಪಕ್ಷದಲ್ಲಿ ನಾಯಕತ್ವವನ್ನು ಆಯ್ಕೆಯ ಮತದಾರ ಸಮೂಹವನ್ನು ವಿಶ್ಲೇಷಿಸಿದರೆ ಈ ಅನುಮಾನ ಕಾಡದೇ ಇರದು. ಪಕ್ಷದ ಹಳೆಯ ಸದಸ್ಯರನ್ನು ಪರಿಗಣಿಸಿದರೆ ವರ್ಣಭೇದ ಪ್ರಭಾವ ಮತ್ತೆ ಬೀರುವ ಸಾಧ್ಯತೆ ತಕ್ಕಮಟ್ಟಿಗಾದರೂ ಇದ್ದೇ ಇದೆ. ಬಿಳಿಯ ಅಲ್ಲದ ವ್ಯಕ್ತಿಯೊಬ್ಬ ಬ್ರಿಟನ್ ಪ್ರಧಾನಿಯಾಗುವುದನ್ನು ಅವರಿಗೆ ಊಹಿಸಿಕೊಳ್ಳುವುದು ಕಷ್ಟವಾಗಬಹುದು! ಹಾಗಾಗಿ, ಮತ್ತೊಮ್ಮೆ ಸುನಕ್ ಸೋತರೂ ಅಚ್ಚರಿ ಇಲ್ಲ.

ಇದನ್ನೂ ಓದಿ | Liz Truss Resign | ಬ್ರಿಟನ್ ಪಿಎಂ ಸ್ಥಾನಕ್ಕೆ ಲಿಜ್ ರಾಜೀನಾಮೆ, 44 ದಿನದ ಹಿಂದೆಯಷ್ಟೇ ಅಧಿಕಾರ ಸ್ವೀಕರಿಸಿದ್ದರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Flight Turbulence: ನೀವಿದ್ದ ವಿಮಾನ ಪ್ರಕ್ಷುಬ್ಧತೆಗೊಳಗಾದರೆ ಏನು ಮಾಡುತ್ತೀರಿ? ಇಲ್ಲಿದೆ ಪೈಲಟ್‌ಗಳ ಸಲಹೆ

ವಿಮಾನಗಳಲ್ಲಿ ಪ್ರಕ್ಷುಬ್ಧತೆಯ (Flight Turbulence) ಸಮಯದಲ್ಲಿ ಸುರಕ್ಷಿತವಾಗಿರಲು ಪ್ರಯಾಣಿಕರಿಗೆ ಅಮೆರಿಕದ ಫೆಡರಲ್ ಏವಿಯೇಷನ್ ​​ಅಡ್ಮಿನಿಸ್ಟ್ರೇಷನ್‌, ವಿಮಾನ ಸಿಬ್ಬಂದಿ ಪಾಲಿಸಬಹುದಾದ ಮತ್ತು ಪ್ರಯಾಣಿಕರು ನಿರ್ವಹಿಸಬೇಕಾದ ಮಾರ್ಗಸೂಚಿಯನ್ನು ನೀಡಿದೆ. ಈ ಕುರಿತ ವಿವರಣೆ ಇಲ್ಲಿದೆ. ವಿಮಾನದೊಳಗಿನ ಪ್ರಕ್ಷುಬ್ಧತೆ (Flight Turbulence) ಎಂದರೇನು, ಇದರಿಂದ ಪಾರಾಗುವುದು ಹೇಗೆ ಎಂಬ ಮಾಹಿತಿಯೂ ಇಲ್ಲಿದೆ.

VISTARANEWS.COM


on

By

Flight Turbulence
Koo

ವಿಮಾನ (flight) ಹಾರುವಾಗ ವಾಯು ಒತ್ತಡದಿಂದ ಕೆಲವೊಮ್ಮೆ ಪ್ರಕ್ಷುಬ್ಧತೆ (Flight Turbulence) ಉಂಟಾಗುತ್ತದೆ. ವಿಮಾನ ನಡುಗುತ್ತದೆ. ಈ ಸಂದರ್ಭದಲ್ಲಿ ಹಠಾತ್ ಆಘಾತಗಳು ಸಂಭವಿಸಿ ಸಾವು ನೋವು ಉಂಟಾಗುವುದೂ ಇದೆ. ಇಂಥ ಸಂದರ್ಭದಲ್ಲಿ ಪ್ರಯಾಣಿಕರು ಮತ್ತು ವಿಮಾನ ಸಿಬ್ಬಂದಿ ಪರಿಸ್ಥಿತಿಯನ್ನು ಶಾಂತವಾಗಿ ನಿಭಾಯಿಸಬೇಕಾಗುತ್ತದೆ. ಇತ್ತೀಚೆಗೆ ಸಿಂಗಾಪುರ ಏರ್‌ಲೈನ್ಸ್ (singapore airlines) ವಿಮಾನ ಇಂಥದ್ದೇ ಪರಿಸ್ಥಿತಿಗೆ ಒಳಗಾಗಿ ಪ್ರಯಾಣಿಕರೊಬ್ಬರು ಸಾವಿಗೀಡಾಗಿ, ಹಲವರು ಪ್ರಯಾಣಿಕರು ಗಾಯಗೊಂಡಿದ್ದರು. ಲಂಡನ್‌ನಿಂದ ಸಿಂಗಾಪುರಕ್ಕೆ ಹಾರುತ್ತಿದ್ದ ಬೋಯಿಂಗ್ 777-312ER ವಿಮಾನ 321ರಲ್ಲಿದ್ದ ಪ್ರಯಾಣಿಕರು ವಾಯು ಪ್ರಕ್ಷುಬ್ಧತೆಯ ಭಯಾನಕತೆಯನ್ನು ಅನುಭವಿಸಬೇಕಾಯಿತು.

ವಾಯು ಪ್ರಕ್ಷುಬ್ಧತೆ ಎಂದರೇನು?

ವಾಯು ಪ್ರಕ್ಷುಬ್ಧತೆಯು ಭೂಮಿಯ ವಾತಾವರಣದಲ್ಲಿ ಗಾಳಿಯ ಅನಿಯಮಿತ ಮತ್ತು ಅನಿರೀಕ್ಷಿತ ಚಲನೆಯಿಂದ ಉಂಟಾಗುತ್ತದೆ. ಇದು ವಿಮಾನ ಹಾರಾಟದ ಸಮಯದಲ್ಲಿ ಅಪಘಾತಕ್ಕೆ ಕಾರಣವಾಗುತ್ತದೆ. ವೇಗವಾಗಿ ವಾಹನ ಓಡಿಸುತ್ತಿದ್ದಾಗ ಯಾವ ಸೂಚನಾ ಫಲಕ ಇಲ್ಲದೆ ಹಠಾತ್‌ ಹಂಪ್‌ ಎದುರಾದಾಗ ಏನಾಗುತ್ತದೋ ವಿಮಾನದೊಳಗೆ ಹಾಗೆಯೇ ಆಗುತ್ತದೆ. ವಿಮಾನವು ಚಾಲಕನ ನಿಯಂತ್ರಣ ಕಳೆದುಕೊಂಡು ಪತನಗೊಳ್ಳುವಂತಾಗುತ್ತದೆ.

ಆಗ ಏನು ಮಾಡಬೇಕು?

ಯಾವಾಗಲೂ ಸೀಟ್ ಬೆಲ್ಟ್ ಧರಿಸಿ ಸುರಕ್ಷಿತವಾಗಿ ಕುಳಿತಿರಬೇಕು. ಸೈನ್ ಆಫ್ ಆಗಿದ್ದರೂ, ಅದನ್ನು ಬಿಗಿಯಾಗಿ ಇರಿಸಬೇಕು.
ಸಿಬ್ಬಂದಿಯ ಸೂಚನೆಗಳನ್ನು ಅನುಸರಿಸಿ. ಅವರ ಮಾತನ್ನು ಕೇಳಿ. ಪ್ರಕ್ಷುಬ್ಧತೆಯನ್ನು ನಿಭಾಯಿಸಲು ಅವರಿಗೆ ತರಬೇತಿ ನೀಡಲಾಗಿರುತ್ತದೆ. ಪ್ರಕ್ಷುಬ್ಧತೆಯ ಸಮಯದಲ್ಲಿ ಕ್ಯಾಬಿನ್ ಸುತ್ತಲೂ ಚಲಿಸುವುದನ್ನು ತಪ್ಪಿಸಿ ಮತ್ತು ಆತಂಕದಿಂದ ಕಿರುಚದೇ ಮೌನವಾಗಿ ಕುಳಿತುಕೊಳ್ಳಿ.

ಕ್ಯಾಬಿನ್‌ನಲ್ಲಿ ಇಟ್ಟಿರುವ ವಸ್ತುಗಳು ಮೈಮೇಲೆ ಬೀಳದಂತೆ ಸುರಕ್ಷಿತವಾಗಿರಿಸಿ. ಸೋರಿಕೆ ಅಥವಾ ಬೀಳುವಿಕೆಯನ್ನು ತಪ್ಪಿಸಲು ವಸ್ತುಗಳನ್ನು ಓವರ್ ಹೆಡ್ ವಿಭಾಗಗಳಲ್ಲಿ ಸುರಕ್ಷಿತವಾಗಿ ಸಂಗ್ರಹಿಸಿ.
ಪ್ರಕ್ಷುಬ್ಧತೆ ಸಾಮಾನ್ಯವಾಗಿರುತ್ತದೆ. ಈ ಸಂದರ್ಭದಲ್ಲಿ ಶಾಂತವಾಗಿರಿ ಮತ್ತು ಭಯಭೀತರಾಗಬೇಡಿ. ರೆಸ್ಟ್ ರೂಮ್‌ ಅನ್ನು ಬಳಸಬೇಕಾದರೆ ಎದ್ದೇಳುವ ಮೊದಲು ಶಾಂತ ಕ್ಷಣಕ್ಕಾಗಿ ಕಾಯಿರಿ. ಸ್ಥಿರತೆಗಾಗಿ ಹ್ಯಾಂಡ್ರೈಲ್‌ಗಳನ್ನು ಬಳಸಿ.

ವಾಯು ಪ್ರಕ್ಷುಬ್ಧತೆಗೆ ಕಾರಣಗಳೇನು?

ಚಂಡಮಾರುತ, ಜೆಟ್ ಸ್ಟ್ರೀಮ್‌ ಅಥವಾ ಗಾಳಿಯ ಒತ್ತಡದಲ್ಲಿನ ಬದಲಾವಣೆಗಳಿಂದ ವಾಯು ಪ್ರಕ್ಷುಬ್ಧತೆ ಉಂಟಾಗಬಹುದು. ಹವಾಮಾನ ಬದಲಾವಣೆಗಳಿಂದಾಗಿ ಗಾಳಿಯ ಪ್ರಕ್ಷುಬ್ಧತೆಯು ಆಗಾಗ ಸಂಭವಿಸುತ್ತದೆ ಎನ್ನುತ್ತಾರೆ ತಜ್ಞರು. ತೀವ್ರವಾದ ಪ್ರಕ್ಷುಬ್ಧ ಘಟನೆಗಳು ಅಪರೂಪ. ಪೈಲಟ್‌ಗಳು ಅವುಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ತರಬೇತಿ ಪಡೆದಿರುತ್ತಾರೆ.

ಇದನ್ನೂ ಓದಿ: Viral Video: ರಣ ಭೀಕರ ಬಿರುಗಾಳಿ..! ಆಘಾತಕಾರಿ ವಿಡಿಯೋ ಎಲ್ಲೆಡೆ ವೈರಲ್‌

ಮಾಜಿ ಪೈಲೆಟ್ ಹೇಳಿದ್ದೇನು?

43 ವರ್ಷಗಳ ಅನುಭವ ಹೊಂದಿರುವ ನಿವೃತ್ತ ಪೈಲಟ್ ಕ್ಯಾಪ್ಟನ್ ಕ್ರಿಸ್ ಹ್ಯಾಮಂಡ್ ಅವರು ಈ ಪರಿಸ್ಥಿತಿಯನ್ನು ಹೀಗೆ ವಿವರಿಸುತ್ತಾರೆ: ಇಂಥ ಸಂದರ್ಭದಲ್ಲಿ ಪ್ರಯಾಣಿಕರನ್ನು ಹೆಚ್ಚು ಸಮಾಧಾನದಿಂದ ಇರಿಸುವಂತೆ ಮಾಡುವ ಜವಾಬ್ದಾರಿ ಪೈಲಟ್‌ನದ್ದಾಗಿದೆ. ಎಲ್ಲಕ್ಕಿಂತ ಪೈಲಟ್‌ ತಾನು ಸಮಾಧಾನದಿಂದ ಇದ್ದು, ವಿವೇಚನೆ ಮತ್ತು ಅನುಭವ ಬಳಸಿ ವಿಮಾನವನ್ನು ನಿಯಂತ್ರಿಸಬೇಕಾಗುತ್ತದೆ. ಅನುಭವಿ ಚಾಲಕರು ಇಂಥ ಸನ್ನಿವೇಶವನ್ನು ಯಶಸ್ವಿಯಾಗಿ ನಿಭಾಯಿಸಿ ಪ್ರಯಾಣಿಕರನ್ನು ಅಪಾಯದಿಂದ ಪಾರು ಮಾಡುತ್ತಾರೆ.

Continue Reading

ದೇಶ

Share Market: ಸೆನ್ಸೆಕ್ಸ್‌ ನೆಗೆತ, ನಿಫ್ಟಿ ಜಿಗಿತ; ಮೋದಿ ಭವಿಷ್ಯ ನಿಜವಾಗುತ್ತಾ? ಇಂದಿನ ಏರಿಕೆಗೆ ಕಾರಣಗಳು ಗೊತ್ತಾ?

Share Market: ಷೇರು ಮಾರುಕಟ್ಟೆಯಲ್ಲಿ ಗಣನೀಯ ಪ್ರಗತಿಯಾಗಿದೆ. ಬಿಎಸ್‌ಇ ಸೆನ್ಸೆಕ್ಸ್‌ 1,197 ಪಾಯಿಂಟ್ಸ್‌ ಏರಿಕೆಯೊಂದಿಗೆ ದಾಖಲೆಯ 75,460 ಪಾಯಿಂಟ್ಸ್‌ಗೆ ತಲುಪಿದರೆ, ನಿಫ್ಟಿಯು 370 ಪಾಯಿಂಟ್ಸ್‌ ಏರಿಕೆಯೊಂದಿಗೆ 22,989 ಪಾಯಿಂಟ್ಸ್‌ ತಲುಪಿದೆ. ಇದು ಲೋಕಸಭೆ ಚುನಾವಣೆ ಫಲಿತಾಂಶ, ಸ್ಥಿರ ಸರ್ಕಾರದ ಮುನ್ಸೂಚನೆಗೆ ಹಿಡಿದ ಕನ್ನಡಿ ಎಂದೇ ವಿಶ್ಲೇಷಿಸಲಾಗುತಿದೆ.

VISTARANEWS.COM


on

Share Market
Koo

ಮುಂಬೈ: “ಲೋಕಸಭೆ ಚುನಾವಣೆ (Lok Sabha Election 2024) ಫಲಿತಾಂಶ ಪ್ರಕಟವಾಗುವ ಜೂನ್‌ 4ರಂದು ಭಾರತದ ಷೇರು ಮಾರುಕಟ್ಟೆಯು (Share Market) ದಾಖಲೆ ಬರೆಯಲಿದೆ” ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಕೂಡ ಇದೇ ಮಾತು ಹೇಳಿದ್ದಾರೆ. ಇದರ ಮಧ್ಯೆಯೇ, ಗುರುವಾರ (ಮೇ 23) ಷೇರು ಮಾರುಕಟ್ಟೆಯಲ್ಲಿ ಗಣನೀಯ ಪ್ರಗತಿಯಾಗಿದೆ. ಬಿಎಸ್‌ಇ ಸೆನ್ಸೆಕ್ಸ್‌ 1,197 ಪಾಯಿಂಟ್ಸ್‌ ಏರಿಕೆಯೊಂದಿಗೆ ದಾಖಲೆಯ 75,460 ಪಾಯಿಂಟ್ಸ್‌ಗೆ ತಲುಪಿದರೆ, ನಿಫ್ಟಿಯು 370 ಪಾಯಿಂಟ್ಸ್‌ ಏರಿಕೆಯೊಂದಿಗೆ 22,989 ಪಾಯಿಂಟ್ಸ್‌ ತಲುಪಿದೆ. ಲೋಕಸಭೆ ಚುನಾವಣೆ ಫಲಿತಾಂಶ, ಸ್ಥಿರ ಸರ್ಕಾರದ ಮುನ್ಸೂಚನೆಯ ಸಂಕೇತವಾಗಿಯೇ ಷೇರು ಮಾರುಕಟ್ಟೆಯು ದಾಖಲೆ ಬರೆದಿದೆ ಎಂದೇ ತಜ್ಞರು ವಿಶ್ಲೇಷಿಸುತ್ತಿದ್ದಾರೆ.

“ನಿಫ್ಟಿಯು ದಾಖಲೆಯ ಏರಿಕೆ ಕಾಣುವ ಮೂಲಕ ಚುನಾವಣೆ ನಂತರದಲ್ಲಿ ದೇಶದಲ್ಲಿ ರಾಜಕೀಯ ಸ್ಥಿರತೆ ಇರುತ್ತದೆ ಎಂಬ ಸಂದೇಶ ರವಾನಿಸಿದೆ. ಅತಿ ಹೆಚ್ಚಿನ ಹಣ ಹೂಡಿಕೆ ಮಾಡುವವರು ಸೇರಿ ಎಲ್ಲರಿಗೂ ಇದು ಸಕಾರಾತ್ಮಕ ಬೆಳವಣಿಗೆಯಾಗಿದೆ” ಎಂದು ಜಿಯೋಜೀತ್‌ ಫೈನಾನ್ಶಿಯಲ್‌ ಸರ್ವಿಸಸ್‌ನ ಮುಖ್ಯ ಹೂಡಿಕೆ ರಣತಂತ್ರಗಾರ ವಿ.ಕೆ.ವಿಜಯ್‌ ಕುಮಾರ್‌ ಮಾಹಿತಿ ನೀಡಿದ್ದಾರೆ. ಸಾಮಾನ್ಯವಾಗಿ, ಸಾರ್ವತ್ರಿಕ ಚುನಾವಣೆ ಫಲಿತಾಂಶದ ದಿನ ಷೇರು ಪೇಟೆಯಲ್ಲಿ ಲವಲವಿಕೆ ಇದ್ದೇ ಇರುತ್ತದೆ. ಆದರೆ, ಜೂನ್‌ 4ರಂದು ಇತಿಹಾಸ ಸೃಷ್ಟಿಯಾಗುತ್ತದೆ ಎಂದು ಹೇಳುತ್ತಿರುವುದು ಹೂಡಿಕೆದಾರರ ಖುಷಿ ಹೆಚ್ಚಿಸಿದೆ.

Share Market

ಕೇಂದ್ರಕ್ಕೆ ಆರ್‌ಬಿಐ ಲಾಭಾಂಶದ ಕೊಡುಗೆ

ಕೇಂದ್ರ ಸರ್ಕಾರಕ್ಕೆ 2023-24ನೇ ಸಾಲಿನಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್ ದಾಖಲೆಯ 2.10 ಲಕ್ಷ ಕೋಟಿ ರೂ. ಡೆವಿಡೆಂಡ್‌ (ಲಾಭಾಂಶ) ನೀಡಲು ಒಪ್ಪಿಗೆ ನೀಡಿರುವುದು ಕೂಡ ಷೇರು ಮಾರುಕಟ್ಟೆಯ ಏರಿಕೆಗೆ ಕಾರಣ ಎನ್ನಲಾಗುತ್ತಿದೆ. 2022-23ರಲ್ಲಿ ಕೇಂದ್ರ ಸರ್ಕಾರಕ್ಕೆ ಆರ್‌ಬಿಐ 87 ಸಾವಿರ ಕೋಟಿ ರೂ. ನೀಡಿತ್ತು. ಆದರೆ, ಅದು ಎರಡು ಪಟ್ಟು ಜಾಸ್ತಿಯಾಗಿರುವುದರಿಂದ ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಹಣ ಸಿಗುತ್ತದೆ. ಆ ಹಣವು ಸಾರ್ವಜನಿಕ ವಲಯದ ಸಂಸ್ಥೆಗಳಿಗೆ ವಿನಿಯೋಗವಾಗುತ್ತದೆ. ಇದರಿಂದ ಷೇರು ಪೇಟೆಯಲ್ಲಿ ಲಾಭ ಗಳಿಸಬಹುದು ಎಂಬ ಕಾರಣದಿಂದ ಹೂಡಿಕೆ ಜಾಸ್ತಿಯಾಗಿದೆ. ಗುರುವಾರವೂ ಸಾರ್ವಜನಿಕ ವಲಯದ ಸಂಸ್ಥೆಗಳು ಲಾಭ ಗಳಿಸಿರುವುದು ಈ ಮಾತಿಗೆ ಪುಷ್ಟಿ ನೀಡುವಂತಿದೆ.

ಷೇರು ಮಾರುಕಟ್ಟೆ ಬಗ್ಗೆ ಮೋದಿ ಹೇಳಿದ್ದೇನು?

“ಕೇಂದ್ರ ಸರ್ಕಾರವು ಕಳೆದ 10 ವರ್ಷಗಳಲ್ಲಿ ಮಹತ್ವದ ಸುಧಾರಣೆ ತಂದಿದೆ. ಆರ್ಥಿಕ ಶಿಸ್ತು, ವಿತ್ತೀಯ ಪ್ರಕ್ರಿಯೆಗಳಲ್ಲಿ ಸುಧಾರಣಾ ಕ್ರಮಗಳನ್ನು ಅನುಸರಿಸಿಕೊಂಡಿದೆ. ಇದರಿಂದಾಗಿ ಭಾರತದ ಷೇರು ಮಾರುಕಟ್ಟೆಯು ಕಳೆದ ಒಂದು ದಶಕದಲ್ಲಿ ಗಣನೀಯ ಏಳಿಗೆ ಕಂಡಿದೆ. 10 ವರ್ಷಗಳ ಹಿಂದೆ ಸೆನ್ಸೆಕ್ಸ್‌ 25 ಸಾವಿರ ಪಾಯಿಂಟ್ಸ್‌ ಹೊಂದಿತ್ತು. ಆದರೀಗ, ಸೆನ್ಸೆಕ್ಸ್‌ 75 ಸಾವಿರ ಪಾಯಿಂಟ್ಸ್‌ಗೆ ಏರಿಕೆಯಾಗಿದೆ. ಈಕ್ವಿಟಿ ಮಾರುಕಟ್ಟೆಯ ಮೌಲ್ಯವು ಕೆಲ ದಿನಗಳ ಹಿಂಷ್ಟೇ 5 ಲಕ್ಷ ಕೋಟಿ ಡಾಲರ್‌ ಆಗಿದೆ. ಹಾಗಾಗಿ, ಜೂನ್‌ 4ರಂದು ಷೇರು ಮಾರುಕಟ್ಟೆಯು ದಾಖಲೆ ಬರೆಯಲಿದೆ” ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: Equity Market: ದೇಶದ ಷೇರುಪೇಟೆಯಲ್ಲಿ ಗೂಳಿ ನೆಗೆತ; 6 ತಿಂಗಳಲ್ಲಿ 1 ಲಕ್ಷ ಕೋಟಿ ಡಾಲರ್‌ ಗಳಿಕೆ!

Continue Reading

ಸಿನಿಮಾ

CGI Technology In Film: ʼವೆಸ್ಟ್‌ವರ್ಲ್ಡ್‌ʼನಿಂದ ʼಅವತಾರ್‌ʼ ಚಿತ್ರದವರೆಗೆ ಸಿಜಿಐ ತಂತ್ರಜ್ಞಾನದ ರೋಚಕ ಹಾದಿ! ವಿಡಿಯೊಗಳಿವೆ

ಹೊಸ ತಂತ್ರಜ್ಞಾನಗಳು, ಆವಿಷ್ಕಾರಗಳು ಚಲನಚಿತ್ರ ಕ್ಷೇತ್ರದಲ್ಲೂ ಸಾಕಷ್ಟು ನಡೆದಿದೆ. ಇದರಲ್ಲಿ ಸಿಜಿಐ (CGI Technology In Film) ಕೂಡ ಒಂದು. 1970ರ ದಶಕದ ಆರಂಭದ ದಿನಗಳಿಂದಲೂ ಕಂಪ್ಯೂಟರ್ ರಚಿತ ಚಿತ್ರಣ (CGI- computer generated imagery) ಸಾಕಷ್ಟು ಪ್ರಯೋಗಗಳಿಗೆ ಒಳಗಾಗಿದೆ. ಇದು ಸಾಕಷ್ಟು ಅದ್ಭುತ ಚಲನಚಿತ್ರಗಳ ಮೇಲೆ ಪ್ರಭಾವವನ್ನು ಬೀರಿದೆ. ಕಥೆ ಹೇಳುವ ಶೈಲಿ ಮತ್ತು ದೃಶ್ಯ ಸಂಯೋಜನೆಯ ಗಡಿಗಳನ್ನು ವಿಸ್ತರಿಸಿದೆ. ಚಲನಚಿತ್ರ ರಂಗದಲ್ಲಿ ಸಿಜಿಐ ನ ಮೈಲುಗಲ್ಲು ಹೇಗಿತ್ತು ಎನ್ನುವ ಕಿರು ನೋಟ ಇಲ್ಲಿದೆ.

VISTARANEWS.COM


on

By

CGI Technology In Film
Koo

ಹಿಂದಿನ ದಿನಗಳಲ್ಲಿ ಚಲನಚಿತ್ರಗಳಲ್ಲಿ (film) ಒಂದು ವಿಶೇಷ ಸನ್ನಿವೇಶವನ್ನು ಚಿತ್ರಿಸಬೇಕಾದರೆ ಸೆಟ್‌ಗಳ ನಿರ್ಮಾಣಕ್ಕೆ ನಿರ್ಮಾಪಕರು (filmmakers), ಕೆಮರಾಮೆನ್‌ಗಳು (camera men) ಸಾಕಷ್ಟು ಕಷ್ಟಪಡುತ್ತಿದ್ದರು. ಆದರೆ ಈಗ ಎಲ್ಲವೂ ಕಂಪ್ಯೂಟರ್ ರಚಿತ ಚಿತ್ರಣ (CGI- computer generated imagery) ತಂತ್ರಜ್ಞಾನದ (CGI Technology In Film) ಮೂಲಕ ನಡೆದುಹೋಗುತ್ತದೆ. ಇದೀಗ ʼಮುಂಜ್ಯಾʼ ಎಂಬ ಭಾರತದ ಚಿತ್ರದಲ್ಲಿ ಈ ತಂತ್ರಜ್ಞಾನ ಬಳಸಲಾಗುತ್ತಿದೆ. ʼಮುಂಜ್ಯಾʼ ಭಾರತದ ಮೊದಲ CGI ಚಿತ್ರ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ತಂತ್ರಜ್ಞಾನದ ಹಿನ್ನೋಟ ಇಲ್ಲಿ ಕೊಡಲಾಗಿದೆ.

ಸಿನಿಮಾ ಜಗತ್ತಿನಲ್ಲಿ ಸಿಜಿಐಯ ವಿಕಾಸ ಒಂದು ಪ್ರಮುಖ ಮೈಲುಗಲ್ಲು ಎಂದರೆ ತಪ್ಪಾಗಲಾರದು. ಇದು ಸಿನಿಮಾದ ಭವಿಷ್ಯವನ್ನೇ ಬದಲಾಯಿಸಿತ್ತು. ಹಿಂದೆ ಚಲನಚಿತ್ರ ನಿರ್ಮಾಪಕರು ಪ್ರೇಕ್ಷಕರ ಗ್ರಹಿಕೆಯನ್ನು ರೂಪಿಸಲು ವಿವಿಧ ಪ್ರಯೋಗಗಳನ್ನು ಮಾಡುತ್ತಿದ್ದರು ಜೊತೆಗೆ ಆಪ್ಟಿಕಲ್ ತಂತ್ರಗಳನ್ನು ಅವಲಂಬಿಸಿದ್ದರು. ಕೆಮರಾ ಕೋನಗಳು, ಲೆನ್ಸ್ ಆಯ್ಕೆ ಮತ್ತು ವಿಸ್ತಾರವಾಗಿ ವಿನ್ಯಾಸಗೊಳಿಸಿದ ಸೆಟ್‌ ಗಳ ತಂತ್ರಗಳನ್ನು ಬಳಸುತ್ತಿದ್ದರು. ಹಸಿರು ಮತ್ತು ವಾಲ್ಯೂಮೆಟ್ರಿಕ್ ಎಲ್ಇಡಿ ಪರದೆಯನ್ನು ಬಳಸಿ ಹಿಂದೆ ಸೆಟ್ ವಿಸ್ತರಣೆಗಳನ್ನು ಕೈಯಿಂದ ನಿಖರವಾಗಿ ಚಿತ್ರಿಸಲಾಗುತ್ತಿತ್ತು.

ಈ ವಿಧಾನಕ್ಕೆ ಈಗ ಡಿಜಿಟಲ್ ಸ್ಪರ್ಶ ಸಿಕ್ಕಿದೆ. ಇಲ್ಲಿ ಕಂಪ್ಯೂಟರ್‌ಗಳು ಮತ್ತು ವಿವಿಧ ಸಾಫ್ಟ್‌ವೇರ್‌ಗಳು ಊಹಿಸುವ ಯಾವುದೇ ವಿನ್ಯಾಸವನ್ನು ರಚಿಸಲು ಇದು ಸಹಾಯ ಮಾಡುತ್ತದೆ. ಡಿಜಿಟಲ್ ಸೃಜನಶೀಲತೆಯೆಡೆಗಿನ ಈ ಬದಲಾವಣೆಯು ಸಿಜಿಐ ತಂತ್ರಜ್ಞಾನದ ಪ್ರಗತಿ ವೇಗವನ್ನು ಹೆಚ್ಚಿಸಿತ್ತು.


ಕಂಪ್ಯೂಟರ್ ಗ್ರಾಫಿಕ್ಸ್ ಬಳಸಿ ಈಗಾಗಲೇ ಹಲವಾರು ಚಿತ್ರಗಳನ್ನು ನಿರ್ಮಿಸಲಾಗಿದೆ. ಉದಾಹರಣೆಗೆ ಮಾರ್ವೆಲ್‌ನ ದಿ ಅವೆಂಜರ್ಸ್‌ನಲ್ಲಿ ಮಾರ್ಕ್ ರುಫಲೋ ಧರಿಸಿರುವ ಸೂಟ್ ಮತ್ತು ಸುತ್ತಲಿನ ದೃಶ್ಯಗಳಿಗೆ ಮತ್ತೆ ಡಿಜಿಟಲ್ ಸ್ಪರ್ಶ ನೀಡಲಾಗಿದೆ.

ಸಿಜಿಐಯ ಮೊದಲ ಪ್ರಯೋಗ ಯಾವಾಗ?

ಸಿಜಿಐ ಅನ್ನು ಆಧುನಿಕ ಚಲನಚಿತ್ರಗಳಲ್ಲಿ ಮಾತ್ರ ನಾವು ಗಮನಿಸಿದ್ದೇವೆ. ಆದರೆ ಇದು 2000 ರ ದಶಕದಿಂದ ಹಾಲಿವುಡ್‌ನ ಚಿತ್ರೀಕರಣದಲ್ಲಿ ಬಳಕೆಯಾಗುತ್ತಿದೆ. ಕಂಪ್ಯೂಟರ್ ರಚಿತ ಚಿತ್ರಣ 1973ರ ವೆಸ್ಟ್‌ವರ್ಲ್ಡ್ ಮತ್ತು 1977ರ ಸ್ಟಾರ್ ವಾರ್ಸ್‌ನಲ್ಲೂ ಮಾಡಲಾಗಿದೆ.

ವೆಸ್ಟ್‌ವರ್ಲ್ಡ್ ( 1973)

ವೆಸ್ಟ್‌ವರ್ಲ್ಡ್ ಚಲನಚಿತ್ರದಲ್ಲಿ ಸಿಜಿಐ ಸಂಕ್ಷಿಪ್ತವಾಗಿ ಸರಿಸುಮಾರು 10 ಸೆಕೆಂಡ್ ನಷ್ಟೇ ಬಳಕೆ ಮಾಡಲಾಗಿದೆ. ಚಿತ್ರದಲ್ಲಿ ಇದು ಬಣ್ಣಗಳನ್ನು ಬದಲಾಯಿಸುವುದು, ಸಂಕುಚಿತಗೊಳಿಸುವುದು ಮತ್ತು ಚಿತ್ರಣವನ್ನು ವಿಸ್ತರಿಸುವುದು ಸೇರಿದೆ.


ಸ್ಟಾರ್ ವಾರ್ಸ್ (1977)

ಇದರಲ್ಲಿ ಚಿಕಣಿ ಮಾದರಿಗಳು ಮತ್ತು ಬೆಳಕಿನ ತಂತ್ರಗಳ ಮಿಶ್ರಣವನ್ನು ಮಾಡಲಾಗಿದೆ. ಚಿತ್ರದ ಪ್ರಮುಖ ಕ್ಷಣವೊಂದರಲ್ಲಿ ಲ್ಯೂಕ್ ಸ್ಕೈವಾಕರ್ ಮತ್ತು ಇತರ ಎಕ್ಸ್-ವಿಂಗ್ ಪೈಲಟ್‌ಗಳು ಡೆತ್ ಸ್ಟಾರ್‌ನ ಮೇಲೆ ತಮ್ಮ ಆಕ್ರಮಣಕ್ಕೆ ತಯಾರಿ ನಡೆಸುತ್ತಿರುವಾಗ ಇದನ್ನು ಪ್ರಯೋಗಿಸಲಾಗಿದೆ. ಇದರಲ್ಲಿ 3ಡಿ ಯುದ್ಧತಂತ್ರದ ನಕ್ಷೆಯನ್ನು ತೋರಿಸಲಾಗಿದೆ. ಇದನ್ನು ಇಲಿನಾಯ್ಸ್ ವಿಶ್ವವಿದ್ಯಾಲಯವು ಚಿಕಾಗೋದ ಎಲೆಕ್ಟ್ರಾನಿಕ್ ದೃಶ್ಯೀಕರಣ ಪ್ರಯೋಗಾಲಯ ತಂಡದೊಂದಿಗೆ ಅಭಿವೃದ್ಧಿಪಡಿಸಿದೆ.


ಸಿಜಿಐನ ಸಂಪೂರ್ಣ ಬಳಕೆ

ಸಂಪೂರ್ಣವಾಗಿ ಸಿಜಿಐ ಪಾತ್ರವನ್ನು ಸ್ಟಾರ್ ವಾರ್ಸ್ ಮತ್ತೊಮ್ಮೆ ಪರಿಚಯಿಸಿದ್ದು 1999ರ ಸ್ಟಾರ್ ವಾರ್ಸ್ ಸಂಚಿಕೆ 1: ದಿ ಫ್ಯಾಂಟಮ್ ಮೆನೇಸ್‌ನಲ್ಲಿ ಜಾರ್ ಜಾರ್ ಬಿಂಕ್ಸ್ ಮೂಲಕ.

ಸ್ಟಾರ್ ವಾರ್ಸ್: ಎ ನ್ಯೂ ಹೋಪ್ (1977)

1977ರಲ್ಲಿ ಬಿಡುಗಡೆಯಾದ ಜಾರ್ಜ್ ಲ್ಯೂಕಾಸ್‌ನ ಸ್ಟಾರ್ ವಾರ್ಸ್: ಎ ನ್ಯೂ ಹೋಪ್‌ ಪ್ರಾಯೋಗಿಕ ಮತ್ತು ಚಿಕಣಿ ಪರಿಣಾಮಗಳೊಂದಿಗೆ ಬೆರೆಸಿದ ಸಿಜಿಐ ಅಂಶಗಳ ಮನಮುಟ್ಟುವ ಬಳಕೆಯ ಮೂಲಕ ಚಲನಚಿತ್ರ ನಿರ್ಮಾಣದ ಹೊಸ ಯುಗವನ್ನು ಪ್ರಾರಂಭಿಸಿತು. 80ರ ದಶಕದಲ್ಲಿ ಇದು ಟ್ರಾನ್, ಪ್ರಿಡೇಟರ್, ಸೂಪರ್‌ಮ್ಯಾನ್, ಇ.ಟಿ. ಮತ್ತು ಏಲಿಯನ್ಸ್‌ನಂತಹ ಚಲನಚಿತ್ರಗಳ ಮೇಲೆ ಇದು ಪ್ರಭಾವ ಬೀರಿತು.


ಟರ್ಮಿನೇಟರ್ 2: ಜಡ್ಜ್‌ಮೆಂಟ್ ಡೇ (1991)

ಹೆಚ್ಚಿನ ಚಲನಚಿತ್ರ ಶಾಲೆಗಳಲ್ಲಿ ಒಂದು ಸಾಮಾನ್ಯ ಮಾತು ಇದೆ. ಸ್ಟಾರ್ ವಾರ್ಸ್ ಆಟವನ್ನು ಪ್ರಾರಂಭಿಸಿತು ಮತ್ತು ನಂತರ ಜುರಾಸಿಕ್ ಪಾರ್ಕ್ ಅದನ್ನು ಬದಲಾಯಿಸಿತು. ಇದಕ್ಕೆ ಸರಿಯಾದ ಒಂದು ಚಿತ್ರ ಟರ್ಮಿನೇಟರ್ 2: ಜಡ್ಜ್‌ಮೆಂಟ್ ಡೇ. ಈ ಚಿತ್ರದಲ್ಲಿ ಸಿಜಿಐ ಬಳಕೆಯಲ್ಲಿ ಇದು ಒಂದು ಅತ್ಯಂತ ಪ್ರಭಾವಶಾಲಿ ಚಲನಚಿತ್ರ. ಯಾಕೆಂದರೆ ಇಲ್ಲಿ ಖಳನಾಯಕನನ್ನು ಸಿಜಿಐ ಮೂಲಕ ಸಂಪೂರ್ಣ ಲಿಕ್ವಿಡ್ ಮೆಟಲ್ ಪಾತ್ರದಲ್ಲಿ ರಚಿಸಲಾಗಿದೆ. ಈ ಮೂಲಕ ಇದು ಯಾವುದೇ ಆಕಾರವನ್ನು ಮಾರ್ಫ್ ಮಾಡಬಹುದು ಎಂಬುದನ್ನು ನಿರೂಪಿಸಿತ್ತು.


ಜುರಾಸಿಕ್ ಪಾರ್ಕ್ (1995)

ಜುರಾಸಿಕ್ ಪಾರ್ಕ್ ಒಂದು ಬ್ಲಾಕ್ಬಸ್ಟರ್ ಚಿತ್ರ. ಇದು ಸಿಜಿಐ ಇತಿಹಾಸದಲ್ಲೊಂದು ಮೈಲುಗಲ್ಲು ಸ್ಥಾಪಿಸಿತ್ತು. ಇದರಲ್ಲಿ ಡೈನೋಸಾರ್‌ಗಳು ಕಲಾವಿದರೊಂದಿಗೆ ಸಂವಾದ ನಡೆಸುವುದನ್ನು ಕಾಣಬಹುದು. ಇದರಲ್ಲಿ ಮಾನವನ ಪಕ್ಕದಲ್ಲಿ ಡೈನೋಸಾರ್ ತಲೆಯ ಕ್ಲೋಸ್-ಅಪ್ ಅಗತ್ಯವಿರುವಾಗ ಪ್ರಾಯೋಗಿಕ ಡೈನೋಸಾರ್ ಮಾದರಿಯನ್ನು ಬಳಸಿದ್ದರೆ ದೂರದ ಶಾಟ್ ಗಳಿಗಾಗಿ ಡೈನೋಸಾರ್‌ಗಳ ಸಿಜಿಐ ಆವೃತ್ತಿಗಳನ್ನು ಬಳಸಲಾಗಿತ್ತು.


ದಿ ಮ್ಯಾಟ್ರಿಕ್ಸ್ (1999)

ಪ್ರೇಕ್ಷಕರನ್ನು ಬೆಚ್ಚಿಬೀಳಿಸಿದ ದೃಶ್ಯ ದಿ ಮ್ಯಾಟ್ರಿಕ್ಸ್ ಚಿತ್ರದ ತುಣುಕು ಚಿತ್ರ ನೋಡಿದವರೆಲ್ಲರಿಗೂ ನೆನಪಿರಬಹುದು. 360 ಡಿಗ್ರಿ ಕ್ಯಾಮರಾ ರಿಗ್‌ನ ಬಳಕೆ, ಮಧ್ಯದಲ್ಲಿ ಕೀನು ರೀವ್ಸ್‌ನ ಪ್ರತ್ಯೇಕ ಫೋಟೋಗಳನ್ನು ತೆಗೆಯುವ ಮೂಲಕ ನಟರು ಮತ್ತು ಸಿಜಿಐ ಒಟ್ಟಿಗೆ ಹೇಗೆ ಕಾರ್ಯನಿರ್ವಹಿಸಬಹುದು ಎಂಬುದನ್ನು ಈ ಚಿತ್ರ ತೋರಿಸಿಕೊಟ್ಟಿದೆ. ಸಿಜಿಐ ಅನ್ನು ದೋಷರಹಿತವಾಗಿ ಕಾರ್ಯಗತಗೊಳಿಸಿದ ಕೀರ್ತಿ ಈ ಚಿತ್ರ ತಂಡದ್ದು.


ಅವತಾರ್ (2009)

ಅವತಾರ್ ಚಿತ್ರದ ದೃಶ್ಯಾವಳಿಗಳು ಎಲ್ಲರ ಕಣ್ಣ ಮುಂದಿದೆ. ಇದರಲ್ಲಿ ಮೋಷನ್ ಕ್ಯಾಪ್ಚರ್ ಮತ್ತು ಸಿಜಿಐ ಸಂಪೂರ್ಣ ಮಿಶ್ರಣವಾಗಿತ್ತು.ಇದರಲ್ಲಿ ಕ್ಯಾಮರಾಗಳನ್ನು ಬಳಸಿಕೊಂಡು ನಟರ ಹೆಚ್ಚು ವಿವರವಾದ ಫೇಸ್ ಮ್ಯಾಪಿಂಗ್ ತಂತ್ರಜ್ಞಾನವನ್ನು ಬಳಸಲಾಗಿದೆ. ಆ ಡೇಟಾವನ್ನು ಬಳಿಕ ಕಂಪ್ಯೂಟರ್ ರಚಿತ ಅಕ್ಷರ ಮಾದರಿಗಳಿಗೆ ವರ್ಗಾಯಿಸುತ್ತದೆ. ಸಂಪೂರ್ಣ ಮೂರು ಗಂಟೆಗಳ ಚಿತ್ರದಲ್ಲಿ ಶೇ. 60ರಷ್ಟನ್ನು ಸಿಜಿಐ ಮೂಲಕವೇ ಚಿತ್ರಣ ಮಾಡಲಾಗಿದೆ. ಈ ಚಿತ್ರವು ಸಾರ್ವಕಾಲಿಕ ಅತಿ ಹೆಚ್ಚು ಗಳಿಕೆಯ ಚಿತ್ರವಾಗಿದೆ.

ಇನ್ಸೆಪ್ಶನ್ (2010)

ಕ್ರಿಸ್ಟೋಫರ್ ನೋಲನ್ ಅವರ ಇನ್ಸೆಪ್ಶನ್ ನಲ್ಲಿ ಸಿಜಿಐನೊಂದಿಗೆ ಸಂಕೀರ್ಣ ನಿರೂಪಣಾ ರಚನೆಯ ನವೀನ ಅಪ್ಲಿಕೇಶನ್‌ ಅನ್ನು ಬಳಸಲಾಗಿದೆ. ಇದು ಕನಸಿನ ಕುಶಲತೆಯ ಮೂಲಕ ಮಾನವ ಮನಸ್ಸಿನ ಆಳವನ್ನು ಪರಿಶೋಧಿಸುತ್ತದೆ. ವೀಕ್ಷಕರ ವಾಸ್ತವತೆಯ ಗ್ರಹಿಕೆಗೆ ಸವಾಲು ಹಾಕುವ ಈ ಚಿತ್ರ ಪ್ರೇಕ್ಷಕರನ್ನು ತನ್ನ ಕಥೆಯೊಳಗೆ ಲೀನ ವಾಗುವಂತೆ ಮಾಡುತ್ತದೆ.


ಅವತಾರ್: ದಿ ವೇ ಆಫ್ ವಾಟರ್ (2022)

ಜೇಮ್ಸ್ ಕ್ಯಾಮರೂನ್ ಅವರ ಅವತಾರ್‌ನ ಬಹುನಿರೀಕ್ಷಿತ ಮುಂದುವರಿದ ಭಾಗ ದಿ ವೇ ಆಫ್ ವಾಟರ್ ಸಿನಿಮೀಯ ತಂತ್ರಜ್ಞಾನ ಮತ್ತು ಕಥೆ ಹೇಳುವಿಕೆಯನ್ನು ಮೀರಿ ಮತ್ತಷ್ಟು ಅಭಿವೃದ್ಧಿ ಹೊಂದಿದೆ. ಅತ್ಯಾಧುನಿಕ ಸಿಜಿಐ ಮತ್ತು ಕಾರ್ಯಕ್ಷಮತೆ ಕ್ಯಾಪ್ಚರ್ ತಂತ್ರಜ್ಞಾನದ ಪ್ರಭಾವಶಾಲಿ ಪರಾಕಾಷ್ಠೆಯನ್ನು ಈ ಚಿತ್ರದಲ್ಲಿ ಕಾಣಬಹುದು.


ಸಿಜಿಐ ಪ್ರಭಾವ ಹೇಗಿದೆ?

ಇತ್ತೀಚಿನ ವರ್ಷಗಳಲ್ಲಿ ಸ್ಟುಡಿಯೋಗಳು ಮತ್ತು ಚಲನಚಿತ್ರ ನಿರ್ಮಾಪಕರು ಸಿಜಿಐ ಅನ್ನು ದೂರವಿಡುವ ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಸಿಜಿಐ ಬಳಕೆಯಿಂದ ನಿಜವಾದ ಅನುಭವ, ಸಂತೃಪ್ತಿ ಕಲಾವಿದನಿಗೆ ಸಿಗುವುದಿಲ್ಲ. ಕಲಾವಿದರೊಬ್ಬರ ಪ್ರಕಾರ ಶೂಟಿಂಗ್ ವೇಳೆ ನಾನು ಜೆಟ್ ಗಳಲ್ಲಿ ಹಾರಲು ಬಯಸಿದರೆ ಸಿಜಿಐನಲ್ಲಿ ಜೆಟ್‌ಗಳೇ ಇರುವುದಿಲ್ಲ ಎನ್ನುತ್ತಾರೆ. ಈ ಹೇಳಿಕೆ ಚಿತ್ರರಂಗದ ಮಾರುಕಟ್ಟೆಯಲ್ಲಿ ಬಹುದೊಡ್ಡ ಪ್ರಭಾವವನ್ನು ಬೀರಿದೆ. ಯಾಕೆಂದರೆ ಚಿತ್ರಗಳಲ್ಲಿ ನೋಡುವ ದೃಶ್ಯಗಳು ಯಾವುದು ನಿಜವಲ್ಲ ಎಂದು ಪ್ರೇಕ್ಷಕರಿಗೆ ಗೊತ್ತಾದರೆ ಅವರು ಚಿತ್ರದ ಮೇಲಿನ ಆಸಕ್ತಿ ಕಳೆದುಕೊಳ್ಳಬಹುದು ಎನ್ನುವ ವಾದವೂ ಇದೆ.

ಇದನ್ನೂ ಓದಿ: Munjya Teaser: ʻಮುಂಜ್ಯಾʼ ಟೀಸರ್‌ ಔಟ್‌; ಇದು ಭಾರತದ ಮೊದಲ CGI ಚಿತ್ರ!

ಸಿಜಿಐನ ಭವಿಷ್ಯವೇನು?

ಸಿಜಿಐ ಭವಿಷ್ಯವು ಸ್ಟುಡಿಯೋದ ಮಿತಿಯಲ್ಲಿರುವುದು ಸ್ಪಷ್ಟ. ಚಿತ್ರೀಕರಣದಲ್ಲಿ ಈಗ ಅದ್ಧೂರಿ ಬಜೆಟ್‌ಗಳ ಯುಗವು ಕ್ಷೀಣಿಸುತ್ತಿದೆ. ಆದರೆ ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ. ನೈಜ ಸಮಯದ ಫೋಟೊರಿಯಾಲಿಸ್ಟಿಕ್ ಹಿನ್ನೆಲೆಗಳನ್ನು ಪ್ರದರ್ಶಿಸುವ ಎಲ್ಇಡಿ ಪರದೆಗಳನ್ನು ಒಳಗೊಂಡಿರುವ ವರ್ಚುವಲ್ ಸೆಟ್ ಗಳ ಆಗಮನವು ಅಭೂತಪೂರ್ವ ಉನ್ನತ ಗುಣಮಟ್ಟದ ಸಿಜಿಐ ಯುಗವನ್ನು ಸೂಚಿಸುತ್ತದೆ.

ದಿ ಬ್ಯಾಟ್‌ಮ್ಯಾನ್, ಡ್ಯೂನ್ ಮತ್ತು ದಿ ಮ್ಯಾಂಡಲೋರಿಯನ್‌ನಂತಹ ಕೃತಿಗಳಲ್ಲಿ ಈ ನವೀನ ತಂತ್ರಜ್ಞಾನದ ಸಾಮರ್ಥ್ಯವನ್ನು ಪ್ರದರ್ಶಿಸುವ ಗ್ರೀಗ್ ಫ್ರೇಸರ್‌ನಂತಹ ಸಿನಿಮಾಟೋಗ್ರಾಫರ್‌ಗಳು ಮುಂಚೂಣಿಯಲ್ಲಿದ್ದಾರೆ.

Continue Reading

ವಿದೇಶ

Air Crashes: ವಿಮಾನ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ 10 ಪ್ರಭಾವಿ ರಾಜಕಾರಣಿಗಳಿವರು

ಇರಾನ್ ಅಧ್ಯಕ್ಷರ ಸಾವು ವಿಶ್ವದಲ್ಲೇ ರಾಜಕೀಯ ನಾಯಕರ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಪ್ರಶ್ನೆ ಮಾಡುವಂತೆ ಮಾಡಿದೆ. ವಿಮಾನ, ಹೆಲಿಕಾಪ್ಟರ್ ಅಪಘಾತದಲ್ಲಿ (Air Crashes) ರಾಜಕೀಯ ನಾಯಕರ ಸಾವು ಇದೇ ಮೊದಲಲ್ಲ. ವಿಶ್ವದ ಹತ್ತು ಪ್ರಮುಖ ನಾಯಕರು ಈ ರೀತಿಯ ದುರಂತದಲ್ಲಿ ಮೃತಪಟ್ಟಿದ್ದಾರೆ.

VISTARANEWS.COM


on

By

Air Crashes
Koo

ಇರಾನ್ ಅಧ್ಯಕ್ಷ (Iran President) ಇಬ್ರಾಹಿಂ ರೈಸಿ (Ebrahim Raisi) ಅವರು ಭಾನುವಾರ ರಾತ್ರಿ ದೇಶದ ಪರ್ವತ ಪ್ರದೇಶದಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ (Air Crashes) ಸಾವನ್ನಪ್ಪಿದ್ದಾರೆ. ರೈಸಿ ಅವರ ದಣಿವರಿಯದ ಸ್ಫೂರ್ತಿಯ ಸೇವೆಯ ಮಾರ್ಗದಲ್ಲಿ ಮುಂದುವರಿಯುವುದಾಗಿ ಇರಾನ್‌ ಆಡಳಿತ ರಾಷ್ಟ್ರದ ಜನರಿಗೆ ಭರವಸೆ ನೀಡಿದೆ. ವಿಮಾನ ದುರಂತಗಳಲ್ಲಿ ರಾಜಕೀಯ ನಾಯಕರು ಸಾವನ್ನಪ್ಪಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಬೇರೆಬೇರೆ ರಾಷ್ಟ್ರಗಳಲ್ಲಿ ಇಂತಹ ಘಟನೆಗಳು ನಡೆದಿವೆ. ಆ ಕುರಿತ ಹಿನ್ನೋಟ ಇಲ್ಲಿದೆ.


ಸ್ವೀಡನ್ ಪ್ರಧಾನಿ ಅರ್ವಿಡ್ ಲಿಂಡ್‌ಮನ್ (1936)

ಸ್ವೀಡನ್‌ನ ಹಿಂದಿನ ಅಡ್ಮಿರಲ್ ಮತ್ತು ಎರಡು ಬಾರಿ ಸ್ವೀಡನ್‌ನ ಪ್ರಧಾನಮಂತ್ರಿ ಆಗಿದ್ದ ಸಾಲೋಮನ್ ಅರ್ವಿಡ್ ಅಚಾಟೆಸ್ ಲಿಂಡ್‌ಮನ್ ಪ್ರಭಾವಿ ಸಂಪ್ರದಾಯವಾದಿ ರಾಜಕಾರಣಿಯಾಗಿದ್ದರು. 1936ರ ಡಿಸೆಂಬರ್ 9ರಂದು ಲಿಂಡ್‌ಮನ್ ಅವರು ಪ್ರಯಾಣಿಸುತ್ತಿದ್ದ ಡಗ್ಲಾಸ್ ಡಿಸಿ-2 ಯುನೈಟೆಡ್ ಕಿಂಗ್‌ಡಂನ ಕ್ರೊಯ್ಡಾನ್ ವಿಮಾನವು ನಿಲ್ದಾಣದ ಬಳಿ ದಟ್ಟವಾದ ಮಂಜಿನಿಂದ ಟೇಕಾಫ್ ಆದ ಸ್ವಲ್ಪ ಸಮಯದ ಅನಂತರ ಮನೆಗಳಿಗೆ ಅಪ್ಪಳಿಸಿದಾಗ ಮೃತಪಟ್ಟರು.

ಫಿಲಿಪೈನ್ಸ್ ಅಧ್ಯಕ್ಷ ರಾಮನ್ ಮ್ಯಾಗ್ಸೆಸೆ (1957)

ಫಿಲಿಪೈನ್ಸ್‌ನ ಏಳನೇ ಅಧ್ಯಕ್ಷ ರಾಮನ್ ಮ್ಯಾಗ್ಸೆಸೆ ಅವರು ತಮ್ಮ ಬಲವಾದ ಭ್ರಷ್ಟಾಚಾರ ವಿರೋಧಿ ನಿಲುವು ಮತ್ತು ಜನಪ್ರಿಯ ಕಾರ್ಯಕ್ಕೆ ಹೆಸರುವಾಸಿಯಾಗಿದ್ದರು. ಅವರ ಅಧ್ಯಕ್ಷತೆಯು 1957ರ ಮಾರ್ಚ್ 17ರಂದು ಥಟ್ಟನೆ ಕೊನೆಗೊಂಡಿತು. “ಮೌಂಟ್ ಪಿನಾಟುಬೊ” ಎಂದು ಕರೆಯಲ್ಪಡುವ ಅವರ ಸಿ-47 ವಿಮಾನವು ಸೆಬು ನಗರದ ಮನುಂಗಲ್ ಪರ್ವತಕ್ಕೆ ಅಪ್ಪಳಿಸಿತು. ಆಗ ಮ್ಯಾಗ್ಸೆಸೆ ಮೃತಪಟ್ಟರು. 25 ಪ್ರಯಾಣಿಕರ ಪೈಕಿ ಒಬ್ಬರು ಮಾತ್ರ ಬದುಕುಳಿದಿದ್ದರು.


ಬ್ರೆಜಿಲ್ ಅಧ್ಯಕ್ಷ ನೆರೆಯು ರಾಮೋಸ್ (1958)

ಬ್ರೆಜಿಲ್‌ನ ಹಂಗಾಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ನೆರೆಯು ರಾಮೋಸ್ ಅವರು 1958ರ ಜೂನ್ 16ರಂದು ನಿಧನರಾದರು. ರಾಮೋಸ್ ಅವರು ಕ್ರೂಝೈರೊ ಡೊ ಸುಲ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ಪರಾನಾ ರಾಜ್ಯದ ಕುರಿಟಿಬಾ ಅಫೊನ್ಸೊ ಪೆನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗಿ ಮೃತಪಟ್ಟರು.

ಇರಾಕ್ ಅಧ್ಯಕ್ಷ ಅಬ್ದುಲ್ ಸಲಾಂ ಆರಿಫ್ (1966)

ಇರಾಕ್‌ನ ಎರಡನೇ ಅಧ್ಯಕ್ಷರಾದ ಅಬ್ದುಲ್ ಸಲಾಂ ಆರಿಫ್ ರಾಜಪ್ರಭುತ್ವವನ್ನು ಉರುಳಿಸಿದ 1958ರ ಕ್ರಾಂತಿಯಲ್ಲಿ ನಿರ್ಣಾಯಕ ಪಾತ್ರ ವಹಿಸಿದರು. 1966ರ ಏಪ್ರಿಲ್ 13ರಂದು ಆರಿಫ್ ಅವರ ಇರಾಕಿ ಏರ್ ಫೋರ್ಸ್ ವಿಮಾನ, ಡಿ ಹ್ಯಾವಿಲ್ಯಾಂಡ್ ಡಿಹೆಚ್ 104 ಡೋವ್, ಬಸ್ರಾ ಬಳಿ ಅಪಘಾತಕ್ಕೀಡಾದಾಗ ನಿಧನರಾದರು. ಅವರ ಸಹೋದರ ಅಬ್ದುಲ್ ರಹಮಾನ್ ಆರಿಫ್ ಅವರ ಅನಂತರ ಅಧ್ಯಕ್ಷರಾದರು.


ಬ್ರೆಜಿಲ್ ಅಧ್ಯಕ್ಷ ಹಂಬರ್ಟೊ ಡಿ ಅಲೆಂಕಾರ್ ಕ್ಯಾಸ್ಟೆಲೊ ಬ್ರಾಂಕೊ (1967)

ಬ್ರೆಜಿಲ್‌ನ 26ನೇ ಅಧ್ಯಕ್ಷ ಮತ್ತು ಮಾಜಿ ಮಿಲಿಟರಿ ಸರ್ವಾಧಿಕಾರದ ಪ್ರಮುಖ ವ್ಯಕ್ತಿಯಾಗಿದ್ದ ಹಂಬರ್ಟೊ ಡಿ ಅಲೆಂಕಾರ್ ಕ್ಯಾಸ್ಟೆಲೊ ಬ್ರಾಂಕೊ 1967ರ ಜುಲೈ 18ರಂದು ನಿಧನರಾದರು. ಅವರ ಅಧ್ಯಕ್ಷೀಯ ಅವಧಿ ಮುಗಿದ ಸ್ವಲ್ಪ ಸಮಯದ ಅನಂತರ ಕ್ಯಾಸ್ಟೆಲೊ ಬ್ರಾಂಕೋ ಅವರ ಪೈಪರ್ ಪಿಎ -23 ಅಜ್ಟೆಕ್ ವಿಮಾನ ಬ್ರೆಜಿಲಿಯನ್ ವಾಯುಪಡೆ ವಿಮಾನಕ್ಕೆ ಡಿಕ್ಕಿ ಹೊಡೆದು ದುರಂತ ಸಂಭವಿಸಿತು. ಅವರ ಸಾವು ಭಾರಿ ಚರ್ಚೆಗೆ ಕಾರಣವಾಗಿತ್ತು.

ಇಂದಿರಾ ಗಾಂಧಿ ಮಗ ಸಂಜಯ್ ಗಾಂಧಿ (1980)

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪುತ್ರ ಸಂಜಯ್ ಗಾಂಧಿ 1980ರ ಜೂನ್ 23ರಂದು ವಿಮಾನ ಅಪಘಾತದಲ್ಲಿ ನಿಧನರಾದರು. ದೆಹಲಿಯ ಸಫ್ದರ್‌ಜಂಗ್ ವಿಮಾನ ನಿಲ್ದಾಣದಲ್ಲಿ ತಾವು ಚಲಾಯಿಸುತ್ತಿದ್ದ ವಿಮಾನದ ನಿಯಂತ್ರಣವನ್ನು ಕಳೆದುಕೊಂಡು ದುರಂತ ಸಾವು ಕಂಡರು.


ಲೆಬನಾನ್ ಪ್ರಧಾನಿ ರಶೀದ್ ಕರಾಮಿ (1987)

ಲೆಬನಾನ್‌ನ ಅತಿ ಹೆಚ್ಚು ಬಾರಿ ಚುನಾಯಿತರಾದ ಪ್ರಧಾನಮಂತ್ರಿ ರಶೀದ್ ಕರಾಮಿ ಅವರು ಲೆಬನಾನಿನ ಅಂತರ್ಯುದ್ಧದ ಸಮಯದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದರು. 1987ರ ಜೂನ್ 1ರಂದು, ಬೈರುತ್‌ಗೆ ಹೋಗುವ ಮಾರ್ಗದಲ್ಲಿ ಅವರ ಹೆಲಿಕಾಪ್ಟರ್‌ನಲ್ಲಿ ಬಾಂಬ್ ಸ್ಫೋಟಗೊಂಡು ಕರಾಮಿ ಕೊಲ್ಲಲ್ಪಟ್ಟರು.

ಪಾಕಿಸ್ತಾನದ ಅಧ್ಯಕ್ಷ ಮುಹಮ್ಮದ್ ಜಿಯಾ-ಉಲ್-ಹಕ್ (1988)

ಪಾಕಿಸ್ತಾನದ ಆರನೇ ಅಧ್ಯಕ್ಷರಾದ ಜನರಲ್ ಮುಹಮ್ಮದ್ ಜಿಯಾ-ಉಲ್-ಹಕ್ ಅವರು 1988ರ ಆಗಸ್ಟ್ 17ರಂದು ನಿಧನರಾದರು. ಅವರು ಪ್ರಯಾಣಿಸುತ್ತಿದ್ದ ಸಿ-130 ಹರ್ಕ್ಯುಲಸ್ ವಿಮಾನವು ಬಹವಾಲ್‌ಪುರದಿಂದ ಟೇಕಾಫ್ ಆದ ಸ್ವಲ್ಪ ಸಮಯದ ಅನಂತರ ಅಪಘಾತಕ್ಕೀಡಾಯಿತು. ಅಪಘಾತದ ಕಾರಣವು ಇನ್ನೂ ನಿಗೂಢವಾಗಿಯೇ ಉಳಿದಿದೆ.

ಇದನ್ನೂ ಓದಿ: Ebrahim Raisi: ಹೆಲಿಕಾಫ್ಟರ್‌ ಪತನದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ವಿಧ್ವಂಸಕ ಕೃತ್ಯವೇ?


ಕಾಂಗ್ರೆಸ್‌ ನಾಯಕ ಮಾಧವರಾವ್ ಸಿಂಧಿಯಾ (2001)

ಮಾಧವರಾವ್ ಸಿಂಧಿಯಾ ಭಾರತದ ಪ್ರಮುಖ ರಾಜಕಾರಣಿ ಮತ್ತು ಕಾಂಗ್ರೆಸ್ ನಾಯಕರಾಗಿದ್ದರು. 2001ರ ಸೆಪ್ಟೆಂಬರ್ 30ರಂದು ವಿಮಾನ ಅಪಘಾತದಲ್ಲಿ ದಾರುಣ ಅಂತ್ಯ ಕಂಡರು. ಉತ್ತರ ಪ್ರದೇಶದ ಮೈನ್‌ಪುರಿ ಬಳಿ ಅವರ ಖಾಸಗಿ ಬೀಚ್‌ಕ್ರಾಫ್ಟ್ ಕಿಂಗ್ ಏರ್ ಸಿ 90 ಗಾಳಿಯಲ್ಲಿ ಬೆಂಕಿ ಹೊತ್ತಿಕೊಂಡು ಅಪಘಾತ ಸಂಭವಿಸಿತ್ತು.

ಚಿಲಿಯ ಅಧ್ಯಕ್ಷ ಸೆಬಾಸ್ಟಿಯನ್ ಪಿನೆರಾ (2024)

ಚಿಲಿಯ ಮಾಜಿ ಅಧ್ಯಕ್ಷರಾದ ಸೆಬಾಸ್ಟಿಯನ್ ಪಿಮೆರಾ ಅವರು ಫೆಬ್ರವರಿ 2024ರಲ್ಲಿ ನಿಧನರಾದರು. ಪಿನೆರಾ ಅವರ ಹೆಲಿಕಾಪ್ಟರ್ ದಕ್ಷಿಣ ಚಿಲಿಯ ಸರೋವರಕ್ಕೆ ಅಪ್ಪಳಿಸಿತು. ಈ ದುರಂತದಲ್ಲಿ ಅವರು ಪ್ರಾಣ ಕಳೆದುಕೊಂಡರು. ಅವರು ಸತತ ಎರಡು ಬಾರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿದ್ದ ವೈ ಎಸ್‌ ರಾಜಶೇಖರ್‌ ರೆಡ್ಡಿ ಅವರೂ ಹೆಲಿಕಾಪ್ಟರ್‌ ಅಪಘಾತದಲ್ಲಿ ಮೃತಪಟ್ಟಿದ್ದರು.

Continue Reading
Advertisement
AUS vs NAM
ಕ್ರೀಡೆ11 mins ago

AUS vs NAM: ನಮೀಬಿಯಾ ವಿರುದ್ಧ ಅಭ್ಯಾಸ ಪಂದ್ಯವಾಡಿದ ಆಸೀಸ್​ ತಂಡದ ಕೋಚಿಂಗ್​ ಸಿಬ್ಬಂದಿ

Dream Of Retired Couple
ಪ್ರವಾಸ14 mins ago

Dream Of Retired Couple: ನಿರಂತರ ಮೂರೂವರೆ ವರ್ಷಗಳ ನೌಕಾಯಾನಕ್ಕಾಗಿ ತಮ್ಮದೆಲ್ಲವನ್ನೂ ಮಾರಿದ ದಂಪತಿ!

KSET Results 2024
ಕರ್ನಾಟಕ21 mins ago

KSET Results 2024:‌ ಕೆ-ಸೆಟ್‌ ಪರೀಕ್ಷೆ ಫಲಿತಾಂಶ; ಅಂಕಪಟ್ಟಿ ಡೌನ್‌ಲೋಡ್‌ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ

MLC Election North East Graduate Constituency Election 2024 total 24 183 graduate voters in the district
ಬಳ್ಳಾರಿ21 mins ago

MLC Election: ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆ; ಬಳ್ಳಾರಿ ಜಿಲ್ಲೆಯಲ್ಲಿ 24,183 ಪದವೀಧರ ಮತದಾರರು

Uttara Kannada DC Gangubai Manakar spoke in Vote counting training program at Kumta
ಉತ್ತರ ಕನ್ನಡ23 mins ago

Lok Sabha Election 2024: ಮತ ಎಣಿಕೆ ಕಾರ್ಯ ಎಚ್ಚರಿಕೆಯಿಂದ ನಿರ್ವಹಿಸಲು ಡಿಸಿ ಗಂಗೂಬಾಯಿ ಮಾನಕರ್ ಸೂಚನೆ

LinkedIns Tips for Graduates in the Job Search
ಕರ್ನಾಟಕ25 mins ago

LinkedIn: ಉದ್ಯೋಗ ಹುಡುಕಾಟದಲ್ಲಿರುವ ಪದವೀಧರರಿಗೆ ಲಿಂಕ್ಡ್‌ಇನ್‌ ಸಲಹೆಗಳು ಪ್ರಕಟ; ಏನೇನಿವೆ ತಪ್ಪದೇ ಓದಿ

Star Fashion
ಫ್ಯಾಷನ್32 mins ago

Star Fashion: ಏನಿದು ನಟಿ ಶ್ರೀ ಲೀಲಾ ಧರಿಸಿ ಮಿಂಚಿದ್ದ ಘರಾರ ಡ್ರೆಸ್?

bitcoin scam
ಪ್ರಮುಖ ಸುದ್ದಿ42 mins ago

Bitcoin Scam: ಬಿಟ್ ಕಾಯಿನ್ ಪ್ರಕರಣದಲ್ಲಿ ಮತ್ತೊಬ್ಬ ಇನ್‌ಸ್ಪೆಕ್ಟರ್‌ನನ್ನು ಬಂಧಿಸಿದ ಎಸ್ಐಟಿ

Dinesh Karthik
ಕ್ರೀಡೆ1 hour ago

Dinesh Karthik: ಪ್ಯಾರಿಸ್​ನಲ್ಲಿ ನೀರಜ್​ಗೆ ತೀವ್ರ ಪೈಪೋಟಿ ನೀಡಲು ಮುಂದಾದರೇ ದಿನೇಶ್​ ಕಾರ್ತಿಕ್​?; ಜಾವೆಲಿನ್​ ಅಭ್ಯಾಸದ ವಿಡಿಯೊ ವೈರಲ್​

Prajwal Revanna Case
ಕರ್ನಾಟಕ1 hour ago

Prajwal Revanna Case: ಚೇತನ್‌, ನವೀನ್ ಗೌಡಗೆ ಮೂರು ದಿನ ಎಸ್‌ಐಟಿ ಕಸ್ಟಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ24 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ7 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌